Tag: Prem Singh

  • ಕಂಡಲ್ಲಿ ಗುಂಡು ಹಾರಿಸಲು ಅನುಮತಿ ಕೊಟ್ಟರಷ್ಟೇ ಹಿಂದೂಗಳು ಸೇಫ್: ಸಿದ್ದಲಿಂಗ ಸ್ವಾಮೀಜಿ

    ಕಂಡಲ್ಲಿ ಗುಂಡು ಹಾರಿಸಲು ಅನುಮತಿ ಕೊಟ್ಟರಷ್ಟೇ ಹಿಂದೂಗಳು ಸೇಫ್: ಸಿದ್ದಲಿಂಗ ಸ್ವಾಮೀಜಿ

    ಕಲಬುರಗಿ: ಸರ್ಕಾರ  ಕಂಡಲ್ಲಿ ಗುಂಡು ಹಾರಿಸಲು ಅನುಮತಿ ಕೊಟ್ಟರೇ ಮಾತ್ರವೇ ಹಿಂದೂಗಳು ಸುರಕ್ಷಿತವಾಗಿರಲಿದ್ದಾರೆ ಎಂದು ಶ್ರೀರಾಮ ಸೇನೆಯ ರಾಜ್ಯ ಗೌರವಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಒತ್ತಾಯಿಸಿದ್ದಾರೆ.

    ಶಿವಮೊಗ್ಗದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರು, ಭದ್ರಾವತಿಯಲ್ಲಿ ಭಜರಂಗದಳ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಇಂತಹ ಘಟನೆಗಳಿಂದ ಹಿಂದೂ ಕಾರ್ಯಕರ್ತರು ಜರ್ಜರಿತವಾಗಿ ಓಡಾಡಲು ಭಯ ಪಡುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೂ ಹಿಂದೂ ಕಾರ್ಯಕರ್ತರನ್ನು ಹುಡುಕಿ ಹುಡುಕಿ ದಾಳಿ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಸಾವರ್ಕರ್ ಪೋಸ್ಟರ್ ವಿವಾದ – ನಾಲ್ವರು ಅರೆಸ್ಟ್

    ಹಿಂದೂ ಕಾರ್ಯಕರ್ತರೂ ಕೈಕಟ್ಟಿ ಕುಳಿತುಕೊಳ್ಳುವ ಕಾಲ ಈಗ ಇಲ್ಲ. ಕ್ರಿಯೆಗೆ ಪ್ರತಿಕ್ರಿಯೆ ಕೊಡುವ ನಿಟ್ಟಿನಲ್ಲಿ ನಾವಿಂದು ವಿಚಾರ ಮಾಡಬೇಕಾಗಿದೆ. ಸರ್ಕಾರ ಶೂಟ್ ಅಂಡ್ ಸೈಟ್‌ಗೆ ಅನುಮತಿ ಕೊಟ್ಟರೆ ಮಾತ್ರವೇ ಹಿಂದೂಗಳು ಸುರಕ್ಷಿತವಾಗಿರಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು- ಪೊಲೀಸರಿಗೂ ಚಾಕು ಇರಿಯಲು ಮುಂದಾದ ಕಿಡಿಗೇಡಿ

    ಶಿವಮೊಗ್ಗ-ಭದ್ರಾವತಿ ಘಟನೆ ನಂತರವೂ ಯಾರೊಬ್ಬರೂ ಹೇಳಿಕೆ ಕೊಡುತ್ತಿಲ್ಲ. ಹೇಳಿಕೆ ಕೊಡುವವರ ಬಾಯಿಗೆ ಸರ್ಕಾರವೇ ಬೀಗ ಹಾಕಿದಂತಾಗಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತಿಲಕ ಇಟ್ಟುಕೊಂಡಿದ್ದಕ್ಕೇ ಚಾಕು ಇರಿತ – ಶಿವಮೊಗ್ಗ ಪ್ರಕರಣಕ್ಕೆ ಟ್ವಿಸ್ಟ್

    ತಿಲಕ ಇಟ್ಟುಕೊಂಡಿದ್ದಕ್ಕೇ ಚಾಕು ಇರಿತ – ಶಿವಮೊಗ್ಗ ಪ್ರಕರಣಕ್ಕೆ ಟ್ವಿಸ್ಟ್

    ಶಿವಮೊಗ್ಗ: ಸಾವರ್ಕರ್ ಫೋಟೋ ವಿವಾದದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದೀಗ ಪ್ರೇಮ್‌ಸಿಂಗ್ ಸ್ನೇಹಿತನ ಸ್ಫೋಟಕ ಹೇಳಿಕೆಯಿಂದಾಗಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

    ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಪ್ರೇಮ್ ಸಿಂಗ್ ಸ್ನೇಹಿತ ಉತ್ತಮ್ ಭಾಟಿ, ಪ್ರೇಮ್‌ಸಿಂಗ್ ಕೈಗೆ ರಾಕಿ, ಹಣೆಗೆ ತಿಲಕ ಇಟ್ಟುಕೊಂಡಿದ್ದಕ್ಕೆ ಚಾಕು ಇರಿದಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಾವರ್ಕರ್ ಪೋಸ್ಟರ್ ವಿವಾದ – ನಾಲ್ವರು ಅರೆಸ್ಟ್

    ಅಮೀರ್ ಅಹಮ್ಮದ್ ಸರ್ಕಲ್ ನಲ್ಲಿ ನಡೆದ ಗಲಾಟೆ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ. ಪೊಲೀಸರು 144 ಸೆಕ್ಷನ್ ಇದೆ ಎಂದು ಹೇಳಿದಾಗ ನಾವು ಅಂಗಡಿ ಬಂದ್ ಮಾಡಿದೆವು. ಇದೇ ವೇಳೆ ಏಕಾಏಕಿ ಗುಂಪಿನಲ್ಲಿ ಬಂದ ಹತ್ತು ಜನರು ಪ್ರೇಮ್ ಸಿಂಗ್ ಮೇಲೆ ಹಲ್ಲೆ ನಡೆಸಿ, ಚಾಕು ಇರಿದಿದ್ದಾರೆ. ಕೈಗೆ ರಾಕಿ ಕಟ್ಟಿಕೊಂಡಿದ್ದಕ್ಕೆ, ಹಣೆಗೆ ತಿಲಕ ಇಟ್ಟಿದ್ದಕ್ಕೇ ಚಾಕು ಇರಿದಿದ್ದಾರೆ ಎಂದು ಉತ್ತಮ್ ಹೇಳಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು- ಪೊಲೀಸರಿಗೂ ಚಾಕು ಇರಿಯಲು ಮುಂದಾದ ಕಿಡಿಗೇಡಿ

    ಮುಬಾರಕ್ ಅರೆಸ್ಟ್: ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಬಾರಕ್‌ನನ್ನು ಪೊಲೀಸರು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]