Tag: Preetam Gubbi

  • ಸಿನಿಮಾ ಶೀರ್ಷಿಕೆ ಮೂಲಕ ಅಪ್ಪುನ ನೆನಪಿಸಿಕೊಂಡ ಗೋಲ್ಡನ್ ಸ್ಟಾರ್ : ಗಣಿ-ಗುಬ್ಬಿ ಕಾಂಬಿನೇಷನ್ ಚಿತ್ರಕ್ಕೆ ‘ಬಾನದಾರಿಯಲ್ಲಿ’ ಟೈಟಲ್

    ಸಿನಿಮಾ ಶೀರ್ಷಿಕೆ ಮೂಲಕ ಅಪ್ಪುನ ನೆನಪಿಸಿಕೊಂಡ ಗೋಲ್ಡನ್ ಸ್ಟಾರ್ : ಗಣಿ-ಗುಬ್ಬಿ ಕಾಂಬಿನೇಷನ್ ಚಿತ್ರಕ್ಕೆ ‘ಬಾನದಾರಿಯಲ್ಲಿ’ ಟೈಟಲ್

    ಯುಗಾದಿ ಹಬಕ್ಕೆ ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಡುವುದಾಗಿ ಗೋಲ್ಡನ್ ಸ್ಟಾರ್ ಗಣೇಶ್ ಹೇಳಿಕೊಂಡಿದ್ದರು. ಅದರಂತೆ ಅವರು ಹೊಸ ಸಿನಿಮಾದ ಟೈಟಲ್ ಅನ್ನು ಸೋಷಿಯಲ್ ಮೀಡಿಯಾ ಮೂಲಕ ಅನಾವರಣ ಮಾಡಿದ್ದಾರೆ ಗಣೇಶ್. ತಮ್ಮ ತಮ್ಮ ಗೆಳೆಯ ಪ್ರೀತಮ್ ಗುಬ್ಬಿ ಕಾಂಬಿನೇಷನ್ ಚಿತ್ರಕ್ಕೆ ‘ಬಾನದಾರಿಯಲ್ಲಿ.’ ಎಂದು ಟೈಟಲ್ ಇಟ್ಟಿದ್ದಾರೆ. ಇದು 1981ರಲ್ಲಿ ತೆರೆಕಂಡ ಪುನೀತ್ ರಾಜ್ ಕುಮಾರ್ ನಟನೆಯ ‘ಭಾಗವಂತ’ ಸಿನಿಮಾದ ಪಾಪ್ಯುಲರ್ ಹಾಡು. ಬಾಲ್ಯದ ಅಪ್ಪು ತಮ್ಮ ತೊದಲ ನುಡಿಗಳಲ್ಲಿ ‘ಬಾನದಾರಿಯಲ್ಲಿ ಸೂರ್ಯ ಜಾರಿ ಹೋದ’ ಎಂದು ಹಾಡಿದ್ದರು. ಈಗ ಅದನ್ನೇ ತಮ್ಮ ಶೀರ್ಷಿಕೆಯನ್ನಾಗಿ ಇಟ್ಟುಕೊಂಡು ಕುತೂಹಲ ಮೂಡಿಸಿದ್ದಾರೆ ನಿರ್ದೇಶಕ ಪ್ರೀತಮ್ ಗುಬ್ಬಿ.  ಇದನ್ನೂ ಓದಿ : ಜುಲೈ 28ರಂದು ಗುಮ್ಮನ ಕಥೆ – ಯುಗಾದಿ ದಿನ ಡಬಲ್ ಖುಷಿ ಕೊಟ್ಟ ‘ವಿಕ್ರಾಂತ್ ರೋಣ’ ಟೀಮ್

    ಸ್ಯಾಂಡಲ್‌ವುಡ್‌ನ ಗೋಲ್ಡ್ನ್ ಸ್ಟಾರ್ ಗಣೇಶ್ ಮತ್ತೆ ಮಳೆ ಹುಡುಗನಾಗಿ ಮಿಂಚೋದಕ್ಕೆ ಸಜ್ಜಾಗಿದ್ದಾರೆ..ಯುಗಾದಿ ಹಬ್ಬದ ಪ್ರಯುಕ್ತ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಡೋದಾಗಿ ನಟ ಗಣೇಶ್ ಸಾಮಾಜಿಕ ಜಾಲತಾಣದಲ್ಲಿ ಅನೌನ್ಸ್ ಮಾಡಿದ್ರು..ಅದರಂತೆಯೇ ಹೊಸ ಚಿತ್ರದ ಟೈಟಲ್ ಲಾಂಚ್ ಮಾಡಿದ್ದಾರೆ. ಮುಂಗಾರು ಮಳೆಯಿಂದ ಶುರುವಾದ ಈ ಜೋಡಿಯ ಪಯಣ, ‘ಮಳೆಯಲಿ ಜೊತೆಯಲಿ’, ‘ದಿಲ್ ರಂಗೀಲಾ’, `೯೯’ ಚಿತ್ರದವರೆಗೂ ಸಾಗಿದೆ. ಅಷ್ಟೂ ಸಿನಿಮಾಗಳು ಸಿನಿಪ್ರಿಯರನ್ನು ಮೋಡಿ ಮಾಡಿವೆ. ಇದೀಗ `ಬಾನದಾರಿಯಲ್ಲಿ’ ಈ ಕಾಂಬಿನೇಷನ್ ನ ನಾಲ್ಕನೇ ಸಿನಿಮಾ. ಇದನ್ನೂ ಓದಿ: ಏ. 2 ರಂದು ಕಿಚ್ಚನ ‘ವಿಕ್ರಾಂತ್ ರೋಣ’ ಟೀಸರ್ : ತೆಲುಗಿನಲ್ಲಿ ಚಿರಂಜೀವಿ, ಮಲಯಾಳಂನಲ್ಲಿ ಮೋಹನ್ ಲಾಲ್

    `ಬಾನದಾರಿಯಲ್ಲಿ’ ಅನ್ನೋ ಕ್ಯಾಚಿ ಟೈಟಲ್ ಜೊತೆಗೆ `ನೋಡು ಎಂಥ ಚೆಂದ’ ಅನ್ನೋ ಅಡಿ ಬರಹ ಕೂಡ ಇದೆ. ಅದನ್ನು ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಹೊಸ ಚಿತ್ರದ ಟೈಟಲ್ ರಿವೀಲ್ ಮಾಡುವುದರ ಜೊತೆಗೆ ಯುಗಾದಿ ಹಬ್ಬದ ಶುಭಾಶಯಗಳು ಹರೆಯದ ಹೃದಯಗಳೇ ಹರಸಿ ಅಂತಾ ಬರೆದುಕೊಂಡಿದ್ದಾರೆ.  ಅಪ್ಪು, ಗಣೇಶ್ ಮತ್ತು `ಬಾನದಾರಿಯಲ್ಲಿ’ ಎಂಬ ಡಿಫರೆಂಟ್ ಟೈಟಲ್  ಸಿನಿಪ್ರಿಯರಿಗೆ ಕನೆಕ್ಟ್ ಆಗುವುದರ ಜೊತೆಗೆ ಮೋಡಿ ಮಾಡುವುದಂತೂ ಸುಳ್ಳಲ್ಲ. ಇದನ್ನೂ ಓದಿ: ದೆಹಲಿಯಲ್ಲಿ ರಾಕಿಬಾಯ್ ನೋಡಲು ಮುಗಿಬಿದ್ದ ಅಭಿಮಾನಿಗಳು

    ಸಿನಿಮಾದ ಟೈಟಲ್ ನಲ್ಲಿರುವ ಅಂಶಗಳನ್ನು ಗಮನಿಸಿದರೆ ಗಣೇಶ್ ನಟನೆಯ ಈ ಹಿಂದಿನ ಸಿನಿಮಾಗಳಂತೆ ಈ ಚಿತ್ರ ಕೂಡ ಒಂದು ಅದ್ಭುತ ಲವ್ ಸ್ಟೋರಿ ಆಗಿರಲಿದೆ. ಈಗಾಗಲೇ ಭಿನ್ನ ಲವ್ ಸ್ಟೋರಿ, ಮತ್ತು ಬಗೆ ಬಗೆಯ ಪಾತ್ರಗಳ ಮೂಲಕ ಕಮಾಲ್ ಮಾಡಿರುವ ಗಣೇಶ್, ಹೊಸ ಸಿನಿಮಾದಲ್ಲೂ ಮುಂದುವರೆಸಲಿದ್ದಾರೆ. ಈ ಚಿತ್ರವನ್ನು ಪ್ರತಿಭಾವಂತ ನಿರ್ದೇಶಕ ಪ್ರೀತಂ ಗುಬ್ಬಿ ನಿರ್ದೇಶನ ಮಾಡುತ್ತಿದ್ದರೆ, ಶ್ರೀವಾರಿ ಟಾಕೀಸ್ ಬಂಡವಾಳ ಹೂಡುತ್ತಿದೆ. ವಿ.ಹರಿಕೃಷ್ಣ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿವೆ.

  • ಏಪ್ರಿಲ್ 2ಕ್ಕೆ ಗಣೇಶ್ ನಟನೆಯ ಹೊಸ ಸಿನಿಮಾದ ಟೈಟಲ್ ಲಾಂಚ್

    ಏಪ್ರಿಲ್ 2ಕ್ಕೆ ಗಣೇಶ್ ನಟನೆಯ ಹೊಸ ಸಿನಿಮಾದ ಟೈಟಲ್ ಲಾಂಚ್

    ಣೇಶ್ ಮತ್ತು ಪ್ರೀತಂ ಗುಬ್ಬಿ ಕಾಂಬಿನೇಷನ್ ನಲ್ಲಿ ಮತ್ತೊಂದು ಹೊಸ ಸಿನಿಮಾ ಬರಲಿದೆ ಎಂದು ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿ ಬ್ರೇಕ್ ಮಾಡಿತ್ತು. ಇದೀಗ ಆ ಸಿನಿಮಾದ ಟೈಟಲ್ ಲಾಂಚ್ ಗೆ ಸಿದ್ಧತೆ ನಡೆದಿದೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ತಮ್ಮ ಹೊಸ ಸಿನಿಮಾದ ಶೀರ್ಷಿಕೆ ರಿವಿಲ್ ಮಾಡುವುದಾಗಿ ಸ್ವತಃ ಗಣೇಶ್ ಅವರೇ ಟ್ವಿಟ್ ಮಾಡಿದ್ದಾರೆ. ಇದನ್ನೂ ಓದಿ : ನನ್ನ ಹತ್ತಿರ ಡೇಂಜರ್ಸ್ ಹುಡುಗೀರು ಇದ್ದಾರೆ- ರಾಜಮೌಳಿಗೆ ರಾಮ್ ಗೋಪಾಲ್ ವರ್ಮಾ ಹೀಗಂದಿದ್ಯಾಕೆ..?

    ‘ನವ ಸಂವತ್ಸರ ಯುಗಾದಿಯಂದು ಹೊಸ ಚಿತ್ರದ ಟೈಟಲ್ ಲಾಂಚ್. ನಾನು, ಪ್ರೀತಮ್ ಗುಬ್ಬಿ ಮುಂಗಾರು ಮಳೆಯಿಂದ ಸಿನಿ ಪಯಣದಲ್ಲಿ ಜೊತೆಯಾದವರು. ನಮ್ಮ ಜೋಡಿಯ ಮಳೆಯಲಿ ಜೊತೆಯಲಿ, ದಿಲ್ ರಂಗೀಲಾ ಮತ್ತು 99 ಚಿತ್ರಗಳನ್ನು ನೋಡಿ ತಾವು ಹರಿಸಿದ್ದೀರಿ. ಈಗ ಶ್ರೀವಾರಿ ಟಾಕೀಸ್ ನೊಂದಿಗೆ ಮತ್ತೊಂದು ಹೊಸ ಕನಸಿನ ಪಯಣ ಪ್ರಾರಂಭ. ಹರೆಯದ ಹೃದಯಗಳೇ ಹರಸಿ’ ಎಂದು ಗಣೇಶ್ ಹೊಸ ಸಿನಿಮಾದ ಬಗ್ಗೆ ಬರೆದುಕೊಂಡಿದ್ದಾರೆ.

    ಗಣೇಶ್ ಅವರೇ ಹೇಳಿಕೊಂಡಂತೆ ಪ್ರೀತಮ್ ಗುಬ್ಬಿ ಮತ್ತು ಗಣೇಶ್ ಸ್ನೇಹಿತರು. ಆರಂಭದ ದಿನಗಳಲ್ಲಿ ಒಟ್ಟಿಗೆ ಒಂದೇ ರೂಮ್ ನಲ್ಲಿ ಕಾಲಕಳೆದವರು. ಗಣೇಶ್ ಅವರ ಮುಂಗಾರು ಮಳೆ ಚಿತ್ರಕ್ಕೆ ಪ್ರೀತಮ್ ಕಥೆ ಬರೆದದ್ದು. ಅಲ್ಲದೇ ಗಣೇಶ್ ಜತೆಗೆ ಈವರೆಗೂ ಮೂರು ಸಿನಿಮಾಗಳಲ್ಲಿ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಗೆಳೆಯನಿಗಾಗಿಯೇ ಗಣೇಶ್ ಮಳೆಯಲಿ ಜೊತೆಯಲಿ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಇದನ್ನೂ ಓದಿ:  ‘ಕೆಜಿಎಫ್ 2’ ರಿಲೀಸ್ ದಿನವೇ ಪುನೀತ್ ‘ಜೇಮ್ಸ್’ ಸಿನಿಮಾ ಓಟಿಟಿಯಲ್ಲಿ ರಿಲೀಸ್

    ಗಣೇಶ್ ಮತ್ತು ಪ್ರೀತಮ್ ಕಾಂಬಿನೇಷನ್ ನ ‘99’ ಸಿನಿಮಾದ ನಂತರ ಈ ಹೊಸ ಸಿನಿಮಾ ಲಾಂಚ್ ಆಗುತ್ತಿದೆ. ಈ ಕಾಂಬಿನೇಷನ್ ನಲ್ಲಿ ಈವರೆಗೂ ಲವ್ ಸ್ಟೋರಿಗಳನ್ನೇ ಸಿನಿಮಾ ಮಾಡುತ್ತಾ ಬಂದಿದ್ದಾರೆ. ಹಾಗಾಗಿ ಹೊಸ ಸಿನಿಮಾದಲ್ಲೂ ಪ್ರೇಮಕಥೆಯೇ ಇರಲಿದೆ ಎನ್ನಲಾಗುತ್ತಿದೆ. ಏಪ್ರಿಲ್ 2 ರಂದು ಕೆಲವು ಸುದ್ದಿಗಳು ಹೊರ ಬೀಳಲಿವೆ.

  • ಗಣೇಶ್ ಮತ್ತು ಪ್ರೀತಂ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ

    ಗಣೇಶ್ ಮತ್ತು ಪ್ರೀತಂ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ

    ನಿರ್ದೇಶಕ ಪ್ರೀತಂ ಗುಬ್ಬಿ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಸೆಟ್ಟೇರಲಿದೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಕಾಂಬಿನೇಷನ್ ನ 4ನೇ ಸಿನಿಮಾ ಇದಾಗಿದೆ. ಇದನ್ನೂ ಓದಿ : ದಿ ಕೇರಳ ಸ್ಟೋರಿ ಸಿನಿಮಾ ಶುರು: ಸ್ಫೂರ್ತಿಯಂತೆ ದಿ ಕಾಶ್ಮೀರ್ ಫೈಲ್ಸ್

    ‘ಮಳೆಯಲಿ ಜೊತೆಯಲಿ’ ಸಿನಿಮಾದ ಮೂಲಕ ಈ ಜೋಡಿ ಒಂದಾಗಿತ್ತು. ಆನಂತರ ‘ದಿಲ್  ರಂಗೀಲಾ’ ಆಗಿ ತೆರೆಯ ಮೇಲೆ ಕಾಣಿಸಿಕೊಂಡಿತ್ತು. ಈ ಕಾಂಬಿನೇಷನ್ ನ ಕೊನೆಯ ಸಿನಿಮಾ ‘99’. ಇದಾದ ನಂತರ ಪ್ರೀತಂ ಮತ್ತು ಗಣೇಶ್ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಇದನ್ನೂ ಓದಿ : ಕಾಲೇಜು ದಿನಗಳಲ್ಲಿ ಅಮೀರ್‌ ಮೇಲೆ ಕ್ರಷ್‌ ಆಗಿತ್ತು.. ಲವ್‌ ಲೆಟರ್‌ ಕೂಡ ಬರೆದಿದ್ದೆ: ಬಾಲಿವುಡ್‌ ನಟಿ

    ಸಾಮಾನ್ಯವಾಗಿ ಪ್ರೀತಂ ಸಿನಿಮಾಗಳೆಂದರೆ, ಅಲ್ಲೊಂದು ಲವ್ ಸ್ಟೋರಿ ಇದ್ದೇ ಇರುತ್ತದೆ. ಹಾಗಾಗಿ ಈ ಸಿನಿಮಾದಲ್ಲೂ ಅಪರೂಪದ ಪ್ರೇಮಕಥೆಯನ್ನು ಹೇಳಲಿದ್ದಾರಂತೆ ನಿರ್ದೇಶಕರು. ‘ಮುಂಗಾರು ಮಳೆ’ ಸಿನಿಮಾದ ಮೂಲಕ ಈ ಜೋಡಿ ಒಂದಾಗಿ ಕೆಲಸ ಮಾಡುತ್ತಿದ್ದರೂ, ಮುಂಗಾರು ಮಳೆಗೆ ಪ್ರೀತಂ ಕೇವಲ ಕಥೆಗಾರ ಆಗಿದ್ದರು. ಇದನ್ನೂ ಓದಿ: ಮಾಧುರಿ ದೀಕ್ಷಿತ್ ಇರೋದು ಮನೇಲಿ ಅಲ್ಲ, ಅರಮನೆಯಲ್ಲಿ: ಹೊಸ ಮನೆಗೆ ದೇವದಾಸ್ ಬೆಡಗಿ

    ಇತ್ತ ಗಣೇಶ್ ಕೂಡ ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅಲ್ಲದೇ, ಟಾಕ್ ಶೋ  ಒಂದನ್ನು ನಡೆಸಿಕೊಡುತ್ತಿದ್ದಾರೆ. ಗಾಳಿಪಟ2 ಸಿನಿಮಾ ರಿಲೀಸ್ ಗೆ ಸಿದ್ಧವಾಗಿದ್ದರೆ, ತ್ರಿಬಲ್ ರೈಡಿಂಗ್ ಕೂಡ ಶೂಟಿಂಗ್ ಮುಗಿಸಿಕೊಂಡಿದೆ. ಹೀಗಾಗಿ ಹೊಸ ಸಿನಿಮಾ ಅತೀ ಶೀಘ್ರದಲ್ಲೇ ಸೆಟ್ಟೇರಿದೆ ಅಚ್ಚರಿ ಪಡಬೇಕಿಲ್ಲ.