Tag: private hospital

  • ವಾಣಿವಿಲಾಸ ಆಸ್ಪತ್ರೆಯಲ್ಲಿ ಔಷಧಗಳ ಕೊರತೆ – ಸಿಎಂ ಅವ್ರನ್ನೇ ಕೇಳಿ ಅಂತ ಸಿಬ್ಬಂದಿ ಉಡಾಫೆ!

    ವಾಣಿವಿಲಾಸ ಆಸ್ಪತ್ರೆಯಲ್ಲಿ ಔಷಧಗಳ ಕೊರತೆ – ಸಿಎಂ ಅವ್ರನ್ನೇ ಕೇಳಿ ಅಂತ ಸಿಬ್ಬಂದಿ ಉಡಾಫೆ!

    – ಅನಿವಾರ್ಯವಾಗಿ ಖಾಸಗಿ ಮೆಡಿಕಲ್‌ಗಳಲ್ಲಿ ಮೆಡಿಸಿನ್‌ ಖರೀದಿ ಮಾಡ್ತಿರೋ ರೋಗಿಗಳು

    ಬೆಂಗಳೂರು: ವಾಣಿವಿಲಾಸ ಸರ್ಕಾರಿ ಆಸ್ಪತ್ರೆಯಲ್ಲಿ (Vanivilas Government Hospital) ಮೆಡಿಸಿನ್ ಸಿಗದೇ ರೋಗಿಗಳು ಪರದಾಡ್ತಿದ್ದಾರೆ. ಯಾಕೆ ಶಾರ್ಟೆಜ್ ಅಂತ ಪ್ರಶ್ನಿಸಿದ್ರೆ ರೋಗಿಗಳಿಗೆ ಸಿಬ್ಬಂದಿ ಗದರಿಸ್ತಿದ್ದಾರೆ, ಸಿಎಂ ಅವರನ್ನೇ ಕೇಳಿ ಅಂತ ಉಡಾಫೆ ಉತ್ತರ ಕೊಡ್ತಿದ್ದಾರೆ. ಈ ಕರ್ಮಕಾಂಡ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಹೌದು. ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಮೆಡಿಸಿನ್ ಶಾರ್ಟೆಜ್ (Medicines Shortage) ಇದೆ. ಅಗತ್ಯ ಔಷಧಿಗಳು ಸಿಗದೇ ರೋಗಿಗಳು ಪರದಾಡ್ತಿದ್ದಾರೆ. ಅನಿವಾರ್ಯವಾಗಿ ಖಾಸಗಿ ಮೆಡಿಕಲ್‌ಗಳಲ್ಲಿ (Private Medical) ಕಾಸು ಕೊಟ್ಟು ಔಷಧ ಖರೀದಿ ಮಾಡ್ತಿದ್ದಾರೆ. ಆದ್ರೆ ಔಷಧ ಕೊಡಿ ಅಂತ ರೋಗಿಗಳು ಕೇಳಿದ್ರೆ ಖಾಲಿಯಾಗಿದೆ, ಸಿಎಂ ರನ್ನೇ ಕೇಳಿ ಅಂತ ಸಿಬ್ಬಂದಿ ಉಡಾಫೆ ಉತ್ತರ ನೀಡಿದ್ದಾರೆ. ದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಪುಂಡರ ಅಟ್ಟಹಾಸ – ಸಿಕ್ಕಸಿಕ್ಕ ಲಾರಿಗಳನ್ನ ಅಡ್ಡಹಾಕಿ ಲಾಂಗ್‌ ತೋರಿಸಿ ಹಣ ವಸೂಲಿ

    ಸಮಸ್ಯೆ ಆಗಿದ್ರೆ ಸರಿಪಡಿಸುವ ಕೆಲಸ ಮಾಡ್ತೇವೆ
    ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಿಂದ ಔಷಧಿಗಳ ಪೂರೈಕೆಯಲ್ಲಿ ವ್ಯತ್ಯಯ ಆಗ್ತಿದೆ. ಇದರಿಂದ ವಾಣಿವಿಲಾಸ ಆಸ್ಪತ್ರೆಗೆ ಅಗತ್ಯ ಔಷಧಿಗಳು ಪೂರೈಕೆ ಆಗ್ತಿಲ್ಲ. ಕೆಲ ಮಾತ್ರೆಗಳು ಮಾತ್ರ ಸ್ಟಾಕ್ ಇದೆ ಎನ್ನಲಾಗ್ತಿದೆ. ಇನ್ನೂ ಈ ವಿಚಾರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿ, ವೈದ್ಯಕೀಯ ಶಿಕ್ಷಣ ಸಚಿವರ ಜೊತೆ ಮಾತನಾಡಿ, ಸಮಸ್ಯೆ ಆಗಿದ್ರೆ ಮಾಹಿತಿ ಪಡೆದು ಸರಿಪಡಿಸುವ ಕೆಲಸ ಮಾಡಲಾಗುತ್ತೆ ಎಂದು ತಿಳಿಸಿದರು. ದನ್ನೂ ಓದಿ: ಮಲ್ಲೇಶ್ವರಂ | ಫರ್ನಿಚರ್ ಶಾಪ್‍ನಲ್ಲಿ ಭಾರೀ ಅಗ್ನಿ ಅವಘಡ – 5 ಕೋಟಿ ಮೌಲ್ಯದ ವಸ್ತುಗಳು ಭಸ್ಮ

    ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಉಚಿತವಾಗಿ ಸಿಗುತ್ತೆ ಅಂತ ಆಸ್ಪತ್ರೆ ಆವರಣದಲ್ಲಿದ್ದ ಜನೌಷಧಿ ಕೇಂದ್ರಗಳನ್ನ ಮುಚ್ಚಿಸಿದ್ರು. ಈಗ ಆಸ್ಪತ್ರೆಯಲ್ಲಿ ಔಷಧಿಗಳೇ ಸಿಗ್ತಿಲ್ಲ. ಔಷಧಿ ಖರೀದಿಗೆ ಕರೆಯಲಾಗಿರುವ ಟೆಂಡರ್‌ ಕೂಡ ಅಂತಿಮ ಆಗಿಲ್ಲ. ಹೀಗಾಗಿ ಕೆಲ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಎದುರಿಸುವಂತಾಗಿದೆ. ದನ್ನೂ ಓದಿ: ದರ್ಶನ್ ಪತ್ನಿ ಮನೆಯಲ್ಲಿ 3 ಲಕ್ಷ ನಗದು ಕಳವು ಕೇಸ್‌ – ಹಣದ  ಮೂಲದ ಬಗ್ಗೆ ಮಾಹಿತಿ ಕೇಳಿದ ಪೊಲೀಸರು

  • ಕುಟುಂಬಸ್ಥರ ಚಿಕಿತ್ಸೆಗಾಗಿ ಭಿಕ್ಷೆ ಬೇಡಿದ ಜನ – ಮೈಸೂರಲ್ಲೊಂದು ಮನಕಲಕುವ ಘಟನೆ

    ಕುಟುಂಬಸ್ಥರ ಚಿಕಿತ್ಸೆಗಾಗಿ ಭಿಕ್ಷೆ ಬೇಡಿದ ಜನ – ಮೈಸೂರಲ್ಲೊಂದು ಮನಕಲಕುವ ಘಟನೆ

    – ನೊಂದ ಕುಟುಂಬದ ಕಣ್ಣೀರಿಗೆ ಕರಗಿದ ಆಸ್ಪತ್ರೆ ಆಡಳಿತ ಮಂಡಳಿ

    ಮೈಸೂರು: ನಂಜನಗೂಡು (Nanjangud) ತಾಲ್ಲೂಕಿನ ಹೆಡತಲೆ ಗ್ರಾಮದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಆಸ್ಪತ್ರೆ ಹಣಕ್ಕಾಗಿ ಗ್ರಾಮದ ಯುವಕರು, ಸಂಬಂಧಿಗಳ ಜೊತೆ ಸೇರಿ ಕುಟುಂಬವೊಂದು ಭಿಕ್ಷೆ ಬೇಡಿದೆ.

    ಹೌದು. ಇದೇ ತಿಂಗಳ 2ನೇ ತಾರೀಖು ಬದನವಾಳು ಬಳಿ 2 ಬೈಕ್ ನಡುವೆ ಅಪಘಾತ ಆಗಿದ್ದು, 6 ಜನ ಗಾಯಗೊಂಡಿದ್ದರು. ಅದರಲ್ಲಿ ಒಂದೇ ಕುಟುಂಬದ ತಂದೆ ಮಹೇಶ್ (38) ತಾಯಿ ರಾಣಿ (32) ಹಾಗೂ ಮಗಳು ಆದ್ಯ (5) ಗಾಯಗೊಂಡಿದ್ರು. ಇದನ್ನೂ ಓದಿ: ಚಾಮುಂಡಿ ಚಲೋ ಪಾದಯಾತ್ರೆಗೆ ಪೊಲೀಸರ ತಡೆ – ಬಿಜೆಪಿ, ಹಿಂದೂ ಕಾರ್ಯಕರ್ತರು ವಶಕ್ಕೆ

    ತಾಯಿ, ಮಗು ಒಂದೆಡೆ, ತಂದೆ ಮತ್ತೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಸದ್ಯ ಮಗು ಆದ್ಯಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗ್ತಿದೆ. 3 ದಿನದ ಚಿಕಿತ್ಸೆಗೆ 1,80,000 ಹಣ ಕಟ್ಟಬೇಕು ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ. ಮಗು ನೋಡಬೇಕು, ವೆಂಟಿಲೇಟರ್‌ನಿಂದ ಹೊರ ತೆಗೆಯಬೇಕು ಅಂದ್ರೆ ಹಣ ಕಟ್ಟಿ ಅಂತಿದ್ದಾರೆ ಅಂತ ಸಂಬಂಧಿಕರು ಆರೋಪಿಸಿದ್ದಾರೆ. ಕೂಲಿ ಮಾಡುವ ಕುಟುಂಬಕ್ಕೆ ಅಷ್ಟು ಹಣ ನೀಡಲು ಆಗದ ಕಾರಣ ಬಡ ಕುಟುಂಬದ ನೆರವಿಗೆ ಗ್ರಾಮದ ಯುವಕರು, ಸಂಬಂಧಿಗಳು ಭಿಕ್ಷೆ ಬೇಡಿದ್ದಾರೆ. ಇದನ್ನೂ ಓದಿ: ಸಚಿವ ಹೆಚ್‌.ಸಿ ಮಹದೇವಪ್ಪ ಹೆಸರಿನಲ್ಲಿ ಬರೋಬ್ಬರಿ 27 ಲಕ್ಷ ರೂ. ವಂಚಿಸಿದ ಮಹಿಳೆ

    ದೊಡ್ಡಮ್ಮ ಮಂಗಳ ಅನ್ನೋವ್ರು ಭಿಕ್ಷೆ ಬೇಡೋ ವಿಡಿಯೋ ವೈರಲ್ ಆಗಿದೆ. ಆದರೆ, ಖಾಸಗಿ ಆಸ್ಪತ್ರೆ (ಬೃಂದಾವನ) ಆಡಳಿತ ಮಂಡಳಿಯ ಖಂಡೇಶ್ ಸ್ಪಷ್ಟನೆ ನೀಡಿದ್ದು, ಆಸ್ಪತ್ರೆ ಬಂದಾಗ ಇಲ್ಲಿನ ಚಿಕಿತ್ಸಾ ವೆಚ್ಚದ ಬಗ್ಗೆ ತಿಳಿಸಲಾಗಿತ್ತು. ಅವರು ಅದಕ್ಕೆ ಒಪ್ಪಿದ್ದರು. ಆ ಕುಟುಂಬದ ಆರ್ಥಿಕ ಪರಿಸ್ಥಿತಿ ನಮಗೆ ಗೊತ್ತಿರಲಿಲ್ಲ. ಭಿಕ್ಷೆ ಬೇಡಿ ಹಣ ತಂದಿದ್ದಾರೆ ಎಂಬುದು ನಮಗೆ ವಿಡಿಯೋ ಮೂಲಕ ತಿಳಿಯಿತು. ಹೀಗಾಗಿ ಈ ವಿಡಿಯೋ ನೋಡಿ ನಾವು ರಿಯಾಯಿತಿ ಕೊಡಲು ತೀರ್ಮಾನ ಮಾಡಿದ್ದೇವೆ. ಮಗು ಐಸಿಯುನಲ್ಲಿದ್ದರೂ ಡಿಸ್ಚಾರ್ಜ್ ಮಾಡಿ ಎನ್ನುತ್ತಿದ್ದಾರೆ ಅಂದಿದ್ದಾರೆ. ಇದನ್ನೂ ಓದಿ: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ – ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

  • ಪಾಟ್ನಾ ಆಸ್ಪತ್ರೆಯಲ್ಲಿ ಐವರ ಗ್ಯಾಂಗ್‌ನಿಂದ ಫೈರಿಂಗ್ – ಚಿಕಿತ್ಸೆ ಪಡೆಯುತ್ತಿದ್ದ ಕೊಲೆ ಆರೋಪಿ ಸಾವು

    ಪಾಟ್ನಾ ಆಸ್ಪತ್ರೆಯಲ್ಲಿ ಐವರ ಗ್ಯಾಂಗ್‌ನಿಂದ ಫೈರಿಂಗ್ – ಚಿಕಿತ್ಸೆ ಪಡೆಯುತ್ತಿದ್ದ ಕೊಲೆ ಆರೋಪಿ ಸಾವು

    ಪಾಟ್ನಾ: ಐವರ ಗ್ಯಾಂಗೊಂದು ಗನ್ ಹಿಡಿದು ಆಸ್ಪತ್ರೆಯೊಳಗೆ ನುಗ್ಗಿ ಚಿಕಿತ್ಸೆ ಪಡೆಯುತ್ತಿದ್ದ ಕೊಲೆ ಆರೋಪಿಯನ್ನು ಗುಂಡಿಕ್ಕಿ ಕೊಲೆಗೈದಿರುವ ಘಟನೆ ಪಾಟ್ನಾದ (Patna) ಪರಾಸ್ ಆಸ್ಪತ್ರೆಯಲ್ಲಿ ನಡೆದಿದೆ.

    ಪೆರೋಲ್ ಮೇಲೆ ಹೊರಗಿದ್ದ ಬಕ್ಸಾರ್ ಜಿಲ್ಲೆಯ ನಿವಾಸಿ ಚಂದನ್ ಮಿಶ್ರಾ ಮೃತ ಆರೋಪಿ. ದಾಳಿಕೋರರನ್ನು ರಿಯಲ್ ಎಸ್ಟೇಟ್‌ಗೆ ಸಂಬಂಧಿಸಿದ ಬಿಲ್ಡರ್‌ಗಳಾಗಿ ಕೆಲಸ ಮಾಡುತ್ತಿದ್ದರು ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಐವರು ದುಷ್ಕರ್ಮಿಗಳು ಕೃತ್ಯ ಎಸಗಿದ್ದು, ಘಟನೆಯ ದೃಶ್ಯಗಳು ಆಸ್ಪತ್ರೆಯಲ್ಲಿದ್ದ ಸಿಸಿಟವಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಇದನ್ನೂ ಓದಿ: ಸಿಗಂದೂರು ಸೇತುವೆ ಉದ್ಘಾಟನೆಗೆ ಸಿಎಂಗೆ ಬರಬೇಡ ಅಂದಿದ್ದೇ ಬಿಎಸ್‍ವೈ: ಯತ್ನಾಳ್ ಬಾಂಬ್

    ವಿಡಿಯೋದಲ್ಲಿ ಐವರ ಗ್ಯಾಂಗ್ ಗನ್ ಹಿಡಿದು ಆಸ್ಪತ್ರೆಯ ಒಳನುಗ್ಗಿದ್ದಾರೆ. ವಾರ್ಡ್ವೊಂದಕ್ಕೆ ತೆರಳಿ, ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಲೆ ಆರೋಪಿಯ ಮೇಲೆ ಗುಂಡು ಹಾರಿಸಿ, ತಕ್ಷಣ ಅಲ್ಲಿಂದ ಪರಾರಿಯಾಗಿದ್ದಾರೆ. ಈ ವೇಳೆ ಗಾಯಗೊಂಡಿದ್ದ ಚಂದನ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಆಸ್ಪತ್ರೆಯಲ್ಲಿದ್ದ ಇತರರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

    ಮೃತ ಚಂದನ್ ಕೊಲೆ ಆರೋಪದಲ್ಲಿ ಜೈಲುಪಾಲಾಗಿದ್ದ. ಆದರೆ ಆರೋಗ್ಯ ಸಮಸ್ಯೆಯಿರುವ ಕಾರಣ ಚಿಕಿತ್ಸೆ ಪಡೆಯಲು ಪೆರೋಲ್ ಮೇಲೆ ಹೊರಬಂದಿದ್ದ. ಇದೇ ವೇಳೆ ಅವನ ವಿರೋಧಿ ಗ್ಯಾಂಗ್‌ವೊಂದು ಸೇಡು ತೀರಿಸಿಕೊಳ್ಳಲು ದಾಳಿ ನಡೆಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಇನ್ನೂ ದಾಳಿಕೋರರು ಈ ಮುಂಚೆ ಹಲವು ಅಪರಾಧಗಳಲ್ಲಿ ಭಾಗಿಯಾಗಿದ್ದರು, ಸದ್ಯ ಅವರ ಫೋಟೋ ನಮ್ಮ ಬಳಿಯಿದ್ದು, ಪತ್ತೆಗಾಗಿ ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಮಿತಿಮೀರಿದ ಕಾಡಾನೆಗಳ ಉಪಟಳ – ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ

    ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಮಿತಿಮೀರಿದ ಕಾಡಾನೆಗಳ ಉಪಟಳ – ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ

    ಇದನ್ನೂ ಓದಿ: ಮಂಗಳೂರು| ಕಿರಿಯ ವಯಸ್ಸಿನಲ್ಲೇ ರೋಲ್ಸ್‌ ರಾಯ್ಸ್‌ನಲ್ಲಿ ಉದ್ಯೋಗ; ವರ್ಷಕ್ಕೆ 72 ಲಕ್ಷ ಸಂಬಳ- ಯುವತಿಗೆ ಸನ್ಮಾನ

  • ಐಸಿಯುನಲ್ಲಿ ವೆಂಟಿಲೇಟರ್‌ನಲ್ಲಿದ್ದಾಗ ಗಗನಸಖಿ ಮೇಲೆ ಲೈಂಗಿಕ ದೌರ್ಜನ್ಯ!

    ಐಸಿಯುನಲ್ಲಿ ವೆಂಟಿಲೇಟರ್‌ನಲ್ಲಿದ್ದಾಗ ಗಗನಸಖಿ ಮೇಲೆ ಲೈಂಗಿಕ ದೌರ್ಜನ್ಯ!

    ಲಕ್ನೋ: ಗುರುಗ್ರಾಮ್‌ನ (Gurugram) ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ವೆಂಟಿಲೇಟರ್‌ನಲ್ಲಿದ್ದಾಗಲೇ ಗಗನಸಖಿ (Air Hostess) ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ. ಈ ಸಂಬಂಧ ಖುದ್ದು ಮಹಿಳೆ ದೂರು ನೀಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಇದೇ ತಿಂಗಳ ಏಪ್ರಿಲ್‌ 13ರಂದು 43 ವರ್ಷದ ಗಗನಸಖಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಬಳಿಕ ತನ್ನ ಪತಿಗೆ ವಿಷಯ ತಿಳಿಸಿದ್ದಾಳೆ. ಬಳಿಕ ಆಕೆ ನೀಡಿದ ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    ಏನಿದು ಪ್ರಕರಣ?
    ಮಹಿಳೆ ದೂರು ನೀಡಿದ ಪ್ರಕಾರ, ಆಕೆ ಸಂಬಂಧಪಟ್ಟ ಕಂಪನಿಯ ಪರವಾಗಿ ತರಬೇತಿಗಾಗಿ ಗುರುಗ್ರಾಮ್‌ಗೆ ಬಂದಿದ್ದಳು, ಈ ವೇಳೆ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದಳು. ಈ ಸಂದರ್ಭದಲ್ಲಿ ಆಕೆ ನೀರಿನಲ್ಲಿ ಮುಳುಗಿ ಆರೋಗ್ಯ ತೀರಾ ಹದಗೆಟ್ಟಿತ್ತು. ಬಳಿಕ ಆಕೆಯನ್ನ ಖಾಸಗಿ ಆಸ್ಪತ್ರೆಗೆ (Private Hospital) ದಾಖಲಿಸಲಾಗಿತ್ತು. ಇದೇ ತಿಂಗಳ ಏಪ್ರಿಲ್ 5 ರಂದು ಪತಿ ಆಕೆಯನ್ನ ಹೆಚ್ಚುವರಿ ಚಿಕಿತ್ಸೆಗಾಗಿ ಗುರುಗ್ರಾಮ್‌ನ ಬೇರೋಂದು ಆಸ್ಪತ್ರೆಗೆ ದಾಖಲಿಸಿದರು. ಆಕೆಯನ್ನು ಏಪ್ರಿಲ್ 13 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.

    ಆದ್ರೆ ಏಪ್ರಿಲ್‌ 6ರಂದು ಐಸಿಯುನಲ್ಲಿ ವೆಂಟಿಲೇಟರ್‌ನಲ್ಲಿದ್ದಾಗ ಆಸ್ಪತ್ರೆಯ ಕೆಲವು ಸಿಬ್ಬಂದಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ವೆಂಟಿಲೇಟರ್‌ನಲ್ಲಿದ್ದ ಕಾರಣ ನನಗೆ ಆಗ ಮಾತನಾಡಲೂ ಸಾಧ್ಯವಾಗಲಿಲ್ಲ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದೆ. ದೌರ್ಜನ್ಯ ನಡೆಯುವಾಗ ನನ್ನ ಅಕ್ಕಪಕ್ಕ ಇಬ್ಬರು ನರ್ಸ್‌ಗಳೂ ಇದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

    ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಗುರುಗ್ರಾಮ್‌ನ ಸದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ತಂಡವು ಆಸ್ಪತ್ರೆಗೆ ಧಾವಿಸಿ ಡ್ಯೂಟಿ ಚಾರ್ಟ್ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂಉದ ಗುರುಗ್ರಾಮ್ ಪೊಲೀಸ್ ಇನ್ಸ್‌ಪೆಕ್ಟರ್‌ ಸಂದೀಪ್ ಕುಮಾರ್ ತಿಳಿಸಿದ್ದಾರೆ.

  • ಒಂದೂವರೆ ತಿಂಗಳ ಮಗುವಿಗೆ 2 ವರ್ಷ ಅವಧಿ ಮುಗಿದ ಲಸಿಕೆ ಹಾಕಿದ ವೈದ್ಯ

    ಒಂದೂವರೆ ತಿಂಗಳ ಮಗುವಿಗೆ 2 ವರ್ಷ ಅವಧಿ ಮುಗಿದ ಲಸಿಕೆ ಹಾಕಿದ ವೈದ್ಯ

    ಯಾದಗಿರಿ: ಒಂದೂವರೆ ತಿಂಗಳ ಮಗುವಿಗೆ 2 ವರ್ಷ ಅವಧಿ ಮುಗಿದ ಲಸಿಕೆ ಹಾಕಿ, ವೈದ್ಯ ನಿರ್ಲಕ್ಷ್ಯ ಮಾಡಿರುವ ಘಟನೆ ಯಾದಗಿರಿ (Yadagiri) ನಗರದ ಖಾಸಗಿ ಸೂಪರ್ ಸ್ಪೆಷಾಲಿಟಿ  ಆಸ್ಪತ್ರೆಯಲ್ಲಿ ನಡೆದಿದೆ.

    ತುಮಕೂರಿನ (Tumakuru) ಕುಣಿಗಲ್ (Kunigal) ಮೂಲದ ತ್ಯಾಗರಾಜ ಮತ್ತು ದೇವಿಕಾ ದಂಪತಿಯ ಮಗುವಿಗೆ ಲಸಿಕೆ ಹಾಕಿದ್ದಾರೆ. ಮಗು ಜನಿಸಿದ 45 ದಿನಗಳ ನಂತರ ಬಿಸಿಜಿ/ಹೆಕ್ಸಾಕ್ಸಿಮ್ ಲಸಿಕೆ ಹಾಕಿಸಬೇಕಾಗಿತ್ತು. ಈ ಹಿನ್ನೆಲೆ ತಾಯಿ ದೇವಿಕಾ ಯಾದಗಿರಿಯ ಖಾಸಗಿ ಆಸ್ಪತ್ರೆಗೆ ಲಸಿಕೆ ಹಾಕಿಸಲು ಹೋಗಿದ್ದರು. ಈ ವೇಳೆ ವೈದ್ಯರು ಅದೇ ಖಾಸಗಿ ಆಸ್ಪತ್ರೆಯ ಮೆಡಿಕಲ್ ಸ್ಟೋರ್‌ನಲ್ಲಿ ಖರೀದಿಸಿದ್ದ 3 ಸಾವಿರ ರೂ. ಬೆಲೆಯ ಲಸಿಕೆಯನ್ನು ಹಾಕಿದ್ದರು.ಇದನ್ನೂ ಓದಿ: ಸನಾತನ ಧರ್ಮದ ಕುರಿತ ಹೇಳಿಕೆ – ಉದಯನಿಧಿ ಸ್ಟಾಲಿನ್ ವಿರುದ್ಧ ಕೋರ್ಟ್ ಅನುಮತಿಯಿಲ್ಲದೇ ದೂರು ದಾಖಲಿಸುವಂತಿಲ್ಲ: ಸುಪ್ರೀಂ

    ಲಸಿಕೆ ಹಾಕಿಸಿಕೊಂಡು ಮನೆಗೆ ಬಂದ ಪತ್ನಿ, ತನ್ನ ಗಂಡನಿಗೆ ಲಸಿಕೆ ಕವರ್ ವಾಟ್ಸಪ್ ಮೂಲಕ ಕಳಿಸಿದ್ದಾರೆ. ಲಸಿಕೆಯ ಕವರ್ ಮೇಲೆ ಎಕ್ಸ್‌ಪೈರಿ ದಿನಾಂಕ ನವೆಂಬರ್ 2022  ಎಂದು ಪ್ರಿಂಟ್ ಆಗಿದೆ. 2 ವರ್ಷ ಅವಧಿ ಮುಗಿದಿರುವ ಲಸಿಕೆ ಹಾಕಿದ್ದನ್ನು ಕಂಡ ಪೋಷಕರು ಆತಂಕಗೊಂಡಿದ್ದಾರೆ.

    ಕುಣಿಗಲ್‌ನಿಂದ ಯಾದಗಿರಿಗೆ ದಾಖಲಾತಿಯೊಂದಿಗೆ ಬಂದ ಮಗುವಿನ ತಂದೆ ಡಿಹೆಚ್‌ಓ ಬಳಿ ಹೋಗಿ ನಡೆದಿರುವ ಘಟನೆ ಕುರಿತು ಮಾಹಿತಿ ನೀಡಿ, ನನ್ನ ಮಗುವಿನ ಪ್ರಾಣಕ್ಕೆ ಅಪಾಯವಾಗುವ ಲಸಿಕೆ ಹಾಕಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಜನರ ಮುಗ್ಧತೆ ದುರ್ಬಳಕೆ ಮಾಡಿಕೊಂಡು ಮೆಡಿಕಲ್ ಮಾಫಿಯಾ ಮಾಡ್ತಿದ್ದಾರೆಂದು ಆರೋಪಿಸಿ, ಯಾದಗಿರಿ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಇದನ್ನೂ ಓದಿ: ನನ್ನನ್ನು ಎಲ್ಲರೂ ಸೇರಿ ಟ್ರ್ಯಾಪ್‌ ಮಾಡಿದ್ರು.. ಅದ್ಕೆ ಈ ರೀತಿ ಕೆಲಸ ಮಾಡಿದ್ದೇನೆ: ನಟಿ ರನ್ಯಾ ಅಳಲು

  • ಬೆಳಗಾವಿಯಲ್ಲಿ ಗರ್ಭಿಣಿ ಸಾವು – ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಸ್ಥರ ಆರೋಪ

    ಬೆಳಗಾವಿಯಲ್ಲಿ ಗರ್ಭಿಣಿ ಸಾವು – ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಸ್ಥರ ಆರೋಪ

    ಬೆಳಗಾವಿ: ದುಡ್ಡು ಕಟ್ಟಿಲ್ಲ ಎಂದು ಚಿಕಿತ್ಸೆ ನೀಡದ್ದಕ್ಕೆ ಆರು ತಿಂಗಳ ಗರ್ಭಿಣಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ಬೆಳಗಾವಿ (Belagavi) ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.

    ಮೃತ ಮಹಿಳೆಯನ್ನು ಜಿಲ್ಲೆಯ ಕಂಗ್ರಾಳ ಗಲ್ಲಿಯ ನಿವಾಸಿ ಆರತಿ ಅನಿಲ್ ಚವ್ಹಾಣ (30) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಫೆಬ್ರವರಿಯಲ್ಲಿ ಕಂಪ್ಲಿ ಕ್ಷೇತ್ರಕ್ಕೆ 10 ಸಾವಿರ ಮನೆ ವಿತರಣೆ: ಜಮೀರ್

    ಮಂಗಳವಾರ ಬೆಳಿಗ್ಗೆ ಹೊಟ್ಟೆನೋವು ಎಂದು ಜಿಲ್ಲೆಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವೈದ್ಯರು ಮಧ್ಯಾಹ್ನ ಎರಡು ಗಂಟೆ ಹೊತ್ತಿಗೆ ಬಂದು ಮಗು ಹೊಟ್ಟೆಯಲ್ಲಿಯೇ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

    ಈ ವೇಳೆ ಹೆಚ್ಚಿನ ಚಿಕಿತ್ಸೆಗಾಗಿ 30 ಸಾವಿರ ರೂ. ಹಣ ಕಟ್ಟುವಂತೆ ವೈದ್ಯರು ತಿಳಿಸಿದ್ದು, ಸದ್ಯಕ್ಕೆ 10 ಸಾವಿರ ರೂ. ಹಣವನ್ನು ಕಟ್ಟಿ, ಉಳಿದ ಹಣವನ್ನು ಆಮೇಲೆ ಕಟ್ಟುವುದಾಗಿ ಕುಟುಂಬಸ್ಥರು ಹೇಳಿದ್ದರು. ಬಾಕಿ ಹಣ ಕಟ್ಟದೇ ಇರುವ ಕಾರಣ ಗರ್ಭಿಣಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ. ಆದ್ದರಿಂದ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

    ಕುಟುಂಬಸ್ಥರು ಆಸ್ಪತ್ರೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಠಾಣೆಯಲ್ಲಿ ನ್ಯಾಯ ಕೊಡಿಸುವಂತೆ ಕಣ್ಣೀರು ಹಾಕಿದ್ದು, ಸದ್ಯ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ (KhadeBazar Police Station) ದೂರು ದಾಖಲಾಗಿದೆ.ಇದನ್ನೂ ಓದಿ: Valmiki Scam | ಬಳ್ಳಾರಿ ಚುನಾವಣೆಗೆ ಹಣ ಬಳಕೆ – ಹಗರಣದ ಮಾಸ್ಟರ್‌ಮೈಂಡ್‌ ನಾಗೇಂದ್ರ

  • ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯನ ಖಾಸಗಿ ಅಂಗಕ್ಕೆ ಬ್ಲೇಡ್ ಹಾಕಿ ಪಾರಾದ ನರ್ಸ್!

    ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯನ ಖಾಸಗಿ ಅಂಗಕ್ಕೆ ಬ್ಲೇಡ್ ಹಾಕಿ ಪಾರಾದ ನರ್ಸ್!

    ಪಾಟ್ನಾ: ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯರೊಬ್ಬರ ಮರ್ಮಾಂಗಕ್ಕೆ ನರ್ಸ್ ಬ್ಲೇಡ್ ಹಾಕಿ ಪಾರಾದ ಘಟನೆ ಬಿಹಾರದ (Bihar) ಸಮಸ್ತಿಪುರ್ (Samastipur) ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.

    ಈ ಘಟನೆ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಡೆದಿದ್ದು, ಡಾಕ್ಟರ್ ಹಾಗೂ ಆತನ ಸಹಚರರು ಮದ್ಯದ ನಶೆಯಲ್ಲಿದ್ದರು. ಸಂತ್ರಸ್ತೆ ನರ್ಸ್ ಕೆಲಸ ಮುಗಿಸಿ ಮನೆಗೆ ಹೊರಡುವ ವೇಳೆ ಡಾಕ್ಟರ್ ಹಾಗೂ ಆತನ ಸಹಚರರು ಅತ್ಯಾಚಾರವೆಸಗಲು ಮುಂದಾದರು. ಆ ಸಂದರ್ಭದಲ್ಲಿ ತನ್ನ ಆತ್ಮರಕ್ಷಣೆ ಮಾಡಿಕೊಳ್ಳಲು ಆಕೆ ವೈದ್ಯರ ಖಾಸಗಿ ಅಂಗಕ್ಕೆ ಬ್ಲೇಡ್‌ನಿಂದ ಗಾಯ ಮಾಡಿ ಅಲ್ಲಿಂದ ತಪ್ಪಿಸಿಕೊಂಡು ಹೊರ ಬಂದರು. ನಂತರ ಆಸ್ಪತ್ರೆಯಿಂದ ಹೊರಬಂದು ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡಿ ಘಟನೆಯ ಬಗ್ಗೆ ಸಂತ್ರಸ್ತೆ ಹೇಳಿಕೆ ನೀಡಿರುವುದಾಗಿ ಸಮಸ್ತಿಪುರ ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ಸಂಜಯ್ ಕುಮಾರ್ ಪಾಂಡೆ ಗುರುವಾರ ಮಾಧ್ಯಮಗಳ ಮುಂದೆ ಮಾಹಿತಿ ನೀಡಿದರು. ಇದನ್ನೂ ಓದಿ: ಸಿಇಟಿ, ನೀಟ್ 2ನೇ ಸುತ್ತಿನ ಸೀಟು ಹಂಚಿಕೆಗೆ ತಯಾರಿ ಆರಂಭ- ಕೆಇಎ

    ಪೊಲೀಸರು ಕೂಡಲೇ ಸ್ಥಳಕ್ಕೆ ಬಂದು ಸಂತ್ರಸ್ತೆಯನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ನಂತರ ಅಧಿಕಾರಿಗಳ ತಂಡವೊಂದು ಆಸ್ಪತ್ರೆಯ ಒಳಗೆ ಹೋಗಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂಗಳು, ದಲಿತರೇ ಟಾರ್ಗೆಟ್: ಛಲವಾದಿ ನಾರಾಯಣಸ್ವಾಮಿ

    ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸುವ ಮುನ್ನಾ ಡಾಕ್ಟರ್ ಹಾಗೂ ಆತನ ಸಹಚರರು ಸಿಸಿಟಿವಿ ಕ್ಯಾಮೆರಾ ಸ್ವಿಚ್ ಆಫ್ ಮಾಡಿದ್ದಾರೆ. ಒಳಗಡೆಯಿಂದ ಆಸ್ಪತ್ರೆಯನ್ನು ಲಾಕ್ ಮಾಡಿದ್ದರು. ಮಹಿಳೆ ಅಲ್ಲಿಂದ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಸಂತ್ರಸ್ತೆ ನೀಡಿದ ಆಧಾರದ ಮೇಲೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳದಿಂದ ಬ್ಲೇಡ್ ಹಾಗೂ ಇತರೆ ಸಾಕ್ಷಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದರು. ಇದನ್ನೂ ಓದಿ: ನಾಗ್ಪುರ ಆಡಿ ಕಾರು ಅಪಘಾತ – ಬಾರ್‌ನಲ್ಲಿದ್ದ ಬಿಜೆಪಿ ಮುಖಂಡನ ಪುತ್ರನ ವೀಡಿಯೋ ಮಿಸ್ಸಿಂಗ್

  • ಡೆಂಗ್ಯೂ ಜ್ವರದಿಂದ MBBS ವಿದ್ಯಾರ್ಥಿ ಸಾವು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ!

    ಡೆಂಗ್ಯೂ ಜ್ವರದಿಂದ MBBS ವಿದ್ಯಾರ್ಥಿ ಸಾವು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ!

    – ಮಗ ಮೃತಪಟ್ಟ ಆಸ್ಪತ್ರೆಯಲ್ಲೇ ಡೆಂಗ್ಯೂ ಚಿಕಿತ್ಸೆ ಪಡೆಯುತ್ತಿರೋ ತಾಯಿ

    ಹಾಸನ: ಡೆಂಗ್ಯೂ ಜ್ವರದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಎಂಬಿಬಿಎಸ್ ವಿದ್ಯಾರ್ಥಿ (MBBS Student) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಖಾಸಗಿ ಆಸ್ಪತ್ರೆಯಲ್ಲಿ (Hassan Private Hospital) ನಡೆದಿದೆ.

    ಹೊಳೆನರಸೀಪುರ ತಾಲ್ಲೂಕಿನ ಹಳ್ಳಿ ಮೈಸೂರು ಹೋಬಳಿಯ ಗೋಹಳ್ಳಿ ಗ್ರಾಮದ ಕುಶಾಲ್ (22) ಮೃತ ವಿದ್ಯಾರ್ಥಿ. ಕುಶಾಲ್ ಡೆಂಗ್ಯೂ ಮಹಾಮಾರಿಯಿಂದಲೇ ಮೃತಪಟ್ಟಿದ್ದಾನೆ ಎನ್ನಲಾಗಿದ್ದು, ಪ್ರಯೋಗಾಲಯದ ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ ತಿಳಿದುಬಂದಿದೆ. ಇದನ್ನೂ ಓದಿ:  PublicTV Explainer: ಬಜೆಟ್‌ ಎಂದರೇನು? ಆಯವ್ಯಯದ ಬಗ್ಗೆ ನಿಮಗೆಷ್ಟು ಗೊತ್ತು?

    ಕಳೆದ ಒಂದು ವಾರದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಶಾಲ್, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ತಡರಾತ್ರಿ ಸಾವನ್ನಪ್ಪಿದ್ದಾನೆ. ಪ್ರತಿಭಾನ್ವಿತ, ಬಡ ವಿದ್ಯಾರ್ಥಿಯಾಗಿದ್ದ ಕುಶಾಲ್, ಹಿಮ್ಸ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಭವಿಷ್ಯದಲ್ಲಿ ವೈದ್ಯನಾಗಿ ಜನಸೇವೆ ಮಾಡಬೇಕು ಎಂಬ ಹಂಬಲ ಇಟ್ಟುಕೊಂಡಿದ್ದ ಕುಶಾಲ್, ಕಿರಿಯ ವಯಸ್ಸಿನಲ್ಲಿಯೇ ಕಣ್ಮರೆಯಾಗಿರುವುದು ಪೋಷಕರಲ್ಲಿ ಅತೀವ ದುಃಖವನ್ನುಂಟುಮಾಡಿದೆ. ಇದನ್ನೂ ಓದಿ: ಬೆಂಗಳೂರು-ಮಂಗಳೂರು ನಡುವೆ ಹೆಚ್ಚುವರಿ ರೈಲು ಆರಂಭ – ಸಂಸದ ಬ್ರಿಜೇಶ್‌ ಚೌಟ ಮನವಿಗೆ ತಕ್ಷಣವೇ ಸ್ಪಂದಿಸಿದ ರೈಲ್ವೆ ಇಲಾಖೆ

    ವಿಪರ‍್ಯಾಸವೆಂದರೇ ಕುಶಾಲ್ ಸಾವನ್ನಪ್ಪಿದ ಆಸ್ಪತ್ರೆಯಲ್ಲೇ ತಾಯಿ ರೇಖಾ ಸಹ ಡೆಂಗ್ಯೂ ಜ್ವರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ರೇಖಾ ಟೈಲರ್ ವೃತ್ತಿ ಮಾಡುತ್ತಿದ್ದು, ತಂದೆ ಮಂಜುನಾಥ್‌ ಶಿಕ್ಷಕನಾಗಿದ್ದಾರೆ. ತಮ್ಮ ಇತಿಮಿತಿಯ ನಡುವೆಯೂ ಮಗ ಚೆನ್ನಾಗಿ ಓದಿ ವೈದ್ಯನಾಗಲಿ, ಆ ಮೂಲಕ ನೊಂದ ಜನರಿಗೆ ಸೇವೆ‌ ಮಾಡಲಿ ಎಂಬುದು ತಂದೆ ಮಂಜುನಾಥ್‌ ಬಯಕೆಯಾಗಿತ್ತು. ಇದಕ್ಕಾಗಿ ಎಲ್ಲಾ ರೀತಿಯ ಶ್ರಮ ತೆಗೆದುಕೊಂಡಿದ್ದರು. ಆದರೆ ತನ್ನ ಹಾಗೂ ಹೆತ್ತವರ ಆಸೆ ಈಡೇರುವ ಮುನ್ನವೇ ಕುಶಾಲ್ ಮಾರಣಾಂತಿಕ ಕಾಯಿಲೆ ಬಲಿಯಾಗಿದ್ದಾನೆ. ಇದನ್ನೂ ಓದಿ: ರಾಜ್ಯದ ಜಲಾಶಯಗಳಲ್ಲಿ 536 ಟಿಎಂಸಿ ನೀರು ಸಂಗ್ರಹ – ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ

  • ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್‌ ಇರಿಸಿ ಚಿತ್ರೀಕರಣಕ್ಕೆ ಯತ್ನ!

    ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್‌ ಇರಿಸಿ ಚಿತ್ರೀಕರಣಕ್ಕೆ ಯತ್ನ!

    – ಪೊಲೀಸರಿಂದ ಅಪ್ರಾಪ್ತನ ಬಂಧನ

    ಮಂಗಳೂರು: ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಸಿದ್ದ ಅಪ್ರಾಪ್ತನೊಬ್ಬ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇನಲ್ಲಿ ನಡೆದಿದೆ. ಮೇ 6ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಖತರ್ನಾಕ್ ಪ್ಲ್ಯಾನ್‌ ಮಾಡಿದ್ದ ಆಸಾಮಿ:
    ಮೆಡಿಕಲ್ ಕಾಲೇಜಿಗೆ ರೋಗಿ ನೆಪದಲ್ಲಿ ಬಂದಿದ್ದ ಅಪ್ರಾಪ್ತ, ಬಳಿಕ ಅಲ್ಲೇ ಇದ್ದ ಲೇಡಿಸ್ ಟಾಯ್ಲೆಟ್‌ಗೆ ನುಗ್ಗಿ ಮೊಬೈಲ್ ಇಟ್ಟಿದ್ದಾನೆ. ಮೊಬೈಲ್ ಇಟ್ಟುಬಂದ ಸ್ವಲ್ಪ ಹೊತ್ತಿನಲ್ಲೇ ಮೊಬೈಲ್ ರಿಂಗ್ ಆಗುವುದು ಕೇಳಿಸಿದೆ. ಇದನ್ನೂ ಓದಿ: ಹಿಂದೆ ಡಿಕೆಶಿ ಟೆಂಟ್‌ನಲ್ಲಿ ಸಿನಿಮಾ ತೋರಿಸುತ್ತಿದ್ದ ಪ್ರವೃತ್ತಿ ಮುಂದುವರಿಸಿದ್ದಾರೆ: ಸಿಪಿವೈ ವಾಗ್ದಾಳಿ

    ಕೂಡಲೇ ಟಾಯ್ಲೆಟ್ ಕೊಠಡಿಯೊಳಗೆ ಬಂದ ಭದ್ರತಾ ಸಿಬ್ಬಂದಿ ಹುಡುಕಾಡಿದಾಗ ಮೊಬೈಲ್ ಕಣ್ಣಿಗೆ ಬಿದ್ದಿದೆ. ಸದ್ಯ ಮೊಬೈಲ್‌ನಲ್ಲಿ ಯಾವುದೇ ದೃಶ್ಯ ಸೆರೆಯಾಗಿಲ್ಲ ಎಂದು ತಿಳಿದುಬಂದಿದೆ. ಬಳಿಕ ಬಂದರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಈ ಸಂಬಂಧ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸದು ಕಾಲೇಜು ಸಿಸಿಟಿವಿ ದೃಶ್ಯ ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ 17 ವರ್ಷದ ಅಪ್ರಾಪ್ತನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: Stardom: ಕ್ಲೈಮ್ಯಾಕ್ಸ್‌ ಶೂಟಿಂಗ್‌ನಲ್ಲಿ ಬ್ಯುಸಿಯಾದ ಆರ್ಯನ್‌ಗೆ ಸಾಥ್ ಕೊಟ್ಟ ಶಾರುಖ್ ಖಾನ್

  • ರಾಡ್, ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ – ಚಿಕಿತ್ಸೆ ಫಲಕಾರಿಯಾಗದೆ ಬಿಜೆಪಿ ಮುಖಂಡ ಸಾವು

    ರಾಡ್, ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ – ಚಿಕಿತ್ಸೆ ಫಲಕಾರಿಯಾಗದೆ ಬಿಜೆಪಿ ಮುಖಂಡ ಸಾವು

    ಕಲಬುರಗಿ: ಹಿರಿಯ ಬಿಜೆಪಿ ಮುಖಂಡ (BJP Leader) ಮಹಾಂತಪ್ಪಾ ಆಲೂರೆ ಅವರನ್ನು ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದ ಹೊರವಲಯದ ಬಳಿ ಮೂವರು ಅಪರಿಚಿತರು ರಾಡ್, ತಲ್ವಾರ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಸೋಲಾಪುರ ಖಾಸಗಿ ಆಸ್ಪತ್ರೆಯಲ್ಲಿ (Private Hospital) ಸಾವನ್ನಪ್ಪಿದ್ದಾರೆ.

    ಗುರುವಾರ ಬೆಳಿಗ್ಗೆ ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದ ಹೊರವಲಯದಲ್ಲಿ ಏಕಾಏಕಿ ಮೂವರು ಅಪರಿಚಿತರು ಬಂದು ಬಿಜೆಪಿ ಮುಖಂಡ ಮಹಾಂತಪ್ಪಾ ಆಲೂರೆ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆದ ತಕ್ಷಣವೇ ಸೋಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

    ಬಿಜೆಪಿ ಮುಖಂಡನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹರ್ಷಾನಂದ ಗುತ್ತೇದಾರ್ ಘಟನೆ ಕುರಿತು ಮಾತನಾಡಿದ್ದಾರೆ. ಮಹಾಂತಪ್ಪ ಆಲೂರೆ ನಮ್ಮ ಕುಟುಂಬದ ಒಬ್ಬ ಸದಸ್ಯರಂತಿದ್ದರು. ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಸೌಮ್ಯ ಸ್ವಭಾವದ ವ್ಯಕ್ತಿತ್ವ, ಸಹಕಾರ ಸಂಘದ ಮೂಲಕ ಬಡವರಿಗೆ ಸಹಾಯ ಮಾಡಿದ್ದಾರೆ ಎಂದು ಸ್ಮರಿಸಿದ್ದಾರೆ. ಇದನ್ನೂ ಓದಿ: ನಮ್ಮ ಸಂಬಂಧಿಕರ ಹಲವು ಮನೆಗಳಿಗೆ ಬಂದೇ ಇಲ್ಲ – ಜಾತಿಗಣತಿ ಸ್ವೀಕಾರಕ್ಕೆ ಹೆಬ್ಬಾಳ್ಕರ್ ಆಕ್ಷೇಪ

    ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ:
    ಈ ಘಟನೆ ನೋಡಿದಾಗ ಆಳಂದ ತಾಲ್ಲೂಕಿನಲ್ಲಿ ಹಾಗೂ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಏನೂ ಬೇಕಾಗಿಲ್ಲ. ಪೊಲೀಸ್ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಒಳಗಾಗದೇ ಕೊಲೆ ಮಾಡಿದ ರಾಕ್ಷಸರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ರಷ್ಯಾ ಸೇನೆಯಲ್ಲಿ ಸಿಲುಕಿದ್ದಾರೆ 20 ಭಾರತೀಯರು – ವಾಪಸ್‌ ಕರೆತರಲು ಹರಸಾಹಸ