Tag: Preetham J Gowda

  • ಹಾಸನದಲ್ಲಿ ಜೆಡಿಎಸ್- ಬಿಜೆಪಿ ಎರಡೇ ಆಯ್ಕೆ, ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ: ಪ್ರೀತಂಗೌಡ

    ಹಾಸನದಲ್ಲಿ ಜೆಡಿಎಸ್- ಬಿಜೆಪಿ ಎರಡೇ ಆಯ್ಕೆ, ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ: ಪ್ರೀತಂಗೌಡ

    ಹಾಸನ: ಜಿಲ್ಲೆಯಲ್ಲಿ ಎರಡು ಆಯ್ಕೆ ಇದೆ. ಒಂದು ಜೆಡಿಎಸ್ ಅಥವಾ ಬಿಜೆಪಿ, ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಶಾಸಕ ಪ್ರೀತಂಗೌಡ ವ್ಯಂಗ್ಯವಾಡಿದರು.

    ಹಾಸನದಲ್ಲಿ ನಡೆದ ಶಾಸಕ ಎನ್. ಮಹೇಶ್ ಅಭಿಮಾನಿಗಳು ಹಾಗೂ ಬೆಂಬಲಿಗರು ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಜೆಡಿಎಸ್‌  ದಲಿತ ವಿರೋಧಿ ಕುಟುಂಬ ಎಂದು ಕುಟುಕಿದರು. ದಲಿತ ಬಂಧುಗಳು ದೊಡ್ಡಗೌಡರ ಮನೆಗೆ ದಲಿತ ಸಮಾಜದ ಬಂಧುಗಳು ಹೋಗಿ ಬಂದ ನಂತರ ಮತ್ತೆ ಸ್ನಾನ ಮಾಡಿ ಬರುವ ಸಂಸ್ಕೃತಿಯನ್ನು ಒಗ್ಗೂಡಿಸಿಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

    ಜೆಡಿಎಸ್ ಹಾಗೂ ಬಿಜೆಪಿ ನಡುವೆ ಹಾಸನ ಜಿಲ್ಲೆಯಲ್ಲಿ ರಾಜಕಾರಣ ನಡೆಯುತ್ತಿದೆ. ಜೆಡಿಎಸ್ ಪಕ್ಷದವರು ಯಾವ ರೀತಿ ಅಂತ ಹೇಳಿದರೆ, ಒಬ್ಬ ದಲಿತ ಸಮಾಜದ ಬಂಧು ಅವರ ಮನೆಗೆ ಹೋದರೆ ಇಲ್ಲಿಯತನಕ ಒಳಗೆ ಹೋಗಿರುವ ಒಂದು ನಿದರ್ಶನ ನಮ್ಮ ಕಣ್ಮುಂದೆ ಇಲ್ಲ. ಅಂತಹ ನಾಯಕತ್ವ ಜೆಡಿಎಸ್ ಅವರದ್ದು ಎಂದರು.

    ಹಾಸನ ಜಿಲ್ಲೆಯಲ್ಲಿ ದಲಿತ ಸಮಾಜವನ್ನು ಯಾರು ಕೇವಲವಾಗಿ ನೋಡ್ತಾರೆ ಅಂದರೆ ಅದು ಜಾತ್ಯತೀತ ಜನತಾದಳದವರು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮೋದಿಯನ್ನು ಭೇಟಿಯಾಗಿ ರುದ್ರಾಕ್ಷಿ ಮಾಲೆ ನೀಡಿದ ಅನುಪಮ್ ಖೇರ್

    ಇದೇ ವೇಳೆ ಕಾಂಗ್ರೆಸ್ ಪಕ್ಷದ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ಅಂಬೇಡ್ಕರ್ ಅವರ ಅಂತ್ಯಸಂಸ್ಕಾರ ಮಾಡಲು ದೆಹಲಿಯಲ್ಲಿ 6*3 ಜಾಗ ಕೊಡಲಿಲ್ಲ. ಅದೇ ಅವರ ಗಾಂಧಿ ಕುಟುಂಬಕ್ಕೆ ಒಬ್ಬರ ಅಂತ್ಯ ಸಂಸ್ಕಾರ ಮಾಡಲು ಮೂವತ್ತು ಎಕರೆ, ಐವತ್ತು ಎಕರೆ ಅವರ ತಾತನ ಮನೆ ಆಸ್ತಿ ಅನ್ನುವ ರೀತಿಯಲ್ಲಿ ಘಾಟ್‍ಗಳನ್ನು ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಪತಿ ಜೊತೆಗಿನ ಫೋಟೋ ಹಂಚಿಕೊಂಡ ಐಎಎಸ್ ಟಾಪರ್ ಟೀನಾ ದಾಬಿ

    ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದವರು ಕಾಂಗ್ರೆಸ್‍ನವರು. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದವರು ಕಾಂಗ್ರೆಸ್‍ನವರು. ಭಾರತೀಯ ಜನತಾ ಪಾರ್ಟಿ, ದಲಿತ ಸಮಾಜದ ಬಂಧುಗಳನ್ನು ಸಮಾನತೆಯಿಂದ ನೋಡುತ್ತೆ. ಹಾಸನ ಜಿಲ್ಲೆಯಲ್ಲಿ ನಮ್ಮನ್ನೆಲ್ಲ ಕಾಪಾಡುವವರು ಯಾರೂ ಎಂಬ ಪ್ರಶ್ನೆಯಿತ್ತು. ನಿಮ್ಮ ಹಳ್ಳಿಗೆ ಹೋಗಿ ಹೇಳಿ ನರೇಂದ್ರ ಮೋದಿ, ಅಮಿತ್ ಶಾ ಇದ್ದಾರೆ ಎಂದರು.

  • ಹಾಸನದಲ್ಲಿ ನಾನೇ ಸಿಎಂ, ಕೊನೆ ಉಸಿರಿರುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ: ಪ್ರೀತಂಗೌಡ

    ಹಾಸನದಲ್ಲಿ ನಾನೇ ಸಿಎಂ, ಕೊನೆ ಉಸಿರಿರುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ: ಪ್ರೀತಂಗೌಡ

    ಹಾಸನ: ಹಾಸನದಲ್ಲಿ ನಾನೇ ಸಿಎಂ, ಕೊನೆ ಉಸಿರಿರುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ ಎಂದು ಶಾಸಕ ಪ್ರೀತಂ ಜೆ ಗೌಡ ಹೇಳಿದ್ದಾರೆ.

    ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆ ಚರ್ಚೆ ನಡೆಯುತ್ತಿದ್ದು ಕೇಂದ್ರದ ಹಾಗೂ ರಾಜ್ಯದ ವರಿಷ್ಠರು ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ಇದೆ. ಆದರೆ ನಾನು ಸದ್ಯ ಸಚಿವ ಸ್ಥಾನದ ರೇಸ್ ನಲ್ಲಿ ಇಲ್ಲ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಹ ನನಗೆ ನಿಗಮ ಮಂಡಳಿಯ ಸ್ಥಾನವನ್ನು ನೀಡಲಾಗಿತ್ತು. ಅದನ್ನು ನಾನು ತಿರಸ್ಕರಿಸಿ ಜಿಲ್ಲೆಯ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆಗೆ ಮನವಿ ಮಾಡಿದ್ದು ಅದರಂತೆ ಸರ್ಕಾರ ನಡೆದುಕೊಂಡಿದೆ. ಯಡಿಯೂರಪ್ಪ ಹಾಗೂ ಇಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾಸನ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡುತ್ತಿದ್ದಾರೆ ಎಂದರು.

    ಮುಂದಿನ 2022 ರಾಜ್ಯ ಬಜೆಟ್‍ನಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಅಗತ್ಯ ಯೋಜನೆಗಳ ನಿರೀಕ್ಷೆಯಲ್ಲಿದ್ದು ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ಈ ಸಂಬಂಧ ಮಾತುಕತೆ ನಡೆಸಿರುವುದಾಗಿ ಹಾಗೂ ಸಕಾರಾತ್ಮಕ ಪ್ರತಿಕ್ರಿಯೆ ಅವರಿಂದ ವ್ಯಕ್ತವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ವ್ಯಾಯಾಮ ಮಾಡಿದ್ದು ಸಾಕು ಎಂದಿದಕ್ಕೆ ತಾಯಿಯನ್ನೇ ಕೊಲೆಗೈದ ಮಗ

    ಹಾಸನದಲ್ಲಿ ನಾನೇ ಸಿಎಂ: ಹಾಸನದಲ್ಲಿ ಸದ್ಯ ನಾನೇ ಸಿಎಂ ಆದ್ದರಿಂದ ಸಚಿವ ಸ್ಥಾನದ ಬಗ್ಗೆ ಯಾವುದೇ ಆಸೆಯನ್ನು ಇಟ್ಟುಕೊಂಡಿಲ್ಲ ಮೊದಲನೇ ಬಾರಿ ಶಾಸಕನಾಗಿ ಹಾಸನದಲ್ಲಿ ಅಧಿಕಾರದಲ್ಲಿದ್ದು ಕ್ಷೇತ್ರದ ಅಭಿವೃದ್ಧಿ ಹಾಗೂ ಮುಂದಿನ ಚುನಾವಣೆ ಬಗ್ಗೆ ಹೆಚ್ಚು ಗಮನ ಹರಿಸುವುದಾಗಿ ಹೇಳಿದರು.

    ಬಿಜೆಪಿ ಶಾಸಕರು ಪಕ್ಷಾಂತರ ವಿಚಾರ: ನಾನಿನ್ನು ಪ್ರಬುದ್ಧನಾಗಿಲ್ಲ. ಮೊದಲ ಬಾರಿ ಶಾಸಕನಾಗಿ ನಾನು ಅಧಿಕಾರ ನಡೆಸುತ್ತಿದ್ದು, ಕಾಂಗ್ರೆಸ್‍ನಿಂದ ಬಂದವರು ಈಗಾಗಲೇ ನಮ್ಮ ಪಕ್ಷದಲ್ಲಿ ಮಂತ್ರಿಗಳಾಗಿ ಅಧಿಕಾರ ನಡೆಸುತ್ತಿದ್ದಾರೆ. ಬಿಜೆಪಿ ಶಾಸಕರು ಪಕ್ಷಾಂತರ ಮಾಡುತ್ತಾರೆ ಎಂಬುದು ಕೇವಲ ಊಹಾಪೋಹವಷ್ಟೇ ಎಂದರು. ಇದನ್ನೂ ಓದಿ: ನಮಗೆ ಗೌರವ ಕೊಟ್ಟಿದ್ದಕ್ಕೆ ಜಾರಕಿಹೊಳಿಗೆ ಅಭಿನಂದನೆ: ಎಚ್‍ಡಿಕೆ

    ಕೊನೆ ಉಸಿರಿರುವವರೆಗೂ ಬಿಜೆಪಿಯಲ್ಲೆ: ನಾನು ಬಿಜೆಪಿಯಲ್ಲಿ ಸ್ವಯಂ ಸೇವಕನಾಗಿ ನಂತರ ಕಾರ್ಯಕರ್ತನಾಗಿ ಶಾಸಕನಾಗಿ ಅಧಿಕಾರ ಹಿಡಿದಿದ್ದೇನೆ. ಕೊನೆ ಉಸಿರಿರುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ ಹೊರತು, ಯಾವುದೇ ಕಾರಣಕ್ಕೂ ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಮಾತನಾಡುವವರು ಕೇವಲ ಬಾಯಿ ಚಪಲ ತೀರಿಸಿಕೊಳ್ಳಬೇಕು ಅಷ್ಟೇ . ಇದೆಲ್ಲ ಊಹಾಪೋಹ ಹಾಗೂ ಭ್ರಮೆಯ ಮಾತುಗಳಾಗಿವೆ. ನನ್ನ ಮಾತೃಪಕ್ಷ ಬಿಜೆಪಿಯನ್ನು ಬಿಟ್ಟು ಬೇರೆ ಪಕ್ಷ ಸೇರುವ ಯಾವುದೇ ಆಸಕ್ತಿ ನನಗಿಲ್ಲ ಎಂದು ಸ್ಪಷ್ಟಪಡಿಸಿದರು.

    ಡಿ.ಕೆ. ಶಿವಕುಮಾರ್ ಅವರೊಂದಿಗೆ ಪ್ರೀತಂ ಗೌಡ ರಾಜಕೀಯವಾಗಿ ಮೊದಲ ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂಬುದಾಗಿ ಯಾವುದೇ ಅಪಪ್ರಚಾರ ಬೇಡ. ಇವೆಲ್ಲಾ ಕೇವಲ ಊಹಾಪೋಹವಾಗಿದ್ದು ನಾನು ಒಂದಲ್ಲ, ಡಿಕೆಶಿ ಅವರೊಂದಿಗೆ ನೂರು ಸುತ್ತಿನ ಮಾತುಕತೆ ನಡೆದರೂ ಸಹ ಪ್ರೀತಂ ಗೌಡ ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಮೋಹನ್, ಬಿಜೆಪಿ ಮುಖಂಡರಾದ ಮಳಲಿ ಶರತ್ ಸೇರಿದಂತೆ ಇತರರು ಹಾಜರಿದ್ದರು. ಇದನ್ನೂ ಓದಿ: ಪ್ರೀತಿ ಇದ್ದಲ್ಲಿಗೆ ಹೋಗುತ್ತೇನೆ: ರಮೇಶ್ ಜಾರಕಿಹೊಳಿ

  • ಪ್ರಜ್ವಲ್ ರೇವಣ್ಣ  Vs ಪ್ರೀತಂ ಗೌಡ – ಫೋಟೋ ಪಾಲಿಟಿಕ್ಸ್ ಜಟಾಪಟಿ ತಾರಕಕ್ಕೆ

    ಪ್ರಜ್ವಲ್ ರೇವಣ್ಣ Vs ಪ್ರೀತಂ ಗೌಡ – ಫೋಟೋ ಪಾಲಿಟಿಕ್ಸ್ ಜಟಾಪಟಿ ತಾರಕಕ್ಕೆ

    ಹಾಸನ: ಬಿಜೆಪಿ, ಜೆಡಿಎಸ್ ಹಾವು ಮುಂಗುಸಿಯಂತಿರೋ ಹಾಸನ ಜಿಲ್ಲೆಯಲ್ಲಿ ಈಗ ಎರಡು ಪಕ್ಷಗಳ ನಾಯಕರ ನಡುವೆ ಫೋಟೋ ಪಾಲಿಟಿಕ್ಸ್ ಜಟಾಪಟಿ ತಾರಕಕ್ಕೇರಿದೆ.ಫೋಟೋ ವಿಚಾರವಾಗಿ ಎರಡು ಪಕ್ಷಗಳ ನಾಯಕರು ಬಹಿರಂಗವಾಗಿ ಏಟು ಎದಿರೇಟು ಎಂಬಂತೆ ಶಾಸಕ ಪ್ರೀತಂ ಗೌಡ ಮತ್ತು ಸಂಸದ ಪ್ರಜ್ವಲ್ ರೇವಣ್ಣ ನಡುವೆ ಪರಸ್ಪರ ಮಾತನಾಡುತ್ತಿದ್ದಾರೆ.

    ಹಾಸನ ಜಿಲ್ಲೆಯಲ್ಲಿ ಹಾಸನ ನಗರ ಬಿಟ್ಟು ಉಳಿದ 6 ಸ್ಥಾನದಲ್ಲಿ ಜೆಡಿಎಸ್ ಶಾಸಕರದ್ದೇ ಪಾರುಪತ್ಯ. ಹಾಸನ ನಗರದಲ್ಲಿ ಮಾತ್ರ ಬಿಜೆಪಿ ಶಾಸಕ ಪ್ರೀತಮ್ ಗೌಡ ಗೆದ್ದಿರೋದು ಜೆಡಿಎಸ್ ನಾಯಕರಿಗೆ ಪೆಟ್ಟು ನೀಡಿದಂತಾಗಿದೆ. ಹೀಗಾಗಿ ಒಂದಿಲ್ಲ ಒಂದು ವಿಚಾರಕ್ಕೆ ಜೆಡಿಎಸ್ ನಾಯಕರು ಬಿಜೆಪಿ ಶಾಸಕ ಪ್ರೀತಮ್ ನಡುವೆ ಯಾವಾಗಲೂ ಜಟಾಪಟಿ ನಡಿತಲೇ ಇರುತ್ತದೆ. ಆದರೆ ಇವರ ರಾಜಕೀಯ ವೈರತ್ವ ಈಗ ಸಾರ್ವಜನಿಕ ಕಾಮಗಾರಿಗಳಿಗೆ ಫೋಟೋ ಹಾಕೋ ಸಂಗತಿಗೆ ತಾರಕ್ಕಕ್ಕೇರಿದೆ.

    Prajwal Revanna Preetham J Gowda Photo Politics

    ಹಾಸನ ನಗರದಲ್ಲಿ ನಿರ್ಮಾಣ ಆಗಿರುವ ಟ್ಯಾಕ್ಸಿ ಸ್ಟ್ಯಾಂಡ್, ಇತ್ತೀಚೆಗೆ ಉದ್ಘಾಟನೆ ಆದ ಫುಡ್ ಕೋರ್ಟ್‍ಗಳಲ್ಲಿ ಹಾಸನ ಶಾಸಕ ಪ್ರೀತಮ್‍ಗೌಡ ಅವರ ದೊಡ್ಡ ಫೋಟೋಗಳನ್ನ ಅಳವಡಿಸಲಾಗಿದೆ. ಈ ಬಗ್ಗೆ ವ್ಯಂಗ್ಯವಾಡಿರುವ ಸಂಸದ ಪ್ರಜ್ವಲ್ ರೇವಣ್ಣ, ಫೋಟೋ ಹಾಕಿಕೊಳ್ಳೋದಾದರೆ ರೇವಣ್ಣನವರು ಎಷ್ಟು ಬಿಲ್ಡಿಂಗ್ ಕಟ್ಟಿದ್ದಾರೆ, ಅದಕ್ಕೆಲ್ಲಾ ಫೋಟೋ ಹಾಕಿದ್ದಾರ? ಹೀಗಾಗಿ ಕೆಲಸ ಮಾಡೋದು ಬಿಟ್ಟು ಫೋಟೋ ಹಾಕೊಂಡು ಶೋಕಿ ಕೊಡೋದನ್ನ ಬಿಡಲಿ ಅಂತ ಕಿಡಿಕಾರಿದ್ದಾರೆ.

    Prajwal Revanna Preetham J Gowda Photo Politics

    ಜೆಡಿಎಸ್ ನಾಯಕರು ತಮ್ಮ ಫೋಟೋ ವಿಚಾರಕ್ಕೆ ಆಡಿದ ಮಾತಿಗೆ ಪ್ರೀತಮ್ ಕೂಡ ಸುಮ್ಮನಾಗಿಲ್ಲ. ಕೆಲವರು ಪ್ರೀತಮ್ ಗೌಡರ ಫೋಟೋ ನೋಡಿ ಬೇಜಾರಾಗೋರು ಹೀಗೆ ಹೇಳ್ತಾರೆ. ಆದರೆ 80 ರಷ್ಟು ಜನ ಪ್ರೀತಮ್ ಗೌಡರ ಫೋಟೋ ದಿನಾ ನೋಡಿದ್ರೆ ಹುಮ್ಮಸ್ಸು ಅಂತಾರೆ. ಹೀಗಾಗಿ 20 ಜನಕ್ಕಾಗಿ 80 ಮಂದಿಗೆ ಬೇಜಾರು ಮಾಡಲು ಆಗಲ್ಲ. ಹಾಗೆ ಹಳೇ ಶಾಸಕರು ಸಂಸದರು ಯಾವರೀತಿ ತಮ್ಮ ಕಾಮಗಾರಿಯಲ್ಲಿ ತಮ್ಮ ಫೋಟೋ ಹಾಕಿಕೊಂಡಿದ್ದಾರೋ, ಅದೇ ರೀತಿ ಅಧಿಕಾರಿಗಳು ನನ್ನ ಫೋಟೋ ಹಾಕಿದ್ದಾರೆ. ಶಾಸಕರ ನಿಧಿಯಲ್ಲಿ ಕೆಲಸ ಮಾಡಿದ ಕೆಲವೆಡೆ ಸಂಸದರ ಫೋಟೋ ಹಾಕಿಕೊಂಡಿದ್ದಾರೆ. ಅವ್ರ್ಯಾಕೆ ಹಾಗೆ ಮಾಡಿದ್ರು ಅಂತ ಪ್ರಜ್ವಲ್ ರೇವಣ್ಣಗೆ ಶಾಸಕ ಪ್ರೀತಂಗೌಡ ಟಾಂಗ್ ನೀಡಿದ್ದಾರೆ.

    Prajwal Revanna Preetham J Gowda Photo Politics

    ಆದರೆ ಇಲ್ಲಿ ವಾಸ್ತವ ನೋಡಿದ್ರೆ ಎರಡೂ ಪಕ್ಷದ ನಾಯಕರುಗಳು ಸಾರ್ವಜನಿಕ ಕಾಮಗಾರಿಗಳಲ್ಲಿ, ಆ ಕಾಮಗಾರಿ ಮುಗಿದ ಬಳಿಕ ಫೋಟೋ ಫಲಕಗಳನ್ನ ಅಳವಡಿಸಿದ್ದಾರೆ. ವಾಸ್ತವ ಹೀಗಿರುವಾಗ ಈಗ ಫೋಟೋ ವಿಚಾರವಾಗಿ ಪರಸ್ಪರ ಟಾಂಗ್ ಕೊಡ್ತಿರೋದು ಮಾತ್ರ ವಿಪರ್ಯಾಸವಾಗಿದೆ. ಇದನ್ನೂ ಓದಿ:  ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಇನ್ನಿಲ್ಲ