Tag: presidential election

  • ಕಾಂಗ್ರೆಸ್ ಪಕ್ಷದಲ್ಲಿ ಇರುವ ನಾಯಕರು ನಕಲಿ ಗಾಂಧಿ ಕುಟುಂಬದ ರಬ್ಬರ್ ಸ್ಟಾಂಪ್: ಬಿಜೆಪಿ

    ಕಾಂಗ್ರೆಸ್ ಪಕ್ಷದಲ್ಲಿ ಇರುವ ನಾಯಕರು ನಕಲಿ ಗಾಂಧಿ ಕುಟುಂಬದ ರಬ್ಬರ್ ಸ್ಟಾಂಪ್: ಬಿಜೆಪಿ

    ಬೆಂಗಳೂರು: ಬಿಜೆಪಿ ರಾಷ್ಟ್ರಪತಿ ಸ್ಥಾನಕ್ಕೆ ಚುನಾಯಿಸುವ ವ್ಯಕ್ತಿಗಳು ರಬ್ಬರ್ ಸ್ಟಾಂಪ್ ಎಂದು ಕಾಂಗ್ರೆಸ್ ಒರಟು ವಾದ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಇರುವ ನಾಯಕರು ನಕಲಿ ಗಾಂಧಿ ಕುಟುಂಬದ ರಬ್ಬರ್ ಸ್ಟಾಂಪ್ ಅಲ್ಲದೆ ಮತ್ತೇನು ಎಂದು ಬಿಜೆಪಿ ಟ್ವಿಟ್ಟರ್ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.

    ಟ್ವೀಟ್‍ನಲ್ಲಿ ಏನಿದೆ?
    ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಕಣಕ್ಕಿಳಿಸಿರುವುದನ್ನೇ ಟೀಕಿಸುತ್ತಿರುವ ಕಾಂಗ್ರೆಸ್ ಹಾಗೂ ಅದರ ಅಂಗಪಕ್ಷಗಳು ಬಯಲಿನಲ್ಲಿ ಬಚ್ಚಿಟ್ಟುಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಒಬ್ಬ ಬುಡಕಟ್ಟು ಸಮುದಾಯದ ಮಹಿಳೆ ರಾಷ್ಟ್ರದ ಅತ್ಯುನ್ನತ ಸ್ಥಾನಕ್ಕೆ ಏರುವುದನ್ನು ನಿಮಗೇಕೆ ಸಹಿಸಲಾಗುತ್ತಿಲ್ಲ? ದೇಶದ ಅತ್ಯುನ್ನತ ಪದವಿಗೆ ಏರುತ್ತಿರುವ ಮೊದಲ ಬುಡಕಟ್ಟು ಮಹಿಳೆಯಾಗಿ ದ್ರೌಪದಿ ಮುರ್ಮು ಅವರು ಗುರುತಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: 2.5 ವರ್ಷಗಳಿಂದ ನಿಮ್ಮ ಮನೆಗೆ ನಮಗೆ ಪ್ರವೇಶವೇ ಇರಲಿಲ್ಲ, ಗೇಟ್‌ ಬಳಿ ಕಾಯಬೇಕಿತ್ತು: ಠಾಕ್ರೆಗೆ ಬಂಡಾಯ ಶಾಸಕನ ಪತ್ರ

    ಬಿಜೆಪಿ ವಿರುದ್ಧ ಯೋಜಿತ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ಹಾಗೂ ಎಡಪಂಥೀಯ ಬುದ್ಧಿಜೀವಿಗಳಿಗೆ ಈಗ ಅಸ್ತಿತ್ವದ ಚಿಂತೆ ಮೂಡುತ್ತಿದೆಯೇ? ನಕಲಿಗಾಂಧಿಸ್ಟಾಂಪ್. ಮೆ ಲಡ್ಕಿ ಹೂ, ಲಡ್ ಸಕ್ತಿ ಹೂ ಎಂದು ಮಹಿಳೆಯರ ಪರವಾಗಿ ಹೂಂಕರಿಸಿದ್ದ ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಆದ್ಯತೆಯೇ ನೀಡಲಿಲ್ಲ. ಬಿಜೆಪಿ ಮಹಿಳಾ ಸಬಲೀಕರಣಕ್ಕೆ ಬದ್ಧವಾಗಿದೆ, ಆ ಕಾರಣದಿಂದಲೇ ವನವಾಸಿ ನಾಯಕಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿಸಿದ್ದೇವೆ. ಈ ಬದ್ಧತೆ ವಿಪಕ್ಷಗಳಲ್ಲಿ ಸಾಧ್ಯವೇ?

    ಅಬ್ದುಲ್ ಕಲಾಂ, ರಾಮನಾಥ್ ಕೊವಿಂದ್ ಹಾಗೂ ದ್ರೌಪದಿ ಮುರ್ಮು ಎಲ್ಲರೂ ಎನ್‍ಡಿಎ ಆಯ್ಕೆ. ಇಂತಹ ಮಹನೀಯರ ಬಗ್ಗೆ ಯೋಚಿಸಲೂ ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಾಗಿಲ್ಲ. ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಆಯ್ಕೆಯನ್ನು ಕಾಂಗ್ರೆಸ್ ರಬ್ಬರ್ ಸ್ಟಾಂಪ್ ಎಂದಿರುವುದು ಅಕ್ಷಮ್ಯ. ಕಾಂಗ್ರೆಸ್ ನಕಲಿಗಾಂಧಿಸ್ಟಾಂಪ್ ಅಲ್ಲವೇ? ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವಿದ್ದಾಗ ಮೂರು ಬಾರಿ ರಾಷ್ಟ್ರಪತಿ ಚುನಾವಣೆ ನಡೆಸುವ ಅವಕಾಶ ಲಭಿಸಿದೆ. ಅಬ್ದುಲ್ ಕಲಾಂ – ಮುಸ್ಲಿಂ ಸಮುದಾಯ, ರಾಮನಾಥ್ ಕೋವಿಂದ್ – ದಲಿತ ಸಮುದಾಯ, ದ್ರೌಪದಿ ಮುರ್ಮು – ಬುಡಕಟ್ಟು ಮಹಿಳೆ. ಈ ಆಯ್ಕೆಗಳು ಕಾಂಗ್ರೆಸ್ ಪಕ್ಷಕ್ಕೆ ಏಕೆ ಕಹಿಯಾಗುತ್ತಿದೆ? ಇದನ್ನೂ ಓದಿ: ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ಚಾಕು ಇರಿದ

    ಬಿಜೆಪಿ ರಾಷ್ಟ್ರಪತಿ ಸ್ಥಾನಕ್ಕೆ ಚುನಾಯಿಸುವ ವ್ಯಕ್ತಿಗಳು ರಬ್ಬರ್ ಸ್ಟಾಂಪ್ ಎಂದು ಕಾಂಗ್ರೆಸ್ ಒರಟು ವಾದ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಇರುವ ನಾಯಕರು ನಕಲಿ ಗಾಂಧಿ ಕುಟುಂಬದ ರಬ್ಬರ್ ಸ್ಟಾಂಪ್ ಅಲ್ಲದೆ ಮತ್ತೇನು? ದೇಶದ ಮೇಲೆ ಇಂದಿರಾ ತುರ್ತು ಪರಿಸ್ಥಿತಿ ಹೇರಿದಾಗ ಆಗಿನ ರಾಷ್ಟ್ರಪತಿಗಳು ವರ್ತಿಸಿದ ರೀತಿಯನ್ನು ಒಮ್ಮೆ ನೆನಪಿಸಿಕೊಳ್ಳಿ. ಯಾರು ಯಾರನ್ನು ರಬ್ಬರ್ ಸ್ಟಾಂಪ್ ಮಾಡಿಕೊಂಡಿದ್ದರು ಎಂಬುದನ್ನು ಈ ಘಟನೆಯೊಂದರಿಂದಲೇ ತಿಳಿಯಬಹುದು. ಅಂದು ರಾಷ್ಟ್ರಪತಿಯನ್ನು ಹೇಗೆ ನಡೆಸಿಕೊಳ್ಳಲಾಯ್ತು ಎಂಬುದನ್ನು ನೆನಪಿಸಬೇಕೇ ಎಂದು ಬಿಜೆಪಿ ಪ್ರಶ್ನಿಸಿದೆ.

    Live Tv

  • ರಾಷ್ಟ್ರಪತಿ ಸ್ಥಾನಕ್ಕೆ ಪೈಪೋಟಿ – ಮೊದಲ ದಿನವೇ 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

    ರಾಷ್ಟ್ರಪತಿ ಸ್ಥಾನಕ್ಕೆ ಪೈಪೋಟಿ – ಮೊದಲ ದಿನವೇ 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

    ನವದೆಹಲಿ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣಾ ಕಣ ರಂಗೇರಿದ್ದು, ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಸಂಖ್ಯಾಬಲದ ಜಟಾಪಟಿ ನಡೆಯುತ್ತಿದೆ. ಈವೆರೆಗೆ ರಾಷ್ಟ್ರಪತಿ ಚುನಾವಣೆಗೆ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅವರಲ್ಲಿ ದಾಖಲೆಗಳ ಕೊರತೆಯಿಂದಾಗಿ ಓರ್ವ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಲಾಗಿದೆ.

    ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ರಾಷ್ಟ್ರಪತಿಯಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಮುಗಿಯಲಿದ್ದು, ಆ ಸ್ಥಾನಕ್ಕೆ ಚುನಾವಣೆಗಾಗಿ ಚುನಾವಣಾ ಅಧಿಸೂಚನೆ ಹೊರಡಿಸಲಾಗಿದೆ. ನಾಮನಿರ್ದೇಶನ ಪ್ರಕ್ರಿಯೆಯೂ ಪ್ರಾರಂಭವಾಗಿದೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಜೂನ್ 29ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಚುನಾವಣೆಯ ಭದ್ರತಾ ಠೇವಣಿ 15 ಸಾವಿರ ರೂ. ಇದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಶರದ್ ಪವಾರ್

    ಅಭ್ಯರ್ಥಿಯು ಮತದಾರರಾಗಿ ನೋಂದಾಯಿಸಿಕೊಂಡಿರುವ ಪಟ್ಟಿಯಲ್ಲಿ ತನ್ನ ಹೆಸರನ್ನು ತೋರಿಸುವ ನಮೂನೆಯ ಪ್ರಮಾಣೀಕೃತ ಪ್ರತಿಯನ್ನು ಲಗತ್ತಿಸದ ಕಾರಣ ಒಬ್ಬ ಅಭ್ಯರ್ಥಿಯ ನಾಮನಿರ್ದೇಶನವನ್ನು ತಿರಸ್ಕರಿಸಲಾಗಿದೆ. ಇದನ್ನೂ ಓದಿ: 4 ದಿನ, 80 ಅಡಿ ಕೊಳವೆ ಬಾವಿಯಲ್ಲೇ ಸಿಲುಕಿದ್ದ ಹುಡುಗ – 104 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ

    ತಮಿಳುನಾಡಿನ ಕೆ.ಪದ್ಮರಾಜನ್ ಮೊದಲು ನಾಮಪತ್ರ ಸಲ್ಲಿಸಿದ್ದಾರೆ. ಆ ನಂತರ ಎ.ಮಣಿಥನ್, ದೆಹಲಿಯಿಂದ ಜೀವನ್ ಕುಮಾರ್ ಮಿತ್ತಲ್, ದಯಾ ಶಂಕರ್ ಅಗರ್ವಾಲ್, ಓಂಪ್ರಕಾಶ್ ಖರಬಂದ, ಮಹಾರಾಷ್ಟ್ರದ ಮೊಹಮ್ಮದ್ ಎ.ಹಮಿದ್ ಪಟೇಲ್, ನಾಮಕ್ಕಲ್‌ನಿಂದ ಟಿ. ರಮೇಶ್, ಬಿಹಾರದಿಂದ ಶ್ಯಾಮ್ ನಂದನ್ ಪ್ರಸಾದ್, ಲಾಲೂ ಪ್ರಸಾದ್ ಯಾದವ್ ಹಾಗೂ ಆಂಧ್ರಪ್ರದೇಶದಿಂದ ಮಂದತಿ ತಿರುಪತಿ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ.

    ರಾಷ್ಟ್ರಪತಿ ಚುನಾವಣೆಗೆ NCP ನಾಯಕ ಶರದ್ ಪವಾರ್ ಅವರನ್ನು ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಉದ್ದೇಶಿಸಲಾಗಿತ್ತು. ಕಾಂಗ್ರೆಸ್, ಜೆಡಿಎಸ್, ಟಿಎಂಸಿ, ಆರ್‌ಜೆಡಿ ಸೇರಿದಂತೆ ಮೊದಲಾದ ಪಕ್ಷಗಳೂ ಇದಕ್ಕೆ ಬೆಂಬಲ ಸೂಚಿಸಿದ್ದವು. ಇದಕ್ಕಾಗಿ ನಿನ್ನೆ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸುಮಾರು 18 ರಾಜಕೀಯ ಪಕ್ಷದ ನಾಯಕರು ಪಾಲ್ಗೊಂಡಿದ್ದರು. ಈ ವೇಳೆ ತಾವು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಪವಾರ್ ಸ್ಪಷ್ಟಪಡಿಸಿದ್ದಾರೆ.

    Live Tv

  • ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಶರದ್ ಪವಾರ್

    ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಶರದ್ ಪವಾರ್

    ನವದೆಹಲಿ: ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ನಿರಾಕರಿಸಿದ್ದಾರೆ.

    ಆಡಳಿತ ಪಕ್ಷ ಹಾಗೂ ಪ್ರತಿ ಪಕ್ಷದ ನಾಯಕರೊಂದಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದು ನಡೆಸಿದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ. ಇದನ್ನೂ ಓದಿ: 4 ದಿನ, 80 ಅಡಿ ಕೊಳವೆ ಬಾವಿಯಲ್ಲೇ ಸಿಲುಕಿದ್ದ ಹುಡುಗ – 104 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ

    ಸಭೆಯಲ್ಲಿ ನಾನು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಏಕೆಂದರೆ ಸಕ್ರೀಯ ರಾಜಕಾರಣದ ಇನ್ನಿಂಗ್ಸ್ ಇನ್ನೂ ಇದೆ. ಹಾಗಾಗಿ ನಾನು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ನೂಪುರ್ ಶರ್ಮಾಗೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಬೆಂಬಲ

    ಎನ್‌ಸಿಪಿ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರನ್ನು ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಪ್ರಮುಖ ಪ್ರಕ್ಷಗಳು ಒಮ್ಮತದ ನಿರ್ಧಾರ ಕೈಗೊಂಡಿದ್ದವು. ಇತ್ತೀಚೆಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶರದ್ ಪವಾರ್ ಅವರನ್ನು ಭೇಟಿಯಾಗಿದ್ದರು. ಸೋನಿಯಾ ಗಾಂಧಿ ಅವರ ನಿರ್ದೇಶನದಂತೆ ಪವಾರ್ ಅವರನ್ನು ಭೇಟಿ ಮಾಡಿ, ಒಮ್ಮತದ ಅಭ್ಯರ್ಥಿಯಾಗಿ ಬೆಂಬಲಿಸುವ ಬಗ್ಗೆ ಚರ್ಚಿಸಿರುವುದಾಗಿಯೂ ಖರ್ಗೆ ಸ್ಪಷ್ಟಪಡಿಸಿದ್ದರು.

    ಅದಕ್ಕಾಗಿಯೇ ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯೇತರ ಪಕ್ಷಗಳ ನಾಯಕರು ದೆಹಲಿಗೆ ಆಹ್ವಾನಿಸಿದ್ದರು. ಟಿಎಂಸಿ, ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ಸಿಪಿಐಎಂಎಲ್, ಆರ್‌ಎಸ್‌ಪಿ, ಶಿವಸೇನಾ, ಎನ್‌ಸಿಪಿ, ಆರ್‌ಜೆಡಿ, ಎಸ್‌ಪಿ, ನ್ಯಾಶನಲ್ ಕಾನ್ಫರೆನ್ಸ್, ಪಿಡಿಪಿ, ಜೆಡಿಎಸ್‌, ಡಿಎಂಕೆ, ಆರ್‌ಎಲ್‌ಡಿ, ಐಯುಎಂಎಲ್, ಜೆಎಂಎಂ ಸೇರಿದಂತೆ 17 ಪಕ್ಷದ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

    Live Tv

  • ರಾಷ್ಟ್ರಪತಿ ಚುನಾವಣೆ – ಶರದ್ ಪವಾರ್ ಒಮ್ಮತದ ಅಭ್ಯರ್ಥಿ?

    ರಾಷ್ಟ್ರಪತಿ ಚುನಾವಣೆ – ಶರದ್ ಪವಾರ್ ಒಮ್ಮತದ ಅಭ್ಯರ್ಥಿ?

    ನವದೆಹಲಿ: ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಗಳು ಯಾರಾಗಲಿದ್ದಾರೆ ಎಂಬ ಕುತೂಹಲ ಮನೆ ಮಾಡಿದೆ. ಆಡಳಿತಾರೂಢ ಹಾಗೂ ಪ್ರತಿ ಪಕ್ಷಗಳೂ ಪ್ರಭಾವಿ ನಾಯಕರನ್ನು ಕಣಕ್ಕಿಳಿಸಲು ಮಾತುಕತೆ ನಡೆಸಿವೆ.

    ಈ ನಡುವೆ ಎನ್‌ಸಿಪಿ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರನ್ನು ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತದೆ ಎನ್ನುವ ಮಾತುಗಳು ಕೇಳಿಬಂದಿವೆ. ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಬೆಂಬಲ ನೀಡಿದ್ದು, ಪವಾರ್ ಅವರನ್ನೇ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ ಮಾಡಲು ಮುಂದಾಗಿವೆ. ಇದನ್ನೂ ಓದಿ: ನೂಪುರ್ ಶರ್ಮಾಗೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಬೆಂಬಲ

    ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಬಯಸಿರುವ ವಿಪಕ್ಷಗಳು, ಈ ಕುರಿತು ಹಲವು ಸುತ್ತಿನ ಸರಣಿ ಸಭೆಗಳನ್ನು ನಡೆಸುತ್ತಿವೆ. ಶರದ್ ಪವಾರ್ ಅವರನ್ನೇ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಿಸುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಈ ಕುರಿತು ಖುದ್ದು ಶರದ್ ಪವಾರ್ ಅವರಾಗಲಿ, ಎನ್‌ಸಿಪಿ ಪಕ್ಷವಾಗಲಿ ಯಾವುದೇ ಹೇಳಿಕೆ ನೀಡಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಪಕ್ಷಿಗಳಿಗೆ ಆಹಾರವಿಡುವ ಟ್ರೇ ಹೊಂದಿದ್ದಕ್ಕೆ 3 ವಾರದಲ್ಲಿ 3 ಬಾರಿ ವ್ಯಕ್ತಿ ಅರೆಸ್ಟ್

    ಆದಾಗ್ಯೂ, ರಾಷ್ಟ್ರಪತಿ ಚುನಾವಣೆಗೆ ಶರದ್ ಪವಾರ್ ಅವರು ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆಯಾಗಲಿರುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

    ಇತ್ತೀಚೆಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶರದ್ ಪವಾರ್ ಅವರನ್ನು ಭೇಟಿಯಾಗಿದ್ದರು. ಸೋನಿಯಾ ಗಾಂಧಿ ಅವರ ನಿರ್ದೇಶನದಂತೆ ಪವಾರ್ ಅವರನ್ನು ಭೇಟಿ ಮಾಡಿ, ಒಮ್ಮತದ ಅಭ್ಯರ್ಥಿಯಾಗಿ ಬೆಂಬಲಿಸುವ ಬಗ್ಗೆ ಚರ್ಚಿಸಿರುವುದಾಗಿಯೂ ಖರ್ಗೆ ಸ್ಪಷ್ಟಪಡಿಸಿದ್ದರು.

    ಇದೀಗ ಶರದ್ ಪವಾರ್ ಅವರೇ ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಕಾಂಗ್ರೆಸ್, ಶಿವಸೇನೆ, ಟಿಎಂಸಿ, ಡಿಎಂಕೆ ಪಕ್ಷಗಳು ಪವಾರ್ ಅವರನ್ನು ರಾಷ್ಟ್ರಪತಿ ಚುನಾವಣೆಯಲ್ಲಿ ಕಣಕ್ಕಿಳಿಸಲು ತಮ್ಮ ಸಹಮತವನ್ನು ತೋರಲಿವೆ ಎನ್ನಲಾಗಿದೆ. ಆಮ್ ಆದ್ಮಿ ಪಕ್ಷವೂ ಪವಾರ್ ಅವರನ್ನು ಬೆಂಬಲಿಸುವುದರಲ್ಲಿ ಅಚ್ಚರಿ ಏನೂ ಇಲ್ಲವೆಂದು ಹೇಳಲಾಗುತ್ತಿದೆ.

  • ರಾಷ್ಟ್ರಪತಿ ಚುನಾವಣೆಗೆ ಲಾಲೂ ಪ್ರಸಾದ್ ಯಾದವ್ ಸ್ಪರ್ಧೆ

    ರಾಷ್ಟ್ರಪತಿ ಚುನಾವಣೆಗೆ ಲಾಲೂ ಪ್ರಸಾದ್ ಯಾದವ್ ಸ್ಪರ್ಧೆ

    ಪಾಟ್ನಾ: ಮುಂದಿನ ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಕಣಕ್ಕಿಳಿಯಲು ಲಾಲೂ ಪ್ರಸಾದ್ ಯಾದವ್ ಸಿದ್ಧತೆ ನಡೆಸಿದ್ದಾರೆ. ಆದರೆ ಇವರು ರಾಷ್ಟ್ರೀಯ ಜನತಾ ದಳದ (RJD) ಮುಖ್ಯಸ್ಥರಲ್ಲ.

    ಇವರು ಬಿಹಾರದ ಸರನ್ ಜಿಲ್ಲೆಯ ನಿವಾಸಿಯಾಗಿದ್ದಾರೆ. ಜೂನ್ 15ರಂದು ನಾಮಪತ್ರ ಸಲ್ಲಿಸುವ ಸಲುವಾಗಿ ದೆಹಲಿಗೆ ತೆರಳಲು ವಿಮಾನದ ಟಿಕೆಟ್ ಸಹ ಬುಕ್ ಮಾಡಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆ – ರಾಜ್ಯದಲ್ಲಿಂದು 463 ಮಂದಿಗೆ ಕೊರೊನಾ

    ಲಾಲೂ ಪ್ರಸಾದ್ ಯಾದವ್ ಚುನಾವಣೆಗೆ ಸ್ಪರ್ಧಿಸುತ್ತಿರುವುದು ಇದೇ ಮೊದಲೇನಲ್ಲ. 2017ರಲ್ಲಿಯೂ ಅವರು ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಅಂದಿನ ಬಿಹಾರದ ರಾಜ್ಯಪಾಲ ರಾಮನಾಥ ಕೋವಿಂದ್ ಹಾಗೂ ಬಿಹಾರದವರೇ ಆದ ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ಮಧ್ಯೆ ಪೈಪೋಟಿ ಏರ್ಪಟ್ಟಿತ್ತು. ಈ ಪೈಕಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರು. ಇದನ್ನೂ ಓದಿ: ದೈನಂದಿನ ಜೀವನದ ಭಾಗವಾಗಲಿ ಯೋಗ – ಪ್ರಧಾನಿ ಮೋದಿ ಕರೆ

    ರಾಜಕೀಯ ಇತಿಹಾಸದಲ್ಲಿ ಸತತವಾಗಿ ಚುನಾವಣೆಗಳಲ್ಲಿ ಸ್ಫರ್ಧಿಸುತ್ತಿದ್ದೂ ಸೋಲುತ್ತಲೇ ಇರುವುದರಿಂದ ಕೆಲವರು ಪ್ರಚಾರದ ಸಲುವಾಗಿಯೇ ಚುನಾವಣಾ ಕಣಕ್ಕೆ ಧುಮುಕುತ್ತಾರೆ. ಅಂಥವರ ಸಾಲಿಗೆ ಲಾಲೂ ಪ್ರಸಾದ್ ಸೇರಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಆದರೆ ತಮ್ಮ ವಿರುದ್ಧದ ಟೀಕೆಗಳಿಗೆ ತಲೆಕೆಡಿಸಿಕೊಳ್ಳದ ಯಾದವ್ ಸತತ ಒಂದಿಲ್ಲೊಂದು ಚುನಾವಣೆಯಲ್ಲಿ ಸ್ಪರ್ಧಿಸುತ್ತಲೇ ಇದ್ದಾರೆ.

    ಇಷ್ಟಾದರೂ ಅವರು ಚುನಾವಣೆಯ ಆಸಕ್ತಿ ಕಳೆದುಕೊಂಡಿರಲಿಲ್ಲ. 2019ರ ಚುನಾವಣೆಯಲ್ಲಿ ಮತ್ತೆ ಕಣಕ್ಕಿಳಿದಿದ್ದರು. ಆಗ ಸುಮಾರು 6 ಸಾವಿರ ಮತಗಳನ್ನು ಪಡೆದುಕೊಂಡಿದ್ದರು. ಇದೀಗ ಮತ್ತೆ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಲಾಲೂ ಪ್ರಸಾದ್ ಯಾದವ್, ಕಳೆದ ಬಾರಿ ನನ್ನ ನಾಮಪತ್ರ ತಿರಸ್ಕೃತವಾಗಿತ್ತು. ನನ್ನ ಉಮೇದುವಾರಿಕೆಯನ್ನು ಬೆಂಬಲಿಸಲು ಸಾಕಷ್ಟು ಸಂಖ್ಯೆಯ ಅನುಮೋದಕರೂ ಇರಲಿಲ್ಲ. ಆದರೆ ಈ ಬಾರಿ ನಾನು ಉತ್ತಮ ತಯಾರಿ ನಡೆಸಿದ್ದೇನೆ ಎಂದಿದ್ದಾರೆ.

  • ಮತ ಎಣಿಕೆ 1 ದಿನ ಪೂರ್ಣಗೊಂಡರೂ ಇನ್ನೂ ಅಮೆರಿಕದ ಫಲಿತಾಂಶ ಪ್ರಕಟವಾಗಿಲ್ಲ ಯಾಕೆ?

    ಮತ ಎಣಿಕೆ 1 ದಿನ ಪೂರ್ಣಗೊಂಡರೂ ಇನ್ನೂ ಅಮೆರಿಕದ ಫಲಿತಾಂಶ ಪ್ರಕಟವಾಗಿಲ್ಲ ಯಾಕೆ?

    ವಾಷಿಂಗ್ಟನ್: ಇಡೀ ವಿಶ್ವದ ಕಣ್ಣು ಅಮೆರಿಕ ಚುನಾವಣೆಯನ್ನು ನೋಡುತ್ತಿದೆ. ಡೊನಾಲ್ಡ್ ಟ್ರಂಪ್ ಮತ್ತು ಜೋ ಬೈಡನ್ ನಡುವೆ ಭಾರೀ ಸ್ಪರ್ಧೆ ನಡೆಯುತ್ತಿದೆ. ಚುನಾವಣೆ ಮತ ಎಣಿಕೆ ಒಂದು ದಿನ ಕಳೆದರೂ ಇನ್ನೂ ಫಲಿತಾಂಶ ಮಾತ್ರ ಪ್ರಕಟವಾಗಿಲ್ಲ. ಭಾರತದಲ್ಲಿ ಮತ ಎಣಿಕೆ ಆರಂಭವಾದ ಆರಂಭದಲ್ಲೇ ಟ್ರೆಂಡ್ ತಿಳಿದು ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟವಾಗುತ್ತದೆ. ಹೀಗಿರುವಾಗ ಮುಂದುವರಿದ ದೇಶ, ವಿಶ್ವದ ದೊಡ್ಡಣ್ಣ ಎಂದು ಅಮೆರಿಕವನ್ನು ಕರೆಯುತ್ತಿರುವಾಗ ಫಲಿತಾಂಶ ಯಾಕೆ ಇನ್ನೂ ಘೋಷಣೆಯಾಗಿಲ್ಲ ಎಂಬ ಪ್ರಶ್ನೆ ಮೂಡುವುದು ಸಹಜ.

    ಈ ಪ್ರಶ್ನೆಗೆ ಎರಡು ಉತ್ತರವನ್ನು ನೀಡಬಹುದು. ಇಲ್ಲಿಯವರೆಗೆ ನಡೆದ ಚುನಾವಣೆಯಲ್ಲಿ ಈ ಬಾರಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆದಿದೆ. ಇದರ ಜೊತೆಯಲ್ಲಿ ಕೋವಿಡ್ 19 ಕಾರಣದಿಂದ ಈ ಬಾರಿ ಅತಿ ಹೆಚ್ಚು ಅಂಚೆ ಮತದಾನ ನಡೆದಿದೆ.

    ಈ ಬಾರಿ ಶೇ.65 ರಷ್ಟು ಮತದಾನ ನಡೆಯಬಹುದು ಎಂದು ಅಂದಾಜಿಸಲಾಗಿದೆ. ಯಾಕೆಂದರೆ ಕೆಲ ರಾಜ್ಯಗಳಲ್ಲಿ ಪೋಸ್ಟಲ್ ವೋಟಿಂಗ್ ಮಾಡಲು ನ.13ರವರೆಗೆ ಅವಕಾಶವಿದೆ. ಹೀಗಾಗಿ ಇಲ್ಲಿಯವರೆಗೆ ನಡೆದ ಚುನಾವಣೆಯಲ್ಲಿ ಈ ಬಾರಿ ಅತಿ ಹೆಚ್ಚಿನ ಮತದಾನ ನಡೆಯುವ ಮೂಲಕ ದಾಖಲೆ ಬರೆದಿದೆ. ಈ ಹಿಂದೆ 2016ರಲ್ಲಿ ಶೇ.60.1, 2012ರಲ್ಲಿ ಶೇ.58.6, 2008ರಲ್ಲಿ ಶೇ.61.6 ರಷ್ಟು ಮತದಾನ ನಡೆದಿತ್ತು.

    ಕೋವಿಡ್ 19 ಹಿನ್ನೆಲೆಯಲ್ಲಿ ಹೆಚ್ಚಿನ ಜನ ಸಂಖ್ಯೆಯ ಜನ ಅಂಚೆ ಮತದಾನ ಮಾಡಿದ್ದಾರೆ. ಈ ಬಾರಿ ಒಟ್ಟು 8 ಕೋಟಿಯಷ್ಟು ಅಂಚೆ ಮತದಾನ ನಡೆಯಬಹುದು ಎಂದು ಅಂದಾಜಿಸಲಾಗಿದೆ. ಇದರ ಜೊತೆ ಅಮೆರಿಕದ ಒಂದೊಂದು ರಾಜ್ಯಗಳು ಒಂದೊಂದು ಚುನಾವಣೆಗೆ ಒಂದೊಂದು ದಿನಾಂಕವನ್ನು ನಿಗದಿ ಮಾಡಿವೆ.

    ಉದಾಹರಣೆಗೆ ಅರಿಜೋನಾದದಲ್ಲಿ ಅಕ್ಟೋಬರ್ 7 ರಿಂದ ಅಂಚೆ ಮತದಾನಕ್ಕೆ ಅವಕಾಶ ನೀಡಲಾಗಿದ್ದು ನ.3ರವರೆಗೆ ಮತದಾನ ಮಾಡಬಹುದು ಎಂದು ಹೇಳಿತ್ತು. ಅಷ್ಟೇ ಅಲ್ಲದೇ ಅಕ್ಟೋಬರ್ 20 ರಿಂದಲೇ ಮತ ಎಣಿಕೆಯನ್ನು ಆರಂಭಿಸಿದೆ. ಒಹಿಯೋದಲ್ಲಿ ಅಕ್ಟೋಬರ್ 6 ರಿಂದ ಮತದಾನ ಆರಂಭವಾಗಿದ್ದು, ನವೆಂಬರ್ 13ರವರೆಗೆ ಮತದಾನ ಮಾಡಬಹುದು ಎಂದು ತಿಳಿಸಿದೆ. ಈ ಕಾರಣಕ್ಕಾಗಿ ಚುನಾವಣೆ ಫಲಿತಾಂಶ ಬರಲು ತಡವಾಗುತ್ತಿದೆ.

    ಭಾರತದಲ್ಲಿ ಚುನಾವಣಾ ಆಯೋಗ ಸಂಪೂರ್ಣವಾಗಿ ಚುನಾವಣೆಯನ್ನು ನೋಡಿಕೊಳ್ಳುತ್ತದೆ. ಆದರೆ ಅಮೆರಿಕದಲ್ಲಿ ರಾಜ್ಯದ ಕಾರ್ಯದರ್ಶಿಗಳು ಚುನಾವಣೆಯ ಹೊಣೆಯನ್ನು ಹೊರುತ್ತಾರೆ. ಈ ಕಾರ್ಯದರ್ಶಿಗಳನ್ನು ಜನರಿಂದ ಆಯ್ಕೆಯಾದ ಗವರ್ನರ್‌ಗಳು ನೇಮಕ ಮಾಡುತ್ತಾರೆ. ಸಾಧಾರಣವಾಗಿ ಈ ಕಾರ್ಯದರ್ಶಿಗಳು ಗವರ್ನರ್ ಪರವಾಗಿ ಕೆಲಸ ಮಾಡುವ ಕಾರಣ ಒಂದೊಂದು ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯ ದಿನಾಂಕಗಳು ಬದಲಾಗಿವೆ.

    ಮತ ಎಣಿಕೆಗೂ ಮತದಾರರ ಸಹಿಯನ್ನು ಚೆಕ್ ಮಾಡಬೇಕು, ದಾಖಲೆ ಪರಿಶೀಲಿಸಬೇಕು. ಅಷ್ಟೇ ಅಲ್ಲದೇ ಬ್ಯಾಲೆಟ್ ಸ್ಕ್ಯಾನ್ ಮಾಡಬೇಕು. ಈ ಪ್ರಕ್ರಿಯೆ ದೀರ್ಘ. ಈಗ ಅಮರಿಕ ಚುನಾವಣೆ ಫಲಿತಾಂಶ ಅಧಿಕೃತ ಫಲಿತಾಂಶದ ಮಾಹಿತಿಯಲ್ಲ. ಈಗ ನೀಡುತ್ತಿರುವುದು ಮಾಧ್ಯಮಗಳ ವರದಿ ಅಷ್ಟೇ.

    ಭಾರತದಲ್ಲಿ ಹೇಗೆ?
    ಭಾರತದಲ್ಲಿ ಚುನಾವಣಾ ಆಯೋಗ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟಿಸುತ್ತದೆ. ಭದ್ರತೆಯ ದೃಷ್ಟಿಯಿಂದ ವಿವಿಧ ಹಂತಗಳಲ್ಲಿ ಚುನಾವಣೆ ನಡೆಯುತ್ತದೆ. ಲೋಕಸಭಾ ಚುನಾವಣೆ ಒಂದೊಂದು ರಾಜ್ಯದಲ್ಲಿ ಒಂದೊಂದು ದಿನ ನಡೆದರೂ ಅಂತಿಮವಾಗಿ ಮತ ಎಣಿಕೆ ಒಂದೇ ದಿನ ನಡೆಯುತ್ತದೆ.

     

     

    ಭಾರತದಲ್ಲಿ ಚುನಾವಣಾ ಕರ್ತವ್ಯ ನಿರತ ಸರ್ಕಾರಿ ಸಿಬ್ಬಂದಿ, ಸೈನಿಕರು, ಅಧಿಕಾರಿಗಳಿಗೆ ಮಾತ್ರ ಅಂಚೆ ಮಾತದಾನ ಮಾಡಲು ಅವಕಾಶ ನೀಡಲಾಗುತ್ತದೆ. ಉಳಿದ ಮತದಾರರು ನಿಗದಿ ಮಾಡಿದ ಮತಗಟ್ಟೆಗೆ ಆಗಮಿಸಿ ಇವಿಎಂ ಮೂಲಕ ಮತವನ್ನು ಚಲಾಯಿಸುತ್ತಾರೆ. ಮತ ಸರಿಯಾದ ಅಭ್ಯರ್ಥಿಗೆ  ಬಿದ್ದಿದೆ ಎಂಬುದನ್ನು ವಿವಿಪ್ಯಾಟ್ ಮೂಲಕ ಮತದಾರ ಖಚಿತ ಪಡಿಸಬಹುದು.

    ಫಲಿತಾಂಶದ ದಿನ ಆರಂಭದಲ್ಲಿ ಅಂಚೆ ಮತ ಎಣಿಕೆ ನಡೆಯುತ್ತದೆ. ಬಳಿಕ ಇವಿಎಂ ಮತ ಎಣಿಕೆ ಮಾಡಲಾಗುತ್ತದೆ. ಇವಿಎಂ ಮೂಲಕ ಚುನಾವಣೆ ನಡೆದಿರುವ ಕಾರಣ ಕೆಲವೇ ನಿಮಿಷದಲ್ಲಿ ಒಂದು ಬೂತ್ ಮತ ಎಣಿಕೆ ನಡೆಯುತ್ತದೆ. ಅಂತಿಮವಾಗಿ ಯಾವುದಾದರು ಎರಡು ಅಥವಾ ಮೂರು ಮತಗಟ್ಟೆಯ ವಿವಿಪ್ಯಾಟ್ ಎಣಿಕೆ ಮಾಡಿ ಬಿದ್ದಿರುವ ಮತಕ್ಕೂ ವಿವಿಪ್ಯಾಟ್‍ನಲ್ಲಿ ಪ್ರಿಂಟ್ ಆಗಿರುವ ಸ್ಲಿಪ್‍ಗೂ ತಾಳೆ ಮಾಡಿ ಮತ ಎಣಿಕೆ ಕೆಲಸವನ್ನು ಪೂರ್ಣಗೊಳಿಸಲಾಗುತ್ತದೆ.

  • ಭಾರತದ 14ನೇ ರಾಷ್ಟ್ರಪತಿ ಯಾರಾಗ್ತಾರೆ – ಸಂಜೆ ವೇಳೆಗೆ ಸಿಗಲಿದೆ ಮತ ಎಣಿಕೆಯ ಉತ್ತರ

    ಭಾರತದ 14ನೇ ರಾಷ್ಟ್ರಪತಿ ಯಾರಾಗ್ತಾರೆ – ಸಂಜೆ ವೇಳೆಗೆ ಸಿಗಲಿದೆ ಮತ ಎಣಿಕೆಯ ಉತ್ತರ

    ಬೆಂಗಳೂರು: ಭಾರತದ 14ನೇ ರಾಷ್ಟ್ರಪತಿ ಆಯ್ಕೆಯ ಮತ ಎಣಿಕೆ ಇಂದು ನಡೆಯಲಿದ್ದು, ಸಂಜೆ ವೇಳೆಗೆ ರಾಷ್ಟ್ರಪತಿ ಯಾರು ಅನ್ನೋ ಕುತೂಹಲಕ್ಕೆ ತೆರೆ ಬೀಳಲಿದೆ.

    ರಾಷ್ಟ್ರಪತಿಯಾಗಿ ಎನ್‍ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಆಯ್ಕೆ ಬಹುತೇಕ ಖಚಿತವಾಗಿದ್ದು, ವಿರೋಧ ಪಕ್ಷಗಳ ಅಭ್ಯರ್ಥಿ ಮೀರಾಕುಮಾರ್ ಅಚ್ಚರಿ ರೀತಿಯಲ್ಲಿ ಗೆದ್ದು ಬರ್ತಾರ ಅನ್ನೋ ಕುತೂಹಲವೂ ಇದೆ. ಜುಲೈ 17ರಂದು ಮತದಾನ ನಡೆದಿದ್ದು ಸಂಸತ್ ಸೇರಿ ಒಟ್ಟು 32 ಮತಕೇಂದ್ರಗಳ ಸ್ಥಾಪನೆ ಮಾಡಲಾಗಿತ್ತು.

    ಶೇಕಡ 99ರಷ್ಟು ಮತದಾನ ನಡೆದಿತ್ತು. ಒಟ್ಟು 4,896 ಮತ ಚಲಾವಣೆಯಾಗಿದ್ದು, 4,120 ಶಾಸಕರು ಹಾಗೂ 776 ಸಂಸದರು ಮತ ಚಲಾಯಿಸಿದ್ದಾರೆ. ಪ್ರತಿ ಸಂಸದರ ಮತಮೌಲ್ಯ 708 ಆಗಿದ್ದು, ಒಟ್ಟು ಮತಗಳ ಮೌಲ್ಯ 5 ಲಕ್ಷದ 49 ಸಾವಿರದ 408 ಆಗಿದೆ. 4,120 ಶಾಸಕರ ಮತಗಳ ಮೌಲ್ಯ ಒಗ್ಗೂಡಿಸಿದಾಗ ಒಟ್ಟು 5 ಲಕ್ಷದ 49 ಸಾವಿರದ 474 ಆಗುತ್ತದೆ.

    ಬೆಳಗ್ಗೆ 11 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು ಆಲ್ಫಬೆಟ್ ಪ್ರಕಾರ ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ಪ್ರಕ್ರಿಯೆ 4 ಹಂತದಲ್ಲಿ 8 ರೌಂಡ್‍ಗಳಲ್ಲಿ ನಡೆಯಲಿದೆ. ಗೆದ್ದ ಪ್ರಥಮ ಪ್ರಜೆ ಸೋಮವಾರ ಅಂದ್ರೆ 24ರಂದು ಅಧಿಕಾರಕ್ಕೆ ಏರಲಿದ್ದಾರೆ. ಈಗಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೆಹಲಿಯ 10 ರಾಜಾಜಿ ಮಾರ್ಗ್‍ನಲ್ಲಿ ಇನ್ಮುಂದೆ ವಾಸ್ತವ್ಯ ಹೂಡಲಿದ್ದಾರೆ.

     

     

  • ರಾಷ್ಟ್ರಪತಿ ಚುನಾವಣೆಗೆ ಕ್ಷಣಗಣನೆ ಆರಂಭ-ಮೈತ್ರಿ ರಾಜಕೀಯದಲ್ಲಿ ಸೋಲು ಗೆಲುವಿನ ಲೆಕ್ಕಾಚಾರ

    ರಾಷ್ಟ್ರಪತಿ ಚುನಾವಣೆಗೆ ಕ್ಷಣಗಣನೆ ಆರಂಭ-ಮೈತ್ರಿ ರಾಜಕೀಯದಲ್ಲಿ ಸೋಲು ಗೆಲುವಿನ ಲೆಕ್ಕಾಚಾರ

    ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ದೇಶದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದ ರಾಷ್ಟ್ರಪತಿ ಚುನಾವಣೆಗೆ ಕ್ಷಣಗಣಗೆ ಆರಂಭವಾಗಿದೆ. ಇಂದು 10 ಗಂಟೆಯಿಂದ ಚುನಾವಣಾ ಮತದಾನ ಪ್ರಕ್ರಿಯೆ ನಡೆಯಲಿದೆ. ದಲಿತ ವರ್ಸಸ್ ದಲಿತ ಫೈಟ್ ಜೋರಾಗಿದ್ದು, ಅಡ್ಡ ಮತದಾನವಾಗುವ ಭೀತಿಯಲ್ಲಿ ಪಕ್ಷಗಳಿವೆ. ಹೀಗಾಗಿ ತನ್ನ ಸದಸ್ಯರಿಗೆ ತಮ್ಮ ಅಭ್ಯರ್ಥಿಗಳಿಗೆ ಮತದಾನ ಮಾಡುವಂತೆ ಸಭೆ ಕರೆದು ಮನವಿ ಮಾಡಿದ್ದಾರೆ.

    ಇಂದಿನಿಂದ ಆರಂಭವಾಗುವ ಮಳೆಗಾಲದ ಅಧಿವೇಶನದಲ್ಲಿ ನೂತನ ಪ್ರಥಮ ಪ್ರಜೆಗೆ ಮತದಾನ ನಡೆಯಲಿದೆ. ಎನ್‍ಡಿಎ ಮಿತ್ರಕೂಟದಿಂದ ರಾಮನಾಥ್ ಕೋವಿಂದ್ ಹಾಗೂ ಯುಪಿಎ ಒಕ್ಕೂಟದಿಂದ ಮೀರಾ ಕುಮಾರ್ ಪ್ರಬಲ ಅಭ್ಯರ್ಥಿಗಳಾಗಿದ್ದಾರೆ. ಈ ಇಬ್ಬರು ಅಭ್ಯರ್ಥಿಗಳು ದಲಿತರಾಗಿದ್ದು, ಈ ಬಾರಿಯ ಚುನಾವಣೆ ಸಾಕಷ್ಟು ಕುತೂಹಲ ಮೂಡಿಸಿದೆ.

    ಸಂಸದರು ಸಂಸತ್ ನಲ್ಲಿ ಹಾಗೂ ವಿಧಾನಸಭೆ ಸದಸ್ಯರು ಆಯಾ ರಾಜ್ಯದ ವಿಧಾನಸಭೆಯಲ್ಲಿ ಮತದಾನ ಮಾಡಲಾಗುತ್ತಿತ್ತು. ಈ ವರ್ಷ ಸಂಸದರು ಆಯಾ ರಾಜ್ಯದ ವಿಧಾನಸಭೆಯಲ್ಲಿ ಮತದಾನಕ್ಕೆ ಅವಕಾಶ ಕೇಳಿದ್ದು, ಆಯೋಗ ಕೂಡಾ ಒಪ್ಪಿಗೆ ಸೂಚಿಸಿದೆ. ಈ ಹಿನ್ನಲೆ ಅಡ್ಡಮತದಾನದ ಭಯ ಕೂಡ ಪಕ್ಷಗಳಲ್ಲಿ ಹೆಚ್ಚಾಗಿ ಕಾಡತೊಡಗಿದೆ.

    ಇವರು ಮತದಾರರರು: ರಾಷ್ಟ್ರಪತಿ ಚುನಾವಣೆ ಇತರೆ ಚುನಾವಣೆಗಳಿಗಿಂತ ಭಿನ್ನವಾಗಿದೆ. ರಾಷ್ಟ್ರಪತಿ ಚುನಾವಣಾ ಪ್ರಕ್ರಿಯೆಯನ್ನು ಎಲೆಕ್ಟ್ರೊ ಕೊರಲ್ ಅಂತಾ ಕರೆಯಲಾಗುತ್ತೆ. ಅಂದ್ರೆ ಲೋಕಸಭೆ ರಾಜ್ಯಸಭೆ ಸಂಸದರು ಮತ್ತು ಎಲ್ಲ ರಾಜ್ಯಗಳ ವಿಧಾನಸಭಾ ಸದಸ್ಯರು ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಡಲು ಅರ್ಹರು. ಈ ಪದ್ಧತಿಯನ್ನ ಎಲೆಕ್ಟ್ರೊ ಕಾಲೇಜ್ ಎನ್ನಲಾಗುತ್ತೆ. ಇನ್ನೊಂದು ಮುಖ್ಯಾಂಶ ಇಲ್ಲಿ ಸಂಸದ ಮತ್ತು ಮತದ ಮೌಲ್ಯ 708 ಹಾಗೂ ಪ್ರತಿಯೊಂದು ರಾಜ್ಯ ವಿಧಾನ ಸಭಾ ಸದಸ್ಯನ ಮತದ ಮೌಲ್ಯ ಆಯಾ ರಾಜ್ಯದ ಜನಸಂಖ್ಯೆ ಆಧರಿಸಿರುತ್ತೆ. ಅಂದ್ರೆ 1971ರ ಜನಸಂಖ್ಯೆ ಆಧಾರ ಮೇಲೆ ಆಯಾ ರಾಜ್ಯದ ಜನಸಂಖ್ಯೆಯನ್ನು ಪ್ರತಿ ಶಾಸಕನಿಗೂ ವಿಭಾಗಿಸಿ ಸಾವಿರದಿಂದ ಭಾಗಿಸಬೇಕು. ಆಗಾ ಬರುವ ಅಂಕಿ ಆ ರಾಜ್ಯದ ಶಾಸಕನ ಮತ ಮೌಲ್ಯವಾಗಿರುತ್ತದೆ.

    ಮತದಾರರ ಸಂಖ್ಯೆ:
    * ರಾಷ್ಟ್ರಪತಿ ಚುನಾವಣೆ ಒಟ್ಟು ಮತದಾರ ಸಂಖ್ಯೆ-4896
    * ಇದರಲ್ಲಿ ಲೋಕಸಭೆ ಮತ್ತು ರಾಜ್ಯ ಸಭೆ ಸಂಸದರು-776
    * ಎಲ್ಲ ರಾಜ್ಯಗಳ ವಿಧಾನಸಭಾ ಸದಸ್ಯರ ಸಂಖ್ಯೆ-4120

    ಮತ ಲೆಕ್ಕಾಚಾರ ಹೇಗೆ?
    ಪ್ರಸ್ತುತ ಈಗ ದೇಶದಲ್ಲಿ 776 ಸಂಸದರು ಮತ್ತು 4,120 ಶಾಸಕರಿದ್ದಾರೆ. 1971ರ ಜನಗಣತಿಯ ಆಧರಿಸಿ ಸಂಸದರು, ಶಾಸಕರ ಮತಮೌಲ್ಯ ನಿರ್ಧಾರ ಮಾಡಲಾಗುತ್ತದೆ. ರಾಜ್ಯದ ಜನಸಂಖ್ಯೆಯನ್ನು ಒಟ್ಟು ಶಾಸಕರ ಸಂಖ್ಯೆಯೊಂದಿಗೆ ಭಾಗಿಸಿ 1 ಸಾವಿರದೊಂದಿಗೆ ಗುಣಿಸಿದಾಗ ಶಾಸಕರ ಮತಮೌಲ್ಯ ಸಿಗುತ್ತದೆ.

    ಕರ್ನಾಟಕದ ಶಾಸಕರ ಮತ ಮೌಲ್ಯ ಎಷ್ಟು?
    1971ರ ಜನಗಣತಿಯ ಪ್ರಕಾರ ಕರ್ನಾಟಕದ ಜಸಂಖ್ಯೆ = 2,92,99,014.
    ಕರ್ನಾಟಕದ ಶಾಸಕರ ಮತಮೌಲ್ಯ = 131
    ಕರ್ನಾಟಕದ ಒಟ್ಟು ಮತ ಮೌಲ್ಯ (131*224) = 29,344

    ಬೇರೆ ರಾಜ್ಯದಲ್ಲಿ ಎಷ್ಟು?
    ಉತ್ತರ ಪ್ರದೇಶದ ಶಾಸಕರ ಮತಮೌಲ್ಯ 208 ಆಗಿದ್ದರೆ, ಗೋವಾ ಶಾಸಕರ ಮತಮೌಲ್ಯ 8 ಆಗಿದೆ.

    ಸಂಸದರ ಮತ ಮೌಲ್ಯ ಎಷ್ಟು?
    ಎಲ್ಲಾ ರಾಜ್ಯಗಳ ಶಾಸಕರ ಮತಮೌಲ್ಯವನ್ನು ಸಂಸದರ ಒಟ್ಟು ಸಂಖ್ಯೆಯಿಂದ ಭಾಗಿಸಿದಾಗ ಸಂಸದರ ಮತ ಮೌಲ್ಯ ಸಿಗುತ್ತದೆ.
    ಸಂಸದರ ಮತ ಮೌಲ್ಯ : 5,49,474/776 = 708

    ಈಗಾಗಲೇ ಹೆಚ್ಚು ಮತಗಳನ್ನು ಹೊಂದಿರುವ ಎನ್‍ಡಿಎ ಗೆ ಗೆಲವಿನ ನಗೆ ಬೀರಲು ಕೇವಲ 11.828 ಮತಗಳು ಮಾತ್ರಬೇಕು. ಶಿವಸೇನೆ, ಎಐಎಡಿಎಂಕೆ, ಅಕಾಲಿದಳ, ಸಿಪಿಜೆ ಸೇರಿದಂತೆ ಹದಿನಾಲ್ಕು ಮಿತ್ರ ಪಕ್ಷಗಳು ಬೆಂಬಲ ಘೋಷಿಸಿವೆ. ಯುಪಿಎ ಒಕ್ಕೂಟಕ್ಕೆ 1,47,212 ಮತಗಳು ಬೇಕಾಗಿದ್ದು ಟಿಎಂಸಿ, ಬಿಎಸ್ಪಿ, ಆರ್‍ಜೆಡಿ, ಜೆಡಿಎಸ್ ಸೇರಿದಂತೆ ಹದಿನೇಳು ಮಿತ್ರಪಕ್ಷಗಳ ಬೆಂಬಲ ನೀಡಿವೆ. ಇದರ ಜೊತೆಗೆ ಆಪ್, ಬಿಜೆಡಿ, ಟಿಎಸ್‍ಆರ್, ವೈಎಸ್‍ಆರ್ ನಿರ್ಣಾಯಕ ಸ್ಥಾನದಲ್ಲಿವೆ.

    ಒಂದು ಹಂತದಲ್ಲಿ ಮೇಲ್ನೋಟಕ್ಕೆ ಎನ್‍ಡಿಎ ಸರ್ಕಾರದ ಅಭ್ಯರ್ಥಿ ರಾಮನಾಥ್ ಕೋವಿಂದ್ ಗೆ ಬೆಂಬಲ ಹೆಚ್ಚಿದ್ದು ಮತದಾನದ ವೇಳೆ ಅಚ್ಚರಿಯ ಬೆಳವಣಿಗೆ ಯಾದ್ರೆ ಯುಪಿಎ ಅಭ್ಯರ್ಥಿ ಮೀರಾಕುಮಾರ್ ಗೆಲುವನ್ನು ಅಲ್ಲಗೆಳೆಯುವಂತಿಲ್ಲ. ಒಟ್ಟಿನಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆ ವರೆಗೆ ಮತದಾನ ನಡೆಯಲಿದ್ದು, ಇದೇ ಜುಲೈ 20ರಂದು ದೇಶದ ಮೊದಲ ಪ್ರಜೆ ಯಾರು ಅಂತಾ ಗೊತ್ತಾಗಲಿದೆ.

     

  • ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ಚಾಲೆಂಜ್ ಎಸೆದು ಗೆದ್ದ ಅಮಿತ್ ಶಾ

    ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ಚಾಲೆಂಜ್ ಎಸೆದು ಗೆದ್ದ ಅಮಿತ್ ಶಾ

    ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲೂ ಚಾಲೆಂಜ್ ಹಾಕಿ ಗೆದ್ದಿದ್ದಾರೆ.

    ಹೌದು. ಮೋದಿ ಸರ್ಕಾರಕ್ಕೆ ಮೂರು ವರ್ಷ ಪೂರ್ಣಗೊಂಡ ಸಂದರ್ಭದಲ್ಲಿ ಬಿಜೆಪಿ ಬೀಟ್ ಕವರ್ ಮಾಡುವ ರಾಷ್ಟ್ರೀಯ ಮಾಧ್ಯಮಗಳ ಪತ್ರಕರ್ತರಿಗೆ ಭೋಜನ ಕೂಟವನ್ನು ಪಕ್ಷ ಆಯೋಜಿಸಿತ್ತು. ಪತ್ರಕರ್ತರ ಜೊತೆ ಮಾತನಾಡುವ ಸಂದರ್ಭದಲ್ಲಿ ಅಮಿತ್ ಶಾ, “ನೀವು ಎಷ್ಟೇ ಸುದ್ದಿಯನ್ನು ಪ್ರಕಟಿಸಿದರೂ ನಾನು ಪ್ರಕಟ ಮಾಡುವವರೆಗೂ ರಾಷ್ಟ್ರಪತಿ ಅಭ್ಯರ್ಥಿ ಯಾರು ಎನ್ನುವುದು ನಿಮಗೆ ಗೊತ್ತೆ ಆಗುವುದಿಲ್ಲ” ಎಂದು ತಿಳಿಸಿದ್ದರು.

    ಹಲವು ವರ್ಷಗಳ ರಾಜಕೀಯ ವರದಿಗಾರಿಕೆಯ ಅನುಭವ ಮತ್ತು ಬಿಜೆಪಿ ಹಿರಿಯ ನಾಯಕರ ಪರಿಚಯ ಹೊಂದಿದ್ದ ಪತ್ರಕರ್ತರು ಅಮಿತ್ ಶಾ ಎಸೆದ ಈ ಸವಾಲನ್ನು ಗಂಭೀರವಾಗಿ ಸ್ವೀಕರಿಸಿದ್ದರು. ಈ ಕಾರಣಕ್ಕಾಗಿ ಹಿರಿಯ ನಾಯಕ ಎಲ್‍ಕೆ ಅಡ್ವಾಣಿ, ಜಾರ್ಖಂಡ್ ರಾಜ್ಯಪಾಲೆ ದ್ರೌಪದಿ ಮುರ್ಮು, ಮೆಟ್ರೋ ಮ್ಯಾನ್ ಇ ಶ್ರೀಧರನ್ ಹೆಸರು ಹಲವು ಮಧ್ಯಮಗಳಲ್ಲಿ ತೇಲಿಬಂದಿತ್ತು. ಆದರೆ ಯಾವೊಂದು ಮಾಧ್ಯಮದಲ್ಲಿ ರಾಮನಾಥ್ ಕೋವಿಂದ್ ಅವರೇ ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಬಗ್ಗೆ ಸುದ್ದಿ ಬಂದಿರಲೇ ಇಲ್ಲ.

    ಅಮಿತ್ ಶಾ ಸೋಮವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಕೋವಿಂದ್ ಅಭ್ಯರ್ಥಿ ಎಂದು ಪ್ರಕಟಿಸುವ ಸಂದರ್ಭದಲ್ಲಿ, ರಾಮನಾಥ್ ಅವರು ಬಿಹಾರ ರಾಜ್ಯಪಾಲರು ಎನ್ನುವ ಮಾಹಿತಿ ಬಿಟ್ಟರೆ ಹೆಚ್ಚಿನ ಮಾಹಿತಿ ಪತ್ರಕರ್ತರ ಬಳಿ ಇರಲಿಲ್ಲ ಎನ್ನುವ ವಿಚಾರವನ್ನು ಮಾಧ್ಯಮವೊಂದು ಪ್ರಕಟಿಸಿದೆ.

    ರಾಜಕೀಯ ನಾಯಕರು ಎಷ್ಟೇ ಗಂಭೀರವಾದ ವಿಷಯವನ್ನು ಚರ್ಚೆ ಮಾಡಿದರೂ ಮೂಲಗಳಿಂದಾಗಿ ಆ ಮಾಹಿತಿ ಮಾಧ್ಯಮಗಳ ತಲುಪುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಆದರೆ ರಾಷ್ಟ್ರಪತಿ ಅಭ್ಯರ್ಥಿ ವಿಚಾರದಲ್ಲಿ ಮಾಧ್ಯಮಗಳಿಗೆ ಒಂದು ಚೂರು ಸುಳಿವು ಸಿಗದಂತೆ ನೋಡಿಕೊಳ್ಳುವಲ್ಲಿ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಯಶಸ್ವಿಯಾಗಿದ್ದಾರೆ.

    ಶಾ, ಮೋದಿ ಜೋಡಿ ಈ ರೀತಿ ಸಸ್ಪೆನ್ಸ್ ಅಚ್ಚರಿಯ ಆಟ ಆಡುವುದು ಇದೇ ಮೊದಲೆನಲ್ಲ. ಈ ಹಿಂದೆ ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನಾವೀಸ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇಮಕ ಮತ್ತು ಕೇಂದ್ರ ಸರ್ಕಾರದ ಮಹತ್ವದ ಹುದ್ದೆಗಳಿಗೆ ಅಧಿಕಾರಿಗಳನ್ನು ನೇಮಿಸುವ ಸಂದರ್ಭದಲ್ಲಿ ಈ ಜೋಡಿ ಅಚ್ಚರಿ ನೀಡಿತ್ತು.

    ವಿಶೇಷವಾಗಿ ನೋಟ್ ಬ್ಯಾನ್ ನಿಷೇಧದ ನಿರ್ಧಾರ ಕೈಗೊಳ್ಳುವ ಸಂದರ್ಭದಲ್ಲೂ ಪ್ರಧಾನಿ ಮೋದಿ ಮತ್ತು ಟೀಂ ಗೌಪ್ಯತೆ ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು.

    ಇದನ್ನೂ ಓದಿ :ರಾಮನಾಥ್ ಕೋವಿಂದ್‍ಗೆ ಇದೆ ಕಲಬುರಗಿಯ ನಂಟು: ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಮೋದಿ ಹೊಡೆದಿದ್ದು ಹೇಗೆ..?

    ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ ಹೇಗೆ ನಡೆಯುತ್ತೆ? ಮತ ಲೆಕ್ಕಾಚಾರ ಹೇಗೆ? ಎನ್‍ಡಿಎ,ಯುಪಿಎ ಬಲಾಬಲ ಹೇಗಿದೆ?

     

  • ರಷ್ಯಾದ 2018ರ ಅಧ್ಯಕ್ಷೀಯ ಚುನಾವಣೆಗೆ ಭಾರತದ ಇವಿಎಂ ತಂತ್ರಜ್ಞಾನ ಬೇಕಂತೆ

    ರಷ್ಯಾದ 2018ರ ಅಧ್ಯಕ್ಷೀಯ ಚುನಾವಣೆಗೆ ಭಾರತದ ಇವಿಎಂ ತಂತ್ರಜ್ಞಾನ ಬೇಕಂತೆ

    ನವದೆಹಲಿ: ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಳಸಲಾದ ಎಲೆಕ್ಟ್ರಾನಿಕ್ ಓಟಿಂಗ್ ಮಷೀನ್(ಇವಿಎಂ)ಗಳಲ್ಲಿ ಲೋಪವಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿರುವ ಹೊತ್ತಲ್ಲೇ ರಷ್ಯಾ ಭಾರತದ ಇವಿಎಂ ತಂತ್ರಜ್ಞಾನವನ್ನ ಅಧ್ಯಕ್ಷೀಯ ಚುನಾವಣೆಯಲ್ಲಿ ಬಳಸಲು ಇಚ್ಛಿಸಿದೆ.

    2018ರ ಅಧ್ಯಕ್ಷೀಯ ಚುನಾವಣೆಯ ಹಿನ್ನೆಲೆಯಲ್ಲಿ ರಷ್ಯಾ, ಇವಿಎಂಗಳ ಮೂಲಕ ಚುನಾವಣೆಯನ್ನು ಅನಾಯಾಸವಾಗಿ ನಡೆಸುವ ಭಾರತದ ಅನುಭವದಿಂದ ಕಲಿಯಲು ಆಸಕ್ತಿ ತೋರಿದೆ ಎಂದು ಎಕನಾಮಿಕ್ಸ್ ಟೈಮ್ಸ್ ವರದಿ ಮಾಡಿದೆ.

    ರಷ್ಯಾದ ಚುನಾವಣಾ ಆಯೋಗದ ಉಪಾಧ್ಯಕ್ಷರಾದ ನಿಕೋಲೈ ಲೆವಿಚೆವ್ ಇವಿಎಂ ಮೂಲಕ ಓಟಿಂಗ್ ಪ್ರಕ್ರಿಯೆ ಹೇಗೆ ನಡೆಯುತ್ತೆ ಅನ್ನೋದನ್ನ ಅರ್ಥಮಾಡಿಕೊಳ್ಳಲು ಫೆಬ್ರವರಿಯಲ್ಲಿ ಉತ್ತರಾಖಂಡ್‍ಗೆ ಭೇಟಿ ನೀಡಿದ್ದರು. ಅಲ್ಲದೆ ಉತ್ತರಪ್ರದೇಶ, ಪಂಜಾಬ್, ಮಣಿಪುರ ಮತ್ತು ಗೋವಾದಲ್ಲೂ ಚುನಾವಣಾಯನ್ನ ವೀಕ್ಷಿಸಿದ್ದು, ಇವಿಎಂ ವ್ಯವಸ್ಥೆಯಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಮಾನವನ ಪಾತ್ರ ಕಡಿಮೆ ಇರೋದನ್ನ ನೋಡಿ ಪ್ರಭಾವಿತರಾಗಿದ್ದಾರೆ ಎಂದು ವರದಿಯಾಗಿದೆ.

    ಲೆವಿಚೆವ್ ಅವರು ದೆಹಲಿಯಲ್ಲಿ ಹಿರಿಯ ಅಧಿಕಾರಿಗಳನ್ನ ಭೇಟಿ ಮಾಡಿ, ಇವಿಎಂ ತಂತ್ರಜ್ಞಾನ ಹಾಗೂ ಅದರ ಬಳಕೆ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಇದಕ್ಕೆ ಪ್ರತಿಯಾಗಿ ರಷ್ಯಾ ಮತ ಎಣಿಕೆಗೆ ಆಧುನಿಕ ಟ್ಯಾಬುಲೇಷನ್ ಪದ್ಧತಿಯನ್ನ ಅಭಿವೃದ್ಧಿಪಡಿಸಲು ಭಾರತಕ್ಕೆ ನೆರವಾಗಲಿದೆ ಎಂದು ವರದಿಯಾಗಿದೆ.

    ಮಿತ್ರರಾಷ್ಟ್ರಗಳು ಭಾರತದ ಚುನಾವಣಾ ಆಯೋಗದ ನೆರವು ಕೇಳ್ತಿರೋದು ಇದೇ ಮೊದಲೇನಲ್ಲ. 2014ರಲ್ಲಿ ಅಫ್ಘಾನಿಸ್ತಾನದ ಅಧ್ಯಕ್ಷೀಯ ಚುನಾವಣಾ ಸಂದರ್ಭದಲ್ಲಿ ಮತದಾರರ ಅಭೂತಪೂರ್ವ ಪ್ರತಿಕ್ರಿಯೆಯಿಂದಾಗಿ ಬ್ಯಾಲೆಟ್ ಪೇಪರ್ ಕೊರತೆ ಉಂಟಾಗಿತ್ತು. ಆಗ ಭಾರತ ಹೆಚ್ಚುವರಿ ಬ್ಯಾಲೆಟ್ ಪೇಪರನ್ನ ಕಾಬುಲ್‍ಗೆ ಪೂರೈಕೆ ಮಾಡಿತ್ತು. ಭಾರತದಲ್ಲಿ 1999ರಲ್ಲಿ ಮೊದಲ ಬಾರಿಗೆ ಚುನಾವಣೆಯಲ್ಲಿ ಎವಿಎಂ ಬಳಕೆ ಮಾಡಲಾಯ್ತು.

    ಮಧ್ಯಪ್ರದೇಶದ ಇವಿಎಂನಲ್ಲಿ ಲೋಪವಾಗಿದೆ ಎಂದು ತೋರಿಸಿ ದೇಶದೆಲ್ಲಡೆ ಸಂಚಲನಕ್ಕೆ ಕಾರಣವಾದ ವಿಡಿಯೋವೊಂದು ಕಳೆದ ವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ  ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ನಡೆಯಲಿರುವ ಎರಡು ಉಪಚುನಾವಣೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್(ವಿವಿಪಿಎಟಿ) ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ಈ ವ್ಯವಸ್ಥೆಯಲ್ಲಿ ವೋಟ್ ಹಾಕಿದ 7 ಸೆಕೆಂಡ್ ಬಳಿಕ ಮತದಾರರ ಕೈಗೆ ಒಂದು ಪೇಪರ್ ಬರುತ್ತೆ. ಇದರಲ್ಲಿ ವೋಟ್ ಯಾರಿಗೆ ಬಿದ್ದಿದೆ ಎನ್ನುವುದನ್ನು ನೋಡಿಕೊಳ್ಳಬಹುದು. ಆದರೆ ಈ ಪೇಪರನ್ನು ಬೂತ್‍ನಿಂದ ಹೊರಗಡೆ ತೆಗೆದುಕೊಂಡು ಹೋಗುವಂತಿಲ್ಲ. ನಾನು ಹಾಕಿರುವ ಅಭ್ಯರ್ಥಿಗೆ ಮತ ಬಿದ್ದಿದೆಯೋ ಇಲ್ಲವೋ ಎನ್ನುವುದನ್ನು ಖಚಿತ ಪಡಿಸಿ ಅಲ್ಲೇ ಇರುವ ಪೆಟ್ಟಿಗೆಯ ಒಳಗಡೆ ಚೀಟಿಯನ್ನು ಹಾಕಬೇಕಾಗುತ್ತದೆ. ಇವಿಎಂ ಬಗ್ಗೆ ಹಲವು ಮಂದಿ ಆಕ್ಷೇಪ ಎತ್ತಿದ್ದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ವ್ಯವಸ್ಥೆಯನ್ನು ಅಳವಡಿಸುವಂತೆ ಚುನವಣಾ ಆಯೋಗಕ್ಕೆ ಕಳೆದ ವರ್ಷ ಸಲಹೆ ನೀಡಿತ್ತು.

    ಇದನ್ನೂ ಓದಿ: ಇವಿಎಂ ಪರೀಕ್ಷೆ ವೇಳೆ ಎಸ್‍ಪಿಗೆ ಹಾಕಿದ ಮತ ಬಿಜೆಪಿಗೆ: ಕಾಂಗ್ರೆಸ್ ಗಂಭೀರ ಆರೋಪ