Tag: Pritam gowda

  • ನನಗೆ ಅವಮಾನ ಮಾಡಿದ್ದಾರೆ, ಈಗ ಅನುಭವಿಸಲಿ – ಬಿಜಿಪಿ ನಾಯಕರ ವಿರುದ್ಧವೇ ಎ.ಮಂಜು ಕಿಡಿ

    ನನಗೆ ಅವಮಾನ ಮಾಡಿದ್ದಾರೆ, ಈಗ ಅನುಭವಿಸಲಿ – ಬಿಜಿಪಿ ನಾಯಕರ ವಿರುದ್ಧವೇ ಎ.ಮಂಜು ಕಿಡಿ

    ಹಾಸನ: ನನ್ನ ಕ್ಷೇತ್ರದ ಮತದಾರರು ಯಾವ ಪಕ್ಷಕ್ಕೆ ಹೋಗಿ ಎನ್ನುವರೋ ಅಲ್ಲಿಗೆ ಹೋಗುತ್ತೇನೆ. ನನಗೆ ಬಿಜೆಪಿ ಅವರು ಅವಮಾನ ಮಾಡಿದ್ದಾರೆ ಅದಕ್ಕೆ ಅನುಭವಿಸಿದ್ದಾರೆ ಎ.ಮಂಜು ನಾಯಕರ ವಿರುದ್ಧವೇ ಮಾಜಿ ಸಚಿವ ಎ.ಮಂಜು ಕಿಡಿ ಕಾರಿದ್ದಾರೆ.

    ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಹಾಸನದಲ್ಲಿ ನನ್ನ ಮಗನಿಗೆ ಟಿಕೆಟ್ ಕೊಡಿ ಎಂದು ನಾವು ಕೇಳಿರಲಿಲ್ಲ. ಆದರೆ ಬಿಜೆಪಿ ಅವರೇ ಬಂದು ಮಂಥರ್ ಗೌಡಗೆ ಟಿಕೆಟ್ ನೀಡುವ ವಿಚಾರ ಮಾತನಾಡಿದ್ದರು. ಜೊತೆಗೆ ನಾನು ಐದು ಕೋಟಿ ರೂ. ಬಂಡವಾಳ ಹಾಕುತ್ತೇನೆ ಎಂದು ಹಾಸನದ ಶಾಸಕರು ಪಾರ್ಟಿ ಮೀಟಿಂಗ್‌ನಲ್ಲಿ ಹೇಳಿದ್ದರು ಎಂದರು.

    ಈ ಮಾತುಕತೆಯ ಬಳಿಕ ಶಾಸಕ ಪ್ರೀತಂ ಗೌಡ ಹಾಗೂ ಅವರ ಬೆಂಬಲಿಗರು ನಂತರದಲ್ಲಿ ಕ್ವಾಲಿಟಿ ಬಾರ್ ಶರತ್ ಅವರನ್ನು ಮಂಥರ್ ಬಳಿ ಕಳುಹಿಸಿ, ಚುನಾವಣೆಗೆ ನಿಲ್ಲಬಾರದು ಎಂದು ಹೇಳಿಸಿದ್ದಾರೆ. ನಂತರ ಕಾಂಗ್ರೆಸ್ ನಾಯಕರು ಮಂಥರ್ ಗೌಡನನ್ನು ಗುರುತಿಸಿ ಕೊಡಗಿನಲ್ಲಿ ಟಿಕೆಟ್ ನೀಡಿದ್ದಾರೆ ಎಂದು ತಿಳಿಸಿದರು.

    ಒಳ ಒಪ್ಪಂದ ಮಾಡಿಕೊಳ್ಳುವ ಪ್ರವೃತ್ತಿ ಹಾಸನದ ಕೆಲವು ನಾಯಕರಲ್ಲಿ ಇದೆ. ಮತದಾರರ ಮನವೊಲಿಸುವಲ್ಲಿ ಮುಖಂಡರು ವಿಫಲರಾಗಿದ್ದಾರೆ. ಅವರವರ ಸ್ವಾರ್ಥಕ್ಕೆ, ಸ್ವಹಿತಾಸಕ್ತಿಗೆ ಪಕ್ಷ ಬಲಿ ಕೊಟ್ಟಿದ್ದಾರೆ ಎಂದು ಪರೋಕ್ಷವಾಗಿ ಶಾಸಕರ ವಿರುದ್ಧ ಹರಿಹಾಯದ್ದರು.

    ಮತದಾರರು ಕೊಡಗು ವಿಧಾನ ಪರಿಷತ್ ಚುನಾವಣೆಯಲ್ಲಿ ಸರ್ಕಾರದ ಪರ ಮತ ಹಾಕಿದ್ದಾರೆ. ಆದ್ದರಿಂದ ಕೊಡಗಿನಲ್ಲಿ ಬಿಜೆಪಿ ಗೆದ್ದಿದೆ. ಕಾಂಗ್ರೆಸ್ ಪೈಪೋಟಿ ಕೊಟ್ಟಿದೆ. ಕೇವಲ ಹದಿನೈದು ದಿನದಲ್ಲಿ ಅಷ್ಟು ಮತ ನೀಡಿದ್ದಾರೆ. ಇದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎನ್ನುವುದನ್ನು ಕೊಡಗು ವಿಧಾನ ಪರಿಷತ್ ಚುನಾವಣೆಯಿಂದ ಸಾಬೀತಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಸರ್ಕಾರದ ಯೋಜನೆಯ ಪ್ರಯೋಜನ ಪಡೆಯಲು ಅಣ್ಣ-ತಂಗಿಯನ್ನೇ ಮದುವೆಯಾದ!

    ಇದೇ ವೇಳೆ ಕಾಂಗ್ರೆಸ್ ಬೆಂಬಲ ನೀಡಿರುವ ವಿಚಾರವಾಗಿ ಮಾತನಾಡಿದ ಅವರು, ಮಗನಿಗೆ ಆರ್ಥಿಕವಾಗಿ ಸಹಾಯ ಮಾಡಿದ್ದೇನೆ ಹೊರತು ಬಿಜೆಪಿ ವಿರುದ್ಧ ಹೇಳಿಕೆ ನೀಡಿಲ್ಲ. ಹಾಸನದ ಎಂಎಲ್‌ಸಿ ಚುನಾವಣೆಯಲ್ಲಿ ನಾಯಕರ ಕೊರತೆಯೇ ಎರಡು ಪಕ್ಷಗಳು ಹೀನಾಯವಾಗಿ ಸೋಲಲು ಕಾರಣವಾಗಿದೆ ಎಂದರು. ಇದನ್ನೂ ಓದಿ: ಕೊಡಗಿನ ಗ್ರಾಮವೊಂದರಲ್ಲಿ ಪುರಾತನ ಈಶ್ವರ ಕೆತ್ತನೆ ಕಲ್ಲುಗಳು ಪತ್ತೆ

    ವಿಧಾನ ಪರಿಷತ್ ಚುನಾವಣೆಯಲ್ಲಿ ನಾನು ತಟಸ್ಥವಾಗಿದ್ದೆ, ಯಾರನ್ನೂ ಬೆಂಬಲಿಸಿಲ್ಲ. ನಾನು ಬಿಜೆಪಿಯಲ್ಲಿದ್ದೇನೆ ಅಂಥಾ ನನಗೆ ಅನ್ನಿಸುತ್ತದೆ. ಆದರೆ ಪಕ್ಷ ಏನು ಹೇಳುತ್ತದೆ ಎನ್ನುವುದು ಗೊತ್ತಿಲ್ಲ. ಅಧಿಕೃತವಾಗಿ ಬಿಜೆಪಿ ಪಕ್ಷದಲ್ಲಿದ್ದೇನೆ ಎಂದರು. ಇದನ್ನೂ ಓದಿ: ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ- ಗೇಡೌನ್‌ ಮೇಲೆ ಅಧಿಕಾರಿಗಳ ದಾಳಿ

  • ಪ್ರೀತಮ್‍ಗೌಡ ಈಗ ಪಪ್ಪು ಆಗ್ತಾರಾ – ಹಳೆಯ ಸವಾಲನ್ನು ನೆನಪಿಸಿದ ಪ್ರಜ್ವಲ್

    ಪ್ರೀತಮ್‍ಗೌಡ ಈಗ ಪಪ್ಪು ಆಗ್ತಾರಾ – ಹಳೆಯ ಸವಾಲನ್ನು ನೆನಪಿಸಿದ ಪ್ರಜ್ವಲ್

    ಹಾಸನ: ಶಾಸಕ ಪ್ರೀತಮ್ ಗೌಡ ಅವರು ಈಗ ಪಪ್ಪು ಆಗುತ್ತಾರ ಎಂದು ಹಳೆಯ ಸವಾಲನ್ನು ಮತ್ತೆ ನೆನಪಿಸುವ ಮೂಲಕ ಹಾಸನ ಜಿಲ್ಲೆಯ ನೂತನ ಸಂಸದ ಪ್ರಜ್ವಲ್ ರೇವಣ್ಣ ಟಾಂಗ್ ನೀಡಿದ್ದಾರೆ.

    ಬೇಲೂರು ಚನ್ನಕೇಶವನ ದರ್ಶನ ಪಡೆದು ಮಾತನಾಡಿದ ಪ್ರಜ್ವಲ್ ರೇವಣ್ಣ, ಚುನಾವಣೆಗೂ ಮುನ್ನ ಪ್ರಜ್ವಲ್‍ರನ್ನು ಪ್ರೀತಮ್ ಹಾಸನದ ಪಪ್ಪು ಎಂದಿದ್ದರು. ಇದಕ್ಕೆ ಪ್ರಜ್ವಲ್ ಹಾಸನ ಕ್ಷೇತ್ರದಲ್ಲಿ ಲೀಡ್ ಪಡೆದ ನಂತರ ಯಾರು ಪಪ್ಪು ಎನ್ನುವುದು ಹೇಳುತ್ತೇನೆ ಎಂದು ಸವಾಲ್ ಹಾಕಿದ್ದರು. ಅದರಂತೆ ಈಗ ಹಾಸನ ಕ್ಷೇತ್ರದಲ್ಲಿ 15 ಸಾವಿರ ಲೀಡ್ ಪಡೆದಿರುವ ಪ್ರಜ್ವಲ್ ಪ್ರೀತಮ್ ಗೌಡ ಪಪ್ಪು ಎಂದು ಒಪ್ಪಿಕೊಳ್ಳಬೇಕು ಎಂದು ಸವಾಲನ್ನು ನೆನೆಪಿಸಿದ್ದಾರೆ.

     

    ಇದೇ ವೇಳೆ ರಾಜೀನಾಮೆ ಕುರಿತು ಮಾತನಾಡಿದ ಅವರು, ಸಂಸತ್ ಸ್ಥಾನಕ್ಕೆ ರಾಜೀನಾಮೆ ಕೊಡುವ ತೀರ್ಮಾನಕ್ಕೆ ನಾನು ಬದ್ಧ, ರಾಜ್ಯ ಹಾಗೂ ರೈತರ ಹಿತದೃಷ್ಟಿಯಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ. ಹಾಸನದ ಮಾಜಿ ಪ್ರಧಾನಿ ದೇವೇಗೌಡರೂ ಸೋತರೂ ಅವರ ಶಕ್ತಿ ಕುಗ್ಗಿಲ್ಲ. ಅವರ ಶಕ್ತಿ ನಮ್ಮ ಪಕ್ಷದ ಎಲ್ಲರ ಮೇಲಿದೆ. ಅವರ ಆಶೀರ್ವಾದ ಇದ್ದರೆ ನಾವು ಏನು ಬೇಕಾದರೂ ಜಯಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ದೇವೇಗೌಡರಿಗೆ ಕೇಂದ್ರ ಮಟ್ಟದಲ್ಲಿ ಬಹಳ ದೊಡ್ಡ ಗೌರವವಿದೆ ಇದರಿಂದ ರಾಜ್ಯಕ್ಕೆ ಹಲವು ರೀತಿಯ ಅನುದಾನ ತರಲು ಸಹಕಾರಿಯಾಗುತ್ತದೆ. ಹಾಗಾಗಿಯೇ ರಾಜೀನಾಮೆ ವಿಚಾರವನ್ನು ಅವರ ಮುಂದೆ ಇಟ್ಟು ಬಂದಿದ್ದೇನೆ. ನಾನು ಜೂನ್ 4 ರಂದು ಪ್ರಮಾಣ ವಚನ ಸ್ವೀಕಾರ ಮಾಡುತ್ತೇನೆ. ಆ ನಂತರ ನಾನು ಹಾಗೂ ಜಿಲ್ಲಾ ನಾಯಕರು ಗೌಡರ ಬಳಿ ಹೋಗಿ ರಾಜೀನಾಮೆ ವಿಚಾರದಲ್ಲಿ ಮತ್ತೆ ಒತ್ತಡ ಹಾಕುತ್ತೇವೆ ಎಂದು ಹೇಳಿದ್ದಾರೆ.

    ರಾಜೀನಾಮೆ ಮಾತು ಕೇವಲ ಗಿಮಿಕ್ ಎಂಬ ಎ. ಮಂಜು ಮಾತಿಗೆ ತಿರುಗೇಟು ನೀಡಿದ ಪ್ರಜ್ವಲ್, ಸೋತು ಸುಣ್ಣವಾಗಿರುವವರು ಮನೆಯಲ್ಲಿ ಇರಲಿ. ಅದನ್ನು ಬಿಟ್ಟು ಬಾಯಿಗೆ ಬಂದಂತೆ ಮಾತನಾಡಬಾರದು. ಎಲ್ಲಾ ಅಲೆಯ ನಡುವೆ ನಾವು 1.40 ಲಕ್ಷ ಮತದಿಂದ ಗೆದ್ದಿದ್ದೇವೆ ಎಂದರೆ ಜನರು ನಾವು ಮಾಡಿದ ಅಭಿವೃದ್ಧಿ ಮತ್ತು ಸರ್ಕಾರವನ್ನು ಒಪ್ಪಿದ್ದಾರೆ ಎಂದರ್ಥ ಎಂದು ತಿಳಿಸಿದರು.

  • ಬಿಜೆಪಿ ಶಾಸಕನ ಮನೆಯಲ್ಲಿ ಕಾಂಗ್ರೆಸ್ ಮಾಜಿ ಸಚಿವ ಎ.ಮಂಜು!

    ಬಿಜೆಪಿ ಶಾಸಕನ ಮನೆಯಲ್ಲಿ ಕಾಂಗ್ರೆಸ್ ಮಾಜಿ ಸಚಿವ ಎ.ಮಂಜು!

    – ಶತ್ರುವಿನ ಶತ್ರು ಎ.ಮಂಜುಗೆ ಮಿತ್ರ?
    – ಇಂತಹ ಘಟನೆ ಎಲ್ಲೂ ಆಗಿಲ್ಲ
    – ಮಾನವೀಯತೆ ದೃಷ್ಟಿಯಿಂದ ಭೇಟಿ

    ಹಾಸನ: ಕಾಂಗ್ರೆಸ್‍ನ ಮಾಜಿ ಸಚಿವ ಎ.ಮಂಜು ಇಂದು ಪ್ರೀತಂಗೌಡರ ಮನೆಗೆ ಭೇಟಿ ನೀಡಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ. ಶಾಸಕರ ಮನೆಗೆ ತೆರಳಿದ ಮಾಜಿ ಸಚಿವರು ಪ್ರೀತಂಗೌಡರ ಪೋಷಕರಿಗೆ ಈ ರೀತಿಯ ಘಟನೆಗಳಿಂದ ಭಯಪಡಬೇಡಿ ಎಂದು ಸಲಹೆ ನೀಡಿದರು.

    ಮಾಧ್ಯಮಗಳ ಜೊತೆ ಮಾತನಾಡಿದ ಎ.ಮಂಜು, ಇಂತಹ ಘಟನೆಗಳು ಎಲ್ಲೂ ಆಗಿಲ್ಲ. ನಮ್ಮ ಸಮ್ಮಿಶ್ರ ಸರ್ಕಾರದಲ್ಲಿ ನಾವುಗಳು ಪಾಲುದಾರರಾಗಿದ್ದೇವೆ. ಮಾಜಿ ಪ್ರಧಾನಿಗಳ ತವರಲ್ಲಿ ಈ ಘಟನೆ ಆಗಿರುವುದು ನಿಜವಾಗಲೂ ಮತದಾರನಿಗೆ ಹಾಗೂ ಪ್ರಥಮ ಪ್ರಜೆಗೆ ಮಾಡಿರುವ ಅಪಮಾನ. ಈ ಹಿಂದೆ ಕಾಂಗ್ರೆಸ್ ಮೇಲೆಯೂ ಈ ರೀತಿಯ ಹಲ್ಲೆ ನಡೆದಿತ್ತು. ರಾಜಕಾರಣದಲ್ಲಿ ಶತ್ರವೂ ಇಲ್ಲ, ಮಿತ್ರರೂ ಇಲ್ಲ. ಮಾನವೀಯತೆ ದೃಷ್ಟಿಯಿಂದ ಶಾಸಕರ ಮನೆಗೆ ಭೇಟಿ ನೀಡಿದ್ದೇನೆಯೇ ಹೊರತು ಇದರಲ್ಲಿ ರಾಜಕೀಯ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಎ.ಮಂಜು, ನಮ್ಮ ಜಿಲ್ಲೆಯಲ್ಲಿ ಈ ರೀತಿಯ ಘಟನೆಗಳು ನಡೆಯುವುದು ಒಳ್ಳೆಯ ಸಂಪ್ರದಾಯ ಅಲ್ಲ. ಓರ್ವ ಚುನಾಯಿತ ಪ್ರತಿನಿಧಿಗೆ ರಕ್ಷಣೆ ಇಲ್ಲದೇ ಹೋದರೆ ಸಾಮಾನ್ಯ ಜನರ ಸ್ಥಿತಿ ಏನು ಆಗಬೇಕು. ಜಿಲ್ಲೆಯ ಮಾಜಿ ಮಂತ್ರಿಯಾದ ನಾನು, ಯಾರು ಘಟನೆಯಲ್ಲಿ ಭಾಗಿಯಾಗಿದ್ದಾರೆ ಅಂತಹವರ ವಿರುದ್ಧ ಸರ್ಕಾರ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ಸಮ್ಮಿಶ್ರ ಸರ್ಕಾರದಲ್ಲಿ ನಾವು ಭಾಗಿಯಾಗಿದ್ದರಿಂದ ನಮಗೂ ಸಹ ಮುಜುಗರ ಆಗುತ್ತದೆ. ಈ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರದ ಆಡಳಿಯ ವೈಖರಿಯ ಬಗ್ಗೆ ಮಾತನಾಡಲು ಇಷ್ಟಪಡಲ್ಲ. ರಾಜಕೀಯದಲ್ಲಿ ಯಾರು ಶತ್ರು ಮತ್ತು ಮಿತ್ರರು ಇಲ್ಲ. ಈ ರೀತಿಯ ಗಲಾಟೆಗಳು ನಡೆದಾಗ ಎಲ್ಲರ ಮನೆಗೆ ಪಕ್ಷಾತೀತವಾಗಿ ಭೇಟಿ ನೀಡಿದ್ರೆ ಮಾತ್ರ ಇಂತಹ ಘಟನೆಗಳು ಮರುಕಳಿಸಲ್ಲ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಯಾರು ಏನು ಅಂದುಕೊಳ್ಳುತ್ತಾರೆ ಎಂಬುದರ ಬಗ್ಗೆ ಚಿಂತಿಸಲ್ಲ. ಮಂಜು ಮಂಜುನಾಗಿಯೇ ಇರುತ್ತಾನೆ ಎಂದು ಹೇಳಿದರು.

     

    ಪ್ರತಿ ಬಾರಿಯೂ ದೇವೇಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಎ.ಮಂಜು ಅವರ ನಡೆ ಹಾಸನ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಒಂದು ವೇಳೆ ದೇವೇಗೌಡರ ಬದಲಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಿದ್ರೆ ನಮ್ಮ ವಿರೋಧವಿದೆ ಎಂದು ಮಂಜು ಅಸಮಾಧಾನ ಹೊರಹಾಕಿದ್ದರು. ವಿಧಾನಸಭಾ ಚುನಾವಣೆಗೂ ಮೊದಲಿನಿಂದಲೂ ದೊಡ್ಡಗೌಡರು ಮತ್ತು ಮಂಜು ನಡುವೆ ಶೀತಲ ಸಮರ ಇದೆ ಎನ್ನುವ ಮಾತು ಈಗಲೂ ಹಾಸನ ಜನರ ಬಾಯಲ್ಲಿದೆ. ಈ ಮಧ್ಯೆ ಇಂದು ಪ್ರೀತಂ ಗೌಡರ ಮನೆಗೆ ಭೇಟಿ ನೀಡಿ ಮಂಜು ಹಾಸನ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ.

    ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಬಗ್ಗೆ ಬಿಜೆಪಿ ಶಾಸಕ ಪ್ರೀತಂಗೌಡ ಹೇಳಿಕೆಯನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯಲ್ಲಿ ಕಲ್ಲು ತೂರಾಟ ನಡೆದಿದ್ದರಿಂದ ಉಡುಪಿ ಮೂಲದ ರಾಹುಲ್ ಕಣಿ ಎಂಬವರ ಹಣೆ ಭಾಗಕ್ಕೆ ಕಲ್ಲು ತಾಗಿತ್ತು. ಕಲ್ಲು ತೂರಾಟದ ಬಳಿಕ ಪರಿಸ್ಥಿತಿ ಉದ್ವಿಘ್ನಗೊಂಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv