Tag: Presidency

  • 1ಗಂಟೆ 25 ನಿಮಿಷ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಕಮಲಾ ಹ್ಯಾರಿಸ್

    1ಗಂಟೆ 25 ನಿಮಿಷ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಕಮಲಾ ಹ್ಯಾರಿಸ್

    ವಾಷಿಂಗ್ಟನ್: ಜೋ ಬೈಡನ್‍ಗೆ ಆರೋಗ್ಯ ಹಿನ್ನೆಲೆ ಉಪಾಧ್ಯೆಕ್ಷೆ ಕಮಲಾ ಹ್ಯಾರಿಸ್ ಅಲ್ಪಾವಧಿಗೆ ಅಮೆರಿಕಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಶುಕ್ರವಾರ ಶ್ವೇತಭವನ ತಿಳಿಸಿದೆ. ಒಂದು ಗಂಟೆ 25 ನಿಮಿಷಗಳ ಕಾಲ ಅಧ್ಯಕ್ಷಿಯ ಅಧಿಕಾರವನ್ನು ಕಮಲಾ ಹ್ಯಾರಿಸ್ ಹೊಂದಿದ್ದರು ಎಂದು ತಿಳಿಸಿದೆ.

    USA ಮೊದಲ ಮಹಿಳಾ ಅಧ್ಯಕ್ಷ: ಬೆಳಗ್ಗೆ 10.10ಕ್ಕೆ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಬಗ್ಗೆ ಅಧಿಕ ಪತ್ರವನ್ನ ಕಳುಹಿಸಲಾಗಿತ್ತು. ಅಧ್ಯಕ್ಷರು ಬೆಳಗ್ಗೆ 11.35ಕ್ಕೆ ತಮ್ಮ ಕರ್ತವ್ಯಗಳನ್ನು ಪುನರಾರಂಭಿಸಿದ್ದಾರೆ ಎಂದು ವೈಟ್ ಹೌಸ್ ತಿಳಿಸಿವೆ. ಇದನ್ನೂ ಓದಿ: ಹೆಸರುವಾಸಿಯಾಗಿದ್ದ ಕೇರಳದ ಟೀ ಮಾರಾಟಗಾರ ನಿಧನ

    ಅಮೆರಿಕದ ಇತಿಹಾಸದಲ್ಲಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಅತ್ಯಂತ ಹಿರಿಯ ವ್ಯಕ್ತಿ ಬೈಡನ್ ಅವರು ತಮ್ಮ 79ನೇ ಹುಟ್ಟುಹಬ್ಬದ ಮುನ್ನಾದಿನ ಶುಕ್ರವಾರದ ಆರಂಭದಲ್ಲಿ ವಾಷಿಂಗ್ಟನ್‌ನ ಹೊರಗಿನ ವಾಲ್ಟರ್ ರೀಡ್ ವೈದ್ಯಕೀಯ ಕೇಂದ್ರಕ್ಕೆ ತೆರಳಿದರು. ವಾರ್ಷಿಕ ತಪಾಸಣೆ (routine annual physical) ಕಾರಣ ಬೈಡನ್ ಅವರ ಆರೋಗ್ಯ ತಪಾಸಣೆ ನಡೆಸಬೇಕಿತ್ತು ಎಂದು ಶ್ವೇತಭವನ ತಿಳಿಸಿದೆ.ಇದನ್ನೂ ಓದಿ: ಚುನಾವಣೆಯಲ್ಲಿ ಗೆಲ್ಲುವವರೆಗೂ ರಾಜ್ಯ ವಿಧಾನಸಭೆಗೆ ಕಾಲಿಡಲ್ಲ: ಎನ್.ಚಂದ್ರಬಾಬು ನಾಯ್ಡು ಪ್ರತಿಜ್ಞೆ

    ಕೊಲೊನೋಸ್ಕೋಪಿ ಪರೀಕ್ಷೆ ಸಮಯದಲ್ಲಿ ಬೈಡನ್‌ ಅವರಿಗೆ ಅರಿವಳಿಕೆ ಔಷಧಿಯನ್ನು ನೀಡಲಾಗಿತ್ತು. ಹೀಗಾಗಿ ಉಪಾಧ್ಯಕ್ಷರು ಅಧಿಕಾರವನ್ನು ವಹಿಸಿಕೊಳ್ಳುತ್ತಾರೆ. ಬೈಡನ್ ಅವರು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಗೆ ಅಲ್ಪಾವಧಿಗೆ ಅಧಿಕಾರ ಹಸ್ತಾಂತರಿಸಿ ಆರೋಗ್ಯ ತಪಾಸಣೆಗೆ ತೆರಳಿದರು. ಈ ವೇಳೆ ಉಪಾಧ್ಯಕ್ಷೆ ವೆಸ್ಟ್ ವಿಂಗ್‌ನಲ್ಲಿರುವ ಅವರ ಕಚೇರಿಯಲ್ಲೇ ಕಾರ್ಯನಿರ್ವಹಿಸಿದರು.

    ಹಂಗಾಮಿ ಅಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಕರ್ತವ್ಯ ನಿಭಾಯಿಸಿದ್ದಾರೆ. ಈ ಮೂಲಕ ಅಮೆರಿಕಾ ಅಧ್ಯಕ್ಷರಾದ ಮೊದಲ ಮಹಿಳೆ ಎನ್ನುವ ಹೆಗ್ಗಳಿಕೆಗೆ ಕಮಲಾ ಹ್ಯಾರಿಸ್ ಪಾತ್ರರಾಗಿದ್ದಾರೆ. ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಕೊಲೊನೋಸ್ಕೋಪಿಗಾಗಿ ಅರಿವಳಿಕೆಗೆ ಒಳಗಾಗಿದ್ದರು. ಈ ವೇಲೆ ಅಧ್ಯಕ್ಷೀಯ ಅಧಿಕಾರವನ್ನು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‍ಗೆ ವರ್ಗಾಯಿಸಲಾಯಿತ್ತು. ವಾಷಿಂಗ್ಟನ್ ಡಿಸಿಯಲ್ಲಿರುವ ವಾಲ್ಟರ್ ರೀಡ್ ರಾಷ್ಟ್ರೀಯ ಮಿಲಿಟಿರಿ ಆಸ್ಪತ್ರೆಯಲ್ಲಿ ಬೈಡನ್ ಚಿಕಿತ್ಸೆ ಪಡೆದುಕೊಂಡಿದ್ದಾರೆ.

  • ಬಿಜೆಪಿ ಅಭ್ಯರ್ಥಿ ಎಸ್‍ಟಿ ಅಲ್ಲ, ದಾಖಲೆಯನ್ನೇ ತಿದ್ದುಪಡಿ ಮಾಡಿದ್ದಾರೆ: ರೇವಣ್ಣ

    ಬಿಜೆಪಿ ಅಭ್ಯರ್ಥಿ ಎಸ್‍ಟಿ ಅಲ್ಲ, ದಾಖಲೆಯನ್ನೇ ತಿದ್ದುಪಡಿ ಮಾಡಿದ್ದಾರೆ: ರೇವಣ್ಣ

    – ಆರೋಪಕ್ಕೆ ತಿರುಗೇಟು ನೀಡಿದ ನಗರಸಭಾ ಅಧ್ಯಕ್ಷ ಆಕಾಂಕ್ಷಿ

    ಹಾಸನ: ಹಾಸನ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಎಸ್‍ಟಿ ಅಭ್ಯರ್ಥಿ ಮೀಸಲಾಗಿದ್ದು, ಬಿಜೆಪಿಯಲ್ಲಿ ಮಾತ್ರ ಎಸ್‍ಟಿ ಸದಸ್ಯ ಆಯ್ಕೆಯಾಗಿದ್ದಾರೆ. ಆದರೆ ಆತನು ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿದ್ದಾರೆ ಎಂದು ಮಾಜಿ ಸಚಿವ ರೇವಣ್ಣ ಗಂಭೀರ ಆರೋಪ ಮಾಡಿದ್ದಾರೆ.

    ಹಾಸನದಲ್ಲಿ ಮಾತನಾಡಿದ ಅವರು ಅಧ್ಯಕ್ಷರ ಚುನಾವಣೆಯು ನಾಳೆ ನಡೆಯಲಿದೆ. ಆದರೆ ಬಿಜೆಪಿ ಸದಸ್ಯ ಮೋಹನ್ ಮಾತ್ರ ಎಸ್‍ಟಿ ಪಂಗಡದವರಾಗಿದ್ದು, ಬಿಜೆಪಿಯವರು ಅಭ್ಯರ್ಥಿಯ ದಾಖಲೆಯನ್ನೇ ತಿದ್ದುಪಡಿ ಮಾಡಿದ್ದಾರೆ. ಈ ಸರ್ಕಾರವು ಯಾವುದನ್ನು ಬೇಕಾದರೂ ಬದಲಾವಣೆ ಮಾಡುತ್ತದೆ. ಈಗಾಗಲೇ ಈ ಪ್ರಕರಣ ತನಿಖೆಯಲ್ಲಿದ್ದು, ಈ ಕೇಸ್ ಇನ್ನೂ ಪೆಂಡಿಂಗ್ ಇದೆ. ಹೀಗಾಗಿ ಈ ಸ್ಥಾನ ಖಾಲಿ ಉಳಿಸಿಕೊಂಡು ಉಳಿದ ಸ್ಥಾನಕ್ಕೆ ಚುನಾವಣೆ ಮಾಡಬೇಕೆಂದು ಒತ್ತಾಯಿಸಿದರು.

    ಈ ಬಗ್ಗೆ ಉಪವಿಭಾಗಾಧಿಕಾರಿಗಳಿಗೆ ದೂರು ಬರೆದರೂ ಇದುವರೆಗೂ ಯಾವ ಕ್ರಮ ಜರುಗಿಸಿರುವುದಿಲ್ಲ. ಬಿಜೆಪಿ ಅಭ್ಯರ್ಥಿ ಮೋಹನ್ ಸನ್ ಆಫ್ ರಘುಪತಿ ರಾವ್ ಮರಾಠ ಇದ್ದುದನ್ನು ಗೋಂಡ ಎಂದು ಬದಲಾಯಿಸಲಾಗಿದೆ. ಈ ಬಗ್ಗೆ ಇಷ್ಟೊತ್ತಿಗೆ ಕೇಸು ದಾಖಲಿಸಬೇಕಾಗಿತ್ತು. ಜಿಲ್ಲಾಧಿಕಾರಿಗಳಿಗೆ ದೂರು ಕೊಟ್ಟರೂ ಏನು ಮಾಡುತ್ತಿದ್ದಾರೆ? ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಹಾಗೂ ಎಸಿಗೆ ಪತ್ರ ಬರೆಯಲಾಗಿದ್ದರೂ ಯಾವ ಪ್ರಯೋಜವಾಗಿರುವುದಿಲ್ಲ. ಕಳೆದ 6 ತಿಂಗಳ ಹಿಂದೆಯೇ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಬೇಕಾಗಿತ್ತು. ಆದರೇ ಇಷ್ಟು ತಡವಾಗಿದೆ. ರಾಜ್ಯದಲ್ಲಿರುವ ಚುನಾವಣಾ ಆಯೋಗ ಕೂಡ ರಬ್ಬರ್ ಸ್ಟಾಂಪ್ ಇದ್ದಂತೆ ಎಂದು ರೇವಣ್ಣ ಕಿಡಿಕಾರಿದರು.

    ರೇವಣ್ಣ ಆರೋಪಕ್ಕೆ ತಿರುಗೇಟು ನೀಡಿರುವ ನಗರಸಭಾ ಅಧ್ಯಕ್ಷ ಆಕಾಂಕ್ಷಿ ಮೋಹನ್, ಚುನಾವಣೆ ನಡೆದು 25 ತಿಂಗಳ ನಂತರ ಎಸ್‍ಟಿ ಅಲ್ಲ ಅಂತಿದ್ದಾರೆ. ಇಷ್ಟು ದಿನ ಏನು ಮಾಡುತ್ತಿದ್ದರು. ನಾನು 30 ವರ್ಷದಿಂದ ಜೆಡಿಎಸ್‍ನಲ್ಲಿದ್ದೆ. ಎಸ್‍ಟಿ ಸಮುದಾಯದಿಂದ ನನಗೆ ಟಿಕೆಟ್ ಕೊಡಲು ಜೆಡಿಎಸ್‍ನವರು ಮುಂದೆ ಬಂದಿದ್ದರು. ಆದರೆ ನಾನು ಜೆಡಿಎಸ್ ಬಿಟ್ಟು ಬಿಜೆಪಿಯಿಂದ ಸ್ಪರ್ಧಿಸಿದ್ದರಿಂದ ಈ ರೀತಿ ಆರೋಪ ಮಾಡುತ್ತಿದ್ದಾರೆ. ಈಗ ಅಧ್ಯಕ್ಷ ಸ್ಥಾನ ಜೆಡಿಎಸ್‍ಗೆ ಸಿಗುತ್ತಿಲ್ಲ ಎಂದು ಹತಾಶರಾಗಿ ಈ ರೀತಿ ಕ್ರಿಯೇಟ್ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

  • ಬಹುಮತ ಇಲ್ಲದಿದ್ದರೂ ಬಿಜೆಪಿಗೆ ಸಿಕ್ತು ಹಾಸನ, ಅರಸೀಕೆರೆ ನಗರಸಭೆ ಅಧ್ಯಕ್ಷ ಪಟ್ಟ

    ಬಹುಮತ ಇಲ್ಲದಿದ್ದರೂ ಬಿಜೆಪಿಗೆ ಸಿಕ್ತು ಹಾಸನ, ಅರಸೀಕೆರೆ ನಗರಸಭೆ ಅಧ್ಯಕ್ಷ ಪಟ್ಟ

    ಹಾಸನ: ಹಾಸನ ಜಿಲ್ಲೆಯಲ್ಲಿ ಜೆಡಿಎಸ್‍ಗೆ ಮೀಸಲಾತಿ ಮೂಲಕ ಟಾಂಗ್ ನೀಡಿರುವ ಬಿಜೆಪಿ ಸರ್ಕಾರ, ಹಾಸನ ಮತ್ತು ಅರಸೀಕೆರೆ ಎರಡೂ ನಗರಸಭೆಗೆ ಎಸ್.ಟಿ ಅಭ್ಯರ್ಥಿಗೆ ಅಧ್ಯಕ್ಷ ಸ್ಥಾನ ಮೀಸಲಾತಿ ನೀಡಿ ಪಟ್ಟಿ ಪ್ರಕಟಿಸಿದೆ.

    ಈ ಕಾರಣದಿಂದ ಹಾಸನ ಮತ್ತು ಅರಸೀಕೆರೆ ಎರಡೂ ಕಡೆ ಬಹಮತವಿದ್ದರೂ ಜೆಡಿಎಸ್ ಸದಸ್ಯರು ಅಧ್ಯಕ್ಷ ಸ್ಥಾನ ವಂಚಿತರಾಗಿದ್ದಾರೆ. ಹಾಸನ ಮತ್ತು ಅರಸೀಕೆರೆ ಎರಡು ನಗರಸಭೆಯಲ್ಲಿ ಬಿಜೆಪಿಯಿಂದ ಮಾತ್ರ ಎಸ್.ಟಿ ಸದಸ್ಯರು ಆಯ್ಕೆಯಾಗಿರುವುದರಿಂದ, ನಗರಸಭೆಗಳ ಅಧ್ಯಕ್ಷಗಾದಿ ನಿರಾಯಾಸವಾಗಿ ಬಿಜೆಪಿ ಸದಸ್ಯರ ಪಾಲಾಗಲಿದೆ.

    ಹಾಸನ ನಗರಸಭೆ ಒಟ್ಟು 35 ಸದಸ್ಯರ ಸಂಖ್ಯಾ ಬಲ ಹೊಂದಿದ್ದು ಜೆಡಿಎಸ್‍ನಿಂದ 17, ಕಾಂಗ್ರೆಸ್ಸಿನಿಂದ 02, ಬಿಜೆಪಿಯಿಂದ 13, ಹಾಗೂ 3 ಜನ ಸ್ವತಂತ್ರ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ಆಯ್ಕೆಯಾಗಿರುವ 34ನೇ ವಾರ್ಡ್ ಮೋಹನ್ ಕುಮಾರ್ ಮಾತ್ರ ಎಸ್‍ಟಿ ಪಂಗಡದಿಂದ ಆಯ್ಕೆಯಾಗಿದ್ದಾರೆ. ಹೀಗಾಗಿ ಹಾಸನ ನಗರಸಭೆಯಲ್ಲಿ ಜೆಡಿಎಸ್ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಮೀಸಲಾತಿ ಕಾರಣದಿಂದ ಅಧ್ಯಕ್ಷ ಸ್ಥಾನ ಬಿಜೆಪಿ ಪಾಲಾದಂತಾಗಿದೆ.

    ಅರಸೀಕೆರೆ ನಗರಸಭೆಯಲ್ಲಿ ಒಟ್ಟು 31 ಸದಸ್ಯರಿದ್ದು, ಜೆಡಿಎಸ್ 21, ಕಾಂಗ್ರೆಸ್ 01, ಬಿಜೆಪಿ 05, ಮೂವರು ಸ್ವತಂತ್ರ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಆದರೆ 22ನೇ ವಾರ್ಡ್ ಬಿಜೆಪಿ ಸದಸ್ಯ ಗಿರೀಶ್ ಮಾತ್ರ ಎಸ್‍ಟಿ ಪಂಗಡಕ್ಕೆ ಸೇರಿದ್ದು, ಮೀಸಲಾತಿ ಕಾರಣದಿಂದ ಅರಸೀಕೆರೆಯಲ್ಲಿ ಕೇವಲ ಐವರು ಸದಸ್ಯರನ್ನು ಹೊಂದಿರೋ ಬಿಜೆಪಿಗೆ ಅಧ್ಯಕ್ಷ ಸ್ಥಾನ ಒಲಿದು ಬಂದಂತಾಗಿದೆ. ಇದರಿಂದ ಹಾಸನ ಜೆಡಿಎಸ್ ವಲಯದಲ್ಲಿ ಆಕ್ರೋಶ ಹೆಚ್ಚಾಗಿದೆ.

    ಹಾಸನ ಶಾಸಕ ಪ್ರೀತಂಗೌಡ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತ ಸಂತೋಷ್ ಕೈವಾಡದಿಂದಾಗಿ ಈ ರೀತಿಯ ಮೀಸಲಾತಿ ಪ್ರಕಟವಾಗಿದೆ ಎಂದು ಜೆಡಿಎಸ್ ನಾಯಕರು ಪರೋಕ್ಷವಾಗಿ ಅಸಮಾಧಾನ ಹೊರಹಾಕುತ್ತಿದ್ದಾರೆ.

  • ಅಧ್ಯಕ್ಷಗಾದಿಗಾಗಿ ಪುರಸಭೆ ಸದಸ್ಯೆ ಕಿಡ್ನಾಪ್

    ಅಧ್ಯಕ್ಷಗಾದಿಗಾಗಿ ಪುರಸಭೆ ಸದಸ್ಯೆ ಕಿಡ್ನಾಪ್

    ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಆದರೆ ಅಧ್ಯಕ್ಷ ಸ್ಥಾನಕ್ಕಾಗಿ ಪುರಸಭೆ ಸದಸ್ಯೆಯನ್ನು ಅಪಹರಣ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

    ಮುಗಳಖೋಡ ಪುರಸಭಾ ಸದಸ್ಯೆ ಭಾಗವ್ವ ಶೇಗುಣಸಿ ಅಪಹರಣಕ್ಕೊಳಗಾದ ಮಹಿಳೆ. ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಶಿವಾನಂದ್ ಗೋಕಾಕ್ ಎಂಬವರು ನಮ್ಮ ತಾಯಿಯನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ಭಾಗವ್ವ ಅವರ ಪುತ್ರ ಅಪ್ಪಾಸಾಬ ಶೇಗುಣಸಿ ಆರೋಪಿಸಿದ್ದಾರೆ. ಭಾಗವ್ವನ ಕುಟುಂಬಸ್ಥರೆಲ್ಲ ಶಿವಾನಂದ್ ಅವರ ಮನೆಮುಂದೆ ಧರಣಿ ಕುಳಿತಿದ್ದಾರೆ.

    ಮುಗಳಖೋಡ ಪುರಸಭಾ ಸದಸ್ಯೆ ಭಾಗವ್ವ ಶೇಗುಣಸಿ ಮತ್ತು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಶಿವಾನಂದ್ ಗೋಕಾಕ್ ಇಬ್ಬರೂ ಬಿಜೆಪಿ ಪಕ್ಷ ಸದಸ್ಯರೇ ಆಗಿದ್ದಾರೆ. ಭಾಗವ್ವ ಶೇಗುಣಸಿ ಕಾಂಗ್ರೆಸ್ ಪರ ಮತ ಚಲಾಯಿಸುವ ಒಲವು ತೋರಿದ್ದಾರೆ ಎಂದು ಅನುಮಾನ ಪಟ್ಟು ಶಿವಾನಂದ್ ಗೋಕಾಕ್ ಕಿಡ್ನಾಪ್ ಮಾಡಿದ್ದಾರೆ ಎನ್ನಲಾಗಿದೆ. ಈಗ ಸದ್ಯ ಶಿವಾನಂದ್ ಗೋಕಾಕ್ ಅವರ ಮನೆ ಮುಂದೆ ನಮ್ಮ ತಾಯಿಯನ್ನ ಮರಳಿ ತನ್ನಿ ಎಂದು ಭಾಗವ್ವನ ಕುಟುಂಬಸ್ಥರ ಧರಣಿ ಮಾಡುತ್ತಿದ್ದಾರೆ.

  • ಮಂಡ್ಯದಲ್ಲಿ ಜೆಡಿಎಸ್‍ಗೆ ಲಾಟರಿ – ಬಿಜೆಪಿಗೆ ಭಾರೀ ಮುಖಭಂಗ

    ಮಂಡ್ಯದಲ್ಲಿ ಜೆಡಿಎಸ್‍ಗೆ ಲಾಟರಿ – ಬಿಜೆಪಿಗೆ ಭಾರೀ ಮುಖಭಂಗ

    ಮಂಡ್ಯ: ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ಸಂಘದ (ಮನ್ಮುಲ್) ಚುನಾವಣೆಯಲ್ಲಿ ಜೆಡಿಎಸ್‍ಗೆ ಲಾಟರಿ ಮೂಲಕ ಅಧಿಕಾರ ಸಿಕ್ಕಿದ್ದು, ಬಿಜೆಪಿಗೆ ಭಾರಿ ಮುಖಭಂಗವಾಗಿದೆ.

    ಜಿಲ್ಲೆಯಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಮನ್ಮುಲ್ ಅಧ್ಯಕ್ಷ ಸ್ಥಾನದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಲಾಟರಿ ಮೂಲಕ ಜೆಡಿಎಸ್‍ನ ರಾಮಚಂದ್ರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಈ ಬಾರಿ ಮನ್ಮುಲ್ ಗದ್ದುಗೆ ಹಿಡಿಯಬೇಕು ಎಂದುಕೊಂಡಿದ್ದ ಬಿಜೆಪಿ ಕನಸು ನುಚ್ಚುನೂರು ಆಗಿದೆ.

    ಈ ಚುನಾವಣೆಯಲ್ಲಿ ಚಲಾವಣೆಯಾಗಿದ್ದ 16 ಮತಗಳಗಳಲ್ಲಿ 8 ಮತ ಜೆಡಿಎಸ್‍ಗೆ ಉಳಿದ 8 ಬಿಜೆಪಿ ಅಭ್ಯರ್ಥಿ ಎಸ್‍ಪಿ ಸ್ವಾಮಿಗೆ ಬಿದ್ದಿತ್ತು. ಹೀಗಾಗಿ ಎರಡು ಪಕ್ಷಗಳ ಒಪ್ಪಿಗೆ ಮೇರೆಗೆ ಅಭ್ಯರ್ಥಿಗಳ ಹೆಸರಿನ ಮೇಲೆ ಲಾಟರಿ ಹಾಕಲಾಗಿದ್ದು, ಇದರಲ್ಲಿ ಜೆಡಿಎಸ್‍ನ ಅಭ್ಯರ್ಥಿಯಾಗಿದ್ದ ರಾಮಚಂದ್ರು ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.

    ಜೆಡಿಎಸ್‍ನಿಂದ 8 ನಿರ್ದೇಶಕರು, ಕಾಂಗ್ರೆಸ್‍ನಿಂದ 3 ನಿರ್ದೇಶಕರು ಮತ್ತು ಬಿಜೆಪಿಯಿಂದ 1 ನಿರ್ದೇಶಕರ ಜೊತೆಗೆ ಇಲ್ಲಿ ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಉಪ ನಿಬಂಧಕರು, ಕೆಎಂಎಫ್ ನಿರ್ದೇಶಕರು ಹಾಗೂ ಸರ್ಕಾರದಿಂದ ಆಯ್ಕೆಯಾದ ನಾಮ ನಿರ್ದೇಶಕರು ಸಹ ಮತ ಹಾಕಿದ್ದಾರೆ.

    ಮನ್ಮಲ್ ಅಧ್ಯಕ್ಷ ಗಾದಿ ಹಿಡಿಯಲು 9 ಸದಸ್ಯರ ಬಲ ಬೇಕಿತ್ತು. ಅದ್ದರಿಂದ ಬಿಜೆಪಿ ಸರ್ಕಾರಿ ಅಧಿಕಾರಿಗಳನ್ನು ತಮ್ಮ ಕಡೆ ಸೆಳೆದುಕೊಂಡು ಕಾಂಗ್ರೆಸ್ ನಿಂದ ಮೂವರು ಮತ್ತು ಜೆಡಿಎಸ್‍ನಿಂದ ಒಬ್ಬ ನಿರ್ದೇಶಕರನ್ನು ಹೈಜಾಕ್ ಮಾಡಿತ್ತು. ಆದರೆ ಇಂದು ನಡೆದ ಚುನಾವಣೆಯ ಸಮಯದಲ್ಲಿ ಬಿಜೆಪಿಯವರ ಕಡೆ ಒಬ್ಬ ಅಧಿಕಾರಿಂದ ಜೆಡಿಎಸ್ ಕ್ರಾಸ್ ವೋಟಿಂಗ್ ಹಾಕಿದ್ದಾರೆ ಎನ್ನಲಾಗುತ್ತಿದೆ.

  • ಡಿಸಿಎಂ, ಮಿನಿಸ್ಟರ್ ಬೇಡ ಕೆಎಂಎಫ್ ಅಧ್ಯಕ್ಷ ಸ್ಥಾನ ಸಾಕು: ಬಾಲಚಂದ್ರ ಜಾರಕಿಹೊಳಿ

    ಡಿಸಿಎಂ, ಮಿನಿಸ್ಟರ್ ಬೇಡ ಕೆಎಂಎಫ್ ಅಧ್ಯಕ್ಷ ಸ್ಥಾನ ಸಾಕು: ಬಾಲಚಂದ್ರ ಜಾರಕಿಹೊಳಿ

    ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಸ್ಥಾನ ನನಗೆ ಸಚಿವ ಸ್ಥಾನಕ್ಕಿಂತಲೂ ಹೆಚ್ಚು. ಡಿಸಿಎಂ, ಮಿನಿಸ್ಟರ್ ಹುದ್ದೆ ಬೇಡ, ಕೆಎಂಎಫ್ ಅಧ್ಯಕ್ಷ ಸ್ಥಾನ ಒಂದೇ ಸಾಕು ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

    ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿ ಆಗಿರಲಿಲ್ಲ. ಸಚಿವ ಸ್ಥಾನ ಸಿಗದಿರುವ ಕುರಿತು ಯಾವುದೇ ಅಸಮಾಧಾನ ಇರಲಿಲ್ಲ. ನನ್ನ ಆಲೋಚನೆಗಳೇ ಬೇರೆ ಇದ್ದವು, ಹೀಗಾಗಿ ನನಗೆ ಯಾವುದೇ ಸ್ಥಾನ ಬೇಡ ಎಂದು ಹೇಳಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಕೆಎಂಎಫ್ ಅಧ್ಯಕ್ಷನಾಗುವುದು ನನ್ನ ಆಸೆಯಾಗಿತ್ತು, ರಾಜಕೀಯದ ಭವಿಷ್ಯದ ದೃಷ್ಟಿಯಿಂದ ಕೆಎಂಎಫ್ ಅಧ್ಯಕ್ಷನಾಗಲು ನಿರ್ಧರಿಸಿದೆ. ಇದಕ್ಕಾಗಿ ಸಾಕಷ್ಟು ಪ್ರಯತ್ನವೂ ನಡೆದಿದ್ದು, ಇದರ ಭಾಗವಾಗಿ ನನ್ನ ಪರವಾಗಿ ಕೆಎಂಎಫ್‍ನ 6 ನಿರ್ದೇಶಕರು ನನ್ನ ಭೇಟಿ ಮಾಡಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ಎಂದು ಮನವಿ ಮಾಡಿದರು. ಹೀಗಾಗಿ ನಾನು ಯೋಜನೆ ರೂಪಿಸಿಕೊಂಡು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧರಿಸಿದೆ ಎಂದು ತಿಳಿಸಿದರು.

    ನಾನು ಸಹಕಾರ ವಲಯದಿಂದ ಬಂದಿರುವವನು. ರೈತರ ಸೇವೆ ಮಾಡಲು ಒಳ್ಳೆಯ ಅವಕಾಶ ಎಂದು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಒಲವು ತೋರಿದೆ. ಕೆಎಂಎಫ್ ದೊಡ್ಡ ಸಂಸ್ಥೆ, ಬೆಳಗಾವಿ ಡೈರಿಯಲ್ಲಿ ಕೆಲಸ ಮಾಡಿದ ಅನುಭವ ನನಗಿದೆ. ಹೀಗಾಗಿ ಕೆಎಂಎಫ್ ಅಧ್ಯಕ್ಷನಾಗಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

    ಕೆಎಂಎಫ್‍ನ ಒಟ್ಟು 12 ನಿರ್ದೇಶಕರ ಪೈಕಿ 6 ಜನ ನನಗೆ ಸಹಕಾರ ನೀಡುತ್ತಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿಗಳ ಬಳಿ ಚರ್ಚಿಸಿದೆ, ಅವರೂ ಸಹ ಒಪ್ಪಿಗೆ ಸೂಚಿಸಿದರು. ಕಾಂಗ್ರೆಸ್‍ನ ಭೀಮಾನಾಯ್ಕ್ ಸಹ ಆಕಾಂಕ್ಷಿಯಾಗಿದ್ದಾರೆ. ಅವರೂ ಪ್ರಯತ್ನ ಪಡುತ್ತಿದ್ದಾರೆ. ಜೆಡಿಎಸ್‍ನಿಂದ ಎಚ್.ಡಿ.ರೇವಣ್ಣ ಅವರೂ ಸಹ ಪ್ರಯತ್ನ ಪಡುತ್ತಿದ್ದಾರೆ. ನಾನು ಅವಿರೋಧವಾಗಿ ಆಯ್ಕೆಯಾಗಲು ತೀರ್ಮಾನಿಸಿದ್ದೇನೆ. ಈ ಸಂಬಂಧ ಎಚ್.ಡಿ.ರೇವಣ್ಣ, ಭೀಮಾನಾಯ್ಕ್ ಜೊತೆಗೂ ಚರ್ಚೆ ನಡೆಸುತ್ತೇನೆ. ಕೆಎಂಎಫ್ ನಿರ್ದೇಶಕರ ಜೊತೆಗೂ ಚರ್ಚೆ ಮಾಡ್ತೇನೆ ಎಂದು ತಿಳಿಸಿದರು.

    ಎಲ್ಲರೂ ಒಪ್ಪಿದಲ್ಲಿ ಅವಿರೋಧವಾಗಿ ಆಯ್ಕೆಯಾಗುತ್ತೇನೆ. ಯಾರೂ ಒಪ್ಪದಿದ್ದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಹಿಂದೆ ನಾಲ್ವರು ನಿರ್ದೇಶಕರನ್ನು ಎಚ್.ಡಿ.ರೇವಣ್ಣ ಹೈಜಾಕ್ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇದಕ್ಕೆ ಉತ್ತರಿಸಿದ ಬಾಲಚಂದ್ರ ಜಾರಕಿಹೊಳಿ, ರೇವಣ್ಣ ಅವರು ಯಾರನ್ನೂ ಹೈಜಾಕ್ ಮಾಡಿರಲಿಲ್ಲ. ನಿರ್ದೇಶಕರೇ ಒಪ್ಪಿ ರೇವಣ್ಣ ಪರ ಇದ್ದರು ಎಂದು ರೇವಣ್ಣ ಪರ ಬಾಲಚಂದ್ರ ಬ್ಯಾಟಿಂಗ್ ಮಾಡಿದ್ದಾರೆ.

    ಎಲ್ಲರನ್ನೂ ಒಪ್ಪಿಸಲು ಪ್ರಯತ್ನಿಸುತ್ತೇನೆ. ಒಂದು ವೇಳೆ ಒಪ್ಪದಿದ್ದಲ್ಲಿ ಚುನಾವಣೆ ನಡೆಯಲಿ, ನನಗೆ ಗೆಲ್ಲುವ ಭರವಸೆ ಇದೆ. ಚುನಾವಣೆಯಲ್ಲಿ ನಾನು ಖಂಡಿತಾ ಗೆಲ್ಲುತ್ತೇನೆ. ಎಷ್ಟು ಜನ ನಿರ್ದೇಶಕರು ನನ್ನ ಪರ ಇದ್ದಾರೆ ಎಂಬುದು 31 ರಂದು ಗೊತ್ತಾಗುತ್ತದೆ ಎಂದು ತಿಳಿಸಿದ್ದಾರೆ.

  • ಡಿಕೆಶಿ ಮುಂದಿನ ಕೆಪಿಸಿಸಿ ಅಧ್ಯಕ್ಷ?

    ಡಿಕೆಶಿ ಮುಂದಿನ ಕೆಪಿಸಿಸಿ ಅಧ್ಯಕ್ಷ?

    ಬೆಂಗಳೂರು: ಫೆಬ್ರವರಿಯಲ್ಲಿ ಉಪಚುನಾವಣೆ ನಡೆಯುವ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸಿ, ರಾಜ್ಯದಲ್ಲಿನ ಪ್ರಮುಖ ನಾಯಕರನ್ನು ಆಯ್ಕೆ ಮಾಡಬೇಕೆಂದು ಕಾಂಗ್ರೆಸ್ ಹೈ ಕಮಾಂಡ್ ತೀರ್ಮಾನಿಸಿದೆ. ಅಧ್ಯಕ್ಷರ ಪಟ್ಟಿಯಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಹೆಸರು ಪ್ರಮುಖವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ಈ ಕುರಿತು ಸ್ವತಃ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೇ ನಿನ್ನೆ ಡಿ.ಕೆ.ಶಿವಕುಮಾರ್ ಅವರಿಗೆ ಕರೆ ಮಾಡಿ ತಿಳಿಸಿದ್ದು, ಡಿಕೆಶಿ ಹಾಗೂ ಸೋನಿಯಾ ಗಾಂಧಿ ಅವರ ಮಧ್ಯೆ ವಿಸ್ತೃತ ಸಂಭಾಷಣೆ ನಡೆದಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಡಿಕೆಶಿಗೆ ಸೋನಿಯಾ ಗಾಂಧಿ ತಿಳಿಸಿದ್ದು, ಇದಕ್ಕೆ ಡಿಕೆಶಿ ಸಹ ಕೆಲ ಷರತ್ತುಗಳನ್ನು ವಿಧಿಸಿ ಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

    ಮುಂದಿನ ವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಕಾಂಗ್ರೆಸ್ ನಾಯಕರು ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ. ಸಭೆಯಲ್ಲಿ ಬಹುತೇಕ ಡಿ.ಕೆ.ಶಿವಕುಮಾರ್ ಅವರ ಹೆಸರನ್ನೇ ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಶುಕ್ರವಾರ ನಡೆದ ಫೋನ್ ಸಂಭಾಷಣೆಯಲ್ಲಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರಾಗಬೇಕಾದಲ್ಲಿ ನನ್ನ ಕೆಲವು ಷರತ್ತುಗಳನ್ನು ಒಪ್ಪಿಕೊಳ್ಳಬೇಕು ಎಂದು ಸೋನಿಯಾ ಗಾಂಧಿ ಅವರಿಗೆ ವಿವರವಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

    ಐದು ಷರತ್ತುಗಳು:
    ಡಿಕೆ ಶಿವಕುಮಾರ್ ಒಟ್ಟು 5 ಷರತ್ತುಗಳನ್ನು ವಿಧಿಸಿದ್ದು, ಅಧ್ಯಕ್ಷನಾಗಿ ನನಗೆ ಸರ್ವ ಸ್ವಾತಂತ್ರ್ಯ ಬೇಕು. ಯಾವುದೇ ಅಡೆತಡೆಗಳು ಇರಬಾರದು. ನನ್ನ ನಿರ್ಧಾರದ ಪ್ರಕಾರವೇ ಎಲ್ಲ ನಡೆಯಬೇಕು ಎಂಬುದು ಮೊದಲ ಷರತ್ತಾಗಿದೆ. ಕೆಪಿಸಿಸಿ ಹುದ್ದೆಗಳಿಗೆ ಸದ್ಯರನ್ನು ನೇಮಿಸಲು ನನಗೆ ಸ್ವಾತಂತ್ರ್ಯ ಇರಬೇಕು, ಯಾರೂ ಕೂಡ ಹಸ್ತಕ್ಷೇಪ ಮಾಡಬಾರದು. ಟಿಕೆಟ್ ಹಂಚಿಕೆಯಲ್ಲಿ ಹಸ್ತಕ್ಷೇಪ ಮಾಡಬಾರದು. ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ನಾನೇ ಸಿಎಂ ಆಗಬೇಕು ಎಂದು ಐದು ಷರತ್ತು ವಿಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ಈ ಕುರಿತು ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಪ್ರತಿಕ್ರಿಯಿಸಿ, ನಾನು ಯಾವುದೇ ಸ್ಥಾನಕ್ಕೂ ಅರ್ಜಿ ಹಾಕಿಕೊಂಡು ಓಡಾಡುವುದಿಲ್ಲ. ಸುಮ್ಮನೆ ಟಿವಿಯಲ್ಲಿ ನನ್ನ ಹೆಸರು ಹಾಕುತ್ತೀರಿ. ಹೀಗೆ ಹಾಕಿ ನನಗೆ ಯಾವ ಹುದ್ದೆಯೂ ಸಿಗದಂತೆ ಮಾಡುತ್ತೀರಿ ಎಂದು ಹೇಳಿ ನಕ್ಕಿದ್ದರು.

    ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರ ಭೇಟಿ ಮಾಡುತ್ತಿದ್ದು, ಎರಡು ದಿನದಿಂದ ರಾಷ್ಟ್ರ ರಾಜಧಾನಿಯಲ್ಲಿಯೇ ಬೀಡು ಬಿಟ್ಟಿದ್ದಾರೆ. ಮಧ್ಯಾಹ್ನ 12ಕ್ಕೆ ಸೋನಿಯಾ ಗಾಂಧಿ ಭೇಟಿ ಮಾಡಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಸಂಬಂಧ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಪರಿಗಣಿಸುವಂತೆ ಸೋನಿಯಾ ಗಾಂಧಿಗೆ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಸಿದ್ದು, ಎಚ್‍ಡಿಡಿ ದೊಡ್ಡವರು:
    ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ನಾಯಕರು, ದೇವೇಗೌಡರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಅವರಿಬ್ಬರು ದೊಡ್ಡವರು. ಅವರ ವಿಚಾರಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ. ಕಾಂಗ್ರೆಸ್ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಹೀಗಾಗಿ ಈ ಕುರಿತು ನಾವಿನ್ನು ತೀರ್ಮಾನ ಮಾಡುವ ಹಂತಕ್ಕೆ ಬಂದಿಲ್ಲ. ವಿಶ್ವಾಸ, ಗೌರವ ಬಿಟ್ಟು ಬದಲಾವಣೆ ಮಾಡಿಕೊಳ್ಳಲು ತಯಾರಿಲ್ಲ. ಒಟ್ಟಿಗೆ ಒಂದೇ ಸರ್ಕಾರದಲ್ಲಿ ಕೆಲಸ ಮಾಡಿದ್ದೇವೆ. ಫಲ ಸಿಗಲಿ, ಬಿಡಲಿ ಸರ್ಕಾರದಲ್ಲಿ ಒಗ್ಗಟ್ಟಾಗಿ ಇದ್ದೆವು ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

  • ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಪಟ್ಟಕ್ಕಾಗಿ ಕಾಂಗ್ರೆಸ್‍ನಲ್ಲೇ ಕಾಲೆಳೆದಾಟ

    ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಪಟ್ಟಕ್ಕಾಗಿ ಕಾಂಗ್ರೆಸ್‍ನಲ್ಲೇ ಕಾಲೆಳೆದಾಟ

    ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ನಾಯಕರಲ್ಲೇ ಪರಸ್ಪರ ಕಾಲೆಳೆದಾಟ ನಡೆದಿದ್ದು, ಹಾಲಿ ಜಿಲ್ಲಾ ಪಂಚಾಯತಿ ಸದಸ್ಯ ಎಚ್.ವಿ ಮಂಜುನಾಥ್ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

    ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯಲ್ಲಿ ಕಾಂಗ್ರೆಸ್‍ಗೆ ಬಹುಮತವಿದ್ದು ಮೊದಲ ಅವಧಿಗೆ ಶಾಸಕ ಸುಧಾಕರ್ ತಂದೆ ಪಿ.ಎನ್ ಕೇಶವರೆಡ್ಡಿ ಅಧ್ಯಕ್ಷರಾಗಿದ್ದರು. ತದನಂತರ ಗೌರಿಬಿದನೂರು ಶಾಸಕ ಶಿವಶಂಕರ ರೆಡ್ಡಿ ಬೆಂಬಲಿತ ಹೊಸೂರು ಜಿಲ್ಲಾ ಪಂಚಾಯತಿ ಸದಸ್ಯ ಎಚ್.ವಿ ಮಂಜುನಾಥ್ ಆಯ್ಕೆಯಾಗಿದ್ದರು.

    ಆದರೆ ಈಗ ಅಧ್ಯಕ್ಷಗಾದಿ ಮೇಲೆ ಮತ್ತೆ ಕಣ್ಣು ಹಾಕಿರುವ ಶಾಸಕ ಸುಧಾಕರ್ ತಮ್ಮ ಬೆಂಬಲಿತರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ರಾಜ್ಯದ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು. ಈ ಸಂಬಂಧ ನಿನ್ನೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆಸಿ ಹಾಲಿ ಅಧ್ಯಕ್ಷ ಮಂಜುನಾಥ್ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ.

    ಇಂದು ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆ ನಡೆಸಿ ಮಾತನಾಡಿದ ಎಚ್.ವಿ ಮಂಜುನಾಥ್ ರಾಜಕೀಯ ಕಾರಣಕ್ಕೋಸ್ಕರ ಹೈಕಮಾಂಡ್ ಆದೇಶದಂತೆ ತಾನು ನಾಳೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದರು. ಇದಕ್ಕೆ ಮಂಜುನಾಥ್ ಬೆಂಬಲಿಗರು ವಿರೋಧ ಮಾಡಿದ್ದರು. ಅದರೆ ಅಂತಿಮವಾಗಿ ರಾಜೀನಾಮೆ ನೀಡಲು ಹೈಕಮಾಂಡ್ ಸೂಚಿಸಿದ್ದು ಪಕ್ಷದ ಶಿಸ್ತಿನ ಸಿಪಾಯಿಯಾದ ನಾನು ಪಕ್ಷದ ಆದೇಶಕ್ಕೆ ತಲೆಬಾಗಿ ರಾಜೀನಾಮೆ ಕೊಡುತ್ತೇನೆ ಎಂದು ಮಂಜುನಾಥ್ ಹೇಳಿದ್ದಾರೆ.

    ಇನ್ನೂ ಮುಂದೆ ಸಾಮಾನ್ಯ ಸದಸ್ಯನಾಗಿ ಕೆಳಗೆ ಕುಳಿತು ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ಅದರೆ ಈ ಹಿಂದಿನ ಅಧ್ಯಕ್ಷರ ಹಾಗೆ ಅಧ್ಯಕ್ಷ ಸ್ಥಾನದಿಂದ ಹೋದ ಬಳಿಕ ಸಭೆಗಳಿಗೆ ಬಾರದೆ ಇರಲ್ಲ ಎಂದು ಮಾಜಿ ಅಧ್ಯಕ್ಷ ಶಾಸಕ ಸುಧಾಕರ್ ತಂದೆ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.