Tag: private hospital

  • 3 ಗಂಟೆಯಲ್ಲಿ 300 ಕಿಮೀ ಕ್ರಮಿಸಿ 7 ದಿನದ ಮಗುವಿನ ಜೀವ ಉಳಿಸಿದ ಹೀರೋ

    3 ಗಂಟೆಯಲ್ಲಿ 300 ಕಿಮೀ ಕ್ರಮಿಸಿ 7 ದಿನದ ಮಗುವಿನ ಜೀವ ಉಳಿಸಿದ ಹೀರೋ

    – ಅಂಬುಲೆನ್ಸ್‌ ಚಾಲಕನಿಗೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ

    ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಖಾಸಗಿ ಆಸ್ಪತ್ರೆ ಅಂಬುಲೆನ್ಸ್‌ ಚಾಲಕ (Ambulance Driver) ಶಿಜು ವರ್ಗಿಸ್ ಅವರು Zero Traffic ವ್ಯವಸ್ಥೆ ಇಲ್ಲದೆಯೂ 300 ಕಿಮೀ ದೂರವನ್ನು ಕೇವಲ 3 ಗಂಟೆ ಅವಧಿಯಲ್ಲಿ ಕ್ರಮಿಸಿ 7 ದಿನದ ಹೆಣ್ಣು ಮಗುವಿನ ಜೀವ ಉಳಿಸಿದ್ದಾರೆ. ಅಂಬುಲೆನ್ಸ್‌ ಚಾಲಕನ ಸಮಯಪ್ರಜ್ಞೆಗೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

    ಮಡಿಕೇರಿ (Madikeri) ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ 7 ದಿನದ ಹೆಣ್ಣು ಮಗುವಿಗೆ ತೀವ್ರ ಉಸಿರಾಟದ ತೊಂದರೆ ಉಂಟಾಗಿತ್ತು. ಈ ವೇಳೆ ಮಗುವನ್ನು ತುರ್ತು ಚಿಕಿತ್ಸೆಗಾಗಿ 300 ಕಿಮೀ ದೂರದಲ್ಲಿದ್ದ ಕೇರಳದ ಪೆರಂದಲ್‌ ಮಣ್ಣನ್‌ ಊರಿನಲ್ಲಿರೋ ಖಾಸಗಿ ಆಸ್ಪತ್ರೆಗೆ (Private Hospital) ಕರೆದೊಯ್ಯಬೇಕಿತ್ತು.

    ವೈದ್ಯರ ಸಲಹೆ ಮೇರೆಗೆ ಚಾಲಕ ಶಿಜು ವರ್ಗಿಸ್ ಜೀರೋ ಟ್ರಾಫಿಕ್‌ ವ್ಯವಸ್ಥೆ ಇಲ್ಲದೆಯೂ 300 ಕಿಮೀ ದೂರವನ್ನು 3 ಗಂಟೆಯಲ್ಲಿ ಕ್ರಮಿಸಿ, ಮಗುವಿಗೆ ಚಿಕಿತ್ಸೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಮೊಂಡುವಾದ ಬಿಟ್ಟು ರಾಜ್ಯಕ್ಕೆ ಅನ್ಯಾಯವಾಗುತ್ತಿರೋದನ್ನ ಹರೀಶ್ ಪೂಂಜಾ ಒಪ್ಪಿಕೊಳ್ಳಬೇಕು: ದಿನೇಶ್ ಗುಂಡೂರಾವ್

    ಕಿರಿದಾದ ದುರ್ಗಮ ರಸ್ತೆಯಲ್ಲಿ ಮಡಿಕೇರಿಯಿಂದ ವಿರಾಜಪೇಟೆ ಮಾರ್ಗವಾಗಿ ಕೊಡಗಿನ ಗಡಿಭಾಗದವರೆಗೆ ಅಂಬುಲೆನ್ಸ್‌ ಚಾಲನೆ ಮಾಡಿದ್ದಾರೆ. ಶಿಜು ವರ್ಗಿಸ್ ಅವರ ಈ ಸಾಹಸಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: ಗೃಹಿಣಿ ಸಾವು ಕೇಸ್‌ಗೆ ಟ್ವಿಸ್ಟ್ – ಪತಿಯೇ ಮಾಸ್ಟರ್ ಮೈಂಡ್, ಸ್ನೇಹಿತನ ಪತ್ನಿಯ ಕೊಲೆ ರಹಸ್ಯವೂ ಬಯಲು

  • ಆಸ್ಪತ್ರೆಯಲ್ಲಿಯೇ ಪತ್ನಿ ಜೊತೆ ಗಾಯಾಳು ಸೆಕ್ಸ್- ನೋಡಿದ ಬಾಲಕಿಯ ಮೇಲೆ ರೇಪ್!

    ಆಸ್ಪತ್ರೆಯಲ್ಲಿಯೇ ಪತ್ನಿ ಜೊತೆ ಗಾಯಾಳು ಸೆಕ್ಸ್- ನೋಡಿದ ಬಾಲಕಿಯ ಮೇಲೆ ರೇಪ್!

    ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ (Mangaluru Private Hospital) ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿಗಳನ್ನು ಅಬ್ದುಲ್ ಹಲೀಂ(37) ಹಾಗೂ ಶಮೀನಾ ಬಾನು(22) ಎಂದು ಗುರುತಿಸಲಾಗಿದೆ.

    ಏನಿದು ಪ್ರಕರಣ..?: ಬೈಕ್ ಅಪಘಾತದಲ್ಲಿ ಗಾಯಗೊಂಡು ಅಬ್ದುಲ್ ಹಲೀಂ ಮತ್ತು ಆತನ ಸ್ನೇಹಿತ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಹೀಗಾಗಿ ಗಾಯಾಳುಗಳನ್ನು ನೋಡಲು ತಾಯಿ, ತನ್ನ ಅಪ್ರಾಪ್ತ ಮಗಳನ್ನು ಕರೆದುಕೊಂಡು ಹೋಗಿದ್ದರು. ಈ ವೇಳೆ ಶಮೀನಾ ಬಾನು ಜೊತೆ ಬಾಲಕಿಯನ್ನು ಬಿಟ್ಟು ತಾಯಿ ಪೊಲೀಸ್ ಠಾಣೆಗೆ ಹೋಗಿದ್ದರು. ಇದನ್ನೂ ಓದಿ: ಡ್ಯಾಂನಲ್ಲಿ ತುಂಬಿ ಹಿಡಿದುಟ್ಟುಕೊಳ್ಳಲು ಆಗದೇ ಇದ್ದಾಗ ತಮಿಳುನಾಡಿಗೆ ನೀರು ಬಿಟ್ಟಿದ್ವಿ: ಹೆಚ್‍ಡಿಕೆ

    ಇತ್ತ ಆಸ್ಪತ್ರೆಯಲ್ಲಿ ಅಬ್ದುಲ್ ಹಲೀಂ-ಶಮೀನಾ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾರೆ. ಇದನ್ನು ಅಪ್ರಾಪ್ತೆ ನೋಡಿದ್ದಾಳೆ. ಹೀಗಾಗಿ ಅಬ್ದುಲ್ ಹಲೀಂ, ಬಾಲಕಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ. ಈ ವೇಳೆ ಆಕೆ ಪ್ರತಿರೋಧ ವ್ಯಕ್ತಪಡಿಸಿದ್ದಾಳೆ. ಆಗ ಶಮೀನಾ ಬಾನು ಬಾಲಕಿಯ ಕೈ ಹಿಡಿದು ಬಾಯಿ ಮುಚ್ಚಿ ಅತ್ಯಾಚಾರ ಮಾಡಲು ಸಹಾಯ ಮಾಡಿದ್ದಾಳೆ. ಬಳಿಕ ಹಲೀಂ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ.

    ಈ ಸಂಬಂಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಂಗ್ರೆಸ್‌ ಮಾಜಿ ಸಚಿವ ಡಿ.ಬಿ ಇನಾಮ್ದಾರ್ ವಿಧಿವಶ

    ಕಾಂಗ್ರೆಸ್‌ ಮಾಜಿ ಸಚಿವ ಡಿ.ಬಿ ಇನಾಮ್ದಾರ್ ವಿಧಿವಶ

    ಬೆಳಗಾವಿ/ಬೆಂಗಳೂರು: ಹಿರಿಯ ಕಾಂಗ್ರೆಸ್‌ (Congress) ನಾಯಕ ಹಾಗೂ ಮಾಜಿ ಸಚಿವ ಡಿ.ಬಿ ಇನಾಮ್ದಾರ್‌ (DB Inamdar) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಡರಾತ್ರಿ ವಿಧಿವಶರಾಗಿದ್ದಾರೆ.

    ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಡಿ.ಬಿ ಇನಾಮ್ದಾರ್‌ ಕಳೆದ ಒಂದು ತಿಂಗಳಿನಿಂದಲೂ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕಷ್ಟದ ಸಮಯದಲ್ಲಿ ನಮ್ಮನ್ನ ಕೈ ಬಿಟ್ಟಿದೆ – ಕಾಂಗ್ರೆಸ್‌ಗೆ ರಾಜೀನಾಮೆ ಘೋಷಿಸಿದ ಇನಾಮ್ದಾರ್ ಕುಟುಂಬ

    ಇನಾಮ್ದಾರ್‌ 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿ ಗೆಲುವು ಸಾಧಿಸಿದ್ದರು. 1994 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈವರೆಗೆ 9 ಚುನಾವಣೆ ಎದುರಿಸಿದ್ದ ಇನಾಮ್ದಾರ್‌ 1983, 1985 ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಜಯಗಳಿಸಿದ್ದರು. 1989, 2004, 2008 ಹಾಗೂ 2018 ರಲ್ಲಿ ಸೋಲು ಕಂಡಿದ್ದರು. ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು, ಎಸ್.ಎಂ ಕೃಷ್ಣ, ಎಸ್. ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದರು.

    2023ರ ಚುನಾವಣೆಯಲ್ಲಿ ಡಿ.ಬಿ ಇನಾಮ್ದಾರ್‌ ಕಿತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಅನಾರೋಗ್ಯ ಕಾರಣದಿಂದ ಅವರ ಬದಲಿಗೆ ಬಾಬಾಸಾಹೇಬ್ ಪಾಟೀಲ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿತ್ತು. ಇದನ್ನೂ ಓದಿ: ಯಾದಗಿರಿಯಲ್ಲಿ ಅಮಿತ್ ಶಾ ರೋಡ್ ಶೋ – ಬಿಜೆಪಿ ಅಭ್ಯರ್ಥಿ ವೆಂಕಟರೆಡ್ಡಿ ಮುದ್ನಾಳ್ ಪರ ಮತಯಾಚನೆ

  • 73 ವರ್ಷದ ವ್ಯಕ್ತಿಗೆ ಯಶಸ್ವಿ ಲಿವರ್ ಕಸಿ

    73 ವರ್ಷದ ವ್ಯಕ್ತಿಗೆ ಯಶಸ್ವಿ ಲಿವರ್ ಕಸಿ

    ಬೆಂಗಳೂರು: 73 ವರ್ಷದ ಮುಂಬೈನ (Mumbai) ಯೋಗೇಶ್ ಹೆಸರು ಬದಲಾಯಿಸಲಾಗಿದೆಅವರು ಲಿವರ್ ಸಿರೋಸಿಸ್ ನೊಂದಿಗೆ ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಇವರಿಗೆ ಯಕೃತ್ತಿನ ಕಸಿ (Liver Transplant) ಹೊರತುಪಡಿಸಿ ಬೇರೆ ಯಾವುದೇ ಆಯ್ಕೆಯಿರಲಿಲ್ಲ. ಬೆಂಗಳೂರಿನ ಟ್ರಸ್ಟ್ ವೆಲ್ ಆಸ್ಪತ್ರೆಯ (Trustwell Hospitals) ಕಸಿ ಶಸ್ತ್ರಚಿಕಿತ್ಸಕರು, ಕಸಿ ಅರಿವಳಿಕೆ ತಜ್ಞರು ಮತ್ತು ತೀವ್ರತರವಾದ ತಜ್ಞರ ತಂಡವು ರೋಗಿಯನ್ನು ಬದುಕಿಸಲು ಸಂಕೀರ್ಣವಾದ ಯಕೃತ್ತಿನ ಕಸಿ ಮಾಡಿ ಇವರ ಬದುಕಿನಲ್ಲಿ ನೆಮ್ಮದಿಯ ನಗು ಮೂಡಿಸಿದರು.

    ಯೋಗೇಶ್ ಅವರನ್ನು ಮೊದಲು ಹಿರಿಯ ಗ್ಯಾಸ್ಟ್ರೋ ಎಂಟರಾಲಜಿಸ್ಟ್ ಮತ್ತು ಹೆಪಟೊಲೊಜಿಸ್ಟ್ ಅವರಿಗೆ ತೋರಿಸಲಾಯಿತು. ಅವರು ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯಲು ತಕ್ಷಣವೇ ಟ್ರಾನ್ಸ್ ಆರ್ಟಿರಿಯಲ್ ಕೀಮೋ-ಎಂಬೋಲೈಸೇಶನ್ ಗೆ ಳಗಾಗಲು ತಿಳಿಸಿದರು. ಅದು ಅಲ್ಲದೇ ಯಕೃತ್ತಿನ ಕಸಿ ಮಾಡುವುದು ಕೂಡ ಅವಶ್ಯಕವಾಗಿತ್ತು. ಆದರೆ ಯೋಗೇಶ್ ಅವರು ಮಧುಮೇಹ ಹಾಗೂ ಸ್ಟೆಂಟ್ ಪ್ಲೇಸ್ ಮೆಂಟ್ ನೊಂದಿಗೆ ಪರಿಧಮನಿಯ ಆಂಜಿಯೋಗ್ರಫಿಗೆ (Angiography) ಒಳಗಾಗಿದ್ದರು. ಈ ಎಲ್ಲಾ ಕಾರಣದಿಂದಾಗಿ ಇವರಿಗೆ ಯಕೃತ್ತಿನ ಕಸಿ ಮಾಡುವುದು ಕೂಡ ತೀರಾ ಸವಾಲಿನ ಕೆಲಸವಾಗಿತ್ತು. ಇದನ್ನೂ ಓದಿ: ಮರಣದಂಡನೆಗೆ ಯಾವ ವಿಧಾನ ಸೂಕ್ತ?- ತಜ್ಞರ ವರದಿ ಕೇಳಿದ ಸುಪ್ರೀಂಕೋರ್ಟ್

    ಈ ಎಲ್ಲಾ ಸವಾಲಿನ ನಡುವೆ ಮಾರ್ಚ್ 7ರಂದು ಮುಂಜಾನೆ ವೈದ್ಯರ ತಂಡವು 6 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆಯನ್ನು ನಡೆಸಿತು. ಕಸಿ ಶಸ್ತ್ರಚಿಕಿತ್ಸೆಯ ನಂತರ ಯೋಗೇಶ್ ಅವರಿಗೆ ಕಸಿ ಐಸಿಯು ನಲ್ಲಿ ಸರಿಯಾದ ಪೌಷ್ಠಿಕಾಂಶ ಹಾಗೂ ಫಿಸಿಯೋಥೆರಪಿ ನೀಡಿ 6 ದಿನಗಳಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಯಿತು. ಇದನ್ನೂ ಓದಿ: ರೆಡ್‌ ಕಾರ್ನರ್‌ ನೋಟಿಸ್‌ ಪಟ್ಟಿಯಿಂದ ಔಟ್‌- ಇನ್ನು ಮುಂದೆ ವಿಶ್ವದೆಲ್ಲೆಡೆ ವಂಚಕ ಮೆಹುಲ್‌ ಚೋಕ್ಸಿ ಸಂಚರಿಸಬಹುದು

  • ಶಾಸಕ ಎನ್ ಮಹೇಶ್‌ಗೆ ಎದೆನೋವು – ಆಸ್ಪತ್ರೆಗೆ ದಾಖಲು

    ಶಾಸಕ ಎನ್ ಮಹೇಶ್‌ಗೆ ಎದೆನೋವು – ಆಸ್ಪತ್ರೆಗೆ ದಾಖಲು

    ಚಾಮರಾಜನಗರ: ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್‌ಗೆ (N Mahesh) ಎದೆನೋವು ಕಾಣಿಸಿಕೊಂಡಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಗೆ (Mysuru Private Hospital) ದಾಖಲಿಸಲಾಗಿದೆ.

    ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎನ್.ಮಹೇಶ್‌ಗೆ ಆ್ಯಂಜಿಯೋಗ್ರಾಮ್ (Angiogram) ಮಾಡಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಸದ್ಯ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ನನ್ನ ಸಮಾಧಿ ಮಾಡುವ ಕನಸು ಕಾಣುತ್ತಿದೆ: ಮೋದಿ ವಾಗ್ದಾಳಿ

    ಈ ಸಂಬಂಧ ಶಾಸಕ ಎನ್.ಮಹೇಶ್ ಪುತ್ರ ಅರ್ಜುನ್ ಮಾತನಾಡಿದ್ದು, ನಮ್ಮ ತಂದೆ ಆರೋಗ್ಯವಾಗಿದ್ದಾರೆ. ಬೆಳಗ್ಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಬಂದೆವು. ವೈದ್ಯರು ಆ್ಯಂಜಿಯೋಗ್ರಾಮ್ ಮಾಡಿದ್ದು, ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿದ್ದಾರೆ. ಎರಡು ದಿನ ವಿಶ್ರಾಂತಿಗೆ ಸೂಚಿಸಿದ್ದಾರೆ, ಯಾವುದೇ ಆತಂಕವಿಲ್ಲ ಎಂದು ಹೇಳಿದ್ದಾರೆ.

    ಶಾಸಕ ಎನ್.ಮಹೇಶ್ ಶನಿವಾರ ಕೆಪಿಸಿಸಿ ಅಧ್ಯಕ್ಷ ಆರ್. ಧ್ರುವನಾರಾಯಣ ಅವರ ಅಂತಿಮ ದರ್ಶನದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಒತ್ತಡದ ರಾಜಕಾರಣಕ್ಕೆ ಧ್ರುವನಾರಾಯಣ್ ಬಲಿಯಾಗಿದ್ದಾರೆ: ಎನ್.ಮಹೇಶ್

    ಏನಿದು ಆ್ಯಂಜಿಯೋಗ್ರಾಮ್?
    ದೇಹದ ಆರೋಗ್ಯ ಸ್ಥಿತಿ ತಿಳಿದುಕೊಳ್ಳಲು ಹಾಗೂ ಉತ್ತಮ ಚಿಕಿತ್ಸಾ ಕ್ರಮಗಳನ್ನು ಕೈಗೊಳ್ಳಲು ನಡೆಸುವ ಚಿಕಿತ್ಸಾ ಕ್ರಮ. ಹೃದಯದಿಂದ ರಕ್ತನಾಳಗಳ ಮೂಲಕ ರಕ್ತ ಹೇಗೆ ಹರಿಯುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಈ ಚಿಕಿತ್ಸಾ ವಿಧಾನ ಬಳಸುತ್ತಾರೆ.

  • ಆಪರೇಷನ್ ಥಿಯೇಟರ್‌ನಲ್ಲಿ ಮಹಿಳೆಯ ಖಾಸಗಿ ಭಾಗಗಳನ್ನು ಮುಟ್ಟಿ ಕಿರುಕುಳ

    ಆಪರೇಷನ್ ಥಿಯೇಟರ್‌ನಲ್ಲಿ ಮಹಿಳೆಯ ಖಾಸಗಿ ಭಾಗಗಳನ್ನು ಮುಟ್ಟಿ ಕಿರುಕುಳ

    ಕೋಲ್ಕತ್ತಾ: ಇಲ್ಲಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ (Operation Theatre) ಅರೆಪ್ರಜ್ಞಾವಸ್ಥೆಯಲ್ಲಿ ಮಲಗಿದ್ದಾಗ ಆಸ್ಪತ್ರೆ (Hospital) ಸಿಬ್ಬಂದಿಯೊಬ್ಬ ಆಕೆಯ ಖಾಸಗಿ ಭಾಗಗಳನ್ನ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಮಹಿಳೆಯೊಬ್ಬರು ಆರೋಪಿಸಿ ಫೂಲ್ಬಗಾನ್ ಪೊಲೀಸರಿಗೆ (Police) ದೂರು ನೀಡಿದ್ದಾರೆ.

    CRIME COURT

    ಕೋಲ್ಕತ್ತಾ (Kolkata) ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಪಿತ್ತಕೋಶದ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದರು. ಗುರುವಾರ ಬೆಳಗ್ಗೆ 9 ಗಂಟೆ ವೇಳೆಗೆ ಆಪರೇಷನ್ ಥಿಯೇಟರ್‌ಗೆ ವರ್ಗಾಯಿಸಿ ಅರಿವಳಿಕೆ ನೀಡಿದ್ದಾರೆ. 11 ಗಂಟೆಗೆ ವೇಳೆಗೆಲ್ಲಾ ಶಸ್ತçಚಿಕಿತ್ಸೆ ಮುಗಿದಿದೆ. ಬಳಿಕ ಮಹಿಳೆ ಅರೆ ಪ್ರಜ್ಞಾವಸ್ಥೆಯಲ್ಲಿ ಮಲಗಿದ್ದಾಗ ಯಾರೋ ತನ್ನ ಖಾಸಗಿ ಭಾಗಗಳನ್ನು ಮುಟ್ಟಿ ಕಿರುಕುಳ ನೀಡಿರುವುದಾಗಿ ಮಹಿಳೆ ಲಿಖಿತ ದೂರು ನೀಡಿದ್ದಾರೆ. ಇದನ್ನೂ ಓದಿ: ವಿಧಾನಸೌಧದಲ್ಲಿ 10 ಲಕ್ಷ ಹಣ ಸಿಕ್ಕಿದ ಕೇಸ್ – ಆರೋಪಿ ಜಗದೀಶ್‌ಗೆ ಷರತ್ತುಬದ್ಧ ಜಾಮೀನು

    ಮಹಿಳೆ ಹೇಳಿದ್ದೇನು?
    ನಾನು ನಿಧಾನವಾಗಿ ಪ್ರಜ್ಞಾವಸ್ಥೆಗೆ ಬರುತ್ತಿದ್ದೆ. ಈ ವೇಳೆ ಸ್ವಲ್ಪವೇ ಕಣ್ಣು ತೆರೆದು ನೋಡಿದಾಗ ನನ್ನ ಬಲಭಾಗದಲ್ಲಿ ವ್ಯಕ್ತಿಯೊಬ್ಬ ನಿಂತಿದ್ದ. ಅವನು ನನ್ನನ್ನು ತಬ್ಬಿಕೊಳ್ಳುತ್ತಿದ್ದ. ನನಗೆ ತುಂಬಾ ನೋವಾಗುತ್ತಿತ್ತು. ನನಗೆ ಅರಿವಳಿಕೆ ನೀಡಿದ್ದರಿಂದ ಅವನನ್ನು ತಡೆಯಲು ಸಾಧ್ಯವಾಗಲಿಲ್ಲ. ಆದರೆ ನನಗೆ ಪ್ರಜ್ಞೆ ಬಂದು ನೋಡಿದಾಗ ನನ್ನ ಖಾಸಗಿ ಭಾಗಗಳಲ್ಲಿ ಆಗಿದ್ದ ಗುರುತುಗಳನ್ನು ಗಮನಿಸಿದೆ ಎಂದು ಹೇಳಿದ್ದಾರೆ.

    ಆಪರೇಷನ್ ಥಿಯೇಟರ್‌ನಲ್ಲಿ ನನಗೆ ಏನಾಯಿತು ಅನ್ನೋದು ಸಂಪೂರ್ಣವಾಗಿ ತಿಳಿದಿಲ್ಲ. ಆದ್ರೆ ಅಪರಾಧ ನಡೆಯುವಾಗ ಯಾರೊಬ್ಬರೂ ಮಹಿಳಾ ಸಿಬ್ಬಂದಿ ಇರಲಿಲ್ಲ. ಆದ್ರೆ ನನ್ನ ಬಲ ಎದೆಯ ಮೇಲೆ ಗುರುತುಗಳು ಕಂಡುಬಂದಿವೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಕನ್ನಡಿಗರಿಗೆ ಕೈಗಾರಿಕೆಗಳ ಉದ್ಯೋಗದಲ್ಲಿ ಶೇ.80 ರಷ್ಟು ಪ್ರಾಶಸ್ತ್ಯ, ಭಾಷಾ ಅಭಿವೃದ್ಧಿಗೆ ಶೀಘ್ರ ಕಾನೂನು ಸ್ವರೂಪ: ಬೊಮ್ಮಾಯಿ

    ಮಹಿಳೆ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಫೂಲ್ಬಗಾನ್ ಪೊಲೀಸ್ ಠಾಣೆಯಲ್ಲಿ ಅಪರಿಚಿತ ಆರೋಪಿ ವಿರುದ್ಧ ಐಪಿಸಿ (IPC) ಸೆಕ್ಷನ್ 354ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಮಹಿಳೆಯ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಿದ್ದು, ಮೆಡಿಕಲ್ ರಿಪೋರ್ಟ್‌ಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗೃಹಿಣಿ ಸಾವು

    ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗೃಹಿಣಿ ಸಾವು

    ರಾಮನಗರ: ರಸ್ತೆ ಅಪಘಾತದಲ್ಲಿ (Road Accident) ಗಂಭೀರವಾಗಿ ಗಾಯಗೊಂಡಿದ್ದ ಗೃಹಿಣಿ ಚಿಕಿತ್ಸೆ ಫಲಕಾರಿಯಾಗದೇ 45 ದಿನಗಳ ಜೀವನ್ಮರಣ ಹೋರಾಟದ ಬಳಿಕ ಭಾನುವಾರ ಮೃತಪಟ್ಟಿದ್ದಾರೆ.

    ಚನ್ನಪಟ್ಟಣ ತಾಲೂಕಿನ ಕೂಡೂರು ಗ್ರಾಮದ ಸೌಂದರ್ಯ ಅರಸ್ (20) ಮೃತಪಟ್ಟ ಗೃಹಿಣಿ. ಕಳೆದ 6 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಈಕೆ ಆಗಸ್ಟ್ 24ರಂದು ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಚನ್ನಪಟ್ಟಣದ ಸಿಪಿಟಿ ಗಾರ್ಡನ್ ಮುಂಭಾಗದ ರಸ್ತೆಯಲ್ಲಿ ವೇಗವಾಗಿ ಬಂದ ಬೈಕ್ (Bike) ಡಿಕ್ಕಿ ಹೊಡೆದಿತ್ತು. ಕೆಳಗೆ ಬಿದ್ದ ಸೌಂದರ್ಯ ಅವರ ತಲೆಯ ಹಿಂಭಾಗಕ್ಕೆ ಗಂಭೀರ ಪೆಟ್ಟಾಗಿ, ರಕ್ತಸ್ರಾವವಾಗಿತ್ತು. ಅವರನ್ನು ಬಿಡದಿ ಆರಾಧ್ಯ ಖಾಸಗಿ ಆಸ್ಪತ್ರೆಗೆ (Private Hospital) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳು (Brian) ನಿಷ್ಕ್ರಿಯಗೊಂಡಿದ್ದರಿಂದ ಭಾನುವಾರ ಸೌಂದರ್ಯ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಸೀಗೆ ಹುಣ್ಣಿಮೆ ದಿನ ಪುನೀತ್ ರಾಜ್‌ಕುಮಾರ್ ಫೋಟೋ ಇಟ್ಟು ಹೊಲದ ಪೂಜೆ ಮಾಡಿದ ರೈತ

    ಒಂದೂವರೆ ತಿಂಗಳ ಚಿಕಿತ್ಸೆಗೆ ಈಗಾಗಲೇ ಕುಟುಂಬ 7 ಲಕ್ಷ ರೂ. ಬಿಲ್ ಪಾವತಿಸಿತ್ತು. ಆದಾಗ್ಯೂ ಆಸ್ಪತ್ರೆ ಮುಖ್ಯಸ್ಥರು ಬಾಕಿ 9.50 ಲಕ್ಷ ರೂ. ಪಾವತಿಸಿ ಮೃತದೇಹ ಪಡೆಯುವಂತೆ ಸೂಚಿಸಿದ್ದರು. ಇದು ಕುಟುಂಬವನ್ನು ವಿಚಲಿತಗೊಳಿಸಿತ್ತು. ಈ ವಿಚಾರವನ್ನು ಗ್ರಾಮದ ಮುಖಂಡರು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರ ಗಮನಕ್ಕೆ ತಂದಿದ್ದರು. ಕೂಡಲೇ ಹೆಚ್‌ಡಿಕೆ ಆಸ್ಪತ್ರೆ ಮುಖ್ಯಸ್ಥರಿಗೆ ಕರೆ ಮಾಡಿ, ಬಾಕಿ ಹಣ ಪಾವತಿಸುವ ಭರವಸೆ ನೀಡಿದರು. ಬಳಿಕ ಆಸ್ಪತ್ರೆ ಮುಖ್ಯಸ್ಥರು ಸೌಂದರ್ಯ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

    Live Tv
    [brid partner=56869869 player=32851 video=960834 autoplay=true]

  • ಗಾಂಜಾ ದಂಧೆಕೋರರಿಂದಲೇ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ – ICUನಲ್ಲಿ ಸಿಪಿಐ

    ಗಾಂಜಾ ದಂಧೆಕೋರರಿಂದಲೇ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ – ICUನಲ್ಲಿ ಸಿಪಿಐ

    ಕಲಬುರಗಿ: ಗಾಂಜಾ ದಂಧೆ ಪ್ರಕರಣದ ಕಾರ್ಯಾಚರಣೆಗೆ ತೆರಳಿದ್ದ ಸಿಪಿಐ (CPI) ಇಲ್ಲಾಳ ನೇತೃತ್ವದ ಪೊಲೀಸರ (Kalaburagi Police) ತಂಡದ ಮೇಲೆ ಗಾಂಜಾ ದಂಧೆಕೋರರು ಪೊಲೀಸರ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

    ಕರ್ನಾಟಕ ಮಹಾರಾಷ್ಟ್ರ ಗಡಿಯಂಚಿನಲ್ಲಿರುವ (Karnataka Maharashtra Border) ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಭೋಸಗಾ ಗ್ರಾಮದಲ್ಲಿ ಹಲ್ಲೆ ನಡೆದಿದೆ. ಆ ಗ್ರಾಮದಲ್ಲಿಯೇ ಮಹಾರಾಷ್ಟ್ರ ಮೂಲದ ಕೆಲ ವ್ಯಕ್ತಿಗಳು ಗಾಂಜಾ ಬೆಳೆದಿದ್ದರು ಎಂದು ಹೇಳಲಾಗಿದೆ.

    ದಂಧೆಕೋರರು ಕಲಬುರಗಿ ಜಿಲ್ಲಾ ಗ್ರಾಮೀಣ ಠಾಣೆ ಸಿಪಿಐ ಶ್ರೀಮಂತ ಇಲ್ಲಾಳ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತಲೆ, ಮುಖ, ಹೊಟ್ಟೆ ಭಾಗಗಳಲ್ಲಿ ಗಂಭೀರ ಗಾಯಗೊಂಡಿರುವ ಇಲ್ಲಾಳ ಅವರೀಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಐಸಿಯು (ICU)ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಏನಿದು ಗಾಂಜಾ ಕೇಸ್?
    ಗಾಂಜಾ ದಂಧೆ ಕೇಸ್‌ನಲ್ಲಿ ಕಾರ್ಯಾಚರಣೆಗೆ ಹೋಗಿದ್ದ ಇಲ್ಲಾಳ ನೇತೃತ್ವದ ಪೊಲೀಸ್ ತಂಡ, ಕಳೆದ 2-3 ದಿನಗಳ ಹಿಂದೆ ಆರೋಪಿ ಸಂತೋಷ ಸೇರಿದಂತೆ ಅನೇಕ ಗಾಂಜಾ ದಂಧೆಕೋರರನ್ನೂ ಬಂಧಿಸಲಾಗಿತ್ತು. ನಿನ್ನೆ ಮಧ್ಯಾಹ್ನವು ಸಹ ಗಾಂಜಾ ದಂಧೆ ಬೇಧಿಸಲು ಸಿಪಿಐ (CPI) ಶ್ರೀಮಂತ ಇಲ್ಲಾಳ ನೇತೃತ್ವದಲ್ಲಿ 10 ಜನರ ಪೊಲೀಸ್ ತಂಡ ಮಹಾರಾಷ್ಟ್ರಕ್ಕೆ (Maharashtra) ಹೋಗಿತ್ತು. ಇದನ್ನೂ ಓದಿ: ನನ್ನ ಸ್ಫೋಟಕ ಬ್ಯಾಟಿಂಗ್ ಕಂಡು ನಾನೇ ಶಾಕ್ – ಪಂದ್ಯ ಗೆದ್ದರೂ ಹೀಗೇಕೆ ಅಂದ್ರು ಹಿಟ್‌ಮ್ಯಾನ್‌?

    ಗಾಂಜಾ ಬೆಳೆಯುವ ಹೊಲಗಳಿಗೆ (Ganja Plant) ಹೋಗಿದ್ದ ಪೊಲೀಸರ ಮೇಲೆ ರಾತ್ರಿ 9:30ರ ವೇಳೆಗೆ ಸುಮಾರು 30-40 ಮಂದಿ ಗಾಂಜಾ ದಂಧೆಕೋರರು ಕಟ್ಟಿಗೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ದಾಳಿ ಮಾಡುತ್ತಿದ್ದಂತೆ ಸಿಪಿಐ ಶ್ರೀಮಂತ ಇಲ್ಲಾಳ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಗಾಂಜಾ ದಂಧೆಕೋರರು ಪೊಲೀಸರನ್ನೆ ಅಟ್ಟಾಡಿಸಿದ್ದಾರೆ. ಕೊನೆಗೆ ಪ್ರಾಣ ಉಳಿಸಿಕೊಳ್ಳಲು ಪೊಲೀಸರು ಚೆಲ್ಲಾಪಿಲ್ಲಿಯಾಗಿ ಓಡಿಹೋಗಿದ್ದಾರೆ. ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಿಪಿಐ ಇಲ್ಲಾಳ ಅವರನ್ನ ಮಧ್ಯರಾತ್ರಿ 2:30ರ ವೇಳೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸದ್ಯ ಕಲಬುರಗಿಯ ಖಾಸಗಿ ಆಸ್ಪತ್ರೆಗೆ (Private Hospital) ಎಸ್ಪಿ ಈಶಾ ಪಂತ್ ಭೇಟಿ ನೀಡಿದ್ದು, ಶ್ರೀಮಂತ ಇಲ್ಲಾಳ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶ್ರೀಮಂತ್ ಇಲ್ಲಾಳಗೆ ಡಾ.ಸುದರ್ಶನ್ ಲಾಖೆ, ಡಾ.ರಾಕೇಶ್ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: Bigg Boss Special- ಈ ಬಾರಿ ಬಿಗ್ ಬಾಸ್ 9 ಮನೆ ಪ್ರವೇಶ ಮಾಡಿರುವ ಖ್ಯಾತ ಕಿರುತೆರೆ ನಟಿಯರಿವರು

    ಈ ಕುರಿತು ಮಾಹಿತಿ ನೀಡಿರುವ ವೈದ್ಯ (Doctor) ಡಾ.ಸುದರ್ಶನ, ಶ್ರೀಮಂತ ಇಲ್ಲಾಳ್ ಅವರ ಸ್ಥಿತಿ ಗಂಭೀರವಾಗಿದೆ. ದೇಹದ ವಿವಿಧ ಭಾಗಗಳಲ್ಲಿ ಗಾಯಗಳಾಗಿವೆ. ಪಕ್ಕೆಲುಬು, ಮುಖದ ಎಲುಬುಗಳು ಮುರಿದಿವೆ. ಮೆದುಳಿನ ಭಾಗಕ್ಕೂ ಗಾಯಗಳಾಗಿದ್ದು, ಮೆದುಳಿನಲ್ಲಿ ರಕ್ತಸ್ರಾವವಾಗಿದೆ. ಮುಂಜಾನೆ 4 ಗಂಟೆಗೆ ಆಸ್ಪತ್ರೆಗೆ ದಾಖಲಿಸಿದ್ದು, ಆರೋಗ್ಯ ಸುಧಾರಣೆಗೆ ಎಲ್ಲಾ ರೀತಿಯಲ್ಲೂ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರು ICU (ತೀವ್ರ ನಿಗಾ ಘಟಕ)ನಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

    ಬಸವಕಲ್ಯಾಣ ಮಂಠಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ತಾಜ್ ಮಹಲ್ ನೋಡಲು ಬಂದಿದ್ದವಳ ಮೇಲೆ ಕೋತಿ ದಾಳಿ- ಗಳಗಳನೆ ಅತ್ತ ಸ್ಪೇನ್ ಸುಂದರಿ

    ತಾಜ್ ಮಹಲ್ ನೋಡಲು ಬಂದಿದ್ದವಳ ಮೇಲೆ ಕೋತಿ ದಾಳಿ- ಗಳಗಳನೆ ಅತ್ತ ಸ್ಪೇನ್ ಸುಂದರಿ

    ಲಕ್ನೋ: ವಿಶ್ವ ಪ್ರಸಿದ್ಧ ತಾಜ್ ಮಹಲ್ (Taj Mahal) ವೀಕ್ಷಣೆಗೆ ಬರುವ ಪ್ರವಾಸಿಗರ (Tourist) ಸಂಖ್ಯೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಿಂದಲೂ ಪ್ರವಾಸಿಗರು ಬರುತ್ತಿದ್ದಾರೆ. ಹಾಗೆಯೇ ಸ್ಪೇನ್‌ನಿಂದ (Spain) ಬಂದಿದ್ದ ಮಹಿಳೆಯೊಬ್ಬರ ಮೇಲೆ ಕೋತಿ ದಾಳಿ ನಡೆಸಿದೆ.

    ತಾಜ್‌ಮಹಲ್ (Taj Mahal) ಮುಂಭಾಗದ ರಾಯಲ್ ಗೇಟ್ ಬಳಿ ಫೋಟೋ ತೆಗೆಯಲೆಂದು ನಿಂತಿದ್ದ ಸ್ಪೇನ್ ಮಹಿಳೆ (Spanish woman) ಮೇಲೆ ಕೋತಿ ಎರಗಿ ದಾಳಿ ಮಾಡಿದೆ. ಈ ವೇಳೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಹಿಳೆ ಸ್ಥಳದಲ್ಲೇ ಗಳಗಳನ್ನೆ ಅತ್ತಿದ್ದಾಳೆ. ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ: ಚಂಡೀಗಢ ವಿವಿ ಬಳಿಕ ಐಐಟಿ ಬಾಂಬೆ- ಹಾಸ್ಟೆಲ್ ಸ್ನಾನಗೃಹದಲ್ಲಿ ಇಣುಕಿದ ಕ್ಯಾಂಟೀನ್ ಸಿಬ್ಬಂದಿ ಬಂಧನ

    2019ರಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ತಾಜ್ ಮಹಲ್‌ನ ರಕ್ಷಣೆಯ ಜವಾಬ್ದಾರಿ ವಹಿಸಿತ್ತು. ಈ ವೇಳೆ ಕೋತಿಗಳನ್ನು (Monkey) ಓಡಿಸಲು ಸಿಂಗಲ್‌ಶಾಟ್ ಗನ್ ಬಳಕೆ ಮಾಡಲಾಗುತ್ತಿತ್ತು. ಇದಕ್ಕೆ ಪ್ರಾಣಿಪ್ರಿಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಇದನ್ನೂ ಓದಿ: ಸೂಪರ್ ಸ್ಟಾರ್ ಸ್ಮೃತಿ ಮಂಧಾನಗೆ ICC ರ‍್ಯಾಂಕಿಂಗ್ ಪಟ್ಟಿಯಲ್ಲಿ 2ನೇ ಸ್ಥಾನ

    ಪ್ರವಾಸಿಗರ ಮೇಲೆ ಕೋತಿಗಳು ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಸಮಸ್ಯೆ ಬಗೆಹರಿಸುವಂತೆ ಅರಣ್ಯ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಭಧ್ರತಾ ಸಿಬ್ಬಂದಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಟ್ಟೆ ಮಳಿಗೆಯಲ್ಲಿ ಭೀಕರ ಗುಂಡಿನ ದಾಳಿ – ಬಿಜೆಪಿ ಮುಖಂಡನ ಬರ್ಬರ ಹತ್ಯೆ

    ಬಟ್ಟೆ ಮಳಿಗೆಯಲ್ಲಿ ಭೀಕರ ಗುಂಡಿನ ದಾಳಿ – ಬಿಜೆಪಿ ಮುಖಂಡನ ಬರ್ಬರ ಹತ್ಯೆ

    ಚಂಡೀಗಢ: ಸ್ಥಳೀಯ ಬಿಜೆಪಿ ಮುಖಂಡನನ್ನು ಐವರು ದುಷ್ಕರ್ಮಿಗಳು ಮನಬಂದಂತೆ ಗುಂಡಿಕ್ಕಿ ಕೊಂದಿರುವ ಘಟನೆ ಇಂದು ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ.

    ಇಲ್ಲಿನ ದರ್ ಬಜಾರ್ ಬಳಿಯ ಗುರುದ್ವಾರದ ರಸ್ತೆಯಲ್ಲಿರುವ ಬಟ್ಟೆ ಮಳಿಗೆಯೊಂದರಲ್ಲಿ ಗುಂಡಿನ ದಾಳಿ ನಡೆಸಲಾಗಿದ್ದು, ಬಿಜೆಪಿ ಮುಖಂಡ ಸುಖಬೀರ್ ಖತಾನ ಅವರನ್ನು ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಭೆಟಿ ನೀಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಆಗಸ್ಟ್‌ ಜಿಎಸ್‌ಟಿ ಶೇ.28 ಏರಿಕೆ – 1.43 ಲಕ್ಷ ಕೋಟಿ ರೂ.ನಲ್ಲಿ ಯಾವ ರಾಜ್ಯದ ಪಾಲು ಎಷ್ಟು?

    bjP

    ಸುಖಬೀರ್ ಖನಾತಾ ಅವರು ಬಟ್ಟೆ ಬಳಿಗೆ(ಶೋ ರೂಮ್) ಪ್ರವೇಶಿಸುತ್ತಿದ್ದಂತೆ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಶಬ್ಧ ಕೇಳುತ್ತಿದ್ದಂತೆ ಇತರ ವ್ಯಾಪಾರಿಗಳೂ ಸ್ಥಳದಿಂದ ಹೆದರಿ ಓಡಿ ಹೋಗಿದ್ದಾರೆ. ಗುಂಡಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಖತಾನ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು, ಮಾರ್ಗಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ದೀಪಕ್ ಸಹರಾನ್ ತಿಳಿಸಿದ್ದಾರೆ. ಇದನ್ನೂ ಓದಿ: ನಿರ್ಮಾಪಕ ರವೀಂದರ್‌ ಕೈ ಹಿಡಿದ ನಟಿ, ಖ್ಯಾತ ನಿರೂಪಕಿ ಮಹಾಲಕ್ಷ್ಮೀ

    ಸುಖಬೀರ್ ಖತಾನ ಅವರು ಗುರ್ಗಾಂವ್‌ನ ಸೊಹ್ನಾ ಮಾರುಕಟ್ಟೆ ಸಮಿತಿಯ ಮಾಜಿ ಉಪಾಧ್ಯಕ್ಷರಾಗಿದ್ದರು ಹಾಗೂ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್‌ಗೆ ಆಪ್ತರಾಗಿದ್ದರು. ನಗರದ ಸಮೀಪದ ರಿಥೋಜ್ ಗ್ರಾಮದಿಂದ ಜಿಲ್ಲಾ ಪರಿಷತ್ ಚುನಾವಣೆಗೆ ಸಿದ್ಧತೆ ನಡೆಸಿದ್ದರು ಅಷ್ಟರಲ್ಲೇ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.

    ಸ್ಥಳೀಯ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]