ಚಿತ್ರದುರ್ಗ: ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಚಿತ್ರೀಕರಣ ಮಾಡಿಕೊಂಡಿದ್ದ ಹೊರಗುತ್ತಿಗೆ ವೈದ್ಯ ಡಾ. ಅಬಿಷೇಕ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಿ ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಆದೇಶಿಸಿದ್ದಾರೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯ ಡಾ. ಅಬಿಷೇಕ್ ಅವರು ಭರಮಸಾಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಕಳೆದ ಫೆ.7 ರಂದು ಪ್ರೀ ವೆಡ್ಡಿಂಗ್ ಶೂಟ್ ಮಾಡಿರುತ್ತಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿತ್ತು. ಈ ಬಗ್ಗೆ ‘ಪಬ್ಲಿಕ್ ಟಿವಿ’ ವಿಸ್ತ್ರತ ವರದಿಯನ್ನು ಇಂದು (ಶುಕ್ರವಾರ) ಬಿತ್ತರಗೊಳಿಸಿತ್ತು. ಇದನ್ನೂ ಓದಿ: ರಾಜ್ಯದಲ್ಲಿ ವಾಲ್ಮೀಕಿ ವಿಶ್ವವಿದ್ಯಾಲಯ ಆಗಲೇಬೇಕು: ಜಿ.ಪರಮೇಶ್ವರ್
ಇದನ್ನು ಗಮನಿಸಿದ ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್ ಅವರು ಈ ಕಾರ್ಯವು ನಿಯಮಬಾಹಿರವಾಗಿದ್ದು, ಗುತ್ತಿಗೆ ಆಧಾರದ ವೈದ್ಯರು ಕರ್ತವ್ಯ ಲೋಪವೆಸಗಿರುತ್ತಾರೆ. ಹೀಗಾಗಿ ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳ ವರದಿಯನ್ವಯ ಡಾ. ಅಭಿಷೇಕ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಮಾಹಿತಿ ನೀಡಿದ್ದಾರೆ.


ಜೂನ್ 9ರಂದು ಗುರುಹಿರಿಯರ ಸಮ್ಮುಖದಲ್ಲಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಹಸೆಮಣೆ ಏರಿದ್ದರು. ಬಳಿಕ ಮದುವೆಯ ಗ್ರ್ಯಾಂಡ್ ಲುಕ್ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದರು. ಈಗ ಮದುವೆಗೂ ಮುನ್ನ ತೆಗೆದ ಪ್ರಿ ವೆಡ್ಡಿಂಗ್ ಫೋಟೋಶೂಟ್ನಿಂದ ಈ ಜೋಡಿ ಗಮನ ಸೆಳೆದಿದ್ದಾರೆ. ಈ ನಯನತಾರಾ ದಂಪತಿಯ ಪ್ರೀ ವೆಡ್ಡಿಂಗ್ ಫೋಟೋ ಮೂಲಕ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ:
ಬೀಚ್ನ ಬದಿಯಲ್ಲಿ ರೊಮ್ಯಾಂಟಿಕ್ ಆಗಿ ಕ್ಯಾಮೆರಾ ಕಣ್ಣಿಗೆ ನಯನತಾರಾ ಮತ್ತು ವಿಘ್ನೇಶ್ ಶಿವನ್ ಪೋಸ್ ನೀಡಿದ್ದಾರೆ. ಈ ಫೋಟೋಶೂಟ್ ಸಾಮಾಜಿಕ ಜಾಲತಾಣ ತುಂಬೆಲ್ಲಾ ವೈರಲ್ ಆಗುತ್ತಿದೆ.

