Tag: prime minister modi

  • ನಮ್ಮ ಪ್ರಧಾನಿ ಸಿಂಹದ ಮರಿ – ಶೋಭಾ ಕರಂದ್ಲಾಜೆ

    ನಮ್ಮ ಪ್ರಧಾನಿ ಸಿಂಹದ ಮರಿ – ಶೋಭಾ ಕರಂದ್ಲಾಜೆ

    ಉಡುಪಿ: ಅಭಿನಂದನ್ ವರ್ಧಮಾನ್ ಭಾರತಕ್ಕೆ ವಾಪಾಸ್ ಬಂದಿರುವುದು ಭಾರತಕ್ಕೆ ಸಿಕ್ಕ ರಾಜತಾಂತ್ರಿಕ ಗೆಲುವು. ನಮ್ಮ ಪ್ರಧಾನಿ ಮೋದಿ ಸಿಂಹದ ಮರಿ ಆಗಿರುವುದಕ್ಕೆ ಇದೆಲ್ಲ ಸಾಧ್ಯವಾಗುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

    ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಂಗ್ ಕಮಾಂಡರ್ ಅಭಿನಂದನ್ ಅಭಿನಂದನಾರ್ಹರು. ಸಾಹಸದ ಕೆಲಸ ಮಾಡಿ ಭಾರತಕ್ಕೆ ಬರುತ್ತಿದ್ದಾರೆ. ಜಿನೀವಾ ಒಪ್ಪಂದದ ಪ್ರಕಾರ ಸೈನಿಕರಿಗೆ ಹಾನಿ ಮಾಡಬಾರದು. ಆದರೆ ಪಾಕ್ ಹಲ್ಲೆ ನಡೆಸಿ ವಿಡಿಯೋ ಬಿಡುಗಡೆ ಮಾಡಿತು. ಭಾರತ ಒತ್ತಡ ತಂದ ಪರಿಣಾಮ ಅವರ ಬಿಡುಗಡೆ ಆಗುತ್ತಿದೆ. ಇದು ಸಂತಸ ತಂದಿದೆ ಎಂದರು.

    ದೇವೇಗೌಡರ ಕಾಲದಲ್ಲಿ ಶಾಂತಿ ನೆಲೆಸಿತ್ತು ಎಂಬ ಸಿಎಂ ಹೇಳಿಕೆಗೆ ಶೋಭಾ ತಿರುಗೇಟು ನೀಡಿದ ಅವರು, ಹಿಂದಿನ ಪ್ರಧಾನಿಗಳು ಯೋಚನೆ ಮಾಡಿದ್ದರೆ ಗಡಿ ಸಮಸ್ಯೆ ಬರುತ್ತಲೇ ಇರಲಿಲ್ಲ. ಭಯೋತ್ಪಾದಕರು ನಮ್ಮ ಊರುಗಳಿಗೂ ಹೊಕ್ಕುತ್ತಿರಲಿಲ್ಲ. ಹಿಂದಿನ ಪ್ರಧಾನಿಗಳು ಗಡಿ ಸಮಸ್ಯೆಯನ್ನು ಸಹಿಸಿದ್ದೇ ತಪ್ಪು. ಇವತ್ತಿನ ಪ್ರಧಾನಿ ದುಷ್ಕೃತ್ಯ ಸಹಿಸುವವರಲ್ಲ. ಉತ್ತರಕ್ಕೆ ಪ್ರತ್ಯುತ್ತರ ಕೊಡುವ ಸಿಂಹದ ಮರಿ ಮೋದಿ. ಸಿಎಂ ಕುಮಾರಸ್ವಾಮಿ ಹಗುರವಾದ ಮಾತನಾಡೋದು ಸರಿಯಲ್ಲ ಎಂದರು.

    ನಾವು ಪುಲ್ವಾಮಾ ಘಟನೆ ಸಹಿಸಬೇಕಿತ್ತಾ?
    ಜಮ್ಮು ಕಾಶಶ್ಮೀರದಲ್ಲಿ ನಡೆದ ಪುಲ್ವಾಮಾ ದಾಳಿಯನ್ನು ಸಹಿಸಿಕೊಳ್ಳಬೇಕಿತ್ತಾ? ಓಲೈಕೆ ರಾಜಕಾರಣಕ್ಕಾಗಿ ಏನೇನೋ ಮಾತನಾಡಬೇಡಿ. ಓಲೈಕೆ ರಾಜಕಾರಣ ಈಗ ಇಲ್ಲ. ದೇಶದಲ್ಲಿ ಈಗ ಸಿಂಹದ ಮರಿಯ ಅಧಿಕಾರ ನಡೆಸುತ್ತಿದೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾಶ್ಮೀರ ಸಮಸ್ಯೆ ಉಲ್ಭಣಿಸಲು ಬಿಜೆಪಿಯ ಸರ್ಕಾರದ ವೈಫಲ್ಯವೇ ಕಾರಣ : ಎಚ್‍ಡಿಡಿ

    ಕಾಶ್ಮೀರ ಸಮಸ್ಯೆ ಉಲ್ಭಣಿಸಲು ಬಿಜೆಪಿಯ ಸರ್ಕಾರದ ವೈಫಲ್ಯವೇ ಕಾರಣ : ಎಚ್‍ಡಿಡಿ

    ಹಾಸನ: ಕಾಶ್ಮೀರ ಸಮಸ್ಯೆ ಉಲ್ಭಣಿಸಲು ಬಿಜೆಪಿಯ ಸರ್ಕಾರದ ವೈಫಲ್ಯವೇ ಕಾರಣ ಎಂದು ಮಾಜಿ ಪ್ರಧಾನಿ ದೇವೇಗೌಡರು ಆರೋಪಿಸಿದ್ದಾರೆ.

    ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನೂ ಕೂಡ ದೇಶಕ್ಕೆ ಪ್ರಧಾನಿಯಾಗಿದ್ದೆ. ಆಗ ಕಾಶ್ಮೀರದ ಸಮಸ್ಯೆಗಳನ್ನು ನಿವಾರಣೆಗೆ ಬೇಕಾದ ಕ್ರಮಗಳನ್ನು ಸಾಕಷ್ಟು ಕೈಗೊಂಡಿದ್ದೆ. ಈಗಿನ ಸರ್ಕಾರಕ್ಕೆ ಹಿಂದೆಂದಿಗಿಂತಲೂ ಭಾರೀ ಬಹುಮತವನ್ನು ಈ ದೇಶದ ಜನತೆ ನೀಡಿದ್ದಾರೆ. ಯಾವ ಪ್ರಧಾನಿಗೂ ಈ ರೀತಿಯ ಬಲವನ್ನು ನೀಡಿರಲಿಲ್ಲ. ಆದರೆ ಅಧಿಕಾರಕ್ಕೆ ಬಂದ ಮೋದಿಯವರು ಕೇವಲ ವಿರೋಧ ಪಕ್ಷದವರನ್ನು ಟೀಕಿಸುವುದರಲ್ಲಿಯೇ ಕಳೆದರು ಎಂದರು.

    ಪ್ರಧಾನಿ ಮೋದಿ ಅವರು ಪ್ರಮುಖವಾಗಿ ಕಾಂಗ್ರೆಸ್ ಮತ್ತು ನೆಹರು ಅವರನ್ನು ಟೀಕಿಸುವುದಷ್ಟೆ ಮಾಡುತ್ತಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಕಾಶ್ಮೀರದಲ್ಲಿ ಮೂರು ಸರ್ಕಾರಗಳನ್ನ ಬದಲಾಯಿಸಲಾಗಿದೆ. ಕೊನೆಗೆ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, ಅನಂತರ ರಾಷ್ಟ್ರಪತಿ ಆಡಳಿತ ಹೇರಿದ್ದಾರೆ. ಅಲ್ಲಿಯ ಯುವಕರೆಲ್ಲ ಉದ್ಯೋಗ ಇಲ್ಲದೆ ಬೀದಿಗೆ ಇಳಿಯುವಂತೆ ಮಾಡಿದ್ದಾರೆ. ದೇಶದ ಇಂತಹ ಪರಿಸ್ಥಿತಿಯಲ್ಲಿ ಇರುವ ವೇಳೆ ಪ್ರಧಾನಿಯವರೆ ಇದು ವಿರೋಧ ಪಕ್ಷದವರನ್ನು ಟೀಕಿಸುವ ರೀತಿ ಉತ್ತಮ ಅಲ್ಲ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪೈಲಟ್ ಪ್ರಾಜೆಕ್ಟ್ ಈಗಷ್ಟೇ ಮುಗಿದಿದೆ, ರಿಯಲ್ ಬಾಕಿಯಿದೆ: ಪ್ರಧಾನಿ ಮೋದಿ

    ಪೈಲಟ್ ಪ್ರಾಜೆಕ್ಟ್ ಈಗಷ್ಟೇ ಮುಗಿದಿದೆ, ರಿಯಲ್ ಬಾಕಿಯಿದೆ: ಪ್ರಧಾನಿ ಮೋದಿ

    ನವದೆಹಲಿ: ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ಪಾಕ್ ಕಸ್ಟಡಿಯಲ್ಲಿರುವ ಕಮಾಂಡರ್ ಅಭಿನಂದನ್ ಬಿಡುಗಡೆಯಾಗುತ್ತಿರುವ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ.

    ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಯಾವುದೇ ಪ್ರಾಜೆಕ್ಟ್ ತಯಾರಿಸುವ ಮೊದಲು ಪೈಲಟ್ ಪ್ರಾಜೆಕ್ಟ್ ಮಾಡಲಾಗುತ್ತದೆ. ಆ ಪೈಲೆಟ್ ಪ್ರಾಜೆಕ್ಟ್ ಈಗಷ್ಟೇ ಮುಗಿದಿದೆ ಂದು ಹೇಳಿದರು.

    ಮೋದಿ ಈ ಮಾತನ್ನು ಹೇಳುತ್ತಿದ್ದಂತೆ ನೆರೆದಿದ್ದ ಸಭಿಕರು ಚಪ್ಪಾಳೆ ತಟ್ಟಿದರು. ನಂತರ ಮಾತು ಮುಂದುರಿಸಿದ ಮೋದಿ ಪೈಲಟ್ ಪ್ರಾಜೆಕ್ಟ್ ಈಗ ಪೂರ್ಣಗೊಂಡಿದ್ದು ರಿಯಲ್ ಬಾಕಿ ಇದೆ. ರಿಯಲ್ ಪ್ರಾಜೆಕ್ಟ್ ಪೂರ್ಣಗೊಳಿಸುತ್ತೇವೆ ಎಂದು ತಿಳಿಸಿದರು.

    ಮೋದಿ ಅವರು ವೇದಿಕೆ ಬರುತ್ತಿದಂತೆ ಚಪ್ಪಾಳೆ ತಟ್ಟುವ ಮೂಲಕ ಸ್ವಾಗತ ಕೋರಿದ ವಿಜ್ಞಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಮೋದಿ, ವಿಜ್ಞಾನ ದಿವಸ ಎಂದ ಕೂಡಲೇ ನಮಗೇ ರಾಮನ್ ಅವರ ಸಿದ್ಧಾಂತ ನೆನಪಾಗುತ್ತದೆ. ವಿಜ್ಞಾನಿಗಳು ದೇಶಕ್ಕೆ ನೀಡಿದ ಕೊಡುಗೆ ಅಪಾರ. ನಿಮ್ಮ ಪ್ರಯತ್ನ, ಕಾರ್ಯಗಳು ದೇಶಕ್ಕೆ ಲಾಭ ನೀಡಿದೆ ಎಂದರು.

    ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂದ ಪ್ರಧಾನಿಗಳು ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲಾಗುವುದು ಎಂದರು. ವಿಜ್ಞಾನವನ್ನು ಸಮಾಜದೊಂದಿಗೆ ಜೋಡಣೆ ಮಾಡಿ ಜನರ ಅಗತ್ಯಗಳನ್ನು ಪೂರೈಕೆ ಮಾಡಬೇಕು. ವಿಶ್ವಮಟ್ಟದಲ್ಲಿ ನಮ್ಮ ವಿಜ್ಞಾನದ ಬಗ್ಗೆ ಉತ್ತಮ ಅಭಿಪ್ರಾಯ ಇದೆ. ನಮ್ಮ ಮೌಲ್ಯ ಮತ್ತಷ್ಟು ಹೆಚ್ಚಾಗಿದೆ. ಅಂತರಿಕ್ಷ ಮಾನವನನ್ನು ಕಳಹಿಸುವ ನಮ್ಮ ನಮ್ಮ ಗುರಿ ತಲುಪಬೇಕಿದೆ ಎಂದು ಕರೆ ನೀಡಿದರು.

    ದೇಶ ವಿಜ್ಞಾನವನ್ನು ಮತ್ತಷ್ಟು ಸಫಲವಾಗುವಂತೆ ಮಾಡಲು ದೇಶದ ಐಐಎಸ್‍ಸಿಗಳಿಗೆ ಸ್ವಯತ್ತಾತೆಯನ್ನು ನೀಡುವ ಚಿಂತನೆ ಇದೆ. ಈ ಮೂಲಕ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು. ದೇಶದ ಪ್ರತಿಯೊಬ್ಬ ಜೀವನದ ಬದಲಾವಣೆಗೆ ವಿಜ್ಞಾನ, ತಂತ್ರಜ್ಞಾನದ ಕೊಡುಗೆ ಬೇಕಾಗಿದೆ. ವಿವಿಧ ಯೋಚನೆಗಳ ಮೂಲಕ ಪ್ರತಿಯೊಬ್ಬ ಕೊಡುಗೆ ಭಿನ್ನವಾಗಿರುತ್ತದೆ. ಭವಿಷ್ಯವನ್ನು ಮತ್ತಷ್ಟು ಉಜ್ವಲಗೊಳಿಸುತ್ತಾ ನಮ್ಮ ಸಂಶೋಧನೆಗಳು ಸಾಗಬೇಕಿದೆ. ಕೃಷಿ, ಸ್ವಚ್ಛತೆ, ತಂತ್ರಜ್ಞಾನ, ಇಂಧನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮತ್ತಷ್ಟು ಸಂಶೋಧನೆಗಳು ಆಗಬೇಕಿದ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಎಸ್‍ವೈ ಸೈನಿಕರ ರಕ್ತದ ಮೇಲೆ ರಾಜಕೀಯ ಮಾಡ್ತಿದ್ದಾರೆ: ದಿನೇಶ್ ಗುಂಡೂರಾವ್ ಕಿಡಿ

    ಬಿಎಸ್‍ವೈ ಸೈನಿಕರ ರಕ್ತದ ಮೇಲೆ ರಾಜಕೀಯ ಮಾಡ್ತಿದ್ದಾರೆ: ದಿನೇಶ್ ಗುಂಡೂರಾವ್ ಕಿಡಿ

    ಹುಬ್ಬಳ್ಳಿ: ದೇಶಕ್ಕಾಗಿ ಸೈನಿಕರು ತ್ಯಾಗ, ಹೋರಾಟ ಮಾಡಿದ್ದಾರೆ. ಆದರೆ ಇದನ್ನ ರಾಜಕೀಯ ಲಾಭ ಆಗುತ್ತೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದು, ಸೈನಿಕರ ರಕ್ತದ ಮೇಲೆ ರಾಜಕೀಯ ವ್ಯಾಪಾರ ಮಾಡ್ತಾರಾ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

    ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ಸೈನಿಕರ ವಿಚಾರದಲ್ಲಿ ಬಿಎಸ್‍ವೈ ಅವರ ಹೇಳಿಕೆಯಲ್ಲಿ ಅವರ ಸ್ವಾರ್ಥ ಎದ್ದು ಕಾಣುತ್ತಿದೆ. ಮೋದಿ ಅಲೆ ಇವತ್ತು ಮಾತ್ರ ಬಂದಿದೆಯಾ, ಮೊದಲು ಇರಲಿಲ್ಲವಾ? ದೇಶದಲ್ಲಿ ಧ್ವೇಷ ನಿರ್ಮಾಣ ಮಾಡುವ ಕಾರ್ಯ ನಡೆಸಲಾಗುತ್ತಿದ್ದು, ಇಡಿ ಹಾಗೂ ಐಟಿ ಇಲಾಖೆಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಇವರು ಬಂದ ಮೇಲೆ ನ್ಯಾಯಾಧೀಶರು ಕೂಡ ಮಾಧ್ಯಮದ ಮುಂದೆ ಬರಬೇಕಾಯಿತು ಎಂದು ಕಿಡಿಕಾರಿದರು.

    ದೇಶದ ಯೋಧರು ನಡೆಸುತ್ತಿರುವ ವೇಳೆ ನಾವು ಅವರ ಸರ್ಕಾರ ಹಾಗೂ ಯೋಧರ ಬೆಂಬಲಕ್ಕೆ ನಿಲ್ಲುತ್ತೇವೆ. ಆದರೆ ಇಂತಹ ವಿಚಾರಗಳನ್ನು ಬಿಜೆಪಿ ರಾಜಕೀಯಕ್ಕೆ ಬಳಕೆ ಮಾಡುತ್ತಿದೆ. ಅಮಿತ್ ಶಾ ಅವರು ಸಹ ಎಲ್ಲಿ ಚುನಾವಣಾ ಪ್ರಚಾರ ನಡೆಸಿದರೂ ಕೂಡ ಸೈನಿಕರ ಹೋರಾಟವನ್ನು ಚುನಾವಣಾ ಅಸ್ತ್ರವಾಗಿ ಬಳಸುವ ಮಾತು ಹೇಳುತ್ತಿದ್ದಾರೆ. ಈ ರೀತಿ ಹೇಳಿಕೆ ನೀಡುವುದನ್ನು ಬಿಜೆಪಿ ನಿಲ್ಲಿಸಬೇಕು. ಬಿಜೆಪಿ ಅಥವಾ ಆರ್ ಎಸ್‍ಎಸ್ ಗಡಿಯಲ್ಲಿ ಹೋರಾಟ ಮಾಡುತ್ತಿದ್ದರಾ ಎಂದು ಪ್ರಶ್ನಿಸಿದರು. ಅಲ್ಲದೇ ತಮ್ಮ ಹೇಳಿಕೆಗೆ ಬಿಎಸ್‍ವೈ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

    ಯಾರಾದರು ಬೇರೆ ರೀತಿ ಮಾತನಾಡಿದರೆ ಪಾಕಿಸ್ತಾನಕ್ಕೆ ಹೋಗಿ ಅಂತಾರೆ. ಆದರೆ ರಾಹುಲ್ ಗಾಂಧಿ, ಮೋದಿ, ನಾವು ಸೇರಿದಂತೆ ಎಲ್ಲರೂ ದೇಶ ಭಕ್ತರೆ. ದೇಶ ಭಕ್ತಿ ನಮ್ಮ ಗುತ್ತಿಗೆಯಲ್ಲಿ ಇದೆ ಎನ್ನುವಂತೆ ಮಾತನಾಡುವುದು ಸಾರ್ವಭೌಮತ್ವಕ್ಕೆ ಧಕ್ಕೆ ತಂದಂತೆ. ಆಡಳಿತ ಪಕ್ಷ ಎಲ್ಲರನ್ನೂ ಒಟ್ಟಿಗೆ ಕರೆಸಿಕೊಂಡು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದರು.

    ಮಾಚ್ 9ಕ್ಕೆ ರಾಹುಲ್ ಭೇಟಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಪ್ರವಾಸಕ್ಕೆ ಆಗಮಿಸುತ್ತಿದ್ದು, ಸಮಾವೇಶ ನಡೆಸಲು ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ಅವರು ಇದೇ ವೇಳೆ ಮಾಹಿತಿ ನೀಡಿದರು. ರಾಹುಲ್ ಗಾಂಧಿ ಆಗಮಿಸುತ್ತಿರುವ ಕಾರಣ ಕಾಂಗ್ರೆಸ್ ಸಮಾವೇಶಕ್ಕೆ ಸ್ಥಳ ವಿಕ್ಷಣೆ ಮಾಡುತ್ತಿದ್ದೇವೆ. ಹಾವೇರಿ, ಗದಗ ಹಾಗೂ ಧಾರವಾಡ ನಡುವೆ ಸ್ಥಳ ನಿಗದಿ ಮಾಡಲಿದ್ದೇವೆ ಎಂದು ಸ್ಪಷ್ಟನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಂಬಿ ಮಾಡಲು ಸಾಧ್ಯವಾಗದ ಜಿಲ್ಲೆಯ ಅಭಿವೃದ್ಧಿಗೆ ನಾನು ಚಾಲನೆ ನೀಡಿದ್ದೇನೆ: ಸಿಎಂ ಎಚ್‍ಡಿಕೆ

    ಅಂಬಿ ಮಾಡಲು ಸಾಧ್ಯವಾಗದ ಜಿಲ್ಲೆಯ ಅಭಿವೃದ್ಧಿಗೆ ನಾನು ಚಾಲನೆ ನೀಡಿದ್ದೇನೆ: ಸಿಎಂ ಎಚ್‍ಡಿಕೆ

    – ಆತ್ಮೀಯರ ನಡುವೆ ಬಿರುಕು ಮೂಡಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ

    ಮಂಡ್ಯ: ಜಿಲ್ಲೆಯ ಜನರ ಋಣದ ಭಾರ ನನ್ನ ಮೇಲಿದ್ದು, ಆ ಋಣವನ್ನು ತೀರಿಸುವ ಕಾರ್ಯ ನನ್ನ ಮೇಲಿದೆ. ಅಭಿವೃದ್ಧಿಯ ವಿಚಾರಕ್ಕೆ ಜಿಲ್ಲೆಗೆ ದೊಡ್ಡ ಅನಾಯ್ಯವಾಗಿದ್ದು, ಅಂಬರೀಶ್ ಅವರ ಕಾಲದಲ್ಲಿ ಮಾಡಲು ಸಾಧ್ಯವಾಗದ ಕಾರ್ಯಗಳಿಗೆ ನಾನು ಚಾಲನೆ ಕೊಟ್ಟಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

    ಮಂಡ್ಯ ಅಭಿವೃದ್ಧಿ ಯೋಜನೆಗಳ ಚಾಲನೆ ನೀಡುವ ಸಂಬಂಧ ಇಂದು ನಗರದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮ ಉದ್ದೇಶಿಸಿ ಸಿಎಂ ಕುಮಾರಸ್ವಾಮಿ ಅವರು ಮಾತನಾಡಿದರು. ಅಂಬರೀಶ್ ಹಾಗೂ ನಾನು ಆತ್ಮೀಯ ಸ್ನೇಹಿತರು. ಅವರು ನಿಧನ ಹೊಂದಿದ್ದ ಸಂದರ್ಭದಲ್ಲಿ ಅವರಿಗೆ ನೀಡಿದ ಗೌರವ ಇಡೀ ಜಿಲ್ಲೆಗೆ ನೀಡಿದ ಗೌರವ. ಇದನ್ನು ಅಂಬರೀಶ್ ಅಭಿಮಾನಿಗಳು ಅರ್ಥ ಮಾಡಿಕೊಳ್ಳಬೇಕು. ಅಂದು ಮಂಡ್ಯ ಜಿಲ್ಲೆಗೆ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಕರೆತರುವುದು ಬೇಡ ಎಂದವರು ಇಂದು ಈ ಮಣ್ಣಿನ ಬಗ್ಗೆ ಪ್ರೀತಿ ತೋರಿಸುತ್ತಿದ್ದಾರೆ. ಅಂಬರೀಶ್ ಅವರಿಂದ ಮಾಡಲಾಗದ ಅಭಿವೃದ್ಧಿ ಕಾರ್ಯಗಳನ್ನು ನಾನು ಮಾಡುತ್ತಿದ್ದು, ನಿಮ್ಮ ಋಣವನ್ನು ತೀರಿಸುವ ಕಾರ್ಯವನ್ನು ಮಾಡಿದ್ದೇನೆ ಎಂದರು.

    ನನ್ನ ಕುಟುಂಬವನ್ನು ಇಂದು ಬೀದಿಗೆ ಎಳೆದಿದ್ದಾರೆ. ನಾನು ಎಂದಾದರೂ ನನ್ನ ಮಗನನ್ನು ರಾಜಕೀಯಕ್ಕೆ ಕರೆತರುವ ಬಗ್ಗೆ ಮಾತನಾಡಿದ್ದೇನಾ ಎಂದು ಪ್ರಶ್ನಿಸಿದರು. ಅಲ್ಲದೇ ಜಿಲ್ಲೆಯ ಅಭಿವೃದ್ಧಿ ನನ್ನ ಜೀವನದ ಗುರಿಯಾಗಿದ್ದು, ಕಳೆದ ಚುನಾವಣೆಯಲ್ಲಿ 7 ಸ್ಥಾನಗಳಲ್ಲಿ ನಮ್ಮನ್ನು ಗೆದ್ದು ತಂದಿದ್ದೀರಿ. ನಿಮ್ಮ ಆಶೀರ್ವಾದದಿಂದ ಈ ಜಾಗದಲ್ಲಿ ನಿಂತಿದ್ದೇನೆ. ನನ್ನ ಕೊನೆಯ ಉಸಿರು ಇರುವವರೆಗೂ ಇದನ್ನು ಮರೆಯಲ್ಲ. ಕೇವಲ ಮಂಡ್ಯ ಜಿಲ್ಲೆಗಾಗಿ ಕಾರ್ಯಕ್ರಮ ಮಾಡುತ್ತೇನೆ ಎಂದು ಸಣ್ಣತನದ ಮಾತನಾಡುತ್ತಾರೆ. ಆದರೆ ಬೇರೆ ಬೇರೆ ಜಿಲ್ಲೆಗಳಿಗೆ ಯಾವ ಕೊಡುಗೆ ನೀಡಿದ್ದೇನೆ ನನಗೆ ಗೊತ್ತಿದೆ ಎಂದು ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಸ್ತಾಪಿಸಿ ತಮ್ಮ ವಿರುದ್ಧದ ಟೀಕೆಗಳಿಗೆ ಉತ್ತರಿಸಿದರು.

    ಬದುಕಿರುವುದೇ ನಿಮಗಾಗಿ: ಮತ್ತೆ ತಮ್ಮ ಬದುಕಿನ ಕುರಿತು ಪ್ರಸ್ತಾಪ ಮಾಡಿದ ಸಿಎಂ ಎಚ್‍ಡಿಕೆ ನಾನು ಬದುಕಿರುವುದು ನಿಮಗಾಗಿ, ನಾಡಿನ ಜನತೆಗಾಗಿ ಎಂದರು. ಅಲ್ಲದೇ ರೈತರ ಸಾಲಮನ್ನಾ ವಿಚಾರದಲ್ಲಿ ನಾನು ಎಂದು ಸುಳ್ಳು ಹೇಳಿಲ್ಲ. ನಿನ್ನೆ ಬೆಳಗ್ಗೆ ಹತ್ತು ಗಂಟೆವರೆಗೂ 6 ಲಕ್ಷದ 40 ಸಾವಿರ ರೈತ ಕುಟುಂಬಗಳಿಗೆ 4 ಸಾವಿರದ 103 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೇನೆ. ರಾಜ್ಯ ಸರ್ಕಾರದ ಖಜಾನೆಯಲ್ಲಿ ಇನ್ನೂ 6 ಸಾವಿರ ದುಡ್ಡು ಇಟ್ಟಿದ್ದೇನೆ. ಕೇಂದ್ರ ಪ್ರಧಾನಿ ರೀತಿ ನಾನು ಮಾತನಾಡಲ್ಲ ಎಂದು ಕಿಡಿಕಾರಿದರು.

    ರೈತರ ಸಾಲಮನ್ನಾ ಮಾಡಿದರೆ ಮಾತ್ರ ರೈತರು ಆರಾಮವಾಗಿ ಇರುತ್ತಾರೆ ಎಂಬ ಭ್ರಮೆ ನನಗಿಲ್ಲ. ಸಮಗ್ರ ಅಭಿವೃದ್ಧಿಗಾಗಿ ನಾನು ದುಡಿಯುತ್ತೇನೆ. ಗಿರವಿ ಇಟ್ಟಿರುವ ಒಡವೆಗಳನ್ನ ಬಿಡಿಸಿಕೊಡುವ ನಿಟ್ಟಿನಲ್ಲಿ ಹೊಸ ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದೆ. ಯೋಜನೆ ಮುಗಿಯುವವರೆಗೂ ಯಾವುದೇ ಮಾನಸಿಕ ಹಿಂಸೆ ಕೊಟ್ಟರೂ ಅಧಿಕಾರದಲ್ಲಿ ಇರುತ್ತೇನೆ. ಆದರೆ ಜಿಲ್ಲೆಯ ಟಿಕೆಟ್ ವಿಚಾರದಲ್ಲಿ ಈ ವೇದಿಕೆಯಲ್ಲಿ ಪ್ರಸ್ತಾಪ ಮಾಡಲ್ಲ. ಅದಕ್ಕೆ ರಾಜಕೀಯ ವೇದಿಕೆ ಇದೆ. ಆಗ ಮಾತನಾಡುತ್ತೇನೆ ಎಂದರು.

    ಜಿಲ್ಲೆಯ ಜನ ಹಣ ಪಡೆದು ಮೋಸ ಹೋಗುವುದಿಲ್ಲ. ಯಾವುದೇ ಆಮಿಷಗಳಿಗೆ ಒಳಗಾಗಲ್ಲ. ಇದೇ ರೀತಿ ನಿಮ್ಮ ಬೆಂಬಲ ನಮಗೆ ನೀಡಿ ಯಾವುದೇ ಕಾರಣಕ್ಕೂ ಅನುಕಂಪದ ಮಾತುಗಳಿಗೆ ಮರುಳಾಗಬೇಡಿ. ನಿಜವಾಗಿ ಕೆಲಸ ಮಾಡುವವರಿಗೆ ಅವಕಾಶ ಮಾಡಿಕೊಡಿ ಎಂದು ಪರೋಕ್ಷವಾಗಿ ಸುಮಲತಾ ಅಂಬರೀಶ್ ಅವರಿಗೆ ಟಾಂಗ್ ಕೊಟ್ಟರು.

    ಕನ್ನಡಿಗ ಮತ್ತೊಮ್ಮೆ ಪ್ರಧಾನಿ: ರಾಜ್ಯದಲ್ಲಿ 20 ಸ್ಥಾನಗಳಿಗೆ ಹೆಚ್ಚು ಸ್ಥಾನ ಪಡೆದುಕೊಂಡರೆ ದೆಹಲಿಯಲ್ಲಿ ಮತ್ತೊಮ್ಮೆ ಕನ್ನಡಿಗರೊಬ್ಬರು ಪ್ರಧಾನಿಯಾಗ ಬಹುದು ಎಂದು ಹೇಳಿದ ಕುಮಾರಸ್ವಾಮಿ ಅವರು ಪರೋಕ್ಷವಾಗಿ ಎಚ್‍ಡಿಡಿ ಮತ್ತೊಮ್ಮೆ ಪ್ರಧಾನಿ ಆಗುವ ವಿಚಾರವನ್ನು ಬಿಚ್ಚಿಟ್ಟರು. ಅಲ್ಲದೇ ದೇವೇಗೌಡರು ಪ್ರಧಾನಿ ಆಗಿದ್ದಾಗ ಒಂದೇ ಒಂದು ಯೋಧರ ಕುಟುಂಬ ಅನಾಥರಾಗುವ ಘಟನೆ ನಡೆಯಲಿಲ್ಲ. ರೈತರ ಸಾಲಮನ್ನಾ ಮಾಡುವುದು ಪಾಪದ ಕೆಲಸ ಎನ್ನುವ ಪ್ರಧಾನಿಗೆ ಸರಿಯಾದ ಉತ್ತರ ಕೊಡಿ ಎಂದರು.

    ಗುರು ಪತ್ನಿಗೆ ನಾಳೆಯೇ ಉದ್ಯೋಗ: ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹುತಾತ್ಮ ಗುರು ಪತ್ನಿ ಕಲಾವತಿಯರಿಗೆ ಸಂತ್ವಾನ ಹೇಳಿದ ಸಿಎಂ ಕುಮಾರಸ್ವಾಮಿ ಅವರು, ಕಲಾವತಿಯವರು ಗೌರವಯುತವಾಗಿ ಬದುಕು ನಡೆಸಲು ಕೆಲಸ ನೀಡುವ ಆಶ್ವಾಸನೆ ನೀಡಿದ್ದೆ. ಅದರಂತೆ ಅವರಿಗೆ ಬೆಂಗಳೂರಿಗೆ ಬರಲು ಹೇಳಿದ್ದೇನೆ. ನಾಳೆಯೇ ಕೆಲಸ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮತ್ತೆ ಮೇ ತಿಂಗಳಲ್ಲಿ ಬರುತ್ತೇನೆ – ಕೊನೆಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮೋದಿ ವಿಶ್ವಾಸ

    ಮತ್ತೆ ಮೇ ತಿಂಗಳಲ್ಲಿ ಬರುತ್ತೇನೆ – ಕೊನೆಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮೋದಿ ವಿಶ್ವಾಸ

    ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಯ ಬಳಿಕ ಮತ್ತೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಬರುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಇಂದು ನಡೆದ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ನಡೆಯುವುದರಿಂದ ಎರಡು ತಿಂಗಳಿನಲ್ಲಿ ಮನ್ ಕೀ ಬಾತ್ ನಡೆಯುವುದಿಲ್ಲ. ಮೇ ತಿಂಗಳ ಕೊನೆಯ ವಾರದಲ್ಲಿ ಕಾರ್ಯಕ್ರಮ ಮತ್ತೆ ಪ್ರಸಾರವಾಗಲಿದೆ ಎಂದು ಹೇಳಿ ಮತ್ತೆ ತಾವೇ ಅಧಿಕಾರಕ್ಕೆ ಬರುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    52ನೇ ಆವೃತ್ತಿಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ತಮ್ಮ ಅನುಭವವನ್ನು ತಿಳಿಸಿದರು. ಅಲ್ಲದೇ ಈ ಕಾರ್ಯಕ್ರಮ ಅದ್ಭುತ ಹಾಗೂ ಉತ್ಕøಷ್ಟ ಅನುಭವ ನೀಡಿದೆ ಎಂದು ಹೇಳಿರುವ ಪ್ರಧಾನಿ ಮೋದಿ ಅವರು, ಕಾರ್ಯಕ್ರಮದಲ್ಲಿ ಯೋಧರ ಸ್ಮಾರಕ ನಿರ್ಮಾಣ, ಪುಲ್ವಾಮಾ ದಾಳಿ, ಮೊರಾರ್ಜಿ ದೇಸಾಯಿ ಅವರನ್ನ ನೆನೆದರು.

    ಸ್ವಾತಂತ್ರ್ಯ ನಂತರ ಇಷ್ಟು ವರ್ಷಗಳವರೆಗೂ ಯುದ್ಧ ಸ್ಮಾರಕ್ಕಾಗಿ ನಾವೆಲ್ಲ ಕಾಯುತ್ತಿದ್ದೆವು. ನಾಳೆ ಕೋಟ್ಯಂತರ ದೇಶವಾಸಿಗಳ ರಾಷ್ಟ್ರೀಯ ಯುದ್ಧ ಸ್ಮಾರಕದ ಕನಸು ನನಸಾಗುತ್ತಿದೆ. 125 ಕೋಟಿ ದೇಶ ವಾಸಿಗಳ ರಕ್ಷಣೆಗೆ ಯೋಧರು ನಿಂತಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಅಲ್ಲದೇ ಜಾತಿ, ಕೋಮು, ಪ್ರಾದೇಶಿಕ ಬೇಧ ಮರೆತು ದೇಶಕ್ಕಾಗಿ ಒಂದಾಗಬೇಕಿದೆ ಕರೆ ನೀಡಿದರು.

    ಮುಂದಿನ ತಿಂಗಳು ಜೆಮ್‍ಶೆಡ್ ಜಿ ಟಾಟಾ ಅವರ ಹುಟ್ಟು ಹಬ್ಬ ಇರುವುದರಿಂದ ಅವರ ಹೆಸರನ್ನು ಪ್ರಸ್ತಾಪಿಸಿ ದೇಶಕ್ಕೆ ಒಳ್ಳೆಯ ಅಡಿಪಾಯ ಹಾಕಿದ್ದಾರೆ ಎಂದು ಹೇಳಿದರು. ಇದೇ ವೇಳೆ ಪ್ರಧಾನಿಯಾಗಿ ಮೊರಾರ್ಜಿ ದೇಸಾಯಿ ಅವರ ಕೊಡುಗೆ ಅಪಾರ. ಪ್ರಜಾಪ್ರಭುತ್ವದಲ್ಲಿ ರಕ್ಷಣೆಗಾಗಿ ತುರ್ತು ಪರಿಸ್ಥಿತಿಯಲ್ಲಿ ಚಳುವಳಿ ನಡೆಸಿದ್ದರು ಎಂದು ಸ್ಮರಿಸಿದರು.

    ಮುಂದಿನ ಕೆಲವು ದಿನಗಳಲ್ಲಿ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಶುಭಕೋರಿದರು. ತಮ್ಮ ಆಡಳಿತ ಅವಧಿಯಲ್ಲಿ ಜಾರಿ ಮಾಡಲಾದ ಹಲವು ಯೋಜನೆಗಳನ್ನು ಪ್ರಸ್ತಾಪ ಮಾಡಿ ದೇಶದ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಕಾರ್ಯನಿರ್ವಹಿಸಿದೆ ಎಂದರು.

  • ‘ಪುಲ್ವಾಮಾ ದಾಳಿ ಬಳಿಕ ಮೋದಿ ಆಹಾರವನ್ನೇ ಸೇವಿಸಿರಲಿಲ್ಲ’

    ‘ಪುಲ್ವಾಮಾ ದಾಳಿ ಬಳಿಕ ಮೋದಿ ಆಹಾರವನ್ನೇ ಸೇವಿಸಿರಲಿಲ್ಲ’

    – ತಡವಾಗಿ ಮಾಹಿತಿ ತಿಳಿಸಿದ್ದಕ್ಕೆ ಕೋಪಗೊಂಡಿದ್ದ ಮೋದಿ
    – ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ಸಿನಿಂದ ಸುಳ್ಳು ಆರೋಪ: ಬಿಜೆಪಿ

    ನವದೆಹಲಿ: ಪುಲ್ವಾಮಾ ದಾಳಿಯ ಬಗ್ಗೆ ಮಾಹಿತಿ ತಿಳಿದ ಬಳಿಕ ಪ್ರಧಾನಿ ಮೋದಿ ಆಹಾರವನ್ನೇ ಸ್ವೀಕರಿಸಲಿಲ್ಲ ಎಂದು ಪ್ರಧಾನಿ ಕಚೇರಿಯ ಮೂಲಗಳನ್ನು ಆಧರಿಸಿ ಮಾಧ್ಯಮವೊಂದು ವರದಿ ಮಾಡಿದೆ.

    ಪುಲ್ವಾಮಾ ದಾಳಿ ನಡೆದ ಬಳಿಕವೂ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರು ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ದಾಳಿ ವಿಚಾರವನ್ನು ತಡವಾಗಿ ತಿಳಿಸಿದ್ದಕ್ಕೆ ಮೋದಿ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದರು ಎಂದು ಮೂಲಗಳು ತಿಳಿಸಿವೆ.

    ಫೆ.14 ರಂದು ಪ್ರಧಾನಿ ಮೋದಿ ಪೂರ್ವ ನಿಗದಿಯಾದ ಕಾರ್ಯಕ್ರಮದಂತೆ ಬೆಳಗ್ಗೆ ಪಕ್ಷದ ಸಮಾವೇಶದಲ್ಲಿ ಭಾಗವಹಿಸಲು ಉತ್ತಾರಖಂಡ್‍ಗೆ ಆಗಮಿಸಿದ್ದರು. ಬೆಳಗ್ಗೆ ಡೆಹ್ರಾಡೂನ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ 7:05ಕ್ಕೆ ರುದ್ರಪುರಕ್ಕೆ ಹೋಗಬೇಕಿತ್ತು. ಆದರೆ ಹವಾಮಾನ ವೈಪರಿತ್ಯದಿಂದಾಗಿ ಮಿಗ್-17 ಸೇನಾ ಹೆಲಿಕಾಪ್ಟರ್ ಟೇಕಾಫ್ ಆಗಿರಲಿಲ್ಲ. 11 ಗಂಟೆಗೆ ಹೆಲಿಕಾಪ್ಟರ್ ಟೇಕಾಫ್ ಆಗಿ ಮಧ್ಯಾಹ್ನ 12.30ಕ್ಕೆ ಬಿಜ್ನೋರ್ ಜಿಲ್ಲೆಯ ಬಿಕ್ಕವಾಲಾಕ್ಕೆ ಬಂದು ಅಲ್ಲಿಂದ ರಸ್ತೆ ಮೂಲಕ ಪ್ರಯಾಣ ಬೆಳೆಸಿ `ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನ’ ಕ್ಕೆ ಆಗಮಿಸಿದ್ದರು.

    ಉತ್ತರಾಖಂಡ್‍ನ ರಾಮಗಂಗಾ ನದಿ ತಟದಲ್ಲಿರುವ ಜಿಮ್ ಕಾರ್ಬೆಟ್ ಪಾರ್ಕ್ ಹುಲಿಗಳಿಗೆ ಪ್ರಸಿದ್ಧವಾಗಿದ್ದು ಇಲ್ಲಿ ಟೈಗರ್ ಸಫಾರಿ, ಇಕೋ ಟೂರಿಸಂ ಹಾಗೂ ರೆಸ್ಕ್ಯೂ ಸೆಂಟರ್ ಉದ್ಘಾಟನೆ ಮಾಡಿದ ಬಳಿಕ ಕಾಲಾಘರ್ ಧಿಕಾಲಾ ಅರಣ್ಯಕ್ಕೆ ಮೊಟಾರ್ ಬೋಟ್ ಮೂಲಕ ತಲುಪಿದ್ದರು.

    ನಿಗದಿಯಾದ ವೇಳಾಪಟ್ಟಿಯ ಪ್ರಕಾರ ಸಂಜೆ ರುದ್ರಾಪೂರದಲ್ಲಿ ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮೋದಿ ಮಾತನಾಡಬೇಕಿತ್ತು. ಆದರೆ ಈ ವೇಳೆ ಪುಲ್ವಾಮಾ ದಾಳಿಯ ಬಗ್ಗೆ ಮಾಹಿತಿ ಲಭಿಸುತ್ತದೆ. ಪರಿಣಾಮ ಸಮಾರಂಭವನ್ನು ರದ್ದು ಮಾಡಿ, ರಾಷ್ಟ್ರಿಯ ಭದ್ರತಾ ಸಲಹೆಗಾರ ಹಾಗೂ ಗೃಹ ಸಚಿವ ರಾಜ್‍ನಾಥ್ ಸಿಂಗ್, ಜಮ್ಮು ಕಾಶ್ಮೀರದ ರಾಜ್ಯಪಾಲರೊಂದಿಗೆ ಮಾತನಾಡಿ ಮಾಹಿತಿ ಪಡೆದಿದ್ದರು.

    ದಾಳಿಯ ನಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಡವಾಗಿ ಮಾಹಿತಿ ಲಭಿಸಿತ್ತು. ಇದರಿಂದ ಮೋದಿ ಅಸಮಾಧಾನಗೊಂಡಿದ್ದರು. ದಾಳಿ ಬಗ್ಗೆ ಮಾಹಿತಿ ತಿಳಿದ ಬಳಿಕ ಮೋದಿ ಆಹಾರ ಸೇವಿಸಲಿಲ್ಲ. ದೆಹಲಿಗೆ ಮರಳಲು ಹೆಲಿಕಾಪ್ಟರ್ ಹಾರಾಟ ನಡೆಸಲು ಅನುಕೂಲಕರ ವಾತಾವರಣ ಇಲ್ಲದ ಕಾರಣ ಸಂಜೆ ರಾಮ್‍ನಗರದಿಂದ ಬರೇಲಿಯವರೆಗೆ ರಸ್ತೆ ಮಾರ್ಗದಲ್ಲಿ ಆಗಮಿಸಿ ಬಳಿಕ ರಾತ್ರಿ ದೆಹಲಿಗೆ ಮೋದಿ ಆಗಮಿಸಿದ್ದರು ಮೂಲಗಳು ತಿಳಿಸಿವೆ.

    ಪುಲ್ವಾಮಾ ದಾಳಿ ನಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಶೂಟಿಂಗ್ ನಲ್ಲಿ ತೊಡಗಿದ್ದರು ಎಂದು ಕಾಂಗ್ರೆಸ್ ಆರೋಪ ಮಾಡಿದ್ದು, ಯೋಧರ ಮೇಲೆ ದಾಳಿ ನಡೆದರು ಕೂಡ ಶೂಟಿಂಗ್‍ನಲ್ಲಿ ಮೋದಿ ಬ್ಯುಸಿ ಆಗಿದ್ದರು, ಇಂತಹ ಪ್ರಧಾನಿಯನ್ನು ನೋಡಿದ್ದಿರಾ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಪ್ರಶ್ನಿಸಿದ್ದರು.

    ದಾಳಿ ನಡೆದ ದಿನ ಮೋದಿಅವರು ಸಂಜೆ 7 ಗಂಟೆವರೆಗೂ ಶೂಟಿಂಗ್ ನಡೆಸಿದ್ದರು. ಅಲ್ಲದೇ ದಾಳಿಯ ಬಳಿಕವೂ ರಾಯ್‍ಪುರ ಗೆಸ್ಟ್ ಹೌಸ್‍ನಲ್ಲಿ ಮೋದಿ ಟೀ ಮತ್ತು ಸಮೋಸ ಸೇವಿಸಿದ್ದರು ಎಂದು ಆರೋಪಿಸಿದ್ದರು. ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರು ಕೂಡ ಕಾಂಗ್ರೆಸ್ ಆರೋಪವನ್ನು ತಿರಸ್ಕರಿಸಿದ್ದು ರಾಜಕೀಯ ಲಾಭಕ್ಕಾಗಿ ಸುಳ್ಳು ಆರೋಪ ಮಾಡುತ್ತಿದೆ ಎಂದು ತಿರುಗೇಟು ನೀಡಿದ್ದಾರೆ. ಇದುವರೆಗೂ ಶೂಟಿಂಗ್ ನಲ್ಲಿ ಮೋದಿ ಭಾಗವಹಿಸಿದ್ದ ಬಗ್ಗೆ ವಾಹಿನಿ ಯಾವುದೇ ಅಧಿಕೃತ ಹೇಳಿಕೆಯನ್ನ ನೀಡಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿಎಂ ಎಚ್‍ಡಿಕೆ ಗುಮಾಸ್ತ, ಸಿದ್ದರಾಮಯ್ಯ ಸೂಪರ್ ಸಿಎಂ, ಪರಮೇಶ್ವರ್ ಅರ್ಧ ಸಿಎಂ ಅಂತಾರೆ! – ಸಮ್ಮಿಶ್ರ ಸರ್ಕಾರವನ್ನ ಕುಟುಕಿದ ಶಾ

    ಸಿಎಂ ಎಚ್‍ಡಿಕೆ ಗುಮಾಸ್ತ, ಸಿದ್ದರಾಮಯ್ಯ ಸೂಪರ್ ಸಿಎಂ, ಪರಮೇಶ್ವರ್ ಅರ್ಧ ಸಿಎಂ ಅಂತಾರೆ! – ಸಮ್ಮಿಶ್ರ ಸರ್ಕಾರವನ್ನ ಕುಟುಕಿದ ಶಾ

    ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಸಿದ್ಧತೆಯಲ್ಲಿರುವ ಬಿಜೆಪಿ ಇಂದು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಮುಂದಾಳತ್ವದಲ್ಲಿ ಚಿಕ್ಕಬಳ್ಳಾಪುರದಲ್ಲಿ ಶಕ್ತಿ ಸಮಾವೇಶ ನಡೆಸಿ ಚುನಾವಣೆಗೆ ರಣಕಹಳೆ ಮೊಳಗಿಸಿತು.

    ಸಮಾವೇಶ ಉದ್ಘಾಟಿಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ದೋಸ್ತಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಇಲ್ಲಿ ಸಿಎಂ ಕುಮಾರಸ್ವಾಮಿ ಅವರು ಗುಮಾಸ್ತ ಅಂತಾರೆ, ಸಿದ್ದರಾಮಯ್ಯ ಸೂಪರ್ ಸಿಎಂ, ಪರಮೇಶ್ವರ್ ಅರ್ಧ ಸಿಎಂ ಅಂತಾರೆ. ಕರ್ನಾಟಕದಲ್ಲಿ ಎರಡೂವರೆ ಸಿಎಂಗಳು ಅಧಿಕಾರದಲ್ಲಿದ್ದಾರೆ ಎಂದು ಲೇವಡಿ ಮಾಡಿದರು.

    ರಾಜ್ಯದಲ್ಲಿ ಸರ್ಕಾರದ ರಚಿಸಿದ ವೇಳೆ ಸಂಪೂರ್ಣ ಸಾಲಮನ್ನಾ ಮಾಡುತ್ತೇವೆ ಎಂದು ಸಿಎಂ ಹೇಳಿದ್ದರು. ಆದರೆ ಇದುವರೆಗೂ ಭರವಸೆ ನೀಡಿದ್ದ ಸಂಪೂರ್ಣ ಸಾಲಮನ್ನಾ ಆಗಿಲ್ಲ. ಆದರೆ ನಮ್ಮನ್ನು ಸಾಲಮನ್ನಾ ಮಾಡಿ ಎಂದು ಹೇಳುತ್ತಾರೆ. ಮೊದಲು ರಾಜ್ಯದಲ್ಲಿ ಸಾಲಮನ್ನಾ ಮಾಡಿ ಮಾತಾಡಿ ಎಂದು ರಾಹುಲ್ ಗಾಂಧಿ ಅವರಿಗೆ ಸವಾಲು ಎಸೆದರು.

    ರಾಷ್ಟ್ರದಲ್ಲಿ ಆಗುತ್ತಿರುವ ಮಹಾಘಟ ಬಂಧನ ಅಧಿಕಾರಕ್ಕೆ ಬರಲ್ಲ. ಮಹಾಘಟ ಬಂಧನಕ್ಕೆ ದೇಶವನ್ನು ರಕ್ಷಿಸಲು ಸಾಧ್ಯವಿಲ್ಲ. ಅವರ ಸರ್ಕಾರ ಬಂದರೆ ದೇಶವನ್ನು ಮುನ್ನಡೆಸಲು ಸಾಧ್ಯವಿಲ್ಲ. ಈ ಘಟಬಂಧನದ ಸರ್ಕಾರ ಬಡವರನ್ನು ಮೇಲೆತ್ತಲು ಸಾಧ್ಯವಿಲ್ಲ ಎಂದರು.

    ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿಯೂ ಬಿಎಸ್ ಯಡಿಯೂರಪ್ಪ ಅವರು ಅತಿಹೆಚ್ಚು ಸ್ಥಾನ ಗೆದ್ದರು. ಆದರೆ ಅಪವಿತ್ರ ಮೈತ್ರಿಯಿಂದಾಗಿ ನಾವು ವಿರೋಧ ಪಕ್ಷದಲ್ಲಿ ಕುಳಿತಿದ್ದೇವೆ. ನನ್ನನ್ನು ಮುಖ್ಯಮಂತ್ರಿ ಮಾಡಿದ್ದು ಸೋನಿಯಾ ತಾಯಿ ಮತ್ತು ರಾಹುಲ್ ಗಾಂಧಿ ಎಂದು ಇಲ್ಲಿ ಸಿಎಂ ಹೇಳುತ್ತಾರೆ. ನಾನು ಮುಖ್ಯಮಂತ್ರಿಗಳಿಗೆ ನಿಮ್ಮ ನಿಷ್ಟೇ ರಾಜ್ಯದ ಜನರಿಗೆ ಇದೇಯಾ ಅಥವಾ ಸೋನಿಯಾ ಅವರ ಪಾದಕ್ಕಿದೆಯಾ ಎಂದು ಕೇಳುತ್ತೇನೆ ಎಂದು ಪ್ರಶ್ನಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 2 ತಿಂಗಳಲ್ಲಿ 3ನೇ ಬಾರಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಕಲ್ಲೆಸೆತ!

    2 ತಿಂಗಳಲ್ಲಿ 3ನೇ ಬಾರಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಕಲ್ಲೆಸೆತ!

    ನವದೆಹಲಿ: ಮೇಕ್ ಇನ್ ಇಂಡಿಯಾ ಯೋಜನೆ ಅಡಿ ತಯಾರಿಸಲಾಗಿದ್ದ ದೇಶದ ಮೊದಲ ಸೆಮಿ ಹೈ ಸ್ಪೀಡ್ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್‍ಗೆ 2 ತಿಂಗಳಲ್ಲಿ 3ನೇ ಬಾರಿಗೆ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ.

    ರೈಲು ಅಧಿಕೃತ ಓಡಾಟ ಆರಂಭಿಸಿದ ಕೆಲವೇ ದಿನಗಳಲ್ಲಿ ಮತ್ತೆ ಕಲ್ಲು ಎಸೆಯಲಾಗಿದ್ದು, ಇಂದು ತುಂಡ್ಲಾ ಜಂಕ್ಷನ್ ಬಳಿ ಕಲ್ಲು ತೂರಾಟ ನಡೆದಿದೆ. ಪರಿಣಾಮ ರೈಲಿನ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ. ರೈಲು ಪರೀಕ್ಷಾರ್ಥ ಓಡಾಟ ಆರಂಭ ನಡೆಸಿದ ಸಂದರ್ಭದಲ್ಲಿ 2 ಬಾರಿ ಕಲ್ಲೆಸೆದು ಹಾನಿ ಮಾಡಲಾಗಿತ್ತು.

    ಫೆಬ್ರವರಿ ಮೊದಲ ವಾರದಲ್ಲಿ ಅಲಹಾಬಾದ್ ಪರೀಕ್ಷಾರ್ಥ ಓಡಾಟಕ್ಕಾಗಿ ಶಾಕೂರ್ ಬಸ್ತಿಯಿಂದ ದೆಹಲಿಗೆ ರೈಲು ಆಗಮಿಸುತ್ತಿದ್ದಾಗ ದೆಹಲಿಯ ಲಹೋರಿ ಗೇಟ್ ಬಳಿ ದುಷ್ಕರ್ಮಿಗಳು ಕಲ್ಲು ಎಸೆದಿದ್ದರು. ಎರಡನೇ ಬೋಗಿಗೆ ಕಲ್ಲು ಎಸೆದ ಪರಿಣಾಮ ಕಿಟಕಿಯ ಗ್ಲಾಸ್ ಒಡೆದು ಹೋಗಿತ್ತು. ಈ ಘಟನೆಯಲ್ಲಿ ಯಾರೂ ಗಾಯಗೊಳ್ಳದ ಕಾರಣ ದೂರು ದಾಖಲಿಸಿಕೊಂಡಿರಲಿಲ್ಲ. ಕಳೆದ ಡಿಸೆಂಬರ್ ನಲ್ಲಿ ದೆಹಲಿ ಮತ್ತು ಆಗ್ರಾ ನಡುವಿನ ಪರೀಕ್ಷಾರ್ಥ ಓಡಾಟದ ಸಮಯದಲ್ಲೂ ಕಲ್ಲು ತೂರಾಟ ನಡೆದಿತ್ತು.

    ಪುಲ್ವಾಮಾ ಭಯೋತ್ಪಾದಕರ ದಾಳಿ ನಡೆದ ಮರುದಿನ ಪ್ರಧಾನಿ ನರೇಂದ್ರ ಮೋದಿ ಅವರು ಫೆ.15 ರಂದು ರೈಲಿಗೆ ಹಸಿರು ನಿಶಾನೆ ತೋರಿದ್ದರು. ಫೆ. 17 ರಿಂದ ರೈಲಿನ ವಾಣಿಜ್ಯ ಓಡಾಟ ಆರಂಭವಾಗಿತ್ತು. ಸಂಚಾರ ಆರಂಭಿಸಿದ ಮೊದಲ ದಿನವೇ 2 ವಾರಗಳ ಮುಂಗಡ ಟಿಕೆಟ್ ಬುಕ್ಕಿಂಗ್ ಆಗಿತ್ತು. ಈ ಕುರಿತು ಸಚಿವ ಪಿಯೂಷ್ ಗೋಯಲ್ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು.

    ದೆಹಲಿ ಮತ್ತು ವಾರಣಾಸಿ ಮಧ್ಯೆ ಈ ರೈಲು ಸಂಚರಿಸುತ್ತಿದೆ. 850 ಕಿ.ಮೀ ದೂರದ ಪ್ರಯಾಣಕ್ಕೆ ಈ ಮೊದಲು 14 ಗಂಟೆ ಬೇಕಿದ್ದರೆ ಈ ರೈಲಿನಲ್ಲಿ ಕೇವಲ 8 ಗಂಟೆಯಲ್ಲಿ ಕ್ರಮಿಸಬಹುದು. ಸೋಮವಾರ ಮತ್ತು ಗುರುವಾರ ಹೊರತುಪಡಿಸಿ ವಾರದ 5 ದಿನ ಈ ರೈಲು ಸಂಚರಿಸುತ್ತದೆ.

    ರೈಲಿನ ವಿಶೇಷತೆ ಏನು?
    ಭಾರತೀಯ ರೈಲ್ವೇ ವ್ಯವಸ್ಥೆ ಹಳೆ ಕಾಲದ್ದು ಎನ್ನುವ ಟೀಕೆಗೆ ಉತ್ತರ ಎನ್ನುವಂತೆ ಚೆನ್ನೈ ಮೂಲದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ(ಐಸಿಎಫ್) ಟಿ-18 ರೈಲನ್ನು ಅಭಿವೃದ್ಧಿ ಪಡಿಸಿದೆ. ವಿದೇಶಿ ರೈಲುಗಳಲ್ಲಿ ಇರುವಂತೆ ಇದು ಸಂಪೂರ್ಣ ಹವಾ ನಿಯಂತ್ರಣ ಹಾಗೂ ಸಿಸಿಟಿವಿ ವ್ಯವಸ್ಥೆ ಹೊಂದಿದೆ. ರೈಲಿನಲ್ಲಿ 78 ಆಸನಗಳ ಸಾಮಾನ್ಯ ಬೋಗಿಗಳಿದ್ದರೆ, ಮಧ್ಯದಲ್ಲಿ ತಲಾ 52 ಆಸನಗಳ ಎರಡು ಎಕ್ಸಿಕ್ಯುಟಿವ್ ಬೋಗಿಯನ್ನು ನೀಡಲಾಗಿದೆ.

    2018 ರಲ್ಲಿ ನಿರ್ಮಾಣಗೊಂಡ ಹಿನ್ನೆಲೆಯಲ್ಲಿ ಈ ರೈಲುಗಳಿಗೆ `ಟ್ರೈನ್ 18′ ಎಂದು ಆರಂಭದಲ್ಲಿ ಹೆಸರಿಡಲಾಗಿತ್ತು. ಈಗಿನ ರೈಲುಗಳಂತೆ ಈ ರೈಲು ಪ್ರತ್ಯೇಕ ಎಂಜಿನ್ ಹೊಂದಿರುವುದಿಲ್ಲ. ಬದಲಿಗೆ ಮೆಟ್ರೋ ರೈಲುಗಳಂತೆ ವಿದ್ಯುತ್ ಶಕ್ತಿ ಪ್ರತಿ ಚಕ್ರಕ್ಕೂ ಮೋಟಾರುಗಳ (ಟ್ರಾಕ್ಷನ್ ಮೋಟಾರ್) ಮೂಲಕ ವರ್ಗಾವಣೆಯಾಗುತ್ತದೆ. ಇದನ್ನು ವಿಮಾನದಲ್ಲಿರುವಂತೆ ಕಾಕ್‍ಪಿಟ್‍ನಲ್ಲಿ ನಿಯಂತ್ರಿಸಲಾಗುತ್ತದೆ. ಇದರಿಂದಾಗಿ ವೇಗವಾಗಿ ರೈಲು ಸಂಚರಿಸುತ್ತದೆ.

    https://twitter.com/shubhranshuu/status/1098190472005148674

    ಅಲ್ಯುಮೀನಿಯಂ ಬಾಡಿ ಇರುವ ಕಾರಣ ಕಡಿಮೆ ಭಾರ ಹೊಂದಿದ್ದರಿಂದ ಹೆಚ್ಚಿನ ವೇಗದಲ್ಲಿ ಹೋಗುತ್ತದೆ. ಇದು ಸೆಮಿ ಹೈ ಸ್ಪೀಡ್ ರೈಲಾಗಿರುವ ಕಾರಣ ಗಂಟೆಗೆ 220 ಕಿ.ಮೀ. ವೇಗದವರೆಗೆ ಸಂಚರಿಸುವ ಸಾಮಥ್ರ್ಯವನ್ನು ಪಡೆದಿದೆ. ವಿದೇಶದ ರೈಲುಗಳಲ್ಲಿರುವಂತೆ ವೈಫೈ ಸೌಲಭ್ಯ, ಜಿಪಿಎಸ್ ಆಧರಿತ ಮಾಹಿತಿ ವ್ಯವಸ್ಥೆ, ತಿರುಗಿಸಬಹುದಾದ ಸೀಟುಗಳು, ಚಾರ್ಜರ್ ವ್ಯವಸ್ಥೆ, ವೃದ್ಧರಿಗೆ, ಅಂಗವಿಕಲರಿಗೆ ಅನುಕೂಲವಾಗುವಂತೆ ಮಡಚುವ ಮೆಟ್ಟಿಲುಗಳು ಈ ರೈಲಿನಲ್ಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಫೆ.27ಕ್ಕೆ ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ?

    ಫೆ.27ಕ್ಕೆ ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ?

    ನವದೆಹಲಿ: ಮುಂಬರುವ ಲೋಕಸಭಾ ಚುನಾವಣಾ ದಿನಾಂಕದ ವೇಳಾ ಪಟ್ಟಿ ಫೆಬ್ರವರಿ ಕೊನೆಯಲ್ಲಿ ಪ್ರಕಟವಾಗುವ ಸಾಧ್ಯತೆಯಿದೆ. ಕೇಂದ್ರ ಚುನಾವಣಾ ಆಯೋಗ ಫೆ.27 ರ ಸಂಜೆ 5 ಗಂಟೆಗೆ ಪತ್ರಿಕಾಗೋಷ್ಠಿಯನ್ನು ಕರೆದಿದ್ದು ಈ ದಿನ ಚುನಾವಣಾ ದಿನಾಂಕಗಳು ಪ್ರಕಟವಾಗುವ ಸಾಧ್ಯತೆಯಿದೆ.

    ಸೂಕ್ಷ್ಮ ಪ್ರದೇಶಗಳನ್ನು ಗಮನದಲ್ಲಿಟ್ಟುಕೊಂಡು 6 ರಿಂದ 7 ಹಂತಗಳಲ್ಲಿ ಚುನಾವಣೆ ನಡೆಸಲು ಚಿಂತನೆ ನಡೆದಿದೆ. ಇದರಿಂದಾಗಿ ಏಪ್ರಿಲ್ 15 ಅಥವಾ 20ರೊಳಗೆ ಮೊದಲ ಹಂತದ ಚುನಾವಣೆ ಆರಂಭವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

    ಮೇ ಮೊದಲ ವಾರ ಅಥವಾ 2ನೇ ವಾರದಲ್ಲಿ ಕರ್ನಾಟಕದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಕಳೆದ ಬಾರಿಯಂತೆ ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಸಲಾಗುತ್ತದೆ ಎನ್ನಲಾಗಿದೆ. ದೇಶಾದ್ಯಂತ ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ದಿನಾಂಕ ಘೋಷಣೆ ಆಗುವ ದಿನಾಂಕದಿಂದ ಚುನಾವಣಾ ಫಲಿತಾಂಶ ಬರುವ ವೇಳೆಗೆ ಸುಮಾರು 2 ತಿಂಗಳ ಸಮಯವಕಾಶ ಬೇಕಾಗುತ್ತದೆ.

    ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ತಮ್ಮ ಗುರುವಾರದ ಪ್ರವಾಸವನ್ನು ರದ್ದು ಮಾಡಿದ್ದಾರೆ. ನಿಗದಿತ ವೇಳಾಪಟ್ಟಿಯ ಪ್ರಕಾರ ನಾಳೆ ಮೋದಿ ಅವರು ಉತ್ತರ ಪ್ರದೇಶದ ಅಮೇಥಿಗೆ ತೆರಳಬೇಕಿತ್ತು. ಆದರೆ ಈಗ ದಿನಾಂಕವನ್ನು ಮುಂದೂಡಿ ಫೆ.27ಕ್ಕೆ ಫಿಕ್ಸ್ ಮಾಡಿದ್ದಾರೆ. ರಾಹುಲ್ ಗಾಂಧಿ ಅವರ ಸ್ವಕ್ಷೇತ್ರ ಆಗಿರುವ ಹಿನ್ನೆಲೆಯಲ್ಲಿ ಅಮೇಥಿಗೆ ತೆರಳಿ ಅಲ್ಲಿಂದಲೇ ಚುನಾವಣಾ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದರಾ ಎನ್ನುವ ಪ್ರಶ್ನೆ ಎದ್ದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv