Tag: prime minister modi

  • ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷವನ್ನು ಹೊಗಳಿದ ಮೋಹನ್ ಭಾಗವತ್

    ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷವನ್ನು ಹೊಗಳಿದ ಮೋಹನ್ ಭಾಗವತ್

    ನವದೆಹಲಿ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರ ದೊಡ್ಡದು ಮತ್ತು ಅದು ದೇಶಕ್ಕೆ ಮಹಾನ್ ನಾಯಕರನ್ನು ನೀಡಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

    ನವದೆಹಲಿಯ ವಿಜ್ಞಾನಭವನದಲ್ಲಿ `ಭಾರತದ ಭವಿಷ್ಯ- ಆರ್‌ಎಸ್‌ಎಸ್ ದೃಷ್ಟಿಕೋನದಲ್ಲಿ’ ಎಂಬ ಮೂರು ದಿನಗಳ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಸಿಪಿಎಂ ಸಂಸ್ಥಾಪಕ ಎಂಎನ್ ರಾಯ್ ಬಗ್ಗೆಯೂ ಪ್ರಸ್ತಾಪಿಸಿದರು. ದೇಶದ ಹಿತಕ್ಕಾಗಿ ನಾಗ್ಪುರದಲ್ಲಿ ಕಮ್ಯುನಿಸ್ಟರ ಜೊತೆಗೆ ಹೆಗಡೆವರ್ ಕೆಲಸ ಮಾಡಲು ಮುಂದಾಗಿದ್ದರು. ಹೆಗಡೆವರ್ ಚಿಂತನೆಯನ್ನು ಅರ್ಥ ಮಾಡಿಕೊಳ್ಳದೇ ಆರ್‌ಎಸ್‌ಎಸ್ ಅನ್ನು ಇತರೆ ಸಂಘಟನೆಗಳೊಂದಿಗೆ ಹೋಲಿಸೋದು ಸರಿಯಲ್ಲ ಎಂದು ಪರೋಕ್ಷವಾಗಿ ರಾಹುಲ್ ಗಾಂಧಿಗೆ ಟಾಂಗ್ ನೀಡಿದರು.

    ತಮ್ಮ ಸಮಾವೇಶದ ಉದ್ದೇಶವನ್ನು ತಿಳಿಸಿದ ಮೋಹನ್ ಭಾಗವತ್, ದೇಶದ ಜನತೆಗೆ ಸಂಘಟನೆಯ ಉದ್ದೇಶದ ಕುರಿತು ಅರಿತುಕೊಳ್ಳಲು ಸಹಾಯಕವಾಗಲಿದೆ. ಆರ್‌ಎಸ್‌ಎಸ್ ಹಿಂದುತ್ವ ಸಿದ್ಧಾಂತ ಯಾರನ್ನು ವಿರೋಧಿಸುವುದಲ್ಲ. ಸಂಘ ದೇಶದಲ್ಲಿ ಒಂದು ಶಕ್ತಿಯಾಗಿ ಬೆಳೆದು ನಿಂತಿದ್ದು, ದೇಶದ ಬಹುದೊಡ್ಡ ಸಂಘಟನೆಯಾಗಿದೆ. ಎಲ್ಲ ಭಾಷೆಯ ಜನರು ಸಂಸ್ಥೆಯಲ್ಲಿದ್ದರೆ. ಆದರೆ ಸಂಘ ಯಾವುದೇ ಹಣವನ್ನು ಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    ಇದೇ ವೇಳೆ ಹೆಗಡೆವರ್ ಅವರ ಬಗ್ಗೆ ತಿಳಿದುಕೊಳ್ಳದೆ ಸಂಘದ ಬಗ್ಗೆ ತಿಳಿಯಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ ಅವರು, ಹೆಗಡೆವರ್ ಸಣ್ಣ ಕುಟುಂಬದಿಂದ ಬಂದಿದ್ದವರು. ಅವರು ಬಾಲ್ಯದಿಂದಲೂ ಸ್ವಾತಂತ್ರ್ಯ ಹೋರಾಟದತ್ತ ಆಕರ್ಷಿತರಾಗಿದ್ದರು. ಅಲ್ಲದೇ ಹಲವು ಕಷ್ಟದ ಸಂದರ್ಭಗಳನ್ನು ತಿಳಿದಿದ್ದರು. ಒಂದೇ ದಿನ ತಮ್ಮ ತಂದೆ ತಾಯಿಯನ್ನು ಕಳೆದುಕೊಂಡಿದ್ದರು ಎಂದು ಹೆಗಡೆವರ್ ಜೀವನದ ಕುರಿತು ವಿವರಿಸಿದರು.

    ಕೆಲ ಸಂದರ್ಭದಲ್ಲಿ ಸಂಘ ವಿಶಿಷ್ಟತೆಯನು ತಪ್ಪಾಗಿ ಆಥೈಸಿಕೊಳ್ಳಲಾಗಿದೆ ಎಂದು ತಿಳಿಸಿದ ಭಾಗವತ್, ಕೆಲ ಮಂದಿ ಭಯದಿಂದ ಆರ್‌ಎಸ್‌ಎಸ್ ಅನ್ನು ಟಾರ್ಗೆಟ್ ಮಾಡಿದ್ದಾರೆ. ಆದರೆ ಇಂದು ಪ್ರತಿದಿನದ ಜೀವನದಲ್ಲೂ ರಾಜಕೀಯ ಪ್ರವೇಶಿಸಿದೆ. ದೇಶದಲ್ಲಿ ವೈವಿಧ್ಯತೆ ಇದ್ದು, 33 ಸಾವಿರ ದೇವರು ಇದ್ದರೆ. ಅದರಂತೆ ನಾಸ್ತಿರಕು, ಅನೇಕ ಭಾಷೆ ಮಾತನಾಡುವ ಜನರು, ಹಲವು ಸಿದ್ಧಾಂತಗಳಿದ್ದರೂ ನಾವು ಒಟ್ಟಿಗೆ ಇದ್ದೇವೆ. ಇದಕ್ಕಾಗಿ ನಾವು ಕೆಲವು ತ್ಯಾಗಗಳನ್ನು ಮಾಡಬೇಕು. ದೇಶದ ವರ್ತಮಾನ, ಭವಿಷ್ಯ, ಇತಿಹಾಸ ಎಲ್ಲವೂ ಜನರ ಮೇಲೆಯೇ ಅವಲಂಬಿಸಿದೆ ಎಂದು ತಿಳಿಸಿದರು.

    ಕಾರ್ಯಕ್ರಮಕ್ಕೆ ಆಗಮಿಸುವಂತೆ ಆರ್‌ಎಸ್‌ಎಸ್ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ಹಲವು ಮುಖಂಡರಿಗೂ ಆಹ್ವಾನ ನೀಡಿತ್ತು. ಆದರೆ ಯಾವುದೇ ನಾಯಕರು ಆರ್‌ಎಸ್‌ಎಸ್ ಆಹ್ವಾನವನ್ನು ಸ್ವೀಕರಿಸಿ ಕಾರ್ಯಕ್ರಮದಕ್ಕೆ ಆಗಮಿಸಿರಲಿಲ್ಲ. ಉಳಿದಂತೆ ಬಾಲಿವುಡ್ ನಟರಾದ ನವಜುದ್ದೀನ್ ಸಿದ್ದಿಕಿ, ಅನು ಮಲಿಕ್, ಮನೀಷಾ ಕೊಯಿರಾಲಾ, ಅನೂ ಕಪೂರ್ ಸೇರಿದಂತೆ ಸಾಮಾಜದ ಗಣ್ಯವರ್ಗದಲ್ಲಿ ಗುರುತಿಸಿಕೊಂಡಿದ್ದ 600ಕ್ಕೂ ಹೆಚ್ಚು ಮಂದಿ ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ಇತ್ತ ಪ್ರಧಾನಿ ನರೇಂದ್ರ ಮೋದಿಗೆ 68ನೇ ಹುಟ್ಟುಹಬ್ಬದ ಸಂಭ್ರಮ ಆಚರಿಸಿಕೊಂಡರು. ಹುಟ್ಟುಹಬ್ಬದ ಪ್ರಯುಕ್ತ ವಾರಾಣಾಸಿಯಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದರು. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು ಶುಭ ಹಾರೈಸಿದರು. ಉಳಿದಂತೆ ಕೈಲಾಸ ಮಾನಸ ಸರೋವರ ಯಾತ್ರೆ ಬಳಿಕ ಶಿವಭಕ್ತನ ಅವತಾರದಲ್ಲಿ ಕಾಣಿಸಿಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಧ್ಯಪ್ರದೇಶದಲ್ಲಿ ಚುನಾವಣಾ ರೋಡ್‍ಶೋ ಮೂಲಕ ಪ್ರಚಾರ ಆರಂಭಿಸಿದ್ದಾರೆ. 11 ಮಂದಿ ಅರ್ಚಕರ ಆಶೀರ್ವಾದ ಪಡೆದು 15 ಕಿಲೋ ಮೀಟರ್ ರೋಡ್‍ಶೋ ಕೈಗೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • `ಸ್ವಚ್ಛತೆಯೇ ಸೇವೆ’ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

    `ಸ್ವಚ್ಛತೆಯೇ ಸೇವೆ’ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

    ನವದೆಹಲಿ: ಅಕ್ಟೋಬರ್ 2ಕ್ಕೆ ಸ್ವಚ್ಛ ಭಾರತ ಅಭಿಯಾನಕ್ಕೆ 4 ವರ್ಷವಾಗುವ ಹಿನ್ನೆಲೆಯಲ್ಲಿ ಇಂದಿನಿಂದ ಅಕ್ಟೋಬರ್ 2ರವರೆಗೆ ದೇಶಾದ್ಯಂತ ಸ್ವಚ್ಛತಾ ಅಭಿಯಾನ ನಡೆಸಲು ಮೋದಿ ಕರೆಕೊಟ್ಟಿದ್ದು, ಸ್ವಚ್ಛತೆಯೇ ಸೇವೆ ಎಂಬ ಕಾರ್ಯಕ್ರಮಕ್ಕೆ ದೆಹಲಿಯಲ್ಲಿ ಚಾಲನೆ ನೀಡಿದರು.

    ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮೋದಿ, 4 ವರ್ಷದಲ್ಲಿ ದೇಶದ್ಯಾಂತ ಸುಮಾರು 9 ಕೋಟಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಸ್ವಚ್ಛತೆಯಿಂದ ಆರೋಗ್ಯಯುತ ಭಾರತ ನಿರ್ಮಾಣ ಸಾಧ್ಯ. ಸ್ವಚ್ಛತಾ ಅಭಿಯಾನದಲ್ಲಿ ದೇಶದ ಹೆಣ್ಣುಮಕ್ಕಳ ಕೊಡುಗೆ ಅಪಾರ ಎಂದು ಹೇಳಿದರು.

    ಸ್ವಚ್ಛತಾ ಕಾರ್ಯಕ್ರಮದಲ್ಲಿ ಬಾಲಿವುಡ್ ಬಿಗ್‍ಬಿ ಅಮಿತಾಬ್ ಬಚ್ಚನ್, ಉದ್ಯಮಿ ರತನ್ ಟಾಟಾ ಸೇರಿದಂತೆ ಹಲವರು ಗಣ್ಯರು, ವಿದ್ಯಾರ್ಥಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಸಂವಾದ ನಡೆಸಿದರು.

    ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮೋದಿ, ಗಾಂಧೀಜಿ ಅವರ 152ನೇ ಜನ್ಮ ದಿನಾಚರಣೆಯನ್ನು ಅಕ್ಟೋಬರ್ 2ರಂದು ಆಚರಿಸಲಿದ್ದೇವೆ. ಅಂದೇ ಸ್ವಚ್ಛ ಭಾರತ ಅಭಿಯಾನಕ್ಕೆ 4 ವರ್ಷ ತುಂಬಲಿದ್ದು, ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಧನ್ಯವಾದ. ಸ್ವಚ್ಛತಾ ಅಭಿಯಾನದ ಜೊತೆಗೆ ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಸುಧಾರಿಸಬೇಕು ಎಂದು ಮೋದಿ ತಿಳಿಸಿದ್ದಾರೆ.

    ಕೇಂದ್ರ ಸರ್ಕಾರದ ರೈಲ್ವೇ ಇಲಾಖೆಯ ಬಗ್ಗೆಯೂ ಟ್ವೀಟ್ ಮಾಡಿರುವ ಮೋದಿ, ಸ್ವಚ್ಛ ಭಾರತ ಅಭಿಯಾನದಲ್ಲಿ ರೈಲ್ವೇ ಇಲಾಖೆ ಉತ್ತಮ ಕೆಲಸ ಮಾಡಿದೆ ಎಂದು ತಿಳಿಸಿದ್ದು, ಹರ್ಯಾಣದ ರೇವಾರಿ ರೈಲ್ವೆ ನಿಲಾಣದ ಜನರೊಂದಿಗೆ ಮೋದಿ ಸಂವಾದ ನಡೆಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ನಾಲ್ಕೂವರೆ ವರ್ಷ ಕಾಂಗ್ರೆಸ್ಸಿಗರು ಎಲ್ಲಿದ್ರು?- ಶ್ರೀನಿವಾಸ್ ಪೂಜಾರಿ ಲೇವಡಿ

    ನಾಲ್ಕೂವರೆ ವರ್ಷ ಕಾಂಗ್ರೆಸ್ಸಿಗರು ಎಲ್ಲಿದ್ರು?- ಶ್ರೀನಿವಾಸ್ ಪೂಜಾರಿ ಲೇವಡಿ

    ಉಡುಪಿ: ಕಾಂಗ್ರೆಸ್ ಪಕ್ಷ ಕರೆ ನೀಡಿರುವ ರಾಜಕೀಯ ಪ್ರೇರಿತ ಬಂದ್ ನಿರ್ಲಕ್ಷ್ಯ ಮಾಡಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಬೇಕು ಎಂಬದು ಜನರ ಆಶಯ. ಇದನ್ನು ಕಂಡು ಕಾಂಗ್ರೆಸ್ ಮುಂಖಡರಿಗೆ ಗಾಬರಿಯಾಗಿದೆ. ನಾಲ್ಕೂವರೆ ವರ್ಷ ಏನೂ ಸಿಗದೆ, ಸದ್ಯ ತೈಲ ದರ ಏರಿಕೆಗೆ ಕುರಿತು ಗಲಾಟೆ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.

    ಕಾಂಗ್ರೆಸ್‍ನ ಜನರ ಮುಂದಿಟ್ಟಿರುವ ವಾದವನ್ನು ಎಲ್ಲರು ನಿರ್ಲಕ್ಷ್ಯ ಮಾಡಲಿದ್ದು, ಬಂದ್ ಕರೆ ನೀಡಿದರೆ ಜನ ತಿರಸ್ಕಾರ ಮಾಡುತ್ತಾರೆ. ಪ್ರಧಾನಿ ಮೋದಿ ಅವರ ಕೆಲಸ ಪಾರದರ್ಶಕವಾಗಿದೆ. ಮೋದಿ ಕೆಲಸಗಾರ ಅನ್ನುವ ಭಾವನೆ ಜನರಿಗೆ ಇದೆ. ಅಲ್ಲದೇ ಯುಪಿಎ ಅಧಿಕಾರ ಅವಧಿಯಲ್ಲಿ ಎಷ್ಟು ಬಾರಿ ಪೆಟ್ರೋಲ್, ಡಿಸೇಲ್ ದರ ಏರಿಕೆಯಾಗಿಲ್ಲ ಎಂದು ಇದೇ ವೇಳೆ ಪೂಜಾರಿ ಪ್ರಶ್ನೆ ಮಾಡಿದರು.

    ಸಂವಿಧಾನ ಬದ್ಧವಾಗಿ ಬಂದ್ ಮಾಡುವುದು ಸರಿಯಲ್ಲ ಎಂದ ಅವರು, ತೈಲ ಬೆಲೆ ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ ಅಲ್ಲ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಳಿತ ಅಗುವುದು ಸ್ವಾಭಾವಿಕ. ಇದರ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಆಗಿದೆ. ಮೋದಿ ಸರ್ಕಾರದ ನಾಲ್ಕೂವರೆ ವರ್ಷದ ಆಡಳಿತದಲ್ಲಿ ಚಳುವಳಿ ಮಾಡಲು ಕಾಂಗ್ರೆಸ್ ಗೆ ಏನೂ ಸಿಕ್ಕಿಲ್ಲ. ಈಗ ಬೆಲೆ ಏರಿಕೆ ಎಂದು ಬೀದಿಗಿಳಿದಿದ್ದಾರೆ. ರಾಜ್ಯದ ಜನ ಇದಕ್ಕೆ ಸೊಪ್ಪು ಹಾಕಲ್ಲ ಎಂದು ಲೇವಡಿ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಬಿಜೆಪಿ ಜೊತೆ ರಜನಿಕಾಂತ್ ಪಕ್ಷ ಶೀಘ್ರವೇ ವಿಲೀನ?

    ಬಿಜೆಪಿ ಜೊತೆ ರಜನಿಕಾಂತ್ ಪಕ್ಷ ಶೀಘ್ರವೇ ವಿಲೀನ?

    ನವದೆಹಲಿ: ತಮಿಳುನಾಡು ರಾಜಕೀಯದಲ್ಲಿ ಭಾರೀ ಬೆಳವಣಿಗೆ ಕಾಣಿಸಿಕೊಂಡಿದ್ದು, ಸೂಪರ್ ಸ್ಟಾರ್ ರಜನಿಕಾಂತ್ ನಡೆ ಭಾರೀ ಕುತೂಹಲವನ್ನು ಉಂಟುಮಾಡಿದೆ.

    ರಜನಿಕಾಂತ್ ತಮ್ಮ ಮಕ್ಕಳ್ ಮಂದ್ರಂ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲು ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ. ಇದರಂತೆ ಕಳೆದ 5 ದಿನಗಳಿಂದ ರಜನಿಕಾಂತ್ ಅವರು ಬಿಜೆಪಿ ನಾಯಕರೊಂದಿಗೆ 7 ಬಾರಿ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.

    ಸದ್ಯ ದೆಹಲಿಯಲ್ಲೇ ವಾಸ್ತವ್ಯ ಹೂಡಿರುವ ರಜನಿಕಾಂತ್ ಬಿಜೆಪಿ ನಾಯಕರೊಂದಿಗೆ ಮೇಲಿಂದ ಮೇಲೆ ಸಭೆ ನಡೆಸಿದ ಹಿನ್ನೆಲೆಯಲ್ಲಿ ಚರ್ಚೆ ಆರಂಭವಾಗಿದೆ. ಅಲ್ಲದೇ ರಜನಿಕಾಂತ್ ತಮ್ಮ ಸ್ವತಃ ಪಕ್ಷ ಸ್ಥಾಪನೆಗೂ ಮುನ್ನವೇ ಪ್ರಧಾನಿ ಮೋದಿ ಅವರನ್ನು ಹಲವು ಬಾರಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಆದರೆ ಬಳಿಕ ನಡೆದ ರಾಜಕೀಯ ಬೆಳವಣಿಕೆಗಳಲ್ಲಿ ರಜನಿಕಾಂತ್ ತಮ್ಮ ಸ್ವತಃ ಪಕ್ಷ ರಜಿನಿ ಮಕ್ಕಳ್ ಮಂದ್ರಂ ಪಕ್ಷ ಸ್ಥಾಪಿಸಿ ಯಾವುದೇ ರಾಷ್ಟ್ರೀಯ ಪಕ್ಷಗಳೊಂದಿಗೆ ಹೋಗುವುದಿಲ್ಲ ಎಂಬುವುದನ್ನು ಸ್ಪಷ್ಟಪಡಿಸಿದ್ದರು.

    ಇತ್ತ ಜಯಲಲಿತಾ ಹಾಗೂ ಕರುಣಾನಿಧಿ ನಿಧನದ ಬಳಿಕ ತಮಿಳುನಾಡು ರಾಜಕೀಯದಲ್ಲಿ ತನ್ನ ಪ್ರಭಾವ ಬೀರಲು ಬಿಜೆಪಿ ಚಿಂತನೆ ನಡೆಸಿದ್ದು, ಈ ಕಾರಣಕ್ಕಾಗಿ ರಜನಿಕಾಂತ್ ಮೂಲಕ ಬೇರೂರಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.

    2017 ಡಿಸೆಂಬರ್ 31 ರಂದು ರಾಜಕೀಯ ಪ್ರವೇಶ ಕುರಿತು ಘೋಷಣೆ ಮಾಡಿದ್ದ ರಜನಿ 2021ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ನಡೆಸುವುದಾಗಿ ತಿಳಿಸಿದ್ದರು. ಅಲ್ಲದೇ ತಮಿಳುನಾಡು ರಾಜಕೀಯ ನಡೆದಿರುವ ಕೆಲ ಘಟನೆಗಳು ನಾಚಿಕೆಯಿಂದ ತಲೆತಗ್ಗಿಸುವಂತೆ ಮಾಡಿದೆ. ಉಳಿದ ರಾಜ್ಯಗಳು ನಮ್ಮತ್ತ ನೋಡಿ ನಗುವಂತೆ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

    ಒಂದೊಮ್ಮೆ ರಜಿನಿಕಾಂತ್ ಮೈತ್ರಿ ರಾಜಕಾರಣಕ್ಕೆ ಮುಂದಾದರೆ ದಕ್ಷಿಣ ಭಾರತದಲ್ಲಿ ಬಿಜೆಪಿ ಮತ್ತೊಂದು ಮಹತ್ವದ ಬಲ ಸಿಗುವಂತಾಗುತ್ತದೆ. ಇನ್ನು ಕಳೆದ ಕೆಲ ದಿನಗಳ ಹಿಂದೆಯಷ್ಟೇ ಕೇರಳ ನಟ ಮೋಹನ್ ಲಾಲ್ ಕೂಡ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಈ ವೇಳೆ ತಿರುವನಂತಪುರಂ ಕ್ಷೇತ್ರದಿಂದ ಕಾಂಗ್ರೆಸ್ ಸಂಸದ ಶಶಿತರೂರ್ ವಿರುದ್ಧ ಸ್ಪರ್ಧೆ ಮಾಡಲು ಮೋಹನ್ ಲಾಲ್ ಅವರಿಗೆ ಬಿಜೆಪಿ ಟಿಕೆಟ್ ನೀಡುತ್ತಿದೆ ಎನ್ನವ ವಿಚಾರ ಬೆಳಕಿಗೆ ಬಂದಿತ್ತು. ಇದನ್ನು ಓದಿ:  ತಿರುವನಂತಪುರಂ ಕ್ಷೇತ್ರದಿಂದ ಮೋಹನ್‍ಲಾಲ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=eqv0iMvP3xo

  • ತಿರುವನಂತಪುರಂ ಕ್ಷೇತ್ರದಿಂದ ಮೋಹನ್‍ಲಾಲ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ?

    ತಿರುವನಂತಪುರಂ ಕ್ಷೇತ್ರದಿಂದ ಮೋಹನ್‍ಲಾಲ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ?

    ತಿರುವಂತನಪುರಂ: ಇತ್ತೀಚೆಗೆ ಸಿನಿಮಾರಂಗದ ನಾಯಕರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಈಗಾಗಲೇ ಆಂಧ್ರ, ತಮಿಳುನಾಡು ಆಗಿ ಈಗ ಕೇರಳದ ಸರದಿಯಾಗಿದ್ದು, ರಾಜಕೀಯ ರಂಗಕ್ಕೆ ಧುಮುಕಲು ಖ್ಯಾತ ನಟ ಮೋಹನ್ ಲಾಲ್ ಸಜ್ಜಾಗಿದ್ದಾರೆ.

    ಶೀಘ್ರವೇ ಮಲಯಾಳಂ ನಟ ಮೋಹನ್‍ಲಾಲ್ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಿರುವನಂತಪುರಂ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆಯಿದೆ. ಮೋಹನ್ ಲಾಲ್ ಬಿಜೆಪಿ ಸೇರ್ಪಡೆಗೆ ಆರ್‍ಎಸ್‍ಎಸ್‍ನಿಂದ ಭಾರೀ ಕಸರತ್ತು ನಡೆಯುತ್ತಿದ್ದು, ಮೋಹನ್‍ಲಾಲ್ ಮೂಲಕ ಕೇರಳದಲ್ಲಿ ನೆಲೆ ಕಂಡುಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ. ಆದರೆ ರಾಜಕೀಯಕ್ಕೆ ಸೇರ್ಪಡೆಯಾಗುವ ಬಗ್ಗೆ ಮೋಹನ್ ಲಾಲ್ ಇದೂವರೆಗೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

    ಇತ್ತೀಚೆಗೆ ಮೋಹನ್ ಲಾಲ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಮೋಹಲ್ ಲಾಲ್ ಸರಣಿ ಟ್ವೀಟ್ ಮಾಡಿದ್ದು, ಪ್ರಧಾನಿ ಮೋದಿ ಕೂಡ ಟ್ವಿಟ್ಟರ್ ನಲ್ಲಿ ಮೋಹನ್ ಲಾಲ್ ಭೇಟಿ ಕುರಿತು ಬರೆದುಕೊಂಡಿದ್ದಾರೆ.

    ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿರನ್ನು ಶ್ರೀಕೃಷ್ಣ ಜನ್ಮಾಷ್ಟಮಿ ದಿನದಂದು ಭೇಟಿ ಮಾಡಿದ್ದೇನೆ. ಈ ವೇಳೆ ವಿಶ್ವಶಾಂತಿ ಫೌಂಡೇಶನ್ ಹಾಗೂ ನಮ್ಮ ಬಹುಮುಖಿ ಸಾಮಾಜಿಕ ಕಾರ್ಯಗಳ ಬಗ್ಗೆ ವಿವರಿಸಲಾಗಿದೆ ಎಂದು ಮೋಹನ್ ಲಾಲ್ ಬರೆದುಕೊಂಡಿದ್ದಾರೆ.

    ಮತ್ತೊಂದು ಟ್ವೀಟ್ ನಲ್ಲಿ ಪ್ರಧಾನಿ ಮೋದಿ ಅವರು ಗ್ಲೋಬಲ್ ಮಲಯಳಿ ರೌಂಡ್ ಟೇಬಲ್ ಕಾರ್ಯಕ್ರಮದಲ್ಲಿ ಭಾವಹಿಸಲು ಆಹ್ವಾನ ನೀಡಿದ್ದೇನೆ. ಪ್ರಧಾನಿ ಮೋದಿ ಕೇರಳಕ್ಕೆ ಬೇಕಾದ ಎಲ್ಲಾ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ವೇಳೆ ಮೋದಿ ಭಾರತ ವಿಶ್ವಶಾಂತಿ ಫೌಂಡೇಶನ್ ಅಡಿಯಲ್ಲಿ ಕ್ಯಾನ್ಸರ್ ಕೇರ್ ಸೆಂಟರ್ ಅನ್ನು ಸ್ಥಾಪಿಸುವ ನಮ್ಮ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

    ತಿರುವನಂಪುರ ಕೇಂದ್ರದ ಮಾಜಿ ಮಂತ್ರಿ ಶಶಿ ತರೂರ್ ಅವರ ಕ್ಷೇತ್ರವಾಗಿದ್ದು, 2014ರ ಚುನಾವಣೆಯಲ್ಲಿ 15,470 ಮತಗಳ ಅಂತರದಿಂದ ಜಯಗಳಿಸಿದ್ದರು. ಶಶಿ ತರೂರ್ ಅವರಿಗೆ 2,97,806 ಮತಗಳು ಬಿದ್ದಿದ್ದರೆ, ಬಿಜೆಪಿ ಸಿ. ರಾಜಗೋಪಾಲ್ ಅವರಿಗೆ 2,82,336 ಮತಗಳು ಬಿದ್ದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಏನಿದು ಇಂಡಿಯಾ ಪೋಸ್ಟ್ ಪೇಮೆಟ್ಸ್ ಬ್ಯಾಂಕ್? ಯಾವೆಲ್ಲಾ ಸೇವೆ ಲಭ್ಯ? ಇಲ್ಲಿದೆ ಪೂರ್ಣ ಮಾಹಿತಿ

    ಏನಿದು ಇಂಡಿಯಾ ಪೋಸ್ಟ್ ಪೇಮೆಟ್ಸ್ ಬ್ಯಾಂಕ್? ಯಾವೆಲ್ಲಾ ಸೇವೆ ಲಭ್ಯ? ಇಲ್ಲಿದೆ ಪೂರ್ಣ ಮಾಹಿತಿ

    ನವದೆಹಲಿ: ಪೋಸ್ಟ್ ಆಫೀಸ್ ಇನ್ನು ಮುಂದೆ ಜನರಿಗೆ ಮತ್ತಷ್ಟು ಹತ್ತಿರವಾಗಲಿದೆ. ಇನ್ನು ಮುಂದೆ ಮನೆಯಲ್ಲೇ ಕುಳಿತು ಪೋಸ್ಟ್ ಆಫೀಸ್ ಖಾತೆಯನ್ನು ನಿರ್ವಹಿಸಬಹುದು.

    ಭಾರತದ ಕೋಟ್ಯಂತರ ಜನರಿಗೆ ಆರ್ಥಿಕ ಸೇವೆಯನ್ನು ನೀಡುವ ಉದ್ದೇಶದಿಂದ `ಇಂಡಿಯಾ ಪೋಸ್ಟ್ ಪೇಮೆಟ್ಸ್ ಬ್ಯಾಂಕ್'(ಐಪಿಪಿಬಿ) ಚಾಲನೆ ಸಿಕ್ಕಿದೆ. ಐಪಿಪಿಬಿ ಯೋಜನೆ ಸಾಮಾನ್ಯ ವ್ಯಕ್ತಿಯೂ ಕೂಡ ಆರ್ಥಿಕ ಸೇವೆ ಪಡೆಯುವ ಉದ್ದೇಶ ಹೊಂದಿದೆ. ಅಲ್ಲದೇ ಕೇಂದ್ರ ಸರ್ಕಾರದ ಆರ್ಥಿಕ ಉದ್ದೇಶಗಳ ಯೋಜನೆಗಳ ಪ್ರಗತಿಯಲ್ಲಿ ವೇಗ ಪಡೆಯಲು ಸಹಕಾರಿಯಾಗಲಿದೆ.

    ಏನಿದು ಐಪಿಪಿಬಿ ಯೋಜನೆ?
    ಈಗಾಗಲೇ ಕೇಂದ್ರ ಸರ್ಕಾರ ದೇಶದ ಎಲ್ಲರೂ ಬ್ಯಾಂಕ್ ಖಾತೆ ಹೊಂದುವಂತೆ ಮಾಡಲು ಜನ್ ಧನ್ ಯೋಜನೆಗಳು ಆರಂಭಿಸಿದೆ. ಆದರೂ ಬಹಳಷ್ಟು ಜನ ಇನ್ನು ಬ್ಯಾಂಕಿಂಗ್ ವಲಯಕ್ಕೆ ಸೇರ್ಪಡೆಯಾಗಿಲ್ಲ. ಹೀಗಾಗಿ ಈ ವ್ಯಕ್ತಿಗಳನ್ನು ಬ್ಯಾಕಿಂಗ್ ವಲಯಕ್ಕೆ ಸೇರ್ಪಡೆಗೊಳಿಸುವುದು ಮತ್ತು ಅಂಚೆ ಇಲಾಖೆಯನ್ನು ಆರ್ಥಿಕವಾಗಿ ಸದೃಢಗೊಳಿಸಲು ಐಪಿಪಿಬಿ ಯೋಜನೆ ಆರಂಭಿಸಲಾಗಿದೆ.

    ದೇಶಾದ್ಯಂತ ಆರಂಭದಲ್ಲಿ 650 ಐಪಿಪಿಬಿ ಬ್ರಾಚ್‍ಗಳು ಮತ್ತು 3,250 ಕೇಂದ್ರಗಳನ್ನು ತೆರೆಯಲಾಗಿದೆ. ಕೇಂದ್ರ ಸರ್ಕಾರದ ಅಂಚೆ ಇಲಾಖೆ ಯೋಜನೆಯ ಸಂಪೂರ್ಣ ಜವಾಬ್ದಾರಿ ವಹಿಸಲಿದ್ದು, 3 ಲಕ್ಷ ಅಂಚೆ ಸೇವಕರು ಹಾಗೂ ಗ್ರಾಮೀಣ ಪೋಸ್ಟ್ ಮ್ಯಾನ್ ಗಳು ಈ ಯೋಜನೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಅಲ್ಲದೇ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ ನೀಡಲಿದ್ದಾರೆ. 2018 ಡಿಸೆಂಬರ್ 31ರ ವೇಳೆಗೆ 1.55 ಲಕ್ಷ ಅಂಚೆ ಕೇಂದ್ರಗಳು ಐಪಿಪಿಬಿ ಸೇವೆಗೆ ಸೇರ್ಪಡೆಯಾಗಲಿದೆ. ಹೀಗಾಗಿ ಭಾರತದಲ್ಲಿ ಬ್ಯಾಂಕಿಂಗ್ ಕ್ಷೇತ್ರದ ವ್ಯಾಪ್ತಿ ಗಮನಾರ್ಹವಾಗಿ ಹೆಚ್ಚಳವಾಗಲಿದೆ. ಕೇಂದ್ರ ಸರ್ಕಾರವು ಐಪಿಪಿಬಿ ಸೇವೆಗೆ 1,435 ಕೋಟಿ ರೂ. ಹಣಕಾಸಿನ ನೆರವು ನೀಡುವುದಾಗಿ ಸದನದಲ್ಲಿ ತಿಳಿಸಿದೆ.

    ಖಾತೆ ಆರಂಭಿಸುವುದು ಹೇಗೆ?
    ಪಿಐಐಬಿ ಕೇಂದ್ರದಲ್ಲಿ ಖಾತೆ ತೆರೆಯಲು ಆಧಾರ್ ಕಾರ್ಡ್ ಮತ್ತು ಮೊಬೈಲ್ ಸಂಖ್ಯೆ ಹೊಂದಿದ್ದರೆ ಸಾಕು. ಯಾವುದೇ ಅರ್ಜಿ ತುಂಬುವ ಅಗತ್ಯವಿಲ್ಲ. ರಾಷ್ಟ್ರಕೃತ ಬ್ಯಾಂಕ್ ಗಳಲ್ಲಿ ಖಾತೆ ತೆರೆದ ನಂತರ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಖಾತೆಯಲ್ಲಿ ಕನಿಷ್ಠ ಹಣವನ್ನು ಇಡಲೇಬೇಕೆಂಬ ನಿಯಮವಿದೆ. ಆದರೆ ಪಿಐಐಪಿ ನಲ್ಲಿ ಆರಂಭಿಸುವ ಖಾತೆಗೆ ಯಾವುದೇ ಕನಿಷ್ಠ ಠೇವಣಿ ಇಡುವ ಅಗತ್ಯವಿಲ್ಲ.

    ಐಪಿಪಿಬಿ ಕೇಂದ್ರಗಳಲ್ಲಿ ಉಳಿತಾಯ ಖಾತೆ ಹಾಗೂ ಚಾಲ್ತಿ ಖಾತೆ ಆರಂಭಿಸಲು ಅವಕಾಶವಿದ್ದು, ಈ ಖಾತೆಗಳಿಂದ ಹಣದ ವರ್ಗಾವಣೆ, ನೇರ ಹಣದ ವರ್ಗಾವಣೆ, ಬಿಲ್ ಪಾವತಿ ಮತ್ತು ವ್ಯಾಪಾರದ ಎಲ್ಲಾ ಸೇವೆಗಳ ಬಿಲ್ ಪಾವತಿ ಮಾಡಬಹುದಾಗಿದೆ. ಅಲ್ಲದೇ ತ್ರೈಮಾಸಿಕವಾಗಿ ಯೋಗ್ಯ ಬಡ್ಡಿ ದರದಲ್ಲಿ 1 ಲಕ್ಷ ರೂ. ವರೆಗೂ ಠೇವಣಿ ಇಡುವ ಸೇವೆಯೂ ಲಭ್ಯವಿದೆ.

    ಇಂಟರ್ ನೆಟ್ ಬ್ಯಾಂಕಿಂಗ್: ಪಿಐಐಬಿ ಸೇವೆಯಲ್ಲಿ ಇಂಟರ್‍ನೆಟ್ ಬ್ಯಾಂಕಿಂಗ್ ಸೇವೆಯೂ ಲಭ್ಯವಿದ್ದು, ಮೈಕ್ರೋ ಎಟಿಎಂ, ಮೊಬೈಲ್ ಬ್ಯಾಂಕಿಂಗ್ ಆ್ಯಪ್, ಎಸ್‍ಎಂಎಸ್ ಮತ್ತು ಧ್ವನಿ (ಐವಿಆರ್) ಸೇವೆಗಳು ಲಭ್ಯವಿದೆ.

    ಸುರಕ್ಷತೆ ಗುರಿ: ಪಿಐಐಬಿ ನಲ್ಲಿ ನಡೆಯುವ ಪ್ರತಿ ಸೇವೆಗೂ ಒನ್ ಟೈಮ್ ಪಾಸ್‍ವರ್ಡ್ (ಒಟಿಪಿ) ಬರುತ್ತದೆ. ಬ್ಯಾಂಕ್ ಗ್ರಾಹಕರಿಗೆ ಬೇಡಿಕೆ ಅನುಗುಣವಾಗಿ `ಕ್ಯೂಆರ್’ ಕಾರ್ಡ್ ಸೇವೆಯನ್ನು ನೀಡಲಿದೆ. ಈ ಕಾರ್ಡ್‍ನಲ್ಲಿ ನಮೂದಿಸಿರುವ ಸ್ಕ್ಯಾನ್ ಕೋಡ್ ಮೂಲಕ ಸುಲಭವಾಗಿ ವ್ಯವಹರಿಸಬಹುದು.

    31 ಕೇಂದ್ರ: ಪಿಐಐಬಿ ಯೋಜನೆ ಅಡಿ ಕರ್ನಾಟಕದಲ್ಲಿ 31 ಜಿಲ್ಲಾ ಶಾಖೆಗಳು ಹಾಗೂ 155 ಸೇವಾ ಕೇಂದ್ರಗಳು ಕಾರ್ಯಾರಂಭವಾಗಲಿದ್ದು, ಕೇಂದ್ರ ಸಚಿವ ಅನಂತ್‍ಕುಮಾರ್ ಬೆಂಗಳೂರಿನ ಟೌನ್ ಹಾಲ್ ಬಳಿಯ ಅಂಚೆಕಚೇರಿಯಲ್ಲಿ ಐಪಿಪಿಬಿ ಕೇಂದ್ರಕ್ಕೆ ಚಾಲನೆ ನೀಡಿದ್ದಾರೆ. ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ 9 ಸಾವಿರ ಸೇವಾಕೇಂದ್ರಗಳು ಆರಂಭವಾಗಲಿದೆ.

    ಉಪಯೋಗವೇನು?
    ಮನೆ ಮನೆಗೂ ಬ್ಯಾಂಕಿಂಗ್ ಸೇವೆ ಲಭ್ಯವಾಗುವುದರಿಂದ ವಿಮಾನಯಾನ, ರೈಲ್ವೇ, ಬಸ್ ಟಿಕೆಟ್ ಹಾಗೂ ಸರ್ಕಾರದ ಸೇರಿದಂತೆ ಖಾಸಗಿ ಎಲ್ಲಾ ಸೇವಾ ಬಿಲ್ ಗಳನ್ನು ಐಪಿಪಿಬಿ ಅಪ್ಲಿಕೇಶ್ ಮೂಲಕ ಪಾವತಿಗೆ ಅವಕಾಶವಿದೆ. ಅಲ್ಲದೇ ಸರ್ಕಾರಗಳ ಯೋಜನೆಗಳಾದ ಉದ್ಯೋಗ ಖಾತರಿ, ಮಾಸಾಶನ, ಸಹಾಯಧನ, ಪಿಂಚಣಿ, ವಿದ್ಯಾರ್ಥಿ ವೇತನ, ಸಬ್ಸಿಡಿ ಹಣವನ್ನು ನೇರವಾಗಿ ಐಪಿಪಿಬಿ ಖಾತೆಗೆ ವರ್ಗಾವಣೆ ಮಾಡಬಹುದಾಗಿದೆ. ಈಗಾಗಲೇ ಅಂಚೆ ಕಚೇರಿಗಳಲ್ಲಿ ಆರಂಭಿಸಿರುವ ಎಲ್ಲಾ ಖಾತೆಗಳು ಐಪಿಪಿಬಿ ಸೇವೆ ಲಭ್ಯವಾಗಲಿದ್ದು, 100% ಬ್ಯಾಂಕಿಂಗ್ ಸೇವೆ ಪಡೆಯಬಹುದಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಡ್ವಾಣಿ ಎದುರಿಗೆ ಬಂದ್ರೂ ನಮಸ್ಕರಿಸಲ್ಲ, ಮೋದಿಗೆ ಯಾರ ಬಗ್ಗೆ ಗೌರವವಿದೆ: ಖರ್ಗೆ ಕಿಡಿ

    ಅಡ್ವಾಣಿ ಎದುರಿಗೆ ಬಂದ್ರೂ ನಮಸ್ಕರಿಸಲ್ಲ, ಮೋದಿಗೆ ಯಾರ ಬಗ್ಗೆ ಗೌರವವಿದೆ: ಖರ್ಗೆ ಕಿಡಿ

    ಕಲಬುರಗಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದಿಂದ ದೇಶಕ್ಕೆ ಆಘಾತವಾಗಿದೆ. ಈ ವಿಚಾರದಲ್ಲಿ ರಾಜಕೀಯ ಮಾಡಬಾರದು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್‍ಕೆ ಅಡ್ವಾಣಿ ಅವರು ಎದುರಿಗೆ ಬಂದರು ನಮಸ್ಕಾರ ಮಾಡಲ್ಲ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಆರ್‍ಎಸ್‍ಎಸ್, ಸಂಘ ಪರಿವಾರ ಜೊತೆ ಒಡನಾಟವಿದ್ದರು ಸಹ ಸಹಿಷ್ಣುತೆಯಿಂದ ಬದುಕಿದ್ದಾರೆ. ಅವರ ನಿಧನದಿಂದ ದೇಶಕ್ಕೆ ಆಘಾತವಾಗಿದೆ. ಈ ವಿಚಾರದಲ್ಲಿ ರಾಜಕೀಯ ಮಾಡಬಾರದು. ಆದರೆ ಅಟಲ್ ಬದುಕಿದ್ದಾಗ ಪ್ರಧಾನಿ ಮೋದಿ ಎಷ್ಟು ಸಲ ಭೇಟಿಯಾಗಿದ್ದಾರೆ? ಬಿಜೆಪಿ ಹಿರಿಯ ನಾಯಕ ಎಲ್‍ಕೆ ಅಡ್ವಾಣಿ ಎದುರಿಗೆ ಬಂದರು ಸಹ ಪ್ರಧಾನಿ ಮೋದಿ ನಮಸ್ಕರಿಸಲ್ಲ. ಮೋದಿ ಅವರನ್ನು ಉಳಿಸಿ ಬೆಳೆಸಿದ್ದು ಅಟಲ್ ಬಿಹಾರಿ ವಾಜಪೇಯಿ. ಆದರೆ ಮೋದಿಗೆ ಯಾರ ಬಗ್ಗೆ ಗೌರವವಿದೆ ಹೇಳಿ ಎಂದು ಪ್ರಶ್ನೆ ಮಾಡಿದ್ದಾರೆ.

    ಇದೇ ವೇಳೆ ಯುಎಇ ಯಿಂದ ಕೇರಳ ಪ್ರವಾಹ ಸಂತ್ರಸ್ತರಿಗೆ ನೀಡುತ್ತಿರುವ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ಹಿಂದೆ ನಾವು ಸಹ ಬೇಡ ಎಂದು ತಿರಸ್ಕಾರ ಮಾಡಿದ್ದೇವೆ. ಅದು ಅಂದಿನ ಸರ್ಕಾರದ ನಿಲುವಾಗಿತ್ತು. ಆದರೆ ಈಗಾಗಾಗಲೇ ನಿಧಿಯನ್ನು ಪರಿಹಾರ ಕಾರ್ಯಕ್ಕೆ ಬಳಕೆ ಮಾಡಿಕೊಳ್ಳುವುದಾಗಿ ಕೇರಳ ಸಿಎಂ ಹೇಳಿದ್ದಾರೆ. ಅಲ್ಲದೇ ಕೇರಳ ಸಿಎಂ ಕೇಂದ್ರ ಸರ್ಕಾರಕ್ಕೆ 2 ಸಾವಿರ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅನುದಾನಕ್ಕೆ ಮನವಿ ಮಾಡಿದ್ದಾರೆ. ಇಷ್ಟು ಹಣ ಕೇಂದ್ರವೇ ನೀಡಿದರೆ, ಬೇರೆ ಕಡೆಯಿಂದ ಪಡೆಯುವ ಪ್ರಶ್ನೆ ಬರಲ್ಲ. ಕೇರಳದ ಹಾಗೇ ಕೊಡಗಿಗೆ ಸರ್ಕಾರ ಪರಿಹಾರ ಧನ ಬಿಡುಗಡೆ ಮಾಡಬೇಕು ಎಂದು ಹೇಳಿದರು.

    ವಿಮಾನ ಹಾರಾಟ: ಆಗಸ್ಟ್ 26 ರಂದು ಕಲಬುರಗಿ ವಿಮಾನನಿಲ್ದಾಣದಲ್ಲಿ ಪ್ರಾಯೋಗಿಕ ವಿಮಾನ ಹಾರಾಟ ಮಾಡಲಾಗುವುದು ಎಂದು ತಿಳಿಸಿದ ಅವರು, ಸೇಡಂ ರಸ್ತೆಯ ಶ್ರೀನಿವಾಸ ಸರಡಗಿ ಬಳಿಯಿರುವ ವಿಮಾನ ನಿಲ್ದಾಣದ ಪ್ರಯೋಗಿಕ ಸಂಚಾರಕ್ಕಾಗಿ ಎಲ್ಲಾ ಹಂತದ ಸಿದ್ಧತೆಗಳು ಮುಗಿದಿದೆ. ಪ್ರಯೋಗಿಕ ಸಂಚಾರ ಮಾಡಲು ಭಾರತದ ವಿಮಾನ ಪ್ರಾಧಿಕಾರ ಅನುಮತಿ ನೀಡಬೇಕು ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೇರಳ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 167ಕ್ಕೆ ಏರಿಕೆ: ಭೇಟಿ ನೀಡಲಿದ್ದಾರೆ ಮೋದಿ

    ಕೇರಳ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 167ಕ್ಕೆ ಏರಿಕೆ: ಭೇಟಿ ನೀಡಲಿದ್ದಾರೆ ಮೋದಿ

    ತಿರುವನಂತಪುರಂ: ಕೇರಳದಲ್ಲಿ ಭಾರೀ ಮಳೆಯಿಂದಾಗಿ ಮೃತಪಟ್ಟವರ ಸಂಖ್ಯೆ 167ಕ್ಕೆ ಏರಿಕೆಯಾಗಿದ್ದು, ಪ್ರಧಾನಿ ಮೋದಿ ಈ ಬಗ್ಗೆ ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರ ಬಳಿ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.

    ಕೇರಳ ಮುಖ್ಯಮಂತ್ರಿ ಜೊತೆ ನೆರೆ ವಿಚಾರದ ಬಗ್ಗೆ ಮಾತನಾಡಿದ್ದೇನೆ. ಅಲ್ಲದೇ ನಾನೇ ಬಂದು ಅಲ್ಲಿನ ಪರಿಸ್ಥಿತಿಗಳನ್ನು ಪರೀಶಿಲಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

    ಕೇರಳ ದುರಂತ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಈಗಾಗಲೇ ಮೃತಪಟ್ಟವರ ಸಂಖ್ಯೆ 167 ಕ್ಕೆ ಏರಿಕೆಯಾಗಿದೆ ಎಂದು ಸಿಎಂ ಹೇಳಿದ್ದಾರೆ. ಸುಧಾರಿಸಲು ಭಾರತೀಯ ಕೋಸ್ಟ್ ಗಾರ್ಡ್‍ನ ನಾಲ್ಕು ಹಡಗುಗಳನ್ನು ಕೊಚ್ಚಿನ್ ಗೆ ಕಳುಹಿಸಲಾಗಿದ್ದು, ಈಗಾಗಲೇ ಪ್ರವಾಹ ಪೀಡಿತ ಹಳ್ಳಿಗಳಿಗೆ 24 ತಂಡಗಳು ಕಾರ್ಯಚರಣೆ ಮಾಡುತ್ತಿವೆ. ಐಸಿಜಿ 1,764 ಜನರನ್ನು ರಕ್ಷಿಸಿದ್ದು, 4,688 ಜನರಿಗೆ ಸುರಕ್ಷಿತ ಸ್ಥಳಕ್ಕೆ ತಲುಪಿಸಿದೆ.

    ಶನಿವಾರ ಕಾಸರಗೋಡು ಎರ್ನಾಕುಲಂ ಮತ್ತು ಇಡುಕ್ಕಿ ಒಳಗೊಂಡಂತೆ ಇತರ 13 ಜಿಲ್ಲೆಗಳಿಗೂ ಎಚ್ಚರಿಕೆಯನ್ನು ಸೂಚಿಸಲಾಗಿದೆ. ಶುಕ್ರವಾರ ಬೆಳಗ್ಗೆ 5 ಘಟಕದ ರಾಷ್ಟ್ರೀಯ ವಿಪತ್ತು ಪಡೆ ತಿರುವನಂತಪುರಂ ತಲುಪಿದ್ದು, ಕಾರ್ಯಾಚರಣೆಯಲ್ಲಿ ತೊಡಗಿದೆ. ಇಂದು ಕೂಡ 35 ಸದಸ್ಯರ ತಂಡ ತಲುಪುವ ನೀರಿಕ್ಷೆ ಇದೆ. ಇದೀಗ ಐಸಿಜಿ ಪಡೆಯನ್ನು ವಂಡಿಪೆರಿಯರ್ ನಿಂದ ಮಂಜುಮಾಲಾ ಹಳ್ಳಿಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ 16 ಮಂದಿಯನ್ನು ರಕ್ಷಿಸಲಾಗಿದೆ. ಹಾಗೂ ಅವರಿಗೆ ಸೇವಿಸಲು ಆಹಾರ ಪದಾರ್ಥಗಳನ್ನು ನೀಡಿದ್ದಾರೆ.

    ಕೊಚ್ಚಿನ್‍ನ ವಿಮಾನ ನಿಲ್ದಾಣದಲ್ಲಿ ನೀರಿನ ಮಟ್ಟ ಹೆಚ್ಚಾಗಿರುವುದರಿಂದ ಸ್ಥಳದಲ್ಲಿ ಕಾರ್ಯಾಚರಣೆ ಸ್ಥಗಿತ ಮಾಡಲಾಗಿದೆ. ಕೇಂದ್ರ ವಿಮಾನಯಾನ ಖಾತೆಯ ಸಚಿವ ಸುರೇಶ್ ಪ್ರಭು ಟ್ವೀಟ್ ಮಾಡಿ, ವಿಮಾನಯಾನ ಕಂಪೆನಿಗಳ ಜೊತೆ ಮಾತನಾಡಿದ್ದೇವೆ. ನೆರೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಕ್ಕೆ ತಲುಪಬೇಕಾಗಿರುವ ಸಾಮಾಗ್ರಿಗಳನ್ನು ಉಚಿತವಾಗಿ ತೆಗೆದುಕೊಂಡು ಹೋಗುತ್ತಿರುವುದಕ್ಕೆ ವಿಮಾನಯಾನ ಕಂಪೆನಿಗಳಿಗೆ ಧನ್ಯವಾದವನ್ನು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೋದಿ ಅಪ್ಪಿದ ರಾಹುಲ್ ನಡೆ ಮಕ್ಕಳಾಟ – ಎಚ್.ವಿಶ್ವನಾಥ್

    ಮೋದಿ ಅಪ್ಪಿದ ರಾಹುಲ್ ನಡೆ ಮಕ್ಕಳಾಟ – ಎಚ್.ವಿಶ್ವನಾಥ್

    ಬೆಂಗಳೂರು: ಲೋಕಸಭೆ ಸದನದ ವೇಳೆ ಪ್ರಧಾನಿ ನರೇಂದ್ರ ಮೋದಿಯನ್ನು ಅಪ್ಪಿಕೊಂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವರ್ತನೆಯನ್ನು ಮಿತ್ರ ಪಕ್ಷ ಜೆಡಿಎಸ್‍ನ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಶ್ವನಾಥ್ ಅವರು, ರಾಹುಲ್ ಅವರ ವರ್ತನೆ ಹುಡುಗಾಟ, ಮಕ್ಕಳಾಟ ರೀತಿ ಇದೆ ಎಂದು ಹೇಳಿದ್ದಾರೆ. ಇತ್ತ ವಿಶ್ವನಾಥ್ ಹೇಳಿಕೆಯನ್ನೇ ಉಲ್ಲೇಖಿಸಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಹಾಮೈತ್ರಿ ಕೂಟದ ಬಗ್ಗೆ ವ್ಯಂಗ್ಯವಾಡಿದ್ದಾರೆ. ತಮ್ಮ ಪ್ರಧಾನಿ ಅಭ್ಯರ್ಥಿ ಬಗ್ಗೆ ಮಹಾಮೈತ್ರಿಕೂಟ ಯೋಚನೆ ಮಾಡುತ್ತಿರುವುದು ಇದನ್ನೇ. `ರಾಹುಲ್ ಗಾಂಧಿ ಬಗ್ಗೆ ಮಹಾಮೈತ್ರಿ ಕೂಟದ ಪಕ್ಷವೊಂದು ಅರ್ಥ ಮಾಡ್ಕೊಂಡಿದ್ದು, ಅವರು ಸರ್ಕಾರ ರಚನೆ ಮಾಡೋದು ಬರೀ ಕನಸಷ್ಟೇ ಎಂದು ಬಿಎಸ್‍ವೈ ಕಾಲೆಳೆದಿದ್ದಾರೆ.

    ಇದಕ್ಕೂ ಮುನ್ನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಅಧಿಕೃತವಾಗಿ ಪಕ್ಷದ ಕಚೇರಿಯಲ್ಲಿ ಕೆಲಸ ಪ್ರಾರಂಭ ಮಾಡಿದ ಬಳಿಕ ಮಾತನಾಡಿದ ವಿಶ್ವನಾಥ್ ಅವರು, ಹಿಂದೆ ಜನತ ಪರಿವಾರದಲ್ಲಿದ್ದ ಎಲ್ಲಾ ನಾಯಕರನ್ನು ಮತ್ತೆ ಪಕ್ಷಕ್ಕೆ ಕರೆತಲು ಯತ್ನಿಸುತ್ತೇನೆ. ಯಾವುದೇ ಕಾರಣದಿಂದ ಅವರು ಪಕ್ಷ ಬಿಟ್ಟು ಹೊರ ನಡೆದಿದ್ದರು. ಆದರೆ ಇಂದು ಪರಿಸ್ಥಿತಿ ಬದಲಾಗಿದೆ. ಅದ್ದರಿಂದ ಮತ್ತೆ ಪಕ್ಷಕ್ಕೆ ಬಂದು ಜನತಾ ಪರಿವಾರವನ್ನು ಮತ್ತಷ್ಟು ಗಟ್ಟಿಗೊಳಿಸಬೇಕಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆಯಿಲ್ಲ. ಜಿಲ್ಲೆಯ ಸಮಿತಿಗಳು ಪಕ್ಷದ ಪರವಾಗಿ ಕೆಲಸ ಮಾಡಿ ಹೆಚ್ಚು ಸ್ಥಾನ ಗೆಲ್ಲಿಸಬೇಕು. ಸದ್ಯ ಇರುವ ರಾಜ್ಯ ಸಮಿತಿಯನ್ನ ವಿಸರ್ಜನೆ ಮಾಡಲಿದ್ದು, ಹೊಸ ಸಮಿತಿಯನ್ನ ಆದಷ್ಟು ಬೇಗ ರಚನೆ ಮಾಡುತ್ತೇವೆ. ಹಿರಿಯರು, ಯುವಕರು, ಮಹಿಳೆಯರು ಈ ಸಮಿತಿಯಲ್ಲಿ ಇರುತ್ತಾರೆ. ಜಿಲ್ಲಾ ಸಮಿತಿಗಳು ಸ್ಥಳೀಯ ಚುನಾವಣೆಯವರೆಗೂ ಹಾಗೇ ಮುಂದುವರೆಯುತ್ತದೆ. ನನ್ನ ಮೊದಲ ಪ್ರವಾಸ ಉತ್ತರ ಕರ್ನಾಟಕದಿಂದಲೇ ಪ್ರಾರಂಭ ಮಾಡಲಿದ್ದು, ಉತ್ತರ ಕರ್ನಾಟಕಕ್ಕೆ ಜೆಡಿಎಸ್ ಕೊಡುಗೆ ಏನು ಎಂಬುವುದನ್ನು ಜನತೆಗೆ ತಿಳಿಸುತ್ತೇವೆ ಎಂದು ಹೇಳಿದರು.

    ಬಳಿಕ ಜೆಪಿ ಭವನದಲ್ಲಿ ಮಾತನಾಡಿದ ಅವರಯ ಸಿಎಂ ದುರ್ಬಲರಾಗಿದ್ದು, ರೇವಣ್ಣ ಸೂಪರ್ ಸಿಂಗ್ ಎಂಬ ಬಿಜೆಪಿ ಮುಖಂಡರ ಆರೋಪಕ್ಕೆ ತಿರುಗೇಟು ಕೊಟ್ಟರು. ಜವಾಬ್ದಾರಿಯುತ ರಾಷ್ಟ್ರೀಯ ಪಕ್ಷದ ನಾಯಕರು ಈ ರೀತಿ ಮಾತನಾಡುವುದು ಸರಿಯಲ್ಲ. ನಮ್ಮ ದೇಶದಲ್ಲಿ ವಾಕ್ ಸ್ವಾತಂತ್ರ್ಯ ಇರುವುದರಿಂದ ಯಾರು ಬೇಕಾದರು ಮಾತನಾಡಬಹುದು. ದೇವೇಗೌಡರು ದೇಶಕ್ಕೆ ಪ್ರಧಾನಿ ಆದವರು. ಅವರ ರಾಜಕೀಯ ಅನುಭವದಲ್ಲಿ ಸಲಹೆ ಪಡೆಯೋದು ತಪ್ಪಲ್ಲ. ಸಿಎಂ ಇದನ್ನೆ ಮಾಡುತ್ತಿದ್ದಾರೆ ಅಷ್ಟೇ. ದೇವೇಡಗೌಡರು ಸರ್ಕಾರದ ಫೈಲ್ ನೋಡುತ್ತಿಲ್ಲ. ಬಿಜೆಪಿ ಅವರು ಬಾಲಿಶವಾಗಿ ನಡೆದುಕೊಳ್ಳಬಾರದು ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ವಿವೇಕಾನಂದರು ಈಗ ಭಾರತದಲ್ಲಿ ಇದ್ದಿದ್ರೆ ಅವರಿಗೂ ಎಂಜಿನ್ ಆಯಿಲ್ ಎಸೆಯುತ್ತಿದ್ದರು- ಶಶಿತರೂರ್

    ವಿವೇಕಾನಂದರು ಈಗ ಭಾರತದಲ್ಲಿ ಇದ್ದಿದ್ರೆ ಅವರಿಗೂ ಎಂಜಿನ್ ಆಯಿಲ್ ಎಸೆಯುತ್ತಿದ್ದರು- ಶಶಿತರೂರ್

    ನವದೆಹಲಿ: ದೇಶದಲ್ಲಿ ಇಂದು ಸ್ವಾಮಿ ವಿವೇಕಾನಂದರು ಇದ್ದಿದ್ದರೆ ದುಷ್ಕರ್ಮಿಗಳು ಅವರಿಗೂ ಎಂಜಿನ್ ಆಯಿಲ್ ಎಸೆಯುತ್ತಿದ್ದರು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

    ಕೇರಳದ ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಶಿತರೂರ್ ಕೇಂದ್ರ ಸರ್ಕಾರ ದೇಶದ ಅಭಿವೃದ್ಧಿಗೆ ಸಮರ್ಪಕ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿಲ್ಲ ಎಂದು ಆರೋಪಿಸಿದರು.

    ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಬರದಲ್ಲಿ ಶಶಿತರೂರ್ ಈ ಹೇಳಿಕೆ ನೀಡಿದ್ದಾರೆ. ಸ್ವಾಮಿ ವಿವೇಕಾನಂದರು ಇಂದು ಭಾರತದಲ್ಲಿ ನೆಲೆಸಿದ್ದರೆ ದುಷ್ಕರ್ಮಿಗಳು ಅವರನ್ನು ಟಾರ್ಗೆಟ್ ಮಾಡಿ ಎಂಜಿನ್ ಆಯಿಲ್ ಬಳಿಯಲು ಪ್ರಯತ್ನಿಸುತ್ತಿದ್ದರು. ಅಲ್ಲದೇ ಅವರನ್ನು ಬೀದಿಗೆ ತಳ್ಳಲು ಪ್ರಯತ್ನಿಸುತ್ತಿದ್ದರು ಎಂದು ಆರೋಪಿಸಿದ್ದಾರೆ.

    ಕಳೆದ ತಿಂಗಳು ಸ್ವಾಮಿ ಅಗ್ನಿವೇಶ್ ಅವರ ಮೇಲೆ ಹಲ್ಲೆಯನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ ಅವರು ಬಿಜೆಪಿ ಹಾಗೂ ಎಬಿವಿಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಹೇಳಿದರು. ಅಲ್ಲದೇ ದೇಶದಲ್ಲಿ ಧರ್ಮದ ಹೆಸರಿನಲ್ಲಿ ನಡೆಯುವ ಹಿಂಸೆ, ದೌರ್ಜನ್ಯ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

    ದೇಶದ 21 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಇದು ಕೋಮು ಹಿಂಸಾಚಾರ ಹೆಚ್ಚಾಗಲು ಕಾರಣವಾಗಿದೆ. ಹಲವರ ಮೇಲೆ ಗೋರಕ್ಷಣೆಯ ಹೆಸರಿನಲ್ಲಿ ಹಲ್ಲೆ ನಡೆಸಲಾಗುತ್ತಿದೆ. ಸ್ವಾತಂತ್ರ್ಯ ನಂತರ ಮೋದಿ ಸರ್ಕಾರ ಆಡಳಿತಕ್ಕೂ ಬರುವ ಮೊದಲು 70ಕ್ಕೂ ಹೆಚ್ಚು ಹಲ್ಲೆ ಪ್ರಕರಣಗಳು ಗೋ ರಕ್ಷಣೆ ಹೆಸರಿನಲ್ಲಿ ನಡೆದಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಆದರೆ ಕಳೆದ 4 ವರ್ಷಗಳಲ್ಲಿ 2,920 ಗಳು ನಡೆದಿದ್ದಾಗಿ ಕೇಂದ್ರ ಗೃಹ ಇಲಾಖೆ ನೀಡಿದೆ. ಅಂದರೆ 97% ಪ್ರಕರಣಗಳು ಕಳೆದ 4 ವರ್ಷಗಳ ಅವಧಿಯಲ್ಲಿ ನಡೆದಿದ್ದು, ಇದರಲ್ಲಿ 389 ಮಂದಿಯನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಿದ್ದಾರೆ.

    ಇಷ್ಟು ಪ್ರಕರಣಗಳು ವರದಿಯಾದರೂ ಈ ಕುರಿತು ಮಾತನಾಡಲು 68 ಅವಕಾಶಗಳು ಸಿಕ್ಕರೂ ಪ್ರಧಾನಿ ನರೇಂದ್ರ ಮೋದಿ ಅವರು ಈ ಕೃತ್ಯಗಳ ಬಗ್ಗೆ ಮೌನ ವಹಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ದೇಶದ ಜನತೆ ಮೇಲೆ ನಡೆಯುತ್ತಿರುವ ಹಲ್ಲೆಗಳ ಕುರಿತು ಒಮ್ಮೆಯೂ ಮಾತನಾಡಿಲ್ಲ ಎಂದು ದೂರಿದರು.

    ಕಳೆದ ಕೆಲ ತಿಂಗಳ ಹಿಂದೆ 2019 ರ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದರೆ ಭಾರತ ಹಿಂದೂ ಪಾಕಿಸ್ತಾನ ಆಗಲಿದೆ ಎಂದು ಹೇಳಿಕೆ ನೀಡಿದ ಬಳಿಕ ಶಶಿತರೂರ್ ಮತ್ತೆ ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews