Tag: Pregnant

  • ವೈದ್ಯರ ನಿರ್ಲಕ್ಷ್ಯ – 9 ತಿಂಗಳ ಗರ್ಭಿಣಿ, ಮಗು ಆಸ್ಪತ್ರೆಯಲ್ಲೇ ಸಾವು

    ವೈದ್ಯರ ನಿರ್ಲಕ್ಷ್ಯ – 9 ತಿಂಗಳ ಗರ್ಭಿಣಿ, ಮಗು ಆಸ್ಪತ್ರೆಯಲ್ಲೇ ಸಾವು

    ಕೋಲಾರ: ಗಣೇಶ್ ಹೆಲ್ತ್ ಕೇರ್ ಖಾಸಗಿ ಆಸ್ಪತ್ರೆಗೆ ಡೆಲಿವರಿ ಮಾಡಿಸಲು ದಾಖಲಾಗಿದ್ದ 9 ತಿಂಗಳ ಗರ್ಭಿಣಿ ಮೃತಪಟ್ಟಿದ್ದಾರೆ.

    ಕೋಲಾರ ತಾಲೂಕಿನ ಮುದುವತ್ತಿ ಗ್ರಾಮದ ನಿವಾಸಿ ಸುಧಾ(22) ಮೃತ ಗರ್ಭಿಣಿ. ಗಣೇಶ್ ಹೆಲ್ತ್ ಕೇರ್ ನ ಡಾ. ಲತಾ ಅವರ ನಿರ್ಲಕ್ಷ್ಯದಿಂದ ಸುಧಾ ಹಾಗೂ ಅವರ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿದೆ ಎಂದು ಮಹಿಳೆಯ ಕುಟುಂಬ ಆರೋಪಿಸಿದೆ.

    ಹೆರಿಗೆಗೆಂದು ಗಣೇಶ್ ಹೆಲ್ತ್ ಕೇರ್ ಆಸ್ಪತ್ರೆಗೆ ಸುಧಾ ಅವರು ದಾಖಲಾಗಿದ್ದರು. ಆದರೆ ಹೆರಿಗೆಗೆ ಬಂದವರು ಮಸಣ ಸೇರಿದ್ದಾರೆ. ಅವರ ಜೊತೆ ಹೊಟ್ಟೆಯಲ್ಲಿಯೇ ಶಿಶು ಕೂಡ ಮೃತಪಟ್ಟಿದೆ. ಆದರೆ ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ. ವೈದ್ಯರು ರೋಗಿಯನ್ನು ಸರಿಯಾಗಿ ತಪಾಸಣೆ ಮಾಡಿಲ್ಲ. ಬೇಜವಾಬ್ದಾರಿಯಿಂದ ಕೆಲಸ ಮಾಡಿ ಎರಡು ಜೀವವನ್ನು ಬಲಿ ಪಡೆದಿದ್ದಾರೆ ಎಂದು ಮಹಿಳೆಯ ಪೋಷಕರು, ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನ್ಯಾಯ ಸಿಗುವವರೆಗೂ ಗರ್ಭಿಣಿ ಹಾಗೂ ಶಿಶುವಿನ ಮೃತದೇಹವನ್ನು ಆಸ್ಪತ್ರೆಯಿಂದ ತೆಗೆದುಕೊಂಡು ಹೋಗಲ್ಲ ಎಂದು ಪೋಷಕರು ಹಾಗೂ ಸಂಬಂಧಿಕರು ಪಟ್ಟು ಹಿಡಿದಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಬಾರದ ಅಂಬುಲೆನ್ಸ್ – ಹೆದ್ದಾರಿಯಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

    ಬಾರದ ಅಂಬುಲೆನ್ಸ್ – ಹೆದ್ದಾರಿಯಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

    ಭೋಪಾಲ್: ಅಂಬುಲೆನ್ಸ್ ಬಾರದೇ ಗರ್ಭಿಣಿಯೊಬ್ಬರು ಹೆದ್ದಾರಿಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮನಕಲಕುವ ಘಟನೆ ಮಧ್ಯಪ್ರದೇಶದ ಬುರ್ಹಾನ್‍ಪುರ್‍ದಲ್ಲಿ ನಡೆದಿದೆ.

    ಕೂಲಿ ಕೆಲಸ ಮಾಡುತ್ತಿದ್ದ ಕಮಲ ಬಾಯಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಅಂಬುಲೆನ್ಸ್ ಕಳುಹಿಸಿ ಎಂದು ಕುಟುಂಬದವರು ಆಸ್ಪತ್ರೆಗೆ ಕರೆ ಮಾಡಿದ್ದಾರೆ. ಸುಮಾರು ಸಮಯ ಕಳೆದರೂ ಅಂಬುಲೆನ್ಸ್ ಬಾರದ ಕಾರಣ ಕಮಲ ಬಾಯಿ ಪತಿ ತುಂಬು ಗರ್ಭಿಣಿಯನ್ನು ತನ್ನ ಬೈಕಿನ ಮೇಲೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಹೆದ್ದಾರಿಯಲ್ಲೇ ಕಮಲ ಬಾಯಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

    ಹೆರಿಗೆ ನೋವು ಬಂದ ತಕ್ಷಣ ನಾವು ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಿದ್ದೇವೆ ಮತ್ತು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಅಂಬುಲೆನ್ಸ್ ಕಳುಹಿಸಿ ಎಂದು ಹೇಳಿದ್ದೆವು. ಆದರೆ ಅಂಬುಲೆನ್ಸ್ ಎಷ್ಟು ಹೊತ್ತು ಕಾದರೂ ಬರಲಿಲ್ಲ. ಅದ್ದರಿಂದ ಆಕೆಯನ್ನು ಬೈಕಿನಲ್ಲಿ ಕರೆದುಕೊಂಡು ಹೋಗುತ್ತಿದ್ದೆವು. ಅ ಸಮಯದಲ್ಲಿ ಅವಳು ರಸ್ತೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದಳು ಎಂದು ಕಮಲ ಬಾಯಿ ಅತ್ತೆ ಚಂದ್ರ ಬಾಯಿ ಹೇಳಿದ್ದಾರೆ.

    ತಾಯಿ ಮಗುವನ್ನು ಶಹಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದೆ. ಪರೀಕ್ಷೆ ಮಾಡಿದ ವೈದ್ಯರು ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿ ಇದ್ದಾರೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.

  • ಚಿಕಿತ್ಸೆಗಾಗಿ ನಡುಗಡ್ಡೆಯಲ್ಲಿ ಸಿಲುಕಿರುವ ವೃದ್ಧೆ, ಗರ್ಭಿಣಿ ನರಳಾಟ

    ಚಿಕಿತ್ಸೆಗಾಗಿ ನಡುಗಡ್ಡೆಯಲ್ಲಿ ಸಿಲುಕಿರುವ ವೃದ್ಧೆ, ಗರ್ಭಿಣಿ ನರಳಾಟ

    ಯಾದಗಿರಿ: ಕೃಷ್ಣಾ ನದಿ ಪ್ರವಾಹದಿಂದ ಜಿಲ್ಲೆಯ ಹುಣಸಗಿ ತಾಲೂಕಿನ ನೀಲಕಂಠರಾಯನ ಗಡ್ಡಿ ಗ್ರಾಮ ನಡುಗಡ್ಡೆಯಾಗಿದೆ. ಈ ಗ್ರಾಮದಲ್ಲಿ ವೃದ್ಧೆ ಹಾಗೂ ಗರ್ಭಿಣಿ ಚಿಕಿತ್ಸೆಗಾಗಿ ಹೊರ ಬರಲಾಗದೆ ನರಳಾಡುತ್ತಿದ್ದಾರೆ.

    ನೀಲಕಂಠರಾಯನ ಗಡ್ಡಿ ಗ್ರಾಮ ನಡುಗಡ್ಡೆಯಾಗಿದ್ದು, ಕೃಷ್ಣಾ ನದಿ ಪ್ರವಾಹಕ್ಕೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಕೊಚ್ಚಿ ಹೋಗಿದೆ. ಈ ಹಿನ್ನೆಲೆ ಗ್ರಾಮದಿಂದ ಹೊರಬಾರದ ಸ್ಥಿತಿಯಲ್ಲಿ ಅಲ್ಲಿನ ಜನರಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರೆಳಲು ಮಾರ್ಗವಿಲ್ಲದೆ ವೃದ್ಧರು ಹಾಗೂ ಗರ್ಭಿಣಿ ನರಳಾಡುತ್ತಿದ್ದಾರೆ. ನೀಲಕಂಠರಾಯನ ಗಡ್ಡಿಯ ನಿವಾಸಿ ಬಸಮ್ಮ(80) ಮತ್ತು ಗರ್ಭಿಣಿ ಹನುಮಂತಮ್ಮ ಆಸ್ಪತ್ರೆಗೆ ತೆರಳಲು ಸಾಧ್ಯವಾಗುತ್ತಿಲ್ಲ. ನಮ್ಮ ಸಹಾಯಕ್ಕೆ ಯಾರೂ ಕೂಡ ಬರುತ್ತಿಲ್ಲ ಎಂದು ಅಳಲನ್ನು ತೋಡಿಕೊಂಡಿದ್ದಾರೆ.

    ಇತ್ತ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ಮಾರ್ಗಗಳು ಜಲಾವೃತಗೊಂಡು ಜನರು ಸಂಕಷ್ಟದಲ್ಲಿದ್ದಾರೆ. ಒಂದೆಡೆ ಪ್ರವಾಹ, ಇನ್ನೊಂದೆಡೆ ತಿನ್ನಲು ಸರಿಯಾಗಿ ಆಹಾರ ಸಿಗದೆ ಕಂಗಾಲಾಗಿದ್ದಾರೆ. ಹಾಗೆಯೇ ರೈತರು ತಮ್ಮ ಜಮೀನು, ಬೆಳೆಗಳನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಜನರ ಸಂಕಷ್ಟಕ್ಕೆ ನೆರವಾಗಬೇಕಿದೆ.

  • ಟಾಪ್‍ಲೆಸ್ ಫೋಟೋಶೂಟ್‍ನಲ್ಲಿ ಗರ್ಭಿಣಿ ಆ್ಯಮಿ

    ಟಾಪ್‍ಲೆಸ್ ಫೋಟೋಶೂಟ್‍ನಲ್ಲಿ ಗರ್ಭಿಣಿ ಆ್ಯಮಿ

    ಬೆಂಗಳೂರು: ಕನ್ನಡದ ವಿಲನ್ ಸಿನಿಮಾ ಮೂಲಕ ಚಂದನವನಕ್ಕೆ ಎಂಟ್ರಿ ಕೊಟ್ಟ ಬ್ರಿಟನ್ ಮೂಲದ ನಟಿ ಆ್ಯಮಿ ಜಾಕ್ಸನ್. ಸಿನಿಮಾಗಳಿಂದ ದೂರ ಉಳಿದಿರುವ ಗರ್ಭಿಣಿ ಆ್ಯಮಿ ಸಂಪೂರ್ಣ ವಿಶ್ರಾಂತಿಯಲ್ಲಿದ್ದಾರೆ. ಇದೀಗ ಟಾಪ್‍ಲೆಸ್ ಆಗಿರುವ ಫೋಟೋವನ್ನು ಆ್ಯಮಿ ಜಾಕ್ಸನ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದು, 11 ಗಂಟೆಯಲ್ಲಿ 4.8ಲಕ್ಷಕ್ಕೂ ಲೈಕ್ ಪಡೆದುಕೊಂಡಿದೆ.

    2018 ಜನವರಿ 1ರಂದು ಆ್ಯಮಿ ಜಾಕ್ಸನ್ ಉದ್ಯಮಿ ಜಾರ್ಜ್ ಪನಾಯೋಟೋ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳವುದಾಗಿ ಘೋಷಿಸಿದ್ದರು. ಬ್ರಿಟನ್ ಮದರ್ಸ್ ಡೇಯಂದು ಆ್ಯಮಿ ಜಾಕ್ಸನ್ ಗೆಳೆಯನೊಂದಿಗೆ ಕುಳಿತ ಬೇಬಿ ಬಂಪ್ ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ ಹಾಕಿಕೊಳ್ಳುವ ಮೂಲಕ ತಾಯಿ ಆಗುತ್ತಿರುವ ವಿಷಯವನ್ನು ತಿಳಿಸಿದ್ದರು. ಗರ್ಭಿಣಿಯಾದ ಬಳಿಕ ಗೆಳೆಯ ಜಾರ್ಜ್ ಜೊತೆ ನಿಶ್ಚಿತಾರ್ಥ ಸಹ ಮಾಡಿಕೊಂಡಿದ್ದಾರೆ.

    https://www.instagram.com/p/B03XXrwJEbb/

    ಗರ್ಭಿಣಿಯಾದ ನಂತರವೂ ಆ್ಯಮಿ ಹಲವು ಬಾರಿ ಬೇಬಿ ಬಂಪ್ ಫೋಟೋ ಹಂಚಿಕೊಂಡಿದ್ದಾರೆ. ಈ ಬಾರಿ ಟಾಪ್‍ಲೆಸ್ ಆಗಿರುವ ಫೋಟೋ ಹಾಕಿಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಕನ್ನಡದ ಮತ್ತೋರ್ವ ನಟಿ ಸಮೀರಾ ರೆಡ್ಡಿ ಗರ್ಭಿಣಿಯಾಗಿದ್ದ ವೇಳೆ ಅಂಡರ್ ವಾಟರ್ ನಲ್ಲಿ ಫೋಟೋಶೂಟ್ ಮಾಡಿಸುವ ಮೂಲಕ ಸುದ್ದಿಯಾಗಿದ್ದರು.

  • 108 ವಾಹನದಲ್ಲೇ ಹೆರಿಗೆ ಮಾಡಿಸಿ 2 ಜೀವ ಉಳಿಸಿದ ಸಿಬ್ಬಂದಿ

    108 ವಾಹನದಲ್ಲೇ ಹೆರಿಗೆ ಮಾಡಿಸಿ 2 ಜೀವ ಉಳಿಸಿದ ಸಿಬ್ಬಂದಿ

    ವಿಜಯಪುರ: ಕಳೆದ ರಾತ್ರಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ತುಂಬು ಗರ್ಭಿಣಿಗೆ ಆಸ್ಪತ್ರೆಗೆ ರವಾನಿಸುತ್ತಿದ್ದ ವೇಳೆ 108 ವಾಹನದಲ್ಲಿಯೇ ಸಿಬ್ಬಂದಿ ಹೆರಿಗೆ ಮಾಡಿಸಿ ತಾಯಿ, ಮಗುವಿನ ಜೀವ ಉಳಿಸಿದ್ದಾರೆ.

    ವಿಜಯಪುರ ತಾಲೂಕಿನ ಹಡಗಲಿ ಗ್ರಾಮದ ಬಳಿ 108 ಅಂಬುಲೆನ್ಸ್ ಸಿಬ್ಬಂದಿ ಗರ್ಭಿಣಿಗೆ ಹೆರಿಗೆ ಮಾಡಿಸಿದ್ದಾರೆ. ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕಣಮೇಶ್ವರ ಗ್ರಾಮದ ನಿವಾಸಿ ದಿಲಶಾದ್ ಇಸ್ಮಾಯಿಲ್ ಹಚಡದ ಅವರಿಗೆ ಸಿಬ್ಬಂದಿ ಹೆರಿಗೆ ಮಾಡಿಸಿದ್ದು, ಗಂಡು ಮಗು ಜನನವಾಗಿದೆ. ಬಳಿಕ ಸಿಬ್ಬಂದಿ ತಾಯಿ-ಮಗುವನ್ನು ಸುರಕ್ಷಿತವಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಹೆರಿಗೆ ನೋವಿನಿಂದ ದಿಲಶಾದ್ ಅವರು ಯಂಕಂಚಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ್ದರು. ದಿಲಶಾದ್ ಅವರಿಗೆ ಮೊದಲನೇ ಹೆರಿಗೆ ಸಿಸೇರಿಯನ್ ಆಗಿತ್ತು, ಹೀಗಾಗಿ ಎರಡನೇ ಹೆರಿಗೆ ನಾರ್ಮಲ್ ಡೆಲಿವರಿ ಆಗುವುದು ಕಷ್ಟವೆಂದು ವೈದ್ಯರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಎಂದು ಸೂಚಿಸಿದ್ದರು. ಆದ್ದರಿಂದ 108 ಅಂಬುಲೆನ್ಸ್ ನಲ್ಲಿ ಮಹಿಳೆಯನ್ನು ಜಿಲ್ಲಾಸ್ಪತ್ರಗೆ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಮಾರ್ಗ ಮಧ್ಯದಲ್ಲಿಯೇ ದಿಲಶಾದ್ ಅವರಿಗೆ ಹೆರಿಗೆ ನೋವು ತೀವ್ರವಾಗಿದ್ದು, ಸರಿಯಾದ ಸಮಯಕ್ಕೆ 108 ಎಮರ್ಜೆನ್ಸಿ ಮೆಡಿಕಲ್ ಟೆಕ್ನಿಶಿಯನ್ ಶೋಭಾ ಕೋಳಿ ಹಾಗೂ 108 ಚಾಲಕ ಬಾವುರಾಜ ಮಂಗಳವೆಡೆ ಅವರು ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.

    ಬಳಿಕ ಸುರಕ್ಷಿತವಾಗಿ ತಾಯಿ-ಮಗುವನ್ನು ಜಿಲ್ಲಾಸ್ಪತ್ರಗೆ ದಾಖಲಿಸಿದ್ದಾರೆ. ಸಿಬ್ಬಂದಿ ಸರಿಯಾದ ಸಮಯಕ್ಕೆ ಸಹಾಯ ಮಾಡಿ ಎರಡು ಜೀವಗಳನ್ನು ಉಳಿಸಿದ್ದಕ್ಕೆ ದಿಲಶಾದ್ ಹಾಗೂ ಅವರ ಕುಟುಂಬಸ್ಥರು ಧನ್ಯವಾದ ಹೇಳಿದ್ದಾರೆ.

  • ಸ್ಮಾರ್ಟ್‌ಫೋನ್‌ಗಾಗಿ ಗರ್ಭಿಣಿ ಪತ್ನಿಯ ಹತ್ಯೆ

    ಸ್ಮಾರ್ಟ್‌ಫೋನ್‌ಗಾಗಿ ಗರ್ಭಿಣಿ ಪತ್ನಿಯ ಹತ್ಯೆ

    ಹೈದರಾಬಾದ್: ಪಾಪಿ ಪತಿಯೊಬ್ಬ ಗರ್ಭಿಣಿ ಎಂದು ನೋಡದೆ ವರದಕ್ಷಿಣೆಗಾಗಿ ಪತ್ನಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ಕಡಪದಲ್ಲಿ ನಡೆದಿದೆ.

    ಚಾಂದಿನಿ ಮೃತ ಮಹಿಳೆ. ಕಡಪದ ಅಲ್ಲೂರಿ ಸೀತಾರಾಮರಾಜುನಗರದ ನಿವಾಸಿ ಚಾಂದಿನಿ ಅದೇ ನಗರದ ಮಾರುತಿ ಜೊತೆ ಕೆಲ ವರ್ಷಗಳ ಹಿಂದೆ ಮದುವೆಯಾಗಿತ್ತು. ಈ ದಂಪತಿಗೆ ನಾಲ್ಕು ವರ್ಷದ ಮಗನಿದ್ದು, ಮತ್ತೆ ಚಾಂದಿನಿ ಗರ್ಭಿಣಿಯಾಗಿದ್ದಳು. ಮದುವೆ ಸಂದರ್ಭದಲ್ಲಿ ವರದಕ್ಷಿಣೆ ಎಂದು ಚಾಂದಿನಿ ಕುಟುಂಬಸ್ಥರು ಮಾರುತಿಗೆ 4 ಲಕ್ಷ ರೂ. ಕೊಟ್ಟಿದ್ದರು. ಆದರೂ ಮದುವೆಯಾಗಿನಿಂದಲೂ ಮಾರುತಿ ಹೆಚ್ಚಿನ ವರದಕ್ಷಿಣೆ ತರುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದನು.

    ಆರೋಪಿ ಮಾರುತಿ ಪ್ರತಿದಿನ ಸ್ಥಳೀಯ ಅಂಗಡಿಯಲ್ಲಿ ಧೂಮಪಾನ ಮಾಡುತ್ತಿದ್ದು, ವರದಕ್ಷಿಣೆಗಾಗಿ ನನ್ನ ಮಗಳಿಗೆ ಚಿತ್ರಹಿಂಸೆ ಕೊಡುತ್ತಿದ್ದನು. ಕೆಲವು ದಿನಗಳ ಹಿಂದೆ ಸ್ಮಾರ್ಟ್ ಫೋನ್ ಕೊಡಿಸುವಂತೆ ಬೇಡಿಕೆ ಇಟ್ಟಿದ್ದಾನೆ. ಆದರೆ ಇದಕ್ಕೆ ನನ್ನ ಮಗಳು ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಮಾರುತಿ ಸಿಗರೇಟಿನಿಂದ ಸುಟ್ಟು ಚಿತ್ರಹಿಂಸೆ ಕೊಟ್ಟಿದ್ದಾನೆ ಎಂದು ಮೃತ ಚಾಂದಿನಿಯ ಪೋಷಕರು ಆರೋಪಿಸಿದ್ದಾರೆ.

    ಶನಿವಾರ ರಾತ್ರಿ ಇದೇ ವಿಚಾರಕ್ಕೆ ಮತ್ತೆ ಜಗಳ ಮಾಡಿ ಪತ್ನಿಯ ಕೈಯನ್ನು ಮುರಿದು, ಕತ್ತಿಯಿಂದ ಹಲ್ಲೆ ಮಾಡಿದ್ದನು. ಪರಿಣಾಮ ಚಾಂದಿನಿ ಸ್ಥಳದಲ್ಲಿಯೇ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ. ಇದರಿಂದ ಭಯಗೊಂಡು ಚಾಂದಿನಿಯ ಶವವನ್ನು ಬಿಟ್ಟು ಅತ್ತೆ, ಮಾವ, ಮಾರುತಿ ಮನೆಯಿಂದ ಪರಾರಿಯಾಗಿದ್ದಾರೆ.

    ಮರುದಿನ ಚಾಂದಿನಿ ಕುಟುಂಬಸ್ಥರು ಮನೆಗೆ ಬಂದಿದ್ದಾರೆ. ಆದರೆ ಬಾಗಿಲು ಲಾಕ್ ಆಗಿತ್ತು. ನೆರೆಹೊರೆಯವರ ಸಹಾಯದಿಂದ ಬಾಗಿಲು ಮುರಿದು ಹೋಗಿ ನೋಡಿದಾಗ ಚಾಂದಿನಿಯ ಶವ ಪತ್ತೆಯಾಗಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಚಾಂದಿನಿಯ ಮೃತದೇವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯಕ್ಕೆ ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.

  • ಪತ್ನಿಯ ಅಣ್ಣನ ಮಗಳ ಜೊತೆ ಪ್ರೇಮಸಲ್ಲಾಪ – ಗರ್ಭಿಣಿಯಾಗಿದ್ದಕ್ಕೆ ಹತ್ಯೆ

    ಪತ್ನಿಯ ಅಣ್ಣನ ಮಗಳ ಜೊತೆ ಪ್ರೇಮಸಲ್ಲಾಪ – ಗರ್ಭಿಣಿಯಾಗಿದ್ದಕ್ಕೆ ಹತ್ಯೆ

    ಹಾಸನ: ಚನ್ನರಾಯಪಟ್ಟಣ ತಾಲೂಕಿನ ರಾಷ್ಟೀಯ ಹೆದ್ದಾರಿಯಲ್ಲಿ ಅಪರಿಚಿತ ಯುವತಿಯ ಮೃತದೇಹ ಪತ್ತೆಯಾಗಿದ್ದು, ಸುಮಾರು 10 ದಿನಗಳ ನಂತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

    ಚಿತ್ರಾ(23) ಮೃತ ಯುವತಿ. ಈಕೆ ಬೆಂಗಳೂರು ಮೂಲದವಳಾಗಿದ್ದು, ಈಕೆಯನ್ನು ಪ್ರೀತಿಸುವ ನಾಟಕವಾಡಿ ಮಾವ ಶ್ರೀನಿವಾಸ್ ಹತ್ಯೆ ಮಾಡಿದ್ದನು. ಇದೀಗ ಹಿರಿಸಾವೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ಮೃತ ಚಿತ್ರಾ ಆರೋಪಿ ಶ್ರೀನಿವಾಸ್‍ನ ಪತ್ನಿಯ ಸಹೋದರನ ಮಗಳಾಗಿದ್ದನು. ಚಿತ್ರಾ ಬೆಂಗಳೂರಿನ ಒರಿಯನ್ ಮಾಲಿನಲ್ಲಿ ಕೆಲಸ ಮಾಡುತ್ತಿದ್ದಳು. ಆರೋಪಿ ಶ್ರೀನಿವಾಸ್ ವಿವಾಹವಾಗಿ ಮಕ್ಕಳಿದ್ದರೂ ಚಿತ್ರಾಳ ಜೊತೆ ಪ್ರೀತಿಯ ನಾಟಕವಾಗಿದ್ದನು. ಚಿತ್ರಾಳಿಗೂ ಶ್ರೀನಿವಾಸ್‍ಗೆ ಮದುವೆಯಾಗಿರುವ ವಿಚಾರ ತಿಳಿದಿತ್ತು. ಆದರೂ ಆರೋಪಿ ಶ್ರೀನಿವಾಸ್‍ನನ್ನು ಪ್ರೀತಿಸುತ್ತಿದ್ದಳು. ಆದರೆ ಇಬ್ಬರ ನಡುವಿನ ಪ್ರೀತಿ ಪ್ರೇಮದಿಂದ ಚಿತ್ರಾ ಗರ್ಭಿಣಿಯಾಗಿದ್ದಳು.

    ಚಿತ್ರಾ ಗರ್ಭಿಣಿಯಾದ ಸುದ್ದಿ ತಿಳಿದು ಆಕೆಯನ್ನ ಕೊಲೆ ಮಾಡಲು ಶ್ರೀನಿವಾಸ್ ಪ್ಲ್ಯಾನ್ ಮಾಡಿದ್ದನು. ಅದರಂತೆಯೇ ಚಿತ್ರಾಳ ಕುತ್ತಿಗೆ ಹಿಸುಕಿ ಆರೋಪಿ ಕೊಲೆ ಮಾಡಿ ಚನ್ನರಾಯಪಟ್ಟಣ ತಾಲೂಕಿನ ರಾಷ್ಟೀಯ ಹೆದ್ದಾರಿ 75ರ ಸಮೀಪದ ತೋಪಿನಲ್ಲಿ ಮೃತದೇಹ ಎಸೆದು ಪರಾರಿಯಾಗಿದ್ದನು.

    ಜುಲೈ 23 ರಂದು ಚನ್ನರಾಯಪಟ್ಟಣ ತಾಲೂಕಿನ ಮಟ್ಟನವಿಲೆ ಬಳಿ ಮೃತದೇಹ ಪತ್ತೆಯಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಯುವತಿಯ ಮೃತದೇಹದ ಫೋಟೋ ವೈರಲ್ ಆಗಿತ್ತು. ಆ ಫೋಟೋವನ್ನು ನೋಡಿ ಪೊಲೀಸರಿಗೆ ಚಿತ್ರಾ ಕುಟುಂಬಸ್ಥರು ದೂರು ನೀಡಿದ್ದರು. ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ಶುರು ಮಾಡಿದ್ದು, ಇದೀಗ ಆರೋಪಿ ಶ್ರೀನಿವಾಸನನ್ನು ಬಂಧಿಸಿದ್ದಾರೆ.

  • ಪ್ರೆಗ್ನೆನ್ಸಿ ಬಗ್ಗೆ ನಟಿ ಅನುಷ್ಕಾ ಶರ್ಮಾ ಸ್ಪಷ್ಟನೆ

    ಪ್ರೆಗ್ನೆನ್ಸಿ ಬಗ್ಗೆ ನಟಿ ಅನುಷ್ಕಾ ಶರ್ಮಾ ಸ್ಪಷ್ಟನೆ

    ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಪ್ರೆಗ್ನೆನ್ಸಿ ಬಗ್ಗೆ ಹರಿದಾಡುತ್ತಿರುವ ಸುದ್ದಿಗೆ ಸ್ಪಷ್ಟನೆ ನೀಡಿದ್ದಾರೆ.

    ಇತ್ತೀಚೆಗೆ ಅನುಷ್ಕಾ ಶರ್ಮಾ ಫಿಲ್ಮಂಫೇರ್ ಮ್ಯಾಗಜೀನ್‍ಗೆ ಸಂದರ್ಶನ ನೀಡಿದ್ದರು. ಈ ವೇಳೆ ಕಾರ್ಯಕ್ರಮದ ನಿರೂಪಕ ಬಿ-ಟೌನ್‍ನಲ್ಲಿ ಹರಿದಾಡುತ್ತಿದ್ದ ಪ್ರೆಗ್ನೆನ್ಸಿ ಗಾಸಿಪ್ ಬಗ್ಗೆ ಅನುಷ್ಕಾ ಶರ್ಮಾ ಅವರಿಗೆ ಕೇಳಿದ್ದಾರೆ. ಈ ವೇಳೆ ಅನುಷ್ಕಾ ಗರಂ ಆಗಿಯೇ ಉತ್ತರಿಸಿದ್ದಾರೆ.

    ಜನರು ಕಲಾವಿದರಿಗೆ ನೆಮ್ಮದಿಯಿಂದ ಬದುಕಲು ಬಿಡಬೇಕು. ನಟಿಯೊಬ್ಬರು ಮದುವೆಯಾದ ತಕ್ಷಣ ಪ್ರಗ್ನೆನ್ಸಿಗೆ ಸಂಬಂಧಿಸಿದ ಪ್ರಶ್ನೆಯನ್ನು ಕೇಳುತ್ತಾರೆ. ಅಥವಾ ಯಾರನ್ನಾದರೂ ಡೇಟ್ ಮಾಡುತ್ತಿದ್ದರೆ, ಮದುವೆ ಯಾವಾಗ ಮಾಡಿಕೊಳ್ಳುತ್ತೀರಾ ಎಂದು ಪ್ರಶ್ನಿಸುತ್ತಾರೆ. ಇದು ಕೆಲಸಕ್ಕೆ ಬಾರದ ಮಾತುಗಳು. ನೀವು ಕಲಾವಿದರಿಗೆ ಬದುಕಲು ಬಿಡಬೇಕು. ಬಲವಂತವಾಗಿ ಜನರ ಪ್ರಶ್ನೆಗೆ ಉತ್ತರಿಸಬೇಕು ಎಂಬ ಪರಿಸ್ಥಿತಿಯನ್ನು ನಿರ್ಮಾಣ ಮಾಡುತ್ತೀರಾ. ನನಗೆ ಇಂತಹ ವಿಷಯಗಳು ಇಷ್ಟವಾಗುವುದಿಲ್ಲ ಎಂದರು.

    ಅಲ್ಲದೆ ನನಗೆ ಈ ವಿಷಯಗಳ ಬಗ್ಗೆ ಸ್ಪಷ್ಟನೆ ನೀಡುವ ಅಗತ್ಯವಿದೆಯೇ? ಯಾವ ಯಾವ ನಟಿಯರು ಮದುವೆಯಾಗಿದ್ದಾರೋ ಅವರ ಬಗ್ಗೆ ಕೂಡ ಜನರು ಏನಾದರೂ ಹೇಳಿರುತ್ತಾರೆ. ಯಾವುದಾದರೂ ನಟಿ ಲೂಸ್ ಡ್ರೆಸ್ ಧರಿಸಿದ್ದರೆ ಅವರು ಪ್ರಗ್ನೆಂಟ್ ಎಂದು ಹೇಳುತ್ತಾರೆ. ಆದರೆ ಲೂಸ್ ಡ್ರೆಸ್ ಟ್ರೆಂಡಿ ಆಗಿರುವ ಕಾರಣ ನಟಿಯರು ಅದನ್ನು ಧರಿಸುತ್ತಾರೆ ಹೊರತು ಪ್ರಗ್ನೆಂಟ್ ಎಂದು ಅಲ್ಲ. ನಾವು ಈ ವಿಷಯಗಳ ಬಗ್ಗೆ ಹೆಚ್ಚು ಗಮನ ಕೊಡಬಾರದು ಎಂದು ಹೇಳಿದ್ದಾರೆ.

    ಈ ಹಿಂದೆ ಮಾಧ್ಯಮದವರು ನೀವು ಗರ್ಭಿಣಿಯೇ ಎಂದು ಅನುಷ್ಕಾರನ್ನು ಪ್ರಶ್ನಿಸಿದ್ದರು. ಈ ಪ್ರಶ್ನೆಗೆ, ನಿಮಗೆ ಈ ರೀತಿಯ ಸುದ್ದಿಗಳು ಹೇಗೆ ಬರುತ್ತೆ ಎಂಬುದು ನನಗೆ ಗೊತ್ತಿಲ್ಲ. ಇದು ಕೆಲಸಕ್ಕೆ ಬಾರದ ಮಾತುಗಳು. ನೀವು ಮದುವೆಯನ್ನು ಅಡಗಿಸಬಹುದು. ಆದರೆ ಪ್ರೆಗ್ನೆನ್ಸಿಯನ್ನು ಹೇಗೆ ಅಡಗಿಸುತ್ತೀರಾ. ಇಲ್ಲಿ ಜನರು ಮದುವೆ ಮೊದಲೇ ನಿಮ್ಮನ್ನು ಮುತ್ತೈದೆ ಮಾಡುತ್ತಾರೆ. ಮಗು ಆಗುವ ಮೊದಲೇ ತಾಯಿ ಮಾಡುತ್ತಾರೆ. ನನಗೆ ಇದರಲ್ಲಿ ಯಾವುದೇ ವ್ಯತ್ಯಾಸ ಕಾಣುತ್ತಿಲ್ಲ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದ್ದರು.

  • ಸೀಮಂತ ಕಾರ್ಯಕ್ರಮ – ಕೇಕ್ ಕತ್ತರಿಸಿ ಸಂಭ್ರಮಿಸಿದ ಶ್ರುತಿ ಹರಿಹರನ್

    ಸೀಮಂತ ಕಾರ್ಯಕ್ರಮ – ಕೇಕ್ ಕತ್ತರಿಸಿ ಸಂಭ್ರಮಿಸಿದ ಶ್ರುತಿ ಹರಿಹರನ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಶ್ರುತಿ ಹರಿಹರನ್ ಇತ್ತೀಚೆಗೆ ತಾವೂ ಗರ್ಭಿಣಿ ಎಂದು ಅಧಿಕೃತವಾಗಿ ಹೇಳಿಕೊಂಡಿದ್ದರು. ಇದೀಗ ಶ್ರುತಿ ಹರಿಹರನ್ ಅವರು ಸೀಮಂತ ಸಂಭ್ರಮದ ವಿಡಿಯೋವನ್ನು ಪ್ರಕಟಿಸಿದ್ದಾರೆ.

    ನಟಿ ಶ್ರುತಿ ಹರಿಹರನ್ ಅವರು ಬೇಬಿ ಶವರ್ ಕಾರ್ಯಕ್ರಮದ ಕೆಲವು ಫೋಟೋಗಳನ್ನು ಒಂದು ಸ್ಲೈಡ್ ಮಾಡಿ ಆ ವಿಡಿಯೋವನ್ನು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ವಿಡಿಯೋದಲ್ಲಿ ಶ್ರುತಿ ಬಿಳಿ ಬಣ್ಣದ ಗೌನ್ ಧರಿಸಿದ್ದು, ವಿಭಿನ್ನವಾಗಿ ಡಿಸೈನ್ ಆಗಿರುವ ಕೇಕ್ ಕತ್ತರಿಸುವ ಮೂಲಕ ಸಂಭ್ರಮಾಚಾರಣೆ ಮಾಡಿದ್ದಾರೆ. ಜೊತೆಗೆ ಅವರ ಸ್ನೇಹಿತರ ಜೊತೆ ಫೋಟೋಗೆ ಪೋಸ್ಟ್ ಕೊಟ್ಟಿದ್ದು, ಬೇಬಿ ಶವರ್ ಕಾರ್ಯಕ್ರಮವನ್ನು ಸಖತ್ ಎಂಜಾಯ್ ಮಾಡಿದ್ದಾರೆ.

    ಕಾರ್ಯಕ್ರಮದ ವಿಡಿಯೋ ಹಂಚಿಕೊಂಡಿದ್ದು, ಈ ಸಂಭ್ರಮ, ಸಡಗರಕ್ಕೆ ಕಾರಣರಾದ ಸ್ನೇಹಿತರು ಮತ್ತು ಕುಂಟುಂಬದ ಕೆಲವರಿಗೆ ಶ್ರುತಿ ಹರಿಹರನ್ ಧನ್ಯವಾದ ತಿಳಿಸಿದ್ದಾರೆ.

    ಕೆಲವು ದಿನಗಳ ಹಿಂದೆಯಷ್ಟೆ ಶ್ರುತಿ ಬ್ಲರ್ ಆಗಿ ಕ್ಲಿಕ್ಕಿಸಿಕೊಂಡಿರುವ ಫೋಟೋವೊಂದನ್ನು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, “ಈ ಸರ್ಕಸ್‍ಗೆ ನಿನಗೆ ಸ್ವಾಗತ ಪುಟ್ಟ. ನಿನ್ನನ್ನು ನೋಡಲು ನಮಗೆ ಕಾಯಲು ಆಗುತ್ತಿಲ್ಲ. ನಿನ್ನ ತಂದೆ ರಾಮ್ ಕಳಾರಿ ಉತ್ಸುಕರಾಗಿದ್ದಾರೆ” ಎಂದು ಬರೆದುಕೊಂಡಿದ್ದರು. ಈ ಮೂಲಕ ಶ್ರುತಿ ಅವರು ತಾವೂ ಗರ್ಭಿಣಿ ಎಂಬುದನ್ನು ಅಧಿಕೃತವಾಗಿ ಹೇಳಿಕೊಂಡಿದ್ದರು.

    https://www.instagram.com/p/Bz-rVWjJHRH/

    ನಟಿ ಶ್ರುತಿ ಹರಿಹರನ್ ಅವರು ತಾನು ಮದುವೆಯಾಗಿದ್ದೇನೆ ಎನ್ನುವ ವಿಚಾರವನ್ನು ಎಲ್ಲಿಯೂ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ. ಆದರೆ ನಟ ಅರ್ಜುನ್ ಸರ್ಜಾ ಅವರ ವಿರುದ್ಧ ಮೀಟೂ ಆರೋಪ ಕೇಳಿ ಬಂದ ಸಂದರ್ಭದಲ್ಲಿ ದೂರು ನೀಡುವಾಗ ಮದುವೆಯಾಗಿದ್ದ ವಿಚಾರ ಬಹಿರಂಗವಾಗಿತ್ತು. ಶ್ರುತಿ ಡ್ಯಾನ್ಸ್ ಮಾಸ್ಟರ್ ಮತ್ತು ಪ್ರಸಿದ್ಧ ಕಲರಿ ಪಟ್ಟು ಕಲಾವಿದರಾಗಿರುವ ರಾಮ್ ಕುಮಾರ್ ಅವರನ್ನು ಮದುವೆಯಾಗಿದ್ದಾರೆ.

    https://www.instagram.com/p/B0DCgkRnLhY/

  • ನಟಿ ಶ್ರುತಿ ಹರಿಹರನ್ ಗರ್ಭಿಣಿ

    ನಟಿ ಶ್ರುತಿ ಹರಿಹರನ್ ಗರ್ಭಿಣಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಶ್ರುತಿ ಹರಿಹರನ್ ಗರ್ಭಿಣಿಯಾಗಿದ್ದು, ಈ ವಿಷಯವನ್ನು ಅವರು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳ ಜೊತೆ ಸಂತಸವನ್ನು ಹಂಚಿಕೊಂಡಿದ್ದಾರೆ.

    ಶ್ರುತಿ ಬ್ಲರ್ ಆಗಿ ಕ್ಲಿಕ್ಕಿಸಿಕೊಂಡಿರುವ ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಈ ಸರ್ಕಸ್‍ಗೆ ನಿನಗೆ ಸ್ವಾಗತ ಪುಟ್ಟ. ನಿನ್ನನ್ನು ನೋಡಲು ನಮಗೆ ಕಾಯಲು ಆಗುತ್ತಿಲ್ಲ. ನಿನ್ನ ತಂದೆ ರಾಮ್ ಕಳಾರಿ ಉತ್ಸುಕರಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.

    2017ರ ನವೆಂಬರ್ ತಿಂಗಳಲ್ಲಿ ವೆಬ್‍ಸೈಟ್ ಒಂದು ಮೂರು ತಿಂಗಳ ಹಿಂದೆ ಶ್ರುತಿ ಹರಿಹರನ್ ರಹಸ್ಯವಾಗಿ ಮದುವೆಯಾಗಿದ್ದಾರೆ. ಕನ್ನಡ ಸಿನಿಮಾ ಹ್ಯಾಪಿ ನ್ಯೂ ಇಯರ್ ಸಿನಿಮಾದ ಬಳಿಕ ಶ್ರುತಿ ರಾಮ್ ಅವರ ಮದುವೆ ನಡೆದಿದೆ ಎಂದು ವರದಿ ಮಾಡಿತ್ತು.

    ರಾಮ್ ಅವರು ಕೇರಳದಲ್ಲಿ ಡ್ಯಾನ್ಸ್ ಮಾಸ್ಟರ್ ಆಗಿದ್ದಾರೆ. ಕೇರಳದ ಪ್ರಸಿದ್ಧ ಕಲರಿ ಪಟ್ಟು ಕಲಾವಿದರಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ನೃತ್ಯ ನಿರ್ದೇಶಕರಾಗಿ ರಾಮ್ ಹೆಸರು ಮಾಡಿದ್ದಾರೆ.

    ನಟಿ ಶ್ರುತಿ ಹರಿಹರನ್ ಅವರು ತಾನು ಮದುವೆಯಾಗಿದ್ದೇನೆ ಎನ್ನುವ ವಿಚಾರವನ್ನು ಎಲ್ಲಿಯೂ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ. ಆದರೆ ನಟ ಅರ್ಜುನ್ ಸರ್ಜಾ ಅವರ ವಿರುದ್ಧ ಮೀಟೂ ಆರೋಪ ಕೇಳಿ ಬಂದ ಸಂದರ್ಭದಲ್ಲಿ ದೂರು ನೀಡುವಾಗ ಮದುವೆಯಾಗಿದ್ದ ವಿಚಾರ ಬಹಿರಂಗವಾಗಿತ್ತು.

    ಶೃತಿ ಹರಿಹರನ್ ಅವರು ಸುಮಾರು 5 ಪುಟಗಳಲ್ಲಿ ಅರ್ಜುನ್ ಸರ್ಜಾ ಅವರ ವಿರುದ್ಧ ದೂರು ನೀಡಿದ್ದರು. ಇದರಲ್ಲಿ ತಮ್ಮ ಹೆಸರಿನ ವಿಳಾಸದೊಂದಿಗೆ ವೈಫ್ ಆಫ್ ರಾಮ್ ಕುಮಾರ್ ಎಂದು ನಮೂದಿಸಿದ್ದರು.

    ಶ್ರುತಿ ದೂರಿನಲ್ಲಿ ಮದುವೆಯಾಗಿದೆ ಎಂದು ನಮೂದಿಸುವ ಮೊದಲು ರಾಮ್ ಕುಮಾರ್ ಜೊತೆ ರಿಲೇಷನ್ ಶಿಪ್ ನಲ್ಲಿರುವುದಾಗಿ ಹೇಳಿಕೊಂಡಿದ್ದರು. ಆದರೆ ಎಲ್ಲಿಯೂ ತಾವು ಮದುವೆಯಾಗಿರುವುದಾಗಿ ಹೇಳಿಕೊಂಡಿರಲಿಲ್ಲ. ಶ್ರುತಿ ಹರಿಹರನ್ ರಾಮ್ ಕುಮಾರ್ ಜೊತೆಯಲ್ಲಿ ಮೊದಲ ಬಾರಿಗೆ `ಪ್ರೇಮ’ ಎಂಬ ವಿಡಿಯೋ ಹಾಡಿನಲ್ಲಿ ಇಬ್ಬರು ಒಟ್ಟಾಗಿ ಅಭಿನಯಿಸಿದ್ದರು.