Tag: prime minister modi

  • ಅಯೋಧ್ಯೆ ರಾಮಮಂದಿರ ವಿಚಾರಣೆ – ನ್ಯಾಯಾಧೀಶರಿಗೆ ಕಾಂಗ್ರೆಸ್ ಬೆದರಿಕೆ ಹಾಕಿತ್ತು : ಪ್ರಧಾನಿ ಮೋದಿ

    ಅಯೋಧ್ಯೆ ರಾಮಮಂದಿರ ವಿಚಾರಣೆ – ನ್ಯಾಯಾಧೀಶರಿಗೆ ಕಾಂಗ್ರೆಸ್ ಬೆದರಿಕೆ ಹಾಕಿತ್ತು : ಪ್ರಧಾನಿ ಮೋದಿ

    ಜೈಪುರ: 2019ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಮಮಂದಿರ ವಿವಾದ ಪ್ರಕರಣದ ವಿಚಾರಣೆಯನ್ನು ತಡಮಾಡುವಂತೆ ಕಾಂಗ್ರೆಸ್ ಹೇಳಿತ್ತು. ಅಲ್ಲದೇ ಇದನ್ನು ನಿರಾಕರಿಸಿದ ನ್ಯಾಯಮೂರ್ತಿಗಳಿಗೆ ಮಹಾಭಿಯೋಗ ಮಾಡುವುದಾಗಿ ಬೆದರಿಕೆ ಹಾಕಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ.

    ಮಧ್ಯಪ್ರದೇಶದ ಅಲ್ವಾರ್ ಚುನಾವಣಾ ಪ್ರಚಾರ ಯಾತ್ರೆಯ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ಪಕ್ಷ ರಾಜಕೀಯದಲ್ಲಿ ನ್ಯಾಯಾಂಗ ವ್ಯವಸ್ಥೆಯನ್ನು ಎಳೆದು ತರಲು ಪ್ರಯತ್ನ ನಡೆಸಿದೆ ಎಂದು ಆರೋಪಿಸಿದರು.

    ಕಾಂಗ್ರೆಸ್ ಪಕ್ಷ ದೇಶದ ನ್ಯಾಯಾಂಗ ವ್ಯವಸ್ಥೆ ಭಯದ ವಾತಾವರಣದಲ್ಲಿ ಉಂಟಾಗುವಂತೆ ಮಾಡುತ್ತಿದೆ. ಅಲ್ಲದೇ ಕಾಂಗ್ರೆಸ್ ನಾಯಕರೊಬ್ಬರು 2019ರ ಚುನಾವಣೆ ಕಾರಣ ನೀಡಿ ಅಯೋಧ್ಯೆ ವಿವಾದದ ವಿಚಾರಣೆಯನ್ನು ಮುಂದೂಡುವಂತೆ ಕೇಳಿದ್ದರು. ಅಲ್ಲದೇ ಇದಕ್ಕೆ ಒಪ್ಪದ ನ್ಯಾಯಮೂರ್ತಿಗಳ ವಿರುದ್ಧ ಮಹಾಭಿಯೋಗದ ಬೆದರಿಕೆ ಹಾಕಿದ್ದರು. ಇಂತಹ ವಿಚಾರಗಳನ್ನು ದೇಶದ ಜನ ಹೇಗೆ ಸ್ವೀಕರಿಸುತ್ತಾರೆ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ:ಸುಪ್ರೀಂ ಮುಖ್ಯ ನ್ಯಾಯಮೂರ್ತಿಗಳ ಮಹಾಭಿಯೋಗಕ್ಕೆ ಮನಮೋಹನ್ ಸಿಂಗ್ ಸಹಿ ಮಾಡಿಲ್ಲ ಏಕೆ?

    ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅಯೋಧ್ಯೆ ವಿವಾದ ಪ್ರಕರಣವನ್ನು 2019ರ ಚುನಾವಣೆಯ ಕಾರಣ ತ್ವರಿತ ವಿಚಾರಣೆ ನಡೆಸದಂತೆ ಹೇಳಿದ್ದರು. ಅಲ್ಲದೇ ಸುನ್ನಿ ವಕ್ಫ್ ಬೋರ್ಡ್ ಸಲಹೆಯಂತೆ ಈ ಕುರಿತು ನ್ಯಾಯಾಲಯಕ್ಕೆ ತಿಳಿಸಿದ್ದರು ಎಂದು ಆರೋಪಿಸಿದರು. ಇದನ್ನೂ ಓದಿ:ಮುಖ್ಯ ನ್ಯಾಯಮೂರ್ತಿಗಳ ಮಹಾಭಿಯೋಗ ನಡೆಯುವುದು ಹೇಗೆ?

    ಹಿಂದೂ ಸಂಘಟನೆಗಳು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಸುಗ್ರೀವಾಜ್ಞೆ ಕೋರಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಶಿವಸೇನೆ ಕೂಡ ಈ ಕುರಿತು ಬೃಹತ್ ಯಾತ್ರೆಯನ್ನು ಕೈಗೊಂಡಿದೆ. ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೋದಿ ನೇತೃತ್ವದ ಸರ್ಕಾರ ಮಂದಿರ ನಿರ್ಮಾಣ ಮಾಡಿಲ್ಲ ಎಂದಾದರೆ, ಅದು ಅಧಿಕಾರದಲ್ಲಿ ಉಳಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದೇಶದ ಸಣ್ಣ ವಿಮಾನ ನಿಲ್ದಾಣಗಳಲ್ಲಿ ಮೊಬೈಲ್ ಎಟಿಸಿ: ಹೇಗೆ ಕಾರ್ಯನಿರ್ವಹಿಸುತ್ತೆ? ವಿಡಿಯೋ ನೋಡಿ

    ದೇಶದ ಸಣ್ಣ ವಿಮಾನ ನಿಲ್ದಾಣಗಳಲ್ಲಿ ಮೊಬೈಲ್ ಎಟಿಸಿ: ಹೇಗೆ ಕಾರ್ಯನಿರ್ವಹಿಸುತ್ತೆ? ವಿಡಿಯೋ ನೋಡಿ

    ನವದೆಹಲಿ: ಭಾರತದ ಪ್ರಮುಖ ಸಣ್ಣ ವಿಮಾನ ಕೇಂದ್ರಗಳಲ್ಲಿ ವಿಮಾನ ಸೇವೆ ಒದಗಿಸಲು 8 ಮೊಬೈಲ್ ವಿಮಾನ ನಿಯಂತ್ರಣ ಕೇಂದ್ರ(ಏರ್ ಟ್ರಾಫಿಕ್ ಕಂಟ್ರೋಲ್)ಗಳನ್ನು ಸ್ಥಾಪಿಸಲು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ನಿರ್ಧರಿಸಿದೆ.

    ಮೊದಲ ಬಾರಿಗೆ ಜಾರ್ಖಂಡ್‍ನ ಸ್ಟೀಲ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೋಕಾರೊ ಮೊಬೈಲ್ ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ) ಕೇಂದ್ರವನ್ನು ಈ ಸೇವೆಯನ್ನು ಪಡೆಯಲಿದೆ. ಸಣ್ಣ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ನಿಯಂತ್ರಣ ಮಾಡಲು ಎಟಿಸಿ ಬಳಕೆ ಮಾಡಲಿದ್ದು, 64.6 ಕೋಟಿ ರೂ. ವೆಚ್ಚದಲ್ಲಿ ಪ್ರಾದೇಶಿಕ ಸಂಪರ್ಕ ಯೋಜನೆ (ಆರ್ ಸಿಎಸ್) ಅಡಿ ಸ್ಲೊವಾಕಿಯಾ ದೇಶದ ಎಂಎಸ್‍ಎಂ ಕಂಪನಿಯಿಂದ 8 ಮೊಬೈಲ್ ಎಟಿಸಿ ಖರೀದಿ ಮಾಡಲು ಮುಂದಾಗಿದೆ.

    ಕೇಂದ್ರ ಸರ್ಕಾರದ ವಿಮಾನಯಾನದಲ್ಲಿ ಪಗ್ರತಿ ಸಾಧಿಸುವ ದೃಷ್ಟಿಯಿಂದ ಜಾರಿ ಮಾಡಿದ ಅಗ್ಗದ ಬೆಲೆಯ ಉಡಾನ್ (ಉಡೇ ದೇಶ್ ಕಾ ಆಮ್ ನಾಗರಿಕ್) ಯೋಜನೆಯ ಭಾಗವಾಗಿ ಸಣ್ಣ ವಿಮಾನದಲ್ಲಿ ಪ್ರತಿ ದಿನ 1 ಅಥವಾ 2 ವಿಮಾನ ಸೇವೆಗಳನ್ನು ನೀಡಲಾಗುತ್ತಿದೆ. ಈ ವಿಮಾನಗಳ ನಿಯಂತ್ರಣಕ್ಕಾಗಿ ಸದ್ಯ ವಿಮಾನ ಪ್ರಾಧಿಕಾರ ಈ ನಿರ್ಣಯ ಕೈಗೊಂಡಿದೆ. ಉಡಾನ್ ಯೋಜನೆ ಅಡಿ 2,500 ರೂ. ಗಿಂತ ಕಡಿಮೆ ಬೆಲೆಯಲ್ಲಿ ಸೇವೆ ನೀಡಲಾಗುತ್ತಿದೆ.

    ಸಣ್ಣ ವಿಮಾನ ನಿಲ್ದಾಣಗಳಲ್ಲಿ ಮೊಬೈಲ್ ಏರ್ ಟ್ರಾಫಿಕ್ ಕಂಟ್ರೋಲ್ ಬಳಸುವುದು ಸೂಕ್ತ ಎಂದು ಎಎಐ ಅಧ್ಯಕ್ಷ ಗುರುಪ್ರಸಾದ್ ಮೊಹಾಪತ್ರಾ ಅಭಿಪ್ರಾಯ ಪಟ್ಟಿದ್ದಾರೆ. ದೇಶದಲ್ಲಿ ಸದ್ಯ 8 ಸಣ್ಣ ವಿಮಾನ ನಿಲ್ದಾಣಗಳು ಈ ಸೇವೆಯನ್ನು ಪಡೆಯಲಿದ್ದು, ಪ್ರಮುಖವಾಗಿ ಬಿಲಾಸ್ಪುರ (ಚತ್ತೀಸ್‍ಗಢ), ಅಂಬಿಕಾಪುರ (ಚತ್ತೀಸ್‍ಗಢ), ಜಗದಾಲ್ಪುರ (ಚತ್ತೀಸ್‍ಗಢ), ಜೆಪೋರ್ ಒಡಿಸ್ಸಾ), ಉತ್ಕೇಳ (ಒಡಿಸ್ಸಾ), ವೆಲ್ಲೂರ್ (ತಮಿಳುನಾಡು), ಬೋಕಾರೊ (ಜಾರ್ಖಂಡ್), ಮಿಥಾಪುರ್ (ಗುಜರಾತ್) ವಿಮಾನ ನಿಲ್ದಾಣಗಳು ಎಟಿಸಿ ಕೇಂದ್ರಗಳನ್ನು ಪಡೆಯಲಿದೆ.

    ಸದ್ಯ ತಯಾರಿಸಲಾಗಿರುವ ಎಟಿಸಿ ಕೇಂದ್ರಗಳನ್ನು ಭಾರತದ ಸಣ್ಣ ವಿಮಾನ ನಿಲ್ದಾಣಗಳನ್ನು ಗಮನದಲ್ಲಿಟ್ಟುಕೊಂಡೆ ನಿರ್ಮಾಣ ಮಾಡಲಾಗಿದ್ದು, ತಾಂತ್ರೀಕವಾಗಿ ಈ ಕೇಂದ್ರಗಳು ಆಧುನಿಕ ಸೌಲಭ್ಯಗಳನ್ನು ಹೊಂದಿದೆ

    ಏನೆಲ್ಲಾ ಸೌಲಭ್ಯ ಹೊಂದಿದೆ:
    ಮೊಬೈಲ್ ಏರ್ ಟ್ರಾಫಿಕ್ ಕಂಟ್ರೋಲ್ ನಲ್ಲಿ ಆಧುನಿಕ ಸಂವಹನ ಸಾಧನ, ದಿಕ್ಸೂಚಿ, ಕಣ್ಗಾವಲು ಕೇಂದ್ರ, ಸ್ವಯಂ ಚಾಲಿತ ಹವಾಮಾನ ವೀಕ್ಷಣಾ ವ್ಯವಸ್ಥೆ ಸಾಧನಗಳನ್ನು ಹೊಂದಿದೆ.

    ಈ ಸಾಧನವನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಕೊಂಡ್ಯೊಯಲು ಸುಲಭವಾಗಿದ್ದು ಕ್ಯಾಬಿನನ್ನು 8 ಮೀಟರ್ ಎತ್ತರವರೆಗೂ ಏರಿಸಬಹುದು. ಈ ಕ್ಯಾಬಿನ್ ಆಲುಮಿನಿಯಮ್ ನಿಂದ ಸಿದ್ಧಪಡಿಸಲಾಗಿದ್ದು, 360 ಡಿಗ್ರಿ ವ್ಯೂ ಸಿಗುತ್ತಿದೆ. ಅಲ್ಲದೇ ಇದು ಸ್ಫೋಟ, ಚಳಿ ಹಾಗೂ ಕಿಟಕಿಗಳು ಮಬ್ಬಾಗುವುದನ್ನು ತಡೆಯುವ ಸಾಮಥ್ರ್ಯ ಹೊಂದಿದೆ.

    ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ 2017 ಏಪ್ರಿಲ್‍ನಲ್ಲಿ ಉಡಾನ್ ಸೇವೆಗೆ ಹಸಿರು ನಿಶಾನೆ ತೋರಿದ್ದರು. ಶಿಮ್ಲಾದಿಂದ ದೆಹಲಿಗೆ ಮೊದಲ ವಿಮಾನ ಹಾರಾಟವಾಗಿತ್ತು. 2017 ಏಪ್ರಿಲ್ ನಿಂದ 2018 ಸೆಪ್ಟೆಂಬರ್ 23ರ ಅವಧಿಯಲ್ಲಿ ಇದುವರೆಗೂ 4.5 ಲಕ್ಷ ಮಂದಿ ಉಡಾನ್ ಸೇವೆಯನ್ನು ಬಳಕೆ ಮಾಡಿದ್ದಾರೆ. ಈ ಸೇವೆಯನ್ನು ಮತ್ತಷ್ಟು ಜನರಿಗೆ ಲಭ್ಯವಾಗುವಂತೆ ಮಾಡಲು ಯೋಜನೆ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

    https://www.youtube.com/watch?v=S_a7_3BsQSw

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೋದಿ ಭೇಟಿ ಮಾಡಿ ಕುತೂಹಲ ಮೂಡಿಸಿದ ಜಡೇಜಾ ದಂಪತಿ

    ಮೋದಿ ಭೇಟಿ ಮಾಡಿ ಕುತೂಹಲ ಮೂಡಿಸಿದ ಜಡೇಜಾ ದಂಪತಿ

    ನವದೆಹಲಿ: ಟೀಂ ಇಂಡಿಯಾ ಆಲ್‍ರೌಂಡರ್ ರವೀಂದ್ರ ಜಡೇಜಾ ಪತ್ನಿ ಸಮೇತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

    ಆಸೀಸ್ ಟೂರ್ನಿಯ ಪ್ರವಾಸದ ಸಿದ್ಧತೆಯಲ್ಲಿರುವ ಜಡೇಜಾ ಮಂಗಳವಾರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಕೂಡ ಟ್ವೀಟ್ ಮಾಡಿ ಜಡೇಜಾ ಹಾಗೂ ರಿವಾಬಾ ಸೋಲಂಕಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.

    ಮೋದಿ ಅವರ ಭೇಟಿಯ ಫೋಟೋವನ್ನು ರವೀಂದ್ರ ಜಡೇಜಾ ಕೂಡ ಟ್ವೀಟ್ ಮಾಡಿದ್ದು, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು ಹೆಮ್ಮೆಯ ವಿಚಾರವಾಗಿದೆ ಎಂದು ತಿಳಿಸಿದ್ದಾರೆ. ಈ ವೇಳೆ ಪುಷ್ಪಗುಚ್ಛ ನೀಡಿ ಶುಭಾಶಯ ತಿಳಿಸಿದ್ದಾರೆ.

    ಏಷ್ಯಾಕಪ್ ಟೂರ್ನಿಯಲ್ಲಿ ತಂಡಕ್ಕೆ ಕಮ್‍ಬ್ಯಾಕ್ ಮಾಡಿದ್ದ ರವೀಂದ್ರ ಜಡೇಜಾ ಉತ್ತಮ ಪ್ರದರ್ಶನ ನೀಡಿದ್ದರು. ಆದರೆ ಆಸೀಸ್ ವಿರುದ್ಧದ ಸಿಮೀತ ಓವರ್‍ಗಳ ಪಂದ್ಯಗಳ ಟೂರ್ನಿಗೆ ಆಯ್ಕೆಯಾಗಲು ವಿಫಲರಾಗಿದ್ದರು. ಸದ್ಯ ಟೆಸ್ಟ್ ತಂಡದಲ್ಲಿ ಮಾತ್ರ ಸ್ಥಾನ ಪಡೆದಿರುವ ರವೀಂದ್ರ ಜಡೇಜಾ ಸದ್ಯದಲ್ಲೇ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇತ್ತ ಲೋಕಸಭಾ ಚುನಾವಣೆ ವೇಳೆಯೇ ಜಡೇಜಾ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಉಡುಗೊರೆ ಬದಲು ಮೋದಿಗೆ ಮತ ನೀಡಿ – ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಿ ಮಿಂಚಿಂಗ್!

    ಉಡುಗೊರೆ ಬದಲು ಮೋದಿಗೆ ಮತ ನೀಡಿ – ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಿ ಮಿಂಚಿಂಗ್!

    ಬೆಂಗಳೂರು: ಪ್ರಧಾನಿ ಅವರ ಫೋಟೋ ಹಾಕಿ 2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಗೆ ಮತ ನೀಡುವಂತೆ ಆಹ್ವಾನ ಪತ್ರಿಕೆಯೊಂದು ಮುದ್ರಣಗೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಮಂಗಳೂರು ಮೂಲದ ಪ್ರವೀಣ್ ಹಾಗೂ ಹೇಮಲತಾ ಎಂಬವರು ತಮ್ಮ ಮದುವೆ ಆಮಂತ್ರಣದಲ್ಲಿ ಮೋದಿ ಫೋಟೋ ಹಾಕಿದ್ದು, ಈ ಮೂಲಕ ಮದುವೆಗೆ ಆಗಮಿಸುವವರಿಗೆ ವಿಶೇಷ ಮನವಿ ಮಾಡಿದ್ದಾರೆ.

    ನಿಮ್ಮ ಸಂತಸದ ಆಗಮನ ನಮಗೇ ಆಶೀರ್ವಾದ. ಹೀಗಾಗಿ ಮದುವೆಯಲ್ಲಿ ಉಡುಗೊರೆ ನೀಡುವ ಬದಲು 2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿ ಎಂದು ಮನವಿ ಮಾಡಿದ್ದಾರೆ. ಪ್ರಧಾನಿ ಮೋದಿ ಅವರ ಸಾಧನೆಯ ಬಗ್ಗೆಯೂ ವಿವರಣೆ ನೀಡುರುವ ಅವರು ಆಮಂತ್ರಣ ಪತ್ರಿಕೆಯ ಹಿಂಭಾಗದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ಯೋಜನೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

    ಮೋದಿ ಸರ್ಕಾರದ ಪ್ರಮುಖ 29 ಸಾಧನೆಗಳನ್ನು ಪ್ರಸ್ತಾಪ ಮಾಡಿರುವ ಅವರು ಇನ್ನೂ ಹಲವು ಜನೋಪಯೋಗಿ ಯೋಜನೆಗಳಿಂದ ಭಾರತವನ್ನು ವಿಶ್ವಗುರು ಸ್ಥಾನಕ್ಕೇರಿಸಲು ಪ್ರಯತ್ನಿಸುತ್ತಿರುವ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲು ಬಿಜೆಪಿ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಅನಂತಕುಮಾರ್ ಅಂತಿಮ ದರ್ಶನ – ನ್ಯಾಷನಲ್ ಕಾಲೇಜು ಮೈದಾನ ಸಿದ್ಧತೆ ವೀಕ್ಷಿಸಿದ ಡಿಸಿಎಂ

    ಅನಂತಕುಮಾರ್ ಅಂತಿಮ ದರ್ಶನ – ನ್ಯಾಷನಲ್ ಕಾಲೇಜು ಮೈದಾನ ಸಿದ್ಧತೆ ವೀಕ್ಷಿಸಿದ ಡಿಸಿಎಂ

    ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತಿಮ ದರ್ಶನ ಪಡೆಯಲು ಆಗಮಿಸುವ ಸಾರ್ವಜನಿಕರಿಗೆ ನಾಳೆ ನಗರದ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಡಿಸಿಎಂ ಪರಮೇಶ್ವರ್ ಅವರು ಕಾರ್ಯಕ್ರಮದ ಸಿದ್ಧತೆಗಳನ್ನು ವೀಕ್ಷಿಸಿದರು.

    ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಾಳೆ ಅನಂತಕುಮಾರ್ ಅವರ ಪಾರ್ಥೀವ ಶರೀರ ಸಾರ್ವಜನಿಕ ದರ್ಶನ ಲಭ್ಯವಾಗಲಿದೆ. ರಾಜ್ಯ ಸರ್ಕಾರ ಈಗಾಗಲೇ ಈ ಕುರಿತು ಸಿದ್ಧತೆಗಳನ್ನು ಆರಂಭಿಸಿದೆ. ಕಾರ್ಯಕ್ರಮದ ಕುರಿತು ಡಿಸಿಎಂ ಪರಮೇಶ್ವರ್ ಅವರಿಗೆ ಹಿರಿಯ ಪೊಲೀಸ್ ಅಧಿಕಾರಿಗಳಾದ ಹೆಚ್ಚುವರಿ ಪೊಲೀಸ್ ಆಯುಕ್ತ ಹರಿಶೇಖರನ್, ಡಿಸಿಪಿಗಳಾದ ಅಣ್ಣಾಮಲೈ ಹಾಗೂ ಸಂದೀಪ್ ಪಾಟೀಲ್ ಮಾಹಿತಿ ನೀಡಿದರು. ಈ ವೇಳೆ ಮೇಯರ್ ಗಂಗಾಂಬಿಕೆ ಕೂಡ ಪರಮೇಶ್ವರ್ ಅವರೊಂದಿಗೆ ಆಗಮಿಸಿದ್ದರು.

    ಈ ವೇಳೆ ಮಾತನಾಡಿದ ಡಿಸಿಎಂ ಪರಮೇಶ್ವರ್ ಅವರು, ಅನಂತಕುಮಾರ್ ಅವರ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನ ಹಿನ್ನೆಲೆ ಹಲವು ಗಣ್ಯರು ಹಾಗೂ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ನಿರೀಕ್ಷೆ ಇದೆ. ನಾಳೆ ಎರಡೂವರೆ ಗಂಟೆ ಕಾಲ ಅಂತಿಮ ದರ್ಶಕ್ಕೆ ಅವಕಾಶ ಇರಲಿದೆ. ಇಂದು ಸಂಜೆ 8.30 ಕ್ಕೆ ಪ್ರಧಾನಿ ಮೋದಿ ಅವರು ಕೂಡ ಆಗಮಿಸಲಿದ್ದು, ಉಪರಾಷ್ಟ್ರಪತಿಗಳು, ಗೃಹ ಸಚಿವರು ಮತ್ತು ಕೇಂದ್ರದ ಹಲವು ಸಚಿವರ ಆಗಮಿಸಲಿದ್ದಾರೆ. ಎಲ್ಲರಿಗೂ ವ್ಯವಸ್ಥಿತವಾಗಿ ದರ್ಶನ ಮಾಡುವ ಅವಕಾಶ ಕಲ್ಪಿಸಬೇಕೆಂಬ ಉದ್ದೇಶದಿಂದ ಸೂಕ್ತ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಸಮರ್ಥ ಆಡಳಿತಾಧಿಕಾರಿ, ಬಿಜೆಪಿಯ ದೊಡ್ಡ ಆಸ್ತಿ ಅನಂತ ಕುಮಾರ್- ಪ್ರಧಾನಿ ಮೋದಿ

    ಸಮರ್ಥ ಆಡಳಿತಾಧಿಕಾರಿ, ಬಿಜೆಪಿಯ ದೊಡ್ಡ ಆಸ್ತಿ ಅನಂತ ಕುಮಾರ್- ಪ್ರಧಾನಿ ಮೋದಿ

    ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

    ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತಕುಮಾರ್ (59) ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಇಂದು ನಸುಕಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

    ಪ್ರಧಾನಿ ಮೋದಿ ಅವರು ಶೋಕ ಸಂದೇಶವನ್ನು ಟ್ವೀಟ್ ಮಾಡುವ ಮೂಲಕ ಅನಂತಕುಮಾರ್ ಅಗಲಿಕೆಗೆ  ಸಂತಾಪ ಸೂಚಿಸಿದ್ದಾರೆ. “ಅನಂತಕುಮಾರ್ ಜೀ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅವರ ಪತ್ನಿ ಡಾ. ತೇಜಸ್ವಿನಿ ಜೊತೆ ಮಾತನಾಡಿದ್ದೇನೆ. ಅವರ ಕುಟುಂಬದವರಿಗೆ, ಸ್ನೇಹಿತರಿಗೆ ಮತ್ತು ಬೆಂಬಲಿಗರಿಗೆ ದುಃಖವನ್ನು ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥನೆ ಮಾಡಿಕೊಳ್ಳುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

    “ಅನಂತ ಕುಮಾರ್ ಜೀ ಅವರು ಒಬ್ಬ ಸಮರ್ಥ ಆಡಳಿತಾಧಿಕಾರಿಯಾಗಿದ್ದು, ಅನೇಕ ಸಚಿವ ಖಾತೆಗಳನ್ನು ನಿರ್ವಹಿಸಿದ್ದರು. ಬಿಜೆಪಿ ಸಂಘಟನೆಗೆ ದೊಡ್ಡ ಆಸ್ತಿಯಾಗಿದ್ದು, ಅವರು ಕರ್ನಾಟಕದಲ್ಲಿ ವಿಶೇಷವಾಗಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪಕ್ಷವನ್ನು ಬಲಪಡಿಸಲು ಕಠಿಣ ಶ್ರಮ ಪಟ್ಟಿದ್ದರು.” ಎಂದು ಅವರ ಬಗ್ಗೆ ಹೇಳಿದ್ದಾರೆ.

    ನನ್ನ ಸಹೋದ್ಯೋಗಿ ಮತ್ತು ಸ್ನೇಹಿತ ಶ್ರೀ ಅನಂತ್ ಕುಮಾರ್ ಜಿ ಅಗಲಿಕೆಯಿಂದ ನಾನು ತುಂಬಾ ದುಃಖಿತನಾಗಿದ್ದೇನೆ. ಅವರು ಚಿಕ್ಕ ವಯಸ್ಸಿನಲ್ಲೇ ರಾಜಕೀಯ ಜೀವನವನ್ನು ಪ್ರವೇಶಿಸಿದ್ದರು. ಅನಂತ ಕುಮಾರ್ ಅವರು ಶ್ರದ್ಧೆ ಮತ್ತು ಸಹಾನುಭೂತಿಯಿಂದ ಸಮಾಜಕ್ಕೆ ಸೇವೆ ಸಲ್ಲಿಸಿದ್ದಾರೆ ಎಂದು ಬೇಸರದಿಂದ ಹೇಳಿಕೊಂಡಿದ್ದಾರೆ.

    ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಅನಂತಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇಂದು ಬೆಳಗ್ಗೆ ಪ್ರಧಾನಿ ಮೋದಿ ಬೆಂಗಳೂರಿಗೆ ಬರಲಿದ್ದಾರೆ. ಬೆಳಗ್ಗೆ 9 ಗಂಟೆಯ ನಂತರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆಗೆ ಸಿದ್ಧತೆ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ರಾಮಮಂದಿರ ನಿರ್ಮಾಣ ಸಾಧ್ಯವಾಗದಿದ್ದರೆ ಅಧಿಕಾರದಿಂದ ಕೆಳಗಿಳಿಸಿ – ಆರ್‌ಎಸ್‌ಎಸ್‌ಗೆ ಠಾಕ್ರೆ ತಾಕೀತು

    ರಾಮಮಂದಿರ ನಿರ್ಮಾಣ ಸಾಧ್ಯವಾಗದಿದ್ದರೆ ಅಧಿಕಾರದಿಂದ ಕೆಳಗಿಳಿಸಿ – ಆರ್‌ಎಸ್‌ಎಸ್‌ಗೆ ಠಾಕ್ರೆ ತಾಕೀತು

    ಮುಂಬೈ: ಕೇಂದ್ರ ಸರ್ಕಾರ ರಾಮ ಮಂದಿರ ನಿರ್ಮಾಣ ಮಾಡಲು ವಿಫಲವಾದಲ್ಲಿ ಅಧಿಕಾರದಿಂದ ಕೆಳಗಿಳಿಸುವಂತೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಗುಡುಗಿದ್ದಾರೆ.

    ಮುಂಬೈನಲ್ಲಿ ಮಾತನಾಡಿದ ಅವರು ಆರ್‌ಎಸ್‌ಎಸ್‌ ಎದುರು ಈ ಬೇಡಿಕೆ ಇಟ್ಟಿದ್ದು, ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿ ಬಹುಮತ ಪಡೆದು ಸರ್ಕಾರ ರಚನೆ ಮಾಡಿದೆ. ಒಂದೇ ಸಿದ್ಧಾಂತ ಹೊಂದಿರುವ ಪಕ್ಷವಾಗಿ ಬಿಜೆಪಿ ರಾಮ ಮಂದಿರ ನಿರ್ಮಾಣ ಮಾಡಲೇ ಬೇಕಿದೆ. ಇಲ್ಲವಾದಲ್ಲಿ ಸರ್ಕಾರ ಅಧಿಕಾರದಲ್ಲಿ ಇರಲು ಬೇರೆ ಕಾರಣವೇ ಉಳಿದಿಲ್ಲ ಎಂದು ಬಿಜೆಪಿ ಅಧಿಕಾರಕ್ಕೆ ಬರಲು ಕಾರಣವಾಗಿರುವ ಆರ್‌ಎಸ್‌ಎಸ್‌ ತಾಕೀತು ಮಾಡಿದ್ದಾರೆ.

    ಪ್ರಧಾನಿ ಮೋದಿ ಅವರಿಗೆ ರಾಮ ಮಂದಿರ ನಿರ್ಮಾಣದ ಕುರಿತು ನೆನಪು ಮಾಡಲು ಠಾಕ್ರೆ ಅವರು ನ.25 ರಂದು ಅಯೋಧ್ಯೆಗೆ ಭೇಟಿ ನೀಡಲಿದ್ದು, ಶಿವಸೇನಾ ಪಕ್ಷ ಮಾತ್ರವೇ ಈ ಕುರಿತು ಎಚ್ಚರಿಕೆ ನೀಡಲಿದೆ. ಕೋರ್ಟ್ ಮೂಲಕ ಈ ವಿವಾದವನ್ನು ಬಗೆಹರಿಸಲು ಚಿಂತಿಸಿದರೆ 1 ಸಾವಿರ ವರ್ಷ ತೆಗೆದುಕೊಳ್ಳುತ್ತದೆ ಎಂದು ಶಿವಸೇನಾ ಮುಖಂಡ, ಸಂಸದ ಸಂಜಾಯ್ ರವೌತ್ ಹೇಳಿದ್ದಾರೆ.

    ಮಹಾರಾಷ್ಟ್ರ ಚುನಾವಣೆ ಸಮಯದಿಂದಲೂ ಶಿವಸೇನಾ ಪದೇ ಪದೇ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬರುತ್ತಿದೆ. ಆದರೆ ಇತ್ತ ಬಿಜೆಪಿ ಮಾತ್ರ ಮತ್ತೆ ಶಿವಸೇನಾ ಪಕ್ಷದೊಂದಿಗೆ ಮೈತ್ರಿ ನಡೆಸುವ ಕುರಿತು ಮಾತನಾಡಿದೆ. ಬಿಜೆಪಿ ಮಾತಿಗೆ ತಿರುಗೇಟು ನೀಡಿರುವ ಶಿವಸೇನೆ ತನ್ನ ಮುಖವಾಣಿ `ಸಾಮ್ನಾ’ ಪತ್ರಿಕೆಯಲ್ಲಿ ಖಾರವಾಗಿ ಪ್ರತಿಕ್ರಿಯೆ ನೀಡಿತ್ತು. ಅಲ್ಲದೇ ಮಹಾರಾಷ್ಟ್ರದಲ್ಲಿ ಏಕಾಂಗಿಯಾಗಿ ಅಧಿಕಾರಕ್ಕೆ ಬರುವಂತೆ ರಾಜ್ಯ ಸರ್ಕಾರಕ್ಕೂ ಹಾಗೂ ಬಿಜೆಪಿ ಪಕ್ಷಕ್ಕೂ ಸವಾಲು ನೀಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೋದಿಗೆ ಮುಸ್ಲಿಂ ಹೆಂಡತಿಯರ ಬಗ್ಗೆ ಇರೋ ಚಿಂತೆ ರಾಮ ಮಂದಿರದ ಬಗ್ಗೆ ಇಲ್ಲ : ಸಿಎಂ ಇಬ್ರಾಹಿಂ

    ಮೋದಿಗೆ ಮುಸ್ಲಿಂ ಹೆಂಡತಿಯರ ಬಗ್ಗೆ ಇರೋ ಚಿಂತೆ ರಾಮ ಮಂದಿರದ ಬಗ್ಗೆ ಇಲ್ಲ : ಸಿಎಂ ಇಬ್ರಾಹಿಂ

    ಹುಬ್ಬಳ್ಳಿ:  ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಸ್ಲಿಂ ಹೆಂಡತಿಯರ ಬಗ್ಗೆ ಇರುವ ಚಿಂತೆ ರಾಮ ಮಂದಿರದ ಬಗ್ಗೆ ಇಲ್ಲ ಎಂದು ಮಾಜಿ ಕಾಂಗ್ರೆಸ್ ಮುಖಂಡ, ಎಂಎಲ್‍ಸಿ ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಇಬ್ರಾಹಿಂ, ರಾಮ ಮಂದಿರ ಸಮಸ್ಯೆಯನ್ನು ಬಗೆ ಹರಿಸುವ ಇಚ್ಛೆ ಬಿಜೆಪಿಗೆ ಇಲ್ಲ. ಇದಕ್ಕೆ 2019ರ ಲೋಕಸಭಾ ಚುನಾವಣೆಯಲ್ಲಿ ದೇಶದ ಜನ ಸೂಕ್ತ ಉತ್ತರ ನೀಡುತ್ತಾರೆ. ಅಲ್ಲದೇ ಸದ್ಯ ನಡೆಯುತ್ತಿರುವ ಉಪಚುನಾವಣೆಯಲ್ಲಿ ಐದು ಕ್ಷೇತ್ರಗಳಲ್ಲಿಯೂ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾರೆ ಎಂದು ಭವಿಷ್ಯ ನುಡಿದರು.

    ಇದೇ ವೇಳೆ ರಾಮ ಮಂದಿರ ಕಟ್ಟುವುದಕ್ಕೆ ನಮ್ಮ ಅಭ್ಯಂತರ ಇಲ್ಲ ಎಂದು ತಿಳಿಸಿದ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ 28 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ನಮ್ಮದೇ ಹವಾ ಸೃಷ್ಟಿಸುತ್ತೇವೆ. ಆದರೆ ನಾನು ಬಿಜೆಪಿ ಪಕ್ಷ ಕೋಮುವಾದಿ ಎಂದು ವಿರೋಧ ಮಾಡುತ್ತಿಲ್ಲ. ಆದರೆ ಕಳೆದ ನಾಲ್ಕುವರೆ ವರ್ಷಗಳ ಆಡಳಿತದಲ್ಲಿ ಅವರು ದೇಶದ ಆರ್ಥಿಕ ನೀತಿಯನ್ನು ಹಾಳು ಮಾಡಿದ್ದಾರೆ. 70 ವರ್ಷಗಳ ಇತಿಹಾಸಲ್ಲಿಯೇ ಕೆಟ್ಟ ಆಡಳಿತ ನೀಡಿದ್ದಾರೆ. ಮೋದಿ ಅವರಿಗೆ ಮುಸ್ಲಿಂ ಹೆಂಡತಿಯರ ಬಗ್ಗೆ ಚಿಂತೆ ಇದೆ ಹೊರತು, ರಾಮ ಮಂದಿರದ ಬಗ್ಗೆ ಕಾಳಜಿ ಇಲ್ಲ. ರಾಮ ಮಂದಿರ ನಿರ್ಮಾಣ ಮಾಡುವುದು ಬಿಜೆಪಿಗೆ ಬೇಡವಾಗಿದೆ. ರಾಮ ಮಂದಿರ ಸಮಸ್ಯೆಯನ್ನ ಜೀವಂತವಾಗಿಡಲು ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

    ಅಯೋಧ್ಯೆ ವಿವಾದವನ್ನು ಬಗೆಹರಿಸಬೇಕೆಂಬ ಇಚ್ಛಾಶಕ್ತಿ ಬಿಜೆಪಿಗೆ ಇಲ್ಲ. ಈ ಹಿಂದೆ ಕರ್ನಾಟಕದ ಹುಬ್ಬಳ್ಳಿಯ ಈದ್ಗಾ ಮೈದಾನವನ್ನ ಇಟ್ಟುಕೊಂಡು ಬಿಜೆಪಿಯವರು ಮತಗಳನ್ನ ಕೇಳುತ್ತಿದ್ದರು. ಈಗ ಅಯೋಧ್ಯೆ ವಿವಾದವನ್ನು ಮುಂದಿಟ್ಟು ಬಿಜೆಪಿ ಮತ ಕೇಳುತ್ತಿದೆ. ಈಗಿನ ರಾಜಕೀಯ ಬಹಳ ಕೀಳು ಮಟ್ಟವನ್ನ ತಲುಪಿದೆ. ಬಿಜೆಪಿಯವರು ಹಿಂದೂ ಹಿಂದೂ ಎಂದು ಹೇಳುತ್ತಾರೆ. ಆದರೆ ಗುಡಿ ಮತ್ತು ಮಸೀದಿ ಕಟ್ಟುವುದು ಧರ್ಮ ಅಲ್ಲ. ಧರ್ಮ ಎಂದರೇ ಊಟ ಇಲ್ಲದವರಿಗೆ ಊಟ, ಮನೆ ಇಲ್ಲದವರಿಗೆ ಮನೆ ಕೊಡುವುದು ಎಂದರ್ಥ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

    ಗೋ ಸಂರಕ್ಷಣೆ ಎಂದು ಹೇಳುವ ಬಿಜೆಪಿ ಮುಖಂಡರು ಉತ್ತರ ಪ್ರದೇಶದಲ್ಲಿ ಗೋ ಪೂಜೆ ಮಾಡಿ ಗೋವಾದಲ್ಲಿ ಏನೂ ಮಾಡುತ್ತಿದ್ದಾರೆ? ಮೋದಿ ಅಧಿಕಾರಕ್ಕೆ ಬಂದ ಮೇಲೆ ದೇಶದಿಂದ ಗೋ ಮಾಂಸ ರಪ್ತು ಹೆಚ್ಚಾಗಿದೆ. ಈ ಉದ್ಯಮದಲ್ಲಿ ಬಿಜೆಪಿ ನಾಯಕರ ಹೆಸರಿನಲ್ಲಿ ಹಲವಾರು ಕಂಪನಿಗಳು ಇವೆ ಎಂದು ಆರೋಪಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೇಶದ ಮಹಾಪುರುಷರನ್ನ ಸ್ಮರಿಸೋದು ಅಪರಾಧವೇ – ಟೀಕೆಗಳಿಗೆ ಮೋದಿ ಟಾಂಗ್

    ದೇಶದ ಮಹಾಪುರುಷರನ್ನ ಸ್ಮರಿಸೋದು ಅಪರಾಧವೇ – ಟೀಕೆಗಳಿಗೆ ಮೋದಿ ಟಾಂಗ್

    ಕೇವಾಡಿಯಾ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಚಿಂತನೆಗಳು ಈಗಲೂ ಪ್ರಸ್ತುತವಾಗಿದ್ದು, 500ಕ್ಕೂ ಪ್ರತ್ಯೇಕ ಸಂಸ್ಥಾನಗಳನ್ನು ಒಂದಾಗಿಸುವ ಪಟೇಲರ ಚಿಂತನೆ ಇಂದು ಭಾರತವನ್ನು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಒಂದಾಗಿಸಿದೆ ಎಂದು ಪ್ರಧಾನಿ ನರೇದ್ರ ಮೋದಿ ಹೇಳಿದ್ದಾರೆ.

    ನರ್ಮದಾ ಜಿಲ್ಲೆಯಲ್ಲಿರುವ ಕೇವಾಡಿಯಾ ಬಳಿ `ಏಕತಾ ಪ್ರತಿಮೆ’ ಅನಾವರಣ ಮಾಡಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಅದ್ಭುತ ಶಿಲ್ಪಿಗಳು ಪಟೇಲರ ಅದ್ಭುತ ವಿಗ್ರಹವನ್ನು ಪೂರ್ಣಗೊಳಿಸಿದ್ದಾರೆ. ಈ ಮೂರ್ತಿ ಅದಿವಾಸಿಗಳ ಯೋಗದಾನವಾಗಿದ್ದು, ಇದು ನಿರ್ಮಾಣವಾಗಲು ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲರ ಕಾರ್ಯ ಇತಿಹಾಸದ ಪುಟ ಸೇರಲಿದೆ. ಇದು ಭಾರತದ ಇತಿಹಾಸಲ್ಲಿ ಅರ್ಥಪೂರ್ಣ ದಿನವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಪಟೇಲರ ಪ್ರತಿಮೆ ಅನಾವರಣ ಮಾಡಿದ್ದು ನನ್ನ ಜೀವನದ ಮಹತ್ವದ ಕ್ಷಣವಾಗಿದ್ದು, ಇದು ನಿಮ್ಮ ಆರ್ಶೀವಾದದಿಂದ ಆಗಿದೆ. ಈ ಪತ್ರಿಮೆ ಶ್ರಮ ವಹಿಸಿದ ಪ್ರತಿಯೊಬ್ಬರಿಗೂ ಇದರ ಗೌರವವನ್ನು ಸಲ್ಲಿಸುತ್ತೇನೆ. ಪಟೇಲರ ದೂರದೃಷ್ಟಿ ಮತ್ತು ಕಠಿಣ ನಿಲುವುಗಳೇ ಭಾರತದ ಏಕೀಕರಣಕ್ಕೆ ಕಾರಣ. ಒಂದೊಮ್ಮೆ ಅವರ ಆ ನಿಲುವು ತೆಗೆದುಕೊಳ್ಳದಿದ್ದರೆ ಹೈದರಾಬಾದ್ ಚಾರ್ ಮಿನಾರ್ ಹಾಗೂ ಸೋಮನಾಥ ದೇವಾಲಯವನ್ನು ನೋಡಲು ವೀಸಾ ತೆಗೆದುಕೊಂಡು ಹೋಗುವ ಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದು ಹೇಳಿದರು. ಇದನ್ನು ಓದಿ: ಏಕತಾ ಪ್ರತಿಮೆಯ ವಿಶೇಷತೆ ಏನು? ಎಷ್ಟು ಬಲಶಾಲಿಯಾಗಿದೆ? ಖರ್ಚು ಎಷ್ಟಾಗಿದೆ? – ಇಲ್ಲಿದೆ ಪೂರ್ಣ ವಿವರ

    ಇದೇ ವೇಳೆ ದೇಶಕ್ಕೆ ಸೇವೆ ಸಲ್ಲಿಸಿದ ಮಹಾನ್ ನಾಯಕರನ್ನು ನೆನೆದರೆ ಕೆಲವರು ತಮ್ಮ ರಾಜಕೀಯ ದೃಷ್ಟಿಯಿಂದ ಇದನ್ನು ಕ್ರೈಂ ಎಂದು ಟೀಕೆ ಮಾಡಿದ್ದಾರೆ. ಇದನ್ನು ನೋಡಿದರೆ ನನಗೆ ಅಚ್ಚರಿಯಾಗುತ್ತಿದೆ. ಒಬ್ಬ ಮಹಾನ್ ದೇಶ ಪ್ರೇಮಿಯನ್ನು ನೆನೆಯುವುದು ಅಪರಾಧವಾಗುತ್ತದಯೇ ಎಂದು ಪ್ರಶ್ನೆ ಮಾಡಿ ಪಟೇಲರ ಸ್ಮಾರಕ ನಿರ್ಮಾಣ ಕುರಿತು ಕೇಳಿ ಬಂದ ಟೀಕೆಗಳಿಗೆ ತಿರುಗೇಟು ನೀಡಿದರು.

    ನಾನು ಸಿಎಂ ಆಗಿದ್ದ ವೇಳೆ ಏಕತಾ ಪ್ರತಿಮೆ ನಿರ್ಮಾಣದ ಕನಸು ಕಂಡಿದ್ದೆ, ಇದಕ್ಕೆ ಲಕ್ಷಾಂತರ ರೈತರು ಕಬ್ಬಿಣವನ್ನು ನೀಡುವ ಮೂಲಕ ಬೆಂಬಲ ನೀಡಿದರು. ಇಂತಹ ದಿನಗಳನ್ನು ದೇಶದ ಚರಿತ್ರೆಯಿಂದ ತೆಗೆದು ಹಾಕುವುದು ಕಷ್ಟಸಾಧ್ಯವಾಗುತ್ತದೆ. ಭಾರತೀಯರಿಗೆ ಇದು ಪ್ರೇರಣೆಯ ಸಂಕೇತವಾಗಿ ನಿಲ್ಲಲಿದೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಗುಜರಾತ್ ಸಿಎಂ ವಿಜಯ್ ರೂಪಾಣಿ, ಮಧ್ಯಪ್ರದೇಶ ರಾಜ್ಯಪಾಲರದ ಆನಂದಿಬೆನ್ ಪಟೇಲ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಸುಮಾರು 20ಕ್ಕೂ ಹೆಚ್ಚು ಡ್ರೋನ್ ಮೂಲಕ ಸೆರೆಹಿಡಿಯುವ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಪ್ರತಿಮೆಯ ಅನಾವರಣ ಬೆನ್ನಲ್ಲೇ ಐಎಎಫ್ ಪ್ಲೇನ್ ಗಳು ಪ್ರತಿಮೆ ಬಳಿ ತ್ರಿವರ್ಣ ಧ್ವಜವನ್ನು ಗಾಳಿಯಲ್ಲೇ ಸೃಷ್ಟಿಸಿದ್ದವು. ಇದಾದ ಬಳಿಕ 29 ರಾಜ್ಯಗಳು ಹಾಗೂ 2 ಕೇಂದ್ರಾಡಳಿತ ಪ್ರದೇಶಗಳ ಕಲಾವಿದರು ನೃತ್ಯ, ಸಂಗೀತ ಕಲಾ ಪ್ರದರ್ಶನ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಸವಣ್ಣ ವಚನ ಹೇಳಿ ಮೋದಿಗೆ ಸಿಎಂ ಇಬ್ರಾಹಿಂ ಟಾಂಗ್!

    ಬಸವಣ್ಣ ವಚನ ಹೇಳಿ ಮೋದಿಗೆ ಸಿಎಂ ಇಬ್ರಾಹಿಂ ಟಾಂಗ್!

    ಬಾಗಲಕೋಟೆ: ಪ್ರಧಾನಿ ಮೋದಿ ಈ ಹಿಂದೆ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು. ನವಾಜ್ ಷರೀಫ್ ಕರೆಯದೇ ಏಕೆ ಮೋದಿ ಹೋಗಿದ್ದರು ಎಂದು ಪ್ರಶ್ನಿಸಿರುವ ಮಾಜಿ ಸಚಿವ ಸಿಎಂ ಇಬ್ರಾಹಿಂ, ಬಸವಣ್ಣನವರ ವಚನವನ್ನು ಪ್ರಸ್ತಾಪಿಸಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಜಮಖಂಡಿ ಉಪಚುನಾವಣೆ ಪ್ರಚಾರದಲ್ಲಿ ಭಾಗವಹಿಸಿದ ವೇಳೆ ಸಿಎಂ ಇಬ್ರಾಹಿಂ ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ಮಾಜಿ ಸಿದ್ದರಾಮಯ್ಯ ಅವರನ್ನು ದಲಿತ, ಲಿಂಗಾಯತ, ಬ್ರಾಹ್ಮಣ ವಿರೋಧಿ ಎಂದು ಬಿಂಬಿಸಲಾಗುತ್ತಿದೆ. ಆದರೆ ಈ ಹಿಂದೆ ಪ್ರಧಾನಿ ಮೋದಿ ಪಾಕಿಸ್ತಾನಕ್ಕೆ ಏಕೆ ಹೋಗಿದ್ದರು. ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು ಇವರನ್ನ ಕರೆದಿದ್ದರಾ ಎಂದು ಪ್ರಶ್ನೆ ಮಾಡಿದರು. ಅಲ್ಲದೇ ಬಸವಣ್ಣನವರು ತಮ್ಮ ವಚನದಲ್ಲಿ ಹೇಳಿದ್ದಾರೆ, ಕರೆಯದೆ ಬರುವವನ, ಬರಿಗಾಲಲ್ಲಿ ನಡೆಯುವವನ ಕರೆದು ಕೆರದಲ್ಲಿ ಹೊಡೆಯೆಂದ ಸರ್ವಜ್ಞ ಎಂದು ಹೇಳಿ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದರು.

    ಪ್ರಧಾನಿಗಳು ಚುನಾವಣೆ ಮುನ್ನ ಅಚ್ಛೇ ದಿನ್ ಬರುತ್ತದೆ ಎಂದು ಹೇಳಿದ್ದರು, ಆದರೆ ಇಂದು ನಮಗೆ ಹಳೆ ದಿನಗಳು ನೀಡಿದರೆ ಸಾಕು. ಪ್ರತಿ ತಿಂಗಳು ಮನ್ ಕೀ ಬಾತ್ ಎಂದು ಬರುತ್ತಾರೆ. ಕಾಲೇಜು ಹುಡುಗ, ಹುಡುಗಿ ಮನ್ ಕೀ ಬಾತ್ ಹೇಳಬೇಕು. ಆದರೆ ನಮಗೇ ಬೇಕಿರುವುದು ಕಾಮ್ ಕೀ ಬಾತ್. ನಿಮಗೆ ದೇಶದ ಆಡಳಿತ ನಡೆಸುವುದು ಬರುತ್ತಾ ಎಂದು ಪ್ರಶ್ನೆಗಳ ಸುರಿಮಳೆಗೈದರು.

    ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಪರ ಸಿಎಂ ಇಬ್ರಾಹಿಂ ಪ್ರಚಾರ ನಡೆಸಿದರು. ಈ ವೇಳೆ ಹಲವು ಕಾಂಗ್ರೆಸ್ ಮುಖಂಡರು ಸಿಎಂ ಇಬ್ರಾಹಿಂ ಅವರೊಂದಿಗೆ ಪ್ರಚಾರದಲ್ಲಿ ಭಾಗವಹಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv