ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಗುರುವಾರ) ಪಂಜಾಬ್ನ ಹೋಶಿಯಾರ್ಪುರದಲ್ಲಿ ಚುನಾವಣಾ ಭಾಷಣದೊಂದಿಗೆ ಲೋಕಸಭಾ ಚುನಾವಣೆಯ ಪ್ರಚಾರವನ್ನು ಕೊನೆಗೊಳಿಸಿದರು.
ಪ್ರಧಾನಿಯವರು ಈಗ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಸ್ಮಾರಕದಲ್ಲಿ (Vivekananda Rock Memorial) ಇಂದಿನಿಂದ ಜೂನ್ 1 ರವರೆಗೆ ಅಂದರೆ ಎರಡು ದಿನಗಳ ಕಾಲ (45 ಗಂಟೆಗಳ) ಧ್ಯಾನ ಮಾಡಲಿದ್ದಾರೆ.
Tamil Nadu | Prime Minister Narendra Modi arrived at Vivekananda Rock Memorial in Kanyakumari
He will meditate from 30th May evening to 1st June evening.
PM Modi will meditate day and night at the same place where Swami Vivekanand did meditation, at the Dhyan Mandapam. pic.twitter.com/OhCFgb3bPG
ಮಾರ್ಚ್ 16 ರಂದು ಚುನಾವಣಾ ಆಯೋಗವು (EC) ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದಾಗಿನಿಂದ ಇಂದಿನವರೆಗೆ ಪ್ರಧಾನಿಯವರು ಒಟ್ಟು 206 ಸಾರ್ವಜನಿಕ ಸಭೆಗಳು ಮತ್ತು ರೋಡ್ ಶೋಗಳನ್ನು ನಡೆಸಿದ್ದಾರೆ. ಅಲ್ಲದೇ ಒಟ್ಟು 80 ಸಂದರ್ಶನಗಳನ್ನು ನೀಡಿದ್ದಾರೆ. ಮತದಾನ ಆರಂಭವಾದಾಗಿನಿಂದ ಸರಾಸರಿ ದಿನಕ್ಕೆ ಒಂದಕ್ಕಿಂತ ಹೆಚ್ಚು ಸಂದರ್ಶನಗಳನ್ನು ನೀಡಿದ್ದಾರೆ. ಇದನ್ನೂ ಓದಿ: ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನ; 33 ವರ್ಷಗಳ ಹಿಂದಿನ ಫೋಟೊ ವೈರಲ್
2019 ರ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿಯವರು ಸುಮಾರು 145 ರ್ಯಾಲಿಗಳಲ್ಲಿ ಭಾಗವಹಿಸಿದ್ದರು. ಹೀಗಾಗಿ ಕಳೆದ ಬಾರಿಗಿಂತ ಈ ಬಾರಿ ಅವರು ಹೆಚ್ಚು ಚುನಾವಣಾ ಪ್ರಚಾರ ಹಾಗೂ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಐದು ವರ್ಷಗಳ ಹಿಂದೆ ನಡೆದ ಚುನಾವಣೆಯಲ್ಲಿ ಪ್ರಚಾರದ ಅವಧಿ 68 ದಿನಗಳಿದ್ದರೆ, ಈ ಬಾರಿ 76 ದಿನಗಳು ಇದ್ದವು.
ಚುನಾವಣೆಯಲ್ಲಿ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಬಿಜೆಪಿ ತನ್ನ ಸ್ಥಾನವನ್ನು ಬಲಪಡಿಸಲು ಪ್ರಯತ್ನಿಸುತ್ತಿದೆ. ಈ ಮೂರು ರಾಜ್ಯಗಳಲ್ಲಿ 2019 ರ ಚುನಾವಣೆಯಲ್ಲಿ ಬಿಜೆಪಿ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದಲ್ಲಿ ತನ್ನ ಬಲವನ್ನು ಉಳಿಸಿಕೊಳ್ಳಲು ಮತ್ತು ತೆಲಂಗಾಣದಲ್ಲಿ ತನ್ನ ಬಲವನ್ನು ಹೆಚ್ಚಿಸಿಕೊಳ್ಳಲು ಪಕ್ಷವು ಪ್ರಯತ್ನಿಸುತ್ತಿದೆ. 2019 ರಲ್ಲಿ ಕರ್ನಾಟಕದಲ್ಲಿ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದ್ದರೆ, ತೆಲಂಗಾಣದಲ್ಲಿ ನಾಲ್ಕು ಸ್ಥಾನಗಳಲ್ಲಿ ಗೆಲುವು ಕಂಡಿತ್ತು.
ಬೆಂಗಳೂರು: ಪ್ರಧಾನಿ (Prime Minister) ಹುದ್ದೆಗೆ ಕರ್ನಾಟಕದಿಂದ ಯಾರೂ ಅಭ್ಯರ್ಥಿ ಇಲ್ಲವೆಂದು ನಾನು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು (Siddaramaiah) ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾ ಸಂವಾದದ ವೇಳೆ, ಪತ್ರಕರ್ತರೊಬ್ಬರು ಪ್ರಧಾನಿ ಹುದ್ದೆಗೆ ನೀವು ಕರ್ನಾಟಕದಿಂದ ಅಭ್ಯರ್ಥಿ ಆಗುತ್ತೀರಾ ಎಂದು ಪ್ರಶ್ನಿಸಿದರು. ಈ ವೇಳೆ ಕರ್ನಾಟಕದಿಂದ ನಾನು ಪ್ರಧಾನಿ ಅಭ್ಯರ್ಥಿ ಅಲ್ಲ. ಆಗುವುದೂ ಇಲ್ಲ ಎಂದು ಹೇಳಿದ್ದೆ. ಆದರೆ ಕೆಲ ಮಾಧ್ಯಮಗಳಲ್ಲಿ ಪ್ರಧಾನಿ ಹುದ್ದೆಗೆ ಕರ್ನಾಟಕದಿಂದ ಯಾರೂ ಅಭ್ಯರ್ಥಿ ಇಲ್ಲವೆಂದು ಹೇಳಿದ್ದಾಗಿ ತಪ್ಪಾಗಿ ವರದಿಯಾಗಿದೆ ಎಂದರು. ಇದನ್ನೂ ಓದಿ: ಸಂಕಷ್ಟ ನಿವಾರಣೆಗಾಗಿ ಗಾಣಗಾಪುರದ ದತ್ತನ ಮೊರೆ ಹೋದ ರೇವಣ್ಣ
ನವದೆಹಲಿ: 2047 ಗಮನದಲ್ಲಿಟ್ಟುಕೊಂಡು ಇನ್ನಷ್ಟು ಕೆಲಸ ಮಾಡುವುದು ಬಾಕಿ ಇದೆ. 2024 ಚುನಾವಣೆ ಬೇರೆ, 2047 ಬೇರೆ. 2047 ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 100 ವರ್ಷವಾಗಲಿದೆ. ಈ ಅವಧಿಗೆ ಮಾಡಬೇಕಾದ ಕೆಲಸಗಳ ಗುರಿ ಇರಬೇಕು ಎಂದು ಹೇಳುತ್ತಾ ಮುಂದಿನ 25 ವರ್ಷಕ್ಕೆ ತಯಾರಿಯ ಬಗ್ಗೆ ಪ್ರಧಾನಿ ಮೋದಿ (Narendra Modi) ಮಾತನಾಡಿದರು.
ಖಾಸಗಿ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೆಚ್ಚಿನ ಸರ್ಕಾರಗಳು ಎಲ್ಲವನ್ನು ಮಾಡಿದೆ ಎಂದುಕೊಳ್ಳುತ್ತವೆ. ಆದರೆ ನಾನು ಹಾಗೇ ಅಂದುಕೊಳ್ಳುವುದಿಲ್ಲ. ನಾನು ಮಾಡುವುದು ಇನ್ನು ಬಾಕಿ ಇದೆ. ಬಹಳಷ್ಟು ಕುಟುಂಬಗಳ ಕನಸು ನನಸು ಮಾಡಬೇಕಿದೆ. ನಾನು ಸಿಎಂ ಆಗಿದ್ದಾಗ ಚುನಾವಣೆಯಿಂದ ಸಮಸ್ಯೆಯಾಗುತ್ತಿತ್ತು. ಹಿರಿಯ ಅಧಿಕಾರಿಗಳು ಬೇರೆ ರಾಜ್ಯಗಳಿಗೂ ಚುನಾವಣಾ ಕರ್ತವ್ಯಕ್ಕೆ ಹೋಗುತ್ತಿದ್ದರು. ಇದರಿಂದ ನನ್ನ ಕೆಲಸಕ್ಕೆ ತೊಂದರೆಯಾಗುತ್ತಿತ್ತು. ಹೀಗಾಗಿ ನಾನು ಚುನಾವಣೆಗೂ ಮುನ್ನ ನೂರು ದಿನಗಳ ತಯಾರಿ ಮಾಡುತ್ತಿದ್ದೆ ಎಂದು ಹೇಳಿದರು.
ಈಗ ಮುಂದಿನ 25 ವರ್ಷಕ್ಕೆ ನಾನು ತಯಾರಿ ಮಾಡಿಕೊಂಡಿದ್ದೇನೆ. ವಲಯವಾರು ವಿಶೇಷ ತಂಡಗಳನ್ನು ರಚಿಸಿದ್ದೇನೆ. ಜನರಿಂದ ಸಲಹೆ ಪಡೆದುಕೊಂಡಿದ್ದೇನೆ. 15-20 ಲಕ್ಷ ಜನರು ಸಲಹೆ ನೀಡಿದ್ದಾರೆ, ಇದನ್ನು ಡಾಕ್ಯುಮೆಂಟ್ ಮಾಡಿದ್ದೇನೆ. ಚುನಾವಣೆ ಬಳಿಕ ಕೆಲಸ ಶುರು ಮಾಡಲಿದ್ದೇನೆ. ಎಲ್ಲ ರಾಜ್ಯಗಳಲ್ಲಿ ಆಗಬೇಕಿರುವ ಕೆಲಸ ಮಾಡಬೇಕು. ಬಿಜೆಪಿ ಪ್ರಣಾಳಿಕೆ (BJP Manifesto), 25 ವರ್ಷದ ಮಿಷನ್. ಮುಂದಿನ ಐದು ವರ್ಷದ ಕೆಲಸಗಳನ್ನು ವಿಭಾಗಿಸುತ್ತೇನೆ ಎಂದರು.
#WATCH | On his ‘Vision 2047 ‘ for the country, PM Modi says, “This is not just Modi's vision, the ownership of this vision belongs to the whole country…I don’t want to waste even a minute…" pic.twitter.com/Jih70EEwuF
ಚುನಾವಣೆಯನ್ನು ಲಘುವಾಗಿ ಸ್ವೀಕರಿಸಬಾರದು. ಇದು ಪ್ರಜಾಪ್ರಭುತ್ವ ಉತ್ಸವ. ಚುನಾವಣೆಯಲ್ಲಿ ನಾನು ಮಾತ್ರ ಅಲ್ಲ ಪ್ರತಿಯೊಬ್ಬ ಮತದಾರ, ಬೂತ್ ಕಾರ್ಯಕರ್ತ, ಅಭ್ಯರ್ಥಿಯೂ ಮುಖ್ಯ. ಒಬ್ಬರು ಇಲ್ಲದಿದ್ದರೂ ಚುನಾವಣೆ ನಡೆಯಲ್ಲ ಎಂದು ಮೋದಿ ಹೇಳಿದರು.
ಕಳೆದ ಬಾರಿ ಅಧಿಕಾರ ಬಂದ ನೂರು ದಿನದಲ್ಲಿ 370 ರದ್ದು ಮಾಡಿತು. ತ್ರಿವಳಿ ತಲಾಕ್ ರದ್ದು ಮಾಡಲಾಯಿತು. ಬ್ಯಾಂಕ್ ಗಳ ಮರ್ಜ್ ಮಾಡಲಾಯಿತು. ಒಂದು ರಾಷ್ಟ್ರ ಒಂದು ಚುನಾವಣೆ ನಮ್ಮ ಬದ್ಧತೆ. ದೇಶದಲ್ಲಿ ಇದರ ಪರವಾಗಿ ಅನೇಕ ಜನರು ಮುಂದೆ ಬಂದಿದ್ದಾರೆ. ಅನೇಕ ಜನರು ತಮ್ಮ ಸಲಹೆಗಳನ್ನು ಸಮಿತಿಗೆ ನೀಡಿದ್ದಾರೆ. ಈ ವರದಿಯನ್ನು ಕಾರ್ಯಗತಗೊಳಿಸಲು ಸಮರ್ಥರಾದರೆ ದೇಶಕ್ಕೆ ಸಾಕಷ್ಟು ಪ್ರಯೋಜನವಾಗಲಿದೆ ಎಂದರು.
ನವದೆಹಲಿ: ಇಷ್ಟು ದಿನ ಕುರ್ತಾ, ಪೈಜಾಮಾದಲ್ಲಿ ಹೆಚ್ಚಾಗಿ ಕಾಣಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇದೀಗ ದಕ್ಷಿಣ ಭಾರತದ ಉಡುಗೆ ಪಂಚೆಯಲ್ಲಿ (Lungi) ಮಿಂಚಿದ್ದಾರೆ.
ಹೌದು. ಮೋದಿಯವರು ಸದ್ಯ ಪಂಚೆ ಧರಿಸುವ ಮೂಲಕ ಎಲ್ಲರ ಗಮನಸೆಳೆದಿದ್ದಾರೆ. ದೆಹಲಿಯ ರಾಜ್ಯ ಸಚಿವ ಎಲ್ ಮುರುಗನ್ (L Murugan) ಅವರ ನಿವಾಸದಲ್ಲಿನಡೆದ ಪೊಂಗಲ್ ಆಚರಣೆಯಲ್ಲಿ ಭಾಗವಹಿಸಲು ಪ್ರಧಾನಿಯವರು ದಕ್ಷಿಣ ಭಾರತದ ಪಂಚೆಯನ್ನು ಧರಿಸಿದ್ದರು. ಸದ್ಯ ನರೇಂದ್ರ ಮೋದಿಯವರು ಪೊಂಗಲ್ (Pongal) ಆಚರಣೆಯ ವಿಧಿ-ವಿಧಾನಗಳನ್ನು ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
#WATCH | Prime Minister Narendra Modi takes part in the #Pongal celebrations at the residence of MoS L Murugan in Delhi.
Puducherry Lt Governor and Telangana Governor Tamilisai Soundararajan also present here. pic.twitter.com/rmXtsKG0Vw
ವೀಡಿಯೋದಲ್ಲಿ ಏನಿದೆ..?: ಪ್ರಧಾನಿ ಎಡ ಭುಜದ ಮೇಲೆ ಶಾಲು ಹೊದ್ದು, ಕಪ್ಪು ಕೋಟ್ ಜೊತೆಗೆ ಬಿಳಿ ಪಂಚೆ ಧರಿಸಿರುವುದನ್ನು ವೀಡಿಯೋದಲ್ಲಿ ಕಾಣಬಹುದು. ಅಲ್ಲದೆ ಒಲೆಯ ಮೇಲಿದ್ದ ಪಾತ್ರೆಗೆ ಏನೋ ಹಾಕುತ್ತಿರುವುದನ್ನು ಕೂಡ ಗಮನಿಸಬಹುದು. ಇದಾದ ಬಳಿಕ ಮಂಟಪದೊಳಗೆ ನಿಂತಿರುವ ಹಸುವಿನ ಕಡೆಗೆ ಹೋಗುತ್ತಾರೆ. ಹಸುವಿನ ಮೇಲೆ ಹೂವು ಹಾಕಿ ಅದಕ್ಕೆ ತಿನ್ನಿಸುವುದನ್ನು ಕೂಡ ವೀಡಿಯೋದಲ್ಲಿ ಕಾಣಬಹುದಾಗಿದೆ. ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿಯವರು ಸಮಸ್ತ ಜನತೆಗೆ ಪೊಂಗಲ್ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಇದೇ ವೇಳೆ ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಮತ್ತು ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರು ಸಹ MoS ಮುರುಗನ್ ಅವರ ನಿವಾಸದಲ್ಲಿ ಉಪಸ್ಥಿತರಿದ್ದರು.
ಒಟ್ಟಿನಲ್ಲಿ ಪ್ರಧಾನಿ ಪಂಚೆ ಧರಿಸಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುತ್ತಿರುವುದನ್ನು ಸ್ಥಳದಲ್ಲಿದ್ದವರು ತಮ್ಮ ಮೊಬೈಲ್ಗಳಲ್ಲಿ ಚಿತ್ರೀಕರಿಸಿದ್ದು, ಬಳಿಕ ಅದನ್ನು ಸೋಶಿಯಲ್ ಮೀಡಿಯಾಕ್ಕೆ ಹರಿಯಲು ಬಿಟ್ಟಿದ್ದಾರೆ.
ಬಳ್ಳಾರಿ: ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರಧಾನಿಯಾಗೋದಾದ್ರೆ (Prime Minister) ನೂರಕ್ಕೆ ನೂರರಷ್ಟು ಬೆಂಬಲಿಸುತ್ತೇವೆ ಎನ್ನುವ ಮೂಲಕ ಖರ್ಗೆ ಪರ ಸಚಿವ ಬಿ. ನಾಗೇಂದ್ರ (B Nagendra) ಬ್ಯಾಟಿಂಗ್ ಮಾಡಿದ್ದಾರೆ.
ಬಳ್ಳಾರಿಯಲ್ಲಿ (Ballari) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಲಿತ ಮುಖ್ಯಮಂತ್ರಿ ಮಾಡೋದು, ದಲಿತ ಪ್ರಧಾನಿ ಮಾಡೋದು ಇಂಡಿಯಾ ಒಕ್ಕೂಟದ ಉದ್ದೇಶ. ಹೀಗಾಗಿ ಒಕ್ಕೂಟದಿಂದ ಖರ್ಗೆ ಅವರ ಹೆಸರನ್ನು ಮಮತಾ ಬ್ಯಾನರ್ಜಿ ಪ್ರಸ್ತಾಪ ಮಾಡಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂದು ಹೇಳಿದ್ದಾರೆ. ಅದು ಅವರ ಅಭಿಪ್ರಾಯ. ಸ್ವಇಚ್ಛೆಯಿಂದ ಸಿದ್ದರಾಮಯ್ಯ ಅವರು ಹಾಗೆ ಹೇಳಿರಬಹುದು. ಅದು ಅವರ ಇಚ್ಛೆ ಎಂದರು. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಗೆ ಕೈ ನಾಯಕರು ಬರುತ್ತಾರೆಂಬ ವಿಶ್ವಾಸವಿದೆ: ಶೋಭಾ ಕರಂದ್ಲಾಜೆ
ನನಗೂ ಖರ್ಗೆ ಪ್ರಧಾನಿ ಆಗಬೇಕೆಂದಿದೆ. ಅದರ ಜೊತೆಗೆ ಯುವಕರ ಕಣ್ಮಣಿಯಾಗಿರೋ ರಾಹುಲ್ ಗಾಂಧಿ ಕೂಡಾ ಪ್ರಧಾನಿಯಾಗಬೇಕು ಎನ್ನುವುದು ಇದೆ. ಭಾರತ ಜೋಡೋ ಯಾತ್ರೆಯಲ್ಲಿ ಏಳು ಸಾವಿರ ಕಿ.ಮೀ ಪಾದಯಾತ್ರೆ ಮಾಡಿ ಜನಮನ ಗೆದ್ದಿದ್ದಾರೆ. ಇಂಡಿಯಾ ಒಕ್ಕೂಟದ ವ್ಯವಸ್ಥೆಯಲ್ಲಿ ಬೇರೆ ಬೇರೆ ಅಂಗಪಕ್ಷದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಬೇಕು. ಮಮತಾ ಬ್ಯಾನರ್ಜಿ, ಕೇಜ್ರಿವಾಲ್ ಕೂಡ ಖರ್ಗೆಯನ್ನು ಬೆಂಬಲಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಏರ್ಪೋರ್ಟ್ನಂತೆ ವಾಲ್ಮೀಕಿ ಮಂದಿರ ಸಹ ಆಗ್ಬೇಕು: ಸತೀಶ್ ಜಾರಕಿಹೊಳಿ
ಕಾಂಗ್ರೆಸ್ನವರು ಬೆಂಬಲಿಸುತ್ತಿಲ್ಲ ಎನ್ನುವ ಪ್ರಶ್ನೆಗೆ ನಗುನಗುತ್ತಲೇ ಉತ್ತರಿಸಿದ ಅವರು, ನಮ್ಮವರ ಹೆಸರು ನಾವೇ ಹೇಳಬಾರದಲ್ವಾ? ಹೀಗಾಗಿ ಕಾಂಗ್ರೆಸ್ನವರು ಅಭ್ಯರ್ಥಿ ಹೆಸರು ಹೇಳಿಲ್ಲ. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಇನ್ನು ಒಕ್ಕೂಟದ ವ್ಯವಸ್ಥೆಯಲ್ಲಿ ಬೇರೆಯವರು ನಮ್ಮ ಪಕ್ಷದ ಹೆಸರು ಹೇಳಬಹುದು. ನಾವು ಹೇಳಲು ಆಗಲ್ಲ. ಕಾಂಗ್ರೆಸ್ನಲ್ಲಿ ಒಂದು ವ್ಯವಸ್ಥೆ ಇದೆ. ಪಾರ್ಲಿಮೆಂಟ್ ಚುನಾವಣೆ ಬಳಿಕ ಪಾರ್ಟಿ ಚೌಕಟ್ಟಿನಲ್ಲಿ ನಡೆಯುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಮುಸ್ಲಿಂ, ಕ್ರೈಸ್ತ ಸಮುದಾಯಗಳಿಂದ ಕೇರಳದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಮೇಲೆ ಶೋಷಣೆ: ಪ್ರಮೋದ್ ಮುತಾಲಿಕ್
ಪಾಕಿಸ್ತಾನದ (Pakistan) 76 ವರ್ಷಗಳ ಇತಿಹಾಸದಲ್ಲಿ ಇಲ್ಲಿಯವರೆಗೆ ಯಾವೊಬ್ಬ ಪ್ರಧಾನಿಯೂ (Prime Minister) 5 ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿಲ್ಲ. ಕಳೆದ ವರ್ಷ ಅವಿಶ್ವಾಸ ನಿರ್ಣಯದಲ್ಲಿ ಇಮ್ರಾನ್ ಖಾನ್ (Imran Khan) ಅವರನ್ನು ಪದಚ್ಯುತಿಗೊಳಿಸಿದ ಬಳಿಕ ಶೆಹಬಾಜ್ ಷರೀಫ್ (Shehbaz Sharif) ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರ ಏರಿದ್ದರು.
ಇತ್ತೀಚೆಗಷ್ಟೇ ಷರೀಫ್ ಸರ್ಕಾರದ ಸಂಸತ್ತನ್ನು ಅವಧಿ ಪೂರ್ಣಗೊಳ್ಳುವ ಮೊದಲೇ ವಿಸರ್ಜಿಸಲಾಯಿತು. ಈ ಹಿನ್ನೆಲೆ ಇನ್ನು 3 ತಿಂಗಳ ಒಳಗಾಗಿ ಪಾಕಿಸ್ತಾನದಲ್ಲಿ ಹೊಸ ಚುನಾವಣೆ ನಡೆಯಲಿದೆ.
ಪಾಕಿಸ್ತಾನದ ಇತಿಹಾಸದಲ್ಲಿ 1947ರಿಂದ ಇಲ್ಲಿವರೆಗೆ ಒಟ್ಟು 23 ಜನರು ಪ್ರಧಾನಿಯಾಗಿ ಪಟ್ಟ ಅಲಂಕರಿಸಿದ್ದಾರೆ. ಅವರಲ್ಲಿ ಬರೋಬ್ಬರಿ 18 ಸಂದರ್ಭಗಳಲ್ಲಿ ಭ್ರಷ್ಟಾಚಾರ ಆರೋಪಗಳಲ್ಲಿ, ಮಿಲಿಟರಿ ದಂಗೆ ಹಾಗೂ ಆಡಳಿತ ಗುಂಪುಗಳಲ್ಲಿನ ಆಂತರಿಕ ಕಲಹದಿಂದಾಗಿ ಬಲವಂತವಾಗಿ ರಾಜೀನಾಮೆ ನೀಡಿರುವುದು ಸೇರಿದಂತೆ ವಿವಿಧ ಕಾರಣಗಳು ಇವೆ. ಪಾಕ್ ಇತಿಹಾಸದಲ್ಲಿ ಒಬ್ಬ ಪ್ರಧಾನಿಯ ಹತ್ಯೆಯೂ ನಡೆದಿದೆ.
ಒಬ್ಬ ಪ್ರಧಾನಿ ಅಧಿಕಾರಾವಧಿಗೂ ಮುನ್ನ ರಾಜೀನಾಮೆ ನೀಡಿದ್ದಲ್ಲಿ ಅವರ ಸ್ಥಾನವನ್ನು ತುಂಬಲು ಸೀಮಿತಾವಧಿಗೆ ಉಸ್ತುವಾರಿಗಳನ್ನು ನೇಮಿಸಲಾಗುತ್ತದೆ. ಇಲ್ಲಿಯವರೆಗೆ ಪಾಕಿಸ್ತಾನದಲ್ಲಿ ಅತ್ಯಂತ ಹೆಚ್ಚಿನ ಕಾಲ ಅಧಿಕಾರ ವಹಿಸಿಕೊಂಡಿದ್ದ ಪ್ರಧಾನಿಯ ಅವಧಿ 4 ವರ್ಷ, 2 ತಿಂಗಳಾಗಿದ್ದು, ಅದೇ ರೀತಿ ಅತ್ಯಂತ ಅಲ್ಪ ಅವಧಿಗೆ ಅಧಿಕಾರದಿಂದಿಳಿದ ಪ್ರಧಾನಿಯ ಅವಧಿ ಕೇವಲ 2 ವಾರವಾಗಿದೆ.
ಮಿಯಾನ್ ಮುಹಮ್ಮದ್ ನವಾಜ್ ಷರೀಫ್ ಪಾಕಿಸ್ತಾನದ ಇತಿಹಾಸದಲ್ಲಿ ಅತಿ ಹೆಚ್ಚು ಎಂದರೆ 3 ಬಾರಿ ಪ್ರಧಾನಿಯಾಗಿ ಆಯ್ಕೆಯಾಗಿದ್ದರು. 1947ರ ಬಳಿಕ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದವರ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ. ಹಂಗಾಮಿ ಪ್ರಧಾನಿಯಾಗಿ ಆಯ್ಕೆಯಾದವರನ್ನು ಅಥವಾ ಇನ್ನೊಬ್ಬ ಪ್ರಧಾನಮಂತ್ರಿಯ ಅವಧಿಯನ್ನು ಪೂರ್ಣಗೊಳಿಸಿರುವವರನ್ನು ಇಲ್ಲಿ ಸೇರಿಸಲಾಗಿಲ್ಲ.
* ಲಿಯಾಕತ್ ಅಲಿ ಖಾನ್: ಪಾಕಿಸ್ತಾನದ ಮೊದಲ ಪ್ರಧಾನಿಯಾದ ಇವರು 1947ರ ಆಗಸ್ಟ್ನಲ್ಲಿ ಅಧಿಕಾರ ಸ್ವೀಕರಿಸಿದರು. 1951ರ ಅಕ್ಟೋಬರ್ 16ರಂದು ಅವರು ರಾಜಕೀಯಕ್ಕೆ ಸಂಬಂಧಿಸಿದ ರ್ಯಾಲಿಯಲ್ಲಿ ಹತ್ಯೆಯಾದರು. ಇವರ ಅಧಿಕಾರಾವಧಿ 4 ವರ್ಷ 2 ತಿಂಗಳು.
* ಖವಾಜಾ ನಾಜಿಮುದ್ದೀನ್: 1951ರ ಅಕ್ಟೋಬರ್ 17ಕ್ಕೆ ಅಧಿಕಾರ ವಹಿಸಿಕೊಂಡ ಇವರು 1953 ಏಪ್ರಿಲ್ 17ರಂದು ದೇಶದ ಗವರ್ನರ್ ಜನರಲ್, ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯಿಂದ ಪಡೆದ ಪ್ರಬಲ ಸ್ಥಾನ ಹಾಗೂ ಧಾರ್ಮಿಕ ಗಲಭೆಗಳನ್ನು ತಪ್ಪಾಗಿ ನಿರ್ವಹಿಸಿದ ಆರೋಪದ ಮೇಲೆ ವಜಾಗೊಳಿಸಲಾಯಿತು. ಇವರ ಅಧಿಕಾರಾವಧಿ 1 ವರ್ಷ, 6 ತಿಂಗಳು.
* ಮಹಮ್ಮದ್ ಅಲಿ ಬೋಗ್ರಾ: ಇವರು 1953ರ ಏಪ್ರಿಲ್ 17ರಂದು ಅಧಿಕಾರ ವಹಿಸಿಕೊಂಡರು. 1955ರ ಆಗಸ್ಟ್ 11 ರಂದು ಪಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇವರ ಅಧಿಕಾರಾವಧಿ 2 ವರ್ಷ, 3 ತಿಂಗಳು.
* ಚೌಧರಿ ಮೊಹಮ್ಮದ್ ಅಲಿ: 1955ರ ಆಗಸ್ಟ್ನಲ್ಲಿ ಅಧಿಕಾರ ವಹಿಸಿಕೊಂಡ ಇವರು ಆಡಳಿತ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯದಿಂದ 1956ರ ಸೆಪ್ಟೆಂಬರ್ 12ರಂದು ಉಚ್ಚಾಟಿಸಲಾಯಿತು. ಇವರ ಅಧಿಕಾರಾವಧಿ 1 ವರ್ಷ, 1 ತಿಂಗಳು.
* ಹುಸೇನ್ ಶಹೀದ್ ಸುಹ್ರವರ್ದಿ: ಇವರು 1956ರ ಸೆಪ್ಟೆಂಬರ್ 12ರಂದು ಅಧಿಕಾರ ವಹಿಸಿಕೊಂಡರು. ಇತರ ಶಕ್ತಿ ಕೇಂದ್ರಗಳೊಂದಿಗೆ ಭಿನ್ನಾಭಿಪ್ರಾಯದಿಂದಾಗಿ 1957ರ ಅಕ್ಟೋಬರ್ 18ರಂದು ಇವರನ್ನು ಬಲವಂತವಾಗಿ ಅಧಿಕಾರದಿಂದ ಇಳಿಸಲಾಯಿತು. ಇವರ ಅಧಿಕಾರಾವಧಿ 1 ವರ್ಷ 1 ತಿಂಗಳು.
* ಇಬ್ರಾಹಿಂ ಇಸ್ಮಾಯಿಲ್ ಚುಂದ್ರಿಗಾರ್: ಇವರು 1957ರ ಅಕ್ಟೋಬರ್ನಲ್ಲಿ ಅಧಿಕಾರ ವಹಿಸಿಕೊಂಡರು. ಸಂಸತ್ತಿನಲ್ಲಿ ಅವಿಶ್ವಾಸ ಮತದಿಂದಾಗಿ 1957ರ ಡಿಸೆಂಬರ್ 16ರಂದು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇವರ ಅಧಿಕಾರಾವಧಿ 2 ತಿಂಗಳಿಗೂ ಕಡಿಮೆ.
* ಮಲಿಕ್ ಫಿರೋಜ್ ಖಾನ್ ನೂನ್: 1957ರ ಡಿಸೆಂಬರ್ 16ರಂದು ಅಧಿಕಾರ ವಹಿಸಿಕೊಂಡ ಇವರು ಪಾಕಿಸ್ತಾನದಲ್ಲಿ ಮಾರ್ಷಲ್ ಲಾ (ಮಿಲಿಟರಿ ಆಡಳಿತ) ಹೇರಿದ ಕಾರಣದಿಂದಾಗಿ 1957ರ ಅಕ್ಟೋಬರ್ 7 ರಂದು ವಜಾಗೊಂಡರು. ಇವರ ಅಧಿಕಾರಾವಧಿ 10 ತಿಂಗಳಿಗೂ ಕಡಿಮೆ.
* ನೂರುಲ್ ಅಮೀನ್: ಇವರು 1971ರ ಡಿಸೆಂಬರ್ 7 ರಂದು ಅಧಿಕಾರ ವಹಿಸಿಕೊಂಡರು. ಪಾಕಿಸ್ತಾನದಿಂದ ಬಾಂಗ್ಲಾದೇಶ ಪ್ರತ್ಯೇಕವಾದ ಸ್ವಲ್ಪ ಸಮಯದ ನಂತರ 1971ರ ಡಿಸೆಂಬರ್ 20ರಂದು ತಮ್ಮ ಕಚೇರಿಯನ್ನು ತೊರೆದರು. ಇವರ ಅಧಿಕಾರಾವಧಿ 2 ವಾರಗಳಿಗಿಂತಲೂ ಕಡಿಮೆ.
* ಜುಲ್ಫಿಕರ್ ಅಲಿ ಭುಟ್ಟೊ: ಇವರು 1973ರ ಆಗಸ್ಟ್ 14 ರಂದು ಅಧಿಕಾರ ವಹಿಸಿಕೊಂಡು 1977ರ ಜುಲೈ 5 ರಂದು ಮಿಲಿಟರಿ ದಂಗೆಯಿಂದಾಗಿ ಪದಚ್ಯುತಿಗೊಂಡರು. ಬಳಿಕ ಸೆರೆವಾಸವನ್ನೂ ಅನುಭವಿಸಿ ಕೊನೆಗೆ ಗಲ್ಲಿಗೇರಿಸಲಾಯಿತು. ಇವರ ಅಧಿಕಾರಾವಧಿ 3 ವರ್ಷ, 10 ತಿಂಗಳು.
* ಮುಹಮ್ಮದ್ ಖಾನ್ ಜುನೇಜೊ: 1985 ಮಾರ್ಚ್ ತಿಂಗಳಲ್ಲಿ ಇವರು ಅಧಿಕಾರ ವಹಿಸಿಕೊಂಡರು. 1988ರ ಮೇ 29ರಂದು ಅಧ್ಯಕ್ಷರೂ ಆಗಿದ್ದ ಮಿಲಿಟರಿ ಮುಖ್ಯಸ್ಥರು ಇವರನ್ನು ಪ್ರಧಾನಿ ಸ್ಥಾನದಿಂದ ವಜಾಗೊಳಿಸಿದರು. ಇವರ ಅಧಿಕಾರಾವಧಿ 3 ವರ್ಷ 2 ತಿಂಗಳು.
* ಬೆನಜೀರ್ ಭುಟ್ಟೊ: ಕೊಲ್ಲಲ್ಪಟ್ಟ ಪ್ರಧಾನಿ ಜುಲ್ಫಿಕರ್ ಅಲಿ ಭುಟ್ಟೋ ಅವರ ಪುತ್ರಿ ಮತ್ತು ಮುಸ್ಲಿಂ ರಾಷ್ಟ್ರದ ಮೊದಲ ಮಹಿಳಾ ನಾಯಕಿ ಇವರಾಗಿದ್ದರು. 1988ರ ಡಿಸೆಂಬರ್ 2 ರಂದು ಅಧಿಕಾರ ವಹಿಸಿಕೊಂಡರು. ಅವರ ಸರ್ಕಾರವನ್ನು 1990ರ ಆಗಸ್ಟ್ 6 ರಂದು ಅಧ್ಯಕ್ಷರು ಭ್ರಷ್ಟಾಚಾರದ ಆರೋಪದ ಮೇಲೆ ವಜಾಗೊಳಿಸಿದರು. ಇವರ ಅಧಿಕಾರಾವಧಿ 1 ವರ್ಷ 8 ತಿಂಗಳು. ಇದನ್ನೂ ಓದಿ: ತಾಲಿಬಾನ್ ಆಡಳಿತಕ್ಕೆ 2 ವರ್ಷ – ಮಹಿಳೆಯರ ಮೇಲೆ ಹೇರಿದ ನಿರ್ಬಂಧಗಳೇನು?
* ಮಿಯಾನ್ ಮುಹಮ್ಮದ್ ನವಾಜ್ ಷರೀಫ್: ಇವರು 1990ರ ನವೆಂಬರ್ 6 ರಂದು ಅಧಿಕಾರ ವಹಿಸಿಕೊಂಡರು. ಅವರ ಸರ್ಕಾರವನ್ನು 1993ರ ಏಪ್ರಿಲ್ 18 ರಂದು ಭುಟ್ಟೋ ಅವರಂತೆಯೇ ಆರೋಪದ ಮೇಲೆ ಅಧ್ಯಕ್ಷರು ವಜಾಗೊಳಿಸಿದರು. ಅವರು ಕೆಲವು ವಾರಗಳ ನಂತರ ನ್ಯಾಯಾಲಯಗಳಿಂದ ನಿರ್ಧಾರವನ್ನು ರದ್ದುಗೊಳಿಸಿದರು ಮತ್ತು ತಮ್ಮ ಸ್ಥಾನಕ್ಕೆ ಮರಳಿದರು. ಆದರೆ ಮಿಲಿಟರಿಯೊಂದಿಗಿನ ಭಿನ್ನಾಭಿಪ್ರಾಯಗಳ ನಂತರ ಮತ್ತೆ ರಾಜೀನಾಮೆ ನೀಡಿದರು. ಇವರ ಅಧಿಕಾರಾವಧಿ 2 ವರ್ಷ ಮತ್ತು 7 ತಿಂಗಳು.
* ಬೆನಜೀರ್ ಭುಟ್ಟೊ: 1993ರ ಅಕ್ಟೋಬರ್ 19 ರಲ್ಲಿ ತನ್ನ 2ನೇ ಅವಧಿಗೆ ಅಧಿಕಾರಕ್ಕೆ ಮರಳಿದರು. 1996ರ ನವೆಂಬರ್ 5 ರಂದು ದುರಾಡಳಿತದ ಆರೋಪದ ಮೇಲೆ ಮತ್ತೊಮ್ಮೆ ಅಧ್ಯಕ್ಷರಿಂದ ವಜಾಗೊಳಿಸಲಾಯಿತು. ಅಧಿಕಾರಾವಧಿ 3 ವರ್ಷ.
* ನವಾಜ್ ಷರೀಫ್: ಇವರು 1997 ಫೆಬ್ರವರಿ 17 ರಂದು 2ನೇ ಬಾರಿಗೆ ಅಧಿಕಾರಕ್ಕೆ ಬಂದರು. ಬಳಿಕ ಇವರನ್ನು 1999ರ ಅಕ್ಟೋಬರ್ 12 ರಂದು ಮಿಲಿಟರಿ ದಂಗೆಯಿಂದ ಪದಚ್ಯುತಗೊಳಿಸಲಾಯಿತು. ಅಧಿಕಾರಾವಧಿ 2 ವರ್ಷ 8 ತಿಂಗಳು.
* ಮೀರ್ ಜಫರುಲ್ಲಾ ಖಾನ್ ಜಮಾಲಿ: 2002ರ ನವೆಂಬರ್ನಲ್ಲಿ ಮಿಲಿಟರಿ ಆಡಳಿತದ ಸಮಯದಲ್ಲಿ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದರು. 2004ರ ಜೂನ್ 26 ರಂದು ಮಿಲಿಟರಿಯೊಂದಿಗೆ ಭಿನ್ನಾಭಿಪ್ರಾಯಗಳ ನಂತರ ಅವರು ರಾಜೀನಾಮೆ ನೀಡಿದರು. ಇವರ ಅಧಿಕಾರಾವಧಿ 1 ವರ್ಷ 7 ತಿಂಗಳು.
* ಯೂಸುಫ್ ರಜಾ ಗಿಲಾನಿ: ಇವರು 2008 ಮಾರ್ಚ್ 25 ರಂದು ಪ್ರಧಾನ ಮಂತ್ರಿಯಾಗಿ ಆಯ್ಕೆಯಾದರು. ನ್ಯಾಯಾಂಗ ನಿಂದನೆ ಆರೋಪದ ಮೇಲೆ 2012 ರಲ್ಲಿ ಪಾಕಿಸ್ತಾನದ ಸುಪ್ರೀಂ ಕೋರ್ಟ್ ಅವರನ್ನು ಅನರ್ಹಗೊಳಿಸಿತು. ಇವರ ಅಧಿಕಾರಾವಧಿ 4 ವರ್ಷ, 1 ತಿಂಗಳು.
* ನವಾಜ್ ಷರೀಫ್: 2013ರ ಜೂನ್ 5 ರಂದು 3 ಬಾರಿಗೆ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದರು. 2017ರ ಜುಲೈ 28 ರಂದು ಆಸ್ತಿಯನ್ನು ಮರೆಮಾಚಿದ ಆರೋಪದ ಮೇಲೆ ಪಾಕಿಸ್ತಾನದ ಸುಪ್ರೀಂ ಕೋರ್ಟ್ ಅವರನ್ನು ವಜಾಗೊಳಿಸಿತು. ಅಧಿಕಾರಾವಧಿ 4 ವರ್ಷ, 2 ತಿಂಗಳು.
* ಇಮ್ರಾನ್ ಖಾನ್: 2018ರ ಆಗಸ್ಟ್ 18 ರಂದು ಪ್ರಧಾನ ಮಂತ್ರಿಯಾಗಿ ಆಯ್ಕೆಯಾದರು. 2022ರ ಏಪ್ರಿಲ್ 10 ರಂದು ವಿರೋಧ ಪಕ್ಷದಿಂದ ಅವಿಶ್ವಾಸ ನಿರ್ಣಯದ ಮೂಲಕ ಅಧಿಕಾರದಿಂದ ಕೆಳಗಿಳಿದರು. ಅಧಿಕಾರಾವಧಿ 3 ವರ್ಷ 7 ತಿಂಗಳು. ಇದನ್ನೂ ಓದಿ: ತಾಲಿಬಾನ್ ಉಗ್ರರಿಗೆ ಪಾಕ್ ಮೇಲೆ ಸಿಟ್ಯಾಕೆ?
ಇಸ್ಲಾಮಾಬಾದ್: ರಾಷ್ಟ್ರೀಯ ಪ್ರಕ್ಷುಬ್ಧತೆ ಹಾಗೂ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಪಾಕಿಸ್ತಾನದಲ್ಲಿ (Pakistan) ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಶಿಫಾರಸಿನ ಮೇರೆಗೆ ಸಂಸತ್ತನ್ನು ಬುಧವಾರ ತಡರಾತ್ರಿ ವಿಸರ್ಜಿಸಲಾಗಿದೆ. ಇದೀಗ ಸಾರ್ವತ್ರಿಕ ಚುನಾವಣೆಗೆ ವೇದಿಗೆ ಸಜ್ಜಾಗಿದೆ.
ಪಾಕ್ ಸಂಸತ್ತಿನ 5 ವರ್ಷಗಳ ಅವಧಿ ಪೂರ್ಣಗೊಳ್ಳಲು 3 ದಿನಗಳ ಮುಂಚಿತವಾಗಿ ಅದನ್ನು ವಿಸರ್ಜಿಸಲಾಗಿದೆ. ಆಗಸ್ಟ್ 12 ಸಂಸತ್ತಿನ ಅವಧಿ ಮುಕ್ತಾಯಗೊಳ್ಳುವ ದಿನವಾಗಿತ್ತು. ಪಾಕಿಸ್ತಾನದ ಸಂವಿಧಾನದ ಪ್ರಕಾರ ಸರ್ಕಾರದ ಅವಧಿ ಪೂರೈಸಿದ 60 ದಿನಗಳಲ್ಲಿ ಚುನಾವಣೆ ನಡೆಯಬೇಕು. ಅವಧಿಗೂ ಮುನ್ನ ವಿಸರ್ಜನೆ ಮಾಡಿದರೆ 90 ದಿನಗಳ ಕಾಲಾವಕಾಶ ಇರಲಿದೆ. ಇದೀಗ ಸಂಸತ್ತನ್ನು ಅವಧಿ ಪೂರ್ಣಗೊಳ್ಳುವ ಮೊದಲೇ ವಿಸರ್ಜನೆ ಮಾಡಿರುವುದರಿಂದ ಹೊಸ ಚುನಾವಣೆ ನಡೆಸಲು 90 ದಿನಗಳ ಕಾಲಾವಕಾಶ ಸಿಗಲಿದೆ.
ಸಂಸತ್ತನ್ನು ವಿಸರ್ಜಿಸುವಂತೆ ನಾನು ಇಂದು ರಾತ್ರಿ ಅಧ್ಯಕ್ಷರಿಗೆ ಸಲಹೆ ನೀಡುತ್ತೇನೆ ಎಂದು ಷರೀಫ್ ಈ ಹಿಂದೆ ಸಂಸತ್ತಿಗೆ ತಿಳಿಸಿದ್ದರು. ಹಂಗಾಮಿ ಪ್ರಧಾನಿಯಾಗಿ ನಾಮನಿರ್ದೇಶನ ಮಾಡಲು ಎರಡೂ ಕಡೆಯಿಂದ ಶಿಫಾರಸು ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಗುರುವಾರ ವಿರೊಧ ಪಕ್ಷಗಳ ನಾಯಕರೊಂದಿಗೆ ಚರ್ಚೆ ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: 200ಕ್ಕೂ ಹೆಚ್ಚು ಮಂದಿ ಇಮ್ರಾನ್ ಖಾನ್ ಬೆಂಬಲಿಗರು ಅರೆಸ್ಟ್ – ಪಾಕ್ನಲ್ಲಿ ಭುಗಿಲೆದ್ದ ಆಕ್ರೋಶ
ಆದರೆ ಚುನಾವಣಾ ಆಯೋಗ ಹೊಸ ಜನಗಣತಿಯ ಆಧಾರದ ಮೇಲೆ ನೂರಾರು ಕ್ಷೇತ್ರಗಳನ್ನು ಮರುವಿನ್ಯಾಸಗೊಳಿಸಲು ಪ್ರಾರಂಭಿಸುವುದರಿಂದ ಚುನಾವಣೆಗೆ ಇನ್ನಷ್ಟು ತಿಂಗಳು ವಿಳಂಬವಾಗುವ ಸಾಧ್ಯತೆಯಿದೆ.
ಕಳೆದ ಬಾರಿ 2018ರ ಜುಲೈನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕ್ರಿಕೆಟಿಗ ಹಾಗೂ ರಾಜಕಾರಣಿ ಇಮ್ರಾನ್ ಖಾನ್ ಪಕ್ಷ ಗೆದ್ದಿತ್ತು. ಅವರು ಬಳಿಕ ಮೊದಲ ಬಾರಿಗೆ ಪಾಕಿಸ್ತಾನದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಕಳೆದ ವರ್ಷ ಅವಿಶ್ವಾಸ ನಿರ್ಣಯದಲ್ಲಿ ಪ್ರಧಾನಿ ಹುದ್ದೆಯಿಂದ ಕೆಳಗಿಳಿದರು. ಅಂದಿನಿಂದ ಭ್ರಷ್ಟಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ ಅವರು ಜೈಲುಪಾಲಾಗಿದ್ದಾರೆ. ಇಮ್ರಾನ್ ಖಾನ್ 5 ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಪಾಕ್ನಲ್ಲಿ ರಾಜಕೀಯ ಕೋಲಾಹಲ – ಜೈಲುಪಾಲಾದ ಕ್ರಿಕೆಟ್ ದಂತಕಥೆಯ ಜೀವಕ್ಕೆ ಇದೆಯಾ ಆಪತ್ತು?
ಇಸ್ಲಾಮಾಬಾದ್: ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ತೋಶಖಾನ ಪ್ರಕರಣದಲ್ಲಿ 3 ವರ್ಷ ಜೈಲು ಶಿಕ್ಷೆಗೆ ಗುರಿಯಾದ ಬೆನ್ನಲ್ಲೇ ಖಾನ್ ಅವರ 200ಕ್ಕೂ ಹೆಚ್ಚು ಬೆಂಬಲಿಗರನ್ನ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಪಂಜಾಬ್ನಾದ್ಯಂತ ವಿವಿಧೆಡೆ ಇಮ್ರಾನ್ ಖಾನ್ ಬೆಂಬಲಿಗರನ್ನ ಬಂಧಿಸಿರುವುದಾಗಿ ಪೊಲೀಸರು (Pakistan Punjab Police) ತಿಳಿಸಿದ್ದಾರೆ.
150ಕ್ಕೂ ಹೆಚ್ಚು ಕೇಸ್ಗಳಲ್ಲಿ ವಾಂಟೆಡ್ ಆಗಿರುವ ಇಮ್ರಾನ್ ಖಾನ್ ಪ್ರಧಾನಿ ಹುದ್ದೆಯಲ್ಲಿದ್ದಾಗ ತಮಗೆ ಬಂದ ಉಡುಗೊರೆಗಳನ್ನ ಅಕ್ರಮವಾಗಿ ಮಾರಾಟ ಮಾಡಿಕೊಂಡಿದ್ದಾರೆ ಎಂಬ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯ ಖಾನ್ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿತು. ಜೊತೆಗೆ 5 ವರ್ಷ ಸಕ್ರಿಯ ರಾಜಕಾರಣದಿಂದಲೂ ಬ್ಯಾನ್ ಮಾಡಿ ಆದೇಶಿಸಿತು. ಆ ನಂತರ ಪೂರ್ವ ಪಂಜಾಬ್ ಪ್ರಾಂತ್ಯದ ಪೊಲೀಸರು ಲಾಹೋರ್ನಲ್ಲಿರುವ ಇಮ್ರಾನ್ ಖಾನ್ ಮನೆಯಲ್ಲೇ ಬಂಧಿಸಿದ್ದರು. ಈ ಬೆಳವಣಿಗೆ ಕಂಡುಬಂದ ಒಂದು ದಿನದ ನಂತರ ಇಮ್ರಾನ್ ಖಾನ್ ಅವ್ರನ್ನ ಪಿಟಿಐ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಯಿತು. ಇದನ್ನೂ ಓದಿ: ಪಾಕ್ನಲ್ಲಿ ರಾಜಕೀಯ ಕೋಲಾಹಲ – ಜೈಲುಪಾಲಾದ ಕ್ರಿಕೆಟ್ ದಂತಕಥೆಯ ಜೀವಕ್ಕೆ ಇದೆಯಾ ಆಪತ್ತು?
ಪಂಜಾಬ್ ಪೊಲೀಸರ ಪ್ರಕಾರ, ಖಾನ್ ಬಂಧನದ ನಂತರ ಪಂಜಾಬ್ನಾದ್ಯಂತ ಇಮ್ರಾನ್ ಖಾನ್ ಬೆಂಬಲಿಗರು ವ್ಯಾಪಕ ಪ್ರತಿಭಟನೆಗೆ ಮುಂದಾಗಿದ್ದರು. ಆದ್ದರಿಂದ ಪ್ರಾಂತ್ಯದ ವಿವಿಧ ಪ್ರದೇಶಗಳಲ್ಲಿ 200ಕ್ಕೂ ಹೆಚ್ಚು ತೆಹ್ರೀಕ್-ಇ-ಇನ್ಸಾಫ್ (PTI) ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನ ಬಂಧಿಸಲಾಗಿದೆ. ಅವರಲ್ಲಿ 10ಕ್ಕೂ ಹೆಚ್ಚು ಬೆಂಬಲಿಗರ ವಿರುದ್ಧ ಭಯೋತ್ಪಾದನೆ ಆರೋಪದ ಮೇಲೆ ಕೇಸ್ ದಾಖಲಿಸಲಾಗಿದೆ. ಖಾನ್ ಬೆಂಬಲಿಗರ ದಾಳಿ ನಡೆಸಿದ ಪೊಲೀಸರು ಶಸ್ತ್ರಾಸ್ತ್ರಗಳನ್ನ ಕಸಿದು ಪ್ರತಿಭಟನೆಯನ್ನ ಹತ್ತಿಕ್ಕಿದ್ದಾರೆ ಎಂದು ತಿಳಿದುಬಂದಿದೆ.
1992ರ ಪಾಕಿಸ್ತಾನ ವಿಶ್ವಕಪ್ ವಿಜೇತ ತಂಡದ ನಾಯಕ ಹಾಗೂ 70 ವರ್ಷದ ಹಿರಿಯ ರಾಜಕಾರಣಿ ಇಮ್ರಾನ್ ಖಾನ್, ಕೋಟ್ಯಂತರ ರೂ. ಮೌಲ್ಯದ ಉಡುಗೊರೆಯನ್ನ ರಾಜ್ಯದ ಉಡುಗೊರೆ ಭಂಡಾರಕ್ಕೆ ಠೇವಣಿ ಇಡುವ ಬದಲು ಆಭರಣ ವ್ಯಾಪಾರಿಯೊಬ್ಬರಿಗೆ ಮಾರಾಟ ಮಾಡಿರುವ ಆರೋಪದ ಮೇಲೆ ಅವರನ್ನ ಬಂಧಿಸಲಾಗಿತ್ತು. ಇಸ್ಲಾಮಾಬಾದ್ ಹೈಕೋರ್ಟ್ನಲ್ಲಿನ ಪ್ರಕರಣವನ್ನ ಮತ್ತೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಪಾಕಿಸ್ತಾನ ಸುಪ್ರೀಂ ಕೋರ್ಟ್ (Pakistan Supreme Court) ಇಮ್ರಾನ್ ಖಾನ್ ಮನವಿಯನ್ನ ತಿರಸ್ಕರಿಸಿತ್ತು. ಇದನ್ನೂ ಓದಿ: ಇರಾಕ್ನಲ್ಲಿ ಮಾರಾಟವಾದ ಭಾರತದ ಕೆಮ್ಮಿನ ಸಿರಪ್ ಅಸುರಕ್ಷಿತ – WHO ಎಚ್ಚರಿಕೆ
ಶನಿವಾರ ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯವು (Islamabad Trial Court) ತೋಶಖಾನಾ ಪ್ರಕರಣದಲ್ಲಿ ಇಮ್ರಾನ್ ಖಾನ್ ಅವರನ್ನ ತಪ್ಪಿತಸ್ಥ ಎಂದು ಘೋಷಿಸಿದೆ. ಇಸ್ಲಾಮಾಬಾದ್ ಮೂಲದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಹೆಚ್ಚುವರಿ ನ್ಯಾಯಾಧೀಶ ಹುಮಾಯೂನ್ ದಿಲಾವರ್ ಅವರು ಖಾನ್ಗೆ 1 ಲಕ್ಷ ರೂ. ದಂಡವನ್ನೂ ವಿಧಿಸಿದ್ದಾರೆ. ಒಂದು ವೇಳೆ ದಂಡ ಪಾವತಿಸಲು ವಿಫಲರಾದಲ್ಲಿ ಇನ್ನೂ ಹೆಚ್ಚುವರಿ 6 ತಿಂಗಳು ಜೈಲಿನಲ್ಲಿ ಇರಿಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಮಾಜಿ ಪ್ರಧಾನಿ ಅರೆಸ್ಟ್ – ಇಮ್ರಾನ್ ಖಾನ್ಗೆ 3 ವರ್ಷ ಜೈಲು, 5 ವರ್ಷ ರಾಜಕೀಯದಿಂದ ಬ್ಯಾನ್
ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ ತೋಷಖಾನಾ ಕೇಸ್ನಲ್ಲಿ (Toshakhana Case) ತಪ್ಪಿತಸ್ಥನೆಂದು ಸಾಬೀತಾಗಿದ್ದು ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪಾಕಿಸ್ತಾನದ ರಾಜಕೀಯ ಪಕ್ಷವಾದ PTIನ ಅಧ್ಯಕ್ಷರೂ ಆಗಿದ್ದ ಇಮ್ರಾನ್ ಖಾನ್ರನ್ನ, ಲಾಹೋರ್ನಲ್ಲಿರುವ ಜಮಾನ್ ಪಾರ್ಕ್ ಮನೆಯಲ್ಲಿ ಬಂಧಿಸಲಾಗಿದೆ ಎಂದು ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (PTI) ಪಕ್ಷ ಟ್ವೀಟ್ ಮೂಲಕ ತಿಳಿಸಿದೆ.
ಲಾಹೋರ್ನಲ್ಲಿ ಬಂಧಿಸಿದ ಬಳಿಕ ರಾಜಧಾನಿ ಇಸ್ಲಾಮಾಬಾದ್ಗೆ ಕರೆತರಲಾಗಿದ್ದು, ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯವು (Islamabad Trial Court) 5 ವರ್ಷಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ಭಾಗವಹಿಸದಂತೆ ನಿರ್ಬಂಧ ಹೇರಿದೆ. ಈ ನಡುವೆ ಪಿಟಿಐ ಪ್ರಧಾನ ಕಾರ್ಯದರ್ಶಿ ಒಮರ್ ಅಯೂಬ್ ಖಾನ್, ಇಮ್ರಾನ್ ಖಾನ್ ಬಂಧನ ವಿರೋಧಿಸಿ ಶಾಂತಿಯುತ ಪ್ರತಿಭೆನಟಗೆ ಕರೆ ನೀಡಿದ್ದಾರೆ.
1992ರ ಪಾಕಿಸ್ತಾನ ವಿಶ್ವಕಪ್ ವಿಜೇತ ತಂಡದ ನಾಯಕ ಹಾಗೂ 70 ವರ್ಷದ ಹಿರಿಯ ರಾಜಕಾರಣಿ ಇಮ್ರಾನ್ ಖಾನ್, ಕೋಟ್ಯಂತರ ರೂ. ಮೌಲ್ಯದ ಉಡುಗೊರೆಯನ್ನ ರಾಜ್ಯದ ಉಡುಗೊರೆ ಭಂಡಾರಕ್ಕೆ ಠೇವಣಿ ಇಡುವ ಬದಲು ಆಭರಣ ವ್ಯಾಪಾರಿಯೊಬ್ಬರಿಗೆ ಮಾರಾಟ ಮಾಡಿರುವ ಆರೋಪದ ಮೇಲೆ ಅವರನ್ನ ಬಂಧಿಸಲಾಗಿತ್ತು. ಇಸ್ಲಾಮಾಬಾದ್ ಹೈಕೋರ್ಟ್ನಲ್ಲಿನ ಪ್ರಕರಣವನ್ನ ಮತ್ತೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಪಾಕಿಸ್ತಾನ ಸುಪ್ರೀಂ ಕೋರ್ಟ್ ಇಮ್ರಾನ್ ಖಾನ್ ಮನವಿಯನ್ನ ತಿರಸ್ಕರಿಸಿತ್ತು. ಇದನ್ನೂ ಓದಿ: ವಿಶ್ವದ ಅತಿಸಣ್ಣ ದೇಶ ಯಾವ್ದು..? ಎಲ್ಲಿದೆ ಗೊತ್ತಾ..? – ಅಚ್ಚರಿಯಾದ್ರೂ ಇದು ನಿಜ!
ಶನಿವಾರ ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯವು ತೋಷಖಾನಾ ಪ್ರಕರಣದಲ್ಲಿ ಇಮ್ರಾನ್ ಖಾನ್ ಅವರನ್ನ ತಪ್ಪಿತಸ್ಥ ಎಂದು ಘೋಷಿಸಿದೆ. ಇಸ್ಲಾಮಾಬಾದ್ ಮೂಲದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಹೆಚ್ಚುವರಿ ನ್ಯಾಯಾಧೀಶ ಹುಮಾಯೂನ್ ದಿಲಾವರ್ ಅವರು ಖಾನ್ಗೆ 1 ಲಕ್ಷ ರೂ. ದಂಡವನ್ನೂ ವಿಧಿಸಿದ್ದಾರೆ. ಒಂದು ವೇಳೆ ದಂಡ ಪಾವತಿಸಲು ವಿಫಲರಾದಲ್ಲಿ ಇನ್ನೂ ಹೆಚ್ಚುವರಿ 6 ತಿಂಗಳು ಜೈಲಿನಲ್ಲಿ ಇರಿಸುವುದಾಗಿ ಹೇಳಿದ್ದಾರೆ.
140ಕ್ಕೂ ಹೆಚ್ಚು ಕೇಸ್ಗಳಲ್ಲಿ ವಾಂಟೆಡ್:
ಮಾಜಿ ಕ್ರಿಕೆಟಿಗನೂ ಆಗಿರುವ ಇಮ್ರಾನ್ ಖಾನ್, ಭಯೋತ್ಪಾದನೆ, ಹಿಂಸಾಚಾರ, ಧರ್ಮನಿಂದನೆ, ಭ್ರಷ್ಟಾಚಾರ ಮತ್ತು ಕೊಲೆ ಆರೋಪಗಳು ಸೇರಿದಂತೆ ದೇಶಾದ್ಯಂತ 140ಕ್ಕೂ ಹೆಚ್ಚು ಕೇಸ್ಗಳನ್ನ ಎದುರಿಸುತ್ತಿದ್ದಾರೆ. ಕಳೆದ ಮೇ 9ರಂದು ಭ್ರಷ್ಟಾಚಾರ ಪ್ರಕರಣದಲ್ಲಿ ಅರೆಸೇನಾ ರೇಂಜರ್ಗಳಿಂದ ಬಂಧಿಸಲ್ಪಟ್ಟ ನಂತರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆದಿತ್ತು.
ಒಟ್ಟಾವಾ: ಕೆನಡಾದ (Canada) ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau) ತಮ್ಮ ಪತ್ನಿ ಸೋಫಿಯೊಂದಿಗೆ ವಿಚ್ಛೇದನ (Divorce) ಪಡೆದುಕೊಂಡಿರುವುದಾಗಿ ತಮ್ಮ ಕಚೇರಿ ಬುಧವಾರ ತಿಳಿಸಿದೆ. ಈ ಮೂಲಕ ಕೆನಡಾ ಪ್ರಧಾನಿ ತಮ್ಮ 18 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ.
ಜಸ್ಟಿನ್ ಟ್ರುಡೊ (51) ಹಾಗೂ ಸೋಫಿ (48) 2005ರ ಮೇ ಕೊನೆಯಲ್ಲಿ ವಿವಾಹವಾದರು. ಪ್ರಧಾನಿ ಟ್ರುಡೊ ಹಾಗೂ ಅವರ ಪತ್ನಿ ಸೋಫಿ ಪ್ರತ್ಯೇಕಗೊಳ್ಳುತ್ತಿರುವ ನಿರ್ಧಾರಕ್ಕೆ ಸಂಬಂಧಿಸಿಂತೆ ಎಲ್ಲಾ ಕಾನೂನು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ಕಚೇರಿ ತಿಳಿಸಿದೆ. ಇದನ್ನೂ ಓದಿ: ಎಸ್ಇಪಿ ಜಾರಿಗೆ ಸರ್ಕಾರದ ಸಿದ್ಧತೆ – ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿ ಸಾಧ್ಯತೆ