Tag: price hike

  • ಬೆಲೆ ಏರಿಕೆ ಅನಿವಾರ್ಯ, ಖಜಾನೆ ತುಂಬಲು ಬೆಲೆ ಹೆಚ್ಚಳ ಮಾಡಲೇಬೇಕಾಗುತ್ತೆ: ಎಚ್‍ಡಿಕೆ

    ಬೆಲೆ ಏರಿಕೆ ಅನಿವಾರ್ಯ, ಖಜಾನೆ ತುಂಬಲು ಬೆಲೆ ಹೆಚ್ಚಳ ಮಾಡಲೇಬೇಕಾಗುತ್ತೆ: ಎಚ್‍ಡಿಕೆ

    ಬೆಂಗಳೂರು: ಬೆಲೆ ಏರಿಕೆ ನಿರಂತರ ಪ್ರಕ್ರಿಯೆ, ಯಾವುದೇ ಸರ್ಕಾರ ಇದ್ದರೂ ಬೆಲೆ ಏರಿಕೆ ಅನಿವಾರ್ಯ. ಸರ್ಕಾರ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡಲು ಬೆಲೆ ಏರಿಕೆ ಮಾಡಲೇಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

    ಈ ಕುರಿತು ವಿಧಾನಸಭೆಯ ಅಧಿವೇಶನದಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ನಿರಂತರ ಪ್ರಕ್ರಿಯೆ, ಸರ್ಕಾರದ ಆರ್ಥಿಕ ಪರಿಸ್ಥಿತಿ ಸುಧಾರಿಸಲು, ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು, ಹಣ ಹೊಂದಿಸಲಿಕ್ಕೆ ಕೆಲವು ಸಂದರ್ಭಗಳಲ್ಲಿ ಬೆಲೆ ಏರಿಕೆ ಮಾಡುವ ಅನಿವಾರ್ಯ ಸಂದರ್ಭಗಳು ಬರುವುದು ಸಹಜ. ಸರ್ಕಾರ ಬೆಲೆ ಏರಿಕೆ ಮಾಡಿದಾಗ ವಿರೋಧ ಪಕ್ಷಗಳು ಹೋರಾಟ, ಪ್ರತಿಭಟನೆ ಮಾಡುವುದು ಸಹ ನಿರಂತರ ಪ್ರಕ್ರಿಯೆ. ಹಲವು ದಿನಗಳಿಂದ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿ, ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಗಮನ ಸೆಳೆದಿದ್ದಾರೆ ಎಂದರು.

    ಒಂದು ವರ್ಗದ ಜನರಿಗೆ ಬೆಲೆ ಏರಿಕೆ ಬಿಸಿ ತಟ್ಟಲ್ಲ, ಆದರೆ ಚಿಕ್ಕ ಪುಟ್ಟ ಕೆಲಸ ಮಾಡೋರಿಗೆ ಬದುಕು ಕಷ್ಟ ಆಗುತ್ತೆ. ಉತ್ತರ ಕರ್ನಾಟಕ ಪ್ರವಾಹದ ವೇಳೆ ಬೆಳೆ ಹಾನಿ, ಮೂಲಭೂತ ಸೌಲಭ್ಯಗಳು ನಷ್ಟ ಆಯಿತು. ಇದನ್ನೆಲ್ಲ ಸರಿಪಡಿಸುವ ಹೊಣೆ ಸರ್ಕಾರದ ಮೇಲೆ ಬಿತ್ತು. ಇದರ ಮಧ್ಯೆ ಕೊರೊನಾ ಹಾಗೂ ಲಾಕ್‍ಡೌನ್ ತೀವ್ರ ನಷ್ಟವಾಯಿತು. ಕೊರೊನಾ ಲೋಪದೋಷಗಳ ಬಗ್ಗೆ ಮಾತಾಡಲ್ಲ. ಜನರ ಬದುಕು ಸರಿಪಡಿಸುವುದು ಮುಖ್ಯ ಎಂದು ತಿಳಿಸಿದರು. ಇದನ್ನೂ ಓದಿ:  ಮಹಿಳಾ ಅಧಿಕಾರಿಗಳು ಅನ್ನೋದೆ ಕೆಲವರಿಗೆ ಅಡ್ವಾಂಟೇಜ್ : ಸಾ.ರಾ ಮಹೇಶ್

    ಬೆಲೆ ಏರಿಕೆ ನೆಪದಲ್ಲಿ ರಾಜಕೀಯ ಸರಿಯಲ್ಲ, ಜನರ ಬದುಕಿಗೆ ಬೆಲೆ ಏರಿಕೆ ಹೊರೆಯಾಗಿದೆ. ತೆರಿಗೆ ರೂಪದಲ್ಲಿ ಬರುತ್ತಿರುವ ಹಣ ಬಳಕೆ ಮಾಡಿಕೊಳ್ಳೋದು ಮುಖ್ಯ. ಬಡ ವರ್ಗದ ಜನರ ಮನೆಗೆ ಬೆಂಕಿ ಬಿದ್ದಿದೆ. ಅವರ ಬದುಕು ಕಷ್ಟದಲ್ಲಿದೆ, ಉರಿಯುವ ಮನೆಯಲ್ಲಿ ಗಳ ಹಿರಿಯುವುದು ಸರಿಯೇ? ಅಂತಹ ವರ್ಗದ ಜನರ ಮೇಲೆ ತೆರಿಗೆ ಹಾಕಿದರೆ ಹೇಗೆ ಎಂದು ಪ್ರಶ್ನಿಸಿದರು.

    ಪ್ರತಿ ವರ್ಷ ಬಡವರು ವಿವಿಧ ರೂಪದಲ್ಲಿ ಒಂದು ಲಕ್ಷ ತೆರಿಗೆ ಕಟ್ಟುತ್ತಾರೆ. ಸಿದ್ದರಾಮಯ್ಯ ಇದೇ ವಿಚಾರವಾಗಿ ಮಾತನಾಡಿದ್ದಾರೆ. ಅಂತಹ ಬಡವರ ಬದುಕು ಕಟ್ಟಿ ಕೊಡಬೇಕು. ಇದು ಸರ್ಕಾರದ ಮುಖ್ಯ ಆದ್ಯತೆ ಆಗಬೇಕು. ಬೇರೆ ಯೋಜನೆಗಳಿಗೆ ಸಾವಿರಾರು ಕೋಟಿ ಖರ್ಚು ಮಾಡುತ್ತೀರಿ, ಆ ಯೋಜನೆಗಳನ್ನು ಸದ್ಯಕ್ಕೆ ಬದಿಗಿಡಿ, ಬಡವರ ಬದುಕು ಕಟ್ಟಿ ಕೊಡುವ ಕೆಲಸಮಾಡಿ. ಸದನದಲ್ಲಿ ಒಂದು ತೀರ್ಮಾನ ಮಾಡಿ, ಬೆಲೆ ಏರಿಕೆ ಮೂಲಕ ಬಡವರ ಜೇಬಿಗೇ ಕೈ ಹಾಕಿದ್ದೀರಿ, ಇದನ್ನು ತಡೆಯಲು ಒಂದು ನಿರ್ಧಾರ ಸದನದಲ್ಲಿ ಆಗಬೇಕು ಎಂದು ಸರ್ಕಾರಕ್ಕೆ ಕುಮಾರಸ್ವಾಮಿ ಸಲಹೆ ನೀಡಿದರು. ಇದನ್ನೂ ಓದಿ: ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅರ್ಜಿ

    ಆಸ್ಪತ್ರೆಗಳಲ್ಲಿ ಚಿಕಿತ್ಸೆ ದುಬಾರಿಯಾಗಿದೆ, ಜನ ಆಸ್ಪತ್ರೆಗಳಿಗೆ ಲಕ್ಷಾಂತರ ರೂಪಾಯಿ ಸುರಿಯುತ್ತಿದ್ದಾರೆ. ಜನರ ಮೇಲೆ ಹೊರೆ ಹೆಚ್ಚಾಗಿದೆ, ಇದನ್ನು ಸರಿಪಡಿಸುವುದರತ್ತ ನಾವು ಗಮನ ಕೊಡಬೇಕು. ಫುಡ್ ಡೆಲಿವರಿ ಬಾಯ್, ಓಲಾ ಊಬರ್ ಚಾಲಕರು ಹೇಗೆ ಬದುಕಬೇಕು ಎಂದು ಪ್ರಶ್ನಿಸಿದರು.

    ಅಮೃತ ಯೋಜನೆ ಮುಂದಕ್ಕೆ ಹಾಕಿ, ರಾಜ್ಯದಲ್ಲಿ ಕಡುಬಡವರಿಗೆ ಎರಡು ಹೊತ್ತು ಊಟಕ್ಕೆ ಗತಿ ಇಲ್ಲದಂತಾಗಿದೆ. ತೆರಿಗೆ ಸಂಗ್ರಹದಿಂದ ಬಂದ ಆದಾಯದಲ್ಲಿ ಬಡವರ ಹೊಸ ಬದುಕು ಕಟ್ಟಲು ಆದ್ಯತೆ ನೀಡಿ, ಖಾಸಗಿ ಶಾಲೆಗಳಲ್ಲಿ 17,000 ವಾಹನಗಳ ಚಾಲಕರಿದ್ದಾರೆ. ಅವರಿಗೆ ಕೋವಿಡ್ ಲಾಕ್‍ಡೌನ್ ಅವಧಿಯಲ್ಲಿ ಕೆಲಸ ಇಲ್ಲ, ಸಂಬಳ ಇಲ್ಲ, ಬ್ಯಾಂಕ್ ಕಾಟದಿಂದ ಊಟಕ್ಕೆ ಏನು ಮಾಡಬೇಕು ಅವರು? ಇಂತಹ ಸಂಕಷ್ಟದಲ್ಲಿ ಇರುವ ವರ್ಗಕ್ಕೆ ಏನು ಮಾಡಬೇಕು ಎಂದು ಸದನದಲ್ಲಿ ತೀರ್ಮಾನ ಮಾಡಿ ಎಂದು ಸಲಹೆ ನೀಡಬೇಕು.

    ಬೀದಿ ಬದಿ ವ್ಯಾಪಾರಿಗಳು, ಸಣ್ಣ ಅಂಗಡಿಗಳು, ಮಾಲ್ ಸಿಬ್ಬಂದಿ, ಥಿಯೇಟರ್ ಮುಚ್ಚಿವೆ, ಲಕ್ಷಾಂತರ ಕುಟುಂಬಗಳ ಬದುಕು ಸರಿಪಡಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಜನರ ಬದುಕು ಸರಿಪಡಿಸಿ, ಅಮೃತ ಯೋಜನೆ ನಿಲ್ಲಿಸಿ, ಈ ವರ್ಷ ಕೋವಿಡ್ ವರ್ಷ ಎಂದು ಘೋಷಿಸಿ, ಜನರ ಬದುಕು ಸರಿಪಡಿಸುವ ಕೆಲಸ ಮಾಡಿ. ಪಕ್ಕದ ರಾಜ್ಯಗಳನ್ನು ಮಾದರಿಯಾಗಿ ತಗೋಬೇಡಿ, ತಮಿಳುನಾಡು 3 ರೂ. ಸೆಸ್ ಕಡಿಮೆ ಮಾಡಿರಬಹುದು, ನಮ್ಮ ರಾಜ್ಯ ಬೇರೆ ರಾಜ್ಯಗಳಿಗೆ ಮಾದರಿ ಆಗಬೇಕು, ಶಾಶ್ವತ ಪರಿಹಾರ ಹುಡುಕಿ ಎಂದು ಆಗ್ರಹಿಸಿದರು.

    2002ರಲ್ಲಿ ಎನ್‍ಡಿಎ ಸರ್ಕಾರ ಇದ್ದಾಗ ಆಯಿಲ್ ಬಾಂಡ್ ಆರಂಭ ಆಯಿತು. ನಂತರ ನಿರಂತರವಾಗಿ ನಡೆದುಕೊಂಡು ಬಂತು. ಪ್ರಧಾನಿ ಮೋದಿಯವರು ಮುಂದಿನ ಮಾರ್ಚ್ ವರೆಗೆ 20 ಸಾವಿರ ಕೋಟಿ ಕಟ್ಟಬೇಕು. ಇಲ್ಲಿಯವರೆಗೆ ಆಯಿಲ್ ಬಾಂಡ್ 80 ಸಾವಿರ ಕೋಟಿ ಬಡ್ಡಿ ಕಟ್ಟಿದ್ದಾರೆ. ಆದರೆ ಕಾರ್ಪೊರೇಟ್ ಕಂಪನಿಗಳಿಗೆ ಶೇ.27ರಷ್ಟು ತೆರಿಗೆ ವಿನಾಯಿತಿ ನೀಡಿದರು ಅಂತಾರೆ, ಇನ್ನು ಕೆಲವರು ಶೇ.40ರಷ್ಟು ತೆರಿಗೆ ವಿನಾಯಿತಿ ಕೊಟ್ಟರು ಅಂತಾರೆ. ಕಾರ್ಪೊರೇಟ್ ಸಂಸ್ಥೆಗಳಿಗೆ 1 ಲಕ್ಷ ಕೋಟಿ ಲಾಭ ಕೊಟ್ಟಿದ್ದಾರೆ ಮೋದಿ, ಯಾರು ಅವರಿಗೆ ಈ ಸಲಹೆ ಕೊಟ್ಟರೋ ಗೊತ್ತಿಲ್ಲ. ಆದರೆ ಇನ್ನೊಂದು ಕಡೆ ಬಡವರಿಂದ 3.9 ಲಕ್ಷ ಕೋಟಿ ತೆರಿಗೆ ವಸೂಲಾಗಿದೆ. ಜನ ತಮ್ಮ ಆದಾಯದ ಶೇ.45ರಷ್ಟು ಚಿನ್ನ, ಮನೆ, ಸೈಟ್ ಕೊಳ್ಳಲು, ಮದುವೆಗೆ ಉಳಿಸಿರುತ್ತಾರೆ. ಆದರೆ ಕೋವಿಡ್ ಬಂದಮೇಲೆ ಈ ಉಳಿಕೆ ಹಣವನ್ನು ಆಸ್ಪತ್ರೆಗೆ ಸುರಿದಿದ್ದಾರೆ ಎಂದರು.

  • ಬೆಲೆ ಏರಿಕೆ ಖಂಡಿಸಿ 500ಕ್ಕೂ ಹೆಚ್ಚು ಸೈಕಲ್‍ಗಳಲ್ಲಿ ರಸ್ತೆಗಿಳಿದ ಜೆಡಿಎಸ್ ಕಾರ್ಯಕರ್ತರು

    ಬೆಲೆ ಏರಿಕೆ ಖಂಡಿಸಿ 500ಕ್ಕೂ ಹೆಚ್ಚು ಸೈಕಲ್‍ಗಳಲ್ಲಿ ರಸ್ತೆಗಿಳಿದ ಜೆಡಿಎಸ್ ಕಾರ್ಯಕರ್ತರು

    ಹಾಸನ: ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರು 500ಕ್ಕೂ ಹೆಚ್ಚು ಸೈಕಲ್‍ಗಳಲ್ಲಿ ರಸ್ತೆಗಿಳಿದು ಆಕ್ರೋಶ ಹೊರಹಾಕಿದ್ದಾರೆ.

    ಜೆಡಿಎಸ್ ಮುಖಂಡ ಅಗಿಲೆ ಯೋಗೇಶ್ ನೇತೃತ್ವದಲ್ಲಿ ಸೈಕಲ್ ಏರಿ ರಸ್ತೆಗಿಳಿದ ಜೆಡಿಎಸ್ ಕಾರ್ಯಕರ್ತರು, ಹಾಸನದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಆಕ್ರೋಶ ಹೊರಹಾಕಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಸಾಮಾನ್ಯರ ಹಿತ ಕಡೆಗಣಿಸಿವೆ. ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ಬೆಲೆ ಏರಿಕೆ ಆಗುತ್ತಲೇ ಇದೆ. ಇದರಿಂದ ಜನಸಾಮಾನ್ಯರು ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ದಸರಾ, ದೀಪಾವಳಿಗೆ ಸೌತ್ ಸೆಂಟ್ರಲ್ ರೈಲ್ವೆಯಿಂದ ಹೆಚ್ಚುವರಿ ರೈಲು ಸೇವೆ

    ಜೆಡಿಎಸ್ ಕಾರ್ಯಕರ್ತರ ಸೈಕಲ್ ಪ್ರತಿಭಟನೆಯಿಂದಾಗಿ ಹಾಸನದ ಹಲವೆಡೆ ಸಂಚಾರ ಅಸ್ತವ್ಯಸ್ತವಾಗಿತ್ತು. ಹಾಸನ ನಗರದಾದ್ಯಂತ ಸೈಕಲ್ ಏರಿ ಪ್ರತಿಭಟನೆ ನಡೆಸಿದ ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಬೆಲೆ ಏರಿಕೆ ವಿರುದ್ಧ ಮನವಿ ಸಲ್ಲಿಸಿದರು.

  • ಅಕ್ರಮವಾಗಿ ರಸಗೊಬ್ಬರ ಮಾರಾಟ- 97 ಯೂರಿಯಾ ಚೀಲ ವಶಕ್ಕೆ

    ಅಕ್ರಮವಾಗಿ ರಸಗೊಬ್ಬರ ಮಾರಾಟ- 97 ಯೂರಿಯಾ ಚೀಲ ವಶಕ್ಕೆ

    ಹಾಸನ: ಅಕ್ರಮವಾಗಿ ಯೂರಿಯಾ ರಸಗೊಬ್ಬರ ದಾಸ್ತಾನು ಮಾಡಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿ ರಸಗೊಬ್ಬರ ಚೀಲ ವಶಪಡಿಸಿಕೊಂಡಿದ್ದಾರೆ.

    ಜಿಲ್ಲೆಯ ಅರಸೀಕೆರೆ ತಾಲೂಕಿನ ಅಣ್ಣಾಯಕನಹಳ್ಳಿ, ಕೆಳಗಲಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಜಯಶಂಕರ್ ಅವರ ಮನೆಯ ಮುಂಭಾಗ ಯೂರಿಯಾ ರಸಗೊಬ್ಬರವನ್ನು ಹೆಚ್ಚಿನ ಬೆಲೆಗೆ ರೈತರಿಗೆ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ದೂರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಹಾಯಕ ಕೃಷಿ ನಿರ್ದೇಶಕ ಅಶೋಕ್, ರಸಗೊಬ್ಬರ ನಿರೀಕ್ಷಕ ಪ್ರಭಾವತಿ ಮತ್ತು ಪೊಲೀಸರ ತಂಡ ದಾಳಿ ನಡೆಸಿ, 47 ಕೆ.ಜಿ. ತೂಕದ 97 ಯೂರಿಯಾ ಗೊಬ್ಬರದ ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಚಿರು, ಮೇಘನಾ ಪುತ್ರ ಈಗ ‘ರಾಯನ್ ರಾಜ್ ಸರ್ಜಾ

    ಘಟನೆಗೆ ಸಂಬಂಧಿಸಿದಂತೆ ಅಗತ್ಯ ವಸ್ತು ಕಾಯ್ದೆ 1955ರ ರಿತ್ಯ ಪ್ರಕರಣ ದಾಖಲಿಸಿ, ಆರೋಪಿ ಜಯಶಂಕರ್‍ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಳೆಗಾಲವಾದ್ದರಿಂದ ರೈತರಿಗೆ ಸಹಜವಾಗಿ ಗೊಬ್ಬರದ ಅವಶ್ಯಕತೆಯಿದೆ. ಹೀಗಾಗಿ ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಜಾಲ ಸದ್ದಿಲ್ಲದೆ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಆಗಾಗ ಆರೋಪಗಳು ಕೇಳಿ ಬರುತ್ತಿವೆ. ಘಟನೆ ಸಂಬಂಧ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬೆಲೆ ಏರಿಕೆ ಶಾಕ್ – ಮತ್ತೆ ಎಲ್‍ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ

    ಬೆಲೆ ಏರಿಕೆ ಶಾಕ್ – ಮತ್ತೆ ಎಲ್‍ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ

    ನವದೆಹಲಿ: ಬೆಲೆ ಏರಿಕೆಯ ಬಿಸಿ ಸದ್ಯಕ್ಕೆ ಸಾಮಾನ್ಯ ಜನರ ಬೆನ್ನು ಬಿಡುವಂತೆ ಕಾಣುತ್ತಿಲ್ಲ. ಒಂದಾದ ಮೇಲೆ ಒಂದರಂತೆ ಬೆಲೆ ಏರಿಕೆಯಾಗುತ್ತಿದ್ದು ಎಲ್‍ಪಿಜಿ ಸಿಲಿಂಡರ್ ಬೆಲೆ ಏರಿಕೆಯೂ ಬ್ರೇಕ್ ಬೀಳುತ್ತಿಲ್ಲ. ಇಂದೂ ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ 25 ರೂ. ಏರಿಕೆಯಾಗಿದ್ದು ಸಬ್ಸಿಡಿ ರಹಿತ 14.2 ಕೆಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 884 ರೂ.ಗೆ ಏರಿಕೆಯಾಗಿದೆ.

    ಇನ್ನು ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯೂ 75 ರೂ. ಹೆಚ್ಚಳವಾಗಿದ್ದು ದೆಹಲಿಯಲ್ಲಿ ಸಿಲಿಂಡರ್ ಬೆಲೆ 1,693 ರೂ.ಗೆ ಏರಿಕೆಯಾಗಿದೆ. ಬೆಲೆ ಏರಿಕೆಯಿಂದ ಬೆಂಗಳೂರಿನಲ್ಲಿ ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ಬೆಲೆ 887.50 ರೂ. ಹಾಗೂ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ 1760.50 ರೂ.ಗೆ ಏರಿಕೆಯಾಗಿದೆ. ಇದನ್ನೂ ಓದಿ : ನಾನು ಜೈಲಲ್ಲಿ ಇದ್ದೆ, ಒಂದು ಬೀಡಿಗೆ ಎಷ್ಟು ದುಡ್ಡು ಕೊಡ್ಬೇಕು ಗೊತ್ತು : ಆರಗ ಜ್ಞಾನೇಂದ್ರ

    ದೇಶದಲ್ಲಿ ಸಿಲಿಂಡರ್ ಬೆಲೆ ಪದೇ ಪದೇ ಏರಿಕೆಯಾಗುತ್ತಿದೆ. ಮಾರ್ಚ್ 1, 2014ಕ್ಕೆ ಹೋಲಿಸಿಕೊಂಡರೇ ಎಲ್‍ಪಿಜಿ ಬೆಲೆ ದುಪ್ಪಟ್ಟಾಗಿದೆ. 2014 ರಲ್ಲಿ ಗೃಹ ಬಳಕೆಯ ಸಿಲಿಂಡರ್ ಬೆಲೆ 410.50. ಇತ್ತು ಇಂದು ಇದು 887.50 ರೂಪಾಯಿಗೆ ಏರಿಕೆಯಾಗಿದೆ. ಇದನ್ನೂ ಓದಿ : ಕಾರು ಅಪಘಾತಕ್ಕೂ ಮುನ್ನ ಮದ್ಯ ಖರೀದಿಸಿದ್ದ ಇಶಿತಾ, ಬಿಂದು 

    ಕಳೆದ ಹದಿನೈದು ದಿನಗಳ ಹಿಂದೆಯಷ್ಟೇ 25 ರೂ. ಏರಿಕೆ ಮಾಡಲಾಗಿತ್ತು. ಇದಕ್ಕೂ ಮೊದಲು ಫೆಬ್ರವರಿ ಆರಂಭದಲ್ಲಿ 25 ರೂ., ಫೆಬ್ರವರಿ 15 ರಂದು 50 ರೂ., ಫೆಬ್ರವರಿ 25 ರಂದು 25 ರೂ., ಮಾರ್ಚ್ ಆರಂಭದಲ್ಲಿ 25 ರೂಪಾಯಿ ಏರಿಕೆಯಾಗಿತ್ತು.

    ಅಗಸ್ಟ್ ನಲ್ಲಿ ಬೆಲೆ ಏರಿಕೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ 10 ರೂ. ಬೆಲೆ ಇಳಿಕೆ ಮಾಡಲಾಗಿತ್ತು. 2021 ರಲ್ಲಿ ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್ ಮೇಲೆ 165.50 ರೂ. ಬೆಲೆ ಏರಿಕೆಯಾಗಿದೆ.

  • ಆಸ್ತಿ ತೆರಿಗೆ, ಅಡುಗೆ ಅನಿಲ ಹೆಚ್ಚಳ ವಿರೋಧಿಸಿ ಕಾಂಗ್ರೆಸ್‍ನಿಂದ ಬಿಬಿಎಂಪಿಗೆ ಮುತ್ತಿಗೆ

    ಆಸ್ತಿ ತೆರಿಗೆ, ಅಡುಗೆ ಅನಿಲ ಹೆಚ್ಚಳ ವಿರೋಧಿಸಿ ಕಾಂಗ್ರೆಸ್‍ನಿಂದ ಬಿಬಿಎಂಪಿಗೆ ಮುತ್ತಿಗೆ

    ಬೆಂಗಳೂರು: ಬಿಜೆಪಿ ಸರ್ಕಾರದ ಹಲವು ನೀತಿಗಳನ್ನು ಖಂಡಿಸಿ ಕಾಂಗ್ರೆಸ್ ಬಿಬಿಎಂಪಿ ಮುತ್ತಿಗೆ ಹಾಕಿದೆ. ಜನವಿರೋಧಿ ಕೇಂದ್ರ, ರಾಜ್ಯ ಹಾಗೂ ಬಿಬಿಎಂಪಿ ನೀತಿಗಳ ವಿರುದ್ಧ ಕೈ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರು ಕೇಂದ್ರ, ದಕ್ಷಿಣ, ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಲೀಂ ಅಹಮ್ಮದ್, ರಿಜ್ವಾನ್ ಅರ್ಷದ್, ರಾಮಲಿಂಗ ರೆಡ್ಡಿ ನಾಯಕರ ನೇತೃತ್ವದಲ್ಲಿ ಪಾಲಿಕೆಗೆ ಮುತ್ತಿಗೆ ಹಾಕಲಾಗಿದೆ. ಬಿಬಿಎಂಪಿ ಚಲೋ ಎಂಬ ಘೋಷವಾಕ್ಯದೊಂದಿಗೆ ಪ್ರತಿಭಟನೆ ನಡೆಸಲಾಗುತ್ತಿದೆ.

    ನಗರದಲ್ಲಿ ಆಸ್ತಿ ತೆರಿಗೆ ಹೆಚ್ಚಳ, ವಲಯ ವರ್ಗೀಕರಣ ನೆಪದಲ್ಲಿ ಸ್ವತ್ತು ಮಾಲೀಕರ ಮೇಲೆ 120 ಕೋಟಿ ಕಂದಾಯಕ್ಕೆ 240 ಕೋಟಿ ಬಡ್ಡಿ ವಸೂಲಿ ಮತ್ತು ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ದರ ಹೆಚ್ಚಳದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

    ಹಲಸೂರು ಗೇಟ್ ಪೊಲೀಸರಿಂದ, ಎಸಿಪಿ ನಜ್ಮಾ ಫಾರೂಖಿ ಹಾಗೂ ಪಿಐ ದೀಪಕ್ ನೇತೃತ್ವದಲ್ಲಿ ಬಂದೋ ಬಸ್ತ್ ಒದಗಿಸಲಾಗಿದೆ. ಬಿಬಿಎಂಪಿ ಆವರಣದಲ್ಲಿ ಸುಮಾರು 70 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ ಒಂದು ಕೆಎಸ್‍ಆರ್‍ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಮತ್ತೆ ಕೊರೊನಾ ಸ್ಫೋಟದ ಲಕ್ಷಣಗಳು – ನೆರೆಯ ಕೇರಳ, ಮಹಾರಾಷ್ಟ್ರದಲ್ಲಿ ಮಹಾಮಾರಿಯ ಅಬ್ಬರ 

    ರಾಜ್ಯ ಹಾಗೂ ಕೇಂದ್ರದ ವಿರುದ್ಧ ಎಂಎಲ್‍ಸಿ ಪಿ.ಆರ್. ರಮೇಶ್ ಅಸಮಾಧಾನ ಹೊರಹಾಕಿ, ವಿನಾಕರಣ ನಗರದ ಜನತೆ ಮೇಲೆ ಆರ್ಥಿಕ ಹೊರೆ ಹೇರುತ್ತಿದ್ದಾರೆ. ಬಿಡಿಎ ಯನ್ನು ಖಾಸಗೀಕರಣ ಮಾಡಲು ಹೊರಟಿದ್ದಾರೆ. ಎಲ್ಲಾ ಕಾಂಪ್ಲೆಕ್ಸ್ ಗಳನ್ನ ಮಾರಾಟ ಮಾಡಲು ಹೊರಟಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಮುಂದಾಗಿದ್ದಾರೆ. ಕೂಡಲೇ ಅನಧಿಕೃತ ಹೊರೆ ಹಾಕ್ತಿರೋ ಹೆಚ್ಚುವರಿ ತೆರಿಗೆಯನ್ನು ವಾಪಾಸ್ ಪಡೆಯಬೇಕೆಂದು ಆಗ್ರಹಿಸಿದರು. ಇದನ್ನೂ ಓದಿ: ರಾಣಾ, ರಕುಲ್, ರವಿತೇಜ, ಚಾರ್ಮಿಗೆ ಜಾರಿ ನಿರ್ದೇಶನಾಲಯದ ನೋಟಿಸ್

    ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ, ಕೋವಿಡ್ ಇರುವುದರಿಂದ ಹೆಚ್ಚು ಸಂಖ್ಯೆಯಲ್ಲಿ ಸೇರದೆ ಪ್ರತಿಭಟನೆ ಮಾಡುತ್ತಿದ್ದೇವೆ. ಬಿಬಿಎಂಪಿಯಿಂದ ಆಸ್ತಿ ತೆರಿಗೆ ವಿಚಾರದಲ್ಲಿ ತಪ್ಪಾಗಿದೆ. ಸರಿಪಡಿಸಲು ನೀಡಿದ ಗಡುವು ಮುಗಿದಿದ್ದು, ಈಗ ಮುತ್ತಿಗೆ ಹಾಕಿದ್ದೇವೆ. ವಲಯ ವರ್ಗೀಕರಣದ ನೆಪ ಹೇಳಿ ಆಸ್ತಿಮಾಲೀಕರಿಗೆ ವಿನಾಕಾರಣ 104 ಕೋಟಿ ರೂ ಕಂದಾಯಕ್ಕೆ 240 ಕೋಟಿ ರೂ ಬಡ್ಡಿ ಹಾಗೂ ದಂಡ ವಸೂಲಿ ಮಾಡಲು ಮುಂದಾಗಿದ್ದು ತಪ್ಪು. ಬಿಜೆಪಿ ಸರ್ಕಾರ ಜನರ ಹಿತ ಕಾಯುವಲ್ಲಿ ವಿಫಲವಾಗಿದೆ. ಪೆಟ್ರೋಲ್ 105, ಗ್ಯಾಸ್ ಬೆಲೆ 900 ದಾಟಿದೆ. ಅಧಿಕಾರದಲ್ಲಿ ಇಲ್ಲದೇ ಇರುವಾಗ ಒಂದು, ಇದ್ದಾಗ ಒಂದು ಜನವಿರೋಧಿ ನೀತಿ ಕೈಗೊಳ್ಳುತ್ತಿದ್ದಾರೆ ಎಂದರು. ಪ್ರಧಾನಿ ನರೇಂದ್ರ ಮೋದಿ ಆಡಳಿತಕ್ಕೆ ಬಂದ ನಂತರ 23 ಕೋಟಿ ಜನ ಬಡತನ ರೇಖೆಗಿಂತ ಕೆಳಗೆ ಬಂದಿದ್ದಾರೆ. ಕೇವಲ ಬಣ್ಣಬಣ್ಣದ ಮಾತಾಡಿ, ಜನರ ಸಂಕಷ್ಟ ಕೇಳೋರಿಲ್ಲ ಎಂದರು.

  • ಬೆಲೆ ಏರಿಕೆಗೆ ಬಿಜೆಪಿ ಕಾರ್ಯಕರ್ತನಿಂದಲೇ ಆಕ್ರೋಶ- ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

    ಬೆಲೆ ಏರಿಕೆಗೆ ಬಿಜೆಪಿ ಕಾರ್ಯಕರ್ತನಿಂದಲೇ ಆಕ್ರೋಶ- ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

    – ಬಿಜೆಪಿ ಕಾರ್ಯಕರ್ತನಿಂದಲೇ ಬಿಜೆಪಿಗೆ ಮುಖಭಂಗ

    ಶಿವಮೊಗ್ಗ: ಬೆಲೆ ಏರಿಕೆ ಖಂಡಿಸಿ ಬಿಜೆಪಿ ಬೂತ್ ಅಧ್ಯಕ್ಷ ಶೇಖರ್ ಅವರು ನಾಮಫಲಕ ತಿರಸ್ಕಾರ ಮಾಡಿ, ಸ್ಥಳದಲ್ಲೇ ಪಕ್ಷಕ್ಕೆ ರಾಜೀನಾಮೆ ನೀಡಿದ ಘಟನೆ ನಡೆದಿದೆ. ಈ ಮೂಲಕ ಬಿಜೆಪಿ ಕಾರ್ಯಕರ್ತರಿಂದಲೇ ಪಕ್ಷಕ್ಕೆ ಮುಖಭಂಗ ಆದಂತಾಗಿದೆ.

    ನಗರದ ಅಶೋಕನಗರದಲ್ಲಿ ಬಿಜೆಪಿ ವತಿಯಿಂದ ವಾರ್ಡ್ ಅಧ್ಯಕ್ಷರ ಮನೆ ಬಾಗಿಲಿಗೆ ತೆರಳಿ ನಾಮಫಲಕವನ್ನು ವಿತರಿಸುವ ಕಾರ್ಯಕ್ರಮ ನಡೆಯುತ್ತಿತ್ತು. ವಾರ್ಡ್ ನಂ.26ರ ಬೂತ್ ಸಂಖ್ಯೆ 199ರ ಅಧ್ಯಕ್ಷರಾಗಿದ್ದ ಶೇಖರ್ ಅವರ ಮನೆಗೆ ನಾಮಫಲಕವನ್ನು ನೀಡುವ ಉದ್ದೇಶದಿಂದ ಬಿಜೆಪಿ ಮುಖಂಡರು ತೆರಳಿದ್ದರು. ಈ ಸಮಯದಲ್ಲಿ ನಾಮಫಲಕವನ್ನು ತಿರಸ್ಕಾರ ಮಾಡುವುದರ ಜೊತೆಗೆ ನಾಮಫಲಕ ನೀಡಲು ಬಂದವರ ಕೈಗೆ ಸ್ಥಳದಲ್ಲಿಯೇ ರಾಜೀನಾಮೆ ಪತ್ರವನ್ನು ಶೇಖರ್ ನೀಡಿದ್ದಾರೆ. ಇದರಿಂದ ಬಿಜೆಪಿ ಮುಖಂಡರಿಗೆ ಇರುಸು-ಮುರುಸು ಉಂಟಾಗಿದೆ. ಇದನ್ನೂ ಓದಿ: ಮೈಸೂರಲ್ಲಿ ನಡೆದ ಗ್ಯಾಂಗ್‍ರೇಪ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು: ಸಿ.ಟಿ ರವಿ

    ಘಟನೆಗೆ ಸಂಭಂದಿಸಿದಂತೆ ಪ್ರತಿಕ್ರಿಯೆ ನೀಡಿರುವ ಶೇಖರ್, ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ಜನಸಾಮಾನ್ಯರಿಗೆ ಅಭಿವೃದ್ಧಿಯ ವಿಷಯವಾಗಿ ನೂರಾರು ಭರವಸೆಗಳನ್ನು ನೀಡಿದ್ದರು. ಆದರೆ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ತನ್ನ ಹೇಳಿಕೆಗೆ ವ್ಯತಿರಿಕ್ತ ಎನ್ನುವ ಹಾಗೆ ಪೆಟ್ರೋಲ್, ಡೀಜಲ್, ಅಡುಗೆ ಅನಿಲ, ಸೇರಿದಂತೆ ದಿನಸಿ ವಸ್ತುಗಳ ಬೆಲೆ ಗಗನಕ್ಕೇರಿಸಿದೆ. ಈ ಕಾರಣ ನಾವು ಜನರ ಮಧ್ಯದಲ್ಲಿ ಪಕ್ಷದ ಪರವಾಗಿ ಮಾತನಾಡಲು ಹೋದಾಗ ನಾವು ಜನರಿಗೆ ಉತ್ತರ ನೀಡಲು ಕಷ್ಟವಾಗುತ್ತಿದೆ. ಅದೆಷ್ಟೋ ಬಾರಿ ಜನರಿಂದ ಅವಮಾನಕ್ಕೆ ಒಳಗಾಗಬೇಕಾಗಿದೆ. ಈ ಕಾರಣಕ್ಕೆ ನಾನು ಬಿಜೆಪಿ ಸದಸ್ಯತ್ವ ಹಾಗೂ ಬೂತ್ ಅಧ್ಯಕ್ಷ ಸ್ಥಾನಕ್ಕೆ ಬಹಿರಂಗವಾಗಿ ಜನರ ಎದುರಲ್ಲೇ ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.

  • ಬೆಲೆ ಏರಿಕೆ ವಿರುದ್ಧ ಅಸಮಾಧಾನ – ಖಾಲಿ ಸಿಲಿಂಡರ್ ಪ್ರದರ್ಶನ

    ಬೆಲೆ ಏರಿಕೆ ವಿರುದ್ಧ ಅಸಮಾಧಾನ – ಖಾಲಿ ಸಿಲಿಂಡರ್ ಪ್ರದರ್ಶನ

    ಮಡಿಕೇರಿ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.

    ಮಡಿಕೇರಿ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಖಾಲಿ ಸಿಲಿಂಡರ್ ಗಳನ್ನು ಪ್ರದರ್ಶಿಸಿ ಅಸಮಾಧಾನ ವ್ಯಕ್ತಪಡಿಸಿದ ಮಹಿಳಾ ಕಾಂಗ್ರೆಸ್ಸಿಗರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ಅಗತ್ಯ ವಸ್ತುಗಳ ಬೆಲೆಯನ್ನು ಇಳಿಕೆ ಮಾಡಿ ಜನಸಾಮಾನ್ಯರಿಗೆ ನೆರವಾಗುವ ಬದಲು ಸರ್ಕಾರ ಗಾಯದ ಮೇಲೆ ಬರೆ ಎಳೆದಿದೆ ಎಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾಅಚ್ಚಯ್ಯ ಆರೋಪಿಸಿದರು. ಇದನ್ನೂ ಓದಿ: ರಸ್ತೆ ಬಿಟ್ಟು ಮನೆ ಛಾವಣಿ ಹತ್ತಿ ನಿಂತ ಆಟೋ!

    ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್ ಮಾತನಾಡಿ, ಬೆಲೆ ಏರಿಕೆಯನ್ನು ನಿಯಂತ್ರಿಸಬೇಕೆಂದು ಒತ್ತಾಯಿಸಿದರು. ನಗರಾಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಲೆ ಏರಿಕೆ ಕ್ರಮವನ್ನು ಖಂಡಿಸಿದರು. ಮಾಜಿ ಸಚಿವೆ ಸುಮಾ ವಸಂತ್, ನಗರಸಭಾ ಮಾಜಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಮಹಿಳಾ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಕೆಪಿಸಿಸಿ ಪ್ರಮುಖರಾದ ಟಿ.ಪಿ.ರಮೇಶ್, ಶಾಹಿದ್ ತೆಕ್ಕಿಲ್, ಜಿಲ್ಲಾ ಸಮಿತಿಯ ಹನೀಫ್ ಮಡಿಕೇರಿ, ಯುವ ಘಟಕದ ಹನೀಫ್ ಸಂಪಾಜೆ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಜಿ.ಪಂ, ತಾ.ಪಂ ಮಾಜಿ ಸದಸ್ಯರುಗಳು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಮೂರು ದಿನದಿಂದ ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತ ಬಸ್ – ವಾಹನ ಸವಾರರ ಪರದಾಟ

  • ಏರಿಕೆಯಾಯ್ತು ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್ ಬೆಲೆ

    ಏರಿಕೆಯಾಯ್ತು ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್ ಬೆಲೆ

    ನವದೆಹಲಿ: ಪೆಟ್ರೋಲಿಯಂ ಕಂಪನಿಗಳು ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಿವೆ. ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯಲ್ಲಿ 25 ರೂ.ಏರಿಕೆಯಾಗಿದೆ.

    ಬೆಲೆ ಏರಿಕೆ ನಂತರ ದೆಹಲಿಯಲ್ಲಿ ಗೃಹ ಬಳಕೆಯ 14.2 ಕೆಜಿಯ ಎಲ್‍ಪಿಜಿ ಸಿಲಿಂಡರ್ ಬೆಲೆ 859.5 ರೂ.ಗೆ ತಲುಪಿದೆ. ಕೋಲ್ಕತ್ತಾದಲ್ಲಿ 886 ರೂ. ಮುಂಬೈನಲ್ಲಿ 859.5 ರೂ. ಲಕ್ನೋದಲ್ಲಿ 897.5 ರೂ.ಗೆ ತಲುಪಿದೆ. ವಾಣಿಜ್ಯ ಬಳಕೆಯ 19 ಕೆಜಿ ತೂಕದ ಸಿಲಿಂಡರ್ ಬೆಲೆ 68 ರೂ.ನಷ್ಟು ಹೆಚ್ಚಳವಾಗಿದೆ. ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಒಂದು ಸಿಲಿಂಡರ್ ಬೆಲೆ 1,618 ರೂ.ಗೆ ತಲುಪಿದೆ. ಬೆಂಗಳೂರಿನಲ್ಲಿ 14.2 ಕೆಜಿಯ ಎಲ್‍ಪಿಜಿ ಸಿಲಿಂಡರ್ ಬೆಲೆ 837.50 ರೂ.ಗಳಿಂದ 863 ರೂ.ಗೆ ತಲುಪಲಿದೆ ಎಂದು ವರದಿಯಾಗಿದೆ.

    ತೈಲ ಕಂಪನಿಗಳು ಪ್ರತಿ ತಿಂಗಳು ಮೊದಲ ಮತ್ತು 15ನೇ ತಾರೀಖಿನಂದು ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್ ದರವನ್ನು ಪರಿಶೀಲಿಸುತ್ತವೆ. ಇದಕ್ಕೂ ಮೊದಲು ಜುಲೈ 1ರಂದು ತೈಲ ಕಂಪನಿಗಳು ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು 25 ರೂ.ನಷ್ಟು ಹೆಚ್ಚಿಸಿದ್ದವು.

    ಮನೆಯಲ್ಲಿಯೇ ಕುಳಿತು ಕನೆಕ್ಷನ್ ಪಡೆದುಕೊಳ್ಳಿ:
    ಈಗ ನೀವು ಹೊಸ ಎಲ್‍ಪಿಜಿ ಕನೆಕ್ಷನ್ ಪಡೆಯಲು ಡಿಸ್ಟ್ರಿಬ್ಯೂಟರ್ ಆಫಿಸ್ ಗೆ ಹೋಗುವ ಅವಶ್ಯಕತೆ ಇಲ್ಲ. ನೀವು ಹೊಸ ಕನೆಕ್ಷನ್ ಪಡೆಯಲು ಇಚ್ಛಿಸಿದ್ರೆ ಕೇವಲ ಒಂದು ಮಿಸ್ಡ್ ಕಾಲ್ ನೀಡಬೇಕು. ಈ ವ್ಯವಸ್ಥೆಯನ್ನು ಇಂಡಿಯನ್ ಆಯಿಲ್ ಕಾರ್ಪೋರೇಷನ್ (ಐಓಸಿ) ಕಲ್ಪಿಸಿದೆ. ಇದನ್ನೂ ಓದಿ: ತಾಲಿಬಾನ್ ಉಗ್ರರ ಸರ್ಕಾರಕ್ಕೆ ಪಾಕಿಸ್ತಾನ, ಚೀನಾ, ಇರಾನ್ ಬೆಂಬಲ

    ಹೊಸ ಕನೆಕ್ಷನ್ ಗಾಗಿ 8454955555 ಸಂಖ್ಯೆಗೆ ಮಿಸ್ಡ್ ಕಾಲ್ ನೀಡಬೇಕು. ಸಿಲಿಂಡರ್ ತುಂಬಿಸಬೇಕಾದ್ರೆ ಇದೇ ನಂಬರ್ ಬಳಸಬಹುದು. ಗ್ಯಾಸ್ ರೀಫಿಲ್ಲಿಂಗ್ ಗಾಗಿ ನಿಮ್ಮ ಕಡ್ಡಾಯವಾಗಿ ರಿಜಿಸ್ಟರ್ ನಂಬರ್ ಬಳಸಬೇಕು. ಇದನ್ನೂ ಓದಿ: ಉಗ್ರರಿಗೆ ಆಟ, ಮಹಿಳೆಯರಿಗೆ ಪ್ರಾಣ ಸಂಕಟ – ಷರಿಯತ್ ಏನು ಹೇಳುತ್ತದೆ? ತಾಲಿಬಾನ್ ಕಾನೂನು ಏನು?

  • ಪ್ರಧಾನಿ ಮೋದಿ ಆಡಳಿತ ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡಂತೆ: ಗುಂಡೂರಾವ್

    ಪ್ರಧಾನಿ ಮೋದಿ ಆಡಳಿತ ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡಂತೆ: ಗುಂಡೂರಾವ್

    – ಚೌಕಿದಾರ ಅಲ್ಲ ಜನರ ಪಾಲಿನ ಕೆಟ್ಟ ಗ್ರಹಚಾರ

    ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಬಳಕೆ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ದಿನೇಶ್ ಗುಂಡೂರಾವ್, ಪ್ರಧಾನಿ ಮೋದಿಯವರ ಆಡಳಿತ. ಇದೊಂದು ರೀತಿ ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡಂತೆ ಎಂದು ವ್ಯಂಗ್ಯ ಮಾಡಿದ್ದಾರೆ.

    ಕೇಂದ್ರ ಸರ್ಕಾರದ ಆಡಳಿತದ ಬಗ್ಗೆ ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ದಿನೇಶ್ ಗುಂಡೂರಾವ್, ಚೇಳಿಗೆ ಯಜಮಾನಿಕೆ ನೀಡಿ ಮನೆಯವರೆಲ್ಲಾ ಕುಟುಕಿಸಿಕೊಳ್ಳುವಂತಾಗಿದೆ ಪ್ರಧಾನಿ ಮೋದಿಯವರ ಆಡಳಿತ. ಇದೊಂದು ರೀತಿ ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡಂತೆ. ಸ್ವಘೋಷಿತ ‘ಚೌಕಿದಾರ’ ಮೋದಿಯವರು ನಿಜವಾದ ‘ಚೌಕಿದಾರ’ರಲ್ಲ. ಬದಲಿಗೆ ಜನಸಾಮಾನ್ಯರ ಪಾಲಿನ ‘ಕೆಟ್ಟ ಗ್ರಹಚಾರ’ವಾಗಿದ್ದಾರೆ. ಮೋದಿಯವರ ಅಚ್ಚೇದಿನ್‍ನ ಸತ್ಯ ಜನರಿಗೆ ಈಗ ಅರಿವಾಗುತ್ತಿದೆ. ಬೆಲೆಯೇರಿಸಿ ಜನರ ಜೇಬು ಖಾಲಿ ಮಾಡುವುದೇ ಕೇಂದ್ರ ಸರ್ಕಾರದ ಒಂದಂಶದ ಕಾರ್ಯಕ್ರಮವಿದ್ದಂತೆ ಭಾಸವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

    ಒಂದೇ ತಿಂಗಳ ಅವಧಿಯಲ್ಲಿ 4 ಬಾರಿ ಎಲ್‍ಪಿಜಿ ಬೆಲೆಯೇರಿಕೆಯಾಗಿದೆ. ಒಂದೊಂದು ರೂಪಾಯಿಗೂ ಪರಿತಪಿಸುತ್ತಿರುವ ಬಡಜನತೆ ಈ ಬೆಲೆಯೇರಿಕೆ ತಾಪ ಸಹಿಸಿಕೊಳ್ಳಲು ಹೇಗೆ ಸಾಧ್ಯ? ಈ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತಾದರೂ ಸಂವೇದನೆ ಬೇಡವೆ ಎಂದು ಪ್ರಶ್ನಿಸಿದ್ದಾರೆ.

    ಹೊಟ್ಟೆ-ಬಟ್ಟೆ ಕಟ್ಟಿ ಜೀವನ ನಡೆಸುತ್ತಿರುವ ಜನ ಈ ಸರ್ಕಾರದ ದುಡ್ಡಿನ ದುರಾಸೆಗೆ ನೆಮ್ಮದಿಯನ್ನೇ ಕಳೆದುಕೊಂಡಿದ್ದಾರೆ. ಬೆಲೆಯೇರಿಕೆಯಿಂದ ದುಡಿದ ಹಣ ಉಳಿಸುವುದಿರಲಿ,ತಿಂಗಳ ಸಂಸಾರ ನಡೆಸುವುದೂ ಕಷ್ಟವಾಗಿದೆ. ಮಾತಲ್ಲೇ ಮಂಟಪ ಕಟ್ಟುವ ಬಣ್ಣದ ಮಾತುಗಳು ಜನರ ಹೊಟ್ಟೆ ತುಂಬಿಸುವುದಿಲ್ಲ. ಈ ಸತ್ಯವನ್ನು ಮೋದಿಯವರು ಇನ್ನಾದರೂ ಅರ್ಥ ಮಾಡಿಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.

    ಫೆಬ್ರವರಿಯಲ್ಲಿ 3 ಬಾರಿ ಏರಿಕೆ ಕಂಡಿದ್ದ ಅಡುಗೆ ಅನಿಲ ಸೋಮವಾರ ಕೂಡ 25 ರೂಪಾಯಿ ಏರಿಕೆ ಕಂಡಿದೆ. 14.2 ಕೆಜಿ ಸಿಲಿಂಡರ್ ಬೆಲೆ 822 ರೂಪಾಯಿ ಆಗಿದ್ದರೆ, 19 ಕೆಜಿಯ ವಾಣಿಜ್ಯ ಉದ್ದೇಶಿತ ಗ್ಯಾಸ್ ಸಿಲಿಂಡರ್ ದರ 1,666 ರೂಪಾಯಿ ಆಗಿಲ್ಲ. ಬೆಂಗಳೂರಿನಲ್ಲಿ ಪೆಟ್ರೋಲ್ ದರ 7 ಪೈಸೆ ಇಳಿದಿದ್ದು ಲೀಟರ್‍ಗೆ 94.22 ರೂ ಇದೆ. ಡೀಸೆಲ್ ದರ 5 ಪೈಸೆ ಕಡಿಮೆಯೊಂದಿಗೆ 86.37 ರೂಪಾಯಿ ಆಗಿದೆ.

    ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಒತ್ತಾಯ: ತೈಲ ದರ ಹಾಗೂ ಹಾಗೂ ಗ್ಯಾಸ್ ದರ ಏರಿಕೆಗೆ ಆಟೋ ಚಾಲಕರು ತತ್ತರಿಸಿದ್ದು ಆಟೋ ಪ್ರಯಾಣದರ ಏರಿಕೆಗೆ ಚಾಲಕರು ಪಟ್ಟು ಹಿಡಿದಿದ್ದಾರೆ. ಸದ್ಯ ಬೆಂಗಳೂರಲ್ಲಿ 2 ಲಕ್ಷ ಆಟೋಗಳು ಸಂಚರಿಸುತ್ತಿದ್ದು, ಪ್ರಸ್ತುತ ಇರುವ ಪ್ರಯಾಣದರ 25ರೂ.ನಿಂದ 36 ರೂ.ಗೆ ಏರಿಕೆ ಮಾಡುವಂತೆ ಮನವಿ ಮಾಡಿದ್ದಾರೆ. 2013ರಲ್ಲಿ 1.9 ಕಿ.ಮೀಗೆ ಕನಿಷ್ಠ ದರ 20ರಿಂದ 25ರೂ.ಗೆ ಹೆಚ್ಚಿಸಲಾಗಿತ್ತು. ಬಳಿಕ 2019ರಲ್ಲೂ ಪ್ರಯಾಣದರ ಹೆಚ್ಚಳಕ್ಕೆ ಮನವಿ ಮಾಡಲಾಗಿತ್ತು. ಆದ್ರೆ ಸರ್ಕಾರ ಅನುಮತಿ ನೀಡಿರಲಿಲ್ಲ, ಆದ್ರೀಗ ತೈಲ ಮತ್ತು ಗ್ಯಾಸ್ ದರ ಏರಿಕೆ ಬೆನ್ನಲ್ಲೇ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಿಗೆ ದರ ಪರಿಷ್ಕರಣೆಗೆ ಮನವಿ ಮಾಡಿದ್ದಾರೆ.

  • ತಳ್ಳುಗಾಡಿ ಮೇಲೆ ದ್ವಿಚಕ್ರ ವಾಹನ- ಅತಿಥಿ ಉಪನ್ಯಾಸಕರಿಂದ ಅಣಕು ಶವಯಾತ್ರೆ

    ತಳ್ಳುಗಾಡಿ ಮೇಲೆ ದ್ವಿಚಕ್ರ ವಾಹನ- ಅತಿಥಿ ಉಪನ್ಯಾಸಕರಿಂದ ಅಣಕು ಶವಯಾತ್ರೆ

    – ಬೆಲೆ ಏರಿಕೆ ಖಂಡಿಸಿ ವಿಭಿನ್ನ ಪ್ರತಿಭಟನೆ

    ಉಡುಪಿ: ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಉಡುಪಿಯಲ್ಲಿ ವಿಭಿನ್ನ ರೀತಿಯಲ್ಲಿ ಖಂಡಿಸಿ ಪ್ರತಿಭಟಿಸಲಾಯಿತು. ಉಡುಪಿ ಜಿಲ್ಲಾ ನಾಗರಿಕ ವೇದಿಕೆ ಈ ಪ್ರತಿಭಟನೆಯ ನೇತೃತ್ವ ವಹಿಸಿತು.

    ಜೋಡುಕಟ್ಟೆಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಉಡುಪಿಯ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಅಜ್ಜರಕಾಡು ಹುತಾತ್ಮ ವೇದಿಕೆ ಬಳಿ ಪ್ರತಿಭಟನಾ ಮೆರವಣಿಗೆ ಸಮಾಪನಗೊಂಡಿತು. ತಳ್ಳುಗಾಡಿಯಲ್ಲಿ ಮೋಟಾರ್ ಬೈಕ್, ಗ್ಯಾಸ್ ಸಿಲಿಂಡರ್ ಪ್ರತಿಭಟನಾಕಾರರು ವಿಭಿನ್ನವಾಗಿ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಪೆಟ್ರೋಲ್ ಹಾಕಿ ವಾಹನ ಚಲಾಯಿಸಲು ಸಾಧ್ಯವಿಲ್ಲ, ತಳ್ಳುಗಾಡಿಯ ಮೇಲೆ ದ್ವಿಚಕ್ರ ವಾಹನ ಇಟ್ಟು ತಳ್ಳುತ್ತಾ ಹೋಗುವ ಪರಿಸ್ಥಿತಿ ಇದೆ ಎನ್ನುವುದನ್ನು ಮಾರ್ಮಿಕವಾಗಿ ಹೇಳಿದರು.

    ಪ್ರತಿಭಟನೆಗೆ ರಾಜ್ಯದ ಅತಿಥಿ ಉಪನ್ಯಾಸಕರು ಕೈಜೋಡಿಸಿದ್ದು ರಾಜ್ಯ ಸರ್ಕಾರದ ವಿರುದ್ಧ ಅಣಕು ಶವಯಾತ್ರೆ ನಡೆಸಿದರು. ಸಂಬಳ ಪಡೆಯದೇ, ಕೆಲಸವಿಲ್ಲದೆ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ನಮ್ಮ ಹೆಣದ ಯಾತ್ರೆಯನ್ನು ನಾವೇ ಮಾಡುವಂತಹ ಪರಿಸ್ಥಿತಿ ಇದೆ ಎಂಬುದನ್ನು ತೆರೆದಿಟ್ಟರು.

    ಈ ಸಂದರ್ಭದಲ್ಲಿ ಮಾತನಾಡಿದ ನಿತ್ಯಾನಂದ ವಳಕಾಡು, ದೇಶದಲ್ಲಿ ಕೊರೊನಾ ಮಹಾಮಾರಿ ಬಂದು ಜನಸಾಮಾನ್ಯರಿಗೆ ಬಹಳ ಕಷ್ಟವಾಗಿದೆ. ದುರ್ಗಮ ಸಂದರ್ಭದಲ್ಲಿ ಸರ್ಕಾರ ಡೀಸೆಲ್ ಪೆಟ್ರೋಲ್ ಬೆಲೆ ಏರಿಕೆ ಮಾಡುವುದು, ಅಡುಗೆ ಅನಿಲದ ಬೆಲೆ ಏರಿಸಿರುವುದು ಖಂಡನೀಯ ಕೂಡಲೇ ಬೆಲೆ ತಿಳಿಸಬೇಕು. ಜನಸಾಮಾನ್ಯರಿಗೆ ಬದುಕುವ ಅವಕಾಶ ಕೊಡಬೇಕು ಎಂದು ಒತ್ತಾಯಿಸಿದರು.