Tag: Preparation

  • ಹಾಸನಾಂಬೆ ಉತ್ಸವಕ್ಕೆ ದಿನಗಣನೆ – ಸಿದ್ಧತಾ ಕಾರ್ಯ ಸಾಗದ್ದಕ್ಕೆ ಭಕ್ತರ ಆಕ್ರೋಶ

    ಹಾಸನಾಂಬೆ ಉತ್ಸವಕ್ಕೆ ದಿನಗಣನೆ – ಸಿದ್ಧತಾ ಕಾರ್ಯ ಸಾಗದ್ದಕ್ಕೆ ಭಕ್ತರ ಆಕ್ರೋಶ

    ಹಾಸನ: ದಸರಾ ನಂತರ ನಡೆಯುವ ಹಾಸನದ ಹಾಸನಾಂಬೆ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಪ್ರತಿಬಾರಿಯಂತೆ ಈ ಬಾರಿಯೂ ಸಹ ಲಕ್ಷಾಂತರ ಭಕ್ತರು ಬರುವ ನಿರೀಕ್ಷೆ ಇದೆ. ಆದರೆ ನಗರದಲ್ಲಿ ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವ ಸಿದ್ಧತಾ ಕಾರ್ಯ ಆಮೆಗತಿಯಲ್ಲಿ ಸಾಗುತ್ತಿದ್ದು, ಭಕ್ತರ ಆತಂಕಕ್ಕೆ ಕಾರಣವಾಗಿದೆ.

    ತಿಂಗಳು 17ರ ಗುರುವಾರ ದೇವಿಯ ಜಾತ್ರೆ ಮಹೋತ್ಸವ ಆರಂಭ ಆಗಲಿದ್ದು. ಅಂದೇ ಹಾಸನಾಂಬೆಯ ಗರ್ಭಗುಡಿಯ ಬಾಗಿಲು ತೆರೆಯಲಾಗುತ್ತದೆ. ಇದಕ್ಕೆ ಕೇವಲ 15 ದಿನಗಳು ಮಾತ್ರ ಬಾಕಿ ಇವೆ. ನಗರದಿಂದ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳೆಲ್ಲ ಹಾಳಾಗಿವೆ.

    ರಸ್ತೆ ಕಾಮಗಾರಿ ಹಿನ್ನಲೆಯಲ್ಲಿ ವಾಹನ ಸವಾರರಿಗೆ ಅರ್ಧ ರಸ್ತೆಯಲ್ಲಿ ಮಾತ್ರ ಸಂಚರಿಸುವ ಅನಿವಾರ್ಯತೆ ಇದೆ. ಪರಿಣಾಮ ಇಡೀ ನಗರ ತುಂಬ ಇರುವ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಕಾಡುತ್ತಿದೆ. ದೇವಾಲಯಕ್ಕೆ ಸಂಪರ್ಕದ ಬಿಎಂ ರಸ್ತೆ, ಹೊಸ ಲೈನ್ ರಸ್ತೆ, ಗೊರೂರು ವೃತ್ತ, ಸೇರಿದಂತೆ ನಾಲ್ಕು ಕಡೆಗಳಿಂದಲೂ ಸಹ ಸಂಚಾರ ಸುಗಮವಾಗಿಲ್ಲ. ರಸ್ತೆಗಳ ದುರಸ್ತಿ ಕಾರ್ಯ ಆಮೆ ಗತಿಯಲ್ಲಿ ಸಾಗುತ್ತಿದೆ.

    ಎನ್ ಆರ್ ವೃತ್ತದಿಂದ ಸಂತೆಪೇಟೆ ಮಾರ್ಗವಾಗಿ ದೇವಾಲಯಕ್ಕೆ ಹೋಗುವ ರಸ್ತೆ ಕಾಮಗಾರಿ ನಡೆಯುತ್ತಿದ್ದು ಶೇ.25 ರಷ್ಟು ಕೆಲಸ ಬಾಕಿ ಇದೆ. ಉಳಿದಿರುವ ಕಾಮಗಾರಿ 15 ದಿನಗಳಲ್ಲಿ ಮುಗಿಯುವುದು ಅನುಮಾನ ಆಗಿದೆ. ಪ್ರತಿ ದಿನ 50 ಸಾವಿರಕ್ಕೂ ಹೆಚ್ಚು ಮಂದಿ ಭಕ್ತರು ಬರುವ ಹಿನ್ನಲೆ ರಸ್ತೆ ಸರಿಪಡಿಸದಿದ್ದರೆ ಟ್ರಾಫಿಕ್ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ.

    ದೇವಾಲಯ ಸುತ್ತಮುತ್ತ ರಸ್ತೆಗಳಲ್ಲಿ ಅಪಘಾತ ಉಂಟು ಮಾಡುವ ದೊಡ್ಡ ದೊಡ್ಡ ಗುಂಡಿಗಳೇ ನಿರ್ಮಾಣವಾಗಿದ್ದು, ನಗರಸಭೆ ಅಧಿಕಾರಿಗಳು ಅಲ್ಲಲ್ಲಿ ಕಲ್ಲು ಮಣ್ಣು ಸುರಿದು ಕೆಲ ರಸ್ತೆಗಳು ಬಂದ್ ಆಗಿವೆ. ಅಲ್ಲದೆ ಪ್ರತಿವರ್ಷ ಕೋಟಿ ಕೋಟಿ ಆದಾಯ ದೇವಾಲಯಕ್ಕೆ ಕಾಣಿಕೆ ರೂಪದಲ್ಲಿ ಬರುತ್ತಿದ್ದರೂ ಜಿಲ್ಲಾಡಳಿತ ಮಾತ್ರ ದೇವಾಲಯದ ಅಭಿವೃದ್ಧಿಗೆ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ನೂರಾರು ವರ್ಷಗಳಿಂದ ಅಪಾರ ಭಕ್ತರನ್ನು ದೇವಾಲಯ ಹೊಂದಿದ್ದರೂ ಇಲ್ಲಿಯವರೆಗೂ ಶಾಶ್ವತ ಶೌಚಾಲಯದ ವ್ಯವಸ್ಥೆ ಸಮರ್ಪಕವಾಗಿಲ್ಲ. ಕೇವಲ ಎರಡು ವಾರ ಮಾತ್ರ ಬಾಕಿ ಇರುವಾಗ ಶೌಚಾಲಯಕ್ಕೆ ಮಾರ್ಕ್ ಮಾಡುತ್ತಿದ್ದು, ಜಿಲ್ಲಾಡಳಿತದ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಹಲವಾರು ಪವಾಡಗಳನ್ನು ಹೊಂದಿರುವ ವರ್ಷಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇವಾಲಯಕ್ಕೆ ಕಳೆದ ಕೆಲವರ್ಷಗಳಿಂದ ಕೋಟ್ಯಂತರ ರೂಪಾಯಿ ಆದಾಯ ಬಂದಿದೆ. ಇದನ್ನು ದೇವಾಲಯ ಅಭಿವೃದ್ಧಿಗೆ ಬಳಸುವ ಅವಕಾಶ ಇದ್ದರೂ ಜಿಲ್ಲಾಡಳಿತ ಅಭಿವೃದ್ಧಿ ಮಾಡುತ್ತಿಲ್ಲ ಎಂದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ರಾಜ್ಯ ಮತ್ತು ಹೊರ ರಾಜ್ಯದ ಲಕ್ಷಾಂತರ ಭಕ್ತರನ್ನು ಹೊಂದಿರುವ ದೇವಿಯ ದರ್ಶನಕ್ಕೆ ಯಾವುದೇ ತೊಂದರೆಯಾಗದೆ ಕಾಮಗಾರಿ ಶೀಘ್ರವಾಗಿ ಮುಗಿಸಲಿ, ಹಾಸನಾಂಬೆ ಉತ್ಸವ ಅದ್ಧೂರಿಯಾಗಿ ಜರುಗಲಿ ಎಂಬುದು ಜನರ ಆಶಯವಾಗದೆ.

  • ಜುಲೈ 5ರ ಬಜೆಟ್‍ಗೆ ನಿರ್ಮಲಾ ಸೀತಾರಾಮನ್‍ರಿಂದ ಭಾರೀ ಸಿದ್ಧತೆ

    ಜುಲೈ 5ರ ಬಜೆಟ್‍ಗೆ ನಿರ್ಮಲಾ ಸೀತಾರಾಮನ್‍ರಿಂದ ಭಾರೀ ಸಿದ್ಧತೆ

    ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ 5ರ ಬಜೆಟ್‍ಗೆ ಭಾರೀ ಸಿದ್ಧತೆ ನಡೆಸುತ್ತಿದ್ದಾರೆ.

    ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ತಮ್ಮ ಮೊದಲ ಬಜೆಟ್‍ನ ಪೂರ್ವಭಾವಿ ಸಲಹಾ ಸಭೆಗೆ ಚಾಲನೆ ನೀಡಲಿದ್ದಾರೆ. ಈ ಬಾರಿಯ ಬಜೆಟ್‍ನಲ್ಲಿ ಮೂಲಭೂತ ಸೌಕರ್ಯ ವಲಯಕ್ಕೆ ನಿರ್ಮಲಾ ಅವರು ಹೆಚ್ಚಿನ ಆದ್ಯತೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

    ಮುಂದಿನ 5 ವರ್ಷಗಳಲ್ಲಿ ರೈಲು, ರಸ್ತೆ, ಡಿಜಿಟಲ್ ಸಂಪರ್ಕ ಮತ್ತು ಹೊಸ ವಿಮಾನ ನಿಲ್ದಾಣಗಳ ನಿರ್ಮಾಣಕ್ಕಾಗಿ ಬರೋಬ್ಬರಿ 100 ಲಕ್ಷ ಕೋಟಿ ವೆಚ್ಚ ಮಾಡುವ ಬಜೆಟ್ ಹೊಂದಿರಲಿದೆ ಎನ್ನಲಾಗಿದೆ.

    ಈ ಮೊತ್ತದಲ್ಲಿ ಸಾರಿಗೆ ವಿಭಾಗಕ್ಕೆ ಹೆಚ್ಚು ಹಣ ಮೀಸಲು ಇರಿಸುವ ಸಾಧ್ಯತೆ ಇದ್ದು, ನಂತರ ಗೃಹ ನಿರ್ಮಾಣ, ಕೃಷಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಸುಧಾರಣೆ ಆಗಲಿದೆ. ಇದರಿಂದ ಆರ್ಥಿಕ ಪ್ರಗತಿ ಮತ್ತು ಉದ್ಯೋಗ ಸೃಷ್ಟಿ ಆಗಲಿದೆ ಎನ್ನುವುದು ನಿರ್ಮಲಾ ಮತ್ತವರ ತಂಡದ ಲೆಕ್ಕಾಚಾರವಾಗಲಿದೆ.

  • ಚಾಮುಂಡೇಶ್ವರಿ ದೇವಿಯ 57 ಅಡಿ ಎತ್ತರದ ಪಂಚಲೋಹದ ವಿಗ್ರಹ ಪ್ರತಿಷ್ಠಾಪಿಸಲು ಸಿದ್ಧತೆ

    ಚಾಮುಂಡೇಶ್ವರಿ ದೇವಿಯ 57 ಅಡಿ ಎತ್ತರದ ಪಂಚಲೋಹದ ವಿಗ್ರಹ ಪ್ರತಿಷ್ಠಾಪಿಸಲು ಸಿದ್ಧತೆ

    ರಾಮನಗರ: ರಾಜ್ಯದಲ್ಲಿಯೇ ಅತೀ ಎತ್ತರದ ನಾಡದೇವತೆ ಚಾಮುಂಡೇಶ್ವರಿ ದೇವಿಯ 57 ಅಡಿ ಎತ್ತರದ ಪಂಚಲೋಹದ ವಿಗ್ರಹವನ್ನು ರಾಮನಗರ ಜಿಲ್ಲೆಯ -ಚನ್ನಪಟ್ಟಣ ತಾಲೂಕಿನ ಗೌಡಗೆರೆ ಗ್ರಾಮದಲ್ಲಿ ಪ್ರತಿಷ್ಠಾಪಿಸಲು ಸಿದ್ಧತೆ ನಡೆಸಲಾಗ್ತಿದೆ.

    ಗೌಡಗೆರೆಯಲ್ಲಿನ ಐತಿಹಾಸಿಕ ಹಾಗೂ ವಿಖ್ಯಾತ ಚಾಮುಂಡೇಶ್ವರಿ ಹಾಗೂ ಬಸವಣ್ಣನ ದೇವಾಲಯದ ಆವರಣದಲ್ಲಿ ಪಂಚಲೋಹ ವಿಗ್ರಹ ಪ್ರತಿಷ್ಠಾಪನೆಗೆ ಕಾರ್ಯ ನಡೆಸಲಾಗ್ತಿದೆ. ದೇವಾಲಯದ ಬಸವಣ್ಣ ಈಗಾಗಲೇ ರಾಜ್ಯದಾದ್ಯಂತ ಅಲ್ಲದೇ ಹೊರರಾಜ್ಯಗಳಲ್ಲೂ ಸಹ ಪ್ರಸಿದ್ಧಿ ಪಡೆದುಕೊಂಡಿದೆ.

    ಪಂಚಲೋಹಗಳನ್ನು ಒಳಗೊಂಡ 57 ಅಡಿ ಎತ್ತರ ಚಾಮುಂಡೇಶ್ವರಿ ವಿಗ್ರಹ ಭೂಮಿಯ ಮೇಲ್ಭಾಗದಲ್ಲಿ ಹಾಗೂ ತಳಭಾಗದಲ್ಲಿ ಸುಮಾರು 20 ಅಡಿಯ ಪೀಠವನ್ನು ನಿರ್ಮಿಸಲಾಗ್ತಿದೆ. 35 ರಿಂದ 40 ಕಲಾವಿದರು ಈ ವಿಗ್ರಹ ನಿರ್ಮಾಣ ಕಾರ್ಯದಲ್ಲಿ ಪಾಲ್ಗೊಂಡಿದ್ದು ಈಗಾಗಲೇ ಶೇ. 30ರಷ್ಟು ಕಾರ್ಯ ನೆರವೇರಿದೆ.

    ಸುಮಾರು ನಾಲ್ಕು ಕೋಟಿ ವೆಚ್ಚದಲ್ಲಿ ದೇವಿಯ ವಿಗ್ರಹವನ್ನು ನಿರ್ಮಾಣ ಮಾಡಲಾಗ್ತಿದೆ. ದೇವಿಯ ವಿಗ್ರಹ ಕಾರ್ಯಕ್ಕೆ ಭಕ್ತಾದಿಗಳು ತಮ್ಮಲ್ಲಿನ ಹಳೆಯ ಪಂಚಲೋಹಗಳನ್ನು ದಾನವಾಗಿ ನೀಡಲು ದೇವಾಲಯದ ಧರ್ಮದರ್ಶಿಗಳು ಮನವಿ ಮಾಡಿದ್ದಾರೆ.

  • ದೊಡ್ಮನೆಯಲ್ಲಿ ಮದ್ವೆ ಸಂಭ್ರಮ – ಹೂವುಗಳಿಂದ ವಿವಾಹ ಮಂಟಪ ಸಜ್ಜು

    ದೊಡ್ಮನೆಯಲ್ಲಿ ಮದ್ವೆ ಸಂಭ್ರಮ – ಹೂವುಗಳಿಂದ ವಿವಾಹ ಮಂಟಪ ಸಜ್ಜು

    – ಆರತಕ್ಷತೆಯಲ್ಲಿ 60ಕ್ಕೂ ಹೆಚ್ಚು ತಿನಿಸು
    – ಗೋಲ್ಡ್ ವೈಟ್ ರೆಡ್ ಥೀಮ್‍ನಲ್ಲಿ ವೇದಿಕೆ ರೆಡಿ

    ಬೆಂಗಳೂರು: ದೊಡ್ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ನಟ ರಾಘವೇಂದ್ರ ರಾಜ್‍ಕುಮಾರ್ ಅವರ ಕಿರಿಯ ಪುತ್ರ ಯುವರಾಜ್ ಕುಮಾರ್ ಮದುವೆಗೆ ಬೆಂಗಳೂರು ಅರಮನೆಯಲ್ಲಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ.

    ಕಳೆದ ಒಂದು ವಾರದಿಂದ ಮದುವೆಯ ಶಾಸ್ತ್ರಗಳು ಶುರುವಾಗಿದ್ದು, ಇಂದು ಸಂಜೆ ಬೆಂಗಳೂರು ಅರಮನೆಯಲ್ಲಿ ವರ ಪೂಜೆ ನಡೆಯಲಿದೆ. ಯುವ ರಾಜ್‍ಕುಮಾರ್ ಮೈಸೂರು ಮೂಲದ ಶ್ರೀದೇವಿಯನ್ನು ಕೈ ಹಿಡಿಯಲಿದ್ದು, ಭಾನುವಾರ ಬೆಳಗ್ಗೆ ಮುಹೂರ್ತ ಸಮಾರಂಭಕ್ಕೆ ಬೆಂಗಳೂರು ಅರಮನೆಯಲ್ಲಿ ತಯಾರಿ ಭರ್ಜರಿಯಾಗಿದೆ.

    ಭಾನುವಾರ ಸಂಜೆ ಆರತಕ್ಷತೆ ನಡೆಯಲಿದ್ದು, ಆರತಕ್ಷತೆಯಲ್ಲಿ ಸ್ಯಾಂಡಲ್‍ವುಡ್, ಬಾಲಿವುಡ್ ಸೇರಿದಂತೆ ಟಾಲಿವುಡ್‍ನ ಸಾಕಷ್ಟು ಕಲಾವಿದರು ಭಾಗಿಯಾಗಲಿದ್ದಾರೆ. ಅದಷ್ಟೇ ಅಲ್ಲದೆ ರಾಜಕೀಯ ಗಣ್ಯರು ಕೂಡ ಮದುವೆಯಲ್ಲಿ ಭಾಗಿಯಾಗಿ ವಧು-ವರರನ್ನು ಆಶೀರ್ವದಿಸಲಿದ್ದಾರೆ.

    ಯುವರಾಜ್ ಕುಮಾರ್ ವಿವಾಹಕ್ಕಾಗಿ ಗೋಲ್ಡ್ ವೈಟ್ ರೆಡ್ ಥೀಮ್‍ನಲ್ಲಿ ವೇದಿಕೆ ಸಜ್ಜಾಗಿದ್ದು ಸಾಕಷ್ಟು ಹೂವುಗಳಿಂದ ವಿವಾಹದ ಮಂಟಪವನ್ನು ಸಜ್ಜುಗೊಳಿಸಲಾಗುತ್ತಿದೆ. ಅಭಿಮಾನಿಗಳಿಗೆ ಮತ್ತು ವಿವಿಐಪಿಗಳಿಗೆ ಒಂದೇ ರೀತಿಯ ಭೋಜನದ ವ್ಯವಸ್ಥೆಯನ್ನು ಮಾಡಲಾಗಿದೆ. ಬೆಳಗ್ಗೆ ಮುಹೂರ್ತದ ಸಂದರ್ಭಕ್ಕೆ 30ಕ್ಕೂ ಹೆಚ್ಚು ಖಾದ್ಯಗಳು ಹಾಗೂ ಆರತಕ್ಷತೆಯಲ್ಲಿ 60ಕ್ಕೂ ಹೆಚ್ಚು ತಿನಿಸುಗಳನ್ನು ಮದುವೆಗೆ ಬಂದವರು ಸವಿಯಬಹುದಾಗಿದೆ.

    ಈ ಹಿಂದೆ ಶಿವರಾಜ್ ಕುಮಾರ್ ಮಗಳ ಮದುವೆ ಹಾಗೂ ರಾಕಿಂಗ್ ಸ್ಟಾರ್ ಯಶ್ ಮದುವೆ ತಯಾರಿಯನ್ನು ಮಾಡಿ ಕೊಟ್ಟಂತಹ ಧ್ರುವ ಡೆಕೋರೇಟ್ ಅವರೇ ಈ ಮದುವೆಯ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ. ರಾಜ್‍ಕುಮಾರ್ ಕಾಲದಿಂದಲೂ ದೊಡ್ಮನೆಯ ಕಾರ್ಯಕ್ರಮಗಳಲ್ಲಿ ಊಟದ ವ್ಯವಸ್ಥೆ ಮಾಡುತ್ತಿದ್ದ ಚನ್ನಕೇಶವ ಅವರೇ ಯುವ ರಾಜ್‍ಕುಮಾರ್ ಮದುವೆಯ ಊಟದ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ.

  • ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅಂತ್ಯಕ್ರಿಯೆಗೆ ಕುಂದಾಪುರದಲ್ಲಿ ಸಿದ್ಧತೆ

    ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅಂತ್ಯಕ್ರಿಯೆಗೆ ಕುಂದಾಪುರದಲ್ಲಿ ಸಿದ್ಧತೆ

    ಉಡುಪಿ: ಖಡಕ್ ಐಪಿಎಸ್ ಅಧಿಕಾರಿ- ಕರ್ನಾಟಕದ ಸಿಂಗಂ ಖ್ಯಾತಿಯ ಮಧುಕರ್ ಶೆಟ್ಟಿ ಶುಕ್ರವಾರದಂದು ಇಹಲೋಕ ತ್ಯಜಿಸಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ಕರ್ನಾಟಕದ ಜನರ ಹೃದಯ ಗೆದ್ದ ದಕ್ಷ ಪೊಲೀಸ್ ಅಧಿಕಾರಿಯ ಅಂತ್ಯಸಂಸ್ಕಾರಕ್ಕೆ ಕುಟುಂಬಸ್ಥರು ಕಣ್ಣೀರಿಡುತ್ತಾ ಸಿದ್ಧತೆ ಮಾಡುತ್ತಿದ್ದಾರೆ.

    ಅಧಿಕಾರದಲ್ಲಿದ್ದುಕೊಂಡು ಉನ್ನತ ಸ್ಥಾನದಲ್ಲಿದ್ದು ಜನ ಮೆಚ್ಚುವ ಕೆಲಸ ಮಾಡೋದು ಕಷ್ಟ. ಆದ್ರೆ ರಿಯಲ್ ಹೀರೋ ಕರ್ನಾಟಕ ಸಿಂಗಂ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ತನ್ನ ಪೊಲೀಸ್ ಸೇವೆಯಲ್ಲಿ ನಿಷ್ಟುರ ಮತ್ತು ಅಷ್ಟೇ ಜನಪರ. ಮುಖ್ಯಮಂತ್ರಿಯಿಂದ ಹಿಡಿದು ಸಾಮಾನ್ಯ ಭ್ರಷ್ಟ ವ್ಯಕ್ತಿಗೂ ಕನಸಲ್ಲೂ ಕಾಡಿದ ಮಧುಕರ್ ಶೆಟ್ಟಿ ಅವರು ಎಚ್ 1 ಎನ್ 1ಗೆ ಬಲಿಯಾಗಿದ್ದಾರೆ. ಭಾನುವಾರದಂದು ಹಿರಿಯ ಪೊಲೀಸ್ ಅಧಿಕಾರಿಯ ಅಂತ್ಯ ಸಂಸ್ಕಾರ ಉಡುಪಿ ಜಿಲ್ಲೆಯ ಕುಂದಾಪುರದ ಯಡಾಡಿಯಲ್ಲಿ ನಡೆಯಲಿದೆ.

    ಮಧುಕರ್ ಶೆಟ್ಟಿ ಅವರು ಹಿರಿಯ ಪತ್ರಕರ್ತ ದಿವಂಗತ ವಡ್ಡರ್ಸೆ ರಘುರಾಮ ಶೆಟ್ಟಿಯವರ ಸುಪುತ್ರ. ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನವಾಗಿದ್ದ ಶೆಟ್ಟಿ ಕೆಲಸದ ವಿಚಾರಕ್ಕೆ ಬಂದ್ರೆ ತಂದೆಯಷ್ಟೆ ನಿಷ್ಟುರವಾದಿ. ಮಧುಕರ್ ಶೆಟ್ಟಿ ಅವರು 1999ರ ಬ್ಯಾಚ್‍ನ ಐಪಿಎಸ್ ಅಧಿಕಾರಿ. ಹುಟ್ಟಿದ್ದು ಬೆಂಗಳೂರು, ಬೆಳೆದದ್ದು ಮಂಗಳೂರು, ಪಿಜಿ(ಸ್ನಾತಕೋತ್ತರ ಪದವಿ) ಮಾಡಿದ್ದು ದೆಹಲಿಯಲ್ಲಿ. ಆದ್ರೆ ಹುಟ್ಟೂರಿನ ಜೊತೆ ನಿರಂತರ ಸಂಪರ್ಕ ಇಟ್ಟುಕೊಂಡಿದ್ದ ಯಡಾಡಿಯ ರೈ ಫಾರ್ಮ್‍ನಲ್ಲಿ ಈಗ ನೀರವ ಮೌನ ಬಿಟ್ಟು ಮತ್ತೆ ಕೇಳಿಸಿದ್ದು ಜೆಸಿಬಿಯ ಘರ್ಜನೆ ಮಾತ್ರ. ಮಧುಕರ್ ಶೆಟ್ಟಿಯವರ ಅಂತ್ಯಸಂಸ್ಕಾರಕ್ಕೆ ಮನೆಯ ಅಡಿಕೆ ತೋಟದಲ್ಲಿ ಸಿದ್ಧತೆ ನಡೆಯುತ್ತಿದೆ. ತಂದೆ-ತಾಯಿಗಳ ಸಮಾಧಿ ಪಕ್ಕದಲ್ಲೇ ಮಧುಕರ್ ಶೆಟ್ಟಿಯವರ ಚಿತೆಯನ್ನು ಸಿದ್ಧ ಮಾಡಲಾಗುತ್ತದೆ. ಕುಟುಂಬಸ್ಥರು- ವಡ್ಡರ್ಸೆ ಅಭಿಮಾನಿಗಳು ಹಾಗೂ ಗ್ರಾಮಸ್ಥರು ಸದ್ಯ ಈ ಎಲ್ಲಾ ವಿಧಿವಿಧಾನದಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ಖಾಕಿಯೊಳಗಿನ ಮಿನುಗುತಾರೆ ನೆನಪು ಮಾತ್ರ- ಮಧುಕರ್ ದಕ್ಷತೆ ಹಾದಿಯ ಬಗ್ಗೆ ಓದಿ

    ಕುಟುಂಬಸ್ಥರಾದ ಸಂದೇಶ್ ಮತ್ತು ಮೋಹನದಾಸ್ ಮಾತನಾಡಿ, ವಡ್ಡರ್ಸೆ ಕುಟುಂಬದ ಕುಡಿಯನ್ನು ಕಳೆದುಕೊಂಡ ದುಃಖದಲ್ಲಿದ್ದೇವೆ. ಕಳೆದ ನವರಾತ್ರಿಗೆ ಬಂದಿದ್ದ ಶೆಟ್ಟರನ್ನು ಕಳೆದುಕೊಂಡಿದ್ದೇವೆ ಎಂದರೆ ನಂಬಲಾಗುತ್ತಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ.

    ಸಮಾಜದಲ್ಲಿ ನೊಂದವರು, ದಲಿತರ ಬಗ್ಗೆ ಅತೀವ ಕಾಳಜಿಯಿದ್ದ ಮಧುಕರ್ ಶೆಟ್ಟಿಯವರ ಪಾರ್ಥಿವ ಶರೀರ ಮಂಗಳೂರು ಮೂಲಕ ರಾತ್ರಿ 12 ಗಂಟೆ ಸುಮಾರಿಗೆ ಹುಟ್ಟೂರು ತಲುಪುತ್ತದೆ. ಬೆಳಗ್ಗೆ 7 ಗಂಟೆಯಿಂದ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ. ದಕ್ಷ ಅಧಿಕಾರಿಗೆ ಅಂತಿಮ ನಮನ ಸಲ್ಲಿಸಲು ಡಿಜಿಪಿ ನೀಲಮಣಿ ರಾಜು, ಹಿರಿಯ ಪೊಲೀಸ್ ಅಧಿಕಾರಿಗಳು, ಜನಪ್ರತಿನಿಧಿಗಳು ಆಗಮಿಸಲಿದ್ದಾರೆ. ಬಳಿಕ ಭಾನುವಾರ ಬೆಳಗ್ಗೆ 10 ಗಂಟೆಗೆ ಮಧುಕರ ಶೆಟ್ಟಿ ಅವರ ಮೃತದೇಹ ಪಂಚಭೂತಗಳಲ್ಲಿ ಲೀನವಾಗಿ ಅವರ ನೆನಪು ಅಜರಾಮರವಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲೀಟರ್ ಮೂತ್ರಕ್ಕೆ 1 ರೂ. ಕೊಡ್ತಾರಂತೆ- ಮೂತ್ರ ಬ್ಯಾಂಕ್ ಸ್ಥಾಪನೆಗೆ ಮುಂದಾದ ಕೇಂದ್ರ ಸರ್ಕಾರ

    ಲೀಟರ್ ಮೂತ್ರಕ್ಕೆ 1 ರೂ. ಕೊಡ್ತಾರಂತೆ- ಮೂತ್ರ ಬ್ಯಾಂಕ್ ಸ್ಥಾಪನೆಗೆ ಮುಂದಾದ ಕೇಂದ್ರ ಸರ್ಕಾರ

    ನವದೆಹಲಿ: ಯೂರಿಯಾ ಉತ್ಪಾದಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರತಿಯೊಂದು ತಾಲೂಕು ಕೇಂದ್ರದಲ್ಲಿ ಮೂತ್ರ ಬ್ಯಾಂಕ್ ಸ್ಥಾಪಿಸಲು ಮುಂದಾಗಿದ್ದು, ಆ ಮೂಲಕ ಯೂರಿಯಾ ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಹೊರಟಿದ್ದಾರೆ.

    ಮನುಷ್ಯನ ಮೂತ್ರದಲ್ಲಿ ಸಾಕಷ್ಟು ನೈಟ್ರೋಜನ್ ಇದೆ. ಆದರೆ ಇದನ್ನು ವ್ಯರ್ಥ ಮಾಡುತ್ತಿದ್ದೇವೆ. ಕಸದಿಂದ ರಸ ತೆಗೆಯೋದು ನನ್ನ ಪ್ಯಾಶನ್. ಇದನ್ನ ಪ್ರಯತ್ನಿಸೋದ್ರಲ್ಲಿ ಯಾವುದೇ ಹಾನಿ ಇಲ್ಲ. ಈಗಾಗಲೇ ಫಾಸ್ಫರಸ್ ಮತ್ತ ಪೊಟಾಷಿಯಂಗೆ ಬದಲಿ ಸಾವಯವ ಇದೆ. ನೈಟ್ರೋಜನ್ ಕೂಡ ಸೇರಿಸಿದರೆ ಇನ್ನೂ ಹೆಚ್ಚು ಸಹಾಯಕವಾಗುತ್ತದೆ ಎಂದು ಗಡ್ಕರಿ ಪತ್ರಿಕೆಯೊಂದಕ್ಕೆ ಹೇಳಿದ್ದಾರೆ .

    ಈ ಯೋಜನೆ ಇನ್ನೂ ಪ್ರಾಥಮಿಕ ಹಂತದ ಪ್ರಸ್ತಾಪವಾಗಿದೆ. ಇದನ್ನ ವಾಸ್ತಚಿಕವಾಗಿ ಜಾರಿಗೆ ತರಲು ಸ್ವೀಡನ್ ವಿಜ್ಞಾನಿಗಳೊಂದಿಗೆ ಮಾತುಕತೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

    ಈ ಯೋಜನೆಯನ್ನು ಪ್ರಯೋಗಿಕವಾಗಿ ಗ್ರಾಮೀಣ ಭಾಗದಲ್ಲಿ ಆರಂಭ ಮಾಡಲಾಗುತ್ತದೆ. ಒಂದು ಬಾರಿಗೆ ಪ್ಲಾಸ್ಟಿಕ್ ಕ್ಯಾನ್ ನಲ್ಲಿ ಸಂಗ್ರಹಿಸಿದ 10 ಲೀಟರ್ ಮೂತ್ರ ತರಬೇಕು. ಪ್ರತಿ ಲೀಟರ್ ಮೂತ್ರಕ್ಕೆ 1 ರೂ. ನೀಡಲಾಗುತ್ತೆ. ಸರ್ಕಾರದಿಂದಲೇ ಪ್ಲಾಸ್ಟಿಕ್ ಕ್ಯಾನ್ ನೀಡುವ ವ್ಯವಸ್ಥೆ ಮಾಡಲಾಗುತ್ತದೆ. ನಂತರ ಮೂತ್ರವನ್ನ ಶುದ್ಧೀಕರಣ ಮಾಡಿ ಸಾವಯವ ಗೊಬ್ಬರ ತಯಾರು ಮಾಡಲಾಗುತ್ತದೆ ಎಂದು ವಿವರಿಸಿದರು.

    ಈ ಯೋಜನೆಗೆ ತಗಲುವ ಆರ್ಥಿಕ ವೆಚ್ಚದ ಕುರಿತು ಮತ್ತು ಯೋಜನೆಯ ಕಾರ್ಯಸಾಧ್ಯತೆಯ ಬಗ್ಗೆ ಖಚಿತವಾಗಿಲ್ಲ. ಈ ಕುರಿತು ನಾಗ್ಪುರದ ಸಮೀಪದ ಧಪೇವಾಡಾ ಗ್ರಾಮದ ಪ್ರಯೋಗಲಯದಲ್ಲಿ ಆರಂಭಿಕ ಪರೀಕ್ಷೆಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.