Tag: Principal Secretary

  • ಬಣ ಬಡಿದಾಟದ ನಡುವೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೆ ಸುನಿಲ್ ಕುಮಾರ್ ಮನವಿ

    ಬಣ ಬಡಿದಾಟದ ನಡುವೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೆ ಸುನಿಲ್ ಕುಮಾರ್ ಮನವಿ

    ಬೆಂಗಳೂರು: ಬಿಜೆಪಿಯಲ್ಲಿ ಬಣ ಬಡಿದಾಟದ ನಡುವೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕಾರ್ಕಳ ಶಾಸಕ, ಮಾಜಿ ಸಚಿವ ವಿ. ಸುನೀಲ್ ಕುಮಾರ್ (Sunil Kumar) ಮನವಿ ಮಾಡಿಕೊಂಡಿದ್ದಾರೆ.

    ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ (BL Santosh) ಹಾಗೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರಿಗೆ ಪಕ್ಷದ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸಲು ಮನವಿ ಮಾಡಿಕೊಂಡಿದ್ದು, ಇದಕ್ಕೂ ಮುಂಚೆ ಮೌಖಿಕವಾಗಿ ಕೋರಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಪಕ್ಷದ ಬಣ ಬಡಿದಾಟ ಕಾರಣವಲ್ಲ, ವೈಯಕ್ತಿಕ ಕಾರಣಕ್ಕೆ ಪ್ರ‍್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಬೇಕು ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಶೀಲ ಶಂಕಿಸಿ ಪತ್ನಿ, ಅತ್ತೆಯ ಮೇಲೆ ತಲ್ವಾರ್‌ನಿಂದ ಅಟ್ಯಾಕ್‌ ಮಾಡಿದ ದುಷ್ಕರ್ಮಿ

    ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಾಮಾನ್ಯವಾಗಿ ನಾಲ್ವರು ಪ್ರಮುಖರನ್ನು ಮಾತ್ರ ನಿಯೋಜನೆ ಮಾಡಲಾಗುತ್ತದೆ. ಸದ್ಯ ಸುನೀಲ್ ಕುಮಾರ್, ನಂದೀಶ್ ರೆಡ್ಡಿ, ಪ್ರೀತಮ್ ಗೌಡ ಹಾಗೂ ಪಿ.ರಾಜೀವ್ ಈ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ಸುನೀಲ್ ಕುಮಾರ್ ಹಾಗೂ ವಿಜಯೇಂದ್ರ ನಡುವೆ ಯಾವುದೇ ರೀತಿಯ ಭಿನ್ನಭಿಪ್ರಾಯವಿಲ್ಲದ ತಟಸ್ಥ ಸಂಬಂಧವಿದೆ.

    ಕಳೆದ ಲೋಕಸಭಾ ಚುನಾವಣೆಯ ರಾಜ್ಯ ಉಸ್ತುವಾರಿಯಾಗಿದ್ದ ಸುನೀಲ್ ಕುಮಾರ್, ವಿಜಯೇಂದ್ರ ಜೊತೆ ಯಾವುದೇ ವಿವಾದ ಇಲ್ಲದೆ ಕಾರ್ಯನಿರ್ವಹಿಸಿದ್ದರು. ಇನ್ನೂ ಬಣ ಬಡಿದಾಟದ ವಿಷಯದಲ್ಲಿ ಸುನೀಲ್ ಕುಮಾರ್ ಯಾರ ಬಣಕ್ಕೂ ಸೇರಿಕೊಂಡಿಲ್ಲ. ಆದರೆ ಇದೀಗ ತಮ್ಮನ್ನು ಪ್ರ‍್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿರುವುದು ಕೂತುಹಲ ಮೂಡಿಸಿದೆ.

    ಸದ್ಯ ಈ ಕುರಿತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ವಿಜಯೇಂದ್ರ ಮಾಹಿತಿ ನೀಡಿದ್ದು, ಈ ಸಂಬಂಧ ಪಕ್ಷ ಯಾವುದೇ ರೀತಿಯ ನಿರ್ಧಾರವನ್ನು ಕೈಗೊಂಡಿಲ್ಲ.ಇದನ್ನೂ ಓದಿ: ಸೈಫ್‌ ಮೇಲೆ ಹಲ್ಲೆ ಎಸಗಿದ ದಾಳಿಕೋರ ಬಾಂಗ್ಲಾ ಪ್ರಜೆ: ಮುಂಬೈ ಪೊಲೀಸ್‌

     

  • ಪಿಎಂ ಮೋದಿ ಪ್ರಧಾನ ಕಾರ್ಯದರ್ಶಿಯ ಅಳಿಯ, ಮಗಳ ಸೋಗಿನಲ್ಲಿ ವಂಚನೆ – ಓಡಿಶಾ ದಂಪತಿ ಅರೆಸ್ಟ್

    ಪಿಎಂ ಮೋದಿ ಪ್ರಧಾನ ಕಾರ್ಯದರ್ಶಿಯ ಅಳಿಯ, ಮಗಳ ಸೋಗಿನಲ್ಲಿ ವಂಚನೆ – ಓಡಿಶಾ ದಂಪತಿ ಅರೆಸ್ಟ್

    ಭುವನೇಶ್ವರ: ಪಿಎಂ ಪ್ರಧಾನ ಕಾರ್ಯದರ್ಶಿಯ ಮಗಳು ಹಾಗೂ ಅಳಿಯನ ಸೋಗಿನಲ್ಲಿ ಜನರನ್ನು ವಂಚಿಸುತ್ತಿದ್ದ ಆರೋಪದ ಮೇಲೆ ಓಡಿಶಾ ದಂಪತಿಯನ್ನು (Odisha) ಬಂಧಿಸಲಾಗಿದೆ.

    ಆರೋಪಿಗಳನ್ನು ಕಂಧಮಾಲ್ ಜಿಲ್ಲೆಯ ನಿವಾಸಿ ಪತ್ನಿ ಹನ್ಸಿತಾ ಅಭಿಲಿಪ್ಸಾ (38) ಹಾಗೂ ಪತಿ ಅನಿಲ್ ಕುಮಾರ್ ಮೊಹಂತಿ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: BBK 11: ‘ರಾಧಾ ಕೃಷ್ಣ’ರಂತೆ ಇದ್ದೀರಾ: ಭವ್ಯಾಗೆ ನೇರವಾಗಿ ಹೇಳಿದ ತ್ರಿವಿಕ್ರಮ್‌ ತಾಯಿ

    ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಪ್ರಧಾನ ಕಾರ್ಯದರ್ಶಿ ಪಿಕೆ ಮಿಶ್ರಾ (PK Mishra) ಅವರ ಮಗಳು ಮತ್ತು ಅಳಿಯನ ಸೋಗಿನಲ್ಲಿ ಬಂದು ಜನರನ್ನು ವಂಚಿಸುತ್ತಿದ್ದರು ಹಾಗೂ ನಾವು ಪ್ರಭಾವಿಗಳ ಸಂಪರ್ಕವನ್ನು ಹೊಂದಿದ್ದೇವೆ ಎಂದು ಹೇಳಿಕೊಂಡು ವಂಚನೆ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಒಡಿಶಾ ಪೊಲೀಸರು ಬಂಧಿಸಿದ್ದಾರೆ.

    ತನಿಖೆ ನಡೆಸಿದ ಪೊಲೀಸರು ದಂಪತಿಯ ನಿವಾಸದಿಂದ ಹಲವಾರು ಛಾಯಾಚಿತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಅವುಗಳಲ್ಲಿ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಉನ್ನತ ವ್ಯಕ್ತಿಗಳೊಂದಿಗೆ ತೆಗೆಸಿಕೊಂಡಿರುವ ಫೋಟೋಗಳನ್ನು ಇಟ್ಟುಕೊಂಡಿದ್ದಾರೆ. ತಂತ್ರಜ್ಞಾನದ ಮೂಲಕ ಉನ್ನತ ವ್ಯಕ್ತಿಗಳೊಂದಿಗೆ ಇರುವ ಫೋಟೋಗಳನ್ನು ರಚಿಸಿದ್ದಾರೆ. ವಂಚನೆ ಮಾಡಲು ಈ ಫೋಟೋಗಳನ್ನು ಬಳಸಿಕೊಂಡಿದ್ದಾರೆ. ಭುವನೇಶ್ವರದಲ್ಲಿ ಈಗಾಗಲೇ ಶ್ರೀಮಂತ ಉದ್ಯಮಿ, ಬಿಲ್ಡರ್‌ಗಳು, ಗಣಿಗಾರಿಕೆಯ ನಿರ್ವಾಹಕರು ಸೇರಿದಂತೆ ಇತರ ಪ್ರಭಾವಿ ವ್ಯಕ್ತಿಗಳನ್ನು ವಂಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸದ್ಯ ಗಣಿ ಮಾಲೀಕರ ದೂರಿನ ಮೇರೆಗೆ ಭಾನುವಾರ (ಡಿ.29) ರಂದು ಬಂಧಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 329 (3), 319 (2), 318 (4), ಮತ್ತು 3 (5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಇದನ್ನೂ ಓದಿ: 179 ಮಂದಿ ಬಲಿ ಪಡೆದ ದ.ಕೊರಿಯಾ ಡೆಡ್ಲಿ ವಿಮಾನ ಅಪಘಾತದಲ್ಲಿ ಇಬ್ಬರು ಬದುಕುಳಿದಿದ್ದು ಹೇಗೆ?