Tag: President Ramnath Kovind

  • ವಿರಾಟ್‍ನನ್ನು ಬೀಳ್ಕೊಟ್ಟ ಪ್ರಧಾನಿ, ರಾಷ್ಟ್ರಪತಿ

    ವಿರಾಟ್‍ನನ್ನು ಬೀಳ್ಕೊಟ್ಟ ಪ್ರಧಾನಿ, ರಾಷ್ಟ್ರಪತಿ

    ನವದೆಹಲಿ: ರಾಷ್ಟ್ರಪತಿ ಅವರ ಅಂಗರಕ್ಷಕ ತಂಡದಲ್ಲಿದ್ದ ವಿರಾಟ್‍ಗೆ ಇದೇ ಕೊನೆಯ ಗಣರಾಜ್ಯೋತ್ಸವವಾಗಿದ್ದು, ನಿವೃತ್ತಿ ಹೊಂದಿದೆ. ಈ ಕುದುರೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೀಳ್ಕೊಟ್ಟಿದ್ದಾರೆ.

    73ನೇ ಗಣರಾಜ್ಯೋತ್ಸವ ಪರೇಡ್ ಮುಕ್ತಾಯವಾದ ಬಳಿಕ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರ ಅಂಗರಕ್ಷಕರು ಅವರನ್ನು ಮತ್ತೆ ರಾಷ್ಟ್ರಪತಿ ಭವನಕ್ಕೆ ಕರೆದೊಯ್ದರು. ಆದರೆ, ಎಲ್ಲರ ಗಮನ ಸೆಳೆದಿದ್ದು ಅಂಗರಕ್ಷಕ ತಂಡದಲ್ಲಿದ್ದ ವಿರಾಟ್ ಎಂಬ ವಿಶೇಷ ಕುದುರೆ.

    ಗಣರಾಜ್ಯೋತ್ಸವ ಪರೇಡ್‍ಗಳಲ್ಲಿ ಈ ಕುದುರೆ 13 ಬಾರಿ ಭಾಗವಹಿಸಿದೆ. ಜನವರಿ 15 ರಂದು ಸೇನಾ ದಿನದ ಹಿಂದಿನ ದಿನದಂದು ವಿರಾಟ್‍ಗೆ ಸೇನಾ ಮುಖ್ಯಸ್ಥರಿಂದ ಶ್ಲಾಘನೆ ದೊರೆತಿತ್ತು. ವಿರಾಟ್ ಅಸಾಧಾರಣ ಸೇವೆ ಮತ್ತು ಸಾಮಥ್ರ್ಯಗಳಿಗಾಗಿ ಪ್ರಶಂಸೆಯನ್ನು ಪಡೆದ ಮೊದಲ ಕುದುರೆಯಾಗಿದೆ.

    ಹ್ಯಾನೋವೇರಿಯನ್ ತಳಿಯ ಈ ಕುದುರೆಯನ್ನು 2003ರಲ್ಲಿ ಅಂಗರಕ್ಷಕ ತಂಡಕ್ಕೆ ಸೇರಿಸಲಾಯಿತು. ಇದನ್ನು ರಾಷ್ಟ್ರಪತಿಗಳ ಅಂಗರಕ್ಷಕನ ಚಾರ್ಜರ್ ಎಂದೂ ಕರೆಯುತ್ತಾರೆ. ಗಣರಾಜ್ಯೋತ್ಸವದ ಪರೇಡ್ ಮತ್ತು ಕಳೆದ ವರ್ಷದ ಬೀಟಿಂಗ್ ದಿ ರಿಟ್ರೀಟ್ ಸಮಾರಂಭದಲ್ಲಿ ಈ ಕುದುರೆಗೆ ವಯಸ್ಸಾಗಿದ್ದರೂ, ಉತ್ತಮವಾಗಿ ಕಾರ್ಯನಿರ್ವಹಿಸಿತ್ತು. ಇದನ್ನೂ ಓದಿ: ಗಣರಾಜ್ಯೋತ್ಸವ ಸಂಭ್ರಮ: ಮೋದಿ ಟೋಪಿ, ಶಾಲು ವಿಶೇಷತೆ ಏನು?

    ಪ್ರತಿವರ್ಷ ಗಣರಾಜ್ಯೋತ್ಸವದಂದು, ಕುದುರೆ ಸವಾರರು ಉತ್ತಮವಾದ ಕೆಂಪು ಕೋಟುಗಳು, ಚಿನ್ನದ ಬಣ್ಣದ ಕವಚಗಳು ಮತ್ತು ಹೊಳಪಿನ ಪೇಟಗಳನ್ನು ಧರಿಸುತ್ತಾರೆ. ನಂತರ ರಾಷ್ಟ್ರಪತಿಗಳನ್ನು ವೇದಿಕೆಗೆ ಕರೆದೊಯ್ಯುತ್ತಾರೆ. ಆ ನಂತರದಲ್ಲಿ ರಾಷ್ಟ್ರಗೀತೆ ಪ್ರಾರಂಭವಾಗುತ್ತದೆ. ಇದನ್ನೂ ಓದಿ:  ರಾಜಪಥದಲ್ಲಿ ಭಾರತದ ವೈಭವ ಅನಾವರಣ

  • ಪ್ರತಿದಿನ 1 ಕೋಟಿ ಜನರಿಗೆ ಲಸಿಕೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿ- ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಕಾಂಗ್ರೆಸ್ ಮನವಿ

    ಪ್ರತಿದಿನ 1 ಕೋಟಿ ಜನರಿಗೆ ಲಸಿಕೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿ- ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಕಾಂಗ್ರೆಸ್ ಮನವಿ

    ಮಂಗಳೂರು: ದೇಶದಲ್ಲಿ ಪ್ರತಿ ದಿನ ಒಂದು ಕೋಟಿ ಜನರಿಗೆ ಕೋವಿಡ್ ಲಸಿಕೆಯನ್ನು ಸಂಪೂರ್ಣ ಉಚಿತವಾಗಿ ನೀಡಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ ಎಂದು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮನವಿ ಮಾಡಿದೆ.

    ದೇಶದಲ್ಲಿ ಸದ್ಯ ಪ್ರತಿದಿನ ಕೇವಲ 16 ಲಕ್ಷ ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಈ ವೇಗದಲ್ಲಿ ಲಸಿಕೆ ನೀಡುತ್ತಾ ಹೋದರೆ ಎಲ್ಲರಿಗೂ ಲಸಿಕೆ ದೊರೆಯುವುದು ತುಂಬಾ ವಿಳಂಬ ಆಗುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡುವ ದಿನದ ಗುರಿಯನ್ನು ಒಂದು ಕೋಟಿಗೆ ನಿಗದಿ ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಯವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ. ಇದನ್ನೂ ಓದಿ: ದಿನಕ್ಕೆ ಕೋಟಿ ಜನರಿಗೆ ಕೋವಿಡ್‌ ಲಸಿಕೆ ಕೊಡಿ: ರಾಜ್ಯಪಾಲರಿಗೆ ಕೈ ನಾಯಕರ ಮನವಿ

    ಕಾಂಗ್ರೆಸ್ ನಿಯೋಗದಲ್ಲಿ ಡಿಸಿಸಿ ಅಧ್ಯಕ್ಷರೂ ಆದ ವಿಧಾನಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ.ರಮಾನಾಥ್ ರೈ ಮತ್ತು ಅಭಯಚಂದ್ರ ಜೈನ್, ಶಾಸಕ ಯು.ಟಿ.ಖಾದರ್, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಜೆ.ಆರ್.ಲೋಬೊ, ಮೊಯ್ದೀನ್ ಬಾವ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.

    ದೇಶದಲ್ಲಿ ಕಳೆದ ಮೇ 31ರ ವರೆಗೆ 21.31 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಅಂದರೆ ಕೇವಲ 4.45 ಕೋಟಿ ಜನರಿಗೆ ಲಸಿಕೆ ನೀಡಿದಂತಾಗುತ್ತದೆ. ಇದು ಭಾರತದ ಜನಸಂಖ್ಯೆಯ ಕೇವಲ ಶೇ.3.17 ಮಾತ್ರ. ಕಳೆದ 134 ದಿನಗಳಲ್ಲಿ ಪ್ರತಿ ದಿನ ಸರಾಸರಿ ಕೇವಲ 16 ಲಕ್ಷ ಡೋಸ್ ಲಸಿಕೆ ಮಾತ್ರ ನೀಡಲಾಗುತ್ತಿದೆ. ಈ ರೀತಿಯಲ್ಲಿ ಲಸಿಕಾ ಕಾರ್ಯಕ್ರಮ ನಡೆದರೆ ಎಲ್ಲ ವಯಸ್ಕ ಜನರಿಗೆ ಲಸಿಕೆ ನೀಡುವುದು ವಿಳಂಬ ಆಗಲಿದ್ದು, ಮೂರನೇ ಅಲೆಗೆ ಮುನ್ನ ನಮ್ಮ ದೇಶದ ಜನರ ರಕ್ಷಣೆ ಹೇಗೆ ಸಾಧ್ಯ ಎಂದು ನರೇಂದ್ರ ಮೋದಿ ಸರ್ಕಾರ ಉತ್ತರಿಸಬೇಕಾಗಿದೆ ಎಂದು ಕಾಂಗ್ರೆಸ್ ಹರಿಹಾಯ್ದಿದೆ.

    ಕೇಂದ್ರ ಸರ್ಕಾರ ಲಸಿಕೆಗಳನ್ನು ಖರೀದಿಸಿ ಉಚಿತವಾಗಿ ರಾಜ್ಯ ಸರ್ಕಾರಗಳಿಗೆ ನೀಡಬೇಕಾಗಿರುವುದು ಇಂದಿನ ಅಗತ್ಯ. ಡಿಸೆಂಬರ್ ಅಂತ್ಯದ ವೇಳೆಗೆ ಹದಿನೆಂಟು ಮತ್ತು ಹೆಚ್ಚಿನ ವಯೋಮಾನದವರಿಗೆ ಉಚಿತ ಲಸಿಕೆ ಹಾಕಬೇಕಾಗುತ್ತದೆ. ಕೇಂದ್ರ ಸರ್ಕಾರ ಮೂರು ರೀತಿಯ ದರ ನಿಗದಿ ಮಾಡಿರುವುದು ನ್ಯಾಯಯುತವಾಗಿಲ್ಲ. ಇಂದು ಖಾಸಗಿ ಆಸ್ಪತ್ರೆಗಳಲ್ಲಿ 600 ರೂ.ನಿಂದ 1,500 ರೂಪಾಯಿ ದರದಲ್ಲಿ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಸಂಕಷ್ಟ ಕಾಲದಲ್ಲಿ ಮೋದಿ ಸರ್ಕಾರ ಕೆಲವು ಮಂದಿಗೆ ಲಾಭ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಂತಾಗಿದೆ ಎಂದು ಕಾಂಗ್ರೆಸ್ ಮನವಿಯಲ್ಲಿ ಹೇಳಿದೆ.

  • ರಾಷ್ಟ್ರಪತಿ ಉದ್ಘಾಟಿಸಲಿರುವ ಜನರಲ್ ತಿಮ್ಮಯ್ಯ ಮ್ಯೂಸಿಯಂನಲ್ಲಿ ಏನಿದೆ?

    ರಾಷ್ಟ್ರಪತಿ ಉದ್ಘಾಟಿಸಲಿರುವ ಜನರಲ್ ತಿಮ್ಮಯ್ಯ ಮ್ಯೂಸಿಯಂನಲ್ಲಿ ಏನಿದೆ?

    ಮಡಿಕೇರಿ: ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್‍ರವರು ಫೆಬ್ರವರಿ 7 ರಂದು ಕೊಡಗಿನ ಕೆ.ಎಸ್ ತಿಮ್ಮಯ್ಯ ಅವರ ಸನ್ನಿಸೈಡ್ ಮ್ಯೂಸಿಯಂನನ್ನು ಉದ್ಘಾಟಿಸುತ್ತಿದ್ದಾರೆ. ಈ ಮ್ಯೂಸಿಯಂನಲ್ಲಿ ಯುದ್ಧದ ಟ್ಯಾಂಕರ್, ಸೂಪರ್ ಸಾನಿಕ್, ಯುದ್ಧ ವಿಮಾನ ಸೇರಿದಂತೆ ಹಲವು ವಸ್ತುಗಳನ್ನು ಪ್ರದರ್ಶನಕ್ಕೆ ಇಡಲಾಗುತ್ತಿದೆ.

    ಮಡಿಕೇರಿ-ಕೊಡಗು ಎಂದಾಗ ನೆನಪಿಗೆ ಬರುವುದು ನಾಡಿನ ಜೀವನದಿ ಕಾವೇರಿ ಉಗಮ ಸ್ಥಳ ತಲಕಾವೇರಿ. ಜೊತೆಗೆ ಅಲ್ಲಿನ ಸೇನೆ, ಕ್ರೀಡೆ ಜೊತೆಗೆ ಕಾಫಿ, ಏಲಕ್ಕಿ, ಕರಿಮೆಣಸು, ಕಿತ್ತಳೆ ಹಾಗೆಯೇ ಸಾಂಪ್ರದಾಯಿಕ ಉಡುಗೆ ಎಲ್ಲರ ಗಮನ ಸೆಳೆಯುತ್ತವೆ. ಜೊತೆಗೆ ಪ್ರವಾಸಿ ತಾಣಗಳು, ಜಲಪಾತಗಳು ಕಣ್ಮುಂದೆ ಬರುತ್ತದೆ. ಅದರೊಟ್ಟಿಗೆ ಇದೀಗ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯ ಕೂಡ ಸೇರ್ಪಡೆಯಾಗುತ್ತಿದೆ.

    ಭಾರತೀಯ ಸೇನೆಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಕೊಡಗು ಜಿಲ್ಲೆ ರಾಷ್ಟ್ರದ ಭೂಸೇನೆ, ವಾಯುಸೇನೆ, ನೌಕಸೇನೆಗಳ ಪ್ರಥಮ ಮಹಾದಂಡನಾಯಕರಾಗಿದ್ದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರನ್ನು ಒಳಗೊಂಡಂತೆ ಸೇನಾ ಕ್ಷೇತ್ರದಲ್ಲಿ ಹಲವರು ದುಡಿದಿದ್ದಾರೆ. ಅವರಲ್ಲಿ ಪ್ರಮುಖವಾಗಿ ಜನರಲ್ ಕೊಡಂದೇರ ಸುಬ್ಬಯ್ಯ ತಿಮ್ಮಯ್ಯ ಅವರು ಪ್ರಮುಖರಾಗಿದ್ದಾರೆ. ಜನರಲ್ ತಿಮ್ಮಯ್ಯ ಅವರು 1906 ಮಾರ್ಚ್, 31 ರಂದು ಸನ್ನಿಸೈಡ್ ಎಂಬ ಬಂಗಲೆಯಲ್ಲಿ ಹುಟ್ಟಿ ಬೆಳೆದ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಮಾಡಿದೆ.

    ವಸ್ತು ಸಂಗ್ರಹಾಲಯ ಆವರಣಕ್ಕೆ ಭೇಟಿ ನೀಡುತ್ತಿದ್ದಂತೆ ಯುದ್ಧ ಟ್ಯಾಂಕ್, ಯುದ್ಧ ವಿಮಾನ ಕಣ್ಮಣ ಸೆಳೆಯುತ್ತವೆ. ಹಾಗೆಯೇ ಯುದ್ಧ ಸ್ಮಾರಕ ಗಮನ ಸೆಳೆಯುತ್ತದೆ. ನಂತರ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡುತ್ತಿದ್ದಂತೆ ಜನರಲ್ ತಿಮ್ಮಯ್ಯ ಅವರ ಬಾಲ್ಯ, ಸೇನಾ ಕ್ಷೇತ್ರದಲ್ಲಿನ ವಿವಿಧ ಛಾಯಾಚಿತ್ರಗಳು ಆಕರ್ಷಿಸುತ್ತವೆ. ಜನರಲ್ ತಿಮ್ಮಯ್ಯ ಅವರ ವ್ಯಕ್ತಿ ಚರಿತ್ರೆ, ಭಾರತೀಯ ಸೇನೆಯ ಇತಿಹಾಸವನ್ನು ವಸ್ತು ಸಂಗ್ರಹಾಲಯದಲ್ಲಿ ನೋಡಬಹುದಾಗಿದೆ. ವಸ್ತು ಸಂಗ್ರಹಾಲಯದ ಪ್ರತಿ ಕೊಠಡಿಯು ಸೈನಿಕರ ಕತೆ ಹೇಳುವಂತಿದೆ.

    ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಿರ್ಮಿಸಲಾಗಿರುವ ಜನರಲ್ ತಿಮ್ಮಯ್ಯ ಅವರ ಸ್ಮಾರಕ ಭವನ ಅದ್ಭುತವಾಗಿ ವಿನ್ಯಾಸಗೊಳಿಸಲಾಗಿದ್ದು, ಭಾರತೀಯ ಸೇನಾಧಿಕಾರಿಯಾಗಿ ನಡೆದು ಬಂದ ದಾರಿಯ ಇತಿಹಾಸ ಸಾರುವುದರ ಜೊತೆಗೆ ಭಾರತೀಯ ಸೇನಾ ಪರಂಪರೆಯ ಮಾಹಿತಿ ನೀಡುವ ಮಹತ್ವದ ಸಂದೇಶ ವಸ್ತು ಸಂಗ್ರಹಾಲಯದಲ್ಲಿದೆ. ವಸ್ತು ಸಂಗ್ರಹಾಲಯದಲ್ಲಿ ಯುದ್ಧದಲ್ಲಿ ಬಳಸಲಾಗುತ್ತಿದ್ದ ಬಂದೂಕುಗಳು ಗಮನ ಸೆಳೆಯುತ್ತವೆ. ಕೊಡಗಿನ ಸೇನಾ ಪರಂಪರೆ ಹಾಗೂ ಸಂಸ್ಕøತಿಯನ್ನು ಬಿಂಭಿಸುವ ಜನರಲ್ ಕೆ.ತಿಮ್ಮಯ್ಯ ಮ್ಯೂಸಿಯಂನ್ನು ಗೌರವಾನ್ವಿತ ರಾಷ್ಟ್ರಪತಿ ಉದ್ಘಾಟಿಸುತ್ತಿರುವುದು ವಿಶೇಷವಾಗಿದೆ.

    ತಿಮ್ಮಯ್ಯ ಅವರು ಹುಟ್ಟಿ ಬೆಳೆದ ಸನ್ನಿಸೈಡ್ ನಿವಾಸವನ್ನು ಸ್ಮಾರಕವಾಗಿ ಅಭಿವೃದ್ಧಿಪಡಿಸಲಾಗಿದ್ದಯ, ತಿಮ್ಮಯ್ಯ ಅವರ ಬಾಲ್ಯ ಕುರಿತು ಕಲಾಕೃತಿಗಳು, ತಿಮ್ಮಯ್ಯನವರು ಸೇನಾಧಿಕಾರಿಯಾಗಿ ಸಲ್ಲಿಸಿದ ಸೇವೆಯ ಛಾಯಾ ಚಿತ್ರಗಳು ಗಮನ ಸೆಳೆಯುತ್ತವೆ.

  • ದೇಶದ ಹಬ್ಬಕ್ಕೆ ಕ್ಷಣಗಣನೆ : ಸಿಂಗಾರಗೊಂಡಿದೆ ರಾಜಪಥ್: ಈ ಬಾರಿಯ ಪರೇಡ್ ವಿಶೇಷತೆ ಏನು?

    ದೇಶದ ಹಬ್ಬಕ್ಕೆ ಕ್ಷಣಗಣನೆ : ಸಿಂಗಾರಗೊಂಡಿದೆ ರಾಜಪಥ್: ಈ ಬಾರಿಯ ಪರೇಡ್ ವಿಶೇಷತೆ ಏನು?

    ನವದೆಹಲಿ: ದೇಶದ ಹಬ್ಬ ಗಣರಾಜೋತ್ಸವ ಆಚರಣೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ದೆಹಲಿಯ ರಾಜಪಥ್ ರಸ್ತೆ ಶನಿವಾರದ ಕಾರ್ಯಕ್ರಮಕ್ಕೆ ನವವಧುವಿನಂತೆ ಸಿಂಗಾರಗೊಂಡಿದೆ.

    ಬೆಳಗ್ಗೆ ಹತ್ತು ಗಂಟೆಯಿಂದ ಅಧಿಕೃತ ಕಾರ್ಯಕ್ರಮ ಆರಂಭವಾಗಲಿದ್ದು ಅಂತಿಮ ಹಂತದ ಕೆಲಸಗಳು, ಭದ್ರತಾ ತಪಾಸಣೆ ಕಾರ್ಯ ನಡೆಯುತ್ತಿದೆ. ಬೆಳಗ್ಗೆ ಹತ್ತು ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಈ ಬಾರಿಯ ಅತಿಥಿ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸೈರಿಲ್ ರಾಮ್ಫೂಸಾ ಸಮ್ಮುಖದಲ್ಲಿ ಇಂಡಿಯಾ ಗೇಟ್ ನಲ್ಲಿರುವ ಅಮರ್ ಜವಾನ್ ಜ್ಯೋತಿ ಬಳಿ ಹುತ್ಮಾತ ಯೋಧರಿಗೆ ಗೌರವ ವಂದನೆ ಸಲ್ಲಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಧ್ವಜಾರೋಹಣ ಮಾಡಲಿದ್ದಾರೆ.

    ಬೆಳಗ್ಗೆ 10.30ರಿಂದ ಪರೇಡ್ ಗೆ ಅಧಿಕೃತ ಚಾಲನೆ ಸಿಗಲಿದ್ದು, ಮಹಾತ್ಮ ಗಾಂಧಿ 150ನೇ ಜನ್ಮ ದಿನ ಹಿನ್ನೆಲೆಯಲ್ಲಿ ಸ್ತಬ್ಧ ಚಿತ್ರಗಳ ಮೂಲಕ ವಿಶೇಷ ಗೌರವ ಸಲ್ಲಿಸಲು ತಯಾರಿ ನಡೆದಿದೆ. 17 ರಾಜ್ಯಗಳು 6 ಕೇಂದ್ರಾಡಳಿತ ಪ್ರದೇಶಗಳು ಹಾಗೂ ಕೇಂದ್ರ ಸರ್ಕಾರದ ಹಲವು ಸಚಿವಾಲಯದಿಂದ ಗಾಂಧಿಗೆ ಗೌರವ ಸಲ್ಲಿಸಲಾಗುತ್ತಿದೆ. ಇದನ್ನು ಓದಿ: ಫಸ್ಟ್ ಟೈಂ ಆರ್‌ಡಿಯಲ್ಲಿ ಪುರುಷ ದಳವನ್ನು ಮುನ್ನಡೆಸಲಿದ್ದಾರೆ ಮಹಿಳಾ ಅಧಿಕಾರಿ

    ಪ್ರತಿ ವರ್ಷದಂತೆ ಈ ಬಾರಿಯೂ ಗಣರಾಜೋತ್ಸವದ ಮೇಲೆ ಉಗ್ರರ ಕರಿನೆರಳಿದ್ದು ಜೈಶ್ ಈ ಮೊಹ್ಮದ್ ಉಗ್ರ ಸಂಘಟನೆಯ ಶಂಕಿತ ಇಬ್ಬರು ಉಗ್ರರನ್ನು ದೆಹಲಿ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ರಾಜಪಥ್ ನಿಂದ ಐದು ಕಿಮೀ ವರೆಗೂ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದ್ದು ಪಾಸ್ ಇದ್ದವರು ಮಾತ್ರ ಜನಪಥ್ ರಸ್ತೆ ಪ್ರವೇಶಿಸಬಹುದಾಗಿದೆ. ವೇದಿಕೆ ಸುತ್ತಲೂ ಮೂರು ಬಗೆಯ ಭದ್ರತೆ ಒದಗಿಲಾಗಿದ್ದು ಎಸ್ಪಿಜಿ, ಬ್ಲಾಕ್ ಕ್ಯಾಟ್ ಹಾಗೂ ಕಾರ್ಯಕ್ರಮದಲ್ಲಿ ಭಾಗಿಯಾಗುವ ಗಣ್ಯರಿಗೆ ಸ್ಪೆಷಲ್ ಪ್ರೊಟಕ್ಷನ್ ಗ್ರೂಪ್ ನಿಂದ ಭದ್ರತೆ ನೀಡಲಾಗಿದೆ.

    ಹೇಗೆ ಪರೇಡ್ ಆರಂಭಗೊಳ್ಳುತ್ತದೆ?
    ಶನಿವಾರ ಬೆಳಗ್ಗೆ 9.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಮರ್ ಜವಾನ್ ಜ್ಯೋತಿ ಬಳಿ ಆಗಮಿಸಲಿದ್ದಾರೆ. ಬಳಿಕ 9.55ಕ್ಕೆ ಕುದುರೆ ಸಾರೋಟಿನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಆಗಮಿಸಿ ಅಮರ್ ಜವಾನ್ ಜ್ಯೋತಿ ಬಳಿ ಆಗಮಿಸಿ ಯುದ್ಧದಲ್ಲಿ ಹುತ್ಮಾತರಾದ ಸೈನಿಕರಿಗೆ ಗೌರವ ವಂದನೆ ಸಲ್ಲಿಸಲಿದ್ದಾರೆ. ಇದನ್ನು ಓದಿ: ರಾಜಪಥ್ ರಸ್ತೆಯಲ್ಲಿ ಮೊದಲ ಬಾರಿ ಪ್ರತಿಧ್ವನಿಸಲಿದೆ ಕನ್ನಡದ ಹಾಡು

    ರಾಷ್ಟ್ರಪತಿಗಳು 10 ಗಂಟೆಗೆ ಪ್ರಧಾನಿ ಸಮ್ಮುಖದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. ಈ ವೇಳೆ ದೇಶದ ಭೂ, ವಾಯು ಮತ್ತು ನೌಕದಳದ ಮುಖ್ಯಸ್ಥರು ಉಪಸ್ಥಿತರಿರಲಿದ್ದಾರೆ. 10.30ಕ್ಕೆ ಅಧಿಕೃತವಾಗಿ ಪರೇಡ್‍ಗೆ ಆರಂಭವಾಗುವ ಸಾಧ್ಯತೆಯಿದೆ. ರಾಷ್ಟ್ರಪತಿ ಭವನದಿಂದ ಇಂಡಿಯಾಗೇಟ್ ವರೆಗೆ ಒಟ್ಟು ನಾಲ್ಕು ಕಿಮೀ ದೂರ ಹಾಗೂ ಮೂರು ಗಂಟೆಗಳ ಕಾಲ ಪರೇಡ್ ನಡೆಯಲಿದೆ.

    ವಿಶೇಷವಾಗಿ ಮಹಾತ್ಮ ಗಾಂಧೀಜಿ ಭೇಟಿ ಕೊಟ್ಟ ನೆನಪುಗಳನ್ನು ತೋರಿಸಲು 17 ರಾಜ್ಯಗಳು ಮತ್ತು 6 ಕೇಂದ್ರಾಡಳಿತ ಪ್ರದೇಶ ಗಾಂಧೀಜಿಗೆ ಸಂಬಂಧಿಸಿದ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲಿದೆ.

    ಪರೇಡ್ ವಿಶೇಷತೆಗಳು: ಭಾರತೀಯ ಸೇನೆಗೆ ಅವಳವಡಿಸಿಕೊಂಡಿರುವ ಅಮೇರಿಕಾದ ಎಂ777 ಎ2 ಆರ್ಟಿಲರಿ ಗನ್ ಈ ಬಾರಿ ಪರೇಡ್ ವಿಶೇಷ ಪ್ರದರ್ಶನವಾಗಿದೆ. ಅಲ್ಲದೇ ದಕ್ಷಿಣ ಕೊರಿಯಾದಿಂದ ಆಮದು ಮಾಡಿಕೊಂಡಿರುವ ಕೆ9 ವಜ್ರಾ ಆರ್ಟಿಲರಿ ಗನ್ ಕೂಡ ಪ್ರದರ್ಶನವಾಗಲಿದೆ. ಇದನ್ನು ಓದಿ: ಮೋದಿ ಜೊತೆ ಗಣರಾಜ್ಯೋತ್ಸವ ವೀಕ್ಷಿಸಲು ಬೆಂಗ್ಳೂರು ವಿದ್ಯಾರ್ಥಿನಿಗೆ ಬಂತು ಆಹ್ವಾನ

    ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆ ಸಿದ್ಧಪಡಿಸಿರುವ ಮಧ್ಯಮ ಶ್ರೇಣಿಯ ಏರ್ ಮಿಸೈಲ್, ಅರ್ಜುನಾ ಟ್ಯಾಂಕ್ ಗಳ ರಕ್ಷಣೆಗೆಂದು ನಿರ್ಮಾಣಗೊಂಡಿರುವ ಅರ್ಮರ್ಡ್ ರಿಕವರಿ ವೆಹಿಕಲ್ (ಶಸ್ತ್ರಸಜ್ಜಿತ ರಕ್ಷಣಾ ವಾಹನ) ಕೂಡಾ ಮೊದಲ ಬಾರಿಗೆ ಪ್ರದರ್ಶನ ಮಾಡಲಾಗುತ್ತಿದೆ. ಬಯೋ ಇಂಧನ ಸಾಮರ್ಥ್ಯದಿಂದ ಮೊದಲ ಬಾರಿಗೆ ಹಾರಾಟ ನಡೆಸಲಿರುವ ಎಎನ್ – 32 ವಿಮಾನ ಪರೇಡಿನ ಮತ್ತೊಂದು ವಿಶೇಷವಾಗಿದೆ.

    ನೇತಾಜಿ ಸುಭಾಸ್ ಚಂದ್ರಬೋಸ್ ಅವರ ಐಎನ್‍ಎ ದಳದಲ್ಲಿದ್ದ ನಾಲ್ವರು ಯೋಧರು ಇದೆ ಮೊದಲ ಬಾರಿಗೆ ಪರೇಡ್ ನಲ್ಲಿ ಭಾಗಿಯಾಗುತ್ತಿದ್ದು, ಭಾರತೀಯ ಸೇನೆಯ ಮೂರು ದಳಗಳಿಗಾಗಿ ಸಿದ್ಧಪಡಿಸಲಾಗಿರುವ ಶಂಖನಾದ ಹೆಸರಿನ ವಿಶೇಷ ಟ್ಯೂನ್ ಈ ವೇಳೆ ಬಳಕೆ ಮಾಡಲಾಗುತ್ತದೆ. ಮೊದಲ ಬಾರಿಗೆ ಮಹಿಳಾ ಶಕ್ತಿಯ ಪ್ರದರ್ಶನ ನಡೆಯಲಿದ್ದು, ಮೇಜರ್ ಕುಸುಬು ಕನ್ವಾಲ್ ನೇತೃತ್ವದಲ್ಲಿ ದೇಶದ ಅತಿ ಪುರಾತನ ಪ್ಯಾರಾಮಿಲಿಟರಿ ಫೋರ್ಸ್ ಅಸ್ಸಾಂ ರೈಫಲ್ಸ್ ಅನ್ನು ಮುನ್ನಡೆಸಲಿದ್ದಾರೆ. ಮೊದಲ ಬಾರಿಗೆ ಮಹಿಳಾ ಅಧಿಕಾರಿಯಾದ ಕ್ಯಾಪ್ಟನ್ ಶಿಖಾ ಸುರಭಿ ಅವರು ಸೇನೆಯ ಡೇರ್ ಡೇವಿಲ್ಸ್ ಮೋಟಾರ್ ಸೈಕಲ್ ತಂಡದಲ್ಲಿ ಪುರುಷ ಸದಸ್ಯರ ಜೊತೆ ಸೇರಿ ಪ್ರದರ್ಶನ ನೀಡಲಿದ್ದಾರೆ. ಇದನ್ನು ಓದಿ: ಪ್ರಧಾನಿ ಮೋದಿ ಆಹ್ವಾನ ಸ್ವೀಕರಿಸಿದ ದಕ್ಷಿಣ ಆಫ್ರಿಕಾ ಅಧ್ಯಕ್ಷ

    ಗಣರಾಜೋತ್ಸವದ ಮುಖ್ಯ ಅತಿಥಿಯಾಗಿ ದಕ್ಷಿಣಾ ಆಫ್ರಿಕಾ ಅಧ್ಯಕ್ಷ ಸೈರಿಲ್ ರಾಮ್ಪೂಸಾ ಆಗಮಿಸಲಿದ್ದು, ನಲ್ಸೇನ್ ಮಂಡೇಲಾ ಬಳಿಕ ದಕ್ಷಿಣ ಆಫ್ರಿಕಾದಿಂದ ಗಣರಾಜೋತ್ಸದಲ್ಲಿ ಭಾಗಿಯಾಗಿರುತ್ತಿರುವ ಎರಡನೇ ಅಧ್ಯಕ್ಷರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪೇಜಾವರ ಶ್ರೀಗಳ ಗುರುವಂದನೆ ಕಾರ್ಯಕ್ರಮ – ವಿಶ್ವೇಶತೀರ್ಥ ಸ್ವಾಮೀಜಿಗೆ ರಾಷ್ಟ್ರಪತಿ ದಂಪತಿ ಅಭಿನಂದನೆ

    ಪೇಜಾವರ ಶ್ರೀಗಳ ಗುರುವಂದನೆ ಕಾರ್ಯಕ್ರಮ – ವಿಶ್ವೇಶತೀರ್ಥ ಸ್ವಾಮೀಜಿಗೆ ರಾಷ್ಟ್ರಪತಿ ದಂಪತಿ ಅಭಿನಂದನೆ

    ಉಡುಪಿ: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ಗುರುವಂದನೆ ಕಾರ್ಯಕ್ರಮ ಹಿನ್ನೆಲೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉಡುಪಿಗೆ ಆಗಮಿಸಿದ್ದರು. ಸನ್ಯಾಸ ಸ್ವೀಕರಿಸಿ 80 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪೇಜಾವರ ಸ್ವಾಮಿಗಳನ್ನು ಗೌರವಿಸಿ, ಕೃಷ್ಣನ ದರ್ಶನ ಪಡೆದು ರಾಮಜಪ ಮಾಡಿದರು.

    ದೇಶದ ಹಿರಿಯ ಸಂತ ಪೇಜಾವರ ಶ್ರೀಗಳು ಸನ್ಯಾಸ ಸ್ವೀಕರಿಸಿ 80 ವರ್ಷಗಳು ತುಂಬಿವೆ. ಈ ಹಿನ್ನೆಲೆಯಲ್ಲಿ ಉಡುಪಿಯ ಕೃಷ್ಣನ ಅಂಗಳದಲ್ಲಿ ಯತಿಶ್ರೇಷ್ಠ ಪೇಜಾವರ ಶ್ರೀ ಪಾದರಿಗೆ ಗುರುವಂದನೆ ಕಾರ್ಯಕ್ರಮ ಆಯೋಜನೆಯಾಗಿತ್ತು. ಪೇಜಾವರ ಶ್ರೀಗಳ ನೆಚ್ಚಿನ ಶಿಷ್ಯೆ ಸಾದ್ವಿ ಉಮಾ ಭಾರತಿ ಆಶಯದಂತೆ ಗುರುವಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ದೇಶದ ಪ್ರಥಮ ಪ್ರಜೆ ಇವತ್ತು ಕೃಷ್ಣನಗರಿಗೆ ಆಗಮಿಸಿದ್ದರು.

    ಪೇಜಾವರ ಮಠಕ್ಕೆ ಆಗಮಿಸಿದ ರಾಷ್ಟ್ರಪತಿಗಳು, ಸ್ವಾಮೀಜಿಗೆ ಶಾಲು ಹೊದಿಸಿ ಗೌರವ ಸಲ್ಲಿಸಿದರು. ಇದೇ ವೇಳೆ ಮಠದ ವತಿಯಿಂದಲೂ ರಾಷ್ಟ್ರಪತಿಗಳಿಗೆ ಯಕ್ಷ ಕಿರೀಟ ತೊಡಿಸಿ ಸನ್ಮಾನ ಮಾಡಲಾಯಿತು. ಈ ವೇಳೆ ಮಾತನಾಡಿದ ರಾಷ್ಟ್ರಪತಿಗಳು, ಶ್ರೀರಾಮ ಈ ದೇಶದ ಮರ್ಯಾದಾ ಪುರುಷೋತ್ತಮ. ರಾಮನ ಜೀವನಾದರ್ಶ ನಮಗೆಲ್ಲಾ ಮಾದರಿ. ರಾಮ ರಾಜ್ಯವೇ ಆದರ್ಶ ರಾಜ್ಯ. ರಾಮನ ಆದರ್ಶ ಪಾಲಿಸಿದರೆ ದೇಶ ಸುಖಿಯಾಗಿರುತ್ತದೆ ಎಂದರು.

    ಗುರುವಂದನೆ ಕಾರ್ಯಕ್ರಮವನ್ನು ಆಯೋಜಿಸಿದ್ದ, ಪೇಜಾವರ ಸ್ವಾಮಿಗಳ ಶಿಷ್ಯೆ, ಕೇಂದ್ರ ಸಚಿವೆ ಉಮಾಭಾರತಿ ಅವರು ಸಂಸತ್ತಿನಲ್ಲಿ ವಿಪ್ ಜಾರಿಯಾದ ಕಾರಣ ಇಂದಿನ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಉಳಿದಂತೆ ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ ಮತ್ತು ನಾಗಾಲ್ಯಾಂಡ್ ರಾಜ್ಯಪಾಲ ಉಡುಪಿ ಮೂಲದ ಪಿ.ಬಿ ಆಚಾರ್ಯ ಅವರು ರಾಷ್ಟ್ರಪತಿಗಳಿಗೆ ಸಾಥ್ ನೀಡಿದರು.

    ಕಾರ್ಯಕ್ರಮದ ಬಳಿಕ ಕೆಲ ಸಮಯ ಪೇಜಾವರ ಶ್ರೀಗಳ ಜೊತೆ ಸಮಾಲೋಚನೆ ನಡೆಸಿದ ರಾಷ್ಟ್ರಪತಿಗಳು ಕೃಷ್ಣಮಠಕ್ಕೆ ಭೇಟಿ ನೀಡಿ, ಅಷ್ಠಮಠಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಪೇಜಾವರ ಶ್ರೀಗಳು ರಾಷ್ಟ್ರಪತಿಗಳನ್ನು ಗೌರವಿಸಿ, ಅವರಿಗೆ ಶ್ರೀಕೃಷ್ಣ ಸಹಿತ ಬೆಳ್ಳಿ ಪ್ರಭಾವಳಿ ನೀಡಿ ಗೌರವಿಸಿದರು. ಈ ವೇಳೆ ಪೇಜಾವರ ಕಿರಿಯ ಶ್ರೀಗಳು, ಪರ್ಯಾಯ ಶ್ರೀಗಳು ಉಪಸ್ಥಿತರಿದ್ದರು. ಪಾಜಕ ಕ್ಷೇತ್ರದಲ್ಲಿ ಮಧ್ವ ಯುನಿವರ್ಸಿಟಿ ಸ್ಥಾಪನೆಗೆ ಸಹಕಾರ ಮತ್ತು ಮಧ್ವ ದಿನಾಚರಣೆ ಪ್ರಾರಂಭಿಸುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದೇನೆ ಎಂದು ಪೇಜಾವರ ಶ್ರೀಗಳು ತಿಳಿಸಿದರು.

    ಈ ಮೊದಲು ಮಠದ ಆವರಣದಲ್ಲಿ ಸಾರ್ವಜನಿಕ ಸಭೆ ನಡೆಸುವ ಯೋಚನೆ ಇತ್ತು. ಆದರೆ ಭದ್ರತೆಯ ಕಾರಣಕ್ಕಾಗಿ ಉಡುಪಿಯಲ್ಲಿ ಸಾರ್ವಜನಿಕ ಸಭೆ ನಡೆಸಲು ಅವಕಾಶ ನೀಡಿಲ್ಲ. ಉಮಾ ಭಾರತಿ ನೇತೃತ್ವದಲ್ಲಿ ನಡೆಯಬೇಕಿದ್ದ ಸಾರ್ವಜನಿಕ ಗುರುವಂದನೆಯನ್ನು ಮುಂದಿನ ದಿನಗಳಲ್ಲಿ ಬೆಂಗಳೂರು ಅಥವಾ ನವದೆಹಲಿಯಲ್ಲಿ ಆಯೋಜಿಸುವ ಚಿಂತನೆ ನಡೆದಿದೆ. ರಾಷ್ಟ್ರಪತಿ ಆಗಮನದ ಹಿನ್ನೆಲೆಯಲ್ಲಿ ಕೃಷ್ಣಮಠದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ನಿರ್ಭಂದ ವಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಳಗಾವಿಯನ್ನು ಹಾಡಿ ಹೊಗಳಿದ ರಾಷ್ಟ್ರಪತಿ ಕೋವಿಂದ್

    ಬೆಳಗಾವಿಯನ್ನು ಹಾಡಿ ಹೊಗಳಿದ ರಾಷ್ಟ್ರಪತಿ ಕೋವಿಂದ್

    ಬೆಳಗಾವಿ: 1892ರಲ್ಲಿ ಸ್ವಾಮಿ ವಿವೇಕಾನಂದರು ಬೆಳಗಾವಿಗೆ ಭೇಟಿ ನೀಡಿದ್ದರು. ಅವರ ಪ್ರಭಾವ ಈ ನೆಲದಲ್ಲಿ ಇಂದಿಗೂ ಇದೆ. ಲೋಕಮಾನ್ಯ ಬಾಲಗಂಗಾಧರ್ ತಿಲಕ್ ಪ್ರಾರಂಭಿಸಿದ್ದ ಗಣೇಶ ಹಬ್ಬದ ಸಂಸ್ಕೃತಿ ಹಾಗೂ ಪಾವಿತ್ರತೆಯನ್ನ ಜಿಲ್ಲೆಯ ಜನತೆ ಕಾಪಾಡಿಕೊಂಡು ಬಂದಿದ್ದಾರೆ ಎಂದು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಹೇಳಿದ್ದಾರೆ.

    ನಗರದಲ್ಲಿ ನಡೆದ ಕರ್ನಾಟಕ ಲಾ ಸೂಸೈಟಿಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಳಗಾವಿಗೆ ಇದು ನನ್ನ ಮೊದಲ ಭೇಟಿ. ಜಿಲ್ಲೆಯು ಶೈಕ್ಷಣಿಕ ಹಾಗೂ ಔದ್ಯೋಗಿಕವಾಗಿ ಸಾಕಷ್ಟು ಹೆಸರು ಮಾಡಿದ್ದು, ದೇಶದಲ್ಲಿ ತನ್ನದೇ ಛಾಪು ಮೂಡಿಸಿದೆ. ಬೆಳಗಾವಿಯು ಲೋಹ ಹಾಗೂ ಲಸಿಕೆ ತಯಾರಿಕೆಯಲ್ಲಿ ಇತಿಹಾಸ ಬರೆದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ವಕೀಲಿಕೆ ಕೇವಲ ವೃತ್ತಿಯಾಗದೇ ಪ್ಯಾಷನ್ ಆಗಬೇಕು. ಈ ನಿಟ್ಟಿನಲ್ಲಿ ರಾಜಾ ಲಖಮಗೌಡ ಕಾಲೇಜ್ ಉತ್ತಮ ಕಾರ್ಯ ನಿರ್ವಹಿಸುತ್ತಿದೆ. ರಾಜಾ ಲಖಮಗೌಡ ಅವರ ತ್ಯಾಗವು ಇಂದು ದೊಡ್ಡ ಕಾನೂನು ಸೊಸೈಟಿಯಾಗಿ ಬೆಳೆಯುವಂತೆ ಮಾಡಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಮಹಾತ್ಮಾ ಗಾಂಧಿ, ಡಾ. ಬಿ.ಆರ್.ಅಂಬೇಡ್ಕರ್ ವಕೀಲರಾಗಿ ಸೇವೆ ಸಲ್ಲಿಸಿದ್ದರು ಎಂದರು.

    ದೇಶದಲ್ಲಿ ಯುವ ಕ್ರಾಂತಿ ಆಗುತ್ತಿದ್ದು, ಅದರ ಲಾಭ ದೇಶಕ್ಕೆ ಸದ್ಯಕ್ಕೆ ಆಗದಿದ್ದರೂ ಮುಂದಿನ ದಿನದಲ್ಲಿ ಫಲ ಸಿಗಲಿದೆ. ದೇಶದ ಜನತೆ ಸರಿಯಾದ ದಾರಿಯಲ್ಲಿ ನಡೆಯಬೇಕಾದರೆ ನ್ಯಾಯಮೂರ್ತಿಗಳ ಪಾತ್ರ ಮಹತ್ವದ್ದಾಗಿದೆ. ಕೆಲವೇ ದಿನಗಳಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ನಿವೃತ್ತಿ ಹೊಂದಲಿದ್ದಾರೆ ಎಂದ ಅವರು, ದೀಪಕ್ ಮಿಶ್ರಾ ಅವರಿಗೆ ಅಭಿನಂದನೆ ಸಲ್ಲಿಸಿದರು.

    ಮುಖ್ಯಮಂತ್ರಿ ಕುಮಾರಸ್ವಾಮಿ ಮಾತನಾಡಿ, ನನಗೂ ಮತ್ತು ಬೆಳಗಾವಿಗೂ ಅವಿನಾಭಾವ ಸಂಬಂಧವಿದೆ. ಜಿಲ್ಲೆಗೆ ಸುವರ್ಣ ಸೌಧ ಕೊಟ್ಟಿರುವುದು ನಮ್ಮ ಸರ್ಕಾರ. ಅಷ್ಟೇ ಅಲ್ಲದೇ ಬೆಳಗಾವಿ ಜಿಲ್ಲೆಯ ಗ್ರಾಮದಿಂದ ನಾನು ಗ್ರಾಮ ವಾಸ್ತವ್ಯವನ್ನು ಆರಂಭ ಮಾಡಿದ್ದೆ ಎಂದು ತಿಳಿಸಿದರು. ಬೆಳಗಾವಿಯು ದೇಶ ಮತ್ತು ರಾಜ್ಯಕ್ಕೆ ಮಹಾನ್ ವ್ಯಕ್ತಿಗಳನ್ನು ಕೊಡುಗೆ ನೀಡಿದೆ. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಈ ನಾಡಿನ ಮಹಾನ್ ವ್ಯಕ್ತಿಗಳು ಎಂದರು.

    ಹಳೇ ತಲೆಮಾರಿನವರು ಯುವಕರನ್ನು ಕಡೆಗಣನೆ ಮಾಡಬಾರದು. ಪ್ರತಿದಿನ 10 ಯುವಕರ ಜತೆ ಮಾತನಾಡಿದರೆ ಬೌದ್ಧಿಕ ಹಾಗೂ ಶಾರೀರಿಕವಾಗಿ ಬಲಗೊಳ್ಳುತ್ತೇವೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೋಟೆಯಲ್ಲಿ ಮೃತಪಟ್ಟ ಟಿಪ್ಪುವಿನ ಮರಣ ವೀರಮರಣ ಹೇಗೆ ಆಗುತ್ತೆ: ರಾಷ್ಟ್ರಪತಿಗಳಿಗೆ ಪ್ರತಾಪ್ ಸಿಂಹ ಪ್ರಶ್ನೆ

    ಕೋಟೆಯಲ್ಲಿ ಮೃತಪಟ್ಟ ಟಿಪ್ಪುವಿನ ಮರಣ ವೀರಮರಣ ಹೇಗೆ ಆಗುತ್ತೆ: ರಾಷ್ಟ್ರಪತಿಗಳಿಗೆ ಪ್ರತಾಪ್ ಸಿಂಹ ಪ್ರಶ್ನೆ

    ಬೆಂಗಳೂರು: ಕೋಟೆಯಲ್ಲಿ ಮೃತಪಟ್ಟ ಟಿಪ್ಪುವಿನ ಮರಣ, ವೀರಮರಣ ಹೇಗೆ ಆಗುತ್ತದೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪ್ರಶ್ನೆ ಮಾಡಿದ್ದಾರೆ.

    ರಾಜ್ಯ ವಿಧಾನಸಭೆ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಟಿಪ್ಪುವನ್ನು ಹೊಗಳಿ ರಾಷ್ಟ್ರಪತಿಗಳು ಭಾಷಣ ಮಾಡಿದ ವಿಚಾರದ ಬಗ್ಗೆ ಪ್ರಶ್ನೆ ಎತ್ತಿ ಪ್ರತಾಪ್ ಸಿಂಹ ಅವರು ಎರಡು ಟ್ವೀಟ್ ಮಾಡಿದ್ದಾರೆ.

    ಟಿಪ್ಪು ಯುದ್ಧ ಭೂಮಿಯಲ್ಲಿ ಹೋರಾಟ ಮಾಡುತ್ತಾ ಮರಣ ಹೊಂದಿಲ್ಲ. ಕೋಟೆಯಲ್ಲಿ ಮರಣ ಹೊಂದಿದ್ದಾನೆ. ಕೋಟೆಯಲ್ಲಿ ಮರಣ ಹೊಂದಿದರೆ ಅದು ಹೇಗೆ ವೀರ ಮರಣವಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.

    ಒಂದು ವೇಳೆ ಟಿಪ್ಪು ಕ್ಷಿಪಣಿಯ ಜನಕನಾಗಿದ್ದರೆ ಬ್ರಿಟಿಷರ ವಿರುದ್ಧ ಕ್ಷಿಪಣಿಯನ್ನು ಪ್ರಯೋಗಿಸಬಹುದಿತ್ತು. ಆದರೆ 3ನೇ ಮತ್ತು 4ನೇ ಆಂಗ್ಲೋ ಮೈಸೂರು ಯುದ್ಧದಲ್ಲಿ ಸೋತಿದ್ದು ಯಾಕೆ? ಕ್ಷಿಪಣಿಯನ್ನು ಬ್ರಿಟಿಷರ ವಿರುದ್ಧ ಪ್ರಯೋಗಿಸದ್ದು ಯಾಕೆ ಎಂದು ಪ್ರಶ್ನಿಸಿ ಮತ್ತೊಂದು ಟ್ವೀಟ್ ಮಾಡಿದ್ದಾರೆ.

    ಇಂದು ವಿಧಾನಸೌಧದ ವಜ್ರ ಮಹೋತ್ಸವ ಕಾರ್ಯಕ್ರಮದ ವಿಶೇಷ ಅಧಿವೇಶನದಲ್ಲಿ ಭಾಷಣ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಟಿಪ್ಪು ಸುಲ್ತಾನ್ ಬಗ್ಗೆ ಗುಣಗಾನ ಮಾಡಿದ್ದರು. ಅಲ್ಲದೇ ಟಿಪ್ಪು ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ವೀರಮರಣವನ್ನಪ್ಪಿದ. ಭಾರತದ ಮೊದಲ ಕ್ಷಿಪಣಿ ಜನಕ ಎಂದು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು. ಟಿಪ್ಪು ಕ್ಷಿಪಣಿ ತಂತ್ರಜ್ಞಾನದ ಜನಕ ಎಂದು ಹಾಡಿಹೊಗಳುವ ವೇಳೆ ಕಾಂಗ್ರೆಸ್ ಶಾಸಕರು ಮೇಜುಕುಟ್ಟಿ ಸ್ವಾಗತಿಸಿದರೆ, ಬಿಜೆಪಿ ಶಾಸಕರು ಮಾತ್ರ ಸುಮ್ಮನೆ ಕುಳಿತಿದ್ದರು.

  • ರಾಷ್ಟ್ರಪತಿಗಳ ಭಾಷಣದಲ್ಲಿ ಟಿಪ್ಪುಗೆ ಬಹುಪರಾಖ್ – ಬಿಜೆಪಿಗೆ ಮುಜುಗರ, ಕೈ ಸಂಭ್ರಮ!

    ರಾಷ್ಟ್ರಪತಿಗಳ ಭಾಷಣದಲ್ಲಿ ಟಿಪ್ಪುಗೆ ಬಹುಪರಾಖ್ – ಬಿಜೆಪಿಗೆ ಮುಜುಗರ, ಕೈ ಸಂಭ್ರಮ!

    ಬೆಂಗಳೂರು: ವಿಧಾನಸೌಧದ ವಜ್ರಮಹೋತ್ಸವದ ಭಾಷಣ ಕಾಂಗ್ರೆಸ್ ಸಂಭ್ರಮಕ್ಕೆ ಕಾರಣವಾದರೆ, ಬಿಜೆಪಿಯವರ ತೀವ್ರ ಮುಜುಗರಕ್ಕೆ ಕಾರಣವಾಯ್ತು. ಮೊದಲ ಬಾರಿಗೆ ವಿಶೇಷ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಬ್ರಿಟಿಷರ ವಿರುದ್ಧ ಹೋರಾಡಿ ಟಿಪ್ಪು ಸುಲ್ತಾನ್ ವೀರ ಮರಣವನ್ನಪ್ಪಿದ ಎಂದು ರಾಷ್ಟ್ರಪತಿ ಭಾಷಣದಲ್ಲಿ ಉಲ್ಲೇಖಿಸಿದರು. ಭಾಷಣದಲ್ಲಿ ಟಿಪ್ಪುಸುಲ್ತಾನ್ ಬಗ್ಗೆ ಉಲ್ಲೇಖಿಸಿದ ರಾಷ್ಟ್ರಪತಿಗಳು, ಟಿಪ್ಪು ಕ್ಷಿಪಣಿ ತಂತ್ರಜ್ಞಾನದ ಜನಕ ಎಂದು ಹಾಡಿಹೊಗಳಿದರು. ಇದಕ್ಕೆ ಕಾಂಗ್ರೆಸ್ ಶಾಸಕರು ಮೇಜುಕುಟ್ಟಿ ಸ್ವಾಗತಿಸಿದರೆ, ಬಿಜೆಪಿ ಶಾಸಕರು ಮಾತ್ರ ಸುಮ್ಮನೆ ಕುಳಿತಿದ್ದರು.

    ಇವತ್ತು ಅವಿಸ್ಮರಣೀಯ ದಿನ. ಭಾರತ ಪ್ರಜಾಪ್ರಭುತ್ವದಲ್ಲಿ ಮರೆಯಲಾಗದ ದಿನ. ವಜ್ರಮಹೋತ್ಸವದಲ್ಲಿ ಭಾಗವಹಿಸಿರುವ ನನಗೂ ಅವಿಸ್ಮರಣೀಯ ದಿನ. ಪಾರ್ಲಿಮೆಂಟ್ರಿ ಡೆಮಾಕ್ರಸಿ ಇತಿಹಾಸದಲ್ಲಿ ಇದೊಂದು ಮಹತ್ವದ ದಿನ. 14ನೇ ರಾಷ್ಟ್ರಪತಿಯಾಗಿ ಇಂಥಹ ಮಹತ್ವದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇನೆ. ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಕರ್ನಾಟಕಕ್ಕೆ ಇದು ನನ್ನ ಮೊದಲ ಭೇಟಿ ಎಂದರು.

    ಇದೇ ವೇಳೆ ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಉಲ್ಲೇಖಿಸಿದರು. ನಿಜಲಿಂಗಪ್ಪ, ದೇವರಾಜ ಅರಸ್, ರಾಮಕೃಷ್ಣ ಹೆಗಡೆ ಹೆಸರು ಉಲ್ಲೇಖಿಸಿದರು. ಆಗ ವೈಎಸ್‍ವಿ ದತ್ತಾ, ದೇವೇಗೌಡರು ಎಂದರು. ಇದಕ್ಕೆ ಕೋವಿಂದ್, ಹೌದು ದೇವೇಗೌಡರು ನನ್ನ ಸ್ನೇಹಿತ, ನಾನು ಹೇಳಲು ಬಯಸುತ್ತಿದ್ದೆ ಎಂದರು. ಆಗ ಕೆಲವರು ಬಂಗಾರಪ್ಪ ಎಂದರು. ಇದಕ್ಕೆ ರಾಷ್ಟ್ರಪತಿಗಳು, ಫ್ರೆಂಡ್ಸ್ ನಾನು ಕೆಲವರ ಹೆಸರನ್ನು ಮಾತ್ರ ಹೇಳುತ್ತಿದ್ದೇನೆ ಎಂದರು. 15 ನಿಮಿಷಗಳಲ್ಲಿ ರಾಷ್ಟ್ರಪತಿ ಭಾಷಣ ಅಂತ್ಯಗೊಳಿಸಿದರು.