Tag: Presidency College

  • ಲಯಸ್ಮಿತಾ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಕೂಡಲೇ ಮದ್ವೆಯಾಗಲು ಒಪ್ಪದ್ದಕ್ಕೆ ಕೊಂದೆ ಎಂದ ಆರೋಪಿ

    ಲಯಸ್ಮಿತಾ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಕೂಡಲೇ ಮದ್ವೆಯಾಗಲು ಒಪ್ಪದ್ದಕ್ಕೆ ಕೊಂದೆ ಎಂದ ಆರೋಪಿ

    ಬೆಂಗಳೂರು: ಪ್ರೆಸಿಡೆನ್ಸಿ ಕಾಲೇಜಿ (Presidency College) ನಲ್ಲಿ ಯುವತಿ ಹತ್ಯೆ ಪ್ರಕರಣ ಸಂಬಂಧ ಇದೀಗ ಪಾಗಲ್ ಪ್ರೇಮಿ ಪವನ್ ಕಲ್ಯಾಣ್ ಸ್ಫೋಟಕ ಟ್ವಿಸ್ಟ್ ಕೊಟ್ಟಿದ್ದಾನೆ.

    ಲಯಸ್ಮಿತಾ (Layasmitha) ಳನ್ನು ಹತ್ಯೆ ಮಾಡಲು ನಿಜವಾದ ಕಾರಣ ಏನು ಎಂಬುದನ್ನು ಆರೋಪಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಈ ಕೂಡಲೇ ಮದುವೆಯಾಗಲು ಒಪ್ಪದೇ ಇದ್ದಿದ್ದಕ್ಕೆ ಕೊಲೆ ಮಾಡಿದೆ ಎಂದಿದ್ದು, ಪೊಲೀಸರ ಮುಂದೆ ಬಾಯ್ಬಿಟ್ಟ ಸತ್ಯ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಪೊಲೀಸರ ಮುಂದೆ ಪವನ್ (Pawan Kalyan) ಹೇಳಿದ್ದೇನು..?: ಕಳೆದ ಒಂದೂವರೆ ವರ್ಷದಿಂದ ನಾನು ಲಯಸ್ಮಿತಾ ಪ್ರೀತಿ ಮಾಡುತ್ತಾ ಇದ್ದೆವು. ದೂರದ ಸಂಬಂಧಿಯಾಗಿದ್ದರಿಂದ ಜಾತಿಯ ಸಮಸ್ಯೆ ಇರಲಿಲ್ಲ. ಕುಟುಂಬಸ್ಥರನ್ನು ಒಪ್ಪಿಸುವ ಜವಾಬ್ದಾರಿಯನ್ನು ಲಯ ತೆಗೆದುಕೊಂಡಿದ್ದಳು. ಆದರೆ ಕಾಲೇಜಿಗೆ ಸೇರಿದ ಮೇಲೆ ಲಯಾಳ ಹಾವಭಾವ ಬದಲಾಗ್ತಾ ಇತ್ತು. ಲಯಾಳ ಬದಲಾವಣೆ ನನಗೆ ಅನುಮಾನ ಬಂದು ತಕ್ಷಣ ಮದುವೆಯಾಗೋದಕ್ಕೆ ಕೇಳಿದೆ.

    ಮದುವೆ (Marriage) ಅಂದ ಕೂಡಲೇ ವಿರೋಧ ಮಾಡಲು ಪ್ರಾರಂಭಿಸಿದಳು. ನಾನು ಈಗಿನ್ನೂ ಕಾಲೇಜಿಗೆ ಸೇರಿದ್ದೀನಿ, ಕಾಲೇಜು ಮುಗಿದ ಮೇಲೆ ಮದುವೆ ಆಗೋಣ ಅಂದ್ಲು. ಎರಡು ದಿನ ಮಾತನಾಡಲೇ ಇಲ್ಲ, ಡಿಸೆಂಬರ್ 31 ಮತ್ತು ಜನವರಿ 1 ರಂದು ಫೋನ್ ಪಿಕ್ ಮಾಡ್ಲೇ ಇಲ್ಲ. ನಮ್ಮಿಬ್ಬರ ವಿಚಾರ ಎಲ್ಲರಿಗೂ ಗೊತ್ತಾಗ್ಲಿ ಅಂತ ವಾಟ್ಸಪ್ ಡಿಪಿ (Whatsapp DP) ಹಾಕಿದೆ. ಆಗ ಫೋನ್ ಮಾಡಿ ಬೈಯ್ದಳು. ಬಳಿಕ ನಾನು ಕಾಲೇಜಿಗೆ ಹೋಗಲು ತೀರ್ಮಾನ ಮಾಡಿದೆ. ಲಯಾಳ ಕಾಲೇಜಿನ ಬಳಿ ಹೋಗಿ ಅವಳನ್ನು ಹೊರಗೆ ಬರಲು ಹೇಳಿದೆ. ಇದನ್ನೂ ಓದಿ: ಎಂಜಿನಿಯರಿಂಗ್ ಕಾಲೇಜಿನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ

    ಲಯಾಳನ್ನು ಕಾಲೇಜಿನ ಹೊರಗೆ ಕರೆಸಿಕೊಂಡು ಕೂಡಲೇ ಮದುವೆ ಮಾಡಿಕೊಳ್ಳಲು ಕೇಳಿಕೊಂಡೆ. ಅವಳು ಜಗಳ ಮಾಡೋದಕ್ಕೆ ಶುರು ಮಾಡಿದಳು. ನನಗೂ ಆ ಸಂದರ್ಭದಲ್ಲಿ ಕೋಪ ಬಂತು. ನಾನು ಅಂದುಕೊಂಡಂತೆ ಅವಳನ್ನು ಕೊಲೆ ಮಾಡಿದೆ. ನಾನು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಇರಲಿಲ್ಲ. ಅವಳು ಸತ್ತ ಬಳಿಕ ನಾನು ಚಾಕುವಿನಿಂದ ಕುಯ್ದುಕೊಂಡೆ ಎಂದು ಪೊಲೀಸರ ಮುಂದೆ ಪವನ್ ತಪ್ಪೊಪ್ಪಿಕೊಂಡಿದ್ದಾನೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಎಂಜಿನಿಯರಿಂಗ್ ಕಾಲೇಜಿನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ

    ಎಂಜಿನಿಯರಿಂಗ್ ಕಾಲೇಜಿನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ

    ಬೆಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಪ್ರೆಸಿಡೆನ್ಸಿ ಕಾಲೇಜಿನ (Presidency University Bengaluru) ಬಿ.ಟೆಕ್ ವಿದ್ಯಾರ್ಥಿನಿಗೆ (BTech Student) ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಬಳಿಕ ತಾನೂ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜಾನುಕುಂಟೆ ಠಾಣಾ (Rajanukunte Police Station) ವ್ಯಾಪ್ತಿಯಲ್ಲಿ ನಡೆದಿದೆ.

    ನೃಪತುಂಗ ರಸ್ತೆಯಲ್ಲಿರುವ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಇ ವಿದ್ಯಾರ್ಥಿ ಪವನ್ ಕಲ್ಯಾಣ್ ಕೊಲೆ ಆರೋಪಿ. ಪ್ರೆಸಿಡೆನ್ಸಿ ಕಾಲೇಜಿನ ಲಯಸ್ಮಿತ (19) ಮೃತ ಯುವತಿ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದ್ರೆ ಪ್ರೀತಿ ವಿಚಾರಕ್ಕೆ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಕರುವಿನ ಮೇಲೆ ಅನೈಸರ್ಗಿಕ ಲೈಂಗಿಕ ಕ್ರಿಯೆ- ಯುವಕ ಅರೆಸ್ಟ್

    ರಾಜಾನುಕುಂಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿ, ಗಾಯಾಳು ವಿದ್ಯಾರ್ಥಿಯನ್ನು ಸ್ಪರ್ಶ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ (Bengaluru Rural) ಎಸ್ಪಿ ಸಹ ಭೇಟಿ ನೀಡಿ ವಿಚಾರಣೆ ನಡೆಸಲಿದ್ದಾರೆ. ಇದನ್ನೂ ಓದಿ: ಆಸ್ಟ್ರೇಲಿಯಾ ಬೀಚ್‌ನಲ್ಲಿ ಭೀಕರ ಹೆಲಿಕಾಪ್ಟರ್ ದುರಂತ – ನಾಲ್ವರು ಸಾವು, ಮೂವರಿಗೆ ಗಾಯ

    CRIME 2

    19 ವರ್ಷದ ಲಯಸ್ಮಿತ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಬಿ.ಟೆಕ್ ಓದುತ್ತಿದ್ದಳು. ಇಂದು ಅಲ್ಲಿಗೆ ಬಂದಿದ್ದ ಸ್ಪರ್ಶ್ ಕ್ಲಾಸ್ ರೂಮಿನಲ್ಲಿದ್ದ ಲಯಸ್ಮಿತಾಗೆ ಹೊರಗೆ ಬರಲು ಹೇಳಿದ್ದಾನೆ. ಆಕೆ ಬಂದ ಕೂಡಲೇ 10ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾನೆ. ಬಳಿಕ ತಾನೂ ಕೂಡ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಸ್ಥಳಕ್ಕಾಗಿಮಿಸಿರುವ ಪೊಲೀಸರು ಸ್ಪರ್ಶ್ನನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪವನ್ ಕಲ್ಯಾಣ್ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ.

    ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊಲೆ ಆರೋಪಿ ಪವನ್ ಕಲ್ಯಾಣ್, ನೃಪತುಂಗ ರಸ್ತೆಯಲ್ಲಿರೋ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಇ ಪದವಿ ಓದುತ್ತಿದ್ದ.

    Live Tv
    [brid partner=56869869 player=32851 video=960834 autoplay=true]