Tag: prime minister modi

  • ಮೋದಿ ನೋಟ್ ಬ್ಯಾನ್ ಹೊಡೆತಕ್ಕೆ ಸಿದ್ದರಾಮಯ್ಯ ಆರ್ಥಿಕ ದಿವಾಳಿ: ಪ್ರತಾಪ್ ಸಿಂಹ

    ಮೋದಿ ನೋಟ್ ಬ್ಯಾನ್ ಹೊಡೆತಕ್ಕೆ ಸಿದ್ದರಾಮಯ್ಯ ಆರ್ಥಿಕ ದಿವಾಳಿ: ಪ್ರತಾಪ್ ಸಿಂಹ

    ಬಾಗಲಕೋಟೆ: ಭ್ರಷ್ಟರಾಜಕಾರಣಿಗಳು, ಅಧಿಕಾರಿಗಳು, ರಿಯಲ್ ಎಸ್ಟೇಟ್ ಕುಳಗಳು ಮೋದಿ ಅವರ ನೋಟ್ ಬ್ಯಾನ್ ಹೊಡೆತಕ್ಕೆ ಆರ್ಥಿಕ ದಿವಾಳಿಯಾಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಪರಿಸ್ಥಿತಿಯೂ ಹಾಗೆಯೇ ಆಗಿದೆ ಎಂದು ಮೈಸೂರಿನ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

    ಜಮಖಂಡಿ ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಪರ ಪ್ರಚಾರಕ್ಕಾಗಿ ಆಗಮಿಸಿದ ಪ್ರತಾಪ್ ಸಿಂಹ, ತಾಲೂಕಿನ ಸಿದ್ದಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಸಿದ್ದರಾಮಯ್ಯ ಅವರು ಮಾಡಿಕೊಂಡಿದ್ದ ಬೇನಾಮಿ ಆಸ್ತಿ, ಅಕ್ರಮ ದುಡ್ಡು ಹಾಗೂ ಬೇನಾಮಿ ಕಂಪನಿಗೆ ಸರ್ಕಾರಿ ಭೂಮಿ ಕೊಡಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ನೋಟ್ ಬ್ಯಾನ್ ಮಾಡಿದ್ದರಿಂದ ಸಿದ್ದರಾಮಯ್ಯ ಆರ್ಥಿಕವಾಗಿ ದಿವಾಳಿ ಆಗಿದ್ದಾರೆ ಎಂದು ಆರೋಪಿಸಿದರು.

    ಏರ್ ಸೆಲ್ ಪ್ರಕರಣದಲ್ಲಿ ಜಾರಿ ನಿರ್ದೇಶನಲಯ(ಇಡಿ) ಸಲ್ಲಿಸಿದ್ದ ಚಾರ್ಜ್ ಶೀಟ್‍ನಲ್ಲಿ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಎ1 ಆರೋಪಿ ಎಂದು ಉಲ್ಲೇಖಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ ಅವರು, ಸಿದ್ದು ಕ್ರಿಕೆಟ್ ಕಾಮೆಂಟ್ರಿ ತರಹ ಒಂದು ಸೈಕಲ್ ಬಿದ್ದರೆ ಎಲ್ಲಾ ಉದುರಿ ಹೋಗುತ್ತವೆ ಎನ್ನುತ್ತಾರೆ ಅಲ್ವಾ, ಅದರಂತೆ ಕಾಂಗ್ರೆಸ್ಸಿನ ಒಂದೊಂದು ಭ್ರಷ್ಟರ ವಿಕೆಟ್ ಗಳು ಉದುರಿ ಹೋಗುತ್ತವೆ. ಪಿ.ಚಿದಂಬರಂ ಅವರು ಮತ್ತೆ ಲೆಟರ್ ಆಪ್ ಅಂಡರ್ ಸ್ಟ್ಯಾಂಡಿಂಗ್ ಕೊಟ್ಟಿದ್ದರೂ ಹೆಚ್ಚಿನ ಸಾಲ ಕೊಡಿ ಎಂದು ಆರ್‍ಬಿಐ ನವರಿಗೆ ಯಾಕೆ ನಿರ್ದೇಶನಕ ಕೊಟ್ಟರು ಎನ್ನುವುದನ್ನು ಮುಂದೆ ಬಯಲು ಮಾಡುತ್ತೇನೆ ಎಂದರು.

    ವೀರಶೈವ-ಲಿಂಗಾಯತ ವಿಚಾರದಲ್ಲಿ ಡಿಕೆಶಿ, ಸಿದ್ದು ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರದ್ದು ಪಶ್ಚಾತ್ತಾಪದ ಹೇಳಿಕೆ ಅಲ್ಲ. ಸೋಲಿನ ಭಯದಿಂದ ನಾಟಕ ಆಡುತ್ತಿದ್ದಾರೆ. ಕಾಂಗ್ರೆಸ್ ಧರ್ಮ ಒಡೆಯುವ ಕೆಲಸಕ್ಕೆ ಜನರು ಪಾಠ ಕಲಿಸಿದ್ದಾರೆ. ಈಗ ಉಪ ಚುನಾವಣೆಯಲ್ಲಿ ಸೋಲಿನ ಭಯದಿಂದ ತಪ್ಪು ಮಾಡಿದ್ದೇವು ಎನ್ನುವ ನಾಟಕ ಮಾಡುತ್ತಾರೆ. ಸಿಎಂ ಮಾಡುತ್ತೇನೆ. ಅಂದರೆ ಯಡಿಯೂರಪ್ಪ ದೇವೇಗೌಡರ ಕಾಲು ಹಿಡಿತಾರೆ ಅಂದಿದ್ದ ದಿನೇಶ್ ಗುಂಡೂರಾವ್ ಹೇಳಿಕೆಗೆ ತಿರುಗೇಟು ನೀಡಿದ ಪ್ರತಾಪ್ ಸಿಂಹ, ಅಪ್ಪನಾಣೆಗೂ ಕುಮಾರಸ್ವಾಮಿ ಸಿಎಂ ಆಗಲ್ಲ ಎಂದು ಹೇಳಿದವರು ಅವರಪ್ಪನ ಬಳಿಯೇ ಹೋಗಿ ಮಗನನ್ನ ಸಿಎಂ ಮಾಡುತ್ತೇನೆ ಎಂದು ಮನೆಗೆ ಹೋದವರು ಯಾರು? ಯಡಿಯೂರಪ್ಪನಾ? ಸಿದ್ದರಾಮಯ್ಯನಾ? ಮೊದಲು ಹೇಳಲಿ ಎಂದು ಪ್ರಶ್ನೆ ಮಾಡಿದರು. ಅಲ್ಲದೇ ದೇವೇಗೌಡರ ಮನೆ ಹೋಗಿ ಕುಳಿತು ಕೊಂಡಿದ್ದು ಇದೇ ಗುಂಡೂರಾವ್ ಹಾಗೂ ಅವರ ಗುರು ಸಿದ್ದರಾಮಯ್ಯ ಅಲ್ವೇ ಎಂದು ಪ್ರಶ್ನಿಸಿ ಟಾಂಗ್ ನೀಡಿದರು.

    ಇದೇ ವೇಳೆ ನೀರವ್ ಮೋದಿ ಆಸ್ತಿ ಜಪ್ತಿ ವಿಚಾರಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ ಪ್ರತಾಪ್ ಸಿಂಹ, ನಿಮ್ಮ ಮಾಧ್ಯಮಕ್ಕೆ ಬಂದು ಈ ಕುರಿತು ಸವಿಸ್ತಾರವಾಗಿ ಮಾತನಾಡುತ್ತೇನೆ ಎಂದು ಉತ್ತರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸ್ವಾತಂತ್ರ್ಯ ಸಿಕ್ಕಿ ವರ್ಷಗಳು ಕಳೆದರೂ ನೇತಾಜಿ ಕನಸ್ಸನ್ನು ನನಸು ಮಾಡಲು ಸಾಧ್ಯವಾಗಿಲ್ಲ: ಮೋದಿ

    ಸ್ವಾತಂತ್ರ್ಯ ಸಿಕ್ಕಿ ವರ್ಷಗಳು ಕಳೆದರೂ ನೇತಾಜಿ ಕನಸ್ಸನ್ನು ನನಸು ಮಾಡಲು ಸಾಧ್ಯವಾಗಿಲ್ಲ: ಮೋದಿ

    ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕನಸಿನ ಸೇನೆಯನ್ನು ನಿರ್ಮಿಸಲು ನಾವು ಕಳೆದ 4 ವರ್ಷಗಳಿಂದ ಹಲವು ಕಾರ್ಯಗಳನ್ನು ಮಾಡಿದ್ದು, ಅವರ ಕನಸನ್ನು ನನಸು ಮಾಡುತ್ತಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

    ಸುಭಾಷ್ ಚಂದ್ರ ಬೋಸ್ ಅವರ ಆಝಾದ್ ಹಿಂದ್ ಫೌಜ್ ಸ್ಥಾಪನೆ 75ನೇ ವರ್ಷದ ನೆನಪಿಗಾಗಿ ಇಂದು ಪ್ರಧಾನಿ ಮೋದಿ ಕೆಂಪು ಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದರು. ವಿಶೇಷವಾಗಿ ಕಾರ್ಯಕ್ರಮಕ್ಕೆ ಆಝಾದ್ ಹಿಂದ್ ಫೌಜ್ ಟೋಪಿಯನ್ನು ಧರಿಸಿ ಗಮನಸೆಳೆದರು.

    ಈ ವೇಳೆ ಮಾತನಾಡಿದ ಅವರು, ನೇತಾಜಿ ತಮ್ಮ ಅವಧಿಯಲ್ಲಿ ಬದಲಾದ ಪರಿಸ್ಥಿತಿಗಳಿಗೆ ತಕ್ಕಂತೆ ಹೋರಾಟ ರೂಪಿಸಿ, ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಜನತೆಯನ್ನು ಒಗ್ಗೂಡಿಸಿದ್ದರು. ಅಲ್ಲದೇ ದೇಶದ ಸಂಸ್ಕೃತಿ ರಕ್ಷಣೆ, ಅಭಿವೃದ್ಧಿ ಬಗ್ಗೆ ಆಶ್ವಾಸನೆ ನೀಡಿದ್ದರು. ದೇಶದ ಸಾಂಪ್ರದಾಯಗಳ ಬಗ್ಗೆ ಹೆಮ್ಮೆ ಇರುವ ಎಲ್ಲಾ ರಂಗಗಳಲ್ಲಿಯೂ ಬೆಳವಣಿಗೆ ಸಾಧಿಸುವ ರಾಷ್ಟ್ರದ ಕಲ್ಪನೆ ಹೊಂದಿದ್ದರು. ಆದರೆ ಸ್ವಾತಂತ್ರ್ಯ ಬಂದು ಹಲವು ವರ್ಷಗಳು ಕಳೆದರೂ ನಾವು ಅವರ ಕನಸುಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

    ಹಲವರ ತ್ಯಾಗ ಬಲಿದಾನದಿಂದ ನಾವು ಸ್ವರಾಜ್ಯವನ್ನ ಪಡೆದಿದ್ದು, ಅದನ್ನು ರಕ್ಷಿಸುವುದು ನಮ್ಮ ಕರ್ತವ್ಯವಾಗಿದೆ. ಅವರ ಕನಸು ಸಕಾರಗೊಳ್ಳುವಂತೆ ಮಾಡಲು 4 ವರ್ಷಗಳಲ್ಲಿ ಸತತವಾಗಿ ಪ್ರಯತ್ನಿಸುತ್ತಿದ್ದೇವೆ. ಅವರ ಕುರಿತ ಸಾಕಷ್ಟು ದಾಖಲೆಗಳನ್ನು ಬಿಡುಗಡೆ ಮಾಡಿದ್ದೇವೆ. ಸರ್ಜಿಕಲ್ ಸ್ಟ್ರೈಕ್ ಮಾಡುವಂತಹ ದೃಢ ತೀರ್ಮಾನಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದರು.

    ಇದೇ ವೇಳೆ ನೆಹರು ಕುಟುಂಬದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಮೋದಿ, ಪಟೇಲ್, ಅಂಬೇಡ್ಕರ್, ನೇತಾಜಿ ಅವರ ಕೊಡುಗೆಗಳನ್ನು ಜನರಿಂದ ದೂರ ಮಾಡಲು ಯತ್ನಿಸಿದ್ದರು. ಆದರೆ ಇಂದಿನ ಸರ್ಕಾರ ಇದನ್ನು ಬದಲಾಯಿಸಿದೆ. ಬೋಸರ ಕಲ್ಪನೆಯ ಸೇನೆಯನ್ನು ನಿರ್ಮಿಸುತ್ತಿದೆ. ಅವರ ಗೌರವಾರ್ಥ ಪ್ರಶಸ್ತಿಯನ್ನು ಸ್ಥಾಪಿಸಲಾಗುತ್ತಿದೆ ಎಂದರು.

    ಕಾರ್ಯಕ್ರಮದಲ್ಲಿ ಕೇಂದ್ರ ಪ್ರಮುಖ ಸಚಿವರು, ಮುಖಂಡರು ಸೇರಿದಂತೆ ಗಣ್ಯರು ಭಾಗವಹಿಸಿದ್ದರು. ಕೇವಲ ಕೆಂಪು ಕೋಟೆ ಮಾತ್ರವಲ್ಲದೇ ದೇಶದ ವಿವಿಧೆಡೆ ನೇತಾಜಿ ಅವರ ಆಝಾದ್ ಹಿಂದ್ ಫೌಜ್ ಸರ್ಕಾರ ಸ್ಥಾಪನೆಯ ಸ್ಮರಣೆಯ ಕಾರ್ಯಕ್ರಮವನ್ನು ಬಿಜೆಪಿ ಏರ್ಪಡಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದಿಢೀರ್ ಕೋಟ್ಯಧಿಪತಿಗಳಾದ್ರು ಅರುಣಾಚಲಪ್ರದೇಶದ ಗ್ರಾಮಸ್ಥರು!

    ದಿಢೀರ್ ಕೋಟ್ಯಧಿಪತಿಗಳಾದ್ರು ಅರುಣಾಚಲಪ್ರದೇಶದ ಗ್ರಾಮಸ್ಥರು!

    ಗುವಾಹಟಿ: ಅಕ್ಟೋಬರ್ 20ಕ್ಕೂ ಮುನ್ನ ಸಾಮಾನ್ಯ ಪ್ರಜೆಗಳಾಗಿದ್ದ ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್ ಜಿಲ್ಲೆಯ ತುಕ್ಬೆನ್ ಗ್ರಾಮದ ಜನರು ಕೋಟ್ಯಧಿಪತಿಗಳಾಗಿದ್ದಾರೆ.

    ಹೌದು, ಈ ಸುದ್ದಿ ಕೇಳಿ ನೀವು ಅಶ್ಚರ್ಯಗೊಂಡರೂ ನಿಜ. ಐದು ದಶಕದ ಹಿಂದೆ ಗ್ರಾಮದ ಕೆಲ ನಿವಾಸಿಗಳ ಭೂ ಪ್ರದೇಶವನ್ನು ಭಾರತೀಯ ಸೇನೆ ತನ್ನ ವಶಕ್ಕೆ ಪಡೆದಿತ್ತು. ಈ ಭೂಮಿಗೆ ಸದ್ಯ ಸರ್ಕಾರ ಪರಿಹಾರ ಹಣ ನೀಡಿದ್ದು, ಗ್ರಾಮಸ್ಥರು ಕೋಟಿ ಕೋಟಿ ಹಣ ಪಡೆದಿದ್ದಾರೆ.

    ಪಶ್ಚಿಮ ಕಮೆಂಗ್ ಜಿಲ್ಲೆಯ ತುಕ್ಪೆನ್, ಸಿಂಗ್ಚುಂಗ್ ಸೇರಿ ವಿವಿಧ ಹಳ್ಳಿಯ ಜನರಿಗೆ ಪರಿಹಾರ ಮೊತ್ತವನ್ನು ಅಲ್ಲಿನ ಸರ್ಕಾರ ಕಳೆದ ಎರಡು ದಿನಗಳ ಹಿಂದೆಯಷ್ಟೇ ಹಸ್ತಾಂತರಿಸಿದೆ. ಪ್ರಮುಖವಾಗಿ ಗ್ರಾಮದ ಪ್ರೇಮ್ ದೊರ್ಜಿ ಎಂಬವರಿಗೆ 6.31 ಕೋಟಿ ರೂ. ಫನ್ಟೋ ಎಂಬವರು 6.21 ಕೋಟಿ ರೂ, ಹಾಗೂ ಖಂಡು ಅವರಿಗೆ 5.98 ಕೋಟಿ ರೂ. ಸಿಕ್ಕಿದೆ.

    ಅರುಣಾಚಲ ಪ್ರದೇಶ ಸಿಎಂ ಪ್ರೇಮಾ ಖಾಂಡು, ಕೇಂದ್ರ ಗೃಹ ಸಚಿವಾಲಯದ ರಾಜ್ಯ ಸಚಿವ ಕಿರಣ್ ರಿಜೂಜು ಅವರು ಕಾರ್ಯಕ್ರದಲ್ಲಿ ಭಾಗವಹಿಸಿ ಪರಿಹಾರ ಮೊತ್ತವನ್ನು ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಪ್ರಧಾನಿ ಮೋದಿ ಅವರ ಪ್ರೀತಿಯಿಂದ ಅರುಣಾಚಲಕ್ಕೆ ಹಲವು ವರ್ಷದ ಬಳಿಕ ಪರಿಹಾರ ಸಿಗಲು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.

    ಗ್ರಾಮದ ಹಲವು ಮಂದಿಗೆ ಸರ್ಕಾರದ ಪರಿಹಾರ ಮೊತ್ತ ಸಿಕ್ಕಿದ್ದು, ಸಿಂಚಂಗ್‍ನಲ್ಲಿ ನಡೆದ ಸಮಾರಂಭದಲ್ಲಿ ಒಟ್ಟು ಐದು ಗ್ರಾಮಸ್ಥರಿಗೆ 24.56 ಕೋಟಿ ರೂ. ನೀಡಲಾಗಿದೆ. ಅಲ್ಲದೇ ತುಕ್ಬೆನ್ ಗ್ರಾಮದ ಏಳು ನಿವಾಸಿಗಳಿಗೆ 13.17 ಕೋಟಿ ರೂ. ನೀಡಲಾಗಿದೆ ಎಂದು ಉಪ ಕಮಿಷನರ್ ಸೋನಾಲ್ ಸ್ವರೂಪ್ ತಿಳಿಸಿದ್ದಾರೆ.

    1962 ರ ಭಾರತದ ಹಾಗೂ ಚೀನಾ ನಡುವೆ ಗಡಿ ವಿಚಾರವಾಗಿ ನಡೆದ ಯುದ್ಧದ ನಂತರ ಭಾರತೀಯ ಸೇನೆಯೂ ಅಲ್ಲಿನ ಪ್ರದೇಶಗಳ ಭೂಮಿಯನ್ನು ವಶಕ್ಕೆ ಪಡೆದು ಸೇನಾ ನೆಲೆ ನಿರ್ಮಾಣ ಮಾಡಿತ್ತು. ಆದರೆ ಅಲ್ಲಿನ ನಿವಾಸಿಗಳಿಗೆ ಅಂದು ಸರ್ಕಾರ ಭೂಮಿಯನ್ನು ಪಡೆದು ಪರಿಹಾರ ನೀಡಿರಲಿಲ್ಲ. ಹೀಗಾಗಿ 2017 ರ ಏಪ್ರಿಲ್‍ನಲ್ಲಿ ಪಶ್ಚಿಮ ಕಮೆಂಗ್ ಜಿಲ್ಲೆಯ ಮೂರು ಗ್ರಾಮಗಳ 152 ಕುಟುಂಬಗಳು ಕೇಂದ್ರಕ್ಕೆ ಮನವಿ ಸಲ್ಲಿದ್ದವು. ಇದರ ಪರಿಣಾಮವಾಗಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೂರು ಗ್ರಾಮಗಳಿಗೆ 54 ಕೋಟಿ ರೂ. ಹಾಗೂ ಸೆಪ್ಟಂಬರ್ ನಲ್ಲಿ ಅರುಣಾಚಲ ಪ್ರದೇಶದ ಖಾಸಗಿ ಭೂಮಿ ಸ್ವಾಧೀನಕ್ಕೆ 158 ಕೋಟಿ ರೂ. ಅನ್ನು ನೀಡಿತ್ತು.

    ಈ ವರ್ಷ ಫೆಬ್ರವರಿಯಲ್ಲಿ ತವಾಂಗ್ ಜಿಲ್ಲೆಯ ಬಾಮ್ಜಾ ಗ್ರಾಮದ 31 ಕುಟುಂಬಗಳಿಗೆ 40.80 ಕೋಟಿ ರೂ., 29 ಕುಟುಂಬಗಳಿಗೆ 1.09 ಕೋಟಿ ರೂ. ನೀಡಿದ್ದು, ಒಂದು ಕುಟುಂಬಕ್ಕೆ 6.73 ಕೋಟಿ ರೂ. ಮತ್ತು ಇನ್ನೊಬ್ಬರಿಗೆ 2.45 ಕೋಟಿ ರೂ. ಸಿಕ್ಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಫಸ್ಟ್ ಟೈಂ, ಅ.21 ರಂದು ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿಯಿಂದ ಧ್ವಜಾರೋಹಣ

    ಫಸ್ಟ್ ಟೈಂ, ಅ.21 ರಂದು ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿಯಿಂದ ಧ್ವಜಾರೋಹಣ

    ನವದೆಹಲಿ: ಇತಿಹಾಸದಲ್ಲಿ ಮೊದಲ ಬಾರಿಗೆ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜೋತ್ಸವ ದಿನ ಹೊರತು ಪಡಿಸಿ ಅಕ್ಟೋಬರ್ 21 ರಂದು ಕೆಂಪುಕೋಟೆಯ ಮೇಲೆ ಧ್ವಜರೋಹಣ ನಡೆಯಲಿದೆ.

    ಅ.21 ರಂದು ಕೆಂಪುಕೋಟೆಯಲ್ಲಿ ಸುಭಾಷ್ ಚಂದ್ರ ಬೋಸ್ ಅವರ `ಅಜಾದ್ ಹಿಂದ್ ಸರ್ಕಾರ’ ಸ್ಥಾಪನೆಯಾದ 75 ವರ್ಷದ ಸ್ಮರಣಾ ಕಾರ್ಯಕ್ರಮದ ನಡೆಯಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಗುರುವಾರ ಖಚಿತ ಪಡಿಸಿದ್ದಾರೆ. ಇದರೊಂದಿಗೆ ಮತ್ತೊಮ್ಮೆ ಕೆಂಪು ಕೋಟೆ ಮೇಲೆ ತ್ರಿವರ್ಣ ಧ್ವಜರೋಹಣ ನಡೆಯಲಿದೆ.

    ಇದೇ ವೇಳೆ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಪಾಟೀಲ್ ಅವರ ಪ್ರತಿಮೆ ನಿರ್ಮಾಣದ ಯೋಜನೆ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿದೆ. ಈ ಮೂಲಕ ಪಾಟೇಲ್ ಅವರಿಗೆ ಅವಮಾನ ಮಾಡಿದೆ. ದೇಶದ ಮೊದಲ ಗೃಹ ಸಚಿವರಿಗೆ ಅಗೌರವ ತೋರಿದೆ. ಪಾಟೇಲ್ ಅವರ ಸ್ಮಾರಕ ಪತ್ರಿಮೆ ಐಕ್ಯತೆ ಸಂಕೇತವಾಗಿದೆ. 21ರ ಕಾರ್ಯಕ್ರಮ ಬಗ್ಗೆಯೂ ಟೀಕೆಗಳು ಮಾಡಬಹುದು. ಆದರೆ ದೇಶದ ಪರ ಹೋರಾಟ ನಡೆಸಿದ ನಾಯಕರ ಸ್ಮರಣೆ ನಮ್ಮ ಕರ್ತವ್ಯವಾಗಿದೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

    ಪಾಟೇಲ್ ಅವರ ಸ್ಮಾರಕ ನಿರ್ಮಾಣ ಕಾರ್ಯ ಮೇಡ್ ಇನ್ ಚೀನಾ ಎಂದು ಟೀಕೆ ಮಾಡಿದ್ದ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಮೋದಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಏಕತೆ ಪ್ರತಿಮೆ ದೇಶದಕ್ಕೆ ಮಾದರಿಯಾಗಿದೆ. ಪಟೇಲ್ ಅವರ ಕಾರ್ಯಗಳು ಇಂದಿನ ಯುವ ಜನತೆಗೆ ಸ್ಫೂರ್ತಿಯಾಗಿದೆ. ಕಾಂಗ್ರೆಸ್ ಪಟೇಲ್ ಸೇರಿದಂತೆ ಅಂಬೇಡ್ಕರ್, ಸುಭಾಷ್ ಚಂದ್ರ ಬೋಸ್ ಅವರನ್ನು ಇತಿಹಾಸದ ಉದ್ದಕ್ಕೂ ನಿರ್ಲಕ್ಷ್ಯ ಮಾಡಿಕೊಂಡೇ ಬಂದಿದೆ. ಆದರೆ ಬಿಜೆಪಿ ದೇಶಕ್ಕೆ ನಿಜವಾದ ಕೊಡುಗೆ ನೀಡಿದ ನಾಯಕರನ್ನ ಸ್ಫೂರ್ತಿಯಾಗಿ ಪಡೆದಿದೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.facebook.com/narendramodi/videos/569401976807544/

  • ಸ್ಮಾರ್ಟ್ ಸಿಟಿ 15 ಕೋಟಿ ರೂ.ಹಣ ಕಸಾಯಿಖಾನೆಗೆ -ಪ್ರಧಾನಿ ಮೋದಿಗೆ ಖಾದರ್ ಪತ್ರ

    ಸ್ಮಾರ್ಟ್ ಸಿಟಿ 15 ಕೋಟಿ ರೂ.ಹಣ ಕಸಾಯಿಖಾನೆಗೆ -ಪ್ರಧಾನಿ ಮೋದಿಗೆ ಖಾದರ್ ಪತ್ರ

    ಮಂಗಳೂರು: ಕಸಾಯಿಖಾನೆಗೆ 15 ಕೋಟಿ ರೂ. ಅನುದಾನ ನೀಡಿದ ವಿವಾದ ವಿಚಾರವಾಗಿ ಸ್ಪಷ್ಟನೆ ನೀಡಿ ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವಾಗಿ ತಿಳಿಸಿದ್ದಾರೆ.

    ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಕಸಾಯಿಖಾನೆಗೆ ನೀಡಿರುವ ಅನುದಾನವನ್ನು ಸುಖಸುಮ್ಮನೆ ವಿವಾದ ಮಾಡಲಾಗಿದೆ. ಇದು ತಮ್ಮ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಅದ್ದರಿಂದ ಈ ಕುರಿತು ಸ್ಪಷ್ಟನೆ ನೀಡಿ ಪ್ರಧಾನ ಮಂತ್ರಿ ಮತ್ತು ಕೇಂದ್ರ ನಗರಾಭಿವೃದ್ಧಿ ಸಚಿವಾಲಯಕ್ಕೆ ಪತ್ರ ಬರೆಯುತ್ತೇನೆ. ಅಲ್ಲಿಂದ ಬರುವ ಪತ್ರಿಕ್ರಿಯೆ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ಯು.ಟಿ ಖಾದರ್ ತಿಳಿಸಿದ್ದಾರೆ.

    ನಗರದಲ್ಲಿ ಇರುವ ಕುರಿ, ಆಡು ಕಸಾಯಿಖಾನೆಗೆ ನೀಡುವಂತೆ ನಗರ ಸ್ವಚ್ಛತೆಯ ದೃಷ್ಟಿಯಿಂದ ಅನುದಾನ ಬಿಡುಗಡೆ ಮಾಡಲು ಶಿಫಾರಸ್ಸು ಮಾಡಿದ್ದೇವು. ಆದರೆ ಈ ಕುರಿತು ಚುನಾಯಿತ ಜನಪತ್ರಿನಿಧಿಗಳು, ಕೆಲ ಸಂಸ್ಥೆಗಳು ವಿವಾದ ಉಂಟಾಗಿತ್ತು. ಇದರಿಂದ ಜನರ ನಡುವೆಯೂ ವೈಮನಸ್ಸು ಹೆಚ್ಚಾಗುವುದಕ್ಕೆ ಅವಕಾಶ ಇದೆ. ಅದ್ದರಿಂದ ಪ್ರಧಾನಿ ಮೋದಿ ಅವರಿಂದ ಬರುವ ಉತ್ತರದಂತೆ ಮುಂದೆ ಕ್ರಮಕೈಕೊಳ್ಳುತ್ತೇನೆ. ಈ ವಿವಾದದ ಕುರಿತು ಮತ್ತೆ ಯಾರು ಆರೋಪ, ಪ್ರತ್ಯಾರೋಪ ಮಾಡುವುದು ಬೇಡ ಎಂದು ಮನವಿ ಮಾಡಿದರು.

    ಕಸಾಯಿಖಾನೆಗೆ ಹಣ ಮಂಜೂರು ಮಾಡಲು ಅನುಮತಿ ಕೋರಿ ಮಾತ್ರ ಶಿಫಾರಸ್ಸು ಪತ್ರ ಬರೆಯಲಾಗಿದೆ. ಸ್ವಚ್ಛತೆ ದೃಷ್ಟಿಯಿಂದ ಅನಿವಾರ್ಯವಾಗಿದ್ದು, ಕೆಲವರು ಕಸಾಯಿಖಾನೆ ಬದಲಿಗೆ ಗೋಶಾಲೆಗೆ ಕೊಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಅದಕ್ಕೆ ನನ್ನ ಸಹಮತ ಇದೆ. ಆದರೆ ಅದಕ್ಕೆ ಅವಕಾಶ ಇದೆಯಾ ಎಂದು ಸ್ಪಷ್ಟನೆ ಬಯಸಿದ್ದೇನೆ. ಈ ಕುರಿತು ಯಾರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವುದು ಬೇಡ. ಅದ್ದರಿಂದಲೇ ನಾನು ಈ ಕ್ರಮಕ್ಕೆ ಮುಂದಾಗಿದ್ದೇನೆ. ಜಿಲ್ಲೆಯಲ್ಲಿ ಶಾಂತಿ ಕಾಪಾಡುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಳ್ಳಾರಿ, ಶಿವಮೊಗ್ಗ ಈಗಲೇ ಗೆದ್ದಿದ್ದೇವೆ, ಮಂಡ್ಯ ಫಲಿತಾಂಶಕ್ಕಾಗಿ ಮೋದಿ ಕಾಯ್ತಿದ್ದಾರೆ : ಬಿಎಸ್‍ವೈ

    ಬಳ್ಳಾರಿ, ಶಿವಮೊಗ್ಗ ಈಗಲೇ ಗೆದ್ದಿದ್ದೇವೆ, ಮಂಡ್ಯ ಫಲಿತಾಂಶಕ್ಕಾಗಿ ಮೋದಿ ಕಾಯ್ತಿದ್ದಾರೆ : ಬಿಎಸ್‍ವೈ

    ಮಂಡ್ಯ: ದೇಶದಲ್ಲಿ ಕಾಂಗ್ರೆಸ್ ಪಕ್ಷ ದಯಾನೀಯ ಸ್ಥಿತಿಗೆ ತಲುಪಿದ್ದು, ಅಭ್ಯರ್ಥಿಗಳಿಲ್ಲದೇ ಲೋಕಸಭಾ ಉಪ ಚುನಾವಣೆಯಲ್ಲಿ ಶಿವಮೊಗ್ಗ ಹಾಗೂ ಬಳ್ಳಾರಿ ಕ್ಷೇತ್ರಗಳಲ್ಲಿ ಮೈತ್ರಿ ಮಾಡಿಕೊಂಡಿದೆ. ಹೀಗಾಗಿ ನಾವು ಈಗಾಗಲೇ ಈ ಎರಡು ಕ್ಷೇತ್ರಗಳನ್ನು ಗೆದ್ದಿದ್ದೇವೆ, ಇನ್ನು ಉಳಿದಿರೋದು ಮಂಡ್ಯ ಕ್ಷೇತ್ರವೊಂದೇ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

    ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡು ಮಾತನಾಡಿದ ಬಿಎಸ್‍ವೈ, ಮಂಡ್ಯ ಫಲಿತಾಂಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲರಿಗೂ ಕಾಯುತ್ತಾ ಇದ್ದಾರೆ. ಬಿಜೆಪಿ ರಾಜ್ಯದಲ್ಲಿ ನಡೆಯಲಿರುವ 5 ಉಪಚುನಾವಣೆಯನ್ನು ಗೆಲ್ಲುವ ವಿಶ್ವಾಸ ಹೊಂದಿದೆ. ಈಗಾಗಲೇ ನಾವು ಶಿವಮೊಗ್ಗ ಹಾಗೂ ಬಳ್ಳಾರಿ ಕ್ಷೇತ್ರಗಳನ್ನು ಗೆದ್ದಿದ್ದೇವೆ. ಇನ್ನೂ ಬಾಕಿ ಇರೋದು ಮಂಡ್ಯ ಮಾತ್ರ. ಮತ್ತೆ ಇಲ್ಲಿಗೆ ಅ. 23 ಹಾಗೂ 26 ರಂದು ಭೇಟಿ ನೀಡಿ ಪ್ರಚಾರ ಮಾಡುವುದಾಗಿ ತಿಳಿಸಿದರು.

    ಇದೇ ವೇಳೆ ನಾನು ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ ಹುಟ್ಟಿದವನು ಎಂಬ ವಿಚಾರವನ್ನು ಪ್ರಸ್ತಾಪಿಸಿದ ಬಿಎಸ್‍ವೈ, ಶಿವಮೊಗ್ಗದ ಶಿಕಾರಿಪುರದ ಜನ ನನ್ನನ್ನು ಗೆಲ್ಲಿಸಿ ಮುಖ್ಯಮಂತ್ರಿ ಮಾಡಿದರು. ಆದರೆ ಮಂಡ್ಯದ ಜನ ನನಗೆ ಇನ್ನೂ ಆಶೀರ್ವಾದ ಮಾಡಿಲ್ಲ. ಈ ಬಾರಿ ನಮ್ಮ ಅಭ್ಯರ್ಥಿ ಗೆಲ್ಲುವುದು ನೂರರಷ್ಟು ಸತ್ಯ. ಶಿವಮೊಗ್ಗದಲ್ಲಿ ನನ್ನ ಪುತ್ರನೇ ಸ್ಪರ್ಧೆ ಮಾಡಿರುವುದರಿಂದ ನನಗೆ ಅಲ್ಲಿಗಿಂತ ಮಂಡ್ಯ ಕ್ಷೇತ್ರವೇ ಹೆಚ್ಚು ಮುಖ್ಯವಾಗಿದೆ. ಆದ್ದರಿಂದ ನಾನು ಮಂಡ್ಯದಲ್ಲಿ ಪ್ರಚಾರಕ್ಕೆ ಬರುತ್ತೇನೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಳಿ ತಪ್ಪಿದ ರೈಲು – 7 ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

    ಹಳಿ ತಪ್ಪಿದ ರೈಲು – 7 ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

    ಲಕ್ನೋ: ಉತ್ತರಪ್ರದೇಶದ ರಾಯ್ ಬರೇಲಿ ಬಳಿ ರೈಲ್ವೇ ನಿಲ್ದಾಣದ ಬಳಿ ಫರಕ್ಕಾ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ 7 ಮಂದಿ ಮೃತಪಟ್ಟಿದ್ದು, ಸುಮಾರು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

    ಇಂದು ಬೆಳಗ್ಗೆ 8 ಬೋಗಿ ಇದ್ದ ಫರಕ್ಕಾ ಎಕ್ಸ್ ಪ್ರೆಸ್ ರೈಲು ರಾಯ್ ಬರೇಲಿ ಹರ್ಚದ್ಪುರ್ ರೈಲ್ವೇ ನಿಲ್ದಾಣದ ಬಳಿ ಬಂದಿತ್ತು. ಆದರೆ ಈ ವೇಳೆ ರೈಲು ಹಳಿ ತಪ್ಪಿ ಅನಾಹುತ ಸಂಭವಿಸಿದೆ. ಈ ರೈಲು ಪಶ್ಚಿಮ ಬಂಗಾಳದ ಮಾಲ್ಡಾ ಪಟ್ಟಣದಿಂದ ದೆಹಲಿಗೆ ತೆರಳುತ್ತಿತ್ತು ಎಂದು ರೈಲ್ವೆ ವ್ಯವಸ್ಥಾಪಕ ಸತೀಶ್ ಕುಮಾರ್ ಹೇಳಿದರು.

    ಘಟನೆಯಲ್ಲಿ 7 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇತ್ತ ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಲಕ್ನೋ ಹಾಗೂ ವಾರಣಾಸಿ ಅಧಿಕಾರಿಗಳು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

    ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು, ಈ ಘಟನೆಯ ಬಗ್ಗೆ ತನಿಖೆ ಮಾಡುವಂತೆ ಆದೇಶಿಸಿದ್ದಾರೆ. ಈ ರೈಲು ಅಪಘಾತದಿಂದ ಆ ಮಾರ್ಗದ ಎಲ್ಲ ರೈಲುಗಳನ್ನು ನಿರ್ಬಂಧಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

    ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಅವರು ಈ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಆರೋಗ್ಯ ಇಲಾಖೆ, ಎನ್‍ಡಿಆರ್‍ಎಫ್ ಪಡೆ ಹಾಗೂ ಪೊಲೀಸ್ ಇಲಾಖೆಯವರಿಗೆ ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಾದ ನೆರವು ನೀಡುವಂತೆ ಸೂಚಿಸಿದ್ದಾರೆ.

    ಯೋಗಿ ಆದಿತ್ಯಾನಾಥ್ ಅವರು ಈ ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿ, ಅವರ ಕುಟುಂಬದವರಿಗೆ 2 ಲಕ್ಷ ರೂ. ಪರಿಹಾರ ಧನ ಮತ್ತು ಗಂಭೀರವಾಗಿ ಗಾಯಗೊಂಡವರ ಚಿಕಿತ್ಸೆಗಾಗಿ 50,000 ರೂ. ಗಳನ್ನು ಫೋಷಣೆ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸರ್ಜಿಕಲ್ ಸ್ಟ್ರೈಕ್ ವಿಡಿಯೋ ಬಿಡುಗಡೆಗೊಳಿಸಿದ ಕೇಂದ್ರ-ವಿಡಿಯೋ ನೋಡಿ

    ಸರ್ಜಿಕಲ್ ಸ್ಟ್ರೈಕ್ ವಿಡಿಯೋ ಬಿಡುಗಡೆಗೊಳಿಸಿದ ಕೇಂದ್ರ-ವಿಡಿಯೋ ನೋಡಿ

    ನವದೆಹಲಿ: ಸರ್ಜಿಕಲ್ ಸ್ಟ್ರೈಕ್ ನಡೆದ 2 ವರ್ಷಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೊದಲ ಬಾರಿಗೆ ಪಾಕಿಸ್ತಾನ ವಿರುದ್ಧ ಕೈಗೊಂಡಿದ್ದ ಸರ್ಜಿಕಲ್ ಸ್ಟ್ರೈಕ್ ದಾಳಿಯ ವಿಡಿಯೋ ಬಿಡುಗಡೆ ಮಾಡಿದೆ.

    ಸರ್ಜಿಕಲ್ ಸ್ಟ್ರೈಕ್ ನಡೆದು ಸೆ.29 ಕ್ಕೆ 2ನೇ ವರ್ಷ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ವಿಡಿಯೋ ಬಿಡುಗಡೆ ಮಾಡಲಾಗಿದೆ. 2016 ಸೆ.29 ರಂದು ಸೇನೆ ಗಡಿ ರೇಖೆ ದಾಟಿ  ಸರ್ಜಿಕಲ್ ದಾಳಿ ನಡೆಸಿತ್ತು. ಜಮ್ಮು ಕಾಶ್ಮೀರದ ಉರಿ ದಾಳಿಯ ಪ್ರತಿಕಾರವಾಗಿ ಭಾರತೀಯ ಸೇನೆ ಈ ದಾಳಿ ನಡೆಸಿತ್ತು. ಅಲ್ಲದೇ ಈ ದಾಳಿಯಲ್ಲಿ 20 ಉಗ್ರರನ್ನು ಹತ್ಯೆ ಮಾಡಿದ್ದಾಗಿ ಮಾಹಿತಿ ನೀಡಲಾಗಿತ್ತು.

    ಭಾರತ ಪ್ಯಾರಾ ಮಿಲಿಟರಿ ಫೋರ್ಸ್‍ ನ  ಕಮಾಂಡೋ ತಂಡ ನಡೆಸಿ ಯಶಸ್ವಿಯಾಗಿ ಉಗ್ರರ ತಾಣಗಳನ್ನು ನಾಶ ಪಡಿಸಿ ವಾಪಸ್ ಬಂದಿತ್ತು. ಕಳೆದ ಕೆಲ ದಿನಗಳ ಭಾರತೀಯ ಸೈನ್ಯದ ಮಾಜಿ ಜನರಲ್ ಒಬ್ಬರು ಸರ್ಜಿಕಲ್ ದಾಳಿ ವೇಳೆ ಚಿರತೆಯ ಮೂತ್ರ ತೆಗೆದುಕೊಂಡು ಹೋಗಿದ್ದಾಗಿ ಬಹಿರಂಗ ಪಡಿಸಿದ್ದರು.

    ಭಾರತ ಭೂ ಸೇನೆಯ ಮುಖ್ಯಸ್ಥರದ ಜನರಲ್ ಬಿಪಿನ್ ರಾವತ್ ಕಳೆದ ದಿನಗಳ ಹಿಂದೆ ಉಗ್ರರ ಮೇಲೆ ಮತ್ತೊಂದು ಸರ್ಜಿಕಲ್ ದಾಳಿ ನಡೆಸುವ ಅಗತ್ಯವಿದೆ. ಗಡಿಯಲ್ಲಿ ಪಾಕಿಸ್ತಾನ ನಡೆಯುತ್ತಿರುವ ಉಗ್ರರ ಚಟುವಟಿಕೆಗಳನ್ನು ನಿಯಂತ್ರಣ ಮಾಡದಿದ್ದರೆ ಇದು ಅನಿವಾರ್ಯ ಎಂದು ವಾಗ್ದಾಳಿ ನಡೆಸಿದ್ದರು.

    ಈ ಹಿಂದೆಯೂ ಸರ್ಜಿಕಲ್ ಸ್ಟ್ರೈಕ್ ಕುರಿತ ವಿಡಿಯೋಗಳನ್ನು ಖಾಸಗಿ ವಾಹಿನಿಯೊಂದು ಪ್ರಸಾರ ಮಾಡಿತ್ತು. ವಿಡಿಯೋದಲ್ಲಿ ದಾಳಿ ನಡೆದ ಸಮಯ ದಿನಾಂಕದ ಸಮೇತ ದೃಶ್ಯಗಳು ಲಭ್ಯವಾಗಿತ್ತು. ಯುಎವಿ ಮತ್ತು ಸೈನಿಕರು ಧರಿಸಿದ್ದ ಹೇಡ್ ಮೌಂಟೇನ್ ಕ್ಯಾಮೆರಾದಲ್ಲಿ ಕಾರ್ಯಾಚರಣೆಯನ್ನು ಸೆರೆ ಹಿಡಿಯಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

    https://twitter.com/ANI/status/1045231995544952832

    ವಿಡಿಯೋದಲ್ಲಿ ಸೈನಿಕರ ಮೊದಲ ಟಾರ್ಗೆಟ್ ಆಗಿದ್ದ ಉಗ್ರಗಾಮಿಗಳ ಕ್ಯಾಪ್‍ಗಳು ಸೆರೆಯಾಗಿದ್ದು, ಬಳಿಕ ಯೋಧರು ಅವುಗಳ ಮೇಲೆ ದಾಳಿ ನಡೆಸುವ ಸಂದರ್ಭದ ದೃಶ್ಯಗಳು ಲಭಿಸಿತ್ತು. ಬೆಳಗ್ಗೆ 6.16 ಸಮಯಕ್ಕೆ ಎರಡನೇ ಟಾರ್ಗೆಟ್ ಮೇಲೆ ದಾಳಿ ನಡೆಸಲಾಗಿದೆ. ಮೂರನೇ ಟಾರ್ಗೆಟ್ ಬಂಕರ್ ಆಗಿದ್ದು, ಕೊನೆಯ ಫ್ರೇಮ್ ನಲ್ಲಿ ಉಗ್ರರ ಬಂಕರ್ ನಾಶವಾಗುವ ದೃಶ್ಯಗಳನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಭವಿಷ್ಯದ ಪ್ರಧಾನಿ ರಾಹುಲ್ ಗಾಂಧಿಗೆ ಮೋದಿ ಹೆದರಿದ್ದಾರೆ: ಪಾಕ್ ಮಾಜಿ ಸಚಿವ

    ಭವಿಷ್ಯದ ಪ್ರಧಾನಿ ರಾಹುಲ್ ಗಾಂಧಿಗೆ ಮೋದಿ ಹೆದರಿದ್ದಾರೆ: ಪಾಕ್ ಮಾಜಿ ಸಚಿವ

    ನವದೆಹಲಿ: ಕಾಶ್ಮೀರದ ಪೊಲೀಸ್ ಅಧಿಕಾರಿಗಳನ್ನು ಉಗ್ರರು ಹತ್ಯೆ ಮಾಡಿದ ಬಳಿಕ ಭಾರತ ಪಾಕಿಸ್ತಾನ ನಡುವಿನ ಮಾತುಕತೆ ರದ್ದು ಮಾಡಿರುವ ಕುರಿತು ಪಾಕ್ ಮಾಜಿ ಸಚಿವ ರೆಹಮಾನ್ ಮಲಿಕ್ ಕಿಡಿಕಾರಿದ್ದು, ಭಾರತದ ಮುಂದಿನ ಪ್ರಧಾನಿ ರಾಹುಲ್ ಗಾಂಧಿ ಅವರಿಗೆ ಮೋದಿ ಹೆದರಿದ್ದಾರೆ ಎಂದು ಹೇಳಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಹುದೊಡ್ಡ ಹಗರಣ ಎಂದು ರಫೇಲ್ ಒಪ್ಪಂದ ಕುರಿತು ಆರೋಪಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿರ ವೀಡಿಯೋ ಹಂಚಿಕೊಂಡಿರುವ ರೆಹಮಾನ್ ಮಲಿಕ್, ಮೋದಿ ವಿರುದ್ಧ ಕಿಡಿಕಾರಿದ್ದಾರೆ. ತಮ್ಮ ಟ್ವಿಟ್ಟರಿನಲ್ಲಿ ರಾಹುಲ್ ಗಾಂಧಿ ಅವರ ಪತ್ರಿಕಾಗೋಷ್ಠಿಯ ವೀಡಿಯೋ ಪೋಸ್ಟ್ ಮಾಡಿ, ರಾಹುಲ್ ಅವರನ್ನು ನಿಂದನೆ ಮಾಡುವವರು ಈ ವೀಡಿಯೋ ನೋಡಿ. ರಾಹುಲ್ ಒಬ್ಬ ಲೀಡರ್, ನಾನು ಹೇಳಿದ್ದನ್ನೇ ಅವರು ಹೇಳುತ್ತಿದ್ದಾರೆ. ಇದನ್ನು ನೋಡಿದ ಬಳಿಕವಾದರು ನನ್ನ ಬಳಿ ಕ್ಷಮೆ ಕೇಳಿ ಎಂದು ಹೇಳಿದ್ದಾರೆ.

    ಈ ವೀಡಿಯೋ ಪೋಸ್ಟ್ ಮಾಡುವ ಮುನ್ನ ಮತ್ತೊಂದು ಟ್ವೀಟ್ ಮಾಡಿರುವ ಮಲಿಕ್, ರಾಹುಲ್ ಗಾಂಧಿ ನಿಮ್ಮ ಮುಂದಿನ ಪ್ರಧಾನಿ. ಪ್ರಧಾನಿ ಮೋದಿ, ರಾಹುಲ್‍ರನ್ನು ಕಂಡು ಹೆದರಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಸರಣಿ ಟ್ವೀಟ್ ಮಾಡಿದ ಬಳಿಕ ಪ್ರತಿಕ್ರಿಯೆ ನೀಡಿರುವ ಮಲಿಕ್, ನನ್ನ ಕೆಲ ಟ್ವೀಟ್‍ಗಳು ಭಾರತವನ್ನು ಅಲುಗಾಡುವಂತೆ ಮಾಡಿದ್ದು ನನಗೆ ಸಂತಸ ತಂದಿದೆ. ನಾನು ಟ್ವೀಟ್ ಮಾಡುವ ಮೊದಲು ಪ್ರಧಾನಿ ಮೋದಿ ಹಾಗೂ ಆರ್‍ಎಸ್‍ಎಸ್ ಕೃತ್ಯಗಳ ಬಗ್ಗೆ ಕೆಲ ಭಾರತೀಯರಿಗೆ ಅರಿವೆ ಇರಲಿಲ್ಲ ಎಂದು ಹೇಳಿದ್ದಾರೆ. ಈ ಹಿಂದೆಯೂ ಭಾರತದ ರಕ್ಷಣಾ ಸೇನೆ ಮುಖ್ಯಸ್ಥ ಬಿಪಿನ್ ರಾವತ್‍ರನ್ನು ಟಾರ್ಗೆಟ್ ಮಾಡಿದ್ದ ಮಲಿಕ್, ಬಿಪಿನ್ ಒಬ್ಬ ಸೋಮಾರಿ ಎಂದು ಆರೋಪಿಸಿದ್ದರು.

    ಮಲಿಕ್ ಶೇರ್ ಮಾಡಿರುವ ವೀಡಿಯೋದಲ್ಲಿ ರಾಹುಲ್ ಗಾಂಧಿ ರಫೇಲ್ ಒಪ್ಪಂದದಲ್ಲಿ ಪ್ರಧಾನಿ ಮೋದಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಮೋದಿ ರಫೇಲ್ ಒಪ್ಪಂದ ಮಾಡುವ ವೇಳೆ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಗೋವಾದಲ್ಲಿ ಮೀನು ಖರೀದಿ ಮಾಡುತ್ತಿದ್ದರು ಎಂದು ವ್ಯಂಗ್ಯವಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

     

  • ಮೋದಿ ಭೇಟಿಯ ಹಿಂದಿನ ರಹಸ್ಯ ಬಿಚ್ಚಿಟ್ಟ ಮೋಹನ್ ಲಾಲ್

    ಮೋದಿ ಭೇಟಿಯ ಹಿಂದಿನ ರಹಸ್ಯ ಬಿಚ್ಚಿಟ್ಟ ಮೋಹನ್ ಲಾಲ್

    ನವದೆಹಲಿ: ಕಳೆದ ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ಚಿತ್ರ ನಟ ಮೋಹನ್ ಲಾಲ್ ತಮ್ಮ ಭೇಟಿಯ ಕುರಿತ ಮಾಹಿತಿಯನ್ನು ತಿಳಿಸಿದ್ದಾರೆ.

    ಈ ತಮ್ಮ ಫೇಸ್‍ಬುಕ್ ಖಾತೆಯಲ್ಲಿ 8 ಪುಟಗಳ ವಿವರಣೆಯುಳ್ಳ ಮಾಹಿತಿಯನ್ನು ಮೋಹನ್ ಲಾಲ್ ಪೋಸ್ಟ್ ಮಾಡಿದ್ದಾರೆ. ಮೋದಿ ಅವರೊಂದಿಗಿನ ಭೇಟಿ ಕುರಿತು ಮಾಧ್ಯಮಗಳಲ್ಲಿ ವರದಿಗಳು ಬಿತ್ತರವಾಗುತ್ತಿದೆ. ಆದರೆ ಒಬ್ಬ ಭಾರತೀಯನಾಗಿ ನಾನು ಪ್ರಧಾನಿಯನ್ನ ಯಾವಾಗ ಬೇಕಾದರು ಭೇಟಿ ಮಾಡುವುದಕ್ಕೆ ಅವಕಾಶವಿದೆ ಎಂದು ತಿಳಿಸಿದ್ದಾರೆ.

    ಇದೇ ವೇಳೆ ಮೋದಿ ಹಾಗೂ ನನ್ನ ಭೇಟಿಯ ವೇಳೆ ಯಾವುದೇ ರಾಜಕೀಯ ಅಂಶಗಳ ಕುರಿತು ಚರ್ಚೆ ನಡೆದಿಲ್ಲ ಎಂದು ತಿರುವನಂತಪುರಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರವನ್ನು ಉಲ್ಲೇಖಿಸದೆ ಮಾಹಿತಿ ನೀಡಿದ್ದಾರೆ.

    ಸೆಪ್ಟೆಂಬರ್ 3 ರಂದು ಪ್ರಧಾನಿ ಮೋದಿರನ್ನು ಭೇಟಿ ಮಾಡಿದ್ದ ಕುರಿತು ಸರಣಿ ಟ್ವೀಟ್ ಮಾಡಿ ಫೋಟೋ ಶೇರ್ ಮಾಡಿದ್ದರು. ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರನ್ನು ಶ್ರೀಕೃಷ್ಣ ಜನ್ಮಾಷ್ಟಮಿ ದಿನದಂದು ಭೇಟಿ ಮಾಡಿದ್ದೇನೆ. ಈ ವೇಳೆ ವಿಶ್ವಶಾಂತಿ ಫೌಂಡೇಶನ್ ಹಾಗೂ ನಮ್ಮ ಬಹುಮುಖಿ ಸಾಮಾಜಿಕ ಕಾರ್ಯಗಳ ಬಗ್ಗೆ ವಿವರಿಸಲಾಗಿದೆ ಎಂದು ಮೋಹನ್ ಲಾಲ್ ಬರೆದುಕೊಂಡಿದ್ದರು. ಮತ್ತೊಂದು ಟ್ವೀಟ್ ನಲ್ಲಿ ಪ್ರಧಾನಿ ಮೋದಿ ಅವರು ಗ್ಲೋಬಲ್ ಮಲಯಾಳಿ ರೌಂಡ್ ಟೇಬಲ್ ಕಾರ್ಯಕ್ರಮದಲ್ಲಿ ಭಾವಹಿಸಲು ಆಹ್ವಾನ ನೀಡಿದ್ದೇನೆ. ಪ್ರಧಾನಿ ಮೋದಿ ಕೇರಳಕ್ಕೆ ಬೇಕಾದ ಎಲ್ಲಾ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ವೇಳೆ ಮೋದಿ ಭಾರತ ವಿಶ್ವಶಾಂತಿ ಫೌಂಡೇಶನ್ ಅಡಿಯಲ್ಲಿ ಕ್ಯಾನ್ಸರ್ ಕೇರ್ ಸೆಂಟರ್ ಅನ್ನು ಸ್ಥಾಪಿಸುವ ನಮ್ಮ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದರು.

    ಪ್ರಧಾನಿ ಮೋದಿ ಕೂಡ ಟ್ವಿಟ್ಟರ್ ನಲ್ಲಿ ಮೋಹನ್ ಲಾಲ್ ಭೇಟಿ ಕುರಿತು ಬರೆದುಕೊಂಡಿದ್ದರು. ಈ ಟ್ವೀಟ್ ಗಳ ಬೆನ್ನಲ್ಲೇ ಶೀಘ್ರವೇ ನಟ ಮೋಹನ್‍ಲಾಲ್ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಿರುವನಂತಪುರಂ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv