Tag: prime minister modi

  • ಮೋದಿ ಪ್ರಮಾಣ ವಚನ ಕಾರ್ಯಕ್ರಮದ ವಿಶೇಷತೆ ಏನು? ಅತಿಥಿಗಳು ಯಾರು? ಮೆನು ಏನಿದೆ?

    ಮೋದಿ ಪ್ರಮಾಣ ವಚನ ಕಾರ್ಯಕ್ರಮದ ವಿಶೇಷತೆ ಏನು? ಅತಿಥಿಗಳು ಯಾರು? ಮೆನು ಏನಿದೆ?

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಭಾರತ ಪ್ರಧಾನಿಯಾಗಿ ನಾಳೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

    ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಮಾರು 6,500 ಮಂದಿ ಭಾಗಿಯಾಗುವ ನಿರೀಕ್ಷೆ ಇದ್ದು, ಕಾರ್ಯಕ್ರಮಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ರಾಪ್ಟ್ರಪತಿ ಹಾಗೂ ಪ್ರಧಾನಿ ತೀರ್ಮಾನದ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

    ಪ್ರಮುಖವಾಗಿ ಕಾರ್ಯಕ್ರಮಕ್ಕೆ ಬಂಗಾಳ ಇನಿಷಿಯೇಟಿವ್ ಫಾರ್ ಮಲ್ಟಿ ಸೆಕ್ಟರಲ್ ಟೆಕ್ನಿಕಲ್ ಅಂಡ್ ಎಕನಾಮಿಕ್ ಕೋ ಆಪರೇಷನ್ (ಬಿಮ್‍ಸ್ಟಿಕ್) ಸದಸ್ಯ ರಾಷ್ಟ್ರಗಳಿಗೆ ಆಹ್ವಾನ ನೀಡಲಾಗಿದೆ. ಬಾಂಗ್ಲಾದೇಶ, ಶ್ರೀಲಂಕಾ, ಮ್ಯಾನ್ಮಾರ್, ನೇಪಾಳ, ಭೂತಾನ್, ಥೈಲ್ಯಾಂಡ್ ರಾಷ್ಟ್ರಗಳ ಗಣ್ಯರು ಸೇರಿದಂತೆ ಶಾಂಘೈ ಕೋ ಆಪರೇಷನ್ ರಾಷ್ಟ್ರಗಳ ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

    ಬದಲಾದ ಸಮಯ: 2014ರಲ್ಲಿ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಸಂಜೆ 6 ಗಂಟೆ ವೇಳೆಗೆ ನಡೆದಿತ್ತು. ಆದರೆ ಈ ಬಾರಿ ಸಮಯವನ್ನು ಬಲಾಯಿಸಿ ಸಂಜೆ 7 ಗಂಟೆಗೆ ಕಾರ್ಯಕ್ರಮ ನಿಗದಿ ಮಾಡಲಾಗಿದೆ. ಅಲ್ಲದೇ ರಾಷ್ಟ್ರಪತಿ ಭವನದ ಫೋರ್ ಕೋರ್ಟಿನಲ್ಲಿ ಸಮಾರಂಭ ನಡೆಯಲಿದೆ.

    ಇತಿಹಾಸದಲ್ಲಿ ಇದುವರೆಗೂ 3 ಬಾರಿ ಮಾತ್ರ ಫೋರ್ ಕೋರ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಈ ಹಿಂದೆ ಮಾಜಿ ಪ್ರಧಾನಿಗಳಾದ ಚಂದ್ರಶೇಖರ್ (1990), ವಾಜಪೇಯಿ (1998), 2014 ರಲ್ಲಿ ಮೋದಿ ಅವರು ಇಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಉಳಿದ ಪ್ರಧಾನಿಗಳು ದರ್ಬಾರ್ ಹಾಲ್‍ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇಲ್ಲಿ ಕೇವಲ 500 ಮಂದಿಗೆ ಮಾತ್ರ ಆಸನ ವ್ಯವಸ್ಥೆ ಇದ್ದು, ಪರಿಣಾಮ ಘೋರ್ ಕೋರ್ಟಿನಲ್ಲಿ ಕಾರ್ಯಕ್ರಮ ನಡೆಯಲಿದೆ.

    ರಾಷ್ಟ್ರಪತಿ ಭವನದ ಮುನ್ನಂಗಳವನ್ನು ‘ಫೋರ್ ಕೋರ್ಟ್’ ಎಂದು ಕರೆಯಲಾಗುತ್ತದೆ. ರಾಷ್ಟ್ರಪತಿ ಭವನದ ಮುಖ್ಯ ಗೇಟ್ ನಿಂದ ಹಿಡಿದು ಮುಖ್ಯ ಭವನದ ವರೆಗಿನ ಪ್ರದೇಶ ಇದಾಗಿದೆ. ಇದು ಇಲ್ಲಿ ಇಂಗ್ಲಿಷ್‍ನ ‘ಟಿ’ ಅಕ್ಷರ ಮಾದರಿಯಲ್ಲಿದೆ. ಇದರಲ್ಲಿ ಉದ್ಯಾನವನ, ನೀರಿನ ಕಾಲುವೆ ನಿರ್ಮಿಸಲಾಗಿದೆ. ರಾಷ್ಟ್ರಪತಿ ಭವನದ ಮುಂಭಾಗ 640 ಅಡಿ ಅಗಲದ ಜಾಗದಲ್ಲಿ ಮುಖ್ಯ ವೇದಿಕೆ ಇರಲಿದೆ. ರಾಷ್ಟ್ರಪತಿ ಭವನದ ಎದುರು ಇರುವ ಎತ್ತರದ ಧ್ವಜ ಸ್ತಂಭದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಗುತ್ತದೆ. 1971ರ ಮೊದಲು ಇಲ್ಲಿ ರಾಷ್ಟ್ರಪತಿಗಳಿಗಾಗಿ ಇದ್ದ ಪ್ರತ್ಯೇಕ ಧ್ವಜವನ್ನು ಹಾರಿಸಲಾಗುತ್ತಿತ್ತು.

    ಕಾರ್ಯಕ್ರಮಕ್ಕೆ ಸಿನಿಮಾ, ಸಾಹಿತ್ಯ, ವಿಜ್ಞಾನ, ರಾಜಕೀಯ, ವಿದೇಶಿ ಪ್ರತಿನಿಧಿಗಳು, ಚಿಂತಕರು ಸೇರಿದಂತೆ ವಿವಿಧ ಕ್ಷೇತ್ರ ಗಣ್ಯರು ಆಗಮಿಸಲಿದ್ದಾರೆ. 2014ರ ಮೇ 26 ರಂದು ನಡೆದ ಕಾರ್ಯಕ್ರಮಕ್ಕೆ 3 ಗಂಟೆಯ ವೇಳೆಗೆ ಅತಿಥಿಗಳು ಆಗಮಿಸಿದ್ದರು. ಬಿಸಿಲಿನ ಪ್ರಮಾಣ ತೀವ್ರವಾಗಿದ್ದ ಪರಿಣಾಮ ಈ ಬಾರಿ ಪ್ರಮಾಣ ವಚನ ಸಮಯವನ್ನು ಬದಲಾಯಿಸಲಾಗಿದೆ. ಅಲ್ಲದೇ ಕಳೆದ ಬಾರಿ ರಕ್ಷಣೆಯ ದೃಷ್ಟಿಯಿಂದ ಕಾರ್ಯಕ್ರಮಕ್ಕೆ ನೀರಿನ ಬಾಟಲಿಗಳನ್ನು ನಿಷೇಧ ಮಾಡಲಾಗಿತ್ತು. ಈ ಬಾರಿ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ.

    ಮೆನು ಇಂತಿದೆ: 2014 ರಲ್ಲಿ ಆಯೋಜಿಸಲಾಗಿದ್ದ ರೀತಿಯಲ್ಲೇ ಈ ಬಾರಿಯೂ ಕಾರ್ಯಕ್ರಮ ನಡೆಯಲಿದ್ದು, ಲಘು ಆಹಾರ ಮತ್ತು ಬ್ರೇಕ್‍ಫಸ್ಟ್ ಅತಿಥಿಗಳಿಗೆ ಲಭ್ಯವಾಗಲಿದೆ. ಕಾರ್ಯಕ್ರಮದಲ್ಲಿ ವೆಜ್ ಹಾಗೂ ನಾನ್ ವೆಜ್ ಎರಡು ಖಾದ್ಯಗಳು ಇರಲಿದ್ದು, ರಾಷ್ಟ್ರಪತಿ ಭವನದ ಆಡುಗೆ ಕೋಣೆಯಲ್ಲೇ ತಯಾರಿ ನಡೆದಿದೆ. ರಾಜಾಬೋಗ್, ಸಮೋಸ, ದಾಲ್ ರೈಸಿನಾ ಸೇರಿದಂತೆ ವಿವಿಧ ಖಾದ್ಯಗಳು ಸಿದ್ಧವಾಗುತ್ತಿದೆ. ಬಹುಮುಖ್ಯವಾಗಿ ದಾಲ್ ರೈಸಿನಾ ಸಿದ್ಧ ಪಡಿಸಲು 48 ಗಂಟೆಗಳ ಅವಧಿ ಅಗತ್ಯವಿದ್ದು, ಈಗಾಗಲೇ ತಯಾರಿ ಆರಂಭವಾಗಿದೆ.

  • 2ನೇ ಬಾರಿ ಅಧಿಕಾರಕ್ಕೆ – ಮೋದಿ ಅಭಿಮಾನಿಯಿಂದ ಉಚಿತ ಆಟೋ ಸೇವೆ

    2ನೇ ಬಾರಿ ಅಧಿಕಾರಕ್ಕೆ – ಮೋದಿ ಅಭಿಮಾನಿಯಿಂದ ಉಚಿತ ಆಟೋ ಸೇವೆ

    ಕಾರವಾರ: ಮೋದಿ ಎರಡನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಆಟೋ ಡ್ರೈವರ್ ಒಬ್ಬರು ಗುರುವಾರ ಉಚಿತ ಸೇವೆ ನೀಡಿ ಸಂಭ್ರಮಿಸುವುದಾಗಿ ಹೇಳಿಕೊಂಡಿದ್ದಾರೆ.

    ಬಿಜೆಪಿ ಪಕ್ಷವು 2019ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ದಿಗ್ವಿಜಯ ದಾಖಲಿಸಿರುವುದು ಮೋದಿ ಅಭಿಮಾನಿಗಳಿಗೆ ಸಂತಸ ತಂದಿದೆ. ಮೋದಿ ಅಭಿಮಾನಿಗಳಲ್ಲಿ ಒಬ್ಬರಾದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಹನುಮಾನನಗರದ ಚಂದ್ರು ನಾಯ್ಕ ತನ್ನದೇ ಆದ ವಿಶಿಷ್ಠ ರೀತಿಯಲ್ಲಿ ಅಭಿಮಾನ ಮೆರೆದಿದ್ದಾರೆ.

    ಅಪ್ಪಟ ಮೋದಿ ಅಭಿಮಾನಿಯಾಗಿರುವ ಚಂದ್ರ ನಾಯ್ಕ ಅವರು ಮೋದಿಯವರು ಮತ್ತೆ ಪ್ರಧಾನಿಯಾಗುತ್ತಿರುವುದನ್ನು ಅತ್ಯಂತ ವಿಭಿನ್ನ ರೀತಿಯಲ್ಲಿ ಸಂಭ್ರಮಿಸಲು ಮುಂದಾಗಿದ್ದಾರೆ. ಮೇ 30 ರಂದು ಮೋದಿ 2ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ದಿನದಂದು ಬೆಳಗ್ಗೆ 8ರಿಂದ ಸಂಜೆ 6ರ ವರೆಗೆ ತಮ್ಮ ಆಟೋದಲ್ಲಿ ಉಚಿತ ಪ್ರಯಾಣ ಸೇವೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

    ಈ ಕುರಿತಂತೆ ಮಾತನಾಡಿದ ಚಂದ್ರು, ಮೋದಿಯವರು 2ನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ನನಗೆ ಅತೀವ ಸಂತಸ ಮೂಡಿಸಿದೆ. ಹೀಗಾಗಿ, ಅವರು ಪ್ರಮಾಣವಚನ ಸ್ವೀಕಾರ ಮಾಡುವ ದಿನ ನನ್ನ ಆಟೋದಲ್ಲಿ ಎಲ್ಲರಿಗೂ ಉಚಿತ ಪ್ರಯಾಣ ಘೋಷಿಸಿದ್ದು, ಈ ಮೂಲಕ ದೇಶ ಸೇವೆಗೆ ನಿರ್ಧರಿಸಿದ್ದೇನೆ ಎಂದಿದ್ದಾರೆ.

  • ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಕಾರಣಕೊಟ್ಟ ಶಿವರಾಮೇಗೌಡ!

    ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಕಾರಣಕೊಟ್ಟ ಶಿವರಾಮೇಗೌಡ!

    ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಅದರಲ್ಲೂ ಮಂಡ್ಯದಲ್ಲಿ ನಿಖಿಲ್ ಸೋಲು ಅಘಾತ ತಂದಿದ್ದು, ಮತಯಂತ್ರದ ದೋಷವೇ ನಿಖಿಲ್ ಸೋಲಲು ಕಾರಣವಾಯ್ತ ಎಂಬ ಅನುಮಾನ ಇದೇ ಎಂದು ಮಾಜಿ ಸಂಸದ ಶಿವರಾಮೇಗೌಡ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಬೇರೆಯವರ ಅಭಿಪ್ರಾಯ ನನಗೆ ಗೊತ್ತಿಲ್ಲ. ನನ್ನ ಅಭಿಪ್ರಾಯ ಬಿಜೆಪಿಯ ಭರ್ಜರಿ ಗೆಲುವಿಗೆ ಇವಿಎಂ ದೋಷವೇ ಕಾರಣ ಎಂಬ ಅನುಮಾನ ಇದೆ. ಏಕೆಂದರೆ ಮಂಡ್ಯಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಸುಮಾರು ಎಂಟು ಸಾವಿರ ಕೋಟಿಗೂ ಹೆಚ್ಚು ಅಭಿವೃದ್ಧಿ ಕೆಲಸಕ್ಕೆ ಅನುಮೋದನೆ ನೀಡಿದ್ದಾರೆ. ಆದರೂ ಸುಮಲತಾ ಗೆಲ್ಲುತ್ತಾರೆ ಎಂದರೆ ಮತಯಂತ್ರದ ಮೇಲಿನ ಅನುಮಾನ ಬಲವಾಗಿದೆ ಎಂದರು.

    ನನ್ನ ಅನುಮಾನದಂತೆ ನೂರಕ್ಕೆ ನೂರು ಇವಿಎಂ ಮಿಷನ್‍ನಲ್ಲಿ ಮೋಸವಾಗಿದೆ. ಬಹಳ ಜನ ಇವಿಎಂ ಮಿಷನ್‍ನಲ್ಲಿ ಏನೋ ಪ್ಲಾನ್ ಮಾಡಿದ್ದಾರೆ ಎಂದು ಹೇಳುತ್ತಿದ್ದರು. ಪ್ಲಾನ್ ಮಾಡಿರುವುದರ ಪ್ರಕಾರವೇ ಫಲಿತಾಂಶ ಬಂದಿದೆ. ದೇಶದಲ್ಲೂ ನಿರೀಕ್ಷೆ ಮೀರಿ ಫಲಿತಾಂಶ ಬಂದಿದೆ. ಇದು ಇವಿಎಂ ಮೇಲೆ ಅನುಮಾನ ಹುಟ್ಟಿಸುವ ವಿಚಾರವಾಗಿದೆ ಎಂದರು.

    ಪುಲ್ವಾಮ ದಾಳಿಗೆ ಮುಂಚೆ ನರೇಂದ್ರ ಮೋದಿಯ ಗುಂಪಿಗೆ ಮತ್ತೆ ಅಧಿಕಾರ ಹಿಡಿಯುವ ನಂಬಿಕೆ ಇರಲಿಲ್ಲ. ಪುಲ್ವಾಮ ದಾಳಿ ಆದ ಮೇಲೆ ದೇಶದ ಜನರಿಗೆ ಭಾವನಾತ್ಮಕ ವಿಚಾರ ತಲೆಗೆ ತುಂಬಿ ಗೆದ್ದಿದ್ದಾರೆ. ಯುದ್ಧ ಆಗಬಹುದು ಎಂಬ ಭೀತಿಯಿಂದ ಜನ ಒಗ್ಗಟ್ಟಾಗಿ ವೋಟ್ ಹಾಕಿದ್ದಾರೆ ಎಂದು ಇದನ್ನು ಅರ್ಥೈಸಬಹುದು ಎಂದರು.

  • ಸೋತ 120 ಕ್ಷೇತ್ರಗಳೇ ಟಾರ್ಗೆಟ್ – ಕ್ಲಿಕ್ ಆಯ್ತು ಚಾಣಕ್ಯನ ತಂತ್ರ

    ಸೋತ 120 ಕ್ಷೇತ್ರಗಳೇ ಟಾರ್ಗೆಟ್ – ಕ್ಲಿಕ್ ಆಯ್ತು ಚಾಣಕ್ಯನ ತಂತ್ರ

    ನವದೆಹಲಿ: 2014 ಲೋಕಸಭಾ ಚುನಾವಣೆಯ ಗೆಲುವಿನ ಸಂಭ್ರಮದಲ್ಲಿದ್ದ ಬಿಜೆಪಿ ಪಕ್ಷಕ್ಕೆ ಅಮಿತ್ ಶಾ ನವಸಾರಥಿಯಾಗಿದ್ದರು. ಅದರಲ್ಲೂ ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ 73 ಸ್ಥಾನಗಳನ್ನು ಗೆಲುವು ಪಡೆಯಲು ಶಾ ಪ್ರಮುಖ ಕಾರಣರಾಗಿದ್ದರು. ಈ ಮೂಲಕ ನರೇಂದ್ರ ಮೋದಿ ಅವರ ಟೀಂ ನಲ್ಲಿ ‘ಮ್ಯಾನ್ ಆಫ್ ದಿ ಮ್ಯಾಚ್’ ಎನಿಸಿಕೊಂಡಿದ್ದರು. ಆದರೆ ಈ ಬಾರಿ ಅವರ ಸ್ಥಾನ ಮತ್ತಷ್ಟು ಹೆಚ್ಚಾಗಿದ್ದು, ಅಮಿತ್ ಶಾ ತಂತ್ರಗಾರಿಕೆ ರಾಜಕೀಯ ವಿಶ್ಲೇಷಕರ ಲೆಕ್ಕಾಚಾರಗಳನ್ನೇ ತಲೆಕೆಳಗೆ ಮಾಡಿದೆ.

    ಮೋದಿ ಅಲೆಯಿಂದ 2014ರ ಲೋಕ ಸಮರದಲ್ಲಿ ಬಿಜೆಪಿ 282 ಸ್ಥಾನ ಗಳಿಸಿದ್ದರೂ 120 ಸ್ಥಾನಗಳಲ್ಲಿ ಸೋಲು ಕಂಡಿತ್ತು. ಈ ಕ್ಷೇತ್ರಗಳನ್ನೇ ಟಾರ್ಗೆಟ್ ಮಾಡಿದ್ದ ಅಮಿತ್ ಶಾ, ಗೆಲುವಿನ ರಣತಂತ್ರಗಳನ್ನು ರೂಪಿಸಿದ್ದರು. ಟಾರ್ಗೆಟ್ ಮಾಡಲಾಗಿದ್ದ ಕ್ಷೇತ್ರಗಳನ್ನು 25 ಕ್ಲಸ್ಟರ್ ಗಳನ್ನಾಗಿ ಮಾಡಿ ಹಿರಿಯ ನಾಯಕರಿಗೆ ಉಸ್ತುವಾರಿಯನ್ನು ನೀಡಲಾಗಿತ್ತು. ಈ ರೀತಿ ಸಂಘಟನೆ ಮಾಡಿದ ಬಳಿಕ ಗೆಲ್ಲಲು ಅವಕಾಶ ಇರುವ 80 ಕ್ಷೇತ್ರಗಳನ್ನು ಆಯ್ಕೆ ಮಾಡಿ ಅವುಗಳ ಮೇಲೆ ಹೆಚ್ಚು ಗಮನ ನೀಡುವುಂತೆ ರಾಜ್ಯ ನಾಯಕರಿಗೆ ಸೂಚಿಸಲಾಗಿತ್ತು. ಅಂದು ಅಮಿತ್ ಶಾ ಟಾರ್ಗೆಟ್ ಮಾಡಿದ್ದ 80 ಕ್ಷೇತ್ರಗಳ ಪೈಕಿ ಅರ್ಧದಷ್ಟು ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿದೆ.

    ಅಮಿತ್ ಶಾ ತಮಗೆ ತಾವೇ ‘ಸೆಟ್’ ಮಾಡಿಕೊಂಡಿದ್ದ ಗುರಿಯನ್ನ ಸಾಧಿಸಲು ಹಲವು ತಂತ್ರಗಳನ್ನು ರೂಪಿಸಿದ್ದರು. ಇದರಲ್ಲಿ ಬಹುಮುಖ್ಯವಾಗಿ ‘ಆಪರೇಷನ್ ಕೋರಮಂಡಲ್’ ಕೂಡ ಒಂದಾಗಿದೆ. ಈ ತಂತ್ರದ ಭಾಗವಾಗಿಯೇ ಪಶ್ಚಿಮ ಬಂಗಾಳ, ಒಡಿಶಾ, ತೆಲಂಗಾಣ ರಾಜ್ಯಗಳಲ್ಲಿ ಅಮಿತ್ ಹಲವು ನಾಯಕರನ್ನ ಪಕ್ಷದತ್ತ ಸೆಳೆದಿದ್ದರು. ಅಲ್ಲದೇ ಪಶ್ಚಿಮ ಬಂಗಾಳದಲ್ಲಿ 84ಕ್ಕೂ ಹೆಚ್ಚು ಬಾರಿ ಸಭೆಗಳನ್ನು ನಡೆಸಿದ್ದರು. ಇತ್ತ ಈಶಾನ್ಯ ರಾಜ್ಯಗಳಲ್ಲಿನ ಮೈತ್ರಿಗಳನ್ನು ಸೆಳೆಯಲು ಯಶಸ್ವಿಯಾಗಿದ್ದರು. ಇದರ ಪರಿಣಾಮ ಬಹುತೇಕ ಈಶಾನ್ಯ ರಾಜ್ಯಗಳಲ್ಲಿ ಇಂದು ಬಿಜೆಪಿ ಪಕ್ಷ ಗೆಲುವು ಪಡೆದಿದೆ.

    ಸೋಲುಂಡ ಕ್ಷೇತ್ರಗಳನ್ನ ಟಾರ್ಗೆಟ್ ಮಾಡುತ್ತಲೇ 2014ರಲ್ಲಿ ಗೆಲುವು ಪಡೆದ ಕ್ಷೇತ್ರಗಳನ್ನು ಎಚ್ಚರಿಕೆಯಿಂದ ನಿಭಾಯಿಸಿದ್ದ ಅಮಿತ್ ಶಾ, ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದ ಉತ್ತರ ಪ್ರದೇಶದಲ್ಲಿ ಹೆಚ್ಚು ಆಸಕ್ತಿ ವಹಿಸಿದ್ದರು. ಇದರ ಪರಿಣಾಮವಾಗಿ ಎಸ್‍ಪಿ, ಬಿಎಸ್‍ಪಿ ಮೈತ್ರಿಯಿಂದ ಪಕ್ಷಕ್ಕೆ ನಷ್ಟ ಉಂಟಾಗದಂತೆ ನೋಡಿಕೊಂಡರು.

    ಮೈತ್ರಿ ಪಕ್ಷವಾಗಿ ಜೊತೆಗಿದ್ದು ಟೀಕೆ ಮಾಡುತ್ತಿದ್ದ ಶಿವಸೇನಾ ಪಕ್ಷ ಹಾಗೂ ಜೆಡಿ(ಯು) ಪಕ್ಷಗಳೊಂದಿಗೆ ಅತ್ಯುತ್ತಮ ರೀತಿಯಲ್ಲಿ ಮೈತ್ರಿಯನ್ನ ಶಾ ಮುಂದುವರಿಸಿದ್ದರು. ದೇಶಾದ್ಯಂತ ಸುಮಾರು 161 ಕಾಲ್ ಸೆಂಟರ್ ಪ್ರಾರಂಭಿಸಿ ಕೇಂದ್ರದ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದರು. ಈ ಮೂಲಕ ಸರಿ ಸುಮಾರು 24.71 ಕೋಟಿ ಫಲಾನುಭವಿಗಳನ್ನು ಈ ಸೆಂಟರ್ ಮೂಲಕ ತಲುಪಿದ್ದರು. 2014 ರಲ್ಲಿ ‘ಮ್ಯಾನ್ ಆಫ್ ದಿ ಮ್ಯಾಚ್’ ಪಡೆದಿದ್ದ ಅಮಿತ್ ಶಾ, ಈ ಬಾರಿ ‘ಮೋಸ್ಟ್ ವ್ಯಾಲುಬಲ್ ಪ್ಲೇಯರ್’ ಎನಿಸಿಕೊಂಡರು. ಇದನ್ನು ಓದಿ: ನೀವೆಲ್ಲಾ ಇದ್ದು ಏನ್ ಮಾಡ್ತಿದ್ದೀರಾ..?- ರಾಜ್ಯ ಬಿಜೆಪಿಗರ ವಿರುದ್ಧ ಅಮಿತ್ ಶಾ ಗರಂ

  • ಚಂದ್ರಬಾಬು ನಾಯ್ಡು ಮಾಧ್ಯಮಗಳಿಗೆ ಮನರಂಜನಾ ಸುದ್ದಿ ನೀಡುತ್ತಿದ್ದಾರೆ – ಶಿವಸೇನೆ ವ್ಯಂಗ್ಯ

    ಚಂದ್ರಬಾಬು ನಾಯ್ಡು ಮಾಧ್ಯಮಗಳಿಗೆ ಮನರಂಜನಾ ಸುದ್ದಿ ನೀಡುತ್ತಿದ್ದಾರೆ – ಶಿವಸೇನೆ ವ್ಯಂಗ್ಯ

    ಮುಂಬೈ: ಆಂಧ್ರ ಪ್ರದೇಶದ ಮುಖ್ಯಮಂತ್ರಿ ಹಾಗು ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರು ಮಾಧ್ಯಮದವರಿಗೆ ಮನರಂಜನಾ ಸುದ್ದಿ ನೀಡುತ್ತಿದ್ದಾರೆ ಎಂದು ಶಿವಾಸೇನಾ ವ್ಯಂಗ್ಯವಾಡಿದೆ.

    ಮುಖವಾಣಿ ‘ಸಾಮ್ನಾ’ದಲ್ಲಿನ ಸಂಪಾದಕೀಯದಲ್ಲಿ ಚಂದ್ರಬಾಬು ನಾಯ್ಡು ಅವರು ಎಲ್ಲಾ ಪಕ್ಷದವರನ್ನು ಕೇಂದ್ರದಲ್ಲಿ ಒಗ್ಗೂಡಿಸಲು ಹೋಗಿ ಮಾಧ್ಯಮದವರಿಗೆ ಮನರಂಜನಾ ಸುದ್ದಿ ನೀಡುತ್ತಿದ್ದಾರೆ ಎಂದು ಬರೆಯಲಾಗಿದೆ.

    ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಚಂದ್ರಬಾಬು ನಾಯ್ಡು ದೇಶದಲ್ಲಿನ ಉಳಿದ ಎಲ್ಲಾ ಸ್ಥಳೀಯ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದ್ದಂತೆ ಚಂದ್ರಬಾಬು ನಾಯ್ಡು ಅವರು ಬಿಜೆಪಿ ಬಿಟ್ಟು ದೇಶದ ಎಲ್ಲಾ ಪಕ್ಷಗಳ ಮುಖ್ಯಸ್ಥರನ್ನು ಭೇಟಿಮಾಡುತ್ತಿದ್ದಾರೆ. ಈ ಪ್ರಯತ್ನ ಮಾಧ್ಯಮದವರಿಗೆ ಮನರಂಜನೆ ನೀಡುತ್ತಿದೆ ಎಂದು ಶಿವಾಸೇನಾ ತನ್ನ ಮುಖವಾಣಿ ಸಾಮ್ನಾದಲ್ಲಿ ಬರೆದುಕೊಂಡಿದೆ.

    ಇದೇ ವೇಳೆ ಪ್ರಧಾನಿ ಮೋದಿ ಅವರು ಕೇದಾರನಾಥ ಮತ್ತು ಬದರಿನಾಥಕ್ಕೆ ಭೇಟಿ ನೀಡಿರುವುದನ್ನು ಸಮರ್ಥಿಸಿಕೊಂಡಿರುವ ಶಿವಾಸೇನಾ, ಮೋದಿ ಅವರ ಧಾರ್ಮಿಕ ನಿಲುವುಗಳನ್ನು ನೋಡಿ ವಿರೋಧ ಪಕ್ಷದವರು ಹೆದರುತ್ತಿದ್ದಾರೆ. ಇದು ಪ್ರಧಾನಿ ಅವರ ಹಿಂದುತ್ವ ಮತ್ತು ವಿರೋಧ ಪಕ್ಷದವರ ನಕಲಿ ಜಾತ್ಯಾತೀತತೆಯ ನಡುವೆ ನಡೆಯುತ್ತಿರುವ ಹೋರಾಟ ಎಂದು ವ್ಯಾಖ್ಯಾನಿಸಿದೆ.

    ಶಿವಾಸೇನಾದ ಪ್ರಕಾರ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 300ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ವಿರೋಧ ಪಕ್ಷದವರು ಕೇವಲ ಮೋದಿ ಅವರನ್ನು ಅಧಿಕಾರದಿಂದ ದೂರ ಮಾಡುವ ಯೋಚನೆ ಮಾಡಬಹುದು ಅದನ್ನು ಬಿಟ್ಟರೆ ಮೋದಿ ಅವರನ್ನು ಸೋಲಿಸಲು ಆಗುವುದಿಲ್ಲ ಎಂದು ಹೇಳಿದೆ.

  • ನಮ್ಮ ಮೊದಲ ಆದ್ಯತೆ ದೇಶ – ಬಾಯಿ ಚಪಲಕ್ಕೆ ಹೇಳಿಕೆ ಸರಿಯಲ್ಲ: ವಿ ಸೋಮಣ್ಣ

    ನಮ್ಮ ಮೊದಲ ಆದ್ಯತೆ ದೇಶ – ಬಾಯಿ ಚಪಲಕ್ಕೆ ಹೇಳಿಕೆ ಸರಿಯಲ್ಲ: ವಿ ಸೋಮಣ್ಣ

    ಕಲಬುರಗಿ: ನಮಗೆ ಎಲ್ಲದಕ್ಕಿಂತ ಮೊದಲು ದೇಶ, ನಂತರ ಪಕ್ಷ. ಬಾಯಿ ಚಪಲಕ್ಕೆ ಹೇಳಿಕೆ ನೀಡಿರುವುದು ಸರಿಯಲ್ಲ. ಇಂತಹ ಸಣ್ಣ ಪುಟ್ಟ ವಿಚಾರಗಳನ್ನು ಮಾಧ್ಯಮಗಳು ಪ್ರಸಾರ ಮಾಡುವುದನ್ನು ಕಡಿಮೆ ಮಾಡಿದರೆ ಇವರೆಲ್ಲ ಕಳೆದುಹೋಗುತ್ತಾರೆ ಎಂದು ಬಿಜೆಪಿ ಶಾಸಕ ವಿ ಸೋಮಣ್ಣ ಅವರು ಹೇಳಿದ್ದಾರೆ.

    ಬಿಜೆಪಿ ಸಂಸದರಾದ ಅನಂತ್ ಕುಮಾರ್ ಹೆಗ್ಡೆ ಹಾಗೂ ನಳಿನ್ ಕುಮಾರ್ ಕಟೀಲ್ ಟ್ವೀಟ್ ವಿಚಾರ ಚಿಂಚೋಳಿಯಲ್ಲಿ ಮಾತನಾಡಿದ ಅವರು, ಅನಂತಕುಮಾರ್ ಹೆಗ್ಡೆ ಅವರ ಮಾತನ್ನು ನಾನು ಎಂದೂ ಬೆಂಬಲಿಸುವುದಿಲ್ಲ. ಅವರು ಆರನೇ ಬಾರಿಗೆ ಸಂಸದರಾಗುತ್ತಿದ್ದಾರೆ ಎಂಬ ಸುಳಿವಿದೆ. ಆದರೆ ಮಾಧ್ಯಮದಲ್ಲಿ ಇಂತಹ ಸುದ್ದಿ ಕಡಿಮೆಯಾದರೆ ಅವರಷ್ಟಕ್ಕೆ ಅವರು ದಾರಿಗೆ ಬರುತ್ತಾರೆ. ಅವರನ್ನೆಲ್ಲಾ ಸರಿ ಮಾಡೋಕೆ ನಾವು ಇದ್ದೇವೆ, ಪ್ರಧಾನಿ ಇದ್ದಾರೆ ಎಂದು ತಿಳಿಸಿದರು.

    ಕೇವಲ ಒಬ್ಬ ಅನಂತಕುಮಾರ್ ಹೆಗಡೆ ಅಲ್ಲ, ಸಿದ್ದರಾಮಯ್ಯ, ಪರಮೇಶ್ವರ, ಪ್ರಿಯಾಂಕ್ ಖರ್ಗೆ ಎಲ್ಲರ ಭಾಷೆಯೂ ಹೀಗೆ ಆಗಿದೆ. ಪ್ರಿಯಾಂಕ್ ಖರ್ಗೆ ಅವರಿಗೂ ಎಷ್ಟು ಸೊಕ್ಕು ಇದ್ದರೆ ಪ್ರಧಾನಿ ಅವರನ್ನ ನನ್ನ ಕಾಲು ತೊಳೆಯಲಿ ಎಂದು ಹೇಳುತ್ತಾರೆ. ಇದನ್ನೆನಾ ಅವರ ತಂದೆ ಕಲಿಸಿಕೊಟ್ಟಿರುವುದು ಎಂದು ಪ್ರಶ್ನೆ ಮಾಡಿದರು. ಅಲ್ಲದೇ ಉಮೇಶ್ ಜಾಧವ್ 50 ಕೋಟಿ ರೂ. ತೆಗೆದುಕೊಂಡಿದ್ದಾರೆ ಎಂದು ಹೇಳುವ ಕಾಂಗ್ರೆಸ್ ಹೇಳುತ್ತಾರೆ. ಆದರೆ 78 ಜನ ಶಾಸಕರು ಹೋಗಿ ಜೆಡಿಎಸ್ ಜೊತೆ ಸೇರಿಕೊಳ್ಳಲು ದೇವೇಗೌಡರ ಜೊತೆ ಎಷ್ಟು ತೆಗೆದುಕೊಂಡಿದ್ದೀರಿ ಎಂದು ಪ್ರಶ್ನಿಸಿದರು.

    ಸಿದ್ದರಾಮಯ್ಯ ಅವರು ರೇವಣ್ಣ ಸಿಎಂ ಆಗುವ ಆರ್ಹತೆ ಇದೆ ಎಂದು ಬೆಳ್ಳುಳ್ಳಿ ಪಟಾಕಿ ಹಾಕಿದ್ದು, ಆದರೆ ಅವರು ಟೈಮ್ ಬಾಂಬ್ ಹಾಕುತ್ತಾರೆ. ಈಗಾಗಲೇ ದೇವೇಗೌಡರು, ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ. ನಾನು ಕೂಡಾ ದೇವೇಗೌಡರ ಗರಡಿಯಲ್ಲಿ ಬೆಳೆದವನು. ಅವರ ಎಲ್ಲಾ ಮುಖಗಳನ್ನೂ ನೋಡಿದ್ದೇನೆ. ಇನ್ನೂ ಎರಡು ಮೂರು ದಿನಗಳಲ್ಲಿ ಕಾಲಚಕ್ರ ಹೇಗೆ ತಿರುಗುತ್ತದೆ ನೋಡುತ್ತಿರಿ ಎಂದರು.

    ಇಂದು ಸಂಜೆ ಆರು ಗಂಟೆ ನಂತರ ಕಾಂಗ್ರೆಸ್ ನವರನ್ನು ಕ್ಷೇತ್ರದಲ್ಲಿ ಉಳಿಯಲು ಅವಕಾಶ ಕೊಟ್ಟರೆ ನಾವು ನೇರವಾಗಿ ನಿಮ್ಮನ್ನು ಟಾರ್ಗೆಟ್ ಮಾಡಬೇಕಾಗುತ್ತದೆ ಎಂದು ಕಲ್ಬುರ್ಗಿ ಡಿಸಿ, ಎಸ್‍ಪಿ ಅವರಿಗೆ ದೂರವಾಣಿ ಮೂಲಕ ಹೇಳಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಮಗ ಎಂದು ಪ್ರಿಯಾಂಕ್ ಖರ್ಗೆಗೆ ಆದ್ಯತೆ ಕೊಡಬಾರದು. ಚಿಂಚೋಳಿಯಲ್ಲಿ ಬಿಜೆಪಿ ಅಭ್ಯರ್ಥಿ ಸೋತರೆ ಮತ್ತೆ ನಾನು ಯಾವುದೇ ಉಪಚುನಾವಣಾ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಸವಾಲು ಎಸೆದರು.

  • ಭಾರತೀಯ ಸೇನೆ ಮೋದಿ ಸ್ವತ್ತಲ್ಲ: ರಾಹುಲ್ ಗಾಂಧಿ ಕಿಡಿ

    ಭಾರತೀಯ ಸೇನೆ ಮೋದಿ ಸ್ವತ್ತಲ್ಲ: ರಾಹುಲ್ ಗಾಂಧಿ ಕಿಡಿ

    ನವದೆಹಲಿ: ಸರ್ಜಿಕಲ್ ಸ್ಟ್ರೈಕ್ ಎಂದರೆ ವಿಡಿಯೋ ಗೇಮ್ ಅಲ್ಲ ಎಂದು ಲೇವಡಿ ಮಾಡಿದ್ದ ನರೇಂದ್ರ ಮೋದಿ ಅವರಿಗೆ ತಿರುಗೇಟು ನೀಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮೋದಿ ಅವರ ಈ ಹೇಳಿಕೆ ಭಾರತೀಯ ಸೇನೆಗೆ ಮಾಡಿದ ಅವಮಾನ ಎಂದು ಆರೋಪಿಸಿದ್ದಾರೆ.

    ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಈ ಹಿಂದೆ ಅಧಿಕಾರದಲ್ಲಿದ್ದ ಪಕ್ಷವನ್ನಷ್ಟೇ ಲೇವಡಿ ಮಾಡಿಲ್ಲ. ದೇಶದ ಸೇನೆಯ ಬಗ್ಗೆಯೂ ಹಗುರವಾಗಿ ಮಾತನಾಡಿದ್ದಾರೆ. ಭಾರತೀಯ ಸೇನೆ ಕೇವಲ ಮೋದಿ ಅವರ ಸ್ವತ್ತಲ್ಲ. ಮೋದಿ ಅವರಂತೆ ನಾವು ಸೇನೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

    ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ದೇಶದ ಆರ್ಥಿಕ ಪರಿಸ್ಥಿತಿಯನ್ನ ಮೋದಿ ನಾಶಪಡಿಸಿದ್ದಾರೆ. ಮೋದಿ ಅವರು ಭರವಸೆ ನೀಡಿದ್ದ 2 ಕೋಟಿ ಉದ್ಯೋಗ ಎಲ್ಲಿ ಎಂದು ದೇಶದ ಯುವಕರು ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಅವರಿಂದ ಯಾವುದೇ ಉತ್ತರವಿಲ್ಲ. ರಾಷ್ಟದ ರೈತರಿಗೆ ಮೋದಿ ಏನೂ ಮಾಡಿಲ್ಲ. 5 ವರ್ಷಗಳ ಹಿಂದೆ ಮೋದಿ 15 ವರ್ಷ ಆಡಳಿತ ನಡೆಸಲಿ ಎಂದು ಹೇಳುತ್ತಿದ್ದರು. ಆದರೆ ಇದೀಗ ಕಾಂಗ್ರೆಸ್ ಮೋದಿ ಅವರನ್ನು ಕೆಡವಿದೆ ಎಂದರು. ಅಲ್ಲದೆ ತಮ್ಮ ಮೇಲೆ ಮಾಡಿರುವ ಭ್ರಷ್ಟಾಚಾರದ ಆರೋಪಗಳಿಗೆ ತನಿಖೆ ಎದುರಿಸಲು ನಾನು ಸಿದ್ಧ. ಶೀಘ್ರ ತನಿಖೆಗೆ ಆದೇಶ ನಡೆಸಿ ಎಂದು ಸವಾಲು ಎಸೆದರು.

    ಮೋದಿ ಹೇಳಿದ್ದೇನು?:
    ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜಸ್ಥಾನದ ಸಿಕಾರ್ ಚುನಾವಣಾ ಪ್ರಚಾರದಲ್ಲಿ ಮಾತನಾಡಿ, ಕಾಂಗ್ರೆಸ್ ಸುಳ್ಳುಗಳ ಸರಮಾಲೆಯನ್ನು ಹೇಳುತ್ತಿದೆ. ಮೊದಲು ಸರ್ಜಿಕಲ್ ಸ್ಟ್ರೈಕ್ ಬಗ್ಗೆ ವ್ಯಂಗ್ಯವಾಡಿದ್ದ ಕಾಂಗ್ರೆಸ್ ಈಗ ‘ಮೀ ಟೂ’ ಎಂದು ಹೇಳುತ್ತಿದೆ ಎಂದು ವ್ಯಂಗ್ಯವಾಡಿದ್ದರು.

    ಯುಪಿಎ ಅವಧಿಯಲ್ಲಿ ಕೇವಲ ಪೇಪರ್ ಗಳ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆದಿದೆ ಅಷ್ಟೇ. ಮೊದಲು ಯುಪಿಎ ಅವಧಿಯಲ್ಲಿ 3 ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು ಎಂದು ಹೇಳುತ್ತಿದ್ದ ಕಾಂಗ್ರೆಸ್, ಈಗ 6 ಬಾರಿ ನಡೆದಿತ್ತು ಎಂದು ಹೇಳುತ್ತಿದೆ. ಮುಂದಿನ ದಿನಗಳಲ್ಲಿ ಇದು 600 ಕೂಡ ಆಗಬಹುದು ಎಂದಿದ್ದರು. ಅಲ್ಲದೇ ಸರ್ಜಿಕಲ್ ಸ್ಟ್ರೈಕ್ ಎಂದರೆ ವಿಡಿಯೋ ಗೇಮ್ ಅಲ್ಲ ಎಂದು ಕುಟುಕಿದ್ದರು.

  • ಫೋಟೋಶಾಪ್ ಫೋಟೋ ಟ್ವೀಟ್ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ರಮ್ಯಾ

    ಫೋಟೋಶಾಪ್ ಫೋಟೋ ಟ್ವೀಟ್ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ರಮ್ಯಾ

    ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ, ನಟಿ ರಮ್ಯಾ, ಫೋಟೋ ಶಾಪ್ ಮಾಡಿದ್ದಫೋಟೋವನ್ನು ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಕಾಲೆಳೆಯಲು ಪ್ರಯತ್ನಿಸಿದ್ದು, ಆದರೆ ನೈಜ ಫೋಟೋವನ್ನು ಟ್ವೀಟ್ ಮಾಡುವ ಮೂಲಕ ನೆಟ್ಟಿಗರು ರಮ್ಯಾ ವಿರುದ್ಧ ಕಿಡಿಕಾರಿದ್ದಾರೆ.

    ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಮಕ್ಕಳೊಂದಿಗೆ ಇರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಆದರೆ ಈ ಫೋಟೋದಲ್ಲಿ ಹಿಟ್ಲರ್ ಅವರ ಫೋಟೋವನ್ನು ಫೋಟೋಶಾಪ್ ಮಾಡಲಾಗಿದೆ. ಮಗುವಿನೊಂದಿಗೆ ಇರುವ ಹಿಟ್ಲರ್ ಫೋಟೋವನ್ನು ಮಗುವಿನ ಕಿವಿ ಹಿಂಡುವಂತೆ ಫೋಟೋಶಾಪ್ ಮಾಡಲಾಗಿದೆ. ಇದೇ ರೀತಿ ಮೋದಿ ಅವರ ಪುಟ್ಟ ಬಾಲಕನೊಂದಿಗೆ ಇರುವ ಫೋಟೋಗೆ ಹೋಲಿಕೆ ಮಾಡಿ ನಿಮ್ಮ ಅಭಿಪ್ರಾಯ ಏನು ಎಂದು ಪ್ರಶ್ನಿಸಿ ರಮ್ಯಾ ಟ್ವೀಟ್ ಮಾಡಿದ್ದಾರೆ.

    ರಮ್ಯಾ ಅವರ ಟ್ವೀಟ್‍ಗೆ ತಿರುಗೇಟು ನೀಡಿ ಟ್ವೀಟ್ ಮಾಡಿರುವ ಹಲವು ಮಂದಿ ಹಿಟ್ಲರ್ ಮಗುವಿನೊಂದಿಗೆ ಇರುವ ಆಸಲಿ ಫೋಟೋ ಟ್ವೀಟ್ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಫೋಟೋಶಾಪ್ ಮಾಡಿದ ಫೋಟೋವನ್ನು ನೀವು ಟ್ವೀಟ್ ಮಾಡಿದ್ದು, ಆಸಲಿ ಫೋಟೋ ಇಲ್ಲಿದೆ ನೋಡಿ ಎಂದಿದ್ದಾರೆ. ಅಲ್ಲದೇ ಅಪ್ಪು ಎಂಬವರು ರಾಜೀವ್ ಗಾಂಧಿ ಅವರು ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಇರುವ ಫೋಟೋವನ್ನು ಹಿಟ್ಲರ್‍ಗೆ ಹೋಲಿಕೆ ಮಾಡಿ ತಿರುಗೇಟು ನೀಡಿದ್ದಾರೆ.

    ಇದೇ ವೇಳೆ ಹಲವರು ರಮ್ಯಾ ಅವರು ವೋಟ್ ಮಾಡದ ಬಗ್ಗೆ ಪ್ರಸ್ತಾಪ ಮಾಡಿ ಕಾಲೆಳೆದಿದ್ದು, ಮೊದಲು ನೀವು ವೋಟ್ ಮಾಡಿ ಮೇಡಂ. ಆ ಬಳಿಕ ಇತರರಿಗೆ ಬುದ್ಧಿ ಹೇಳಿ ಎಂದು ಬರೆದು ತರಾಟೆಗೆ ತೆಗೆದುಕೊಂಡಿದ್ದಾರೆ.

    https://twitter.com/17_appu/status/1122759483891994624

  • ‘ದಿ ಗ್ರೇಟ್’ ಖಲಿ ಬಿಜೆಪಿ ಪರ ಪ್ರಚಾರ – ಟಿಎಂಸಿಯಿಂದ ಆಯೋಗಕ್ಕೆ ದೂರು

    ‘ದಿ ಗ್ರೇಟ್’ ಖಲಿ ಬಿಜೆಪಿ ಪರ ಪ್ರಚಾರ – ಟಿಎಂಸಿಯಿಂದ ಆಯೋಗಕ್ಕೆ ದೂರು

    ಕೋಲ್ಕತ್ತಾ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಡಬ್ಲ್ಯೂಡಬ್ಲ್ಯೂಇ ರೆಸ್ಲಿಂಗ್ ಚಾಂಪಿಯನ್ ‘ದಿ ಗ್ರೇಟ್’ ಖಲಿ ಪ್ರಚಾರ ಮಾಡಿರುವ ವಿಚಾರವಾಗಿ ತೃಣಮೂಲಕ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

    ಖಲಿ ಸದ್ಯ ಅಮೆರಿಕ ಪೌರತ್ವವನ್ನು ಪಡೆದಿದ್ದು, ಒಬ್ಬ ವಿದೇಶಿ ಪ್ರಜೆ ಚುನಾವಣೆಯಲ್ಲಿ ಪ್ರಚಾರ ನಡೆಸಿ ಪ್ರಭಾವ ಬೀರುವುದು ನಿಯಮ ಬಾಹಿರವಾಗಿದೆ ಎಂದು ಟಿಎಂಸಿ ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ ತಿಳಿಸಿದೆ.

    ಪಶ್ಚಿಮ ಬಂಗಾಳದ ಜಾದವಪುರ ಬಿಜೆಪಿ ಅಭ್ಯರ್ಥಿ ಅನುಪಮ್ ಹಜ್ರಾ ನಾಮಪತ್ರ ಸಲ್ಲಿಸುವ ವೇಳೆ ಅಂದರೆ ಏಪ್ರಿಲ್ 26 ರಂದು ಖಲಿ ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಹಜ್ರಾ, ನಾವಿಬ್ಬರು ಸಹೋದರರಂತೆ ಎಂದು ಹೇಳಿದ್ದರು. ಅಂದಹಾಗೇ ಖಲೀ ಡಬ್ಲ್ಯೂಡಬ್ಲ್ಯೂಇ ರೆಸ್ಲಿಂಗ್ ನ ಹೆವಿವೇಯ್ಟ್ ವಿಭಾಗದಲ್ಲಿ ಚಾಂಪಿಯನ್ ಆದ ಮೊದಲ ಭಾರತೀಯರಾಗಿದ್ದಾರೆ. 2014ರ ಬಳಿಕ ಅವರು ಅಮೆರಿಕದಲ್ಲಿ ನೆಲೆಸಿ ಭಾರತ ವೀಸಾವನ್ನು ರದ್ದು ಪಡಿಸಿ ಅಲ್ಲಿನ ಕಾರ್ಡ್ ಪಡೆದಿದ್ದರು.

    ಕಳೆದ ಕೆಲ ದಿನಗಳ ಹಿಂದೆ ಬಾಂಗ್ಲಾದೇಶದ ಸೂಪರ್ ಸ್ಟಾರ್ ಫಿದೋರ್ಸ್ ಅಹ್ಮದ್ ಕೂಡ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪರ ಪ್ರಚಾರ ನಡೆಸಿದ್ದರು. ಈ ವೇಳೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ ನಟನ ಬಂಧನಕ್ಕೆ ಆಗ್ರಹಿಸಿತ್ತು. ಆ ಬಳಿಕ ನಟನ ವೀಸಾ ರದ್ದು ಪಡಿಸಿ ವಾಪಸ್ ಕಳುಹಿಸಲಾಗಿತ್ತು. ಅಲ್ಲದೇ ಕೇಂದ್ರ ಗೃಹ ಇಲಾಖೆ ನಟನ ವೀಸಾವನ್ನು ಬ್ಲಾಕ್ ಪಟ್ಟಿಗೆ ಸೇರಿಸಿತ್ತು. ಈ ವೇಳೆ ಬಾಂಗ್ಲಾ ವಲಸಿಗರನ್ನು ಓಲೈಕೆ ಮಾಡಲು ಟಿಎಂಸಿ ಈ ಮಾರ್ಗವನ್ನು ಬಳಸಿದೆ ಎಂದು ಬಿಜೆಪಿ ದೂರಿತ್ತು. ಅಲ್ಲದೇ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್‍ರನ್ನು ಕೂಡ ಟಿಎಂಸಿ ಪ್ರಚಾರಕ್ಕೆ ಕರೆಸಿಕೊಳ್ಳಲಿ ಎಂದು ಬಿಜೆಪಿ ಆಕ್ರೋಶ ಹೊರಹಾಕಿತ್ತು.

  • ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಇಳಿದ ‘ದಿ ಗ್ರೇಟ್’ ಖಲಿ

    ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಇಳಿದ ‘ದಿ ಗ್ರೇಟ್’ ಖಲಿ

    ಕೋಲ್ಕತ್ತಾ: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು, ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರ ಅಬ್ಬರ ಜೋರಾಗುತ್ತಿದೆ. ಸದ್ಯ ಪ್ರಚಾರ ಕಣಕ್ಕೆ ಡಬ್ಲ್ಯೂಡಬ್ಲ್ಯೂಇ ರೆಸ್ಲಿಂಗ್ ಚಾಂಪಿಯನ್ ದಿ ಗ್ರೇಟ್ ಖಲಿ ಪ್ರವೇಶ ಮಾಡಿದ್ದಾರೆ.

    ಪಶ್ಚಿಮ ಬಂಗಾಳದ ಜಾದವಪುರ ಬಿಜೆಪಿ ಅಭ್ಯರ್ಥಿ ಅನುಪಮ್ ಹಜ್ರಾ ನಾಮಪತ್ರ ಸಲ್ಲಿಸುವ ಮುನ್ನ ನಡೆದ ಬೃಹತ್ ಮೆರವಣಿಗೆಯಲ್ಲಿ ಖಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಹಜ್ರಾ, ನಾವಿಬ್ಬರು ಸಹೋದರರಂತೆ ಎಂದು ಹೇಳಿದ್ದರು. ಅಂದಹಾಗೇ ಖಲೀ ಡಬ್ಲ್ಯೂಡಬ್ಲ್ಯೂಇ ರೆಸ್ಲಿಂಗ್ ನ ಹೆವಿವೇಯ್ಟ್ ವಿಭಾಗದಲ್ಲಿ ಚಾಂಪಿಯನ್ ಆದ ಮೊದಲ ಭಾರತೀಯರಾಗಿದ್ದಾರೆ.

    ಖಲಿ ಅವರ ಮೊದಲ ಹೆಸರು ದಿಲೀಪ್ ಸಿಂಗ್ ರಾಣಾ ಆಗಿದ್ದು, 7 ಅಡಿ, 1 ಇಂಚು ಎತ್ತರವಿದ್ದು, ಸುಮಾರು 6 ಕಿಮೀ ದೂರ ನಡೆದ ಮೆರವಣಿಗೆಯಲ್ಲಿ ಖಲಿ ಭಾಗವಹಿಸಿದ್ದರು. ವಿಶ್ವ ವಿಖ್ಯಾತಿ ಪಡೆದಿರುವ ಖಲಿ ಅವರನ್ನು ನೋಡಲು ಅಪಾರ ಜನಸ್ತೋಮ ಮೆರವಣಿಗೆಯಲ್ಲಿ ಭಾಗವಹಿಸಿತ್ತು.

    ಮೆರವಣಿಗೆಯಲ್ಲಿ ಮಾತನಾಡಿದ ಖಲಿ, ಸ್ನೇಹಿತ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವ ಮಾಹಿತಿ ತಿಳಿದು ಭಾರತಕ್ಕೆ ಆಗಮಿಸಿದ್ದು, ಅನುಮಪಮ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು. ಅಲ್ಲದೇ ಹಜ್ರಾ ಯಾವ ಸಂದರ್ಭದಲ್ಲಿ ಕರೆದರೂ ನಾನು ಆಗಮಿಸುತ್ತೇನೆ ಎಂದು ತಿಳಿಸಿದರು. ಇದೇ ವೇಳೆ ಪ್ರಧಾನಿ ಮೋದಿ ಅವರನ್ನು ಹಾಡಿ ಹೊಗಳಿದ ಖಲಿ, ಮೋದಿ ದೇಶ ಕಂಡ ಉತ್ತಮ ಪ್ರಧಾನಿ. ದೇಶದ ಪಗ್ರತಿಗಾಗಿ ಅವರ ಪ್ರಗತಿ ಯೋಜನೆಗಳು ಪೂರಕವಾಗಿದ್ದು, ಮೋದಿಯನ್ನು ನೋಡಿ ನಾನು ಹೆಮ್ಮೆ ಪಡುತ್ತೇನೆ ಎಂದರು.

    2014 ರಲ್ಲಿ ಅನುಪಮ್ ರಲ್ಲಿ ಬೊಲ್ಪುರ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಲೋಕಸಭಾ ಚುನಾವಣೆ 4 ತಿಂಗಳು ಬಾಕಿ ಇದ್ದ ಸಂದರ್ಭದಲ್ಲಿ ಟಿಎಂಸಿ ಅಧ್ಯಕ್ಷೆ ಅನುಪಮ್‍ರನ್ನು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಲ್ಲಿ ಪಕ್ಷದಿಂದ ಉಚ್ಚಾಟನೆ ಮಾಡಿದ್ದರು. ಪರಿಣಾಮ ಬಿಜೆಪಿಗೆ ಸೇರ್ಪಡೆಯಾಗಿ ಅನುಪಮ್ ಜಾದವಪುರ ಕ್ಷೇತ್ರದಿಂದ ಟಿಕೆಟ್ ಪಡೆಯಲು ಯಶಸ್ವಿಯಾಗಿದ್ದಾರೆ. ಸದ್ಯ ಅನುಪಮ್ ವಿರುದ್ಧವಾಗಿ ಪ್ರಮುಖ ಬೆಂಗಾಲಿ ನಟಿ ಮಿಮಿ ಚಕ್ರವರ್ತಿ ಟಿಎಂಸಿಯಿಂದ ಸ್ಪರ್ಧಿಸುತ್ತಿದ್ದಾರೆ.