Tag: prime minister modi

  • ಫುಲ್ ಸೈಲೆಂಟ್ ಆದ ಬಿಜೆಪಿ ಚಾಣಕ್ಯ-ಮುಖ್ಯ ವಾಹಿನಿಯಲ್ಲಿಲ್ಲ ಗೃಹ ಸಚಿವ ಅಮಿತ್ ಶಾ

    ಫುಲ್ ಸೈಲೆಂಟ್ ಆದ ಬಿಜೆಪಿ ಚಾಣಕ್ಯ-ಮುಖ್ಯ ವಾಹಿನಿಯಲ್ಲಿಲ್ಲ ಗೃಹ ಸಚಿವ ಅಮಿತ್ ಶಾ

    ನವದೆಹಲಿ: ಇಡೀ ದೇಶ ಕೊರೊನಾ ಸೋಂಕಿಗೆ ತತ್ತರಿಸಿ ಹೋಗಿದೆ. ಈ ವೈರಸ್ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ದೇಶದ ಜನರನ್ನ ಉದ್ದೇಶಿಸಿ ಪ್ರಧಾನಿ ಮೋದಿ ಮೂರು ಬಾರಿ ಮಾತನಾಡಿದ್ದಾರೆ. ಆದರೆ ಗೃಹ ಸಚಿವ ಅಮಿತ್ ಶಾ ಮಾತ್ರ ಈ ನಡುವೆ ನಾಪತ್ತೆಯಾಗಿದ್ದಾರೆ.

    ಕೊರೊನಾ ಸೋಂಕು ದೇಶವನ್ನು ಕಿತ್ತು ತಿನ್ನುತ್ತಿದೆ. ಭಾರತ ಲಾಕ್‍ಡೌನ್ ಆದ್ರೂ ಸೋಂಕಿತರ ಪ್ರಮಾಣದಲ್ಲಿ ಇಳಿಕೆ ಕಂಡು ಬರ್ತಿಲ್ಲ. ಈ ನಡುವೆ ಲಾಕ್ ಡೌನ್ ಮುಂದುವರಿಯುತ್ತಾ ಇಲ್ವ ಅನ್ನೊ ಗೊಂದಲಗಳು ಸೃಷ್ಟಿಯಾಗಿದೆ. ಕೊರೊನಾ ವಿಚಾರದಲ್ಲಿ ಕೇಂದ್ರ ಸರ್ಕಾರ ಆಕ್ಟಿವ್ ಆಗಿ ಕೆಲಸ ಮಾಡ್ತಿದೆ. ಆದರೆ ಸದಾ ಸುದ್ದಿಯಲ್ಲಿ ಇರ್ತಿದ್ದ ಗೃಹ ಸಚಿವ ಅಮಿತ್ ಶಾ ಮಾತ್ರ ಕೊರೊನಾ ವಿಚಾರದಲ್ಲಿ ಫುಲ್ ಸೈಲೆಂಟ್ ಆಗಿದ್ದಾರೆ.

    ಕೊರೊನಾ ಸೋಂಕು ಬೆಳೆದುಕೊಳ್ಳುತ್ತಲೇ ಇದೆ. ದಿನ ಬೆಳಗಾದ್ರೆ ಪ್ರಧಾನಿ ಮೋದಿ ಹಲವು ಸಭೆಗಳನ್ನು ನಡೆಸುತ್ತಿದ್ದಾರೆ. ಇತ್ತ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಟೊಂಕ ಕಟ್ಟು ನಿಂತಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಜೈ ಶಂಕರ್ ವಿದೇಶದಲ್ಲಿರುವ ಭಾರತೀಯರನ್ನು ಕರೆ ತರುವ ಪ್ರಯತ್ನ ಸೇರಿ ಹಲವು ಪ್ರಮುಖ ಕೆಲಸಗಳ ಮಾಡ್ತಿದ್ದಾರೆ. ಇತ್ತ ಹಣಕಾಸು ಸಚವೆ ನಿರ್ಮಲ ಸೀತರಾಮನ್ ಸೇರಿ ಹಲವು ಸಚಿವರು ತಮ್ಮ ಖಾತೆಗಳ ಅನುಗುಣವಾಗಿ ಕೆಲಸ ಮಾಡುತ್ತಲೇ ಇದ್ದಾರೆ. ಆದರೆ ಗೃಹ ಸಚಿವ ಅಮಿತ್ ಶಾ ಮಾತ್ರ ಮುಖ್ಯ ವಾಹಿನಿಯಿಂದ ದೂರ ಉಳಿದುಕೊಂಡಿದ್ದಾರೆ.

    ಕೊರೊನಾ ಸೋಂಕು ವಿಚಾರ ಶುರುವಾದಗಿನಿಂದ ಬಹುತೇಕ ಎಲ್ಲ ಸಚಿವರು ಬೇರೆ ಬೇರೆ ಕಾರಣಗಳಿಂದ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ತಮ್ಮ ಇಲಾಖೆಯಿಂದ ಜನರಿಗೆ ಮಾಡುತ್ತಿರುವ ನೆರವುಗಳ ಬಗ್ಗೆ ವಿವರಣೆ ನೀಡಿದ್ದಾರೆ. ಆದರೆ ಅಮಿತ್ ಶಾ ಮಾತ್ರ ಈವರೆಗೂ ಗೃಹ ಇಲಾಖೆಯಿಂದ ನಡೆಯುತ್ತಿರುವ ಬೆಳವಣಿಗಳ ಬಗ್ಗೆ ಮಾಹಿತಿ ನೀಡಿಲ್ಲ. ಹೀಗಂತ ಕೇಂದ್ರ ಗೃಹ ಇಲಾಖೆ ಏನು ಸುಮ್ಮನೆ ಕೂತಿಲ್ಲ. ತನ್ನೆಲ್ಲ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದೆ. ಇದರ ಎಲ್ಲ ಮಾಹಿತಿಯನ್ನು ಕಾರ್ಯದರ್ಶಿ ಪಿ.ಎಸ್ ಶ್ರೀವಸ್ತ ಮಾಧ್ಯಮಗಳಿಗೆ ನೀಡುತ್ತಿದ್ದಾರೆ. ಆದರೆ ಅಮಿತ್ ಶಾ ಈ ವರೆಗೂ ಒಂದು ಮಾತು ಆಡಿಲ್ಲ. ಹೀಗಾಗೀ ಸಾಕಷ್ಟು ಕುತೂಹಲ ಮೂಡಿದ್ದು ಅಮಿತ್ ಶಾ ಯಾಕೆ ದೂರು ಉಳಿದುಕೊಂಡಿದ್ದಾರೆ ಎಂದು ಚರ್ಚೆ ಆಗುತ್ತಿದೆ.

    ಹಲವು ಅನುಮಾನ, ಚರ್ಚೆ:
    * ಕೊರೊನಾ ಸಂಪೂರ್ಣ ಜವಬ್ದಾರಿಯನ್ನು ಪ್ರಧಾನಿ ಮೋದಿಗೆ ವಹಿಸಿದ್ರಾ ಅಮಿತ್ ಶಾ..?
    * ಇದೊಂದು ರಾಷ್ಟ್ರೀಯ ದುರಂತ ಆಗಿರೋದ್ರರಿಂದ ಪ್ರಧಾನಿಯೇ ಮುಂದಾಳತ್ವದಲ್ಲಿ ನಡೆಯಲಿ ಎಂದು ಸುಮ್ಮನಾದ್ರ..?
    * ಈ ವೇಳೆ ಎಲ್ಲ ವಿಪಕ್ಷಗಳು ಇಡೀ ದೇಶದ ಜನರನ್ನು ಒಗ್ಗೂಡಿಸಿಕೊಂಡು ಹೋಗಬೇಕು.
    * ಆದರೆ ಅಮಿತ್ ಶಾ ವಿಪಕ್ಷಗಳ ನಾಯಕರ ಜೊತೆ ಉತ್ತಮ ಸಂಬಂಧ ಹೊಂದಿಲ್ಲ ಮತ್ತು ಎನ್.ಆರ್.ಸಿ, ಸಿಎಎ ವಿಚಾರದಲ್ಲಿ ಕೆಲವು ಸಮುದಾಯಗಳು ಅಮಿತ್ ಶಾ ವಿರುದ್ಧವಾಗಿರೊದ್ರರಿಂದ ವಿಪಕ್ಷ ಮತ್ತು ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಜವಾಬ್ದಾರಿ ಮೋದಿಗೆ ವಹಿಸರಬಹುದಾ.?
    * ಜವಾಬ್ದಾರಿ ಹಂಚಿಕೆ ವಿಚಾರದಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಯಾಗಿದೆಯಾ..?

    ಹೀಗೆ ಹಲವು ಅನುಮಾನಗಳು ಈಗ ರಾಜಕೀಯ ವಲಯದಲ್ಲಿ ಚರ್ಚೆ ಆಗುತ್ತಿದೆ. ಅಲ್ಲದೇ ಕೇಂದ್ರ ಸಚಿವರ ಸಭೆಯಲ್ಲಿ ಕೂಡಾ ಅಮಿತ್ ಶಾ ಹೆಚ್ಚು ಭಾಗಿಯಾಗುತ್ತಿಲ್ಲ. ಒಂದೆರಡು ಸಭೆಗಳನ್ನು ಹೊರತುಪಡಿಸಿದ್ರೆ ಹೆಚ್ಚು ಆಸಕ್ತಿ ತೋರಿಲ್ಲ. ಹೆಚ್ಚು ಆಕ್ಟಿವ್ ಆಗಿದ್ದ ನಾಯಕ ಹೀಗೆ ಸುಮ್ಮನಾಗಿದ್ದು ಯಾಕೆ ಎನ್ನುವ ಪ್ರಶ್ನೆ ಪಕ್ಷದ ಕೆಲವು ನಾಯಕರಿಗೆ ಕಾಡುತ್ತಿದೆ. ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ್ ಚುನಾವಣೆಗೆ ಶಾ ಸಿದ್ಧವಾಗ್ತಿರಬಹುದು ಎಂದು ಇನ್ನು ಕೆಲವರು ಅಂದಾಜು ಮಾಡುತ್ತಿದ್ದಾರೆ.

  • ಕೊರೊನಾ ತೊಲಗಿಸಲು ದೀಪ ಬೆಳಗೋಣ- ಜಾಗೃತಿ ಹಾಡು ಹೇಳಿದ ಖಾಸೀಂ ಅಲಿ

    ಕೊರೊನಾ ತೊಲಗಿಸಲು ದೀಪ ಬೆಳಗೋಣ- ಜಾಗೃತಿ ಹಾಡು ಹೇಳಿದ ಖಾಸೀಂ ಅಲಿ

    ಹಾವೇರಿ: ಕೊರೊನಾ ಕುರಿತು ಸಾಕಷ್ಟು ಜನ ಜಾಗೃತಿ ಗೀತೆಗಳನ್ನು ಹಾಡಿದ್ದು, ಇದೀಗ ಕನ್ನಡ ಕೋಗಿಲೆ ಖ್ಯಾತಿಯ ಖಾಸೀಂ ಅಲಿ ಸಹ ತಮ್ಮದೇ ಶೈಲಿಯಲ್ಲಿ ಹಾಡು ಹೇಳುವ ಮೂಲಕ ಜಾಗೃತಿ ಮೂಡಿಸಿದ್ದಾರೆ. ಅಲ್ಲದೆ ಪ್ರಧಾನಿ ಮೋದಿ ಕರೆ ನೀಡಿರುವ ದೀಪದ ಅಭಿಯಾನ ಬೆಂಬಲಿಸುವಂತೆ ಕರೆ ನೀಡಿದ್ದಾರೆ.’

    ಕೊರೊನಾ ವೈರಸ್‍ನ್ನು ಒಟ್ಟಾಗಿ ಎದುರಿಸುವ ಸಂದೇಶ ಸಾರಲು ಪ್ರಧಾನಿ ನರೇಂದ್ರ ಮೋದಿ ದೀಪ ಬೆಳಗಿಸಲು ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದೀಪ ಬೆಳಗಿಸುವ ಕುರಿತು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹರಳಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕರೊಬ್ಬರು ಹಾಡು ಬರೆದಿದ್ದಾರೆ. ಶಿಕ್ಷಕ ನಿಂಗಪ್ಪ ಸಾಳಂಕಿ ಅವರು ಬರೆದಿರುವ ಹಾಡಿಗೆ ಕನ್ನಡ ಕೋಗಿಲೆ ಖ್ಯಾತಿಯ ಖಾಸೀಂ ಅಲಿ ಹಾಡಿದ್ದಾರೆ.

    ಬೆಳಗಲಿ, ಬೆಳಗಲಿ ಕೈಲಿ ದೀಪವು ತೊಲಗಲಿ, ತೊಲಗಲಿ ಕೆಟ್ಟ ರೋಗವು ಎಂದು ಖಾಸೀಂ ಹಾಡಿರುವ ಹಾಡು ಸಖತ್ ಸದ್ದು ಮಾಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಕೊರೊನಾ ತೊಲಗಿಸಲು ದೀಪ ಬೆಳಗೋಣ ಎನ್ನುವ ಸಂದೇಶ ಸಾರುವ ಹಾಡನ್ನು ಶಿಕ್ಷಕ ನಿಂಗಪ್ಪ ಬರೆದಿದ್ದು, ಖಾಸೀಂ ಅಲಿ ತಮ್ಮದೇ ಧ್ವನಿಯಲ್ಲಿ ಹಾಡಿ ಜಾಗೃತಿ ಮೂಡಿಸಿದ್ದಾರೆ. ಅಲ್ಲದೆ ಪ್ರಧಾನಿ ಮೋದಿ ಕರೆ ನೀಡಿರುವ ದೀಪದ ಅಭಿಯಾನದಲ್ಲಿ ಭಾಗವಹಿಸುವಂತೆ ತಿಳಿಸಿದ್ದಾರೆ. ಈ ಹಾಡು ಫೇಸ್ಬುಕ್, ವಾಟ್ಸಪ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

  • ಬಿಜೆಪಿ ಯುವ ಮೋರ್ಚಾದಿಂದ ರೇವಣ್ಣಗೆ ಕ್ಯಾಂಡಲ್ ರವಾನೆ

    ಬಿಜೆಪಿ ಯುವ ಮೋರ್ಚಾದಿಂದ ರೇವಣ್ಣಗೆ ಕ್ಯಾಂಡಲ್ ರವಾನೆ

    – ಹೊಳೆನರಸೀಪುರ ವಿಳಾಸಕ್ಕೆ ಸ್ಪೀಡ್ ಪೋಸ್ಟ್

    ದಾವಣಗೆರೆ: ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ಗಡಿಯಾರ ಕಂಬದ ಬಳಿಯಿರುವ ಪ್ರಧಾನ ಅಂಚೆ ಕಚೇರಿಯಿಂದ ಶಾಸಕರಾದ ಹೆಚ್.ಡಿ ರೇವಣ್ಣ ಅವರ ವಿಳಾಸಕ್ಕೆ ಕ್ಯಾಂಡಲ್ ಬಾಕ್ಸನ್ನು ಸ್ಪೀಡ್ ಪೋಸ್ಟ್ ಮಾಡಿದ್ದಾರೆ.

    ಈ ವೇಳೆ ಮಾತನಾಡಿದ ಯುವಮೋರ್ಚಾ ಅಧ್ಯಕ್ಷ ಶಿವನಗೌಡ ಪಾಟೀಲ್, ಪ್ರಧಾನಿ ಮೋದಿ ಅವರ ದೀಪದ ಕರೆಗೆ ಪರೋಕ್ಷವಾಗಿ ಓಗೊಟ್ಟಿರುವ ರೇವಣ್ಣ ಅವರಿಗೆ ನಮ್ಮ ಧನ್ಯವಾದಗಳು. ದೇಶ ವ್ಯಾಪ್ತಿ ಲಾಕ್‍ಡೌನ್ ಇರುವುದರಿಂದ ಮೇಣದ ಬತ್ತಿ ತರಲು ಹೊರಗೆ ಹೋದರೆ ಲಾಠಿ ಚಾರ್ಜ್ ಮಾಡುತ್ತಾರೆ ಎಂದು ಅಸಹಾಯಕತೆ ತೋರಿರುವುದು ನಮಗೆ ಗೊತ್ತಾಯಿತು ಎಂದು ಹೇಳಿದರು.

    ಇಲ್ಲಿಯ ಮಣ್ಣಿನ ಕಣಕಣದಲ್ಲೂ ದೈವ ಸಾಕ್ಷಾತ್ಕಾರದ ಶಕ್ತಿ ಇದೆ. ಇಂತಹ ಪಾವನ ಮಣ್ಣಿನಲ್ಲಿ ಮನಃಪೂರ್ವಕವಾಗಿ ದೀಪ ಬೆಳಗುವ ಪ್ರಕ್ರಿಯೇ ನಿಜಕ್ಕೂ ದೈವ ಸಾಕ್ಷಾತ್ಕಾರದ ಸಮಾನ. ಸ್ವಾತಂತ್ರ್ಯ ಭಾರತದ ನಂತರ ಭಾರತೀಯರೆಲ್ಲರೂ ದೇಶದ ಒಳತಿಗಾಗಿ, ದೇಶದ ಜನರ ಪ್ರಾಣ ರಕ್ಷಣೆಗಾಗಿ ಪ್ರಧಾನಿಯವರ ಕರೆ ಯಶಸ್ವಿಯಾಗಬೇಕಾದರೆ ರೇವಣ್ಣರ ದೈವ ಭಕ್ತರ ಸಹಕಾರವೂ ಅತ್ಯವಶ್ಯಕ. ಆದ್ದರಿಂದ ಅವರ ಅಸಾಹಯಕತೆಯನ್ನು ಮನಗಂಡು ಹೊಳೆನರಸೀಪುರ ಮನೆಯ ವಿಳಾಸಕ್ಕೆ ಮೇಣದ ಬತ್ತಿ ಪ್ಯಾಕೆಟ್‍ಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಿಕೊಡುತ್ತಿದ್ದೇವೆ ಎಂದಿದ್ದಾರೆ.

    ತಾವು ಕುಟುಂಬ ಪರಿವಾರ ಸಮೇತರಾಗಿ ನಿರ್ಮಲ ಮನಸ್ಸಿನಿಂದ ದೇಶಕ್ಕೆ ಬಂದ ಕೊರೊನಾ ಕಂಟಕ ಹೊಡೆದೊಡಿಸಲು ನಮ್ಮ ಪ್ರಧಾನಿ ಅವರ ದೀಪ ಪ್ರಜ್ವಲನ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಮನವಿ ಮಾಡಿಕೊಳ್ಳುತ್ತಿದ್ದೇವೆ. ಅಲ್ಲದೇ ತಮ್ಮ ಪಕ್ಷದ ಯಾವುದಾದರೂ ಶಾಸಕರುಗಳು ಈ ಅಸಹಾಯಕತೆಯ ಅಳಲನ್ನು ತಮ್ಮ ಮುಂದೆ ತೋಡಿಕೊಂಡಿದ್ದರೆ ನಮಗೆ ತಿಳಿಸಿ. ನಾವು ಅವರಿಗೂ ಕಳುಹಿಸಿ ಕೊಡಲು ಸಿದ್ಧರಿದ್ದೇವೆ ಎಂದು ಯುವಮೋರ್ಚಾ ಕಾರ್ಯಕರ್ತರು ತಿಳಿಸಿದ್ದಾರೆ.

  • ಪ್ರಧಾನಿ ಹೆಸರಲ್ಲಿ ನಕಲಿ ಖಾತೆ – ಕೊರೊನಾ ಸೋಂಕಿತರ ನೆರವಿಗೆ ಸ್ವೀಕರಿಸುತ್ತಿರೋ ದೇಣಿಗೆ ಲಪಟಾಯಿಸಲು ಯತ್ನ

    ಪ್ರಧಾನಿ ಹೆಸರಲ್ಲಿ ನಕಲಿ ಖಾತೆ – ಕೊರೊನಾ ಸೋಂಕಿತರ ನೆರವಿಗೆ ಸ್ವೀಕರಿಸುತ್ತಿರೋ ದೇಣಿಗೆ ಲಪಟಾಯಿಸಲು ಯತ್ನ

    ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೊನಾ ಸೋಂಕಿತರ ನೆರವಿಗೆ ಮುಂದಾಗಿರುವ ಕೇಂದ್ರ ಸರ್ಕಾರ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಲು ಮುಂದಾಗಿತ್ತು. ಆದರೆ ಕೇಂದ್ರ ಸರ್ಕಾರದ ಮಾದರಿಯಲ್ಲೇ ನಕಲಿ ಖಾತೆ ಸೃಷ್ಟಿಸಿ ಹಣ ಕೊಳ್ಳೆ ಹೊಡೆಯಲು ಪ್ರಯತ್ನಿಸಿದ ಘಟನೆ ನಡೆದಿದೆ.

    ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ಕೊರೊನಾ ಸೋಂಕು ಪೀಡಿತರ ನೆರವುಗಾಗಿ ಸಾರ್ವಜನಿಕರು ದೇಣಿಗೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿಕೊಂಡಿದ್ದರು. ದೇಣಿಗೆ ನೀಡುವ ಸಾರ್ವಜನಿಕರು PM Cares Fund ಯುಪಿಐ ಐಡಿ pmcares@sbi ಗೆ ದೇಣಿಗೆ ಸಂದಾಯ ಮಾಡಲು ಮನವಿ ಮಾಡಲಾಗಿತ್ತು.

    ಇದೇ ಅವಕಾಶ ಬಳಸಿಕೊಂಡ ಇಬ್ಬರು ಖದೀಮರು PM Cares Fund’ ಯುಪಿಐ ಐಡಿ pmcare@upi  ನಕಲಿ ಖಾತೆಯನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ಳಲಾಗಿತ್ತು. ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಹೋಗಬೇಕಿದ್ದ ಹಣವನ್ನು ಲಪಟಾಯಿಸಲು ಯತ್ನಿಸಲಾಗಿತ್ತು.

    ಈ ಪ್ರಕರಣವನ್ನು ಭಾರತೀಯ ಸ್ಟೇಟ್ ಬ್ಯಾಂಕ್ ಗಮನಿಸಿದ್ದು, ಸಂಬಂಧಿಸಿದವರ ಗಮನಕ್ಕೆ ತಂದಿತ್ತು. ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

  • 2 ರೂ.ಗೆ ಗೋಧಿ, 3 ರೂ.ಗೆ ಅಕ್ಕಿ, 80 ಕೋಟಿ ಜನರಿಗೆ ಪಡಿತರ – ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವ ನಿರ್ಣಯ

    2 ರೂ.ಗೆ ಗೋಧಿ, 3 ರೂ.ಗೆ ಅಕ್ಕಿ, 80 ಕೋಟಿ ಜನರಿಗೆ ಪಡಿತರ – ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವ ನಿರ್ಣಯ

    ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಭಾರತ ಬಂದ್ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಿರ್ಧಾರ ಸರಿಯಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವೇಡ್ಕರ್ ಪ್ರತಿಕ್ರಿಸಿದ್ದಾರೆ.

    ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ದೇಶದ ಹಿತ ದೃಷ್ಟಿಯಿಂದ ಈ ನಿರ್ಧಾರ ಸರಿಯಾಗಿದೆ. ಅಲ್ಲದೇ ಸಾಮಾಜಿಕ ಸಂಪರ್ಕದಿಂದ ಅಂತರ ಕಾಯ್ದುಕೊಳ್ಳುವುದು ಅತಿ ಮುಖ್ಯ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾರತ ಬಂದ್ ಮಾಡಿರುವ ಬಗ್ಗೆ ಮಹತ್ವದ ಚರ್ಚೆ ನಡೆದಿದೆ. ದೇಶದ 80 ಕೋಟಿ ಜನರಿಗೆ ಪಡಿತರ ನೀಡುವ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಮಾಡಲಿದೆ ಎಂದು ಜಾವೇಡ್ಕರ್ ಹೇಳಿದರು.

    ಪ್ರತಿ ವ್ಯಕ್ತಿಗೆ ಏಳು ಕೆ.ಜಿ ಪಂಡಿತರ ನೀಡಲು ನಿರ್ಧರಿಸಿದ್ದು, ಗೋಧಿ ಎರಡು ರೂಪಾಯಿ, ಅಕ್ಕಿ ಮೂರು ರೂಪಾಯಿಗೆ ಕೆ.ಜಿಯಂತೆ ವಿತರಣೆ ಮಾಡಲಾಗುವುದು. ಈ ಮೂಲಕ ದೇಶದ ಜನರ ನೆರವಿಗೆ ಕೇಂದ್ರ ಸರ್ಕಾರ ಬರಲಿದೆ. ಹೀಗಾಗಿ ಯಾರು ಆತಂಕಗೊಳ್ಳುವ ಅವಶ್ಯಕತೆ ಇಲ್ಲ ಎಂದು ಭರವಸೆ ನೀಡಿದರು.

    ಜನರು ಮನೆಯಲ್ಲಿದ್ದು ಸಹಕಾರ ನೀಡಬೇಕು. ಪ್ರತಿ ಬಾರಿ ಯಾವುದಾದರೂ ಕೆಲಸ ಮಾಡಿದ ಬಳಿಕ ಸಾಬೂನಿನಿಂದ ಕೈ ತೊಳೆಯಬೇಕು. ಗಾಳಿ ಮಾತಿಗೆ ಕಿವಿಗೊಟ್ಟು ಮನೆಯಿಂದ ಆಚೆ ಬಾರಬಾರದು. ಕೆಮ್ಮು ಕಫ, ಜ್ವರ ಕಂಡು ಬಂದಲ್ಲಿ ಕೂಡಲೇ ವೈದ್ಯರನ್ನು ಸಂಪರ್ಕಿಸುವಂತೆ ಅವರು ಸಾರ್ವಜನಿಕಲ್ಲಿ ಮನವಿ ಮಾಡಿಕೊಂಡರು.

    ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್ ಸಭೆಯಲ್ಲಿ ಸೋಶಿಯಲ್ ಡಿಸ್ಟೇನ್ಸ್ ಫಾಲೋ ಮಾಡುವ ಮೂಲಕ ನುಡಿದಂತೆ ನಡೆದು ತೋರಿಸಿದರು. ಮಂಗಳವಾರ ಭಾಷಣದಲ್ಲಿ ಮಾತನಾಡಿದ್ದ ಅವರು ಪ್ರಧಾನಿನಿಂದ ಸಾಮಾನ್ಯನ ವರೆಗೂ ಎಲ್ಲರೂ ಅಂತರ ಕಾಯ್ದೆಕೊಳ್ಳಬೇಕು ಎಂದಿದ್ದರು.

    ಅದರಂತೆ ಇಂದು ನಡೆದ ಸಭೆಯಲ್ಲಿ ಎಲ್ಲ ಕೇಂದ್ರ ಸಚಿವರು ದೂರದಲ್ಲಿ ಕೂತು ಸಭೆ ನಡೆಸಿದ್ದಾರೆ. ಈ ಮೂಲಕ ದೇಶಕ್ಕೆ ಹೊಸ ಸಂದೇಶ ರವಾನಿಸುವ ಪ್ರಯತ್ನವನ್ನು ಪ್ರಧಾನಿ ಮೋದಿ ಮಾಡಿದರು.

  • ಇಂದು ಮಧ್ಯರಾತ್ರಿ 12ರಿಂದ ದೇಶವೇ ಲಾಕ್‍ಡೌನ್ – ಮೋದಿ ಅಧಿಕೃತ ಘೋಷಣೆ

    ಇಂದು ಮಧ್ಯರಾತ್ರಿ 12ರಿಂದ ದೇಶವೇ ಲಾಕ್‍ಡೌನ್ – ಮೋದಿ ಅಧಿಕೃತ ಘೋಷಣೆ

    -21 ದಿನ ಭಾರತ ಸಂಪೂರ್ಣ ಬಂದ್
    -21 ದಿನ ಯಶಸ್ವಿಯಾಗದಿದ್ರೆ, ದೇಶ 21 ವರ್ಷ ಹಿಂದೆ ಹೋಗುತ್ತೆ

    ನವದೆಹಲಿ: ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮಧ್ಯರಾತ್ರಿಯಿಂದಲೇ ಇಡೀ ಭಾರತವನ್ನೇ ಲಾಕ್‍ಡೌನ್ ಮಾಡಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

    ಇಂದು ಮಧ್ಯರಾತ್ರಿಯಿಂದಲೇ ಭಾರತ ಸಂಪೂರ್ಣ ಲಾಕ್‍ಡೌನ್ ಆಗಲಿದೆ. ಈ ಲಾಕ್‍ಡೌನ್ ನಿಂದಾಗುವ ನಷ್ಟವನ್ನು ದೇಶ ಭರಿಸಬೇಕಿದೆ. ಆದ್ರೆ ಇಂದು ದೇಶದ ಪ್ರತಿಯೊಬ್ಬರ ಜೀವದ ರಕ್ಷಣೆ ನಮ್ಮ ಕರ್ತವ್ಯವಾಗಿದೆ. ಇಂದು ನೀವು ದೇಶದ ಯಾವುದೇ ಭಾಗದಲ್ಲಿದ್ದರೂ, ಅಲ್ಲಿಯೇ ಉಳಿದುಕೊಳ್ಳಬೇಕು. ಮುಂದಿನ ಮೂರು ವಾರಗಳ ಕಾಲ ಭಾರತ ಸಂಪೂರ್ಣ ಲಾಕ್‍ಡೌನ್ ಆಗಲಿದೆ.

    ಒಂದು ವೇಳೆ 21 ದಿನದಲ್ಲಿ ನಾವು ಕೊರೊನಾ ವಿರುದ್ಧ ಗೆಲುವು ಸಾಧಿಸದಿದ್ದರೆ, 21 ವರ್ಷಗಳ ಹಿಂದೆ ಭಾರತ ಹೋಗಲಿದೆ. 21 ದಿನ ಮನೆಯಿಂದ ಹೊರ ಬರೋದನ್ನು ಮರೆತು ಬಿಡಿ. ಮನೆಯಲ್ಲಿರಿ, ನಿಮ್ಮ ಮನೆಯಲ್ಲಿರಿ. ನಿಮ್ಮ ಮನೆಯ ಬಾಗಿಲು ಮುಂದೆ ಲಕ್ಷ್ಮಣ ರೇಖೆ ಹಾಕಿಕೊಳ್ಳಬೇಕು.

    22 ಮಾರ್ಚ್ ಭಾನುವಾರದಂದು ನಾವೆಲ್ಲರೂ ಜನತಾ ಕರ್ಫ್ಯೂನಲ್ಲಿ ಭಾಗಿಯಾಗಿ ಯಶಸ್ವಿಗೊಳಿಸಿದ್ದೇವೆ. ಪ್ರತಿಯೊಂದು ವರ್ಗದ ಜನ ನಮ್ಮ ಜೊತೆ ಬಂದರು. ಪ್ರತಿ ಭಾರತದ ವಾಸಿ ಜನತಾ ಕರ್ಫ್ಯೂ ಯಶಸ್ವಿಯಾಗುವಂತೆ ಮಾಡಿದರು ಎಂದು ಜನರಿಗೆ ಧ್ಯನವಾದ ತಿಳಿಸಿದರು.

    ಕೊರೊನಾ ವೈರಸ್ ಎಂಬ ಮಹಾಮಾರಿಯಿಂದ ವಿಶ್ವದಲ್ಲಿ ಏನಾಗ್ತಿದೆ ಎಂಬುದನ್ನು ನೋಡುತ್ತಿದ್ದೀರಿ. ಅಭಿವೃದ್ಧಿ ಹೊಂದಿದ್ದ ರಾಷ್ಟ್ರಗಳನ್ನು ಸಹ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಸಾಮಾಜಿಕ ಅಂತರ ಕಾಯ್ದುಕೊಂಡರೆ ಮಾತ್ರ ಕೊರೊನಾದಿಂದ ಬದುಕುಳಿಯಬಹುದು. ಕೊರೊನೊ ವೈರಸ್ ಕೊಲ್ಲಲು ಅದರ ಚೈನ್ ಅನ್ನು ನಾವು ಕಡಿತಗೊಳಿಸಬೇಕಿದೆ.

    ಸೋಶಿಯಲ್ ಡಿಸ್ಟನ್ಸ್ ಪ್ರತಿ ವ್ಯಕ್ತಿ, ಕುಟುಂಬ ಮತ್ತು ಪ್ರಧಾನ ಮಂತ್ರಿಗೂ ಇದೆ. ಕೊರೊನಾ ಬಗ್ಗೆ ಹರಡುತ್ತಿರುವ ಸುಳ್ಳು ಸುದ್ದಿಗಳನ್ನು ನಂಬಬೇಡಿ. ಇಂತಹ ಬೇಜವಾಬ್ದಾರಿತನ ಮುಂದಿನ ದಿನಗಳಲ್ಲಿ ದೊಡ್ಡ ಬೆಲೆ ತೆರಬೇಕಾಗುತ್ತದೆ. ಅದು ಎಷ್ಟು ದೊಡ್ಡ ಬೆಲೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ಹೀಗಾಗಿ ಇಂದು ರಾತ್ರಿ 12 ಗಂಟೆಯಿಂದ ಸಂಪೂರ್ಣ ಭಾರತ ಲಾಕ್‍ಡೌನ್ ಆಗಲಿದೆ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.

    ಈ ಮಹಾಮಾರಿಯ ಸೋಂಕಿತ ಓರ್ವ ವ್ಯಕ್ತಿ ಅಸಂಖ್ಯ ಜನರಿಗೆ ಸೋಂಕು ತಗುಲಿಸಬಹುದು. 1 ಲಕ್ಷ ಜನರಿಗೆ ಸೋಂಕು ತಗಲು 63 ದಿನ ಬೇಕಾಗಿತ್ತು. ಆದ್ರೆ ಮುಂದಿನ 11 ದಿನಗಳಲ್ಲಿ ಮತ್ತೆ 1 ಲಕ್ಷ ಜನರಿಗೆ ಸೋಂಕು ತಗುಲಿದೆ. ಮತ್ತೆ ಕೆಲವೇ ದಿನಗಳಲ್ಲಿ ಮೂರು ಲಕ್ಷಕ್ಕೆ ಸೋಂಕಿತರು ತಲುಪಿದ್ರು. ಈ ಸಂಖ್ಯೆಗಳ ಮೂಲಕ ಕೊರೊಬಾ ಎಷ್ಟು ಭಯಾನಕ ಎಂದು ನೀವು ಊಹಿಸಬಹುದು.

    ಪೌರ ಕಾರ್ಮಿಕರು, ವೈದ್ಯರು 24 ಗಂಟೆ ಕೆಲಸ ಮಾಡುತ್ತಿದ್ದಾರೆ. ನಿಮ್ಮಲ್ಲಿ ಜಾಗೃತಿ ಮೂಡಿಸಲು ಹಗಲು ರಾತ್ರಿ ಎನ್ನದೇ ಕೆಲಸ ಮಾಡುತ್ತಿರುವ ಮಾಧ್ಯಮ ಮತ್ತು ಪೊಲೀಸರನ್ನು ಗಮನಿಸಿ. ನಿಮ್ಮ ಕುಟುಂಬದ ರಕ್ಷಣೆಗಾಗಿ ಒತ್ತಡಗಳ ನಡುವೆಯೂ ಕೆಲಸ ಮಾಡುತ್ತಿದ್ದಾರೆ. ನಿಮ್ಮ ಜೀವ ಉಳಿಸಲು ಲಾಕ್‍ಡೌನ್ ಮಾಡಲಾಗುತ್ತಿದೆ. ಇಂದು ನಾನು ಪ್ರಧಾನಿ ಮಂತ್ರಿಯಾಗಿ ಈ ವಿಷಯವನ್ನು ಹೇಳುತ್ತಿಲ್ಲ. ನಿಮ್ಮ ಕುಟುಂಬದ ಓರ್ವ ಸದಸ್ಯನಾಗಿ ಹೇಳುತ್ತಿದ್ದೇನೆ.

    ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರ 15 ಸಾವಿರ ಕೋಟಿ ರೂ. ಮೀಸಲು ನೀಡಲಾಗುತ್ತಿದೆ. ಹೆಲ್ತ್ ಕೇರ್ ಗೆ ಮೊದಲ ಪ್ರಾಮುಖ್ಯತೆ ನೀಡಬೇಕು ಎಂಬುದರ ಬಗ್ಗೆ ರಾಜ್ಯ ಸರ್ಕಾರಗಳ ಜೊತೆ ಮಾತನಾಡಿದ್ದೇನೆ. ಖಾಸಗಿ ಸಂಸ್ಥೆಗಳು ಸಹ ಕೊರೊನಾ ಜಾಗೃತಿಗೆ ಮುಂದಾಗುತ್ತಿವೆ ಎಂಬ ನಂಬಿಕೆ ಇದೆ. ಕೊರೊನಾ ಸಂಬಂಧ ಮೂಢನಂಬಿಕೆಗಳಿಗೆ ಬಲಿಯಾಗದಿರಿ. ಆರೋಗ್ಯದಲ್ಲಿ ಏರುಪೇರಾದ್ರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಿ. ವೈದ್ಯರ ಸಲಹೆ ಪಡೆಯದೇ ಯಾವುದೇ ಮಾತ್ರೆ ತೆಗೆದುಕೊಳ್ಳಬೇಡಿ.

  • ಕೊರೊನಾ ಭೀತಿ – ನಾಳೆ ಪ್ರಧಾನಿ ಜೊತೆ ಸಿಎಂ ವಿಡಿಯೋ ಸಂವಾದ

    ಕೊರೊನಾ ಭೀತಿ – ನಾಳೆ ಪ್ರಧಾನಿ ಜೊತೆ ಸಿಎಂ ವಿಡಿಯೋ ಸಂವಾದ

    ಬೆಂಗಳೂರು: ದೇಶಾದ್ಯಂತ ಕೂರೊನಾ ವೈರಸ್ ಸೋಂಕಿನ ಭೀತಿ ಹೆಚ್ಚಾಗುತ್ತಿರುವುದು ಕೇಂದ್ರ ಸರ್ಕಾರದ ನೆಮ್ಮದಿಯನ್ನು ಕೆಡಿಸಿದೆ. ಈ ನಿಟ್ಟಿನಲ್ಲಿ ಕೇಂದ್ರವು ಹಲವು ಗಂಭೀರ ಮತ್ತು ಪರಿಣಾಮಕಾರಿ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ. ರಾಜ್ಯಗಳ ಮಟ್ಟದಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಪಡೆಯಲು ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಮುಂದಾಗಿದ್ದಾರೆ.

    ನಾಳೆ ಪ್ರಧಾನಿ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರುಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದು, ಕೊರೊನಾ ನಿಯಂತ್ರಣ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ. ನಾಳೆ ಸಂಜೆ 4 ಗಂಟೆಗೆ ಪ್ರಧಾನಮಂತ್ರಿಗಳಿಂದ ದೇಶದ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರುಗಳೊಂದಿಗೆ ಏಕಕಾಲದಲ್ಲಿ ವಿಡಿಯೋ ಕಾನ್ಫರೆನ್ಸ್ ನಡೆಯಲಿದೆ.

    ಮುಖ್ಯಮಂತ್ರಿ ಯಡಿಯೂರಪ್ಪ ಸಹ ಪ್ರಧಾನಿಗಳ ವಿಡಿಯೋ ಸಂವಾದಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಗೂ ಮುನ್ನ ಸಿಎಂ ಯಡಿಯೂರಪ್ಪ ಅವರು ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ಕರೆದಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಚಿವರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ನಾಳೆ ಮಧ್ಯಾಹ್ನ 3.30ಕ್ಕೆ ಸಿಎಂ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

    ಈ ಸಭೆಯಲ್ಲಿ ರಾಜ್ಯದಲ್ಲಿ ಕೊರೊನಾ ಪೀಡಿತರು, ಶಂಕಿತರು, ನಿಯಂತ್ರಣ ಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಿಎಂ ಪಡೆಯಲಿದ್ದಾರೆ. ನಂತರ ಸಂಜೆ 4 ಗಂಟೆಗೆ ಪ್ರಧಾನಮಂತ್ರಿಗಳು ನಡೆಸುವ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿಗಳು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಯಾವ ಸಲಹೆ-ಸೂಚನೆಗಳನ್ನು ಕೊಡುತ್ತಾರೆ ಕಾದು ನೋಡಬೇಕಿದೆ.

  • ಸಂವಿಧಾನ ರದ್ದು ಮಾಡಲು ಬಿಜೆಪಿ ಕೈ ಹಾಕಿದ್ರೆ ದೇಶದಲ್ಲಿ ರಕ್ತಕ್ರಾಂತಿ ಆಗುತ್ತೆ: ಸಿದ್ದರಾಮಯ್ಯ

    ಸಂವಿಧಾನ ರದ್ದು ಮಾಡಲು ಬಿಜೆಪಿ ಕೈ ಹಾಕಿದ್ರೆ ದೇಶದಲ್ಲಿ ರಕ್ತಕ್ರಾಂತಿ ಆಗುತ್ತೆ: ಸಿದ್ದರಾಮಯ್ಯ

    ವಿಜಯಪುರ: ಸಂವಿಧಾನ ರದ್ದು ಮಾಡಲು ಬಿಜೆಪಿಯವರು ಏನಾದರೂ ಕೈ ಹಾಕಿದರೆ ಈ ದೇಶದಲ್ಲಿ ರಕ್ತಕ್ರಾಂತಿ ಆಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆಯನ್ನು ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಈ ರೀತಿಯ ಹೋರಾಟಗಳು ನಡೆಯುತ್ತಿದ್ದವು. ಭಾರತೀಯ ಪೌರತ್ವ ಕಾಯ್ದೆಗೆ ತಿದ್ದುಪಡಿಯಾದಾಗಿನಿಂದ ದೇಶಾದ್ಯಂತ ಜನ ಸಿಡಿದೆದ್ದಿದ್ದಾರೆ. ಜನರು ಸಾಮೂಹಿಕವಾಗಿ ಹೋರಾಟ ನಡೆಸುತ್ತಿದ್ದಾರೆ. ಇದನ್ನು ನೋಡಿದರೆ ಈಗ ಮತ್ತೊಂದು ಸ್ವಾತಂತ್ರ್ಯ ಹೋರಾಟ ನಡೆಯುತ್ತಿದೆ. ಹೀಗಾಗಿ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಸರ್ಕಾರಕ್ಕೆ ಎಷ್ಟೇ ಬಹುಮತವಿರಲಿ. ಸಂವಿಧಾನ ಬಾಹಿರ ಕಾನೂನು ಮಾಡಿದರೆ ಸಾರ್ವಜನಿಕರು ಹೋರಾಟ ಮಾಡುವ ಹಕ್ಕನ್ನು ಅಂಬೇಡ್ಕರ್ ನೀಡಿದ್ದಾರೆ. ಈ ಹಕ್ಕನ್ನು ದಮನ ಮಾಡಲು ಮೋದಿ, ಶಾಗೆ ಯಾವುದೇ ಅಧಿಕಾರವಿಲ್ಲ ಎಂದರು.

    ವಿಶ್ವ ಶ್ರೇಷ್ಠ ಸಂವಿಧಾನವನ್ನು ಬುಡಮೇಲು ಮಾಡಲು ಬಿಜೆಪಿ ಹೊರಟಿದೆ. ಈ ಸಂವಿಧಾನದ ಮೂಲಕ ಕಲ್ಪಿಸಲಾಗಿರುವ ಸಮಾನತೆಯ ವಿರುದ್ಧ ಬಿಜೆಪಿಗೆ ಸಿಟ್ಟಿದೆ. ಒಂದು ವೇಳೆ ಸಂವಿಧಾನ ರದ್ದು ಮಾಡಲು ಬಿಜೆಪಿ ಕೈ ಹಾಕಿದರೆ ದೇಶದಲ್ಲಿ ರಕ್ತಕ್ರಾಂತಿ ನಡೆಯಲಿದೆ. ವಾಜಪೇಯಿ ಪ್ರಧಾನಿಯಾಗಿದ್ದರೂ ಹಿಡನ್ ಅಜೆಂಡಾ ಜಾರಿ ಮಾಡಲಿಲ್ಲ. ಆದರೆ ಇಂದು ಮೋದಿ, ಶಾ ಹಿಡನ್ ಅಜೆಂಡಾ ಜಾರಿ ಮೂಲಕ ಸಂವಿಧಾನ ಬುಡಮೇಲು ಮಾಡಲು ಹೊರಟಿದ್ದಾರೆ. ಸಂವಿಧಾನ ಪರ ಮತ್ತು ವಿರೋಧಿಗಳ ನಡುವೆ ಈಗ ಹೋರಾಟ ನಡೆಯುತ್ತಿದೆ. ಬಿಜೆಪಿಯವರು ಪರಿವರ್ತನೆ ವಿರೋಧಿಗಳು ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

    ಶ್ರೀಮಂತರು, ಬಡವರ ಮಧ್ಯೆ ಅಂತರ ಹಾಗೆಯೇ ಮುಂದುವರಿಯಲಿ, ಧರ್ಮ ಸಂಘರ್ಷ ನಡೆಯಲಿ ಎಂಬುದು ಬಿಜೆಪಿಯವರ ಉದ್ದೇಶ. ಈ ಹಿನ್ನೆಲೆ ಈಗ ಹೋರಾಟ ನಡೆಯುತ್ತಿದೆ. ಬ್ರಿಟಿಷರ ವಿರುದ್ಧ ಭಾರತೀಯರಿಗೆ ಜಯ ಸಿಕ್ಕಂತೆ ಈ ಹೋರಾಟದಲ್ಲಿ ನಮಗೆ ಜಯ ಸಿಕ್ಕೆ ಸಿಗಲಿದೆ. ಇಲ್ಲಿ ಯಾರಿಗೂ ಮಾನವೀಯತೆ ಇಲ್ಲ. ಯಾರನ್ನಾದರೂ ಕೊಂದು ಹಾಕುತ್ತಾರೆ. ಮಂಗಳೂರಿನಲ್ಲಿ ಪೊಲೀಸರು ದುರುದ್ದೇಶದಿಂದ ಇಬ್ಬರು ಅಮಾಯಕ ಯುವಕರನ್ನು ಕೊಂದುಹಾಕಿದರು. ಇದು ಕರ್ನಾಟಕ ಮಾತ್ರವಲ್ಲ, ದೇಶಾದ್ಯಂತ ನಡೆಯುತ್ತಿದೆ. ದೇಶದಲ್ಲಿ ಭಯದ ವಾತಾವರಣ ಸೃಷ್ಠಿಸಲಾಗುತ್ತಿದೆ. ಈವರೆಗೆ ದೇಶಾದ್ಯಂತ 100 ಜನ ಸಾವಿಗೀಡಾಗಿದ್ದಾರೆ. ಮೋದಿ ಸೇರಿದಂತೆ ಯಾರಿಂದಲೂ ಹೋರಾಟ ತಡೆಯಲು ಸಾಧ್ಯವಿಲ್ಲ. ಸಿಎಎ ವಿರೋಧಿಗಳು ನಗರ ನಕ್ಸಲ್, ದೇಶ ವಿರೋಧಿಗಳು ಎಂದು ಬಿಂಬಿಸುತ್ತೀರ ಎಂದು ಪ್ರಶ್ನೆ ಮಾಡಿದರು.

  • ಮೋದಿ ಪವರ್‌ನಲ್ಲಿ ಇರೋವರೆಗೂ ಇಂಡೋ-ಪಾಕ್ ಟೂರ್ನಿ ನಡೆಯಲ್ಲ: ಅಫ್ರಿದಿ

    ಮೋದಿ ಪವರ್‌ನಲ್ಲಿ ಇರೋವರೆಗೂ ಇಂಡೋ-ಪಾಕ್ ಟೂರ್ನಿ ನಡೆಯಲ್ಲ: ಅಫ್ರಿದಿ

    ಇಸ್ಲಾಮಾಬಾದ್: ಪ್ರಧಾನಿ ನರೇಂದ್ರ ಮೋದಿ ಅಧಿಕಾರದಲ್ಲಿ ಇರುವವರೆಗೂ ಭಾರತ ಹಾಗೂ ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಸರಣಿ ನಡೆಯಲು ಸಾಧ್ಯವಿಲ್ಲ ಎಂದು ಮಾಜಿ ಆಟಗಾರ ಶಾಹೀದ್ ಅಫ್ರಿದಿ ಅಭಿಪ್ರಾಯ ಪಟ್ಟಿದ್ದಾರೆ.

    2012ರಿಂದ ದ್ವಿಪಕ್ಷೀಯ ಸರಣಿಗಳಿಂದ ದೂರವೇ ಉಳಿದಿರುವ ಪಾಕಿಸ್ತಾನ ಹಾಗೂ ಟೀಂ ಇಂಡಿಯಾ ತಂಡಗಳು ಐಸಿಸಿ ಹಾಗೂ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗಳಲ್ಲಿ ಮಾತ್ರ ಎದುರಾಗುತ್ತಿವೆ. ಆದರೆ ಕಳೆದ ವರ್ಷ ಪಾಕ್ ಕ್ರಿಕೆಟ್ ಬೋರ್ಡ್ (ಪಿಸಿಬಿ) ಐಸಿಸಿಗೆ ಭಾರತದ ವಿರುದ್ಧ ದೂರು ನೀಡಿ ದ್ವಿಪಕ್ಷೀಯ ಸರಣಿ ಆಡುವಂತೆ ಇಲ್ಲವೇ ಪರಿಹಾರ ಮೊತ್ತ ನೀಡುವಂತೆ ಕೋರಿತ್ತು. ಆದರೆ ಈ ಮನವಿಯನ್ನು ಐಸಿಸಿ ತಿರಸ್ಕರಿಸಿತ್ತು. ಇತ್ತ ಬಿಸಿಸಿಐ ಕೂಡ ಪಾಕ್ ಮನವಿಗೆ ಯಾವುದೇ ರೀತಿಯಲ್ಲಿ ಸ್ಪಂದನೆ ನೀಡಿರಲಿಲ್ಲ.

    ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಪಾಕ್ ಮಾಜಿ ಆಟಗಾರ ಶಾಹೀದ್ ಅಫ್ರಿದಿ, ಪಾಕ್-ಭಾರತ ನಡುವೆ ಸರಣಿ ನಡೆದಿರಲು ಪ್ರಧಾನಿ ಮೋದಿ ಕಾರಣ. ಅವರು ಅಧಿಕಾರದಲ್ಲಿ ಇರುವವರೆಗೂ ಟೂರ್ನಿ ನಡೆಯುವುದು ಅನುಮಾನ. ಮೋದಿ ಅಜೆಂಡಾ ಏನೆಂದು ಭಾರತೀಯರಿಗೂ ಅರಿವಿದೆ. ಮೋದಿ ಯಾವಾಗಲೂ ಋಣಾತ್ಮಕ ಆಲೋಚನೆಗಳನ್ನೇ ಹೊಂದಿರುತ್ತಾರೆ. ಅವರ ಕಾರಣದಿಂದಲೇ ಎರಡು ದೇಶಗಳ ನಡುವಿನ ಸ್ನೇಹ ವಾತಾವರಣಕ್ಕೆ ಹೊಡೆತ ಬಿದ್ದಿದೆ ಎಂದು ಹೇಳಿದ್ದಾರೆ.

    ಪಾಕಿಸ್ತಾನದಲ್ಲಿ ಮತ್ತೆ ಕ್ರಿಕೆಟ್ ಟೂರ್ನಿಗಳನ್ನು ಆಯೋಜಿಸಲು ಪಿಸಿಬಿ ಕೈಗೊಂಡಿರುವ ಪ್ರಯತ್ನಗಳಿಗೆ ಅಫ್ರಿದಿ ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೇ ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್ ಕ್ರಿಕೆಟ್‍ನಲ್ಲಿ ವಿವಿಧ ದೇಶಗಳ ಕ್ರಿಕೆಟಿಗರು ಭಾಗಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್ ತಂಡಗಳು ಪಾಕ್ ಪ್ರವಾಸವನ್ನು ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

    ಪಾಕಿಸ್ತಾನದಲ್ಲಿ ಈ ವರ್ಷದ ಅಂತ್ಯದ ವೇಳೆಗೆ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ಭಾಗಿಯಾಗದಿದ್ದರೆ ಮುಂದಿನ ವರ್ಷ ಭಾರತದಲ್ಲಿ ನಡೆಯುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕ್ ಭಾಗವಹಿಸುವುದಿಲ್ಲ ಎಂದು ಪಿಸಿಬಿ ಈಗಾಗಲೇ ಹೇಳಿದೆ. ಆದರೆ ಪಿಸಿಬಿಯ ಎಚ್ಚರಿಕೆಗಳಿಗೆ ಬಿಸಿಸಿಐ ಯಾವುದೇ ರೀತಿಯಲ್ಲಿ ತಲೆಕೆಡಿಸಿಕೊಳ್ಳುತ್ತಿಲ್ಲ. ಇದರಿಂದ ಸಂಕಷ್ಟಕ್ಕೆ ಒಳಗಾಗಿರುವ ಪಾಕ್, ಭಾರತವಿಲ್ಲದೇ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ನಡೆಸಿದರೆ ನಷ್ಟ ಸಂಭವಿಸಲಿದೆ. ಆದ್ದರಿಂದ ಪಾಕ್‍ನಲ್ಲಿ ಟೂರ್ನಿಯನ್ನು ಆಯೋಜಿಸುವುದರ ಬದಲು ಯುಎಇನಲ್ಲಿ ಟೂರ್ನಿ ಆಯೋಜಿಸುವ ಚಿಂತನೆಯಲ್ಲಿದೆ ಎನ್ನಲಾಗಿದೆ.

  • ಕೆಲವೇ ಗಂಟೆಗಳಲ್ಲಿ ನಿಮ್ಮನ್ನು ಸೇರುತ್ತೇನೆ: ಹಿಂದಿಯಲ್ಲಿ ಟ್ರಂಪ್ ಟ್ವೀಟ್

    ಕೆಲವೇ ಗಂಟೆಗಳಲ್ಲಿ ನಿಮ್ಮನ್ನು ಸೇರುತ್ತೇನೆ: ಹಿಂದಿಯಲ್ಲಿ ಟ್ರಂಪ್ ಟ್ವೀಟ್

    ನವದೆಹಲಿ: ನಾನು ಈಗಾಗಲೇ ಹೊರಟಿದ್ದೇನೆ, ದಾರಿ ಮಧ್ಯೆ ಇದ್ದೇನೆ ಕೆಲವೇ ಗಂಟೆಗಳಲ್ಲಿ ನಿಮ್ಮನ್ನು ಸೇರುತ್ತೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದಾರೆ.

    ಹಿಂದಿಯಲ್ಲಿ ಟ್ವೀಟ್ ಮಾಡಿ ಈ ಮಾಹಿತಿ ನೀಡಿರುವ ಅವರು, ಭಾರತಕ್ಕೆ ಆಗಮಿಸಲು ಕಾತುರನಾಗಿದ್ದು, ದಾರಿ ಮಧ್ಯೆ ಇದ್ದೇನೆ ಇನ್ನೇನು ಕೆಲವೇ ಗಂಟೆಗಳಲ್ಲಿ ನಿಮ್ಮನ್ನು ಸೇರುತ್ತೇನೆ. ನಾವೆಲ್ಲರೂ ಸೇರೋಣ ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಅತಿಥಿ ದೇವೋ ಭವಃ ಎಂದು ಟ್ವೀಟ್‍ಗೆ ಉತ್ತರಿಸಿದ್ದಾರೆ.

    ಟ್ರಂಪ್ ಆಗಮನಕ್ಕಾಗಿ ಗುಜರಾತ್ ಸಂಪೂರ್ಣ ಸನ್ನದ್ಧವಾಗಿದ್ದು, ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಅಹಮದಾಬಾದ್‍ನಲ್ಲಿರುವ ಸರ್ದಾರ್ ವಲ್ಲಭಾಯ್ ಪಟೇಲ್ ವಿಮಾನ ನಿಲ್ದಾಣಕ್ಕೆ ತೆರಳಿ ಟ್ರಂಪ್ ದಂಪತಿಯನ್ನು ಬರಮಾಡಿಕೊಳ್ಳಲಿದ್ದಾರೆ. ಇಂದು ಬೆಳಗ್ಗೆ 11.40ಕ್ಕೆ ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್‍ನ ಅಮೆರಿಕ ಅಧ್ಯಕ್ಷರ ಏರ್‍ಫೋರ್ಸ್ ಒನ್ ವಿಮಾನ ಬಂದಿಳಿಯಲಿದೆ. ಪತ್ನಿ ಮೆಲಾನಿಯಾ, ಪುತ್ರಿ ಇವಾಂಕಾ ಮತ್ತು ಅಳಿಯ ಜ್ಯಾರೆಡ್ ಕುಶ್ನರ್ ಹಾಗೂ ಉನ್ನತ ಮಟ್ಟದ ರಾಜತಾಂತ್ರಿಕ ನಿಯೋಗದೊಂದಿಗೆ ಟ್ರಂಪ್ ಆಗಮಿಸುತ್ತಿದ್ದಾರೆ.

    ನಂತರ ಏರ್‍ಪೋರ್ಟ್‍ನಿಂದ ಮೋದಿ ಮತ್ತು ಟ್ರಂಪ್ 22 ಕಿ.ಮೀ. ರೋಡ್ ಶೋ ಮೂಲಕ ಮೊಟೆರಾ ಸ್ಟೇಡಿಯಂಗೆ ಸಾಗಲಿದ್ದಾರೆ. ಸ್ವಾಗತ ಮೆರವಣಿಗೆ ಸಾಗುವ ಹಾದಿಯುದ್ದಕ್ಕೂ ಅದ್ಧೂರಿ ಅಲಂಕಾರ ಮಾಡಲಾಗಿದ್ದು, ಇಕ್ಕೆಲಗಳಲ್ಲಿ ಜಮಾಯಿಸಲಿರುವ ಲಕ್ಷಾಂತರ ಜನ ದೊಡ್ಡಣ್ಣನಿಗೆ ಜೈಕಾರ ಕೂಗಲಿದ್ದಾರೆ. ಅಲ್ಲದೆ ಕಾರ್ಯಕ್ರಮಕ್ಕಾಗಿ ಭರ್ಜರಿಯಾಗಿಯೇ ಸಿದ್ಧತೆ ನಡೆಸಲಾಗಿದೆ. ಇದೇ ವೇಳೆ ಮಧ್ಯಾಹ್ನ 12.15ಕ್ಕೆ ಮಹಾತ್ಮ ಗಾಂಧೀಜಿಯವರ ಸಾಬರಮತಿ ಆಶ್ರಮಕ್ಕೆ ಟ್ರಂಪ್ ಭೇಟಿ ನೀಡಲಿದ್ದು, ಅಲ್ಲಿ ಅರ್ಧಗಂಟೆ ಕಾಲ ಕಳೆಯಲಿದ್ದಾರೆ.

    `ನಮಸ್ತೆ ಟ್ರಂಪ್’ ಕಾರ್ಯಕ್ರಮ
    ರೋಡ್ ಶೋ ಬಳಿಕ ವಿಶ್ವದಲ್ಲೇ ಅತೀ ದೊಡ್ಡದಾಗಿರುವ ಮೊಟೆರಾ ಸ್ಟೇಡಿಯಂನ್ನು ಟ್ರಂಪ್ ಉದ್ಘಾಟಿಸಲಿದ್ದಾರೆ. ತರುವಾಯ 1 ಲಕ್ಷ ಜನ ಸಾಕ್ಷಿ ಆಗಲಿರುವ ‘ನಮಸ್ತೆ ಟ್ರಂಪ್’ ಕಾರ್ಯಕ್ರಮದಲ್ಲಿ ಭಾಷಣ ಮಾಡಲಿದ್ದಾರೆ. ಇದಕ್ಕಾಗಿ ಮೊಟೆರಾ ಸರ್ವಾಂಗ ಸುಂದರವಾಗಿ ಸಜ್ಜಾಗಿದೆ. ಈ ಹಿಂದೆ ಅಮೆರಿಕಾ ಪ್ರವಾಸ ಕೈಗೊಂಡಿದ್ದ ಮೋದಿಗಾಗಿ ‘ಹೌಡಿ ಮೋದಿ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದೇ ರೀತಿ ಇದೀಗ ನಮಸ್ತೆ ಟ್ರಂಪ್ ಕಾರ್ಯಕ್ರಮ ಆಯೋಜಿಸಲಾಗಿದೆ.