Tag: private hospitals

  • ಲಸಿಕೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ನೀಡಿದ್ದ ವರ್ಕ್ ಆರ್ಡರ್ ರದ್ದು- CWFI ಸ್ವಾಗತ

    ಲಸಿಕೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ನೀಡಿದ್ದ ವರ್ಕ್ ಆರ್ಡರ್ ರದ್ದು- CWFI ಸ್ವಾಗತ

    ಬೆಂಗಳೂರು: ಕಾರ್ಮಿಕ ಉಪ ವಿಭಾಗಗಳ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ನೀಡಿದ್ದ ವರ್ಕ್ ಆರ್ಡರ್ ನ್ನು ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ರದ್ದುಗೊಳಿಸಿದೆ. ಇದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್(CWFI) ಸಂತಸ ವ್ಯಕ್ತಪಡಿಸಿದೆ.

    ರಾಜ್ಯದಲ್ಲಿರುವ 30 ಲಕ್ಷ ಕಟ್ಟಡ ಹಾಗೂ 10 ಲಕ್ಷ ವಲಸೆ ಕಾರ್ಮಿಕರಿಗೆ ಕೋವಿಡ್ ಲಸಿಕೆ ನೀಡಲು ಇತ್ತೀಚೆಗೆ ಖಾಸಗಿ ಆಸ್ಪತ್ರೆಗಳಿಗೆ ಕಟ್ಟಡ ಕಾರ್ಮಿಕ ಮಂಡಳಿ ಪ್ರತಿ ಡೋಸ್ ಗೆ 780 ರೂ. ದರವನ್ನು ನಿಗದಿಪಡಿಸಿತ್ತು. ಇದನ್ನು ವಿರೋಧಿಸಿ ಕಟ್ಟಡ ಕಾರ್ಮಿಕ ಸಂಘಟನೆಗಳು ತೀವ್ರ ಹೋರಾಟ ನಡೆಸಿ, ಕಟ್ಟಡ ಕಾರ್ಮಿಕ ಕಲ್ಯಾಣಕ್ಕಾಗಿ ಮೀಸಲಿಟ್ಟ ಸೆಸ್ ಹಣವನ್ನು ರಾಜ್ಯದ 400 ಖಾಸಗಿ ಆಸ್ಪತ್ರೆಗಳಿಗೆ ನೀಡುವ ತೀರ್ಮಾನ ಕೈ ಬಿಡುವಂತೆ ಆಗ್ರಹಿಸಿದ್ದವು. ಇದನ್ನೂ ಓದಿ: ಇನ್ನೂ ಮಳೆಯಾಗಲಿದೆ, ಭೂಮಿ ನಡುಗುತ್ತೆ, ಆಪತ್ತುಗಳು ಕಳೆದಿಲ್ಲ: ಕೋಡಿಶ್ರೀ

    ಕಾರ್ಮಿಕರ ಹೋರಾಟದಿಂದ ಕಲ್ಯಾಣ ಮಂಡಳಿ ತನ್ನ ತೀರ್ಮಾನದಿಂದ ಹಿಂದೆ ಸರಿದಿದ್ದು, ಎಲ್ಲ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೂ ಸರ್ಕಾರದ ವತಿಯಿಂದಲೇ ಉಚಿತ ಲಸಿಕೆ ನೀಡುವುದಾಗಿ ಪ್ರಕಟಿಸಿತ್ತು. ಆದರೆ ಆಗಲೇ ಬೆಂಗಳೂರಿನ ಆರು ಕಾರ್ಮಿಕ ಉಪವಿಭಾಗ ವ್ಯಾಪ್ತಿಯಲ್ಲಿ 2 ಲಕ್ಷ ಡೋಸ್ ಲಸಿಕೆ ನೀಡಲು ಮಂಡಳಿಯಿಂದ 15.60 ಕೋಟಿ ರೂ. ವರ್ಕ್ ಆರ್ಡರ್ ನೀಡಲಾಗಿತ್ತು. ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕರ ಫೆಡರೇಶನ್ ಒತ್ತಾಯಿಸಿತ್ತು.

    ಇದೀಗ ಮಂಡಳಿ ಖಾಸಗಿ ಆಸ್ಪತ್ರೆಗಳ ಒಕ್ಕೂಟವಾದ ಫನಾಗೆ ಕಳುಹಿಸಲಾದ ಆದೇಶದಲ್ಲಿ ರಾಜ್ಯ ಸರ್ಕಾರ ಎಲ್ಲ ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳ ಮೂಲಕ ಉಚಿತವಾಗಿ ಲಸಿಕೆ ಹಾಕುವ ಕಾರ್ಯಕ್ರಮ ಜಾರಿಗೊಳಿಸಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳ ಮೂಲಕ ಲಸಿಕೆ ಹಾಕುವ ಕಾರ್ಯಕ್ರಮ ರದ್ದುಪಡಿಸಲಾಗಿದೆ ಎಂದು ತಿಳಿಸಲಾಗಿದೆ. ಇದು ಅತ್ಯಂತ ಮಹತ್ವದ ಮತ್ತು ಸ್ವಾಗತಾರ್ಹ ನಿರ್ಧಾರವಾಗಿದೆ. ಈ ಕ್ರಮಕ್ಕಾಗಿ ಮಂಡಳಿ ಕಾರ್ಯದರ್ಶಿಗಳು ಮತ್ತು ಸರ್ಕಾರಕ್ಕೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (CWFI) ಅಭಿನಂದನೆ ಸಲ್ಲಿಸಿದೆ ಎಂದು ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ ತಿಳಿಸಿದ್ದಾರೆ.

  • ಲಸಿಕೆ ಕೊರತೆ- ಖಾಸಗಿ ಆಸ್ಪತ್ರೆಗಳಿಗೆ ಹೊಸ ನಿಯಮ ಜಾರಿಗೊಳಿಸಿದ ಕೇಂದ್ರ

    ಲಸಿಕೆ ಕೊರತೆ- ಖಾಸಗಿ ಆಸ್ಪತ್ರೆಗಳಿಗೆ ಹೊಸ ನಿಯಮ ಜಾರಿಗೊಳಿಸಿದ ಕೇಂದ್ರ

    ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಕೊರೊನಾ ಲಸಿಕೆ ಅಭಾವ ಕಾಡುತ್ತಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳು ವ್ಯಾಕ್ಸಿನ್ ಕೊಳ್ಳಲು ಕೇಂದ್ರ ಸರ್ಕಾರ ಹೊಸ ನಿಯಮಗಳನ್ನು ಜಾರಿಗೆ ತಂದಿದೆ.

    ಇಷ್ಟು ದಿನ ಖಾಸಗಿ ಆಸ್ಪತ್ರೆಗಳು ಉತ್ಪಾದನಾ ಕಂಪನಿಗಳಿಂದ ನೇರವಾಗಿ ಕೊರೊನಾ ಲಸಿಕೆ ಕೊಳ್ಳಬಹುದಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದ್ದು, ಖಾಸಗಿ ಆಸ್ಪತ್ರೆಗಳು ಸಹ ಕೋ-ವಿನ್ ಆಪ್‍ನಲ್ಲಿಯೇ ಆರ್ಡರ್ ಮಾಡಬೇಕು ಎಂದು ಹೊಸ ನಿಯಮದಲ್ಲಿ ತಿಳಿಸಿದೆ. ಕೊರೊನಾ ಲಸಿಕೆಯ ಸಂಗ್ರಹ ಹಾಗೂ ಲಾಭದ ಕುರಿತು ಪರಿಶೀಲಿಸುವ ದೃಷ್ಟಿಯಿಂದ ಖಾಸಗಿ ಆಸ್ಪತ್ರೆಗಳಿಗೆ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

    ಹೊಸ ಮಾರ್ಗಸೂಚಿಗಳ ಪ್ರಕಾರ ಖಾಸಗಿ ಆಸ್ಪತ್ರೆಗಳು ನೇರವಾಗಿ ಲಸಿಕೆ ಉತ್ಪಾದಕರಿಂದ ಕೊಳ್ಳುವಂತಿಲ್ಲ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಕೋ-ವಿನ್ ಪೋರ್ಟಲ್‍ನಲ್ಲಿ ವ್ಯಾಕ್ಸಿನ್ ಆರ್ಡರ್ ಮಾಡಬೇಕು. ಅಲ್ಲದೆ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಮೂಲಕ ಪೇಮೆಂಟ್ ಮಾಡಬೇಕು. ಜುಲೈ 1 ರಿಂದ ವ್ಯಾಕ್ಸಿನ್ ಖರೀದಿಯ ಹೊಸ ನಿಯಮಗಳು ಜಾರಿಗೆ ಬರಲಿವೆ.

    ಉತ್ಪಾದಕರ ಕಡೆಯಿಂದ ನೇರವಾಗಿ ಖರೀದಿಸಿದ ಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳು ಕಡಿಮೆ ಪ್ರಮಾಣದಲ್ಲಿ ಬಳಸುತ್ತಿವೆ. ಪೂರ್ಣ ಪ್ರಮಾಣದಲ್ಲಿ ಲಸಿಕೆ ನೀಡುತ್ತಿಲ್ಲ, ಸ್ಟಾಕ್ ಉಳಿಯುತ್ತಿದೆ ಎಂಬ ಕುರಿತು ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಹೊಸ ನಿಯಮಗಳನ್ನು ಜಾರಿಗೆ ತಂದಿದೆ.

    ಹೊಸ ನಿಯಮದ ಪ್ರಕಾರ, ಲಸಿಕೆ ಖರೀದಿಸಿದ ಬಳಿಕ ಸಂಗ್ರಹಣೆ ಹಾಗೂ ಲಸಿಕೆ ಹಾಕಿರುವುದು ಎಲ್ಲದರ ಕುರಿತು ಲೆಕ್ಕ ನೀಡಬೇಕಾಗುತ್ತದೆ. ನಿರ್ದಿಷ್ಟ ತಿಂಗಳಲ್ಲಿ ಅಥವಾ ವಾರದಲ್ಲಿ ಎಷ್ಟು ಲಸಿಕೆ ಖರ್ಚಾಗಿದೆ ಎಂಬುದನ್ನು ಖಾಸಗಿ ಆಸ್ಪತ್ರೆಗಳು ತಿಳಿಸಬೇಕಾಗುತ್ತದೆ. ಇದರಿಂದಾಗಿ ಹೆಚ್ಚು ದಿನಗಳ ಕಾಲ ಸ್ಟಾಕ್ ಇಟ್ಟುಕೊಳ್ಳುವುದು ತಪ್ಪುತ್ತದೆ. ಇದರಿಂದ ಸರ್ಕಾರಕ್ಕೆ ಹೆಚ್ಚು ಲಸಿಕೆ ಸಿಗುತ್ತದೆ.

    ಪ್ರಸ್ತುತ ಖಾಸಗಿ ಆಸ್ಪತ್ರೆಗಳು ಶೇ.25ರಷ್ಟು ಲಸಿಕೆಗಳನ್ನು ನೇರವಾಗಿ ಉತ್ಪಾದಕರಿಂದ ಖರೀದಿಸಬಹುದಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್ ಲಸಿಕೆಗೆ ನಿಗದಿಪಡಿಸಿರುವ ಬೆಲೆಯ ಮೇಲೆ 150 ರೂ. ಸೇವಾ ಶುಲ್ಕವನ್ನು ವಿಧಿಸಲಾಗಿದ್ದು, ಇದನ್ನು ಮೇಲ್ವಿಚಾರಣೆ ಮಾಡಲು ರಾಜ್ಯ ಸರ್ಕಾರಗಳಿಗೆ ವಹಿಸಲಾಗಿದೆ.

  • ರಾಜ್ಯ ಸರ್ಕಾರಗಳಿಗೆ ವ್ಯಾಕ್ಸಿನ್ ಸಿಗ್ತಿಲ್ಲ- 18 ವರ್ಷ ಮೇಲ್ಪಟ್ಟವರಿಗೆ ನಾಳೆಯಿಂದ ವ್ಯಾಕ್ಸಿನ್ ನೀಡಲು ತಯಾರಾದ ಖಾಸಗಿ ಆಸ್ಪತ್ರೆಗಳು

    ರಾಜ್ಯ ಸರ್ಕಾರಗಳಿಗೆ ವ್ಯಾಕ್ಸಿನ್ ಸಿಗ್ತಿಲ್ಲ- 18 ವರ್ಷ ಮೇಲ್ಪಟ್ಟವರಿಗೆ ನಾಳೆಯಿಂದ ವ್ಯಾಕ್ಸಿನ್ ನೀಡಲು ತಯಾರಾದ ಖಾಸಗಿ ಆಸ್ಪತ್ರೆಗಳು

    – ಅಪೋಲೋ, ಮ್ಯಾಕ್ಸ್ ಆಸ್ಪತ್ರೆಗಳಲ್ಲಿ ನಾಳೆಯಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ

    ನವದೆಹಲಿ: ದಾಸ್ತಾನು ಇಲ್ಲದ ಕಾರಣ ಬಹುತೇಕ ರಾಜ್ಯ ಸರ್ಕಾರಗಳು ನಾಳೆಯಿಂದ ಲಸಿಕೆ ನೀಡಲು ನಿರಾಕರಿಸಿವೆ. ಇದೆಲ್ಲದ ಮಧ್ಯೆ ಖಾಸಗಿ ಆಸ್ಪತ್ರೆಗಳಾದ ಅಪೋಲೋ ಹಾಗೂ ಮ್ಯಾಕ್ಸ್ ನಾಳೆಯಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ತಯಾರಿ ನಡೆಸಿವೆ.

    ಹಲವು ರಾಜ್ಯ ಸರ್ಕಾರಗಳು ಪೂರ್ವ ನಿಗದಿಯಂತೆ ನಾಳೆಯಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ನಿರಾಕರಿಸಿದ್ದು, ದಾಸ್ತಾನು ಇಲ್ಲ ಎಂದು ಹೇಳಿವೆ. ಇದೆಲ್ಲದರ ನಡುವೆ ಖಾಸಗಿ ಆಸ್ಪತ್ರೆಗಳು ವ್ಯಾಕ್ಸಿನ್ ನೀಡಲು ಮುಂದಾಗಿರುವುದು ಅಚ್ಚರಿ ಮೂಡಿಸಿದೆ.

    ಸೀಮಿತ ಪ್ರಮಾಣದಲ್ಲಿ ಲಸಿಕೆ ಕಾರ್ಯಕ್ರಮ ಆರಂಭವಾಗಲಿದ್ದು, ಮುಂದಿನ ವಾರಗಳಲ್ಲಿ ವೇಗ ನೀಡಲಾಗುವುದು. ಕಾರ್ಪೋರೇಟ್ಸ್ ಗಾಗಿ ಅಪೋಲೋ ಆಸ್ಪತ್ರೆಯಿಂದ ವಿಶೇಷ ಕ್ಯಾಂಪ್‍ಗಳನ್ನು ಸಹ ಆಯೋಜಿಸಲಾಗುತ್ತಿದೆ. ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗುವುದು ಎಂದು ಅಪೋಲೋ ಆಸ್ಪತ್ರೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

    18 ವರ್ಷ ಮೇಲ್ಪಟ್ಟವರಿಗೆ ನಿಗದಿಯಂತೆ ನಾಳೆಯಿಂದಲೇ ಕೊರೊನಾ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮ್ಯಾಕ್ಸ್ ಆಸ್ಪತ್ರೆ ತಿಳಿಸಿದೆ. ಇದಕ್ಕಾಗಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದೆ.

    ಜನವರಿಯಲ್ಲಿ ಮೊದಲ ಹಂತ ಲಸಿಕೆ ಅಭಿಯಾನ ಆರಂಭವಾಗಿದ್ದು, ಮೊದಲು ಕೊರೊನಾ ವಾರಿಯರ್ಸ್ ಹಾಗೂ ಫ್ರಂಟ್ ಲೈನ್ ವರ್ಕರ್ಸ್ ಗೆ ನೀಡಲಾಗಿತ್ತು. ಬಳಿಕ ಹಿರಿಯ ನಾಗರಿಕರಿಗೆ ಅವಕಾಶ ನೀಡಲಾಯಿತು. ಇದೀಗ 18 ವರ್ಷ ಮೇಲ್ಪಟ್ಟವರಿಗೆ ಅವಕಾಶ ನೀಡಲಾಗಿದೆ.

    ರಾಜ್ಯ ಸರ್ಕಾರಗಳು ಹಾಗೂ ಖಾಸಗಿ ಕಂಪನಿಗಳಿಗೆ ನೇರವಾಗಿ ಉತ್ಪಾದಕರಿಂದ ಖರೀದಿಸಲು ಅವಕಾಶ ನೀಡಲಾಗಿದ್ದು, ಕಂಪನಿಗಳು ಒಟ್ಟು ಉತ್ಪಾದನೆಯ ಶೇ.50ರಷ್ಟು ಪ್ರಮಾಣದಲ್ಲಿ ರಾಜ್ಯ ಸರ್ಕಾರಗಳು ಹಾಗೂ ಖಾಸಗಿ ಕಂಪನಿಗಳಿಗೆ ನೀಡುತ್ತಿವೆ. ಉಳಿದ ಶೇ.50ರಷ್ಟು ಲಸಿಕೆಯನ್ನು ಕೇಂದ್ರ ಸರ್ಕಾರಕ್ಕೆ ನೀಡಲಿವೆ.

    ಹಲವು ರಾಜ್ಯಗಳು ಬೆಲೆ ವ್ಯತ್ಯಾಸದ ಕುರಿತು ಅಸಮಾಧಾನ ವ್ಯಕ್ತಪಡಿಸಿವೆ. ಅಲ್ಲದೆ ವ್ಯಾಕ್ಸಿನ್ ಸ್ಟಾಕ್ ನಂತರದಲ್ಲಿ ಬರುತ್ತದೆ ಎಂದು ಉತ್ಪಾದಕರು ಹೇಳುತ್ತಿರುವುದಾಗಿ ದೂರಿವೆ. ನಾವು ಮೊದಲು ಕೇಂದ್ರ ಸರ್ಕಾರಕ್ಕೆ ನೀಡುವುದಕ್ಕೆ ಆದ್ಯತೆ ಕೊಡುತ್ತಿದ್ದೇವೆ. ಅವರು 45 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡುತ್ತಿದ್ದಾರೆ ಎಂದು ಕಂಪನಿಗಳು ಹೇಳುತ್ತಿವೆ. ಹೀಗಾಗಿ ಯುವಕರು ವ್ಯಾಕ್ಸಿನ್ ಪಡೆಯಲು ಇನ್ನೂ ಸ್ವಲ್ಪ ದಿನಗಳ ಕಾಲ ಕಾಯಬೇಕಿದೆ.

    ಖಾಸಗಿ ಆಸ್ಪತ್ರೆಗಳು ಪ್ರತಿ ಡೋಸ್‍ಗೆ 1,200ರೂ ನೀಡಿ ಖರೀದಿಸಬೇಕಿದೆ. ಸೇರಂ ಇನ್‍ಸ್ಟಿಟಿಟ್ಯೂಟ್ ರಾಜ್ಯ ಸರ್ಕಾರಗಳಿಗೆ 400 ರೂ. ಹಾಗೂ ಖಾಸಗಿ ಆಸ್ಪತ್ರೆಗಳಿಗೆ 600 ರೂ.ಗಳನ್ನು ನಿಗದಿಪಡಿಸಿದೆ. ಭಾರತ್ ಬಯೋಟೆಕ್ ಪ್ರತಿ ಡೋಸ್‍ಗೆ ರಾಜ್ಯ ಸರ್ಕಾರಗಳಿಗೆ 400 ರೂ. ಹಾಗೂ ಖಾಸಗಿ ಆಸ್ಪತ್ರೆಗಳಿಗೆ 1,200 ರೂ. ನಿಗದಿಪಡಿಸಿದೆ.

  • ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡದ ಖಾಸಗಿ ಆಸ್ಪತ್ರೆಗಳು ಬಂದ್

    ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡದ ಖಾಸಗಿ ಆಸ್ಪತ್ರೆಗಳು ಬಂದ್

    – ಜಿಲ್ಲಾಡಳಿತದಿಂದ ಬಂದ್ ಮಾಡಿ ಕ್ರಮ

    ಕೊಪ್ಪಳ: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡದ ಹಿನ್ನೆಲೆ 14 ಖಾಸಗಿ ಆಸ್ಪತ್ರೆಗಳನ್ನು ಬಂದ್ ಮಾಡಿ ಕ್ರಮ ಕೈಗೊಳ್ಳಲಾಗಿದೆ.

    ಜಿಲ್ಲೆಯ ಗಂಗಾವತಿಯಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಬೆಡ್‍ಗಳನ್ನು ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿಡಬೇಕು ಎಂದು ಆದೇಶ ಹೊರಡಿಸಿದೆ. ಆದರೆ ಕೊಪ್ಪಳ ನಗರದ 5 ಆಸ್ಪತ್ರೆಗಳು ಮತ್ತು ಗಂಗಾವತಿ ನಗರದ 22 ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾಡಳಿತ ನಿರ್ದೇಶನ ನೀಡಿತ್ತು. ಅಗಸ್ಟ್ 2ರೊಳಗೆ ಶೇ.50 ರಷ್ಟು ಬೆಡ್ ಸಿದ್ಧತೆ ಮಾಡಿಕೊಂಡು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಬೇಕಿತ್ತು.

    ಈ ಕುರಿತು ತಹಶೀಲ್ದಾರ್ ಮತ್ತು ನಗರಸಭೆಯ ಪೌರಾಯುಕ್ತರು ಸಾಕಷ್ಟು ಬಾರಿ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಿ ಎಂದು ಮನವಿ ಮಾಡಿದ್ದರು. ಆದರೆ ಕ್ಯಾರೆ ಎನ್ನದ ಖಾಸಗಿ ಆಸ್ಪತ್ರೆಗಳು, ಚಿಕಿತ್ಸೆ ನೀಡಲು ನಿರಾಕರಿಸಿದ್ದವು. ಇಂತಹ ಆಸ್ಪತ್ರೆಗಳ ವಿರುದ್ಧ ಇದೀಗ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಗಂಗಾವತಿ ನಗರದ 14 ಖಾಸಗಿ ಆಸ್ಪತ್ರೆಗಳು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಒಪ್ಪದಿದ್ದಕ್ಕೆ ಜಿಲ್ಲಾಡಳಿತ 14 ಆಸ್ಪತ್ರೆಗಳನ್ನು ಬಂದ್ ಮಾಡಿದೆ.

    ಜಿಲ್ಲಾಧಿಕಾರಿಗಳ ಆದೇಶದ ಮೆರೆಗೆ ಕಳೆದ ರಾತ್ರಿ ಗಂಗಾವತಿ ತಹಶೀಲ್ದಾರ್ ಕವಿತಾ ನೇತೃತ್ವದಲ್ಲಿ ಆಸ್ಪತ್ರೆಗಳನ್ನು ಸೀಲ್‍ಡೌನ್ ಮಾಡಲಾಯಿತು. ಇನ್ನುಳಿದ ಖಾಸಗಿ ಆಸ್ಪತ್ರೆಗಳು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಒಪ್ಪಿಕೊಂಡಿವೆ.

  • ಪ್ರಜಾಪ್ರಭುತ್ವಕ್ಕೆ ಅರ್ಥ ಗೊತ್ತಿಲ್ಲದ ಪಕ್ಷ ಕಾಂಗ್ರೆಸ್: ಸಚಿವ ಸುಧಾಕರ್

    ಪ್ರಜಾಪ್ರಭುತ್ವಕ್ಕೆ ಅರ್ಥ ಗೊತ್ತಿಲ್ಲದ ಪಕ್ಷ ಕಾಂಗ್ರೆಸ್: ಸಚಿವ ಸುಧಾಕರ್

    -ಖಾಸಗಿ ಆಸ್ಪತ್ರೆಗಳು ಸಹಕಾರ ಕೊಡ್ತಿಲ್ಲ

    ಚಿಕ್ಕಬಳ್ಳಾಪುರ: ಪ್ರಜಾಪ್ರಭುತ್ವಕ್ಕೆ ಅರ್ಥವೇ ಗೊತ್ತಿಲ್ಲದ ಪಕ್ಷ ಅಂದ್ರೆ ಅದು ಕಾಂಗ್ರೆಸ್ ಎಂದು ಕೈ ನಾಯಕರ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ವಾಗ್ದಾಳಿ ನಡೆಸಿದರು.

    ಚಿಕ್ಕಬಳ್ಳಾಪುರ ನಗರದಲ್ಲಿ ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆಯ ಕಿರು ಹೊತ್ತಿಗೆ ಬಿಡುಗಡೆ ಕಾರ್ಯಕ್ರಮ ನಡೆಸಿ ನಂತರ ಮಾತನಾಡಿದ ಸಚಿವ ಸುಧಾಕರ್, ರಾಜಸ್ಥಾನ ಸರ್ಕಾರ ಬಿಕ್ಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಪ್ರಜಾಪ್ರಭುತ್ವಕ್ಕೆ ಅರ್ಥವೇ ಗೊತ್ತಿರದ ಪಕ್ಷ ಕಾಂಗ್ರೆಸ್. ಇತ್ತೀಚೆಗೆ ಪ್ರಜಾಪ್ರಭುತ್ವ ಅಸ್ತಿತ್ವಕ್ಕೆ ಧಕ್ಕೆ ಬರ್ತಿದೆ ಎಂದು ಟೀಕಿಸಿದರು.

    ಹಲವು ಸವಾಲುಗಳ ಏಳು ಬೀಳುಗಳ ನಡುವೆ ಸಿಎಂ ಯಡಿಯೂರಪ್ಪ ಯಶಸ್ವಿಯಾಗಿ ಒಂದು ವರ್ಷದ ಆಡಳಿತ ನಡೆಸಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಸ್ಥಾನ ನೀಡಿ ಕೊರೊನಾ ಮಣಿಸಲು ಅವಕಾಶ ಕೊಟ್ಟ ಸಿಎಂ ಯಡಿಯೂರಪ್ಪನವರಿಗೆ ಧನ್ಯವಾದಗಳನ್ನ ಅರ್ಪಿಸಿದರು. ಖಾಸಗಿ ಆಸ್ಪತ್ರೆಗೆಳು ಕೊರೊನಾ ವಿಚಾರವಾಗಿ ಸಂಪೂರ್ಣ ಸಹಕಾರ ಕೊಡ್ತಿಲ್ಲ. ಸಾಧ್ಯವಾದರೆ ಖಾಸಗಿ ಆಸ್ಪತ್ರೆಗಳ ಕೊರೊನಾ ಚಿಕಿತ್ಸಾ ದರ ಕಡಿಮೆ ಮಾಡಲು ಪ್ರಯತ್ನಿಸುತ್ತೇವೆ ಎಂದರು.

  • ಕಾಮಾಲೆ ರೋಗದವರಿಗೆ ಕಾಣೋದೆಲ್ಲಾ ಹಳದಿ: ಕೈ ನಾಯಕರ ಮೇಲೆ ಸುಧಾಕರ್ ಕಿಡಿ

    ಕಾಮಾಲೆ ರೋಗದವರಿಗೆ ಕಾಣೋದೆಲ್ಲಾ ಹಳದಿ: ಕೈ ನಾಯಕರ ಮೇಲೆ ಸುಧಾಕರ್ ಕಿಡಿ

    – ಖಾಸಗಿ ಆಸ್ಪತ್ರೆಗಳಿಗೆ ಪರೋಕ್ಷವಾಗಿ ವಾರ್ನಿಂಗ್
    – ಕಾಂಗ್ರೆಸ್ಸಿನವರಿಗೆ ಹಗರಣಗಳು ಮಾಡಿ ಅಭ್ಯಾಸ

    ಬೆಂಗಳೂರು: ಕಾಮಾಲೆ ರೋಗದವರಿಗೆ ಕಾಣುವುದೆಲ್ಲ ಹಳದಿ ಎಂದು ಹೇಳುವ ಮೂಲಕ ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಅವರು ಕಾಂಗ್ರೆಸ್ ನಾಯಕ ಮೇಲೆ ಕಿಡಿಕಾರಿದ್ದಾರೆ.

    ಇಂದು ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿನವರು ಮೊಸರಿನಲ್ಲಿ ಕಲ್ಲು ಹುಡುಕುವುದು ಬಿಡಬೇಕು. ಇಲ್ಲ ಅಂದರೆ ನಾನು ಬಾಯಿ ಬಿಡಬೇಕಾಗುತ್ತೆ. ಯಾರು ಎಲ್ಲೆಲ್ಲಿ ಹೋಗಿದ್ದರು ಯಾರು ಎಲ್ಲಿ ಲೂಟಿ ಮಾಡಿದರು ಅನ್ನೋದು ನನಗೆ ಗೊತ್ತಿದೆ. ಇದನ್ನು ನಾನು ಈಗ ಬಾಯಿ ಬಿಡಬೇಕಾಗುತ್ತದೆ. ಕಾಂಗ್ರೆಸ್ಸಿನವರಿಗೆ ಹಗರಣಗಳು ಮಾಡಿ ಅದೇ ಅಭ್ಯಾಸ ಎಂದರು.

    ಇದೇ ವೇಳೆ ಪಿಪಿಇ ಕಿಟ್ ವಿಚಾರದಲ್ಲಿ ಹಗರಣದ ನಡಿದಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಸುಧಾಕರ್, ಆರೋಗ್ಯ ಇಲಾಖೆಯವರು ಈ ವಿಚಾರದಲ್ಲಿ ಅತ್ಯಂತ ಪಾರದರ್ಶಕವಾಗಿ ಕೆಲಸ ಮಾಡಿದ್ದಾರೆ. ಡಾ. ಮಂಜುನಾಥ್ ಅವರು ಇದನ್ನು ಶಿಫಾರಸು ಮಾಡಿದ್ದಾರೆ. ಸತ್ಯಾಸತ್ಯತೆ ತಿಳಿದು ಆರೋಪ ಮಾಡಲಿ ಎಂದು ಸಿದ್ದರಾಮಯ್ಯ ಅವರಿಗೆ ತೀರುಗೇಟು ನೀಡಿದರು.

    ಖಾಸಗಿ ಆಸ್ಪತ್ರೆಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಸುಧಾಕರ್ ಅವರು, ಬೆಂಗಳೂರಲ್ಲಿ ಸಾಕಷ್ಟು ಕೊರೊನಾ ರಿಪೋರ್ಟ್ ಪೆಂಡಿಗ್ ಇವೆ. ಈ ವಿಚಾರದಲ್ಲಿ ಖಾಸಗಿ ಲ್ಯಾಬ್‍ಗಳು ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ ಸಹಕರಿಸಿಲ್ಲ. ಹೀಗಾಗಿ ಎಲ್ಲ ಲೋಡ್ ಸರ್ಕಾರಿ ಲ್ಯಾಬ್‍ಗಳ ಮೇಲೆ ಬಿದ್ದ ಪರಿಣಾಮ ರಿಪೋರ್ಟ್ ವಿಳಂಬವಾಗಿದೆ. ಕೋಲಾರದ ಮೆಡಿಕಲ್ ಕಾಲೇಜಲ್ಲಿ ಕೇವಲ 30 ಕೊರೊನಾ ಟೆಸ್ಟ್ ಮಾಡಿದ್ದಾರೆ. ಅದೇ ರೀತಿ ರಾಜ್ಯದ ನಾನಾ ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಇದೇ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಿವೆ. ಖಾಸಗಿ ಮೆಡಿಕಲ್ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳುತ್ತೇವೆ. ರಾಜ್ಯದಲ್ಲಿ ಖಾಸಗಿ ಮೆಡಿಕಲ್ ಕಾಲೇಜುಗಳ ಲ್ಯಾಬ್‍ಗಳು ಅಲಂಕಾರಕ್ಕೆ ಇರೋದು ಬೇಡ ಎಂದರು.

    ಲ್ಯಾಬ್ ಇದ್ದ ಮೇಲೆ ಟೆಸ್ಟ್ ಗಳನ್ನು ಮಾಡಲೇಬೇಕು. ಪ್ರತಿ ಟೆಸ್ಟ್‍ಗೂ ಸರ್ಕಾರದಿಂದ ಒಂದು ಟೆಸ್ಟ್‍ಗೆ 2250 ರೂ. ನಂತೆ ಹಣ ಕೊಡುತ್ತೇವೆ. ನಾವೇ ಸ್ಯಾಂಪಲ್ ಕೊಟ್ಟು ನಾವೇ ದುಡ್ಡು ಸಹ ಕೊಡುತ್ತೇವೆ. ಅದರೂ ಕೆಲ ಖಾಸಗಿ ಸಂಸ್ಥೆಗಳು ನಮಗೆ ಸಹಕರಿಸುತ್ತಿಲ್ಲ. ಹೀಗಾಗಿ ಅಂತಹವರ ವಿರುದ್ಧ ಕಟ್ಟುನಿಟ್ಟಾದ ಕ್ರಮ ಕೈಗೊಳುತ್ತೇವೆ. ಕೊರೊನಾ ವಿಚಾರದಲ್ಲಿ ಖಾಸಗಿ ಸಂಸ್ಥೆಗಳ ಸಹಕಾರ ಸಿಕ್ಕಲ್ಲ. ಆದರೆ ಅವರನ್ನು ಸರಿ ದಾರಿಗೆ ತರುವುದು ಸರ್ಕಾರಕ್ಕೆ ಗೊತ್ತಿದೆ ತರುತ್ತೇವೆ ಎಂದು ಸುಧಾಕರ್ ಎಚ್ಚರಿಕೆ ನೀಡಿದರು.

  • ಕೋವಿಡ್‍ನಿಂದ ಸಾವನ್ನಪ್ಪಿದ್ರೂ ಜಿಲ್ಲಾಡಳಿತಕ್ಕೆ ಮಾಹಿತಿ ಇಲ್ಲ- ಖಾಸಗಿ ಆಸ್ಪತ್ರೆಗಳಿಗೆ ಡಿಸಿ ಎಚ್ಚರಿಕೆ

    ಕೋವಿಡ್‍ನಿಂದ ಸಾವನ್ನಪ್ಪಿದ್ರೂ ಜಿಲ್ಲಾಡಳಿತಕ್ಕೆ ಮಾಹಿತಿ ಇಲ್ಲ- ಖಾಸಗಿ ಆಸ್ಪತ್ರೆಗಳಿಗೆ ಡಿಸಿ ಎಚ್ಚರಿಕೆ

    ಮೈಸೂರು: ಕೋವಿಡ್‍ನಿಂದ ಸಾವನ್ನಪ್ಪಿದರೂ ಜಿಲ್ಲಾಡಳಿತಕ್ಕೆ ಮಾಹಿತಿ ನೀಡದ ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ಅಭಿರಾಮ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ನೋಟೀಸ್ ಮೂಲಕವೇ ಎಚ್ಚರಿಕೆ ನೀಡಿದ ಡಿಸಿ, ಕೋವಿಡ್ -19 ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳು ನಿರ್ಲಕ್ಷ್ಯ ವಹಿಸುತ್ತಿವೆ. SARI, ILI ಹಾಗೂ ಕೋವಿಡ್ ಗುಣಲಕ್ಷಣದ ರೋಗಿಯ ಮಾಹಿತಿ ನೀಡಬೇಕು. ಯಾವುದೇ ಆಸ್ಪತ್ರೆಗಳಿಗೆ ಈ ಗುಣಲಕ್ಷಣದ ರೋಗಿ ದಾಖಲಾದರೆ ವೆಬ್‍ಸೈಟ್‍ಗೆ ಅಪ್ಡೇಟ್ ಮಾಡಬೇಕು. ಆದರೆ ಕೆಲವೊಂದು ಆಸ್ಪತ್ರೆಗಳು ಮಾಹಿತಿ ನೀಡುತ್ತಿಲ್ಲ. ಎರಡು ಕೋವಿಡ್ ಪ್ರಕರಣದ ರೋಗಿ ಸಾವನ್ನಪ್ಪಿದರೂ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿಲ್ಲ. ಇದು ನಿರ್ಲಕ್ಷ್ಯತನದ ಪರಮಾವಧಿಯಾಗಿದೆ. ಇದು ನಿಮಗೆ ಕೊನೆಯ ಎಚ್ಚರಿಕೆ ಎಂದು ತಿಳಿಸಿದ್ದಾರೆ.

    ಇನ್ನು ಮುಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗುವ ಎಲ್ಲ ಮಾಹಿತಿ ನೀಡಿ. ಇಲ್ಲವಾದರೆ ನಿಮ್ಮ ಆರೋಗ್ಯ ಸಂಸ್ಥೆಯ ನೋಂದಣಿ ರದ್ದು ಮಾಡಬೇಕಾಗುತ್ತದೆ ಎಂದು ರೋಗಿ ಸಾವನ್ನಪ್ಪಿದರೂ ಮಾಹಿತಿ ನೀಡದ ಆಸ್ಪತ್ರೆಗೆ ಡಿಸಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

  • ಖಾಸಗಿ ಆಸ್ಪತ್ರೆಗಳಿಂದ ‘ಹೋಂ ಕೇರ್ ಪ್ಯಾಕೇಜ್’ ಪರಿಚಯ

    ಖಾಸಗಿ ಆಸ್ಪತ್ರೆಗಳಿಂದ ‘ಹೋಂ ಕೇರ್ ಪ್ಯಾಕೇಜ್’ ಪರಿಚಯ

    – ದೆಹಲಿಯಲ್ಲಿ ಕುಸಿದ ಸರ್ಕಾರಿ ಆರೋಗ್ಯ ವ್ಯವಸ್ಥೆ
    – ಬೆಂಗ್ಳೂರಿನ ಆಸ್ಪತ್ರೆಗಳಲ್ಲೂ ಪ್ಯಾಕೇಜ್?

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. 35 ಸಾವಿರದ ಗಡಿಯಲ್ಲಿರುವ ಸೋಂಕು ದಿನದಿಂದ ದಿನಕ್ಕೆ ಏರುತ್ತಿದ್ದು, ಆರೋಗ್ಯ ಪರಿಸ್ಥಿತಿ ಹದಗೆಡುವಂತೆ ಮಾಡಿದೆ.

    ಕೊರೊನಾದಿಂದ ಆರೋಗ್ಯ ವ್ಯವಸ್ಥೆ ಹಳ್ಳ ಹಿಡಿದಿದ್ದು, ಸೋಂಕು ಬೆಳೆಯುತ್ತಿರುವ ವೇಗಕ್ಕೆ ತಕ್ಕಂತೆ ವೈದ್ಯಕೀಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ದೆಹಲಿ ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ. ಬೆಡ್‍ಗಳ ಅಭಾವ ಸೃಷ್ಟಿಯಾಗಿದ್ದು, ಕೊರೊನಾ ಗುಣಲಕ್ಷಣಗಳಿರುವ ಸಾವಿರಾರು ಮಂದಿಗೆ ಸೂಕ್ತ ವೈದ್ಯಕೀಯ ವ್ಯವಸ್ಥೆಗಳು ಸಿಗುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಹೀಗಾಗಿ ಸಣ್ಣ ಪ್ರಮಾಣ ಲಕ್ಷಣಗಳಿರುವ ರೋಗಿಗಳ ಮನೆಯಲ್ಲಿ ಚಿಕಿತ್ಸೆ ಪಡೆಯಲು ಸೂಚಿಸಿದ್ದು, ತೀವ್ರವಾಗಿ ಕೊರೊನಾದಿಂದ ಬಳಲುತ್ತಿರುವವರಿಗೆ ಹಾಗೂ ಗಂಭೀರ ಪ್ರಕರಣಗಳಿಗೆ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಎಂದು ದೆಹಲಿ ಸರ್ಕಾರ ಘೋಷಿಸಿದೆ.

    ದೆಹಲಿ ಸರ್ಕಾರ ಇಂತದೊಂದು ನಿರ್ಧಾರ ತೆಗೆದುಕೊಳ್ಳುತ್ತಿದ್ದಂತೆ ಖಾಸಗಿ ಆಸ್ಪತ್ರೆಗಳು ಹೊಸ ಯೋಜನೆವೊಂದನ್ನು ದೆಹಲಿಯಲ್ಲಿ ಆರಂಭಿಸಿದೆ. ದೆಹಲಿ ಎನ್‍ಸಿಆರ್ ಪ್ರದೇಶದಲ್ಲಿರುವ ಗುರುಗ್ರಾಮ್‍ನ ಮ್ಯಾಕ್ಸ್ ಹೆಲ್ತ್ ಕೇರ್, ಫೋರ್ಟಿಸ್ ಹೆಲ್ತ್ ಕೇರ್ ಹಾಗೂ ಮೆಡಂತ ಹೆಲ್ತ್ ಕೇರ್ ಆಸ್ಪತ್ರೆಗಳು ‘ಹೋಂ ಕೇರ್’ ಹೆಸರಿನ ಹೊಸ ಪ್ಯಾಕೇಜ್‍ವೊಂದನ್ನು ಘೋಷಿಸಿವೆ. ಈ ಪ್ಯಾಕೇಜ್ ಅಡಿ ಸಣ್ಣ ಪ್ರಮಾಣದಲ್ಲಿ ಕೊರೊನಾ ಗುಣಲಕ್ಷಣಗಳು ಇರುವ ರೋಗಿಗಳಿಗೆ ಮನೆಯಲ್ಲೆ ಚಿಕಿತ್ಸೆ ನೀಡಲಿವೆ.

    ‘ಹೋಂ ಕೇರ್ ಪ್ಯಾಕೇಜ್’ ಹೇಗಿರಲಿದೆ?
    * ಮ್ಯಾಕ್ಸ್ ಹೆಲ್ತ್ ಕೇರ್ 15 ದಿನಕ್ಕೆ 7,000 ರೂ. ಮೌಲ್ಯದ ಹೋಂ ಕೇರ್ ಪ್ಯಾಕೇಜ್ ಪ್ರಕಟಿಸಿದೆ.
    * ಫೋರ್ಟಿಸ್ ಆಸ್ಪತ್ರೆ 17 ದಿನಕ್ಕೆ 6,000 ರೂ. ಹೋಂ ಕೇರ್ ಪ್ಯಾಕೇಜ್
    * ಮೆಡಂತಾ ಹೆಲ್ತ್ ಕೇರ್ ಆಸ್ಪತ್ರೆ 15 ದಿನಕ್ಕೆ 4,900 ರೂ. ಪ್ಯಾಕೇಜ್ ಘೋಷಿಸಿದೆ.
    * ಈ ಪ್ಯಾಕೇಜ್ ಡಿಜಿಟಲ್ ಥರ್ಮಾ ಮೀಟರ್, ಆಕ್ಸಿ ಮೀಟರ್, ಡಿಜಿಟಲ್ ಬಿಪಿ ಪರಿಶೀಲನಾ ಯಂತ್ರ ಒಳಗೊಂಡಿರಲಿದೆ.
    * ಆರಂಭದಲ್ಲಿ ವೈದ್ಯರು ರೋಗಿಯ ತಪಾಸಣೆ ನಡೆಸಲಿದ್ದಾರೆ.
    * ಬಳಿಕ ಪ್ರತಿ ನಿತ್ಯ ಎರಡು ಬಾರಿ ದೂರವಾಣಿ ಮೂಲಕ ನರ್ಸ್ ಆರೋಗ್ಯದ ಮಾಹಿತಿ ಪಡೆದುಕೊಳ್ಳಲಿದ್ದಾರೆ.

    * ಆಸ್ಪತ್ರೆ ನೀಡಿದ ವೈದ್ಯಕೀಯ ಸಲಕರಣೆಗಳ ಬಳಸಿಕೊಂಡು ರೋಗಿಯೇ ಪ್ರತಿದಿನದ ವರದಿ ಅಪ್‍ಡೇಟ್ ಮಾಡಬೇಕು.
    * ಜ್ವರ, ತಲೆ ನೋವು, ಗಂಟಲು ನೋವು, ದೇಹದ ತಾಪಮಾನ, ಹೃದಯ ಬಡಿತ ಮಾಹಿತಿ ಪ್ರತಿನಿತ್ಯ ಹಂಚಿಕೊಳ್ಳಬೇಕು.
    * ಫೋರ್ಟಿಸ್ ಇದಕ್ಕಾಗಿ ಮೊಬೈಲ್ ಆ್ಯಪ್ ತಯಾರು ಮಾಡಿದೆ.
    * ಸ್ಕೀಂನ ಒಟ್ಟು ಅವಧಿಯಲ್ಲಿ ಮೂರು ಬಾರಿ ತಜ್ಞ ವೈದ್ಯರು ಆನ್‍ಲೈನ್ ಮೂಲಕ ರೋಗಿಯನ್ನು ಕನ್ಸಲ್ಟ್ ಮಾಡುತ್ತಾರೆ.
    * ದೊಡ್ಡ ಪ್ರಮಾಣದ ಬದಲಾವಣೆ ಕಂಡು ಬಂದರೆ ಆಸ್ಪತ್ರೆ ದಾಖಲಾಗಲು ಸಲಹೆ ನೀಡಲಿದ್ದಾರೆ.

    ಇವು ಆರಂಭಿಕ ಪ್ಯಾಕೇಜ್‍ಗಳಾಗಿದ್ದು ಕೋವಿಡ್ ಕೇರ್ ಪ್ಯಾಕೇಜ್ ಅಡಿ ಸುಮಾರು 25,000 ರೂ.ವರೆಗಿನ ಪ್ಯಾಕೇಜ್‍ಗಳನ್ನು ಈ ಆಸ್ಪತ್ರೆಗಳು ಪರಿಚಯಿಸಿದೆ. ಇದು ಎನ್- 95 ಮಾಸ್ಕ್, ಸ್ಯಾನಿಟೈಸರ್, ಪಿಪಿಇ ಕಿಟ್ ಸೇರಿ ಅತ್ಯಾಧುನಿಕ ವೈದ್ಯಕೀಯ ಸಲಕರಣೆಗಳನ್ನು ಒಳಗೊಂಡಿರಲಿದೆ.

    ಇತರೆ ರಾಜ್ಯಕ್ಕೂ ಹೋಂ ಕೇರ್ ಪ್ಯಾಕೇಜ್ ವಿಸ್ತರಣೆ:
    ದೆಹಲಿಯಲ್ಲಿ ಆರಂಭಿಕವಾಗಿ ಈ ಪ್ಯಾಕೇಜ್ ವ್ಯವಸ್ಥೆ ಆರಂಭಿಸಿರುವ ಖಾಸಗಿ ಆಸ್ಪತ್ರೆಗಳು ಉತ್ತಮ ಪ್ರತಿಕ್ರಿಯೆ ಬಂದಲ್ಲಿ ದೇಶಾದ್ಯಂತ ಇರುವ ತಮ್ಮ ಇತರೆ ಬ್ರ್ಯಾಂಚ್‍ಗಳಲ್ಲೂ ಪರಿಚಯಿಸುವ ಸಾಧ್ಯತೆ ಇದೆ. ಫೋರ್ಟಿಸ್ ಮತ್ತು ಮ್ಯಾಕ್ಸ್ ಆಸ್ಪತ್ರೆಗಳು ಬೆಂಗಳೂರಿನಲ್ಲಿದ್ದು, ಕೊರೊನಾ ಮೀತಿ ಮೀರಿದರೆ ಸಿಲಿಕಾನ್ ಸಿಟಿಯಲ್ಲೂ ಹೋಂ ಕೇರ್, ಕೋವಿಡ್ ಕೇರ್ ಪ್ಯಾಕೇಜ್ ವ್ಯವಸ್ಥೆ ಶುರುವಾಗುವ ಸಾಧ್ಯತೆಗಳಿದೆ.

  • ಕೊರೊನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆ ಬಳಸಿಕೊಳ್ಳಲು ಸರ್ಕಾರದ ಪ್ಲಾನ್- ದುಬಾರಿ ದರದ ಟೆನ್ಶನ್

    ಕೊರೊನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆ ಬಳಸಿಕೊಳ್ಳಲು ಸರ್ಕಾರದ ಪ್ಲಾನ್- ದುಬಾರಿ ದರದ ಟೆನ್ಶನ್

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾ ಸ್ಫೋಟ ಆಗುತ್ತಿದೆ. ಇನ್ನೂ ಅರ್ಧಲಕ್ಷ ಸ್ಯಾಂಪಲ್ ಟೆಸ್ಟ್‌ಗಳ ವರದಿ ಬರಬೇಕಿದೆ. ಮುಂಬೈನಿಂದ ಒಂದೂವರೆ ಲಕ್ಷ ಮಂದಿ ಕನ್ನಡಿಗರು ರಾಜ್ಯಕ್ಕೆ ಬರಲು ಸಜ್ಜಾಗಿದ್ದಾರೆ. ಕೊರೊನಾ ಸ್ಫೋಟದ ಸದ್ಯದ ತೀವ್ರತೆ ಗಮನಿಸಿದರೆ ಮುಂದಿನ 10 ದಿನದಲ್ಲಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10 ಸಾವಿರ ದಾಟಬಹುದು ಎಂದು ಅಂದಾಜಿಸಲಾಗಿದೆ.

    ಕೊರೊನಾ ಸೋಂಕಿತರಿಗೆ ಎಲ್ಲಿ ಹೇಗೆ ಚಿಕಿತ್ಸೆ ಕೊಡಬೇಕು ಎಂದು ರಾಜ್ಯ ಸರ್ಕಾರ ತಲೆ ಕೆಡಿಸಿಕೊಂಡಿದೆ. 7 ಸಾವಿರ ಬೆಡ್‍ಗಳನ್ನು ರೆಡಿ ಮಾಡಿದೆ. ಅಗತ್ಯಬಿದ್ದರೆ ಖಾಸಗಿ ಆಸ್ಪತ್ರೆಗಳನ್ನು ಕೊರೊನಾ ಚಿಕಿತ್ಸೆಗೆ ಬಳಸಿಕೊಳ್ಳಲು ಚಿಂತನೆ ನಡೆಸುತ್ತಿದೆ. ಆದರೆ ಖಾಸಗಿ ಆಸ್ಪತ್ರೆಗಳು ದೇಶದಲ್ಲಿ ಎಲ್ಲೂ ಇರದ ದುಬಾರಿ ದರಗಳನ್ನು ಕೊರೊನಾ ಚಿಕಿತ್ಸೆಗೆ ನಿಗದಿ ಮಾಡಲು ಮುಂದಾಗಿದೆ. ಈ ಬಗ್ಗೆ ‘ಪಬ್ಲಿಕ್ ಟಿವಿ’ ಸರ್ಕಾರವನ್ನು ಪ್ರಶ್ನೆ ಮಾಡಿದೆ.

    ಕೊರೊನಾ ತಾಂಡವ ಆಡುತ್ತಿರುವ ಮಹಾರಾಷ್ಟ್ರದಲ್ಲೂ ಖಾಸಗಿ ಆಸ್ಪತ್ರೆಗಳಲ್ಲಿ ಇಷ್ಟೊಂದು ದರ ಇಲ್ಲ. ನಮ್ಮ ರಾಜ್ಯದಲ್ಲೇಕೆ ದುಪ್ಪಟ್ಟು ದರ ವಿಧಿಸಲು ಖಾಸಗಿ ಆಸ್ಪತ್ರೆಗಳು ಮುಂದಾಗುತ್ತಿದೆ ಎನ್ನುವ ಪ್ರಶ್ನೆಯನ್ನ ಪಬ್ಲಿಕ್ ಟಿವಿ ಸರ್ಕಾರದ ಮುಂದಿಟ್ಟಿತ್ತು. ಇದಕ್ಕೆ ಕೂಡಲೇ ಸ್ಪಂದಿಸಿದ ಆರೋಗ್ಯ ಸಚಿವ ಶ್ರೀರಾಮುಲು, ಖಾಸಗಿ ಆಸ್ಪತ್ರೆಗಳ ಪ್ರಸ್ತಾಪಿತ ದರವನ್ನು ಸರ್ಕಾರ ಒಪ್ಪಲು ಆಗಲ್ಲ. ಯಾವುದೇ ಕಾರಣಕ್ಕೂ ಅವರು ಹೇಳಿದ ದರ ಫಿಕ್ಸ್ ಮಾಡಲ್ಲ. ಶೀಘ್ರವೇ ಸರ್ಕಾರವೇ ಕೊರೊನಾ ಚಿಕಿತ್ಸೆಗೆ ಒಂದು ದರ ನಿಗದಿ ಮಾಡಲಿದೆ. ಒಂದು ಸಣ್ಣ ಕಂಪ್ಲೆಂಟ್ ಬಂದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದ್ದಾರೆ.

    ಖಾಸಗಿ ಆಸ್ಪತ್ರೆಗಳ ಪ್ರಸ್ತಾಪಿತ ದರ:
    > ಜನೆರಲ್ ವಾರ್ಡ್ – 10,000 ರೂ.
    > ಸ್ಪೆಷಲ್ ವಾರ್ಡ್ – 20,000 ರೂ.
    > ಐಸಿಯು ವಾರ್ಡ್ – 25,000 ರೂ.
    > ವೆಂಟಿಲೇಟರ್ – 35,000 ರೂ.

    ಆದರೆ ಕೊರೋನಾ ಪೀಡಿತ ಮಹಾರಾಷ್ಟ್ರದಲ್ಲಿ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ವಿಧಿಸುತ್ತಿರುವ ದರ ಭಾರೀ ಕಡಿಮೆ ಇದೆ.

    ‘ಮಹಾ’ ಖಾಸಗಿ ಆಸ್ಪತ್ರೆಗಳ ದರ:
    > ಜನೆರಲ್ ವಾರ್ಡ್ – 4,000 ರೂ.
    > ಸ್ಪೆಷಲ್ ವಾರ್ಡ್ – 6,000 ರೂ.
    > ಐಸಿಯು ವಾರ್ಡ್ – 7,500 ರೂ.
    > ವೆಂಟಿಲೇಟರ್ – 9,000 ರೂ.

  • ಸರ್ಕಾರದ ಬ್ರಹ್ಮಾಸ್ತ್ರಕ್ಕೆ ವಿರೋಧ- ಇಂದು ಖಾಸಗಿ ಆಸ್ಪತ್ರೆ ವೈದ್ಯರ ಪ್ರತಿಭಟನೆ

    ಸರ್ಕಾರದ ಬ್ರಹ್ಮಾಸ್ತ್ರಕ್ಕೆ ವಿರೋಧ- ಇಂದು ಖಾಸಗಿ ಆಸ್ಪತ್ರೆ ವೈದ್ಯರ ಪ್ರತಿಭಟನೆ

    ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಸುಲಿಗೆ ರೋಗಕ್ಕೆ ಮದ್ದು ಕಂಡು ಹಿಡಿದಿದೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. ಆದ್ರೆ ಕಹಿ ಔಷಧದಿಂದ ಬೆಚ್ಚಿಬಿದ್ದಿರುವ ಆಸ್ಪತ್ರೆಗಳು ಈಗ ನೇರ ಸಮರಕ್ಕೆ ಇಳಿದಿವೆ.

    ಚಿಕಿತ್ಸೆಗಳಿಗೆ ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಏಕರೂಪದ ದರ ವಿಧಿಸುವ ಹೊಸ ನಿಯಮ ವಿರೋಧಿಸಿ ಇವತ್ತು ಸಾಂಕೇತಿಕ ಪ್ರತಿಭಟನೆಗೆ ನಿರ್ಧರಿಸಿವೆ. ಈ ಹಿನ್ನೆಲೆಯಲ್ಲಿ ಇವತ್ತಿನ ಮಟ್ಟಿಗೆ ರೋಗಿಗಳು ಖಾಸಗಿ ಆಸ್ಪತ್ರೆಗಳತ್ತ ತಲೆ ಹಾಕದೇ ಇರೋದು ಒಳ್ಳೆದು. ತುರ್ತು ಚಿಕಿತ್ಸೆ ಬಿಟ್ಟರೆ ಇವತ್ತು ಖಾಸಗಿ ಆಸ್ಪತ್ರೆಯಲ್ಲಿ ಏನೂ ಸಿಗಲ್ಲ. ಆದ್ರೆ ಸರ್ಕಾರಿ ಆಸ್ಪತ್ರೆಗಳು ಸೇವೆಗೆ ಲಭ್ಯವಿರಲಿವೆ.

    ಬೆಂಗಳೂರಿನ ಮೆಜೆಸ್ಟಿಕ್‍ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಫ್ರೀಡಂ ಪಾರ್ಕ್‍ವರೆಗೆ ಜಾಥಾ ನಡೆಯಲಿದೆ. ಇದರಲ್ಲಿ 15 ಸಾವಿರದಷ್ಟು ಖಾಸಗಿ ವೈದ್ಯರು ಭಾಗವಹಿಸಲಿದ್ದಾರೆ. ಆದ್ರೆ ನಾವು ಸರ್ಕಾರದಿಂದ ಯಾವುದೇ ಸಹಾಯ ಪಡೆದಿಲ್ಲ. ಹೀಗಾಗಿ ನಮ್ಮನ್ನು ನಿಯಂತ್ರಿಸೋ ಅಧಿಕಾರ ಅವರಿಗಿಲ್ಲ. ಆರೋಗ್ಯ ಸಚಿವ ರಮೇಶ್ ಕುಮಾರ್‍ಗೆ ವೈದ್ಯಕೀಯ ಸಲಹೆಗಾರರ ಕೊರತೆ ಇದೆ ಅನ್ನೋದು ಖಾಸಗಿ ಆಸ್ಪತ್ರೆಗಳ ವಾದ.