Tag: prime minister

  • ಪ್ರಧಾನಿ ಮೋದಿಯಿಂದ ಪೌರಕಾರ್ಮಿಕರ ಪಾದಪೂಜೆ – ವಿಡಿಯೋ ನೋಡಿ

    ಪ್ರಧಾನಿ ಮೋದಿಯಿಂದ ಪೌರಕಾರ್ಮಿಕರ ಪಾದಪೂಜೆ – ವಿಡಿಯೋ ನೋಡಿ

    ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪ್ರಯಾಗ್‍ನ ತ್ರಿವೇಣಿ ಸಂಗಮದಲ್ಲಿ ಪೌರಕಾರ್ಮಿಕರ ಪಾದ ಪೂಜೆ ಮಾಡಿದ್ದಾರೆ.

    ಈ ಮೂಲಕ ದೇಶದ ಇತಿಹಾಸದಲ್ಲೇ ಮೊದಲ ಬಾರಿ ಪೌರಕಾರ್ಮಿಕರ ಪಾದಪೂಜೆ ಮಾಡಿದ ಪ್ರಧಾನಿ ಎಂಬ ಖ್ಯಾತಿಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ.

    ಹಣೆಗೆ ವಿಭೂತಿ ಹಚ್ಚಿಕೊಂಡಿದ್ದ ಪ್ರಧಾನಿ ಮೋದಿ ಅವರು, ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 5 ಜನ ಪೌರಕಾರ್ಮಿಕರ ಪಾದಕ್ಕೆ ನೀರು ಹಾಕಿ ತೊಳೆದು, ಕರವಸ್ತ್ರದಿಂದ ಸ್ವಚ್ಛಗೊಳಿಸಿದರು. ಪಾದಪೂಜೆಯ ಬಳಿಕ ಅವರಿಗೆ ಶಾಲು ಹೊದಿಸಿ ಕೈಮುಗಿದು ಧನ್ಯವಾದ ತಿಳಿಸಿದರು.

    ಪಾದಪೂಜೆ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ಮೋದಿ ಅವರು ತ್ರಿವೇಣಿ ಸಂಗಮಕ್ಕೆ ತೆರಳಿ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರು. ಬಳಿಕ ಸ್ವಚ್ಛ ಕುಂಭ್ – ಸ್ವಚ್ಛ ಆಭಾರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

    ಪ್ರಧಾನಿ ಮೋದಿ ಅವರು ಸ್ವಚ್ಛತ್ ಭಾರತ್ ಅಭಿಯಾನವನ್ನು ಆರಂಭಿಸಿದ್ದರು. ಈ ನಿಟ್ಟಿನಲ್ಲಿ ದೇಶದಲ್ಲಿ ಪಕ್ಷಾತೀತವಾಗಿ ಎಲ್ಲರೂ ಸ್ವಚ್ಛತೆಯ ಕಡೆ ಗಮನ ಹರಿಸಬೇಕೆಂದು ಮನವಿ ಮಾಡಿದ್ದರು. ಹೀಗಾಗಿ ನಗರ ಪ್ರದೇಶ, ಗ್ರಾಮಗಳನ್ನು ಸ್ವಚ್ಛವಾಗಿಡಲು ಶ್ರಮಿಸುವ ಪೌರಕಾರ್ಮಿಕರನ್ನು ಸ್ವಚ್ಛತಾ ಯೋಧರೆಂದು ಪ್ರಧಾನಿ ನರೇಂದ್ರ ಮೋದಿ ಕರೆದು ಗೌರವಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಮ್ಮದು ಪೇಪರ್‌ನಲ್ಲಿ ಇರೋ ಯೋಜನೆಯಲ್ಲ – ಕಿಸಾನ್ ಸಮ್ಮಾನ್ ಯೋಜನೆ ಪ್ರಧಾನಿ ಮೋದಿ ಚಾಲನೆ

    ನಮ್ಮದು ಪೇಪರ್‌ನಲ್ಲಿ ಇರೋ ಯೋಜನೆಯಲ್ಲ – ಕಿಸಾನ್ ಸಮ್ಮಾನ್ ಯೋಜನೆ ಪ್ರಧಾನಿ ಮೋದಿ ಚಾಲನೆ

    – ಮೊದಲ ಹಂತದಲ್ಲಿ 1 ಕೋಟಿ ರೈತರ ಖಾತೆಗೆ ತಲಾ 2 ಸಾವಿರ ಜಮೆ

    ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಗೋರಕ್‍ಪುರ್ ನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಚಾಲನೆ ನೀಡಿದ್ದಾರೆ.

    ಈ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಮೋದಿ, ಹಿಂದಿನ ಸರ್ಕಾರದ ಯೋಜನೆಗಳು ಕೇವಲ ಪೇಪರ್‍ನಲ್ಲಿ ಮಾತ್ರ ಇತ್ತು. ಆದರೆ ನಮ್ಮ ಸರ್ಕಾರಲ್ಲಿ ಯಾವೆಲ್ಲ ಯೋಜನೆಗಳನ್ನು ಘೋಷಿಸಿದ್ದೇವೋ ಆ ಎಲ್ಲ ಯೋಜನೆಗಳನ್ನು ಕಾರ್ಯಗತಗೊಳಿಸಿದ್ದೇವೆ ಎಂದು ಹೇಳಿದರು.

    ಇದು ಕೇವಲ ಆರಂಭವಷ್ಟೇ. ಪ್ರತಿ ವರ್ಷ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲು 75 ಸಾವಿರ ಕೋಟಿ ರೂ.ವನ್ನು ಮಿಸಲಿಡಲಾಗುತ್ತದೆ. ಇಲ್ಲಿ ಯಾವುದೇ ಮಧ್ಯವರ್ತಿಗಳ ಪಾತ್ರವಿರುವುದಿಲ್ಲ. ಇದು ನಿಮ್ಮ ಹಣ. ಇದನ್ನು ಯಾರಿಂದಲೂ ಕಿತ್ತುಕೊಳ್ಳಲು ಆಗುವುದಿಲ್ಲ ಎಂದು ಹೇಳಿದರು.

    ರೈತರ ಬಗ್ಗೆ ಹಗುರವಾಗಿ ಮಾತನಾಡುವವರು ರಾಜಕೀಯ ಅಸ್ಥಿತ್ವವನ್ನು ಕಳೆದುಕೊಳ್ಳುತ್ತಾರೆ. ಯೋಜನೆಯಲ್ಲಿ ರಾಜಕೀಯ ತಂತ್ರವಿದೆ ಎನ್ನುವವರ ಮಾತಿಗೆ ಕಿವಿ ಕೊಡಬೇಡಿ ಎಂದು ರೈತರಿಗೆ ಮನವಿ ಮಾಡಿಕೊಂಡ ಮೋದಿ, ಪ್ರಧಾನ ಮಂತ್ರಿ ಕಿಸಾನ್ ಯೋಜನೆ ವಿರುದ್ಧ ಮಾತನಾಡಿದ್ದ ನಾಯಕರಿಗೆ ಟಾಂಗ್ ಕೊಟ್ಟರು.

    ಈ ಯೋಜನೆಯಿಂದಾಗಿ ದೇಶದ ಒಂದು ಕೋಟಿ ರೈತರ ಖಾತೆಗೆ ಇಂದು 2 ಸಾವಿರ ರೂ. ಪಾವತಿಯಾಗಲಿದೆ. ಜೊತೆಗೆ ಮುಂದಿನ ಎರಡು-ಮೂರು ದಿನಗಳಲ್ಲಿ ಮತ್ತೆ ಒಂದು ಕೋಟಿ ರೈತರ ಖಾತೆಗೆ ಹಣ ಪಾವತಿಯಾಗುತ್ತದೆ. ಈ ಮೂಲಕ ಒಟ್ಟು 12 ಕೋಟಿ ಸಣ್ಣ ಹಿಡುವಳಿದಾರ ರೈತರ ಖಾತೆಗೆ 2 ಸಾವಿರದಂತೆ ಮೂರು ಕಂತು (6,000 ರೂ.) ಪಾವತಿಯಾಗಲಿದೆ.

    ಏನಿದು ಯೋಜನೆ?:
    ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಹೆಸರಿನಲ್ಲಿ ಯೋಜನೆಯನ್ನು ಆರಂಭಿಸಿದೆ. ವರ್ಷಕ್ಕೆ 6 ಸಾವಿರ ರೂ. ಹಣ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ.

    ಅರ್ಹತೆಗಳು ಏನು?
    2 ಹೆಕ್ಟೇರ್(4.94 ಎಕ್ರೆ) ಅಥವಾ ಅದಕ್ಕಿಂತ ಕಡಿಮೆ ಕೃಷಿ ಭೂಮಿಯನ್ನು ಹೊಂದಿರುವ ರೈತ ಕುಟುಂಬ ಈ ಯೋಜನೆಯ ಲಾಭವನ್ನು ಪಡೆಯಬಹುದು. 2019 ಫೆ.1ರ ಒಳಗಡೆ ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳ ಭೂ ದಾಖಲೆಗಳಲ್ಲಿ ನೊಂದಣಿಯಾದ ರೈತರು ಈ ಯೋಜನೆಗೆ ಅರ್ಹರಾಗುತ್ತಾರೆ. ಸರ್ಕಾರಿ ಉದ್ಯೋಗಿಗಳ ಪೈಕಿ ಗ್ರೂಪ್ ಡಿ/ ಬಹು ಕಾರ್ಯ ನಿರ್ವಹಿಸುವ ಸರ್ಕಾರಿ ನೌಕಕರು/ ನಾಲ್ಕನೇಯ ವರ್ಗದ ಸಿಬ್ಬಂದಿ ಸಹ ಈ ಯೋಜನೆಯ ಫಲಾನುಭವಿಗಳಾಗಬಹುದು.

    ಎಲ್ಲಿ ಅರ್ಜಿ ಸಲ್ಲಿಸಬೇಕು?
    ಪಿಎಂ-ಕಿಸಾನ್ ಯೋಜನೆಗೆಂದು ಕೇಂದ್ರ ಸರ್ಕಾರ pmkisan.nic.in ವೆಬ್‍ಸೈಟ್ ತೆರೆದಿದೆ. ಈ ಯೋಜನೆಗೆ ಅರ್ಹತೆ ಪಡೆದ ರೈತರು ಈ ಅಧಿಕೃತ ವೆಬ್‍ಸೈಟ್‍ಗೆ ಭೇಟಿ ನೀಡಿ ಪಿಎಂ-ಕಿಸಾನ್ ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ತಿಳಿಯಬಹುದು. ಆನ್‍ಲೈನ್ ಮೂಲಕ ಈ ವೆಬ್‍ಸೈಟ್ ನಲ್ಲಿ ರೈತರು ಅರ್ಜಿ ಸಲ್ಲಿಸಬಹುದು. ಈ ಯೋಜನೆಗೆ ರೈತರು ತಮ್ಮ ಹೆಸರನ್ನು ಹಾಗೂ ವಿವರಗಳನ್ನು ನೊಂದಾಯಿಸಲು ಫೆಬ್ರವರಿ 25 ಕೊನೆಯ ದಿನಾಂಕವಾಗಿದೆ.

    ಯಾವ ದಾಖಲೆಗಳು ಬೇಕು?:
    ಸರ್ಕಾರದಿಂದ ಅನುಮೋದಿಸಿದ ಐಡಿ ಪುರಾವೆಗಳು, ಆಧಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ಮಾಹಿತಿ, ಕೃಷಿ ಭೂವಿಯ ದಾಖಲೆಗಳು ರೈತರ ಬಳಿ ಇರಬೇಕಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಇರಲೇಬೇಕು.

    ಈ ಯೋಜನೆಯಲ್ಲಿ ಗ್ರಾಮೀಣ ಕೃಷಿ ಭೂಮಿ ಅಥವಾ ನಗರ ಕೃಷಿ ಭೂಮಿಯೆಂದು ತಾರತಮ್ಯ ಮಾಡುವುದಿಲ್ಲ. ಗ್ರಾಮೀಣ ಹಾಗೂ ನಗರ ವ್ಯಾಪ್ತಿಗೆ ಬರುವ ಎರಡು ಕೃಷಿ ಭೂಮಿಗಳ ರೈತರು ಈ ಯೋಜನೆಗೆ ಅರ್ಹರು. ನಗರದಲ್ಲಿರುವ ಕೃಷಿ ಭೂಮಿಯನ್ನು ಪ್ರಸ್ತುತ ಈಗ ಕೃಷಿಗೆ ಚಟುವಟಿಕೆಗೆ ಬಳಸುತ್ತಿದ್ದರೆ ಮಾತ್ರ ಯೋಜನೆಯ ಫಲವನ್ನು ಪಡೆಯಬಹುದು.

    ಎಷ್ಟು ಹಣ ಬರುತ್ತದೆ?
    2 ಹೆಕ್ಟೇರ್ ಜಮೀನು ಹೊಂದಿರುವ ಸಣ್ಣ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಷಕ್ಕೆ 6 ಸಾವಿರ ರೂ. ಮೊತ್ತವನ್ನು 2 ಸಾವಿರ ರೂ. ನಂತೆ ಮೂರು ಕಂತುಗಳಲ್ಲಿ ಜಮೆ ಮಾಡುವ `ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಎಂದು ಕರೆಯಲಾಗುವ ಯೋಜನೆಯನ್ನು ಹಣಕಾಸು ಸಚಿವ ಪಿಯೂಶ್ ಗೋಯಲ್ ಈ ಬಾರಿಯ ಬಜೆಟ್ ನಲ್ಲಿ ಘೋಷಿಸಿದ್ದರು.

    ಈ ಯೋಜನೆಯಿಂದ 12 ಕೋಟಿಯಷ್ಟು ಸಣ್ಣ ಮತ್ತು ಬಡರೈತರಿಗೆ ಪ್ರಯೋಜನವಾಗಲಿದ್ದು, 2019-20ರ ಸಾಲಿನಲ್ಲಿ ಸರ್ಕಾರಕ್ಕೆ 75 ಸಾವಿರ ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ. ಕೃಷಿ ಸಂಬಂಧಿ ಇತರ ಚಟುವಟಿಕೆಗಳಿಗೆ ಈ ಹಣ ನೆರವಾಗಲಿದೆ. ರೈತರು ಗೌರವಯುತ ಜೀವನ ಸಾಗಿಸಲು ಇದರಿಂದ ಸಾಧ್ಯವಾಗುತ್ತದೆ. 2018-19ರ ಸಾಲಿನಲ್ಲಿ ಪರಿಷ್ಕೃತ ಅಂದಾಜು ವಿಭಾಗದಲ್ಲಿ 20 ಸಾವಿರ ಕೋಟಿ ರೂ. ನೀಡಲಾಗಿದೆ. 2018ರ ಡಿಸೆಂಬರ್ ಪೂರ್ವಾನ್ವಯದಂತೆ ಈ ಯೋಜನೆ ಜಾರಿಯಾಗಲಿದೆ ಎಂದು ಗೋಯಲ್ ತಿಳಿಸಿದ್ದರು.

    ಚುನಾವಣೆಗೆ ಮೊದಲು ಬೀಳುತ್ತೆ ಹಣ:
    ಲೋಕಸಭಾ ಚುನಾವಣೆಯ ಒಳಗಡೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿ ರೈತರ ಖಾತೆಗಳಿಗೆ 4 ಸಾವಿರ ರೂ. ಜಮೆಯಾಗುವ ಸಾಧ್ಯತೆಯಿದೆ. ಈ ಯೋಜನೆ ಅನ್ವಯ ಮೊದಲ ಕಂತನ್ನು ಮಾರ್ಚ್ 31ರ ಒಳಗಡೆ ಹಾಕಲು ಕೇಂದ್ರ ಸರ್ಕಾರ ಪ್ಲಾನ್ ಮಾಡಿದೆ. ಇದರ ಜೊತೆಯಲ್ಲೇ ಎರಡನೇ ಕಂತಿನ ಹಣವನ್ನು ಲೋಕಸಭಾ ಚುನಾವಣೆಯ ಒಳಗಡೆ ಜಮೆ ಮಾಡಲು ಸರ್ಕಾರ ಪ್ರಯತ್ನ ನಡೆಸುತ್ತಿದೆ. ಈ ಸಂಬಂಧ ವಿವಿಧ ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳ ಕೃಷಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತಿದ್ದು, ಶೀಘ್ರವೇ ರೈತರ ಮಾಹಿತಿಯನ್ನು ನೀಡುವಂತೆ ಮನವಿ ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಾಕ್ಷ್ಯ ನೀಡಿದ್ರೆ ಕ್ರಮ, ಯುದ್ಧ ನಡೆದರೆ ಉತ್ತರ ಕೊಡ್ತೀವಿ: ಭಾರತವನ್ನು ಕೆಣಕಿದ ಇಮ್ರಾನ್ ಖಾನ್

    ಸಾಕ್ಷ್ಯ ನೀಡಿದ್ರೆ ಕ್ರಮ, ಯುದ್ಧ ನಡೆದರೆ ಉತ್ತರ ಕೊಡ್ತೀವಿ: ಭಾರತವನ್ನು ಕೆಣಕಿದ ಇಮ್ರಾನ್ ಖಾನ್

    ಇಸ್ಲಾಮಾಬಾದ್: ಮುಂಬೈ ದಾಳಿ ಬಳಿಕ ಸಾಕಷ್ಟು ಸಾಕ್ಷ್ಯ ನೀಡಿದ್ರೂ ಇನ್ನೂ ದೇಶದಲ್ಲಿನ ಉಗ್ರರನ್ನು ಮಟ್ಟ ಹಾಕದ ಪಾಕಿಸ್ತಾನ ಈಗ ಪುಲ್ವಾಮಾ ದಾಳಿ ಬಗ್ಗೆ ಸಾಕ್ಷ್ಯವನ್ನು ಕೇಳುವ ಮೂಲಕ ಮತ್ತೆ ಭಾರತೀಯರನ್ನು ಕೆಣಕಿದೆ.

    ಪುಲ್ವಾಮಾ ದಾಳಿಯ ನಡೆಸಿದವರ ಮೇಲೆ ಕ್ರಮ ತೆಗೆದುಕೊಳ್ಳಬೇಕಾದರೆ ನಮಗೆ ಸಾಕ್ಷಿ ನೀಡಬೇಕೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಾರತದಲ್ಲಿ ಕೇಳಿಕೊಂಡಿದ್ದಾರೆ.

    ಘಟನೆಯ ನಂತರ ಇದೇ ಮೊದಲ ಬಾರಿಗೆ ದೀರ್ಘವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಕೃತ್ಯದಲ್ಲಿ ಪಾಕಿಸ್ತಾನ ಕೈವಾಡ ಇದೆ ಎನ್ನುವುದಕ್ಕೆ ಭಾರತ ಸಾಕ್ಷ್ಯ ನೀಡಿದರೆ ನಾನು ಕ್ರಮ ಕೈಗೊಂಡು ತನಿಖೆಗೆ ಆದೇಶ ನೀಡುತ್ತೇನೆ ಎಂದು ಹೇಳಿದ್ದಾರೆ.

    ನಾವು ಸಹ ಉಗ್ರರಿಂದ ಸಂತ್ರಸ್ತರಾಗಿದ್ದೇವೆ. ಯಾರೂ ಹಿಂಸೆಗೆ ಪ್ರಚೋದನೆ ನೀಡುತ್ತಾರೋ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಆದರೆ ದಾಳಿಯ ಬಗ್ಗೆ ನಮಗೆ ಸಾಕ್ಷ್ಯಾಧಾರಗಳ ಅವಶ್ಯಕತೆ ಇದೆ. ಅಂತಹ ದಾಳಿಯನ್ನು ನಾವು ಯಾಕೆ ಮಾಡಿಸುತ್ತೇವೆ ಪ್ರಶ್ನಿಸಿದ್ದಾರೆ.

    ಮಾತುಕತೆಯ ಮೂಲವೇ ಇಂತಹ ಸಮಸ್ಯೆಗಳನ್ನು ವಶಕ್ಕೆ ಪಡೆಯಬೇಕು ಎಂದು ಅಭಿಪ್ರಾಯ ಪಟ್ಟ ಇಮ್ರಾನ್ ಖಾನ್, ಯುದ್ಧವನ್ನು ಪ್ರಾರಂಭಿಸುವುದು ಮಾನವರ ಕೈಯಲ್ಲಿದೆ, ಇದು ಎಲ್ಲಿಯವರೆಗೂ ಕೊಂಡ್ಯೊಯುತ್ತದೆ ಎಂಬುವುದು ಆ ದೇವರಿಗೆ ಮಾತ್ರಗೊತ್ತು. ಆದರೆ ಈ ಸಮಯದಲ್ಲಿ ಭಾರತ ಸರ್ಕಾರ ಕಾಶ್ಮೀರಿ ಜನರನ್ನು ಪ್ರಶ್ನಿಸಬೇಕಿದ್ದು, ಹಿಂಸೆಯಲ್ಲಿ ಏಕೆ ಭಾಗವಹಿಸುತ್ತಿದ್ದಾರೆ ಎಂಬುವುದು ತಿಳಿಯಬೇಕಿದೆ ಎಂದು ಸಲಹೆ ನೀಡಿದ್ದಾರೆ.

    ಮುಂದಿನ ದಿನಗಳು ಚುನಾವಣೆಯ ವರ್ಷ ಎಂಬುದು ನನಗೆ ತಿಳಿದಿದೆ. ಭಾರತ ಸರ್ಕಾರ ಒಂದೊಮ್ಮೆ ನಮ್ಮ ಮೇಲೆ ದಾಳಿ ನಡೆಸಿದರೆ ನಾವು ಕೂಡ ಸುಮ್ಮನೆ ಕೂರುವುದಿಲ್ಲ. ಪ್ರತಿದಾಳಿ ನಡೆಸಲು ನಮಗೆ ಬರುತ್ತದೆ. ಆದರೆ ಈ ವಿಚಾರ ಮಾತುಕತೆಯಲ್ಲಿ ಬಗೆ ಹರಿಸಿಕೊಳ್ಳಬಹುದು ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜನತೆ ಕೇಳಿದ ಪ್ರಶ್ನೆಗೆ ಉತ್ತರಿಸಲು 56 ಇಂಚಿನ ಎದೆ ಧೈರ್ಯ ನೀಡಲಿಲ್ಲವೇ? ಕಾಂಗ್ರೆಸ್ ವಾಗ್ದಾಳಿ

    ಜನತೆ ಕೇಳಿದ ಪ್ರಶ್ನೆಗೆ ಉತ್ತರಿಸಲು 56 ಇಂಚಿನ ಎದೆ ಧೈರ್ಯ ನೀಡಲಿಲ್ಲವೇ? ಕಾಂಗ್ರೆಸ್ ವಾಗ್ದಾಳಿ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಹುಬ್ಬಳ್ಳಿಯಲ್ಲಿ ಮಾತನಾಡಿದ ಬಳಿಕ ಟ್ವೀಟ್ ಮಾಡಿರುವ ಕಾಂಗ್ರೆಸ್ ಮೋದಿ ಅವರ 56 ಇಂಚಿನ ಎದೆಯ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

    ಸರಣಿ ಟ್ವೀಟ್ ಮಾಡಿ ಪ್ರಧಾನಿ ಮೋದಿ ಅವರಿಗೆ ಪ್ರಶ್ನೆಗಳ ಸರಮಾಲೆ ಎಸೆದಿರುವ ಕಾಂಗ್ರೆಸ್, ಕರ್ನಾಟಕದ ಜನತೆ ನಿಮ್ಮನ್ನು ಸಾಮಾಜಿಕ ಜಾಲತಾಣದ ಮೂಲಕ ಜ್ವಲಂತ ಪ್ರಮುಖ ಪ್ರಶ್ನೆಗಳನ್ನು ಕೇಳಿದ್ದಾರೆ. ಭ್ರಷ್ಟಾಚಾರ, ವೈಫಲ್ಯ, ಸುಳ್ಳು ಭರವಸೆಗಳು, ಯಾಮಾರಿಸುವ ತಂತ್ರಗಾರಿಕೆ, ಕರ್ನಾಟಕಕ್ಕೆ ಮಾಡಿದ ಮೋಸದ ಬಗ್ಗೆ ಪ್ರಶ್ನಿಸಿದ್ದಾರೆ. ಈ ಯಾವ ಪ್ರಶ್ನೆಗೂ ಉತ್ತರಿಸಲು ನಿಮ್ಮ 56 ಇಂಚಿನ ಎದೆ ಧೈರ್ಯ ನೀಡಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

    ಮತ್ತೊಂದು ಟ್ವೀಟ್‍ನಲ್ಲಿ, ಪ್ರಧಾನಿ ಮಂತ್ರಿಯವರೇ ನಿಮಗೂ ಸತ್ಯಕ್ಕೂ ಹೊಂದಾಣಿಕೆ ಆಗೋದೇ ಇಲ್ಲವೆ? ನಿಮ್ಮ ಬಾಯಿಂದ ಸತ್ಯ ಮತ್ತು ವಾಸ್ತವತೆ ಹೊರಡುವುದೇ ಇಲ್ಲವೆ? ಸಿಎಂ ಕುಮಾರಸ್ವಾಮಿ ಅಸಹಾಯಕರಲ್ಲ ಸರ್ಕಾರವೂ ಅಸಹಾಯಕವಲ್ಲ. ಬಿಎಸ್‍ವೈ ಮತ್ತು ತಂಡ ಮಾತ್ರ ಅಸಹನೆ, ಅಸತ್ಯ, ಅಧರ್ಮದ ದಾರಿಯಲ್ಲಿದೆ. ಪ್ರಜಾಪ್ರಭುತ್ವ ವಿರೋಧಿ ಆಪರೇಷನ್ ಕಮಲದ ಬಗ್ಗೆ ಚಕಾರವೆತ್ತಲಿಲ್ಲವೇಕೆ? ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದಾರೆ.

    ಇದಕ್ಕೂ ಮುನ್ನ ಹುಬ್ಬಳ್ಳಿಯಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು ಪಂಚಿಂಗ್ ಬ್ಯಾಗ್ ಆಗಿದ್ದಾರೆ ಎಂದು ವ್ಯಂಗ್ಯವಾಡಿದ್ರು. ರಾಜ್ಯ ಸರ್ಕಾರದ ನೇತಾರ ಯಾರು ಎಂಬುವುದು ಜನರಿಗೆ ಗೊತ್ತಾಗುತ್ತಿಲ್ಲ. ಕಾಂಗ್ರೆಸ್ ಕಿರುಕುಳದಿಂದ ಕುಮಾರಸ್ವಾಮಿ ಪಂಚಿಂಗ್ ಬ್ಯಾಗ್ ಆಗಿದ್ದಾರೆಂದು ವ್ಯಂಗ್ಯ ಮಾತುಗಳಿಂದ ಸಮ್ಮಿಶ್ರ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡರು. ಮಹಾಘಟ್‍ಬಂಧನ್ ಮೂಲಕ ರಾಜ್ಯದಲ್ಲಿ ನೀವು ಕಾಣುತ್ತಿರುವ ದುರ್ಬಲ ಸರ್ಕಾರವನ್ನು ಕೇಂದ್ರದಲ್ಲಿ ತರಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ನಿಮ್ಮ ಒಂದು ಮತ ದೇಶದ ಅಭಿವೃದ್ಧಿಯನ್ನು ನಿರ್ಧರಿಸುತ್ತದೆ. ನಮ್ಮ ಸರ್ಕಾರ ಬಂದ ಮೇಲೆ ದೊಡ್ಡ ದೊಡ್ಡ ವ್ಯಕ್ತಿಗಳು ವಿಚಾರಣೆಗೆ ಹಾಜರಾಗುತ್ತಿದ್ದಾರೆ ಎಂದು ಪರೋಕ್ಷವಾಗಿ ರಾಬರ್ಟ್ ವಾದ್ರಾ ಪ್ರಕರಣದ ಮೂಲಕ ರಾಹುಲ್ ಗಾಂಧಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹುಬ್ಬಳ್ಳಿಯಿಂದಲೇ ಪ್ರಧಾನಿ ಮೋದಿ ಪ್ರಚಾರ ಆರಂಭ: ಆರ್.ಅಶೋಕ್

    ಹುಬ್ಬಳ್ಳಿಯಿಂದಲೇ ಪ್ರಧಾನಿ ಮೋದಿ ಪ್ರಚಾರ ಆರಂಭ: ಆರ್.ಅಶೋಕ್

    – ಫೆಬ್ರವರಿ 10ಕ್ಕೆ ಹುಬ್ಬಳ್ಳಿಯಲ್ಲಿ ನಡೆಯಲಿದೆ ಬೃಹತ್ ರ‍್ಯಾಲಿ

    ಹುಬ್ಬಳ್ಳಿ: ಹುಬ್ಬಳ್ಳಿಯಿಂದಲೇ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಮೈದಾನದಲ್ಲಿ ಫೆಬ್ರವರಿ 10ರಂದು ಬೃಹತ್ ಸಮಾವೇಶ ನಡೆಯಲಿದೆ. ಧಾರವಾಡ, ಹಾವೇರಿ ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾರ್ಯಕರ್ತರು ಸೇರಿದಂತೆ ರಾಜ್ಯ ನಾಯಕರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಆದರೆ ಚುನಾವಣಾ ಕಣಕ್ಕೆ ಇಳಿಯುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಲ್ಲ. ಈ ಕುರಿತು ಪಕ್ಷದ ವರಿಷ್ಠರೇ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಮಾಹಿತಿ ನೀಡಿದರು.

    ಮೈತ್ರಿ ಸರ್ಕಾರ ವಿರುದ್ಧ ಕಿಡಿಕಾರಿದ ಆರ್.ಅಶೋಕ್ ಅವರು, ರಾಜ್ಯದಲ್ಲಿ ಅಧಿಕೃತ ಸಿಎಂ ಯಾರು? ಅನಧಿಕೃತ ಸಿಎಂ ಯಾರು? ನಾನು ಹೇಳಿರುವ ಬಜೆಟ್ ಮಂಡನೆಯಾಗುತ್ತದೆ. ನಾನು ಹೇಳಿದ ಸಂಗತಿಗಳು ಬಜೆಟ್‍ನಲ್ಲಿ ಇವೆ ಅಂತಾ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಕುಟುಕಿದರು.

    ಮೈತ್ರಿ ಸರ್ಕಾರದ ಬಜೆಟ್ ಮಂಡನೆ ಆಗುತ್ತದೆಯೋ ಅಥವಾ ಕಾಂಗ್ರೆಸ್ ಬಜೆಟ್ ಮಂಡನೆಯಾಗುತ್ತದೆಯೋ ಎಂದ ಅವರು, ನಾವು ಯಾವುದೇ ಕಾರಣಕ್ಕೂ ಇನ್ನು ಮುಂದೆ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಯಾವ ಸಮಯದಲ್ಲಿ ಬೇಕಾದ್ರೂ ಬಿಜೆಪಿ ಅಧಿಕಾರಕ್ಕೆ ಬರಬಹುದು ಎಂದು ಮೈತ್ರಿ ಸರ್ಕಾರಕ್ಕೆ ಆಪರೇಷನ್ ಕಮಲ ಆತಂಕ ಮೂಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ನಮ್ಮದು ಲಾಲಿಪಪ್ ಆದ್ರೆ, ನಿಮ್ಮದು ಬಾಂಬೆ ಮಿಠಾಯಿನಾ?: ಕೇಂದ್ರ ಬಜೆಟ್‍ಗೆ ಸಿಎಂ ವ್ಯಂಗ್ಯ

    ನಮ್ಮದು ಲಾಲಿಪಪ್ ಆದ್ರೆ, ನಿಮ್ಮದು ಬಾಂಬೆ ಮಿಠಾಯಿನಾ?: ಕೇಂದ್ರ ಬಜೆಟ್‍ಗೆ ಸಿಎಂ ವ್ಯಂಗ್ಯ

    -ತಾತ್ಕಾಲಿಕ ಖುಷಿ ಆದ್ರು ಸಿಗುತ್ತೆ ಅಂದ್ಕೊಂಡೆ, ಆದ್ರೆ ನಿರೀಕ್ಷೆ ಹುಸಿಯಾಗಿದೆ

    ಬೆಂಗಳೂರು: ಕೇಂದ್ರ ಸರ್ಕಾರ ಬಿಜೆಟ್ ಮೇಲೆ ನಾನು ಹೆಚ್ಚಿನ ನಿರೀಕ್ಷೆ ಹೊಂದಿದ್ದೆ. ಆದರೆ ಆ ನಿರೀಕ್ಷೆ ಹುಸಿಯಾಗಿದ್ದು, ನಮ್ಮ ಬಿಜೆಪಿ ನಾಯಕರು ರಾಜ್ಯಕ್ಕೆ ತಂದ ಕೊಡುಗೆ ಇದಾಗಿದೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ವ್ಯಂಗ್ಯವಾಗಿ ಟೀಕೆ ಮಾಡಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಿದಾಗ ಬಿಜೆಪಿ ನಾಯಕರು ಅದನ್ನು ಲಾಲಿಪಪ್ ಎಂದರು. ಆದರೆ ಇಂದು 6 ಸಾವಿರ ಬಗ್ಗೆ ಅವರ ಅಭಿಪ್ರಾಯವೇನು? ಬಜೆಟ್‍ನಲ್ಲಿ ತಾತ್ಕಾಲಿಕ ಖುಷಿ ಆದ್ರು ಸಿಗುತ್ತೇ ಎಂಬ ಆಸೆ ಇತ್ತು. ಆದರೆ ನನ್ನ ಮೇಲೆ ಹಾಕಿದ ಒತ್ತಡವೂ ವ್ಯಕ್ತವಾಗಿದೆ. ಏಕೆಂದರೆ ನಗರ ಉಪನಗರ ರೈಲ್ವೇಗೆ ಒಪ್ಪಿಗೆ ಸಿಗುತ್ತೇ ಎಂಬ ಆಶ್ವಾಸನೆ ನೀಡಿದ್ದರು. ಆದರೆ ಅದಕ್ಕೂ ಅನುಮತಿ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಕೇಂದ್ರ ಕಳೆದ 5 ಬಜೆಟ್‍ಗಳು ಕೂಡ ಸಾರ್ವಜನಿಕ ನಿರೀಕ್ಷೆಗೆ ಅನುಗುಣವಾಗಿ ಇರಲಿಲ್ಲ. ಈ ಬಾರಿ ಮುಂದಿನ ಚುನಾವಣೆಯಲ್ಲಿ ಮತ ಪಡೆಯಲಾದ್ರು ಜನರಿಗೆ ತಾತ್ಕಾಲಿಕ ಖುಷಿ ನೀಡವ ಯೋಜನೆ ಬರುತ್ತೆ ಎಂಬ ನಿರೀಕ್ಷೆ ಇತ್ತು. ಆದರೆ ಬಜೆಟ್ ಹಣಕಾಸು ಇಲಾಖೆ ಅವರು ಮಾಡಿದ್ದಾರೋ ಅಥವಾ ಆರ್ ಎಸ್‍ಎಸ್, ಬಿಜೆಪಿ ಕೇಂದ್ರ ಕಚೇರಿ ಅವರು ಮಾಡಿದಂತೆ ಇದೆ ಎಂದರು.

    ಕಳೆದ 5 ವರ್ಷಗಳಿಂದ ಆದಾಯ ಮಿತಿ ಹೆಚ್ಚಳ ಆಗಿರಲಿಲ್ಲ. ಅದು ಈ ವರ್ಷ ಮಾಡಿದ್ದಾರೆ ಅಷ್ಟೇ ಎಂದರು. ಅಲ್ಲದೇ ರೈತರಿಗೆ 6 ಸಾವಿರ ನೀಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಎಕರೆಗೆ 1,200 ರೂ.ಬರುತ್ತೆ, ಇದು ರೈತರಿಗೆ ತೀರಾ ಕಡಿಮೆ. ಆರು ಸಾವಿರದಿಂದ 75 ಸಾವಿರ ಕೋಟಿ ರೂ. ಖರ್ಚಾಗುತ್ತಿದೆ. ಅದರಲ್ಲಿ ಕರ್ನಾಟಕ ರೈತರಿಗೆ ಸುಮಾರು 3,579 ಕೋಟಿ ಲಾಭ ಆಗಬಹುದು ಎಂದು ಅಭಿಪ್ರಾಯ ಪಟ್ಟರು.

    ರೈತ ಮುಖಂಡರು ಹಾಗೂ ಆರ್ಥಿಕ ತಜ್ಞರು ಬಜೆಟ್ ಸರಿ ಇಲ್ಲ ಎಂದು ಹೇಳಿದ್ದಾರೆ. ನಮ್ಮ ಸರ್ಕಾರ ರೈತನಿಗೆ 48 ಸಾವಿರ ಕೋಟಿ ರೂ. ಸಾಲಮನ್ನಾ ಮಾಡುತ್ತಿದ್ದೇವೆ. ಇದರಿಂದ 44 ಲಕ್ಷ ರೈತರಿಗೆ ಸಾಲಮನ್ನಾ ಆಗುತ್ತಿದೆ. ಆದರೆ ರೈತರಿಗೆ 2% ಬಡ್ಡಿ ವಿನಾಯ್ತಿ ಎಂದು ಕೇಂದ್ರ ಕ್ರಮ ಬರಿ ಬೋಗಸ್ ಅಷ್ಟೇ. ನಮ್ಮದು ಲಾಲಿ ಪಪ್ ಅಂದರೆ ಮೋದಿ ಬಜೆಟ್ ಬೊಂಬೆ ಮಿಠಾಯಿ ಬಜೆಟ್ ಎನ್ನಬಹುದಾ? ಎಂದು ಟಾಂಗ್ ಕೊಟ್ಟರು. ಅಲ್ಲದೇ 11 ಸಾವಿರ ಕೋಟಿ ರೂ. ಮೊತ್ತದಲ್ಲಿ ರೈತರಿಗೆ ವಿದ್ಯುತ್ ಸಬ್ಸಿಡಿಯನ್ನು ರಾಜ್ಯ ಸರ್ಕಾರ ಕೊಡುತ್ತಿದೆ. ಆದರೆ ಹಾಲಿನ ಸಬ್ಸಿಡಿ 1,200 ಕೋಟಿ ರೂ. ನೀಡುತ್ತಿದ್ದೆ. ಇದನ್ನ ರಾಜ್ಯದ ಜನರು ಅರ್ಥ ಮಾಡಿಕೊಳ್ಳಬೇಕು. ಬರಗಾಲ ಇದ್ದರು ನಮ್ಮ ಸರ್ಕಾರ ರೈತರ ಪರವಾಗಿ ಕೆಲಸ ಮಾಡಿದೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ದೇಶದ ಹಬ್ಬಕ್ಕೆ ಕ್ಷಣಗಣನೆ : ಸಿಂಗಾರಗೊಂಡಿದೆ ರಾಜಪಥ್: ಈ ಬಾರಿಯ ಪರೇಡ್ ವಿಶೇಷತೆ ಏನು?

    ದೇಶದ ಹಬ್ಬಕ್ಕೆ ಕ್ಷಣಗಣನೆ : ಸಿಂಗಾರಗೊಂಡಿದೆ ರಾಜಪಥ್: ಈ ಬಾರಿಯ ಪರೇಡ್ ವಿಶೇಷತೆ ಏನು?

    ನವದೆಹಲಿ: ದೇಶದ ಹಬ್ಬ ಗಣರಾಜೋತ್ಸವ ಆಚರಣೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ದೆಹಲಿಯ ರಾಜಪಥ್ ರಸ್ತೆ ಶನಿವಾರದ ಕಾರ್ಯಕ್ರಮಕ್ಕೆ ನವವಧುವಿನಂತೆ ಸಿಂಗಾರಗೊಂಡಿದೆ.

    ಬೆಳಗ್ಗೆ ಹತ್ತು ಗಂಟೆಯಿಂದ ಅಧಿಕೃತ ಕಾರ್ಯಕ್ರಮ ಆರಂಭವಾಗಲಿದ್ದು ಅಂತಿಮ ಹಂತದ ಕೆಲಸಗಳು, ಭದ್ರತಾ ತಪಾಸಣೆ ಕಾರ್ಯ ನಡೆಯುತ್ತಿದೆ. ಬೆಳಗ್ಗೆ ಹತ್ತು ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಈ ಬಾರಿಯ ಅತಿಥಿ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸೈರಿಲ್ ರಾಮ್ಫೂಸಾ ಸಮ್ಮುಖದಲ್ಲಿ ಇಂಡಿಯಾ ಗೇಟ್ ನಲ್ಲಿರುವ ಅಮರ್ ಜವಾನ್ ಜ್ಯೋತಿ ಬಳಿ ಹುತ್ಮಾತ ಯೋಧರಿಗೆ ಗೌರವ ವಂದನೆ ಸಲ್ಲಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಧ್ವಜಾರೋಹಣ ಮಾಡಲಿದ್ದಾರೆ.

    ಬೆಳಗ್ಗೆ 10.30ರಿಂದ ಪರೇಡ್ ಗೆ ಅಧಿಕೃತ ಚಾಲನೆ ಸಿಗಲಿದ್ದು, ಮಹಾತ್ಮ ಗಾಂಧಿ 150ನೇ ಜನ್ಮ ದಿನ ಹಿನ್ನೆಲೆಯಲ್ಲಿ ಸ್ತಬ್ಧ ಚಿತ್ರಗಳ ಮೂಲಕ ವಿಶೇಷ ಗೌರವ ಸಲ್ಲಿಸಲು ತಯಾರಿ ನಡೆದಿದೆ. 17 ರಾಜ್ಯಗಳು 6 ಕೇಂದ್ರಾಡಳಿತ ಪ್ರದೇಶಗಳು ಹಾಗೂ ಕೇಂದ್ರ ಸರ್ಕಾರದ ಹಲವು ಸಚಿವಾಲಯದಿಂದ ಗಾಂಧಿಗೆ ಗೌರವ ಸಲ್ಲಿಸಲಾಗುತ್ತಿದೆ. ಇದನ್ನು ಓದಿ: ಫಸ್ಟ್ ಟೈಂ ಆರ್‌ಡಿಯಲ್ಲಿ ಪುರುಷ ದಳವನ್ನು ಮುನ್ನಡೆಸಲಿದ್ದಾರೆ ಮಹಿಳಾ ಅಧಿಕಾರಿ

    ಪ್ರತಿ ವರ್ಷದಂತೆ ಈ ಬಾರಿಯೂ ಗಣರಾಜೋತ್ಸವದ ಮೇಲೆ ಉಗ್ರರ ಕರಿನೆರಳಿದ್ದು ಜೈಶ್ ಈ ಮೊಹ್ಮದ್ ಉಗ್ರ ಸಂಘಟನೆಯ ಶಂಕಿತ ಇಬ್ಬರು ಉಗ್ರರನ್ನು ದೆಹಲಿ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ರಾಜಪಥ್ ನಿಂದ ಐದು ಕಿಮೀ ವರೆಗೂ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದ್ದು ಪಾಸ್ ಇದ್ದವರು ಮಾತ್ರ ಜನಪಥ್ ರಸ್ತೆ ಪ್ರವೇಶಿಸಬಹುದಾಗಿದೆ. ವೇದಿಕೆ ಸುತ್ತಲೂ ಮೂರು ಬಗೆಯ ಭದ್ರತೆ ಒದಗಿಲಾಗಿದ್ದು ಎಸ್ಪಿಜಿ, ಬ್ಲಾಕ್ ಕ್ಯಾಟ್ ಹಾಗೂ ಕಾರ್ಯಕ್ರಮದಲ್ಲಿ ಭಾಗಿಯಾಗುವ ಗಣ್ಯರಿಗೆ ಸ್ಪೆಷಲ್ ಪ್ರೊಟಕ್ಷನ್ ಗ್ರೂಪ್ ನಿಂದ ಭದ್ರತೆ ನೀಡಲಾಗಿದೆ.

    ಹೇಗೆ ಪರೇಡ್ ಆರಂಭಗೊಳ್ಳುತ್ತದೆ?
    ಶನಿವಾರ ಬೆಳಗ್ಗೆ 9.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಮರ್ ಜವಾನ್ ಜ್ಯೋತಿ ಬಳಿ ಆಗಮಿಸಲಿದ್ದಾರೆ. ಬಳಿಕ 9.55ಕ್ಕೆ ಕುದುರೆ ಸಾರೋಟಿನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಆಗಮಿಸಿ ಅಮರ್ ಜವಾನ್ ಜ್ಯೋತಿ ಬಳಿ ಆಗಮಿಸಿ ಯುದ್ಧದಲ್ಲಿ ಹುತ್ಮಾತರಾದ ಸೈನಿಕರಿಗೆ ಗೌರವ ವಂದನೆ ಸಲ್ಲಿಸಲಿದ್ದಾರೆ. ಇದನ್ನು ಓದಿ: ರಾಜಪಥ್ ರಸ್ತೆಯಲ್ಲಿ ಮೊದಲ ಬಾರಿ ಪ್ರತಿಧ್ವನಿಸಲಿದೆ ಕನ್ನಡದ ಹಾಡು

    ರಾಷ್ಟ್ರಪತಿಗಳು 10 ಗಂಟೆಗೆ ಪ್ರಧಾನಿ ಸಮ್ಮುಖದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. ಈ ವೇಳೆ ದೇಶದ ಭೂ, ವಾಯು ಮತ್ತು ನೌಕದಳದ ಮುಖ್ಯಸ್ಥರು ಉಪಸ್ಥಿತರಿರಲಿದ್ದಾರೆ. 10.30ಕ್ಕೆ ಅಧಿಕೃತವಾಗಿ ಪರೇಡ್‍ಗೆ ಆರಂಭವಾಗುವ ಸಾಧ್ಯತೆಯಿದೆ. ರಾಷ್ಟ್ರಪತಿ ಭವನದಿಂದ ಇಂಡಿಯಾಗೇಟ್ ವರೆಗೆ ಒಟ್ಟು ನಾಲ್ಕು ಕಿಮೀ ದೂರ ಹಾಗೂ ಮೂರು ಗಂಟೆಗಳ ಕಾಲ ಪರೇಡ್ ನಡೆಯಲಿದೆ.

    ವಿಶೇಷವಾಗಿ ಮಹಾತ್ಮ ಗಾಂಧೀಜಿ ಭೇಟಿ ಕೊಟ್ಟ ನೆನಪುಗಳನ್ನು ತೋರಿಸಲು 17 ರಾಜ್ಯಗಳು ಮತ್ತು 6 ಕೇಂದ್ರಾಡಳಿತ ಪ್ರದೇಶ ಗಾಂಧೀಜಿಗೆ ಸಂಬಂಧಿಸಿದ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲಿದೆ.

    ಪರೇಡ್ ವಿಶೇಷತೆಗಳು: ಭಾರತೀಯ ಸೇನೆಗೆ ಅವಳವಡಿಸಿಕೊಂಡಿರುವ ಅಮೇರಿಕಾದ ಎಂ777 ಎ2 ಆರ್ಟಿಲರಿ ಗನ್ ಈ ಬಾರಿ ಪರೇಡ್ ವಿಶೇಷ ಪ್ರದರ್ಶನವಾಗಿದೆ. ಅಲ್ಲದೇ ದಕ್ಷಿಣ ಕೊರಿಯಾದಿಂದ ಆಮದು ಮಾಡಿಕೊಂಡಿರುವ ಕೆ9 ವಜ್ರಾ ಆರ್ಟಿಲರಿ ಗನ್ ಕೂಡ ಪ್ರದರ್ಶನವಾಗಲಿದೆ. ಇದನ್ನು ಓದಿ: ಮೋದಿ ಜೊತೆ ಗಣರಾಜ್ಯೋತ್ಸವ ವೀಕ್ಷಿಸಲು ಬೆಂಗ್ಳೂರು ವಿದ್ಯಾರ್ಥಿನಿಗೆ ಬಂತು ಆಹ್ವಾನ

    ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆ ಸಿದ್ಧಪಡಿಸಿರುವ ಮಧ್ಯಮ ಶ್ರೇಣಿಯ ಏರ್ ಮಿಸೈಲ್, ಅರ್ಜುನಾ ಟ್ಯಾಂಕ್ ಗಳ ರಕ್ಷಣೆಗೆಂದು ನಿರ್ಮಾಣಗೊಂಡಿರುವ ಅರ್ಮರ್ಡ್ ರಿಕವರಿ ವೆಹಿಕಲ್ (ಶಸ್ತ್ರಸಜ್ಜಿತ ರಕ್ಷಣಾ ವಾಹನ) ಕೂಡಾ ಮೊದಲ ಬಾರಿಗೆ ಪ್ರದರ್ಶನ ಮಾಡಲಾಗುತ್ತಿದೆ. ಬಯೋ ಇಂಧನ ಸಾಮರ್ಥ್ಯದಿಂದ ಮೊದಲ ಬಾರಿಗೆ ಹಾರಾಟ ನಡೆಸಲಿರುವ ಎಎನ್ – 32 ವಿಮಾನ ಪರೇಡಿನ ಮತ್ತೊಂದು ವಿಶೇಷವಾಗಿದೆ.

    ನೇತಾಜಿ ಸುಭಾಸ್ ಚಂದ್ರಬೋಸ್ ಅವರ ಐಎನ್‍ಎ ದಳದಲ್ಲಿದ್ದ ನಾಲ್ವರು ಯೋಧರು ಇದೆ ಮೊದಲ ಬಾರಿಗೆ ಪರೇಡ್ ನಲ್ಲಿ ಭಾಗಿಯಾಗುತ್ತಿದ್ದು, ಭಾರತೀಯ ಸೇನೆಯ ಮೂರು ದಳಗಳಿಗಾಗಿ ಸಿದ್ಧಪಡಿಸಲಾಗಿರುವ ಶಂಖನಾದ ಹೆಸರಿನ ವಿಶೇಷ ಟ್ಯೂನ್ ಈ ವೇಳೆ ಬಳಕೆ ಮಾಡಲಾಗುತ್ತದೆ. ಮೊದಲ ಬಾರಿಗೆ ಮಹಿಳಾ ಶಕ್ತಿಯ ಪ್ರದರ್ಶನ ನಡೆಯಲಿದ್ದು, ಮೇಜರ್ ಕುಸುಬು ಕನ್ವಾಲ್ ನೇತೃತ್ವದಲ್ಲಿ ದೇಶದ ಅತಿ ಪುರಾತನ ಪ್ಯಾರಾಮಿಲಿಟರಿ ಫೋರ್ಸ್ ಅಸ್ಸಾಂ ರೈಫಲ್ಸ್ ಅನ್ನು ಮುನ್ನಡೆಸಲಿದ್ದಾರೆ. ಮೊದಲ ಬಾರಿಗೆ ಮಹಿಳಾ ಅಧಿಕಾರಿಯಾದ ಕ್ಯಾಪ್ಟನ್ ಶಿಖಾ ಸುರಭಿ ಅವರು ಸೇನೆಯ ಡೇರ್ ಡೇವಿಲ್ಸ್ ಮೋಟಾರ್ ಸೈಕಲ್ ತಂಡದಲ್ಲಿ ಪುರುಷ ಸದಸ್ಯರ ಜೊತೆ ಸೇರಿ ಪ್ರದರ್ಶನ ನೀಡಲಿದ್ದಾರೆ. ಇದನ್ನು ಓದಿ: ಪ್ರಧಾನಿ ಮೋದಿ ಆಹ್ವಾನ ಸ್ವೀಕರಿಸಿದ ದಕ್ಷಿಣ ಆಫ್ರಿಕಾ ಅಧ್ಯಕ್ಷ

    ಗಣರಾಜೋತ್ಸವದ ಮುಖ್ಯ ಅತಿಥಿಯಾಗಿ ದಕ್ಷಿಣಾ ಆಫ್ರಿಕಾ ಅಧ್ಯಕ್ಷ ಸೈರಿಲ್ ರಾಮ್ಪೂಸಾ ಆಗಮಿಸಲಿದ್ದು, ನಲ್ಸೇನ್ ಮಂಡೇಲಾ ಬಳಿಕ ದಕ್ಷಿಣ ಆಫ್ರಿಕಾದಿಂದ ಗಣರಾಜೋತ್ಸದಲ್ಲಿ ಭಾಗಿಯಾಗಿರುತ್ತಿರುವ ಎರಡನೇ ಅಧ್ಯಕ್ಷರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಧಾನಿಯಾಗಲು ಮಮತಾ ಬ್ಯಾನರ್ಜಿಗೆ ಉತ್ತಮ ಅವಕಾಶ: ಬಿಜೆಪಿ ಮುಖಂಡ

    ಪ್ರಧಾನಿಯಾಗಲು ಮಮತಾ ಬ್ಯಾನರ್ಜಿಗೆ ಉತ್ತಮ ಅವಕಾಶ: ಬಿಜೆಪಿ ಮುಖಂಡ

    ಕೋಲ್ಕತ್ತಾ: ಪ್ರಧಾನಿ ಸ್ಥಾನಕ್ಕೇರಲು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಉತ್ತಮ ಅವಕಾಶವಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

    ಮಮತಾ ಬ್ಯಾನರ್ಜಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ ದಿಲೀಪ್ ಘೋಷ್ ಅವರು, ಪ್ರಧಾನಿ ಸ್ಥಾನಕ್ಕೆ ಮಮತಾ ಬ್ಯಾನರ್ಜಿ ಅವರು ಸಮರ್ಥರಿದ್ದಾರೆ. ರಾಜ್ಯದಲ್ಲಿ ಉತ್ತಮ ಕೆಲಸ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಅವರು ಪ್ರಧಾನಿ ಸ್ಥಾನಕ್ಕೇರಿದರೆ ಪಶ್ಚಿಮ ಬಂಗಾಳದಿಂದ ಆಯ್ಕೆಯಾದ ಮೊದಲ ಪ್ರಧಾನಿ ಎನ್ನುವ ಪಟ್ಟಿಗೆ ಸೇರಲಿದ್ದಾರೆ ಎಂದು ತಿಳಿಸಿದರು.

    ಮಮತಾ ಬ್ಯಾನರ್ಜಿ ಅವರಿಗೆ ಉತ್ತಮ ಆರೋಗ್ಯ ಹಾಗೂ ಆಯಸ್ಸು ವೃದ್ಧಿಯಾಗಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ. ಏಕೆಂದರೆ ಅವರ ಗೆಲುವಿನಲ್ಲಿ ನಮ್ಮ ರಾಜ್ಯದ ಭವಿಷ್ಯ ಅಡಗಿದೆ ಎಂದರು.

    ದೀರ್ಘ ಕಾಲ ಮುಖ್ಯಮಂತ್ರಿಯಾಗಿದ್ದ ಜ್ಯೋತಿ ಬಸು ಅವರಿಗೆ ಪ್ರಧಾನಿಯಾಗುವ ಅವಕಾಶವಿತ್ತು. ಆದರೆ ಅದಕ್ಕೆ ಅವರ ಪಕ್ಷದ ನಾಯಕರು, ಮುಖಂಡರು ಅವಕಾಶ ಮಾಡಿಕೊಡಲಿಲ್ಲ. ಈಗ ಸಿಕ್ಕಿರುವ ಅವಕಾಶದಿಂದ ಮಮತಾ ಬ್ಯಾನರ್ಜಿಯವರು ವಂಚಿತರಾಗಬಾರದು ಎಂದು ಹೇಳಿದರು.

    ಪ್ರಣಬ್ ಮುಖರ್ಜಿ ಅವರು ರಾಷ್ಟ್ರಪತಿ ಸ್ಥಾನಕ್ಕೇರಿದ ರಾಜ್ಯದ ಮೊದಲಿಗರು. ಈಗ ಪಶ್ಚಿಮ ಬಂಗಾಳದ ನಾಯಕರಿಗೆ ಪ್ರಧಾನಿಯಾಗುವ ಅವಕಾಶ ಸಿಕ್ಕಿದೆ ಎಂದು ದಿಲೀಪ್ ಘೋಷ್ ಅಭಿಪ್ರಾಯಪಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸ್ಲೆಡ್ಜಿಂಗ್ ಮಾಡಿದ್ದು ನೀವೇ ಅಲ್ವಾ – ರಿಷಬ್ ಪಂತ್‍ರನ್ನ ಸ್ವಾಗತಿಸಿದ ಆಸೀಸ್ ಪ್ರಧಾನಿ

    ಸ್ಲೆಡ್ಜಿಂಗ್ ಮಾಡಿದ್ದು ನೀವೇ ಅಲ್ವಾ – ರಿಷಬ್ ಪಂತ್‍ರನ್ನ ಸ್ವಾಗತಿಸಿದ ಆಸೀಸ್ ಪ್ರಧಾನಿ

    ಸಿಡ್ನಿ: ಹೊಸ ವರ್ಷಾಚರಣೆ ಹಾಗೂ ಸಿಡ್ನಿ ಟೆಸ್ಟ್ ಅಂಗವಾಗಿ ಟೀಂ ಇಂಡಿಯಾ ಆಟಗಾರರಿಗೆ ಆಸ್ಟ್ರೇಲಿಯಾ ಪ್ರಧಾನಿಗಳ ಸರ್ಕಾರಿ ನಿವಾಸದಲ್ಲಿ ಭೇಟಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ವೇಳೆ ಆಸೀಸ್ ಪ್ರಧಾನಿ ಸ್ಕಾಟ್ ಮಾರಿಸನ್ ಟೀಂ ಇಂಡಿಯಾ ಯುವ ಆಟಗಾರ ರಿಷಬ್ ಪಂತ್‍ರನ್ನು ಅಚ್ಚರಿ ರೀತಿಯಲ್ಲಿ ಸ್ವಾಗತಿಸಿ ಮಾತನಾಡಿದ್ದಾರೆ.

    ಆಸ್ಟ್ರೇಲಿಯಾ ಆಟಗಾರರು ಸೇರಿದಂತೆ ಟೀಂ ಇಂಡಿಯಾದ ಎಲ್ಲಾ ಆಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಟೀಂ ಇಂಡಿಯಾದ ಆಟಗಾರನ್ನು ಆಸೀಸ್ ಪ್ರಧಾನಿಗಳಿಗೆ ಪರಿಚಯ ಮಾಡಿಕೊಡಲಾಗುತ್ತಿತ್ತು. ಅಂತೆಯೇ ತಂಡದ ಮ್ಯಾನೇಜರ್ ಸುನಿಲ್ ಸುಭ್ರಮಣ್ಯಂ ಅವರು ರಿಷಬ್ ಪಂತ್ ಅವರನ್ನು ಪ್ರಧಾನಿಗೆ ಪರಿಚಯಿಸಿದ್ದರು.

    https://twitter.com/nibraz88cricket/status/1080404697461084161

    ರಿಷಬ್ ಪಂತ್ ಹೆಸರು ಕೇಳುತ್ತಿದಂತೆ ಅಚ್ಚರಿಗೊಂಡವರಂತೆ ಕಂಡ ಪ್ರಧಾನಿಗಳು, ನೀವೇ ಅಲ್ವಾ ಸ್ಲೆಡ್ಜಿಂಗ್ ಮಾಡಿದ್ದು ಎಂದು ಪ್ರಶ್ನಿಸಿದರು. ಈ ವೇಳೆ ರಿಷಬ್ ಪ್ರಧಾನಿಗಳತ್ತ ನಗೆ ಬೀರಿದ್ದರು. ಬಳಿಕ ಮಾತನಾಡಿದ ಪ್ರಧಾನಿಗಳು, ರಿಷಬ್ ಅವರಿಗೆ ಸ್ವಾಗತ ಕೋರಿ ನಿಮ್ಮಂತ ಸ್ಪರ್ಧಾತ್ಮಕ ಆಟವನ್ನು ಇಷ್ಟಪಡುತ್ತೇವೆ ಎಂದು ಸಂತಸ ವ್ಯಕ್ತಪಡಿಸಿದರು.

    ಬಾಕ್ಸಿಂಗ್ ಡೇ ಕ್ರಿಕೆಟ್ ಪಂದ್ಯದ ವೇಳೆ ಆಸೀಸ್ ನಾಯಕ ಟಿಮ್ ಪೈನೆ ಹಾಗೂ ರಿಷಬ್ ಪಂತ್ ಪರಸ್ಪರ ಸ್ಲೆಡ್ಜಿಂಜ್ ನಡೆಸಿ ಕಾಲೆಳೆದುಕೊಂಡಿದ್ದರು. ಮೊದಲು ಆಸೀಸ್ ವಿರುದ್ಧ ಕ್ರಿಕೆಟ್ ಪಂದ್ಯಕ್ಕೆ ಧೋನಿ ಕಮ್ ಬ್ಯಾಕ್ ಮಾಡಿದ್ದನ್ನೇ ಆಸ್ತ್ರವಾಗಿಕೊಂಡಿದ್ದ ಪೈನೆ, ಬಿಗ್ ಬ್ಯಾಶ್ ಟೂರ್ನಿ ಆಡುವಂತೆ ಆಹ್ವಾನ ನೀಡಿದ್ದರು. ಅಲ್ಲದೇ ತಾನು ಪತ್ನಿಯೊಂದಿಗೆ ಸಿನಿಮಾ ಹೋದ ವೇಳೆ ಮಕ್ಕಳನ್ನು ನೋಡಿಕೊಂಡಿರು ಎಂದರು ಕಾಲೆಳೆದಿದ್ದರು. ಬಳಿಕ ಇದಕ್ಕೆ ಟಾಂಗ್ ನೀಡಿದ್ದ ರಿಷಬ್ ಪಂತ್, ಪೈನೆರನ್ನು ತಾತ್ಕಾಲಿಕ ನಾಯಕ ಎಂದು ಕರೆದು ತಿರುಗೇಟು ನೀಡಿದ್ದರು.

    ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಸಿಡ್ನಿ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಐತಿಹಾಸ ದಾಖಲೆ ನಿರ್ಮಾಣ ಮಾಡುವ ವಿಶ್ವಾಸದಲ್ಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv