Tag: priyanka

  • Met Gala 2025 | ಬಾಲಿವುಡ್ ತಾರೆಯರು ಕಾಣಿಸಿಕೊಂಡಿದ್ದು ಹೇಗೆ ಗೊತ್ತಾ?

    Met Gala 2025 | ಬಾಲಿವುಡ್ ತಾರೆಯರು ಕಾಣಿಸಿಕೊಂಡಿದ್ದು ಹೇಗೆ ಗೊತ್ತಾ?

    ತ್ತೀಚೆಗಷ್ಟೆ ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್‌ನಲ್ಲಿ ನಡೆದ ಅತಿ ದೊಡ್ಡ ಫ್ಯಾಷನ್ ನೈಟ್ ಮೆಟ್ ಗಾಲಾ 2025ರ(Met Gala 2025) `ಸೂಪರ್‌ಫೈನ್: ಟೈಲರಿಂಗ್ ಬ್ಲ್ಯಾಕ್ ಸ್ಟೈಲ್’ ಥೀಮ್‌ನಲ್ಲಿ ಹಾಲಿವುಡ್ ಹಾಗೂ ಬಾಲಿವುಡ್‌ನ ಸ್ಟಾರ್ಸ್ ಬ್ಲೂ ಕಾರ್ಪೆಟ್‌ನಲ್ಲಿ ಮಿಂಚಿದ್ದರು. ಇದೊಂದು ಕಾಸ್ಟ್ಯೂಮ್‌ ಇನ್‌ಸ್ಟಿಟ್ಯೂಟ್‌ಗಾಗಿ ನಿಧಿ ಸಂಗ್ರಹಿಸಲು ಆಯೋಜಿಸಲಾಗುವ ಫ್ಯಾಷನ್ ಕಾರ್ಯಕ್ರಮ.

    ಈ ಮೆಟ್ ಗಾಲಾ ಫ್ಯಾಷನ್ ನೈಟ್ ಮಾಡೆಲ್ಸ್, ಆಕ್ಟರ್ಸ್‌ಗಳು ತಮ್ಮ ಫ್ಯಾಷನ್ ಬಗೆಗಿನ ಆಸಕ್ತಿಯನ್ನು ತೋರಿಸುವ ಅತಿ ದೊಡ್ಡ ಕಾರ್ಯಕ್ರಮವಾಗಿದೆ. ಇದರಲ್ಲಿ ಖ್ಯಾತ ನಟ ನಟಿಯರು, ಸೆಲೆಬ್ರಿಟಿಗಳು ವಿಭಿನ್ನವಾದ ಉಡುಗೆ ತೊಟ್ಟು ಫ್ಯಾಷನ್ ನೈಟ್‌ನ ಮೆರುಗು ಹೆಚ್ಚಿಸುತ್ತಾರೆ.

    ಭಾರತದಲ್ಲಿ ತಯಾರಾದ ಬ್ಲೂ ಕಾರ್ಪೆಟ್
    ಈ ಬಾರಿಯ ಮೆಟ್ ಗಾಲಾದ ಇನ್ನೊಂದು ವಿಶೇಷವೇನೆಂದರೆ, ಸೆಲೆಬ್ರಿಟಿಗಳು ರೆಡ್ ಕಾರ್ಪೆಟ್ ಬದಲಾಗಿದೆ. ಬಿಳಿ ಹಾಗೂ ನೀಲಿ ಬಣ್ಣದ ಡ್ಯಾಫೋಡಿಲ್‌ಗಳಿಂದ ಅಲಂಕರಿಸಲ್ಲಟ್ಟ ಬ್ಲೂ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದರು. ಇನ್ನೊಂದು ವಿಷಯವೇನೆಂದರೆ ಈ ಬ್ಲೂ ಕಾರ್ಪೆಟ್ ತಯಾರಾಗಿದ್ದು ಭಾರತದಲ್ಲೇ. ಹೌದು, ಈ ಕಾರ್ಪೆಟ್‌ನ ಬೇಸ್ ಅನ್ನು ನೆಯ್ಟ್ ಹೋಮ್ಸ್ ಸಂಸ್ಥಾಪಕರಾದ ಶಿವನ್ ಸಂತೋಷ್ ಮತ್ತು ನಿಮಿಷಾ ಆರೀನಿವಾಸ್ ಅವರು ಕೇರಳದ(Kerala) ಅಲಪ್ಪುಳದಲ್ಲಿ ತಯಾರಿಸಿದ್ದಾರೆ.

    ಬೇಬಿ ಬಂಪ್‌ನೊಂದಿಗೆ ಬ್ಲ್ಯಾಕ್ ಗೌನ್‌ನಲ್ಲಿ ಮಿಂಚಿದ ಕಿಯಾರಾ
    ಬಾಲಿವುಡ್ ಬೆಡಗಿ ಕಿಯಾರಾ ಅಡ್ವಾಣಿ(Kiara Advani) ಬೇಬಿ ಬಂಪ್‌ನೊಂದಿಗೆ ಗೋಲ್ಡ್ ವಿಥ್ ಬ್ಲ್ಯಾಕ್ ಕಲರ್‌ನ ಆಫ್-ಶೋಲ್ಡರ್ ಗೌನ್‌ನಲ್ಲಿ ಮೆಟ್ ಗಾಲಾದಲ್ಲಿ ಕಾಣಿಸಿಕೊಂಡರು. ಫ್ಯಾಷನ್ ಜಗತ್ತಿನ ಅತಿ ದೊಡ್ಡ ಕಾರ್ಯಕ್ರಮದಲ್ಲಿ ಕಿಯಾರಾ ಭಾರತೀಯ ವಸ್ತ್ರ ವಿನ್ಯಾಸಕ ಗೌರವ್ ಗುಪ್ತಾ ವಿನ್ಯಾಸಗೊಳಿಸಿದ್ದ ಗೌನ್ ಧರಿಸಿದ್ದರು. ಈ ಫ್ಯಾಷನ್ ನೈಟ್‌ನಲ್ಲಿ ಕಿಯಾರ ಪ್ರೆಗ್ನೆನ್ಸಿ ಗ್ಲೋನಲ್ಲಿ ಕಂಗೊಳಿಸಿದ್ದು ವಿಶೇಷವಾಗಿತ್ತು.

    ಬಾಲಿವುಡ್ `ಕಿಂಗ್ ಖಾನ್’ ಐಕಾನಿಕ್ ಲುಕ್
    ಮೆಟ್ ಗಾಲಾದ ಬ್ಲೂ ಕಾರ್ಪೆಟ್‌ನಲ್ಲಿ ಭಾಗವಹಿಸಿದ ಮೊದಲ ಭಾರತೀಯ ನಟ ಎಂಬ ಹೆಗ್ಗಳಿಕೆಗೆ ಬಾಲಿವುಡ್‌ನ ಕಿಂಗ್ ಖಾನ್ ಎಂದೇ ಖ್ಯಾತಿ ಪಡೆದಿರುವ ನಟ ಶಾರುಖ್ ಖಾನ್(Shah Rukh Khan) ಪಾತ್ರರಾಗಿದ್ದಾರೆ. ಶಾರುಖ್ ಖಾನ್ ವಸ್ತ್ರ ವಿನ್ಯಾಸಕ ಸಬ್ಯಸಾಚಿ ಮುಖರ್ಜ ವಿನ್ಯಾಸಗೊಳಿಸಿದ ಬ್ಲಾಕ್ ಸ್ಟೈಲೀಶ್ ಸೂಟ್‌ನಲ್ಲಿ ಮಿಂಚಿದ್ದರು. ಇನ್ನು ಡ್ರೆಸ್‌ಗೆ `K’ ಎಂಬ ಲಾಕೆಟ್ ಇರುವ ಚೈನ್ ಮ್ಯಾಚ್ ಮಾಡಿದ್ದರು.

    ಕ್ಲಾಸಿಕ್ ಹಾಲಿವುಡ್ ಸ್ಟೈಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ
    ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ(Priyanka Chopra) ಅವರು ಪತಿ ನಿಕ್ ಜೋನಸ್‌ರೊಂದಿಗೆ(Nik Jonas) ಕ್ಲಾಸಿಕ್ ಹಾಲಿವುಡ್ ಸ್ಟೈಲ್‌ನ ಬಿಳಿ ಹಾಗೂ ಕಪ್ಪು ಚುಕ್ಕೆಯ ಡ್ರೆಸ್‌ನಲ್ಲಿ ಕಾಣಿಸಿಕೊಂಡಿದ್ದರು. 2017ರಲ್ಲಿ ಮೊದಲ ಬಾರಿಗೆ ಮೆಟ್ ಗಾಲಾದಲ್ಲಿ ಭಾಗವಹಿಸಿದ್ದರು. ಈ ಬಾರಿಯ ಮೆಟ್ ಗಾಲಾ ಅವರಿಗೆ 5ನೇ ಶೋ ಆಗಿದೆ. ಇನ್ನು ಪ್ರಿಯಾಂಕಾ ಅವರ ಪತಿ ನಿಕ್ ಜೋನಸ್ ಟೈಲರ್ಡ್ ಸೂಟ್‌ನಲ್ಲಿ ಪತ್ನಿಗೆ ಮ್ಯಾಚ್ ಮಾಡಿದ್ದರು.

    ಮೆಟ್ ಗಾಲಾದಲ್ಲಿ ಕಾಣಿಸಿಕೊಂಡ ಅಂಬಾನಿ ಪುತ್ರಿ
    ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿಯ ಏಕೈಕ ಪುತ್ರಿ ಇಶಾ ಅಂಬಾನಿ(Isha Ambani) ಸಹ ಮೆಟ್ ಗಾಲಾದಲ್ಲಿ ವಿಶಿಷ್ಟ ಉಡುಪು ಹಾಗೂ ಆಭರಣದಲ್ಲಿ ಎಲ್ಲರ ಗಮನ ಸೆಳೆದರು. ಇಶಾ ಅಂಬಾನಿ ಧರಿಸಿದ್ದ ಉಡುಪನ್ನು ಖ್ಯಾತ ಭಾರತೀಯ ವಸ್ತ್ರ ವಿನ್ಯಾಸಕಿ ಅನಾಮಿಕಾ ಖನ್ನಾ ವಿನ್ಯಾಸಗೊಳಿಸಿದ್ದರು. ಇಶಾ ಧರಿಸಿದ್ದ ಬಿಳಿ ಬಣ್ಣದ ಕಾರ್ಸೆಟ್, ಕಪ್ಪು ಬಣ್ಣದ ಟೇಲರ್ಡ್ ಪ್ಯಾಂಟ್ ಹಾಗೂ ಉದ್ದದ ಅಲಂಕೃತ ಕೇಪ್ ಉಡುಪಿನ ಪ್ರಮುಖ ಆಕರ್ಷಣೆಯಾಯಿತು. ಈ ಡ್ರೆಸ್‌ಗೆ ದುಬಾರಿ ಬೆಲೆಯ ಆಭರಣಗಳನ್ನು ಧರಿಸಿ ಕ್ಲಾಸಿಕ್ ಲುಕ್ ನೀಡಿದ್ದರು.

    ಪಂಜಾಬಿ ಸ್ಟೈಲ್‌ ಡ್ರೆಸ್‌ನಲ್ಲಿ ದಿಲ್ಜಿತ್ ದೋಸಾಂಜ್
    ಪಂಜಾಬ್‌ನ ಖ್ಯಾತ ಗಾಯಕ ದಿಲ್ಜಿತ್ ದೋಸಾಂಜ್(Diljit Dosanjh) ಪೇಟ ಧರಿಸಿ ಥೇಟ್ ಪಂಜಾಬಿ ಲುಕ್‌ನಲ್ಲಿ ಕಾಣಿಸಿಕೊಂಡಿದ್ದರು. ಇವರು ತಮ್ಮ ಸಂಸ್ಕೃತಿ ಹಾಗೂ ಪರಂಪರೆಯನ್ನು ಮೆಟ್ ಗಾಲಾ ಫ್ಯಾಷನ್ ನೈಟ್‌ನಲ್ಲಿ ಪ್ರತಿನಿಧಿಸಿದ್ದರು. ಇವರ ಈ ವಸ್ತ್ರ ವಿನ್ಯಾಸವನ್ನು ಪ್ರಬಲ್ ಗುರುಂಗ್ ಅವರು ಮಾಡಿದ್ದಾರೆ. ಬಿಳಿ ಹಾಗೂ ಗೋಲ್ಡ್ ಬಣ್ಣದ ಶೆರ್ವಾಣಿ ವಿನ್ಯಾಸದ ಉಡುಪು ಧರಿಸಿದ್ದ ದಿಲ್ಜಿತ್, ಹಸಿರು ಬಣ್ಣದ ಹರಳುಗಳಿರುವ ಜ್ಯುವೆಲರಿಯನ್ನು ಮ್ಯಾಚ್ ಮಾಡಿದ್ದರು.

    ಗಾರಾ ಉಡುಪಿನಲ್ಲಿ ನತಾಶಾ ಪೂನಾವಾಲ್ಲಾ
    ನತಾಶಾ ಪೂನಾವಾಲ್ಲಾ(Natasha Poonawalla) ಅವರು ಮೆಟ್ ಗಾಲಾದಲ್ಲಿ ಪಾರ್ಸಿಯ ಗಾರಾ ಉಡುಪಿನಲ್ಲಿ ಮಿಂಚಿದರು. ಈ ಉಡುಪಿನ ಕೇಂದ್ರಬಿಂದುವೇನೆಂದರೆ ಫಿಶ್‌ಟೇಲ್ ಸ್ಕರ್ಟ್ ಹಾಗೂ 2 ವಿಂಟೇಜ್ ಗಾರಾ ಸೀರೆಯಲ್ಲಿ ಈ ವಸ್ತ್ರ ವಿನ್ಯಾಸವನ್ನು ಮಾಡಲಾಗಿತ್ತು. ಇದರ ಸ್ಕರ್ಟ್‌ನ ಸಂಪೂರ್ಣ ವಿನ್ಯಾಸವನ್ನು ಕೈ ಕಸೂತಿಯಿಂದಲೇ ಮಾಡಲಾಗಿದೆ. ಇದರಲ್ಲಿ ಇನ್ನೊಂದು ವಿಶೇಷವೆಂದರೆ ಕತ್ತಿನ ಭಾಗಕ್ಕೆ ಕಮಲದ ಆಕಾರವನ್ನು ಹೋಲುವ ಮಳೆಹನಿಯಂತೆ ನೇತಾಡುವ ಮುತ್ತುಗಳನ್ನು ಜೋಡಿಸಲಾಗಿತ್ತು. ನತಾಶಾ ಪೂನಾವಾಲ್ಲಾ ಅವರ ಮೆಟ್ ಗಾಲಾದ ವಸ್ತ್ರ ವಿನ್ಯಾಸವನ್ನು ಮನೀಶ್ ಮಲ್ಹೋತ್ರಾ ಮಾಡಿದ್ದಾರೆ.

    ಈ ಬಾರಿ ನ್ಯೂಯಾರ್ಕ್‌ನಲ್ಲಿ ನಡೆದ ಮೆಟ್ ಗಾಲಾ ಫ್ಯಾಷನ್ ನೈಟ್‌ನಲ್ಲಿ ಬಾಲಿವುಡ್ ತಾರೆಯರು ವಿಭಿನ್ನ ಹಾಗೂ ವಿಶಿಷ್ಟ ವಸ್ತ್ರ ವಿನ್ಯಾಸದಲ್ಲಿ ಕಂಗೊಳಿಸಿದರು. ಈ ಮೆಟ್ ಗಾಲಾದಲ್ಲಿ ದೇಶ-ವಿದೇಶದ ಫ್ಯಾಷನ್ ಮಾಡೆಲ್ಸ್, ಸೆಲೆಬ್ರಿಟಿಸ್ ಭಾಗಿಯಾಗಿದ್ದರು.

  • ‘ದೂರ ತೀರ ಯಾನ’ ಚಿತ್ರದ ಮೊದಲ ಪ್ರೇಮಗೀತೆಗೆ ಅಭಿಮಾನಿಗಳ ಮೆಚ್ಚುಗೆಯ ಸುರಿಮಳೆ

    ‘ದೂರ ತೀರ ಯಾನ’ ಚಿತ್ರದ ಮೊದಲ ಪ್ರೇಮಗೀತೆಗೆ ಅಭಿಮಾನಿಗಳ ಮೆಚ್ಚುಗೆಯ ಸುರಿಮಳೆ

    ಟ ವಿಜಯ್ ಕೃಷ್ಣ (Vijay Krishna) ಹಾಗೂ ಪ್ರಿಯಾಂಕ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ದೂರ ತೀರ ಯಾನ’ (Doora Theera Yaana) ಸಿನಿಮಾದ ‘ಇದೇನಿದು ಸೂಚನೆ’ ಮೊದಲ ಪ್ರೇಮಗೀತೆಗೆ ಉತ್ತಮ ರೆಸ್ಪಾನ್ಸ್‌ ಸಿಕ್ಕಿದೆ. ಕವಿರಾಜ್ ಅವರು ಬರೆದಿರುವ ಸಾಹಿತ್ಯಕ್ಕೆ, ಬಕ್ಕೇಶ್ ಹಾಗೂ ಕಾರ್ತಿಕ್ ಸಂಗೀತ ಸಂಯೋಜನೆ ಮಾಡಿದ್ದು, ಖ್ಯಾತ ಗಾಯಕರಾದ ಅರ್ಮಾನ್ ಮಲಿಕ್ ಹಾಡಿದ್ದಾರೆ. ಇದನ್ನೂ ಓದಿ:ಗಾಯಕಿ ಪೃಥ್ವಿ ಭಟ್ ಪ್ರೇಮವಿವಾಹ: ‘ಸರಿಗಮಪ’ ಜ್ಯೂರಿ ಮೇಲೆ ಆರೋಪ

    ಮಂಸೋರೆ ಬರೆದಿರುವ ಕಥೆಗೆ ಚೇತನಾ ತೀರ್ಥಹಳ್ಳಿ ಸಂಭಾಷಣೆ ಬರೆದಿದ್ದಾರೆ. ಈ ಸಿನಿಮಾದಲ್ಲಿ ಒಟ್ಟು ಆರು ಹಾಡುಗಳಿದ್ದು, ಬಕ್ಕೇಶ್ ಹಾಗೂ ಕಾರ್ತೀಕ್ ಹಾಡುಗಳನ್ನು ಸಂಯೋಜಿಸಿದ್ದಾರೆ. ಜಯಂತ್ ಕಾಯ್ಕಿಣಿ, ಕವಿರಾಜ್, ಪ್ರಮೋದ್ ಮರವಂತೆ ಹಾಗೂ ಕಿರಣ್ ಕಾವೇರಪ್ಪ ಹಾಡುಗಳನ್ನು ಬರೆದಿದ್ದಾರೆ. ಸಿನಿಮಾದ ಶೀರ್ಷಿಕೆ ಗೀತೆಯನ್ನು ಮುಂದಿನ ತಿಂಗಳು ಬಿಡುಗಡೆ ಮಾಡುವುದಾಗಿ ನಿರ್ದೇಶಕ ಮಂಸೋರೆ ತಿಳಿಸಿದ್ದಾರೆ. ಆ ಹಾಡನ್ನು ವಿಶೇಷವಾಗಿ ಪ್ರೇಕ್ಷಕರಿಂದಲೇ ಬಿಡುಗಡೆ ಮಾಡಿಸುವ ಆಲೋಚನೆ ಇದ್ದು, ರಾಜ್ಯದ ಪ್ರಮುಖ ನಗರವೊಂದರಲ್ಲಿ ಬಿಡುಗಡೆ ಮಾಡಲು ಯೋಜನೆ ರೂಪಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ:ನಗದಿನ ಮೂಲಕ ಸಂಭಾವನೆ – ಮಹೇಶ್‌ ಬಾಬುಗೆ ಇಡಿ ನೋಟಿಸ್‌

     

    View this post on Instagram

     

    A post shared by MRT Music (@mrtmusicofficial)

    ಮಂಸೋರೆ ನಿರ್ದೇಶನ ಮಾಡಿರುವ ಈ ಸಿನಿಮಾ ಬೆಂಗಳೂರು, ಉಡುಪಿ, ಕುಂದಾಪುರ, ಗೋಕರ್ಣ, ಮುರುಡೇಶ್ವರ, ಕಾರವಾರ, ಯಲ್ಲಾಪುರ, ದಾಂಡೇಲಿ, ಗೋವಾದಲ್ಲಿ 40 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದ್ದು, ಸಿನಿಮಾ ಡಬ್ಬಿಂಗ್ ಕೆಲಸಗಳು ಭರದಿಂದ ಸಾಗಿದೆ. ಸದ್ಯದಲ್ಲೇ ರಿಲೀಸ್‌ ಕುರಿತು ಅಪ್‌ಡೇಟ್‌ ಹೇಳೋದಾಗಿ ನಿರ್ಮಾಪಕರಾದ ದೇವರಾಜ್ ಆರ್. ಅವರು ತಿಳಿಸಿದ್ದಾರೆ.

    ಇದೊಂದು ಪ್ರೇಮಕಥೆ ಆಧರಿಸಿದ ಸಿನಿಮಾ ಆಗಿದೆ. ಹರೆಯದ ಇಬ್ಬರು ಪ್ರೇಮಿಗಳು ಬೆಂಗಳೂರಿನಿಂದ ಗೋವಾಗೆ ಪಯಣ ಆರಂಭಿಸುತ್ತಾರೆ. ಆ ಪ್ರಯಾಣದಲ್ಲಿ ತಮ್ಮ ಪ್ರೀತಿಯ ಅರ್ಥ ಹುಡುಕಿಕೊಳ್ಳುವುದು ಮೂಲಕಥೆಯಾಗಿದೆ. ಈ ಸಿನಿಮಾಗೆ ಸರವಣ ಕುಮಾರ್ ಅವರ ಕಲಾನಿರ್ದೇಶನವಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತರಾದ ನಾಗೇಂದ್ರ ಕೆ ಉಜ್ಜನಿ ಅವರು ಸಂಕಲನ ಮಾಡಿದ್ದಾರೆ.

  • ಐಷಾರಾಮಿ ಮನೆಯಲ್ಲಿ ಸಮಸ್ಯೆ, ಕೋರ್ಟ್ ಮೆಟ್ಟಿಲು ಏರಿದ ಪ್ರಿಯಾಂಕಾ

    ಐಷಾರಾಮಿ ಮನೆಯಲ್ಲಿ ಸಮಸ್ಯೆ, ಕೋರ್ಟ್ ಮೆಟ್ಟಿಲು ಏರಿದ ಪ್ರಿಯಾಂಕಾ

    ಬಾಲಿವುಡ್ ಖ್ಯಾತನಟಿ ಪ್ರಿಯಾಂಕಾ ಚೋಪ್ರಾ (Priyanka) ಲಾಸ್ ಏಂಜಲೀಸ್ (Los Angeles) ನಲ್ಲಿ ದುಬಾರಿ ಮೊತ್ತದ ಬಂಗಲೆ ಖರೀದಿಸಿದ್ದರು. ಅದೊಂದು ಐಷಾರಾಮಿ ಮನೆಯಾಗಿತ್ತು. ಈ ಮನೆ ಖರೀದಿಗಾಗಿಯೇ ಅವರು ಬರೋಬ್ಬರಿ 20 ಕೋಟಿ ರೂಪಾಯಿ ಖರ್ಚು ಮಾಡಿದ್ದರು. ಇದೀಗ ಆ ಮನೆಯ ಮಾಲೀಕರ ವಿರುದ್ಧ ಕೋರ್ಟ್ (Court) ಮೆಟ್ಟಿಲು ಏರಿದ್ದಾರೆ ಪ್ರಿಯಾಂಕಾ ದಂಪತಿ.

    ಏಳು ಮಲಗುವ ಕೋಣೆಗಳು, ಒಂಬತ್ತು ಸ್ನಾನದ ಗೃಹಗಳು ಸೇರಿದಂತೆ ಸ್ಪಾ ಮತ್ತು ಸ್ಟೀಮ್ ಶವರ್, ಜಿಮ್ ಹಾಗೂ ವೈನ್ ಸೆಲ್ಲಾರ್, ಹೋಂ ಥಿಯೇಟರ್ ಹೀಗೆ ಎಲ್ಲ ಸೌಕರ್ಯವನ್ನು ಆ ಮನೆ ಒಳಗೊಂಡಿತ್ತು. ಮನೆ ಖರೀದಿಸಿದ ನಂತರ ಪೂಲ್ ಮತ್ತು ಸ್ಪಾಗಳಲ್ಲಿ ಸಮಸ್ಯೆ ಕಂಡು ಬಂದಿವೆಯಂತೆ. ಅಲ್ಲದೇ ಬಾರ್ಬೆಕ್ಯೂ ಜಾಗದಲ್ಲಿ ನೀರು ಸೋರಿಕೆ ಆಗಿರುವ ಕಾರಣದಿಂದಾಗಿ ಮೇ 2023ರಲ್ಲಿ ಮೊಕದ್ದಮೆಯನ್ನು ಹೂಡಿದ್ದಾರೆ.

     

    ಸದ್ಯ ಪ್ರಿಯಾಂಕಾ ಮತ್ತು ನಿಕ್ ಜೋನಾಸ್ (Nick Jonas) ದಂಪತಿ ಆ ಮನೆಯಲ್ಲಿ ವಾಸ ಮಾಡುತ್ತಿಲ್ಲ. ಆಗಲೇ ಖಾಲಿ ಮಾಡಿಕೊಂಡು ಬೇರೆ ಮನೆಯಲ್ಲಿ ವಾಸವಿದ್ದಾರೆ. ಮನೆಯಲ್ಲಿ ಹಾನಿ ಆಗಿದ್ದು ಮತ್ತು ಮಾರಾಟಗಾರರು ಅಂತಹ ಮನೆಯನ್ನು ಕೊಟ್ಟಿದ್ದನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರ ನೀಡುವಂತೆ ಅವರು ಕೋರ್ಟಿಗೆ ಮೊರೆ ಹೋಗಿದ್ದಾರೆ.

  • ನಿನಾದ್, ಪ್ರಿಯಾಂಕಾರ ‘ಆಸೆ’ ಮೆಚ್ಚಿದ ನಟ ರಮೇಶ್ ಅರವಿಂದ್

    ನಿನಾದ್, ಪ್ರಿಯಾಂಕಾರ ‘ಆಸೆ’ ಮೆಚ್ಚಿದ ನಟ ರಮೇಶ್ ಅರವಿಂದ್

    ತ್ತೀಚೆಗಷ್ಟೇ ಕಿರುತೆರೆ ಲೋಕಕ್ಕೆ ಸೇರ್ಪಡೆಯಾಗಿರುವ ‘ಆಸೆ’ (Ase Serial) ಧಾರಾವಾಹಿಯು ತನ್ನ ವಿನೂತನ ಕಥಾ ಹಂದರದಿಂದ ಜನರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದೊಂದು ಸಾಮಾನ್ಯ ಜನರ ಅಸಮಾನ್ಯ ಕಥೆಯಾಗಿದೆ. ಚಂದನವನದ ಖ್ಯಾತ ನಟ ರಮೇಶ್ ಅರವಿಂದ್ (Ramesh Aravind) ರವರು ತುಂಬಾ ಇಷ್ಟ ಪಡುತ್ತಿರುವ ಕಥೆ ಇದಾಗಿದ್ದು, ಆಸೆ ಸೀರಿಯಲ್‌ ತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ‘ಆಸೆ’ ಎಂಬ ಹೊಸ ಸೀರಿಯಲ್ ಸದ್ಯ ಕಿರುತೆರೆ ಲೋಕದಲ್ಲಿ ಮೋಡಿ ಮಾಡುತ್ತಿದೆ. ಹೀರೋ ಸೂರ್ಯ ಪಾತ್ರದಲ್ಲಿ ‘ನಾಗಿಣಿ 2’ ಖ್ಯಾತಿಯ ನಿನಾದ್ ಹರಿತ್ಸ (Ninaad Harithsa) ಜೀವತುಂಬಿದ್ದಾರೆ. ನಾಯಕಿ ಮೀನಾ ಪಾತ್ರದಲ್ಲಿ ‘ಪುಣ್ಯವತಿ’ ಖ್ಯಾತಿಯ ಪ್ರಿಯಾಂಕಾ (Priyanka) ನಟಿಸಿದ್ದಾರೆ.

    ಸಾಮಾನ್ಯವಾಗಿ ಬಡಕುಟುಂಬದಲ್ಲಿ ನಡೆಯುವಂತಹ ಕಷ್ಟ, ನೋವು, ಸಂಕಟ, ಆಸೆ ಎಲ್ಲವನ್ನು ಮನಮುಟ್ಟುವಂತೆ ಈ ಧಾರಾವಾಹಿಯಲ್ಲಿ ಹೇಳಲಾಗಿದೆ. ಸುಂದರ ತಾರಾ ಬಳಗವನ್ನು ಹೊಂದಿರುವ ಈ ಸೀರಿಯಲ್‌ನಲ್ಲಿ ಕಲಾವಿದರಂತೂ ಅತ್ಯದ್ಭುತವಾಗಿ ನಟಿಸುತ್ತಿದ್ದಾರೆ. ಪ್ರತಿಯೊಂದು ಪಾತ್ರವು ಅದರದ್ದೇ ಆದ ತೂಕ ಹೊಂದಿದೆ. ತಂದೆ ಪಾತ್ರದಲ್ಲಿ ನಟ ಮಂಡ್ಯ ರಮೇಶ್ ಕಾಣಿಸಿಕೊಂಡಿದ್ದಾರೆ.

    ‘ಆಸೆ’ ಸೀರಿಯಲ್‌ನಲ್ಲಿ ಸೂರ್ಯ-ಮೀನಾರ ಕೋಳಿ ಜಗಳ ನೋಡೋದೇ ಸಿಕ್ಕಾಪಟ್ಟೆ ಮಜಾ. ಇದಕ್ಕೆ ಈಗ ಎಮೋಷನಲ್ ಟಚ್ ನೀಡಲಾಗಿದ್ದು, ಮೀನಾ ತಂದೆ ಸಾವನ್ನಪ್ಪಿದ್ದಾರೆ. ಸೂರ್ಯ ತಂದೆ ಆಕೆಯನ್ನು ಮನೆಯ ಸೊಸೆ ಮಾಡಿಕೊಳ್ಳಲು ತಯಾರಿ ನಡೆಸುತ್ತಿದ್ದಾರೆ. ಸದ್ಯ ಮನೆಯವರ ಸಂತೋಷಕ್ಕಾಗಿ ರಂಗನಾಥನ ಮನೆಗೆ ಸೊಸೆಯಾಗಲು ಹೂ ಮಾರುವ ಹುಡುಗಿ ಮೀನಾ ಒಪ್ಪಿದ್ದಾಳೆ. ಇದು ಆಸೆ ಸೀರಿಯಲ್‌ನ ಸದ್ಯದ ಟ್ರ್ಯಾಕ್‌ ಇದಾಗಿದೆ.

    ಇನ್ನು, ಮೇಕಿಂಗ್ ವಿಚಾರದಲ್ಲಿ ‘ಆಸೆ’ ಧಾರಾವಾಹಿ ಒಂದು ಹೆಜ್ಜೆ ಮುಂದಿದೆ. ಜೊತೆಗೆ ಧಾರಾವಾಹಿಯ ಶೀರ್ಷಿಕೆ ಗೀತೆಯಂತೂ ನೋಡುಗರ ಮನಗೆದ್ದು ಪ್ರಶಂಸೆಗೆ ಪಾತ್ರವಾಗಿದೆ. ಇದೀಗ ಕಥಾ ನಾಯಕಿ ಮೀನಾಳ ಮದುವೆ ತಯಾರಿ ನಡೆಯುತ್ತಿದೆ. ಇದನ್ನೂ ಓದಿ:ಗೆಳೆಯನ ಜೊತೆ ತಿಮ್ಮಪ್ಪನ ದರ್ಶನ ಮಾಡಿದ ಜಾಹ್ನವಿ ಕಪೂರ್

    ‘ಆಸೆ’ ನನ್ನ ಮನಸಿಗೆ ತುಂಬಾ ಇಷ್ಟವಾಗಿರೋ ಧಾರಾವಾಹಿ, ಯಾಕಂದ್ರೆ ಸಾಮಾನ್ಯ ಜನರ ಅಸಮಾನ್ಯ ಕಥೆಯಂತಿರೋ ಈ ಸೀರಿಯಲ್ ನಂಗೆ ನ್ಯಾಚುರಲ್ ಫೀಲ್ ಕೊಡ್ತಿದೆ. ಪ್ರತಿಯೊಬ್ಬರ ಮನೆಯಲ್ಲಿ ನಡೆಯುವ ಸಣ್ಣ ಪುಟ್ಟ ವಿಚಾರವನ್ನು ಈ ಕಥೆಯಲ್ಲಿ ಅಚ್ಚುಕಟ್ಟಾಗಿ ತೋರಿಸಿದ್ದಾರೆ. ಹೀಗಾಗಿ ‘ಆಸೆ’ ಸೀರಿಯಲ್ ನಂಗೆ ತುಂಬಾ ಅಚ್ಚು ಮೆಚ್ಚು ಎಂದು ನಟ ರಮೇಶ್ ಅರವಿಂದ್ ಹಾಡಿ ಹೊಗಳಿದ್ದಾರೆ. ಈ ಮೂಲಕ ಆಸೆ ಸೀರಿಯಲ್ ತಂಡಕ್ಕೆ ಬೆಂಬಲಿದ್ದಾರೆ.

  • ‘ಕ್ಯಾಪ್ಚರ್’ನಲ್ಲಿ ಪ್ರಿಯಾಂಕಾ ಮಗಳಾದ ಮಾನ್ವಿತಾ

    ‘ಕ್ಯಾಪ್ಚರ್’ನಲ್ಲಿ ಪ್ರಿಯಾಂಕಾ ಮಗಳಾದ ಮಾನ್ವಿತಾ

    ಸ್ಯಾಂಡಲ್‌ವುಡ್ ಖ್ಯಾತ ನಟಿ ಮಾನ್ವಿತಾ ಕಾಮತ್ (Manvita Kamat) ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಗ್ಯಾಪ್‌ನ ಬಳಿಕ ಮಾನ್ವಿತಾ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಕೆಂಡಸಂಪಿಗೆ ಬ್ಯೂಟಿ ಲೋಹಿತ್  (Lohit) ನಿರ್ದೇಶನದ ‘ಕ್ಯಾಪ್ಚರ್’ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಕ್ಯಾಪ್ಟರ್ ಸಿನಿಮಾದಲ್ಲಿ ಪ್ರಿಯಾಂಕಾ ಉಪೇಂದ್ರ (Priyanka) ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿಶೇಷ ಎಂದರೆ ಪ್ರಿಯಾಂಕಾ ಮಗಳ ಪಾತ್ರದಲ್ಲಿ ಮಾನ್ವಿತಾ ನಟಿಸಿದ್ದಾರೆ.

    ಕ್ಯಾಪ್ಚರ್ (Capture) ಈಗಾಗಲೇ ಗೊತ್ತಿರುವ ಹಾಗೆ ಇದೊಂದು ಹಾರರ್ ಸಿನಿಮಾ. ಸಂಪೂರ್ಣ ಸಿನಿಮಾ ಸಿಸಿ ಟಿವಿ ಕಾನ್ಸೆಪ್ಟ್ ನಲ್ಲಿ ಚಿತ್ರೀಕರಣ ಮಾಡಲಾಗಿದೆ. ವಿಶ್ವದಲ್ಲಿಯೇ ಮೊದಲ ಬಾರಿಗೆ ಈ ರೀತಿಯ ಪ್ರಯತ್ನ ಮಾಡುತ್ತಿರುವುದು ವಿಶೇಷ. ಈಗಾಗಲೇ ಪ್ರಿಯಾಂಕಾ ಉಪೇಂದ್ರ ಅವರ  ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಇದೀಗ ಮಾನ್ವಿತಾ ಕೂಡ ನಟಿಸುತ್ತಿದ್ದಾರೆ ಎನ್ನುವ ವಿಚಾರ ಕ್ಯಾಪ್ಚರ್ ಮೇಲಿನ ಕುತೂಹಲ ಹೆಚ್ಚಿಸಿದೆ. ಮಾನ್ವಿತಾ ಈ ಸಿನಿಮಾದಲ್ಲಿ ಸ್ನೇಹಾ ಎನ್ನುವ ಪಾತ್ರದಲ್ಲಿ ನಟಿಸಿದ್ದಾರೆ. ಮೊದಲ ಬಾರಿಗೆ ಹಾರರ್ ಸಿನಿಮಾಗೆ ಬಣ್ಣ ಹಚ್ಚಿದ್ದಾರೆ.

    ‘ಮೊದಲ ಬಾರಿಗೆ ಹಾರರ್ ಸಿನಿಮಾದಲ್ಲಿ ನಟಿಸಿದ್ದೇನೆ. ಮೊದಲ ತುಂಬಾ ಭಯವಿತ್ತು. ಆದರೆ ಪಾತ್ರ ಚೆನ್ನಾಗಿದೆ ಎನ್ನುವ ಕಾರಣಕ್ಕೆ ಒಪ್ಪಿಕೊಂಡೆ. 15 ದಿನಗಳು ಗೋವಾದಲ್ಲಿ ಶೂಟಿಂಗ್ ಮಾಡಿದ್ವಿ, ಪ್ರಿಯಾಂಕಾ ಮೇಡಮ್ ಜೊತೆ ಕೆಲಸ ಮಾಡಿದ್ದು ತುಂಬಾ ಇಷ್ಟವಾಯಿತು. ಶೂಟಿಂಗ್ ಮುಗಿಸಿ ಮನೆಗೆ ಬಂದಾಗ ತುಂಬಾ ದೃಷ್ಟಿ ಆಗಿತ್ತು ಅನಿಸುತ್ತೆ. ಜ್ವರ ಕೂಡ ಬಂದಿತ್ತು. ದೃಷ್ಟಿ ತೆಗಿಸಿಕೊಂಡ ಮೇಲೆ ಸರಿ ಆಯಿತು’ ಎಂದು ಹೇಳಿದರು.

    ಮಾನ್ವಿತಾ ಕೊನೆಯದಾಗಿ ‘ಶಿವ 143’ ಸಿನಿಮಾದಲ್ಲಿ ನಟಿಸಿದ್ದರು. ಇದೀಗ ವರ್ಷದ ಬಳಿಕ ತೆರೆಮೇಲೆ ಬರುತ್ತಿದ್ದಾರೆ. ಕ್ಯಾಪ್ಚರ್ ಸಿನಿಮಾದಲ್ಲಿ ಮಾನ್ವಿತಾ ಲುಕ್ ಹೇಗಿರಲಿದೆ ಎನ್ನುವುದು ಸದ್ಯದಲ್ಲೇ ರಿವೀಲ್ ಆಗಲಿದೆ.  ಕ್ಯಾಪ್ಚರ್ ಸಿನಿಮಾಗೆ ರವಿರಾಜ್ ಅವರು ತಮ್ಮ ಶ್ರಿ ದುರ್ಗಪರಮೇಶ್ವರಿ  ಪ್ರೊಡಕ್ಷನ್ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಈ ಬ್ಯಾನರ್‌ನಲ್ಲಿ ಮೂಡಿಬರುತ್ತಿರುವ ಮೊದಲ  ಸಿನಿಮಾ ಇದಾಗಿದೆ. ಈಗಾಗಲೇ ಬಹುತೇಕ ಶೂಟಿಂಗ್ ಮುಗಿಸಿರುವ ಸಿನಿಮಾತಂಡ ಸದ್ಯದಲ್ಲೇ ಚಿತ್ರಮಂದಿರದ ಅಂಗಳಕ್ಕೆ ಕಾಲಿಡಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಹುಷಾರ್’ ಹಾಡಿಗೆ ಧ್ವನಿಯಾದ ರಿಯಲ್ ಸ್ಟಾರ್ ಉಪೇಂದ್ರ

    ‘ಹುಷಾರ್’ ಹಾಡಿಗೆ ಧ್ವನಿಯಾದ ರಿಯಲ್ ಸ್ಟಾರ್ ಉಪೇಂದ್ರ

    ತೀಶ್ ರಾಜ್ ನಿರ್ಮಿಸಿ, ನಿರ್ದೇಶಿಸಿರುವ “ಹುಷಾರ್” ಚಿತ್ರದ “ನೀ ನೋಡೋಕ್ಕೆ ಸಿಕ್ಸ್ಟೀನು ಸ್ವೀಟಿ” ಎಂಬ ಹಾಡನ್ನು ರಿಯಲ್ ಸ್ಟಾರ್ ಉಪೇಂದ್ರ ಹಾಡಿದ್ದಾರೆ. ಇತ್ತೀಚಿಗೆ ಈ ಹಾಡನ್ನು ಪ್ರಿಯಾಂಕ ಉಪೇಂದ್ರ ಬಿಡುಗಡೆ ಮಾಡಿದರು. ಚಿತ್ರದ ಟ್ರೇಲರ್ ನಿರ್ಮಾಪಕ ಎನ್.ಎಂ.ಸುರೇಶ್ ಅವರಿಂದ ಬಿಡುಗಡೆಯಾಯಿತು. ನಾನು ಈ ಸಮಾರಂಭಕ್ಕೆ ಬರಲು ಮುಖ್ಯ ಕಾರಣ ಉಪೇಂದ್ರ ಅವರು ಹಾಡಿರುವುದು. ಈ ಹಾಡು H20 ಚಿತ್ರದ “ದಿಲ್ ಇಲ್ದೇ ಲವ್ ಮಾಡೋಕಾಗಲ್ವೆ” ಹಾಡಿನ ತರಹ ಇದೆ. ಈ ಹಾಡು ಅದೇ ರೀತಿ ಹಿಟ್ ಆಗಲಿ. ಹಾರಾರ್ ಜಾನರ್ ನ ಈ ಸಿನಿಮಾ ಎಲ್ಲರ ಮನ ಗೆಲ್ಲಲಿ ಎಂದು ಪ್ರಿಯಾಂಕ ಉಪೇಂದ್ರ ಶುಭ ಹಾರೈಸಿದರು. ‌

    ನಾನು ಡಾ||ರಾಜ್ ಅವರ ಅಭಿಮಾನಿ. ಕನ್ನಡ ಚಿತ್ರರಂಗದ ವಿವಿಧ ವಿಭಾಗದಲ್ಲಿ ಕೆಲಸ ಮಾಡಿದ್ದೇನೆ. ರಂಗಭೂಮಿ ನಂಟು ಇದೆ. ಲಾಕ್ ಡೌನ್ ಸಮಯದಲ್ಲಿ “ಹುಷಾರ್” ಪೆನ್ ಡ್ರೈವ್ ಎಂಬ ಕಥೆ ಬರೆದೆ. ಈ ಕಥೆ ಪುಸ್ತಕ ರೂಪದಲ್ಲಿ ಎಲ್ಲೆಡೆ ಲಭ್ಯವಿವೆ.  ಆನಂತರ ಇದನ್ನು ಸಿನಿಮಾ‌ ಮಾಡೋಣ ಎಂದು ಚಿತ್ರೀಕರಣ ಆರಂಭಿಸಿದೆ. ಹಲವು ಅಡೆತಡೆಗಳನ್ನು ದಾಟಿ, ಚಿತ್ರ ಬಿಡುಗಡೆ ಹಂತ ತಲುಪಿದೆ. ಉಪೇಂದ್ರ ಅವರು ನಮ್ಮ ಸಿನಿಮಾದ ಹಾಡೊಂದು ಹಾಡಿರುವುದು ನಮ್ಮ ಹೆಮ್ಮೆ. ಆ ಹಾಡನ್ನು ಬಿಡುಗಡೆ ಮಾಡಿದ ಪ್ರಿಯಾಂಕ ಉಪೇಂದ್ರ ಅವರಿಗೆ ಧನ್ಯವಾದ ಎಂದರು ನಿರ್ಮಾಪಕ- ನಿರ್ದೇಶಕ ಸತೀಶ್ ರಾಜ್. ‌ ಇದನ್ನೂ ಓದಿ:ಭಾರತಕ್ಕೆ ಬೈ ಹೇಳಿದ ಬೆನ್ನಲ್ಲೇ ಕ್ರಿಸ್‌ಮಸ್‌ಗೆ ಪ್ರಿಯಾಂಕಾ ಚೋಪ್ರಾ ತಯಾರಿ

    ನಾಯಕ ಸಿದ್ದೇಶ್, ನಾಯಕಿ ಆದ್ಯಪ್ರಿಯ, ನಟಿ ಪುಷ್ಪಸ್ವಾಮಿ, ನಟರಾದ ಬುಲೆಟ್ ವಿನೋದ್, ಡಿಂಗ್ರಿ ನಾಗರಾಜ್, ನಟಿ ರಚನಾ ಮಲ್ನಾಡ್ ಮುಂತಾದ ಕಲಾವಿದರು  ತಮ್ಮ ಅಭಿನಯದ ಬಗ್ಗೆ ಮಾತನಾಡಿದರು. ಸಹ ನಿರ್ಮಾಪಕಿ ಅಶ್ವಿನಿ ಅರುಣ್ ಕೃಷ್ಣನ್ ಎಲ್ಲರಿಗೂ ಧನ್ಯವಾದ ತಿಳಿಸಿದರು. ಆರ್ಥಿಕ ಸಲಹೆಗಾರರಾದ ಇಂದು ಶೇಖರ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾದರು.

    Live Tv
    [brid partner=56869869 player=32851 video=960834 autoplay=true]

  • ಹುಬ್ಬಳ್ಳಿ ಹುಡುಗಿಗೆ ಇಂಡಿಯಾ ಟಾಪ್ ಮಾಡೆಲ್ಸ್ ಕಿರೀಟ

    ಹುಬ್ಬಳ್ಳಿ ಹುಡುಗಿಗೆ ಇಂಡಿಯಾ ಟಾಪ್ ಮಾಡೆಲ್ಸ್ ಕಿರೀಟ

    ಹುಬ್ಬಳ್ಳಿ: ಹುಬ್ಬಳ್ಳಿ ಮೂಲದ ಪ್ರಿಯಾಂಕ ಕೊಲವೇಕರ ಎಂಬ ರೂಪದರ್ಶಿ ಇಂಡಿಯಾ ಟಾಪ್ ಮಾಡೆಲ್ಸ್-2022 ಸ್ಪರ್ಧೆಯಲ್ಲಿ ಭಾಗವಹಿಸಿ, ವಿಜೇತ ಕಿರೀಟವನ್ನು ತಮ್ಮ
    ಮುಡಿಗೇರಿಸಿಕೊಂಡಿದ್ದಾರೆ.

    ಮೇ 29ರಂದು ದಿಲ್ಲಿಯಲ್ಲಿ ಸಂದೀಪ್ ಗೋಸ್ವಾಮಿ, ಸೋನಿಯಾ ಖಟಾನಾ ಆಯೋಜಿಸಿದ್ದ ಪ್ರತಿಷ್ಠಿತ ರೂಪದರ್ಶಿಗಳ ಸ್ಪರ್ಧೆಯಲ್ಲಿ ಪ್ರಿಯಾಂಕ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಈ ಹಿಂದೆ ಗೋವಾದಲ್ಲಿ ನಡೆದ 2019ರ ರಾಯಲ್ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಮೊದಲ ರನ್ನರ್ ಆಗಿ ಹೊರಹೊಮ್ಮಿದ್ದರು. 2018ರಲ್ಲಿ ಇಂಡಿ ರಾಯಲ್ ಪ್ರೈಡ್ ಆಫ್ ನೇಷನ್ ಎಲೈಟ್, 2016ರಲ್ಲಿ ಮಿಸ್ ಇಂಡಿಯಾ ಸೌಥ್ ಬ್ಯೂಟಿಫೂಲ್ ಸ್ಮೈಲ್, 2015 ಮಿಸ್ ಇಂಡಿಯಾ ಅಡ್ವೆಂಚರ್ ಅವಾರ್ಡ್‍ಗಳನ್ನು ಸಹ ಗೆದ್ದಿದ್ದಾರೆ. ಇದನ್ನೂ ಓದಿ: ಉಡುಪಿಯ ಯುಪಿಸಿಎಲ್‍ಗೆ ಹಸಿರುಪೀಠ ಚಾಟಿ – ಅವಾಂತರಕ್ಕೆ 52 ಕೋಟಿ ರೂ. ದಂಡ

    ಪ್ರಿಯಾಂಕ ಮೂಲತಃ ಕಾರವಾರದಲ್ಲಿ ಹುಟ್ಟಿ ಬೆಳೆದಿದ್ದು, ವಿದ್ಯಾಭ್ಯಾಸವನ್ನು ಹುಬ್ಬಳ್ಳಿಯಲ್ಲಿ ಮಾಡಿದ್ದಾರೆ. ಅವರ ತಂದೆ ಗಣಪತಿ ಅಕ್ಕಸಾಲಿಗರಾಗಿದ್ದು, ತಾಯಿ ಮಂಗಳ ನಿವೃತ್ತ ಶಿಕ್ಷಕಿಯಾಗಿದ್ದಾರೆ. ಯಾರ ಸಹಾಯವಿಲ್ಲದೆ, ಫಿಟ್ನೆಸ್, ಕಾಸ್ಟ್ಯೂಮ್, ವಾಕಿಂಗ್ ಸ್ಟೈಲ್ ಎಲ್ಲವನ್ನು ಇಂಟರ್‌ನೆಟ್‍ನಲ್ಲಿ ನೋಡಿ ಪ್ರಿಯಾಂಕ ಮಾಡೆಲಿಂಗ್ ಕಲಿತುಕೊಂಡಿದ್ದಾರೆ. ಇದನ್ನೂ ಓದಿ: 23ನೇ ಓವರ್‌ನಲ್ಲಿ ಪಂದ್ಯ ಸ್ಥಗಿತ – ಲಾರ್ಡ್ಸ್ ಟೆಸ್ಟ್‌ನಲ್ಲಿ ವಾರ್ನ್‍ಗೆ ವಿಶೇಷ ಗೌರವ

    ಪ್ರಾಣಿ ಪ್ರಿಯರಾಗಿರುವ ಪ್ರಿಯಾಂಕ ಹುಬ್ಬಳ್ಳಿಯಲ್ಲಿ ಪ್ರತಿದಿನ ಬೆಳಗ್ಗೆ 7ರಿಂದ 10ಗಂಟೆವೆರೆಗೆ ವಿದ್ಯಾನಗರ, ಗೋಕುಲ ರಸ್ತೆಯಲ್ಲಿರುವ ಸುಮಾರು 50 ರಿಂದ 70 ಬೀದಿ ನಾಯಿಗಳಿಗೆ ಆಹಾರ ಹಾಕುವ ಹವ್ಯಾಸಹೊಂದಿದ್ದಾರೆ. ಇದರ ಜೊತೆಗೆ ಗೋವುಗಳಿಗೆ, ಬೀದಿ ನಾಯಿ ಸೇರಿದಂತೆ ಯಾವುದೇ ಪ್ರಾಣಿಗಳ ಸಂಕಷ್ಟಕ್ಕೆ ಮರಗುವ ಗುಣವನ್ನು ಪ್ರಿಯಾಂಕ ಹೊಂದಿದ್ದಾರೆ. ಇವರ ಈ ಸೇವೆಯನ್ನು ಮೆಚ್ಚಿ 2018ರಲ್ಲಿ ಅನಿಶ್ ಚಿಂಚೊರೆ ಮೆಮೊರಿಯಲ್ ಫೌಂಡೆಷನ್ ವತಿಯಿಂದ ಆನಿಮಲ್ ಆಕ್ಟಿವಿಸ್ಟ್ ಎಂಬ ಅವಾರ್ಡ್ ಸಹ ದೊರಕಿದೆ.

  • ರೋಮ್ಯಾಂಟಿಕ್ ಆಗಿ ವಿವಾಹ ವಾರ್ಷಿಕೋತ್ಸವ ಆಚರಿಸಿದ ರಿಯಲ್ ಸ್ಟಾರ್ ದಂಪತಿ

    ರೋಮ್ಯಾಂಟಿಕ್ ಆಗಿ ವಿವಾಹ ವಾರ್ಷಿಕೋತ್ಸವ ಆಚರಿಸಿದ ರಿಯಲ್ ಸ್ಟಾರ್ ದಂಪತಿ

    ಬೆಂಗಳೂರು: ಸ್ಯಾಂಡಲ್‍ವುಡ್ ಕ್ಯೂಟ್ ಪೇರ್ ನಟ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ ದಾಂಪತ್ಯ ಜೀವನಕ್ಕೆ ಕಾಲಿಟ್ಟು 18 ವರ್ಷ ಕಳೆದಿದ್ದು, ತಮ್ಮ ವಾರ್ಷಿಕೋತ್ಸವನ್ನು ರೆಸಾರ್ಟ್‍ವೊಂದರಲ್ಲಿ ರೋಮ್ಯಾಂಟಿಕ್ ಆಗಿ ಆಚರಿಸಿದ್ದಾರೆ.

    Upendra

    ಯಾವಾಗಲೂ ಸಖತ್ ಕ್ರಿಯೆಟೀವ್ ಆಗಿ ಆಲೋಚಿಸುವ ಉಪೇಂದ್ರ ಅವರು, ಕನ್ನಡದಲ್ಲಿ ಹೊಸ ರೀತಿಯ ಬಗೆ, ಬಗೆಯ ಸಿನಿಮಾಗಳನ್ನು ನೀಡುತ್ತಲೇ ಬಂದಿದ್ದಾರೆ. ಸದಾ ಸಿನಿಮಾ ಶೂಟಿಂಗ್, ರಾಜಕೀಯ ಎಂದೆಲ್ಲಾ ಬ್ಯುಸಿಯಾಗಿರುವ ಉಪೇಂದ್ರ ಅವರು ಒಬ್ಬ ಪರ್ಫೆಕ್ಟ್ ಫ್ಯಾಮಿಲಿ ಮ್ಯಾನ್ ಕೂಡ ಹೌದು. ಇದಕ್ಕೆ ಆಗಾಗಾ ಅವರ ಮನೆಯಲ್ಲಿ ಹಬ್ಬದ ಸಂದರ್ಭಗಳಲ್ಲಿ ಸಂಪ್ರದಾಯಿಕ ಪೂಜೆ, ಆಚರಣೆಗಳೇ ಸಾಕ್ಷಿ ಎನ್ನಬಹುದು. ತಾವೂ ಎಷ್ಟೇ ಬ್ಯೂಸಿಯಾಗಿದ್ದರೂ ಈ ಮಧ್ಯೆ ಪತ್ನಿ, ಮಕ್ಕಳಿಗೂ ಕೂಡ ಅಷ್ಟೇ ಸಮಯ ಮೀಸಲಿಡುತ್ತಾರೆ. ಇದನ್ನೂ ಓದಿ:  ಮೊದಲ ಪದಗಳನ್ನು ಕಲಿಯುತ್ತಿರುವ ರಾಯನ್ – ಫುಲ್ ಖುಷ್ ಆದ ಮೇಘನಾ

    Upendra

    ಸದ್ಯ ಡಿಸೆಂಬರ್ 14ಕ್ಕೆ ಉಪೇಂದ್ರ ಹಾಗೂ ಪ್ರಿಯಾಂಕಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು 18 ವರ್ಷ ಕಳೆದಿದ್ದು, ಇದೇ ಖುಷಿಯಲ್ಲಿ ದಂಪತಿ ಕೇರಳದಲ್ಲಿರುವ ವೈಲ್ಡ್ ಪ್ಲಾನೆಟ್ ರೆಸಾರ್ಟ್‍ಗೆ ಭೇಟಿ ನೀಡಿ ಇಬ್ಬರು ಏಕಾಂತವಾಗಿ ಕಾಲ ಕಳೆದಿದ್ದಾರೆ. ಜೊತೆಗೆ ತಮ್ಮ ವಿವಾಹವಾರ್ಷಿಕೋತ್ಸವವನ್ನು ಕೇಕ್ ಕಟ್ ಮಾಡಿ ಸಖತ್ ರೋಮ್ಯಾಂಟಿಕ್ ಆಗಿ ಆಚರಿಸಿದ್ದಾರೆ.

    ಇನ್ನೂ ಈ ಫೋಟೋಗಳನ್ನು ಪ್ರಿಯಾಂಕಾ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಥ್ಯಾಂಕ್ಯು ವೈಲ್ಡ್ ಪ್ಲಾನೆಟ್ ರೆಸಾರ್ಟ್. ಬೆಚ್ಚಗಿನ ಮತ್ತು ಮರೆಯಲಾಗದಂತಹ ಅನುಭವ. ಅಲ್ಲಿನ ಸುಂದರವಾದ ದೃಶ್ಯಗಳು, ಅಧಿಕೃತ ಕೊಠಡಿಗಳು, ರುಚಿಕರವಾದ ಫುಡ್, ಸಿಬ್ಬಂದಿಯ ಸ್ನೇಹ ಮತ್ತು ವಿಶ್ವಾಸ ನಿಮ್ಮ ಅದ್ಭುತ ಆತಿಥ್ಯ ನಮಗೆ ಬಹಳ ಇಷ್ಟವಾಯಿತು. ಮತ್ತೊಮ್ಮೆ ವೈಲ್ಡ್ ಪ್ಲಾನೆಟ್ ರೆಸಾರ್ಟ್‍ಗೆ ಭೇಟಿ ನೀಡಲು ಎದುರು ನೋಡುತ್ತಿದ್ದೇನೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬೋಲ್ಡ್ ದೃಶ್ಯಗಳೇ ಸಮಂತಾ ದಾಂಪತ್ಯಕ್ಕೆ ಮುಳುವಾಯ್ತು!

     

    View this post on Instagram

     

    A post shared by priyanka upendra (@priyanka_upendra)

    ಉಪೇಂದ್ರ ಹಾಗೂ ಪ್ರಿಯಾಂಕಾ ಪ್ರೀತಿಸಿ 2003ರ ಡಿಸೆಂಬರ್ 14ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ಈ ದಂಪತಿಗೆ ಆಯುಷ್ ಹಾಗೂ ಐಶ್ವರ್ಯ ಎಂಬ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.

     

  • ಲಖೀಂಪುರ್ ಖೇರಿ ಹಿಂಸಾಚಾರ – ಮೃತ ರೈತರ ಕುಟುಂಬಸ್ಥರನ್ನು ಬಿಗಿದಪ್ಪಿ ರಾಹುಲ್, ಪ್ರಿಯಾಂಕಾ ಸಾಂತ್ವನ

    ಲಖೀಂಪುರ್ ಖೇರಿ ಹಿಂಸಾಚಾರ – ಮೃತ ರೈತರ ಕುಟುಂಬಸ್ಥರನ್ನು ಬಿಗಿದಪ್ಪಿ ರಾಹುಲ್, ಪ್ರಿಯಾಂಕಾ ಸಾಂತ್ವನ

    ಲಕ್ನೋ: ಉತ್ತರ ಪ್ರದೇಶದಲ್ಲಿ ನಡೆದ ಪ್ರತಿಭಟನೆ ವೇಳೆ ಸಾವನ್ನಪ್ಪಿದ ರೈತರ ಕುಟುಂಬದವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಲಖೀಂಪುರ್ ಖೇರಿಗೆ ತಲುಪಿ ಭೇಟಿ ನೀಡಿ ಬುಧವಾರ ಸಾಂತ್ವನ ಹೇಳಿದ್ದಾರೆ.

    Rahul Gandhi

    ಇತ್ತೀಚೆಗಷ್ಟೇ ಪ್ರಿಯಾಂಕಾ ಗಾಂಧಿ ಅವರು ಲಖಿಂಪುರ್ ಖೇರಿಗೆ ಭೇಟಿ ನೀಡುವ ವೇಳೆ ತಡೆದು ಪೊಲೀಸರು ಬಂಧಿಸಿದ್ದರು. ಇದೀಗ ಅವರು ಬಿಡುಗಡೆಗೊಂಡಿದ್ದು, ಸಹೋದರ ರಾಹುಲ್ ಗಾಂಧಿ ಜೊತೆ ಲಖೀಂಪುರ್ ಖೇರಿ ಜಿಲ್ಲೆಗೆ ಭೇಟಿ ನೀಡಿದ್ದಾರೆ.  ಇದನ್ನೂ ಓದಿ: ರೈತರ ಮೇಲೆ ಜೀಪ್ ಹತ್ತಿಸಿದ ಮತ್ತೊಂದು ವೀಡಿಯೋ ಲಭ್ಯ – ಇಂದು ಸುಪ್ರೀಂನಲ್ಲಿ ವಿಚಾರಣೆ

    Rahul Gandhi

    ಮೊದಲಿಗೆ ಇಬ್ಬರು ಪಾಲಿಯಾಗೆ ತಲುಪಿ ಲವ್‍ಪ್ರೀತ್ ಸಿಂಗ್ ಕುಟುಂಬವನ್ನು ಭೇಟಿ ಮಾಡಿದರು. ಈ ವೇಳೆ ಪ್ರಿಯಾಂಕಾ ಹಾಗೂ ರಾಹುಲ್, ಲವ್‍ಪ್ರೀತ್ ಸಿಂಗ್ ಅವರ ಕುಟುಂಬದವರನ್ನು ಅಪ್ಪಿಕೊಂಡು ಸಾಂತ್ವನ ಹೇಳಿದ್ದಾರೆ. ಇನ್ನೂ ಈ ಫೋಟೋವನ್ನು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.  ಇದನ್ನೂ ಓದಿ: ರಾಷ್ಟ್ರೀಯ ಏಕತಾ ದಿನ- ಮಂಗಳೂರಿಗೆ ಆಗಮಿಸಿದ ಸೈಕಲ್ ರ್‍ಯಾಲಿ

    ನಂತರ ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ಘಟನೆಯಲ್ಲಿ ಮೃತಪಟ್ಟ ಪತ್ರಕರ್ತರಾದ ರಾಮನ್ ಕಶ್ಯಪ್ ಅವರ ನಿಘಾಸನ್ ಅವರ ತಹಸಿಲ್‍ನಲ್ಲಿರುವ ಮನೆಗೆ ಭೇಟಿ ನೀಡಿದರು. ಕೊನೆಗೆ ಧೌರಾಹಾ ತಹಸಿಲ್‍ನಲ್ಲಿರುವ ನಚತಾರ್ ಸಿಂಗ್ ಅವರ ಮನೆಗೆ ತಲುಪಿದರು. ಅಲ್ಲದೇ ಕಾಂಗ್ರೆಸ್ ನಾಯಕರಾದ ಸಚಿನ್ ಪೈಲಟ್ ಮತ್ತು ಆಚಾರ್ಯ ಪ್ರಮೋದ್ ಅವರು ಕೂಡ ಲಖೀಂಪುರ್ ಖೇರಿಯಲ್ಲಿರುವ ಮೃತಪಟ್ಟ ಕುಟುಂಬಸ್ಥರನ್ನು ಭೇಟಿ ಮಾಡಲು ತೆರಳುತ್ತಿದ್ದ ವೇಳೆ ಮೊರಾದಾಬಾದ್‍ನಲ್ಲಿ ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

    ಭಾನುವಾರ ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾನೂನುಗಳ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ ಕೃತ್ಯ ನಡೆದಿದ್ದು, 8 ಜನ ಮೃತಪಟ್ಟಿದ್ದಾರೆ. ಸತ್ತವರಲ್ಲಿ ನಾಲ್ವರು ರೈತರಾಗಿದ್ದಾರೆ. ಇನ್ನೂ ಈ ಕೃತ್ಯ ಖಂಡಿಸಿ ರೈತರು ಬಿಜೆಪಿ ಕಾರ್ಯಕರ್ತರು ಕಾರು ಚಲಾಯಿಸಿದ್ದ ಕಾರಿನ್ನು ಹೊಡೆದುರುಳಿಸಿ ಬೆಂಕಿ ಹಚ್ಚಿದ್ದರು.  ಇದನ್ನೂ ಓದಿ: ಹೈದರಾಬಾದ್‌ಗೆ ರೋಚಕ 4 ರನ್‌ ಜಯ – ಕೊನೆಯಲ್ಲಿ ಪಂದ್ಯ ಕೈ ಚೆಲ್ಲಿದ ಆರ್‌ಸಿಬಿ

  • ಬಿಗ್‍ಬಾಸ್ ಮನೆಯಿಂದ ಪ್ರಿಯಾಂಕಾ ಔಟ್

    ಬಿಗ್‍ಬಾಸ್ ಮನೆಯಿಂದ ಪ್ರಿಯಾಂಕಾ ಔಟ್

    ಬಿಗ್‍ಬಾಸ್ ಮನೆಯಿಂದ ಈ ವಾರ ಪ್ರಿಯಾಂಕಾ ತಿಮ್ಮೇಶ್ ಅವರು ಹೊರ ನಡೆಯಲಿದ್ದಾರೆ.

    ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದ ಪ್ರಿಯಾಂಕಾ ತಿಮ್ಮೇಶ್ ಅವರು ಕನ್ನಡ, ಮಲಯಾಳಂ, ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ದೊಡ್ಮನೆಯಲ್ಲಿ ಎಲ್ಲರೊಂದಿಗೂ ಬೆರೆತು, ತುಂಬಾ ಸೈಲೆಂಟಾಗಿದ್ದ ಪ್ರಿಯಾಂಕಾ, ಯಾರು ಏನೇ ಹೇಳಿದರೂ ತಾಳ್ಮೆ ಕಳೆದುಕೊಳ್ಳದೆ, ಎಲ್ಲವನ್ನೂ ನಿಭಾಯಿಸುತ್ತಿದ್ದರು. ಟಾಸ್ಕ್ ವೇಳೆ ಸಹ ತಮ್ಮದೇ ಛಾಪು ಮೂಡಿಸಿದ್ದರು.

    ತುಂಬಾ ಸೈಲೆಂಟ್ ಆಗಿದ್ದ ಪ್ರಿಯಾಂಕಾ, ಚಕ್ರವರ್ತಿ ಚಂದ್ರಚೂಡ್ ಅವರೊಂದಿಗೆ ಆಗಾಗ ಕಿರಿಕ್ ಮಾಡಿಕೊಳ್ಳುತ್ತಿದ್ದರು. ಕೆಲವು ಬಾರಿ ಚಕ್ರವರ್ತಿ ಅವರ ಜೊತೆ ಏರು ಧ್ವನಿಯಲ್ಲಿ ಜಗಳವನ್ನೂ ಮಾಡಿದ್ದಾರೆ. ಇತ್ತೀಚೆಗಷ್ಟೇ ಚಕ್ರವರ್ತಿ ಅವರ ಜೊತೆ ನಡೆದ ಜಗಳದಲ್ಲಿ ತಮ್ಮ ಉಗ್ರಾವತಾರವನ್ನು ತೋರಿಸಿದ್ದರು. ಸಿಟ್ಟಿನಿಂದ ಇಡೀ ಮನೆಯನ್ನೇ ಬೆಚ್ಚಿಬೀಳಿಸಿದ್ದರು.

    ಟಾಸ್ಕ್ ವಿಚಾರವಾಗಿ ಅನ್ಯಾಯ ನಡೆದಾಗಲೆಲ್ಲ ಪ್ರಿಯಾಂಕಾ ಅವರು ಧ್ವನಿ ಎತ್ತಿದ್ದಾರೆ. ಕ್ಯಾಪ್ಟನ್ ಕಂಟೆಸ್ಟೆಂಟ್ ಟಾಸ್ಕ್ ವೇಳೆ ಅರವಿಂದ್ ವಿರುದ್ಧ ಕಿಡಿಕಾರಿದ್ದರು. ಹೀಗೆ ಬಿಗ್ ಬಾಸ್ ಸೆಕೆಂಡ್ ಇನ್ನಿಂಗ್ಸ್‍ನಲ್ಲಿ ತುಂಬಾ ಆ್ಯಕ್ಟಿವ್ ಆಗಿ ಟಾಸ್ಕ್ ಗಳಲ್ಲಿ ಭಾಗವಹಿಸುತ್ತಿದ್ದ ಪ್ರಿಯಾಂಕಾ ಇದೀಗ ಎಲಿಮಿನೇಟ್ ಆಗುತ್ತಿದ್ದಾರೆ.

    ಈ ಹಿಂದೆಯೇ ಪ್ರಿಯಾಂಕಾ ಅವರು ಮನೆಯಿಂದ ಹೊರನಡೆಯುವ ಸಂಭವವಿತ್ತು. ಆದರೆ ನಿಧಿ ಸಿಬ್ಬಯ್ಯ ಅವರು ಪ್ರಿಯಾಂಕಾ ಅವರನ್ನು ಸೇವ್ ಮಾಡಿದ್ದರು. ಹೀಗಾಗಿ ಮತ್ತುಷ್ಟು ದಿನಗಳ ಕಾಲ ಬಿಗ್‍ಬಾಸ್ ಮನೆಯಲ್ಲಿ ಮುಂದುವರಿದಿದ್ದರು. ಆದರೆ ಈ ವಾರ ಅವರು ಮನೆಯಿಂದ ಹೊರ ನಡೆಯುತ್ತಿದ್ದಾರೆ.