Tag: press conference

  • ಕೊರೊನಾದಿಂದ ಕಲಬುರಗಿಯ ವ್ಯಕ್ತಿ ಸಾವನ್ನಪ್ಪಿಲ್ಲ: ರಾಮುಲು

    ಕೊರೊನಾದಿಂದ ಕಲಬುರಗಿಯ ವ್ಯಕ್ತಿ ಸಾವನ್ನಪ್ಪಿಲ್ಲ: ರಾಮುಲು

    ಬೆಂಗಳೂರು: ಕೊರೊನಾ ವೈರಸ್ ಇದೆ ಎಂದು ಶಂಕಿಸಲಾಗಿದ್ದ ಸಾವನ್ನಪ್ಪಿದ ವ್ಯಕ್ತಿಗೆ ಕೊರೊನಾ ಇರಲಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕೊರೊನಾ ವೈರಸ್ ಆತಂಕದ ಹಿನ್ನೆಲೆ ನಮ್ಮ ರಾಜ್ಯದಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಶಂಕಿತರನ್ನು ತಪಾಸಣೆ ಮಾಡಿದ್ದೇವೆ. ಜೊತೆ ಕೆಲ ಜನ ಭಯಪಟ್ಟು ಸುಮ್ಮನೇ ಚೆಕಪ್ ಮಾಡಿಸಲು ಬರುತ್ತಾರೆ. ಆ ರೀತಿಯಲ್ಲಿ ಬರುವುದು ಬೇಡ, ಕೊರೊನಾ ಲಕ್ಷಣಗಳು ಕಂಡು ಬಂದರೆ ಕೆಮ್ಮು, ಜ್ವರ, ನೆಗಡಿ ಇದ್ದಾರೆ ಮಾತ್ರ ಬಂದು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದರು.

    ಕಲಬುರಗಿಯಲ್ಲಿ ಸಾವನ್ನಪ್ಪಿದ ವ್ಯಕ್ತಿ ಕೊರೊನಾ ಬಂದು ಸತ್ತಿಲ್ಲ. ಆತ ಜನವರಿ ಕೊನೆಯಲ್ಲಿ ಸೌದಿಗೆ ಹೋಗಿದ್ದರು. ನಂತರ ಫೆಬ್ರವರಿ 29 ರಂದು ವಾಪಸ್ ಬಂದಿದ್ದರು. ಅಲ್ಲಿಂದ ಬಂದು ನಂತರ ಅವರಿಗೆ ಸ್ವಲ್ಪ ಜ್ವರ ಇತ್ತು. ಆಗ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಸ್ಪೆಷಲ್ ವಾರ್ಡಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ನಂತರ ವೈದ್ಯರ ಸಲಹೆಯ ಮೇರೆಗೆ ಮಾರ್ಚ್ 9ರ ರಾತ್ರಿ ಹೈದಾರಬಾದ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು ನಂತರ ಮಾರ್ಚ್ 10ರಂದು ರಾತ್ರಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

    ಸಾವನ್ನಪ್ಪಿದ ವ್ಯಕ್ತಿಗೆ 76 ವರ್ಷವಾಗಿದ್ದು, ಅವರಿಗೇ ಹಲವು ಕಾಯಿಲೆಗಳು ಇದ್ದವು. ಅಸ್ತಮಾ, ಅಪೆಂಡಿಕ್ಸ್, ಬಿಪಿ ಹೀಗೆ ಅವರು ಸಾಕಷ್ಟು ಬೇರೆ ಬೇರೆ ರೋಗಗಳಿಂದ ಬಳಲುತ್ತಿದ್ದರು. ಹಾಗಾಗಿ ಅವರು ಸಾವನ್ನಪ್ಪಿದ್ದಾರೆ. ನಮ್ಮ ರಾಜ್ಯದಲ್ಲಿ ಕೊರೊನಾ ಕೇವಲ 4 ಜನರಲ್ಲಿ ಮಾತ್ರ ಪಾಸಿಟಿವ್ ಕಂಡಿತ್ತು. ಆ ಸಂಖ್ಯೆ ಹಾಗೇ ಇದೆ ಇಂದು ಏರಿಕೆ ಆಗಿಲ್ಲ. ಜೊತೆಗೆ ಸಾವನ್ನಪ್ಪಿದ ವ್ಯಕ್ತಿಗೆ ಕೊರೊನಾ ಇರಲಿಲ್ಲ. ಅವರ ದೇಹವನ್ನು ರಾಜ್ಯದ ಗಡಿ ಭಾಗದಲ್ಲೇ ರಿಸಿವ್ ಮಾಡಿಕೊಂಡು ದಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

    ಯಾರು ಈ ಮಹಮದ್ ಹುಸೇನ್ ಸಿದ್ದಿಕಿ?
    ಫೆಬ್ರವರಿ 29ರಂದು ಸೌದಿ ಅರೇಬಿಯಾದಿಂದ ವೃದ್ಧ ಮೊಹ್ಮದ್ ಹುಸೇನ್ ಸಿದ್ದಿಕಿ, ಹೈದರಾಬಾದ್ ಮಾರ್ಗವಾಗಿ ಕಲಬುರಗಿ ನಗರಕ್ಕೆ ಬಂದಿದ್ದರು. ಮಾರ್ಚ್ 5ರಂದು ಸಿದ್ಧಿಕಿ ಅವರಿಗೆ ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ವಿಶೇಷ ವಾರ್ಡ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ಸಿದ್ದಿಕಿ ಅವರ ಗಂಟಲು ದ್ರವ ಸಂಗ್ರಹಿಸಿ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆ ಲ್ಯಾಬ್‍ಗೆ ಕಳಿಸಲಾಗಿತ್ತು. ಆದರೆ ವರದಿಗೂ ಮುನ್ನವೇ ಹೆಚ್ಚಿನ ಚಿಕಿತ್ಸೆಗಾಗಿ ಕುಟುಂಬಸ್ಥರು ಸಿದ್ದಿಕಿಯವರನ್ನು ಹೈದರಾಬಾದ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದರು.

    ಅನುಮಾನಗಳಿಗೆ ಕಾರಣವಾಯ್ತು ಪತ್ರ: ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ ಹೊರಡಿಸಿರುವ ಜ್ಞಾಪನಾ ಪತ್ರ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮಹಮದ್ ಹುಸೇನ್ ಸಿದ್ದಿಕಿ (76) ಕೊವಿಡ್-19 (ಕೊರೊನಾ ವೈರಸ್)ನಿಂದ ಮರಣ ಹೊಂದಿರುವ ಪ್ರಯುಕ್ತ ಅಂತ್ಯಕ್ರಿಯೆ ಪ್ರಕ್ರಿಯೆ ಮುಗಿಯವರೆಗೂ ಕಲಬುರಗಿ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ| ಶರಣಬಸಪ್ಪ ಕ್ಯಾತನಾಳ ಹಾಗೂ ಅವರ ತಂಡ ಉಸ್ತುವಾರಿ ವಹಿಸಿಕೊಂಡು ಎಲ್ಲ ತರಹದ ಮುಂಜಾಗ್ರತೆ ಹಾಗೂ ನಿಯಂತ್ರಣ ಕೈಗೊಂಡು ವರದಿ ನೀಡುವಂತೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

    ಕಲಬುರಗಿ ಮತ್ತು ಹೈದರಾಬಾದ್ ಆಸ್ಪತ್ರೆಗಳಲ್ಲಿ ಯಾವ ರೀತಿಯ ಚಿಕಿತ್ಸೆ ನೀಡಲಾಗಿತ್ತು ಎಂಬುದರ ಬಗ್ಗೆ ಮಾಹಿತಿಗಳು ಅಸ್ಪಷ್ಟವಾಗಿವೆ. ಸಿದ್ದಿಕಿಯವರ ಸಾವಿನ ಬಗ್ಗೆ ಪ್ರತಿಕ್ರಿಯೆ ನೀಡಲು ಆರೋಗ್ಯಾಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಬೆಂಗಳೂರಿನ ಪ್ರಯೋಗಾಲಯದ ಮೆಡಿಕಲ್ ರಿಪೋರ್ಟ್ ಗಾಗಿ ಕಾಯುತ್ತಿದ್ದೇವೆ ಎಂಬ ಮಾತುಗಳು ಆರೋಗ್ಯ ಇಲಾಖೆಯಲ್ಲಿ ಕೇಳಿ ಬರುತ್ತಿವೆ. ಪ್ರಯೋಗಾಲಯದ ವರದಿಗೂ ಮುನ್ನವೇ ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಜ್ಞಾಪನಾ ಪತ್ರ ಚರ್ಚೆಗೆ ಗ್ರಾಸವಾಗಿದೆ.

  • ಎಲ್ಲ ಕಡೆ ಮೆಚ್ಚುಗೆ, ಇಲ್ಲಿ ಸುಳ್ಳನ್ನು ತಿನ್ನಲಾಗುತ್ತಿದೆ – ವಿರಾಟ್ ಕೊಹ್ಲಿ

    ಎಲ್ಲ ಕಡೆ ಮೆಚ್ಚುಗೆ, ಇಲ್ಲಿ ಸುಳ್ಳನ್ನು ತಿನ್ನಲಾಗುತ್ತಿದೆ – ವಿರಾಟ್ ಕೊಹ್ಲಿ

    ನವದೆಹಲಿ: ಟೀಂ ಇಂಡಿಯಾದಲ್ಲಿ ಎಲ್ಲವೂ ಸರಿ ಇಲ್ಲ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಾಯಕ ವಿರಾಟ್ ಕೊಹ್ಲಿ, ಇಂತಹ ಯಾವುದೇ ಸನ್ನಿವೇಶ ಎದುರಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ವಿಂಡೀಸ್ ಪ್ರವಾಸಕ್ಕೆ ತೆರಳುವ ಮುನ್ನ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಶ್ವಕಪ್ ಬಳಿಕ ನಾನು ಹಲವು ಸಮಾರಂಭದಲ್ಲಿ ಭಾಗವಹಿಸಿದ್ದೆ. ಎಲ್ಲ ಕಡೆಯಿಂದಲೂ ತಂಡದ ಪ್ರದರ್ಶನ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತಿತ್ತು. ಆದರೆ ಇಲ್ಲಿಗೆ ಬಂದ ತಕ್ಷಣ ಇಂತಹ ವರದಿಗಳು ಕೇಳಿ ಬಂದಿದ್ದು ಅಚ್ಚರಿಯಾಗಿತ್ತು. ಉತ್ತಮ ಪ್ರದರ್ಶನಗಳ ಹೊರತುಪಡಿಸಿ ತಮ್ಮದೇ ಊಹೆಗಳನ್ನು ಹರಿಬಿಟ್ಟಿದ್ದಾರೆ ಎಂದರು.

    ನನ್ನ ಪ್ರಕಾರ ಇಂತಹ ಸುದ್ದಿಗಳು ನಮ್ಮ ನಡುವಿನ ಆತ್ಮೀಯತೆಯನ್ನ ಭಂಗಗೊಳಿಸುವಂತಹ ಪ್ರಯತ್ನ ಎಂದು ನನಗೆ ಅನ್ನಿಸುತ್ತಿದೆ. ಇಲ್ಲಿ ಸುಳ್ಳನ್ನು ತಿನ್ನಲಾಗುತ್ತಿದೆ. ಈ ರೀತಿಯ ಸುದ್ದಿಗಳನ್ನು ಓದಲು ನಿಜವಾಗಿಯೂ ಕಷ್ಟ ಆಗುತ್ತದೆ. ಇಂತಹ ಸುದ್ದಿ ಹರಿಬಿಡುವುದರಿಂದ ಯಾರಿಗೆ ಲಾಭ ಆಗಲಿದೆ ಎಂಬುವುದು ನನಗಂತು ಗೊತ್ತಿಲ್ಲ. ಆದರೆ ಇಂತಹ ಸುಳ್ಳು ಸುದ್ದಿಗಳು ಪದೇ ಪದೇ ನಮ್ಮ ಸುತ್ತಲೂ ಹರಿದಾಡುತ್ತಿದ್ದಾರೆ ತಂಡದ ನಾಯಕ, ಕೋಚ್, ಆಟಗಾರರಾಗಿ ಪರಿಣಾಮ ಬೀರಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಯಾರು ಇಂತಹ ಸುದ್ದಿಗಳನ್ನು ಮಾಡುತ್ತಾರೋ ಅವರೇ ಬಂದು ನೋಡಿ. ಡ್ರೆಸ್ಸಿಂಗ್ ರೂಮ್‍ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದಾದರೆ ನೀವೇ ಬಂದು ನೋಡಿ. ತಂಡದ ನಾಯಕರ ಹೇಗೆ ಆಟಗಾರರೊಂದಿಗೆ ಮಾತನಾಡುತ್ತಾರೆ. ಹಿರಿಯ ಆಟಗಾರರು ಕಿರಿಯನ್ನ ಹೇಗೆ ನಡೆಸಿಕೊಳ್ಳುತ್ತಾರೆ ಎಂಬುವುದನ್ನು ವಿಡಿಯೋ ಮಾಡಿಕೊಳ್ಳಿ ಎಂದರು. ಅಲ್ಲದೇ ಇಂತಹ ಸುದ್ದಿಗಳು ಆಟಗಾರರಿಗೆ ತೋರುವ ಅಗೌರವವಾಗಿದೆ. ನನ್ನ ಹಾಗೂ ರೋಹಿತ್ ನಡುವೆ ಯಾವುದೇ ಮನಸ್ತಾಪ ಇಲ್ಲ. ನಾನು 11 ವರ್ಷ, ರೋಹಿತ್ 10 ವರ್ಷಗಳಿಂದ ತಂಡದಲ್ಲಿದ್ದಾರೆ. ಅವರು ಉತ್ತಮ ಪ್ರದರ್ಶನ ನೀಡಿದ ಸಂದರ್ಭದಲ್ಲಿ ನಾಯಕನಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದೇನೆ ಎಂದರು.

    ಕೊಹ್ಲಿ ತಂಡದೊಂದಿಗೆ ವೆಸ್ಟ್ ಇಂಡೀಸ್ ಟೂರ್ನಿಗೆ ಪ್ರಯಾಣ ಬೆಳೆಸಲಿದ್ದು, ಕೋಚ್ ರವಿಶಾಸ್ತ್ರಿ ತಂಡದೊಂದಿಗೆ ತೆರಳುತ್ತಿಲ್ಲ ಎಂಬ ಮಾಹಿತಿ ಲಭಿಸಿದೆ. ವೆಸ್ಟ್ ಇಂಡೀಸ್ ತಂಡದ ವಿರುದ್ಧ ಆಗಸ್ಟ್ 3 ರಿಂದ ಟಿ20 ಪಂದ್ಯಗಳು ನಡೆಲಿದೆ.

    ಕೆಲ ಸಮಯದ ಹಿಂದೆ ರೋಹಿತ್ ಶರ್ಮಾ ನಾಯಕ ವಿರಾಟ್ ಕೊಹ್ಲಿ ಅವರನ್ನ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಿಂದ ಅನ್ ಫಾಲೋ ಮಾಡಿದ್ದರು. ಆ ಬಳಿಕ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾರನ್ನು ಕೂಡ ಅನ್ ಫಾಲೋ ಮಾಡಿದ್ದರು. ಇದರ ಬೆನ್ನಲ್ಲೇ ಅನುಷ್ಕಾ ತಮ್ಮ ಇನ್‍ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಹಾಕಿದ್ದ ಸ್ಟೇಟಸ್ ಫೋಟೋ ಭಾರೀ ಚರ್ಚೆಗೆ ಕಾರಣವಾಗಿತ್ತು. ಅಲ್ಲದೇ ಅನುಷ್ಕಾ ಕೂಡ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾರನ್ನು ಅನ್ ಫಾಲೋ ಮಾಡಿದ್ದರು. ಈ ವರದಿಗಳ ನಡುವೆಯೇ ವೆಸ್ಟ್ ಇಂಡೀಸ್ ಟೂರ್ನಿಗೂ ಮೊದಲು ನಡೆಯ ಬೇಕಿದ್ದ ಪತ್ರಿಕಾಗೋಷ್ಠಿಯನ್ನ ರದ್ದು ಪಡಿಸಲಾಗಿದೆ ಎಂದಿದ್ದರು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಬಿಸಿಸಿಐ ವಿದೇಶಿ ಸರಣಿಯ ಪ್ರವಾಸ ಆರಂಭಕ್ಕೂ ಮುನ್ನ ಕೊಹ್ಲಿ ಸುದ್ದಿಗೋಷ್ಠಿ ನಡೆಸುತ್ತಾರೆ ಎಂದು ಭಾನುವಾರ ಮಾಹಿತಿ ನೀಡಿತ್ತು.

  • ರೋಹಿತ್ ಜೊತೆ ಮನಸ್ತಾಪ – ಕೊಹ್ಲಿ ಪತ್ರಿಕಾಗೋಷ್ಠಿ ದಿಢೀರ್ ರದ್ದು?

    ರೋಹಿತ್ ಜೊತೆ ಮನಸ್ತಾಪ – ಕೊಹ್ಲಿ ಪತ್ರಿಕಾಗೋಷ್ಠಿ ದಿಢೀರ್ ರದ್ದು?

    ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಡುವೆ ಮನಸ್ತಾಪ ಜೋರಾಗಿದೆ ಎನ್ನುವ ಸುದ್ದಿಯ ಬೆನ್ನಲ್ಲೇ, ವಿಂಡೀಸ್ ಟೂರ್ನಿಗೆ ಮುನ್ನಾ ನಡೆಯಬೇಕಿದ್ದ ಪ್ರತಿಕಾಗೋಷ್ಠಿಯನ್ನು ದಿಢೀರ್ ರದ್ದು ಪಡಿಸಲಾಗಿದೆ.

    ಕೊಹ್ಲಿ- ರೋಹಿತ್ ನಡುವಿನ ಮನಸ್ತಾಪ ಸುದ್ದಿ ಮಾಧ್ಯಮಗಳ ಸೃಷ್ಟಿ ಎಂದು ಬಿಸಿಸಿಐ ವಕ್ತಾರರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಈ ಮಧ್ಯೆ ವಿಂಡೀಸ್ ಟೂರ್ನಿಯ ಮುನ್ನ ನಡೆಯಬೇಕಿದ್ದ ಪತ್ರಿಕಾಗೋಷ್ಠಿ ರದ್ದಾಗಿದೆ. ನಾವು ಕಾರ್ಯಕ್ರಮವನ್ನು ಏರ್ಪಡಿಸಲು ಸಾಕಷ್ಟು ಪ್ರಯತ್ನ ನಡೆಸಿದೆವು, ಆದರೆ ಅದು ಸಾಧ್ಯವಾಗಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಮಾಧ್ಯಮ ವರದಿ ಮಾಡಿದೆ.

    ಯಾವುದೇ ವಿದೇಶ ಪ್ರವಾಸಕ್ಕೆ ತೆರಳುವ ಮುನ್ನ ಟೀಂ ಇಂಡಿಯಾ ನಾಯಕರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸುತ್ತಿದ್ದರು. ಟೀಂ ಇಂಡಿಯಾ ಸೋಮವಾರ ರಾತ್ರಿ ವೆಸ್ಟ್ ಇಂಡೀಸ್‍ಗೆ ಪ್ರಯಾಣ ಬೆಳೆಸಲಿದ್ದು, ರೋಹಿತ್ ರೊಂದಿಗೆ ಮನಸ್ತಾಪ ಹೊಂದಿರುವ ಪ್ರಶ್ನೆಗಳನ್ನು ಕೇಳಬಹುದು. ಸುದ್ದಿಗೋಷ್ಠಿಯಲ್ಲಿ ಎದುರಾಗಬಹುದಾಗಿದ್ದ ಪ್ರಶ್ನೆಗಳಿಂದ ಹೊಸ ವಿವಾದ ಸೃಷ್ಟಿ ಆಗದಂತೆ ನೋಡಿಕೊಳ್ಳಲು ಕೊಹ್ಲಿ ಮಾಧ್ಯಮಗೋಷ್ಠಿಗೆ ಭಾಗವಹಿಸದ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ.

    ಇತ್ತ ಶನಿವಾರ ಮುಂಬೈ ನಲ್ಲಿ ನಡೆದ ಪ್ರೊ ಕಬಡ್ಡಿ ಲೀಗ್ ಪಂದ್ಯವಳಿ ವೇಳೆ ಹಾಜರಿದ್ದ ಕೊಹ್ಲಿ, ಮಾಧ್ಯಮಗಳಿಂದ ದೂರವೇ ಉಳಿದಿದ್ದರು. ವಿಮಾನ ಏರುವ ಮುನ್ನ ಕೊಹ್ಲಿ ಸೋಮವಾರ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ವೆಸ್ಟ್ ಇಂಡೀಸ್ ಪ್ರವಾಸದ ಬಗ್ಗೆ ಯಾವುದೇ ಪ್ರಶ್ನೆ ತೆಗೆದುಕೊಳ್ಳುವುದಿಲ್ಲ ಎಂದು ಉತ್ತರಿಸಿದ್ದಾರೆ.

    ಕೆಲ ಸಮಯದ ಹಿಂದೆ ರೋಹಿತ್ ಶರ್ಮಾ ನಾಯಕ ವಿರಾಟ್ ಕೊಹ್ಲಿ ಅವರನ್ನ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಿಂದ ಅನ್ ಫಾಲೋ ಮಾಡಿದ್ದರು. ಆ ಬಳಿಕ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾರನ್ನು ಕೂಡ ಅನ್ ಫಾಲೋ ಮಾಡಿದ್ದರು. ಇದರ ಬೆನ್ನಲ್ಲೇ ಅನುಷ್ಕಾ ತಮ್ಮ ಇನ್‍ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಹಾಕಿದ್ದ ಸ್ಟೇಟಸ್ ಫೋಟೋ ಭಾರೀ ಚರ್ಚೆಗೆ ಕಾರಣವಾಗಿತ್ತು. ಅಲ್ಲದೇ ಅನುಷ್ಕಾ ಕೂಡ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾರನ್ನು ಅನ್ ಫಾಲೋ ಮಾಡಿದ್ದರು.

  • ಮೊದಲ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆ ಎದುರಿಸದ ಪ್ರಧಾನಿ: ಕಾಲೆಳೆದ ನೆಟ್ಟಿಗರು

    ಮೊದಲ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆ ಎದುರಿಸದ ಪ್ರಧಾನಿ: ಕಾಲೆಳೆದ ನೆಟ್ಟಿಗರು

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಡೆಸಿದ ಸುದ್ದಿಗೋಷ್ಠಿಯು ಟ್ವಿಟರ್ ನಲ್ಲಿ ಭಾರೀ ಟ್ರೋಲ್ ಆಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಾಜಿ ಸಂಸದೆ ರಮ್ಯಾ, ವಕೀಲ್ ವಂದುಮುರುಗನ್ ಸೇರಿದಂತೆ ಅನೇಕರು ವ್ಯಂಗ್ಯವಾಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಐದು ವರ್ಷದ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಮಾಧ್ಯಮಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದರು. ದೆಹಲಿಯ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕರೆದಿದ್ದ ಸುದ್ದಿಗೋಷ್ಠಿಗೆ ಜಂಟಿಯಾಗಿ ಭಾಗಿಯಾಗಿದರು.

    ನಗುಮೊಗದಿಂದಲೇ ಮಾತು ಆರಂಭಿಸಿದ ಪ್ರಧಾನಿ ಮೋದಿಯವರು, ಭಾರತ ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಐದು ವರ್ಷ ನನಗೆ ಆಶೀರ್ವಾದ ನೀಡಿದ್ದೀರಿ. ಐದು ವರ್ಷದ ಸಾಧನೆ ತೃಪ್ತಿಯಿದೆ. ಕೆಲವು ವಿಚಾರವನ್ನು ಹೆಮ್ಮೆಯಿಂದ ಹೇಳಬೇಕು. ಇಡೀ ವಿಶ್ವದ ಗಮನ ಸೆಳೆದಿದ್ದೇವೆ ಎಂದರು.

    ಐದು ವರ್ಷದಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸವಲತ್ತು ಸಿಗುವಂತೆ ಮಾಡಿದ್ದೇವೆ. 2014ರ ಮೇ 17ರಂದೇ ಪ್ರಾಮಾಣಿಕತೆ ಯುಗ ಆರಂಭವಾಗಿತ್ತು. 2014ರಲ್ಲಿ ಐಪಿಎಲ್‍ನ್ನು ಎತ್ತಂಗಡಿ ಮಾಡಲಾಗಿತ್ತು. ಈ ಬಾರಿ ಚುನಾವಣೆ, ಪರೀಕ್ಷೆಗಳು, ಹಬ್ಬಗಳು ಹೀಗೆ ಒಟ್ಟಾಗಿ ನಡೆದಿವೆ. ಸಕಾರಾತ್ಮಕ ಭಾವನೆಯಿಂದ ಚುನಾವಣೆಗೆ ಬಂದಿದ್ದೇವೆ. ಪೂರ್ಣ ಬಹುಮತದೊಂದಿಗೆ ವಾಪಸ್ ಬರುತ್ತೇವೆ ಎಂದು ನಗು ನಗುತ್ತಲೇ ಮಾತು ಮುಗಿಸಿದರು.

    5 ವರ್ಷದಲ್ಲಿ ಮೊದಲ ಬಾರಿಗೆ ಮೋದಿ ಸುದ್ದಿಗೋಷ್ಠಿಗೆ ಆಗಮಿಸಿದ್ದರೂ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲಿಲ್ಲ. ಪತ್ರಕರ್ತರು ಕೇಳಿದ ಪ್ರಶ್ನೆಗೆ ಶಿಸ್ತಿನ ನೆಪವೊಡ್ಡಿ, ಪಕ್ಷದ ಅಧ್ಯಕ್ಷರು ನಿಮ್ಮ ಪ್ರಶ್ನೆಗೆ ಉತ್ತರ ನೀಡುತ್ತಾರೆ ಎಂದು ಹೇಳಿದರು. ಬಳಿಕ ಅಮಿತ್ ಶಾ ಅವರೇ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದರು.

    ನೆಟ್ಟಿಗರಿಂದ ಟ್ರೋಲ್
    ಮೋದಿ ಅವರಿಗೆ ಶುಭಾಶಯಗಳು. ಅತ್ಯುತ್ತಮ ಸುದ್ದಿಗೋಷ್ಠಿ! ಸುದ್ದಿಗೋಷ್ಠಿ ಎದುರಿಸಿದ್ದು ಉತ್ತಮ ಪ್ರಯತ್ನ. ಮುಂದಿನ ಬಾರಿಯಾದರೂ ಅಮಿತ್ ಶಾ ಅವರು ನಿಮಗೆ ಕೆಲವು ಪ್ರಶ್ನೆಗಳಿಗೆ ಉತ್ತರಿಸಲು ಅವಕಾಶ ನೀಡಬಹುದು. ವೆಲ್‍ಡನ್! ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ಕಾಲೇಳೆದಿದ್ದಾರೆ.

    ಮಾಜಿ ಸಂಸದೆ ರಮ್ಯಾ ಅವರು, ಇದು ಯಾರ ಸುದ್ದಿಗೋಷ್ಠಿ..? ಪ್ರಧಾನಿ ಯಾರು..? ಅಮಿತ್ ಶಾ ಅವರಾ ಅಥವಾ ನರೇಂದ್ರ ಮೋದಿ ಅವರಾ! ವ್ಯರ್ಥ ಮಾಧ್ಯಮಗೋಷ್ಠಿ ಎಂದು ಕಿಡಿಕಾರಿದ್ದಾರೆ.

    ಪ್ರಧಾನಿ ಮೋದಿ ಅವರಿಗೆ ಪತ್ರಿಕಾಗೋಷ್ಠಿ ಮತ್ತು ಮನ್‍ಕಿ ಬಾತ್ ನಡುವೆ ಗೊಂದಲ ಉಂಟಾಗಿದೆ ಎಂದು ಫ್ಯಾಕ್ಟ್‍ಚೆಕ್ ವೆಬ್‍ಸೈಟ್ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಪ್ರತೀಕ್ ಸಿನ್ಹಾ ವ್ಯಂಗ್ಯವಾಡಿದ್ದಾರೆ.

    ಸುದ್ದಿಗೋಷ್ಠಿ ಇತಿಹಾಸದಲ್ಲಿ ಇದು ಅತ್ಯುತ್ತಮ ಸುದ್ದಿಗೋಷ್ಠಿ ಎಂದು ವಕೀಲ್ ವಂದುಮುರುಗನ್ ಲೇವಡಿ ಮಾಡಿದ್ದಾರೆ. ಮೈಥಿಲಿ ಸರಣ್ ಅವರು, ಮೋದಿ ಅವರು ಕೇವಲ ಸ್ಟ್ರೆಸ್ ಕಾನ್ಫರೆನ್ಸ್ ನಡೆಸಿದರು ಎಂದು ಟ್ವೀಟ್ ಮಾಡಿದ್ದಾರೆ.

    ಬ್ರೇಕಿಂಗ್ ನ್ಯೂಸ್: ಸಿದ್ಧಪಡಿಸಿಟ್ಟ ಪ್ರಶ್ನೆ/ ಉತ್ತರ ಪ್ರತಿಗಳನ್ನು ಯಾರೋ ಜಾಗ ಬದಲಿಸಿಟ್ಟಿದ್ದಾರೆ. ಆದ್ದರಿಂದ ಪ್ರಧಾನಿಯವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿಲ್ಲ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ದೇಶ್‍ಭಕ್ತ್ ಲೇವಡಿ ಮಾಡಿದ್ದಾರೆ.

    ಪತ್ರಿಕಾಗೋಷ್ಠಿಗಾಗಿ ಥ್ಯಾಂಕ್ಯೂ ಮನ್‍ಮೋದಿ ಜೀ ಎಂದು ಯೂತ್ ಅಗೆನೆಸ್ಟ್ ಹೇಟ್ ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದಾರೆ.

    https://twitter.com/akashbanerjee/status/1129362519448084482

  • ಮೋದಿಗೆ ಮುಸ್ಲಿಂ ಹೆಂಡತಿಯರ ಬಗ್ಗೆ ಇರೋ ಚಿಂತೆ ರಾಮ ಮಂದಿರದ ಬಗ್ಗೆ ಇಲ್ಲ : ಸಿಎಂ ಇಬ್ರಾಹಿಂ

    ಮೋದಿಗೆ ಮುಸ್ಲಿಂ ಹೆಂಡತಿಯರ ಬಗ್ಗೆ ಇರೋ ಚಿಂತೆ ರಾಮ ಮಂದಿರದ ಬಗ್ಗೆ ಇಲ್ಲ : ಸಿಎಂ ಇಬ್ರಾಹಿಂ

    ಹುಬ್ಬಳ್ಳಿ:  ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಸ್ಲಿಂ ಹೆಂಡತಿಯರ ಬಗ್ಗೆ ಇರುವ ಚಿಂತೆ ರಾಮ ಮಂದಿರದ ಬಗ್ಗೆ ಇಲ್ಲ ಎಂದು ಮಾಜಿ ಕಾಂಗ್ರೆಸ್ ಮುಖಂಡ, ಎಂಎಲ್‍ಸಿ ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಇಬ್ರಾಹಿಂ, ರಾಮ ಮಂದಿರ ಸಮಸ್ಯೆಯನ್ನು ಬಗೆ ಹರಿಸುವ ಇಚ್ಛೆ ಬಿಜೆಪಿಗೆ ಇಲ್ಲ. ಇದಕ್ಕೆ 2019ರ ಲೋಕಸಭಾ ಚುನಾವಣೆಯಲ್ಲಿ ದೇಶದ ಜನ ಸೂಕ್ತ ಉತ್ತರ ನೀಡುತ್ತಾರೆ. ಅಲ್ಲದೇ ಸದ್ಯ ನಡೆಯುತ್ತಿರುವ ಉಪಚುನಾವಣೆಯಲ್ಲಿ ಐದು ಕ್ಷೇತ್ರಗಳಲ್ಲಿಯೂ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾರೆ ಎಂದು ಭವಿಷ್ಯ ನುಡಿದರು.

    ಇದೇ ವೇಳೆ ರಾಮ ಮಂದಿರ ಕಟ್ಟುವುದಕ್ಕೆ ನಮ್ಮ ಅಭ್ಯಂತರ ಇಲ್ಲ ಎಂದು ತಿಳಿಸಿದ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ 28 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ನಮ್ಮದೇ ಹವಾ ಸೃಷ್ಟಿಸುತ್ತೇವೆ. ಆದರೆ ನಾನು ಬಿಜೆಪಿ ಪಕ್ಷ ಕೋಮುವಾದಿ ಎಂದು ವಿರೋಧ ಮಾಡುತ್ತಿಲ್ಲ. ಆದರೆ ಕಳೆದ ನಾಲ್ಕುವರೆ ವರ್ಷಗಳ ಆಡಳಿತದಲ್ಲಿ ಅವರು ದೇಶದ ಆರ್ಥಿಕ ನೀತಿಯನ್ನು ಹಾಳು ಮಾಡಿದ್ದಾರೆ. 70 ವರ್ಷಗಳ ಇತಿಹಾಸಲ್ಲಿಯೇ ಕೆಟ್ಟ ಆಡಳಿತ ನೀಡಿದ್ದಾರೆ. ಮೋದಿ ಅವರಿಗೆ ಮುಸ್ಲಿಂ ಹೆಂಡತಿಯರ ಬಗ್ಗೆ ಚಿಂತೆ ಇದೆ ಹೊರತು, ರಾಮ ಮಂದಿರದ ಬಗ್ಗೆ ಕಾಳಜಿ ಇಲ್ಲ. ರಾಮ ಮಂದಿರ ನಿರ್ಮಾಣ ಮಾಡುವುದು ಬಿಜೆಪಿಗೆ ಬೇಡವಾಗಿದೆ. ರಾಮ ಮಂದಿರ ಸಮಸ್ಯೆಯನ್ನ ಜೀವಂತವಾಗಿಡಲು ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

    ಅಯೋಧ್ಯೆ ವಿವಾದವನ್ನು ಬಗೆಹರಿಸಬೇಕೆಂಬ ಇಚ್ಛಾಶಕ್ತಿ ಬಿಜೆಪಿಗೆ ಇಲ್ಲ. ಈ ಹಿಂದೆ ಕರ್ನಾಟಕದ ಹುಬ್ಬಳ್ಳಿಯ ಈದ್ಗಾ ಮೈದಾನವನ್ನ ಇಟ್ಟುಕೊಂಡು ಬಿಜೆಪಿಯವರು ಮತಗಳನ್ನ ಕೇಳುತ್ತಿದ್ದರು. ಈಗ ಅಯೋಧ್ಯೆ ವಿವಾದವನ್ನು ಮುಂದಿಟ್ಟು ಬಿಜೆಪಿ ಮತ ಕೇಳುತ್ತಿದೆ. ಈಗಿನ ರಾಜಕೀಯ ಬಹಳ ಕೀಳು ಮಟ್ಟವನ್ನ ತಲುಪಿದೆ. ಬಿಜೆಪಿಯವರು ಹಿಂದೂ ಹಿಂದೂ ಎಂದು ಹೇಳುತ್ತಾರೆ. ಆದರೆ ಗುಡಿ ಮತ್ತು ಮಸೀದಿ ಕಟ್ಟುವುದು ಧರ್ಮ ಅಲ್ಲ. ಧರ್ಮ ಎಂದರೇ ಊಟ ಇಲ್ಲದವರಿಗೆ ಊಟ, ಮನೆ ಇಲ್ಲದವರಿಗೆ ಮನೆ ಕೊಡುವುದು ಎಂದರ್ಥ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

    ಗೋ ಸಂರಕ್ಷಣೆ ಎಂದು ಹೇಳುವ ಬಿಜೆಪಿ ಮುಖಂಡರು ಉತ್ತರ ಪ್ರದೇಶದಲ್ಲಿ ಗೋ ಪೂಜೆ ಮಾಡಿ ಗೋವಾದಲ್ಲಿ ಏನೂ ಮಾಡುತ್ತಿದ್ದಾರೆ? ಮೋದಿ ಅಧಿಕಾರಕ್ಕೆ ಬಂದ ಮೇಲೆ ದೇಶದಿಂದ ಗೋ ಮಾಂಸ ರಪ್ತು ಹೆಚ್ಚಾಗಿದೆ. ಈ ಉದ್ಯಮದಲ್ಲಿ ಬಿಜೆಪಿ ನಾಯಕರ ಹೆಸರಿನಲ್ಲಿ ಹಲವಾರು ಕಂಪನಿಗಳು ಇವೆ ಎಂದು ಆರೋಪಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೀಪಾವಳಿ ಆದ್ಮೇಲೆ ವೇಷದವರು ಬರ್ತಾರೆ, ಆದ್ರೆ ಈ ಬಾರಿ ದಸರೆಗೆ ಬಂದಿದ್ದಾರೆ: ಸಿಟಿ ರವಿ

    ದೀಪಾವಳಿ ಆದ್ಮೇಲೆ ವೇಷದವರು ಬರ್ತಾರೆ, ಆದ್ರೆ ಈ ಬಾರಿ ದಸರೆಗೆ ಬಂದಿದ್ದಾರೆ: ಸಿಟಿ ರವಿ

    ಶಿವಮೊಗ್ಗ: ದೀಪಾವಳಿ ಆದ ಮೇಲೆ ವೇಷದವರು ಬರುತ್ತಾರೆ. ಆದರೆ ವೇಷ ತೊಟ್ಟವರು ಈಗ ದಸರಾ ವೇಳೆಗೆ ಬಂದಿದ್ದಾರೆ ಎಂದು ಬಿಜೆಪಿ ಶಾಸಕ ಸಿಟಿ ರವಿ ವ್ಯಂಗ್ಯವಾಡಿದ್ದಾರೆ.

    ಶಿವಮೊಗ್ಗ ಲೋಕಸಭಾ ಉಪಚುನಾವಣೆಯ ವೇಳೆ ಮಾತನಾಡಿದ ಅವರು, ಇಂಥ ನೀಚ ಮುಖ್ಯಮಂತ್ರಿಯನ್ನು ನಾನು ಕಂಡಿರಲಿಲ್ಲ. ಈ ನೀಚನನ್ನು ಬೆಳಸಿದ್ದಕ್ಕಾಗಿ ಪಶ್ಚಾತ್ತಾಪ ಪಡುತ್ತಿದ್ದೇನೆ ಎಂದು ಹೇಳಿದ್ದ ದೇವೇಗೌಡರು ಈಗ ಸಿದ್ದರಾಮಯ್ಯ ಜೊತೆ ಕುಳಿತುಕೊಂಡು ಸುದ್ದಿಗೋಷ್ಠಿ ನಡೆಸಿದ್ದಾರೆ. ಈಗ ಈ ಜಂಟಿ ಪತ್ರಿಕಾಗೋಷ್ಠಿ ಸೌಭಾಗ್ಯನೋ ಅಥವಾ ದೌರ್ಭಾಗ್ಯನೋ ಎನ್ನುವುದನ್ನು ಅವರೇ ಹೇಳಬೇಕು ಎಂದರು.

    ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ದೂರ ಇಡುವುದೇ ನನ್ನ ಗುರಿ ಎಂದು ದೇವೇಗೌಡರು ಹೇಳಿದ್ದರು. ದೇವೇಗೌಡರ ಈ ಮಾತಿಗೆ ಸಿದ್ದರಾಮಯ್ಯ ದೇವೇಗೌಡರದು ಧೃತರಾಷ್ಟ್ರ ಆಲಿಂಗನ. ಎಲ್ಲರನ್ನೂ ಮುಗಿಸುತ್ತಾರೆ. ನಾನು ತಪ್ಪಿಸಿಕೊಂಡು ಬಂದು ಸಿಎಂ ಆದೆ ಎಂದಿದ್ದರು. ಈಗ ಈ ಆಲಿಂಗನ ಎಂತಹದ್ದು ಎನ್ನುವುದನ್ನು ಸಿದ್ದರಾಮಯ್ಯನವರೇ ಸ್ಪಷ್ಟ ಪಡಿಸಬೇಕು ಎಂದು ವ್ಯಂಗ್ಯವಾಡಿದರು.

    ಬಿಜೆಪಿ ನೇರವಾಗಿ ಯುದ್ಧ ಮಾಡುತ್ತದೆ. ಯಾರ ಬೆನ್ನಿಗೂ ಚೂರಿ ಹಾಕುವ ಕೆಲಸ ಮಾಡಿಲ್ಲ. ಸೈದ್ಧಾಂತಿಕವಾಗಿ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದೆ. ಜಂಟಿ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿಯನ್ನು ಬೈದಿದ್ದು ಬಿಟ್ಟರೆ ರಾಜ್ಯದ ಅಭಿವೃದ್ಧಿ ಬಗ್ಗೆ ಒಂದೇ ಒಂದು ಮಾತು ಆಡುತ್ತಿಲ್ಲ. ರಾಜಕೀಯ ಅಂಧಾಕಾರ ಎದುರಾಗುತ್ತದೆ ಎಂಬ ಕಾರಣಕ್ಕೆ ಬಿಜೆಪಿ ಬಗ್ಗೆ ಅಪಾರ ಹೆದರಿಕೆ ಇದೆ. ಹೊಟ್ಟೆ ಒಳಗೆ ವಿಷ ಇದ್ದರೂ ತೋರಿಕೆಗೆ ಒಂದಾಗಿದ್ದೇವೆ ಎಂದು ಜೆಡಿಎಸ್, ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ ಎಂದು ಟೀಕಿಸಿದರು.

    ಅವರೊಳಗೆ ಸಹಮತ ಇಲ್ಲದೆ ಏಕತೆಯ ಪ್ರದರ್ಶನ ನಾಟಕೀಯವಾಗಿತ್ತು. ಎರಡೂ ಪಕ್ಷಗಳು ನಮ್ಮ ರಾಜಕೀಯ ವಿರೋಧಿಗಳು ಪರಸ್ಪರ ಮುಗಿಸಲು ಹವಣಿಸುತ್ತಿರುವ ಕಾಂಗ್ರೆಸ್-ಜೆಡಿಎಸ್ ಎಷ್ಟು ಕಾಲ ಒಟ್ಟಿಗೆ ಇರಲು ಸಾಧ್ಯ ಎಂದು ಸಿಟಿ ರವಿ ಪ್ರಶ್ನೆ ಮಾಡಿದರು.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
  • ಗುಂಡೂರಾವ್ ಪಕ್ಕದಲ್ಲೇ ಕೂರಬೇಕೆಂದು ಕುರ್ಚಿಗಾಗಿ ಕಿತ್ತಾಡಿದ ಮುಖಂಡರು!

    ಗುಂಡೂರಾವ್ ಪಕ್ಕದಲ್ಲೇ ಕೂರಬೇಕೆಂದು ಕುರ್ಚಿಗಾಗಿ ಕಿತ್ತಾಡಿದ ಮುಖಂಡರು!

    ಬೆಳಗಾವಿ: ಸುದ್ದಿಗೋಷ್ಠಿ ವೇಳೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಪಕ್ಕದಲ್ಲೇ ಕೂರಬೇಕೆಂದು ಕುರ್ಚಿಗಾಗಿ ಸ್ಥಳೀಯ ಮುಖಂಡರು ಕಿತ್ತಾಟ ನಡೆಸಿದ್ದಾರೆ.

    ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಮೋಹನ್ ಹಾಗೂ ಮಾಜಿ ಶಾಸಕ ಫಿರೋಜ್ ಸೇಠ್ ನಡುವೆ ಗಲಾಟೆ ಪ್ರಾರಂಭವಾಗಿದೆ. ತನ್ನ ತಮ್ಮನಿಗೆ ಕುರ್ಚಿ ಬಿಟ್ಟುಕೊಡುವಂತೆ ಮೋಹನ್ ಗೆ ಫಿರೋಜ್ ಸೇಠ್ ಅವಾಜ್ ಹಾಕಿದ್ದಾರೆ. ಬಳಿಕ ದಿನೇಶ್ ಗುಂಡೂರಾವ್ ಅವರೇ ಕುರ್ಚಿಗಾಗಿ ಕಿತ್ತಾಡುತ್ತಿದ್ದ ಮುಖಂಡರನ್ನು ಸಮಾಧಾನಪಡಿಸಿದ್ದಾರೆ.

    ಕುರ್ಚಿ ಕಿತ್ತಾಟ ಶಮನಗೊಳಿಸಿ ಮಾತನಾಡಿದ ಗುಂಡೂರಾವ್, ಕಾಂಗ್ರೆಸ್ ಪಕ್ಷ ಎಲ್ಲಾ ಕಡೆಗಳಲ್ಲಿ ಸ್ಪರ್ಧೆ ಮಾಡಿದೆ. ನಮಗೆ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ಇದೆ. ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಮಾಡಲಿಲ್ಲ ಅಂತ ಜನರು ನಮ್ಮನ್ನ ತಿರಸ್ಕಾರ ಮಾಡಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಸೋಲಿಗೆ ಬೇರೆ ಬೇರೆ ಕಾರಣವಿದೆ. ಮುಂದಿನ ಲೋಕಸಭಾ ಚುನಾವಣೆಯ ಬೆಳಗಾವಿ, ಚಿಕ್ಕೋಡಿ ಗೆಲ್ಲುವುದು ನಮ್ಮ ಗುರಿಯಾಗಿದೆ ಎಂದರು.

    ಸಾಲ ಮನ್ನಾ ವಿಚಾರದಲ್ಲಿ ಸಿಎಂ ಎಚ್‍ಡಿಕೆ ಕಾಂಗ್ರೆಸ್ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಯಾವುದೇ ತೀರ್ಮಾನ ಆದರೂ ಅದರಲ್ಲಿ ಇಬ್ಬರ ಪಾತ್ರ ಇರುತ್ತದೆ. ಸಾಲ ಮನ್ನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಬೆಂಬಲವಿದೆ. ಒಂದೇ ಪಕ್ಷದ ಸರ್ಕಾರ ಇದ್ದಾಗ ಸಮನ್ವಯತೆ ಸಮಸ್ಯೆ ಇರುವುದಿಲ್ಲ. ಚುನಾವಣೆಯಲ್ಲಿ ವಿರೋಧ ಮಾಡದ ಪಕ್ಷಗಳು ಒಂದಾದಾಗ ಹೊಂದಾಣಿಕೆ ಸ್ವಲ್ಪ ಕಷ್ಟವಾಗುತ್ತೆ. ಹೀಗಾಗಿ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಣ್ಣಪುಟ್ಟ ಗೊಂದಲ ಸಹಜ. ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

    ಸಮ್ಮಿಶ್ರ ಸರ್ಕಾರ ಬೀಳಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು, ನಮ್ಮ ಶಾಸಕರಿಗೆ ಹಣ, ಅಧಿಕಾರದ ಆಮೀಷ ಒಡ್ಡುತ್ತಿದ್ದಾರೆ. ನಾಲ್ಕು ವರ್ಷದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ನ್ಯಾಯ ಕೊಡಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಆದರೆ ಈಗ ಅಧಿಕಾರಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಕಳೆದ ನಾಲ್ಕು ವರ್ಷದಲ್ಲಿ ದೇಶಕ್ಕೆ ಮೋದಿ ಕೊಡುಗೆ ಏನು? ಬಿಜೆಪಿ ಕಾರ್ಯಕ್ರಮವೇ ಜನರ ದಿಕ್ಕು ತಪ್ಪಿಸುವುದು ಆಗಿದೆ ಎಂದು ತಿರುಗೇಟು ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಜ್ಯದಲ್ಲಿ ವಾಡಿಕೆಗಿಂತ ಶೇಕಡಾ 3% ಮಳೆ ಕಡಿಮೆ: ಎಷ್ಟು ಪ್ರಮಾಣದಲ್ಲಿ ಬೆಳೆ ಬಿತ್ತನೆಯಾಗಿದೆ?

    ರಾಜ್ಯದಲ್ಲಿ ವಾಡಿಕೆಗಿಂತ ಶೇಕಡಾ 3% ಮಳೆ ಕಡಿಮೆ: ಎಷ್ಟು ಪ್ರಮಾಣದಲ್ಲಿ ಬೆಳೆ ಬಿತ್ತನೆಯಾಗಿದೆ?

    ಬೆಂಗಳೂರು: ರಾಜ್ಯದಲ್ಲಿ ವಾಡಿಕೆಗಿಂತ ಶೇಕಡಾ 3% ಮಳೆ ಕಡಿಮೆ ಆಗಿದೆ ಎಂದು ಕೃಷಿ ಸಚಿವ ಶಿವಶಂಕರ ರೆಡ್ಡಿ ಹೇಳಿದ್ದಾರೆ.

    ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಬಾರಿಯೂ ಮಳೆ ಕೊರತೆಯಾಗಿದೆ. ಮುಂಗಾರು ನಲ್ಲಿ ಶೇಕಡಾ 3% ಮಳೆ ಕಡಿಮೆ ಆಗಿದೆ. ವಾಡಿಕೆ ಮಳೆ 1156 ಮಿ.ಮಿ ಆಗಬೇಕಿತ್ತು. ಆದ್ರೆ 6ನೇ ಆಗಸ್ಟ್ ವೇಳೆಗೆ 522 ಮಿ.ಮಿ ಮಳೆಯಾಗಿದೆ ಅಷ್ಟೆ ಅಂತ ಮಾಹಿತಿ ನೀಡಿದರು. ದಕ್ಷಿಣ ಒಳನಾಡಿನ ಜಿಲ್ಲೆಯಲ್ಲಿ ಶೇ 9% ಕಡಿಮೆ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಶೇ 31% ಮಳೆ ಕಡಿಮೆಯಾಗಿದೆ. ಮಲೆನಾಡು, ಕರಾವಳಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ.

    ಬಿತ್ತನೆಯಲ್ಲೂ ಈ ಬಾರಿ ರಾಜ್ಯ ಹಿಂದೆ ಬಿದ್ದಿದೆ. ನಿಗದಿ ಪ್ರಮಾಣಕ್ಕಿಂತ ಬಿತ್ತನೆ ಕಡಿಮೆ. ಮುಂಗಾರಿನಲ್ಲಿ 74.69 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಇತ್ತು. ಆದ್ರೆ ಈಗ ಬಿತ್ತನೆ ಆಗಿರೋದು 49.47 ಲಕ್ಷ ಹೆಕ್ಟೇರ್ ಮಾತ್ರ ಬಿತ್ತನೆಯಾಗಿದೆ. ಭತ್ತ 41%, ರಾಗಿ 19%, ತಾಣ ಧಾನ್ಯಗಳು 35%, ಹುರುಳಿ 3%, ಅವರೆ 18%, ನೆಲಗಡಲೆ 44%, ಸೂರ್ಯಕಾಂತಿ 39%, ಹರಳು 27% , ಮಂಡಕ್ಕಿ 26% ಬಿತ್ತನೆ ಕಡಿಮೆಯಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ರಾಯಚೂರು, ಬಳ್ಳಾರಿ, ಕೊಡಗು, ಚಾಮರಾಜನಗರದಲ್ಲಿ 50% ಗಿಂತ ಕಡಿಮೆ ಬಿತ್ತನೆಯಾಗಿದೆ ಅಂತ ತಿಳಿಸಿದರು.

    ಬಿತ್ತನೆ ಬೀಜಕ್ಕೂ ಈ ಬಾರಿ ಬೇಡಿಕೆ ಕಡಿಮೆಯಾಗಿದೆ. ಮುಂಗಾರಿಗೆ 8.60ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ ಬೇಡಿಕೆ ಇತ್ತು. ಸದಸ್ಯ 7.97 ಲಕ್ಷ ಕ್ವಿಂಟಾಲ್ ಬೀಜ ನಮ್ಮ ಬಳಿ ದಾಸ್ತಾನು ಇದೆ. ಈವರೆಗೂ 3.63 ಲಕ್ಷ ಕ್ವಿಂಟಾಲ್ ಬೀಜ ವಿತರಣೆ ಮಾಡಲಾಗಿದೆ. ಒಟ್ಟಾರೆ ರಾಜ್ಯದಲ್ಲಿ 13 ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದೆ. ಮಳೆ ಕೊರತೆಯಿಂದಾಗಿ ಪರ್ಯಾಯ ಬೆಳೆಗೆ ಯೋಜನೆ ರೂಪಿಸಲಾಗಿದೆ. ಮಳೆ ಕೊರತೆಯಿಂದಾಗಿ ಈ ವರ್ಷ 2.16 ಲಕ್ಷ ಹೆಕ್ಟೇರ್ ಬೆಳೆ ಬಾಡುತ್ತಿರುವ ವರದಿಯಾಗಿದೆ. ಹೆಚ್ಚಿನ ಮಳೆಯಿಂದಾಗಿ 8 ಜಿಲ್ಲೆಗಳಲ್ಲಿ 6,309 ಹೆಕ್ಟೇರ್ ಪ್ರದೇಶದ ವಿವಿಧ ಬೆಳೆಗಳು ಹಾನಿಗೊಳಗಾಗಿದೆ ಅಂತ ಸಚಿವರು ಮಾಹಿತಿ ನೀಡಿದರು.

    ರೈತರ ಜಮೀನು ಹಾಗೂ ಬೆಳೆಗಳನ್ನ ಅಳತೆ ಮಾಡಲು ರಾಜ್ಯ ಸರ್ಕಾರ ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗಿದೆ. ರೈತರ ಜಮೀನು ಹಾಗೂ ಬೆಳೆಯನ್ನ ಅಳತೆ ಮಾಡಲು ಮೊದಲ ಬಾರಿಗೆ ಡ್ರೋನ್ ಮೂಲಕ ಸರ್ವೆ ಮಾಡಲು ಸರ್ಕಾರ ನಿರ್ಧರಿಸಿದೆ. ಮಳೆ ಕೊರತೆಯಾಗಿರುವ ಜಿಲ್ಲೆಗಳಿಗೆ ಒಂದು ವಾರದಲ್ಲಿ ಭೇಟಿ ಮಾಡುತ್ತೇನೆ. ಈಗಾಗಲೇ ಹಲವು ಜಿಲ್ಲೆಗೆ ಭೇಟಿ ನೀಡಲಾಗಿದೆ. ಉಳಿದ ಜಿಲ್ಲೆಗಳಿಗೆ ಈ ವಾರದಲ್ಲಿ ಭೇಟಿ ನೀಡುತ್ತೇನೆ. ಕೇಂದ್ರದಿಂದ ಬೆಳೆಗಳಿಗೆ ಬರಬೇಕಾದ ಹಣ ಬಿಡುಗಡೆಗೆ ಶೀಘ್ರವೇ ಕೇಂದ್ರದ ಸಚಿವರನ್ನ ಭೇಟಿ ಮಾಡಲಾಗುತ್ತೆ ಅಂತ ತಿಳಿಸಿದರು.

    ಸಾವಯವ ಸಿರಿ ಧಾನ್ಯ ದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ಮತ್ತೆ ಸಾವಯವ ಮೇಳಕ್ಕೆ ಮುಂದಾಗಿದೆ. ಸರ್ಕಾರ ಅಂತರಾಷ್ಟ್ರೀಯ ಸಾವಯವ, ಸಿರಿಧಾನ್ಯ ಬೆಳೆ ಆಯೋಜನೆ ಮಾಡಲು ಸಿದ್ಧಮಾಡಿಕೊಂಡಿದೆ. ಜನವರಿಯಲ್ಲಿ ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗುತ್ತೆ ಅಂತ ಮಾಹಿತಿ ನೀಡಿದ್ರು.

    ಕೃಷಿ ವಿಶ್ವವಿದ್ಯಾಲಯಗಳಲ್ಲಿ ಬದಲಾವಣೆ ತರಲು ಸರ್ಕಾರ ಮುಂದಾಗಿದೆ. ಈ ಸಂಬಂಧ ಮಾಹಿತಿ ನೀಡಿದ ಸಚಿವರು, ಕೃಷಿ ವಿಶ್ವವಿದ್ಯಾಲಯಗಳಲ್ಲಿ ಸಮನ್ವಯತೆ ಕೊರತೆ ಇದೆ. ನೇಮಕಾತಿ, ವಿದ್ಯಾರ್ಥಿಗಳ ದಾಖಲಾತಿ, ತರಗತಿ ಕುರಿತು ಕಟ್ಟು ನಿಟ್ಟಿನ ಕ್ರಮ ಜಾರಿಗೆ ತರಲು ನಿರ್ಧಾರ ಮಾಡಲಾಗಿದೆ. ಬೋಧಕ ಸಿಬ್ಬಂದಿ, ಇನ್ನಿತರ ನೇಮಕಾತಿಗೂ ನಿಯಮಗಳನ್ನ ಜಾರಿಗೆ ತರಲಾಗುತ್ತೆ ಅಂತ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಶುಕ್ರವಾರದಿಂದ ದೇಶಾದ್ಯಂತ ಲಾರಿ ಮುಷ್ಕರ

    ಶುಕ್ರವಾರದಿಂದ ದೇಶಾದ್ಯಂತ ಲಾರಿ ಮುಷ್ಕರ

    ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರದಿಂದ ದೇಶಾದ್ಯಂತ ಅನಿರ್ಧಿಷ್ಟಾವದಿ ಮುಷ್ಕರ ನಡೆಸಲು ಅಖಿಲ ಭಾರತ ಮೋಟಾರ್ ಟ್ರಾನ್ಸ್ಪೋರ್ಟ್ ಕಾಂಗ್ರೆಸ್ ಸಂಘಟನೆ ಮುಂದಾಗಿದೆ.

    ಬಸ್ ಮಾಲೀಕರು ಮತ್ತು ಟ್ಯಾಕ್ಸಿ ಮಾಲೀಕರು ಭಾಗಿಯಾಗಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಮಾತನಾಡಿ ವಿವಿಧ ಬೇಡಿಕೆಗಳ ಆಗ್ರಹಕ್ಕಾಗಿ ಅನಿವಾರ್ಯವಾಗಿ ಮುಷ್ಕರಕ್ಕೆ ಇಳಿದಿದ್ದೇವೆ ಎಂದು ತಿಳಿಸಿದರು.

    ಶುಕ್ರವಾರದಿಂದ ದೇಶಾದ್ಯಂತ ಸರಕು ಸಾಗಣಿಕೆ ವಾಹನಗಳಾದ ಲಾರಿ, ಟ್ರ್ಯಾಕ್ಟರ್, ಪ್ರವಾಸಿ ವಾಹನ, ಮ್ಯಾಕ್ಸಿ ಕ್ಯಾಬ್, ಖಾಸಗಿ ಬಸ್, ಟೆಂಪೋ ಸೇರಿದಂತೆ ಒಟ್ಟು 90 ಲಕ್ಷ ವಾಹನಗಳ ಸೇವೆ ಸ್ಥಗಿತಗೊಳ್ಳಲಿವೆ ಎಂದು ತಿಳಿಸಿದರು.

    ಕರ್ನಾಟಕದಲ್ಲೂ ಆರು ಲಕ್ಷ ವಾಹನಗಳು ಸ್ಥಗಿತಗೊಳ್ಳುತ್ತಿದ್ದು, ಇದಕ್ಕೆ ಗ್ಯಾಸ್ ಸಿಲಿಂಡರ್ ವಿತರಣೆಯ ವಾಹನಗಳು ಕೂಡ ಬಂದ್‍ಗೆ ಬೆಂಬಲ ನೀಡಲಿವೆ. ಕೇಂದ್ರ ಸರ್ಕಾರ ಎರಡು ದಿನದ ಒಳಗಡೆ ತಮ್ಮ ಬೇಡಿಕೆಗೆ ಬಗ್ಗದೆ ಇದ್ದರೆ ಇಡೀ ರಸ್ತೆ ರಸ್ತೆಯಲ್ಲಿ ವಾಹನ ನಿಲ್ಲಿಸಿಬಿಡಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಬೇಡಿಕೆಗಳೇನು?
    ಟೋಲ್ ಮುಕ್ತ ರಸ್ತೆಯ ಸೇವೆಯನ್ನು ನೀಡಿ ಇನ್ಯೂರೆನ್ಸ್ ಪ್ರೀಮಿಯಂ ದರವನ್ನು ಕಡಿತಗೊಳಿಸಬೇಕು. ತೈಲ ದರ ಏರಿಕೆಗೆ ಕಡಿವಾಣ ಹಾಕುವುದರ ಜೊತೆಗೆ ಪೆಟ್ರೋಲ್, ಡಿಸೇಲ್ ಅನ್ನು ಜಿಎಸ್‍ಟಿ ವ್ಯಾಪ್ತಿಗೆ ತರಬೇಕು ಎನ್ನುವ ಬೇಡಿಕೆಯನ್ನು ಇಟ್ಟುಕೊಂಡು ಮಾಲೀಕರು ಮುಷ್ಕರಕ್ಕೆ ಇಳಿದಿದ್ದಾರೆ.

  • ಸೋಶಿಯಲ್ ಮೀಡಿಯಾಗಳ ಮೇಲೆ ಜಿಲ್ಲಾಧಿಕಾರಿಗಳು ಕಣ್ಣಿಟ್ಟಿದ್ದಾರೆ ಜೋಕೆ!

    ಸೋಶಿಯಲ್ ಮೀಡಿಯಾಗಳ ಮೇಲೆ ಜಿಲ್ಲಾಧಿಕಾರಿಗಳು ಕಣ್ಣಿಟ್ಟಿದ್ದಾರೆ ಜೋಕೆ!

    ಉಡುಪಿ: 2018 ರ ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದಂತೆ ಚುನಾವಣಾ ಆಯೋಗ ನಿಯಮಗಳನ್ನು ಕಟ್ಟುನಿಟ್ಟಿನಿಂದ ಜಾರಿಗೆ ತರಲು ಆರಂಭಿಸಿದೆ. ಇದರ ಭಾಗವಾಗಿ ಸಾಮಾಜಿಕ ಜಾಲತಾಣದಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪ್ರಚಾರ ಮಾಡಿದ್ರೂ ಆಯಾಯ ಜಿಲ್ಲಾಧಿಕಾರಿಗಳು ಕಣ್ಣಿಟ್ಟಿದ್ದಾರೆ.

    ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಅವರು, ಸಾಮಾಜಿಕ ಜಾಲತಾಣದಲ್ಲಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಕ್ಕೆ ಕಡಿವಾಣ ಹಾಕಲು ವಿಶೇಷ ನಿಗಾ ತಂಡ ರಚನೆ ಮಾಡಲಾಗುವುದು. ಅಲ್ಲದೇ ಯಾವುದೇ ಅಭ್ಯರ್ಥಿ ಪರ ವಿರುದ್ಧ ಹೆಚ್ಚು ಪ್ರಚಾರ ಮಾಡಿದರೆ ಅದನ್ನೂ ಅಭ್ಯರ್ಥಿ ಚುನಾವಣಾ ವೆಚ್ಚಕ್ಕೆ ಸೇರಿಸಲಾಗುವುದು ಎಂದು ತಿಳಿಸಿದರು.

    ಇದೆ ವೇಳೆ ಕೋಮು ಭಾವನೆ ಪ್ರಚೋದಿಸುವ ಚಟುವಟಿಕೆ ಮೇಲೂ ನಿಗಾ ಇಡಲಿದ್ದು, ಪ್ರಚಾರ ತಾರಕಕ್ಕೆ ಏರಿ ಕೋಮು ಭಾವನೆಗಳು ಕೆಡದಂತೆ ಎಲ್ಲಾ ಪಕ್ಷ ಮತ್ತು ಅಭ್ಯರ್ಥಿಗಳು ಎಚ್ಚರಿಸಬೇಕು ಎಂದು ಹೇಳಿದರು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಬೂತ್ ರಚನೆ ಮಾಡಿ ಮಹಿಳಾ ಸಿಬ್ಬಂದಿಗಳನ್ನು ನೇಮಿಸಲಾಗುವುದು ಎಂದು ಮಾಹಿತಿ ನೀಡಿದರು.