Tag: prime minister modi

  • ಡಿಜಿಟಲ್ ಲಾಂಚ್-ಶಹಾಪುರ ಪದವಿ ಕಾಲೇಜು ಕಟ್ಟಡ ಶಂಕುಸ್ಥಾಪನೆ ನೆರವೇರಿಸಿದ ಮೋದಿ

    ಡಿಜಿಟಲ್ ಲಾಂಚ್-ಶಹಾಪುರ ಪದವಿ ಕಾಲೇಜು ಕಟ್ಟಡ ಶಂಕುಸ್ಥಾಪನೆ ನೆರವೇರಿಸಿದ ಮೋದಿ

    ಯಾದಗಿರಿ: ರಾಜ್ಯದಲ್ಲೇ ಮೊದಲ ಬಾರಿಗೆ ಸರ್ಕಾರಿ ಪದವಿ ಕಾಲೇಜಿನ ಕಟ್ಟಡ ನಿರ್ಮಾಣಕ್ಕೆ ವಿಡಿಯೋ ಕಾನ್ಫರೆನ್ಸ್ ನ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಡಿಜಿಟಲ್ ಲಾಂಚ್ ಮಾಡಿದ್ದಾರೆ.

    ಯಾದಗಿರಿ ಜಿಲ್ಲೆ ಶಹಾಪುರದಲ್ಲಿ ರಾಷ್ಟ್ರೀಯ ಉಚ್ಚತರ್ ಶಿಕ್ಷಾ ಅಭಿಯಾನದಡಿ (ಆರ್ ಯುಎಸ್‍ಎ) ಕಾಲೇಜು ಮಂಜೂರು ಆಗಿತ್ತು. ದೇಶದ ವಿವಿದ ರಾಜ್ಯಗಳಲ್ಲಿ ಯೋಜನೆ ಅಡಿ ಕಾಲೇಜು ಮಂಜೂರು ಮಾಡಲಾಗಿದ್ದು, ವೇಗವಾಗಿ ಕಟ್ಟಡ ನಿರ್ಮಾಣ ಮಾಡಿ ಕಾಲೇಜು ಆರಂಭಿಸುವ ಉದ್ದೇಶವನ್ನು ಹೊಂದಿದ್ದಾರೆ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸಿಗುವ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ.

    ಕಾಲೇಜಿನ ಕಟ್ಟಡ ನಿರ್ಮಾಣ ಸೇರಿದಂತೆ ಯೋಜನೆ ಅಡಿ ಮೊದಲ ಭಾಗವಾಗಿ 25 ಕೋಟಿ ರೂ. ಅನುದಾನ ಲಭ್ಯವಾಗಲಿದ್ದು, 5 ರಿಂದ 6 ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಈ ಕಾರ್ಯಕ್ರಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕ ಎಸ್ ಮಲ್ಲೇಶಪ್ಪ, ಗುಲ್ಬರ್ಗಾ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ನಿರಂಜನ್ ಮತ್ತು ಜಿಲ್ಲಾಧಿಕಾರಿ ಎಂ ಕೂರ್ಮರಾವ್ ಭಾಗಿಯಾಗಿದ್ದರು. ಶಹಾಪುರದ ಸರ್ಕಾರಿ ಪದವಿ ಕಾಲೇಜು ಆವರಣದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

    ಕಾಲೇಜು ಮೂಲ ಸೌಲಭ್ಯ ಅಭಿವೃದ್ಧಿ, ಹೊಸ ಕಟ್ಟಡ ನಿರ್ಮಾಣ, ವಸತಿಗೃಹಗಳು ಸೇರಿದಂತೆ ವಿಶ್ವ ವಿದ್ಯಾಲಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ರೂಸಾ 2.0 ಯೋಜನೆ ಮೂಲಕ ಆರ್ಥಿಕ ನೆರವು ನೀಡಲಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • 2030ರ ವೇಳೆಗೆ ಭಾರತ ಹೇಗಿರಬೇಕು – ಮೋದಿ ಸರ್ಕಾರದ ಟಾಪ್ 10 ವಿಷನ್‍ಗಳು

    2030ರ ವೇಳೆಗೆ ಭಾರತ ಹೇಗಿರಬೇಕು – ಮೋದಿ ಸರ್ಕಾರದ ಟಾಪ್ 10 ವಿಷನ್‍ಗಳು

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಅಂತಿಮ ಬಜೆಟ್ ಮಂಡನೆ ಮಾಡಿದ್ದು, ಇದರಲ್ಲಿ ಮುಂದಿನ 2030ರ ವೇಳೆಗೆ ಭಾರತ ಹೇಗಿರಬೇಕು ಹಾಗೂ ಯಾವ ಕ್ಷೇತ್ರದಲ್ಲಿ ಸ್ವಾವಲಂಬನೆ ಆಗಿರಬೇಕು ಎನ್ನುವುದರ ಬಗ್ಗೆ ತನ್ನ ವಿಷನ್ ತಿಳಿಸಿದೆ.

    1) 10 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ರೂಪಿಸಲು ಸಾಮಾಜಿಕ ಹಾಗೂ ಭೌತಿಕ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವುದು.

    2) ಡಿಜಿಟಲ್ ಇಂಡಿಯಾ ನಿರ್ಮಾಣ ಮಾಡಿ ಹೆಚ್ಚಿನ ಉದ್ಯೋಗ ಅವಕಾಶ ಹಾಗೂ ನವೋದ್ಯಮಗಳನ್ನು ರೂಪಿಸಿ ದೇಶದ ಪ್ರತಿ ಪ್ರಜೆಯನ್ನ ತಲುಪುವ ಗುರಿ ಹೊಂದಲಾಗಿದೆ.

    3) ಪ್ರಮುಖವಾಗಿ ದೇಶವನ್ನ ಸ್ವಚ್ಛ ಹಾಗೂ ಹಸಿರು ಭಾರತವನ್ನಾಗಿ ಮಾರ್ಪಡಿಸುವುದು ಸರ್ಕಾರದ ಗುರಿಯಾಗಿದ್ದು, ಇದಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆ ಹಾಗೂ ನವೀಕರಿಸಬಹುದಾದ ಶಕ್ತಿಗಳ ಬಳಕೆಗೆ ಪ್ರಾಮುಖ್ಯತೆ ಒತ್ತು.

    4) ಮೆಕ್ ಇನ್ ಇಂಡಿಯಾ ಯೋಜನೆ ಮೂಲಕ ನಗರದ ಆಧುನಿಕ ಕೈಗಾರಿಕಾ ತಂತ್ರಜ್ಞಾನಗಳನ್ನು ಬಳಕೆ ಮಾಡಿಕೊಂಡು ಗ್ರಾಮೀಣ ಕೈಗಾರಿಕೆಗಳನ್ನು ಹೆಚ್ಚು ಅಭಿವೃದ್ಧಿ.

    5) ಸರ್ಕಾರ ಪ್ರಮುಖ 5ನೇ ಗುರಿ ಸ್ವಚ್ಛ ನದಿಗಳನ್ನು ರೂಪಿಸುವುದಾಗಿದ್ದು, ಆ ಮೂಲಕ ದೇಶದ ಎಲ್ಲಾ ಜನತೆಗೆ ಶುದ್ಧ ಕುಡಿಯುವ ನೀರು ಲಭಿಸುವಂತೆ ಮಾಡುವುದು. ಅಲ್ಲದೇ ಮೈಕ್ರೋ ಇರಿಗೇಷನ್ ತಂತ್ರಜ್ಞಾನ ಬಳಕೆ.

    6) ಕೃಷಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ, ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಹಾಗೂ ಸಾವಯವ ಆಹಾರ ಉತ್ಪಾದನೆಗೆ ಒತ್ತು.

    7) ಬಾಹ್ಯಾಕಾಶ ಸಂಶೋಧನೆ ಅಭಿವೃದ್ಧಿ ಪಡಿಸಿ ಭಾರತವನ್ನು ಪ್ರಪಂಚದಲ್ಲೇ ಮುಖ್ಯ ಕೇಂದ್ರವಾಗಿಸುವುದರ ಜೊತೆಗೆ 2022ರ ವೇಳೆಗೆ ಗಗನಯಾನಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಗುರಿ.

    6) ದೇಶದ ಆರ್ಥಿಕತೆಯ ಪ್ರಮುಖ ಭಾಗವಾಗಿರುವ ಕರಾವಳಿ ಪ್ರದೇಶವನ್ನು ರಕ್ಷಣೆ ಮಾಡಿ, ನೀಲಿ ಆರ್ಥಿಕತೆಗೆ ಶಕ್ತಿ ತುಂಬಲು ‘ಸಾಗರ್ ಮಲಾ’ ಯೋಜನೆಯನ್ನು ಜಾರಿ ಮಾಡುವುದು.

    9) ಆರೋಗ್ಯವಂತ ಭಾರತ ನಿರ್ಮಾಣ ಮಾಡಿ, ಎಲ್ಲರಿಗೂ ಉತ್ತಮ ಸಮಗ್ರ ಆರೋಗ್ಯ ವ್ಯವಸ್ಥೆ ನಿರ್ಮಾಣಕ್ಕೆ ಒತ್ತು

    10) ಅಂತಿಮವಾಗಿ ಕನಿಷ್ಠ ಸರ್ಕಾರದ ಆಡಳಿತ ರೂಪಿಸಿ ಗರಿಷ್ಠ ಪ್ರಮಾಣದಲ್ಲಿ ಜನ ಸ್ನೇಹಿ, ಜವಾಬ್ದಾರಿಯುತ ಆಡಳಿತವನ್ನು ನೀಡುವುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ರಕ್ಷಣಾ ಬಜೆಟ್ 3 ಲಕ್ಷ ಕೋಟಿ ರೂ.ಗೆ ಹೆಚ್ಚಳ, ಹೆಚ್ಚುವರಿ ನೀಡಲು ನಾವು ಸಿದ್ಧ

    ರಕ್ಷಣಾ ಬಜೆಟ್ 3 ಲಕ್ಷ ಕೋಟಿ ರೂ.ಗೆ ಹೆಚ್ಚಳ, ಹೆಚ್ಚುವರಿ ನೀಡಲು ನಾವು ಸಿದ್ಧ

    ನವದೆಹಲಿ: ದೇಶದ ಗಡಿ ರಕ್ಷಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಉದ್ದೇಶದಿಂದ ಈ ಬಾರಿಯ ಕೇಂದ್ರ ಬಜೆಟ್‍ನಲ್ಲಿ ರಕ್ಷಣೆಗೆ ಹೆಚ್ಚುವರಿ ಅನುದಾನ ನೀಡುವಾಗಿ ಪಿಯೂಷ್ ಗೋಯಲ್ ತಿಳಿಸಿದ್ದು, ರಕ್ಷಣಾ ಬಜೆಟನ್ನು 3 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಳ ಮಾಡಿದ್ದಾರೆ.

    ಕಳೆದ ವರ್ಷದ ಬಜೆಟ್ ನಲ್ಲಿ 2,95,511 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು. ಆದರೆ ಈ ವರ್ಷ ಅದನ್ನು ಮತ್ತಷ್ಟು ಹೆಚ್ಚಳ ಮಾಡಿದ್ದಾರೆ. ದೇಶದ ರಕ್ಷಣೆ ಮಾಡುವುದು ಸೈನಿಕರು ನಮ್ಮ ಹೆಮ್ಮೆ ಆಗಿದ್ದು, ನಾವು 3 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡಿದ್ದೇವೆ. ಒಂದೊಮ್ಮೆ ಹೆಚ್ಚುವರಿ ಅನುದಾನ ಬೇಕಾದರೂ ನಾವು ನೀಡುತ್ತೇವೆ ಎಂದು ಗೋಯಲ್ ಸ್ಪಷ್ಟಪಡಿಸಿದ್ದಾರೆ.

    ಕಳೆದ 40 ವರ್ಷಗಳಿಂದ ಜಾರಿಯಾಗದೇ ಇದ್ದ ಒನ್ ರ್‍ಯಾಂಕ್ ಒನ್ ಪೆನ್ಷನ್ ಯೋಜನೆ ಜಾರಿ ಮಾಡಿದ್ದು, ಇದಕ್ಕಾಗಿ 35 ಸಾವಿರ ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ ಎಂದು ಗೋಯಲ್ ತಿಳಿಸಿದರು. ಅಲ್ಲದೇ ಬಜೆಟ್ ಮಂಡನೆ ವೇಳೆ ಈ ಹಿಂದಿನ ಯುಪಿಎ ಸರ್ಕಾರದ ಅನುದಾನವನ್ನು ಪ್ರಸ್ತಾಪ ಮಾಡಿ, ಕೇವಲ 500 ಕೋಟಿ ರೂ.ಗಳನ್ನು ಯೋಜನೆಗೆ ನೀಡಿದ್ದರು ಎಂದು ತಿಳಿಸಿದ್ದಾರೆ. ಯುಪಿಎ ಬಜೆಟ್ ಮಂಡನೆ ವೇಳೆ ಕೇವಲ ಒನ್ ರ್‍ಯಾಂಕ್ ಒನ್ ಪೆನ್ಷನ್ ಯೋಜನೆ ಕುರಿತು ಭರವಸೆಯನ್ನು ಮಾತ್ರ ನೀಡಲಾಗಿತ್ತು. ಆದರೆ ನಾವು ಅದನ್ನು ಜಾರಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ದೇಶಕ್ಕೆ ಲಂಚಮುಕ್ತ ಆಡಳಿತ ನೀಡಿದ ಮೋದಿ ಮತ್ತೆ ಪ್ರಧಾನಿ ಆಗ್ತಾರೆ: ಎಸ್‍ಎಂಕೆ ಭವಿಷ್ಯ

    ದೇಶಕ್ಕೆ ಲಂಚಮುಕ್ತ ಆಡಳಿತ ನೀಡಿದ ಮೋದಿ ಮತ್ತೆ ಪ್ರಧಾನಿ ಆಗ್ತಾರೆ: ಎಸ್‍ಎಂಕೆ ಭವಿಷ್ಯ

    ಮಂಡ್ಯ: ಕಳೆದ ಐದು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಕ್ಕೆ ಉತ್ತಮ ಆಡಳಿತ ನೀಡಿದ್ದು, ಲಂಚ ಮುಕ್ತವಾಗಿ ಕಾರ್ಯ ನಿರ್ವಹಿಸಿದೆ. 2019ರ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಗೆಲುವು ಪಡೆಯಲಿದ್ದು, ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ ಎಂದು ಮಾಜಿ ಸಿಎಂ ಎಸ್.ಎಂ. ಕೃಷ್ಣ ಭವಿಷ್ಯ ನುಡಿದಿದ್ದಾರೆ.

    ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಮಾತನಾಡಿದ ಅವರು, ದೇಶ ಒಬ್ಬ ಸಮರ್ಥ ನಾಯಕನ ಹುಡಕಾಟದಲ್ಲಿತ್ತು. ಈ ವೇಳೆ ಅಧಿಕಾರ ವಹಿಸಿಕೊಂಡ ಪ್ರಧಾನಿ ಮೋದಿ ಅವರು ಶಕ್ತಿಶಾಲಿ ಆಡಳಿತದ ಮೂಲಕ ಭಾರತದ ಕೀರ್ತಿ ಹೆಚ್ಚಿಸಿದ್ದಾರೆ. ಕಳೆದ ಐದು ವರ್ಷದಲ್ಲಿ ಉತ್ತಮ ಆಡಳಿತ ನೀಡಿದ್ದಾರೆ. ಆದ್ದರಿಂದ ಮುಂದಿನ ಐದು ವರ್ಷ ಅವರಿಗೆ ಆಡಳಿತ ನೀಡಬೇಕು ಎಂದರು.

    ಈಗಾಗಲೇ ಬಿಜೆಪಿ ವಿರುದ್ಧ ಮಹಾಘಟಬಂಧನ್ ಮಾಡುವ ಪ್ರಯತ್ನ ನಡೆದಿದೆ. ಇತ್ತ ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿ ಮೂರನೇ ಶಕ್ತಿಯಾಗಿ ಹೊರಹೊಮ್ಮಿದ್ದಾರೆ, ಆದ್ದರಿಂದ ಅಲ್ಲಿ ತ್ರಿಕೋನ ಹೋರಾಟ ನಡೆಯಲಿದೆ. ಆದರೆ ಬಿಜೆಪಿಗೆ ಯುಪಿಯಲ್ಲಿ ತನ್ನದೇ ಗಟ್ಟಿನೆಲೆ ಇರುವುದರಿಂದ ಈ ಘಟಬಂಧನ್‍ಗಳು ರಾಜ್ಯಕ್ಕೆ ಮಾತ್ರ ಸೀಮಿತವಾಗಲಿವೆ. ಇದಕ್ಕೆ ಕಾರಣವೂ ಇದ್ದು, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಘಟಬಂಧನ್‍ಗೆ ಸೇರುವ ಸಾಧ್ಯತೆ ಇಲ್ಲ. ಅಲ್ಲದೇ ದೇಶದಲ್ಲಿ ಎಲ್ಲಾ ಕಡೆ ಮೋದಿ ಹವಾ ಇದೆ ಎಂದು ಸ್ಪಷ್ಟಪಡಿಸಿದರು.

    ದೇಶದಲ್ಲಿ ಮೋದಿಯ ಆಡಳಿತ ಕಸಿಯಲು ವಿರೋಧಿ ಪಕ್ಷದಲ್ಲಿ ನಾಯಕತ್ವದ ಕೊರತೆ ಇದ್ದು, ಅವರಲ್ಲಿ ಮುಂದಿನ ಪ್ರಧಾನಿ ಅಭ್ಯರ್ಥಿ ಬಗ್ಗೆಯೇ ಗೊಂದಲವಿದೆ. ಮೋದಿ ವರ್ಸಸ್ ಯಾರೂ ಎಂಬ ಗೊಂದಲದ ಪ್ರಶ್ನೆ ದೇಶದಲ್ಲಿಯೂ ಇದೆ. ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಜನರಿಗೆ ನಂಬಿಕೆಯಿಲ್ಲ ಇಲ್ಲ. ಮತ್ತೆ ಮೋದಿ ಪ್ರಧಾನಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು. ಇದೇ ವೇಳೆ ರಾಜ್ಯದಲ್ಲೂ ಬಿಜೆಪಿಗೆ ಉತ್ತಮ ಭವಿಷ್ಯ ಇದ್ದು, ವಿಧಾನಸಭಾ ಚುನಾವಣೆಯಲ್ಲಿ 104 ಸ್ಥಾನ ಬಂದಿರುವುದೇ ಇದಕ್ಕೆ ಸಾಕ್ಷಿ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಫೇಸ್ ರೆಕಗ್ನಿಷನ್ ಕ್ಯಾಮೆರಾ, ಸ್ನೈಪರ್ಸ್, ಡ್ರೋನ್ ಕಣ್ಗಾವಲು: ಗಣರಾಜ್ಯೋತ್ಸವಕ್ಕೆ ಬಿಗಿ ಭದ್ರತೆ

    ಫೇಸ್ ರೆಕಗ್ನಿಷನ್ ಕ್ಯಾಮೆರಾ, ಸ್ನೈಪರ್ಸ್, ಡ್ರೋನ್ ಕಣ್ಗಾವಲು: ಗಣರಾಜ್ಯೋತ್ಸವಕ್ಕೆ ಬಿಗಿ ಭದ್ರತೆ

    ನವದೆಹಲಿ: ಗಣರಾಜ್ಯೋತ್ಸವದ ವೇಳೆ ವಿಧ್ವಂಸಕ ಕೃತ್ಯ ನಡೆಸಲು ಉಗ್ರಗಾಮಿ ಸಂಘಟನೆಗಳು ಪ್ಲಾನ್ ಮಾಡಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆ ದೆಹಲಿಯಲ್ಲಿ ಮತ್ತಷ್ಟು ಭದ್ರತೆಯನ್ನು ಹೆಚ್ಚಿಸಲಾಗಿದೆ.

    ಜೈಶ್ ಈ ಮೊಹಮ್ಮದ್ ಸಂಘಟನೆಗೆ ಸೇರಿದ್ದಾರೆ ಎನ್ನಲಾದ ಇಬ್ಬರು ಶಂಕಿತರನ್ನು ಭದ್ರತಾ ಪಡೆ ಬಂಧಿಸಿದೆ. ಗಣರಾಜ್ಯೋತ್ಸವ ದಿನ ಇಬ್ಬರು ವಿಧ್ವಂಸಕ ಕೃತ್ಯ ನಡೆಸಲು ಪ್ಲಾನ್ ಮಾಡುತ್ತಿದ್ದ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಟೈಟ್ ಸೆಕ್ಯೂರಿಟಿಯನ್ನು ಹಾಕಲಾಗಿದೆ.

    ಬಂಧನಕ್ಕೆ ಒಳಗಾದವರ ವಿಚಾರಣೆ ವೇಳೆ ಲಜ್‍ಪತ್ ನಗರ್ ಮಾರುಕಟ್ಟೆ, ಹಜ್ ಮಂದಿರ, ತುರ್ಕ್‍ಮನ್ ಗೇಟ್, ಇಂಡಿಯಾ ಗೇಟ್, ಐಜಿಎಲ್ ಗ್ಯಾಸ್ ಪೈಪ್ ಲೈನ್ ಬಳಿ ಕೃತ್ಯ ಎಸಗಲು ಪ್ಲಾನ್ ಮಾಡಿದ್ದರು ಎಂದು ವರದಿಯಾಗಿದೆ.  ಇದನ್ನು ಓದಿ: ದೇಶದ ಹಬ್ಬಕ್ಕೆ ಕ್ಷಣಗಣನೆ : ಸಿಂಗಾರಗೊಂಡಿದೆ ರಾಜಪಥ್: ಈ ಬಾರಿಯ ಪರೇಡ್ ವಿಶೇಷತೆ ಏನು?

    ಹೇಗಿದೆ ಭದ್ರತೆ?
    ಟ್ರಾಫಿಕ್ ಸಿಬ್ಬಂದಿ ಸೇರಿದಂತೆ ಒಟ್ಟು 25 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಿಸಿ ಕ್ಯಾಮೆರಾದ ಜೊತೆ ಫೇಸ್ ರೆಕಗ್ನಿಷನ್ ಕ್ಯಾಮೆರಾ, ವಿರೋಧಿ ವಿಮಾನಗಳನ್ನು ಹೊಡೆಯಬಲ್ಲ ಗನ್ ತಂಡ, ಸ್ನೈಪರ್ಸ್ ತಂಡವನ್ನು ಬಳಸಲಾಗುತ್ತಿದೆ. ಪರೇಡ್ ನಡೆಯುವ 8 ಕಿಮೀ ಸುತ್ತ ಬಿಗಿಭದ್ರತೆಯನ್ನು ಏರ್ಪಡಿಸಲಾಗಿದೆ. ಇದನ್ನು ಓದಿ: ಫಸ್ಟ್ ಟೈಂ ಆರ್‌ಡಿಯಲ್ಲಿ ಪುರುಷ ದಳವನ್ನು ಮುನ್ನಡೆಸಲಿದ್ದಾರೆ ಮಹಿಳಾ ಅಧಿಕಾರಿ

    sಸ್ನೈಪರ್ಸ್ ಗಳನ್ನು ಅತಿ ಎತ್ತರದ ಕಟ್ಟಡಗಳ ಮೇಲೆ ನಿಯೋಜಿಸಲಾಗಿದ್ದು, ನೂರಾರು ಸಿಸಿಟಿವಿಗಳು ಪರೇಡ್ ನಡೆಯುವ ಪ್ರದೇಶವನ್ನು ಸೆರೆ ಹಿಡಿಯಲಿದೆ. ಒಂದೊಮ್ಮೆ ದಾಳಿ ನಡೆದರೂ ವಿರೋಧಿಗಳ ವಿರುದ್ಧ ಪ್ರತಿ ದಾಳಿ ನಡೆಸಲು ಕೌಂಟರ್ ಡ್ರೋಣ್ ತಂತ್ರಜ್ಞಾನವನ್ನು ಅಳಡಿಸಲಾಗಿದೆ. ಯಾವುದೇ ಅನುಮಾನಾಸ್ಪದ ವಸ್ತು, ವ್ಯಕ್ತಿ ಕಂಡು ಬಂದರೂ ಕ್ಷಣ ಮಾತ್ರದಲ್ಲಿ ಮಾಹಿತಿ ಲಭಿಸಲಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಓದಿ: ಮೋದಿ ಜೊತೆ ಗಣರಾಜ್ಯೋತ್ಸವ ವೀಕ್ಷಿಸಲು ಬೆಂಗ್ಳೂರು ವಿದ್ಯಾರ್ಥಿನಿಗೆ ಬಂತು ಆಹ್ವಾನ

    ದೆಹಲಿಯ ಹೆಚ್ಚು ಜನಸಂದಣಿ ಹೊಂದಿರುವ ಮಾರುಕಟ್ಟೆ, ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ, ಮೆಟ್ರೋ ಮತ್ತು ಗುರುತಿಸಿದ ಇತರೇ ಸ್ಥಳಗಳಲ್ಲಿ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ. ಅಲ್ಲದೇ ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಬದಲಾವಣೆಯಾದ ಮಾರ್ಗಗಳನ್ನು ನಿರ್ವಹಣೆ ಮಾಡುತ್ತಾರೆ. ಸಾರ್ವಜನಿಕರ ಸಂಚಾರಿ ಸ್ಥಳಗಳಲ್ಲಿ ತಪಾಸಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.  ಇದನ್ನು ಓದಿ: ರಾಜಪಥ್ ರಸ್ತೆಯಲ್ಲಿ ಮೊದಲ ಬಾರಿ ಪ್ರತಿಧ್ವನಿಸಲಿದೆ ಕನ್ನಡದ ಹಾಡು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಫಸ್ಟ್ ಟೈಂ ಆರ್‌ಡಿಯಲ್ಲಿ ಪುರುಷ ದಳವನ್ನು ಮುನ್ನಡೆಸಲಿದ್ದಾರೆ ಮಹಿಳಾ ಅಧಿಕಾರಿ

    ಫಸ್ಟ್ ಟೈಂ ಆರ್‌ಡಿಯಲ್ಲಿ ಪುರುಷ ದಳವನ್ನು ಮುನ್ನಡೆಸಲಿದ್ದಾರೆ ಮಹಿಳಾ ಅಧಿಕಾರಿ

    ನವದೆಹಲಿ: 70ನೇ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಧಿಕಾರಿಯೊಬ್ಬರು ಪುರುಷರು ಇರುವ ದಳದ ಸಾರಥ್ಯ ವಹಿಸಲಿದ್ದಾರೆ. ರಾಜಪಥ ಮಾರ್ಗದಲ್ಲಿ ಲೆಫ್ಟಿನೆಂಟ್ ಭಾವನಾ ಕಸ್ತೂರಿ ಅವರ ನೇತೃತ್ವದ 144 ಯೋಧರು ಪರೇಡ್ ನಡೆಸಲಿದ್ದಾರೆ.

    ಎರಡೂವರೆ ವರ್ಷಗಳ ಹಿಂದೆ ಭಾರತೀಯ ಸೇನೆ ಸೇರಿದ್ದ ಹೈದರಾಬಾದ್‍ನ ಯುವ ಅಧಿಕಾರಿ ಭಾವನಾ ಕಸ್ತೂರಿ ತಮ್ಮ ದಳದೊಂದಿಗೆ ಮೈಕೊರೆಯುವ ಚಳಿಯಲ್ಲಿ ಮುಂಜಾನೆ 5.30ಕ್ಕೆ ತಾಲೀಮು ನಡೆಸಿ ಸಿದ್ಧತೆ ಮಾಡಿಕೊಂಡಿದ್ದಾರೆ.

    9 ವರ್ಷ ಹಿಂದೆ ಎನ್‍ಸಿಸಿ ತಂಡದ ಸದಸ್ಯೆಯಾಗಿ ಪರೇಡ್‍ನಲ್ಲಿ ಹೆಜ್ಜೆ ಹಾಕಿದ್ದ ಭಾವನಾ ಅವರು ಗಣರಾಜ್ಯೋತ್ಸವ ಪರೇಡ್‍ನಲ್ಲಿ ತಾನು ಸೇನಾ ತಂಡವೊಂದನ್ನು ಮುನ್ನಡೆಸಲಿರುವ ಕುರಿತು ಸಂತಸಗೊಂಡಿದ್ದಾರೆ.

    ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ ಆಗಿರುವ ರಾಷ್ಟ್ರಪತಿಯವರ ಮುಂದೆ ನಾನು ತಂಡವನ್ನು ಮುನ್ನಡೆಸಿ ಅವರಿಗೆ ಸೆಲ್ಯೂಟ್ ನೀಡುವುದು ನನ್ನ ಕನಸಿನ ಗಳಿಗೆಯಾಗಿದೆ. ಪರೇಡನ್ನು ವೀಕ್ಷಿಸಲು ಬರುವ ಜನಸ್ತೋಮದ ಕುರಿತು ನಾನು ಪುಳಕಗೊಂಡಿದ್ದೇನೆ. ನನ್ನನ್ನು ನೋಡಿ ಬಹಳಷ್ಟು ಹೆಣ್ಣು ಮಕ್ಕಳು ಖುಷಿ ಪಡಬಹುದು’ಎಂದು ಸಂತಸ ಹಂಚಿಕೊಂಡಿದ್ದಾರೆ. ಅಲ್ಲದೇ ಯಾವುದೇ ಪ್ರಶಸ್ತಿಯೂ ಈ ಗೌರವಕ್ಕೆ ಮತ್ತು ನನ್ನ ಮೇಲೆ ಹೊರಿಸಲಾಗಿರುವ ಹೊಣೆಗಾರಿಕೆಗೆ ಸಾಟಿಯಲ್ಲ. ಇದು ನನ್ನ ಜೀವಮಾನದ ಶ್ರೇಷ್ಠ ಪ್ರಶಸ್ತಿಯಾಗಿದೆ ಎಂದು ಬಣ್ಣಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನೇತಾಜಿ ಸುಭಾಷ್ ಚಂದ್ರಬೋಸ್ ಮ್ಯೂಸಿಯಂ ಉದ್ಘಾಟಿಸಿದ ಪ್ರಧಾನಿ ಮೋದಿ

    ನೇತಾಜಿ ಸುಭಾಷ್ ಚಂದ್ರಬೋಸ್ ಮ್ಯೂಸಿಯಂ ಉದ್ಘಾಟಿಸಿದ ಪ್ರಧಾನಿ ಮೋದಿ

    ನವದೆಹಲಿ: ನೇತಾಜಿ ಸುಭಾಷ್ ಚಂದ್ರಬೋಸ್ ಅವರ 122ನೇ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಕೆಂಪುಕೋಟೆಯಲ್ಲಿ ಮ್ಯೂಸಿಯಂ ಉದ್ಘಾಟನೆ ಮಾಡಿದರು.

    ಗಣರಾಜ್ಯೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇರುವ ವೇಳೆ ಪ್ರಧಾನಿ ಮೋದಿ ಅವರು ಬೋಸ್‍ರ ಮ್ಯೂಸಿಯಂ ಉದ್ಘಾಟನೆ ಮಾಡಿದ್ದಾರೆ. ಅಲ್ಲದೇ ಜಲಿಯನ್ ವಾಲಾಬಾಗ್, ಮೊದಲ ವಿಶ್ವಯುದ್ಧ ಹಾಗೂ 1857ರ ಭಾರತ ಮೊದಲ ಸ್ವಾತಂತ್ರ್ಯ ಸಂಗ್ರಾಮ ಮ್ಯೂಸಿಯಂಗಳನ್ನು ಉದ್ಘಾಟನೆ ಮಾಡಿದರು.

    ಸುಭಾಷ್ ಚಂದ್ರಬೋಸ್ ಅವರ ವಸ್ತು ಸಂಗ್ರಹಾಲಯದಲ್ಲಿ ಬೋಸರ ಹಾಗೂ ಭಾರತೀಯ ರಾಷ್ಟ್ರೀಯ ಸೇನೆ(ಐಎನ್‍ಎ)ಗೆ ಸಂಬಂಧಿಸಿದ ವಿವಿಧ ಕಲಾಕೃತಿಗಳು ಇಡಲಾಗಿದೆ. ಬೋಸರು ಬಳಿಸಿದ ಕತ್ತಿ, ಕುರ್ಚಿ, ಪದಕಗಳು, ಸಮವಸ್ತ್ರ, ಬ್ಯಾಡ್ಜ್ ಸೇರಿದಂತೆ ಐಎನ್‍ಎ ಗೆ ಸಂಬಂಧಿಸಿದ ಇನ್ನಿತರ ಕಲಾಕೃತಿಗಳು ವಸ್ತುಸಂಗ್ರಾಹಲಯದಲ್ಲಿದೆ.

    ವಿಶೇಷವಾಗಿ ವಸ್ತುಸಂಗ್ರಾಹಲಯಕ್ಕೆ ಭೇಟಿ ನೀಡುವ ಸಾರ್ವಜನಿಕರು ಸುಭಾಷ್ ಚಂದ್ರಬೋಸ್ ಬಗ್ಗೆ ತಯಾರಿಸಿರುವ ಸಾಕ್ಷಚಿತ್ರವನ್ನು ನೋಡಬಹುದಾಗಿದೆ. ಈ ಮೂಲಕ ಸ್ವಾತಂತ್ರ್ಯದ ಹೋರಾಟಗಾರರ ಪರಿಕಲ್ಪನೆ ಬಗ್ಗೆ ತಿಳಿಯಬಹುದಾಗಿದೆ. ಈ ಸಾಕ್ಷ್ಯ ಚಿತ್ರಕ್ಕೆ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಧ್ವನಿ ನೀಡಿದ್ದಾರೆ.

    ಜಲಿಯನ್ ವಾಲಾಬಾಗ್ ಮ್ಯೂಸಿಯಂ ಏಪ್ರಿಲ್ 13, 1919 ರಂದು ನಡೆದ ಹತ್ಯಾಕಾಂಡದ ಕುರಿತು ಬೆಳಕು ಚೆಲ್ಲುತ್ತದೆ. ಪಂಜಾಬ್ ಅಮೃತಸರದ ಜಲಿಯನ್ ವಾಲಾಬಾಗ್ ದುರಂತ ನಡೆದ ಸ್ಥಳದಲ್ಲಿ ನಿರ್ಮಿಸಲಾದ ಸ್ಮಾರಕದ ಪ್ರತಿಕೃತಿಯನ್ನು ಈ ವಸ್ತುಸಂಗ್ರಹಾಲಯದಲ್ಲಿ ಸ್ಥಾಪಿಸಲಾಗಿದೆ. ಉಳಿದಂತೆ ಮೊದಲ ಮಹಾಯುದ್ಧದಲ್ಲಿ ಭಾರತೀಯ ಯೋಧರು ತೋರಿದ ಸಾಹಸ ಶೌರ್ಯ ಮತ್ತು ತ್ಯಾಗಕ್ಕೆ ಸಂಬಂಧಿಸಿದ ಕಲಾಕೃತಿಗಳನ್ನು ಪ್ರದರ್ಶನಕ್ಕೆ ಇರಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಮತಾ ಬ್ಯಾನರ್ಜಿ ‘ಯುನೈಟ್ ಇಂಡಿಯಾ’ ರ‍್ಯಾಲಿ- ಕೇಂದ್ರದ ವಿರುದ್ಧ ಸಿಎಂ ಎಚ್‍ಡಿಕೆ ವಾಗ್ದಾಳಿ

    ಮಮತಾ ಬ್ಯಾನರ್ಜಿ ‘ಯುನೈಟ್ ಇಂಡಿಯಾ’ ರ‍್ಯಾಲಿ- ಕೇಂದ್ರದ ವಿರುದ್ಧ ಸಿಎಂ ಎಚ್‍ಡಿಕೆ ವಾಗ್ದಾಳಿ

    ಕೋಲ್ಕತ್ತಾ: ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರನ್ನು ಖರೀದಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.

    ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ, ಸಿಎಂ ಮಮತಾ ಬ್ಯಾನರ್ಜಿ ಅವರು ಏರ್ಪಡಿಸಿರುವ ‘ಯುನೈಟ್ ಇಂಡಿಯಾ’ ಬೃಹತ್ ರ‍್ಯಾಲಿಯಲ್ಲಿ ಇಂದು ಸಿಎಂ ಎಚ್‍ಡಿ ಕುಮಾರಸ್ವಾಮಿ ಭಾಗವಹಿಸಿ ಮಾತನಾಡಿದರು. ಜನರ ವಿಶ್ವಾಸವನ್ನು ಗಳಿಸಲು ಹಾಗೂ ರಾಜ್ಯದ ಹಿತ ಕಾಯಲು ಪ್ರದೇಶಿಕ ಪಕ್ಷಗಳು ಸಮರ್ಥವಾಗಿದೆ ಎಂದು ತಿಳಿಸಿದರು.

    ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಎಚ್‍ಡಿಕೆ, ಕಳೆದ ಕೆಲ ಸಮಯದಿಂದ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಲ್ಲಿ ಬಿಜೆಪಿ ಪಕ್ಷ ಬಹುಮತ ಪಡೆಯಲು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರನ್ನು ಖರೀದಿ ಮಾಡಲು ಪ್ರಯತ್ನಿಸುತ್ತಿದೆ. ಅಲ್ಲದೇ ಕರ್ನಾಟಕ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಲು ಪ್ರಯತ್ನಿಸುತ್ತಿದ್ದರೆ, ಕೇಂದ್ರ ಸರ್ಕಾರ ರೈತರಿಗೆ ನೋಟಿಸ್ ಜಾರಿ ಮಾಡುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ರಾಷ್ಟ್ರದಲ್ಲಿ ಅಸಂವಿಧಾನಿಕ ಆಡಳಿತ ವ್ಯವಸ್ಥೆಯನ್ನು ಇಂದು ನಾವು ನೋಡುತ್ತಿದ್ದೇವೆ ಎಂದು ಕೇಂದ್ರದ ಸರ್ಕಾರದ ವಿರುದ್ಧ ಕಿಡಿಕಾರಿದರು.

    ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್, ಎನ್ ಚಂದ್ರಬಾಬು ನಾಯ್ಡು, ಮಾಜಿ ಸಿಎಂ ಗಳಾದ ಫಾರೂಖ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಎಂಡಿಕೆ ಪಕ್ಷದ ಎಂಕೆ ಸ್ಟಾಲಿನ್, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ, ಬಿಎಸ್‍ಪಿ ನಾಯಕ ಸತೀಶ್ ಮಿಶ್ರಾ, ಶರದ್ ಪವರ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

    ಮಮತಾ ಬ್ಯಾನರ್ಜಿ ಮಾತನಾಡಿ, ಎಲ್ಲಾ ಪಕ್ಷಗಳು ಒಂದಾಗಿ ಬಿಜೆಪಿ ವಿರುದ್ಧ ಒಗ್ಗಟ್ಟು ಪ್ರದರ್ಶಿಸಬೇಕು. ಕೇಂದ್ರದಲ್ಲಿ ಬಿಜೆಪಿ ಆಡಳಿತನ್ನು ಕಿತ್ತೊಗೆಯಬೇಕು ಎಂದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ನಾಯಕರು ಕೇಂದ್ರದ ಬಿಜೆಪಿ ಸರ್ಕಾರದ ಆಡಳಿತ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಾಗ್ದಾಳಿ ನಡೆಸಿದರು. ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಭಾಗವಹಿಸಿರಲಿಲ್ಲ. ಆದರೆ ರಾಹುಲ್ ನಿನ್ನೆಯೇ ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದರು.

    ಮುಂದಿನ ಏಪ್ರಿಲ್ ಮೇ ತಿಂಗಳಿನಲ್ಲಿ ನಡೆಯಬಹುದಾದ ಲೋಕಸಭಾ ಚುನಾವಣೆಗೆ ಎನ್‍ಡಿಎ ವಿರುದ್ಧ ಒಕ್ಕೂಟವನ್ನು ನಿರ್ಮಿಸಲು ಮಮತಾ ಬ್ಯಾನರ್ಜಿ ಅವರು ಸಮಾವೇಶವನ್ನು ಏರ್ಪಡಿಸಿದ್ದಾರೆ. ಈ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಬಿಜೆಪಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯಡಿಯೂರಪ್ಪನವರದ್ದು ಬಸ್‍ಸ್ಟಾಂಡ್ ಲವ್ ಸ್ಟೋರಿ: ಇಬ್ರಾಹಿಂ ಲೇವಡಿ

    ಯಡಿಯೂರಪ್ಪನವರದ್ದು ಬಸ್‍ಸ್ಟಾಂಡ್ ಲವ್ ಸ್ಟೋರಿ: ಇಬ್ರಾಹಿಂ ಲೇವಡಿ

    ಬೆಂಗಳೂರು: ಸಮ್ಮಿಶ್ರ ಸರ್ಕಾರ ಬೀಳುವ ಭಯ ನಮಗೇ ಇಲ್ಲ. ಏಕೆಂದರೆ ಕಾಂಗ್ರೆಸ್ ಶಿಸ್ತಿನ ಪಕ್ಷವಾಗಿದ್ದು, ಶಾಸಕರನ್ನು ಸೃಷ್ಟಿ ಮಾಡುವ ಪಕ್ಷವಾಗಿದೆ. ಆದರೆ ಬಿಎಸ್ ಯಡಿಯೂರಪ್ಪ ಅವರದ್ದು ಬಸ್ ಸ್ಟಾಂಡ್ ಲವ್ ಆಗಿದ್ದು, ಮದುವೆಯಾದವರನ್ನು ಸೆಳೆಯಲು ಪ್ರಯತ್ನಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಲೇವಡಿ ಮಾಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಆಪರೇಷನ್ ಕಮಲದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಪಕ್ಷದೊಂದಿಗೆ ಜನರು ಇದ್ದಾರೆ. ನಮ್ಮ ಪಕ್ಷದ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ರಾಜ್ಯ ಉಸ್ತುವಾರಿ ವೇಣುಗೋಪಾಲ್ ರಾವ್ ಸೇರಿದಂತೆ ಹಲವು ನಾಯಕರು ಈ ಬಗ್ಗೆ ಸ್ಪಷ್ಟವಾದ ಹೇಳಿಕೆ ನೀಡಿದ್ದಾರೆ. ನಮ್ಮ ಪಕ್ಷ ಶಿಸ್ತಿನ ಪಕ್ಷವಾಗಿದ್ದು, ಸರ್ಕಾರವನ್ನು ಹಾಗೆಯೇ ನಡೆಸಿಕೊಂಡು ಹೋಗುತ್ತಿದ್ದೇವೆ. ಆದರೆ ಮದುವೆ ಮನೆಯಲ್ಲಿ ನಿದ್ದೆ ಕಣ್ಣಲ್ಲಿ ಕೈ ಹಾಕಿದರು ಎನ್ನುವಂತೆ ಬಿಜೆಪಿ ಒದ್ದಾಡುತ್ತಿದೆ ಎಂದು ವ್ಯಂಗ್ಯವಾಡಿದರು.

    ಸಮ್ಮಿಶ್ರ ಸರ್ಕಾರ ಉತ್ತಮವಾಗಿ ಆಡಳಿತ ನಡೆಸುತ್ತಿದ್ದು, ಮದುವೆಯಾದ ಪತಿವ್ರತೆಯರನ್ನು ಕರೆದುಕೊಂಡು ಹೋಗಲು ಯಡಿಯೂರಪ್ಪ ಪ್ರಯತ್ನ ಮಾಡುತ್ತಿದ್ದಾರೆ. ಆಮಿಷಗಳನ್ನು ನೀಡುವ ಮೂಲಕ ಬಸ್‍ಸ್ಟಾಂಡ್ ಲವ್ ಮಾಡಲು ಮುಂದಾಗಿದ್ದಾರೆ. ಆದರೆ ಬಸ್‍ಸ್ಟಾಂಡ್ ಬಸವಿಯರು ಮಾತ್ರ ಅವರೊಂದಿಗೆ ಹೋಗುತ್ತಾರೆ. ಸಮ್ಮಿಶ್ರ ಸರ್ಕಾರ ಬಂದು 5 ತಿಂಗಳೂ ಆಗಿಲ್ಲ, ಇಂತ ಸಂದರ್ಭದಲ್ಲಿ ಅವರಿಗೆ ನೋವಾಗುವ ಸಂದರ್ಭ ಬಂದಿದೆ. ಏಕೆಂದರೆ ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಪಕ್ಷ ಸೋಲುಂಡಿದೆ. ಬಿಜೆಪಿಯವರಿಗೆ ಅವರ ಶಾಸಕರ ಮೇಲೆಯೇ ನಂಬಿಕೆಯಿಲ್ಲ ಎಂದು ಆರೋಪಿಸಿದರು.

    ಇದೇ ವೇಳೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಇಬ್ರಾಹಿಂ ಅವರು, ಶ್ರಮಿಕ ವರ್ಗದ ಬಾಯಿಗೆ ಮೋದಿ ಮಣ್ಣು ಹಾಕಿದ್ದಾರೆ. ಎಚ್‍ಎಎಲ್ ಸಂಸ್ಥೆ ಮುಚ್ಚುವ ಹಂತ ತಲುಪಿದೆ. ಆದರೆ ಉದ್ಯಮಿಗಳ ಪರ ಇರುವ ಕೇಂದ್ರ ಡೀಲ್ ಮಾಡಲು ಮುಂದಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಯನ್ನು ರಾಜ್ಯದ ಜನರು ಗಮನಿಸುತ್ತಿದ್ದು, ನಮ್ಮ ಮೇಲೆ ರಾಜ್ಯದ ಜನರ ಅನುಕಂಪ ಮೂಡಿದೆ. ಎಲ್ಲೋ ಕಳೆದುಕೊಂಡು ಇಲ್ಲಿ ಬಂದು ಹುಡುಕುವ ಪ್ರಯತ್ನವನ್ನು ಮೋದಿ ಅವರು ಮಾಡುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಸುಭದ್ರವಾಗಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪುಟಗೋಸಿ ಎಂಬ ಶಬ್ದ ಬಳಸಬಾರದಿತ್ತು: ದಿನೇಶ್ ಗುಂಡೂರಾವ್

    ಪುಟಗೋಸಿ ಎಂಬ ಶಬ್ದ ಬಳಸಬಾರದಿತ್ತು: ದಿನೇಶ್ ಗುಂಡೂರಾವ್

    ಬೆಂಗಳೂರು: ವಿಧಾನ ಸೌಧ ವೆಸ್ಟ್ ಗೇಟ್ ಬಳಿ ಹಣ ಪತ್ತೆ ಪ್ರಕರಣ ಬಗ್ಗೆ ಪ್ರತಿಕ್ರಿಯೆ ನೀಡುವ ವೇಳೆ ಪುಟಗೋಸಿ ಎಂಬ ಪದ ಬಳಸಬಾರದಿತ್ತು. ಇದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ನಾನು ಆಗ ಹೇಳಿದ ಸಂದರ್ಭವನ್ನು ತಪ್ಪಾಗಿ ಆರ್ಥೈಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.

    ಚಿತ್ರದುರ್ಗದಲ್ಲಿ ನಡೆದ ಮಾಚಿದೇವ ಮಡುವಾಳ ಜಾಗೃತಿ ಸಮಾರಂಭದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಮೋದಿ ಅವರ ರಫೇಲ್ ಹಗರಣದ 30 ಸಾವಿರ ಕೋಟಿ ರೂ. ಬಗ್ಗೆ ಮಾತಾಡುವಾಗ 26 ಲಕ್ಷ ರೂ. ಬಗ್ಗೆ ಕೇಳಿದರು. ಆಗ ನಾನು ಪುಟಗೋಸಿ ಎಂಬ ಶಬ್ದ ಉಪಯೋಗಿಸಿದೆ. ಆ ಪದ ಬಳಸಬಾರದಿತ್ತು ಬಳಸಿದ್ದೇನೆ. ಆದರೆ ನಾನು ಬಳಸಿದ ಸಂದರ್ಭ ಬೇರೆ ಇತ್ತು ಅಷ್ಟೇ. ಅದನ್ನು ಮಾಧ್ಯಮಗಳು ತಪ್ಪಾಗಿ ಆರ್ಥೈಸಿದ್ದಾರೆ ಎಂದರು.

    ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದರು ಕಾನೂನು ಕ್ರಮ ನಡೆಯುತ್ತದೆ. ಪೊಲೀಸರು ನಿಸ್ಪಕ್ಷಪಾತವಾಗಿ ತನಿಖೆ ನಡೆಸಲಿದ್ದಾರೆ. 10 ರೂ. ಅವ್ಯವಹಾರ ಆಗಿದ್ದರು ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ನಮ್ಮವರು ಸೇರಿದಂತೆ ಯಾರೇ ತಪ್ಪು ಮಾಡಿದ್ರು ತನಿಖೆ ನಡೆಸಲಾಗುವುದು, ಅವರ ವಿರುದ್ಧ ಕಾನೂನು ಕ್ರಮ ನಡೆಯುತ್ತಿದೆ ಎಂದು ಸ್ಪಷ್ಟನೆ ನೀಡಿದರು.

    ರಫೇಲ್ ಒಪ್ಪಂದದ ಬಗ್ಗೆ ಅಂದು ನಾನು ಮಾತನಾಡುತ್ತಿದೆ. ಈ ಬಗ್ಗೆ ನಿರಂತರ ಹೋರಾಟ ನಡೆಸಿದರು ಮೋದಿ ಸರ್ಕಾರ ಜಂಟಿ ಸದನ ಸಮಿತಿ ರಚಿಸಲು ಅವಕಾಶ ನೀಡಿಲ್ಲ. ಅಂತಹ ವಿಚಾರದ ಬಗ್ಗೆ ಬಿಜೆಪಿ ಅವರು ಮಾತನಾಡದೆ ಈ ಬಗ್ಗೆ ಮಾತನಾಡುತ್ತಾರೆ ಎಂದು ಆರೋಪಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv