Tag: prime minister

  • ಗುಜರಾತ್ ಸಿಎಂ ಆಗಿದ್ದಾಗಲೂ ಸಕ್ಕರೆ ನಾಡಿಗೆ ಬಂದಿದ್ರು ಮೋದಿ

    ಗುಜರಾತ್ ಸಿಎಂ ಆಗಿದ್ದಾಗಲೂ ಸಕ್ಕರೆ ನಾಡಿಗೆ ಬಂದಿದ್ರು ಮೋದಿ

    – ಮಂಡ್ಯಗೆ ಭೇಟಿ ಕೊಟ್ಟ 4ನೇ ಪ್ರಧಾನಿ ನಮೋ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಮಂಡ್ಯ (Mandya) ಹಾಗೂ ಧಾರವಾಡದಲ್ಲಿ (Dharwad) ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದ್ದಾರೆ. ಮೋದಿಗೆ ಮಂಡ್ಯ ಭೇಟಿ 2ನೇ ಬಾರಿಯದ್ದಾಗಿದೆ. ಈ ಹಿಂದೆ ಗುಜರಾತ್ ಸಿಎಂ (Gujarat CM) ಆಗಿದ್ದಾಗ ಮೋದಿ ಮಂಡ್ಯಗೆ ಭೇಟಿ ನೀಡಿದ್ದರು.

    ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಗುಜರಾತ್ ಸಿಎಂ ಆಗಿದ್ದಾಗ 2004ರಲ್ಲಿ ಮಂಡ್ಯಗೆ ಭೇಟಿ ನೀಡಿದ್ದರು. ಬಿಜೆಪಿ ಅಭ್ಯರ್ಥಿ ಮಹೇಶ್ ಚಂದ್ ಪರ ಪ್ರಚಾರಕ್ಕಾಗಿ ಮೋದಿ ಮದ್ದೂರು ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಅಂದು ಮೋದಿಗೆ ದಿವಂಗತ ಅನಂತ್ ಕುಮಾರ್ ಅವರು ಸಾಥ್ ನೀಡಿದ್ದರು.

    ಮಂಡ್ಯಗೆ ಇಲ್ಲಿಯವರೆಗೆ ಪ್ರಧಾನಿಯಾಗಿ ಭೇಟಿ ನೀಡಿರುವ 4ನೇ ಪ್ರಧಾನಿ ಮೋದಿಯಾಗಿದ್ದಾರೆ. ಪ್ರಧಾನಿಯಾಗಿ ಮಂಡ್ಯಗೆ ಭೇಟಿ ನೀಡಿದ್ದ ಮೊದಲ ಪ್ರಧಾನಿ ಯಾರೆಂದರೆ ಅದು ಜವಾಹರಲಾಲ್ ನೆಹರೂ. ಅವರು 1962ರಲ್ಲಿ ಲೋಕಸಭೆಗೆ ಸ್ಪರ್ಧಿಸಿದ್ದ ಎಂಕೆ ಶಿವನಂಜಪ್ಪ ಪರ ಪ್ರಚಾರಕ್ಕಾಗಿ ಮಂಡ್ಯ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಇದನ್ನೂ ಓದಿ: ಮಂಡ್ಯದಲ್ಲಿ ಮೋದಿ ರೋಡ್ ಶೋ – ಸ್ವಾಗತಿಸಲು ನಿಂತಿದ್ದ ಅಭಿಮಾನಿಗಳಿಗೆ ಪ್ರಧಾನಿ ಪುಷ್ಪಾರ್ಚನೆ

    ಬಳಿಕ 1977ರಲ್ಲಿ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ, ಲೋಕಸಭೆಗೆ ಸ್ಪರ್ಧಿಸಿದ್ದ ಚಿಕ್ಕಲಿಂಗಯ್ಯ ಪರ ಪ್ರಚಾರಕ್ಕೆ ಆಗಮಿಸಿದ್ದರು. ನಂತರ 1979ರಲ್ಲಿ ಪ್ರಧಾನಿಯಾಗಿದ್ದ ಚರಣ್ ಸಿಂಗ್ ಅವರು ಮಂಡ್ಯಕ್ಕೆ ಭೇಟಿ ನೀಡಿದ್ದರು. ಅವರು ಡಿ.ದೇವರಾಜ ಅರಸ್ ಅವರ ನಾಗರಿಕ ಸನ್ಮಾನ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

    ಇದೀಗ ಮಂಡ್ಯಗೆ ಆಗಮಿಸುತ್ತಿರುವ 4ನೇ ಪ್ರಧಾನಿ ನರೇಂದ್ರ ಮೋದಿಯಾಗಿದ್ದಾರೆ. ಭಾನುವಾರ ಮೋದಿ ಮಂಡ್ಯಕ್ಕೆ ತೆರಳಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆ ಮಾಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಕೌರವರನ್ನು ಪಾಂಡವರಂತೆ ಸದೆಬಡಿಯುತ್ತೇವೆ: ಶ್ರೀರಾಮುಲು

  • ಮೋದಿ ಪ್ರಧಾನಿಯಾಗಿದ್ದಕ್ಕೆ ನನಗೆ ಪ್ರಶಸ್ತಿ ಬಂದಿದೆ: S.L Bhyarappa

    ಮೋದಿ ಪ್ರಧಾನಿಯಾಗಿದ್ದಕ್ಕೆ ನನಗೆ ಪ್ರಶಸ್ತಿ ಬಂದಿದೆ: S.L Bhyarappa

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೆಂಗಳೂರಲ್ಲಿ ಮೋದಿ ಮೆಗಾ ರೋಡ್ ಶೋಗೆ ಪ್ಲಾನ್

    ಬೆಂಗಳೂರಲ್ಲಿ ಮೋದಿ ಮೆಗಾ ರೋಡ್ ಶೋಗೆ ಪ್ಲಾನ್

    ಬೆಂಗಳೂರು: ಚುನಾವಣೆ (Election) ಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇದ್ದು, ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ.

    ಬೆಂಗಳೂರಲ್ಲಿ ಮೋದಿ ಮೆಗಾ ರೋಡ್ ಶೋ (Modi Road Show) ಗೆ ಭರ್ಜರಿ ಪ್ಲಾನ್ ಮಾಡಲಾಗುತ್ತಿದೆ. ಫೆಬ್ರವರಿ 6ರಂದು ಹೆಚ್‍ಎಎಲ್ (HAL) ಕಾರ್ಯಕ್ರಮದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಮತ್ತೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಆ ಕಾರ್ಯಕ್ರಮದ ಆಗಮನದ ವೇಳೆ ಬೆಂಗಳೂರಲ್ಲಿ ರೋಡ್ ಶೋಗೆ ರಾಜ್ಯ ಬಿಜೆಪಿ (Karnataka BJP) ಮನವಿ ಮಾಡಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಬೊಮ್ಮಾಯಿ ಅಂಕಲ್ ನಮ್ಗೆ ಮೇಲ್ಸೇತುವೆ ಬೇಡ- ಸಿಎಂಗೆ 2 ಸಾವಿರ ವಿದ್ಯಾರ್ಥಿಗಳಿಂದ ಪತ್ರ

    ಹುಬ್ಬಳ್ಳಿ ಮಾಡೆಲ್‍ನಲ್ಲೇ ಮೂರು ಕ್ಷೇತ್ರಗಳ ಟಾರ್ಗೆಟ್ ಮಾಡಿ ರೋಡ್ ಶೋಗೆ ತಂತ್ರ ರೂಪಿಸಲಾಗಿದೆ. ಮಹದೇವಪುರ, ಕೆ.ಆರ್.ಪುರಂ, ಸಿ.ವಿ.ರಾಮನ್ ನಗರ ಕೇಂದ್ರೀಕರಿಸಿ ರೋಡ್ ಶೋ ರೂಟ್ ಮ್ಯಾಪ್ ಮಾಡಲಾಗಿದೆ. ಈಗಾಗಲೇ ಹುಬ್ಬಳ್ಳಿ ರೋಡ್ ಶೋನಿಂದ ರಾಜ್ಯ ಬಿಜೆಪಿ ನಾಯಕರು ಉತ್ಸುಕವಾಗಿದ್ದಾರೆ. ಒಂದು ಬಾರಿ ಮೋದಿ ರೋಡ್ ಶೋ ನಡೆದ್ರೆ ವಿರೋಧಿ ಅಲೆ ಸೀಳಲು ಸಹಾಯ ಎಂಬ ಲೆಕ್ಕಚಾರ ಕಮಲನಾಯಕರದ್ದಾಗಿದೆ.

    ಒಂದೆಡೆ ಬೆಂಗಳೂರು ಟ್ರಾಫಿಕ್ (Traffic) ಪರಿಸ್ಥಿತಿ, ಇನ್ನೊಂದೆಡೆ ಎಲೆಕ್ಷನ್ ಬಿಸಿ, ಬಿಜೆಪಿಯಿಂದ ಬ್ಯಾಲೆನ್ಸ್ ಮಾಡಲು ಆಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಯಾಕಂದ್ರೆ ಮೋದಿ ರೋಡ್ ಶೋ ನಡೆದ್ರೆ ಫೆಬ್ರವರಿ 6ರಂದು ಸೋಮವಾರ ಬೆಂಗಳೂರಿಗೆ ಬಿಸಿ ತಟ್ಟುವ ಸಾಧ್ಯತೆ ಇದೆ. ಆದರೆ ಮೋದಿ ರೋಡ್ ಶೋಗೆ ಪ್ರಧಾನಿ ಕಚೇರಿಯ ಕ್ಲಿಯರೆನ್ಸ್ ಇನ್ನೂ ಸಿಕ್ಕಿಲ್ಲ ಎನ್ನಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಾರ್ಯನಿರ್ವಹಿಸುವ ಸಾಮರ್ಥ್ಯ ನಾನು ಹೊಂದಿಲ್ಲ – ನ್ಯೂಜಿಲೆಂಡ್ ಪ್ರಧಾನಿ ಹಠಾತ್ ರಾಜೀನಾಮೆ ಘೋಷಣೆ

    ಕಾರ್ಯನಿರ್ವಹಿಸುವ ಸಾಮರ್ಥ್ಯ ನಾನು ಹೊಂದಿಲ್ಲ – ನ್ಯೂಜಿಲೆಂಡ್ ಪ್ರಧಾನಿ ಹಠಾತ್ ರಾಜೀನಾಮೆ ಘೋಷಣೆ

    ವೆಲ್ಲಿಂಗ್ಟನ್: ನ್ಯೂಜಿಲೆಂಡ್‌ನ ಪ್ರಧಾನಿ (New Zealand PM) ಜಸಿಂಡಾ ಅರ್ಡೆರ್ನ್ (Jacinda Ardern) ಅವರು ಮುಂದಿನ ತಿಂಗಳು ರಾಜೀನಾಮೆ (Resignation) ನೀಡುವುದಾಗಿ ಗುರುವಾರ ಘೋಷಿಸಿದ್ದಾರೆ.

    ನಾನು ಅಧಿಕಾರ ನಿರ್ವಹಿಸುವ ಸಂಪೂರ್ಣ ಸಾಮರ್ಥ್ಯವನ್ನು ಹೊಂದಿಲ್ಲ. ರಾಜೀನಾಮೆ ನಿರ್ಧಾರ ನನ್ನದೇ ಆಗಿದೆ. ದೇಶವನ್ನು ಮುನ್ನಡೆಸುವುದು ಅತ್ಯಂತ ವಿಷೇಷವಾದ ಕೆಲಸ. ಹೀಗಾಗಿ ರಾಜೀನಾಮೆ ನೀಡಲು ಇದು ಉತ್ತಮ ಸಮಯವಾಗಿದೆ ಎಂದು ಅರ್ಡೆರ್ನ್ ತಿಳಿಸಿದ್ದಾರೆ.

    ಮುಂದಿನ ಫೆಬ್ರವರಿ 2 ರಂದು ತಾವು ರಾಜೀನಾಮೆ ನೀಡುವುದಾಗಿ ಅರ್ಡೆರ್ನ್ ತಿಳಿಸಿದ್ದಾರೆ. ಅಕ್ಟೋಬರ್ 14 ರಂದು ಮುಂದಿನ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಅಲ್ಲಿಯವರೆಗೆ ತಾವು ಚುನಾವಣಾ ಸಂಸದರಾಗಿ ಮುಂದುವರಿಯುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು, ಕೊಡಗನ್ನು ಸ್ವಿಜರ್ಲ್ಯಾಂಡ್ ರೀತಿ ಬೆಳೆಸಿ – ಎಷ್ಟು ಬೇಕಾದ್ರೂ ಹಣ ಕೊಡ್ತೀವಿ: ಬೊಮ್ಮಾಯಿ

    2017 ರಲ್ಲಿ ಸಮ್ಮಿಶ್ರ ಸರ್ಕಾರದಿಂದ ಪ್ರಧಾನ ಮಂತ್ರಿಯಾದ ಅರ್ಡೆರ್ನ್ ಬಳಿಕ 3 ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ ತಮ್ಮ ಕೇಂದ್ರ-ಲೆಫ್ಟ್ ಲೇಬರ್ ಪಕ್ಷವನ್ನು ಗೆಲ್ಲಿಸಿದ್ದರು. ಇತ್ತೀಚಿನ ಸಮೀಕ್ಷೆಗಳಲ್ಲಿ ಅವರ ಪಕ್ಷ ಹಾಗೂ ವೈಯಕ್ತಿಕ ಜನಪ್ರಿಯತೆ ಕುಸಿತ ಕಂಡಿದೆ.

    52 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ನ್ಯೂಜಿಲೆಂಡ್ ಕೋವಿಡ್ ಬಂದಾಗ ಶೂನ್ಯ ಕೋವಿಡ್ ನೀತಿಯನ್ನು ಅನುಸರಿಸಿತ್ತು. ಸಣ್ಣ ಜನ ಸಂಖ್ಯೆ ಹೊಂದಿದ ದೇಶವಾಗಿದ್ದರೂ ದೇಶವನ್ನು ಲಾಕ್‌ಡೌನ್ ಮಾಡಿದ್ದಕ್ಕೆ ಬಹಳ ಟೀಕೆಗೆ ಗುರಿಯಾಗಿತ್ತು. 1 ಪ್ರಕರಣ ದಾಖಲಾದ ಕೂಡಲೇ ದೇಶವನ್ನು ಸಂಪೂರ್ಣ ಲಾಕ್‌ಡೌನ್ ಮಾಡಿದ್ದಕ್ಕೆ ಜಸಿಂಡಾ ಅರ್ಡೆರ್ನ್ ವಿರುದ್ಧ ಕಟು ಟೀಕೆ ವ್ಯಕ್ತವಾಗಿತ್ತು. ಇದನ್ನೂ ಓದಿ: ರಾಜ್ಯಕ್ಕೆ ತಟ್ಟಲಿದೆ ಇನ್ನೂ 10 ದಿನ ಕೊರೆಯುವ ಚಳಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಮ್ಮನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ಪ್ರಧಾನಿ ಮೋದಿ

    ಅಮ್ಮನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ಪ್ರಧಾನಿ ಮೋದಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ (Heeraben Modi) ಅಂತ್ಯಕ್ರಿಯೆಗೂ ಮುನ್ನ ಪಾರ್ಥೀವ ಶರೀರ ಮೆರವಣಿಗೆಯಲ್ಲಿ ಪ್ರಧಾನಿ ಮೋದಿ (Narendra Modi) ಹೆಗಲುಕೊಟ್ಟಿದ್ದಾರೆ.

    ಪಂಕಜ್ ಮೋದಿ ಅವರ ನಿವಾಸದಿಂದ ಪಾರ್ಥೀವ ಶರೀರ ಹೊತ್ತು ಅಂತಿಮ ಯಾತ್ರೆ ಹೊರಟಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಸೆಕ್ಟರ್ 30ರ ರುದ್ರಭೂಮಿಯಲ್ಲಿ ಹೀರಾಬೆನ್ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿಗೆ ಮಾತೃ ವಿಯೋಗ

    https://twitter.com/ANI/status/1608657708382826498?ref_src=twsrc%5Etfw%7Ctwcamp%5Etweetembed%7Ctwterm%5E1608657708382826498%7Ctwgr%5E2351e674e7380e0e692ebedd928f3344e89bfe54%7Ctwcon%5Es1_&ref_url=https%3A%2F%2Fwww.indiatoday.in%2Findia%2Fstory%2Fpm-modi-carries-mortal-remains-of-mother-heeraba-2315247-2022-12-30

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹೀರಾಬೆನ್ ಅವರನ್ನು ಬುಧವಾರವಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3.39ರ ಸುಮಾರಿಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

    ಶತಾಯುಷಿ ಹೀರಾಬೆನ್ ಅವರು ಐವರು ಪುತ್ರರು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸದ್ಯ ಹೀರಾಬೆನ್ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಗಣ್ಯರು ಸಂತಾಪಗಳನ್ನು ಸೂಚಿಸುತ್ತಿದ್ದಾರೆ. ಅಲ್ಲದೇ ಪ್ರಧಾನಿಯವರಿಗೆ ಧೈರ್ಯ ತುಂಬುತ್ತಿದ್ದಾರೆ. ಇದನ್ನೂ ಓದಿ: ಇಂದೇ ಮೋದಿ ತಾಯಿ ಹೀರಾಬೆನ್ ಅಂತ್ಯಕ್ರಿಯೆ

    ನಾನ್‌ಸ್ಟಾಪ್ ಕೆಲಸದ ಹಿಂದಿತ್ತು ಅಮ್ಮನ ಟಿಪ್ಸ್: ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಮೋದಿ ನಾನ್ ಸ್ಟಾಪ್ ಕೆಲ್ಸದ ಹಿಂದೆ ಅಮ್ಮನ ಟಿಪ್ಸ್ ಇತ್ತು. ಪರಿಶ್ರಮವೇ- ಜೀವನದ ಮಂತ್ರ ಅಂತಾ ಅಮ್ಮ ಸದಾ ಮಗನಿಗೆ ಕಿವಿಮಾತು ಹೇಳುತ್ತಿದ್ದರು. ಪ್ರಾಮಾಣಿಕತೆ ಮತ್ತು ಸ್ವಾಭಿಮಾನದ ಪಾಠದ ಜೊತೆಗೆ ಸದಾ ಪರಿಶ್ರಮ ಪಡಬೇಕು ಸದಾ ಸಲಹೆ ಪಡೆಯುತ್ತಿದ್ದರು. ಯಾವುದೇ ಸವಾಲನ್ನು ಜಯಿಸಲು ನಿರಂತರ ಪರಿಶ್ರಮಪಡಬೇಕು ಎಂಬುದು ಅವರ ಪ್ರಮುಖ ಮಂತ್ರವಾಗಿತ್ತು. ಅದಕ್ಕಾಗಿಯೇ ನನ್ನ ಯಶಸ್ಸಿನ ಹಿಂದೆ ತಾಯಿಯಿದ್ದಾರೆ ಅಂತಾ ಮೋದಿ ಸದಾ ಹೇಳುತ್ತಿದ್ದರು ಅನ್ನೋದು ಭಾವುಕ.

    Live Tv
    [brid partner=56869869 player=32851 video=960834 autoplay=true]

  • ಮೋದಿ ಧರಿಸಿದ್ದ ಖಾಸಿ ಉಡುಗೆ ಬಗ್ಗೆ ವ್ಯಂಗ್ಯ – ಕೀರ್ತಿ ಆಜಾದ್ ವಿರುದ್ಧ ಎಫ್‍ಐಆರ್

    ಮೋದಿ ಧರಿಸಿದ್ದ ಖಾಸಿ ಉಡುಗೆ ಬಗ್ಗೆ ವ್ಯಂಗ್ಯ – ಕೀರ್ತಿ ಆಜಾದ್ ವಿರುದ್ಧ ಎಫ್‍ಐಆರ್

    ಶಿಲ್ಲಾಂಗ್: ಪ್ರಧಾನಿ ನರೇಂದ್ರ ಮೋದಿ (Narendra Modi) ಇತ್ತೀಚೆಗೆ ಶಿಲ್ಲಾಂಗ್‍ಗೆ ಭೇಟಿ ನೀಡಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದರು. ಈ ಕಾರ್ಯಕ್ರಮದಲ್ಲಿ ಮೋದಿ ಅಲ್ಲಿನ ಸಾಂಪ್ರದಾಯಿಕ ಖಾಸಿ ಉಡುಪನ್ನು (Khasi Dress) ಧರಿಸಿದ್ದರು. ಈ ಉಡುಪಿನ ಬಗ್ಗೆ ವ್ಯಂಗ್ಯವಾಡಿದ್ದ ಮಾಜಿ ಕ್ರಿಕೆಟಿಗ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಕೀರ್ತಿ ಆಜಾದ್ (Kirti Azad) ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಖಾಸಿ ಉಡುಗೆಯ ಬಗ್ಗೆ ಕೀರ್ತಿ ಆಜಾದ್, ಮೋದಿ ತೊಟ್ಟಿರುವ ಉಡುಗೆ ಬಗ್ಗೆ ಪೋಸ್ಟ್ ಮಾಡಿ ಅವರು ಧರಿಸಿರುವುದು ಮಹಿಳೆಯ ಉಡುಗೆ ಎಂದು ಕಾಮೆಂಟ್ ಮಾಡಿದ್ದರು. ಮೋದಿಯವರು ಬುಡಕಟ್ಟು ಉಡುಪಿನ ಫೋಟೋ ಜೊತೆಗೆ ಮಹಿಳೆ ಧರಿಸಿದ ಖಾಸಿ ಬಟ್ಟೆ ಫೋಟೋ ಹಾಕಿ ಅವರು ಗಂಡು ಅಲ್ಲ ಹೆಣ್ಣು ಅಲ್ಲ. ಫ್ಯಾಷನ್‍ನ ಆರಾಧಕ ಮಾತ್ರ ಎಂದು ಕೀರ್ತಿ ಆಜಾದ್ ಪೋಸ್ಟ್ ಮಾಡಿದ್ದರು. ಇದನ್ನೂ ಓದಿ: ಹೀರಾಬೆನ್ ಆರೋಗ್ಯ ಸ್ಥಿರ – ತಾಯಿ ಭೇಟಿಗೆ ಅಹಮದಾಬಾದ್ ತೆರಳಿದ ಮೋದಿ

    ಆ ಬಳಿಕ ಈ ಬಗ್ಗೆ ತೀವ್ರ ಆಕ್ರೋಶ ಕೇಳಿ ಬಂದಿತ್ತು. ಬಳಿಕ ಎಚ್ಚೆತ್ತ ಕೀರ್ತಿ ಆಜಾದ್, ನನಗೆ ಉಡುಪಿಗೆ ಅಗೌರವಿಸುವ ಉದ್ದೇಶ ಇಲ್ಲ. ಮೋದಿಯವರ ಫ್ಯಾಶನ್ ಹೇಳಲು ಪ್ರಯತ್ನಿಸಿದ್ದೇನೆ ಎಂದು ಸ್ಪಷ್ಟನೆ ನೀಡಿ ಕ್ಷಮೆ ಕೇಳಿದ್ದರು. ಇದೀಗ ಈ ಬಗ್ಗೆ ಸದಾರ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: 1 ವರ್ಷದ ಬಳಿಕ ಜೈಲಿನಿಂದ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಬಿಡುಗಡೆ

    ಡಿ.18 ರಂದು ಮೇಘಾಲಯದಲ್ಲಿ 2,450 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲು ಪ್ರಧಾನಿ ಮೋದಿ ಶಿಲ್ಲಾಂಗ್‍ಗೆ ಭೇಟಿ ನೀಡಿದ್ದರು. ಈ ವೇಳೆ ಸಾಂಪ್ರದಾಯಿಕ ಗಾರೋ ಟೋಪಿಯೊಂದಿಗೆ ಸಾಂಪ್ರದಾಯಿಕ ಖಾಸಿ ಉಡುಪನ್ನು ಧರಿಸಿದ್ದರು. ಗರೋಸ್, ಖಾಸಿಗಳು ಮತ್ತು ಜಯಂತಿಯಾಗಳು ಮೇಘಾಲಯದ ಮೂರು ಪ್ರಮುಖ ಬುಡಕಟ್ಟು ಜನಾಂಗದವರಾಗಿದ್ದು, ಇದೇ ಉಡುಪನ್ನು ಮೋದಿ ಧರಿಸಿ ಗಮನಸೆಳೆದಿದ್ದರು.

    Live Tv
    [brid partner=56869869 player=32851 video=960834 autoplay=true]

  • 3ನೇ ಬಾರಿ ನೇಪಾಳದ ಪ್ರಧಾನಿ ಪಟ್ಟಕ್ಕೇರಿದ ಪುಷ್ಪ ಕಮಲ್ ದಹಾಲ್ ಪ್ರಚಂಡ

    3ನೇ ಬಾರಿ ನೇಪಾಳದ ಪ್ರಧಾನಿ ಪಟ್ಟಕ್ಕೇರಿದ ಪುಷ್ಪ ಕಮಲ್ ದಹಾಲ್ ಪ್ರಚಂಡ

    ಕಠ್ಮಂಡು: ಸಿಪಿಎನ್-ಮಾವೋವಾದಿ ಸೆಂಟರ್ (CPNMC) ಅಧ್ಯಕ್ಷ ಪುಷ್ಪ ಕಮಲ್ ದಹಾಲ್ ಪ್ರಚಂಡ (Pushpa Kamal Dahal Prachanda) ನೇಪಾಳದ (Nepal) ನೂತನ ಪ್ರಧಾನಿಯಾಗಿ (Prime Minister) ನೇಮಕಗೊಂಡಿದ್ದಾರೆ. ಈ ಮೂಲಕ 3 ಬಾರಿ ನೇಪಾಳದ ಪ್ರಧಾನಿ ಪಟ್ಟಕ್ಕೇರಿದಂತಾಗಿದೆ.

    ನೇಪಾಳದ ಅಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ ನೂತನ ಪ್ರಧಾನಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಅವರನ್ನು ಇಂದು ನೇಮಕ ಮಾಡಿದ್ದಾರೆ. ಪ್ರಚಂಡ ಅವರು ಪಕ್ಷೇತರ ಸಂಸದರು ಸೇರಿದಂತೆ 169 ಸಂಸದರ ಬೆಂಬಲವಿದೆ ಎಂದು ತಿಳಿಸಿದ ಬಳಿಕ ಪ್ರಧಾನಿಯಾಗಿ ಆಯ್ಕೆ ಮಾಡಲು ಅಧ್ಯಕ್ಷರು ಒಪ್ಪಿದರು. ಇದಕ್ಕೂ ಮೊದಲು ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ನೇತೃತ್ವದಲ್ಲಿ ಸಿಪಿಎನ್-ಯುಎಂಎಲ್, ಸಿಪಿಎನ್-ಎಂಸಿ, ರಾಷ್ಟ್ರೀಯ ಸ್ವತಂತ್ರ ಪಕ್ಷ (RSP) ಮತ್ತು ಇತರ ಪಕ್ಷಗಳೊಂದಿಗೆ ಮಹತ್ವದ ಸಭೆ ನಡೆಯಿತು. ಇದರಲ್ಲಿ ಪ್ರಚಂಡ ನೇತೃತ್ವದಲ್ಲಿ ಸರ್ಕಾರ ರಚಿಸಲು ಒಪ್ಪಿಗೆ ನೀಡಿದ ಬಳಿಕ ಮೈತ್ರಿ ಸರ್ಕಾರ ರಚನೆಯಾಗಿದೆ. ಇದನ್ನೂ ಓದಿ: ಅಟಲ್ ಬಿಹಾರಿ ವಾಜಪೇಯಿ ರೋಲ್‌ನಲ್ಲಿ ಪಂಕಜ್ ತ್ರಿಪಾಠಿ: ಫಸ್ಟ್ ಲುಕ್ ಔಟ್

    ಪ್ರಚಂಡ ನೇತೃತ್ವದಲ್ಲಿ ಸರ್ಕಾರ ರಚನೆಗೂ ಮುನ್ನ ಒಪ್ಪಂದವೊಂದು ನಡೆದಿದೆ. ಮೈತ್ರಿ ಸರ್ಕಾರದ ಒಪ್ಪಂದದ ಪ್ರಕಾರ ಮುಂದಿನ ಎರಡೂವರೆ ವರ್ಷಗಳ ಕಾಲ ಪ್ರಚಂಡ ಪ್ರಧಾನಿಯಾದರೆ, ಮುಂದಿನ ಎರಡೂವರೆ ವರ್ಷ ಸಿಪಿಎನ್-ಯುಎಂಎಲ್ ನಾಯಕ ಮಾಜಿ ಪ್ರಧಾನಿ ಒಲಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ಇದನ್ನೂ ಓದಿ: ನಮಗೆ ಜೀವ ನೀಡುವುದೂ ಗೊತ್ತು.. ಜೀವ ತೆಗೆಯುವುದೂ ಗೊತ್ತು – ಪ್ರಜ್ಞಾ ಸಿಂಗ್‌ ಪ್ರಚೋದನಕಾರಿ ಭಾಷಣ

    ಪ್ರಚಂಡ ನೇತೃತ್ವದ ಹೊಸ ಸರ್ಕಾರವು 275 ಸದಸ್ಯರ ಹೌಸ್ ಆಫ್ ರೆಪ್ರೆಸೆಂಟೇಟಿನ್ಸ್‌ನಲ್ಲಿ 169 ಸದಸ್ಯರ ಬೆಂಬಲವನ್ನು ಹೊಂದಿದೆ. ಇದರಲ್ಲಿ ಸಿಪಿಎನ್-ಯುಎಂಎಲ್‍ನ 78, ಸಿಪಿಎನ್-ಎಂಸಿಯಿಂದ 32, ಆರ್‌ಎಸ್‌ಪಿಯ 20, ಆರ್‌ಪಿಪಿಯಿಂದ 14, ಜೆಎಸ್‍ಪಿಯಿಂದ 12, ಆರು ಜನ್ಮತ್ ಮತ್ತು ಸಿವಿಲ್ ಲಿಬರೇಶನ್ ಪಾರ್ಟಿಯ ಮೂವರು ಸದಸ್ಯರೊಂದಿಗೆ ಸ್ವತಂತ್ರ ಸಂಸದರೂ ಸೇರಿದ್ದಾರೆ. ಪ್ರಚಂಡ ಮತ್ತು ಓಲಿ ಇಬ್ಬರು ಸೇರಿ ಮೈತ್ರಿ ಸರ್ಕಾರ ರಚಿಸಿದ್ದು, ಪ್ರಚಂಡ ಅವರನ್ನು ಮೊದಲ ಎರಡೂವರೆ ವರ್ಷಗಳ ಅವಧಿಯಲ್ಲಿ ಪ್ರಧಾನಿ ಮಾಡಲು ಓಲಿ ಒಪ್ಪಿಗೆ ನೀಡಿ ಬಳಿಕ ಮುಂದಿನ ಎರಡೂವರೆ ವರ್ಷಗಳ ಕಾಲ ಪ್ರಧಾನಿಯಾಗಿ ಅಧಿಕಾರಕ್ಕೇರುವ ಇರಾದೆಯಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 71 ಸಾವಿರ ಉದ್ಯೋಗಾಕಾಂಕ್ಷಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

    71 ಸಾವಿರ ಉದ್ಯೋಗಾಕಾಂಕ್ಷಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

    ನವದೆಹಲಿ: ಕೇಂದ್ರ ಸರ್ಕಾರದ (Union Government) ಮಹತ್ವಾಕಾಂಕ್ಷಿ ರೋಜಗಾರ್ ಮೇಳದಲ್ಲಿ (RozgarMela) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಹೊಸದಾಗಿ ನೇಮಕಗೊಂಡ ನೌಕರರಿಗೆ 71 ಸಾವಿರ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದಿದ್ದಾರೆ.

    ವರ್ಚುವಲ್ ಮೂಲಕ ಕಾರ್ಯಮಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ (Narendra Modi), ಶಿಕ್ಷಕರು, ನರ್ಸ್, ಫಾರ್ಮಾಸಿಸ್ಟ್, ವೈದ್ಯರು ಸೇರಿದಂತೆ ವಿವಿಧ ಕ್ಷೇತ್ರದ 71 ಸಾವಿರ ವಿವಿಧ ಕ್ಷೇತ್ರದ ಉದ್ಯೋಗಾಕಾಂಕ್ಷಿಗಳಿಗೆ ನೇಮಕಾತಿ ಪತ್ರ ಹಸ್ತಾಂತರ ಮಾಡಿದ್ದಾರೆ. ಅಲ್ಲದೇ ನೇಮಕಗೊಂಡ ನೌಕರರಿಗೆ ಆನ್‌ಲೈನ್‌ನಲ್ಲಿ ತರಬೇತಿ ನೀಡುವ `ಕರ್ಮಯೋಗಿ ಪ್ರಾರಂಭ್’ (Karmayogi Prarambh) ಆನ್‌ಲೈನ್ ಕಾರ್ಯಕ್ರಮಕ್ಕೂ ಚಾಲನೆ ನೀಡಿದ್ದಾರೆ. ಇದನ್ನೂ ಓದಿ: ದೊಡ್ಡ ಅನಾಹುತ ತಪ್ಪಿಸಿದ್ದಕ್ಕೆ ದೇವರಿಗೆ ಧನ್ಯವಾದ: ADGP ಅಲೋಕ್ ಕುಮಾರ್

    ಈ ಕುರಿತು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು 45 ಪ್ರಮುಖ ನಗರಗಳಲ್ಲಿ 71 ಸಾವಿರಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿದೆ. ಇದು ಸಾವಿರಾರು ಯುವಜನರಿಗೆ ಸಂತಸದ ವಿಷಯ. ಕಳೆದ ತಿಂಗಳೂ ಸಹ 75 ಸಾವಿರ ಯುವಜನರಿಗೆ ನೇಮಕಾತಿ ನೀಡಲಾಗಿದೆ. ಇದು ರಾಷ್ಟ್ರದ ಅಭಿವೃದ್ಧಿಯ ವೇಗ ಹೆಚ್ಚಿಸುವ ನಮ್ಮ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: `ಕಾಂತಾರ’ ಚಿತ್ರದ ಹಾಡಿಗೆ ಧ್ವನಿಯಾದ ಜರ್ಮನ್ ಅಂದ ಗಾಯಕಿ

    ಕೇಂದ್ರ ಸರ್ಕಾರ ಇನ್ನು 1 ವರ್ಷದಲ್ಲಿ 10 ಲಕ್ಷ ಉದ್ಯೊಗಿಗಳ ನೇಮಕ ಗುರಿ ಹೊಂದಿದೆ. ಈ ನಿಮಿತ್ತ ಕಳೆದ ಅಕ್ಟೊಬರ್‌ನಲ್ಲಿ ಸಹ ಮೋದಿ ನೇಮಕಗೊಂಡ 75 ಸಾವಿರ ಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ್ದರು. ಇದರ 2ನೇ ಭಾಗವಾಗಿ ಇಂದು 71 ಸಾವಿರ ಜನರಿಗೆ ನೇಮಕಾತಿ ಪತ್ರವನ್ನು ವಿತರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ನಾನು ಮೋದಿ ಭಕ್ತ’ ಎಂದು ಬಹಿರಂಗವಾಗಿ ಘೋಷಿಸಿದ ನಟ ಅನಂತ್ ನಾಗ್

    ‘ನಾನು ಮೋದಿ ಭಕ್ತ’ ಎಂದು ಬಹಿರಂಗವಾಗಿ ಘೋಷಿಸಿದ ನಟ ಅನಂತ್ ನಾಗ್

    ‘ಪ್ರಧಾನಿ ನರೇಂದ್ರ ಮೋದಿ (Narendra Modi) ಎಂಟೂವರೆ ವರ್ಷಗಳಲ್ಲಿ ಒಂದು ದಿನವೂ ರಜೆ ತಗೆದುಕೊಳ್ಳದೇ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸಗಳಿಗೆ ನಾನು ಮನಸೋತಿದ್ದೇನೆ. ಹಾಗಾಗಿ ನಾನು ಮೋದಿ ಭಕ್ತ ಎಂದು ಹೇಳಿಕೊಳ್ಳಲು ಯಾವುದೇ ಸಂಕೋಚವಿಲ್ಲ’ ಎಂದು ನಟ ಅನಂತ್ ನಾಗ್ ಬಹಿರಂಗವಾಗಿ ಘೋಷಿಸಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು ಇವರ ಆಶ್ರಯದಲ್ಲಿ ‘ರಾಷ್ಟ್ರೀಯ ಪತ್ರಿಕಾ ದಿನಾಚರಣೆ’ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಈ ಮಾತುಗಳನ್ನು ಆಡಿದ್ದಾರೆ.

    ರಾಷ್ಟ್ರ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ವಿಷಯವಾಗಿ ಮಾತನಾಡಿದ ಅನಂತ್ ನಾಗ್, ‘ರಾಷ್ಟ್ರದ ನಿರ್ಮಾಣ ದಲ್ಲಿ ಮಾಧ್ಯಮಗಳ ಪಾತ್ರ ಅನ್ನೋ ವಿಚಾರದಲ್ಲಿ ಕಾರ್ಯಕ್ರಮಕ್ಕೆ ಆಹ್ವಾನ ಕೊಟ್ಟಾಗ ನಾನು ಯೋಚಿಸಿದೆ. ಇದ್ಯಾವುದು ಮೋದಿ ತಂದಿರುವ ಹೊಸ ಕಾರ್ಯಕ್ರಮವಾ ಅಂತಾ ಯೋಚನೆಗೆ ಬಿದ್ದೆ. ಪತ್ರಿಕೆಗಳು ಹೀಗೆ ನಡೆಯಬೇಕು ಅಂತಾ ಸರ್ಕಾರಗಳು ತೀರ್ಮಾನ ಮಾಡಬೇಕಾ..? ಹೊಸ ಹೊಸ ಪೀಳಿಗೆಯ ಮಾಧ್ಯಮಗಳು ಹೇಗಿರಬೇಕು ಅಂತಾ ಅವರೇ ಚಿಂತಿಸಬೇಕು’ ಎಂದು ಅವರು ಪ್ರಧಾನ ಭಾಷಣದಲ್ಲಿ ಮಾತನಾಡಿದರು. ಇದನ್ನೂ ಓದಿ: ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ `ಕಾಂತಾರ’ ನಟಿ ಸಪ್ತಮಿ ಭೇಟಿ

     

    ಬಿಜೆಪಿ ಪರವಾಗಿ ಈಗಾಗಲೇ ಅನಂತ್ ನಾಗ್ (Anant Nag)  ಸಾಕಷ್ಟು ಮಾತುಗಳನ್ನು ಆಡಿದ್ದಾರೆ. ಸಂಘ ಪರಿವಾರದ  ಅನೇಕ ಕಾರ್ಯಕ್ರಮಗಳಲ್ಲೂ ಅವರು ಭಾಗಿಯಾಗಿದ್ದಾರೆ. ಮೋದಿ ಸಾಧನೆಯನ್ನು ಹಲವು ಬಾರಿ ಕೊಂಡಾಡಿದ್ದಾರೆ. ಇದೇ ಮೊದಲ ಬಾರಿಗೆ ಅವರು ತಾವು ಮೋದಿ ಭಕ್ತ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಹಿರಿಯ ನಟ  ಅನಂತ್ ನಾಗ್ ಆಡಿದ ಮಾತು ಯಾವ ರೀತಿಗೆ ಚರ್ಚೆಗೆ ಕಾರಣವಾಗತ್ತೋ ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]