Tag: pressmeet

  • ಕಾಂಗ್ರೆಸ್ ಸಚಿವರ ವಿರುದ್ಧ ಮತ್ತೆ ಸಿಡಿದೆದ್ದ ಲಕ್ಷ್ಮಿ ಹೆಬ್ಬಾಳ್ಕರ್

    ಕಾಂಗ್ರೆಸ್ ಸಚಿವರ ವಿರುದ್ಧ ಮತ್ತೆ ಸಿಡಿದೆದ್ದ ಲಕ್ಷ್ಮಿ ಹೆಬ್ಬಾಳ್ಕರ್

    ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮತ್ತೆ ಕಾಂಗ್ರೆಸ್ ನಾಯಕರ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕುವ ಮೂಲಕ ಸಿಡಿದೆದ್ದಿದ್ದಾರೆ.

    ರೈತರ ವಿರೋಧದ ನಡುವೆಯೂ ಹಲಗಾ ಗ್ರಾಮದಲ್ಲಿ ಎಸ್‍ಟಿಪಿ ಪ್ಲಾಂಟ್ ಕಾಮಗಾರಿ ಆರಂಭ ಆದ ಹಿನ್ನೆಲೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಏಕಾಏಕಿ ಬೆಳಗ್ಗೆ 8 ಗಂಟೆಗೆ ಹೋಗಿ ರೈತರ ಜಮೀನು ಕಬ್ಜಾ ಮಾಡಿ ಎಂದು ಹೇಳಿ ಇಂದಿಗೆ ಒಂಬತ್ತು ದಿನಗಳೇ ಕಳೆದಿದೆ. ನಾನು ಇಷ್ಟು ದಿನ ಸಿಎಲ್‍ಪಿ(ಕಾಂಗ್ರೆಸ್ ಶಾಸಕಾಂಗ ಸಭೆ) ಸಭೆಗೆಂದು ಬೆಂಗಳೂರಿಗೆ ಹೋಗಿದ್ದೆ. ಅದಕ್ಕಿಂತ ಒಂದು ದಿನದ ಮೊದಲು ನಾನು ಜಿಲ್ಲಾಧಿಕಾರಿಗಳನ್ನು ಹಾಗೂ ಚಂದ್ರಪ್ಪ ಅವರನ್ನು ಡಿಸಿ ಕಚೇರಿಯಲ್ಲಿ ಭೇಟಿ ಮಾಡಿದ್ದೆ. ಆದರೆ ಆ ಸಂದರ್ಭದಲ್ಲಿ ಅವರು ನನ್ನ ಗಮನಕ್ಕೆ ತರಲಿಲ್ಲ ಹಾಗೂ ನಿಮ್ಮ ಸಹಕಾರ ನೀಡಿ ಎಂದು ಕೇಳಲಿಲ್ಲ ಎಂದರು.

    ಅಭಿವೃದ್ಧಿಗೆ ನಾನು ಎಂದಿಗೂ ವಿರೋಧ ವ್ಯಕ್ತಪಡಿಸಲಿಲ್ಲ. ಆದರೆ ಹಲಗಾ ಗ್ರಾಮಕ್ಕೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಪದೇ ಪದೇ ಅನ್ಯಾಯ ಆಗುತ್ತಿದೆ. 2008ರಲ್ಲಿ ಇದೇ ಹಲಗಾ ಗ್ರಾಮಸ್ಥರು ಜಮೀನನ್ನು ಸುವರ್ಣ ಸೌಧ ಕಟ್ಟಲು ವಶ ಪಡೆದುಕೊಂಡಿದ್ದರು. ಆಗ ರೈತರ ಹೋರಾಟ ನಡೆಯಿತು. 2009ರಲ್ಲಿ ಅಂದಿನ ಸರ್ಕಾರ ಎಸ್‍ಟಿಪಿ ಪ್ಲಾಂಟ್ ಹಲಗಾ ಊರಿನಲ್ಲಿ ಮಾಡಬೇಕು ಎಂದು ಹೇಳಿ ನಿರ್ಣಯ ತೆಗೆದುಕೊಂಡಿದ್ದರು. 1 ವರ್ಷದ ಮೊದಲು 13 ಲಕ್ಷ ರೂ. ಕೊಟ್ಟಿದ್ದರು. 1 ವರ್ಷದ ನಂತರ 3 ಲಕ್ಷ ರೂ. ನೀಡಿದ್ದಾರೆ. ಈ ರೀತಿ ಅನ್ಯಾಯ ಆಗಿದ್ದಕ್ಕೆ ರೈತರು ಜಮೀನು ನೀಡುತ್ತಿಲ್ಲ ಎಂದು ಹೇಳಿದ್ದಾರೆ.

    ಸುವರ್ಣಸೌಧದ ಸುತ್ತಮುತ್ತ ಗ್ರೀನ್ ಬೆಲ್ಟ್ ಎಂದು ಮಾಡಿದ್ದಾರೆ. ಗ್ರೀನ್ ಬೆಲ್ಟ್ ಮಾಡಿದರೆ ಅಲ್ಲಿ ಮನೆ ಕಟ್ಟಲು ಆಗುವುದಿಲ್ಲ, ಮಾರುವುದಕ್ಕೂ ಆಗಲ್ಲ. ಬಹಳಷ್ಟು ಬಡಜನರು ಇದ್ದಾರೆ. ಈ ಭಾಗದ ಜನರು ದುಃಖಗಳನ್ನು ಸರಿಪಡಿಸಬೇಕು ಎಂಬ ಉದ್ದೇಶದಿಂದ ಸುವರ್ಣಸೌಧ ಕಟ್ಟಿದ್ದಾರೆ. ನಾನು ರೈತರನ್ನು ಕರೆದು ಸಮಾಧಾನದಿಂದ ಮಾತನಾಡಿದ್ದೇನೆ. ಈ ಕಡೆ ಜಿಲ್ಲಾಡಳಿತದ ಬಳಿ ನಾವು ಮಾತನಾಡುತ್ತೇವೆ ಎಂದು ಉತ್ತರಿಸುತ್ತಾರೆ. ಕೆಯೂಡಬ್ಲೂಎಸ್ ರೈತರು ಬೆಳೆದಂತಹ ಬೆಳೆಗೆ ಬೆಲೆ ಜಾಸ್ತಿ ಮಾಡುತ್ತಿದ್ದೀರಿ. ಆದರೆ ಇದೂವರೆಗೂ ಪರಿಹಾರ ನೀಡಿಲ್ಲ. ಅನ್ಯಾಯ ಆಗಿದೆ ಇದನ್ನು ಸರಿ ಮಾಡುವ ಕೆಲಸ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಮಾಡಬೇಕಿದೆ ಎಂದರು.

    ಯಾವುದೇ ಕಾರಣಕ್ಕೂ ಬೆಳಗಾವಿ ಗ್ರಾಮೀಣದ ಜಮೀನು ಕೊಡುವುದಿಲ್ಲ ಎಂದು ನಿರ್ಧರಿಸಿದ್ದೇವೆ. ಈಗ ಏನೇ ಕೆಲಸ ಆಗಬೇಕು ಎಂದರೆ ಬೆಳಗಾವಿ ಗ್ರಾಮೀಣವನ್ನು ಹಿಡಿಯುತ್ತಾರೆ. ಇದೇ ಹಲಗಾ ಊರಿನ ಜನತೆ ಕುಡಿಯುವುದಕ್ಕೆ ನೀರು ಇಲ್ಲ. ನೀರು ಬೇಕು ಎಂದರೆ ಕಾರ್ಪೋರೇಶನ್ ನವರು ತಿರುಗಿ ಸಹ ನೋಡುವುದಿಲ್ಲ. ಜಿಲ್ಲಾಡಳಿತ ನಮ್ಮ ಕಡೆ ನೋಡುವುದಿಲ್ಲ. ನಮ್ಮ ಧ್ವನಿಗೆ ಯಾರೂ ಕಿವಿ ಕೊಡುವುದಿಲ್ಲ. ಅವರಿಗೆ ಹೃದಯಾನೇ ಇಲ್ಲ ಎಂದು ಆರೋಪಿಸಿದ್ದಾರೆ. ಮುಂದಿನ ಹೋರಾಟ ಜಿಲ್ಲಾ ಮಂತ್ರಿಗಳಿಗೆ ಬಯಸುತ್ತೇನೆ. ತಮ್ಮ ಒಂದು ನೇತೃತ್ವದಲ್ಲಿ ಒಂದು ನಿಯೋಗ ತೆಗೆದುಕೊಂಡು ತುರ್ತಾಗಿ ಸಿಎಂ ಅವರ ಜೊತೆ ಸಭೆ ನಡೆಯಬೇಕು. ಸಭೆಯಲ್ಲಿ ರೈತರ ಪರಿಹಾರ, ಅವರ ಭವಿಷ್ಯದ ಬಗ್ಗೆ ತೀರ್ಮಾನ ಮಾಡಬೇಕು. ಜಿಲ್ಲಾ ಮಂತ್ರಿಯೇ ಖುದ್ದಾಗಿ ನೋಡಿಕೊಳ್ಳಬೇಕು ಎಂದಿದ್ದಾರೆ.

  • ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಕೈ ವಿರುದ್ಧ ವಿಶ್ವನಾಥ್ ಕಿಡಿ

    ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಕೈ ವಿರುದ್ಧ ವಿಶ್ವನಾಥ್ ಕಿಡಿ

    – ಮೈಸೂರು ನೀಡದೇ ದೇವೇಗೌಡರಿಗೆ ಅನ್ಯಾಯ
    – ಎಚ್‍ಡಿಡಿ ಸೋಲು ನಾಡಿನ ಸೋಲು
    – ಹೆಸರಿಗೆ ಮಾತ್ರ ಸಮನ್ವಯ ಸಮಿತಿ

    ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಗೆ ಎಚ್.ವಿಶ್ವನಾಥ್ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಇಂದು ನಾನು ನೈತಿಕ ಹೊಣೆಗಾರಿಕೆ ಹೊತ್ತು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈವರೆಗೂ ನಾನು ಜೆಡಿಎಸ್ ರಾಜ್ಯಾಧ್ಯಕ್ಷನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಲೋಕಸಭಾ ಚುನಾವಣೆಯ ಫಲಿತಾಂಶ ಮೇ 23ಕ್ಕೆ ಬಂದ ಮಾರನೇ ದಿನವೇ ನಾನು ರಾಜೀನಾಮೆ ನೀಡುವುದಾಗಿ ನಮ್ಮ ವರಿಷ್ಠರಾದ ದೇವೇಗೌಡರ ಬಳಿ ಹೇಳಿದ್ದೆ. ಆಗ ಅವರು ನನ್ನ ರಾಜೀನಾಮೆಯನ್ನ ಸ್ವೀಕರಿಸಿರಲಿಲ್ಲ. ಆದ್ದರಿಂದ ನಾನು ರಾಜೀನಾಮೆ ನೀಡುವುದು ತಡವಾಯ್ತು ಎಂದು ಹೇಳಿದರು. ಇದನ್ನೂ ಓದಿ:ಸುದ್ದಿಗೋಷ್ಠಿಗೂ ಮುನ್ನ ದೇವೇಗೌಡ್ರಿಗೆ ವಿಶ್ವನಾಥ್ ಪತ್ರ!

    ಸಾಮಾನ್ಯವಾಗಿ ಜನತಂತ್ರ ವ್ಯವಸ್ಥೆಯಲ್ಲಿ ಚುನಾವಣೆಗಳಲ್ಲಿ ಪಕ್ಷ ಸೋತರೆ ನೈತಿಕ ಹೊಣೆಗಾರಿಕೆ ಹೊತ್ತುಕೊಂಡು ರಾಜೀನಾಮೆ ನೀಡುವುದು ವಾಡಿಕೆಯಾಗಿ ನಡೆದುಕೊಂಡು ಬಂದಿದೆ. ನಾನು ಬಹಿರಂಗವಾಗಿ ರಾಜೀನಾಮೆ ನೀಡಬೇಕು ಎಂದು ಮಾಧ್ಯಮಗಳ ಮುಂದೆ ಬಂದಿದ್ದು, ಈ ಕಾರಣಕ್ಕೆ ಸುದ್ದಿಗೋಷ್ಠಿ ನಡೆಸುತ್ತಿದ್ದೇನೆ ಎಂದು ತಿಳಿಸಿದರು.

    ರಾಜೀನಾಮೆ ನೀಡಲು ಕಾರಣವೇನು ಎಂಬ ಕುರಿತು ದೇವೇಗೌಡರಿಗೆ 4 ಪುಟಗಳ ಪತ್ರವನ್ನು ವಿಶ್ವನಾಥ್ ಅವರು ಬರೆದಿದ್ದಾರೆ. ಜೊತೆಗೆ ಪಕ್ಷದ ಬಗ್ಗೆ ಕೂಡ ಮತ್ತೊಂದು ಪತ್ರವನ್ನು ಬರೆದು, ಪಕ್ಷದ ಕಾರ್ಯವೈಖರಿ ಹಾಗೂ ನಮಗಿರುವ ಅಸಮಾಧಾನದ ಬಗ್ಗೆ ವಿವರಿಸಿದ್ದಾರೆ. ಆ ಪತ್ರಗಳನ್ನು ಸುದ್ದಿಗೋಷ್ಠಿಯಲ್ಲಿ ಓದಿ ಮಾಧ್ಯಮಗಳಿಗೆ ತಿಳಿಸಿದರು. ಅಲ್ಲದೆ ಸುದ್ದಿಗೋಷ್ಠಿ ಬಳಿಕ ಈ ರಾಜೀನಾಮೆ ಪತ್ರವನ್ನು ದೇವೇಗೌಡರಿಗೆ ನೀಡಲಿದ್ದೇನೆ ಎಂದು ಸ್ಪಷ್ಟಪಡಿಸಿದರು.

    ದೇವೇಗೌಡರಿಗೆ ಮೈಸೂರಿನಲ್ಲಿ ಸ್ಥಾನ ನೀಡದೇ ತುಮಕೂರಿನಲ್ಲಿ ಸ್ಥಾನ ಕೊಟ್ಟರು. ಇದು ಕಾಂಗ್ರೆಸ್ ಜೆಡಿಎಸ್‍ಗೆ ಮಾಡಿದ ಅನ್ಯಾಯ. ಹೀಗಾಗಿ ತುಮಕೂರಿನಲ್ಲಿ ಸ್ಪರ್ಧೆ ಮಾಡಿ ನಮಗೆ ಸೋಲಾಯ್ತು. ದೇವೇಗೌಡರನ್ನು ಖೆಡ್ಡಾಗೆ ತಳ್ಳಿ ಸೋಲಿಸಿದರು. ದೇವೇಗೌಡರ ಸೋಲು ನಾಡಿನ ಸೋಲು. ಮಂಡ್ಯ ಸೋಲು ಕೂಡಾ ಕಾಂಗ್ರೆಸ್, ಜೆಡಿಎಸ್ ನಾಯಕರ ಕೊಂಕು ನುಡಿಗಳಿಂದ ಆಗಿದ್ದು ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

    ಸಮನ್ವಯ ಸಮಿತಿ ಕೇವಲ ಹೆಸರಿಗೆ ಮಾತ್ರ ಸಮಿತಿ ಆಗಿದೆ ಅಷ್ಟೇ. ಸಮನ್ವಯ ಸಮಿತಿ ಸಮನ್ವಯ ಸಾಧಿಸಲು ವಿಫಲವಾಗಿದೆ. ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಕೂಡ ಜಾರಿ ಆಗಿಲ್ಲ. ಸಮನ್ವಯ ಸಮಿತಿ ಸಿದ್ದರಾಮಯ್ಯ ಅವರ ಕೈಗೊಂಬೆ ಅಷ್ಟೇ. ಹುಣಸೂರು ಕ್ಷೇತ್ರದ ಜನರ ಸೇವೆ ಮಾಡಲು ನಿರ್ಧಾರ ಮಾಡಿದ್ದೇನೆ. ಹೀಗಾಗಿ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ನೇರವಾಗಿ ಅಸಮಾಧಾನ ವ್ಯಕ್ತಪಡಿಸಿದರು.

  • ಎಚ್‍ಡಿಕೆಯಿಂದ ತುರ್ತು ಸುದ್ದಿಗೋಷ್ಠಿ!

    ಎಚ್‍ಡಿಕೆಯಿಂದ ತುರ್ತು ಸುದ್ದಿಗೋಷ್ಠಿ!

    ಬೆಂಗಳೂರು: ಮಾಧ್ಯಮಗಳ ಮೇಲೆ ಪದೇ ಪದೇ ಮುನಿಸಿಕೊಳ್ಳುತ್ತಿದ್ದ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿಯವರು ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ.

    ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಎಚ್‍ಡಿಕೆ ಪತ್ರಿಕಾಗೋಷ್ಠಿಯನ್ನು ಕರೆದಿದ್ದಾರೆ. ಮಂಡ್ಯ, ತುಮಕೂರಿನಲ್ಲಿ ಫಲಿತಾಂಶ ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಹಿನ್ನೆಲೆಯಲಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮನೆಯಿಂದ ತಾಜ್ ವೆಸ್ಟೆಂಡ್ ಹೋಟೆಲ್ ಗೆ ತೆರಳಿದ್ದಾರೆ.

    Image result for hd kumaraswamy

    ಯಾವ ಕಾರಣಕ್ಕೆ ಸುದ್ದಿಗೋಷ್ಠಿ ಕರೆದಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ.

  • ನಿಮಗೆ ಜನ ಸೇವಕ ಬೇಕೋ? ಅಳುವ ನಾಯಕ ಬೇಕೋ? ನೀವೇ ನಿರ್ಧರಿಸಿ: ನಟ ಉಪೇಂದ್ರ

    ನಿಮಗೆ ಜನ ಸೇವಕ ಬೇಕೋ? ಅಳುವ ನಾಯಕ ಬೇಕೋ? ನೀವೇ ನಿರ್ಧರಿಸಿ: ನಟ ಉಪೇಂದ್ರ

    ಚಿಕ್ಕಬಳ್ಳಾಪುರ: ನಿಮಗೆ ಜನ ಸೇವಕ ಬೇಕೋ? ಅಳುವ ನಾಯಕ ಬೇಕೋ ಎನ್ನುವುದನ್ನು ನೀವೇ ನಿರ್ಧರಿಸಿ ಎಂದು ನಟ ಉಪೇಂದ್ರ ಹೇಳಿದ್ದಾರೆ.

    ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಮುನಿರಾಜು ಪರ ಪಕ್ಷದ ಸಂಸ್ಥಾಪಕ ನಟ ಉಪೇಂದ್ರ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಅವರು, ನಮ್ಮದು ರಾಜಕಾರಣ ಅಲ್ಲ ಪ್ರಜಾಕಾರಣ, 72 ವರ್ಷಗಳಿಂದಲೂ ಇರುವ ರಾಜಕಾರಣದ ಮನಸ್ಥಿತಿಯನ್ನು ಜನರಿಂದ ಬದಲಾವಣೆ ಮಾಡುವ ಸದುದ್ದೇಶದಿಂದಲೇ ಪಕ್ಷ ಅಸ್ತಿತ್ವಕ್ಕೆ ಬಂದಿದೆ. ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಉತ್ತಮ ಪ್ರಜಾಕೀಯ ಪಕ್ಷದಿಂದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ನಾವು ನಾಯಕರೂ ಅಲ್ಲ, ನಾವೂ ಜನರ ಸೇವಕರು, ಜನರಿಗಾಗಿ ಕೂಲಿ ಪಡೆದು ಕೆಲಸ ಮಾಡುವ ಕಾರ್ಮಿಕರಾಗಿರುತ್ತೇವೆ ಎಂದರು.

    ಎಲ್ಲಾ ರಾಜಕಾರಣಿಗಳು, ಪಕ್ಷಗಳಂತೆ ನಾವು ಯಾವುದೇ ಚುನಾವಣಾ ರ್ಯಾಲಿ, ಸಭೆ, ಸಮಾರಂಭಗಳನ್ನು ನಡೆಸುವುದಿಲ್ಲ, ಯಾವುದೇ ಪೊಳ್ಳು ಭರವಸೆಗಳ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡುವುದಿಲ್ಲ. ಕೇವಲ ಪ್ರಚಾರದ ಭಿತ್ತಿ ಪತ್ರಗಳನ್ನಷ್ಟೇ ಜನರಿಗೆ ನೀಡಿ ತಮ್ಮ ಅಭ್ಯರ್ಥಿಯ ಆಟೋ ಗುರುತಿಗೆ ಮತ ನೀಡಿ ಎಂದು ಮನವಿ ಮಾಡ್ತೇವೆ. ಅದೇ ಭಿತ್ತಿ ಪತ್ರದಲ್ಲಿ ನಿಮ್ಮ ಸಮಸ್ಯೆಗಳು, ಬೇಡಿಕೆಗಳು. ಆದೇಶಗಳನ್ನು ನಮಗೆ ಕೊಡುವಂತೆ ಜನರ ಬಳಿ ತಿಳಿಸುತ್ತೇವೆ ಎಂದು ಹೇಳಿದರು.

    ಜನರೇ ಪ್ರಜಾಕಾರಣದ ಸಿದ್ದಾಂತಗಳನ್ನು ಮೆಚ್ಚಿ ಮತ ನೀಡಬೇಕು ಹೊರತು ನಾವು ರ್ಯಾಲಿ ಸಭೆ ಸಮಾರಂಭಗಳ ಮೂಲಕ ಮತದಾರರನ್ನು ಮುಟ್ಟುವುದಿಲ್ಲ. ಒಬ್ಬರಿಂದ ಒಬ್ಬರಿಗೆ ಮಾಧ್ಯಮಗಳ ಮೂಲಕ ಜನರಿಗೆ ಪ್ರಜಾಕಾರಣದ ಸಿದ್ದಾಂತಗಳು ತಿಳಿದು ಒಂದು ದಿನ ಪ್ರಜಾಕಾರಣ ಪಕ್ಷ ಮೇಲೆ ಬರುತ್ತದೆ. ಹೀಗಾಗಿ ಒಂದು ವೇಳೆ ಪ್ರಜಾಕಾರಣ ಸಿದ್ದಾಂತಗಳ ವಿಭಿನ್ನ ಪ್ರಯತ್ನ ಯಶಸ್ವಿಯಾದರೆ ಇಡೀ ಇಂಡಿಯಾವೇ ಪ್ರಜಾಕಾರಣಕ್ಕೆ ಬದಲಾಗುತ್ತೆ. ಒಂದಲ್ಲ ಒಂದು ದಿನ ಪ್ರಜಾಕಾರಣಕ್ಕೆ ಯಶಸ್ಸು ಸಿಕ್ಕೇ ಸಿಗುತ್ತೆ ಎಂದು ಆತ್ಮವಿಶ್ವಾಸದ ಮಾತುಗಳನ್ನಾಡಿದರು.

    ನಟ ಉಪೇಂದ್ರ ಜೊತೆ ಸೆಲ್ಫಿಗಾಗಿ ಸಾಕಷ್ಟು ಮಂದಿ ಮುಗಿಬಿದ್ದರು. ಮತ್ತೊಂದೆಡೆ ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಜೊತೆ ಖಾಕಿ ಶರ್ಟ್, ಕರಿ ಪ್ಯಾಂಟ್, ಟೈ ಧರಿಸಿ, ಗುರುತಿನ ಚೀಟಿ ಹಾಕಿ ಅಭ್ಯರ್ಥಿ ಮುನಿರಾಜು ಭಾಗವಹಿಸಿದ್ದು ವಿಶೇಷವಾಗಿತ್ತು. ಅಭ್ಯರ್ಥಿಗಳ ಪರ ಮತಯಾಚನೆ ಮಾಡುವ ಉದ್ದೇಶದಿಂದ ತಾವು ಸ್ಪರ್ಧೆ ಮಾಡುತ್ತಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ಉಪೇಂದ್ರ ತಿಳಿಸಿದರು.

  • ಭಾರತ ಬದಲಾಗಲು ಮೋದಿ ಕಾರಣ, ಮಾ.16ಕ್ಕೆ ಮೊದಲ ಪಟ್ಟಿ ರಿಲೀಸ್: ಬಿಎಸ್‍ವೈ

    ಭಾರತ ಬದಲಾಗಲು ಮೋದಿ ಕಾರಣ, ಮಾ.16ಕ್ಕೆ ಮೊದಲ ಪಟ್ಟಿ ರಿಲೀಸ್: ಬಿಎಸ್‍ವೈ

    – ಸಿಎಂ ಎಚ್‍ಡಿಕೆ ವಿರುದ್ಧ ವಾಗ್ದಾಳಿ
    – ಪ್ರಣಾಳಿಕೆಯಲ್ಲಿ ಮಹಾದಾಯಿ ವಿಚಾರ ಸೇರಿಸ್ತೀವಿ

    ಬೆಂಗಳೂರು: ಪ್ರಧಾನಿಯವರ ಸಾಧನೆಯೇ ರಾಜ್ಯದಲ್ಲಿ ನನಗೆ ರಕ್ಷಾ ಕವಚವಾಗಿದೆ. ಅವರ ನಾಯಕತ್ವ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಬೇರೆ ಬೇರೆ ದೇಶಗಳಿಂದ ಮೋದಿಯವರಿಗೆ ಪ್ರಶಸ್ತಿಗಳು ಬಂದಿವೆ. ಮೋದಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಭಾರತದ ಆರ್ಥಿಕ ನೀತಿ ಎಲ್ಲರನ್ನು ಬೆಚ್ಚಿ ಬೆರಗಾಗುವಂತೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕೈಗೊಂಡ ಯೋಜನೆಗಳು ಹಾಗೂ ವ್ಯಕ್ತಿತ್ವವನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಡಿ ಹೊಗಳಿದ್ದಾರೆ.

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಖಾಸಗಿ ಹೋಟೆಲಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾರ್ಚ್ 15 ರಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಇದೆ. ಮರುದಿನ ಅಂದ್ರೆ ಮಾರ್ಚ್ 16ಕ್ಕೆ ದೆಹಲಿಗೆ ಹೋಗ್ತೀನಿ. ಅಂದು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡ್ತೀವಿ. 20 ರಿಂದ 22 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡುತ್ತೇವೆ. ಬಹುತೇಕ ಎಲ್ಲ 16 ಹಾಲಿ ಸಂಸದರಿಗೂ ಟಿಕೆಟ್ ಸಿಗುತ್ತದೆ. ಶೋಭಾ ಕರಂದ್ಲಾಜೆ ಸೇರಿದಂತೆ ಎಲ್ಲರಿಗೆ ಟಿಕೆಟ್ ಕೊಡಲಾಗುತ್ತಿದೆ. ಉಳಿದ ಕಡೆಗಳಲ್ಲಿ ಬಿಜೆಪಿ ಅಭ್ಯರ್ಥಿ ಪಟ್ಟಿ ಸಿದ್ಧಪಡಿಸ್ತಾ ಇದ್ದೀವಿ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ತೇಜಸ್ವಿನಿ ಅನಂತಕುಮಾರ್ ಸ್ಪರ್ಧೆ ಮಾಡ್ತಾರೆ. ಇನ್ನಷ್ಟು ಅನ್ಯ ಪಕ್ಷದ ಮುಖಂಡರು ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಇನ್ನೆರಡು ದಿನ ಕಾಯಿರಿ ಎಂದು ಹೇಳಿದ್ರು.

    ಭಾರತ ಬದಲಾಗಲು ಮೋದಿ ಕಾರಣ:
    5 ವರ್ಷದ ಹಿಂದೆ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಸರ್ಕಾರ ಜನರಿಗೆ ಕೊಟ್ಟ ಭರವಸೆಗಳನ್ನ ಈಡೇರಿಸುವತ್ತ ದಾಪುಗಾಲು ಇಟ್ಟಿದೆ. ಕಳೆದ ಚುನಾವಣೆಯ ವೇಳೆ ನಾಲ್ಕು ಯೋಜನೆಗಳನ್ನ ರೂಪಿಸಲಾಗಿತ್ತು. ಅವುಗಳೆಂದರೆ ಭ್ರಷ್ಟಾಚಾರ ನಿರ್ಮೂಲನೆ, ಜನ ಸಾಮಾನ್ಯರಿಗೆ ಯೋಜನೆಗಳನ್ನ ತಲುಪಿಸೋದು, ಗಡಿಗಳ ರಕ್ಷಣೆ, ವಿದೇಶಗಳಲ್ಲಿ ಭಾರತದ ಸಂಬಂಧ ಗಟ್ಟಿಗೊಳಿಸುವುದಾಗಿತ್ತು. ಈ ನಾಲ್ಕು ಮುಕ್ಕಾಲು ವರ್ಷದಲ್ಲಿ ಮೋದಿಯವರು ಭ್ರಷ್ಟಾಚಾರ ಮುಕ್ತವಾದ ಸರ್ಕಾರವನ್ನು ಕೊಟ್ಟಿದ್ದಾರೆ. ಇಂದಿನ ಭಾರತ ಬೆನ್ನು ಬಾಗಿಸುವ ಭಾರತವಾಗಿಲ್ಲ. ಬದಲಾಗಿ ಸೆಟೆದು ನಿಂತು ಹೋರಾಡುವ ಭಾರತವಾಗಿ ಬದಲಾಗಿದೆ ಎಂದು ಹೇಳಿದ್ರು.

    ಪುಲ್ವಾಮಾ ಘಟನೆ ಬಳಿಕ ಭಾರತವನ್ನು ಜಗತ್ತಿನ ಹಲವು ರಾಷ್ಟ್ರಗಳು ಬೆಂಬಲಿಸಿವೆ. ಪಾಕಿಸ್ತಾನವನ್ನು ಎಲ್ಲಾ ದೇಶಗಳು ಖಂಡಿಸಿವೆ. ಅಲ್ಲದೇ ಭಾರತದ ನಿಲುವಿಗೆ ಬೆಂಬಲ ಕೊಟ್ಟಿವೆ. ಇದು ಒಂದು ರೀತಿಯಲ್ಲಿ ಮೋದಿಜೀಯವರಿಗೆ ರಾಜತಾಂತ್ರಿಕ ಗೆಲುವಾಗಿದೆ. ಇಂದಿನ ಭಾರತ ಬೆನ್ನು ಬಾಗಿಸುವ ಭಾರತವಲ್ಲ, ಸೆಟೆದು ನಿಂತು ಪ್ರತ್ಯುತ್ತರ ಕೊಡುವ ಭಾರತವಾಗಿ ನಿರ್ಮಾಣವಾಗಿದೆ. ಭಾರತ ಬದಲಾಗಿದೆ. ಇದಕ್ಕೆ ಕಾರಣ ಮೋದಿಯವರ ದಿಟ್ಟ ನಿಲುವು ಎಂದು ಅವರು ಹೇಳಿದ್ರು.

    ಆರ್ಥಿಕ ವಿಚಾರದಲ್ಲಿ ಮುಂದಿದ್ದೇವೆ:
    ಮಂತ್ರಿ ಮಂಡಲದ ಯಾವುದೇ ಒಬ್ಬ ಸದಸ್ಯನ ಮೇಲೆ ಭ್ರಷ್ಟಾಚಾರದ ಆರೋಪವಿಲ್ಲ. ಅಭಿವೃದ್ಧಿಯತ್ತ ಹೆಜ್ಜೆ ಇಡುತ್ತಿದ್ದೇವೆ. ಮುಂದುವರಿದ ದೇಶಗಳಿಗೆ ಸವಾಲು ಹಾಕುವ ಹಂತಕ್ಕೆ ನಾವು ಬೆಳೆದಿದ್ದೇವೆ. ಆರ್ಥಿಕ ಸದೃಢತೆ ಮತ್ತು ಬೆಳೆಯುತ್ತಿರುವ ದೇಶವಾದ ಫ್ರಾನ್ಸ್ ಹಿಂದೆ ಹಾಕಿ ಅದೇ ಜಾಗಕ್ಕೆ ನಾವು ಬಂದಿದ್ದೇವೆ. ಆರ್ಥಿಕ ಪ್ರಗತಿಯಲ್ಲಿ ನಾವು ಅಮೆರಿಕ ಹಾಗೂ ಫ್ರಾನ್ಸ್ ಗೆ ಸಮವಾಗಿದ್ದೇವೆ ಅಂದ್ರು.

    ಸಿಎಂ ವಿರುದ್ಧ ವಾಗ್ದಾಳಿ:
    ರೈತರ ಸಾಲಮನ್ನಾ ಮಾಡ್ತೀವಿ ಎಂದು ಹೇಳಿ 9 ತಿಂಗಳಾಯ್ತು. ನೀವು ಸಾಲಮನ್ನಾ ಮಾಡಿರೋದು ಬರೀ 4500 ಕೋಟಿ ಮಾತ್ರ. ಈ ಸುಳ್ಳು ಭರವಸೆಯನ್ನು ಕೊಡದಿದ್ದರೆ 37 ಸೀಟು ಅಲ್ಲ, 20 ಸೀಟು ಗೆಲ್ತಿರಲಿಲ್ಲ. 37 ಸೀಟು ಇಟ್ಕೊಂಡು ಅಧಿಕಾರ ನಡೆಸ್ತಿದ್ದಾರೆ. ಹೋಗ್ಲಿ ಅವರ ನಡುವೆ ಹೊಂದಾಣಿಕೆ ಇದೆಯಾ..? ಅಭಿವೃದ್ಧಿ ಬಗ್ಗೆ ಏನ್ ಕಾರ್ಯಕ್ರಮ ರೂಪಿಸಿದ್ದಾರೆ ಎಂದು ಪ್ರಶ್ನೆಗಳ ಮೂಲಕ ನೇರವಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ರು.


    ಕುಮಾರಸ್ವಾಮಿ ಅವರ ಮೇಲೆ ಕಾಂಗ್ರೆಸ್ ನ 20 ಶಾಸಕರು ಅಸಮಾಧಾನ ಹೊಂದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ಏನಾಗುತ್ತೆ ಕಾದುನೋಡಿ. ಸರ್ಕಾರ ರಚನೆ ಬಗ್ಗೆ ಈಗ ಮಾತನಾಡುವುದಿಲ್ಲ. ಈಗ ಲೋಕಸಭಾ ಚುನಾವಣೆ ಕಡೆ ಮಾತ್ರ ನಮ್ಮ ಗಮನವಿದೆ. ಉಮೇಶ್ ಜಾಧವ್ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ನಿಶ್ಚಿತವಾಗಿದೆ. ಕಾನೂನು ತಜ್ಞರ ಜೊತೆ ಚರ್ಚೆ ಮಾಡಿಯೇ ಜಾಧವ್ ರಾಜೀನಾಮೆ ಕೊಟ್ಟಿದ್ದಾರೆ ಎಂದು ಹೇಳಿದ್ರು.

    ಅಂಬರೀಶ್ ಬಗ್ಗೆ ಹಗುರ ಮಾತು:
    ಸುಮಲತಾ ಅಂಬರೀಶ್ ಅವರ ನಡೆ ಏನು ಅನ್ನೋದನ್ನ ಕಾದು ನೋಡುತ್ತೇವೆ. ಆ ಬಳಿಕ ನಮ್ಮ ಅಭ್ಯರ್ಥಿ ಹಾಕಬೇಕೇ? ಬೇಡವೇ? ಅನ್ನೋದ್ರ ಬಗ್ಗೆ ತೀರ್ಮಾನ ಮಾಡುತ್ತೇವೆ. ನಾನು ಮಾಧ್ಯಮದ ಮುಂದೆ ಎಲ್ಲವನ್ನೂ ಹೇಳಲಾಗುವುದಿಲ್ಲ. ಅಂಬರೀಶ್ ಬದುಕಿದ್ದಾಗ ಹಾಡಿಹೊಗಳಿ ಅವರು ತೀರಿಕೊಂಡ ಬಳಿಕ ಅವರ ಬಗ್ಗೆ ಕುಮಾರಸ್ವಾಮಿ ಹಗುರವಾಗಿ ಮಾತನಾಡುತ್ತಿದ್ದಾರೆ. ಅವರ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತೆಗೆದುಕೊಂಡು ಹೋಗಿದ್ದರು. ಈಗ ಅವರ ಸಾಧನೆ ಏನು ಎಂದು ಕೇಳುತ್ತಾರೆ. ಇದು ಕುಮಾರಸ್ವಾಮಿ, ರೇವಣ್ಣ ಅವರಿಗೆ ಶೋಭೆ ತರುವಂತದ್ದಲ್ಲ ಎಂದು ಗರಂ ಆದ್ರು.

    ಪ್ರಣಾಳಿಕೆಯಲ್ಲಿ ಮಹಾದಾಯಿ ವಿಚಾರ ಸೇರಿಸ್ತೀವಿ:
    ಮಹಾದಾಯಿ ವಿಚಾರವನ್ನ ನಮ್ಮ ಪ್ರಣಾಳಿಕೆಯಲ್ಲಿ ಸೇರಿಕೊಳ್ಳುತ್ತೇವೆ. ಆ ವಿಚಾರವನ್ನು ನಿರಾಕರಿಸುವಂತಿಲ್ಲ. ರಾಜ್ಯ ಸರ್ಕಾರದ ಜವಾಬ್ದಾರಿ ಬಹಳ ಮುಖ್ಯವಾಗಿತ್ತು. ಆದ್ರೆ ಮಹಾದಾಯಿ ಕುಡಿಯುವ ನೀರಿನ ವಿಚಾರವನ್ನ ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಹೀಗಾಗಿ ನಿಶ್ಚಿತವಾಗಿ ಈ ಬಾರಿ ಮಹಾದಾಯಿ ವಿಚಾರವನ್ನು ಪ್ರಣಾಳಿಕೆಯಲ್ಲಿ ಸೇರಿಸ್ತೀವಿ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದಾಳಿ ಮಾಡಿದ್ದು ನಿಜ, ಹೆಣಗಳನ್ನು ಲೆಕ್ಕ ಹಾಕುವುದು ನಮ್ಮ ಕೆಲ್ಸವಲ್ಲ: ಏರ್ ಚೀಫ್ ಮಾರ್ಷಲ್

    ದಾಳಿ ಮಾಡಿದ್ದು ನಿಜ, ಹೆಣಗಳನ್ನು ಲೆಕ್ಕ ಹಾಕುವುದು ನಮ್ಮ ಕೆಲ್ಸವಲ್ಲ: ಏರ್ ಚೀಫ್ ಮಾರ್ಷಲ್

    ಕೊಯಮತ್ತೂರು: ಬಾಲಕೋಟ್ ಮೇಲಿನ ಏರ್ ಸ್ಟ್ರೈಕ್ ನಡೆಸಿದ ಬಗ್ಗೆ ಎದ್ದ ಪ್ರಶ್ನೆಗಳಿಗೆ ವಾಯುಸೇವೆ ಮುಖ್ಯಸ್ಥ ಬಿ.ಎಸ್ ಧನೋವಾ ಕೊಯಮತ್ತೂರಲ್ಲಿ ಸುದ್ದಿಗೋಷ್ಠಿ ನಡೆಸಿ ಉತ್ತರ ನೀಡಿದ್ದಾರೆ.

    ಏರ್ ಸ್ಟ್ರೈಕ್ ನಡೆದ ಬಳಿಕ ಎಷ್ಟು ಉಗ್ರರು ಹತ್ಯೆಯಾಗಿದ್ದಾರೆ ಸಾಕ್ಷ್ಯ ನೀಡಿ ಎಂದಿದ್ದ ಪ್ರತಿಪಕ್ಷಗಳಿಗೆ ಉತ್ತರ ಎನ್ನುವಂತೆ ಬಿ. ಎಸ್ ಧನೋವಾ ಅವರು, ನೀಡಿದ್ದ ಗುರಿಗಳನ್ನು ವಾಯುಸೇನೆ ಹೊಡೆದು ಹಾಕಿದ್ದು ನಿಜ. ಆದರೆ ಹೆಣಗಳನ್ನು ಲೆಕ್ಕ ಹಾಕುವುದು ನಮ್ಮ ಕೆಲಸವಲ್ಲ. ಕಾಡಿನಲ್ಲಿ ಬಾಂಬ್ ಹಾಕುವ ಅಗತ್ಯ ನಮಗೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ.

    ನಮಗೆ ಏನು ಗುರಿ ನೀಡಲಾಗಿತ್ತೋ ಆ ಗುರಿಯನ್ನು ಹೊಡೆದಿದ್ದೇವೆ. ಅರಣ್ಯದಲ್ಲಿ ಬಾಂಬ್ ಹಾಕಿದ್ದರೆ ಪಾಕಿಸ್ತಾನ ಯಾಕೆ ನಮ್ಮ ಮೇಲೆ ದಾಳಿ ನಡೆಸಬೇಕಿತ್ತು. ಅವರ ಪ್ರಧಾನಿ ಏಕೆ ಪ್ರತಿಕ್ರಿಯೆ ನೀಡುತ್ತಿದ್ದರು ಎಂದು ಪ್ರಶ್ನಿಸಿದರು.

    ನೀಡಿದ್ದ ಗುರಿ ಸರಿಯಾಗಿ ದಾಳಿ ಮಾಡಿದ್ದೇವಾ ಇಲ್ಲವೋ ಎನ್ನುವುದು ಮಾತ್ರ ನಮ್ಮ ಕೆಲಸ. ಅದನ್ನು ಹೊರತು ಪಡಿಸಿ ಹೆಣಗಳನ್ನು ಲೆಕ್ಕ ಹಾಕುವುದು ನಮ್ಮ ಕೆಲಸವಲ್ಲ. ಆ ಕೆಲಸ ಏನಿದ್ದರೂ ಸರ್ಕಾರ ಮಾಡುತ್ತದೆ ಎಂದರು.

    ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಬಗ್ಗೆ ಮಾತನಾಡಿ, ಅಭಿನಂದನ್ ಅವರ ಆರೋಗ್ಯ ಸ್ಥಿತಿ ನೋಡಿ ಅವರು ಮತ್ತೆ ಕೆಲಸಕ್ಕೆ ಹಾಜರಾಗಬಹುದಾ ಇಲ್ಲವಾ ಎಂಬುದು ತಿಳಿಯಲಿದೆ. ಅವರು ಸಂಪೂರ್ಣವಾಗಿ ಫಿಟ್ ಆಗಿದ್ದರೆ ಅವರು ಪೈಲಟ್ ಆಗಿ ಮುಂದುವರಿಯಬಹುದು ಎಂದು ಹೇಳಿದರು.

    ನಾವು ದಾಳಿಗೆ ಸಿದ್ಧರಾದಾಗ ಯಾವ ವಿಮಾನ ಬೇಕು ಯಾವುದು ಬೇಡ ಎನ್ನುವುದನ್ನು ಪ್ಲಾನ್ ಮಾಡುತ್ತೇವೆ. ಶತ್ರುಗಳು ನಮ್ಮ ಮೇಲೆ ಬಂದಾಗ ಯಾವ ವಿಮಾನವನ್ನು ಕಳುಹಿಸಬೇಕು ಎನ್ನುವುದನ್ನು ನಾವು ಪ್ಲಾನ್ ಮಾಡಲು ಸಾಧ್ಯವಿಲ್ಲ. ನಮ್ಮ ಬಳಿ ಇರುವ ಎಲ್ಲ ವಿಮಾನಗಳು ಶತ್ರುಗಳನ್ನು ನಾಶ ಮಾಡುವ ಸಾಮಥ್ರ್ಯವನ್ನು ಹೊಂದಿದೆ ಎಂದರು.

    ನಮ್ಮ ಮಿಗ್-21 ಜೆಟ್ ಯುದ್ಧ ವಿಮಾನ ಸಮರ್ಥವಾಗಿದೆ. ಮಿಗ್-21 ಅದ್ಭುತವಾದ ಏರ್‍ಕ್ರಾಫ್ಟ್. ಈ ಯುದ್ಧ ವಿಮಾನವನ್ನು ಅಪ್‍ಗ್ರೇಡ್ ಮಾಡಲಾಗಿದೆ. ಈ ವಿಮಾನದಲ್ಲಿ ಅದ್ಭುತವಾದ ರಡಾರ್ ಇದೆ ಹಾಗೂ ಏರ್ ಟು ಏರ್ ಮಿಸೈಲ್ ವೆಪನ್ ಸಿಸ್ಟಮ್ ಇದೆ ಎಂದು ತಿಳಿಸಿದ್ದಾರೆ.

    ಪ್ರಸ್ತುತ ಗಡಿಯಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಉತ್ತರಿಸಿದರು.

    ನಮ್ಮ ವಿರುದ್ಧ ಮಾಡಿದ ದಾಳಿ ವೇಳೆ ಅವರು ಎಫ್ 16 ವಿಮಾನವನ್ನು ಬಳಸಿದ್ದಾರೆ. ಯಾಕೆಂದರೆ ಎಫ್ 16 ನಲ್ಲಿ ಬಳಸುವ ಎಎಂಆರ್‍ಎಎಎಂ ಕ್ಷಿಪಣಿ ನಮ್ಮ ಭೂ ಪ್ರದೇಶದಲ್ಲಿ ಬಿದ್ದಿದೆ. ಅವರ ಎಫ್ 16 ವಿಮಾನವನ್ನು ನಾವು ಹೊಡೆದು ಹಾಕಿದ್ದೇವೆ ಎಂದು ತಿಳಿಸಿದರು.

    ಅಮೆರಿಕ ಮತ್ತು ಪಾಕಿಸ್ತಾನ ಮಧ್ಯೆ ಯಾವ ರೀತಿಯ ಒಪ್ಪಂದ ನಡೆದಿದೆ ಎನ್ನುವುದು ಗೊತ್ತಿಲ್ಲ. ಬೇರೆ ದೇಶದ ವಿರುದ್ಧದ ಎಫ್ 16 ಬಳಕೆ ಮಾಡಬಾರದು ಎನ್ನುವ ಒಪ್ಪಂದ ಇದ್ದರೆ ಪಾಕಿಸ್ತಾನ ಉಲ್ಲಂಘನೆ ಮಾಡಿದೆ ಎಂದು ಹೇಳಬಹುದು ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾವು ಗಂಡಸರು ಮಾತಾಡಲು ಶುರು ಮಾಡಿದ್ರೆ, ಅವ್ರೆಲ್ಲಾ ಆತ್ಮಹತ್ಯೆ ಮಾಡ್ಕೋಬೇಕಾಗುತ್ತೆ: ಗುರುಪ್ರಸಾದ್

    ನಾವು ಗಂಡಸರು ಮಾತಾಡಲು ಶುರು ಮಾಡಿದ್ರೆ, ಅವ್ರೆಲ್ಲಾ ಆತ್ಮಹತ್ಯೆ ಮಾಡ್ಕೋಬೇಕಾಗುತ್ತೆ: ಗುರುಪ್ರಸಾದ್

    ಬೆಂಗಳೂರು: ಕೆಲವರು ಮೀಟೂ ವೇದಿಕೆಯನ್ನು ದುರ್ಬಳಕೆ ಮಾಡಿಕೊಂಡು ಪತಿವ್ರತೆಯವರಂತೆ ಪೋಸ್ ಕೊಡಲು ಹೊರಟ್ಟಿದ್ದಾರೆ. ನಾವು ಗಂಡಸರು ಮಾತಾಡಲು ಶುರು ಮಾಡಿದರೆ, ಅವರೆಲ್ಲಾ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ‘ಮಠ’ ಚಿತ್ರದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಮೀಟೂ ವೇದಿಕೆ ದುರ್ಬಳಕೆ ಮಾಡಿಕೊಂಡವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ‘ಕುಷ್ಕಾ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗುರುಪ್ರಸಾದ್ ಅವರು, ಇಬ್ಬರು ತಮ್ಮ ಪತಿ, ಅತ್ತೆ, ಮಾವನ ಎದುರಿಗೆ ತಾವು ಪತಿವ್ರತೆಯರು ಅಂತ ಸಾಬೀತುಪಡಿಸಲು ಹೊರಟ್ಟಿದ್ದಾರೆ. ಯಾವಾಗಲೋ ಆಗಿದ್ದನ್ನು ಈಗ ಪ್ರತಿಕ್ರಿಯಿಸುವುದು ಸರಿಯಲ್ಲ. ಅವಕಾಶ ಸಿಗುವಾಗ ಹಾಗೂ ಕೆಲಸ ಮಾಡುವಾಗ ಸುಮ್ಮನಿದ್ದು, ಎರಡು ವರ್ಷಗಳ ನಂತರ ಮಾತನಾಡುವುದು ಸರಿಯಲ್ಲ ಎಂದು ಗುಡುಗಿದರು.

    ನಟಿ ಸಂಗೀತಾ ಭಟ್ ನೀಡಿರುವ ಹೇಳಿಕೆಗೂ ನನಗೂ ಸಂಬಂಧವಿಲ್ಲ. ಎರಡನೇ ಸಲ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿಯೇ ಎಲ್ಲಾ ಹೇಳಿದ್ದೀವಿ. ಬೆನ್ನು ತೋರಿಸುವ ಸೀನ್ ಶೂಟ್ ಮಾಡುವಾಗ ನನ್ನ ಹೆಂಡತಿ ಮತ್ತು ಮಗಳು ಅಲ್ಲೇ ಇದ್ದರು. ಯಾವುದೇ ರೀತಿಯ ಮುಜುಗರ ಆಗುವಂತಹ ಸನ್ನಿವೇಶ ಅಂದು ಆಗಿರಲಿಲ್ಲ ಎಂದು ಹೇಳಿದರು.

    ಸಂಗೀತಾ ಮೀಟೂ ಆರೋಪ ಮಾಡುವಾಗ ನಾನು ಯಾರನ್ನು ಉಲ್ಲೇಖಿಸಿ ಈ ಪೋಸ್ಟ್ ಹಾಕಿದ್ದೇನೆ ಎನ್ನುವುದನ್ನು ಹೇಳಲಿಲ್ಲ. ಹೀಗಾಗಿ ಈ ವಿಚಾರದ ಬಗ್ಗೆ ನಾನ್ಯಾಕೆ ಪ್ರತಿಕ್ರಿಯಿಸಲಿ. ಅವಕಾಶ ಬೇಕಿದ್ದಾಗ ಯಾವ ರೀತಿ ಇರುತ್ತಾರೆ ಹಾಗೂ ಬೆಳೆದಾಗ ಹೇಗೆ ನಡೆದುಕೊಳ್ಳುತ್ತಾರೆ ಎನ್ನುವುದನ್ನು ನಾನು ನೋಡಿದ್ದೇನೆ. ದೊಡ್ಡ ದೊಡ್ಡ ನಟಿಯರ ಜೊತೆಗೂ ನಾನು ಕೆಲಸ ಮಾಡಿದ್ದೇನೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜಾಗ್ವಾರ್ ಕಾರ್, ಕೋಟಿ ರೂ. ಆಸ್ತಿ ಇರುವ ಸಂಜನಾ ಐಟಿ ರಿರ್ಟನ್ಸ್ ಸಲ್ಲಿಸಿದ್ದಾರಾ: ರವಿ ಶ್ರೀವತ್ಸ ತಿರುಗೇಟು

    ಜಾಗ್ವಾರ್ ಕಾರ್, ಕೋಟಿ ರೂ. ಆಸ್ತಿ ಇರುವ ಸಂಜನಾ ಐಟಿ ರಿರ್ಟನ್ಸ್ ಸಲ್ಲಿಸಿದ್ದಾರಾ: ರವಿ ಶ್ರೀವತ್ಸ ತಿರುಗೇಟು

    – ಸಂಜನಾ ಕ್ಷಮೆಗೆ ಡೆಡ್‍ಲೈನ್ ಕೊಟ್ಟ ನಿರ್ದೇಶಕ
    – ಗಂಡ ಹೆಂಡತಿ ಮೊದಲ ಸಂಜನಾ ಸಿನಿಮಾವಲ್ಲ
    – ಅ.16ರವರೆಗೂ ಮಾಡಿರುವ ಮೆಸೇಜ್ ಸಾಕ್ಷಿಯಿದೆ
    – ಪ್ರಚಾರಕ್ಕಾಗಿ ನನ್ನ ವಿರುದ್ಧ ಸುಳ್ಳು ಆರೋಪ

    ಬೆಂಗಳೂರು: ಗಂಡ ಹೆಂಡತಿ ಚಿತ್ರದ ಶೂಟಿಂಗ್ ವೇಳೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯದ ಆರೋಪಕ್ಕೆ ನಿರ್ದೇಶಕ ರವಿ ಶ್ರೀವತ್ಸ ಸುದ್ದಿಗೋಷ್ಠಿ ನಡೆಸಿ ಸಂಜನಾಗೆ ತಿರುಗೇಟು ನೀಡಿದ್ದಾರೆ.

    ತನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಕ್ಕೆ ರವಿ ಶ್ರೀವತ್ಸ ಸಂಜನಾಗೆ ಶುಕ್ರವಾರ ಮಧ್ಯಾಹ್ನ 1 ಗಂಟೆಯ ಒಳಗಡೆ ಕ್ಷಮೆ ಕೇಳಬೇಕೆಂದು ಡೆಡ್‍ಲೈನ್ ನೀಡಿದ್ದಾರೆ.

    ಮೊದಲು ಒಂದು ಕಿಸ್‍ಯಿಂದ 10 ಕಿಸ್, 10 ಕಿಸ್‍ಯಿಂದ 30 ಕಿಸ್ ಮಾಡಿಸಿದ್ದರು ಎನ್ನುವ ಸಂಜನಾ ಆರೋಪಕ್ಕೆ, ಕಿಸ್ ದೃಶ್ಯವನ್ನಿಟ್ಟು ನಾನು ಈ ಸಿನಿಮಾ ಮಾಡಿಲ್ಲ. ಈ ಸಿನಿಮಾದಲ್ಲಿ ಸಾಕಷ್ಟು ಕಲಾವಿದರಿದ್ದರು. ಹಿರಿಯ ಪತ್ರಕರ್ತರಾದ ರವಿ ಬೆಳಗೆರೆ ಇದ್ದರು. ಇವರೆಲ್ಲಾ ಇರುವಾಗ ನಾನು ಹೇಗೆ ಕಿಸ್ ಮಾಡಿಸಲಿ. ಸಂಜನಾ ಪತ್ರಿಕೆಯೊಂದರಲ್ಲಿ ನನಗೆ ಮೊದಲು ಕಿಸ್ ಮಾಡುವಾಗ ಸ್ವಲ್ಪ ನರ್ವಸ್ ಆದೆ. ನಂತರ ಕಿಸ್ ಸೀನ್ ಮಾಡುವಾಗ ನನಗೆ ನರ್ವಸ್ ಹೋಯಿತು ಹೇಳಿದ್ದನ್ನು ಈ ವೇಳೆ ರವಿ ಶ್ರೀವತ್ಸ ತಿಳಿಸಿದರು.

    ರವಿ ಶ್ರೀವತ್ಸ ಹೇಳಿದ್ದೇನು?
    ‘ಗಂಡ- ಹೆಂಡತಿ’ ಸಿನಿಮಾಗಾಗಿ ನಾನು ಮೊದಲು ರಕ್ಷಿತಾ ಪ್ರೇಮ್ ಅವರನ್ನು ಅಪ್ರೋಚ್ ಮಾಡಿದ್ದೆ. ಈ ಸಿನಿಮಾಗಾಗಿ ಶೈಲೇಂದ್ರ ಬಾಬು ಅವರು ನಿರ್ಮಾಪಕರಾಗಿದ್ದರು. ಆಗ ಕಲಾವಿದರು ಯಾರು ಎಂದು ಅವರು ಕೇಳಿದ್ದಾಗ ನಾನು ರಕ್ಷಿತಾ ಅವರ ಹೆಸರು ಹೇಳಿದೆ. ನಂತರ ನಾನು ರಕ್ಷಿತಾ ಅವರನ್ನು ಸಂಪರ್ಕಿಸಿದಾಗ ಅವರು ನಾನು ಮದುವೆಯಾಗುತ್ತಿದ್ದೇನೆ. ಈ ರೀತಿಯ ಸಿನಿಮಾ ಮಾಡುವುದು ಸರಿಯಲ್ಲ ಎಂದು ಹೇಳಿ ಈ ಚಿತ್ರಕ್ಕೆ ನಾಯಕಿಯಾಗಲು ನಿರಾಕರಿಸಿದ್ದರು. ನಂತರ ಈ ಸಿನಿಮಾಗಾಗಿ ಹೊಸಬರನ್ನು ಕರೆಸಲು ನಿರ್ಧರಿಸಿದೆ.

    ಹಿಂದಿಯ ‘ಮರ್ಡರ್’ ಸಿನಿಮಾದಲ್ಲೂ ಕೂಡ ಹೊಸಬರು ನಟಿಸಿದ್ದರು. ಹಾಗಾಗಿ ನಾವು ಕನ್ನಡದಲ್ಲೂ ಹೊಸಬರಿಗೆ ಅವಕಾಶ ನೀಡಲು, ಮಲ್ಲಿಕಾ ಶೆರಾವತ್ ಪಾತ್ರಕ್ಕೆ ಸಂಜನಾ ಅವರನ್ನು ಆಯ್ಕೆ ಮಾಡಿದ್ದೇವು. ನಂತರ ನಾವು ಸಂಜನಾ ಅವರನ್ನು ಕತೆ ಹೇಳಿದೆ. ಅಲ್ಲದೇ ಮರ್ಡರ್ ಸಿನಿಮಾದ ಸಿಡಿಯನ್ನು ಹಾಕಿ ಅವರನ್ನು ತೋರಿಸಿ ಈ ರೀತಿಯಲ್ಲೇ ನಾನು ಸಿನಿಮಾ ಮಾಡುತ್ತಿದ್ದೇನೆ ಎಂದು ಹೇಳಿದೆ. ಅಲ್ಲದೇ ಈ ಚಿತ್ರದ ಎರಡನೇ ಭಾಗದಲ್ಲಿ ಅವರಿಗೆ ನಾನು ತಾಳಿಯ ಮಹತ್ವದ ಬಗ್ಗೆ ತಿಳಿಸಿದ್ದೆ.

    ನಾನು ಈ ಚಿತ್ರದಲ್ಲಿ ಬೆತ್ತಲೆಯ ಸೀನ್ ತೋರಿಸಿಲ್ಲ. ಆಗ ಅವರು ನನಗೆ 16 ವರ್ಷ ಎಂದು ಹೇಳಿದ್ದರು. ಗಂಡ-ಹೆಂಡತಿ ಸಂಜನಾ ಅವರ ಮೊದಲ ಸಿನಿಮಾ ಅಲ್ಲ. ಈ ಹಿಂದೆ ಅವರು ಜೂನಿಯರ್ ಆರ್ಟಿಸ್ಟ್ ಆಗಿ ನಟನೆ ಮಾಡಿದ್ದರು. ಗಂಡ-ಹೆಂಡತಿ ಸಂಜನಾ ಅವರ 5ನೇ ಸಿನಿಮಾ. ಗಂಡ- ಹೆಂಡತಿ ಸಿನಿಮಾ ಮಾಡುವಾಗ ಈ ಸಿನಿಮಾ ಮರ್ಡರ್ ರಿಮೇಕ್ ಎಂದು ಹೇಳಿದೆ. ಈ ಸಿನಿಮಾಗಾಗಿ ಮಲ್ಲಿಕಾ ಶರವಾತ್ ಪಾತ್ರಕ್ಕಾಗಿ 150ಕ್ಕೂ ಹೆಚ್ಚು ಜನರ ಆಡಿಶನ್ ನಡೆದಿತ್ತು. ಆಡಿಶನ್ ವೇಳೆ ಪಾಸಾದವರಿಗೆ ಇದು ಮರ್ಡರ್ ಸಿನಿಮಾ ರಿಮೇಕ್ ಎಂದು ಹೇಳಿದ್ದಾಗ ಅವರು ಅಭಿನಯಿಸಲ್ಲ ಎಂದು ಹೇಳಿದ್ದರು.

    ಯಾವುದೇ ಮಕ್ಕಳು ಹೊರಗೆ ಬರುತ್ತಾರೆಂದರೆ ತಮ್ಮ ಜೊತೆ ತಂದೆ- ತಾಯಿಯನ್ನು ಕರೆದುಕೊಂಡು ಬರುತ್ತಾರೆ. ಆದರೆ ಸಿನಿಮಾ ಶೂಟಿಂಗ್ ಸಮಯದಲ್ಲಿ ಸಂಜನಾ ಅವರ ತಂದೆ ಬಂದಿರಲಿಲ್ಲ. ನಂತರ ಚಿತ್ರದ ಬಿಡುಗಡೆಯಾದ ಮೊದಲ ದಿನ ಸಂಜನಾ ಅವರ ತಂದೆ ಹಾಜರಾಗಿದ್ದರು. ಆದರೆ ಸಂಜನಾ, ನನ್ನ ತಂದೆ ಸಿನಿಮಾ ನೋಡಲು ಆಗಲಿಲ್ಲ. ನಂತರ ನನ್ನ ತಂದೆ ಸಿನಿಮಾ ನೋಡಿ ತಲೆ ತಗ್ಗಿಸಿ ಚಿತ್ರಮಂದಿರದಿಂದ ಹೊರ ಬಂದರು ಎಂದು ಹೇಳುತ್ತಾರೆ. ಈ 12 ವರ್ಷದಲ್ಲಿ ಅವರ ತಂದೆ ನನಗೆ ಕರೆ ಮಾಡಿ ನನ್ನ ಮಗಳನ್ನು ಯಾಕೆ ಈ ರೀತಿ ಬಳಸಿಕೊಂಡಿದ್ದೀಯಾ ಎಂದು ಇದೂವರೆಗೆ ಕರೆ ಮಾಡಿ ಪ್ರಶ್ನೆ ಮಾಡಿಲ್ಲ.

    ನಾನು ಸೆಕ್ಸ್ ಸಿನಿಮಾ ಮಾಡುವುದ್ದಕ್ಕೆ ಇಲ್ಲಿ ಬಂದಿಲ್ಲ. ನಾನು ಇಲ್ಲಿ ಗಂಡ- ಹೆಂಡತಿಯ ಬಾಂಧವ್ಯವನ್ನು ತೋರಿಸಲು ಪ್ರಯತ್ನಪಟ್ಟಿದ್ದೇನೆ. ನಾನು ಹೆದರಿಸಿ ಕೆಲಸ ಮಾಡಿಲ್ಲ. ಚಿತ್ರದ ಮೊದಲ ದಿನದ ಫೋಟೋಶೂಟ್ ವೇಳೆ ಅವರು ಸಂಜನಾ ಬೋಲ್ಡ್ ಆಗಿ ನಟಿಸಿದ್ದರು. ಈ ವೇಳೆ ಚಿತ್ರದ ಸಹ ನಿರ್ದೇಶಕರು ನನಗೆ ಸಂಜನಾ ಹೇಗೆ ನಟಿಸಿದ್ದಾರೆ ನೋಡಿ ಎಂದು ಹೇಳಿದ್ದರು. ಸಂಜನಾ ಅವರಿಗೆ ಸರಿಯಾಗಿ ಕನ್ನಡ ಬರುತ್ತಿರಲಿಲ್ಲ. ಅವರಿಗೆ ಕನ್ನಡ ಹೇಳಿಕೊಟ್ಟು ಆಕೆಯನ್ನು ತಿದ್ದಿದ್ದೇವೆ.

    ಬ್ಯಾಂಕಾಕ್ ಶೂಟಿಂಗ್ ಬಳಿಕವೂ ಬೆಂಗಳೂರಿನಲ್ಲೂ ಕಿಸ್ಸಿಂಗ್ ದೃಶ್ಯದ ಶೂಟಿಂಗ್ ಮಾಡಿದ್ದಾರೆ ಎನ್ನುವ ಸಂಜನಾ ಆರೋಪಕ್ಕೆ, ಬ್ಯಾಂಕಾಕ್ ಶೂಟಿಂಗ್ ಹೋಗಿದ್ದಾಗ ಸಂಜನಾ ರಾತ್ರಿಯೆಲ್ಲಾ ಶಾಪಿಂಗ್ ಹೋಗುತ್ತಿದ್ದರು. ನಂತರ ಬೆಳಗ್ಗೆ ಬಂದಿದ್ದಾಗ ಅವರ ಕಣ್ಣು ಕೆಂಪಾಗಿತ್ತು. ಅವರು ಈ ಸ್ಥಿತಿಯಲ್ಲಿರುವಾಗ ನಾನು ಅವರಿಂದ ಹೇಗೆ ಕಿಸ್ಸಿಂಗ್ ಸೀನ್ ಮಾಡಿಸಲಿ? ಸಮಯದಲ್ಲೇ ನಾನು ಅವರಿಗೆ ಬೈದಿದ್ದೆ. ಆರಂಭದಲ್ಲಿ ಸಂಜನಾಗೆ ಗಂಡ- ಹೆಂಡತಿ ಸಿನಿಮಾದ ಮೂಲಕ ಪಬ್ಲಿಸಿಟಿ ಬೇಕಿತ್ತು. ಈಗ ಮೀಟೂ ಅಭಿಯಾನದ ಚಿತ್ರದ ವಿರುದ್ಧ ಹೇಳಿಕೆ ನೀಡಿ ಪಬ್ಲಿಸಿಟಿಗೆ ಮುಂದಾಗಿದ್ದಾರೆ.

    ಸಂಜನಾ ಅವರ ಹತ್ತಿರ ಈಗ ಕೋಟಿ ರೂ. ಆಸ್ತಿ ಇದೆ. ಅದಕ್ಕೆಲ್ಲಾ ಐಟಿ ರಿರ್ಟನ್ಸ್ ಸಲ್ಲಿಸಿದ್ದಾರಾ. ಅವರು ಈಗ ಜಾಗ್ವಾರ್ ಕಾರಿನಲ್ಲಿ ಓಡಾಡುತ್ತಾರೆ. ನಾನು ಈಗ ಮಾರುತಿ ಬೆಲೆನೋ ಕಾರಿನಲ್ಲಿ ಓಡಾಡುತ್ತಿದ್ದೇನೆ. ಅವರು ಐಶಾರಾಮಿ ಮನೆಯಲ್ಲಿ ಇರುತ್ತಾರೆ. ನಾನು 8 ಸಾವಿರ ಕೊಟ್ಟು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇನೆ. ಈಗ ಅವರು ತಮಿಳು, ತೆಲುಗು, ಮಲೆಯಾಳಂ ಎಲ್ಲ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಈಗ ಅವರನ್ನು ಗಂಡ- ಹೆಂಡತಿ ಸಂಜನಾ ಎಂದು ಗುರುತಿಸುತ್ತಾರೆ. ಸಂಜನಾ ಅವರಿಗೆ ಕನ್ನಡ ಬಿಟ್ಟರೆ ಬೇರೆ ಚಿತ್ರರಂಗವಿದೆ. ನಮಗೆ ಕನ್ನಡ ಚಿತ್ರರಂಗ ಮಾತ್ರ ಇದೆ. ಈಗ ನನ್ನ ವಿರುದ್ಧ ಆರೋಪಿಸಿದ್ದನ್ನು ನಾಳೆ ಸಂಜನಾ ಬೇರೆ ಚಿತ್ರರಂಗದ ನಿರ್ದೇಶಕರನ್ನು ಮಾಡಬಹುದು.

    ಅಕ್ಟೋಬರ್ 16 ವರೆಗೂ ಸಂಜನಾ ನನಗೆ ಮೆಸೇಜ್ ಮಾಡಿದ್ದಕ್ಕೆ ಸಾಕ್ಷಿಗಳಿದೆ. ನನ್ನ ಹುಟ್ಟುಹಬ್ಬಕ್ಕೆ ನೀವು ಬನ್ನಿ. ಈ ಕಾಸ್ಟ್ಲಿ ಹೋಟೆಲ್‍ಗೆ ನೀವು ಒಬ್ಬರೇ ಬರುತ್ತೀರಾ ಅಥವಾ ನಿಮ್ಮ ಸ್ನೇಹಿತರ ಜೊತೆ ಬರುತ್ತೀರಾ. ನಾನು ಸೀಟ್ ಬುಕ್ ಮಾಡಬೇಕೆಂದು ಹೇಳಿದ್ದರು. ನಂತರ ಸಂಜನಾ ಹಿಂದಿಯ ‘ಜಿಸ್ಮ್’ ಸಿನಿಮಾ ಮಾಡೋಣ ಎಂದು ಹೇಳಿದ್ದರು. ಆಗ ನಾನು ಗಂಡ- ಹೆಂಡತಿ ಸಿನಿಮಾ ಮಾಡಿದೆ ಸಾಕು ಎಂದು ಹೇಳಿದೆ.

    https://www.youtube.com/watch?v=Fngx4OL8iUY

    https://www.youtube.com/watch?v=2YYfQAOr3SM

    https://www.youtube.com/watch?v=EhTC1JWIn1I

    https://www.youtube.com/watch?v=Pr1WxEPsJPc

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೀಟೂ ದುರುಪಯೋಗ ಮಾಡಿಕೊಂಡವರಲ್ಲಿ ಸಂಜನಾ ಮೊಟ್ಟ ಮೊದಲಿಗರು: ವಿ. ನಾಗೇಂದ್ರ ಪ್ರಸಾದ್

    ಮೀಟೂ ದುರುಪಯೋಗ ಮಾಡಿಕೊಂಡವರಲ್ಲಿ ಸಂಜನಾ ಮೊಟ್ಟ ಮೊದಲಿಗರು: ವಿ. ನಾಗೇಂದ್ರ ಪ್ರಸಾದ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಸಂಜನಾ ತಮ್ಮ ಮೊದಲ ಚಿತ್ರದ ಶೂಟಿಂಗ್ ವೇಳೆ ತಮ್ಮ ಮೇಲೆ ಉಂಟಾದ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತನಾಡಿದ್ದರು. ಈ ಆರೋಪದ ಬಗ್ಗೆ ನಿರ್ದೇಶಕ ವಿ. ನಾಗೇಂದ್ರ ಪ್ರಸಾದ್ ಅವರು ಸುದ್ದಿಗೋಷ್ಠಿ ನಡೆಸಿ ಮೀಟೂ ದುರುಪಯೋಗ ಮಾಡಿಕೊಂಡವರಲ್ಲಿ ಸಂಜನಾ ಮೊಟ್ಟ ಮೊದಲಿಗರು ಎಂದು ಹೇಳಿ ಕಿಡಿಕಾರಿದ್ದಾರೆ.

    ಮೀಟೂ ಅಭಿಯಾನದ ಮೂಲಕ ಹೊರಬರುತ್ತಿರುವವರ ನಾಯಕಿಯರ ಬಾಯಿಯನ್ನು ಕೆಲವು ಸಂಘ ಬಾಯಿ ಮುಚ್ಚಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದರಲ್ಲಿ ನಿರ್ದೇಶಕರ ಸಂಘವನ್ನು ಕೂಡ ಉಲ್ಲೇಖ ಮಾಡಲಾಗುತ್ತಿದೆ. ಆದರೆ ನಿರ್ದೇಶಕರ ಸಂಘ ಮೀಟೂ ಅಭಿಯಾನವನ್ನು ಸ್ವಾಗತಿಸುತ್ತದೆ. ಶೋಷಣೆಗೆ ಒಳಗಾಗಿರುವ ಮಹಿಳೆಯ ಧ್ವನಿಯನ್ನು ಅಡಗಿಸಲು ನಾವು ಪ್ರಯತ್ನಿಸುತ್ತಿಲ್ಲ ಎಂದು ಅವರು ಹೇಳಿದರು.

    ಯಾವುದೇ ನಿರ್ದೇಶಕನಿಗೆ ಸಮಸ್ಯೆಯಾದರೆ ಅವರು ನಿರ್ದೇಶಕರ ಸಂಘಕ್ಕೆ ಬಂದು ದೂರು ನೀಡುತ್ತಾರೆ. ಮೀಟೂ ಅಭಿಯಾನ ಮಾಧ್ಯಮಗಳ ಮೂಲಕ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹೇಳುವುದರ ಮೂಲಕ ನಿಮ್ಮ ಸಮಸ್ಯೆಗೆ ಬಗೆಹರಿಯುವುದಿಲ್ಲ. ಆಯಾ ಸಂಘಗಳಿಗೆ ಹೋಗಿ ನಿಮಗೆ ಆದ ಲೈಂಗಿಕ ಕಿರುಕುಳದ ಬಗ್ಗೆ ದೂರು ನೀಡಿ ಅದು ನಿಮಗೆ ಆಗದಿದ್ದರೆ ಕಾನೂನಿನ ಮೊರೆ ಹೋಗಿ. ಆದರೆ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹೇಳುವುದು ಸರಿಯಲ್ಲ ಎಂದು ನಿರ್ದೇಶಕ ವಿ. ನಾಗೇಂದ್ರ ಪ್ರಸಾದ್ ಹೇಳಿದರು.

    ಮೀಟೂ ಅಭಿಯಾನವನ್ನು ದುರುಪಯೋಗ ಮಾಡುವವರಲ್ಲಿ ಮೊಟ್ಟ ಮೊದಲಿಗರು ನಟಿ ಸಂಜನಾ. ಏಕೆಂದರೆ ಅವರು ಮಾಧ್ಯಮಗಳನ್ನು ಕರೆದು ಪತ್ರಿಕಾಗೋಷ್ಠಿ ಕರೆದು 12 ವರ್ಷಗಳ ಹಿಂದೆ ಅವರಿಗೆ ಗುರುತು ನೀಡಿದ ನಿರ್ದೇಶಕರ ಬಗ್ಗೆ ಸಾಕಷ್ಟು ಮಾತನಾಡಿದ್ದಾರೆ. ಸಂಜನಾ ಮಾತನಾಡಿದ್ದು ತಪ್ಪು ಎಂದು ನಾವು ಹೇಳುತ್ತಿಲ್ಲ. ಆದರೆ ಸಂಜನಾ ನಿರ್ದೇಶಕರ ಮೇಲೆ ಮಾಡಿದ ಆರೋಪಗಳಲ್ಲಿ ಸಾಕಷ್ಟು ಸುಳ್ಳು ಹೇಳಿದ್ದಾರೆ. ಆ ಸುಳ್ಳು ಏನು ಎಂಬುದು ನಾನು ಹೇಳುತ್ತೇನೆ ಎಂದರು.

    ಸಂಜನಾ ಅವರ ವಿಷಯಕ್ಕೂ ಹಾಗೂ ಈ ಪತ್ರಿಕಾಗೋಷ್ಠಿಗೂ ಯಾವುದೇ ಸಂಬಂಧವಿಲ್ಲ. ಸಂಜನಾ ಅವರಿಗೆ ಯಾವುದೇ ಲೈಂಗಿಕ ಕಿರುಕುಳ ನೀಡಿಲ್ಲ. ಇದು ಸಿನಿಮಾ ನಿರ್ದೇಶಕನ ಹಾಗೂ ಕಲಾವಿದನ ನಡುವಿನ ಆರೋಪ. ಒಬ್ಬ ನಿರ್ದೇಶಕ ತನ್ನ ಸಿನಿಮಾ ಚೆನ್ನಾಗಿ ಬರಬೇಕು ಎಂದು ತುಂಬಾ ಶ್ರಮಪಡುತ್ತಾರೆ. ನಿರ್ದೇಶಕರು ಈ ರೀತಿ ಶ್ರಮ ಪಡುವಾಗ ಕಲಾವಿದರಿಗೆ ಹಾಗೂ ತಂತ್ರಜ್ಞನರಿಗೆ ಕಷ್ಟವಾಗುವುದು ಸಹಜ. ಈ ರೀತಿ ಕಷ್ಟಪಟ್ಟಿದ್ದ ಮೇಲೆ ಸಿನಿಮಾ ಯಶಸ್ವಿಯಾದಾಗ ಅಲ್ಲಿ ನಿಜವಾದ ತೃಪ್ತಿ ಸಿಗುತ್ತದೆ. ಆ ಸಿನಿಮಾ ಬಿಡುಗಡೆಯಾದಾಗ ಆ ಚಿತ್ರತಂಡ ಯಶಸ್ಸಿನ ರುಚಿ ಉಂಡಿದೆ. ಅಂದು ಯಶಸ್ಸು ರುಚಿಸಿದ ತಟ್ಟೆಯಲ್ಲಿ ಈಗ ಉಗಳಬಾರದು ಎಂಬುದನ್ನು ಹೇಳುವುದಕ್ಕೆ ಈ ಪತ್ರಿಕಾಗೋಷ್ಠಿ ನಡೆಸಿದ್ದೇವೆ ಎಂದು ನಾಗೇಂದ್ರ ಪ್ರಸಾದ್ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಪಘಾತವಾಗಿ 3ನೇ ದಿನವೂ ದರ್ಶನ್‍ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ- ವೈದ್ಯರು ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ

    ಅಪಘಾತವಾಗಿ 3ನೇ ದಿನವೂ ದರ್ಶನ್‍ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ- ವೈದ್ಯರು ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ

    ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಇಂದು ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸುವ ಸಾಧ್ಯತೆಗಳಿವೆ. ಅಲ್ಲದೇ ದರ್ಶನ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.

    ದರ್ಶನ್ ಅವರಿಗೆ ಅಪಘಾತವಾದ ಮೂರನೇ ದಿನವೂ ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ನಟ ದರ್ಶನ್ ಅವರ ಆರೋಗ್ಯ ಬಗ್ಗೆ ವೈದ್ಯರು ಈವರೆಗೂ ಯಾವುದೇ ಮಾಹಿತಿ ನೀಡಿಲ್ಲ. ವೈದ್ಯರು ಇಂದು ಸುದ್ದಿಗೋಷ್ಟಿ ನಡೆಸುವ ಸಾಧ್ಯತೆಗಳಿದ್ದು, ಸದ್ಯ ಆಸ್ಪತ್ರೆಯಲ್ಲಿ ದರ್ಶನ್ ಹಾಗೂ ಅವರ ಸ್ನೇಹಿತ ಆಂಟೋನಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಈ ಅಪಘಾತದಲ್ಲಿ ಗಾಯಗೊಂಡಿದ್ದ ನಟ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಅವರು ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಘಟನೆಯೇನು?:
    ಶನಿವಾರ ನಟರಾದ ದರ್ಶನ್, ಸೃಜನ್ ಲೋಕೇಶ್ ಹಾಗೂ ದೇವರಾಜ್ ಕುಟುಂಬ ಮೈಸೂರು ಮೃಗಾಲಯಕ್ಕೆ ತೆರಳಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದರು. ಆ ಬಳಿಕ ಮೈಸೂರಿನಲ್ಲೇ ಉಳಿದುಕೊಂಡು ಸೋಮವಾರ ಮುಂಜಾನೆ ಅಲ್ಲಿಂದ ಹೊರಟಿದ್ದರು. ಹೀಗೆ ಕಾರ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಮೈಸೂರು ಹೊರವಲಯದ ಹಿನಕಲ್ ಬಳಿ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದರ್ಶನ್ ಅವರ ಬಲಗೈನ ಮೂಳೆ ಮುರಿದಿದ್ದು, ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಬಲಗೈಗೆ ರಾಡ್ ಅಳವಡಿಸಲಾಗಿದ್ದು, 24 ಹೊಲಿಗೆ ಹಾಕಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv