Tag: Privatization

  • ಶ್ರೀಲಂಕನ್ ಏರ್‌ಲೈನ್ಸ್ ಮಾರಾಟಕ್ಕೆ ಮುಂದಾದ ಸರ್ಕಾರ

    ಶ್ರೀಲಂಕನ್ ಏರ್‌ಲೈನ್ಸ್ ಮಾರಾಟಕ್ಕೆ ಮುಂದಾದ ಸರ್ಕಾರ

    ಕೊಲಂಬೋ: ಸಾಲದ ಸುಳಿಗೆ ಸಿಲುಕಿ ನಲುಗಿರುವ ಶ್ರೀಲಂಕಾ ಆರ್ಥಿಕ ಹಾಗೂ ರಾಜಕೀಯ ಬಿಕ್ಕಟ್ಟನ್ನು ನಿಭಾಯಿಸಲು ಹೆಣಗಾಡುತ್ತಿದೆ. ಈ ಯೋಜನೆಯ ಭಾಗವಾಗಿ ದ್ವೀಪ ರಾಷ್ಟ್ರ ತನ್ನ ರಾಷ್ಟ್ರೀಯ ವಿಮಾನಯಾನ ಸಂಸ್ಥೆ ಶ್ರೀಲಂಕನ್ ಏರ್‌ಲೈನ್ಸ್ ಅನ್ನು ಖಾಸಗೀಕರಣಗೊಳಿಸಲು ಮುಂದಾಗಿದೆ.

    ಶ್ರೀಲಂಕಾದ ಹೊಸದಾಗಿ ನೇಮಕಗೊಂಡ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಶ್ರೀಲಂಕನ್ ಏರ್‌ಲೈನ್ಸ್ ಅನ್ನು ಖಾಸಗೀಕರಣಗೊಳಿಸಲು ಮುಂದಾಗಿದ್ದಾರೆ. ಈ ಮೂಲಕ ಆರ್ಥಿಕ ಹಾಗೂ ರಾಜಕೀಯ ಬಿಕ್ಕಟ್ಟನ್ನು ಸುಧಾರಿಸಲು ಪ್ರಯತ್ನಿಸುತ್ತಿದ್ದಾರೆ. ಇದನ್ನೂ ಓದಿ: ಮೈಕ್ರೋಸಾಫ್ಟ್ ಉದ್ಯೋಗಿಗಳಿಗೆ ಬಂಪರ್: ಒಂದೇ ಬಾರಿಗೆ ಸಂಬಳ ಡಬಲ್

    1948 ರಲ್ಲಿ ಬ್ರಿಟನ್‌ನಿಂದ ಸ್ವಾತಂತ್ರ‍್ಯ ಪಡೆದ ಬಳಿಕ ಶ್ರೀಲಂಕಾ ಇದೇ ಮೊದಲ ಬಾರಿಗೆ ತೀವ್ರವಾದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ನಷ್ಟದಲ್ಲಿರುವ ಶ್ರೀಲಂಕಾದ ಏರ್‌ಲೈನ್ಸ್ ಅನ್ನು ಖಾಸಗೀಕರಣಗೊಳಿಸುವ ಬಗ್ಗೆ ವಿಕ್ರಮಸಿಂಘೆ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಸ್ತಾಪಿಸಿದರು.

    ಶ್ರೀಲಂಕನ್ ಏರ್‌ಲೈನ್ಸ್‌ನ ವ್ಯವಸ್ಥಾಪಕ ಷೇರುದಾರ ಸ್ಥಾನದಿಂದ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆಯನ್ನು ತೆಗೆದುಹಾಕಿದ ಬಳಿಕ ದೊಡ್ಡ ಮಟ್ಟದ ನಷ್ಟವನ್ನು ಅನುಭವಿಸಿತು. 2021 ಮಾರ್ಚ್ ಹೊತ್ತಿಗೆ ಅದರ ಒಟ್ಟು ನಷ್ಟ 372 ಶತಕೋಟಿ ರೂ. ಆಗಿತ್ತು ಎಂದು ಶ್ರೀಲಂಕಾ ಪ್ರಧಾನಿ ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಸಂಕಷ್ಟಕ್ಕೆ ಸಿಲುಕಿದ ರಾಮಾಯಣ ಖ್ಯಾತಿಯ ಹಿಂದೂ ದೇವಾಲಯ!

    SRILANKA

    ಶ್ರೀಲಂಕನ್ ಏರ್‌ಲೈನ್ಸ್ ಅನ್ನು ಖಾಸಗೀಕರಣಗೊಳಿಸಿದರೂ ನಾವು ನಷ್ಟವನ್ನು ಭರಿಸುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಈ ನಷ್ಟವನ್ನು ವಿಮಾನದಲ್ಲಿ ಇಲ್ಲಿವರೆಗೆ ಕಾಲಿಡದ, ಕಡು ಬಡತನದಲ್ಲಿ ಹುಟ್ಟಿರುವವರೂ ಭರಿಸಬೇಕಾಗುತ್ತದೆ ಎಂದು ವಿಕ್ರಮಸಿಂಘೆ ತಿಳಿಸಿದ್ದಾರೆ.

  • ಇಸ್ರೋ ಖಾಸಗೀಕರಣ – ಬೆಂಗಳೂರಿನ ಕಛೇರಿ ಗುಜರಾತ್‍ಗೆ ವರ್ಗಾವಣೆ ಖಂಡಿಸಿ ಪ್ರತಿಭಟನೆ

    ಇಸ್ರೋ ಖಾಸಗೀಕರಣ – ಬೆಂಗಳೂರಿನ ಕಛೇರಿ ಗುಜರಾತ್‍ಗೆ ವರ್ಗಾವಣೆ ಖಂಡಿಸಿ ಪ್ರತಿಭಟನೆ

    ಬೆಂಗಳೂರು: ನಗರದಲ್ಲಿರುವ ಇಸ್ರೋ ಕಛೇರಿಯನ್ನು ಗುಜಾರಾತ್ ರಾಜ್ಯಕ್ಕೆ ವರ್ಗಾಹಿಸುತ್ತಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಎನ್‍ಎಸ್‍ಯುಐ ವಿದ್ಯಾರ್ಥಿ ಕಾಂಗ್ರೆಸ್ ವತಿಯಿಂದ ಸಂಜಯನಗರದಲ್ಲಿರುವ ಇಸ್ರೋ ಕೇಂದ್ರ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.

    ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಮ್ಮ ಹಿರಿಯರು ಕಟ್ಟಿ ಬೆಳಸಿದ ಹಲವಾರು ಸಂಸ್ಥೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಖಾಸಗೀಕರಣ ಮಾಡಿದೆ. ಬೆಂಗಳೂರಿನ ಹವಮಾನ, ಉತ್ತಮ ಪರಿಸರದ ಕಾರಣದಿಂದ ಇಸ್ರೋ ಸಂಸ್ಥೆ ಸ್ಥಾಪಿಸಲಾಯಿತು. ಅದರೆ ಇಂದು ಗುಜರಾತ್ ರಾಜ್ಯಕ್ಕೆ ಇಸ್ರೋ ಸಂಸ್ಥೆ ವರ್ಗಾಯಿಸುವ ಹುನ್ನಾರ ನಡೆಯುತ್ತಿದೆ. ರಾಜ್ಯದ 25 ಬಿಜೆಪಿ ಲೋಕ ಸಭಾ ಸದಸ್ಯರು, 12 ರಾಜ್ಯ ಸಭಾ ಸದಸ್ಯರು ಪ್ರಧಾನಿರವರ ಬಳಿ ನಿಯೋಗ ತೆರಳಿ ಇಸ್ರೋ ಸಂಸ್ಥೆ ಇಲ್ಲಿಯೇ ಉಳಿಯುವಂತೆ ಮಾಡಬೇಕು. ನರೇಂದ್ರ ಮೋದಿಯೊಂದಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚಿಸಿ ಇಸ್ರೋ ಸಂಸ್ಥೆ ಇಲ್ಲಿ ಉಳಿಯುವಂತೆ ಮನವಿ ಮಾಡಬೇಕು. ಅದಲ್ಲದೆ ವರ್ಗಾವಣೆಯಾದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಸ್ಯಾಂಪಲ್‌ ಕಳುಹಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ

    ಪ್ರತಿಭಟನೆಯಲ್ಲಿ ಶಾಸಕರಾದ ಕೃಷ್ಣಭೈರೇಗೌಡ, ಎನ್‍ಎಸ್‍ಯುಐ ರಾಜ್ಯಾಧ್ಯಕ್ಷರಾದ ಕೀರ್ತಿ ಗಣೇಶ್ ಹಾಗೂ ಬೆಂಗಳೂರುನಗರ ಉತ್ತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಜಯಸಿಂಹ ಮತ್ತು ವಿದ್ಯಾರ್ಥಿ ಕಾಂಗ್ರೆಸ್ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಇದನ್ನೂ ಓದಿ: ಕೋವಿಡ್‌ ವಾರಿಯರ್ಸ್‌ಗೆ ಬೂಸ್ಟರ್‌ ಡೋಸ್‌ ನೀಡುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚೆ: ಸಿಎಂ

  • ಏರ್ ಇಂಡಿಯಾ ಬಿಡ್ ಗೆದ್ದ ಟಾಟಾ – ಮಾತೃ ಸಂಸ್ಥೆಗೆ ಮಾರಾಟ

    ಏರ್ ಇಂಡಿಯಾ ಬಿಡ್ ಗೆದ್ದ ಟಾಟಾ – ಮಾತೃ ಸಂಸ್ಥೆಗೆ ಮಾರಾಟ

    ನವದೆಹಲಿ: ಏರ್ ಇಂಡಿಯಾ ಟಾಟಾ ತೆಕ್ಕೆಗೆ ಮರಳಿದೆ. ಕೇಂದ್ರ ಸರ್ಕಾರದ ಏರ್ ಇಂಡಿಯಾ ಖಾಸಗೀಕರಣಗೊಳಿಸುವ ಬಿಡ್ ಅನ್ನು ಟಾಟಾ ಸನ್ಸ್ ಗೆದ್ದುಕೊಂಡಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಬಸ್, ಟ್ರಕ್ ಮಧ್ಯೆ ಭೀಕರ ಅಪಘಾತಕ್ಕೆ 7 ಬಲಿ – 14 ಮಂದಿ ಗಂಭೀರ

    ಈ ವಿಚಾರದ ಬಗ್ಗೆ ಟಾಟಾ ಕಂಪನಿಯ ವಕ್ತಾರರು ಮತ್ತು ಹಣಕಾಸು ಸಚಿವಾಲಯ ಅಧಿಕೃತವಾಗಿ ತಿಳಿಸಿಲ್ಲ. ಏರ್ ಇಂಡಿಯಾ ಖಾಸಗೀಕರಣಗೊಳಿಸುವ ಪ್ರಕ್ರಿಯೆಯ ಬಿಡ್‍ನಲ್ಲಿ ಕೊನೆಯಲ್ಲಿ ಅಜಯ್ ಸಿಂಗ್ ಅವರ ಸ್ಪೈಸ್ ಜೆಟ್ ಕಂಪನಿ ಮತ್ತು ಟಾಟಾ ಸನ್ಸ್ ಇತ್ತು.

    ಕೇಂದ್ರ ಸರ್ಕಾರ ಬಿಡ್‍ಗೆ 15-20 ಸಾವಿರ ಕೋಟಿ ರೂ. ಹಣವನ್ನು ಮೂಲ ಬೆಲೆಯಾಗಿ ಇಟ್ಟಿತ್ತು ಎಂದು ವರದಿಯಾಗಿತ್ತು. ಟಾಟಾ ಕಂಪನಿ ಮೂಲ ಬೆಲೆಗಿಂತಲೂ 3 ಸಾವಿರ ಕೋಟಿ ಮತ್ತು ಸ್ಪೈಸ್ ಜೆಟ್‍ಗಿಂತಲೂ 5 ಸಾವಿರ ಕೋಟಿ ಹೆಚ್ಚು ಬಿಡ್ ಮಾಡಿತ್ತು ಎಂದು ವರದಿಯಾಗಿದೆ. ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಮಿತಿ ಶೀಘ್ರವೇ ಬಿಡ್ ಅಂತಿಮಗೊಳಿಸಿ ಕೆಲ ದಿನಗಳಲ್ಲಿ ಅಧಿಕೃತ ಘೋಷಣೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಮಾಂಜ್ರಾ ನದಿಗೆ ಮತ್ತೆ ಭಾರೀ ಪ್ರಮಾಣದ ನೀರು ಬಿಡುಗಡೆ- ಮಹಾ ನೆರೆಯ ಭೀತಿ 

    2007ರಲ್ಲಿ ಇಂಡಿಯನ್ ಏರ್‍ಲೈನ್ಸ್ ವಿಲೀನದ ಬಳಿಕ ಏರ್ ಇಂಡಿಯಾ ನಷ್ಟವನ್ನು ಅನುಭವಿಸುತ್ತಿದ್ದು 90 ಸಾವಿರ ಕೋಟಿಗೂ ಅಧಿಕ ಸಾಲದ ಸುಳಿಯಲ್ಲಿದೆ. ಏರ್ ಇಂಡಿಯಾ ಸೇವೆಯಿಂದ ಪ್ರತಿದಿನ ಕೇಂದ್ರ ಸರ್ಕಾರಕ್ಕೆ 20 ಕೋಟಿ ರೂ. ನಷ್ಟವಾಗುತ್ತಿದೆ. ಮುಂದಿನ 4 ತಿಂಗಳಿನಲ್ಲಿ ಏರ್ ಇಂಡಿಯಾವನ್ನು ಪೂರ್ಣವಾಗಿ ಟಾಟಾ ಕಂಪನಿಗೆ ಸರ್ಕಾರ ಹಸ್ತಾಂತರಿಸಲಿದೆ. ಖರೀದಿಯ ಬಳಿಕ ಟಾಟಾಗೆ 4,400 ದೇಶೀಯ ಮತ್ತು 1,800 ಅಂತರಾಷ್ಟ್ರೀಯ ಲ್ಯಾಂಡಿಂಗ್ ಸಿಗಲಿದೆ.

    2019ರ ಲೋಕಸಭಾ ಚುನಾವಣೆಗೂ ಮೊದಲೇ ಏರ್ ಇಂಡಿಯಾವನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿತ್ತು. ಆದರೆ ಶೇ.76 ರಷ್ಟು ಷೇರನ್ನು ಮಾರಾಟ ಮಾಡಿ ಶೇ.24 ರಷ್ಟು ಷೇರನ್ನು ತನ್ನ ಬಳಿ ಇಡುವ ಕೇಂದ್ರದ ಪ್ರಸ್ತಾಪಕ್ಕೆ ಬಿಡ್ ಮಾಡಲು ಯಾರೂ ಆಸಕ್ತಿ ತೋರಿಸಿರಲಿಲ್ಲ. ಇದನ್ನೂ ಓದಿ: ಗುದನಾಳದಲ್ಲಿ 42 ಲಕ್ಷ ಬೆಲೆ ಬಾಳುವ ಚಿನ್ನದ ಪೇಸ್ಟ್- ವ್ಯಕ್ತಿ ವಶಕ್ಕೆ

    ಎರಡನೇ ಬಾರಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್ ಪ್ರೆಸ್ ಶೇ.100 ರಷ್ಟು ಖಾಸಗೀಕರಣಕ್ಕೆ ಮುಂದಾಗಿತ್ತು. ಈ ಮಧ್ಯೆ ಕೋವಿಡ್ ಕಾರಣದಿಂದ ಬಿಡ್ ಪ್ರಕ್ರಿಯೆ ವಿಳಂಬವಾಗಿತ್ತು. 2018ರ ಬಿಡ್ಡಿಂಗ್ ಪ್ರಕ್ರಿಯೆ ಸಮಯದಲ್ಲಿ ನಷ್ಟದಲ್ಲಿರುವ ಏರ್ ಇಂಡಿಯಾವನ್ನು ಖರೀದಿಸಿ ಲಾಭ ಆಗುತ್ತದೆ ಎಂಬ ನಿರೀಕ್ಷೆ ಇಲ್ಲ ಎಂದು ಇಂಡಿಗೋ ಹೇಳಿತ್ತು.

    1932ರಲ್ಲಿ ಜೆ.ಆರ್.ಡಿ ಟಾಟಾ ಏರ್ ಇಂಡಿಯಾವನ್ನು ಸ್ಥಾಪಿಸಿದ್ದರು. ಸ್ವಾತಂತ್ರ್ಯ ಸಿಕ್ಕಿದ ಬಳಿಕ 1947ರಲ್ಲಿ ಏರ್ ಇಂಡಿಯಾವನ್ನು ರಾಷ್ಟ್ರೀಕರಣಗೊಳಿಸಲಾಗಿತ್ತು. ಈಗಾಗಲೇ ಭಾರತದಲ್ಲಿ ಟಾಟಾ ಸನ್ಸ್ ಮತ್ತು ಸಿಂಗಾಪುರ ಏರ್‍ಲೈನ್ಸ್ ಜೊತೆಯಾಗಿ ವಿಸ್ತಾರಾ ಏರ್ ಲೈನ್ಸ್ ಸೇವೆ ನೀಡುತ್ತಿದೆ.

  • ಮೈಶುಗರ್ ಖಾಸಗೀಕರಣದಲ್ಲಿ ಅಂಧ್ರದ ಕಂಪನಿಯೊಂದಿಗೆ ಬಿಎಸ್‍ವೈ ಕುಟುಂಬ ಶಾಮೀಲು: ಎಎಪಿ

    ಮೈಶುಗರ್ ಖಾಸಗೀಕರಣದಲ್ಲಿ ಅಂಧ್ರದ ಕಂಪನಿಯೊಂದಿಗೆ ಬಿಎಸ್‍ವೈ ಕುಟುಂಬ ಶಾಮೀಲು: ಎಎಪಿ

    – ಖಾಸಗೀಕರಣದ ನೆಪದಲ್ಲಿ ಕಪ್ಪು ಹಣ ಹೂಡಿಕೆಗೆ ಯತ್ನ

    ಬೆಂಗಳೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ನಾಡಿನ ರೈತರಿಗಾಗಿ ಆರಂಭಿಸಿದ ಮೈಶುಗರ್ ಸಂಸ್ಥೆಯನ್ನು ಖಾಸಗೀಕರಣ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡದಿದ್ದರೆ ಭಾರೀ ವಿರೋಧ ಎದುರಿಸಬೇಕಾಗುತ್ತದೆ ಎಂದು ಎಎಪಿಯ ರಾಜ್ಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡರವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಂಜಪ್ಪ ಕಾಳೇಗೌಡರವರು, ಮೈಶುಗರ್ ಕಾರ್ಖಾನೆಯನ್ನು ಖಾಸಗಿಯವರಿಗೆ ನೀಡುವುದಿಲ್ಲ, ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳುತ್ತೇವೆ ಎಂದು ವಿಧಾನಸಭಾ ಅಧಿವೇಶನದಲ್ಲಿ ಸಿ.ಎಂ.ಯಡಿಯೂರಪ್ಪನವರು ಹೇಳಿದ್ದರು. ಆದರೆ ಈಗ ಅವರೇ ಉಲ್ಟಾ ಹೊಡೆದಿದ್ದಾರೆ. ಯಡಿಯೂರಪ್ಪನವರ ಮಕ್ಕಳು, ಮೊಮ್ಮಕಳು ಆಂಧ್ರ ಮೂಲದ ಕಂಪನಿಯೊಂದಿಗೆ ಕೈಜೋಡಿಸಿದ್ದು, ಖಾಸಗೀಕರಣದ ನಂತರ ಭಾರೀ ಪ್ರಮಾಣದ ಕಪ್ಪುಹಣವನ್ನು ಇದರಲ್ಲಿ ಹೂಡಿಕೆ ಮಾಡಲು ನಿರ್ಧರಿಸಿದ್ದಾರೆ. ಮೈಶುಗರ್‍ಗಾಗಿ ಎಎಪಿಯು 2016ರಲ್ಲೇ ಬೃಹತ್ ರ್ಯಾಲಿ ನಡೆಸಿದ್ದು, ಈಗ ಅದರ ಖಾಸಗೀಕರಣವನ್ನು ನೋಡಿ ಕೈಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

    ಒಡೆಯರ್‍ರವರು ವಿಶೇಷ ಶ್ರಮವಹಿಸಿ 1933ರಲ್ಲಿ ಮೈಶುಗರ್ ಕಾರ್ಖಾನೆಯನ್ನು ಆರಂಭಿಸಿದರು. ಇದನ್ನು ರಾಜ್ಯದ ಮೊದಲ ಕಾರ್ಖಾನೆ ಎಂದು ಗೌರವದಿಂದ ಕಾಣಲಾಗುತ್ತದೆ. ಸ್ವಾತಂತ್ರ್ಯ ಬಂದು 73 ವರ್ಷವಾದರೂ ರಾಜ್ಯವನ್ನು ಆಳಿದ ಯಾವ ಮುಖ್ಯಮಂತ್ರಿಗೂ ಇಂತಹ ಮತ್ತೊಂದು ಕಾರ್ಖಾನೆಯನ್ನು ಆರಂಭಿಸಲು ಸಾಧ್ಯವಾಗಿಲ್ಲ. ನಾಡಿನ ರೈತರ ಬದುಕನ್ನು ಸುಧಾರಿಸುವುದರಲ್ಲಿ ಮೈಶುಗರ್ ಪಾತ್ರ ಮಹತ್ವದ್ದಾಗಿದೆ. ಕಾರ್ಖಾನೆಯ ನೌಕರರು ಹಾಗೂ ಕಬ್ಬು ಬೆಳೆಗಾರರು ಮೈಶುಗರ್ ಸಂಸ್ಥೆಯೊಂದಿಗೆ ಆರ್ಥಿಕ ಸಂಬಂಧ ಮಾತ್ರವಲ್ಲದೇ ಭಾವನಾತ್ಮಕ ಸಂಬಂಧವನ್ನೂ ಹೊಂದಿದ್ದಾರೆ ಎಂದು ಕಾಳೇಗೌಡರವರು ತಿಳಿಸಿದರು. ಇದನ್ನೂ ಓದಿ: ಮೈಶುಗರ್ ಆರಂಭಕ್ಕೆ ಆಸಕ್ತಿ ತೋರಿಸದ ಸರ್ಕಾರದ ವಿರುದ್ಧ ಆಕ್ರೋಶ

    ಪ್ರತಿದಿನವೂ 5 ಟನ್ ಸಕ್ಕರೆ ಅರೆಯುವ ಸಾಮರ್ಥ್ಯವನ್ನು ಮೈಶುಗರ್ ಕಾರ್ಖಾನೆ ಹೊಂದಿದೆ. 14 ಸಾವಿರಕ್ಕೂ ಹೆಚ್ಚು ರೈತರು ಇದರ ಷೇರುದಾರರಾಗಿದ್ದಾರೆ. ಈ ಹಿಂದೆ 18ಕ್ಕೂ ಹೆಚ್ಚು ವರ್ಷಗಳ ಕಾಲ ಮೈಶುಗರ್ ಕಂಪನಿಯು ಶೇ. 20ರಿಂದ ಶೇ. 30ರಷ್ಟು ಡಿವಿಡೆಂಡ್ ನೀಡಿದ ಕೀರ್ತಿ ಹೊಂದಿದೆ. 14ಕ್ಕೂ ಹೆಚ್ಚು ಫಾರ್ಮ್‍ಗಳು, ವಿದ್ಯಾಸಂಸ್ಥೆಗಳು ಮತ್ತು ರೈತ ಸಮುದಾಯ ಭವನಗಳು ಸೇರಿ 207 ಎಕರೆಗಿಂತ ಹೆಚ್ಚಿನ ಭೂಮಿಯು ಮೈಶುಗರ್ ಸಂಸ್ಥೆಯ ಬಳಿಯಲ್ಲಿದೆ. ಇಷ್ಟು ಸಮೃದ್ಧವಾದ ಇತಿಹಾಸ ಹೊಂದಿರುವ ಸಂಸ್ಥೆಯು ಸರ್ಕಾರದ ನಿರ್ಲಕ್ಷ್ಯದಿಂದಾಗಿ ಸ್ಥಗಿತಗೊಂಡಿದೆ. ಸರ್ಕಾರವು ಬಂಡವಾಳ ಹೂಡಿ ಸಂಸ್ಥೆಯನ್ನು ಆಧುನೀಕರಣಗೊಳಿಸಬೇಕೇ ಹೊರತು ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡಬಾರದು ಎಂದು ನಂಜಪ್ಪ ಕಾಳೇಗೌಡ ಹೇಳಿದರು. ಇದನ್ನೂ ಓದಿ: ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ರಾಜವಂಶಸ್ಥ ಯದುವೀರ್ ಬೆಂಬಲ

  • ರಸ್ತೆಯಲ್ಲಿ ಖಾಸಗಿ ವಾಹನಗಳು ಓಡಾಡಲ್ವಾ?: ರೈಲ್ವೇ ಖಾಸಗೀಕರಣ ಸಮರ್ಥಿಸಿಕೊಂಡ ಗೋಯಲ್

    ರಸ್ತೆಯಲ್ಲಿ ಖಾಸಗಿ ವಾಹನಗಳು ಓಡಾಡಲ್ವಾ?: ರೈಲ್ವೇ ಖಾಸಗೀಕರಣ ಸಮರ್ಥಿಸಿಕೊಂಡ ಗೋಯಲ್

    – ರೈಲ್ವೇಯಲ್ಲಿ ಖಾಸಗಿ ಬಂಡವಾಳ ಹೂಡಿಕೆ ಅನಿವಾರ್ಯ

    ನವದೆಹಲಿ: ರಸ್ತೆಗಳು ರಾಷ್ಟ್ರದ ಸಂಪನ್ಮೂಲಗಳಲ್ಲಿ ಒಂದು. ಅಲ್ಲಿ ಖಾಸಗಿ ವಾಹನಗಳು ಓಡಾಡುವದಿಲ್ವಾ ಎಂದು ರೈಲ್ವೇ ಸಚಿವ ಪಿಯೂಷ್ ಗೋಯಲ್ ವಿಪಕ್ಷಗಳನ್ನ ಪ್ರಶ್ನಿಸಿ, ಖಾಸಗೀಕರಣವನ್ನ ಸಮರ್ಥಿಸಿಕೊಂಡಿದ್ದಾರೆ.

    ರೈಲ್ವೇ ಖಾಸಗೀಕರಣ ಸಂಬಂಧ ವಿಪಕ್ಷಗಳು ಕೇಂದ್ರ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡು ಕೆಲ ಆರೋಪಗಳನ್ನ ಮಾಡಿದ್ದವು. ಈ ಸಂಬಂಧ ಲೋಕಸಭೆಯಲ್ಲಿ ವಿಪಕ್ಷಗಳ ಆರೋಪಗಳಿಗೆ ಪ್ರತಿಕ್ರಿಯಿಸಿದ ಪಿಯೂಷ್ ಗೋಯಲ್, ದೇಶದ ಸಂಪನ್ಮೂಲವಾಗಿರುವ ರಸ್ತೆಗಳಲ್ಲಿ ಸರ್ಕಾರಿ ವಾಹನಗಳು ಮಾತ್ರ ಸಂಚರಿಸಬೇಕೆಂದು ಏಕೆ ಯಾರು ಹೇಳುತ್ತಿಲ್ಲ. ಖಾಸಗಿ ಮತ್ತು ಸರ್ಕಾರಿ ವಾಹನಗಳು ದೇಶದ ಆರ್ಥಿಕ ಬೆಳವಣಿಗೆಗೆ ಸಹಾಯಕವಾಗಲಿದೆ ಎಂದರು.

    ರೈಲ್ವೇ ಸಂಪನ್ಮೂಲ ಸರ್ಕಾರದಲ್ಲಿಯೇ ಇರಲಿದೆ. ಅದರ ಒಡೆತನವೂ ಸರ್ಕಾರ ಬಳಿಯಲ್ಲಿರಲಿದೆ. ಇದರಲ್ಲಿ ಖಾಸಗಿ ಬಂಡವಾಳ ಹೂಡಿಕೆಯಾದ್ರೆ ಏನು ಸಮಸ್ಯೆ ಎಂದು ವಿಪಕ್ಷಗಳನ್ನ ಪ್ರಶ್ನೆ ಮಾಡಿದರು. ಇಂದು ರೈಲ್ವೇ ನಿಲ್ದಾಣಗಳಲ್ಲಿ ವೇಟಿಂಗ್ ರೂಮ್, ಎಕ್ಸಲೇಟರ್ ಸೇರಿದಂತೆ ಹಲವು ಸೌಲಭ್ಯಗಳನ್ನ ಪ್ರಯಾಣಿಕರು ಬಯಸುತ್ತಾರೆ. ಹಾಗಾಗಿ ರೈಲ್ವೇಯಲ್ಲಿ ಖಾಸಗಿ ಬಂಡವಾಳ ಹೂಡಿಕೆ ಅನಿವಾರ್ಯ. ಅತ್ಯಾಧುನಿಕ, ಸುಧಾರಿತ ಸೌಲಭ್ಯಗಳನ್ನೊಳಗೊಂಡ ನಿಲ್ದಾಣಗಳ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇದಕ್ಕಾಗಿ 50 ರೈಲ್ವೇ ನಿಲ್ದಾಣಗಳನ್ನ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರತದ ಮೊದಲ ಎಸಿ ರೈಲ್ವೆ ನಿಲ್ದಾಣ

    ಸದ್ಯ 44 ವಂದೇ ಭಾರತ್ ರೈಲುಗಳು ಚಲಿಸುತ್ತಿದ್ದು, ಇವುಗಳ ಖಾಸಗೀಕರಣದ ಆದೇಶ ನೀಡಲಾಗಿದೆ. ಶೀಘ್ರದಲ್ಲಿಯೇ ಈ ರೈಲುಗಳು ಮಾರ್ಗ ನಿಗಧಿಪಡಿಸಲಾಗುತ್ತದೆ. ಕೆಲವೇ ದಿನಗಳಲ್ಲಿ ಸೇವೆ ಸಹ ನೀಡುವ ಮಾಹಿತಿಯನ್ನ ಗೋಯಲ್ ನೀಡಿದರು. ಇದನ್ನೂ ಓದಿ:  ಒಂದು ಹನಿ ನೀರು ಹೊರ ಬೀಳಲ್ಲ – ಮೈಸೂರು, ಬೆಂಗಳೂರು ಹಳಿ ನಿರ್ವಹಣೆಗೆ ಗೋಯಲ್‌ ಮೆಚ್ಚುಗೆ

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳು ಕೇಂದ್ರದ ಖಾಸಗೀಕರನ ನೀತಿಯನ್ನ ಖಂಡಿಸಿವೆ. ರೈಲ್ವೇ ಮಾತ್ರವಲ್ಲದೇ ಬ್ಯಾಂಕುಗಳನ್ನ ಸಹ ಖಾಸಗೀಕರಣ ಮಾಡಲಾಗುತ್ತಿದ ಎಂದು ಆರೋಪಿಸಿವೆ. ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

     

  • ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ರಾಜವಂಶಸ್ಥ ಯದುವೀರ್ ಬೆಂಬಲ

    ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ರಾಜವಂಶಸ್ಥ ಯದುವೀರ್ ಬೆಂಬಲ

    ಮಂಡ್ಯ: ರೈತರ ಪಾಲಿಗೆ ಜೀವ ನಾಡಿಯಾಗಿದ್ದ ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬೆಂಬಲ ವ್ಯಕ್ತಪಡಿಸಿದ್ದಾರೆ.

    ಯದುವೀರ್ ಫೇಸ್‍ಬುಕ್‍ನಲ್ಲಿ, ರೈತರು ಬೆಳೆದಿರುವ ಕಬ್ಬನ್ನು ಮಾರಾಟ ಮಾಡಲು ಕಾರ್ಖಾನೆಯ ಸಮಯೋಚಿತ ಆರಂಭದ ಅಗತ್ಯವಿದೆ ಎಂದು ಕಾರ್ಖಾನೆ ಖಾಸಗೀಕರಣಕ್ಕೆ ಬೆಂಬಲ ನೀಡಿ ಪೋಸ್ಟ್ ಮಾಡಿದ್ದಾರೆ.

    ಪೋಸ್ಟ್‌ನಲ್ಲಿ ಏನಿದೆ?
    ಮಂಡ್ಯ ಜಿಲ್ಲೆಯು ಕಬ್ಬುಬೆಳೆ ಮತ್ತು ಸಕ್ಕರೆ ಉತ್ಪಾದನೆಯಲ್ಲಿ ಸಮಾನವಾಗಿದೆ. ಮೈಶುಗರ್ ಕಾರ್ಖಾನೆಯ ಪರಂಪರೆಯ ದೃಷ್ಟಿಯಿಂದ ಖಾಸಗೀಕರಣಕ್ಕೆ ನಿರಂತರ ಪ್ರತಿರೋಧ ವ್ಯಕ್ತವಾಗುತ್ತಿರುವುದು ಅರ್ಥವಾಗುವಂತಹದ್ದಾಗಿದೆ. ಆದರೆ ಪ್ರತಿರೋಧವು ಕಳವಳಕ್ಕೆ ಕಾರಣವಾಗಿದೆ. ಏಕೆಂದರೆ ಮಂಡ್ಯ ಜಿಲ್ಲೆಯ ರೈತರು ಬೆಳೆದಿರುವ ಕಬ್ಬನ್ನು ಮಾರಾಟ ಮಾಡಲು ಕಾರ್ಖಾನೆಯ ಸಮಯೋಚಿತ ಆರಂಭದ ಅಗತ್ಯವಿದೆ ಎಂದಿದ್ದಾರೆ.

    “ಕಾರ್ಖಾನೆಯನ್ನು ನಡೆಸುವಲ್ಲಿ ಸರ್ಕಾರದ ವೈಫಲ್ಯ ಮತ್ತು ಸಂಪೂರ್ಣ ಖಾಸಗೀಕರಣದ ವಿರುದ್ಧ ಸಾರ್ವಜನಿಕರ ಭಾವನೆಯ ನಡುವೆ ನಮಗೆ ಇರುವ ಒಂದು ಆಯ್ಕೆಯೆಂದರೆ, ಕಾರ್ಯಾಚರಣೆ ಮತ್ತು ನಿರ್ವಹಣೆ (operations and maintenance) ವ್ಯವಸ್ಥೆಯಡಿಯಲ್ಲಿ ಸಕ್ಕರೆ ಕಾರ್ಖಾನೆಯನ್ನು ನಡೆಸುವುದು. ಈ ಮಧ್ಯಮ ವ್ಯವಸ್ಥೆಯು ಖಾಸಗೀಕರಣದ ವಿರುದ್ಧ ಸಾರ್ವಜನಿಕರಿಗಿರುವ ಭಾವನೆಯನ್ನು ತೃಪ್ತಿಪಡಿಸುವುದಲ್ಲದೆ ಕಾರ್ಖಾನೆಯು ಮತ್ತೊಮ್ಮೆ ಸಮೃದ್ಧಿಯಾಗಿ ಕಾರ್ಯನಿರ್ವಹಿಸಬಹುದಾಗಿದೆ. ಇದರಿಂದ ಮಂಡ್ಯ ಜಿಲ್ಲೆಯ ಕಬ್ಬು ಬೆಳೆಗಾರರು ಯಾವುದೇ ಸಂಕಷ್ಟಗಳನ್ನು ಎದುರಿಸಬೇಕಾಗಿರುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

    ಮೈಶುಗರ್ ಕಾರ್ಖಾನೆಯನ್ನು ಮೈಸೂರಿನ ಮಹಾರಾಜರು ಸ್ಥಾಪಿಸಿರುವ ಸಕ್ಕರೆ ಕಾರ್ಖಾನೆಯಾಗಿದೆ. ಹೀಗಾಗಿ ರೈತರ ಕಷ್ಟಕ್ಕೆ ಯದುವೀರ್ ಸ್ಪಂದಿಸಿದ್ದು, ಕಾರ್ಖಾನೆ ಖಾಸಗೀಕರಣಕ್ಕೆ ಬೆಂಬಲ ಸೂಚಿಸಿದ್ದಾರೆ.

  • ವೈಟಿಪಿಎಸ್ ಖಾಸಗೀಕರಣಕ್ಕೆ ವಿರೋಧ: ಭೂಸಂತ್ರಸ್ಥರಿಂದ ಉಗ್ರ ಹೋರಾಟದ ಎಚ್ಚರಿಕೆ

    ವೈಟಿಪಿಎಸ್ ಖಾಸಗೀಕರಣಕ್ಕೆ ವಿರೋಧ: ಭೂಸಂತ್ರಸ್ಥರಿಂದ ಉಗ್ರ ಹೋರಾಟದ ಎಚ್ಚರಿಕೆ

    ರಾಯಚೂರು: ಜಿಲ್ಲೆಯ ಯರಮರಸ್‍ನಲ್ಲಿರುವ ಸೂಪರ್ ಕ್ರಿಟಿಕಲ್ ಥರ್ಮಲ್ ವಿದ್ಯುತ್ ಕೇಂದ್ರ ವೈಟಿಪಿಎಸ್‍ನ್ನು ಸರ್ಕಾರ ಖಾಸಗೀಕರಣ ಮಾಡಲು ಹೊರಟಿರುವುದಕ್ಕೆ ಭೂಸಂತ್ರಸ್ತರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಹೋರಾಟಕ್ಕೆ ಮುಂದಾಗಿದ್ದಾರೆ.

    ಈ ಹಿಂದಿನ ಸರ್ಕಾರ ಪವರ್ ಮೇಕ್ ಕಂಪನಿಗೆ ಮೆಂಟೇನೆನ್ಸ್ ಮತ್ತು ಆಪರೇಷನ್ ಖಾಸಗೀಕರಣಕ್ಕೆ ಮುಂದಾಗಿತ್ತು. ಭೂಸಂತ್ರಸ್ಥರ ಹೋರಾಟ ಹಿನ್ನೆಲೆ ತಾತ್ಕಾಲಿಕವಾಗಿ ಒಪ್ಪಂದ ರದ್ದಾಗಿತ್ತು. ಈಗ ಪುನಃ ಸರ್ಕಾರ ವಿದ್ಯುತ್ ಕೇಂದ್ರವನ್ನು ಖಾಸಗಿಯವರಿಗೆ ನೀಡಲು ಮುಂದಾಗಿದೆ ಎಂದು ಹೋರಾಟಗಳು ಆರಂಭವಾಗಿದ್ದು, ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಭೂಸಂತ್ರಸ್ಥರು ಎಚ್ಚರಿಕೆ ನೀಡಿದ್ದಾರೆ.

    ಇದುವರೆಗೆ ವಿದ್ಯುತ್ ಕೇಂದ್ರಕ್ಕೆ 13 ಸಾವಿರದ 250 ಕೋಟಿ ಖರ್ಚು ಮಾಡಿದ್ದಾರೆ. 1600 ಮೆಗಾ ವ್ಯಾಟ್ ಸಾಮಥ್ರ್ಯದ ವಿದ್ಯುತ್ ಕೇಂದ್ರವನ್ನು 2018 ರಲ್ಲೇ ಆರಂಭಿಸಬೇಕಾಗಿತ್ತು ಆದರೆ ಇನ್ನೂ ಆರಂಭಿಸಿಲ್ಲ. ಸರ್ಕಾರ ಸ್ಥಳೀಯರಿಗೆ, ಭೂಸಂತ್ರಸ್ಥರಿಗೆ ಉದ್ಯೋಗ ಕೊಡುತ್ತೇವೆ ಎಂದು ಭರವಸೆ ನೀಡಿದ್ದಕ್ಕೆ ಕಾರ್ಯಾರಂಭಕ್ಕೆ ಎಲ್ಲರೂ ಒಪ್ಪಿಗೆ ಕೊಟ್ಟಿದ್ದರು. ಈಗ ಪವರ್ ಮೇಕ್ ಕಂಪನಿಗೆ ನೀಡಲು ಮುಂದಾಗಿರುವುದಕ್ಕೆ ಬಿಡುವುದಿಲ್ಲ ಎಂದು ಸ್ಥಳೀಯ ಕಾರ್ಮಿಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

  • ಎಲ್‍ಐಸಿ ಖಾಸಗೀಕರಣವಿಲ್ಲ – ಆಶೀಶ್‍ಕುಮಾರ್ ಸ್ಪಷ್ಟನೆ

    ಎಲ್‍ಐಸಿ ಖಾಸಗೀಕರಣವಿಲ್ಲ – ಆಶೀಶ್‍ಕುಮಾರ್ ಸ್ಪಷ್ಟನೆ

    ತುಮಕೂರು: ಎಲ್‍ಐಸಿ ಖಾಸಗೀಕರಣವಿಲ್ಲವೆಂದು ಬೆಂಗಳೂರು ಭಾರತೀಯ ಜೀವ ವಿಮಾ ನಿಗಮದ ಸೀನಿಯರ್ ಡಿವಿಜನಲ್ ಮ್ಯಾನೇಜರ್ ಆಶೀಶ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ.

    ಇತ್ತೀಚೆಗೆ ಕೇಂದ್ರ ಸರ್ಕಾರದ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಸರ್ಕಾರದ ಆಯವ್ಯಯ ಮುಂಗಡ ಪತ್ರದಲ್ಲಿ ಎಲ್‍ಐಸಿಯ ಸರ್ಕಾರಿ ಸ್ವಾಮ್ಯದ ಬಂಡವಾಳದಲ್ಲಿ ಆರಂಭಿಕ ಸಾರ್ವಜನಿಕ ಕೊಡುಗೆಯಲ್ಲಿ ಶೇ. 10ರಷ್ಟು ಷೇರುಗಳನ್ನು ತೊಡಗಿಸಲಿದೆ ಎಂದು ಘೋಷಿಸಿದ್ದಾರೆ. ಈ ಹಿನ್ನೆಲೆ ಭಾನುವಾರ ತುಮಕೂರಿನ ಬಿ.ಹೆಚ್.ರಸ್ತೆಯಲ್ಲಿರುವ ಭಾರತೀಯ ಜೀವ ವಿಮಾ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆಶೀಶ್‍ಕುಮಾರ್ ಅವರು, ಎಲ್‍ಐಸಿಯನ್ನು ಖಾಸಗೀಕರಣಗೊಳಿಸುತ್ತಾರೆ ಎಂಬ ಸುಳ್ಳು ವದಂತಿ ಸಾರ್ವಜನಿಕರಲ್ಲಿ ಹರಿದಾಡುತ್ತಿದ್ದು ಇದು ತಪ್ಪು ಮಾಹಿತಿಯಾಗಿದೆ, ಎಲ್‍ಐಸಿ ಖಾಸಗೀಕರಣವಿಲ್ಲವೆಂದು ತಿಳಿಸಿದರು.

    ವಿತ್ತ ಸಚಿವರು ಎಲ್‍ಐಸಿಯ 100ರಷ್ಟು ಷೇರುಗಳಲ್ಲಿ ಶೇ. 10ರಷ್ಟು ಷೇರುಗಳನ್ನು ಆಸಕ್ತರಿಗೆ ಮಾರಾಟ ಮಾಡುತ್ತದೆ ಎಂದು ಹೇಳಿದ್ದಾರಷ್ಟೆ. ಆದರೆ ಖಾಸಗೀಕರಣದ ಬಗ್ಗೆ ಸಚಿವರು ಮಾತನಾಡಿರುವುದಿಲ್ಲ. ಭಾರತೀಯ ಜೀವ ವಿಮಾ ನಿಗಮ ಬೆಂಗಳೂರು ವಿಭಾಗ 1ರ ವ್ಯಾಪ್ತಿಯಲ್ಲಿ 20 ಶಾಖೆಗಳು ಮತ್ತು 10 ಉಪಶಾಖೆಯನ್ನು ಹೊಂದಿದ್ದು, ಪ್ರಸಕ್ತ ವರ್ಷದ ಈವರೆಗೂ 1,48,703 ಪಾಲಿಸಿಗಳನ್ನು ಪೂರ್ಣಗೊಳಿಸಿ 518.10 ಕೋಟಿಯಷ್ಟು ಪ್ರಥಮ ಪ್ರೀಮಿಯಂ ಹಣವನ್ನು ಸಂಗ್ರಹಿಸಿರುತ್ತದೆ ಎಂದರು.

    ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಶಾಖೆಗಳಿಂದ 51,878 ಪಾಲಿಸಿಗಳನ್ನು ಪೂರ್ಣಗೊಳಿಸಿ 72.44 ಕೋಟಿಯಷ್ಟು ಪ್ರಥಮ ಪ್ರೀಮಿಯಂ ಹಣವನ್ನು ಸಂಗ್ರಹಿಸಿರುತ್ತದೆ. ಕಳೆದ ವರ್ಷ ಭಾರತೀಯ ಜೀವ ವಿಮಾ ನಿಗಮ 53 ಸಾವಿರ ಕೋಟಿ ಲಾಭ ಗಳಿಸಿದ್ದು, ಅದರಲ್ಲಿ ಶೇ. 95ರಷ್ಟು ಲಾಭವನ್ನು ನಿಗಮದ ಪಾಲಿಸಿದಾರರಿಗೆ ಬೋನಸ್ ರೂಪದಲ್ಲಿ ವಿತರಿಸಲಾಗಿದೆ. ನಿಗಮವು ಕೇಂದ್ರ ಸರ್ಕಾರದ ಸ್ವಾಮ್ಯದ ಸಂಸ್ಥೆಯಾಗಿರುವುದರಿಂದ ಶೇ. 5ರಷ್ಟು ಅಂದರೆ 2,600 ಕೋಟಿ ರೂ. ಲಾಭದ ಮೊತ್ತವನ್ನು ಕೇಂದ್ರ ಸರ್ಕಾರಕ್ಕೆ ಚೆಕ್ ಮೂಲಕ ನೀಡಲಾಗಿದೆ ಎಂದು ಅವರು ಹೇಳಿದರು.

    ನಿಗಮದಿಂದ ಸರ್ವೈವಲ್ ಬೆನಿಫಿಟ್ 79,649 ಪಾಲಿಸಿಗಳ 349.80ಕೋಟಿ ರೂ. ಪಾಲಿಸಿದಾರರಿಗೆ ಸಂದಾಯ ಮಾಡಲಾಗಿದೆ, 66,503 ಮೆಚ್ಯುರಿಟಿ ದಾವೆಯಲ್ಲಿ 718.30ಕೋಟಿ ಪಾಲಿಸಿದಾರರಿಗೆ ಸಂದಾಯ ಮಾಡಲಾಗಿದೆ. 5,850 ಮರಣ ದಾವೆಯಲ್ಲಿ 106.14 ಕೋಟಿ ಪಾಲಿಸಿಯ ನಾಮಿನಿಗೆ ಹಣ ಸಂದಾಯ ಮಾಡಲಾಗಿದೆ. ಭಾರತೀಯ ಜೀವ ವಿಮಾ ನಿಗಮವು 30 ಕೋಟಿಗೂ ಹೆಚ್ಚಿನ ಪಾಲಿಸಿದಾರರನ್ನು ಹೊಂದಿರುವ ಕೇಂದ್ರ ಸರ್ಕಾರ ಸ್ವಾಮ್ಯದ ಬಹುದೊಡ್ಡ ಸಂಸ್ಥೆಯಾಗಿದ್ದು, ಇದರಲ್ಲಿ 11,79,229 ಪ್ರತಿನಿಧಿಗಳು ಕಾರ್ಯನಿರ್ವಹಿಸುತ್ತಿದ್ದು, 1,08,684 ಉದ್ಯೋಗಿಗಳು ಕ್ಷಮತೆ ಹಾಗೂ ದಕ್ಷತೆಯಿಂದ ಪಾಲಿಸಿದಾರರ ಹಿತಾಸಕ್ತಿ ಹಾಗೂ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

    ನಿಗಮವು 31,11,84,728 ಕೋಟಿಯಷ್ಟು ಮೌಲ್ಯದ ಸ್ವತ್ತನ್ನು ಹೊಂದಿದ್ದು, 28,28,32,012 ಕೋಟಿ ಮೊತ್ತದ ಲೈಫ್ ಫಂಡ್ ಹೊಂದಿರುವ ಸದೃಢ ಸಂಸ್ಥೆಯಾಗಿದೆ. ಕೇಂದ್ರ ಸರ್ಕಾರವು ಭಾರತೀಯ ಜೀವ ವಿಮಾ ನಿಗಮದಿಂದ ನೀಡುವ ಹಣದಲ್ಲಿ ಸಾಮಾಜಿಕ ಕಳಕಳಿ ದೃಷ್ಟಿಯಿಂದ ಕುಡಿಯುವ ನೀರು, ವಿದ್ಯುತ್, ರಸ್ತೆ, ರೈಲ್ವೆ ಹಾಗೂ ಗೃಹ ನಿರ್ಮಾಣದಂತಹ ಸಾರ್ವಜನಿಕ ಯೋಜನೆಗಳಲ್ಲಿ ಗರಿಷ್ಠ ಪ್ರಮಾಣದ ಹೂಡಿಕೆ ಮಾಡುತ್ತಿದೆ. ಇದರಿಂದ ಸಾರ್ವಜನಿಕ ಹಣಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ರುಜುವಾತು ಮಾಡಿದೆ ಎಂದರು.

    ಕಳೆದ 63 ವರ್ಷಗಳಿಂದ ಜನರ ವಿಶ್ವಾಸ ಗಳಿಸಿರುವ ಭಾರತೀಯ ಜೀವ ವಿಮಾ ನಿಗಮವು ಭೂಮಿಯ ಮೇಲೆ ಜನರಿರುವವರೆಗೂ ಶಾಶ್ವತವಾಗಿ ಕಾರ್ಯನಿರ್ವಹಿಸಲಿದೆ ಎಂದು ಅವರು ತಿಳಿಸಿದರು. ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ವಿಭಾಗದ ಮಾರ್ಕೆಟಿಂಗ್ ಮ್ಯಾನೇಜರ್ ಮುರಳಿ ಮನೋಹರ್, ಸೇಲ್ಸ್ ಮ್ಯಾನೇಜರ್ ಮುರಳೀಧರ್ ಉಪಸ್ಥಿತರಿದ್ದರು.

  • ಕೇಂದ್ರ ಸರ್ಕಾರದ ಖಾಸಗೀಕರಣ ನೀತಿಯ ವಿರುದ್ಧ ಬೃಹತ್ ಪ್ರತಿಭಟನೆ

    ಕೇಂದ್ರ ಸರ್ಕಾರದ ಖಾಸಗೀಕರಣ ನೀತಿಯ ವಿರುದ್ಧ ಬೃಹತ್ ಪ್ರತಿಭಟನೆ

    ಬೆಂಗಳೂರು: ಸಾರ್ವಜನಿಕ ವಲಯಗಳನ್ನು ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. 2016ರಲ್ಲೇ ಈ ಬಗ್ಗೆ ಚಿಂತನೆ ನಡೆಸಿದ್ದ ಮೋದಿ ಸರ್ಕಾರ ಈಗ ಮತ್ತೆ ಅದನ್ನು ಅನುಷ್ಠಾನಕ್ಕೆ ತರಲು ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಿ ಇಂದು ನಗರದಲ್ಲಿ ಸರ್ಕಾರಿ ನೌಕರರು ಪ್ರತಿಭಟನೆ ನಡೆಸಿದರು.

    ಸಾರ್ವಜನಿಕ ವಲಯದಲ್ಲಿ ಖಾಸಗೀಕರಣ ತರುವುದು ಬೇಡ ಎಂದು ಆಗ್ರಹಿಸಿ ಇಂದು ಬೆಂಗಳೂರಿನ ಟೌನ್ ಹಾಲ್ ಮುಂಭಾಗದಲ್ಲಿ ನಾನಾ ಸಂಸ್ಥೆಯ ನೌಕರರು ಬೃಹತ್ ಪ್ರತಿಭಟನೆ ಮಾಡಿದರು. ಬಿಇಎಂಎಲ್, ಬಿಎಚ್‍ಇಎಲ್, ಬಿಇಎಲ್, ಹೆಚ್‍ಎಎಲ್, ಐಟಿಐ, ಬಿಎಸ್‍ಎನ್‍ಎಲ್, ವಿಐಎಸ್‍ಎಲ್ ಹಾಗೂ ವಿಐಎಲ್ ಕಂಪನಿಗಳ ಸುಮಾರು 2 ಸಾವಿರಕ್ಕೂ ಅಧಿಕ ನೌಕರರು ಬೆಂಗಳೂರು ಸೇರಿದಂತೆ ಮೈಸೂರು, ತರೀಕೆರೆ, ಕೋಲಾರ ಭಾಗಗಳಿಂದ ಬೆಂಗಳೂರಿಗೆ ಆಗಮಿಸಿ ಪ್ರತಿಭಟನೆ ಮಾಡಿದರು.

    ಕೇಂದ್ರ ಸರ್ಕಾರದ ಖಾಸಗೀಕರಣದ ನೀತಿಯಿಂದ ಸಾರ್ವಜನಿಕ ವಲಯದ ಮೇಲೆ ನಾನಾ ರೀತಿಯ ಕೆಟ್ಟ ಪರಿಣಾಮ ಬಿರುತ್ತದೆ. ದೇಶದ ಅತ್ಯುನ್ನತ ಸಂಸ್ಥೆಗಳು ಖಾಸಗೀಕರಣವಾದರೆ ಹೇಗೆ? ನಮಗೆ ಖಾಸಗೀಕರಣ ಬೇಡವೇ ಬೇಡ ಎಂದು ಕೇಂದ್ರ ಹಾಗೂ ಮೋದಿ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಅಕ್ರೋಶ ವ್ಯಕ್ತಪಡಿಸಿದರು.

  • ವಿಜಯಪುರದ ನಾಲ್ಕು ಸರ್ಕಾರಿ ಆಸ್ಪತ್ರೆಗಳು ಖಾಸಗೀಕರಣ

    ವಿಜಯಪುರದ ನಾಲ್ಕು ಸರ್ಕಾರಿ ಆಸ್ಪತ್ರೆಗಳು ಖಾಸಗೀಕರಣ

    ವಿಜಯಪುರ: ಸರ್ಕಾರಿ ಆಸ್ಪತ್ರೆಗಳು ಅತ್ಯಾಧುನಿಕ ಸಾಮಗ್ರಿಗಳನ್ನು ಹೊಂದಿದ್ದು, ಸುಸಜ್ಜಿತವಾಗಿವೆ. ಇಷ್ಟೆಲ್ಲ ಇದ್ದರೂ ವೈದ್ಯರ ಕೊರತೆ ನೆಪವೊಡ್ಡಿ ಸರ್ಕಾರಿ ಆಸತ್ಪತ್ರೆಗಳನ್ನು ಖಾಸಗಿಯವರಿಗೆ ವಹಿಸಲಾಗುತ್ತಿದೆ.

    ಅತ್ಯಾಧುನಿಕ ಉಪರಣಗಳನ್ನು ಹೊಂದುವ ಮೂಲಕ ಜಿಲ್ಲಾ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳು ಸುಸಜ್ಜಿತವಾಗಿವೆ. ಆದರೆ ವೈದ್ಯರು ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಯ ಕೊರತೆ ಸರ್ಕಾರಕ್ಕೆ ತಲೆ ನೊವಾಗಿದೆ. ಇದಕ್ಕಾಗಿ ಜಿಲ್ಲೆಯ 4 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಎನ್‍ಜಿಓಗಳಿಗೆ ನೀಡಲಾಗಿದೆ.

    ಜಿಲ್ಲೆಯ ಅಸ್ಕಿ, ಬಂಟನೂರ, ಜಿಗಜೀವಣಗಿ ಹಾಗೂ ಕನ್ನೂರು ಆಸ್ಪತ್ರೆಗಳನ್ನು ಎನ್‍ಜಿಓಗಳಿಗೆ ನೀಡಲಾಗಿದೆ. ಈ ಆಸ್ಪತ್ರೆಯ ಸಂಪೂರ್ಣ ಸಿಬ್ಬಂದಿಯನ್ನು ಈ ಎನ್‍ಜಿಓಗಳು ನಿಭಾಯಿಸಲಿವೆ. ಮೂರು ವರ್ಷಗಳ ಒಪ್ಪಂದ ಇದಾಗಿದ್ದು, ಸಾರ್ವಜನಿಕರಲ್ಲಿ ಸರ್ಕಾರಿ ಆಸ್ಪತ್ರೆಗಳ ಖಾಸಗಿಕರಣದ ಆತಂಕ ಶುರುವಾಗಿದೆ.

    ಬಡವರ ಬಂಧು ಯೋಜನೆ ಹೆಸರಲ್ಲಿ ಸರ್ಕಾರಿ ಆಸ್ಪತ್ರೆಗಳ ನಿರ್ವಹಣೆಯನ್ನು ಖಾಸಗಿ ಸಹಭಾಗಿತ್ವಕ್ಕೆ ನೀಡಬಹುದು. ಅಲ್ಲದೆ ಇದು ಬುಹು ಹಿಂದಿನ ಯೋಜನೆ ಆಗಿದೆ. ಈ ಯೋಜನೆ ಅಡಿ ಇದೀಗ ಖಾಸಗಿ ನಿರ್ವಹಣೆಗೆ ನೀಡಲಾಗಿದೆ. ಆದರೆ ಎನ್‍ಜಿಓಗಳು ಕೇವಲ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯನ್ನು ಮಾತ್ರ ನೇಮಕ ಮಾಡಿಕೊಳ್ಳತ್ತದೆ. ಉಳಿದಂತೆ ಔಷಧಿ ವಿತರಣೆ, ಸಿಬ್ಬಂದಿ ವೇತನ, ಚಿಕಿತ್ಸಾ ಸಾಮಗ್ರಿಗಳ ಖರೀದಿ, ತಂತ್ರಜ್ಞಾನ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಆರೋಗ್ಯ ಇಲಾಖೆಯೇ ನೋಡಿಕೊಳ್ಳಲಿದೆ. ಎನ್‍ಜಿಓಗಳ ಕಾರ್ಯವೈಖರಿಯನ್ನು ಇಲಾಖೆ ಹತೋಟೆಯಲ್ಲಿಡಲಿದೆ. ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಹೇಳಿದ್ದಾರೆ.