Tag: pressmeet

  • ನಾಳೆ ದೇಶಾದ್ಯಂತ ಕಾಂಗ್ರೆಸ್ ಮಹತ್ವದ ಸುದ್ದಿಗೋಷ್ಠಿ

    ನಾಳೆ ದೇಶಾದ್ಯಂತ ಕಾಂಗ್ರೆಸ್ ಮಹತ್ವದ ಸುದ್ದಿಗೋಷ್ಠಿ

    ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿಗೆ ಇಡಿ ಸಮನ್ಸ್ ನೀಡಿದ್ದು, ಈ ಸಂಬಂಧ ನಾಳೆ ದೇಶದ್ಯಾಂತ ಎಲ್ಲ ರಾಜ್ಯಗಳ ಪ್ರಮುಖ ನಗರಗಳಲ್ಲಿ ಸುದ್ದಿಗೋಷ್ಠಿ ನಡೆಸಲು ತೀರ್ಮಾನಿಸಲಾಗಿದೆ.

    ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಇಡಿ ವರ್ತಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಳ್ಳಲು ನಿರ್ಧರಿಸಿದೆ. ಜೂನ್ 13 ರಂದು ದೆಹಲಿಯಲ್ಲಿ ಈ ಪ್ರತಿಭಟನೆ ನಡೆಯಲಿದ್ದು ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೂ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಲಿದ್ದಾರೆ. ಇದನ್ನೂ ಓದಿ:  ಯುವ ಬ್ಯಾಟ್ಸ್‌ಮಾನ್‌ಗಳು, ಆಲ್‍ರೌಂಡರ್‌ಗಳ ನಾಯಕತ್ವಕ್ಕೆ ಚಪ್ಪಾಳೆ ಹೊಡೆದ ದ್ರಾವಿಡ್

    ಮೂಲಗಳ ಪ್ರಕಾರ ಜೂನ್ 13ರ ಕಾರ್ಯಕ್ರಮದ ಬಗ್ಗೆ ನಾಳಿನ ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಸುದ್ದಿಗೋಷ್ಠಿ ನಡೆಸಲಿದ್ದು, ಕೇಂದ್ರ ಸರ್ಕಾರ ಮತ್ತು ಜಾರಿ ನಿರ್ದೇಶನಾಲಯ ವಿರುದ್ಧ ವಾಗ್ದಾಳಿ ನಡೆಸಲಿದ್ದಾರೆ ಎನ್ನಲಾಗಿದೆ.  ಇದನ್ನೂ ಓದಿ: ಬಿಜೆಪಿ ‘ಎ’ ಟೀಂ ಅಂತ ಎಲ್ಲರೂ ಒಪ್ಪಿಕೊಂಡಾಗಿದೆ, ಬಿ ಟೀಂ ಯಾವುದಾದರೇನು: ಬೊಮ್ಮಾಯಿ

    ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸೋನಿಯಾಗಾಂಧಿ, ರಾಹುಲ್ ಗಾಂಧಿಗೆ ವಿಚಾರಣೆ ಆಗಮಿಸಲು ಸೂಚನೆ ನೀಡಿತ್ತು. ಕೊರೊನಾ ಸೋಂಕು ತಗುಲಿರುವ ಕಾರಣ ಸೋನಿಯಾಗಾಂಧಿ ಮೂರು ವಾರಗಳ ವಿನಾಯಿತಿ ಕೇಳಿದರೇ, ರಾಹುಲ್ ಗಾಂಧಿ ವಿದೇಶ ಪ್ರವಾಸದ ಹಿನ್ನೆಲೆ ಜೂನ್ 18 ರಂದು ವಿಚಾರಣೆ ಹಾಜರಾಗಲು ಅನುಮತಿ ಕೇಳಿದ್ದಾರೆ.

  • ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ: ಬೊಮ್ಮಾಯಿ

    ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ: ಬೊಮ್ಮಾಯಿ

    ಬೆಂಗಳೂರು: ಈ ಬಾರಿಯ ಶೃಂಗಸಭೆಯಲ್ಲಿ ಕರ್ನಾಟಕ ಅತೀ ಹೆಚ್ಚು ಆಕರ್ಷಣೆಯಾಗಿತ್ತು. ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

    ದಾವೋಸ್ ಪ್ರವಾಸದ ನಂತರ ಇಂದು ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರತಿ ಬಾರಿಯೂ ದಾವೋಸ್ ಆರ್ಥಿಕ ಶೃಂಗಸಭೆ ಜನವರಿಯಲ್ಲಿ ನಡೆಯುತ್ತದೆ. ಆದರೆ ಎರಡು ವರ್ಷಗಳಿಂದ ಕೋವಿಡ್-19 ಕಾರಣ ನಡೆದಿರಲಿಲ್ಲ. ಈ ವರ್ಷ ಮೇ ತಿಂಗಳಿನಲ್ಲಿ ನಡೆದಿದೆ. ಹಿಂದೆ ನಮ್ಮ ರಾಜ್ಯದಿಂದ ದೇವೇಗೌಡರು, ಎಸ್‍ಎಂ ಕೃಷ್ಣ, ಯಡಿಯೂರಪ್ಪ ಭಾಗವಹಿಸಿದ್ದರು ಎಂದರು. ಇದನ್ನೂ ಓದಿ:  ಮದುವೆ ಮನೆಯಲ್ಲೂ MES ಕಿರಿಕ್ – ಕನ್ನಡ ಸಾಂಗ್ ಹಾಕಿದ್ದಕ್ಕೆ ವಧು, ವರ, ಕನ್ನಡಿಗರ ಮೇಲೆ ಹಲ್ಲೆ

    ಈ ಬಾರಿಯ ಶೃಂಗಸಭೆ ಕುತೂಹಲ ಹುಟ್ಟಿಸಿತ್ತು. ಕೋವಿಡ್ ಬಳಿಕ ಆರ್ಥಿಕ ಹಿಂಜರಿತ ಇತ್ತು. ಆರ್ಥಿಕ ಹಿಂಜರಿತ, ಪರಿಸರದಲ್ಲಿನ ಬದಲಾವಣೆ ಬಗ್ಗೆ ಚರ್ಚಿಸಲಾಯಿತು. ದಾವೋಸ್ ಶೃಂಗ ಸಭೆಯಲ್ಲಿ ಭಾರತದಲ್ಲಿ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ವಹಿಸಿದ್ದರು. ನವೀಕರಿಸಬಹುದಾದ ಇಂಧನಗಳ ಮೇಲೆ ಉದ್ಯಮಿಗಳಿಗೆ ಹೂಡಿಕೆಗೆ ಹೆಚ್ಚು ಆಸಕ್ತಿ ನೀಡಿಲಾಗಿತ್ತು. ಅತೀ ಹೆಚ್ಚು ಆಕರ್ಷಣೆ ಆಗಿದ್ದು ಕರ್ನಾಟಕ. ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ ಎಂದು ತಿಳಿಸಿದರು.

    ಉದ್ಯಮಿಗಳ ಜೊತೆ ಹಲವು ಸುತ್ತಿನ ಮಾತುಕತೆಗಳನ್ನು ನಡೆಸಲಾಯಿತು. ಮಣ್ಣಿನ ಕುರಿತ ಒಂದು ಸಮಾಲೋಚನೆಯಲ್ಲೂ ನಾನು ಭಾಗವಹಿಸಿದ್ದೆ. ಹಲವು ಕಂಪೆನಿಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಮುಂದಾಗಿವೆ. ಜ್ಯುಬಿಲೆಂಟ್ ಇಂಡಿಯಾ ಗ್ರೂಪ್ 700 ಕೋಟಿ ರೂ. ಬಂಡವಾಳ ಹೂಡಿಕೆಗೆ ನಿರ್ಧಾರಿದೆ. ದೇವನಹಳ್ಳಿ ಬಳಿ ಇವರು 10 ಎಕರೆ ಜಮೀನು ಖರೀದಿಸಿದ್ದಾರೆ. ಹಿಟಾಚಿ ಎನರ್ಜಿ ಸಂಸ್ಥೆಯೂ ಹೂಡಿಕೆಗೆ ಮುಂದಾಗಿದೆ. ಇವರು 2 ಸಾವಿರ ಇಂಜಿನಿಯರ್‌ಗಳನ್ನು ಈ ವರ್ಷ ನೇಮಕ ಮಾಡಿಕೊಳ್ಳಲಿದ್ದಾರೆ. ಇದನ್ನೂ ಓದಿ: ದಾಳಿ ವೇಳೆ ಸಿಬಿಐ ನನ್ನ ವೈಯಕ್ತಿಕ ದಾಖಲೆಗಳನ್ನು ವಶಪಡಿಸಿಕೊಂಡಿದೆ – ಕಾರ್ತಿ ಚಿದಂಬರಂ ಆರೋಪ

    ಸೀಮೆನ್ಸ್ ಹೆಲ್ದೀನಿಯರ್ಸ್ ಗ್ರೂಪ್‍ನವರು ಆರೋಗ್ಯ ಕ್ಷೇತ್ರದಲ್ಲಿ 1,600 ಕೋಟಿ ಬಂಡವಾಳ ಹೂಡುತ್ತಿದೆ. ಅನ್ ಇನ್ಬೇವ್ ಸಂಸ್ಥೆಯು ನಾನ್ ಆಲ್ಕೋಹಾಲಿಕ್ ಪಾನೀಯ ಉತ್ಪಾದನೆಗೆ ಮುಂದೆ ಬಂದಿದ್ದಾರೆ. ನೆಸ್ಲೆ ಸಂಸ್ಥೆಯವರ ಉದ್ಯಮ ಈಗಾಗಲೇ ನಂಜನಗೂಡಿನಲ್ಲಿದೆ. ಹೆಚ್ಚುವರಿಯಾಗಿ 700 ಕೋಟಿ ರೂ. ಬಂಡವಾಳ ಹೂಡಿಕೆಗೆ ನೆಸ್ಲೆ ಮುಂದಾಗಿದೆ. ದಸ್ಸಾಲ್ಸ್ ಸಿಸ್ಟಮ್ಸ್‍ನವರು 300 ಕೋಟಿ ರೂ. ಹೂಡಿಕೆಗೆ ಉತ್ಸುಕತೆ ತೋರಿದ್ದಾರೆ. ಮಿತ್ತಲ್ ಸಂಸ್ಥೆಯವರು 6 ಸಾವಿರ ಕೋಟಿ ರೂ. ಬಂಡವಾಳ ಹೂಡಲು ಆಸಕ್ತಿ ತೋರಿದೆ ಎಂದು ಹೇಳಿದರು.

    ಭಾರತಿ ಎಂಟರ್ ಪ್ರೈಸಸ್ ಮೆಗಾ ಡಾಟಾ ಸೆಂಟರ್ ತೆರೆಯಲು ಮುಂದಾಗಿದೆ. ಅದಾನಿ ಗ್ರೂಪ್, ದಾಲ್ಮಿಯಾ ಸಿಮೆಂಟ್, ಜಾನ್ಸನ್ ಕಂಟ್ರೋಲ್ಸ್, ಹನಿವೆಕ್, ಐಬಿಎಂ, ಐಕಿಯ ಸ್ಟೋರ್ಸ್, ಆಕ್ಸಿಸ್ ಬ್ಯಾಂಕ್‍ಗಳು ವಿವಿಧ ವಲಯಗಳಲ್ಲಿ ಹೂಡಿಕೆ ಮಾಡುವುದರ ಬಗ್ಗೆ ಚರ್ಚಿಸಲಾಗಿದೆ. ದಾವೋಸ್ ಆರ್ಥಿಕ ಶೃಂಗ ಸಭೆಯಲ್ಲಿ ರಾಜ್ಯಕ್ಕೆ ಒಟ್ಟು 59,350 ಕೋಟಿ ರೂಗಳ ಬಂಡವಾಳ ಹೂಡಿಕೆ ಆಕರ್ಷಿಸಲು ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

    ನವೆಂಬರ್‍ನಲ್ಲಿ ಎರಡು ಸಮ್ಮೇಳನಗಳು ನಡೆಯಲಿವೆ. ವಿಶ್ವ ಬಂಡವಾಳ ಹೂಡಿಕೆ ಸಮ್ಮೇಳನ ಮತ್ತು ಬೆಂಗಳೂರು ಟೆಕ್ ಸಮ್ಮಿಟ್‍ಗಳು ನಡೆಯಲಿವೆ. ಈ ಸಮ್ಮೇಳನದಲ್ಲಿ ಹಲವಾರು ಜಾಗತಿಕ ಉದ್ಯಮಿಗಳಿಗೆ ಆಹ್ವಾನಿಸಲಾಗಿದೆ ಎಂದರು.

    ಇದೇ ವೇಳೆ ಲಕ್ಷ್ಮಿ ಮಿತ್ತಲ್ ಜೊತೆ ಆಪರೇಷನ್ ಕಮಲದ ಮಾತುಕತೆ ವಿಚಾರವಾಗಿ ಮಾತನಾಡಿದ ಅವರು, ಲಕ್ಷ್ಮಿ ಮಿತ್ತಲ್ ಅವರ ಜೊತೆ ಹೂಡಿಕೆ ಬಗ್ಗೆ ಮಾತಾಡಿದ್ದೇವೆ. ಆ ಮಾತುಕತೆ ಬಳಿಕ ರಾಜಕೀಯ ಪರಿಸ್ಥಿತಿ ಬಗ್ಗೆ ಮಾತಾಡಿದ್ದೇವೆ. ಉದ್ಯಮಿಗಳು ಸಹಜವಾಗಿ ರಾಜ್ಯಗಳ ರಾಜಕೀಯ ಪರಿಸ್ಥಿತಿ ತಿಳಿದುಕೊಳ್ಳುತ್ತಾರೆ. ಎಲ್ಲ ಉದ್ಯಮಿಗಳೂ ರಾಜಕೀಯ ಪರಿಸ್ಥಿತಿ ಕೇಳಿದರು ಎಂದು ಹೇಳಿದರು.

    ನಂತರ ಯಾರೇ ಹೂಡಿಕೆಗೆ ಮುಂದಾದರೂ ಇಲ್ಲಿನ ಕಾನೂನು ಪಾಲಿಸಿ ಅವಕಾಶ ಕೊಡುತ್ತೇವೆ. ಲುಲು ಸಂಸ್ಥೆ ಜೊತೆ ಹೂಡಿಕೆ ಮಾಡಿಕೊಳ್ಳಬಾರದು ಅಂತ ಏನಿಲ್ಲ. ರಾಜಾಜಿನಗರದಲ್ಲಿರುವ ಲುಲು ಮಾರ್ಕೆಟ್ ಹಿಂದಿನ ಸರ್ಕಾರವಿದ್ದಾಗ ಬಂತು. ಅದು ಕಾನೂನು ಬದ್ಧವಾಗಿದೆಯಾ ಇಲ್ಲವೋ ಮಾಹಿತಿ ತರಿಸಿಕೊಳ್ಳುತ್ತೇನೆ. ದಾವೋಸ್ ಒಪ್ಪಂದಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದರು.

  • ಮಹಾಮಳೆಗೆ ನಲುಗಿದ ಬೆಂಗಳೂರು – ಇಂದು ಸಿಎಂ ಸಿಟಿ ರೌಂಡ್ಸ್

    ಮಹಾಮಳೆಗೆ ನಲುಗಿದ ಬೆಂಗಳೂರು – ಇಂದು ಸಿಎಂ ಸಿಟಿ ರೌಂಡ್ಸ್

    ಬೆಂಗಳೂರು: ಮಹಾಮಳೆಗೆ ರಾಜ್ಯ ರಾಜಧಾನಿಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇಂದು ಮಳೆ ಹಾನಿ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

    RAIN 01

    ಬೆಳಗ್ಗೆ 9.30ಕ್ಕೆ ಗೃಹ ಕಚೇರಿ ಕೃಷ್ಣಾದಿಂದ ಹೊರಡಲಿರುವ ಸಿಎಂ ಬೊಮ್ಮಾಯಿ, ಮಧ್ಯಾಹ್ನದವರೆಗೂ ಇಲ್ಲಿನ ಜೆ.ಸಿ.ನಗರ, ಶಂಕರಮಠ, ಲಗ್ಗೆರೆ, ನಾಗವಾರ, ಎಚ್.ಬಿ.ಆರ್.ಲೇಔಟ್, ಹೆಬ್ಬಾಳ ಮುಂತಾದ ಕಡೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ, ಪರಿಶೀಲನೆ ನಡೆಸಲಿದ್ದಾರೆ. ಸಂತ್ರಸ್ತರ ಸಮಸ್ಯೆಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಿದ್ದಾರೆ. ಇದನ್ನೂ ಓದಿ: ಅಸ್ಸಾಂನಲ್ಲಿ ಭೀಕರ ಪ್ರವಾಹ – 9 ಮಂದಿ ಸಾವು, ಸಂಕಷ್ಟದಲ್ಲಿ ಲಕ್ಷಾಂತರ ಜನ

    RAIN IN BNG (1)

    ಜೊತೆಗೆ ಅಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಿದ್ದಾರೆ. ಪ್ರಮುಖ ಸಚಿವರು ಮುಖ್ಯಮಂತ್ರಿಗಳೊಂದಿಗೆ ನಗರ ಪ್ರದಕ್ಷಿಣೆ ಮಾಡಲಿದ್ದಾರೆ. ಮಧ್ಯಾಹ್ನದ ಬಳಿಕ ಸಿಎಂ ಸುದ್ದಿಗೋಷ್ಠಿ ನಡೆಸಿ, ಮಳೆ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮಾಹಿತಿ ನೀಡಲಿದ್ದಾರೆ.

  • ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ರೈಸ್ತ ಸಮುದಾಯ ಸೇಫ್ – ಕೆನಡಿ

    ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ರೈಸ್ತ ಸಮುದಾಯ ಸೇಫ್ – ಕೆನಡಿ

    ಶಿವಮೊಗ್ಗ: ಬಿಜೆಪಿ ಸರ್ಕಾರ ಬಂದ ಮೇಲೆ ಯಾವುದೇ ಸಮುದಾಯವು ನಿರ್ಲಕ್ಷ್ಯಕ್ಕೆ ಒಳಗಾಗಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲೇ ಕ್ರೈಸ್ತ ಸಮುದಾಯ ಸುರಕ್ಷಿತವಾಗಿದೆ ಎಂದು ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಂತಕುಮಾರ ಕೆನಡಿ ತಿಳಿಸಿದ್ದಾರೆ.

    KENADI PRESSMEET

    ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸರ್ಕಾರ ಇರುವುದು ಎಲ್ಲ ಸಮುದಾಯದ ಏಳಿಗೆಗಾಗಿ. ಬಿಜೆಪಿ ಸರ್ಕಾರ ಬಂದ ಮೇಲೆ ಯಾವುದೇ ಸಮುದಾಯ ನಿರ್ಲಕ್ಷ್ಯಕ್ಕೆ ಒಳಗಾಗಿಲ್ಲ. ಕ್ರೈಸ್ತ ಸಮುದಾಯವೂ ಅತ್ಯಂತ ಸುರಕ್ಷಿತವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಕಬ್ಬನ್ ಪಾರ್ಕ್, ಲಾಲ್‍ಬಾಗ್‍ಗಳಿಗಿಂತ ದೊಡ್ಡ ಪಾರ್ಕ್ ನಿರ್ಮಾಣ: ಮುನಿರತ್ನ

    KENADI PRESSMEET

    ಮತಾಂತರ ನಿಷೇಧ ಕಾಯ್ದೆಯನ್ನು ಕ್ರೈಸ್ತ ಸಮುದಾಯ ವಿರೋಧಿಸಿಲ್ಲ. ಆದರೆ ಕಾಯ್ದೆ ಜಾರಿಗೆ ತರುವ ಮೊದಲು ಚರ್ಚೆಗೆ ಒಳಪಡಿಸಬೇಕಿತ್ತು ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ ಅಷ್ಟೇ. ಮತಾಂತರ ನಿಷೇಧ ಕಾಯ್ದೆಯಲ್ಲಿ ಸರ್ಕಾರದ ನಿರ್ಧಾರ ಏನಿದೆಯೋ, ಅದನ್ನು ಗೌರವಿಸಬೇಕಾಗುತ್ತದೆ. ಅಲ್ಲಲ್ಲಿ ಸಮುದಾಯದ ಪರವಾಗಿ ಸಣ್ಣಪುಟ್ಟ ವ್ಯತ್ಯಾಸ ಇರಬಹುದು. ಅದನ್ನೇ ವಿರೋಧ ಎನ್ನುವುದು ಸರಿಯಲ್ಲ. ವಿರೋಧವನ್ನು ಯಾರು ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ನನ್ನ ವಿಷಯಕ್ಕೆ ಬಂದು ಡಿಕೆಶಿ ಶೇಪ್ ಔಟ್ ಮಾಡಿಕೊಂಡಿದ್ದಾರೆ: ಅಶ್ವಥ್ ನಾರಾಯಣ

  • ಸರ್ಕಾರ ಕತ್ತೆ ಕಾಯ್ತಿದ್ಯಾ? ಕಡ್ಲೆಪುರಿ ತಿಂತಿದ್ಯಾ? ಆರೋಪಿ ವಿರುದ್ಧ FIR ದಾಖಲಿಸಿಲ್ಲ ಯಾಕೆ – ಪ್ರಿಯಾಂಕ್ ಖರ್ಗೆ ಪ್ರಶ್ನೆ

    ಸರ್ಕಾರ ಕತ್ತೆ ಕಾಯ್ತಿದ್ಯಾ? ಕಡ್ಲೆಪುರಿ ತಿಂತಿದ್ಯಾ? ಆರೋಪಿ ವಿರುದ್ಧ FIR ದಾಖಲಿಸಿಲ್ಲ ಯಾಕೆ – ಪ್ರಿಯಾಂಕ್ ಖರ್ಗೆ ಪ್ರಶ್ನೆ

    -ಖರ್ಗೆ ಸಾಹೇಬರಿಗೆ 5 ಬಾರಿ, ನನಗೆ 3 ಬಾರಿ ಬೆದರಿಕೆ ಕರೆಗಳು ಬಂದಿವೆ
    -ಕೆಲವು ದಿನಗಳ ಹಿಂದೆ ಗೃಹ ಸಚಿವರೇ ದಿವ್ಯಾ ಅವರ ಮನೆಗೆ ಹೋಗಿದ್ರು

    ಬೆಂಗಳೂರು: ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದ ವಿಚಾರವಾಗಿ ಸರ್ಕಾರ ಕತ್ತೆ ಕಾಯ್ತಿದೆಯಾ? ಕಡ್ಲೆಪುರಿ ತಿನ್ನುತ್ತಿದೆಯಾ? ಕೋಲಾಟ ಆಡುತ್ತಿದೆಯಾ? ನನ್ನ ಬಳಿ ಇನ್ಯಾವ ಸಾಕ್ಷಿ ಕೇಳುತ್ತಿದ್ದೀರಾ? ಆಡಿಯೋ ರಿಲೀಸ್ ಆಗಿ ಮೂರು ದಿನವಾದರೂ ಆರೋಪಿ ವಿರುದ್ಧ ಯಾಕೆ ಎಫ್‍ಐಆರ್ ದಾಖಲಿಸುತ್ತಿಲ್ಲ ಎಂದು ಪ್ರಿಯಾಂಕ್ ಖರ್ಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಸಂಜೆ ನನ್ನ ಮನೆಗೆ ಸಿಐಡಿಯವರು ಒಂದು ನೋಟಿಸ್ ಕೊಟ್ಟಿದ್ದಾರೆ. ಅದರಲ್ಲಿ ಸುದ್ದಿಗೋಷ್ಠಿ ನಡೆಸಿ ಪಿಎಸ್‍ಐ ಅಕ್ರಮದ ಸಾಕ್ಷ್ಯ ಇದೆ ಎಂದಿದ್ದೀರಾ. ಆದ್ದರಿಂದ ತಮ್ಮ ಬಳಿ ಇರುವ ಸಾಕ್ಷಿ ಹಾಗೂ ದಾಖಲೆಗಳನ್ನು ಒದಗಿಸುವಂತೆ 11-30ಕ್ಕೆ ಬರುವಂತೆ ನೋಟಿಸ್ ನೀಡಿದ್ದಾರೆ. ಆದರೆ ನಾನು ಇನ್ವೆಸ್ಟಿಗೇಷನ್ ಜರ್ನಲಿಸಮ್ ಮಾಡಿದ್ದೇನೆ, ನನ್ನ ಬಳಿ ದಾಖಲೆ ಇದೆ ಅಂತ ಎಲ್ಲೂ ಹೇಳಿಲ್ಲ. ನನ್ನ 2 ಪತ್ರಿಕಾಗೋಷ್ಠಿಯನ್ನು ಕಣ್ಣು ಹಾಗೂ ಕಿವಿ ತೆರದು ನೋಡಿ ಎಂದು ಕಿಡಿಕಾರಿದ್ದಾರೆ.

    ನೇಮಕಾತಿ ಪಟ್ಟಿ ಫೈನಲ್ ಆದ ಅಭ್ಯರ್ಥಿ ಯುನಿಫಾರ್ಮ್ ಹಾಕಿಕೊಂಡು ಓಡಾಡುತ್ತಿರುವ ಬಗ್ಗೆ ನಿಮ್ಮ ಬಳಿಕ ಮಾಹಿತಿ ಇಲ್ವಾ? ದಿವ್ಯಾ ಹಾಗರಗಿ, ಮಹತೇಶ್ ಪಾಟೀಲ್ ಹೀಗೆ ಅನೇಕರ ಹೆಸರು ಬಂತು. ಆಡಿಯೋ ರಿಲೀಸ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಇತ್ತು. ರಿಲೀಸ್ ಮಾಡುವುದಕ್ಕೂ ಮುನ್ನ ಪತ್ರಿಕೆಗಳಲ್ಲಿ ಬಂದಿದೆ. ನಾನು ಸ್ಟಿಂಗ್ ಮಾಡಿದ್ದಾ ಅದು? ಪತ್ರಿಕೆಗಳಲ್ಲಿ ಬಂದ ವಿಚಾರವನ್ನು ಸುದ್ದಿಗೋಷ್ಠಿ ಮಾಡಿ ಹೇಳಿದ್ದೇನೆ. ಪೇಪರ್ ಓದಿ ಇಂಟಲಿಜೆನ್ಸ್‍ನವರು ಹೇಳುತ್ತಿದ್ದಾರೆ. ಇಂಟಲಿಜೆನ್ಸ್ ಕಾಮನ್ ಸೆನ್ಸ್ ಇಲ್ಲದೇ ಇರುವವರು ಪೇಪರ್‌ನಲ್ಲಿ ಬರುವುದನ್ನು ಸಿಎಂ ಮುಂದೆ ಒಪ್ಪಿಸುತ್ತಾ ಇದ್ದಾರಾ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಪಿಎಸ್‍ಐ ಹಗರಣಕ್ಕೆ ಮೃತಪಟ್ಟವರ ಮೊಬೈಲ್ ಬಳಕೆ

    ಈ ನೋಟೀಸ್‍ನಿಂದ ಸರ್ಕಾರದ ಕಾರ್ಯವೈಖರಿ ಹೇಗಿದೆ ಎಂಬುವುದು ಗೊತ್ತಾಗುತ್ತಿದೆ. ನಾನು ನೀಡಿದ ಮಾಹಿತಿ ಅವರ ಬಳಿ ಇಲ್ಲ ಅಂತ ಹೇಳುತ್ತಿರುವುದು ಆಶ್ಚರ್ಯಕರವಾದ ಸಂಗತಿ. ಕೆಲವು ತಿಂಗಳ ಹಿಂದೆ ಅಭ್ಯರ್ಥಿಗಳು ಸಿಎಂ ಹಾಗೂ ಡಿಜಿಯನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಜನವರಿ 22 ರಂದು ಹೋಮ್ ಮಿನಿಸ್ಟರ್, ಸೆಲೆಕ್ಟ್ ಆಗದೇ ಇರುವವರು ಹೀಗೆ ಆರೋಪ ಮಾಡಿದ್ದಾರೆ ಅಂತ ಹೇಳಿದ್ದಾರೆ.
    ನೇಮಕಾತಿ ತಡೆ ಹಿಡಿದ ಬಗ್ಗೆ ನಿಮಗೆ ತಿಳಿದಿಲ್ವಾ. ಪ್ರಭು ಚೌಹಾಣ್ ಅವರು ಅವ್ಯವಹಾರ ಆಗಿರುವ ಬಗ್ಗೆ ಸಿಎಂಗೆ ಪತ್ರ ಬರೆದಿದ್ದಾರೆ ಎಂದಿದ್ದಾರೆ.

    ಸರ್ಕಾರ ಕತ್ತೆ ಕಾಯ್ತಿದೆಯಾ? ಕಡ್ಲೆಪುರಿ ತಿನ್ನುತ್ತಿದೆಯಾ? ಕೋಲಾಟ ಆಡುತ್ತಿದೆಯಾ? ನನ್ನ ಬಳಿ ಇನ್ಯಾವ ಸಾಕ್ಷಿ ಕೇಳುತ್ತಿದ್ದೀರಾ? ಆಡಿಯೋ ರಿಲೀಸ್ ಆಗಿ ಮೂರು ದಿನವಾಯಿತು. ಯಾಕೆ ಎಫ್‍ಐಆರ್ ಮಾಡುತ್ತಿಲ್ಲ. ಈಗಿನ ಹೋಂ ಮಿನಿಸ್ಟರ್‌ಗೆ ಯಾಕೆ ವಿಚಾರಣೆಗೆ ನೋಟೀಸ್ ಕೊಟ್ಟಿಲ್ಲ. ಎಡಿಜಿಪಿ ನೇತೃತ್ವದಲ್ಲಿ ನೇಮಕಾತಿ ನಡೆದಿರುತ್ತದೆ. ಯಾರ ನೇತೃತ್ವದಲ್ಲಿ ನೇಮಕಾತಿಯಾಗಿರುತ್ತದೆಯೋ ಅವರನ್ನು ಯಾಕೆ ವಿಚಾರಣೆಗೆ ಕರೆಯುತ್ತಿಲ್ಲ. ಇದನ್ನು ಸಾರ್ವಜನಿಕರು ಮುಂದೆ ಇಟ್ಟರೆ ಅವರಿಗೂ ನೋಟೀಸ್ ಕೊಡುತ್ತೀರಾ ಎಂದು ಪ್ರಶ್ನಿಸಿದ್ದಾರೆ.

    ದಿವ್ಯಾ ಅವರ ಮನೆಗೆ ಕೆಲವು ದಿನಗಳ ಹಿಂದೆ ಗೃಹ ಸಚಿವರು ಹೋಗಿದ್ದಾರೆ. ಸನ್ಮಾನ ಮಾಡಿಸಿಕೊಂಡು ಡ್ರೈ ಫ್ರೂಟ್ಸ್ ತಿಂದು ಬಂದಿದ್ದಾರೆ. ಅನೇಕ ಬಿಜೆಪಿ ನಾಯಕರ ಜೊತೆ ಅವರು ಫೋಟೋ ತೆಗೆಸಿಕೊಂಡಿದ್ದಾರೆ. ಆದರೆ ಅವರು ನಮ್ಮ ಕಾರ್ಯಕರ್ತೆ ಅಲ್ಲ ಅಂತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಅಸಿಸ್ಟೆಂಟ್ ಪ್ರೊಫೆಸರ್ ಎಕ್ಸಾಮ್‍ನಲ್ಲೂ ಗೋಲ್ಮಾಲ್- ಕಾಸು ಕೊಟ್ರೆ ಸರ್ಕಾರಿ ಹುದ್ದೆ..?

    ನಾನು ಸರ್ಕಾರದ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕೂಡಲೇ ನನ್ನನ್ನ ಬಿಜೆಪಿಯವರು ಟಾರ್ಗೆಟ್ ಮಾಡುತ್ತಿದ್ದಾರೆ. ನನ್ನ ಟ್ವಿಟ್ಟರ್ ಅಕೌಂಟ್ ಹ್ಯಾಕ್ ಆಗುತ್ತದೆ. ಅಂತರಾಷ್ಟ್ರೀಯ ಸಂಖ್ಯೆಗಳಿಂದ ಬೆದರಿಕೆ ಕರೆ ಬರುತ್ತಿದೆ. ಇಶ್ಯೂ ಡೈವರ್ಟ್ ಮಾಡುವುದಕ್ಕೆ ನನಗೆ ನೋಟಿಸ್ ಕೊಟ್ಟಿದ್ದಾರೆ ತನಿಖೆ ಉದ್ದೇಶದಿಂದ ಅಲ್ಲ. ನಾನು ಸಿಐಡಿ ಕಚೇರಿಗೆ ನೇರವಾಗಿ ಹೋಗಲ್ಲ. ಲಿಖಿತ ಮೂಲಕ ಅಧಿಕೃತವಾಗಿ ಉತ್ತರ ಕೊಡುತ್ತೇನೆ. ನನ್ನ ಪಾತ್ರ ಇದೆ ಅಂದ ಸಚಿವರಿಗೆ ಕಾಮನ್ ಸೆನ್ಸ್ ಇಲ್ವಾ? ಖರ್ಗೆ ಸಾಹೇಬರಿಗೆ 5 ಬಾರಿ, ನನಗೆ 3 ಬಾರಿ ಬೆದರಿಕೆ ಕರೆಗಳು ಬಂದಿವೆ. ಆಗ ಥ್ರೆಟ್ ಬೇರೆ ಇತ್ತು. ಈಗ ನನಗೆ ಇಂಟರ್ ನ್ಯಾಷನಲ್ ನಂಬರ್‌ನಿಂದ ಬೆದರಿಕೆ ಕರೆ ನಿನ್ನೆ ಬಂದಿದೆ. 18-20 ಸೆಕೆಂಡ್ ಕರೆ ಬಂದಿದ್ದು, ಹಿಂದಿಯಲ್ಲಿ ಮಾತನಾಡಿದರು ನಿನ್ನದು ಜಾಸ್ತಿ ಆಯ್ತು. ನಮ್ಮ ಸರ್ಕಾರ ಎರಡೂ ಕಡೆ ಇದೆ ಎಂದರು. ನೀನು ಯಾರಪ್ಪ ಎಂದು ಕೇಳಿದರೆ ಕಾಲ್ ಕಟ್ ಮಾಡಿದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಜಾÐನಜ್ಯೋತಿ ತರಬೇತಿ ಸಂಸ್ಥೆ ಎಕ್ಸಾಂ ಸೆಂಟರ್ ಅಲ್ಲ ಅಂತ ಕಲಬುರಗಿಯಲ್ಲಿ ಲೆಟರ್ ಕೊಟ್ಟಿದ್ದಾರೆ. ಸುನೀಲ್ ಕುಮಾರ್ ಪ್ರಿಯಾಂಕ್ ತನಿಖೆ ಮಾಡಿ ಅಂತಾರೆ, ಸ್ವಾಮಿ ಸುನೀಲ್ ಮೊದಲು ಗೃಹ ಸಚಿವರನ್ನು ತನಿಖೆಗೊಳಪಡಿಸಿ. ಗೃಹ ಸಚಿವರೇ ಆರೋಪಿ ಮನೆಗೆ ಹೋಗಿ ಬರುತ್ತಾರೆ. ಸಿಎಂ, ಗೃಹ ಸಚಿವರಿಗಿಂತ ನಾನು ಪ್ರಭಾವಿಯೇ? ನಾನು ಪ್ರಭಾವಿಯಾಗಿದ್ದರೆ ಅರೆಸ್ಟ್ ಮಾಡಿಸಿ. ದಿವ್ಯಾ ಹಾರಗಿ ಚಿಕ್ಕ ಚಿಕ್ಕ ಮೀನುಗಳಷ್ಟೇ. ಇವರು ಹಣ ಕಲೆಕ್ಟ್ ಮಾಡುವವರು. ಅವರು ಕಲೆಕ್ಟ್ ಮಾಡಿದ್ದು ಎಲ್ಲಿಗೆ ಹೋಗುತ್ತದೆ. ಅದು ಬೆಂಗಳೂರಿಗೆ ಬರುತ್ತದೆ. ಅಧಿಕಾರಿಗಳಿಗೆ, ಇವರಿಗೆ ಹೋಗುತ್ತದೆ. ಹಣ, ಅಧಿಕಾರಿ, ಶಾಸಕರು, ಬಿಜೆಪಿ ಕಚೇರಿಗೂ ಹೋಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಕಲುಷಿತ ನೀರು ಸೇವಿಸಿ 15 ಮಂದಿ ಅಸ್ವಸ್ಥ

    ಇದೇ ವೇಳೆ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಗಂಡಸ್ತನ ತೋರಿಸಿ ಅಂತ ಉಗಿಯುತ್ತಿದ್ದಾರೆ. ಗೃಹ ಸಚಿವರು ಸರಿ ಇಲ್ಲ ಅಂತ ಉಗಿಯುತ್ತಿದ್ದಾರೆ. ಯುವಕರು ಹುದ್ದೆ ಬಿಟ್ಟುಹೋಗಿ ಅಂತಾರೆ. ಒಂದೊಂದೇ ಅಕ್ರಮಗಳು ಹೊರಬರುತ್ತಿವೆ. ಬಹಳಷ್ಟು ಯುವಕರ ಬದುಕು ಕಿತ್ತುಕೊಳ್ಳುತ್ತಿದ್ದಾರೆ. ಕೋಟಿ ಖರ್ಚು ಮಾಡಿ ಹುದ್ದೆ ಪಡೆದವರು ಏನು ಮಾಡುತ್ತಾರೆ. ಅವರು ಪ್ರಾಮಾಣಿಕವಾಗಿ ಕೆಲಸ ಮಾಡ್ತಾರಾ? ಸಾರ್ವಜನಿಕರ ಜೇಬಿಗೆ ಕೈ ಹಾಕುತ್ತಾರೆ. ದಿವ್ಯಾ ಹಾಗರಗಿ ಎಲ್ಲಿ ಪತ್ತೆಯಿಲ್ಲ. ಇಲ್ಲಿಯವರೆಗೆ ಅವರನ್ನು ರಕ್ಷಣೆ ಮಾಡಿಕೊಳ್ಳುತ್ತಿರುವುದೇಕೆ? ಎಲ್ಲಿದ್ದಾರೆ ಪ್ರಮುಖ ಆರೋಪಿ ದಿವ್ಯಾ ಹಾಗರಗಿ, ಹಾಗರಗಿ ಎಲ್ಲಿ ಅಂತ ಜನ ಕೇಳುತ್ತಿದ್ದಾರೆ. ಮೊದಲು ಅವರನ್ನ ಪತ್ತೆ ಹಚ್ಚುವ ಕೆಲಸ ಮಾಡಿ. ಅವರನ್ನು ರಕ್ಷಣೆ ಮಾಡುವ ಕೆಲಸ ಮಾಡಬೇಡಿ. ಸಾವಿರಾರು ಯುವಕರ ಭವಿಷ್ಯ ಹಾಳಾಗುತ್ತಿದೆ. ಪ್ರಕರಣದ ತನಿಖೆಯನ್ನ ಗಂಭೀರವಾಗಿ ಮಾಡಿ ಎಂದು ಒತ್ತಾಯಿಸಿದ್ದಾರೆ.

  • RSS, ಬಿಜೆಪಿಯವರಿಗೆ ಯಾರೂ ಹೆದರಬೇಡಿ, ಕಾಂಗ್ರೆಸ್ ನಿಮ್ಮೊಂದಿಗಿದೆ: ಡಿಕೆಶಿ

    RSS, ಬಿಜೆಪಿಯವರಿಗೆ ಯಾರೂ ಹೆದರಬೇಡಿ, ಕಾಂಗ್ರೆಸ್ ನಿಮ್ಮೊಂದಿಗಿದೆ: ಡಿಕೆಶಿ

    ಬೆಂಗಳೂರು: ಆರ್‌ಎಸ್‌ಎಸ್‌ನವರಿಗೆ ಬಿಜೆಪಿಯವರಿಗೆ ಯಾರೂ ಹೆದರಬೇಡಿ. ಕಾಂಗ್ರೆಸ್ ನಿಮ್ಮ ಪರವಾಗಿದೆ. ಎಲ್ಲೆ ತೊಂದರೆ ಆದರೂ ನಮ್ಮ ಕಾರ್ಯಕರ್ತರನ್ನು ಕಳುಹಿಸಿ ಕೊಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ಹಲಾಲ್ ಕಟ್ ಬಗ್ಗೆ ಸದಾಶಿವನಗರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ನಾಲ್ಕಾರು ದಿನದಿಂದ ರೈತರ ಬದುಕಿನ ಮೇಲೆ ದೊಡ್ಡ ಗದಾಪ್ರಹಾರ ಆಗುತ್ತಿದೆ. ರಾಜಕೀಯ ಗುರಿಯಾಗಿಟ್ಟುಕೊಂಡು ಸಮಾಜದಲ್ಲಿ ಅಶಾಂತಿ ಮೂಡಿಸಲು ಒಂದು ಸಮುದಾಯದ ಮೇಲೆ ಪ್ರಹಾರ ನಡೆಸಲಾಗುತ್ತಿದೆ. ಪಶು ಸಂಗೋಪನೆ ಇಲಾಖೆಯಿಂದ ನಿನ್ನೆ ಒಂದು ಆದೇಶ ಆಗಿದೆ. ದೂರು ಬಂದ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿಗಳನ್ನು ವದೆ ಮಾಡುವ ಮುನ್ನ ಪ್ರಜ್ಞೆ ತಪ್ಪಿಸಲು ಆದೇಶ ಮಾಡಲಾಗಿದೆ. ಕೆಲವರು ಹಲಾಲ್ ಮಾಡುತ್ತಾರೆ, ಕೆಲವರು ಹಲಾಲ್ ಮಾಡಲ್ಲ. ಆಪರೇಷನ್ ಮಾಡುವಾಗ ಪ್ರಜ್ಞೆ ತಪ್ಪಿಸಿ ಆಪರೇಷನ್ ಮಾಡುವ ಪದ್ದತಿ ಇದೆ. ಆದರೆ ಕೋಳಿ, ಕುರಿಗೆ ಹಾಗೆ ಮಾಡುವುದಕ್ಕೆ ಆಗುತ್ತಾ? ಕೋಳಿ, ಕುರಿ ಬಲಿ ಕೊಡುವುದು ನಮ್ಮ ಪದ್ದತಿ ಸಂಪ್ರದಾಯ ಇದೆ. ಮಾರಮ್ಮನಿಗೆ ನಾನು ಕೋಳಿ ಹರಕೆ ಮಾಡಿಕೊಂಡಿದ್ದೇನೆ. ನಾವು ಬಲಿಗೆ ಮುನ್ನ ತಲೆಗೆ ತೀರ್ಥ ಹಾಕಿ ಅದು ತಲೆ ಅಲ್ಲಾಡಿಸಿದ ಮೇಲೆ ಬಲಿ ಕೊಡುತ್ತೇವೆ. ಹಾಗೆ ಒಂದೊಂದು ಕಡೆ ಒಂದೊಂದು ಪದ್ಧತಿ ಇದೆ ಎಂದಿದ್ದಾರೆ. ಇದನ್ನೂ ಓದಿ: ಗೋಮಾಂಸ ಸಾಗಾಟ – ಇಬ್ಬರು ಆರೋಪಿಗಳು ಸೆರೆ

    ನಾನು ಸ್ಟೂಡೆಂಟ್ ಆಗಿದ್ದಾಗ ಬೆಂಗಳೂರಿನಲ್ಲಿ ವಿನಾಯಕ ಫೌಲ್ಟ್ರಿ ಫಾರಂ ಇಟ್ಟಿದ್ದೆ. ಅದರ ಕಷ್ಟ, ನಷ್ಟ ನನಗೆ ಗೊತ್ತಿದೆ. ವರ್ಷ ತೊಡಕು ಹೊಸದಾಗಿ ಬಂದಿದೆಯಾ? ಪ್ರತಿ ವರ್ಷ ಮಾಡಲ್ವಾ? ಎಲ್ಲಾ ಫ್ರೆಶ್ ಚಿಕನ್, ಮಟನ್ ಕೊಡುತ್ತಿದ್ದಾರಲ್ಲ. ಬೇಕಿದ್ದರೆ ಕೇಳಿ ನೋಡಿ ಏನಾಗಿದೆ. ಆರ್‌ಎಸ್‌ಎಸ್‌ನವರಿಗೆ ಬಿಜೆಪಿಯವರಿಗೆ ಯಾರೂ ಹೆದರಬೇಡಿ. ಕಾಂಗ್ರೆಸ್ ನಿಮ್ಮ ಪರವಾಗಿದೆ. ಎಲ್ಲೆ ತೊಂದರೆ ಆದರೂ ನಮ್ಮ ಕಾರ್ಯಕರ್ತರನ್ನು ಕಳುಹಿಸಿ ಕೊಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: RK ಹೌಸ್‌ನಲ್ಲಿ ರಣಬೀರ್-ಆಲಿಯಾ ಮದುವೆ : ಆ ಸ್ಥಳದ ಹಿಂದಿದೆ ಇಂಟ್ರಸ್ಟಿಂಗ್ ಕಹಾನಿ

    ಮುಖ್ಯಮಂತ್ರಿಗಳಿಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ. ಸಂವಿಧಾನ ಬದ್ಧವಾಗಿ ಪ್ರಮಾಣ ಮಾಡಿ ಬಂದಿದ್ದೀರಾ. ಕೂಡಲೇ ಇದನ್ನೆಲ್ಲಾ ನಿಲ್ಲಿಸಿ ಈ ಬಗ್ಗೆ ಕ್ರಮ ಕೈಗೊಳ್ಳಿ ನಿಮ್ಮ ಪಕ್ಷದ ಹೆಸರು ಹೇಳಿಕೊಂಡು ಇದನ್ನೆಲ್ಲಾ ಮಾಡುತ್ತಿರುವವರನ್ನು ನಿಲ್ಲಿಸಿ. ಸಂಜೆಯೊಳಗೆ ಮುಖ್ಯಮಂತ್ರಿಗಳು ಇದಕ್ಕೆ ಉತ್ತರ ಕೊಡಬೇಕು  ಎಂದು ಒತ್ತಾಯಿಸಿದ್ದಾರೆ.

  • ಕೋರ್ಟ್ ಆದೇಶವನ್ನು ಪಾಲಿಸೋಣ : ಧರ್ಮ ಗುರುಗಳಿಂದ ಮನವಿ

    ಕೋರ್ಟ್ ಆದೇಶವನ್ನು ಪಾಲಿಸೋಣ : ಧರ್ಮ ಗುರುಗಳಿಂದ ಮನವಿ

    ಬೆಂಗಳೂರು: ಹಿಜಬ್ ವಿವಾದಕ್ಕೆ ಸಂಬಂಧಪಟ್ಟಂತೆ ಇಂದು ಸ್ವಾಮೀಜಿಗಳು, ಮೌಲ್ವಿಗಳು, ಪಾದ್ರಿಗಳ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದರು.

    ನಗರದ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಈ ಸುದ್ದಿಗೋಷ್ಠಿಯಲ್ಲಿ ಮುರುಘ ರಾಜೇಂದ್ರ ಮಠದ ಶಿವಮೂರ್ತಿ ಶರಣರು, ಮುಸ್ಲಿಂ ಧರ್ಮಗುರು ಮೌಲಾನ್ ಮಕ್ಸೂದ್ ಸಾಹೇಬ್ ಸೇರಿದಂತೆ 10 ಕ್ಕೂ ಹೆಚ್ಚು ಧಾರ್ಮಿಕ ಮುಖಂಡರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಡಾ ಶಿವಮೂರ್ತಿ ಮುರುಘಾ ಶರಣರು, ಅನೇಕ ಸಂದರ್ಭಗಳಲ್ಲಿ ಹಲವು ಸಮಸ್ಯೆಗಳನ್ನು ಕಂಡಿದ್ದೇವೆ. ಕೊರೊನಾ ಬಂದಾಗಲೂ ಆಹಾರ, ಔಷಧ ಕಿಟ್ ವಿತರಣೆ ಮಾಡಿದ್ದೇವೆ. ನೈಸರ್ಗಿಕ ಸಮಸ್ಯೆ ಬಂದಾಗಲೂ ಸಮಸ್ಯೆಗೆ ಸ್ಪಂದಿಸಿದ್ದೇವೆ. ಸಮಾಜದಲ್ಲಿ ಉದ್ಬವವಾಗಿರುವ ಸಂದ್ಗಿತ ಸಮಸ್ಯೆ ಎದುರಾಗಿದೆ. ಇದು ಮಾನವ ನಿರ್ಮಿತ ಸಂದರ್ಭ ಇದಾಗಿದೆ. ಎಲ್ಲ ಧರ್ಮದಲ್ಲೂ ಧಾರ್ಮಿಕ ಮುಖಂಡರಿದ್ದಾರೆ. ನಾವು ಸಮಾಜಕ್ಕೆ ಶಾಂತಿ ರವಾನೆ ಸಾರಬೇಕಾಗಿದೆ. ಇವತ್ತು ಸಾಮಾಜಿಕ ಸಾಮರಸ್ಯ ಎಲ್ಲರಿಗೂ ಬೇಕಾಗಿದೆ. ಸಾಮಾಜಿಕ ಶಾಂತಿಗಾಗಿ ಎಲ್ಲರೂ ಕೈಜೋಡಿಸಬೇಕಾಗಿದೆ. ಸಮವಸ್ತ್ರ, ವಸ್ತ್ರ ಸಂಹಿತೆ ಎಲ್ಲರ ನೆಮ್ಮದಿ ಕೆಡಿಸಿದೆ. ಈ ವಸ್ತ್ರಸಂಹಿತೆಯಲ್ಲಿ ಶಾಂತಿ ಬೇಕಾದಾಗ ಪರಿಹಾರ ಕಂಡುಕೊಳ್ಳಬೇಕಾಗಿದೆ. ನಾವೆಲ್ಲ ಶಾಂತಿ, ಸಾಮರಸ್ಯದ ಪರವಾಗಿದ್ದೇವೆ. ಈಗ ಎದ್ದಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗಿದೆ. ಸದ್ಯ ಕೋರ್ಟ್‍ನಲ್ಲಿ ಕೇಸ್ ನಡೆಯುತ್ತಿದೆ. ಕೋರ್ಟ್ ಹೇಳಿದಂತೆ ನಾವೆಲ್ಲ ಕೇಳಬೇಕಾಗಿದೆ. ಅದಕ್ಕೂ ಮುನ್ನ ಶಾಂತಿ ನೆಮ್ಮದಿ ಬೇಕಾದರೆ ಸದ್ಯಕ್ಕೆ ಸಾಮರಸ್ಯ ಕಾಯಬೇಕಾಗಿದೆ. ನಾವೆಲ್ಲ ಶಾಂತಿ ಮಂತ್ರ ಜಪಿಸಬೇಕಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕನ್ನಡದ ನೆಲದಲ್ಲೇ ಏನನ್ನಾದರೂ ಸಾಧಿಸಬೇಕೆಂಬ ಪ್ರಬಲ ಕನಸು ಹೊಂದಿದ್ದರು ರಾಜೇಶ್: ಕೆ.ಗೋಪಾಲಯ್ಯ ಕಂಬನಿ

    Religious-leaders

    ಸದ್ಯ ಕೋರ್ಟ್ ಯಾವುದೇ ತೀರ್ಪು ಕೊಟ್ಟರೂ ಅದನ್ನು ಪಾಲಿಸಬೇಕಾಗುತ್ತದೆ. ಅಡುಗೆ, ಮನಸ್ಸು ಎಲ್ಲವೂ ಕೆಟ್ಟರು ಕ್ಷಣಿಕ ಮಾತ್ರ. ಅದೇ ನಿಮಗೆ ಶಿಕ್ಷಣ ಕೆಟ್ಟರೆ ವಾತವಾರಣವೇ ಹದಗೆಡಲಿದೆ. ಕೇಸರಿ ಹಾಕಿಕೊಂಡು ಬರುವವರ ಸಂಖ್ಯೆ ಇಳಿಕೆಯಾಗಿದೆ. ಸದ್ಯ ಕೇಸ್ ಕೋರ್ಟ್ ಬಳಿ ಇದೆ. ಇದರ ತೀರ್ಪಿನಂತೆ ಎಲ್ಲರೂ ನಡೆಯಬೇಕಾಗಿದೆ. ಎಲ್ಲರೂ ಸೇರಿ ಸಾಮರಸ್ಯ ಕಾಪಾಡಬೇಕಾಗಿದೆ. ವ್ಯವಸ್ಥೆ ಹೀಗೆ ಇರಲಿ ಎಂದು ನಾವು ಹೇಳಲು ಆಗಲ್ಲ. ಸರ್ಕಾರ, ಕೋರ್ಟ್ ವ್ಯವಸ್ಥೆ ಹೇಳಲಿ. ಹೀಗಿರುವಾಗ ನಾವು ಯಾರಿಗೂ ಹೀಗೆ ಇರಿ ಎಂದು ಹೇಳಲು ಆಗಲ್ಲ. ಕೋರ್ಟ್ ಆದೇಶದ ನಿರೀಕ್ಷೆಯಲ್ಲಿದ್ದೇವೆ ಎಂದಿದ್ದೇವೆ.

     

     

    ಆಲ್ ಇಂಡಿಯಾ ಮುಲ್ಲಿ ಕೌನ್ಸಿಲ್ ಮೌಲಾನ ಸುಲೇಮಾನ್ ಖಾನ್: ಈಗಾಗಲೇ ಶಾಂತಿಯೇ ಮುಖ್ಯ ಎಂಬ ವಿಚಾರ ತಲುಪಿಸಲಾಗಿದೆ. ಭಾರತ, ಕರ್ನಾಟಕ ವಿವಿಧತೆಯ ಏಕತೆಯನ್ನು ಸಾರುವ ದೇಶ ಎಂಬುದು ತಿಳಿದಿದೆ. ಒಂದೇ ಸತ್ಯವನ್ನು ನೂರಾರು ರೀತಿ ಎಲ್ಲವನ್ನು ವಿವರಿಸಲಾಗುತ್ತದೆ. ಶಾಂತಿಗಿಂತ ಯಾವುದು ದೊಡ್ಡದಲ್ಲ ನಿಮಗೆ ಗೊತ್ತಿರಲಿ. ವಿವಿಧತೆ, ಐಕ್ಯತೆ ಬೇಕು ಎಂಬುದು ಎಲ್ಲರಿಗೂ ಗೊತ್ತಿದೆ. ಚಿತ್ರದುರ್ಗದ ಮುರುಘಾ ಮಠ ಎಲ್ಲ ಧರ್ಮದ ಪ್ರತೀಕವಾಗಿದೆ. ಧಾರ್ಮಿಕ ಆಚರಣೆಗಳನ್ನು ಒಬ್ಬರ ಮೇಲೆ ಒಬ್ಬರು ಅವಲಂಬಿಸುತ್ತೇವೆ. ಬೆಂಗಳೂರು ಕರಗ ಹಿಂದು – ಮುಸ್ಲಿಂ ಪ್ರತೀಕವಾಗಿದೆ. ಎಲ್ಲ ಧರ್ಮದವರು ಸೌರ್ಹಾದತೆಯಿಂದ ನಡೆದುಕೊಳ್ಳುತ್ತೇವೆ. ದರ್ಗಾಕ್ಕೆ ಹಿಂದೂಗಳು ಹೋಗಿ ಪ್ರದಕ್ಷಿಣೆ ಹಾಕುತ್ತಾರೆ. ಹಾಗೇ ಬೆಂಗಳೂರು ಕರಗ ಬಗ್ಗೆ ಮುಸ್ಮಿಮರು ಸಂಪ್ರದಾಯ ಆಚರಿಸುತ್ತಾರೆ. ರಾಜ್ಯದ ಜನರಿಗೆ ಒಂದೆ ಸಂದೇಶ ನೀಡುತ್ತೇನೆ. ಕೋರ್ಟ್ ತೀರ್ಪು ಬರುವವರೆಗೂ ಎಲ್ಲರೂ ಸೌಹರ್ದತೆಯಿಂದ ನಡೆದುಕೊಳ್ಳಬೇಕಾಗಿದೆ. ರಾಜಕೀಯ ವ್ಯಕ್ತಿಗಳು ಇದು ದೊಡ್ಡ ಸಮಸ್ಯೆಯಾಗಿ ಬೆಳೆಯದಂತೆ ನೋಡಿಕೊಳ್ಳಬೇಕೆಂದು ಮನವಿ ಮಾಡುತ್ತೇವೆ. ಹಿಜಬ್ ಸಂಬಂಧ ಅಂತಿಮವಾದ ತೀರ್ಪು ಬಂದಿಲ್ಲ. ಮಧ್ಯಂತರ ತೀರ್ಪು ಮಾತ್ರ ಬಂದಿದೆ. ಕೋರ್ಟ್ ಮಧ್ಯಂತರ ತೀರ್ಪು ಬಗ್ಗೆ ಸ್ಪಷ್ಟವಾಗಿ ತಿಳಿಯಿರಿ. ಪೋಷಕರು, ಶಿಕ್ಷಕರು, ಮಕ್ಕಳು, ಉಪನ್ಯಾಸಕರು ಸಿಬ್ಬಂದಿ ಅರ್ಥ ಮಾಡಿಕೊಳ್ಳಬೇಕಾಗಿದೆ. ತರಗತಿ ಒಳಗೆ ಮಾತ್ರ ಹಿಜಬ್ ಧರಿಸಬಾರದೆಂದು ಕೋರ್ಟ್ ಹೇಳಿದೆ. ಸರ್ಕಾರ ಒಂದು ಹೆಜ್ಜೆ ತೆಗೆದುಕೊಳ್ಳಬೇಕಾಗಿದೆ. ಕೊರೊನಾ ರೀತಿಯೇ ಆನ್ ಲೈನ್ ಕ್ಲಾಸ್ ನಡೆಸಿ. ಧಾರ್ಮಿಕ ಭಾವನೆ ಪಾಲನೆ ಮಾಡಲು ಎಲ್ಲರಿಗೂ ಅಧಿಕಾರ ಇದೆ. ಶಿಕ್ಷಣ ಮುಖ್ಯ ಹಾಗಂತ ಗಲಾಟೆ ಬೇಡ. ವಿದ್ಯಾರ್ಥಿಗಳು ಕಾಲೇಜಿಗೆ ಬರುವಾಗ ಹಲವರು ತಡೆಯುತ್ತಿದ್ದಾರೆ. ಇದು ಭವಿಷ್ಯವನ್ನ ತಡೆದಂತೆ ಆಗಿದೆ. ವಿದ್ಯಾರ್ಥಿಗಳಿಗೆ ನಾನು ಯಾವುದೇ ಸಲಹೆ ಕೊಡಲ್ಲ. ಸರ್ಕಾರ ತಮ್ಮ ಆದೇಶ ವಾಪಸ್ ಪಡೆಯಿರಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಂಗಭೂಮಿಯಲ್ಲಿ ‘ವಿದ್ಯಾಸಾಗರ್’ ಎಂದು ಗುರುತಿಸಿಕೊಂಡಿದ್ದರು ನಟ ರಾಜೇಶ್

    Religious-leaders

    ಫಾದರ್ ಜಾನ್ ಆರ್ಚ್ ಬಿಷಪ್: ಸಮುದಾಯ, ಸಮಾಜವನ್ನು ನೋವು ಮಾಡದಂತೆ ಸದ್ಯ ನಿರ್ಧಾರ ಆಗಬೇಕಾಗಿದೆ. ದೇವಾಲಯ ಕೆಡುವುದು ಎಲ್ಲವೂ ನೋವು ತಂದಿದೆ. ಎಲ್ಲರೂ ಶಿಕ್ಷಣಕ್ಕೆ ಆದ್ಯತೆ ನೀಡಿ ಶಾಂತಿ ಕಾಪಾಡಿ ಎಂದು ಮನವಿ ಮಾಡಿದ್ದಾರೆ. ಇದನ್ನು ಓದಿ: ಡಾ.ವಿಷ್ಣು ಪುತ್ಥಳಿ ಅನಾವರಣಕ್ಕೆ ಹಿಜಬ್ -ಕೇಸರಿ ವಿವಾದ ಅಡ್ಡಿ

    ಬಸವಗುರು ಮಾದಾರ ಚೆನ್ನಾರ ಸ್ವಾಮೀಜಿ: ಇಂದಿನ ಪ್ರಸ್ತುತ ಸಂದರ್ಭದಲ್ಲಿ ಶಾಲೆಗಳಲ್ಲಿ ಪ್ರಕ್ಷುಬ್ಧ ವಾತಾವರಣ ಇದೆ. ನ್ಯಾಯಾಲಯದ ತೀರ್ಪು ಬರುವವರೆಗೂ ಶಾಂತಿಯನ್ನು ಕಾಪಾಡಬೇಕಿದೆ. ತೀರ್ಪು ಬರುವವರೆಗೂ ಧರ್ಮಗುರುಗಳು ಶಾಂತಿಯನ್ನು ಕಾಪಾಡಲು ಶ್ರಮಿಸಬೇಕಿದೆ. ತಮ್ಮ ಧರ್ಮದವರಿಗೆ ಎಲ್ಲರೂ ಸೂಚನೆಯನ್ನು ನೀಡಬೇಕಿದೆ ಎಂದು ತಿಳಿಸಿದ್ದಾರೆ.

    ಇಮ್ಮಡಿ ಸಿದ್ದರಾಮೇಶ್ವರ ಗುರುಗಳು: ಭಾರತ ಜಾತ್ಯಾತೀತ ರಾಷ್ಟ್ರ, ವಿಶ್ವ ಧರ್ಮಿ ನೆಲ ನಮ್ಮದು, ಧಾರ್ಮಿಕ ವಿಚಾರಕ್ಕೆ ಗಲಾಟೆ ಆಗುತ್ತಿರುವುದು ಈ ಸಂದರ್ಭಕ್ಕೆ ಮಾತ್ರವಲ್ಲ. ಇತಿಹಾಸದಲ್ಲೇ ತಿಳಿದಂತೆ ಎಲ್ಲ ಕಾಲ ಮಟ್ಟದಲ್ಲೂ ಗದ್ದಲಗಳು ನಡೆದಿದೆ. ರಾಜ್ಯಕ್ಕೆ ಬಂದಾಗ ಕನ್ನಡಿಗ, ದೇಶ ಬಂದಾಗ ಭಾರತ. ಎಲ್ಲ ಧರ್ಮದವರು ಸಹಿಷ್ಣುತೆ ಕಾಪಾಡಲು ಮೊದಲಿಗೆ ಸಂವಿಧಾನ ಜಾರಿಯಲ್ಲಿದೆ. ಈಗಲೂ ಈ ಸಮಸ್ಯೆಗೆ ಪರಿಹಾರ ಸಂವಿಧಾನದಿಂದ ಸಿಗಲಿದೆ ಎಂಬ ನಂಬಿಕೆಯಿದೆ. ಕೋರ್ಟ್ ತೀರ್ಪಿನವರೆಗೂ ಎಲ್ಲರೂ ಶಿಕ್ಷಣಕ್ಕೆ ಆದ್ಯತೆ ನೀಡಿ. ನ್ಯಾಯಾಲಯ ಕಾಲ, ಕಾಲಕ್ಕೆ ಕೊಟ್ಟ ತೀರ್ಪನ್ನು ಒಪ್ಪಿಕೊಳ್ಳಬೇಕು, ಪಾಲಿಸಬೇಕು. ಸರ್ಕಾರಕ್ಕೆ ಈಗ ಸಂಘರ್ಷ ಹೆಚ್ಚಲಿದೆ ಎಂಬ ಸುಳಿವಿದ್ದರೆ ಆನ್‍ಲೈನ್ ಶಿಕ್ಷಣಕ್ಕೆ ಒತ್ತು ಕೊಡಿ ಎಂದು ತಿಳಿಸಿದ್ದಾರೆ.

    ಮೌಲಾನ ಮಕ್ಸೂರ್ ಇಮ್ರಾನ್ : ಶಾಲೆ ಒಳಗೆ ಕೇಸರಿ, ಹಿಜಬ್ ಬಗ್ಗೆ ಎಲ್ಲ ಬಿಟ್ಟು ಬಿಡಿ. ಮೊದಲು ಮುಸ್ಮೀಂ ಹುಡುಗಿಯರು ಒಂದಲ್ಲ ಅಂತಿದ್ರು. ಈಗ ಕೇಸರಿ, ಹಿಜಬ್ ಅಂತ ಗಲಾಟೆ ಬೇಡ. ಕೇಸರಿ ಹಾಕಿಕೊಳ್ಳುತ್ತೇವೆ ಎಂದರೆ ಹಾಕಿಕೊಳ್ಳಲಿ. ಹಿಜಬ್ ಮೊದಲಿನಿಂದಲೂ ಹಾಕಲಾಗುತ್ತಿದೆ. ಈಗ ವಿವಾದ ಮಾತ್ರ ಬೇಡ. ಪರೀಕ್ಷೆಗೆ ಎಲ್ಲರೂ ಪ್ರಾಮುಖ್ಯತೆ ಕೊಡಿ. ವಿದ್ಯಾರ್ಥಿಗಳಿಗೆ ಹಿಜಬ್ ಹಾಕಿ ಬಿಡಿ ಅಂತ ಹೇಳಲ್ಲ. ನಾವು ಗುರುಗಳು ಎಲ್ಲರಿಗೂ ಇದು ಸರಿ – ತಪ್ಪು ಅಂತ ತೋರಿಸುತ್ತೇವೆ. ಹಾಗೇ ಯಾವುದಕ್ಕೂ ನಾವು ವಸ್ತ್ರಗಳ ಬಗ್ಗೆ ಸಲಹೆ ಕೊಡಲ್ಲ. ಪೊಲೀಸ್ ಹಾಕುತ್ತೇವೆ. ಹಿಜಬ್ ತೆಗೆಸುತ್ತೇವೆ ಅಂತ ಹೇಳಿಲ್ಲ. ಹಾಕಿಕೊಂಡು ಹೋಗಿ, ಹಾಕಿಕೊಂಡು ಹೋಗಬೇಡಿ ಅಂತ ನಾವು ಹೇಳುವುದಿಲ್ಲ ಎಂದಿದ್ದಾರೆ. ಇದನ್ನು ಓದಿ: ಮತ್ತೊಂದು ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಮೇಘನಾ ರಾಜ್

    ಕೊನೆಯಲ್ಲಿ ಎಲ್ಲ ಹಿಂದೂ, ಮುಸ್ಮಿಂ ವಿದ್ಯಾರ್ಥಿಗಳಿಗೆ ಮನವಿ ಮಾಡುತ್ತೇನೆ. ಶಾಂತಿಯಿಂದ ಇರಿ. ಗಲಾಟೆ ಬೇಡ. ಹಿಜಬ್, ಕೇಸರಿ ಬೇಡ ಬೇಕು ಅಂತ ನಾವು ಸಂದೇಶ ಕೊಡಲ್ಲ ಎಂದು ಹೇಳುತ್ತಾ, ಕೊನೆಯಲ್ಲಿ ಎಲ್ಲ ಧರ್ಮಗುರುಗಳು ಜೈ ಹಿಂದ್ ಜೈ ಕರ್ನಾಟಕ ಎಂದು ಕೈ ಹಿಡಿದು ತೋರಿಸಿದ್ದಾರೆ.

  • ಭ್ರಷ್ಟಾಚಾರದಲ್ಲೇ ಬಿಜೆಪಿ ಸರ್ಕಾರ ಕಾಲ ಕಳೆಯುತ್ತಿದೆ: ಪ್ರಿಯಾಂಕ್ ಖರ್ಗೆ

    ಭ್ರಷ್ಟಾಚಾರದಲ್ಲೇ ಬಿಜೆಪಿ ಸರ್ಕಾರ ಕಾಲ ಕಳೆಯುತ್ತಿದೆ: ಪ್ರಿಯಾಂಕ್ ಖರ್ಗೆ

    ಕಲಬುರಗಿ: ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿಲ್ಲ. ಕೇವಲ ಭ್ರಷ್ಟಾಚಾರದಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

    ಕಲಬುರಗಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿಲ್ಲ. ಕೇವಲ ಭ್ರಷ್ಟಾಚಾರದಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ. ಕೇಂದ್ರ ಸರ್ಕಾರಕ್ಕೆ ರಾಜ್ಯದ ಬಗ್ಗೆ ಅಲರ್ಜಿ, ರಾಜ್ಯ ಸರ್ಕಾರಕ್ಕೆ ಕಲ್ಯಾಣ ಕರ್ನಾಟಕದ ಬಗ್ಗೆ ಅಲರ್ಜಿ. ಕೆಕೆಆರ್‍ಡಿಬಿ ಅಧ್ಯಕ್ಷ ಸ್ಥಾನವನ್ನ ದುರ್ಬಲಗೊಳಿಸಲು ಸರ್ಕಾರ ಯತ್ನಿಸುತ್ತಿದೆ. ಡಬಲ್ ಇಂಜಿನ್ ಸರ್ಕಾರ ಬಂದಾಗಿನಿಂದ ಈ ಭಾಗದ ಯೋಜನೆಗಳು ಮಾಯವಾಗಿವೆ. ರೈತರಿಗೆ ಇದುವರೆಗೂ ಯಾವುದೇ ರೀತಿಯ ಪರಿಹಾರ ದೊರೆತಿಲ್ಲ. ಕಾನೂನು ಸುವ್ಯವಸ್ಥೆ ಅಂತು ಸಂಪೂರ್ಣ ಹದಗೆಟ್ಟಿ ಹೋಗಿದೆ ಎಂದಿದ್ದಾರೆ. ಇದನ್ನೂ ಓದಿ: ಮುಗಿದ ಅಧ್ಯಾಯ – ಕಾಂಗ್ರೆಸ್‍ಗೆ ಸಿಎಂ ಇಬ್ರಾಹಿಂ ಗುಡ್‍ಬೈ

    ಬಿಜೆಪಿಯವರಿಗೆ ಹಳೇ ಆಟ ಆಡಿ ಬೇಜಾರಾಗಿದೆ. ಇದೀಗ ಹೊಸ ಆಟ ಶುರು ಮಾಡಿಕೊಂಡಿದ್ದಾರೆ. 50 ವರ್ಷದಲ್ಲಿ ಉಂಟಾಗದ ನಿರುದ್ಯೋಗ ಇಂದಿನ ಸರ್ಕಾರದಲ್ಲಿ ಹೆಚ್ಚಾಗಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಉದ್ಯೋಗ ಕಲ್ಪಿಸುವ ಯೋಜನೆಗಳು ಬಂದಿಲ್ಲ. ಕದ್ದಿಮುಚ್ಚಿ ಈ ಭಾಗದ ಯುವಕರ ಉದ್ಯೋಗ ಭವಿಷ್ಯ ಕತ್ತಲೆಗೆ ಒಯ್ಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.  ಇದನ್ನೂ ಓದಿ: ನೈಟ್ ಕರ್ಫ್ಯೂ ನಡುವೆ ಸಿಲಿಕಾನ್ ಸಿಟಿಯಲ್ಲಿ ಭೀಕರ ಅಪಘಾತ

    ಕೊರೊನಾದಿಂದ ಆರ್ಥಿಕ ನಷ್ಟ ನೆಪವೊಡ್ಡಿ ಕಲ್ಯಾಣ ಕರ್ನಾಟಕ ಭಾಗದ ಹುದ್ದೆ ಭರ್ತಿಗೆ ತಡೆ ನೀಡಿದೆ. ಕೇವಲ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಾತ್ರ ಸರ್ಕಾರಕ್ಕೆ ಆರ್ಥಿಕ ಸಂಕಷ್ಟನಾ? ಪಿಎಸ್‍ಐ ಹುದ್ದೆ ನೇಮಕಾತಿಯಲ್ಲಿ ಈ ಭಾಗದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. 371(ಜೆ) ಮಾನದಂಡಗಳನ್ನು ನೇಮಕಾತಿಯಲ್ಲಿ ಸರಿಯಾಗಿ ಅನುಸರಿಸುತ್ತಿಲ್ಲ. 45 ಪಿಎಸ್‍ಐ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಸರ್ಕಾರದ ಅವಿವೇಕಿತನದಿಂದ ನಮ್ಮ ಭಾಗದ ಜನರಿಗೆ ನಿರಂತರ ಅನ್ಯಾಯವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

  • ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಸಜ್ಜು – ಜನತಾ ಸಂಗಮದಲ್ಲಿ ಮುಖಂಡರೊಂದಿಗೆ ಹೆಚ್‍ಡಿಕೆ ಸಮಾಲೋಚನೆ

    ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಸಜ್ಜು – ಜನತಾ ಸಂಗಮದಲ್ಲಿ ಮುಖಂಡರೊಂದಿಗೆ ಹೆಚ್‍ಡಿಕೆ ಸಮಾಲೋಚನೆ

    ಬೆಂಗಳೂರು: ಮುಂದಿನ ಪಾಲಿಕೆ ಚುನಾವಣೆ ಹಾಗೂ 2023ರ ವಿಧಾನಸಭೆ ಚುನಾವಣೆಗೆ ರಾಜಧಾನಿಯ ಮುಖಂಡರು, ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ನಗರದಲ್ಲಿ ಜೆಡಿಎಸ್ ಸಂಘಟನಾ ಕಾರ್ಯಾಗಾರ ಜನತಾ ಸಂಗಮ ನಡೆಸಲಾಗುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

    ಕಾರ್ಯಗಾರದಲ್ಲಿ ಭಾಗಿಯಾಗುವುದಕ್ಕೆ ಮುನ್ನ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರಕ್ಕೆ ಜೆಡಿಎಸ್ ಪಕ್ಷವು ಅನೇಕ ಅಭಿವೃದ್ಧಿ ಯೋಜನೆಗಳನ್ನು ನೀಡಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಪಕ್ಷದ ಜವಾಬ್ದಾರಿ ಏನಿದೆ ಎಂಬ ಬಗ್ಗೆಯೂ ಇಂದಿನ ಕಾರ್ಯಗಾರದಲ್ಲಿ ಚರ್ಚೆ ನಡೆಸಲಾಗುವುದು. ಜೊತೆಗೆ, ಪಕ್ಷದ ಸಂಘಟನೆಯಲ್ಲಿ ಎಲ್ಲೆಲ್ಲಿ ಲೋಪ ಆಗಿದೆ ಎನ್ನುವುದನ್ನು ಚರ್ಚೆ ಮಾಡಿ ಸರಿಪಡಿಸಲಾಗುವುದು ಎಂದರು. ಇದನ್ನೂ ಓದಿ: ವಾಯುಸೇನೆ ವಿಮಾನದಲ್ಲಿ ಲ್ಯಾಂಡಿಂಗ್ – ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಮೋದಿ

    ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಿ ಆಗಿದ್ದಾಗ ಹಾಗೂ ನಾನು ಮುಖ್ಯಮಂತ್ರಿ ಆಗಿದ್ದಾಗ ಬೆಂಗಳೂರು ನಗರ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಕುಡಿಯುವ ನೀರು, ಐಟಿ ಬಿಟಿ, ಮೆಟ್ರೋ, ಮೂಲಸೌಕರ್ಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದೇವೆ. ನಗರಕ್ಕೆ ಸಾಕಷ್ಟು ಕೆಲಸ ಮಾಡಿದ್ದಾಗ್ಯೂ ಆ ಬಗ್ಗೆ ಜನರಿಗೆ ಪೂರ್ಣ ಮಾಹಿತಿ ಇಲ್ಲ. ಪಕ್ಷದ ಸಾಧನೆಗಳನ್ನು ಜನತೆಗೆ ತಲುಪಿಸುವ ಕೆಲಸ ಮಾಡುವ ವಿಚಾರವಾಗಿ ಕಾರ್ಯಗಾರದಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಹೆಸರಿಗೆ ಮಾತ್ರ ಸರ್ಕಾರಿ ಆಸ್ಪತ್ರೆ- ಚಿಕಿತ್ಸೆ ಕೊಡಲು ವೈದ್ಯರೇ ಇಲ್ಲ

    HDD

    ಬಿಬಿಎಂಪಿ ಚುನಾವಣೆಗೆ ತಯಾರಿ:
    ನಮ್ಮ ಪಕ್ಷವನ್ನು ಪಾಲಿಕೆ ಚುನಾವಣೆಗೆ ಸಜ್ಜು ಮಾಡುತ್ತಿದ್ದೇವೆ. ಫೆಬ್ರವರಿಯಲ್ಲಿ ಬಿಬಿಎಂಪಿ ಚುನಾವಣೆ ಎನ್ನುವ ಸುದ್ದಿ ಇದೆ. ಹೀಗಾಗಿ ಪಕ್ಷದ ಸಂಘಟನೆಗೆ ಹೆಚ್ಚು ಗಮನ ಕೊಡಲಾಗುತ್ತದೆ. ವಾರ್ಡ್ ವಿಂಗಡಣೆ ಕೆಲಸ ನಡೆಯುತ್ತಿದೆ. ನಗರದ ಏಳೆಂಟು ವಿಧಾನಸಭೆ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಉತ್ತಮ ಶಕ್ತಿ ಹೊಂದಿದೆ. ಉಳಿದ ಕ್ಷೇತ್ರಗಳಲ್ಲಿ ಬಲ ಹೆಚ್ಚಿಸಿಕೊಳ್ಳುವ ಬಗ್ಗೆಯೂ ಚರ್ಚೆ ಮಾಡುತ್ತಿದ್ದೇವೆ. ಪಾಲಿಕೆ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡುತ್ತೇವೆ. ಆ ಮಾತನ್ನು ಈಗಾಗಲೇ ಹೇಳಿದ್ದೇವೆ ಎಂದು ನುಡಿದರು.

    H.D Kumarswamy

    ಬಿಟ್ ಕಾಯಿನ್ ಬರೀ ಗೊಂದಲ:
    ಬಿಟ್ ಕಾಯಿನ್ ವಿಚಾರದಲ್ಲಿ ಬರೀ ಗೊಂದಲ ಎಬ್ಬಿಸಲಾಗುತ್ತಿದೆ. ತನಿಖೆಯನ್ನು ಇಡಿಗೆ (ಜಾರಿ ನಿರ್ದೇಶನಾಲಯ) ಕೊಡಲಾಗಿದೆ ಅಂತಿದ್ದಾರೆ. ನಿಖರ ಮಾಹಿತಿ ಯಾರ ಬಳಿಯೂ ಇಲ್ಲ. ಮುಖ್ಯ ಆರೋಪಿಯನ್ನು ಏಳೆಂಟು ಬಾರಿ ಅರೆಸ್ಟ್ ಮಾಡಿ ತನಿಖೆಗೆ ಒಳಪಡಿಸಲಾಗಿದೆ. ಸರ್ಕಾರವು ಈ ಹಗರಣದ ಬಗ್ಗೆ ನುರಿತ ತಜ್ಞರ ಸಹಕಾರ ಪಡೆದು ತನಿಖೆ ನಡೆಸಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದರು. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಜ್‍ಕುಮಾರ್ ರಾವ್ – ಫೋಟೋ ವೈರಲ್

    ಆರೋಪಿ ಶ್ರೀಕಿ ಜೀವಕ್ಕೆ ಅಪಾಯ ಇದೆ. ಆತನಿಗೆ ಪೊಲೀಸ್ ರಕ್ಷಣೆ ಕೊಡಬೇಕು ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ, “ಇಷ್ಟು ವರ್ಷ ಆತನ ಜೀವಕ್ಕೆ ಅಪಾಯ ಇರಲಿಲ್ಲ. ಈಗ ಅವನಿಗೆ ಜೀವ ಬೆದರಿಕೆ ಇದೆ ಎಂದರೆ ಹೇಗೆ? ಕಾಂಗ್ರೆಸ್ ಪಕ್ಷಕ್ಕೆ ಈ ಬಗ್ಗೆ ನಿಖರ ಮಾಹಿತಿ ಇರಬೇಕು. ರಕ್ಷಣೆ ಕೊಡೋದು ತಪ್ಪಲ್ಲ, ಕೊಡಲಿ. ಇದುವರೆಗೆ ಎಂಥೆಂತವರಿಗೋ ರಕ್ಷಣೆ ನೀಡಲಾಗಿದೆ. ಇವರಿಗೂ ಕೊಡಲಿ, ಬೇಡ ಅಂದವರು ಯಾರು?” ಎಂದರು.

    ಇದೇ ವೇಳೆ ಪೇಜಾವರ ಶ್ರೀಗಳ ಬಗ್ಗೆ ಹಾಗೂ ತಮ್ಮ ಗ್ರಾಮ ವಾಸ್ತವ್ಯದ ಬಗ್ಗೆ ಸಂಗೀತ ನಿರ್ದೇಶಕ ಹಂಸಲೇಖ ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಮುಖ್ಯಮಂತ್ರಿ ಆಗಿದ್ದಾಗ ನಾನು ಮಾಡಿದ ಗ್ರಾಮ ವಾಸ್ತವ್ಯಕ್ಕೆ ಮಹಾತ್ಮ ಗಾಂಧೀಜಿ ಅವರೇ ಸ್ಫೂರ್ತಿ ಮತ್ತು ಆದರ್ಶ. ಗ್ರಾಮ ವಾಸ್ತವ್ಯ ಅನ್ನೋದು ನಾಟಕೀಯವಾಗಿ ಮಾಡಿಲ್ಲ. ಆತ್ಮತೃಪ್ತಿಗಾಗಿ, ಜನರ ಪರ ಕೆಲಸ ಮಾಡುವುದಕ್ಕೆ ನಾನು ಆ ಕಾರ್ಯಕ್ರಮ ಮಾಡಿದ್ದೇನೆ”. ನನ್ನ ಗ್ರಾಮ ವಾಸ್ತವ್ಯದಿಂದ ಅನೇಕರಿಗೆ ಅನುಕೂಲವಾಗಿದೆ. ಯಾರನ್ನೋ ಮೆಚ್ಚಿಸಲಿಕ್ಕೆ ನಾನು ಗ್ರಾಮ ವಾಸ್ತವ್ಯ ಮಾಡಲಿಲ್ಲ. ಆ ವಿಚಾರಗಳ ಬಗ್ಗೆ ಚರ್ಚೆ ಮಾತನಾಡುವುದು ಅಗತ್ಯ ಇರಲಿಲ್ಲ. ಮುಖ್ಯವಾಗಿ ಧರ್ಮ ಹಾಗೂ ಧಾರ್ಮಿಕ ಗುರುಗಳ ಬಗ್ಗೆ ಹೀಗೆ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು. ಇದನ್ನೂ ಓದಿ: ತಮ್ಮ ಕಲಾ ಕೌಶಲ್ಯದ ಮೂಲಕ ಅಪ್ಪುಗೆ ಗೌರವ ನಮನ ಸಲ್ಲಿಸಿದ ಕಲಾವಿದ

    ಸುದ್ದಿಗೋಷ್ಠಿಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಸರವಣ, ಜೆಡಿಎಸ್ ನಗರ ಅಧ್ಯಕ್ಷ ಆರ್.ಪ್ರಕಾಶ್ ಉಪಸ್ಥಿತರಿದ್ದರು.