Tag: president

  • ರಾಷ್ಟ್ರಪತಿಗಳಿಗೆ  ಅಗೌರವ ತೋರುವುದು ಸಿಎಂಗೆ ಶೋಭೆ ತರಲ್ಲ:  ಭೋಜೇಗೌಡ

    ರಾಷ್ಟ್ರಪತಿಗಳಿಗೆ  ಅಗೌರವ ತೋರುವುದು ಸಿಎಂಗೆ ಶೋಭೆ ತರಲ್ಲ:  ಭೋಜೇಗೌಡ

    ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ (president) ಬಗ್ಗೆ ಏಕವಚನದಲ್ಲಿ ಮಾತನಾಡುವುದು ಸರಿಯಲ್ಲ ಎಂದು ಎಂಎಲ್‌ಸಿ ಭೋಜೇಗೌಡ (BojeGowda) ಹೇಳಿದ್ದಾರೆ.

    ಚಿತ್ರದುರ್ಗದಲ್ಲಿ (Chitradurga) ನಡೆದ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ರಾಷ್ಟ್ರಪತಿಗಳ ಕುರಿತು ಸಿದ್ದರಾಮಯ್ಯನವರು (Siddaramaiah) ಏಕವಚನದಲ್ಲಿ ಮಾತನಾಡಿದ ವಿಚಾರ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,  ರಾಷ್ಟ್ರಪತಿಗಳ ಬಗ್ಗೆ ಏಕವಚನದಲ್ಲಿ ಮಾತಾಡುವುದು ಸರಿಯಲ್ಲ. ರಾಷ್ಟ್ರಪತಿ ಅವರು ದೇಶದ ಪ್ರಥಮ ಪ್ರಜೆ. ಮುಖ್ಯಮಂತ್ರಿಯಾಗಿ ಈ ರೀತಿ ಅಗೌರವ ತೋರುವುದು ಸರಿಯಲ್ಲ. ಅವರಿಗೆ ಇದು ಶೋಭೆ ತರುವುದಿಲ್ಲ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗೌರವ ಕೊಡಬೇಕು ಎಂದು ತಿಳಿ ಹೇಳಿದ್ದಾರೆ. ಇದನ್ನೂ ಓದಿ: ಶೋಷಿತರ ಸಮಾವೇಶದಲ್ಲಿ ಕ್ಷಿಂಟಾಲ್‌ಗಟ್ಟಲೇ ಚಿಕನ್ ಬಿರಿಯಾನಿ ನೆಲದ ಪಾಲು

    ಕೆರಗೋಡು ಹನುಮ ಧ್ವಜ ವಿಚಾರ ಬಗ್ಗೆ ಪ್ರತಿಕ್ರಿಯಿಸಿ, ಈ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ರಾಮ ಮಂದಿರ ವಿಚಾರದಲ್ಲೂ ಕಾಂಗ್ರೆಸ್ ರಾಜಕೀಯ ಮಾಡಿದೆ. ವಿನಾಕಾರಣ ಬಿಜೆಪಿಯ ಮೇಲೆ ಆರೋಪ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ವಿಜಯಪುರದಲ್ಲಿ ಎರಡು ಬಾರಿ ಭೂಕಂಪನ – ಆತಂಕದಲ್ಲಿ ಜನರು

     ಸುಮಲತಾ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಪ್ರತಿಕ್ರಿಯಿಸಿ, ಸುಮಲತಾ ಬಿಜೆಪಿಗೆ ಸೇರಿದರೆ ಮಂಡ್ಯ ಕ್ಷೇತ್ರದ ಬಗ್ಗೆ ಪ್ರಶ್ನೆ ಬರಲ್ಲ. ಜೆಡಿಎಸ್ ಬಹುಶಃ ನಾಲ್ಕು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೆ. ನಾನು ಪರಿಷತ್ ಚುನಾವಣೆಗೆ ಆಕಾಂಕ್ಷಿ ಆಗಿದ್ದು ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ ಎಂದಿದ್ದಾರೆ. ಜೊತೆಗೆ ಮಂಡ್ಯ ಲೋಕಸಭಾ ಮೈತ್ರಿ ವಿಚಾರದ ಬಗ್ಗೆ ಮಂಡ್ಯ ಲೋಕಸಭಾ ಸ್ಪರ್ಧೆ ಬಗ್ಗೆ ಇನ್ನು ಚರ್ಚೆ ಆಗಿದ್ದು, ಅಂತಿಮ ಆಗಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗಣರಾಜ್ಯೋತ್ಸವ ನೃತ್ಯದಲ್ಲಿ ಕಮಲದ ಹೂವನ್ನು ಎದ್ದು ಕಾಣುವಂತೆ ತೋರಿಸಿದ್ದರು – ಶಿವಲಿಂಗೇಗೌಡ

  • ಕರ್ನಾಟಕ ಫಿಲ್ಮ್ ಚೇಂಬರ್ ಚುನಾವಣೆ : ಮತದಾನ ಪ್ರಾರಂಭ

    ಕರ್ನಾಟಕ ಫಿಲ್ಮ್ ಚೇಂಬರ್ ಚುನಾವಣೆ : ಮತದಾನ ಪ್ರಾರಂಭ

    ರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Film Chamber) ಚುನಾವಣೆ (Election) ಪ್ರಕ್ರಿಯೆ ಶುರುವಾಗಿದೆ. ಬೆಳಗ್ಗೆಯಿಂದ 65ನೇ ವಾರ್ಷಿಕ ಸಭೆ ಆರಂಭವಾಯಿತು. ಹಲವಾರು ಚರ್ಚೆಗಳನ್ನು ಈ ಸಂದರ್ಭದಲ್ಲಿ ಮಾಡಲಾಯಿತು. ನಂತರ ಮಧ್ಯಾಹ್ನ 2 ಗಂಟೆ ಮತದಾನ ಪ್ರಕ್ರಿಯೆ ನಡೆದಿದ್ದು ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಇಂದೇ ರಾತ್ರಿ ಫಲಿತಾಂಶ ಹೊರ ಬೀಳಲಿದೆ.

    ಈ ಬಾರಿ ಅಧ್ಯಕ್ಷ (President) ಸ್ಥಾನಕ್ಕೆ ನಾಲ್ವರ ಮಧ್ಯ ತೀವ್ರ ಸ್ಪರ್ಧೆ ನಡೆದಿದ್ದು ಶಿಲ್ಪಾ ಶ್ರೀನಿವಾಸ್, ಮಾರ್ಸ್ ಸುರೇಶ್, ಎಂ.ಎನ್. ಸುರೇಶ್ ಮತ್ತು ಎ.ಗಣೇಶ್ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸಿದ್ದಾರೆ. ನಾಲ್ಕು ಬಣಗಳ ನಡುವೆ ತುರುಸಿನ ಮತದಾನ ನಡೆಯುತ್ತಿದೆ. ಇಂದು ರಾತ್ರಿ ವಿಜಯ ಮಾಲೆ ಯಾರ ಕೊರಳಿಗೆ ಬೀಳಲಿದೆ ಎಂದು ಕಾದು ನೋಡಬೇಕು.

     

    ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಹಲವು ಸ್ಥಾನಗಳಿಗೂ ಇಂದು ಚುನಾವಣೆ ನಡೆದಿದೆ. ಕರ್ನಾಟಕ ಚಲಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರು ಇಂದು ಇವರುಗಳನ್ನು ಮತದಾನ ಮಾಡುವ ಮೂಲಕ ಆಯ್ಕೆ ಮಾಡಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಂಗಾಪುರದ ಅಧ್ಯಕ್ಷರಾಗಿ ಭಾರತೀಯ ಮೂಲದ ಥರ್ಮನ್ ಷಣ್ಮುಗರತ್ನಂ ಪ್ರಮಾಣ ವಚನ

    ಸಿಂಗಾಪುರದ ಅಧ್ಯಕ್ಷರಾಗಿ ಭಾರತೀಯ ಮೂಲದ ಥರ್ಮನ್ ಷಣ್ಮುಗರತ್ನಂ ಪ್ರಮಾಣ ವಚನ

    ಸಿಂಗಾಪುರ: ಇಲ್ಲಿನ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ 66 ವರ್ಷದ ಥರ್ಮನ್ ಷಣ್ಮುಗರತ್ನಂ (Tharman Shanmugaratnam) ಅವರು ಇಂದು (ಗುರುವಾರ) ಪ್ರಮಾಣವಚನ ಸ್ವೀಕರಿಸಿದರು.

    ಸಿಂಗಾಪುರದ ಅರ್ಥಶಾಸ್ತ್ರಜ್ಞರಾಗಿರುವ ಇವರು ಸಿಂಗಾಪುರದ (Singapore President) 9ನೇ ಅಧ್ಯಕ್ಷರಾಗಿ ಆಯ್ಕೆಯಾದರು. ಸಿಂಗಾಪುರದ ಅಧ್ಯಕ್ಷರ ಅಧಿಕೃತ ನಿವಾಸದಲ್ಲಿ ನಡೆದ ಸಮಾರಂಭದಲ್ಲಿ ಭಾರತೀಯ ಮೂಲದ ಮುಖ್ಯ ನ್ಯಾಯಮೂರ್ತಿ ಸುಂದರೇಶ್ ಮೆನನ್ ಅವರು ಥರ್ಮನ್‌ ಅವರಿಗೆ ಪ್ರಮಾಣ ವಚನ ಬೋಧಿಸಿದರು.

    ಥರ್ಮನ್ ಅವರು ಆರು ವರ್ಷಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ. ಸಮಾರಂಭದಲ್ಲಿ ಪ್ರಧಾನಿ ಲೀ ಸೈನ್ ಲೂಂಗ್, ಸಂಪುಟ ಸದಸ್ಯರು, ಸಂಸದರು, ಉನ್ನತ ಅಧಿಕಾರಿಗಳು ಮತ್ತು ರಾಜತಾಂತ್ರಿಕ ಸದಸ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ: INDIA ಒಕ್ಕೂಟವು ಸನಾತನ ಧರ್ಮವನ್ನು ನಾಶ ಮಾಡಲು ಬಯಸಿದೆ: ಮೋದಿ ವಾಗ್ದಾಳಿ

    ಪ್ರಧಾನಿ ನರೇಂದ್ರ ಮೋದಿ ಅವರು ಥರ್ಮನ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಅಲ್ಲದೆ ಭಾರತ ಹಾಗೂ ಸಿಂಗಾಪುರ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ಷಣ್ಮುಗರತ್ನಂ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

    ಕಳೆದ ಶುಕ್ರವಾರ ನಡೆದ ಸಿಂಗಾಪುರ ಅಧ್ಯಕ್ಷೀಯ ಚುನಾವಣೆಯಲ್ಲಿ ಷಣ್ಮುಗರತ್ನಂ ಅವರು ಚೀನಾ ಮೂಲದ ಇಬ್ಬರು ಪ್ರತಿಸ್ಪರ್ಧಿಗಳನ್ನು ಸೋಲಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಂಗಾಪುರ ಅಧ್ಯಕ್ಷರಾಗಿ ಆಯ್ಕೆಯಾದ ಭಾರತೀಯ ಮೂಲದ ಷಣ್ಮುಗರತ್ನಂಗೆ ಮೋದಿ ಅಭಿನಂದನೆ – ಯಾರಿವರು?

    ಸಿಂಗಾಪುರ ಅಧ್ಯಕ್ಷರಾಗಿ ಆಯ್ಕೆಯಾದ ಭಾರತೀಯ ಮೂಲದ ಷಣ್ಮುಗರತ್ನಂಗೆ ಮೋದಿ ಅಭಿನಂದನೆ – ಯಾರಿವರು?

    ಸಿಂಗಾಪುರ: ಸಿಂಗಾಪುರದ (Singapore) ನೂತನ ಅಧ್ಯಕ್ಷರಾಗಿ (President) ಆಯ್ಕೆಯಾಗಿರುವ ಭಾರತೀಯ ಮೂಲದ ಥರ್ಮನ್ ಷಣ್ಮುಗರತ್ನಂ (Tharman Shanmugaratnam) ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಮೋದಿ, ಅಧ್ಯಕ್ಷರಾಗಿ ಆಯ್ಕೆಯಾದ ನಿಮಗೆ ಅಭಿನಂದನೆಗಳು. ಭಾರತ ಹಾಗೂ ಸಿಂಗಾಪುರ ನಡುವಿನ ಕಾರ್ಯತಂತ್ರ ಪಾಲುದಾರಿಕೆಯನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನಿಮ್ಮೊಂದಿಗೆ ಕಾರ್ಯನಿರ್ವಹಿಸಲು ಬಯಸುತ್ತೇವೆ ಎಂದಿದ್ದಾರೆ.

    ಶುಕ್ರವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಥರ್ಮನ್ ಷಣ್ಮುಗರತ್ನಂ ಭರ್ಜರಿ ಗೆಲುವು ಸಾಧಿಸಿ ಸಿಂಗಾಪುರದ 9ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

    ಷಣ್ಮುಗರತ್ನಂ ಯಾರು?
    ತಮಿಳುನಾಡು ಮೂಲದ ತಂದೆ ಹಾಗೂ ಚೀನಾ ಮೂಲದ ತಾಯಿಗೆ ಥರ್ಮನ್ ಷಣ್ಮುಗರತ್ನಂ 1957ರ ಫೆಬ್ರವರಿ 25ರಂದು ಸಿಂಗಾಪುರದಲ್ಲಿ ಜನಿಸಿದರು. ಅವರ ತಂದೆ ಕನಕರತ್ನಂ ಷಣ್ಮುಗರತ್ನಂ ಅವರು ಹೆಸರಾಂತ ರೋಗಶಾಸ್ತ್ರಜ್ಞ ಹಾಗೂ ಕ್ಯಾನ್ಸರ್ ಸಂಶೋಧಕರು. ತಾಯಿ ಗೃಹಿಣಿಯಾಗಿದ್ದರು.

    ಥರ್ಮನ್ ಅವರು ಆಂಗ್ಲೋ-ಚೈನೀಸ್ ಶಾಲೆಯಲ್ಲಿ ವ್ಯಾಸಂಗ ಮಾಡಿ, ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಅರ್ಥಶಾಸ್ತ್ರದಲ್ಲಿ ಬ್ಯಾಚುಲರ್ ಆಫ್ ಸೈನ್ಸ್ ಪದವಿಯನ್ನು ಪಡೆದಿದ್ದಾರೆ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ವುಲ್ಫ್‌ಸನ್ ಕಾಲೇಜಿನಲ್ಲಿ ಅರ್ಥಶಾಸ್ತ್ರದಲ್ಲಿ ಮಾಸ್ಟರ್ ಆಫ್ ಫಿಲಾಸಫಿ ಪದವಿಯನ್ನು ಪೂರ್ಣಗೊಳಿಸಿದರು. ಇದನ್ನೂ ಓದಿ: ಹೆಚ್‌ಡಿಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ – ಅಭಿಮಾನಿಯಿಂದ ಕುಂಕುಮ ಅಕ್ಷತೆ ಸ್ವೀಕರಿಸಿದ ಮಾಜಿ ಸಿಎಂ

    ನಂತರ ಅವರು ಹಾರ್ವರ್ಡ್ ವಿಶ್ವವಿದ್ಯಾನಿಲಯದ ಹಾರ್ವರ್ಡ್ ಕೆನಡಿ ಶಾಲೆಯಲ್ಲಿ ಮಾಸ್ಟರ್ ಇನ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಪದವಿಯನ್ನು ಪೂರ್ಣಗೊಳಿಸಿದರು. ಶಾಲಾ ಜೀವನದಲ್ಲಿ ಅವರು ಸಕ್ರಿಯ ಕ್ರೀಡಾಪಟುವಾಗಿದ್ದರು.

    ವೃತ್ತಿಯಲ್ಲಿ ಅರ್ಥಶಾಸ್ತ್ರಜ್ಞರಾಗಿದ್ದು, ಮುಖ್ಯವಾಗಿ ಆರ್ಥಿಕ ಮತ್ತು ಸಾಮಾಜಿಕ ನೀತಿಗಳಿಗೆ ಸಂಬಂಧಿಸಿದ ಸಾರ್ವಜನಿಕ ಸೇವಾ ಪಾತ್ರಗಳಲ್ಲಿ ತಮ್ಮ ವೃತ್ತಿ ಜೀವನವನ್ನು ಕಳೆದಿದ್ದಾರೆ. ಅವರು ವಿವಿಧ ಉನ್ನತ ಮಟ್ಟದ ಅಂತಾರಾಷ್ಟ್ರೀಯ ಮಂಡಳಿಗಳು ಮತ್ತು ಪ್ಯಾನೆಲ್‌ಗಳನ್ನು ಸಹ ಮುನ್ನಡೆಸಿದ್ದಾರೆ. 2011-2023 ರಲ್ಲಿ ವಾಸ್ತವಿಕ ಕೇಂದ್ರ ಬ್ಯಾಂಕ್ ಸಿಂಗಾಪುರದ ಹಣಕಾಸು ಪ್ರಾಧಿಕಾರದ ಅಧ್ಯಕ್ಷರಾಗಿದ್ದರು. 2019-2023 ರ ನಡುವೆ ಸಿಂಗಾಪುರ ಹೂಡಿಕೆ ನಿಗಮದ ಉಪಾಧ್ಯಕ್ಷರಾಗಿದ್ದರು. ಇದನ್ನೂ ಓದಿ: ಬಹುಪತ್ನಿತ್ವ ನಿಷೇಧ – ಮಸೂದೆ ಮಂಡನೆಗೆ ಮುಂದಾದ ಅಸ್ಸಾಂ ಸರ್ಕಾರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಿರುಪತಿ ದೇವಸ್ಥಾನ ಮಂಡಳಿಗೆ ಅಧ್ಯಕ್ಷರಾಗಿ ಭೂಮನ ಕರುಣಾಕರ ರೆಡ್ಡಿ ನೇಮಕ

    ತಿರುಪತಿ ದೇವಸ್ಥಾನ ಮಂಡಳಿಗೆ ಅಧ್ಯಕ್ಷರಾಗಿ ಭೂಮನ ಕರುಣಾಕರ ರೆಡ್ಡಿ ನೇಮಕ

    ಅಮರಾವತಿ: ತಿರುಮಲ ತಿರುಪತಿ ದೇವಸ್ಥಾನ (TTD) ಮಂಡಳಿಗೆ ನೂತನ ಅಧ್ಯಕ್ಷರ ನೇಮಕ ಮಾಡಲಾಗಿದೆ. ಟಿಟಿಡಿ ನೂತನ ಅಧ್ಯಕ್ಷರಾಗಿ ಭೂಮನ ಕರುಣಾಕರ ರೆಡ್ಡಿ (Bhumana Karunakar Reddy) ನೇಮಕವಾಗಿದ್ದಾರೆ.

    ತಿರುಪತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಭೂಮನ ಕರುಣಾಕರ ರೆಡ್ಡಿ, ಆಗಸ್ಟ್ 8 ರಿಂದ ಟಿಟಿಡಿ ಮಂಡಳಿಗೆ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: ಕನಸು ಭಗ್ನಗೊಂಡ ಹೆಚ್‌ಡಿಕೆ, ಭಗ್ನಪ್ರೇಮಿಯಂತೆ ವ್ಯಾಘ್ರರಾಗಿದ್ದಾರೆ: ದಿನೇಶ್‌ ಗುಂಡೂರಾವ್‌ ತಿರುಗೇಟು

    ಇದೀಗ ದೇವಾಲಯಕ್ಕೆ ಶೀಘ್ರವೇ ಪದಾಧಿಕಾರಿಗಳ ಆಯ್ಕೆ ಮಾಡುವುದಾಗಿ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಸುಳ್ಳು ಹೇಳುವ ಸ್ಪರ್ಧೆಗಿಳಿದಿದೆ: ಪ್ರಹ್ಲಾದ್ ಜೋಶಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನ್ಯಕೋಮಿನ ಸದಸ್ಯನಿಗೆ ದಕ್ಕಿದ ಅಧ್ಯಕ್ಷ ಸ್ಥಾನ – 19 ಗ್ರಾಪಂ ಸದಸ್ಯರಿಂದ ಸಾಮೂಹಿಕ ರಾಜೀನಾಮೆ

    ಅನ್ಯಕೋಮಿನ ಸದಸ್ಯನಿಗೆ ದಕ್ಕಿದ ಅಧ್ಯಕ್ಷ ಸ್ಥಾನ – 19 ಗ್ರಾಪಂ ಸದಸ್ಯರಿಂದ ಸಾಮೂಹಿಕ ರಾಜೀನಾಮೆ

    ರಾಯಚೂರು: ಸಿಂಧನೂರು (Sindhanur) ತಾಲೂಕಿನ ಆರ್‌ಹೆಚ್ ಕ್ಯಾಂಪ್-1ರಲ್ಲಿ ಮುಸ್ಲಿಂ ಸಮುದಾಯದ (Muslim Community) ಸದಸ್ಯ ಅಧ್ಯಕ್ಷನಾಗಿ ಆಯ್ಕೆಯಾಗಿರುವ ಹಿನ್ನೆಲೆ ಸಾಮಾನ್ಯ ವರ್ಗದ 19 ಜನ ಸದಸ್ಯರು ಸಾಮೂಹಿಕ ರಾಜೀನಾಮೆ (Mass Resignation) ನೀಡಿದ್ದಾರೆ.

    ಸಾಮಾನ್ಯ ವರ್ಗಕ್ಕೆ ಸಿಕ್ಕ ಮೀಸಲಾತಿ ಅಲ್ಪಸಂಖ್ಯಾತ ಸದಸ್ಯನ ಪಾಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಗ್ರಾಮ ಪಂಚಾಯತ್‌ನ (Grama Panchayat) 19 ಜನ ಸದಸ್ಯರು ರಾಜೀನಾಮೆ ನೀಡಿದ್ದಾರೆ. ಒಟ್ಟು 38 ಸದಸ್ಯ ಸ್ಥಾನ ಹೊಂದಿರುವ ಆರ್‌ಹೆಚ್ ಕ್ಯಾಂಪ್-1 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಂಗ್ಲಾ ವಲಸಿಗರು ವಾಸಿಸುವ ಒಟ್ಟು 6 ಆರ್‌ಹೆಚ್ ಕ್ಯಾಂಪ್‌ಗಳನ್ನು ಒಳಗೊಂಡಿವೆ. 38 ಸ್ಥಾನಗಳಲ್ಲಿ 30 ಜನ ಸಾಮಾನ್ಯ ವರ್ಗ, 7 ಎಸ್ಸಿಎಸ್ಟಿ ಹಾಗೂ ಹಿಂದುಳಿದವರ್ಗ ಮತ್ತು ಒಬ್ಬರು ಅಲ್ಪಸಂಖ್ಯಾತ ಸದಸ್ಯರಿದ್ದಾರೆ. ಇದನ್ನೂ ಓದಿ: ಮೋದಿ ಮತ್ತೆ ಪ್ರಧಾನಿಯಾಗಲಿ: ಅಮರನಾಥ ಯಾತ್ರೆ ಮಾಡಿ ಶೋಭಾ ಕರಂದ್ಲಾಜೆ ವಿಶೇಷ ಪೂಜೆ

    ಹೀಗಾಗಿ 15 ವರ್ಷಗಳ ಬಳಿಕ ಸಾಮಾನ್ಯ ವರ್ಗಕ್ಕೆ ಸಿಕ್ಕ ಮೀಸಲಾತಿ ಕೈತಪ್ಪಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 3 ರಂದು ನಡೆದ ಅಧ್ಯಕ್ಷ ಸ್ಥಾನ ಚುನಾವಣೆಯಲ್ಲಿ ರಾಜಕೀಯ ಒತ್ತಡಕ್ಕೆ ಕೆಲವರು ಮನಸ್ಸಿಲ್ಲದೆ ಮತ ಹಾಕಿದ್ದಾರೆ ಎಂದು ಆರೋಪಿಸಿರುವ ಸದಸ್ಯರು ಅಧ್ಯಕ್ಷ ಸ್ಥಾನದ ಆಯ್ಕೆ ರದ್ದುಗೊಳಿಸಿ ಪುನರ್ ಆಯ್ಕೆ ಮಾಡುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕಳಪೆ ಊಟ ಕೊಟ್ಟರೆ ವಾರ್ಡನ್‍ಗೆ ತಿನ್ನಿಸಿ, ಹೊಡೆಯಿರಿ – ಶಾಸಕರ ಹೇಳಿಕೆ ವೈರಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 20 ವರ್ಷದಿಂದ ಟೀ ಮಾರಿ ಜೀವನ ಕಟ್ಟಿಕೊಂಡಿದ್ದ ಅನ್ನಪೂರ್ಣಮ್ಮ ಈಗ ಪಂಚಾಯ್ತಿ ಅಧ್ಯಕ್ಷೆ!

    20 ವರ್ಷದಿಂದ ಟೀ ಮಾರಿ ಜೀವನ ಕಟ್ಟಿಕೊಂಡಿದ್ದ ಅನ್ನಪೂರ್ಣಮ್ಮ ಈಗ ಪಂಚಾಯ್ತಿ ಅಧ್ಯಕ್ಷೆ!

    ತುಮಕೂರು: ಆಕೆ ಪ್ರಧಾನಿ ಮೋದಿಯ (Narendra Modi) ಅಪ್ಪಟ ಅಭಿಮಾನಿ. ಈ ಹಿಂದೆ ಮೋದಿ ಅವರು ಟೀ ಮಾರಿದಂತೆ (Tea Sale) ಈ ಅಭಿಮಾನಿಯೂ ಟೀ ಮಾರುತಿದ್ದಾಳೆ. ಟೀ ಮಾರಿ 20 ವರ್ಷದಿಂದ ಜೀವನ ಕಟ್ಟಿಕೊಂಡಿದ್ದಾಳೆ. ಅಷ್ಟೇ ಅಲ್ಲಾ ಟೀ ಮಾರಿದ ಮೋದಿ ಪಾರ್ಲಿಮೆಂಟ್ ಗೆ ಪ್ರಧಾನಿ ಆದ್ರೆ, ಈ ಅಭಿಮಾನಿ ಪಂಚಾಯತಿಗೆ ಅಧ್ಯಕ್ಷೆಯಾಗಿದ್ದಾರೆ. ಪಂಚಾಯತಿಯಿಂದ ಪಾರ್ಲಿಮೆಂಟ್ ವರೆಗಿನ ಟೀ ಮಹಾತ್ಮೆಯ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ.

    ಟೀ ಮಾರೋರೆಲ್ಲಾ ಪ್ರಧಾನಿಯಾಗಲ್ಲ, ಚಹಾ ಮಾರಿ ಜೀವನ ಕಟ್ಟಿಕೊಂಡವರೆಲ್ಲಾ ಪಂಚಾಯ್ತಿ ಅಧ್ಯಕ್ಷರಾಗಲ್ಲ. ಆದರೆ ಅವರ ಪರಿಶ್ರಮ, ಏನಾದರೂ ಸಾಧನೆ ಮಾಡಬೇಕು ಅನ್ನೋ ಛಲ ಅವರನ್ನು ಉತ್ತುಂಗಕ್ಕೇರಿಸುತ್ತದೆ. ಇದಕ್ಕೆ ಸಾಕ್ಷಿಯಾಗಿದ್ದು ತುಮಕೂರಿನ ಊರ್ಡಿಗೆರೆ ಗ್ರಾಮ ಪಂಚಾಯ್ತಿ. ಈ ಗ್ರಾಮ ಪಂಚಾಯ್ತಿಯಲ್ಲಿ ಚಹಾ ಮಾರುವ ಮಹಿಳೆಯೋರ್ವಳು ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ದೇವರಾಯನದುರ್ಗ ದೇವಸ್ಥಾನದ ಬಳಿ ಪುಟ್ಟ ಟೀ ಅಂಗಡಿ ಇಟ್ಟುಕೊಂಡು ಕಳೆದ 20 ವರ್ಷದಿಂದ ಬದುಕು ಕಟ್ಟಿಕೊಂಡಿದ್ದ ಅನ್ನಪೂರ್ಣಮ್ಮ ಈಗ ಪಂಚಾಯ್ತಿ ಅಧ್ಯಕ್ಷೆಯಾಗಿ (Grama Panchayat President) ಹೊರಹೊಮ್ಮಿದ್ದಾರೆ. 2 ನೇ ಅವಧಿಗೆ ಗುರುವಾರ ನಡೆದ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಊರ್ಡಿಗೆರೆ ಗ್ರಾಮ ಪಂಚಾಯ್ತಿಯಲ್ಲಿ ಒಟ್ಟು 21 ಸದಸ್ಯರ ಸಂಖ್ಯೆ ಇದೆ. ಇದರಲ್ಲಿ ಬಿಜೆಪಿ ಬೆಂಬಲಿತರ ಸಂಖ್ಯೆ 10, ಜೆಡಿಎಸ್ ಬೆಂಬಲಿತರ ಸಂಖ್ಯೆ 11 ಇದೆ. ಅನ್ನಪೂರ್ಣಮ್ಮ ಬಿಜೆಪಿ ಬೆಂಬಲಿತ ಸದಸ್ಯೆ. ಆದರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಬಾರಿಯ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಜೆಡಿಎಸ್‍ನಲ್ಲಿ ನಾಲ್ಕು ಜನ ಮುಸ್ಲಿಂ ಮಹಿಳೆಯರೂ ಇದ್ದರು. ಆದರೂ ಅವರೆಲ್ಲರೂ ಸೇರಿ ಟೀ ಮಾರುವ ಅನ್ನಪೂರ್ಣಮ್ಮರನ್ನೇ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡರ ಪ್ಲಾನ್ ಇಲ್ಲಿ ಫಲಿಸಿದೆ.

    ನೂತನವಾಗಿ ಅಧ್ಯಕ್ಷೆಯಾದ ಅನ್ನಪೂರ್ಣಮ್ಮ ಮಹಿಳಾಪರ ಹಲವು ಕನಸು ಕಂಡಿದ್ದಾರೆ. ತಮ್ಮ ಪಂಚಾಯ್ತಿ ವ್ಯಾಪ್ತಿಯ ಹೆಣ್ಣುಮಕ್ಕಳ ಸಬಲೀಕರಣಕ್ಕಾಗಿ ದುಡಿಯುವ ವಾಗ್ದಾನ ಮಾಡಿದ್ದಾರೆ. ಒಟ್ಟಾರೆ ಟೀ ಮಾರೋ ಮಹಿಳೆ ಅಧ್ಯಕ್ಷೆ ಗಾದಿಗೆ ಏರಿರುವ ಯಶೋಗಾಥೆ ಜಿಲ್ಲೆಯಲ್ಲಿ ಚರ್ಚೆಯಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾನುವಾರ, ಸೋಮವಾರ ನಂದಿಬೆಟ್ಟ ಸಂಪೂರ್ಣ ಬಂದ್

    ಭಾನುವಾರ, ಸೋಮವಾರ ನಂದಿಬೆಟ್ಟ ಸಂಪೂರ್ಣ ಬಂದ್

    ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಬೆಟ್ಟ (Nandihills) ಹಾಗೂ ಸ್ಕಂದಗಿರಿ ಬೆಟ್ಟಗಳನ್ನು ಭಾನುವಾರ ಹಾಗೂ ಸೋಮವಾರ ಎರಡು ದಿನಗಳ ಕಾಲ ಸಂಪೂರ್ಣವಾಗಿ ಬಂದ್ ಮಾಡಲಾಗುತ್ತಿದ್ದು, ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗುತ್ತಿದೆ.

    ಜುಲೈ 2 ರ ಬೆಳಗ್ಗೆ 6 ಗಂಟೆಯಿಂದ ಜುಲೈ 3 ಸಂಜೆ 6 ಗಂಟೆವರೆಗೂ ಬಂದ್ ಮಾಡಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಮಾಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ, ಅದರ ಬುದ್ಧಿ ಎರಡೂ ಹ್ಯಾಕ್: ಪ್ರಲ್ಹಾದ್ ಜೋಶಿ

    ಜುಲೈ 3 ಸೋಮವಾರದಂದು ರಾಷ್ಟ್ರಪತಿ ದ್ರೌಪತಿ ಮುರ್ಮು (Droupadi Murmu) ಅವರು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿ ಇರುವ ಶ್ರೀ ಸತ್ಯಸಾಯಿ ಲೋಕಸೇವಾ ಆಶ್ರಮಕ್ಕೆ ಆಗಮಿಸಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಭದ್ರತೆಯ ಹಿತದೃಷ್ಟಿಯಿಂದ ನಂದಿಗಿರಿಧಾಮ ಹಾಗೂ ಸ್ಕಂದಗಿರಿ ಬೆಟ್ಟಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ ಮಾಡಿರುವುದಾಗಿ ಚಿಕ್ಕಬಳ್ಳಾಫುರ ಎಸ್ಪಿ ಡಿ.ಎಲ್.ನಾಗೇಶ್ ಹಾಗೂ ಡಿ ಸಿ ರವಿಂದ್ರ ತಿಳಿಸಿದ್ದಾರೆ.

    ವೀಕೆಂಡ್ ಅಂತ ಪ್ರವಾಸಿಗರು ನಂದಿಬೆಟ್ಟದತ್ತ ಬರಬಾರದು. ಮಂಗಳವಾರದಿಂದ ಎಂದಿನಂತೆ ಪ್ರವಾಸಿಗರು ಆಗಮಿಸಬಹುದು ಅಂತ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಲನಚಿತ್ರ ನಿರ್ದೇಶಕರ ಸಂಘಕ್ಕೆ ಎನ್ನಾರ್.ಕೆ. ವಿಶ್ವನಾಥ್ ಅಧ್ಯಕ್ಷ

    ಚಲನಚಿತ್ರ ನಿರ್ದೇಶಕರ ಸಂಘಕ್ಕೆ ಎನ್ನಾರ್.ಕೆ. ವಿಶ್ವನಾಥ್ ಅಧ್ಯಕ್ಷ

    ರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ (Directors Association) ನೂತನ ಅಧ್ಯಕ್ಷರಾಗಿ ಮಂಗಳೂರು ಮೂಲದ ಎನ್ನಾರೆ.ಕೆ. ವಿಶ್ವನಾಥ್ (NRK Vishwanath) ಆಯ್ಕೆಯಾಗಿದ್ದಾರೆ. ಪತ್ರಕರ್ತರಾಗಿಯೂ ಗುರುತಿಸಿಕೊಂಡಿರುವ ಎನ್ನಾರ್ ಕೆ. ವಿಶ್ವನಾಥ್ ಹಲವು ದಶಕಗಳಿಂದ ಚಿತ್ರೋದ್ಯಮದಲ್ಲಿ ಕೆಲಸ ಮಾಡುತ್ತಿದ್ದಾರೆ.

    ಸಲ್ಲದ ಕಾರಣಗಳಿಂದಾಗಿ ನಿರ್ದೇಶಕರ ಸುದ್ದಿಯಲ್ಲಿರುತ್ತಿತ್ತು. ಪದಾಧಿಕಾರಿಗಳ ಆಯ್ಕೆಯಲ್ಲಿ ಗೊಂದಲವಿತ್ತು. ಕೆಲ ಅಧ್ಯಕ್ಷರ (President) ವಿರುದ್ಧ ಅಧಿಕಾರ ದುರುಪಯೋಗದ ಆರೋಪವೂ ಕೇಳಿ ಬಂದಿತ್ತು. ನಿರ್ದೇಶಕರ ಸಂಘದಲ್ಲಿನ ಗೊಂದಲಗಳಿಂದಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಎನ್.ಆರ್. ನಂಜುಂಡೇಗೌಡ ರಾಜೀನಾಮೆ ನೀಡಿದ್ದರು. ಇದನ್ನೂ ಓದಿ:ಡಿವೋರ್ಸ್ ಆಗಿ ಒಂದು ವಾರ ಕಳೆದಿಲ್ಲ ಹೆಂಡ್ತಿ ಬೇಕು ಎಂದ ಸುಶ್ಮಿತಾ ಸೇನ್ ಅಣ್ಣ

    ರಾಜೀನಾಮೆ ನೀಡಿದ ಸ್ಥಾನಕ್ಕೆ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ವಿಜೇತರಾಗಿದ್ದ ವಿಶ್ವನಾಥ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ನಾಗೇಂದ್ರ ಅರಸ್ ಮತ್ತು ಜಗದೀಶ್ ಕೊಪ್ಪ ಉಪಾಧ್ಯಕ್ಷರಾಗಿ, ವಿಶಾಲ್ ಧೀರಜ್ ಕಾರ್ಯದರ್ಶಿಯಾಗಿ, ಮಳವಳ್ಳಿ ಸಾಯಿಕೃಷ್ಣ ಜಂಟಿ ಕಾರ್ಯದರ್ಶಿಯಾಗಿ ಸಮಿತಿಯಲ್ಲಿದ್ದಾರೆ.

  • ಸಂಸತ್‌ ಕಟ್ಟಡವನ್ನು ರಾಷ್ಟ್ರಪತಿ ಉದ್ಘಾಟಿಸಲಿ: ಸುಪ್ರೀಂನಲ್ಲಿ ಪಿಐಎಲ್‌ ಸಲ್ಲಿಕೆ

    ಸಂಸತ್‌ ಕಟ್ಟಡವನ್ನು ರಾಷ್ಟ್ರಪತಿ ಉದ್ಘಾಟಿಸಲಿ: ಸುಪ್ರೀಂನಲ್ಲಿ ಪಿಐಎಲ್‌ ಸಲ್ಲಿಕೆ

    ನವದೆಹಲಿ: ನೂತನ ಸಂಸತ್‌ ಕಟ್ಟಡವನ್ನು (New Parliament Building) ರಾಷ್ಟ್ರಪತಿಗಳಿಂದ (President) ಉದ್ಘಾಟಿಸಲು ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದೆ.

    ಕಾಂಗ್ರೆಸ್‌, ಟಿಎಂಸಿ, ಆಪ್‌, ಜೆಡಿಯು ಸೇರಿದಂತೆ 20 ವಿರೋಧ ಪಕ್ಷಗಳು ಬಹಿಷ್ಕಾರ ಹಾಕಿದ ಬೆನ್ನಲ್ಲೇ ಸುಪ್ರೀಂನಲ್ಲಿ (Supreme Court) ಅರ್ಜಿ ಸಲ್ಲಿಕೆಯಾಗಿದೆ.

    ರಾಷ್ಟ್ರಪತಿ ಅವರಿಂದ ಉದ್ಘಾಟನೆ ಮಾಡದೇ ಪ್ರಧಾನಿ ಮೋದಿ (PM Narendra Modi) ಉದ್ಘಾಟಿಸುತ್ತಿರುವುದು ಸಂವಿಧಾನಕ್ಕೆ ಮಾಡುತ್ತಿರುವ ಅವಮಾನ ಎಂದು ವಕೀಲ ಸಿಆರ್ ಜಯ ಸುಕಿನ್ ತಮ್ಮ ಅರ್ಜಿಯಲ್ಲಿ  ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: New Parliament Building – ಕರ್ನಾಟಕ ವಿಧಾನಸೌಧದ ಉದಾಹರಣೆ ನೀಡಿ ಕಾಂಗ್ರೆಸ್‌ಗೆ ಸಂಬಿತ್‌ ಪಾತ್ರ ತಿರುಗೇಟು

    ಯಾವುದೇ ಸದನವನ್ನು ಕರೆಯುವ ಮತ್ತು ಮುಂದೂಡುವ ಅಧಿಕಾರ ರಾಷ್ಟ್ರಪತಿಗಳಿಗೆ ಇದೆ. ಸಂಸತ್ತು ಅಥವಾ ಲೋಕಸಭೆಯನ್ನು ವಿಸರ್ಜಿಸುವ ಅಧಿಕಾರ ರಾಷ್ಟ್ರಪತಿಗಳಿಗೆ ಇರುವುದರಿಂದ ಅವರಿಂದಲೇ ಲೋಕಾರ್ಪಣೆ ಮಾಡಬೇಕೆಂದು ಮನವಿ ಮಾಡಲಾಗಿದೆ.

    ರಾಷ್ಟ್ರಪತಿ ಸಂಸತ್ತಿನ ಅವಿಭಾಜ್ಯ ಅಂಗ. ಶಿಲಾನ್ಯಾಸ ಸಮಾರಂಭದಿಂದ ರಾಷ್ಟ್ರಪತಿಯನ್ನು ದೂರವಿಟ್ಟಿದ್ದು ಏಕೆ? ಈಗ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿಯವರನ್ನು ಆಹ್ವಾನಿಸುತ್ತಿಲ್ಲ. ಸರಕಾರದ ಈ ನಿರ್ಧಾರ ಸರಿಯಲ್ಲ ಎಂದು ದೂರಲಾಗಿದೆ. ಲೋಕಸಭಾ ಸಚಿವಾಲಯ, ಗೃಹ ಸಚಿವಾಲಯ, ಕಾನೂ ಸಚಿವಲಯಗಳನ್ನು ಅರ್ಜಿದಾರರು ಈ ಪ್ರಕರಣದಲ್ಲಿ ಪಾರ್ಟಿ ಮಾಡಿದ್ದಾರೆ.

    ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಮೇ 28 ರಂದು ಹೊಸ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.