Tag: press conference

  • Video Viral | ಪ್ರೆಸ್‌ ಮೀಟ್‌ ನಡೆಯುತ್ತಿದ್ದಾಗಲೇ ಕುಸಿದು ಬಿದ್ದ ಸ್ವೀಡನ್‌ನ ನೂತನ ಆರೋಗ್ಯ ಸಚಿವೆ

    Video Viral | ಪ್ರೆಸ್‌ ಮೀಟ್‌ ನಡೆಯುತ್ತಿದ್ದಾಗಲೇ ಕುಸಿದು ಬಿದ್ದ ಸ್ವೀಡನ್‌ನ ನೂತನ ಆರೋಗ್ಯ ಸಚಿವೆ

    – ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ಘಟನೆ

    ಸ್ಟಾಕ್‌ಹೋಮ್: ಪ್ರೆಸ್‌ ಮೀಟ್‌ ನಡೆಯುತ್ತಿದ್ದ ವೇಳೆ ಸ್ವೀಡನ್‌ನ ನೂತನ ಆರೋಗ್ಯ ಸಚಿವೆ ಎಲಿಸಬೆಟ್ ಲ್ಯಾನ್ (Elisabet Lann) ವೇದಿಕೆಯಲ್ಲೇ ಕುಸಿದು ಬಿದ್ದ ಘಟನೆ ನಡೆದಿದೆ. ಲ್ಯಾನ್‌ ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ಈ ಘಟನೆ ಸಂಭವಿಸಿದಿದೆ.

    ಸುದ್ದಿಗೋಷ್ಠಿಯಲ್ಲಿ (Press Conference) 48 ವರ್ಷದ ಎಲಿಸಬೆಟ್ ಲ್ಯಾನ್, ಸ್ವೀಡಿಷ್ ಪ್ರಧಾನಿ ಉಲ್ಫ್ ಕ್ರಿಸ್ಟರ್ಸನ್ ಹಾಗೂ ಕ್ರಿಶ್ಚಿಯನ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಎಬ್ಬಾ ಬುಷ್ ಪಕ್ಕದಲ್ಲಿ ನಿಂತಿದ್ದರು. ಪತ್ರಕರ್ತರು ಪ್ರಶ್ನೆ ಕೇಳುತ್ತಿರುವಾಗಲೇ ವೇದಿಕೆಯಿಂದ ಗಾಜಿನ ಪೋಡಿಯಂ ಸಮೇತ ಕುಸಿದುಬಿದ್ದಿದ್ದಾರೆ. ಇದನ್ನೂ ಓದಿ: ಸ್ಪೇನ್‌ನಲ್ಲಿ ಬೀಚ್‌ಗಳನ್ನು ಬಂದ್‌ ಮಾಡಿಸಿದ ನೀಲಿ ಡ್ರ್ಯಾಗನ್‌ – ಏನಿದರ ವಿಶೇಷ? 

    16 ಸೆಕೆಂಡುಗಳ ವಿಡಿಯೋ ವೈರಲ್‌
    ಎಲಿಸಬೆಟ್ ಲ್ಯಾನ್ ನೂತನ ಆರೋಗ್ಯ ಸಚಿವೆಯಾಗಿ (Swedish New Health Minister) ಅಧಿಕಾರ ಸ್ವೀಕರಿಸಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಪ್ರೆಸ್‌ಮೀಟ್‌ ಆಯೋಜನೆ ಮಾಡಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ಅಧಿಕಾರಿಯೊಬ್ಬರ ಮಾತುಗಳನ್ನು ಆಲಿಸುತ್ತಿದ್ದರು. ಹಾಗೆಯೇ ಮುಂದಕ್ಕೆ ಬಾಗುತ್ತಲೇ ಪೋಡಿಯಂ ಸಮೇತ ನೆಲಕ್ಕೆ ಕುಸಿದು ಬಿದ್ದರು. ಈ ದೃಶ್ಯ 16 ಸೆಕೆಂಡುಗಳ ವಿಡಿಯೋನಲ್ಲಿ ಸೆರೆಯಾಗಿದೆ. ಸೋಷಿಯಲ್‌ ಮೀಡಿಯಾದಲ್ಲೂ ವಿಡಿಯೋ ವೈರಲ್‌ ಆಗಿದೆ.

    ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಚಿವರನ್ನ ಸಹ ಅಧಿಕಾರಿಗಳು ಹಾಗೂ ವೇದಿಕೆ ಮುಂಭಾಗದಲ್ಲಿದ್ದ ಪತ್ರಕರ್ತರು ಆಕೆಯನ್ನ ಮೇಲೆತ್ತಿ ಕೂರಿಸಿದ್ದಾರೆ. ಸ್ವಲ್ಪ ನೀರು ಕುಡಿಸಿ ವಿಶ್ರಾಂತಿ ಕೊಡಿಸಿದ್ದಾರೆ. ಲ್ಯಾನ್ ಸ್ವಲ್ಪ ಸಮಯದ ನಂತರ ಮತ್ತೆ ಸುದ್ದಿಗೋಷ್ಠಿಗೆ ಹಾಜರಾಗಿ ಅನೇಕ ವಿಷಯ ಪ್ರಸ್ತಾಪಿಸಿದ್ದಾರೆ. ಇದನ್ನೂ ಓದಿ: ಕತಾರ್‌ ಮೇಲೆ ಇಸ್ರೇಲ್‌ ಏರ್‌ಸ್ಟ್ರೈಕ್‌; ಹಮಾಸ್‌ ನಾಯಕನ ಪುತ್ರ ಸೇರಿ 6 ಮಂದಿ ಬಲಿ – ಟಾಪ್‌ ಲೀಡರ್‌ ಪಾರು

    ಸದ್ಯ ನೂತನ ಸಚಿವರು ಕುಸಿದುಬಿದ್ದ ಬಗ್ಗೆ ನಿಖರ ಕಾರಣ ತಿಳಿದಿಲ್ಲ. ಮೇಲ್ನೋಟಕ್ಕೆ ಕಡಿಮೆ ರಕ್ತದೊತ್ತಡದಿಂದ (ಲೋ ಬಿಪಿ) ಸಂಭವಿಸಿರಬಹುದು ಎಂದು ತಿಳಿಸಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ನೇಪಾಳ ಧಗ ಧಗ – ಉದ್ರಿಕ್ತರಿಂದ ಮನೆಗೆ ಬೆಂಕಿ, ಮಾಜಿ ಪ್ರಧಾನಿ ಪತ್ನಿ ಸಾವು

  • Breaking- ಬಿಜೆಪಿ ಪರವಾಗಿ ಪ್ರಚಾರಕ್ಕೆ ಹೊರಟ ಸುದೀಪ್ : ‘ಮಾಮಾ’ಗಾಗಿ ಇದೆಲ್ಲ ಎಂದ ಕಿಚ್ಚ

    Breaking- ಬಿಜೆಪಿ ಪರವಾಗಿ ಪ್ರಚಾರಕ್ಕೆ ಹೊರಟ ಸುದೀಪ್ : ‘ಮಾಮಾ’ಗಾಗಿ ಇದೆಲ್ಲ ಎಂದ ಕಿಚ್ಚ

    ಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕಾಗಿಯೇ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್, ಬಿಜೆಪಿ ಸೇರುವ ವಿಚಾರ ಮಾತನಾಡಲಿಲ್ಲ. ಪಕ್ಷದ ಪರವಾಗಿ ಪ್ರಚಾರ ಮಾಡುವೆ ಅಂತಾನೂ ಹೇಳಲಿಲ್ಲ. ಬಸವರಾಜ ಬೊಮ್ಮಾಯಿ ಪರವಾಗಿ ನಿಂತುಕೊಳ್ಳುತ್ತೇನೆ ಎಂದಷ್ಟೇ ಹೇಳಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುದೀಪ್, ‘ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ನಾನು ಚಿಕ್ಕಂದಿನಿಂದಲೇ ಮಾಮಾ ಎಂದು ಕರೆಯುತ್ತಿದ್ದೆ. ಈಗಲೂ ಅವರನ್ನು ಹಾಗೆಯೇ ಕರೆಯುವೆ. ನಾನು ಸಿನಿಮಾ ರಂಗಕ್ಕೆ ಬರುವಾಗ ತುಂಬಾ ಕಷ್ಟದ ದಿನಗಳಲ್ಲಿ ಇದ್ದೆ. ಅವತ್ತು ನನಗೆ ಸಪೋರ್ಟ್ ಮಾಡಿದವರು ಅವರು. ಹಾಗಾಗಿ ಅವರಿಗೆ ನಾನು ಸಪೋರ್ಟ್ ಕೊಡುತ್ತಿದ್ದೇನೆ. ನನ್ನ ಸ್ನೇಹಿತರೂ ಇಲ್ಲಿದ್ದಾರೆ. ಅವರ ಪರವಾಗಿ ನಾನು ನಿಲ್ಲುತ್ತೇನೆ’ ಎಂದರು.

    ಬಿಜೆಪಿ (BJP) ಜೊತೆಗಿನ ಬಾಂಧವ್ಯದ ಕುರಿತು ಮಾತನಾಡಿರುವ ಸುದೀಪ್ (Sudeep), ‘ನನಗೆ ಆತ್ಮೀಯರು, ಆಪ್ತರು ತುಂಬಾ ಜನ ರಾಜಕಾರಣದಲ್ಲಿ ಸಕ್ರೀಯರಾಗಿದ್ದಾರೆ. ಅಲ್ಲದೇ, ಅವರು ನನ್ನ ಕಷ್ಟದ ಕಾಲದಲ್ಲಿ ಕೈ ಹಿಡಿದಿದ್ದಾರೆ. ಅವರ ಪರವಾಗಿ ನಿಲ್ಲಬೇಕಾಗಿದ್ದು ನನ್ನ ಕರ್ತವ್ಯ ಈ ಕಾರಣದಿಂದಾಗಿ ನಾನು ಇಂಥದ್ದೊಂದು ನಿರ್ಧಾರವನ್ನು ತಗೆದುಕೊಂಡಿದ್ದೇನೆ’ ಎಂದರು. ಇದನ್ನೂ ಓದಿ: ಕಿಸ್ಸಿಂಗ್ ಪ್ರಕರಣ: 16 ವರ್ಷಗಳ ನಂತರ ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್

    ಬಿಜೆಪಿ ಜೊತೆಗಿನ ಸಂಬಂಧವನ್ನು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ‘ಈ ಸಂದರ್ಭದಲ್ಲಿ ಒಂದು ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ನಾನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇದನ್ನು ಅಭಿಮಾನಿಗಳಿಗೆ ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ಟಿಕೆಟ್ ಕೇಳುವುದಿಲ್ಲ’ ಎಂದಿದ್ದಾರೆ ಸುದೀಪ್.

    ಈ ಕುರಿತಂತೆ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆ ಆರಂಭಿಸಿದ್ದಾರೆ. ನೆಚ್ಚಿನ ನಟ ಈಗಾಗಲೇ ತಮ್ಮದೇ ಟ್ರಸ್ಟ್ ಮೂಲಕ ಸಮಾಜಸೇವೆ ಆರಂಭಿಸಿದ್ದಾರೆ. ರಾಜಕಾರಣಕ್ಕೆ ಹೋದರೆ ಮತ್ತಷ್ಟು ಸಹಾಯ ಮಾಡಬಹುದು ಎಂದು ಕೆಲವರು ಅಭಿಪ್ರಾಯ ವ್ಯಕ್ತ ಪಡಿಸಿದ್ದರೆ, ಇನ್ನೂ ಕೆಲವರು ಅವರು ರಾಜಕೀಯ ಕ್ಷೇತ್ರಕ್ಕೆ ಹೋಗುವುದು ಬೇಡ ಎಂದು ನೇರವಾಗಿ ಹೇಳಿಕೆ ನೀಡಿದ್ದಾರೆ.

  • ಪತ್ರಕರ್ತರಿಗೆ ಸಿಎಂ ಕಚೇರಿಯಿಂದ ಲಂಚ ಆರೋಪ – ಬೊಮ್ಮಾಯಿ ರಾಜೀನಾಮೆಗೆ ಸುರ್ಜೇವಾಲಾ ಆಗ್ರಹ

    ಪತ್ರಕರ್ತರಿಗೆ ಸಿಎಂ ಕಚೇರಿಯಿಂದ ಲಂಚ ಆರೋಪ – ಬೊಮ್ಮಾಯಿ ರಾಜೀನಾಮೆಗೆ ಸುರ್ಜೇವಾಲಾ ಆಗ್ರಹ

    ನವದೆಹಲಿ: ಪತ್ರಕರ್ತರಿಗೆ ಲಂಚ ನೀಡಲು ಹಣ ಎಲ್ಲಿಂದ ಬಂತು? ಸಿಎಂ ಬೊಮ್ಮಾಯಿ (Basavaraj Bommai) ಲಂಚಾವತಾರ ಬಯಲಾಗಿದೆ. ಕೂಡಲೇ ಅವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ (Randeep Singh Surjewala) ಹೇಳಿದ್ದಾರೆ.

    ಇಂದು ದೆಹಲಿಯಲ್ಲಿ (NewDelhi) ಸುದ್ದಿಗೋಷ್ಠಿ ನಡೆಸಿದ ಸುರ್ಜೇವಾಲ ಅವರು, ಪತ್ರಕರ್ತರಿಗೆ (Journalists) ಒಂದು ಲಕ್ಷ ರೂಪಾಯಿ ಲಂಚ ನೀಡಿದ್ದಾರೆ. ಆದರೆ ಸಿಎಂ ಕಚೇರಿ (CM Office) ಲಂಚ ಗುಳಿತನವನ್ನು ಪತ್ರಕರ್ತರು ಬಯಲು ಮಾಡಿದ್ದಾರೆ. ಭಾರತದಲ್ಲಿ ಕರ್ನಾಟಕವೇ ಅತಿ ದೊಡ್ಡ ಭ್ರಷ್ಟಾಚಾರ ಸರ್ಕಾರ. ನೇಮಕಾತಿಯಲ್ಲಿ, ಗುತ್ತಿಗೆಯಲ್ಲಿ, ವರ್ಗಾವಣೆಯಲ್ಲಿ ಎಲ್ಲ ಕಡೆ ಸಿಎಂ ಕಚೇರಿ ಲಂಚ ಪಡೆಯುತ್ತಿದೆ. 40% ಕಮಿಷನ್ ಪಡೆದು ಕೆಲಸ ಮಾಡುತ್ತಿದೆ. ಮಠಗಳಿಗೂ ಅನುದಾನ ನೀಡುವಲ್ಲೂ ಸರ್ಕಾರ ಕಮಿಷನ್ ಪಡೆದಿದೆ. ಅಧಿಕಾರಿಗಳು/ಉಪನ್ಯಾಸಕರ ನೇಮಕಾತಿಯಲ್ಲೂ ಲಂಚ ಪಡೆದಿರುವುದು ಬದಲಾಗಿದೆ. ಸಚಿವ ಎಂಟಿಬಿ ನಾಗರಾಜ್ ವರ್ಗಾವಣೆಗೆ 80 ಲಕ್ಷ ಪಡೆದುರುವುದು ಬಹಿರಂಗವಾಗಿ ಮಾತನಾಡಿದ್ದಾರೆ. ಲಂಚ ನೀಡದೆ ಬೇರೆ ಕಡೆ ಪೋಸ್ಟಿಂಗ್ ಸಿಗುವುದಿಲ್ಲ ಎಂದು ಮಾತನಾಡಿದ್ದಾರೆ. ಲಂಚ ಪಡೆದು ಪೊಲೀಸ್ ಉನ್ನತ ಅಧಿಕಾರಿಗಳು ಜೈಲು ಸೇರಿದ್ದಾರೆ. ಮಕ್ಕಳಿಗೆ ನೀಡುವ ಮೊಟ್ಟೆಯಲ್ಲೂ ಸರ್ಕಾರ ಲಂಚ ಪಡೆದಿದೆ. ಈ ಹಣ ಎಲ್ಲಿ ಹೋಗುತ್ತಿದೆ ಮಿಸ್ಟರ್ ಬೊಮ್ಮಾಯಿ? ಪತ್ರಕರ್ತರಿಗೆ ಲಂಚ ನೀಡಲು ಹಣ ಎಲ್ಲಿಂದ ಬಂತು? ಸಿಎಂ ಬೊಮ್ಮಾಯಿ ಲಂಚಾವತಾರ ಬಯಲಾಗಿದೆ. ಅವರು ಕೂಡಲೇ ರಾಜೀನಾಮೆ ನೀಡಬೇಕು ಮತ್ತು ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

    ಕಾಂಗ್ರೆಸ್ ಎಂದೂ ಪತ್ರಕರ್ತರಿಗೆ ಹಣ ನೀಡಿಲ್ಲ. ನಾನು ಈ ಆರೋಪವನ್ನು ತಿರಸ್ಕರಿಸುತ್ತೇನೆ. ನಮ್ಮ ಸರ್ಕಾರ ಬಂದರೆ ನಾವು ಸಮಿತಿ ರಚನೆ ಮಾಡುತ್ತೇವೆ. ಈ ಬಗ್ಗೆ ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: `ಆಪರೇಷನ್ ಕಮಲ’ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಿಸಿ- ಸುಪ್ರೀಂಗೆ ಡಿಕೆಶಿ ಮನವಿ

    ನಂತರ ಮೇಕೆದಾಟು ಯಾತ್ರೆ (Mekedatu Yatre) ಮತ್ತು ಭಾರತ್ ಜೋಡೊ ಯಾತ್ರೆಯಲ್ಲಿ (Bharat Jodo Yatra) ಪತ್ರಕರ್ತರಿಗೆ ಕಾಂಗ್ರೆಸ್ ಹಣ ನೀಡಿದೆ ಎಂಬ ಆರೋಪ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಎಂದೂ ಪತ್ರಕರ್ತರಿಗೆ ಹಣ ನೀಡಿಲ್ಲ. ನಾನು ಈ ಆರೋಪವನ್ನು ತಿರಸ್ಕರಿಸುತ್ತೇನೆ. ಗುಜರಾತ್‍ನಲ್ಲಿ (Gujarat) ಬಿಜೆಪಿ (BJP) ಅಧಿಕಾರಕ್ಕೆ ಬರಲು ಸಮುದಾಯಗಳ ನಡುವೆ ಭಿನ್ನಾಭಿಪ್ರಾಯ ಮೂಡಿಸುತ್ತಿದೆ. ಗುಜರಾತ್ ಮಾತ್ರವಲ್ಲ ಕರ್ನಾಟಕದಲ್ಲೂ (Karnataka) ಬಿಜೆಪಿ ಲಿಂಗಾಯತ ಮತ್ತು ಒಕ್ಕಲಿಗರಿಗೆ ಜಗಳ ಹಚ್ಚುತ್ತಿದೆ. ಕುರುಬ ಮತ್ತು ಬೇರೆ ಜಾತಿಯ ವಿರುದ್ಧ ಜಗಳ ಹಬ್ಬಿಸುತ್ತಿದೆ. ಈ ರೀತಿಯ ರಾಜಕೀಯ ಮಾಡಿ ಅಶಾಂತಿ ಹುಟ್ಟಿಸಿ ರಾಜಕೀಯ ಲಾಭ ಪಡೆದುಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ರಾಜ್ಯದ ಕೆಲವು ಆಯ್ದ ಪತ್ರಕರ್ತರಿಗೆ ಈ ಬಾರಿ ದೀಪಾವಳಿ ಹಬ್ಬದ (Deepavali Festival) ಪ್ರಯುಕ್ತ ಉಡುಗೊರೆಯಾಗಿ ಸಿಹಿತಿಂಡಿಗಳ ಜೊತೆಗೆ ತಲಾ 2.5 ಲಕ್ಷ ರೂಪಾಯಿ ನಗದು ನೀಡಿರುವ ಆರೋಪ ಕೇಳಿಬಂದಿತ್ತು. ಇದನ್ನೂ ಓದಿ: ಬಸವಲಿಂಗ ಶ್ರೀಗಳ ಆತ್ಮಹತ್ಯೆ ಕೇಸ್‍ನಲ್ಲಿ ಮತ್ತೊಂದು ಮಠದ ಸ್ವಾಮೀಜಿ ಭಾಗಿ?

    ಈ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್ ಮುಖ್ಯಮಂತ್ರಿಗಳ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ 2.5 ಲಕ್ಷ ಉಡುಗೊರೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದು 40 ಪರ್ಸೆಂಟ್ ಕಮಿಷನ್‍ನಲ್ಲಿ ನೀಡಿದ ಹಣವೇ? 40 ಪರ್ಸೆಂಟ್ ಕಮಿಷನ್ ಕರ್ಮಕಾಂಡಗಳನ್ನು ಮುಚ್ಚಿಡಲು ನೀಡಿದ ಲಂಚವೇ? ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವೇ ಎಂದು ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಸುಳಿವು ಕೊಟ್ಟು ಆ ಪದ ನಾನು ಹೇಳಲ್ಲ – ನಾಚಿ ನೀರಾದ ದ್ರಾವಿಡ್, ಬಿದ್ದುಬಿದ್ದು ನಕ್ಕ ಪತ್ರಕರ್ತರು

    ಸುಳಿವು ಕೊಟ್ಟು ಆ ಪದ ನಾನು ಹೇಳಲ್ಲ – ನಾಚಿ ನೀರಾದ ದ್ರಾವಿಡ್, ಬಿದ್ದುಬಿದ್ದು ನಕ್ಕ ಪತ್ರಕರ್ತರು

    ದುಬೈ: ಟೀಂ ಇಂಡಿಯಾದ ಕೋಚ್ ರಾಹುಲ್ ದ್ರಾವಿಡ್ ಶಿಸ್ತಿನ ಸಿಪಾಯಿ, ಅವರು ಆಟಗಾರರಾಗಿದ್ದಾಗ ಇದ್ದಂತಹ ಬದ್ಧತೆ, ಶಿಸ್ತು ಪ್ರಸ್ತುತ ಕೋಚ್ ಆಗಿ ಕಾರ್ಯನಿರ್ವಹಿಸುವಾಗಲು ಮುಂದುವರಿಸುತ್ತಿದ್ದಾರೆ. ಜೊತೆಗೆ ಆಟಗಾರರಿಗೂ ಈ ಪಾಠ ಮುಂದುವರಿಸಿದ್ದಾರೆ. ಈ ಎಲ್ಲದರ ನಡುವೆ ದ್ರಾವಿಡ್ ಇಂದು ಭಾರತ ಹಾಗೂ ಪಾಕಿಸ್ತಾನ ಪಂದ್ಯಕ್ಕೂ ಮೊದಲು ನಡೆದ ಪತ್ರಿಕಾಗೋಷ್ಠಿಯಲ್ಲಿ ಹಾಸ್ಯ ಚಟಾಕಿಯೊಂದನ್ನು ಹಾರಿಸಿ ಆ ಒಂದು ಪದವನ್ನು ನಾನು ಬಳಕೆ ಮಾಡುವುದಿಲ್ಲವೆಂದು ಪತ್ರಕರ್ತರಿಗೆ ಕುತೂಹಲ ಮೂಡಿಸಿದ್ದಾರೆ.

    ಹೌದು ಸದಾ ಗಂಭೀರ ವ್ಯಕ್ತಿತ್ವದ ದ್ರಾವಿಡ್ ಜೊತೆ ಭಾರತ ಹಾಗೂ ಪಾಕಿಸ್ತಾನ ತಂಡಗಳ ಬೌಲಿಂಗ್ ಕುರಿತಾಗಿ ಪತ್ರಕರ್ತರು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ದ್ರಾವಿಡ್ ಪಾಕಿಸ್ತಾನ ತಂಡದ ಬೌಲಿಂಗ್ ಉತ್ತಮವಾಗಿದೆ. ಭಾರತ ತಂಡ ಕೂಡ ಕಮ್ಮಿ ಏನಿಲ್ಲ. ಎರಡು ತಂಡಗಳು ಕೂಡ ಬಲಿಷ್ಠ ಬೌಲಿಂಗ್ ಶಕ್ತಿಯನ್ನು ಹೊಂದಿದೆ. ಇದನ್ನು ಗಮನಿಸಿದಾಗ ನನಗೆ ಒಂದು ಪದ ನೆನಪಿಗೆ ಬರುತ್ತದೆ ಎಂದು ಆ ಪದ ಬಳಕೆ ಮಾಡಲಾಗದೆ ನಗಲಾರಂಭಿಸಿದರು. ಇದನ್ನೂ ಓದಿ: ಜಡೇಜಾ ಅನುಪಸ್ಥಿತಿಯಲ್ಲಿ ಪಂತ್, ಹೂಡಾ, ಅಕ್ಷರ್ ಪಟೇಲ್ ನಡುವೆ ಪ್ಲೇಯಿಂಗ್ 11 ಪೈಪೋಟಿ

    ಇದನ್ನು ಗಮನಿಸಿದ ಪತ್ರಕರ್ತರು ಯಾವ ಪದ ಎಂದು ಮರು ಪ್ರಶ್ನೆ ಹಾಕಿದರು. ಈ ವೇಳೆ ದ್ರಾವಿಡ್ ಆ ಪದ ನನ್ನ ಬಾಯಲ್ಲಿ ಬರುತ್ತಿದೆ. ಆದರೆ ಇಲ್ಲಿ ಅದನ್ನು ಉಚ್ಚರಿಸಲು ನಾನು ಬಯಸುತ್ತಿಲ್ಲವೆಂದರು. ಆದರೂ ಬಿಡದ ಪರ್ತಕರ್ತರು ಏನದು ಎಂದರು ಈ ವೇಳೆ ಆ ಪದ ಎಸ್ (ಸೆಕ್ಸಿ) ಪದದಿಂದ ಆರಂಭವಾಗುತ್ತದೆ ಎಂದರು. ಇದನ್ನು ಅರ್ಥಮಾಡಿಕೊಂಡ ಪರ್ತಕರ್ತರು ಒಂದು ಕ್ಷಣ ನಗಲಾರಂಭಿಸಿದರು. ಬಳಿಕ ಸೆಕ್ಸಿ ಪದ ಬಳಕೆ ಮಾಡದೇ ಹೇಳಬೇಕೆಂದಿದ್ದ ಮಾತನ್ನು ದ್ರಾವಿಡ್ ಮುಂದುವರಿಸಿದರು. ಇದನ್ನೂ ಓದಿ: ಮುಂದಿನ ಐಪಿಎಲ್‌ಗೂ ಧೋನಿ ಚೆನ್ನೈ ತಂಡ ನಾಯಕ

    Live Tv
    [brid partner=56869869 player=32851 video=960834 autoplay=true]

  • ಗಲ್ಲು ಶಿಕ್ಷೆ ಕಾನೂನಿನ ಬಳಿಕ ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚುತ್ತಿವೆ: ಗೆಹ್ಲೋಟ್

    ಗಲ್ಲು ಶಿಕ್ಷೆ ಕಾನೂನಿನ ಬಳಿಕ ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚುತ್ತಿವೆ: ಗೆಹ್ಲೋಟ್

    ನವದೆಹಲಿ: ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ಬಂದ ಬಳಿಕ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

    ಬೆಲೆ ಏರಿಕೆ, ಹಣದುಬ್ಬರ ಮತ್ತು ನಿರುದ್ಯೋಗ ಸಮಸ್ಯೆಗಳ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಇಂತದೊಂದು ಮಹತ್ವದ ಹೇಳಿಕೆ ನೀಡಿದ್ದಾರೆ.  ಇದನ್ನೂ ಓದಿ: ಪ್ರತಿ ಮಗುವಿಗೆ ಶಿಕ್ಷಣ, ಯುವಕರಿಗೆ ಉದ್ಯೋಗ ಕೊಡದೇ ಬಲಿಷ್ಠ ಭಾರತದ ನಿರ್ಮಾಣವಾಗದು: ಕೇಜ್ರಿವಾಲ್

    ಸುದ್ದಿಗೋಷ್ಠಿ ಸಂದರ್ಭದಲ್ಲಿ ಅತ್ಯಾಚಾರ ಮತ್ತು ಕೊಲೆಗಳ ಬಗ್ಗೆ ಪ್ರಸ್ತಾಪವಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ನಿರ್ಭಯಾ ಪ್ರಕರಣದ ಬಳಿಕ ಆರೋಪಿಗಳನ್ನು ಗಲ್ಲಿಗೇರಿಸಬೇಕೆಂಬ ಬೇಡಿಕೆಯು ವೇಗ ಪಡೆದುಕೊಂಡಿತು ಮತ್ತು ನಂತರ ಕಾನೂನು ಜಾರಿಗೆ ಬಂದಿತು. ಇಂತಹ ಪರಿಸ್ಥಿತಿಯಲ್ಲಿ ಅತ್ಯಾಚಾರದ ನಂತರ ಮಹಿಳೆಯರ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದು ದೇಶದಲ್ಲಿ ಅಪಾಯಕಾರಿ ಪ್ರವೃತ್ತಿಯಾಗಿ ಹೊರಹೊಮ್ಮಿದೆ ಎಂದರು.

    ಅತ್ಯಾಚಾರಕ್ಕೊಳಗಾದ ಸಂತ್ರಸ್ಥೆ ತನ್ನ ವಿರುದ್ಧ ಸಾಕ್ಷಿಯಾಗುತ್ತಾಳೆ ಎಂದು ಅತ್ಯಾಚಾರಿ ಭಾವಿಸುತ್ತಾನೆ. ಹೀಗಾಗಿ ಅವನು ಅತ್ಯಾಚಾರ ಮಾಡಿ ಕೊಲೆ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾನೆ. ದೇಶಾದ್ಯಂತ ಬರುತ್ತಿರುವ ವರದಿಗಳು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ. ದೇಶದಲ್ಲಿ ಪರಿಸ್ಥಿತಿ ಚೆನ್ನಾಗಿಲ್ಲ, ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ಬಿಕ್ಕಟ್ಟಿನ ಸಮಯ, ನಾವು ಇದನ್ನು ಹಿಂದೆಂದೂ ನೋಡಿರಲಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಪ್ಪು ಸ್ಮರಣಾರ್ಥ ಮೈಸೂರಿನ ಮಿಷನ್ ಆಸ್ಪತ್ರೆಗೆ ಸುಸಜ್ಜಿತ ಅಂಬುಲೆನ್ಸ್ ಕೊಡುಗೆ ನೀಡಿದ ನಟ ಪ್ರಕಾಶ್ ರೈ

     

    ಇದೇ ವೇಳೆ ಪ್ರತಿಭಟನೆ ಸಂಬಂಧ ಮಾತನಾಡಿದ ಅವರು, ಪ್ರಜಾಪ್ರಭುತ್ವದೊಳಗೆ ಶಾಂತಿಯುತವಾಗಿ ರ್‍ಯಾಲಿ ನಡೆದರೆ ಸಾರ್ವಜನಿಕರು ಸೇರಿಕೊಂಡರೆ ಸರ್ಕಾರದ ಕಣ್ಣು ತೆರೆಸುತ್ತದೆ. ನಮ್ಮ ಹೋರಾಟಕ್ಕೆ ಸಾರ್ವಜನಿಕರು ಬೆಂಬಲ ನೀಡುತ್ತಿದ್ದಾರೆ. ಇದರರ್ಥ ಸರ್ಕಾರದ ನೀತಿಗಳಲ್ಲಿ ತಪ್ಪು ಇದೆ ಎಂದರ್ಥ. ಆಗ ಸರ್ಕಾರವು ಉತ್ತಮ ಆಡಳಿತಕ್ಕಾಗಿ ಸುಧಾರಣೆಗೆ ಅವಕಾಶವನ್ನು ಪಡೆಯುತ್ತದೆ. ಆದರೆ ಈ ಸರ್ಕಾರ ಅಹಂಕಾರದಿಂದ ಕೂಡಿರುವುದರಿಂದ ಅಹಂನಿಂದ ವರ್ತಿಸುತ್ತಿದೆ ಎಂದರು.

    ಪ್ರಜಾಪ್ರಭುತ್ವದಲ್ಲಿ ಪ್ರತಿಪಕ್ಷಗಳಿಗೆ ಮುಕ್ತವಾಗಿ ಪ್ರತಿಭಟಿಸುವಷ್ಟು ಸ್ವಾತಂತ್ರ್ಯ ಇರಬೇಕು. ಅದರಿಂದ ಸರ್ಕಾರಕ್ಕೆ ಮಾತ್ರ ಲಾಭ. ಆದರೆ ಯಾರ ಬಗ್ಗೆಯೂ ತಲೆಕೆಡಿಸಿಕೊಳ್ಳದ ದುರಹಂಕಾರದಲ್ಲಿ ಈ ನಾಯಕರು ಓಡಾಡುತ್ತಿದ್ದಾರೆ. ಅವರು ಕೇವಲ ಹಿಂದೂ-ಮುಸ್ಲಿಂ ಹೆಸರಿನಲ್ಲಿ ರಾಜಕಾರಣ ಮಾಡಬೇಕು ಎಂದು ನಿರೀಕ್ಷೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    Live Tv
    [brid partner=56869869 player=32851 video=960834 autoplay=true]

  • ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗೋಲ್ಲ – ಉಲ್ಟಾ ಹೊಡೆದ ಶ್ರೀನಿವಾಸ್

    ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗೋಲ್ಲ – ಉಲ್ಟಾ ಹೊಡೆದ ಶ್ರೀನಿವಾಸ್

    ತುಮಕೂರು: ಜೆಡಿಎಸ್ ಪಕ್ಷಕ್ಕೆ ಬಹುಮತ ಬರುವುದಿಲ್ಲ. ನಮ್ಮ ನಾಯಕರು ಮುಖ್ಯಮಂತ್ರಿ ಆಗುವುದಿಲ್ಲ ಎಂದು ಹೇಳಿ ಸಾಕಷ್ಟು ಚರ್ಚೆಗೆ ಒಳಗಾಗಿದ್ದ ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಇದೀಗ ತಾವು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

    ಗುಬ್ಬಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾನು ಎಲ್ಲಿಯೂ ಬಾಯಿ ತಪ್ಪಿ ಕಾಂಗ್ರೆಸ್‍ಗೆ ಹೋಗುತ್ತೇನೆ ಎಂದು ಹೇಳಿಲ್ಲ. ಆದರೂ ಯಾಕೆ ಈ ವಿಚಾರ ಚರ್ಚೆ ಆಗುತ್ತಿದೆ ಎಂದು ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

    ಇತ್ತೀಚೆಗೆ ಜೆಡಿಎಸ್ ಪಕ್ಷದ ವಿರುದ್ಧವೇ ನಿರಂತರವಾಗಿ ಹೇಳಿಕೆ ಕೊಡುತ್ತಿದ್ದ ಶ್ರೀನಿವಾಸ್, ಕಾಂಗ್ರೆಸ್ ನಾಯಕರ ಜೊತೆ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೇ ಈ ಅವಧಿಯಲ್ಲಿ ನಾನು ಜೆಡಿಎಸ್ ನಲ್ಲೇ ಇರುತ್ತೇನೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೋದರೂ ಹೋಗಬಹುದು ಎಂದು ಹೇಳಿಕೆ ಕೊಟ್ಟಿದ್ದರು. ಆದರೀಗ ತಾವು ಕಾಂಗ್ರೆಸ್‍ಗೆ ಹೋಗುವುದಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ. ಇದನ್ನೂ ಓದಿ: KRS ಬಿರುಕು ಬಿಟ್ಟಿಲ್ಲ, ಸುಮಲತಾ, ಕುಮಾರಸ್ವಾಮಿಯವರದ್ದು ಬೇರೆನೋ ಅಜೆಂಡಾ ಇದೆ: ಆರ್.ಅಶೋಕ್

     

  • ಶ್ರೀ ವಸಿಷ್ಠ ಬ್ಯಾಂಕ್ ಕೇಸ್ ಆರೋಪಿಗಳನ್ನು ರವಿ ಸುಬ್ರಹ್ಮಣ್ಯ ರಕ್ಷಿಸುತ್ತಿದ್ದಾರೆ – ಆಪ್

    ಶ್ರೀ ವಸಿಷ್ಠ ಬ್ಯಾಂಕ್ ಕೇಸ್ ಆರೋಪಿಗಳನ್ನು ರವಿ ಸುಬ್ರಹ್ಮಣ್ಯ ರಕ್ಷಿಸುತ್ತಿದ್ದಾರೆ – ಆಪ್

    ಬೆಂಗಳೂರು: ಬೆಂಗಳೂರಿನ ಮುಖ್ಯ ಶಾಖೆಯನ್ನು ಹೊಂದಿರುವ ಶ್ರೀ ವಸಿಷ್ಠ ಕ್ರೆಡಿಟ್ ಸೌಹಾರ್ದ ಸಹಕಾರಿ ಬ್ಯಾಂಕ್ ಬಾಗಿಲು ಮುಚ್ಚಿರುವ ಸುದ್ದಿಗಳು ಕೇಳಿಬರುತ್ತಿವೆ. ಕೆಲವು ದಿನಗಳ ಹಿಂದೆ ಇದೇ ರೀತಿ ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ತನ್ನ ಗ್ರಾಹಕರಿಗೆ ಉಂಡೆ ನಾಮ ತಿಕ್ಕಿ ಅವರ ಭವಿಷ್ಯಕ್ಕೆ ಕೊಡಲಿ ಏಟನ್ನು ಹಾಕಿದೆ. ಈ ಹಗರಣದಲ್ಲಿಯೂ ಹಿಂದಿನ ರಾಘವೇಂದ್ರ ಕೋ ಆಪರೆಟೀವ್ ಬ್ಯಾಂಕ್ ಹಗರಣದಲ್ಲಿ ಭಾಗಿಯಾಗಿದ್ದ ಬಸವನಗುಡಿ ಶಾಸಕ, ಪ್ರಭಾವಿ ಬಿಜೆಪಿ ಮುಖಂಡ ರವಿ ಸುಬ್ರಹ್ಮಣ್ಯ ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಮುಖ್ಯ ವಕ್ತಾರ ಶರತ್ ಖಾದ್ರಿ ಆರೋಪಿಸಿದ್ದಾರೆ.

    ಆಮ್ ಆದ್ಮಿ ಪಾರ್ಟಿಯ ಮಾಧ್ಯಮ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿವೃತ್ತ ಜೀವನವನ್ನು ನೆಮ್ಮದಿಯಿಂದ ಕಳೆಯಲು ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿರುವ ಗ್ರಾಹಕರಿಗೆ ಜೀವನವೇ ಈಗ ಆಯೋಮಯವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ನೆಮ್ಮದಿಯಿಂದ ಮನೆಯಲ್ಲಿ ಜೀವನ ಕಳೆಯಬೇಕಾಗಿದ್ದವರು, ಇಂದು ತಮ್ಮದೇ ಹಣಕ್ಕಾಗಿ ರಸ್ತೆಯಲ್ಲಿ ನಿಂತು ಬ್ಯಾಂಕ್ ನ ಎದುರು ಹಣಕ್ಕಾಗಿ ಅಂಗಾಲಚುವ ಪರಿಸ್ಥಿತಿ ಉಂಟಾಗಿದೆ ಎಂದು ತಿಳಿಸಿದರು.

    ನಂತರ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್ ಅವರು, ಶ್ರೀ ವಸಿಷ್ಠ ಕೋ ಅಪರೇಟಿವ್ ಬ್ಯಾಂಕಿನ ಪ್ರಮುಖ ನಿರ್ದೇಶಕ ಕೆ.ಎನ್ ವೆಂಕಟನಾರಾಯಣ ಅನೇಕ ಬಿಜೆಪಿ ನಾಯಕರ ಜೊತೆ ಉತ್ತಮ ಸಂಬಂಧ ಹೊಂದಿದ್ದು, ಆತನು ಶಾಸಕ ರವಿ ಸುಬ್ರಹ್ಮಣ್ಯ ಸೇರಿದಂತೆ ಅನೇಕ ಬಿಜೆಪಿ ಪಕ್ಷಕ್ಕೆ ಆಪ್ತವಾಗಿರುವ ಮತ್ತು ಒಟ್ಟಿಗೆ ಇರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ದೊರಕುತ್ತವೆ. ಮೇಲ್ನೋಟಕ್ಕೇ ಆತನಿಗೆ ಬಿಜೆಪಿ ಪ್ರಭಾವಿ ಮುಖಂಡರ ಕೃಪಾಕಟಾಕ್ಷ ಕಂಡುಬರುತ್ತದೆ. ಹೀಗಿರುವಾಗ ಪೊಲೀಸ್ ಅಥವಾ ಸಿಬಿಐ ತನಿಖೆಯಲ್ಲಿ ಬ್ಯಾಂಕ್ ನ ಸಹಸ್ರಾರು ಗ್ರಾಹಕರಿಗೆ ನ್ಯಾಯ ಸಿಗುವುದು ಅಸಂಭವ ಎಂದರು.

    ಈ ಪ್ರಕರಣದ ಕುರಿತಾಗಿ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಯಬೇಕೆಂದು ಮತ್ತು ಆರೋಪಿಗಳ ಜೊತೆಗೆ ಬಿಜೆಪಿ ನಾಯಕರ ನಂಟಿನ ಬಗ್ಗೆಯೂ ಆಮೂಲಾಗ್ರ ತನಿಖೆ ನಡೆಸಿ ಗ್ರಾಹಕರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಮ್ ಆದ್ಮಿ ಪಾರ್ಟಿ ಆಗ್ರಹಿಸಿದೆ. ಇದನ್ನೂ ಓದಿ: ಗೋವಾ- ಕರ್ನಾಟಕ ಗಡಿಯಲ್ಲಿ ನಿರ್ಬಂಧ : ನಿತ್ಯ ಉದ್ಯೋಗಕ್ಕೆ ತೆರಳುವವರಿಗೆ ಸಂಕಷ್ಟ

  • 5 ಲಕ್ಷ ರೆಮಿಡಿಸಿವರ್ ಆಮದು, ಔಷಧ ಕೊರತೆ ಆಗದಂತೆ ಕಟ್ಟೆಚ್ಚರ: ಡಿಸಿಎಂ ಅಶ್ವತ್ಥನಾರಾಯಣ

    5 ಲಕ್ಷ ರೆಮಿಡಿಸಿವರ್ ಆಮದು, ಔಷಧ ಕೊರತೆ ಆಗದಂತೆ ಕಟ್ಟೆಚ್ಚರ: ಡಿಸಿಎಂ ಅಶ್ವತ್ಥನಾರಾಯಣ

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆಗೆ ಹೆಚ್ಚುತ್ತಿರುವ ಬೇಡಿಕೆ ಹಿನ್ನೆಲೆಯಲ್ಲಿ 5 ಲಕ್ಷ ರೆಮಿಡಿಸಿವಿರ್ ಇಂಜೆಕ್ಷನ್ ಆಮದು ಮಾಡಿಕೊಳ್ಳುತ್ತಿದ್ದು, ಈ ಸಲುವಾಗಿ ಜಾಗತಿಕ ಟೆಂಡರ್ ಕರೆಯಲಾಗಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

    ಎರಡನೇ ಅಲೆಯನ್ನು ಎದುರಿಸಲು ರಾಜ್ಯ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇಡೀ ರಾಜ್ಯದಲ್ಲಿ ಎಲ್ಲಿಯೂ ರೆಮಿಡಿಸಿವರ್ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗಿದೆ. ಜೊತೆಗೆ, ಅಗತ್ಯವಾದ ಎಲ್ಲ ಔಷಧಿಗಳು, ಸಾಮಗ್ರಿಗಳು ಮತ್ತು ವೈದ್ಯಕೀಯ ಬಳಕೆಯ ವಸ್ತುಗಳ ಕೊರತೆ ಆಗದಂತೆ ನೋಡಿಕೊಳ್ಳಲಾಗಿದೆ” ಎಂದರು.

    15,000 ಆಮ್ಲಜನಕ ಸಾಂದ್ರಕಗಳ (ಆಕ್ಸಿಜನ್ ಕನ್ಸೆಂಟ್ರೇಟರ್) ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ ಈಗಾಗಲೇ 3,000 ಆಮ್ಲಜನಕ ಸಾಂದ್ರಕಗಳ ಖರೀದಿಗೆ ಆದೇಶ ನೀಡಲಾಗಿದ್ದು, ಉಳಿದ 12,000 ಸಾಂದ್ರಕಗಳ ಖರೀದಿಗೆ ಜಾಗತಿಕ ಟೆಂಡರ್ ಕರೆಯಲಾಗುತ್ತಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

    ರಾಜ್ಯದಲ್ಲಿ ಈಗ ಕೋವಿಡ್ ಬೆಡ್‍ಗಳನ್ನು 4,000ದಿಂದ 24,000ಕ್ಕೆ ಹೆಚ್ಚಿಸಲಾಗಿದೆ. ಒಟ್ಟು 60,000 ಆಕ್ಸಿಜನ್ ಬೆಡ್‍ಗಳಿವೆ. ಆಕ್ಸಿಜನ್ ಅಗತ್ಯ ಇಲ್ಲದವರು ಕೂಡ ಆಸ್ಪತ್ರೆ ಸೇರಿದ್ದರಿಂದ ಬೆಡ್‍ಗಳ ಕೊರತೆ ಉಂಟಾಗಿತ್ತು. ಇದನ್ನು ತಡೆಯಲು ದಾಖಲಾತಿಗೆ ಮುನ್ನ ಭೌತಿಕ ಪರೀಕ್ಷೆ ಮಾಡುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ತಿಳಿಸಿದರು.

    ಎಲ್ಲಾ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಪ್ರಾಮುಖ್ಯತೆ ನೀಡಲಾಗಿದೆ. ಪ್ರತಿ ಜಿಲ್ಲೆಯ ವೈದ್ಯಕೀಯ ಅಗತ್ಯ ವಸ್ತುಗಳ ಹೆಚ್ಚುವರಿ ದಾಸ್ತಾನು ಮಾಡಿಕೊಳ್ಳಲಾಗಿದೆ. ಮಾರ್ಚ್ ತಿಂಗಳಲ್ಲಿ ದಿನಕ್ಕೆ 100 ರಿಂದ 150 ಮೆಟ್ರಿಕ್ ಟನ್ ಆಗಿದ್ದ ಆಮ್ಲಜನಕದ ಬೇಡಿಕೆ ಇದ್ದಕ್ಕಿದ್ದಂತೆ ದಿನಕ್ಕೆ 1,200 ಟನ್‍ಗಳಿಗೆ ಏರಿದೆ. ಇದನ್ನು ಯಾರೂ ನಿರೀಕ್ಷಿಸಿರಲಿಲ್ಲ ಎಂದು ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

    ಕೋವಿಡ್ ಕರ್ತವ್ಯಕ್ಕೆ ಹಾಜರಾಗುವ ವೈದ್ಯ ವಿದ್ಯಾರ್ಥಿಗಳು ಮತ್ತು ಇಂಟರ್ನಿಗಳಿಗೆ ಎಲ್ಲ ಸೌಲಭ್ಯ ಕಲ್ಪಸಲಾಗುತ್ತಿದೆ. ಅವರಿಗೆ ಸಂಬಳ ಮತ್ತು ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಜತೆಗೆ ಅವರ ಆರೋಗ್ಯ ಮತ್ತು ವಿಶ್ರಾಂತಿಯ ಮೇಲೂ ನಿಗಾ ಇಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

  • 1400 ಮೆಟ್ರಿಕ್ ಟನ್ ಆಕ್ಸಿಜನ್ ನಿಗದಿಗೆ ಕೇಂದ್ರಕ್ಕೆ ಮನವಿ – ಶೆಟ್ಟರ್

    1400 ಮೆಟ್ರಿಕ್ ಟನ್ ಆಕ್ಸಿಜನ್ ನಿಗದಿಗೆ ಕೇಂದ್ರಕ್ಕೆ ಮನವಿ – ಶೆಟ್ಟರ್

    ಹುಬ್ಬಳ್ಳಿ: ಕೇಂದ್ರ ಸರ್ಕಾರ ರಾಜ್ಯಕ್ಕೆ 1,015 ಮೆಟ್ರಿಕ್ ಟನ್ ಆಕ್ಸಿಜನ್ ನಿಗದಿ ಮಾಡಿದೆ ಇದನ್ನು 1,400 ಮೆಟ್ರಿಕ್ ಟನ್‍ಗೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ ಕುರಿತು ಪತ್ರವನ್ನು ಸಹ ಬರೆಯಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

    ನಗರದ ಸಕ್ರ್ಯೂಟ್ ಹೌಸ್ ಆವರಣದಲ್ಲಿ ರಾಜ್ಯದ ಆಕ್ಸಿಜನ್ ಸರಬರಾಜು ಹಾಗೂ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹಂತ ಹಂತವಾಗಿ ರಾಜ್ಯದ ಆಕ್ಸಿಜನ್ ನಿಗದಿ ಪ್ರಮಾಣವನ್ನು ಹೆಚ್ಚಿಸುತ್ತಾ ಬಂದಿದೆ. 965 ಮೆಟ್ರಿಕ್ ಟನ್ ಇದ್ದ ಪ್ರಮಾಣವನ್ನು ಈಗ 1,015ಕ್ಕೆ ಏರಿಸಿದೆ. ರಾಜ್ಯಕ್ಕೆ ಒಡಿಶಾ ಹಾಗೂ ಜಾರ್ಖಂಡ್‍ನ ಜೇಮ್‍ಶೆಡ್‍ಪುರದಿಂದ ಆಕ್ಸಿಜನ್ ಸರಬರಾಜು ಆಗುತ್ತಿದೆ. ರಾಜ್ಯದಲ್ಲಿ ಜಿಂದಾಲ್ ಸೇರಿದಂತೆ ಹಲವು ಕಡೆ 1,100 ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದಿಸಲಾಗುತ್ತಿದೆ. ಈ ಆಕ್ಸಿಜನ್ ನೆರೆಯ ರಾಜ್ಯಗಳಿಗೆ ಸರಬರಾಜು ಆಗುತ್ತಿದೆ. ಇದರ ಬದಲು ರಾಜ್ಯದಲ್ಲಿ ಉತ್ಪಾದಿಸುವ ಆಕ್ಸಿಜನ್ ರಾಜ್ಯದಲ್ಲಿಯೇ ಬಳಸಲು ಅನುಮತಿ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಇದಕ್ಕೆ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಸಕಾರಾತ್ಮವಾಗಿ ಸ್ಪಂದಿಸಿದ್ದಾರೆ. ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಇದಕ್ಕೂ ಅನುಮತಿ ನೀಡಲಿದೆ ಎಂದರು.

    ಮೇ 11 ರಂದು ಜೇಮಶೆಡ್ ಪುರದಿಂದ ಹೊರಟಿದ್ದ 120 ಮೆಟ್ರಿಕ್ ಟನ್ ಆಕ್ಸಿಜನ್ 6 ಟ್ಯಾಂಕರ್‍ಗಳು ರಾಜ್ಯಕ್ಕೆ ಬಂದು ತಲುಪಿವೆ. ಬಹರೇನ್ ಮತ್ತು ಕುವೈತ್‍ನಿಂದ ಹಡಗಿನ ಮೂಲಕ ಆಗಮಿಸಿದ 180 ಮೆಟ್ರಿಕ್ ಟನ್ ಆಕ್ಸಿಜನ್ ಸಹ ರಾಜ್ಯಕ್ಕೆ ಕೇಂದ್ರ ಸರ್ಕಾರ ನೀಡಿದೆ. ಇನ್ನೂ 6 ರಿಂದ 8 ಟ್ಯಾಂಕರ್ ಆಕ್ಸಿಜನ್ ರಾಜ್ಯಕ್ಕೆ ಬರಬೇಕಿದೆ. ಮೇ 16 ರಂದು ಐ.ಎಸ್.ಓ ಕಂಟೇನರ್ ಟ್ಯಾಂಕ್ ರಾಜ್ಯಕ್ಕೆ ಬರಲಿದ್ದು, ಇದನ್ನು ಹುಬ್ಬಳ್ಳಿ-ಧಾರವಾಡಕ್ಕೆ ನೀಡಲಾಗುವುದು. ಇದರಿಂದ ಬಳ್ಳಾರಿಯಿಂದ ಆಕ್ಸಿಜನ್ ತರಲು ಅನುಕೂಲವಾಗಿಲಿದೆ. ಆಕ್ಸಿಜನ್ ಸರಬರಾಜು ಮೇಲುಸ್ತುವಾರಿಗಾಗಿ 5 ಹಿರಿಯ ಅಧಿಕಾರಿಗಳ ತಂಡ ರಚಿಸಲಾಗಿದೆ. ಈ ತಂಡ ದಿನದ 24 ಗಂಟೆಯೂ ಆಕ್ಸಿಜನ್ ಸರಬರಾಜ ಮೇಲುಸ್ತುವಾರಿಯನ್ನು ನೋಡಿಕೊಳ್ಳುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ರೀತಿ ಆಕ್ಸಿಜನ್ ಕೊರತೆ ಉಂಟಾಗಿಲ್ಲ ಎಂದರು.

    ಹರಿದು ಬಂತು ನೆರವು:
    ದೇಶಪಾಂಡೆ ಫೌಂಡೇಷನ್ ಸೇರಿದಂತೆ ಹಲವು ಎನ್.ಜಿ.ಓಗಳಿಂದ 70 ಆಕ್ಸಿಜನ್ ಸಾಂದ್ರಕಗಳನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ. ಇದರೊಂದಿಗೆ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಹಾಗೂ ರಾಜ್ಯ ಸರ್ಕಾರದಿಂದ 80 ಆಕ್ಸಿಜನ್ ಸಾಂದ್ರಕಗಳು ಜಿಲ್ಲೆಗೆ ಲಭಿಸಲಿವೆ. ಇವುಗಳನ್ನು ಹೊಸದಾಗಿ ನಿರ್ಮಿಸುವ ಕೋವಿಡ್ ಆಸ್ಪತ್ರೆಗಳಲ್ಲಿ ಬಳಸಲಾಗುವುದು. ವೇದಾಂತ ಫೌಂಡೇಷನ್ ವತಿಯಿಂದ ಕಿಮ್ಸ್ ನಲ್ಲಿ 100 ಹಾಸಿಗೆಗಳ ಆಸ್ಪತ್ರೆಯನ್ನು ನಿರ್ಮಿಸಿ ದೇಣಿಗೆ ನೀಡುತ್ತಿದ್ದಾರೆ. ಒನ್ ಮೋರ್ ಬ್ರೆಥ್ ಎನ್ನುವ ಎನ್‍ಜಿಓದಿಂದ ಜಿಲ್ಲಾ ಆಸ್ಪತ್ರೆಯಲ್ಲಿ 100 ಹಾಸಿಗೆಗಳ ಆಸ್ಪತ್ರೆಯನ್ನು ನಿರ್ಮಿಸಲಿದ್ದಾರೆ. ದೇಶಪಾಂಡೆ ಫೌಂಡೇಷನ್ ವತಿಯಿಂದ 250 ಲೀಟರ್ ಸಾಮಥ್ರ್ಯದ 2 ಡೋರಾ ಸಿಲಿಂಡರ್‍ಗಳನ್ನು ನೀಡಿದ್ದಾರೆ. ಎಂ.ಆರ್.ಪಿ.ಎಲ್ ಹಾಗೂ ಓಎನ್‍ಸಿಸಿ ಕಂಪನಿ ವತಿಯಿಂದ 4 ಟನ್ ಸಾಮಥ್ರ್ಯದ ಆಕ್ಸಿಜನ್ ಜನರೇಟರ್ ನೀಡಲಿದ್ದಾರೆ. ಎಲ್‍ಆ್ಯಂಡ್‍ಟಿ ಕಂಪನಿ ವತಿಯಿಂದ ಕಿಮ್ಸ್ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ನಿರ್ಮಿಸಲು ಮಾತುಕತೆ ನಡೆಸಲಾಗಿದೆ. ಎನ್.ಜಿ.ಓ ಹಾಗೂ ವಿವಿಧ ಕಂಪನಿಗಳಿಂದ ಸಾಕಷ್ಟು ನೆರವು ಹರಿದು ಬರುತ್ತಿದೆ. ನೆರವು ನೀಡಿದ ಖಾಸಿಗೆ ಸಂಸ್ಥೆಗಳಿಗೆ ಅಭಿನಂದನೆಗಳನ್ನು ಸಚಿವ ಶೆಟ್ಟರ್ ತಿಳಿಸಿದರು.

    ತಾಲೂಕಿನಲ್ಲಿ ಸ್ಥಾಪನೆ:
    ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ 600 ಬೆಡ್‍ಗಳ ಕೋವಿಡ್ ಆರೈಕೆ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದೆ. ಇದರೊಂದಿಗೆ ಜಿಲ್ಲಾಡಳಿತದಿಂದ ಪ್ರತಿ ತಾಲೂಕಿನಲ್ಲಿ ಕೋವಿಡ್ ಆರೈಕೆ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಮಹಾನಗರ ಪಾಲಿಕೆ ವತಿಯಿಂದ ಕೋವಿಡ್‍ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರವನ್ನು ಉಚಿತವಾಗಿ ಮಾಡಲಾಗುವುದು. ಇದೇ ರೀತಿ ಜಿಲ್ಲಾಡಳಿತದಿಂದ ಗ್ರಾಮೀಣ ಭಾಗದಲ್ಲೂ ಉಚಿತವಾಗಿ ಅಂತ್ಯ ಸಂಸ್ಕಾರಕ್ಕೆ ಕ್ರಮಕೈಗೊಳ್ಳಲಾಗುವುದು. ಇದರ ಮೇಲುಸ್ತುವಾರಿಯನ್ನು ಸಂಬಂಧ ಪಟ್ಟ ತಹಶೀಲ್ದಾರರು ವಹಿಸಲಿದ್ದಾರೆ. ಅಂತ್ಯ ಸಂಸ್ಕಾರದ ವೆಚ್ಚವನ್ನು ಜಿಲ್ಲಾಡಳಿತ ಭರಿಸಲಿದೆ. ತಳ್ಳುವ ಗಾಡಿಯಲ್ಲಿ ತರಕಾರಿ ಮಾರಲು ಅವಕಾಶ ಕಲ್ಪಿಸಿಲಾಗಿದೆ. ಪ್ರತಿ ಏರಿಯಾ ಹಾಗೂ ಕಾಲೋನಿಗಳಲ್ಲಿ ಈ ವ್ಯವಸ್ಥೆ ಜಾರಿಗೆ ತರಲಾಗಿದೆ. 1,250 ಕಿರಾಣಿ ಅಂಗಡಿ ಮಾಲೀಕರು ಫೋನ್ ಮೂಲಕ ಆರ್ಡರ್ ಪಡೆದು ಗ್ರಾಹರ ಮನೆ ಬಾಗಿಲಿಗೆ ದಿನಸಿ ಪದಾರ್ಥಗಳನ್ನು ತಲುಪಿಸಲು ಒಪ್ಪಿದ್ದಾರೆ. ಇದು ಜಾರಿಯಾದರೆ ರಸ್ತೆಯಲ್ಲಿ ಓಡಾಡುವವರ ಸಂಖ್ಯೆ ಕಡಿಮೆಯಾಗಲಿದೆ. ಪ್ರತಿ ದಿನ 6 ರಿಂದ 10 ಗಂಟೆಯ ಒಳಗೆ ಗ್ರಾಹಕರ ಮನೆಗಳಿಗೆ ಅಗತ್ಯ ವಸ್ತುಗಳನ್ನು ತಲುಪಿಸಲು ಅವಕಾಶ ಮಾಡಿಕೊಡಲಾಗುವುದು ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸರ್ಕಾರಿ ಹಾಗೂ ಖಾಸಿಗೆ ಆಸ್ಪತ್ರೆ ಕೆಲಸ ನಿರ್ವಹಿಸುವ ಗ್ರೂಪ್ ಡಿ ನೌಕರರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ವಿಮೆ ಭದ್ರತೆ ಒದಗಿಸಲಾಗಿದೆ. ಹುಬ್ಬಳ್ಳಿ ಈ.ಎಸ್.ಐ ಆಸ್ಪತ್ರೆ ಕಾರ್ಮಿಕ ಇಲಾಖೆಯಡಿ ಬರುತ್ತದೆ. ಅದರ ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆಯಲಾಗಿದೆ. ಗ್ರೂಪ್ ಡಿ ನೌಕರರ ಕೊರತೆ ಉಂಟಾದರೆ ಅವರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡರೆ ಜಿಲ್ಲಾಡಳಿತದಿಂದ ಎನ್.ಡಿ.ಆರ್.ಎಫ್ ಅಡಿ ಅನುದಾನ ನೀಡಲಾವುದು ಎಂದರು. ಈ.ಎಸ್.ಐ ಆಸ್ಪತ್ರೆಯನ್ನು ಸದುಪಯೋಗ ಪಡಿಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

    ಸರ್ಕಾರ ಸುತ್ತೋಲೆಯಂತೆ ಕಿಮ್ಸ್‍ನಲ್ಲಿ ಬೆಡ್‍ಗಳ ಸಂಖ್ಯೆಯ ಮಾಹಿತಿಯನ್ನು ಸಾರ್ವಜನಿಕರ ಗಮನಕ್ಕಾಗಿ ಬೋರ್ಡ್‍ನಲ್ಲಿ ಹಾಕಲಾಗುವುದು. ಇದುವರೆಗೆ ಒಟ್ಟು 922 ರೋಗಿಗಳು ಕಿಮ್ಸ್‍ನಲ್ಲಿ ದಾಖಲಾಗಿದ್ದಾರೆ. ಇಂದು 82 ಜನರು ಹೊಸದಾಗಿ ದಾಖಲಾಗಿದ್ದು, 59 ಜನರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಬೆಡ್‍ಗಳ ಮಾಹಿತಿಯನ್ನು ಪ್ರತಿ ಆಸ್ಪತ್ರೆಯಲ್ಲೂ ಪ್ರದರ್ಶಿಸಲಾಗುವುದು. ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರದ ವತಿಯಿಂದ 600 ರೋಗಿಗಳನ್ನು ದಾಖಲಿಸಲಾಗಿದೆ. ಇವರಿಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ. ಇವರು ದಾಖಲಾಗುವಾಗಲು ಹಾಗೂ ಬಿಡುಗಡೆ ಹೊಂದುವಾಗಲು ಹಣ ನೀಡುವ ಹಾಗಿಲ್ಲ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು.

     

    ಜಿಲ್ಲೆಯಲ್ಲಿ ಕರ್ನಾಟಕ ಇಂಡಸ್ಟಿರಿಯಲ್ ಗ್ಯಾಸ್, ಪ್ರಾಕ್ಟೇರ್ ಹಾಗೂ ಸದರನ್ ಗ್ಯಾಸ್ ಆಕ್ಸಿಜನ್ ರೀ ಫಿಲಿಂಗ್‍ಗಳು ಇದ್ದು, ಇವರು ಸರ್ಕಾರ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಆಕ್ಸಿಜನ್ ಸರಬರಾಜು ಮಾಡುವರು. ಇವರು ಸದ್ಯ ಕೈಗಾರಿಕೆಗಳಿ ಆಕ್ಸಿಜನ್ ಪೂರೈಕೆ ಮಾಡುವ ಹಾಗಿಲ್ಲ. ಈ ಕುರಿತು ಜಿಲ್ಲಾಡಳಿತದಿಂದ ನಿಗಾ ವಹಿಸಲಾಗಿದೆ. ಜಿಲ್ಲೆಗೆ ಪ್ರತಿದಿನ 65 ಟನ್ ಆಕ್ಸಿಜನ್ ಸರಬಾಜು ಆಗುತ್ತಿದೆ. ಇದರಲ್ಲಿ 41 ಟನ್ ಜಿಲ್ಲೆಯಲ್ಲಿ ಬಳಕೆಯಾಗುತ್ತಿದೆ. ಉಳಿದ ಆಕ್ಸಿಜನ್ ಬಾಗಲಕೋಟೆ, ಗದಗ, ಬೆಳಗಾವಿ, ಬಿಜಾಪುರ ಜಿಲ್ಲೆಗಳಿಗೆ ಸರಬಾರಜು ಆಗುತ್ತಿದೆ. ಲೈಫ್ ಲೈನ್ ಆಸ್ಪತ್ರೆಯಲ್ಲಿನ ಕೋವಿಡ್ ರೋಗಿಗಳ ಸಾವಿನ ಕುರಿತಾದ ವರದಿ ಬಂದಿದೆ. ಇದನ್ನು ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು. ಯಾವ ರೋಗಿಯೂ ಸಹ ಆಕ್ಸಿಜನ್ ಕೊರತೆಯಿಂದ ಅಸುನೀಗಿಲ್ಲ ಎಂಬ ಮಾಹಿತಿ ನೀಡಿದರು.

    ಲಸಿಕೆ ವಿತರಣೆ:
    ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ಕೋವಿಡ್ ಲಸಿಕೆ ಪಡೆಯುವವರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಎರಡನೇ ಹಂತ ಲಸಿಕೆ ಪಡೆಯುವವರಿಗೆ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗಳು ಲಭ್ಯ ಇವೆ ಎಂದು ಜಿಲ್ಲಾಧಿಕಾರಿ ಹೇಳಿದರು. ಕಿಮ್ಸ್ ನಲ್ಲಿ 110 ವೆಂಟಿಲೇಟರ್‍ಗಳಿದ್ದು ಸದ್ಯ 30 ವೆಂಟಿಲೇಟರ್ ಲಭ್ಯ ಇವೆ. ಐ.ಸಿ.ಯು ನಲ್ಲಿರುವ ರೋಗಿಗಳಿಗೆ ಆಧ್ಯತೆ ಅನುಸಾರ ವೆಂಟಿಲೇಟರ್ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಯಶವಂತ ಮದೀನಕರ್, ತಹಶೀಲ್ದಾರ್ ಶಶಿಧರ ಮಾಡ್ಯಾಳ, ದೇಶಪಾಂಡೆ ಫೌಂಡೇಷನ್ ವಿವೇಕ್ ಪವಾರ್ ಉಪಸ್ಥಿತರಿದ್ದರು.

  • ಕರ್ನಾಟಕದಲ್ಲಿ 1.09 ಲಕ್ಷ ಪ್ರಯಾಣಿಕರ ತಪಾಸಣೆ- 32 ಜನರು ದಾಖಲು

    ಕರ್ನಾಟಕದಲ್ಲಿ 1.09 ಲಕ್ಷ ಪ್ರಯಾಣಿಕರ ತಪಾಸಣೆ- 32 ಜನರು ದಾಖಲು

    – ಸುದ್ದಿಗೋಷ್ಠಿಯಲ್ಲಿ ಸಚಿವ ಸುಧಾಕರ್ ಮಾಹಿತಿ

    ಬೆಂಗಳೂರು: ಇಡೀ ದೇಶದಲ್ಲೇ ಅತೀ ಹೆಚ್ಚು ಜನರನ್ನು ನಾವು ಕೊರೊನಾ ವೈರಸ್ ಪರೀಕ್ಷೆಗೆ ಒಳಪಡಿಸಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಜನತೆಗೆ ಸರ್ಕಾರದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇವೆ. ನಮ್ಮ ಸರ್ಕಾರದ ಆದೇಶವನ್ನು ಪಾಲಿಸುತ್ತಿರುವುದರಿಂದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇವೆ. ನಾವು ಇಡೀ ದೇಶದಲ್ಲೇ ಹೆಚ್ಚು ಜನರನ್ನು ಸ್ಕ್ರೀನಿಂಗ್ ಮಾಡಿದ್ದೇವೆ. ಇವತ್ತು 92 ಜನರ ಪರೀಕ್ಷೆ ಮಾಡಿದ್ದೇವೆ. ಇವತ್ತು 50 ಜನರರಿಗೆ ನೆಗೆಟಿವ್ ಬಂದಿದೆ. ಒಟ್ಟಾರೆ 6 ಜನಕ್ಕೆ ಸೋಂಕು ಇದೆ ಎಂದು ಹೇಳಿದರು.

    ಕರ್ನಾಟಕದಲ್ಲಿ 1,09,132 ಪ್ರಯಾಣಿಕರ ತಪಾಸಣೆ ಮಾಡಲಾಗಿದೆ. ಇಡೀ ದೇಶದಲ್ಲೇ ನಮ್ಮ ರಾಜ್ಯದಲ್ಲಿ ಅತೀ ಹೆಚ್ಚು ಜನರನ್ನು ಪರೀಕ್ಷೆ ಮಾಡಿದ್ದೇವೆ. ಒಟ್ಟು 32 ಜನರನ್ನು ದಾಖಲು ಮಾಡಿಕೊಂಡಿದ್ದೇವೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 77,730 ಪ್ರಯಾಣಿಕರ ತಪಾಸಣೆ ಮಾಡಿದ್ದೇವೆ. ನಂತರ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 27,963 ಪ್ರಯಾಣಿಕರ ತಪಾಸಣೆ ಮಾಡಲಾಗಿದೆ. ಮಂಗಳೂರು ಮತ್ತು ಕಾರವಾರ ಬಂದರುಗಳಲ್ಲಿ 5,439 ಪ್ರಯಾಣಿಕರ ತಪಾಸಣೆ ಮಾಡಲಾಗಿದೆ ಎಂದು ಅಂಕಿಅಂಶಗಳನ್ನು ತಿಳಿಸಿದರು.

    ಇವತ್ತಿನಿಂದ ಅನೇಕ ಬದಲಾವಣೆ ಮಾಡಲಾಗಿದೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವವರನ್ನು ಎ,ಬಿ,ಸಿ ಎಂದು ವಿಭಾಗ ಮಾಡಿ ಸ್ಕ್ರೀನಿಂಗ್ ಮಾಡಲಾಗುತ್ತದೆ. ಸೋಂಕಿನ ಲಕ್ಷಣ ಇರೋವವರು ಎ ವಿಭಾಗದಲ್ಲಿ ಸೇರಿಸಲಾಗಿದೆ. ಇವರನ್ನು ನೇರವಾಗಿ ಆಸ್ಪತ್ರೆಗೆ ದಾಖಲು ಮಾಡಿ ತಪಾಸಣೆ ಮಾಡುತ್ತೇವೆ. 60 ವರ್ಷದ ಮೇಲ್ಪಟ್ಟವರು, ಬಿಪಿ, ಶುಗರ್ ಇರುವವರನ್ನು ಬಿ ವಿಭಾಗದಲ್ಲಿ ಸೇರಿಸಲಾಗಿದೆ. ಈ ರೀತಿಯ ರೋಗಿಗಳನ್ನು ಮನೆಯಲ್ಲೇ ಇದ್ದು ತಪಾಸಣೆ ಮಾಡಲಾಗುವುದು. ರೋಗದ ಲಕ್ಷಣ ಇಲ್ಲದವರು ದೇಶದಿಂದ ಬಂದಿರಲ್ಲಿ ಅವರನ್ನು ಸಿ ವರ್ಗಕ್ಕೆ ಸೇರಿಸಿದ್ದೇವೆ ಎಂದು ಮಾಹಿತಿ ನೀಡಿದರು.

    ಸಹಾಯವಾಣಿ 104ಕ್ಕೆ ಬರುವ ಕರೆಗಳು ಸಂಖ್ಯೆ ಹೆಚ್ಚಾಗಿದೆ. ಜನರು ಕರೆ ಮಾಡಿ ಮಾಹಿತಿ ಪಡೆಯುತ್ತಿದ್ದಾರೆ. ಇದರಿಂದ ನಮಗೂ ಮಾಹಿತಿ ಸಂಗ್ರಹ ಮಾಡಿಕೊಳ್ಳೋದಕ್ಕೆ ಸಹಾಯ ಆಗುತ್ತಿದೆ. ಪ್ರವಾಸೋದ್ಯಮ ತಾಣಗಳಲ್ಲೂ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ. ರಾಜ್ಯದ ಮೃಗಾಲಯಗಳನ್ನು ಕ್ಲೋಸ್ ಮಾಡುವ ನಿರ್ಧಾರ ಮಾಡಿದ್ದಾರೆ. ಸೋಂಕಿತರ ಈ ಸಂಖ್ಯೆ ಹೆಚ್ಚಾಗದಂತೆ ಕ್ರಮ ಕೈಗೊಳ್ಳಲು ಮುಂದಾಗಿದ್ದೇವೆ ಎಂದು ಹೇಳಿದರು.

    ಇದೇ ವೇಳೆ ಗ್ರೀಸ್‍ನಿಂದ ಬಂದ ದಂಪತಿ ವಿಚಾರವಾಗಿ ಮಾತನಾಡಿದ ಸುಧಾಕರ್, ಗ್ರೀಸ್‍ನಿಂದ ದಂಪತಿ ಬೆಂಗಳೂರಿಗೆ ಬಂದಿದ್ದು ನಿಜ. ಮಾರ್ಚ್ 8ರ ರಾತ್ರಿ ಬಂದಿದ್ದಾರೆ. ಪತ್ನಿ ಏರ್ ಪೋರ್ಟಿನಲ್ಲೇ ಇರುತ್ತಾರೆ. ಮುಂಬೈನಿಂದ ಬೆಂಗಳೂರಿಗೆ ಡೊಮೆಸ್ಟಿಕ್ ಫ್ಲೈಟ್‍ನಲ್ಲಿ ಬಂದಿರುತ್ತಾರೆ. ಅವರು ಮತ್ತೆ ಬೆಂಗಳೂರಿನಿಂದ ದೆಹಲಿಗೆ ಹೋಗುತ್ತಾರೆ. ದಂಪತಿ ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಕ್ಕೆ ಬಂದಿಲ್ಲ. ಇದನ್ನು ತನಿಖೆ ಮಾಡಿ ದೃಢಪಡಿಸಿಕೊಂಡು ಹೇಳುತ್ತಿದ್ದೇನೆ. ಬೆಂಗಳೂರಿಗೆ 9:41 ಕ್ಕೆ ಬರುತ್ತಾರೆ. ನಂತರ 1 ಗಂಟೆಗೆ ದೆಹಲಿಗೆ ಹೊರಡುತ್ತಾರೆ. ದೆಹಲಿಯಿಂದ ಟ್ರೈನ್ ಮೂಲಕ ಆಗ್ರಾಕ್ಕೆ ತೆರಳಿದ್ದಾರೆ ಎಂದು ತಿಳಿಸಿದರು.

    ಕೊರೊನಾ ವೈರಸ್ ತಡೆಗಟ್ಟಲು ಏನೇನು ಕ್ರಮ ತೆಗೆದುಕೊಳ್ಳಬೇಕು ಎಲ್ಲವನ್ನೂ ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಒಂದು ಪ್ರಕರಣದಿಂದ ಇಡೀ ಕಲಬುರಗಿ ಜಿಲ್ಲೆಯನ್ನು ಬಂದ್ ಮಾಡಿಸಲಾಗಿದೆ. ಮಾಧ್ಯಮ ಪ್ರತಿನಿಧಿಗಳನ್ನ ಸಹ ತಪಾಸಣೆ ಮಾಡಿಸಲಾಗಿದೆ ಎಂದು ಕಲಬುರಗಿಯ ಡಿಸಿ ತಿಳಿಸಿದ್ದಾರೆ ಎಂದರು.