Tag: prime minister modi

  • ಜ.2ರಂದು ತುಮಕೂರಿಗೆ ಪ್ರಧಾನಿ ಮೋದಿ: ಡಿಸಿಎಂ ಲಕ್ಷ್ಮಣ ಸವದಿ

    ಜ.2ರಂದು ತುಮಕೂರಿಗೆ ಪ್ರಧಾನಿ ಮೋದಿ: ಡಿಸಿಎಂ ಲಕ್ಷ್ಮಣ ಸವದಿ

    – ಪರಿಹಾರ ಕೊಟ್ಟು ಗಲಭೆಗೆ ಮಮತಾ ಬ್ಯಾನರ್ಜಿ ಪ್ರಚೋದನೆ

    ತುಮಕೂರು: ಮಂಗಳೂರು ಗೋಲಿಬಾರಿನಲ್ಲಿ ಮೃತಪಟ್ಟವರಿಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪರಿಹಾರ ಕೊಟ್ಟಿರುವುದನ್ನು ಡಿಸಿಎಂ ಲಕ್ಷ್ಮಣ ಸವದಿ ಕಟುವಾಗಿ ಟೀಕಿಸಿದ್ದು, ಜನರು ಗಲಭೆ ಮಾಡಿಕೊಂಡು ಸತ್ತರೂ ಪರಿಹಾರ ಕೊಡುತ್ತೇವೆ ಎಂದು ಮಮತಾ ಬ್ಯಾನರ್ಜಿ ಪ್ರಚೋದನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಲಕ್ಷ್ಮಣ ಸವದಿ ಅವರು, ಪಶ್ಚಿಮ ಬಂಗಾಳದ ಸಿಎಂಗೆ ಕರ್ನಾಟಕದಲ್ಲಿ ಪರಿಹಾರ ನೀಡುವ ಆಸಕ್ತಿಯೇನು? ಈ ಬಗ್ಗೆ ಆಲೋಚಿಸಬೇಕಾಗಿದೆ. ಕೋಮುಗಲಭೆ ಉಂಟುಮಾಡಲು ಎಲ್ಲಾ ಪಕ್ಷಗಳು ಹುನ್ನಾರ ಮಾಡುತ್ತಿವೆ ಎಂಬುವುದು ಸ್ಪಷ್ಟವಾಗಿದೆ. ಜನರು ಗಲಭೆ ಮಾಡಿಕೊಂಡು ಸತ್ತರು ಪರಿಹಾರ ಕೊಡುತ್ತೇವೆ ಎಂದು ಪ್ರಚೋದಿಸುತ್ತಿದ್ದಾರೆ ಎಂದು ಕಿಡಿಕಾರಿದರು.

    ಗಲಭೆಕೋರರಿಗೆ ದಂಡ ಹಾಕುವ ನಿಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರು ಆಲೋಚಿಸಿದ ರೀತಿಯಲ್ಲಿ ನಾವು ಆಲೋಚನೆ ಮಾಡುತ್ತಿದ್ದೇವೆ. ಗಲಭೆ ಮಾಡಿ ಸಾರ್ವಜನಿಕ ಆಸ್ತಿ ಹಾಳು ಮಾಡುವುದಕ್ಕೆ ದಂಡ ವಸೂಲಿ ಜಾರಿ ಮಾಡಲು ಚಿಂತನೆ ನಡೆದಿದೆ. ದಂಡ ನೀಡದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಕಠಿಣ ಕಾನೂನಿಗೆ ಚಿಂತನೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

    ತುಮಕೂರಿಗೆ ಮೋದಿ: ಜನವರಿ 2 ರಂದು ಪ್ರಧಾನಿ ಮೋದಿ ಅವರು ತುಮಕೂರಿಗೆ ಭೇಟಿ ನೀಡಲಿದ್ದು, ಕಾರ್ಯಕ್ರಮ ನಡೆಯುವ ಸ್ಥಳವನ್ನು ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಸಚಿವ ವಿ.ಸೋಮಣ್ಣ ಪರಿಶೀಲಿಸಿದರು. ಕಿಸಾನ್ ಸಮ್ಮಾನ್ ಯೋಜನೆಯ 2ನೇ ಹಂತ ಲೋಕಾರ್ಪಣೆ ಕಾರ್ಯಕ್ರಮ ಜನವರಿ 2ರಂದು ನಡೆಯಲಿದ್ದು, ಸುಮಾರು ಒಂದು ಲಕ್ಷ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಸೋಮಣ್ಣ ತಿಳಿಸಿದರು.

    ಜನವರಿ 2ರ ಸಂಜೆ 4ಗಂಟೆ ವೇಳೆಗೆ ಪ್ರಧಾನಿಗಳು ಆಗಮಿಸಲಿದ್ದು, ಮೊದಲು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಶಿವಕುಮಾರ ಶ್ರೀ ಗಳ ಗದ್ದುಗೆ ದರ್ಶನ ಪಡೆದು ಬಳಿಕ ಸಿದ್ದಲಿಂಗಸ್ವಾಮಿಗಳ ಆಶೀರ್ವಾದ ಪಡೆಯಲಿದ್ದಾರೆ. ಮಠದ ಮಕ್ಕಳೊಂದಿಗೆ ಹತ್ತು ನಿಮಿಷಗಳ ಕಾಲ ಸಂವಾದ ನಡೆಸಲಿದ್ದಾರೆ. ಸುಮಾರು 40 ನಿಮಿಷಗಳ ಕಾಲ ಸಿದ್ದಗಂಗಾ ಮಠದಲ್ಲಿಯೇ ಮೋದಿ ಇರಲಿದ್ದು, ಬಳಿಕ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

    ರಾಜ್ಯಾದ್ಯಂತ ಒಂದು ಸಾವಿರ ಕೆಎಸ್‍ಆರ್ ಟಿಸಿ ಬಸ್‍ಗಳ ವ್ಯವಸ್ಥೆ ಮಾಡಲಾಗಿದ್ದು. ದೇಶದ ಆಯ್ದ 40 ಪ್ರಗತಿಪರ ರೈತರಿಗೆ ಮೋದಿ ಸನ್ಮಾನಿಸಲಿದ್ದಾರೆ. ಬಳಿಕ 5.30ಕ್ಕೆ ಬೆಂಗಳೂರಿಗೆ ಮೋದಿ ಪ್ರಯಾಣ ಬೆಳೆಸಲಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಮಾಹಿತಿ ನೀಡಿದರು.

  • ಮೋದಿ, ಶಾ ವಿರುದ್ಧ ಅವಹೇಳನಕಾರಿ ಟಿಕ್‍ಟಾಕ್- ಯುವಕನ ಬಂಧನ

    ಮೋದಿ, ಶಾ ವಿರುದ್ಧ ಅವಹೇಳನಕಾರಿ ಟಿಕ್‍ಟಾಕ್- ಯುವಕನ ಬಂಧನ

    ಚಿಕ್ಕೋಡಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮೀತ್ ಶಾ ವಿರುದ್ಧ ಅವಹೇಳನಕಾರಿ ಟಿಕ್ ಟಾಕ್ ವಿಡಿಯೋ ಮಾಡಿದ್ದ ಯುವಕನನ್ನು ಸಂಕೇಶ್ವರ ಪೊಲೀಸರು ಬಂಧಿಸಿದ್ದಾರೆ.

    ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ನಿವಾಸಿ ಅಮನ ವಾಹಿದ ಅವಟೆ ಬಂಧಿತ ಯುವಕ. ಬಂಧಿತ ಆರೋಪಿ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದ.

    ಆರೋಪಿಯ ಸಾಮಾಜಿಕ ಜಾಲತಾಣಗಳಲ್ಲಿ ಮಾಡುತ್ತಿದ್ದ ಪೋಸ್ಟ್ ಗಳ ಮೇಲೆ ನಿಗಾ ಇಟ್ಟಿದ್ದ ಸಂಕೇಶ್ವರ ಪೊಲೀಸರು ಯುವಕನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 153, 505 (1)ರ (ಸಮಾಜದ ಸಾಮರಸ್ಯ ಹಾಳು ಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಏಕತಾ ದಿನದ ಅಂಗವಾಗಿ ಉಕ್ಕಿನ ಮನುಷ್ಯನಿಗೆ ನಮೋ ನಮನ

    ಏಕತಾ ದಿನದ ಅಂಗವಾಗಿ ಉಕ್ಕಿನ ಮನುಷ್ಯನಿಗೆ ನಮೋ ನಮನ

    ಅಹಮದಾಬಾದ್: ಸರ್ದಾರ್ ವಲ್ಲಭಭಾಯ್ ಪಟೇಲ್‍ರ 144ನೇ ಜನ್ಮದಿನವನ್ನು ದೇಶಾದ್ಯಂತ ‘ಏಕತಾ ದಿವಸ್’ ರೂಪದಲ್ಲಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‍ನ ಕೆವಡಿಯಾದಲ್ಲಿರುವ ಏಕತಾ ಪ್ರತಿಮೆಯ ಪಾದಕ್ಕೆ ಪುಷ್ಪನಮನ ಸಲ್ಲಿಸಿದ್ದಾರೆ.

    ಇತ್ತ ದೆಹಲಿಯ ಪಟೇಲ್ ಚೌಕ್‍ನಲ್ಲಿ ಸರ್ದಾರ್ ಪ್ರತಿಮೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಗೃಹ ಸಚಿವ ಅಮಿತ್ ಶಾ ಪುಷ್ಪನಮನ ಸಲ್ಲಿಸಿದ್ದಾರೆ. ಹಾಗೆಯೇ ಏಕತಾ ಓಟಕ್ಕೆ ಚಾಲನೆ ನೀಡಿದರು. ಈ ವೇಳೆ ಬಾಕ್ಸರ್ ಮೇರಿ ಕೋಮ್ ಕೋಡ ಉಪಸ್ಥಿತರಿದ್ದರು. ಇತ್ತ ಬೆಂಗಳೂರಿನಲ್ಲಿ ಕೂಡ ಏಕತಾ ಮ್ಯಾರಥಾನ್ ನಡೆದಿದ್ದು, ವಿಧಾನಸೌಧದಲ್ಲಿ ಮ್ಯಾರಥಾನ್‍ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

    ಸರ್ದಾರ್ ವಲ್ಲಭಭಾಯ್ ಪಟೇಲ್‍ರ ಜಯಂತೋತ್ಸವದಂದೇ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎರಡು ಕೇಂದ್ರಾಡಳಿತ ಪ್ರದೇಶವಾಗಿ ಕಾರ್ಯರೂಪಕ್ಕೆ ಬಂದಿದೆ. ಕೇಂದ್ರ ಸರ್ಕಾರವು 370ರ ವಿಧಿ ರದ್ದು ಮಾಡಿದ ಮೂರು ತಿಂಗಳ ಬಳಿಕ ಕಣಿವೆ ರಾಜ್ಯ ಎರಡು ಕೇಂದ್ರಾಡಳಿತ ಪ್ರದೇಶವಾಗಿ ಜಾರಿಗೆ ಬಂದಿದೆ.

    370ನೇ ವಿಧಿ ಹಾಗೂ 35(ಎ) ವಿಧಿ ಈ ಎರಡು ವಿಧಿಗಳು ಭಾರತದಲ್ಲಿ ಭಯೋತ್ಪಾದನೆಗೆ ದಾರಿ ಮಾಡಿಕೊಟ್ಟಿತ್ತು. ಆದರೆ ಪ್ರಧಾನಿಯವರು 370ನೇ ವಿಧಿ ಹಾಗೂ 35 ಎ ವಿಧಿಯನ್ನು ರದ್ದುಗೊಳಿಸುವ ಮೂಲಕ ಈ ದಾರಿಯನ್ನು ಮುಚ್ಚಿದ್ದಾರೆ ಎಂದು ಏಕತಾ ಓಟಕ್ಕೆ ಚಾಲನೆ ನೀಡುವ ಮೊದಲು ಅಮಿತ್ ಶಾ ಹೇಳಿದರು.

    2014ರಲ್ಲಿ ಮೋದಿ ಸರ್ಕಾರ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಾಗ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮ ದಿನವನ್ನು ಏಕತಾ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಘೋಷಿಸಿದ್ದರು. ಹೀಗಾಗಿ 2014ರಿಂದ ಪ್ರತಿ ವರ್ಷ ಅಕ್ಟೋಬರ್ 31ರಂದು ಏಕತಾ ದಿನವನ್ನಾಗಿ ದೇಶಾದ್ಯಂತ ಆಚರಿಸಿಕೊಂಡು ಬರಲಾಗುತ್ತಿದೆ. ಬರೀ ಕೇಂದ್ರ ನಾಯಕರು ಮಾತ್ರವಲ್ಲದೆ ರಾಜ್ಯದ ಅನೇಕ ರಾಜಕಾರಣಿಗಳು ಕೂಡ ಉಕ್ಕಿನ ಮನುಷ್ಯನಿಗೆ ನಮನ ಸಲ್ಲಿಸಿದ್ದಾರೆ.

  • ಮೋದಿಯನ್ನು ಟೀಕಿಸಲು ಸೂಸೈಡ್ ಬಾಂಬರ್ ಆದ ಪಾಕ್ ಗಾಯಕಿ

    ಮೋದಿಯನ್ನು ಟೀಕಿಸಲು ಸೂಸೈಡ್ ಬಾಂಬರ್ ಆದ ಪಾಕ್ ಗಾಯಕಿ

    – ಇನ್ನು ನಿಮ್ಮ ಸಾಂಪ್ರದಾಯಿಕ ಉಡುಪು
    – ಭಾರತೀಯರಿಂದ ಟ್ರೋಲ್‍ಗೆ ಟ್ವೀಟ್ ಡಿಲೀಟ್
    – ಫೋಟೋಗೆ ಪಾಕ್ ನೆಟ್ಟಿಗರಿಂದದ ಆಕ್ಷೇಪ

    ಇಸ್ಲಾಮಾಬಾದ್: ಕಳೆದ ತಿಂಗಳು ಹಾವಿನೊಂದಿಗಿರುವ ವಿಡಿಯೋ ಪೋಸ್ಟ್ ಮಾಡಿ ಮೋದಿ ವಿರುದ್ಧ ಕಿಡಿಕಾರಿದ್ದ ಪಾಕಿಸ್ತಾನದ ಗಾಯಕಿ ರಬಿ ಫಿರ್ಜಾದಾ ಸದ್ಯ ಹೊಸ ರೂಪದಲ್ಲಿ ಮತ್ತೊಂದು ಫೋಟೋವನ್ನು ಹಂಚಿಕೊಂಡು ಟ್ರೋಲಾಗಿದ್ದಾಳೆ.

    ತನ್ನ ಟ್ವಿಟ್ಟರ್ ಖಾತೆಯಲ್ಲಿ ಆತ್ಮಹತ್ಯೆ ಬಾಂಬರ್ ರೀತಿಯಲ್ಲಿ ಉಡುಪು ಧರಿಸಿರುವ ಫಿರ್ಜಾದಾ, ‘ಮೋದಿ ಹಿಟ್ಲರ್’ ಹಾಗೂ ‘ಕಾಶ್ಮೀರದ ಭೇಟಿ’ ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾಳೆ.

    ಈ ಫೋಟೋ ಹಂಚಿಕೊಳ್ಳುತ್ತಿದಂತೆ ಹಲವು ನೆಟ್ಟಿಗರು ಗಾಯಕಿಯನ್ನು ಟ್ರೋಲ್ ಮಾಡಿ ಟೀಕೆ ಮಾಡಲು ಆರಂಭಿಸಿದ್ದಾರೆ. ಅಲ್ಲದೇ ಪಾಕಿಸ್ತಾನದ ಹಲವು ಮಂದಿ ಗಾಯಕಿ ವಿರುದ್ಧವೇ ಕಿಡಿಕಾರಿದ್ದು, ಗಾಯಕಿಯ ಈ ನಡೆ ಪಾಕಿಸ್ತಾನದ ವಿರುದ್ಧ ವಿಶ್ವ ಸಮುದಾಯಕ್ಕೆ ಋಣಾತ್ಮಕ ಭಾವನೆ ಮೂಡಲು ಕಾರಣವಾಗುತ್ತದೆ ಎಂದು ದೂರಿದ್ದಾರೆ.

    ಇತ್ತ ಭಾರತೀಯ ನೆಟ್ಟಿಗರು ಗಾಯಕಿಯ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿ ಖುಷಿ ವ್ಯಕ್ತಪಡಿಸಿದ್ದರು. ಅಲ್ಲದೇ ಪೋಸ್ಟನ್ನು ಮತ್ತಷ್ಟು ವೈರಲ್ ಮಾಡಿ ಗಾಯಕಿಯ ಕಾಲೆಳೆಯುತ್ತಿದ್ದಾರೆ. ವಾವ್..! ನೀವು ಈ ಉಡುಗೆಯಲ್ಲಿ ಅದ್ಭುತವಾಗಿ ಕಾಣುತ್ತಿದ್ದು, ಪಾಕಿಸ್ತಾನಿ ಸಾಂಪ್ರದಾಯಕ ಉಡುಪು ಧರಿಸಿದಕ್ಕೆ ಧನ್ಯವಾದ. ಪಾಕ್ ರಾಷ್ಟ್ರೀಯ ಉಡುಗೆಯಲ್ಲಿ ಬಹಳ ಸುಂದರವಾಗಿ ಕಾಣುತ್ತಿದ್ದೀರಿ ಎಂದು ಕಾಲೆಳೆದಿದ್ದಾರೆ.

    ಈ ಟ್ರೋಲ್ ಗಳಿಗೆ ಪ್ರತಿಕ್ರಿಯೆ ನೀಡಿ ಮತ್ತೊಂದು ಟ್ವೀಟ್ ಮಾಡಿರುವ ಫಿರ್ಜಾದಾ, ಈ ಫೋಟೋವನ್ನು ನಾನು ಇಂತಹ ದಾಳಿಗಳನ್ನು ಖಂಡಿಸಲು ಧರಿಸಿದ್ದು, ಶಾಂತಿ ಹಾಗೂ ಮಾನವೀಯತೆಯನ್ನು ಬಯಸುತ್ತೇನೆ. ಮೋದಿ ಸುರಕ್ಷತೆಯ ಬಗ್ಗೆ ನನಗೆ ಉಪನ್ಯಾಸ ನೀಡುವ ಭಾರತೀಯರು ಆಹಾರ, ಔಷಧಿ ಇಲ್ಲದೇ 3 ತಿಂಗಳು ವಿಧಿಸಿದ್ದ ಕಫ್ರ್ಯೂವನ್ನು ಹೇಗೆ ಸಮರ್ಥಿಸಿಕೊಳ್ಳುತ್ತೀರಿ? ಭಾರತದ ಕ್ರೌರ್ಯವನ್ನು ನಿಲ್ಲಿಸಬೇಕೆಂದು ನೆನಪಿಸಲು ಈ ರೀತಿ ಪೋಸ್ಟ್ ಮಾಡಿದ್ದಾಗಿ ಸ್ಪಷ್ಟನೆ ನೀಡಿದ್ದಾಳೆ.

    ಈ ಹಿಂದೆಯೂ ಮೊಸಳೆ, ಹಾವುಗಳೊಂದಿಗೆ ಇರುವ ವಿಡಿಯೋ ಮಾಡಿದ್ದ ಫಿರ್ಜಾದಾ, ಇವುಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಗೊರೆ ಎಂದು ಹೇಳಿದ್ದಳು. ಆದರೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಎಚ್ಚೆತ್ತ ಪಾಕ್‍ನ ಅಧಿಕಾರಿಗಳು ಹಾವು, ಮೊಸಳೆಗಳನ್ನು ಬಳಿಸಿ ವಿಡಿಯೋ ಮಾಡಿದ್ದಕ್ಕೆ ದೂರು ದಾಖಲಿಸಿದ್ದರು. ಇದರಿಂದಲೂ ಬುದ್ಧಿ ಕಲಿಯದ ಫಿರ್ಜಾದಾ ಮತ್ತೆ ಹೊಸ ರೀತಿ ಬಂದು ಟ್ರೋಲ್ ಗಳಿಗೆ ಗುರಿಯಾಗಿದ್ದಾಳೆ.

    https://twitter.com/HinduAmericans/status/1186843816487194629

  • ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಮಾಜಿ ರಾಜ್ಯಸಭಾ ಸಂಸದ ರಾಮಮೂರ್ತಿ

    ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಮಾಜಿ ರಾಜ್ಯಸಭಾ ಸಂಸದ ರಾಮಮೂರ್ತಿ

    ನವದೆಹಲಿ: ಕಳೆದ ಬುಧವಾರ ರಾಜ್ಯಸಭೆ ಮತ್ತು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಕೆ.ಸಿ.ರಾಮಮೂರ್ತಿ ಅವರು ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

    ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು. ಆ ಬಳಿಕ ಮಾತಾನಾಡಿದ ಅವರು, ಪ್ರಧಾನಿ ಮೋದಿ ಕೆಲಸಗಳನ್ನು ಮೆಚ್ಚಿಕೊಂಡಿದ್ದೇನೆ. ದೇಶದ ಅಭಿವೃದ್ಧಿಯಲ್ಲಿ ಭಾಗಿಯಾಗುವ ಉದ್ದೇಶದಿಂದ ಬಿಜೆಪಿ ಸೇರಿದ್ದೇನೆ ಎಂದರು.

    ನಾನು ಇನ್ನೂ ಬಿಜೆಪಿಯನ್ನು ಅರ್ಥ ಮಾಡಿಕೊಳ್ಳಬೇಕಿದೆ. ಆರ್ ಎಸ್‍ಎಸ್ ಸಿದ್ಧಾಂತ-ತತ್ವದ ಬಗ್ಗೆ ಅಧ್ಯಯನ ಮಾಡೋಕೆ ನನಗೆ ಇನ್ನೂ ಸ್ವಲ್ಪ ಸಮಯಬೇಕಿದೆ. ತ್ರಿವಳಿ ತಲಾಕ್, ಆರ್ಟಿಕಲ್ 370 ರದ್ದಿನಂತಹ ಮಹತ್ವದ ವಿಚಾರಗಳಲ್ಲಿ ವಿರುದ್ಧವಾಗಿ ಮತ ಚಲಾಯಿಸಿ ಆತ್ಮ ವಂಚನೆ ಮಾಡಿಕೊಂಡಿದ್ದೇನೆ ಎಂದು ರಾಮಮೂರ್ತಿ ಹೇಳಿದರು.

    ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾತನಾಡಿದ್ದ ಅವರು, 1 ವರ್ಷಕ್ಕೂ ಹೆಚ್ಚು ಸಮಯದಿಂದ ಯೋಚಿಸಿ ಈ ನಿರ್ಧಾರ ಕೈಗೊಂಡಿದ್ದೇನೆ. ಬಿಜೆಪಿ ಸೇರುವ ಬಗ್ಗೆ ಒಲವು ಇದೆ. ನನ್ನನ್ನು ಅವರು ಸಮರ್ಪಕವಾಗಿ ಬಳಸಿಕೊಳ್ಳುವುದಾದರೆ ನಾನು ಬಿಜೆಪಿ ಸೇರಲು ಸಿದ್ಧವಾಗಿದ್ದೇನೆ. ಅಮಿತ್ ಶಾ ಅವರನ್ನು ಬೇರೆ ಬೇರೆ ಕಾರಣಗಳಿಗೆ ಭೇಟಿ ಮಾಡಿದ್ದೇನೆ. ಬಿಜೆಪಿ ಕೆಲ ನಾಯಕರನ್ನು ಭೇಟಿ ಮಾಡಿದ್ದೆ. ಯಾವುದೇ ಆಮಿಷಗಳಿಗೆ ನಾನು ಬಲಿಯಾಗಿಲ್ಲ ಮತ್ತು ರಾಜೀನಾಮೆ ನೀಡಲು ಯಾವುದೇ ಬೆದರಿಕೆಗಳು ಇಲ್ಲ ಎಂದು ಬಿಜೆಪಿ ಸೇರುವ ಬಗ್ಗೆ ಸ್ಪಷ್ಟನೆ ನೀಡಿದ್ದರು.

    ರಾಮಮೂರ್ತಿ ಅವರ ರಾಜೀನಾಮೆಯಿಂದ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಬಲ 45ಕ್ಕೆ ಕುಸಿತಗೊಂಡಿತ್ತು. ಸದ್ಯ ಅವರು ರಾಜೀನಾಮೆ ನೀಡಿರುವ ಸ್ಥಾನದ ಉಪಚುನಾವಣೆಯಲ್ಲಿ ಬಿಜೆಪಿಯೇ ಈ ಸ್ಥಾನ ಗೆಲ್ಲುವ ಸಾಧ್ಯತೆ ಇದ್ದು, ಅತಿ ದೊಡ್ಡ ಪಕ್ಷವಾಗಿರುವುದರಿಂದ ಗೆಲುವು ಸುಲಭ. ಈ ಸ್ಥಾನ ಬಿಜೆಪಿಗೆ ಲಭಿಸಿದರೆ ರಾಜ್ಯಸಭೆಯ ಬಲ 84ಕ್ಕೆ ಹೆಚ್ಚಳವಾಗಲಿದೆ. ರಾಜ್ಯಸಭೆಯ ಒಟ್ಟು 245 ಸ್ಥಾನಗಳ ಪೈಕಿ ಬಹುಮತಕ್ಕೆ 123 ಸದಸ್ಯರ ಬೆಂಬಲ ಬೇಕು. ಸದ್ಯ ಒಟ್ಟು 5 ಸ್ಥಾನಗಳು ಖಾಲಿ ಇದ್ದು, ಎನ್‍ಡಿಎ ಮೈತ್ರಿಕೂಡದ ಒಟ್ಟು ಬಲಾಬಲ 106 ಇದೆ. ಮಹತ್ವದ ಮಸೂದೆ ಚರ್ಚೆಯ ವೇಳೆ ಎಐಎಡಿಎಂಕೆ 11, ಬಿಜೆಡಿ 7, ಟಿಆರ್ ಎಸ್ 6, ವೈಎಸ್‍ಆರ್ ಕಾಂಗ್ರೆಸ್ 2 ಸೇರಿದಂತೆ ಇನ್ನೂ ಮೂರು ಪ್ರಾದೇಶಿಕ ಪಕ್ಷಗಳ ಸದಸ್ಯರು ಮೋದಿ ಸರ್ಕಾರವನ್ನು ಬೆಂಬಲಿಸಿದ್ದಾರೆ.

  • ಮೋದಿ ವಿರುದ್ಧ ರಾಮ್‍ಚರಣ್ ಪತ್ನಿ ಅಸಮಾಧಾನ

    ಮೋದಿ ವಿರುದ್ಧ ರಾಮ್‍ಚರಣ್ ಪತ್ನಿ ಅಸಮಾಧಾನ

    ಹೈದರಾಬಾದ್: ಪ್ರಧಾನಿ ಮೋದಿ ಅವರು ಮಹಾತ್ಮಾ ಗಾಂಧೀಜಿ ಅವರ ಆದರ್ಶಗಳನ್ನು ಚಲನಚಿತ್ರೋದ್ಯಮದ ಮೂಲಕ ಜನಪ್ರಿಯಗೊಳಿಸಲು ಬಾಲಿವುಡ್ ನಟ-ನಟಿಯರನ್ನು ಭೇಟಿ ಮಾಡಿ ಸಂವಾದ ನಡೆಸಿದ್ದಾರೆ. ಆದರೆ ಮೆಗಾಸ್ಟಾರ್ ಚಿರಂಜೀವಿ ಅವರ ಸೊಸೆ, ನಟ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ ಇದರಿಂದ ಬೇಸರಗೊಂಡಿದ್ದು, ಮೋದಿ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

    ಉಪಾಸನಾ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಹಾಕುವ ಮೂಲಕ ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಪ್ರೀತಿಯ ನರೇಂದ್ರ ಮೋದಿಜೀ ನಾವು ದಕ್ಷಿಣ ಭಾರತದವರು. ನಿಮ್ಮನ್ನು ನಾವು ಪ್ರಧಾನಿಯನ್ನಾಗಿ ಪಡೆದಿದ್ದಕ್ಕಾಗಿ ಹೆಮ್ಮೆ ಪಡುತ್ತೇವೆ. ಪ್ರಮುಖ ಮತ್ತು ಸಾಂಸ್ಕೃತಿಕ ವ್ಯಕ್ತಿಗಳು ಬರೀ ಹಿಂದಿ ಚಿತ್ರರಂಗಕ್ಕೆ ಮಾತ್ರ ಸೀಮಿತವೇ. ದಕ್ಷಿಣ ಭಾರತವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಮಾಡಲಾಗಿದೆ ಎಂದು ನಾನು ಭಾವಿಸುತ್ತೇನೆ. ಇಲ್ಲಿ ನನ್ನ ಭಾವನೆಗಳನ್ನು ಮಾತ್ರ ನೋವಿನಿಂದ ವ್ಯಕಪಡಿಸುತ್ತಿದ್ದೇನೆ. ಹೀಗಾಗಿ ನೀವು ನನ್ನ ಅಭಿಪ್ರಾಯವನ್ನು ಸರಿಯಾದ ಮನೋಭಾವದಿಂದ ತೆಗೆದುಕೊಳ್ಳಲಿದ್ದೀರಿ ಎಂದು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

    ಗಾಂಧೀಜಿ ಅವರ 150ನೇ ಜನ್ಮದಿನದ ಅಂಗವಾಗಿ ಪ್ರಧಾನಿ ಮೋದಿ ಅವರು ತಮ್ಮ ನಿವಾಸದಲ್ಲೇ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ಈ ಕಾರ್ಯಕ್ರಮದಲ್ಲಿ ಅಮೀರ್, ಶಾರೂಖ್, ರಾಜ್‍ಕುಮಾರ್ ಹಿರಾನಿ, ಕಂಗನಾ ರನೌತ್, ಆನಂದ್ ಎಲ್ ರೈ, ಎಸ್‍ಪಿ ಬಾಲಸುಬ್ರಹ್ಮಣ್ಯಂ, ಸೋನಮ್ ಕಪೂರ್, ಜಾಕಿ ಶ್ರಾಫ್, ಸೋನು ನಿಗಮ್, ಏಕ್ತಾ ಕಪೂರ್ ಸೇರಿದಂತೆ ಭಾರತೀಯ ಚಲನಚಿತ್ರ ಮತ್ತು ಮನರಂಜನಾ ಉದ್ಯಮದ ಸದಸ್ಯರು ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯ ಸಂಬಂಧಿಸಿದ ನಾಲ್ಕು ಸಾಂಸ್ಕೃತಿಕ ವಿಡಿಯೋಗಳನ್ನು ಬಿಡುಗಡೆ ಮಾಡಿದರು. ಈ ವೇಳೆ ಚಿತ್ರೋದ್ಯಮದ ಸದಸ್ಯರನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ, ಮಹಾತ್ಮ ಗಾಂಧಿಯವರ ಆದರ್ಶಗಳನ್ನು ಜನಪ್ರಿಯಗೊಳಿಸುವ ವಿಷಯದಲ್ಲಿ ಮನರಂಜನಾ ಉದ್ಯಮದಲ್ಲಿ ಹಲವಾರು ಜನರು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

    https://www.instagram.com/p/B3z0Yy6FWV4/

  • ಗಾಂಧೀಜಿ ಆದರ್ಶಗಳನ್ನು ಜನಪ್ರಿಯಗೊಳಿಸಲು ಬಾಲಿವುಡ್ ಮಂದಿಗೆ ಮೋದಿ ಮಣೆ

    ಗಾಂಧೀಜಿ ಆದರ್ಶಗಳನ್ನು ಜನಪ್ರಿಯಗೊಳಿಸಲು ಬಾಲಿವುಡ್ ಮಂದಿಗೆ ಮೋದಿ ಮಣೆ

    ನವದೆಹಲಿ: ಮಹಾತ್ಮಾ ಗಾಂಧೀಜಿ ಅವರ ಆದರ್ಶಗಳನ್ನು ಚಲನಚಿತ್ರೋದ್ಯಮದ ಮೂಲಕ ಜನಪ್ರಿಯಗೊಳಿಸಲು ಪ್ರಧಾನಿ ಮೋದಿ ಅವರು ಬಾಲಿವುಡ್ ನಟ-ನಟಿಯರನ್ನು ಭೇಟಿ ಮಾಡಿ ಸಂವಾದ ನಡೆಸಿದ್ದಾರೆ.

    ಗಾಂಧೀಜಿ ಅವರ 150 ನೇ ಜನ್ಮದಿನದ ಅಂಗವಾಗಿ ಆಯೋಜನೆ ಮಾಡಿದ್ದ ಈ ಕಾರ್ಯಕ್ರಮದಲ್ಲಿ ಬಾಲಿವುಡ್ ಸ್ಟಾರ್ ನಟಿ-ನಟಿಯರು ಭಾಗವಹಿಸಿ ಮೋದಿ ಅವರ ಜೊತೆ ಸಂವಾದ ನಡೆಸಿದರು. ಇದೇ ವೇಳೆ ಬಾಲಿವುಡ್ ನಟರಾದ ಅಮೀರ್ ಖಾನ್ ಮತ್ತು ಶಾರೂಖ್ ಖಾನ್ ಮೋದಿ ಅವರ ಈ ಯೋಜನೆಯನ್ನು ಶ್ಲಾಘಿಸಿದರು.

    ಬಾಲಿವುಡ್ ನ ಬಹುತೇಕ ನಟ-ನಟಿಯರು ಭಾಗವಸಿದ್ದ ಈ ಕಾರ್ಯಕ್ರಮದಲ್ಲಿ ಅಮೀರ್, ಶಾರೂಖ್, ರಾಜ್‍ಕುಮಾರ್ ಹಿರಾನಿ, ಕಂಗನಾ ರನೌತ್, ಆನಂದ್ ಎಲ್ ರೈ, ಎಸ್‍ಪಿ ಬಾಲಸುಬ್ರಹ್ಮಣ್ಯಂ, ಸೋನಮ್ ಕಪೂರ್, ಜಾಕಿ ಶ್ರಾಫ್, ಸೋನು ನಿಗಮ್, ಏಕ್ತಾ ಕಪೂರ್ ಸೇರಿದಂತೆ ಭಾರತೀಯ ಚಲನಚಿತ್ರ ಮತ್ತು ಮನರಂಜನಾ ಉದ್ಯಮದ ಸದಸ್ಯರು ಉಪಸ್ಥಿತರಿದ್ದರು.

    ಈ ಕಾರ್ಯಕ್ರಮ ಲೋಕ ಕಲ್ಯಾಣ್ ಮಾರ್ಗದ ನಿವಾಸದಲ್ಲಿ ಶನಿವಾರ ಸಂಜೆ 7 ಕ್ಕೆ ಆಯೋಜಿಸಿಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯ ಸಂಬಂಧಿಸಿದ ನಾಲ್ಕು ಸಾಂಸ್ಕೃತಿಕ ವಿಡಿಯೋಗಳನ್ನು ಬಿಡುಗಡೆ ಮಾಡಿದರು. ಈ ವೇಳೆ ಚಿತ್ರೋದ್ಯಮದ ಸದಸ್ಯರನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ, ಮಹಾತ್ಮ ಗಾಂಧಿಯವರ ಆದರ್ಶಗಳನ್ನು ಜನಪ್ರಿಯಗೊಳಿಸುವ ವಿಷಯದಲ್ಲಿ ಮನರಂಜನಾ ಉದ್ಯಮದಲ್ಲಿ ಹಲವಾರು ಜನರು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

    ಚಿತ್ರೋದ್ಯಮ ಸಾಮಾನ್ಯ ನಾಗರಿಕರನ್ನು ಮನರಂಜನೆಯ ಜೊತೆಗೆ ಒಳ್ಳೆಯ ವಿಚಾರಗಳನ್ನು ಹೇಳಬೇಕು. ಸಮಾಜವನ್ನು ಸಕಾರಾತ್ಮಕವಾಗಿ ಪರಿವರ್ತನೆ ಮಾಡುವ ಸಮಾಥ್ರ್ಯ ಸಿನಿಮಾ ಮಂದಿಗೆ ಇದೆ ಎಂದು ಹೇಳಿದರು. ಗಾಂಧೀಜಿ ಅವರು ಸರಳತೆಗೆ ಸಮಾನಾರ್ಥಕವಾದವರು. ಒಂದು ಆಲೋಚನೆಯಿಂದ ಒಬ್ಬ ವ್ಯಕ್ತಿ, ಪ್ರಪಂಚದಾದ್ಯಂತ ಜನರೊಂದಿಗೆ ಸಂಪರ್ಕವನ್ನು ಸ್ಥಾಪಿಸಬಲ್ಲವರು ಎಂದರೆ ಅದು ಗಾಂಧೀಜಿಯವರು ಮಾತ್ರ ಎಂದು ತಿಳಿಸಿದರು.

    ಈ ವಿಚಾರದ ಬಗ್ಗೆ ಮಾತನಾಡಿದ ನಟ ಅಮೀರ್ ಖಾನ್, ಮೊದಲಿಗೆ ಗಾಂಧೀಜಿ ಅವರ ಆದರ್ಶಗಳನ್ನು ಜನಪ್ರಿಯಗೊಳಿಸಲು ಪ್ರಯತ್ನಿಸಿರುವ ಪ್ರಧಾನಿ ಮೋದಿ ಅವರಿಗೆ ಅಭಿನಂದನೆಗಳು. ಸಿನಿಮಾ ರಂಗದವರಾಗಿ, ಸೆಲಿಬ್ರಿಟಿಗಳಾಗಿ ನಾವು ಮಾಡಬಹುದಾದದ್ದು ತುಂಬಾ ಇದೆ ಮತ್ತು ನಾವು ಇನ್ನು ಮುಂದೆ ಅದನ್ನು ಮಾಡುತ್ತೇವೆ ಎಂದು ನಾನು ಪ್ರಧಾನ ಮಂತ್ರಿಗೆ ಭರವಸೆ ನೀಡುತ್ತೇನೆ ಎಂದು ಹೇಳಿದರು.

    ನಮ್ಮೆಲ್ಲರನ್ನೂ ಒಂದುಗೂಡಿಸಿದ್ದಕ್ಕಾಗಿ ಪಿಎಂ ನರೇಂದ್ರ ಮೋದಿಯವರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಅದೂ ಸಹ ಈ ಮಹಾತ್ಮ ಗಾಂಧಿಯಂತಹ ಉತ್ತಮ ಕಾರಣಕ್ಕಾಗಿ ನಾವು ಸೇರಿದ್ದು ಖುಷಿಯಾಗಿದೆ. ನಾವು ಗಾಂಧೀಜಿಯನ್ನು ಭಾರತ ಮತ್ತು ಜಗತ್ತಿಗೆ ಮತ್ತೆ ಪರಿಚಯಿಸಬೇಕಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ನಟ ಶಾರೂಖ್ ಖಾನ್ ಹೇಳಿದ್ದಾರೆ.

  • ಗಾಂಧೀಜಿ ಹತ್ಯೆಗೆ ಸಂಚು ರೂಪಿಸಿದ್ದ ಸಾವರ್ಕರ್‌ಗೆ ಬಿಜೆಪಿಯಿಂದ ಭಾರತ ರತ್ನ: ಸಿದ್ದರಾಮಯ್ಯ ಕಿಡಿ

    ಗಾಂಧೀಜಿ ಹತ್ಯೆಗೆ ಸಂಚು ರೂಪಿಸಿದ್ದ ಸಾವರ್ಕರ್‌ಗೆ ಬಿಜೆಪಿಯಿಂದ ಭಾರತ ರತ್ನ: ಸಿದ್ದರಾಮಯ್ಯ ಕಿಡಿ

    – ನಳಿನ್‌ಕುಮಾರ್‌ಗೆ ರಾಜ್ಯದ ಜ್ಞಾನ ಇಲ್ಲ
    – ಬಿಎಸ್‍ವೈ ಒಲ್ಲದ ಶಿಶು

    ಮಂಗಳೂರು: ಗಾಂಧೀಜಿ ಹತ್ಯೆಗೆ ಸ್ಕೆಚ್ ಹಾಕಿದ್ದ ಸಾವರ್ಕರ್ ಗೆ ಬಿಜೆಪಿ ಭಾರತ ರತ್ನ ನೀಡಲು ಮುಂದಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಗೋಡ್ಸೆಯ ಹಿಂದೆ ನಿಂತು ಹತ್ಯೆಗೆ ಸಂಚು ರೂಪಿಸಿದ್ದರು. ಸೂಕ್ತ ಸಾಕ್ಷ್ಯ ಇಲ್ಲದೆ ಆರೋಪಿಯಾಗಿ ಗುರುತಿಸಿರಲಿಲ್ಲ ಅಷ್ಟೇ. ಆದರೆ ಅಂಥ ವ್ಯಕ್ತಿಗೆ ಭಾರತ ರತ್ನ ಕೊಡಲು ಬಿಜೆಪಿ ಮುಂದಾಗಿದೆ. ಗೋಡ್ಸೆಗೂ ಭಾರತ ರತ್ನ ನೀಡಲಿ ಎಂದು ಟೀಕಿಸಿದರು.

    ರಾಜ್ಯ ಬಿಜೆಪಿ ಸರ್ಕಾರಕ್ಕೆ ಯಾರು ಹೇಳುವವರು, ಕೇಳುವವರು ಇಲ್ಲ. ಕೇವಲ ವರ್ಗಾವಣೆ ದಂಧೆ ನಡೆಸುವುದನ್ನು ಬಿಟ್ಟರೆ ಬೇರೆ ಯಾವುದೇ ಅಭಿವೃದ್ಧಿ ಕಾರ್ಯವನ್ನು ಸರ್ಕಾರದಲ್ಲಿ ನಡೆಯುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದರು. ಇದನ್ನು ಓದಿ: ಕಾಂಗ್ರೆಸ್ ಸಾವರ್ಕರ್‌ಗೆ ಭಾರತರತ್ನ ನೀಡದೆ ಅವಮಾನಿಸಿದೆ – ಮೋದಿ

    ರಾಜ್ಯ ಸರ್ಕಾರ ಡಿಸೆಂಬರ್ ವರೆಗೂ ಸರ್ಕಾರ ಉಳಿಯುವುದು ಹೆಚ್ಚು. ಆ ಬಳಿಕ ಚುನಾವಣೆ ಬರುವುದು ಪಕ್ಕಾ. ಸಿಎಂ ಬಿಎಸ್ ವೈ ಅವರು ಒಲ್ಲದ ಶಿಶು ಅಷ್ಟೇ. ಅವರನ್ನ ಸಿಎಂ ಮಾಡುವುದಕ್ಕೆ ಕೇಂದ್ರ ಬಿಜೆಪಿಗೆ ಇಷ್ಟ ಇರಲಿಲ್ಲ. ಅನಿವಾರ್ಯ ಕಾರಣದಿಂದ ಮುಖ್ಯಮಂತ್ರಿಗಳಾಗಿ ಮಾಡಿದೆ ಅಷ್ಟೇ. ಬಿಎಸ್‍ವೈ ಅವರು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರಿಗೆ ಒಲ್ಲದ ಶಿಶು ಎಂದರು.

    ದೇಶದ ಆರ್ಥಿಕ ಸ್ಥಿತಿ ಅಧೋಗತಿಗೆ ಹೋಗಿದೆ. ಹಸಿವಿನ ರೇಟಿಂಗ್‍ನಲ್ಲಿ ಭಾರತ 102ನೇ ಸ್ಥಾನಕ್ಕೆ ಮುಟ್ಟಿದೆ. ಪಾಕಿಸ್ತಾನ ಹಾಗೂ ಬಾಂಗ್ಲಾದೇಶಗಳು ಪಟ್ಟಿಯಲ್ಲಿ ನಮ್ಮಿಂದ ಮುಂದಿದೆ. ಕಳೆದ ಐದು ವರ್ಷದಲ್ಲಿ ಮೋದಿ ಮಾಡಿದ ಸಾಧನೆ ಇದು ಮಾತ್ರ. ಆದರೆ ಅಮೆರಿಕಕ್ಕೆ ಹೋಗಿ ಭಾರತದಲ್ಲಿ ಎಲ್ಲರೂ ಸುಖವಾಗಿದ್ದಾರೆ ಎಂದು ಹೇಳುತ್ತಾರೆ.

    ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಳಿನ್ ಕುಮಾರ್ ಅವರಿಗೆ ರಾಜ್ಯದಲ್ಲಿ ಜಿಲ್ಲೆಗಳೆಷ್ಟಿವೆ ಎಂದೇ ಗೊತ್ತಿಲ್ಲ. ಅವರಿಗೆ ಮಂಗಳೂರು ಮಾತ್ರ ಗೊತ್ತು. ಅವರ ಜ್ಞಾನ ಇರೋದು ಅಷ್ಟೇ. ಈ ಪುಣ್ಯಾತ್ಮ ರಾಜ್ಯದಲ್ಲಿ ಎಷ್ಟು ತಾಲೂಕುಗಳಿವೆ ಎಂದು ಹೇಳಲಿ ನೋಡೋಣ ಎಂದು ಲೇವಡಿ ಮಾಡಿದರು. ಇದನ್ನು ಓದಿ: ಪಕ್ಷ ಸಂಘಟನೆಗೆ ಬಿಜೆಪಿ ರಾಜ್ಯವನ್ನು 36 ಜಿಲ್ಲೆಗಳನ್ನಾಗಿ ಮಾಡಿದೆ – ಕಟೀಲ್

    ಉಪಚುನಾವಣೆ ಹೊತ್ತಲ್ಲಿ ಬಿಜೆಪಿಯಿಂದ ಅಪರೇಷನ್ ಕಮಲ ನಡೆಸುವ ಕುರಿತು ಮಾತನಾಡಿದ ಸಿದ್ದರಾಮಯ್ಯ ಅವರು, ಬಿಜೆಪಿಗೆ ಆಪರೇಷನ್ ಮಾಡೋದಷ್ಟೇ ಕೆಲಸ. ನಮ್ಮವರನ್ನು ಹಣ ಕೊಟ್ಟು ಖರೀದಿಸುತ್ತಾರೆ. ಆದರೆ ಬಿಜೆಪಿಗೆ ಆಪರೇಷನ್ ಮಾಡೋಕೆ ಹಣ ಎಲ್ಲಿಂದ ಬರುತ್ತೆ? ಭ್ರಷ್ಟಾಚಾರ ಹಣದಲ್ಲಿ ಆಪರೇಷನ್ ಮಾಡುತ್ತಾರೆ. ದೇಶದಲ್ಲಿ ಬೇರೆ ಪಕ್ಷದವರನ್ನು ಖರೀದಿಸುವುದು ಬಿಜೆಪಿ ಕೆಲಸವಾಗಿದೆ. ಇಲ್ಲ ಅಂದರೆ ಐಟಿ, ಇಡಿ ಬಳಸಿ ಹೆದರಿಸುತ್ತಾರೆ. ಈ ಮೂಲಕ ದೇಶ ಆಳ್ವಿಕೆ ಮಾಡುತ್ತೇವೆ ಎಂಬ ಭ್ರಮೆಯಲ್ಲಿ ಬಿಜೆಪಿ ಇದೆ ಎಂದು ಕಿಡಿಕಾರಿದರು.

    ಮಹಾರಾಷ್ಟ್ರ ಚುನಾವಣೆಗಾಗಿ ಸಿಎಂ ಬಿಎಸ್‍ವೈ ನೀರು ಬಿಡುತ್ತೇವೆ ಎಂದು ಹೇಳಿದ್ದಾರೆ. ಮತಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ. ಎರಡು ರಾಜ್ಯಗಳ ನಡುವೆ ಮಾತುಕತೆಯಾಗಿದೆ. ಇನ್ನು ಮಹಾರಾಷ್ಟ್ರಕ್ಕೆ ನೀರು ಕೊಡುವುದನ್ನು ನಿಲ್ಲಿಸಲು ಆಗಲ್ಲ ಎಂದರು.

  • ಪ್ರಧಾನಿ ಮೋದಿ, ಅಸ್ಸಾಂ ಸಚಿವರಿಗೆ ಜೀವ ಬೆದರಿಕೆಯ ಪೋಸ್ಟ್- ಯುವಕ ಬಂಧನ

    ಪ್ರಧಾನಿ ಮೋದಿ, ಅಸ್ಸಾಂ ಸಚಿವರಿಗೆ ಜೀವ ಬೆದರಿಕೆಯ ಪೋಸ್ಟ್- ಯುವಕ ಬಂಧನ

    ದಿಸ್ಪುರ್: ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಸ್ಸಾಂ ಹಣಕಾಸು ಸಚಿವ ಡಾ.ಹಿಮಂತ ಬಿಸ್ವಾ ಶರ್ಮಾ ಅವರಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ನಲ್ಬಾರಿ ಜಿಲ್ಲೆಯ ಯುವಕನನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಯುವಕನನ್ನು ಅಸ್ಸಾಂನ ನಲ್ಬಾರಿ ಜಿಲ್ಲೆಯ ಬೋರ್ಭಾಗ್ ಪ್ರದೇಶದ ಲಿಂಟು ಕಿಶೋರ್ ಶರ್ಮಾ ಎಂದು ಗುರುತಿಸಲಾಗಿದೆ. ಮಾಧ್ಯಮಗಳ ವರದಿ ಪ್ರಕಾರ, ಕಿಶೋರ್ ತನ್ನ ಫೇಸ್‍ಬುಕ್ ಪೋಸ್ಟ್‍ನಲ್ಲಿ ಹಿಮಂತ ಬಿಸ್ವಾ ಶರ್ಮಾ ಅವರ ಸಾವು 2021ರಲ್ಲಿ ಚುನಾವಣಾ ಸಭೆಯ ವೇಳೆ ನಡೆಯಬಹುದು ಎಂದು ಬರೆದುಕೊಂಡಿದ್ದಾನೆ.

    ಅದೇ ದಿನ ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ಸಾರ್ವಜನಿಕ ರ್ಯಾಲಿ ಅಸ್ಸಾಂನ ಗುವಾಹಟಿಯಲ್ಲಿ ನಡೆಯಲಿದೆ. ಭಯೋತ್ಪಾದಕರು ಪ್ರಧಾನಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಲು ಗುರಿಯಾಗಿಸಿಕೊಂಡಿದ್ದಾರೆ. ಆದರೆ ಹಿಮಂತ ಬಿಸ್ವಾ ಶರ್ಮಾ ಸಾಯುತ್ತಾರೆ. ಹಿಮಂತ ಅವರ ಜೀವ ನನ್ನ ಕೈಯಲ್ಲಿದೆ. ಹಿಮಂತ ಬಿಸ್ವಾ ಶರ್ಮಾ ತಮ್ಮ ಜೀವ ಉಳಿಸಿಕೊಳ್ಳಲು ನಲ್ಬಾರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನನಗೆ ತಕ್ಷಣ ಕೆಲಸ ಕೊಡಿಸಬೇಕು ಎಂದು ಲಿಂಟು ಕಿಶೋರ್ ಶರ್ಮಾ ಫೇಸ್‍ಬುಕ್ ಪೋಸ್ಟ್‍ನಲ್ಲಿ ತಿಳಿಸಿದ್ದಾನೆ.

    ಲಿಂಟು ಕಿಶೋರ್ ಶರ್ಮಾ ಸೆಪ್ಟೆಂಬರ್ 15ರಂದು ಫೇಸ್‍ಬುಕ್‍ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾನೆ. ಈ ಕುರಿತು ಸಾಲ್ಜ್ ಉದ್ದೀನ್ ಎಂಬುವರು ನಲ್ಬಾರಿ ಪೊಲೀಸ್ ಠಾಣೆಯಲ್ಲಿ ಕಿಶೋರ್ ವಿರುದ್ಧ ಎಫ್‍ಐಆರ್ ದಾಖಲಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ.

  • ಬಿಜೆಪಿ ಅನುಕೂಲಕ್ಕೆ ತಕ್ಕಂತೆ ಉಪಚುನಾವಣೆ ದಿನಾಂಕ ಘೋಷಣೆ: ಖರ್ಗೆ ಆರೋಪ

    ಬಿಜೆಪಿ ಅನುಕೂಲಕ್ಕೆ ತಕ್ಕಂತೆ ಉಪಚುನಾವಣೆ ದಿನಾಂಕ ಘೋಷಣೆ: ಖರ್ಗೆ ಆರೋಪ

    – ಮೈತ್ರಿ ಪರ ಖರ್ಗೆ ಒಲವು

    ಕಲಬುರಗಿ: ಚುನಾವಣಾ ಆಯೋಗ ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆಯನ್ನು ಘೋಷಣೆ ಮಾಡಿದೆ. ಆದರೆ ಆಯೋಗವನ್ನು ತನ್ನ ಅಧಿಕಾರದಿಂದ ದುರುಪಯೋಗ ಪಡಿಸಿಕೊಂಡಿರುವ ಬಿಜೆಪಿ, ತನ್ನ ಅನುಕೂಲಕ್ಕೆ ತಕ್ಕಂತೆ ದಿನಾಂಕವನ್ನ ಘೋಷಣೆ ಮಾಡಿಸಿಕೊಂಡಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ.

    ಮಹಾರಾಷ್ಟ್ರ, ಹರಿಯಾಣ ಸೇರಿದಂತೆ ಕರ್ನಾಟಕದ ಚುನಾವಣೆ ದಿನಾಂಕಗಳನ್ನು ಬಿಜೆಪಿ ತನ್ನ ಅನುಕೂಲಕ್ಕೆ ತಕ್ಕಂತೆ ಬಳಿಸಿಕೊಳ್ಳುತ್ತಿದೆ. ಮೋದಿ ಅಮೆರಿಕಗೆ ತೆರಳುವ ಮುನ್ನ ನಾಸಿಕ್‍ಗೆ ಭೇಟಿ ನೀಡಿ ಭಾಷಣ ಮಾಡಿದ್ದೆ ಇದಕ್ಕೆ ಉದಾಹರಣೆಯಾಗಿದೆ. ಈ ಮೊದಲು 45 ದಿನ ಅಂತರ ಇಟ್ಟು ಚುನಾವಣೆ ಘೋಷಣೆ ಮಾಡಲಾಗುತಿತ್ತು. ಆದರೆ ಈ ಬಾರಿ ಬಿಜೆಪಿ ಅನುಕೂಲಕ್ಕೆ ತಕ್ಕಂತೆ ಕೇವಲ 21 ದಿನಗಳನ್ನು ನೀಡಲಾಗಿದೆ ಎಂದರು.

    ಬಿಜೆಪಿ ಯಾವುದೇ ತಂತ್ರ ಮಾಡಿದರು ಕಾಂಗ್ರೆಸ್ ಪಕ್ಷ ಚುನಾವಣೆ ಎದುರಿಸಲು ಸಿದ್ಧವಾಗಿದೆ. ಈಗಾಗಲೇ ಮೊದಲ ಪಟ್ಟಿ ಸಿದ್ಧವಾಗಿದ್ದು, ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತಿರುವುದರಿಂದ 2ನೇ ಪಟ್ಟಿಯೂ ಬಹುಬೇಗ ಸಿದ್ಧಪಡಿಸಿಕೊಳ್ಳುತ್ತೇವೆ ಎಂದರು.

    ಚುನಾವಣೆ ಘೋಷಣೆ ಮುನ್ನ ದಿನ ದೊಡ್ಡ ದೊಡ್ಡ ಕಂಪೆನಿಗಳ ಜಿ.ಎಸ್.ಟಿ ಕಡಿತ ಘೋಷಿಸಿದ್ದಾರೆ. ಮೋದಿ ಅಮೆರಿಕದಲ್ಲಿ ಹೋಗಿ ಟ್ರಂಪ್ ಜೊತೆ ನ್ಯೂಸ್ ಕ್ರೀಯೆಟ್ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಟ್ರಂಪ್ ಮತ್ತು ಮೋದಿ ಇಬ್ಬರಿಗೂ ಚುನಾವಣೆಯ ಲಾಭ ಪಡೆಯುವ ಉದ್ದೇಶ ಬಿಟ್ಟರೆ ಬೇರೆ ಯಾವುದೇ ಉದ್ದೇಶವಿಲ್ಲ. ಟ್ರಂಪ್ ಬಂದ ಮೇಲೆಯೇ ಭಾರತೀಯರ ಉದ್ಯೋಗ ಕಡಿತವಾಗಿದೆ. ಟ್ರಂಪ್ ನೀತಿ ಭಾರತಕ್ಕೆ ಮಾರಕವಾಗಿದ್ದರೂ ಕೂಡ ಅಂಥವರ ಜೊತೆ ಮೋದಿ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.

    ಇಷ್ಟು ಬೇಗ ಚುನಾವಣೆ ಬರುತ್ತದೆ ಎಂದು ನಾವು ಅಂದು ಕೊಂಡಿರಲಿಲ್ಲ. ದೇಶದಲ್ಲಿ ಜಾತ್ಯಾತೀತ ತತ್ವ, ಪ್ರಜಾಪ್ರಭುತ್ವ ಉಳಿಯ ಬೇಕಾದರೆ, ಮೈತ್ರಿಯೊಂದಿಗೆ ಸ್ಪರ್ಧಿಸುವುದು ಉತ್ತಮ. ಇಲ್ಲವಾದರೆ ಕನಿಷ್ಠ ಪಕ್ಷ ಫ್ರೆಂಡ್ಲಿ ಫೈಟ್ ಆದ್ರೂ ಮಾಡಬೇಕು. ವಿರೋಧಿಗಳ ಜೊತೆಗೂ ಉತ್ತಮ ಸಂಬಂಧ ಉಳಿಸಿಕೊಳ್ಳುವುದು ಉತ್ತಮ ಎಂಬುವುದು ನನ್ನ ಅಭಿಪ್ರಾಯ ಎಂದರು. ಆದರೆ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಉತ್ತರಿಸಲು ನಿರಾಕರಿಸಿದರು.