Tag: priest

  • ಮಹಿಳೆಯ ನಗ್ನ ವಿಡಿಯೋ ರೆಕಾರ್ಡ್‌ ಮಾಡ್ಕೊಂಡು ಬ್ಲ್ಯಾಕ್‌ಮೇಲ್‌ – ಪ್ರತಿಷ್ಠಿತ ದೇವಸ್ಥಾನದ ಅರ್ಚಕ ಅರೆಸ್ಟ್‌

    ಮಹಿಳೆಯ ನಗ್ನ ವಿಡಿಯೋ ರೆಕಾರ್ಡ್‌ ಮಾಡ್ಕೊಂಡು ಬ್ಲ್ಯಾಕ್‌ಮೇಲ್‌ – ಪ್ರತಿಷ್ಠಿತ ದೇವಸ್ಥಾನದ ಅರ್ಚಕ ಅರೆಸ್ಟ್‌

    ಬೆಂಗಳೂರು: ವಾಟ್ಸಪ್‌ನಲ್ಲಿ ಮಹಿಳೆಯ ಬೆತ್ತಲೆ ವಿಡಿಯೋ ರೆಕಾರ್ಡ್‌ (Video Record) ಮಾಡಿಕೊಂಡು ಬ್ಲ್ಯಾಕ್‌ ಮಾಡುತ್ತಿದ್ದ ಕೇರಳ ತ್ರಿಶೂರ್‌ನ ಪ್ರತಿಷ್ಠಿತ ದೇವಾಲಯದ ಅರ್ಚಕನನ್ನು ಬೆಳ್ಳಂದೂರು ಪೊಲೀಸರು (Bellandur Police) ಬಂಧಿಸಿದ್ದಾರೆ.

    ಪ್ರತಿಷ್ಠಿತ ಪೆರಿಗೊಟ್ಟುಕ್ಕಾರ ದೇವಾಲಯದ ಅರ್ಚಕ (Priest) ಅರುಣ್ ಬಂಧಿತ ಆರೋಪಿ. ಪ್ರಕರಣ ಬೆಳಕಿಗೆ ಬಂದ ಬಳಿಕ ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಇರಾನ್‌-ಇಸ್ರೇಲ್‌ ಸಂಘರ್ಷ ತೀವ್ರ – ಇಸ್ರೇಲ್‌ ಮಿಸೈಲ್‌ ದಾಳಿಗೆ ಇರಾನ್‌ನ 14 ಅಧಿಕಾರಿಗಳು ಬಲಿ

    ಏನಿದು ಅರ್ಚಕನ ಕಾಮದಾಟ?
    ಮಹಿಳೆಯೊಬ್ಬರು (Bengalur Women) ತನಗೆ ಮಾಟಮಂತ್ರ ಮಾಡಿಸಿದ್ದಾರೆಂದು ದೇವಸ್ತಾನಕ್ಕೆ ತೆರಳಿದ್ದರು. ಈ ವೇಳೆ ದೇವಾಲಯದ ಅರ್ಚಕ ಅರುಣ್ ಪರಿಚಯ ಆಗಿತ್ತು. 24,000 ರೂ. ಕೊಟ್ಟರೆ ಪೂಜೆ ಮಾಡೋದಾಗಿ ಅರುಣ್ ಹೇಳಿದ್ದ. ಬಳಿಕ ಮಹಿಳೆ ನಂಬರ್ ಪಡೆದು ಹೇಳಿದ ದಿನ ಬರುವಂತೆ ಸೂಚನೆ ಕೊಟ್ಟಿದ್ದ. ಇದಾದ ಬಳಿಕ ಮಹಿಳೆಗೆ ತಡರಾತ್ರಿಯಲ್ಲಿ ನಿರಂತರ ವಾಟ್ಸಪ್ ಕರೆ ಮಾಡುತ್ತಿದ್ದ. ತಾನು ಬೆತ್ತಲೆಯಾಗಿ ನಿಂತು ವಿಡಿಯೋ ಕರೆ ಮಾಡುತ್ತಿದ್ದ. ಅಲ್ಲದೇ ನಿಮಗೆ ಮಾಡಿರುವ ಮಾಟ ಮಂತ್ರ ಪರಿಹಾರ ಆಗಬೇಕಾದ್ರೆ ಸಂಪೂರ್ಣ ಬೆತ್ತಲಾಗುವಂತೆ ಪೀಡಿಸುತ್ತಿದ್ದ. ಇದನ್ನೂ ಓದಿ: ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿಗೆ ಬ್ರೇಕ್ – ರಸ್ತೆಗಿಳಿದ್ರೆ ಬೈಕ್ ಸೀಜ್

    ಮಹಿಳೆ ಇದನ್ನ ನಿರಾಕರಿಸಿದ್ದಕ್ಕೆ ಬೆತ್ತಲಾಗಿಲ್ಲ ಅಂದ್ರೆ ನಿನ್ನ ಇಬ್ಬರು ಮಕ್ಕಳು ಸಾಯೋ ಹಾಗೆ ರಿಟರ್ನ್ ಪೂಜೆ‌ ಮಾಡ್ತೀನಿ ಅಂತ ಬೆದರಿಕೆ ಹಾಕಿದ್ದ. ಅರ್ಚಕನ ಬೆದರಿಕೆಯಿಂದ ಮಹಿಳೆ ಬೆತ್ತಲಾಗಿದ್ದಳು. ಬಳಿಕ ಬೆತ್ತಲೆ ಆಗಿರೋದನ್ನ ಅರ್ಚಕ ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದ. ನಂತರ ಆ ವಿಡಿಯೋ ಇಟ್ಟುಕೊಂಡು ಕರೆದಾಗಲೆಲ್ಲ ಕೇರಳಕ್ಕೆ ಬರುವಂತೆ ಒತ್ತಾಯ ಮಾಡ್ತಿದ್ದ. ನೀನು ಬರುವಾಗ ಹೇಳು ರೂಂ ಬುಕ್‌ ಮಾಡ್ತೀನಿ ಅಂತ ಚಿತ್ರಹಿಂಸೆ ಕೊಟ್ತಿದ್ದ. ಇದರಿಂದ ಬೇಸತ್ತ ಮಹಿಳೆ ಅರ್ಚಕ ಅರುಣ್‌ ಹಾಗೂ ಮುಖ್ಯ ಅರ್ಚಕ ಉನ್ನಿ ದಾಮೋದರ್ ವಿರುದ್ಧ ಬೆಳ್ಳಂದೂರು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು.

    ಅಸಭ್ಯ ವರ್ತನೆ ಮತ್ತು ಕಾರಿನಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅರ್ಚಕ ಅರುಣ್‌ನನ್ನ ಬಂಧಿಸಿದ್ದಾರೆ. ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ಪತನ – 80 ಜನರ ಡಿಎನ್‌ಎ ಮ್ಯಾಚ್, 33 ಮೃತದೇಹಗಳ ಹಸ್ತಾಂತರ

  • ಕೈ, ಕಾಲು ಕಟ್ಟಿ ಪೂಜಾರಿಯ ಕೊಲೆ – 3 ವಾರಗಳ ಹಿಂದೆಯೇ ಅರಣ್ಯದಲ್ಲಿ ಬೀಸಾಡಿರುವ ಶಂಕೆ

    ಕೈ, ಕಾಲು ಕಟ್ಟಿ ಪೂಜಾರಿಯ ಕೊಲೆ – 3 ವಾರಗಳ ಹಿಂದೆಯೇ ಅರಣ್ಯದಲ್ಲಿ ಬೀಸಾಡಿರುವ ಶಂಕೆ

    ಚಿಕ್ಕಬಳ್ಳಾಪುರ: ಕೈ, ಕಾಲು ಕಟ್ಟಿ ಪೂಜಾರಿಯ ಕೊಲೆ ಮಾಡಿ, ಮೃತದೇಹವನ್ನು ಅರಣ್ಯದಲ್ಲಿ ಬೀಸಾಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಕೊರ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

    ಕೊರ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ ಭಾನುವಾರ ಅರಣ್ಯ ಇಲಾಖೆಯ ಗಾರ್ಡ್ ಹನುಮಂತಪ್ಪ ರೌಂಡ್ಸ್ ಹಾಕುತ್ತಿದ್ದಾಗ ಕೊಳೆತ ಶವವೊಂದು ಕಾಣಿಸಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಶಿರೂರು ದುರಂತದಲ್ಲಿ ಜೀವ ಉಳಸಿಕೊಂಡಿದ್ದ ವೃದ್ಧ ಸಿಡಿಲಿಗೆ ಬಲಿ

    ಚೀಲವೊಂದರಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಕತ್ತಲ್ಲಿ ರುದ್ರಾಕ್ಷಿ, ಕೈಯಲ್ಲಿ ರುದ್ರಾಕ್ಷಿ, ಹಳದಿ ಪಂಚೆ, ಶರ್ಟ್ ಧರಿಸಿದ್ದು, ನೋಡುವುದಕ್ಕೆ ದೇವಸ್ಥಾನದ ಪೂಜಾರಿಯಂತೆ ಕಾಣಿಸುತ್ತದೆ ಎನ್ನಲಾಗಿದೆ. ಜೊತೆಗೆ ಶವವನ್ನು ಮೂರು ವಾರಗಳ ಹಿಂದೆಯೇ ಬೀಸಾಡಿರುವ ಶಂಕೆ ವ್ಯಕ್ತವಾಗಿದ್ದು, ಗುರುತು ಪತ್ತೆಹಚ್ಚಲು ಹರಸಾಹಸಪಡುತ್ತಿದ್ದಾರೆ.

    ಸದ್ಯ ಸ್ಥಳಕ್ಕೆ ಫಾರೆನ್ಸಿಕ್ ತಂಡ, ಕ್ರೈಮ್ ಎಕ್ಸ್ಫರ್ಟ್ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ತನಿಖೆ ಚುರುಕುಗೊಂಡಿದೆ.ಇದನ್ನೂ ಓದಿ: ನೆಲಮಂಗಲ | ಹಿಟ್ ಆ್ಯಂಡ್ ರನ್‌ಗೆ ಬೈಕ್ ಸವಾರ ಸಾವು

  • ಚರ್ಚ್‌ನಲ್ಲಿ ಪಾದ್ರಿ ಮೇಲೆ ಭಿನ್ನಮತೀಯ ಗುಂಪಿನಿಂದ ಹಲ್ಲೆ

    ಚರ್ಚ್‌ನಲ್ಲಿ ಪಾದ್ರಿ ಮೇಲೆ ಭಿನ್ನಮತೀಯ ಗುಂಪಿನಿಂದ ಹಲ್ಲೆ

    ತಿರುವನಂತಪುರಂ: ಚರ್ಚ್‌ ಪಾದ್ರಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಥಲಯೋಲಪರಂಬುವಿನ ವಾರಿಕಂಕುನ್ನುವಿನ ಪ್ರಸಾದಗಿರಿ ಚರ್ಚ್‌ನಲ್ಲಿ ನಡೆದಿದೆ.

    ಪವಿತ್ರ ಬಲಿದಾನದ ಸಮಯದಲ್ಲಿ ಪಾದ್ರಿಯ ಮೇಲೆ ಹಲ್ಲೆ ನಡೆಸಲಾಗಿದೆ. ಎರ್ನಾಕುಲಂ-ಅಂಗಮಾಲಿ ಆರ್ಚ್‌ಡಯೋಸಿಸ್‌ನಲ್ಲಿರುವ ಚರ್ಚ್‌ನಲ್ಲಿ ಭಿನ್ನಮತೀಯ ಪಾದ್ರಿಯ ನೇತೃತ್ವದ ಗುಂಪೊಂದು ಈ ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ದಾಳಿಯಲ್ಲಿ ಫಾದರ್ ಜಾನ್ ತೊಟ್ಟುಪುರಂ ಗಾಯಗೊಂಡಿದ್ದಾರೆ.

    ಘರ್ಷಣೆಯಲ್ಲಿ ಹಲವರು ಗಾಯಗೊಂಡರು. ಘಟನೆಯ ನಂತರ, ಥಲಯೋಲಪರಂಬು ಪೊಲೀಸರು ಚರ್ಚ್‌ಗೆ ಬೀಗ ಹಾಕಿದ್ದಾರೆ.

    ಏಕೀಕೃತ ಪವಿತ್ರ ಬಲಿಪೂಜೆಯ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚ್‌ನಲ್ಲಿ ಈ ಘರ್ಷಣೆ ಆಗಿದೆ. ಪ್ರಸಾದಗಿರಿ ಚರ್ಚ್‌ನ ಉಸ್ತುವಾರಿ ವಹಿಸಿರುವ ಪಾದ್ರಿ ಫಾದರ್ ಜಾನ್ ತೊಟ್ಟುಪುರಂ ಅವರು ಪವಿತ್ರ ಬಲಿಪೂಜೆಯನ್ನು ಸಲ್ಲಿಸುತ್ತಿದ್ದಾಗ ಗುಂಪೊಂದು ಗಲಾಟೆ ಮಾಡಿತ್ತು.

  • ಕೊಡಗಿನ ಕಟ್ಟೆಮಾಡು ದೇವಾಲಯದ ಅರ್ಚಕನ ಮೇಲೆ ಹಲ್ಲೆ ಕೇಸ್‌ – ಆರೋಪಿಗಳ ಪತ್ತೆಗೆ ತೀವ್ರ ಶೋಧ

    ಕೊಡಗಿನ ಕಟ್ಟೆಮಾಡು ದೇವಾಲಯದ ಅರ್ಚಕನ ಮೇಲೆ ಹಲ್ಲೆ ಕೇಸ್‌ – ಆರೋಪಿಗಳ ಪತ್ತೆಗೆ ತೀವ್ರ ಶೋಧ

    ಮಡಿಕೇರಿ: ಸಾಂಪ್ರದಾಯಿಕ ವಸ್ತ್ರ ಧರಿಸುವ ವಿಚಾರದಲ್ಲಿ ವಿವಾದದ ಕೇಂದ್ರವಾಗಿ ಮಾರ್ಪಟ್ಟಿರುವ ಮಡಿಕೇರಿ (Madikeri) ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಾಲಯದ‌ ವಿಚಾರ ಸಾಮರಸ್ಯದ ಕೊರತೆಗೆ ಕಾರಣವಾಗಿದೆ. ಇದೀಗ ಮಹಾಮೃತ್ಯುಂಜಯ ದೇವಾಲಯದ‌ ಅರ್ಚಕನ (Priest) ಮೇಲೆ ಮಾರಣಾಂತಿಕ ಹಲ್ಲೇ ಆಗಿರುವುದರಿಂದ ಜಿಲ್ಲೆಯಲ್ಲಿ ಮತ್ತೆ ಅಶಾಂತಿಯ ವಾತಾವರಣ ಸೃಷ್ಟಿ ಅಗುತ್ತೋ ಅನ್ನೋ ಅನುಮಾನ ಸ್ಥಳೀಯರನ್ನು ಕಾಡುತ್ತಿದೆ.

    ಹೌದು. ಕೊಡವರ ಸಾಂಪ್ರದಾಯಿಕ ಕುಪ್ಯಚೇಲೆ ಧರಿಸಿ ದೇವಾಲಯ ಪ್ರವೇಶಕ್ಕೆ ನಿರಾಕರಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ 2 ಸಮುದಾಯಗಳ ನಡುವಿನ ವಿವಾದ ಇಂದಿಗೂ ಮುಂದುವರೆದಿದೆ. ಅಲ್ಲದೇ ದೇವಾಲಯದ 200 ಮೀಟರ್‌ ಸುತ್ತ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಈ ನಡುವೆ ದೇವಾಲಯದ ಪ್ರದಾನ ಅರ್ಚಕರ ಮೇಲೆ ಇಬ್ಬರು ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಇದನ್ನೂ ಓದಿ: ಇದು ಚರಿತ್ರೆ ಸೃಷ್ಟಿಸೊ ಅವತಾರ – U19 ಮಹಿಳಾ T20 ವಿಶ್ವಕಪ್‌ನಲ್ಲಿ ಚೊಚ್ಚಲ ಶತಕ, ಭಾರತದ ತ್ರಿಶಾ ಗೊಂಗಡಿ ದಾಖಲೆ

    ವಿಘ್ನೇಶ್ ಭಟ್ ಹಲ್ಲೆಗೊಳಗಾದ ಅರ್ಚಕರಾಗಿದು, ಕಾಕೋಟು ಪರಂಬು ಗ್ರಾಮದ ಅನಿಲ್ ಮತ್ತು ಸಹಚರರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಹಲ್ಲೆಯಿಂದ ಗಂಭೀರ ಗಾಯಗೊಂಡಿರುವ ಅರ್ಚಕರನ್ನ ಕೊಡಗು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ನಡುವೆ ಕೊಡವ ಜನಾಂಗದ ಅನಿಲ್ ಮತ್ತು ಸಹಚರರು ದೇವಾಲಯ ವಿಚಾರವಾಗಿ ಅರ್ಚಕರ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆಸಿದ ಮೂವರು ಅರೋಪಿಗಳನ್ನು ಅದಷ್ಟು ಬೇಗ ಬಂಧನ ಮಾಡಬೇಕು ಇಲ್ಲದೇ ಹೋದ್ರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ದೇವಾಲಯದ ಸಮಿತಿ ಸದಸ್ಯರು ತಿಳಿಸಿದ್ದಾರೆ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಈ ನಡುವೆ ಕೊಡಗು ಎಸ್ಪಿ ರಾಮರಾಜನ್ ಮಾಧ್ಯಮಗಳೊಂದಿಗೆ ಮಾತಾನಾಡಿ‌, ಕಟ್ಟೆಮಾಡು ದೇವಾಲಯ ವಿವಾದ ಮುಂದಿರಿಸಿಕೊಂಡು ಸಮಾಜದಲ್ಲಿ ಶಾಂತಿ ಭಂಗಕ್ಕೆ ಮುಂದಾಗುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಸಿಎಂ ಬದಲಾವಣೆ ವಿಚಾರ| ಶಾಸಕರನ್ನು ಕೇಳಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯ: ಕೆ.ಎನ್.ರಾಜಣ್ಣ

  • ವಿಶೇಷ ಪೂಜೆ ಮಾಡ್ಬೇಕು ಅಂತ ಹೇಳಿ ಪೂಜಾರಿಯಿಂದ ಟೆಕ್ಕಿ ಮಹಿಳೆ ಮೇಲೆ ಅತ್ಯಾಚಾರ

    ವಿಶೇಷ ಪೂಜೆ ಮಾಡ್ಬೇಕು ಅಂತ ಹೇಳಿ ಪೂಜಾರಿಯಿಂದ ಟೆಕ್ಕಿ ಮಹಿಳೆ ಮೇಲೆ ಅತ್ಯಾಚಾರ

    ಬೆಂಗಳೂರು: ದೋಷ ಇದೆ, ವಿಶೇಷ ಪೂಜೆ ಮಾಡಬೇಕೆಂದು ಹೇಳಿ ಪೂಜಾರಿಯೊಬ್ಬ ಮಹಿಳೆಯ (Woman) ಮೇಲೆ ಅತ್ಯಾಚಾರವೆಸಗಿರುವ (Rape) ಘಟನೆ ಬೆಂಗಳೂರಿನ ಬಗಲಗುಂಟೆಯಲ್ಲಿ (Bagalgunte) ನಡೆದಿದೆ.

    ಹಾಸನ (Hassan) ಮೂಲದ ದಯಾನಂದ್ ಅತ್ಯಾಚಾರವೆಸಗಿರುವ ಪೂಜಾರಿ. ಈತ ಹಾಸನದ ಪ್ರಸಿದ್ಧ ಪುರದಮ್ಮ ದೇವಾಲಯದ ಪೂಜಾರಿಯಾಗಿದ್ದ. ಯುವತಿ ಪೂಜೆಗೆ ದೇವಸ್ಥಾನಕ್ಕೆ ಹೋದ ಸಂದರ್ಭದಲ್ಲಿ ಆರೋಪಿ ದಯಾನಂದ್‌ಗೆ ಪರಿಚಯವಾಗಿದ್ದಾರೆ. ಆಗ ಪೂಜಾರಿ ದಯಾನಂದ್ ಯುವತಿಯ ಹಸ್ತರೇಖೆ ನೋಡಿ ನಿನಗೆ ಮದುವೆ ದೋಷ ಇದೆ. ವಿಶೇಷ ಪೂಜೆ ಮಾಡಿದರೆ ಪರಿಹಾರವಾಗುತ್ತೆ ಎಂದು ಪುಂಗಿದ್ದಾನೆ. ಡೋಂಗಿ ಪೂಜಾರಿ ಮಾತು ನಂಬಿದ ಯುವತಿ ಪೂಜೆಗೆ ಎಂದು 10 ಸಾವಿರ ರೂಪಾಯಿ ಕೊಟ್ಟಿದ್ದಾಳೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಲೋಕಸಭೆಯಲ್ಲೂ ವಾಲ್ಮೀಕಿ ಹಗರಣ ಪ್ರತಿಧ್ವನಿ; ಗ್ಯಾರಂಟಿಗೆ SC-ST ಹಣ ಬಳಕೆ – ಸಿದ್ದರಾಮಯ್ಯ ವಿರುದ್ಧ ವಿತ್ತ ಸಚಿವೆ ಟೀಕೆ

    ಅಲ್ಲದೇ ಆರೋಪಿ ಸಂತ್ರಸ್ತ ಯುವತಿಗೆ ನಿಂಬೆಹಣ್ಣು ಮಂತ್ರಿಸಿ ಮಲಗುವಾಗ ತಲೆದಿಂಬಿನ ಕೆಳಗಡೆ ಇಟ್ಟುಕೊಂಡು ಮಲಗಲು ಸೂಚಿಸಿದ್ದಾನೆ. ಅದೇ ರೀತಿ ನಿಂಬೆ ಹಣ್ಣು ಮಂತ್ರಿಸಿಕೊಟ್ಟು ಯುವತಿಯನ್ನು ವಶೀಕರಣ ಮಾಡಿಕೊಂಡಿದ್ದಾನೆ. ಬಳಿಕ ಯುವತಿಗೆ ತಾನು ಹೇಳಿದಹಾಗೆ ಕೇಳುವಂತೆ ಪಳಗಿಸಿಕೊಂಡು ಕೃತ್ಯ ಎಸಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: Wayanad Landslides: 93 ಮೃತದೇಹ ಸಿಕ್ಕಿವೆ, ಸಾವಿನ ಸಂಖ್ಯೆ ಹೆಚ್ಚಾಗಬಹುದು – ಸಿಎಂ ಪಿಣರಾಯಿ ಆತಂಕ

    ಸಂತ್ರಸ್ತ ಯುವತಿ ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಟೆಕ್ಕಿಯಾಗಿದ್ದರು. ಹಾಗಾಗಿ ಆರೋಪಿ ಆಗಾಗ ಬಂದು ಕಾರಿನಲ್ಲಿ ಕರೆದುಕೊಂಡು ಹೋಗಿ ದೇವರ ತಾಳಿ ಹಾಕಿಕೊಳ್ಳುವಂತೆ ಹೇಳಿ ಫೋಟೋ ತಗೆದುಕೊಂಡಿದ್ದಾನೆ. ಅಲ್ಲಿಂದ ಹೆಚ್‌ಎಸ್‌ಆರ್ ಲೇಔಟ್, ಮೈಸೂರು ರೋಡ್‌ಗೆ ಕರೆದುಕೊಂಡು ಹೋಗಿ ಕಾರಿನಲ್ಲಿಯೇ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ. ಇತ್ತೀಚಿಗೆ ಬೆಂಗಳೂರಿನ ಲಾಡ್ಜ್ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿ ವಿಡಿಯೋ ಮಾಡಿಕೊಂಡು ಬ್ಲಾಕ್‌ಮೇಲ್ ಮಾಡಲು ಶುರು ಮಾಡಿದ್ದಾನೆ. ಸಂತ್ರಸ್ತ ಯುವತಿ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಿಸಿದ್ದಾರೆ. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪೂಜಾರಿ ದಯಾನಂದ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: Shirur Landslide; ನಾಪತ್ತೆಯಾದವರ ಕುಟುಂಬಸ್ಥರ ಕಣ್ಣೀರು ನೋಡಿ ಮತ್ತೆ ಕಾರ್ಯಾಚರಣೆ ನಿರ್ಧಾರ: ಈಶ್ವರ್ ಮಲ್ಪೆ

  • Hubballi: ದುಷ್ಕರ್ಮಿಗಳಿಂದ ವೈಷ್ಣವಿ ದೇವಸ್ಥಾನದ ಅರ್ಚಕನ ಕೊಲೆ – ಬೆಚ್ಚಿಬಿದ್ದ ಜನತೆ

    Hubballi: ದುಷ್ಕರ್ಮಿಗಳಿಂದ ವೈಷ್ಣವಿ ದೇವಸ್ಥಾನದ ಅರ್ಚಕನ ಕೊಲೆ – ಬೆಚ್ಚಿಬಿದ್ದ ಜನತೆ

    ಹುಬ್ಬಳ್ಳಿ: ಇಲ್ಲಿನ ಈಶ್ವರ ನಗರದಲ್ಲಿರುವ ವೈಷ್ಣವಿ ದೇವಸ್ಥಾನದ‌ ಅರ್ಚಕರೊಬ್ಬರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಭಾನುವಾರ ನಡೆದಿದೆ. ಘಟನೆಯಿಂದ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಇದನ್ನೂ ಓದಿ: Paris Olympic 2024: ಭಾರತೀಯ ಕ್ರೀಡಾಪಟುಗಳಿಗೆ 8.5 ಕೋಟಿ ನೆರವು ಘೋಷಿಸಿದ ಬಿಸಿಸಿಐ

    ವೈಷ್ಣವಿ ದೇವಸ್ಥಾನದ ಪೂಜಾರಿ ದೇವಪ್ಪಜ್ಜ ಕೊಲೆಯಾದ ಅರ್ಚಕ. ದುಷ್ಕರ್ಮಿಗಳು ಚಾಕುವಿನಿಂದ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪರಶುರಾಮ ಥೀಮ್ ಪಾರ್ಕ್‍ಗೆ 11 ಕೋಟಿ ಅನುದಾನ ಬಿಡುಗಡೆಯಾಗಿಲ್ಲ, ಅವ್ಯವಹಾರ ಹೇಗಾಗುತ್ತೆ? – ಸುನಿಲ್ ಕುಮಾರ್

    ಕಳೆದ ಒಂದು ವರ್ಷದ ಹಿಂದೆ ಅರ್ಚಕನ  ಮೇಲೆ ದುಷ್ಕರ್ಮಿಗಳಿಂದ ದಾಳಿ ನಡೆದಿತ್ತು. ಅದೃಷ್ಟವಶಾತ್‌ ಆ ಸಮಯದಲ್ಲಿ ಅರ್ಚಕ ಬದುಕುಳಿದಿದ್ದರು ಎನ್ನಲಾಗಿದೆ. ಇಲ್ಲಿನ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಈಗಾಗಲೇ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: Rain Alert: ಉಡುಪಿಯ ಬ್ರಹ್ಮಾವರದಲ್ಲಿ ಕೃಷಿ ಭೂಮಿ ಜಲಾವೃತ – ಚಿಕ್ಕಮಗಳೂರು, ದಾವಣಗೆರೆ, ಕೊಪ್ಪಳದಲ್ಲೂ ಹೆಚ್ಚಿದ ಭೀತಿ

  • ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಪೂಜೆಯ ಹಕ್ಕಿಗಾಗಿ ಅರ್ಚಕರ ನಡುವೆ ಗಲಾಟೆ

    ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಪೂಜೆಯ ಹಕ್ಕಿಗಾಗಿ ಅರ್ಚಕರ ನಡುವೆ ಗಲಾಟೆ

    ಕಾರವಾರ: ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ (Gokarna Mahabaleshwara Temple) ಪೂಜೆಯ ಹಕ್ಕಿಗಾಗಿ ಅರ್ಚಕರ ನಡುವೆ ಗಲಾಟೆ ನಡೆದಿದೆ. ದೇವಸ್ಥಾನದ ಗರ್ಭಗುಡಿಯಲ್ಲಿ ಭಕ್ತರಿಗೆ ದೇವರ ದರ್ಶನಕ್ಕೂ ಬಿಡದೇ ಪ್ರತಿಭಟನೆ ನಡೆಸಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ದೇವಾಲಯದಲ್ಲಿ ಈ ಘಟನೆ ನಡೆದಿದೆ. ನಂದಿ ಮಂಟಪದಲ್ಲಿ ತೀರ್ಥ ನೀಡುವ ಬಾರಿಗಾಗಿ ಎರಡು ಕುಟುಂಬದವರು ಕಾದಾಡಿದ್ದಾರೆ. ಜಂಬೆ ಕುಟುಂಬ ಹಾಗೂ ಗೋಪಿ ಕುಟುಂಬ ಹಕ್ಕಿಗಾಗಿ ಕೋರ್ಟ್ ಮೊರೆ ಹೋಗಿದ್ದವು. ಇದನ್ನೂ ಓದಿ: SSLCಯಲ್ಲಿ ರಾಜ್ಯಕ್ಕೆ ಪ್ರಥಮ ಬಂದ ಅಂಕಿತಾಗೆ ಜಿ.ಪಂ ಸಿಇಓ ಅಭಿನಂದನೆ

    ಕಳೆದ ಕೆಲವು ತಿಂಗಳಿಂದ ನಂದಿ ಮಂಟಪದಲ್ಲಿ ಜಂಬೆ ಕುಟುಂಬ ತೀರ್ಥ ನೀಡುತ್ತಿದೆ. ಇಂದಿನಿಂದ ನಂದಿ ಮಂಟಪದಲ್ಲಿ ತೀರ್ಥ ನೀಡುವ ಹಕ್ಕು ನಮ್ಮ ಬಾರಿ ಎಂದು ದೇವಸ್ಥಾನದ ಗರ್ಭಗುಡಿಯಲ್ಲಿ ಗೋಪಿ ಕುಟುಂಬ ತಗಾದೆ ತೆಗೆದಿದೆ.

    ನಂದಿ ಮಂಟಪದಲ್ಲಿ ತೀರ್ಥ ಕೊಡುವ ಹಕ್ಕಿನ ವಿಷಯವಾಗಿ ಎರಡು ಕುಟುಂಬಗಳ ನಡುವೆ ಗಲಾಟೆಯಾಗಿದೆ. ದೇವಸ್ಥಾನದ ಒಳಗೇ ಗೋಪಿ ಕುಟುಂಬ ಪ್ರತಿಭಟನೆ ನಡೆಸಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ಶಾಂತಗೊಳಿಸಲು ಹರಸಾಹಸ ಪಟ್ಟರು. ಇದನ್ನೂ ಓದಿ: SSLC Result: 73.40 % ಫಲಿತಾಂಶ – ಬಾಲಕಿಯರೇ ಮೇಲುಗೈ; ಉಡುಪಿಗೆ ಮೊದಲ ಸ್ಥಾನ

  • ದೇವಾಲಯದ ಆದಾಯ ಕಡಿಮೆ- ಅರ್ಚಕರ ಸಂಬಳ ವಾಪಸ್ ಕೇಳಿ‌ ರಾಜ್ಯ ಸರ್ಕಾರ ನೋಟಿಸ್

    ದೇವಾಲಯದ ಆದಾಯ ಕಡಿಮೆ- ಅರ್ಚಕರ ಸಂಬಳ ವಾಪಸ್ ಕೇಳಿ‌ ರಾಜ್ಯ ಸರ್ಕಾರ ನೋಟಿಸ್

    ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ (State Govt) ಇದೀಗ ಅರ್ಚಕರಿಗೆ ನೀಡುತ್ತಿದ್ದ ಸಂಬಳವನ್ನು (Priest Salary) ವಾಪಸ್ ಕೇಳಿದೆ.

    ಈ ಸಂಬಂಧ ಚಿಕ್ಕಮಗಳೂರಿನ (Chikkamagaluru) ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿರುವ, ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತವು ಕಣ್ಣನ್ ಅವರ ವೇತನ ತಡೆಹಿಡಿದು ಈ ನೋಟಿಸ್ ನೀಡಿದೆ.

    ನೋಟಿಸ್‍ನಲ್ಲೇನಿದೆ..?: ದೇವಾಲಯದ ಆದಾಯ ಕಡಿಮೆ ಇರುವುದರಿಂದ ಸರ್ಕಾರ ನೀಡಿದ ಸಂಬಳ ವಾಪಸ್ ನೀಡುವಂತೆ ತಿಳಿಸಲಾಗಿದೆ. ಕಣ್ಣನ್ ಅವರ ಖಾತೆಗೆ ಪ್ರತಿ ತಿಂಗಳು 7,500 ರೂ. ಜಮೆಯಾಗುತ್ತಿತ್ತು. ಇದೀಗ 7,500 ರೂ. ಸಂಬಳದಲ್ಲಿ 4,500 ವಾಪಸ್ ನೀಡಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಸಾರ್ವಜನಿಕರಿಗೆ ತೆರೆಯುತ್ತಿದ್ದಂತೆಯೇ ರಾಮಮಂದಿರಕ್ಕೆ ಹರಿದು ಬರ್ತಿದೆ ಜನಸಾಗರ!

    ಕಣ್ಣನ್ ಅವರು ಕಳೆದ 50 ವರ್ಷಗಳಿಂದ ದೇವಾಲಯದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಪ್ರತಿ ತಿಂಗಳು ಬರುತ್ತಿದ್ದ ಸಂಬಳವನ್ನು ಜಿಲ್ಲಾಡಳಿತ ತೆಡೆಹಿಡಿದಿದೆ. ಚಿಕ್ಕಮಗಳೂರು ತಹಶಿಲ್ದಾರ್ ಸುಮಂತ್ ನೀಡಿರುವ ನೋಟಿಸ್ ಕಂಡು ಕಣ್ಣನ್ ಅವರು ನೋಟಿಸ್ ನೋಡಿ ಆತಂಕಗೊಂಡಿದ್ದಾರೆ.

  • ಕಠಿಣ ಕ್ರಮ ಕೈಗೊಳ್ಳದಿದ್ರೆ ನಾನೇ NCP ನಾಯಕನ ಕೊಲೆ ಮಾಡ್ತೀನಿ: ಅಯೋಧ್ಯೆ ಅರ್ಚಕ ಕಿಡಿ

    ಕಠಿಣ ಕ್ರಮ ಕೈಗೊಳ್ಳದಿದ್ರೆ ನಾನೇ NCP ನಾಯಕನ ಕೊಲೆ ಮಾಡ್ತೀನಿ: ಅಯೋಧ್ಯೆ ಅರ್ಚಕ ಕಿಡಿ

    ಲಕ್ನೋ: ರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (NCP) ಶರದ್ ಪವಾರ್ ಬಣದ ನಾಯಕ ಜಿತೇಂದ್ರ ಅವ್ಹಾದ್ (Jitendra Awhad) ವಿರುದ್ಧ ಅಯೋಧ್ಯೆಯ (Ayodhya) ಅರ್ಚಕ ಪರಮಹಂಸ ಆಚಾರ್ಯ (Paramhansa Acharya) ಎಚ್ಚರಿಕೆ ನೀಡಿದ್ದಾರೆ.

    ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, ಇನ್ನೊಂದು ಧರ್ಮದ ಬಗ್ಗೆ ಇಂತಹ ಹೇಳಿಕೆ ನೀಡಿದ್ದರೆ ಬಹುಶಃ ಅವರು ಇಲ್ಲಿಯವರೆಗೆ ಬದುಕಿರುತ್ತಿರಲಿಲ್ಲ. ರಾಮನನ್ನು ಅವಮಾನಿಸುವುದನ್ನು ಸಹಿಸುವುದಿಲ್ಲ. ಶ್ರೀರಾಮನ ಟೀಕೆಗೆ ಕಿವಿಗೊಡದ ಭಾರತ ಇದು ಎಂದು ನಮ್ಮ ಧರ್ಮಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ. ಎನ್‌ಸಿಪಿ ನಾಯಕನ ವಿರುದ್ಧ ಮಹಾರಾಷ್ಟ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಜಿತೇಂದ್ರ ಅವ್ಹಾದ್ ರನ್ನು ನಾನೇ ಹತ್ಯೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

    ಜಿತೇಂದ್ರ ಅವ್ಹಾದ್ ಅವರು ನೀಡಿದ ಹೇಳಿಕೆಯು ಅವಹೇಳನಕಾರಿಯಾಗಿದೆ. ಇದು ರಾಮ ಭಕ್ತರ ಭಾವನೆಗೆ ನೋವುಂಟುಮಾಡುತ್ತದೆ. ರಾಮನ ಬಗ್ಗೆ ಕೆಟ್ಟದಾಗಿ ಮಾತನಾಡುವ ಜನರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಾನು ಮಹಾರಾಷ್ಟ್ರ ಮತ್ತು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಆಚಾರ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಬಾಲರಾಮನ ಮೂರ್ತಿ ಹೇಗಿರಲಿದೆ – ಕುತೂಹಲದ ಪ್ರಶ್ನೆಗೆ ಜ.22 ರಂದು ಸಿಗಲಿದೆ ಉತ್ತರ

    ಇದಕ್ಕೂ ಮುನ್ನ ರಾಮಜನ್ಮಭೂಮಿಯ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಎನ್‌ಸಿಪಿ ನಾಯಕನ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದರು. ಅವರ ಹೇಳಿಕೆ ಸರಿಯಲ್ಲ. ರಾಮನು ವನವಾಸಕ್ಕೆ ಹೋದಾಗ ಗಡ್ಡೆ, ಹಣ್ಣು ತಿನ್ನುತ್ತಿದ್ದರು ಎಂದು ಬರೆಯಲಾಗಿತ್ತೇ ಹೊರತು ಮಾಂಸ ತಿಂದ ಎಂದು ಯಾವುದೇ ಗ್ರಂಥದಲ್ಲಿ ಬರೆದಿಲ್ಲ ಎಂದರು.  ಇದನ್ನೂ ಓದಿ: ಶ್ರೀರಾಮ ಮಾಂಸಾಹಾರಿಯಾಗಿದ್ದ.. ಬೇಟೆಯಾಡಿ ತಿನ್ನುವ ರಾಮ ನಮ್ಮವ: ಎನ್‌ಸಿಪಿ ನಾಯಕ ವಿವಾದಾತ್ಮಕ ಹೇಳಿಕೆ

    ಜಿತೇಂದ್ರ ಅವ್ಹಾದ್ ಹೇಳಿದ್ದೇನು..?: ರಾಮ ನಮ್ಮವನು. ರಾಮ ಬಹುಜನರಿಗೆ ಸೇರಿದವನು. ಬೇಟೆಯಾಡಿ ತಿನ್ನುವ ರಾಮ ನಮ್ಮವನು, ನಾವು ಬಹುಜನರಿಗೆ ಸೇರಿದವರು. ನೀವು ನಮ್ಮೆಲ್ಲರನ್ನು ಸಸ್ಯಾಹಾರಿಯನ್ನಾಗಿ ಮಾಡಲು ಹೋದಾಗ, ನಾವು ರಾಮನ ಆದರ್ಶಗಳನ್ನು ಅನುಸರಿಸುತ್ತೇವೆ. ಇಂದು ನಾವು ಕುರಿ ಮಾಂಸವನ್ನು ತಿನ್ನುತ್ತೇವೆ. ಇದು ರಾಮನ ಆದರ್ಶ. ರಾಮ ಸಸ್ಯಾಹಾರಿಯಾಗಿರಲಿಲ್ಲ, ಮಾಂಸಾಹಾರಿಯಾಗಿದ್ದ ಎಂದು ತಿಳಿಸಿದ್ದಾರೆ.

  • Ayodhya Ram Mandir- ರಾಮಲಲ್ಲಾ ಪ್ರತಿಷ್ಠಾಪನೆಗೆ ಕೋಲಾರ ಅರ್ಚಕನಿಗೆ ಆಹ್ವಾನ

    Ayodhya Ram Mandir- ರಾಮಲಲ್ಲಾ ಪ್ರತಿಷ್ಠಾಪನೆಗೆ ಕೋಲಾರ ಅರ್ಚಕನಿಗೆ ಆಹ್ವಾನ

    ಕೋಲಾರ: ಜನವರಿ 22ರಂದು ಅಯೋಧ್ಯೆ ರಾಮಮಂದಿರ (Ayodhya Ram Mandir) ಉದ್ಘಾಟನೆಗೊಳ್ಳಲಿದ್ದು, ಸಕಲ ಸಿದ್ಧತೆಗಳು ನಡೆಯುತ್ತಿದೆ. ಈ ನಡುವೆ ಪ್ರಮುಖರಿಗೆ ಆಹ್ವಾನ ಪತ್ರಿಕೆಗಳನ್ನು (Invitation) ಕೂಡ ಕಳುಹಿಸಲಾಗುತ್ತಿದೆ. ಅಂತೆಯೇ ಈ ಆಮಂತ್ರಣ ಪತ್ರಿಕೆಯು ಇದೀಗ ಕೋಲಾರದ ಅರ್ಚಕರೊಬ್ಬರ ಕೈ ಸೇರಿದೆ.

    ಹೌದು. ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗಲು ಕೋಲಾರ ಮೂಲದ ಅರ್ಚಕ ರಮೇಶ್ ಭಟ್ (Ramesh Bhat) ಅವರನ್ನು ಆಹ್ವಾನಿಸಲಾಗಿದೆ. ರಮೇಶ್ ಭಟ್ ಅವರು ಕೋಲಾರ (Kolar) ಜಿಲ್ಲೆಯ ಕಲ್ಲೂರು ಗ್ರಾಮದ ನಿವಾಸಿ. ಇದೀಗ ಇವರನ್ನು ರಾಮಮಂದಿರ ಉದ್ಘಾಟನೆಯ ವೇಳೆ ಪರಿಚಾರಕ ಋತ್ವಿಕ್ ರಾಗಿ ಭಾಗವಹಿಸಲು ರಾಮಮಂದಿರ ದೇವಾಲಯ ಪ್ರತಿಷ್ಠಾಪನಾ ಸಮಿತಿಯು ಆಹ್ವಾನಿಸಿದೆ.

    ರಮೇಶ್ ಭಟ್ ಅವರು ಕೋಲಾರ ನಗರದ ಆರ್.ಎಲ್ ಜಾಲಪ್ಪ ಆಸ್ಪತ್ರೆ ಆವರಣದಲ್ಲಿನ ಗಣಪತಿ ದೇಗುಲದಲ್ಲಿ ಅರ್ಚಕರಾಗಿ 25 ವರ್ಷ ಸೇವೆ ಸಲ್ಲಿಸಿದ್ದಾರೆ. ಸದ್ಯ ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಶಿವ-ವಿಷ್ಣು ದೇಗುಲದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರದ ಒಳಗಿನ ಚಿತ್ರಣ ಹೇಗಿದೆ? ಇಲ್ಲಿದೆ ಕೆಲವು ಫೋಟೋಸ್