Tag: prime minister modi

  • ಮೋದಿಯವರ ಅಚ್ಛೇ ದಿನ್ ಇನ್ನೂ ಪರಿಣಾಮಕಾರಿ ಆಗಬೇಕಿದೆ: ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ

    ಮೋದಿಯವರ ಅಚ್ಛೇ ದಿನ್ ಇನ್ನೂ ಪರಿಣಾಮಕಾರಿ ಆಗಬೇಕಿದೆ: ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ

    ರಾಯಚೂರು: ನರೇಂದ್ರ ಮೋದಿಯವರ ಸರ್ಕಾರ ಬಂದು ನಾಲ್ಕು ವರ್ಷವಾದರು, ಚುನಾವಣೆ ಪೂರ್ವದಲ್ಲಿ ವಿದೇಶದಲ್ಲಿರುವ ಕಪ್ಪು ಹಣವನ್ನು ತರುವುದಾಗಿ ಭರವಸೆ ನೀಡಿ ಈಡೇರಿಸಿಲ್ಲ ಎಂದು ಮಂತ್ರಾಲಯದಲ್ಲಿ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಮೋದಿಯವರು ತಮ್ಮ ಅಧಿಕಾರ ಅವಧಿಯಲ್ಲಿ ಆರ್ಥಿಕತೆ ಸುಧಾರಣೆಯನ್ನು ಹೆಚ್ಚು ಮಾಡುವುದಕ್ಕಾಗಿ ಸಾಕಷ್ಟು ಯೋಜನೆಗಳನ್ನು ಮಾಡಿದ್ದಾರೆ. ಅಲ್ಲದೇ ಶ್ರೀಮಂತರಿಗೂ ಭ್ರಷ್ಟಾಚಾರ ಮಾಡಲಾಗದಂತಹ ಸನ್ನಿವೇಶವನ್ನು ನಿರ್ಮಿಸಿದ್ದಾರೆ. ಆದರೆ ಅಚ್ಚೆದಿನ್ ಇನ್ನೂ ಪರಿಣಾಮಕಾರಿಯಾಗಿ ಜಾರಿಯಾಗಬೇಕಿದೆ. ಈ ಕಾರ್ಯವನ್ನು ಬೇಗ ಮಾಡಲಿ ಎಂಬ ಉದ್ದೇಶದಿಂದ ಹೇಳಿದ್ದಾಗಿ ತಿಳಿಸಿದರು.

    ಜಿಲ್ಲೆಯಲ್ಲಿ ನಡೆದ ಚಂದ್ರಿಕಾ ತಾತ್ಪರ್ಯ ಮಂಗಳೋತ್ಸವದಲ್ಲಿ ಭಾಗಿಯಾಗಿ ಮಾತನಾಡಿದ ಶ್ರೀಗಳು, ಗಂಗಾ ನದಿಯು ಎಷ್ಟೋ ಜನರ ಜೀವ ನದಿಯಾಗಿದೆ. ಆದ್ರೆ ಪವಿತ್ರ ನದಿ ಕಲುಷಿತಗೊಂಡಿದೆ. ಚುನಾವಣಾ ಪೂರ್ವದಲ್ಲಿ ಗಂಗಾ ನದಿಯನ್ನು ಶುದ್ಧೀಕರಿಸಲಾಗುವುದು ಮೋದಿ ಭರವಸೆ ನೀಡಿದರು. ಆದರೆ ಅದು ಸಹ ಸಂಪೂರ್ಣವಾಗಿ ಈಡೇರಿಲ್ಲ. ಇನ್ನು ಉಳಿದಿರೋದು ಒಂದು ವರ್ಷ ಮಾತ್ರ ನೀಡಿರುವ ಭರವಸೆಗಳನ್ನು ಅನುಷ್ಠಾನಕ್ಕೆ ತರುವ ಪ್ರಯತ್ನ ಮಾಡಲಿ ಎಂಬ ಹೇಳಿದರು.

    ಆದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಗೆಲ್ಲುವುದಿಲ್ಲ ಎನ್ನಲಾಗದು, ಆದರೆ ಮೋದಿಯವರು ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿರುವುದನ್ನು ಜನರು ತಿಳಿದಿದ್ದಾರೆ. ಜನ ತಮ್ಮ ಮತಗಳು ಯಾವ ಪಕ್ಷಕ್ಕೆಂದು ಮತದಾರರ ಮನಸ್ಸಿನ ಮೇಲಿದೆ ಎಂದರು.

    ಇದೇ ವೇಳೆ ಇಫ್ತೀಯಾರ್ ಕೂಟದ ಬಗ್ಗೆ ಮಾಹಿತಿ ನೀಡಿದ ಅವರು, ಜೂ.13ಕ್ಕೆ ಉಡುಪಿ ಮಠದಲ್ಲಿ ಇಫ್ತೀಯಾರ್ ಕೂಟ ಆಯೋಜನೆಯ ಬಗ್ಗೆ ಚಿಂತನೆ ಮಾಡಲಾಗುತ್ತಿದೆ. ಈ ಯೋಜನೆಯ ಬಗ್ಗೆ ಯಾವುದೇ ರೀತಿಯ ಮಠದ ವಿರೋಧವಿಲ್ಲ ಆದರೆ ಮುಸ್ಲಿಂರಲ್ಲಿಯೇ ಸಂಕೋಚವಿದೆ. ಆದರೆ ಮುಸ್ಲಿಮರು ಒಪ್ಪಿಗೆ ನೀಡಿದರೆ ಈ ವರ್ಷವು ಈ ಕಾರ್ಯ ಮಾಡುತ್ತೇನೆ. ಒಳ್ಳೆ ಕಾರ್ಯ ಮಾಡಲು ವಿರೋಧ ವಿದ್ದರು ಮಾಡಬಹುದು ಎಂದು ತಿಳಿಸಿದರು. ಇದನ್ನು ಓದಿ: ಮುಸ್ಲಿಮರು ಒಪ್ಪಿದ್ರೆ ಈ ಬಾರಿಯೂ ಇಫ್ತಾರ್ ಕೂಟ- ವಿಶ್ವೇಶತೀರ್ಥ ಸ್ವಾಮೀಜಿ

  • ಡಿಕೆಶಿ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಜೊತೆಗಿದೆ- ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ

    ಡಿಕೆಶಿ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಜೊತೆಗಿದೆ- ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಇಂಧನ ಸಚಿವ ಡಿಕೆ ಶಿವಕುಮಾರ್ ಪರ ನಿಂತಿದ್ದಾರೆ.

    ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಐಟಿ, ಇಡಿ ಮೂಲಕ ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಅವರ 11 ಮಂದಿ ಆಪ್ತರ ಮೇಲೆ ಸಿಬಿಐ ಕೋರ್ಟ್ ಸರ್ಚ್ ವಾರೆಂಟ್ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಡಿಕೆಶಿ ಬೆಂಬಲಕ್ಕೆ ನಿಂತಿದ್ದಾರೆ.

    ಆದಾಯ ತೆರಿಗೆ ಪ್ರಕರಣದಲ್ಲಿ ಸಿಬಿಐ 82ನೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಪುಷ್ಪಾಂಜಲಿ ದೇವಿ ಅವರು ಸರ್ಚ್ ವಾರೆಂಟ್ ಹೊರಡಿಸಿದ್ದರು. ಬುಧವಾರ ಕೋರ್ಟ್ ನಲ್ಲಿ ಡಿ.ಕೆ.ಶಿವಕುಮಾರ್ ಹಾಜರಾಗಿದ್ದರು. 11 ಜನರಲ್ಲಿ ಡಿ.ಕೆ ಶಿವಕುಮಾರ್, ಡಿ.ಕೆ ಸುರೇಶ್ ಇಬ್ಬರ ಹೆಸರಿಲ್ಲ. ಆದ್ದರಿಂದ ಈ ಬಗ್ಗೆ ಸಿದ್ದರಾಮಯ್ಯ ಅವರು ಡಿಕೆಶಿ ಬೆನ್ನಿಗೆ ನಿಂತಿದ್ದು, ಡಿಕೆಶಿ ಪರ ಟ್ವೀಟ್ ಮಾಡಿ ಪ್ರಧಾನಿ ಮೋದಿ ವಿರುದ್ಧ ಕಿಡಿ ಕಾರಿದ್ದಾರೆ.

    ಟ್ವೀಟ್ ನಲ್ಲೇನಿದೆ?:
    “ರಾಜಕೀಯ ದ್ವೇಷ ಸಾಧನೆಗೆ ನರೇಂದ್ರ ಮೋದಿ ಸರ್ಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿರುವುದು ಖಂಡನೀಯ. ಇಂತಹ ಬೆದರಿಕೆಗೆ ಕಾಂಗ್ರೆಸ್ ನಾಯಕರು ಜಗ್ಗುವುದಿಲ್ಲ, ಬಗ್ಗುವುದೂ ಇಲ್ಲ. ಡಿ.ಕೆ. ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಜತೆಗಿದೆ” ಎಂದು ಬರೆದುಕೊಂಡಿದ್ದಾರೆ.

    ಅಷ್ಟೇ ಅಲ್ಲದೇ “ಲೋಕಸಭೆ ಮತ್ತು ವಿಧಾನಸಭಾ ಉಪ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲು ದೇಶದ ಜನತೆ ರಾಜಕೀಯ ಬದಲಾವಣೆ ಬಯಸುತ್ತಿದ್ದಾರೆ ಎನ್ನುವುದಕ್ಕೆ ಸಾಕ್ಷಿ. ಇದು ಮೋದಿ ಅವರಿಗಾಗಿರುವ ವೈಯಕ್ತಿಕ ಹಿನ್ನಡೆಯೂ ಹೌದು, 2019 ರ ಲೋಕಸಭಾ ಚುನಾವಣಾ ಫಲಿತಾಂಶದ ಮುನ್ಸೂಚನೆಯೂ ಹೌದು” ಅಂತ ಮಾಜಿ ಸಿಎಂ ಗರಂ ಆಗಿದ್ದಾರೆ.

  • ಕರಾವಳಿ ಮಳೆ – ಅಧಿಕಾರಿಗಳ ಜೊತೆ ಮಾತನಾಡಿದ ಮೋದಿ

    ಕರಾವಳಿ ಮಳೆ – ಅಧಿಕಾರಿಗಳ ಜೊತೆ ಮಾತನಾಡಿದ ಮೋದಿ

    ಬೆಂಗಳೂರು: ಭಾರೀ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಕರಾವಳಿ, ಉಡುಪಿ, ಮಂಗಳೂರು ಸೇರಿದಂತೆ ಕರ್ನಾಟಕದ ಇತರೇ ಭಾಗಗಳ ಜನರ ರಕ್ಷಣೆಗೆ ಅಗತ್ಯ ಸಹಕಾರ ನೀಡಲು ಸೂಚಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಅವರು, ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರಕ್ಷಣೆಗೆ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥನೆ ಸಲ್ಲಿಸುವುದಾಗಿ ತಿಳಿಸಿದ್ದು, ಅಪಾಯಕ್ಕೆ ಸಿಲುಕಿರುವ ಜನರ ರಕ್ಷಣೆಗೆ ಸಹಕಾರ ನೀಡಲು ಅಧಿಕಾರಿಗಳ ಬಳಿ ಮಾತನಾಡಿ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

    ಸದ್ಯ ಪ್ರಧಾನಿ ನರೇಂದ್ರ ಮೋದಿ ಅವರು ಪೂರ್ವ ಏಷ್ಯಾ ರಾಷ್ಟ್ರಗಳ ವಿದೇಶಿ ಪ್ರವಾಸದಲ್ಲಿದ್ದು, ಇಂಡೋನೇಷಿಯಾ, ಸಿಂಗಾಪುರ, ಮಲೇಷಿಯಾ ದೇಶಗಳಿಗೆ ಭೇಟಿ ನೀಡಲಿದ್ದಾರೆ. ಪ್ರವಾಸದ ಭಾಗವಾಗಿ ಇಂದು ಇಂಡೋನೇಷಿಯಾ ಗೆ ಭೇಟಿ ನೀಡಿದ್ದು, ಬಳಿಕ ಸಿಂಗಾಪುರ ಹಾಗೂ ಮಲೇಷಿಯಾ ದೇಶಗಳಿಗೆ ಭೇಟಿ ನೀಡಲಿದ್ದಾರೆ.

    ಮುಕುನು ಚಂಡಮಾರುತದ ಪ್ರಭಾವಕ್ಕೆ ಕರಾವಳಿಯ ಮೂರು ಜಿಲ್ಲೆಗಳು ತತ್ತರಿಸಿ ಹೋಗಿದ್ದು, ಮಂಗಳೂರಿನ ತಗ್ಗುಪ್ರದೇಶಗಳು ಸಂಪೂರ್ಣ ಜಲಾವೃತವಾಗಿ ಪ್ರವಾಹ ಭೀತಿ ಎದುರಾಗಿದೆ. ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿ, ಮಂಗಳೂರು – ಕೇರಳ ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್ ಆಗಿದೆ. ಉಡುಪಿ ಸಮುದ್ರದ ನೀರು ಬಣ್ಣ ಬದಲಾಯಿಸಿದ್ದು ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದ್ದು, ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಸಿಡಿಲು ಬಡಿದು ಗ್ರಾಮ ಪಂಚಾಯತ್ ಸದಸ್ಯೆಯಾಗಿದ್ದ 34 ವರ್ಷದ ಶೀಲಾ ಎಂಬ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರವಾರದಲ್ಲಿ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ್ದ 2 ಬೋಟ್ ಗಳಲ್ಲಿ ಒಂದು ಮುಳುಗಿದ್ದು, ಮುಳುಗುವ ಹಂತದಲ್ಲಿದ್ದ ಮತ್ತೊಂದು ಬೋಟ್ ಮತ್ತು ನಾಲ್ವರು ಮೀನುಗಾರರನ್ನು ಸ್ಥಳೀಯರು ರಕ್ಷಿಸಿದ್ದಾರೆ.

    https://www.youtube.com/watch?v=-TAoAb4cibM

  • ಫಿಟ್ ನೆಸ್ ವಿಡಿಯೋ ಅಪ್ಲೋಡ್ ಮಾಡಿ ಪ್ರಧಾನಿಗೆ ನಟ ಜಗ್ಗೇಶ್ ಚಾಲೆಂಜ್!

    ಫಿಟ್ ನೆಸ್ ವಿಡಿಯೋ ಅಪ್ಲೋಡ್ ಮಾಡಿ ಪ್ರಧಾನಿಗೆ ನಟ ಜಗ್ಗೇಶ್ ಚಾಲೆಂಜ್!

    ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಫಿಟ್ ನೆಸ್ ಚಾಲೆಂಜ್ ಭಾರೀ ಸದ್ದು ಮಾಡುತ್ತಿದೆ. ಈಗ ನಟ ಜಗ್ಗೇಶ್ ಫಿಟ್ ನೆಸ್ ವಿಡಿಯೋ ಹಾಕಿ ಪ್ರಧಾನಿ ಮೋದಿಗೆ ಸವಾಲ್ ಹಾಕಿದ್ದಾರೆ.

    ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಹಾಕಿದ `ಹಮ್ ಫಿಟ್ ತೋ ಇಂಡಿಯಾ ಫಿಟ್’ ಸವಾಲನ್ನು ಒಬ್ಬೊಬ್ಬರಂತೆ ಬಹಳಷ್ಟು ಸೆಲಬ್ರಿಟಿಗಳು ಸ್ವೀಕರಿಸಿದ್ದಾರೆ. ಈಗ ನವರಸ ನಾಯಕ ನಟ ಜಗ್ಗೇಶ್ ಕೂಡಾ ಫಿಟ್ ನೆಸ್ ಚಾಲೆಂಜ್ ಸ್ವೀಕರಿಸಿ ವಿಡಿಯೋ ಅಪ್ಲೋಡ್ ಮಾಡಿ ಪ್ರಧಾನಿಗೆ ಸವಾಲು ಹಾಕಿದ್ದಾರೆ.

    ರಾಜವರ್ಧನ್ ಸಿಂಗ್ ರಾಥೋಡ್ ವಿರಾಟ್ ಕೊಹ್ಲಿ ಫಿಟ್ ನೆಸ್ ಚಾಲೆಂಜ್ ಹಾಕಿದ್ದರು. ಅವರು ಪ್ರಾದಾನಿ ಮೋದಿ, ಪತ್ನಿ ಅನುಷ್ಕಾ ಶರ್ಮಾಗೆ ಹಾಕಿದ್ದರು. ಕೊಹ್ಲಿ ಹಾಕಿದ್ದ ಚಾಲೆಂಜ್ ಅನ್ನು ಮೋಧಿ ಸ್ವೀಕರಿಸಿದ್ದರು. ಅದರ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೋದಿಗೆ ಒಂದು ಸವಾಲ್ ಹಾಕಿದ್ದರು. ಹೀಗೆ ಫಿಟ್ ನೆಸ್ ಚಾಲೆಂಜ್ ಮುಂದುವರಿದಿದ್ದು, ಅನೇಕ ರಾಜಕೀಯ ನಾಯಕರು, ಸಿನಿಮಾ ನಟ-ನಟಿಯರು ಈ ಚಾಲೆಂಜ್ ಸ್ವೀಕರಿಸಿದ್ದರು.

    ಮೈಸೂರಿನ ಸಂಸದ ಪ್ರತಾಪ್ ಸಿಂಹ ಕೂಡ ಈ ಚಾಲೆಂಜ್ ಸ್ವೀಕರಿಸಿದ್ದರು. ಈಗ ನಟ ಜಗ್ಗೇಶ್ ತಮ್ಮ ಟ್ವಿಟ್ಟರ್ ನಲ್ಲಿ “ನನ್ನ ಬಾಲ್ಯದಿಂದ ತಪ್ಪದೆ ನಾನು ಮಾಡುವ ದಂಡ ಬೈಟಕ್. ದಿನ ತಪ್ಪದೆ 50 ದಂಡ ಬೈಟಕ್ ಮಾಡುವೆ ಇದರಿಂದ ಸಂಪೂರ್ಣ ದೇಹದ ಮಾಂಸಖಂಡಕ್ಕೆ ಸಳೆತವಾಗಿ ತೋಳು ಪಕ್ಕೆ ಸೊಂಟ ತೊಡೆದ ಹಾಗು ಪಾದ ಹದ್ದುಬಸ್ತಿನಲ್ಲಿರುತ್ತದೆ. ಆ ಕಾಲದ ಗರಡಿಮನೆ ತಾಲೀಮು. 55 ರಲ್ಲೂ ಮುಂದುವರೆದಿದೆ. ದೈಹಿಕ ದಂಡನೆ. ಶುಭರಾತ್ರಿ ಸವಿಗನಸು” ಎಂದು ಬರೆದು ಡಿಪ್ಸ್ ಹೊಡೆಯುತ್ತಿರುವ ವಿಡಿಯೋ ಹಾಕಿ ಪೋಸ್ಟ್ ಮಾಡಿದ್ದಾರೆ.

  • ಮೋದಿ ಸುಭದ್ರ ಅಡಿಪಾಯ ಹಾಕಿದ್ದಾರೆ: ಉಡುಪಿಯಲ್ಲಿ ಸ್ವಾಮಿ ಗ್ಯಾನಾನಂದ್ ಮಹಾರಾಜ್

    ಮೋದಿ ಸುಭದ್ರ ಅಡಿಪಾಯ ಹಾಕಿದ್ದಾರೆ: ಉಡುಪಿಯಲ್ಲಿ ಸ್ವಾಮಿ ಗ್ಯಾನಾನಂದ್ ಮಹಾರಾಜ್

    ಉಡುಪಿ: ಪ್ರಧಾನಿ ನರೇಂದ್ರ ಮೋದಿ ಆಡಳಿತಾತ್ಮಕವಾಗಿ ಸುಭದ್ರ ಅಡಿಪಾಯ ಹಾಕಿದ್ದಾರೆ. ಅವರು ಕಟ್ಟುವ ಭಾರತವೂ ಬಲಿಷ್ಟವಾಗಿ ಹೊರ ಹೊಮ್ಮಲಿದೆ ಅಂತ ಉಜ್ಜಯಿನಿಯ ಸ್ವಾಮೀ ಗ್ಯಾನಾನಂದ್ ಮಹಾರಾಜ್ ಹೇಳಿದ್ದಾರೆ.

    ಶ್ರೀಕೃಷ್ಣ ಮಠಕ್ಕೆ ಭೇಟಿಕೊಟ್ಟು ದೇವರ ದರ್ಶನ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೃಷ್ಣನ ದರ್ಶನದಿಂದ ಮನಸ್ಸಿಗೆ ಬಹಳ ಖುಷಿಯಾಗಿದೆ. ಶ್ರೀಕೃಷ್ಣ ದ್ವಾರಕೆಯಿಂದ ಉಡುಪಿಗೆ ಬಂದಿದ್ದಾನೆ. ಮಧ್ವಾಚಾರ್ಯರಿಗೆ ಒಲಿದ ಶ್ರೀಕೃಷ್ಣ ಈತ, ನಾಲ್ಕೂ ದಿಕ್ಕುಗಳಿಂದ ಭಗವಂತ ದೇಶವನ್ನು ರಕ್ಷಣೆ ಮಾಡುತ್ತಿದ್ದಾನೆ ಎಂದು ಗ್ಯಾನಾನಂದ್ ಮಹಾರಾಜ್ ಹೇಳಿದರು.

    ಕುರುಕ್ಷೇತ್ರದ ಗೀತ ಮಾನಿಷಿ ಆಶ್ರಮದ ಮಹಾಮಂಡಳೇಶ್ವರ್ ಆಗಿರುವ ಗ್ಯಾನಾನಂದ ಮಹಾರಾಜ್, ಉಡುಪಿ ಪ್ರವಾಸದಲ್ಲಿದ್ದಾರೆ. ಉಡುಪಿ ಕೃಷ್ಣಮಠಕ್ಕೆ ಆಗಮಿಸಿದ ಅವರು, ಕನಕನ ಕಿಂಡಿಯ ಮೂಲಕ ಮತ್ತು ಕನಕ ನವಗ್ರಹ ಕಿಂಡಿಯ ಮೂಲಕ ಕಡೆಗೋಲು ಕೃಷ್ಣನ ದರ್ಶನ ಮಾಡಿದರು. ಅಷ್ಟೇ ಅಲ್ಲದೇ ಮುಖ್ಯಪ್ರಾಣ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

    ಪ್ರಧಾನಿ ನರೇಂದ್ರ ಮೋದಿ ಭಾರತ ದೇಶಕ್ಕಾಗಿ ಹಗಲಿರುಳು ದುಡಿಯುತ್ತಿದ್ದಾರೆ. ಭಾರತ ಎಂಬ ಕಟ್ಟಡದ ಅಡಿಪಾಯ ಚೆನ್ನಾಗಿದ್ದರೆ ದೇಶದ ನಿರ್ಮಾಣ ಚೆನ್ನಾಗಿಯಾಗುತ್ತದೆ. ಮೋದಿ ಆ ಕೆಲಸವನ್ನು ಮಾಡಿದ್ದಾರೆ. ಹಾಗಾಗಿ ಯಾವುದೇ ಸಮಸ್ಯೆಗಳು ಬರಲಾರವು ಎಂದು ಅವರು ಹೇಳಿದರು.

  • ಕೇಂದ್ರ ಸಚಿವರ ಸವಾಲು ಸ್ವೀಕರಿಸಿದ ಸಂಸದ ಪ್ರತಾಪ್ ಸಿಂಹ – ಟ್ವಿಟ್ಟರ್ ಫೋಟೋಗೆ ಅಭಿಮಾನಿಗಳು ಫಿದಾ

    ಕೇಂದ್ರ ಸಚಿವರ ಸವಾಲು ಸ್ವೀಕರಿಸಿದ ಸಂಸದ ಪ್ರತಾಪ್ ಸಿಂಹ – ಟ್ವಿಟ್ಟರ್ ಫೋಟೋಗೆ ಅಭಿಮಾನಿಗಳು ಫಿದಾ

    ಮೈಸೂರು: ಸದ್ಯಕ್ಕೆ ಈಗ ಎಲ್ಲೆಲ್ಲೂ ಫಿಟ್ ನೆಸ್ ಚಾಲೆಂಜ್ ಗಳೇ ಆಗಿದ್ದು, ಈಗ ಕೇಂದ್ರ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಹಾಕಿದ್ದ ಸವಾಲನ್ನು ಸಂಸದ ಪ್ರತಾಪ್ ಸಿಂಹ ಸ್ವೀಕರಿಸಿದ್ದಾರೆ.

    ವಿರಾಟ್ ಕೊಹ್ಲಿ ನಂತರ ಸಂಸದ ಪ್ರತಾಪ್ ಸಿಂಹ ಕೂಡ ರಾಥೋಡ್ ಅವರ ಸವಾಲನ್ನು ಸ್ವೀಕರಿಸಿದ್ದಾರೆ. ಈಗ ಹಮ್ ಫಿಟ್ ಥೋ ಇಂಡಿಯಾ ಫಿಟ್ ಗಾಗಿ ಸೂಪರ್ ವರ್ಕ್ ಔಟ್ ಶುರುವಾಗಿದೆ. ಪ್ರತಾಪ ಸಿಂಹ ಅವರು ತನ್ನ ಸದೃಢ ದೇಹದ ಫೋಟೋವನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿ ಫಿಟ್ ನೆಸ್ ವಿಡಿಯೋವನ್ನು ಶೀಘ್ರವೇ ಅಪ್ಲೋಡ್ ಮಾಡುವುದಾಗಿ ಬರೆದುಕೊಂಡಿದ್ದಾರೆ.

    ಪ್ರತಾಪ್ ಸಿಂಹ ಬರಿಮೈಯಲ್ಲಿನ ಫೋಟೋವನ್ನ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದರಿಂದ ಅವರ ಅಭಿಮಾನಿಗಳು ಫಿದಾ ಆಗಿದ್ದು, ನೀವು ರಾಜಕೀಯ ಬಿಟ್ಟು ಸಿನಿಮಾ ಹೀರೋ ಆಗಿ ಅಂತ ಟ್ವಿಟ್ಟರ್ ನಲ್ಲೇ ಸಲಹೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಪ್ರತಾಪ್ ಸಿಂಹ ಕೊಹ್ಲಿ ಅವರ ಚಾಲೆಂಜ್ ಸ್ವೀಕರಿಸಿದ್ದ ಮೋದಿ ಅವರ ಟ್ವೀಟ್ ಮತ್ತು ವಿರಾಟ್ ಕೊಹ್ಲಿ ಚಾಲೆಂಜ್ ಸ್ವೀಕರಿದ್ದ ಟ್ವೀಟ್ ನ್ನು ತಾವು ಪೋಸ್ಟ್ ಮಾಡಿದ್ದಾರೆ.

    ಕೇಂದ್ರ ಯುವಜನ ಮತ್ತು ಮತ್ತು ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಅವರು ಮೇ 22 ರಂದು, “ನಾನು ಫಿಟ್ ಆದ್ರೆ ದೇಶ ಫಿಟ್ (#HumFitTohIndiaFit) ನೀವು ನಿಮ್ಮ ಫಿಟ್ ನೆಸ್ ಗೆ ಸಂಬಂಧಿಸಿದ ಫೋಟೋ ಮತ್ತು ವಿಡಿಯೋವನ್ನು ಶೇರ್ ಮಾಡಿ” ಎಂದು ಕೊಹ್ಲಿ, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ನಟ ಹೃತಿಕ್ ರೋಷನ್ ಅವರಿಗೆ ಫಿಟ್ ನೆಸ್ ಚಾಲೆಂಜ್ ಟ್ವೀಟ್ ಮಾಡಿದ್ದರು.

    ಈ ಟ್ವೀಟ್ ಗೆ ವಿರಾಟ್ ಕೊಹ್ಲಿ ವಿಡಿಯೋವನ್ನು ಅಪ್ಲೋಡ್ ಮಾಡುವ ಮೂಲಕ ಚಾಲೆಂಜ್ ಸ್ವೀಕರಿಸಿದ್ದರು. ಅಷ್ಟೇ ಅಲ್ಲದೇ ಪ್ರಧಾನಿ ಮೋದಿ, ಪತ್ನಿ ಅನುಷ್ಕಾ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅವರಿಗೆ ಚಾಲೆಂಜ್ ಹಾಕಿ ಟ್ವೀಟ್ ಮಾಡಿದ್ದರು. ನಂತರ ಕೋಹ್ಲಿ ಅವರ ಈ ಟ್ವೀಟ್ ಗೆ ಮೋದಿ ಪ್ರತಿಕ್ರಿಯಿಸಿದ್ದು, ಸವಾಲನ್ನು ಸ್ವೀಕರಿಸಿದ್ದೇನೆ. ನನ್ನ ಫಿಟ್ ನೆಸ್ ಕುರಿತ ವಿಡಿಯೋವನ್ನು ಅಪ್ಲೋಡ್ ಮಾಡುವುದಾಗಿ ಬರೆದುಕೊಂಡಿದ್ದರು.

  • ಮೋದಿ ಅಶ್ವಮೇಧ ಯಾಗದ ಕುದುರೆಯನ್ನ ಜೆಡಿಎಸ್ ಕಟ್ಟಿ ಹಾಕಿದೆ: ಎಚ್‍ಡಿಕೆ

    ಮೋದಿ ಅಶ್ವಮೇಧ ಯಾಗದ ಕುದುರೆಯನ್ನ ಜೆಡಿಎಸ್ ಕಟ್ಟಿ ಹಾಕಿದೆ: ಎಚ್‍ಡಿಕೆ

    ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯ ಅಶ್ವಮೇಧ ಯಾಗದ ಕುದುರೆಯನ್ನ ಜೆಡಿಎಸ್ ಕಟ್ಟಿ ಹಾಕಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

    ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೋದಿ ತಾನು ಹೋದ ಕಡೆಯಲೆಲ್ಲಾ ಗೆಲುವು ಸಾಧಿಸುತ್ತೇನೆ ಎಂದುಕೊಂಡಿದ್ದರು. ಗುಜರಾತ್ ಸೇರಿದಂತೆ ರಾಜ್ಯದ ಕೆಲವು ಕಡೆ ಗೆಲುವು ಸಾಧಿಸಿ ಕರ್ನಾಟಕವನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಆದರೆ ಈ ಹಿಂದೆಯೇ ನಾನು ಮೋದಿ ಅಶ್ವಮೇಧ ಯಾಗದ ಕುದುರೆಯನ್ನು ಕಟ್ಟಿಹಾಕುತ್ತೇನೆ ಎಂದು ಹೇಳಿದ್ದೆ. ಅದು ಇಂದು ಸತ್ಯವಾಗಿದೆ. ಇನ್ನು ಮಂಡ್ಯ ಜನತೆಗೆ, ರಾಮನಗರ, ಚನ್ನಪಟ್ಟಣ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ. ನನ್ನ ಕೊನೆ ಉಸಿರಿರೋವರೆಗೂ ಅವಳಿ ನಗರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.

    ಬಿಜೆಪಿ ನಾಯಕರು ಪ್ರಜಾಪ್ರಭುತ್ವದ ವ್ಯವಸ್ಥೆ ರಕ್ಷಣೆ ಮಾಡುತ್ತಿಲ್ಲ. ಆಪರೇಷನ್ ಕಮಲ ಮಾಡಿದ್ದವರು ಬಿಜೆಪಿ ಅವರು. ಈಗ ಮತ್ತೆ ಕುದುರೆ ವ್ಯಾಪಾರಕ್ಕೆ ಮುಂದಾಗಿದ್ದಾರೆ. ರಾಜ್ಯದ ಜನತೆ ಈ ಬಗ್ಗೆ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

    ಎಲ್ಲಿ ಎಷ್ಟು ಸ್ಥಾನ ಗೆದ್ದಿದೆ?
    ಒಟ್ಟು 38 ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದಿದೆ. ಮಂಡ್ಯದ ಎಲ್ಲ 7 ಕ್ಷೇತ್ರಗಳನ್ನು ಗೆದ್ದ ಜೆಡಿಎಸ್ ಹಾಸನದ 7 ಕ್ಷೇತ್ರಗಳಲ್ಲಿ 6ನ್ನು ಗೆದ್ದುಕೊಂಡಿದೆ. ರಾಮನಗರದ 4 ಕ್ಷೇತ್ರದಲ್ಲಿ 3ರಲ್ಲಿ ಜಯ ಸಾಧಿಸಿದೆ. ತುಮಕೂರಿನ 11 ಕ್ಷೇತ್ರಗಳಲ್ಲಿ 4ರಲ್ಲಿ ಗೆಲುವು ಸಾಧಿಸಿದ್ದರೆ, ಮೈಸೂರಿನ 11 ಕ್ಷೇತ್ರಗಳಲ್ಲಿ 5ರಲ್ಲಿ ಜಯ ಸಾಧಿಸಿದೆ. ವಿಜಯ ಪುರ ಮತ್ತು ಬೆಂಗಳೂರಿನಲ್ಲಿ ಎರಡು ಸ್ಥಾನಗಳನ್ನು ಗೆದ್ದುಕೊಂಡಿದೆ. ರಾಯಚೂರು, ಕೋಲಾರ, ಯಾದಗಿರಿ, ಚಿಕ್ಕಬಳ್ಳಾಪುರ ಮತ್ತು ಬೀದರ್ ನಲ್ಲಿ 1 ಕ್ಷೇತ್ರವನ್ನು ಜೆಡಿಎಸ್ ಗೆದ್ದುಕೊಂಡಿದೆ.

  • ಕಾಂಗ್ರೆಸ್ `C Six’ ರೋಗದಿಂದ ರಾಜ್ಯವನ್ನು ರಕ್ಷಿಸಿ: ಪ್ರಧಾನಿ ಮೋದಿ

    ಕಾಂಗ್ರೆಸ್ `C Six’ ರೋಗದಿಂದ ರಾಜ್ಯವನ್ನು ರಕ್ಷಿಸಿ: ಪ್ರಧಾನಿ ಮೋದಿ

    ಬೆಳಗಾವಿ/ಕೋಲಾರ/ಚಿಕ್ಕಮಗಳೂರು: ರಾಜ್ಯದ ಮುಂದಿನ 5 ವರ್ಷಗಳ ಭವಿಷ್ಯ ನಿರ್ಧಾರವಾಗುವ ದಿನಕ್ಕೆ ಇರುವುದು ಕೇವಲ ಮೂರು ದಿನ ಮಾತ್ರ. ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಒಂದು ದಿನ ಮೊದಲು ರಾಜ್ಯದ ಎಲ್ಲೆಡೆ ಪ್ರಚಾರದ ಕಾವು ಹೆಚ್ಚಾಗಿತ್ತು.

    ಇಂದು ಪ್ರಧಾನಿ ಮೋದಿ ನಾಲ್ಕು ಕಡೆ ಬಿರುಸಿನ ಪ್ರಚಾರ ನಡೆಸುವ ಮೂಲಕ ಕೇತ್ರಗಳಲ್ಲಿ ಮತದಾರರ ಮನ ಗೆಲ್ಲಲು ಯತ್ನಿಸಿದರು. ತಮ್ಮ ನಾಲ್ಕು ಪ್ರಚಾರ ಸಮಾವೇಶಗಳಲ್ಲಿ ಕಾಂಗ್ರೆಸ್ ಟಾರ್ಗೆಟ್ ಮಾಡಿದ್ದ ಮೋದಿ ಆರೋಪಗಳ ಸುರಿಮಳೆಗೈದರು.

    ಚಿಕ್ಕಮಗಳೂರಿನ ಸಮಾವೇಶದಲ್ಲಿ ಬೆಂಗಳೂರಿನ ಜಾಲಹಳ್ಳಿ ಅಪಾರ್ಟ್‍ಮೆಂಟ್‍ನಲ್ಲಿ ದೊರೆತ ರಾಶಿ ರಾಶಿ ವೋಟರ್ ಐಡಿ ವಿಷಯವನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಪಕ್ಷ ಆಕ್ರಮ ಮತದಾನ ಮಾಡಲು ಪ್ಲಾನ್ ಮಾಡಿದೆ ಎಂದು ಆರೋಪಿಸಿದರು. ಅಲ್ಲದೇ ರಾಜ್ಯದಲ್ಲಿ ನಡೆಯುತ್ತಿರುವ ಐಟಿ ದಾಳಿ ಬಗ್ಗೆಯೂ ಪ್ರಸ್ತಾಪಿಸಿದ ಮೋದಿ ಬದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಹಣ ಹೊಳೆ ಹರಿಸುತ್ತಿದೆ ಎಂದು ಆರೋಪಿಸಿದರು.

    ಇದಕ್ಕೂ ಮುನ್ನ ಕೋಲಾರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ `ಸಿ ಸಿಕ್ಸ್’ ವೈರಸ್ ದಾಳಿ ಮಾಡಿದೆ. ಸಿ ಸಿಕ್ಸ್ ಅಂದರೆ ಕಾಂಗ್ರೆಸ್, ಕಮ್ಯುನಲ್, ಕ್ಯಾಸ್ಟಿಸಮ್, ಕರಪ್ಶನ್, ಕ್ರೈಂ, ಕಂಟ್ರಾಕ್ಟ್ ರೋಗಗಳಿಂದ ರಾಜ್ಯದ ವ್ಯವಸ್ಥೆ ಹಾಳಾಗಿದೆ. ಕಾಂಗ್ರೆಸ್ ಸಂವಿಧಾನದ ರೀತಿ ನೀತಿಗಳನ್ನೇ ಹಾಳುಮಾಡಿದೆ, ಇವೆಲ್ಲವೂ ಕರ್ನಾಟಕದ ಭವಿಷ್ಯವನ್ನೇ ಹಾಳು ಮಾಡುತ್ತಿದೆ. ಮೈತ್ರಿ ಪಕ್ಷಗಳನ್ನು ಗಣನೆಗೆ ತೆಗೆದುಕೊಳ್ಳದೇ ನಾನೇ ಮುಂದಿನ ಪ್ರಧಾನಿ ಎಂದು ಹೇಳುವ ಮೂಲಕ ರಾಹುಲ್ ಅಹಂಕಾರ ತೋರಿದ್ದಾರೆ. ಕಾಂಗ್ರೆಸ್ ಡೀಲ್ ಪಾರ್ಟಿ. ಇದನ್ನು ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ವೇಳೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರದ ಮೊಯ್ಲಿ ಅವರು ಹೇಳಿದ್ದಾರೆ ಎಂದರು.

    ಬೆಳಗಾವಿಯ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕಿ ಭಾವಚಿತ್ರವೊಂದಿರುವ ಕುಕ್ಕರ್ ವಶಕ್ಕೆ ಪಡೆದ ವಿಚಾರವನ್ನು ಪ್ರಸ್ತಾಪಿಸಿದ ಅವರು, ಇದು ಪವಿತ್ರ ಚುನಾವಣೆಯೇ, ಇದು ಶೇ.10 ರಷ್ಟು ಪಡೆದ ಹಣವೇ ಎಂದು ಪ್ರಶ್ನಿಸಿದರು. ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಆಯ್ಕೆ ಮಾಡಲಾಗಿದೆ. ಮೊದಲ ಹಂತದಲ್ಲಿಯೇ ಬೆಳಗಾವಿ ನಗರ ಆಯ್ಕೆ ಆಗಿತ್ತು. ಆದರೇ ಕರ್ನಾಟಕದಲ್ಲಿ ನಿದ್ರೆ ಮಾಡುವ ಸರ್ಕಾರವಿದೆ. ಸ್ಮಾಟ್ ಸಿಟಿ ನಿರ್ಮಾಣ ಮಾಡಲು ನೀಡಲಾಗಿದ್ದ 836 ಕೋಟಿ ರೂ. ಗಳಲ್ಲಿ ಕೇವಲ 12 ಕೋಟಿ ರೂಪಾಯಿ ಖರ್ಚು ಮಾಡಿದೆ ಎಂದು ಆರೋಪಿಸಿದರು.

    ಇದಕ್ಕೂ ಮುನ್ನ ತಮ್ಮ ಭಾಷಣದಲ್ಲಿ ಜಿಲ್ಲೆಯಲ್ಲಿ ಹರಿಯುವ ಐದು ನದಿಗಳನ್ನು ಪ್ರಸ್ತಾಪಿಸಿದ ಅವರು, ಬೆಳಗಾವಿಯಲ್ಲಿ ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಹಿರಣ್ಯ ಕೇಶಿ, ಮಾರ್ಖಂಡೇಯ ಪ್ರಮುಖ ಐದು 5 ನದಿ ಹರಿಯುತ್ತಿವೆ. ಆದ್ರು ಈ ಭಾಗದಲ್ಲಿ ನೀರಿನ ಸಮಸ್ಯೆ ಇದೇ. ಇದು ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ ಎಂದು ಆರೋಪಿಸಿದರು.

    https://www.youtube.com/watch?v=xNBtimUAH3s

    https://www.youtube.com/watch?v=VWX-Sv-6dpo

     

  • 56 ಇಂಚಿನ ಎದೆ ಮೋದಿಗೆ ಮಾತ್ರವಲ್ಲ, ಬಾಡಿ ಬಿಲ್ಡರ್, ಪೈಲ್ವಾನರಿಗೂ ಇರುತ್ತೆ: ಸಿದ್ದರಾಮಯ್ಯ

    56 ಇಂಚಿನ ಎದೆ ಮೋದಿಗೆ ಮಾತ್ರವಲ್ಲ, ಬಾಡಿ ಬಿಲ್ಡರ್, ಪೈಲ್ವಾನರಿಗೂ ಇರುತ್ತೆ: ಸಿದ್ದರಾಮಯ್ಯ

    ಮೈಸೂರು: ಆ ಮೋದಿ ಮುಧೋಳ ನಾಯಿಯಿಂದ ಕಾಂಗ್ರೆಸ್ ನಿಯತ್ತು ಕಲಿಬೇಕು ಅಂತಾನೆ, ಅವನಿಗೇ ನಿಯತ್ತಿಲ್ಲ. ಬೆಳೆಸಿದ ಅಡ್ವಾಣಿಯನ್ನೇ ಮೂಲೆ ಗುಂಪು ಮಾಡಿದ್ದಾನೆ ಎಂದು ಪ್ರಧಾನಿ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

    ಮೈಸೂರಿನ ಚಾಮರಾಜ ಕ್ಷೇತ್ರದ ಸಮಾವೇಶದಲ್ಲಿ ಮಾತನಾಡಿದ ಸಿಎಂ, ಕಾಂಗ್ರೆಸ್ ಪಕ್ಷದ ಅಲೆಯನ್ನ ನರೇಂದ್ರ ಮೋದಿಯಾಗಲಿ, ಅಮಿತ್ ಶಾ ಆಗಲಿ ಬದಲಾವಣೆ ಮಾಡೋಕಾಗೋಲ್ಲ. ಮೋದಿ ಕರ್ನಾಟಕಕ್ಕೆ ಕೊಡುಗೆ ಏನು ನೀಡಿದ್ದಾರೆ. ಮನ್ ಕಿ ಬಾತ್ ನೀಡಿದ್ದಾರೆ. ಅದರಿಂದ ಹೊಟ್ಟೆ ತುಂಬುತ್ತಾ ಎಂದು ಪ್ರಶ್ನಿಸಿ ಕಿಡಿಕಾರಿದ್ದಾರೆ.

    ಬಡವರಿಗೆ ಹೊಟ್ಟೆ ತುಂಬಿಸುವಂತಹ, ರೈತರ ಸಮಸ್ಯೆಗಳನ್ನು ಮತ್ತು ನಿರುದ್ಯೋಗಿಗಳ ಕಷ್ಟವನ್ನು ಪರಿಹರಿಸುವಂತಹ ಕಾರ್ಯಕ್ರಮವನ್ನು ಮಾಡಬೇಕು. ನನಗೆ 56 ಇಂಚಿನ ಎದೆ ಎಂದು ಹೇಳುತ್ತಾರೆ. ಅವರಿಗೆ 56 ಇಂಚಿನ ಎದೆ. ಆದರೆ ಒಳಗೆ ಬಡವರ ಪರವಾದ ಹೃದಯ, ಅವರಿಗಾಗಿ ಸ್ಪಂದಿಸುವ ಮನಸ್ಸು ಇದಿಯಾ ಎಂಬುದು ಬಹಳ ಮುಖ್ಯ ಎಂದು ಹೇಳಿ ತರಾಟಗೆ ತೆಗೆದುಕೊಂಡರು.

    ಬಾಡಿ ಬಿಲ್ಡರ್ ಗಳಿಗೂ ದೊಡ್ಡ ದೊಡ್ಡ ಎದೆ ಇರುತ್ತೆ. ದೊಡ್ಡ ಪೈಲ್ವಾನ್ ಗಳಿಗೂ ಇರುತ್ತದೆ. ಏನು 56 ಇಂಚಿನ ಎದೆ ನರೇಂದ್ರ ಮೋದಿ ಒಬ್ಬರಿಗೆ ಮಾತ್ರ ಇರೋದಾ ಎಂದು ಪ್ರಶ್ನಿಸಿ ಸಮಾವೇಶದ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯ ದೇಹದ ಬಗ್ಗೆ ವ್ಯಂಗ್ಯ ಮಾಡಿದರು.

    ಇದೇ ವೇಳೆ ಚಿತ್ರ ನಟ ಸುದೀಪ್ ಚಾಮುಂಡೇಶ್ವರಿ ಪ್ರಚಾರದಿಂದ ದೂರ ಉಳಿದ ವಿಚಾರವಾಗಿ ಪ್ರತಿಕ್ರಿಯಿಸಿ, ಸುದೀಪ್ ಪ್ರಚಾರಕ್ಕೆ ಬರಬೇಕಿತ್ತು ಅವರಿಗೆ ಬೇರೆ ಏನೇನೋ ಕೆಲಸ ಇದ್ದ ಕಾರಣಕ್ಕೆ ಪ್ರಚಾರಕ್ಕೆ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದರು.

  • ಇದು ನನ್ನ ಜೀವನದ ಶ್ರೇಷ್ಠ ಸಾಧನೆ : ಮೋದಿ ಹೊಗಳಿಕೆಗೆ  ಕರಣ್ ಆಚಾರ್ಯ ಪ್ರತಿಕ್ರಿಯೆ

    ಇದು ನನ್ನ ಜೀವನದ ಶ್ರೇಷ್ಠ ಸಾಧನೆ : ಮೋದಿ ಹೊಗಳಿಕೆಗೆ ಕರಣ್ ಆಚಾರ್ಯ ಪ್ರತಿಕ್ರಿಯೆ

    ಬೆಂಗಳೂರು: ವಾಹನಗಳ ಮೇಲೆ ಹೆಚ್ಚು ರಾರಾಜಿಸುತ್ತಿರುವ ಹನುಮಾನ್ ಚಿತ್ರವನ್ನು ರಚಿಸಿರುವ ಕರಣ್ ಆಚಾರ್ಯ ಪ್ರಧಾನಿ ನರೇಂದ್ರ ಮೋದಿ ಹೊಗಳಿಕೆಗೆ ಧನ್ಯವಾದ ತಿಳಿಸಿ, ಇದು ತನ್ನ ಜೀವನದ ಶ್ರೇಷ್ಠ ಸಾಧನೆ ಎಂದು ಹೇಳಿದ್ದಾರೆ.

    ಕರ್ನಾಟಕ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿನ ಪ್ರಚಾರ ಭಾಷಣದಲ್ಲಿ ಹನುಮಾನ್ ಚಿತ್ರ ರಚಿಸಿದ್ದ ಕರಣ್ ಆಚಾರ್ಯ ಅವರ ಹೆಸರನ್ನು ಪ್ರಸ್ತಾಪಿಸಿ ಹೊಗಳಿದ್ದರು. ಮಂಗಳೂರಿನ ಯುವಕನ ಈ ಸಾಧನೆಗೆ ದೇಶದ ಹಲವು ಮಾಧ್ಯಮಗಳು ಸಂದರ್ಶನಕ್ಕಾಗಿ ಕಾದು ನಿಂತಿದ್ದರು. ಇದು ಪ್ರಶಂಸನಿಯ ಸಾಧನೆ ಎಂದು ತಿಳಿಸಿದ್ದರು. ಅಲ್ಲದೇ ಟ್ವಿಟ್ಟರ್ ನಲ್ಲಿ ಹನುಮಾನ್ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದರು.

    ಈ ವಿಡಿಯೋವನ್ನು ನೋಡಿದ ಕರಣ್, ಪ್ರಧಾನಿ ಮೋದಿ ಅವರು ನನ್ನ ಹೆಸರನ್ನು ಹೇಳಿ ಪ್ರಶಂಸೆ ವ್ಯಕ್ತಪಡಿಸಿರುವುದು ಸಂತಸ ಉಂಟು ಮಾಡಿದೆ ಎಂದು ಹೇಳಿದ್ದಾರೆ.

    ಮೂಲತಃ ಕಾಸಗೋಡು ಜಿಲ್ಲೆಯ ಕರಣ್ ಮಾಧ್ಯಮವೊಂದರ ಜೊತೆ ಮಾತನಾಡಿ ಹರ್ಷವ್ಯಕ್ತ ಪಡಿಸಿದ್ದಾರೆ. ನನ್ನ ಸ್ನೇಹಿತರು ಅಂದು ಪದೇ ಪದೇ ಕರೆ ಮಾಡುತ್ತಿದ್ದರು. ಈ ವೇಳೆ ತನಗೆ ವಿಷಯ ತಿಳಿದಿರಲಿಲ್ಲ. ಬಳಿಕ ವಿಡಿಯೋ ನೋಡಿ ಮೇಲೆ ತನಗೆ ಈ ಬಗ್ಗೆ ತಿಳಿಯಿತು. ಇದು ನನ್ನ ಜೀವನದ ಶ್ರೇಷ್ಠ ಸಾಧನೆ ಎಂದು ತಿಳಿಸಿದ್ದಾರೆ.

    ಅಲ್ಲದೇ ಹನುಮಾನ್ ಚಿತ್ರ ರಚನೆ ಮಾಡಿದ್ದ ಕುರಿತ ಸ್ವಾರಸ್ಯಕರ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ. ನನ್ನ ಗೆಳೆಯರು ಗಣೇಶ್ ಚರ್ತುಥಿಯ ಅಂಗವಾಗಿ ಧ್ವಜದ ಚಿತ್ರ ಬಿಡಿಸುವಂತೆ ಕೋರಿದ್ದರು. ಅದು ಇದುವರೆಗಿನ ಎಲ್ಲಾ ಧ್ವಜಗಳಿಗಿಂತ ಭಿನ್ನವಾಗಿರುವಂತೆ ರಚಿಸಲು ಒತ್ತಡ ಹಾಕಿದ್ದರು. ಎಲ್ಲರಿಗಿಂತ ಭಿನ್ನವಾದ ಚಿತ್ರ ಬಿಡಿಸಲು ನಿರ್ಧರಿಸಿದ ವೇಳೆ ನಾನು ಹನುಮಾನ್ ಚಿತ್ರ ಬಿಡಿಸಲು ಪ್ರಾರಂಭಿಸಿದೆ. ಗೂಗಲ್ ನಲ್ಲಿ ಹಲವು ಆಂಜನೇಯನ ಚಿತ್ರಗಳನನ್ನು ನೋಡಿದ ಬಳಿಕ ಹೊಸ ಚಿತ್ರದ ರಚನೆ ಮಾಡಿದೆ. ಅದ್ದರಿಂದ ತಾನು ಕೇಸರಿ ಬಣ್ಣವನ್ನು ಮಾತ್ರ ಬಳಕೆ ಮಾಡಿದೆ. ಈ ಚಿತ್ರ ಕೇವಲ ಅರ್ಧ ಗಂಟೆಯಲ್ಲೇ ರಚನೆ ಮಾಡಿದೆ ಎಂದು ವಿವರಿಸಿದರು.

    ಕೇಸರಿ ಬಣ್ಣವನ್ನು ನಾನು ದೇವರ ಸಂಕೇತವಾಗಿ ಬಳಕೆ ಮಾಡಿದ್ದೇನೆ, ಹೊರತು ಯಾವುದೇ ರಾಜಕೀಯ ಪಕ್ಷಕ್ಕೆ ಬೆಂಬಲವಾಗಿ ರಚನೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಈ ಚಿತ್ರವನ್ನು ರಚನೆ ಮಾಡಿ ಮೂರು ವರ್ಷ ಕಳೆದಿದ್ದು ಎಲ್ಲೆಡೆ ವೈರಲ್ ಆಗಿದೆ. ಇದಕ್ಕಿಂತ ಹೆಚ್ಚಿನ ಕೊಡುಗೆ ಚಿತ್ರಕಾರನಿಗೆ ಸಿಗಲು ಸಾಧ್ಯವಿಲ್ಲ. ಯಾವುದೇ ಕಾರಿನ ಹಿಂಭಾಗ ನೋಡಿದರೂ ಈ ಚಿತ್ರ ಅತೀ ಹೆಚ್ಚು ಕಾಣಿಸಿಕೊಳ್ಳುತ್ತದೆ. ತನ್ನ ಈ ಸಾಧನೆಗೆ ಪೋಷಕರು ನೀಡಿದ ಬೆಂಬಲವೇ ಪ್ರಮುಖ ಕಾರಣ ಎಂದು ತಿಳಿಸಿದರು.  ಇದನ್ನು ಓದಿ: ಆಂಜನೇಯನ ಭಾವಚಿತ್ರ ಹಾಕಿಕೊಂಡ ಕ್ಯಾಬ್‍ನವರು ರೇಪಿಸ್ಟ್ ಗಳು, ಅವುಗಳಲ್ಲಿ ಪ್ರಯಾಣಿಸಬೇಡಿ : ರಶ್ಮಿ ನಾಯರ್