Tag: Priyanka Chaturvedi

  • ಏರ್ ಇಂಡಿಯಾ ದುರಂತ | ತನಿಖಾ ವರದಿ ಬಹಿರಂಗಕ್ಕೂ ಮುನ್ನವೇ ವಿದೇಶಿ ಮಾಧ್ಯಮಗಳಲ್ಲಿ ಪ್ರಕಟ – ಕೇಂದ್ರಕ್ಕೆ ಪ್ರಿಯಾಂಕಾ ಚತುರ್ವೇದಿ ಪತ್ರ

    ಏರ್ ಇಂಡಿಯಾ ದುರಂತ | ತನಿಖಾ ವರದಿ ಬಹಿರಂಗಕ್ಕೂ ಮುನ್ನವೇ ವಿದೇಶಿ ಮಾಧ್ಯಮಗಳಲ್ಲಿ ಪ್ರಕಟ – ಕೇಂದ್ರಕ್ಕೆ ಪ್ರಿಯಾಂಕಾ ಚತುರ್ವೇದಿ ಪತ್ರ

    ನವದೆಹಲಿ: ಏರ್ ಇಂಡಿಯಾ ಅಪಘಾತದ (Air India Crash) ಪ್ರಾಥಮಿಕ ತನಿಖೆಯ ವರದಿಯ ಬಿಡುಗಡೆ ಮುನ್ನವೇ ವಿದೇಶಿ ಮಾಧ್ಯಮಗಳಲ್ಲಿ ಪ್ರಕಟ ಆಗಿರುವ ಬಗ್ಗೆ ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ (Priyanka Chaturvedi) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

    ಭಾರತದ ಅಧಿಕೃತ ವರದಿ ಬಿಡುಗಡೆಗೂ ಮುನ್ನವೇ ಏರ್ ಇಂಡಿಯಾ ವಿಮಾನ 171 ರ ಅಪಘಾತ ವರದಿ ವಿದೇಶದಲ್ಲಿ ಹೇಗೆ ಸೋರಿಕೆಯಾಯಿತು? ವರದಿ ಬಿಡುಗಡೆ ಅಪಾರದರ್ಶಕವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಕೇಂದ್ರ ವಿಮಾನಯಾನ ಸಚಿವ ಕೆ ರಾಮಮೋಹನ್ ನಾಯ್ಡು ( K Rammohan Naidu) ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಫ್ಯುಯೆಲ್ ಸ್ವಿಚ್ ನಿರ್ವಹಿಸುವಾಗ ಜಾಗ್ರತೆ – ಪೈಲಟ್‍ಗಳಿಗೆ ಆದೇಶಿಸಿದ ಇತಿಹಾದ್ ಏರ್‌ಲೈನ್ಸ್‌

    ವಿಮಾನ ಅಪಘಾತ ಮತ್ತು ಅದರ ಮಧ್ಯಂತರ ವರದಿಯ ಸುತ್ತಲಿನ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಏನು ನಡೆಯುತ್ತಿದೆ ಎಂಬುದರ ಬಗ್ಗೆ ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ ಎಂದು ಎಕ್ಸ್‌ನಲ್ಲಿ ಅವರು ಬರೆದುಕೊಂಡಿದ್ದಾರೆ. ಅಲ್ಲದೇ ಪತ್ರವನ್ನು ಹಂಚಿಕೊಂಡಿದ್ದಾರೆ.

    ಭಾರತದಲ್ಲಿ ಔಪಚಾರಿಕವಾಗಿ ಸಂಬಂಧಪಟ್ಟ ಪಾಲುದಾರರಿಗೆ ಮತ್ತು ಸಾರ್ವಜನಿಕರಿಗೆ ಮಾಹಿತಿ ನೀಡುವ ಮೊದಲೇ ವಾಲ್ ಸ್ಟ್ರೀಟ್ ಜರ್ನಲ್‌ನಂತಹ ಮಾಧ್ಯಮಗಳಲ್ಲಿ ತನಿಖೆಯ ಪ್ರಮುಖ ವಿವರಗಳು ಬಂದಿವೆ. ಇದು ಮಾಹಿತಿ ಗೌಪ್ಯತೆಯಲ್ಲಿ ಆದ ಗಂಭೀರ ಲೋಪವಾಗಿದೆ. ವಿದೇಶಿ ಸಂಸ್ಥೆಗಳು ಹೇಗೆ ಮಾಹಿತಿ ಪಡೆದುಕೊಂಡವು ಎಂದು ಅವರು ಪ್ರಶ್ನಿಸಿದ್ದಾರೆ.

    ಇಂತಹ ಮಾಹಿತಿ ಸೋರಿಕೆಗಳು ಭಾರತದ ವಾಯುಯಾನ ಸುರಕ್ಷತಾ ಸಂಸ್ಥೆಗಳ ವಿಶ್ವಾಸಾರ್ಹತೆಯನ್ನು ಹಾಳುಮಾಡುತ್ತವೆ. ಅಲ್ಲದೇ ತಮ್ಮನ್ನು ಆರೋಪಗಳಿಂದ ರಕ್ಷಿಸಿಕೊಳ್ಳಲು ಸಾಧ್ಯವಾಗದ ಜೀವಂತವಾಗಿಲ್ಲದ ಪೈಲಟ್‌ಗಳ ಮೇಲೆ ಅಪಪ್ರಚಾರ ಮಾಡುವ ಊಹಾಪೋಹಗಳನ್ನು ಸೃಷ್ಟಿಸುತ್ತವೆ ಎಂದು ಅವರು ಕಟುವಾಗಿ ವಾದಿಸಿದ್ದಾರೆ.

    ವರದಿಯನ್ನು ಮಾಧ್ಯಮಗಳ ಮುಂದೆ ಬಿಡುಗಡೆ ಮಾಡದೇ, ಹಠಾತ್ ತಡರಾತ್ರಿ ಬಿಡುಗಡೆ ಮಾಡಿರುವುದು ತನಿಖೆಯ ಪಾರದರ್ಶಕತೆಯ ಬಗ್ಗೆ ಅನುಮಾನಗಳನ್ನು ಹೆಚ್ಚಿಸಿದೆ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

    ಜೂನ್ 12 ರಂದು ಅಹಮದಾಬಾದ್‌ನಲ್ಲಿ (Ahmedabad) ಟೇಕಾಫ್‌ ಆಗಿದ್ದ ಬೋಯಿಂಗ್ 787 ಡ್ರೀಮ್‌ಲೈನರ್‌ ವಿಮಾನ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು. ಅವಘಡಕ್ಕೆ ಕಾಕ್‌ಪಿಟ್‌ನಲ್ಲಿನ ಎರಡೂ ಇಂಧನ ನಿಯಂತ್ರಣ ಸ್ವಿಚ್‌ಗಳು ‘RUN’ ನಿಂದ ‘CUTOFF’ ಗೆ ಬಂದಿದ್ದು ಕಾರಣ ಎಂದು AAIB 15 ಪುಟಗಳ ಪ್ರಾಥಮಿಕ ತನಿಖೆಯ ವರದಿ ನೀಡಿತ್ತು. ಇದನ್ನೂ ಓದಿ: ಮುಂಬೈ ಏರ್‌ಪೋರ್ಟ್‌ನಲ್ಲಿ ಆಕಾಸ ಏರ್ ವಿಮಾನಕ್ಕೆ ಟ್ರಕ್‌ ಡಿಕ್ಕಿ

  • ಯಾರ ಪ್ರಭಾವಕ್ಕೂ ಒಳಗಾಗದಿದ್ರೆ ಫೋನ್‌ ಹ್ಯಾಕಿಂಗ್‌ ಪ್ರಯತ್ನ ಯಾಕೆ? – ಯಾವುದಕ್ಕೂ ಹೆದರಲ್ಲ: ರಾಗಾ ತಿರುಗೇಟು

    ಯಾರ ಪ್ರಭಾವಕ್ಕೂ ಒಳಗಾಗದಿದ್ರೆ ಫೋನ್‌ ಹ್ಯಾಕಿಂಗ್‌ ಪ್ರಯತ್ನ ಯಾಕೆ? – ಯಾವುದಕ್ಕೂ ಹೆದರಲ್ಲ: ರಾಗಾ ತಿರುಗೇಟು

    ನವದೆಹಲಿ: ಸರ್ಕಾರ ಯಾರ ಪ್ರಭಾವಕ್ಕೂ ಒಳಗಾಗದಿದ್ರೆ ಫೋನ್‌ ಹ್ಯಾಕಿಂಗ್‌ ಪ್ರಯತ್ನ ಯಾಕೆ? ನಮ್ಮ ಫೋನ್‌ಗಳನ್ನು ಎಷ್ಟು ಬೇಕಾದರೂ ಟ್ಯಾಪ್ (Phone Tapping) ಮಾಡಬಹುದು, ಸರ್ಕಾರದ ಪ್ರಯತ್ನಗಳಿಗೆ ನಾವು ಹೆದರುವುದಿಲ್ಲ ಎಂದು ಸಂಸದ ರಾಹುಲ್ ಗಾಂಧಿ (Rahul Gandhi) ತಿರುಗೇಟು ನೀಡಿದರು.

    ಕೇಂದ್ರ ಸರ್ಕಾರದಿಂದ ವಿಪಕ್ಷ ನಾಯಕರ ಫೋನ್‌ ಕದ್ದಾಲಿಕೆ ಆರೋಪದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ (Union Government) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ಇಂತಹ ನಡೆ ವಿರುದ್ಧ ಬಹಳ ಕಡಿಮೆ ಜನರು ಹೋರಾಡುತ್ತಿದ್ದಾರೆ. ನೀವು ಎಷ್ಟು ಬೇಕಾದರೂ ಟ್ಯಾಪಿಂಗ್ ಮಾಡಬಹುದು, ನಾನು ಹೆದರುವುದಿಲ್ಲ, ಬೇಕಿದ್ದರೆ ನಾನೇ ನಿಮಗೆ ನನ್ನ ಫೋನ್‌ ಕೊಡುತ್ತೇನೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಆಪಲ್‌ನಿಂದ 150 ದೇಶಗಳ ಜನರಿಗೆ ಎಚ್ಚರಿಕೆ ಸಂದೇಶ – ಕದ್ದಾಲಿಕೆ ಆರೋಪಕ್ಕೆ ಕೇಂದ್ರ ಸ್ಪಷ್ಟನೆ

    ಸರ್ಕಾರವು ವಿಚಲಿತ ರಾಜಕೀಯದಲ್ಲಿ ತೊಡಗಿದೆ, ಈಗಿನ ಸರ್ಕಾರದ ಮುಖ್ಯಸ್ಥರು ಮರೆಮಾಚುತ್ತಿದ್ದ ಸತ್ಯ ಪ್ರತಿಪಕ್ಷಗಳಿಗೆ ಗೊತ್ತಾಗಿದೆ. ದೇಶದ ಜನತೆಗೆ ಪ್ರತಿಯೊಂದು ಸತ್ಯವೂ ಅರ್ಥವಾಗುತ್ತಿದೆ. ಸರ್ಕಾರದ ಟ್ಯಾಪಿಂಗ್ ಸಹ ಯಾವುದೇ ವ್ಯತ್ಯಾಸ ತೋರಿಸುತ್ತಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ದೇಶ ಅನುಭವಿಸುತ್ತಿರುವ ನಷ್ಟವನ್ನು ಊಹಿಸಲೂ ಸಾಧ್ಯವಿಲ್ಲ. ಏಕೆಂದರೆ ಸುಳ್ಳು ಕನಸುಗಳೇ ಮಾರಾಟವಾಗುತ್ತಿವೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಮತೀಯ ದ್ವೇಷಕ್ಕೆ ಪ್ರಚೋದನೆ ಆರೋಪ – ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇಸ್‌

    ನಾವು ವಿರೋಧ ಪಕ್ಷದಲ್ಲಿದ್ದು ನಮ್ಮ ಕರ್ತವ್ಯ ಸರಿಯಾಗಿ ನಿರ್ವಹಿಸುತ್ತಿದ್ದೇವೆ. ಅಲ್ಲದೇ ಪ್ರಧಾನಿ ಮೋದಿಯವರ ಆತ್ಮ ಅದಾನಿಯಲ್ಲಿದೆ, ಅಧಿಕಾರ ಬೇರೆಯವರ ಕೈಯಲ್ಲಿದೆ, ಕೃಷಿ ಕ್ಷೇತ್ರ ಅದಾನಿ (Gautam Adani) ಕೈಯಲ್ಲಿದೆ, ಮೂಲಸೌಕರ್ಯ ಅವರ ಕೈಯಲ್ಲಿದೆ. ದೇಶದ ಆಸ್ತಿ ಮಾರಾಟವಾಗುತ್ತಿದೆ. ಇದರಿಂದ ದೇಶದ ಯುವಕರಿಗೆ ತೊಂದರೆಯಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕೇಂದ್ರದಿಂದ ಐಫೋನ್‌ ಕದ್ದಾಲಿಕೆಗೆ ಯತ್ನ – ಎಚ್ಚರಿಕೆ ಸಂದೇಶ ಬಂದಿದ್ದಾಗಿ ಪ್ರತಿಪಕ್ಷ ನಾಯಕರ ಆರೋಪ

    ಈ ಹಿಂದೆ ಪ್ರಧಾನಿ ಮೋದಿ ಸರ್ಕಾರದಲ್ಲಿ ನಂ.1 ಮತ್ತು ಅಮಿತ್ ಶಾ (Amit Shah) 2ನೇ ಸ್ಥಾನದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಈಗ ಚಿತ್ರಣ ಬದಲಾಗಿದೆ, ಸರ್ಕಾರದಲ್ಲಿ ಅದಾನಿ ನಂಬರ್ 1, ಪಿಎಂ ಮೋದಿ 2 ಮತ್ತು ಅಮಿತ್ ಶಾ 3ನೇ ಸ್ಥಾನದಲ್ಲಿದ್ದಾರೆ. ಪ್ರಧಾನಿ ಮೋದಿಯವರಿಗೆ ಯಾರು ಕೆಲಸ ಕೊಡಲು ಹೊರಟಿದ್ದಾರೆ ಎಂಬ ಸತ್ಯ ಸಾರ್ವಜನಿಕರಿಗೆ ಅರ್ಥವಾಗುತ್ತದೆ. ಕೃಷಿ ಕ್ಷೇತ್ರ ಮತ್ತು ಮೂಲಸೌಕರ್ಯಗಳನ್ನು ಸಂಪೂರ್ಣವಾಗಿ ಮಾರಾಟ ಮಾಡಲಾಗಿದೆ, ಸರ್ಕಾರವು ಯಾವುದೇ ಪ್ರಭಾವಕ್ಕೆ ಒಳಗಾಗುವುದಿಲ್ಲ ಎಂದಾದರೆ ಹ್ಯಾಕಿಂಗ್ ಪ್ರಯತ್ನ ಯಾಕೆ ಎಂದು ಪ್ರಶ್ನಿಸಿದರು.

    ಈಗಿನ ಕೇಂದ್ರ ಸರ್ಕಾರ ಸಾಮಾನ್ಯ ಜನರ ಸರ್ಕಾರವಲ್ಲ, ಈ ಸರ್ಕಾರದಲ್ಲಿ ಶ್ರೀಸಾಮಾನ್ಯರ ಕಡೆಗಣನೆ ಮತ್ತು ಶ್ರೀಮಂತರ ಗಣನೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ಸರ್ಕಾರವು ಕೆಲವು ಕೈಗಾರಿಕದ್ಯೊಮಿಗಳ ಮನೆಗಳಿಗೆ ಕೆಲಸ ಮಾಡುತ್ತದೆ. ಈ ಸರ್ಕಾರದ ಅಡಿಯಲ್ಲಿ ಹಣದುಬ್ಬರ ಉತ್ತುಂಗದಲ್ಲಿದೆ, ಜನರ ದೈನಂದಿನ ಅಗತ್ಯಗಳನ್ನು ಪೂರೈಸಲು ಅವರ ಜೇಬಿನಲ್ಲಿ ಹಣವಿಲ್ಲ. ತರಕಾರಿಗಳ ಬೆಲೆ ಗಗನಕ್ಕೇರಿದೆ. ಅಷ್ಟೇ ಅಲ್ಲದೇ ದೇಶೀಯ ರಂಗದಲ್ಲಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಅಸಮಾಧಾನ ಹೊರಹಾಕಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇಂದ್ರದಿಂದ ಐಫೋನ್‌ ಕದ್ದಾಲಿಕೆಗೆ ಯತ್ನ – ಎಚ್ಚರಿಕೆ ಸಂದೇಶ ಬಂದಿದ್ದಾಗಿ ಪ್ರತಿಪಕ್ಷ ನಾಯಕರ ಆರೋಪ

    ಕೇಂದ್ರದಿಂದ ಐಫೋನ್‌ ಕದ್ದಾಲಿಕೆಗೆ ಯತ್ನ – ಎಚ್ಚರಿಕೆ ಸಂದೇಶ ಬಂದಿದ್ದಾಗಿ ಪ್ರತಿಪಕ್ಷ ನಾಯಕರ ಆರೋಪ

    ನವದೆಹಲಿ: ತಮ್ಮ ಫೋನ್‌ಗಳ ಮೇಲೆ ಸರ್ಕಾರಿ ಪ್ರಾಯೋಜಕತ್ವದ ದಾಳಿ ನಡೆಯುತ್ತಿದೆ, ಕೇಂದ್ರದಿಂದ ಫೋನ್‌ ಕದ್ದಾಲಿಕೆ ನಡೆಯುತ್ತಿದೆ ಎಂದು ಪ್ರತಿಪಕ್ಷಗಳ ವಿವಿಧ ನಾಯಕರು ಕೇಂದ್ರ ಸರ್ಕಾರದ (Union Government) ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

    ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ (Mahua Moitra), ಕಾಂಗ್ರೆಸ್ ನಾಯಕ ಶಶಿ ತರೂರ್, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೂ ಶಿವಸೇನಾದ (ಉದ್ಧವ್ ಬಣ) ಪ್ರಿಯಾಂಕಾ ಚತುರ್ವೇದಿ (Priyanka Chaturvedi) ಅವರು ತಮ್ಮ ಐ-ಫೋನ್‌ಗಳ (iPhone) ಮೇಲೆ ಸರ್ಕಾರಿ ಪ್ರಾಯೋಜಿತ ದಾಳಿಕೋರರು ಟಾರ್ಗೆಟ್ ಮಾಡುತ್ತಿರಬಹುದು ಎಂದು ಆಪಲ್ ಕಂಪನಿಯಿಂದ ಫೋನ್ ಹಾಗೂ ಇ-ಮೇಲ್‌ಗಳಿಗೆ (E-mail) ಎಚ್ಚರಿಕೆ ಸಂದೇಶ ಬಂದಿರುವುದಾಗಿ ಹೇಳಿದ್ದಾರೆ.

    ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಅವರ ಕಚೇರಿಯಲ್ಲಿನ ಕೆಲವರಿಗೂ ಈ ಸಂದೇಶ ಬಂದಿದೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸರ್ಕಾರ, ಈ ಸಂದೇಶಗಳ ಬಗ್ಗೆ ಅರಿವಿದೆ. ಐಫೋನ್‌ಗಳಲ್ಲಿ ಬೆದರಿಕೆ ಪತ್ತೆ ಮಾಡುವ ತಂತ್ರಜ್ಞಾನವು ಕೆಲವೊಮ್ಮೆ ಅಸಮಗ್ರ ಹಾಗೂ ಅಪೂರ್ಣವಾಗಿರುತ್ತದೆ ಎಂದು ಹೇಳಿದೆ.

    ಆಪಲ್‌ನಿಂದ ಬಂದ ಸಂದೇಶದಲ್ಲಿ ಏನಿದೆ?
    ನೀವು ಸರ್ಕಾರಿ ಪ್ರಾಯೋಜಿತ ದಾಳಿಕೋರರಿಂದ ಗುರಿಯಾಗುತ್ತಿದ್ದೀರಿ. ಅವರು ನಿಮ್ಮ ಆಪಲ್ ಐಡಿಗೆ (Apple ID) ಸಂಬಂಧಿಸಿದ ಐಫೋನ್‌ಗೆ ದೂರದಿಂದ ಕದ್ದಾಲಿಕೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಪಲ್‌ನ ಸಂದೇಶ ಹೇಳಿದೆ.

    ಈ ದಾಳಿಕೋರರು ನೀವು ಯಾರು ಅಥವಾ ನೀವು ಏನು ಮಾಡುತ್ತೀರಿ ಎಂಬ ಆಧಾರದಲ್ಲಿ ನಿಮ್ಮನ್ನು ವ್ಯಕ್ತಿಗತವಾಗಿ ಟಾರ್ಗೆಟ್ ಮಾಡುತ್ತಿರುವ ಸಾಧ್ಯತೆ ಇದೆ. ಇದರಿಂದ ನಿಮ್ಮ ಸೂಕ್ಷ್ಮ ಡೇಟಾ, ಸಂಹವನಗಳು ಅಥವಾ ಕ್ಯಾಮೆರಾ ಮತ್ತು ಮೈಕ್ರೋಫೋನ್‌ಗಳನ್ನು ಕದಿಯಲು ಅವರಿಗೆ ಸಾಧ್ಯವಾಗಲಿದೆ. ಇದು ಸುಳ್ಳು ಎಚ್ಚರಿಕೆಯಾಗುವ ಸಾಧ್ಯತೆ ಇದ್ದರೂ, ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿ ಎಂದು ಸಂದೇಶದಲ್ಲಿದೆ.

    ಬಿಜೆಪಿ ಪ್ರತಿಕ್ರಿಯೆ ಏನು?
    ತಮ್ಮ ಫೋನ್‌ಗಳನ್ನು ಹ್ಯಾಕ್ ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕರ ವಿರುದ್ಧ ಹರಿಹಾಯ್ದಿರುವ ಬಿಜೆಪಿ ಐಟಿ ಘಟಕದ ಮುಖ್ಯಸ್ಥ ಅಮಿತ್ ಮಾಳವೀಯ, ಆಪಲ್‌ನ ಸ್ಪಷ್ಟೀಕರಣ ಬರುವವರೆಗೂ ಕಾಯುವಂತೆ ಮನವಿ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • BJP ಸಂಸದರಿಗೆ ರಾಗಾ ಫ್ಲೈಯಿಂಗ್ ಕಿಸ್ – ಅದು ಪ್ರೀತಿಯ ಸನ್ನೆ ಎಂದು ಶಿವಸೇನೆ ಸಂಸದೆ ಸಮರ್ಥನೆ

    BJP ಸಂಸದರಿಗೆ ರಾಗಾ ಫ್ಲೈಯಿಂಗ್ ಕಿಸ್ – ಅದು ಪ್ರೀತಿಯ ಸನ್ನೆ ಎಂದು ಶಿವಸೇನೆ ಸಂಸದೆ ಸಮರ್ಥನೆ

    ನವದೆಹಲಿ: ಸಂಸತ್‌ ಸದಸ್ಯತ್ವ ಅನರ್ಹತೆ ರದ್ದಾದ ಬಳಿಕ ನಿನ್ನೆ ಮೊದಲ ಭಾಷಣ ಮಾಡಿದ ರಾಹುಲ್‌ ಗಾಂಧಿ (Rahul Gandhi) ಮೋದಿ ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಪರ ಮಾತನಾಡಿದರು. ರಾಹುಲ್ ಗಾಂಧಿ ಲೋಕಸಭೆಯಿಂದ ನಿರ್ಗಮಿಸುವ ವೇಳೆ ಬಿಜೆಪಿ ಸಂಸದರತ್ತ ಫ್ಲೈಯಿಂಗ್ ಕಿಸ್ ನೀಡಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ. ಆದ್ರೆ ಇದು ಪ್ರೀತಿ ಮತ್ತು ಅಕ್ಕರೆಯ ಸನ್ನೆ ಅಷ್ಟೇ ಎಂದು ಎಐಸಿಸಿ ಮಾಜಿ ವಕ್ತಾರೆ ಹಾಗೂ ಹಾಲಿ ಶಿವಸೇನೆ ಸಂಸದೆ (ಉದ್ಧವ್‌ ಠಾಕ್ರೆ ಬಣ) ಪ್ರಿಯಾಂಕಾ ಚತುರ್ವೇದಿ (Priyanka Chaturvedi) ಸಮರ್ಥನೆ ಮಾಡಿಕೊಂಡಿದ್ದಾರೆ.

    ಈ ಕುರಿತು ಇಂದು ಸದನದ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್‌ ಮಾತನಾಡುವಾಗ ಬಿಜೆಪಿ ಸಂಸದರು ಅಡ್ಡಿಪಡಿಸುತ್ತಿದ್ದರು. ಆಗ ರಾಹುಲ್‌ ಗಾಂಧಿ ಮಾಡಿದ್ದು ಪ್ರೀತಿ ವಾತ್ಸಲ್ಯದ ಸೂಚಕವಾಗಿತ್ತು. ಅದರಿಂದ ಏನು ಸಮಸ್ಯೆ? ಅದನ್ನು ಅರ್ಥ ಮಾಡಿಕೊಳ್ಳಲಾರದಷ್ಟು ವಿಫಲರಾಗಿ ಏಕೆ ದ್ವೇಷ ಸಾಧಿಸುತ್ತಿದ್ದಾರೆ? ಎಂದು ಚತುರ್ವೇದಿ ಪ್ರಶ್ನೆ ಮಾಡಿದ್ದಾರೆ.

    ರಾಹುಲ್‌ ಗಾಂಧಿ ಸಂಸದೀಯ ಸ್ಥಾನದಿಂದ ಅನರ್ಹಗೊಂಡ ಬಳಿಕ ಕಾನೂನು ಹೋರಾಟದಿಂದ ಜಯ ಸಾಧಿಸಿ ಮತ್ತೆ ಅರ್ಹತೆ ಪಡೆದುಕೊಂಡಿದ್ದಾರೆ. ಆದರೂ ಅವರು ದ್ವೇಷದ ಮಾತುಗಳನ್ನಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಚಂದ್ರನ ಮೇಲ್ಮೈ ಸಮೀಪಕ್ಕೆ Chandrayaan-3 ಬಾಹ್ಯಾಕಾಶ ನೌಕೆ – ಇಷ್ಟು ದೂರ ಹೋದ್ರೆ ಚಂದ್ರನ ಮೇಲೆ ಲ್ಯಾಂಡಿಂಗ್‌ ಪಕ್ಕಾ!

    ಸದನದಲ್ಲಿ ಏನಾಯಿತು?
    ಸಂಸತ್ ಸದಸ್ಯ ಸ್ಥಾನ ಮರುಸ್ಥಾಪನೆ ಬಳಿಕ ಕಲಾಪದಲ್ಲಿ ಭಾಗಿಯಾದ ರಾಹುಲ್ ಗಾಂಧಿ ಮೊದಲ ಬಾರಿ ಮಾತನಾಡಿದರು. ಸರ್ಕಾರದ ವಿರುದ್ಧ ಮಂಡಿಸಿದ್ದ ಅವಿಶ್ವಾಸ ನಿರ್ಣಯದ ಪರ ಸುದೀರ್ಘವಾಗಿ ಮಾತನಾಡಿದರು. ರಾಹುಲ್ ಗಾಂಧಿ ಭಾಷಣದ ಬಳಿಕ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಾತು ಆರಂಭಿಸಿದರು. ಸ್ಮೃತಿ ಇರಾನಿ (Smriti Irani) ಮಾತು ಆರಂಭಿಸುತ್ತಿದ್ದಂತೆ ಲೋಕಸಭೆಯಿಂದ ನಿರ್ಗಮಿಸಲು ಮುಂದಾದ ರಾಹುಲ್ ಗಾಂಧಿ, ಹಾದಿ ಮಧ್ಯೆ ಕೆಲವು ಫೈಲ್ ಗಳನ್ನು ಕೆಳಗೆ ಬೀಳಿಸಿಕೊಂಡರು. ಈ ವೇಳೆ ಅದನ್ನು ಎತ್ತಿಕೊಳ್ಳಲು ಮುಂದಾದಾಗ ಅಲ್ಲೇ ಕೂತಿದ್ದ ಬಿಜೆಪಿ ಸಂಸದರು, ರಾಹುಲ್ ಗಾಂಧಿ ನೋಡಿ ನಗಲು ಆರಂಭಿಸಿದ್ದರು. ಇದನ್ನು ಗಮನಿಸಿದ ರಾಗಾ, ಅವರಿಗೆ ಫ್ಲೈಯಿಂಗ್ ಕಿಸ್ ನೀಡಿ ಮುಂದೆ ನಡೆದರು ಎನ್ನಲಾಗಿದೆ. ಇದನ್ನೂ ಓದಿ: ಬಿಜೆಪಿ ಸಂಸದರಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

    ಈ ಯಾವ ದೃಶ್ಯಗಳು ಲೋಕಸಭೆಯಲ್ಲಿರುವ ಮುಖ್ಯ ಕ್ಯಾಮೆರಾದಲ್ಲಿ ಸೆರೆಯಾಗಿಲ್ಲ. ಆದ್ರೆ ಪ್ರತ್ಯಕ್ಷದರ್ಶಿ ಸಂಸದರು ಈ ಬಗ್ಗೆ ಮಾಹಿತಿ ನೀಡಿದ್ದು, ಬಿಜೆಪಿ ಮಹಿಳಾ ಸಂಸದರು ರಾಹುಲ್ ಗಾಂಧಿ ನಡೆ ಅನುಚಿತವಾಗಿತ್ತು ಎಂದು ಆರೋಪಿಸಿದ್ದಾರೆ. ಇದು ಅಶ್ಲೀಲ ಮತ್ತು ಸ್ತ್ರೀದ್ವೇಷದ ಪುರುಷ ಮಾತ್ರ ಸಂಸತ್ತಿನಲ್ಲಿ ಮಹಿಳಾ ಸಂಸದರಿಗೆ ಫ್ಲೈಯಿಂಗ್ ಕಿಸ್ ನೀಡಲು ಸಾಧ್ಯ. ಇಂತಹ ಉದಾಹರಣೆ ಹಿಂದೆಂದೂ ಕಂಡಿರಲಿಲ್ಲ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋಲ್ಕತ್ತಾ ಫ್ಲೈಓವರ್ ಕುಸಿದಾಗ ಬ್ಯಾನರ್ಜಿಯನ್ನು ನಿಂದಿಸಿದ್ದ ನೀವು ಇದಕ್ಕೆ ಏನ್ ಹೇಳ್ತೀರಿ: ಮೋದಿ ವಿರುದ್ಧ ವಿಪಕ್ಷಗಳು ಕಿಡಿ

    ಕೋಲ್ಕತ್ತಾ ಫ್ಲೈಓವರ್ ಕುಸಿದಾಗ ಬ್ಯಾನರ್ಜಿಯನ್ನು ನಿಂದಿಸಿದ್ದ ನೀವು ಇದಕ್ಕೆ ಏನ್ ಹೇಳ್ತೀರಿ: ಮೋದಿ ವಿರುದ್ಧ ವಿಪಕ್ಷಗಳು ಕಿಡಿ

    ಗಾಂಧಿನಗರ: ಗುಜರಾತಿನ ಮೋರ್ಬಿ (Gujarat Morbi Bridge) ಜಿಲ್ಲೆಯಲ್ಲಿ ಸಂಭವಿಸಿದ ತೂಗು ಸೇತುವೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 141ಕ್ಕೆ ಏರಿಕೆಯಾಗಿದೆ. ಇದರೊಂದಿಗೆ 100 ಮಂದಿ ನಾಪತ್ತೆಯಾಗಿದ್ದು, ತೀವ್ರ ಶೋಧಕಾರ್ಯ ನಡೆಯುತ್ತಿದೆ. ಈ ವೇಳೆ ಪ್ರಧಾನಿ ಮೋದಿ (Narendra Modi) ತವರಿನಲ್ಲಿ ನಡೆದ ಭೀಕರ ದುರಂತವನ್ನು 2016ರ ಮಧ್ಯ ಕೋಲ್ಕತ್ತಾದಲ್ಲಿ ನಡೆದ ಮೇಲ್ಸೇತುವೆ (Flyover) ಕುಸಿತಕ್ಕೆ ಹೋಲಿಸಿ ಟೀಕೆ ಮಾಡಲಾಗುತ್ತಿದೆ.

    ಈ ಕುರಿತು ಟ್ವಿಟ್ಟರ್‌ನಲ್ಲಿ ಟ್ರೆಂಡ್ ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.

    2016ರಲ್ಲಿ ಪಶ್ಚಿಮ ಬಂಗಾಳದ ಚುನಾವಣಾ (West Bengal Election) ಸಂದರ್ಭದಲ್ಲಿ ಕೋಲ್ಕತ್ತಾದ ವಿವೇಕಾನಂದ ನಗರದ ಮೇಲ್ಸೇತುವೆ ಕುಸಿತವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಮಮತಾ ಬ್ಯಾನರ್ಜಿ ಅವರು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೇ ಸೇತುವೆ ಕುಸಿದ ಬಳಿಕ ಇದು ದೇವರ ಕಾರ್ಯ. ಇದು ಮೋಸದ ಕೃತ್ಯ, ವಂಚನೆಯ ಪರಿಣಾಮ, ಚುನಾವಣೆಯ ಸಮಯದಲ್ಲೇ ಕುಸಿದು ಬಿದ್ದಿದೆ. ನೀವು ಯಾವ ರೀ ಸರ್ಕಾರ ನಡೆಸುತ್ತೀದ್ದೀರಿ. ಇದು ನಿಜವಾಗಿಯೂ ಜನರಿಗೆ ದೇವರು ಕೊಟ್ಟ ಸಂದೇಶವಾಗಿದೆ ಎಂದು ಮೋದಿ ಅವರು ಮಮತಾ ಬ್ಯಾನರ್ಜಿ ಅವರನ್ನ ಟೀಕಿಸಿದ್ದರು.

    ಅವರು ಎಡಪಂಥೀಯರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಎಡ-ಬಲ ಹೇಗಾದರೂ ಇರಲಿ. ಮೊದಲು ಸಾಯುತ್ತಿರುವವರ ಬಗ್ಗೆ ಯೋಚಿಸಿ, ಸತ್ತವರನ್ನು ಗೌರವಿಸಿ ಎಂದು ಮೋದಿ ಕಿಡಿಕಾರಿದ್ದರು. ಈ ಮಾಹಿತಿಯನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಪ್ರತಿಪಕ್ಷದ ನಾಯಕರು ಪ್ರಧಾನಿ ಮೋದಿ ಅವರೇ ಇಂದು ನಿಮ್ಮ ತವರಿನಲ್ಲೇ ನಡೆದಿರುವ ಘಟನೆಗೆ ಏನು ಹೇಳುತ್ತೀರಿ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ವಿಜಯಪುರ ನಗರಪಾಲಿಕೆ ಚುನಾವಣೆ – ಬಿಜೆಪಿಗೆ ಸಿಂಹಪಾಲು

    ಟಿಎಂಸಿ (TMC) ನಾಯಕ ಮತ್ತು ರಾಜ್ಯಸಭಾ ಸಂಸದ ಸುಖೇಂದು ಶೇಖರ್ ರಾಯ್ ಟ್ವೀಟ್ (Twitter) ಮಾಡಿದ್ದು, ಕೋಲ್ಕತ್ತಾ ಫ್ಲೈಓವರ್ ಕುಸಿದಾಗ ಮಮತಾ ಬ್ಯಾನರ್ಜಿ (Mamata Banerjee) ಅವರನ್ನು ನಿಂದಿಸಿದ್ದೀರಿ. ಈಗ ಗುಜರಾತ್‌ನಲ್ಲಿ ಹೊಸದಾಗಿ ನವೀಕರಿಸಿದ ಸೇತುವೆ ಕುಸಿತು 141 ಜನ ಸಾವನ್ನಪ್ಪಿದ್ದಾರೆ. ಮೋದಿ ಜೀ ಅವರೇ ಸತ್ತವರ ಬಗ್ಗೆ ಕೆಲವು ಹನಿ ಕಣ್ಣೀರು ಇರಲಿ ಎಂದು ಮೋದಿ ವಿರುದ್ಧ ಕಿಡಿಕಾರಿದ್ದಾರೆ.

    ಇನ್ನೂ 2016ರ ಘಟನೆಯನ್ನು ಟ್ವೀಟ್‌ನಲ್ಲಿ ಹಂಚಿಕೊಂಡಿರುವ ಶಿವಸೇನಾ (Shivsena) ಸಂಸದೆ ಪ್ರಿಯಾಂಕಾ ಚತುರ್ವೇದಿ (Priyanka Chaturvedi), ಪಶ್ಚಿಮ ಬಂಗಾಳದಲ್ಲಿ ಸೇತುವೆ ಕುಸಿದಾಗ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇದು ದೇವರ ಕಾರ್ಯ, ವಂಚನೆಯ ಕೃತ್ಯ ಎಂದು ಹೇಳಿದ್ದನ್ನು ಗುಜರಾತಿನ ಘಟನೆ ನೆನಪಿಸುತ್ತದೆ ಎಂದು ಬರೆದು, 2016 ಘಟನೆಯ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 15-20 ಹುಡುಗರು ಉದ್ದೇಶಪೂರ್ವಕವಾಗಿ ಮೋರ್ಬಿ ಸೇತುವೆಯನ್ನು ಅಲುಗಾಡಿಸಿದ್ದೆ ದುರಂತಕ್ಕೆ ಕಾರಣ: ಪ್ರತ್ಯಕ್ಷದರ್ಶಿ

    2016ರ ಮಾರ್ಚ್ 31ರಂದು ಮಧ್ಯ ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 30 ಜನರು ಸಾವನ್ನಪ್ಪಿದ್ದರು. ಚುನಾವಣಾ ಸಂದರ್ಭದಲ್ಲಿ ನಡೆದಿದ್ದರಿಂದ ಪ್ರತಿ ಪಕ್ಷಗಳು ಇದನ್ನು ರಾಜಕೀಯವಾಗಿ ಬಳಸಿಕೊಂಡಿದ್ದವು.

    Live Tv
    [brid partner=56869869 player=32851 video=960834 autoplay=true]

  • ಯಾವುದೇ ಧರ್ಮವೂ ಕೆಲವರ ಮಾತಿನಿಂದ ನಂಬಿಕೆ ಕೆಡಿಸುವಷ್ಟು ದುರ್ಬಲವಲ್ಲ: ಪ್ರಿಯಾಂಕ ಚತುರ್ವೇದಿ

    ಯಾವುದೇ ಧರ್ಮವೂ ಕೆಲವರ ಮಾತಿನಿಂದ ನಂಬಿಕೆ ಕೆಡಿಸುವಷ್ಟು ದುರ್ಬಲವಲ್ಲ: ಪ್ರಿಯಾಂಕ ಚತುರ್ವೇದಿ

    ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ಬಿಜೆಪಿ ವಕ್ತಾರೆ ನೀಡಿದ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಶಿವಸೇನಾ ಸಂಸದೆ ಪ್ರಿಯಾಂಕ ಚತುರ್ವೇದಿ, ಇಸ್ಲಾಮಿಕ್ ಭಯೋತ್ಪಾದಕ ಗುಂಪುಗಳ ಬೆದರಿಕೆಗಳನ್ನು ನಿಸ್ಸಂದಿಗ್ಧವಾಗಿ ಖಂಡಿಸಬೇಕು ಎಂದು ಕರೆ ನೀಡಿದ್ದಾರೆ.

    ಧಾರ್ಮಿಕ ಭಾವನೆಗಳ ಮೇಲಿನ ಗೌರವ ಮತ್ತು ಅದರ ಆಧಾರದ ಮೇಲೆ ಬೆದರಿಕೆಯೊಡ್ಡುತ್ತಿರುವುದರ ನಡುವಿನ ವ್ಯತ್ಯಾಸವನ್ನು ಒತ್ತಿಹೇಳಿದ ಚತುರ್ವೇದಿ, ಯಾವುದೇ ಧರ್ಮವು ಕೆಲವೇ ಕೆಲವರ ಮಾತುಗಳಿಂದ ಅವರ ನಂಬಿಕೆ ಕೆಡಿಸುವಷ್ಟು ದುರ್ಬಲವಾಗಿರುವುದಿಲ್ಲ. ಹಾಗಾಗಿ ಅಲ್-ಖೈದಾದಂತಹ ಇಸ್ಲಾಮಿಕ್ ಭಯೋತ್ಪಾದಕ ಗುಂಪುಗಳ ಬೆದರಿಕೆಗಳನ್ನು ಮಧ್ಯಪ್ರಾಚ್ಯ ರಾಷ್ಟ್ರಗಳು ನಿಸ್ಸಂದಿಗ್ಧವಾಗಿ ಖಂಡಿಸಬೇಕು ಎಂದು ಸಲಹೆ ನೀಡಿದ್ದಾರೆ.

    ಧಾರ್ಮಿಕ ಭಾವನೆಗಳನ್ನು ಗೌರವಿಸುವುದು ಒಂದು ಬಗೆ, ಅದರ ಆಧಾರದ ಮೇಲೆಯೇ ಬೆದರಿಕೆಗಳನ್ನು ನೀಡುವುದು ಇನ್ನೊಂದು ಬಗೆ. ಆದರೆ ಕೆಲವರ ಮಾತುಗಳು ಧರ್ಮದ ಮೇಲಿನ ನಂಬಿಕೆಯನ್ನೇ ಕೆಡಿಸಬಹುದು ಎನ್ನುವಷ್ಟು ಯಾವುದೇ ಧರ್ಮವೂ ದುರ್ಬಲವಾಗಿಲ್ಲ ಎಂದು ಅವರು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಮುಂಬೈ ಪೊಲೀಸರಿಂದ ಸಮನ್ಸ್

    ಭಯೋತ್ಪಾದಕ ಸಂಘಟನೆ ಅಲ್-ಖೈದಾ ಗುಜರಾತ್, ಉತ್ತರ ಪ್ರದೇಶ, ಮುಂಬೈ ಮತ್ತು ದೆಹಲಿಯಲ್ಲಿ ಆತ್ಮಾಹುತಿ ದಾಳಿ ನಡೆಸುವುದಾಗಿ ಬೆದರಿಕೆ ಪತ್ರವನ್ನು ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ. ನಮ್ಮ ಪ್ರವಾದಿಯ ಘನತೆಗಾಗಿ ಹೋರಾಡಿ ಎಂದು ಪತ್ರದಲ್ಲಿ ಬರೆದಿದ್ದಾರೆ. ಅಲ್ ಖೈದಾ ಅಂಗಸಂಸ್ಥೆಯು ಕೇಸರಿ ಭಯೋತ್ಪಾದಕರು ಈಗ ದೆಹಲಿ, ಮುಂಬೈ, ಉತ್ತರಪ್ರದೇಶ ಹಾಗೂ ಗುಜರಾತ್‌ನಲ್ಲಿ ತಮ್ಮ ಅಂತ್ಯಕ್ಕಾಗಿ ಕಾಯಬೇಕು ಎಂದೂ ಎಚ್ಚರಿಸಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

    ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಪತ್ರವನ್ನು ಭದ್ರತಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಯಾರು ಅಪ್‌ಲೋಡ್ ಮಾಡಿದ್ದಾರೆ ಎಂಬುದನ್ನು ಪತ್ತೆ ಹಚ್ಚಲು ತನಿಖಾದಳ ಕಾರ್ಯೋನ್ಮುಖವಾಗಿವೆ. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‍ ಕುರಿತು ಆಕ್ಷೇಪಾರ್ಹ ಹೇಳಿಕೆ – ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅಮಾನತು

    ಈಗ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಿ, ವಿಶ್ವದಾದ್ಯಂತ ಅನೇಕ ಮುಸ್ಲಿಮರ ಹೃದಯಗಳು ರಕ್ತಸಿಕ್ತಗೊಂಡಿದ್ದು, ಪ್ರತಿಕಾರದ ಜ್ವಾಲೆಯಿಂದ ಉರಿಯುತ್ತಿವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ನಮ್ಮ ಪ್ರವಾದಿಗೆ ಅವಮಾನಿಸಿರುವವರನ್ನು ನಾವು ಕೊಲ್ಲುತ್ತೇವೆ. ಅವರನ್ನು ಸ್ಫೋಟಿಸಲು ನಮ್ಮ ಮಕ್ಕಳ ದೇಹದೊಂದಿಗೆ ಸ್ಫೋಟಕಗಳನ್ನು ಬಂಧಿಸಿಡುತ್ತೇವೆ. ಇದರಲ್ಲಿ ಯಾವುದೇ ಕ್ಷಮಾದಾನವಿಲ್ಲ ಎಂದು ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದೆ.

  • ಹಿಜಬ್‌ ವಿವಾದ – ಅಪ್ರಾಪ್ತ ಬಾಲಕಿಯರ ವೈಯಕ್ತಿಕ ವಿವರ ಟ್ವೀಟ್‌ ಮಾಡ್ತಿದೆ ಬಿಜೆಪಿ: ಶಿವಸೇನಾ ಸಂಸದೆ ತರಾಟೆ

    ಹಿಜಬ್‌ ವಿವಾದ – ಅಪ್ರಾಪ್ತ ಬಾಲಕಿಯರ ವೈಯಕ್ತಿಕ ವಿವರ ಟ್ವೀಟ್‌ ಮಾಡ್ತಿದೆ ಬಿಜೆಪಿ: ಶಿವಸೇನಾ ಸಂಸದೆ ತರಾಟೆ

    ನವದೆಹಲಿ: ಹಿಜಬ್‌ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಕೆಯಾಗಿರುವ ಅರ್ಜಿಗಳ ಅರ್ಜಿದಾರರ ವೈಯಕ್ತಿಕ ವಿವರಗಳನ್ನು ಬಿಜೆಪಿ ಟ್ವೀಟ್‌ ಮೂಲಕ ಬಹಿರಂಗಪಡಿಸುತ್ತಿದೆ ಎಂದು ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ತರಾಟೆಗೆ ತೆಗೆದುಕೊಂಡಿದ್ದಾರೆ.

    ನಾಚಿಕೆಯಿಲ್ಲದ ಕರ್ನಾಟಕ ಬಿಜೆಪಿ ಘಟಕವು ಪ್ರತಿಪಕ್ಷಗಳ ಮೇಲೆ ದಾಳಿ ಮಾಡುವುದಕ್ಕಾಗಿ ಅಪ್ರಾಪ್ತ ಬಾಲಕಿಯರ ವಿಳಾಸಗಳನ್ನು ಟ್ವೀಟ್‌ ಮಾಡುತ್ತಿದೆ. ಇದು ಎಷ್ಟು ಸಂವೇದನಾಹೀನ ನಡೆ ಎಂಬುದು ನಿಮಗೆ ತಿಳಿದಿದೆಯೇ ಎಂದು ಪ್ರಿಯಾಂಕಾ ಟ್ವೀಟ್‌ ಮಾಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಹಿಜಬ್ ಹೈಡ್ರಾಮಾ ನೋಡಿ ಕೇಸರಿ ಶಾಲು ತೆಗೆದ ವಿದ್ಯಾರ್ಥಿ

    ಕರ್ನಾಟಕದ ಡಿಜಿಪಿ ಮತ್ತು ಭಾರತದ ಟ್ವಿಟ್ಟರ್‌ ಶಾಖೆ, ಬಿಜೆಪಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

    ಕರ್ನಾಟಕ ಬಿಜೆಪಿ ಘಟಕವು ಹಿಜಬ್‌ ವಿಚಾರವಾಗಿ ಹೈಕೋರ್ಟ್‌ ಮೆಟ್ಟಿಲೇರಿರುವ ಅರ್ಜಿದಾರರ ಹೆಸರು ಮತ್ತು ಅವರ ವೈಯಕ್ತಿಕ ವಿವರಗಳನ್ನು ಟ್ವೀಟ್‌ ಮಾಡಿತ್ತು. ರಾಜಕೀಯದಲ್ಲಿ ಪ್ರಸ್ತುತವಾಗಿರಲು ಕಾಂಗ್ರೆಸ್‌ ಅಪ್ರಾಪ್ತ ಬಾಲಕಿಯರನ್ನು ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ಇದನ್ನೂ ಓದಿ: ಹಿಜಬ್ ವಿವಾದದ ನಡುವೆಯೇ ಮಾದರಿಯಾದ ಮುಸ್ಲಿಂ ಶಿಕ್ಷಣ ಸಂಸ್ಥೆ

  • ಕಾಂಗ್ರೆಸ್‍ಗೆ ಪ್ರಿಯಾಂಕಾ ಚತುರ್ವೇದಿ ಗುಡ್‍ಬೈ

    ಕಾಂಗ್ರೆಸ್‍ಗೆ ಪ್ರಿಯಾಂಕಾ ಚತುರ್ವೇದಿ ಗುಡ್‍ಬೈ

    ನವದೆಹಲಿ: ಟ್ವೀಟ್ ಮೂಲಕ ಕಾಂಗ್ರೆಸ್ ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ವಕ್ತಾರೆ ಪ್ರಿಯಾಂಕಾ ಚತುರ್ವೇದಿ ಈಗ ಪಕ್ಷವನ್ನೇ ತೊರೆದಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಅವರು, ಕಳೆದ ಮೂರು ದಿನಗಳಿಂದ ಹೋರಾಟ ನಡೆಸಿದ ನನಗೆ ಬೆಂಬಲ ನೀಡಿದವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ರಾಜೀನಾಮೆ ನಿರ್ಧಾರವನ್ನು ನೀವು ಬೆಂಬಲಿಸುತ್ತೀರಿ ಎನ್ನುವ ವಿಶ್ವಾಸವಿದೆ ಎಂದು ಬೆಂಬಲಿಗರಿಗೆ ತಿಳಿಸಿದ್ದಾರೆ. ಇದರ ಜೊತೆಗೆ ಕಾಂಗ್ರೆಸ್‍ನಲ್ಲಿ ಕಳೆದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

    ಭಾರವಾದ ಮನಸ್ಸಿನಿಂದ ರಾಜೀನಾಮೆ ಪತ್ರವನ್ನು ಬರೆಯುತ್ತಿರುವೆ. ಕಾಂಗ್ರೆಸ್ ಸಿದ್ಧಾಂತಗಳಿಂದಾಗಿ ವರ್ಷಗಳ ಹಿಂದೆ ಮುಂಬೈನ ಯೂತ್ ಕಾಂಗ್ರೆಸ್‍ಗೆ ಸೇರಿಕೊಂಡಿದ್ದೆ. ಈ ಹತ್ತು ವರ್ಷಗಳಲ್ಲಿ ಪಕ್ಷವು ನನಗೆ ವಿವಿಧ ಅವಕಾಶ, ಸ್ಥಾನಮಾನ, ಜವಾಬ್ದಾರಿ ನೀಡಿ ರಾಜಕೀಯವಾಗಿ, ಸಾಮಾಜಿಕವಾಗಿ ಬೆಳೆಸಿದೆ. ನನಗೆ ನೀಡಿದ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸಿದ್ದೇನೆ. ಇದೂವರೆಗೂ ನನಗೆ ಬಂದ ಬೆದರಿಕೆ, ನಿಂದನೆ ಬಗ್ಗೆ ಹೇಳಿಕೊಂಡಿರಲಿಲ್ಲ. ನನ್ನ ಪರಿವಾರ ಹಾಗೂ ಮಕ್ಕಳು ಪಕ್ಷಕ್ಕಾಗಿ ಶ್ರಮಿಸಿದ್ದಾರೆ ಎಂದು ತಿಳಿಸಿದ್ದಾರೆ.

    ತಮ್ಮ ಜೊತೆಗೆ ಅನುಚಿತವಾಗಿ ವರ್ತಿಸಿದ್ದ ಪಕ್ಷದ ಕೆಲವು ಮುಖಂಡರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿರುವುದು ಪ್ರಿಯಾಂಕಾ ಚತುರ್ವೇದಿ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಕುರಿತು ಟ್ವೀಟ್ ಮಾಡಿದ್ದ ಅವರು, “ಪಕ್ಷಕ್ಕೆ ಬೆವರು ಹಾಗೂ ರಕ್ತ ಹರಿಸಿದವರಿಗಿಂತಲೂ ಕಾಂಗ್ರೆಸ್‍ನಲ್ಲಿ ಕೊಳಕು ಗೂಂಡಾಗಳು ಮನ್ನಣೆ ಪಡೆದುಕೊಳ್ಳುತ್ತಿರುವುದು ತೀವ್ರ ದುಃಖಕರ ಸಂಗತಿ” ಎಂದಿದ್ದರು.

    ಆಗಿದ್ದೇನು?:
    ಉತ್ತರ ಪ್ರದೇಶದಲ್ಲಿ ಪಕ್ಷದ ಕೆಲವು ಮುಖಂಡರು ನನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಪ್ರಿಯಾಂಕಾ ಚತುರ್ವೇದಿ ಹೈಕಮಾಂಡ್‍ಗೆ ದೂರು ನೀಡಿದ್ದರು. ಇದನ್ನು ಆಲಿಸಿ ಹೈಕಮಾಂಡ್ ಅನುಚಿತವಾಗಿ ವರ್ತಿಸಿದ್ದರ ಮುಖಂಡರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು. ಆದರೆ ಕೆಲವು ದಿನಗಳ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರ ಮಧ್ಯಪ್ರವೇಶದಿಂದಾಗಿ ಮತ್ತೆ ಆ ಮುಖಂಡರನ್ನು ಪಕ್ಷಕ್ಕೆ ಸೇರಿಸಲಾಗಿತ್ತು. ಇದರಿಂದಾಗಿ ಪ್ರಿಯಾಂಕಾ ಚತುರ್ವೇದಿ ಅವರು ನಾಯಕರ ವಿರುದ್ಧವೇ ಗುಡುಗಿದ್ದರು.

    ಟಿಕೆಟ್ ಕೈ ತಪ್ಪಿತ್ತು:
    ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಚತುರ್ವೇದಿ ಚುನಾವಣಾ ಕಣಕ್ಕೆ ಇಳಿಯಲು ಇಚ್ಛೆ ವ್ಯಕ್ತಪಡಿಸಿದ್ದರು. ಆದರೆ ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾದ ನಟಿ ಉರ್ಮಿಳಾ ಮಂತೋಡ್ಕರ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಈ ವಿಚಾರವಾಗಿಯೂ ಪ್ರಿಯಾಂಕಾ ಚತುರ್ವೇದಿ ಅವರು ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

  • ಪಕ್ಷದ ವಕ್ತಾರರಾಗಲು ಬಯಸಿದ್ದ ಅಭ್ಯರ್ಥಿಗಳಿಗೆ ಸರ್ಪ್ರೈಸ್ ಕೊಟ್ಟ ಯುಪಿ ಕಾಂಗ್ರೆಸ್!

    ಪಕ್ಷದ ವಕ್ತಾರರಾಗಲು ಬಯಸಿದ್ದ ಅಭ್ಯರ್ಥಿಗಳಿಗೆ ಸರ್ಪ್ರೈಸ್ ಕೊಟ್ಟ ಯುಪಿ ಕಾಂಗ್ರೆಸ್!

    ಲಕ್ನೋ: 2014ರ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಹೀನಾಯವಾಗಿ ಸೋತಿದ್ದ ಕಾಂಗ್ರೆಸ್ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಸಿದ್ಧತೆ ನಡೆಸಿಕೊಳ್ಳುತ್ತಿದ್ದು ಈಗಿನಿಂದಲೇ ಕಾರ್ಯತಂತ್ರ ನಡೆಸುತ್ತಿದೆ. ಇದಕ್ಕೆ ಪೂರಕ ಎಂಬಂತೆ ಉತ್ತರ ಪ್ರದೇಶ್ ಕಾಂಗ್ರೆಸ್ ಕಮೀಟಿ(ಯುಪಿಸಿಸಿ) ವಕ್ತಾರರ ಹುದ್ದೆಯನ್ನು ಬಯಸುವ ಮಂದಿಗೆ ದಿಢೀರ್ ಆಗಿ ಪರೀಕ್ಷೆ ನಡೆಸಿ ಅವರ ರಾಜಕೀಯ ಜ್ಞಾನವನ್ನು ಪತ್ತೆ ಹಚ್ಚಿದೆ.

    ಗುರುವಾರ ನನ್ನ ರಕ್ತ, ಡಿಎನ್‍ಎಯಲ್ಲಿ ಕಾಂಗ್ರೆಸ್ ಇದೆ ಎಂದು ಹೇಳುತ್ತಿದ್ದವರು ಸೇರಿ ಒಟ್ಟು 70 ಮಂದಿ ಸ್ಥಳೀಯ ನಾಯಕರಿಗೆ ಪಕ್ಷದ ರಾಷ್ಟ್ರೀಯ ವಕ್ತಾರೆ ಪ್ರಿಯಾಂಕಾ ಚತುರ್ವೇದಿ ಮತ್ತು ರಾಷ್ಟ್ರಿಯ ಮಾಧ್ಯಮ ಸಂಯೋಜಕ ರಾಹುಲ್ ಗುಪ್ತಾ ಅವರ ಉಪಸ್ಥಿತಿಯಲ್ಲಿ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆ ನಡೆಸುವ ಕುರಿತು ಯಾವುದೇ ಪೂರ್ವ ಮಾಹಿತಿಯನ್ನು ನೀಡಿದ ನಾಯಕರು ಆಶ್ಚರ್ಯಕರವಾಗಿ 14 ಪ್ರಶ್ನೆಗಳನ್ನು ನೀಡಿ ಪರೀಕ್ಷೆಯನ್ನು ನೀಡಿದ್ದಾರೆ.

    ಪ್ರಮುಖವಾಗಿ ಪರೀಕ್ಷೆಯಲ್ಲಿ ಮೋದಿ ಸರ್ಕಾರದ ವೈಫಲ್ಯಗಳು ಯಾವುವು? ಮನಮೋಹನ್ ಸಿಂಗ್ ಸರ್ಕಾರದ ಸಾಧನೆಗಳು ಯಾವುವು? ಉತ್ತರ ಪ್ರದೇಶ ರಾಜ್ಯದಲ್ಲಿ ಎಷ್ಟು ಲೋಕಸಭಾ ಕ್ಷೇತ್ರಗಳಿದೆ? ಅಲ್ಲದೇ ಎಷ್ಟು ವಿಭಾಗಗಳಾಗಿ ರಾಜ್ಯವನ್ನು ವಿಂಗಡಿಸಲಾಗಿತ್ತು ಎಂಬ ಪ್ರಶ್ನೆಗಳನ್ನು ನೀಡಲಾಗಿದೆ.

    ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಯುವ ನಾಯಕರು ಹಾಗೂ ಮಹಿಳೆಯರಿಗೆ ಹೆಚ್ಚಿನ ಅವಕಾಶಗಳನ್ನು ನೀಡುವ ಉದ್ದೇಶ ಹೊಂದಿದ್ದು. ಅಲ್ಲದೇ 2019 ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಪಡೆಯುಲು ಸಿದ್ಧತೆ ನಡೆಸುವ ಕುರಿತ ಪೂರ್ವಭಾವಿಯಾಗಿ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆ ಬಳಿಕ ಮಹತ್ವದ ಬೆಳವಣಿಗೆ ಎಂಬಂತೆ ಪಕ್ಷದ ಹಿರಿಯ ನಾಯಕರು ಸಭೆ ನಡೆಸಿ ಚರ್ಚೆ ನಡೆಸಿದ್ದಾಗಿ ಯುಪಿಸಿಸಿ ಅಧ್ಯಕ್ಷ ರಾಜ್ ಬಬ್ಬರ್ ಹೇಳಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಕ್ಷದ ಪ್ರಿಯಾಂಕಾ ಚತುರ್ವೇದಿ, ಪಕ್ಷದಲ್ಲಿ ಇಂತಹ ಪರೀಕ್ಷೆಗಳು ಹೊಸದೇನು ಅಲ್ಲ. ಈ ಹಿಂದೆಯೂ ಇಂತಹ ಕಾರ್ಯಗಳನ್ನು ಕಾಂಗ್ರೆಸ್ ನಡೆಸಿದೆ. ಈಗ ನಾವು ಉತ್ತರ ಪ್ರದೇಶದಲ್ಲಿಯೂ ಸಹ ನಡೆಸಲಾಗಿದೆ. ಪರೀಕ್ಷೆಯಲ್ಲಿ ಕಠಿಣ ಪ್ರಶ್ನೆಗಳನ್ನು ಕೇಳಲಾಗಿದೆಯೆಂದು ಹೇಳುವುದು ತಪ್ಪು. ವಕ್ತಾರರು ಉತ್ತರಿಸಲು ಸಾಧ್ಯವಾಗುವಂತಹ ಮೂಲಭೂತ ಪ್ರಶ್ನೆಗಳನ್ನು ಮಾತ್ರ ಕೇಳಲಾಗಿದೆ ಎಂದು ತಿಳಿಸಿದರು.

    ಯಾವೆಲ್ಲಾ ಪ್ರಶ್ನೆ ಕೇಳಲಾಗಿತ್ತು?
    – ಉತ್ತರ ಪ್ರದೇಶದಲ್ಲಿ ಎಷ್ಟು ಬ್ಲಾಕ್ ಗಳು ಮತ್ತು ವಲಯಗಳು ಇವೆ?
    – ಲೋಕಸಭಾ ಚುನಾವಣೆಯಲ್ಲಿ ಯುಪಿ ಯಲ್ಲಿ ಎಷ್ಟು ಸ್ಥಾನಗಳನ್ನು ಹೊಂದಿದೆ.
    – 2004 ಚುನಾವಣೆಯಲ್ಲಿ ಕಾಂಗ್ರೆಸ್ ಸರಾಸರಿ ಎಷ್ಟು ಮತ ಪಡೆದಿತ್ತು?
    – ನೀವು ಪಕ್ಷದ ವಕ್ತಾರರಾಗಲು ಏಕೆ ಬಯಸುತ್ತೀರಿ?
    – ಯೋಗಿ ಆದಿತ್ಯನಾಥ ಸರ್ಕಾರದ ವೈಫಲ್ಯಗಳು ಯಾವುವು?
    – ಉತ್ತರ ಪ್ರದೇಶದಲ್ಲಿ ಎಷ್ಟು ವಿಧಾನಸಭಾ ಸ್ಥಾನಗಳಿದೆ?

    ಪಕ್ಷದ ನಾಯಕರಿಗೆ ಕೇವಲ ಪ್ರಶ್ನೆಗಳು ಮಾತ್ರವಲ್ಲದೇ ಸಾಮಾಜಿಕ ಜಾಲತಾಣದ ಕುರಿತು ಮಾಹಿತಿಯನ್ನು ಪಡೆಯಲಾಗಿದ್ದು, ಟ್ವಿಟ್ಟರ್ ಖಾತೆಯನ್ನು ಹೊಂದಿದ್ದರಾ? ಹೊಂದಿಲ್ಲದಿದ್ದರೆ ಬಹುಬೇಗ ಖಾತೆ ತೆರೆಯಲು ಸಲಹೆಯನ್ನು ನೀಡಿದ್ದಾರೆ. ಪರೀಕ್ಷೆಯ ಕುರಿತು ಕೆಲ ಹಿರಿಯ ಮುಖಂಡರು ಪಕ್ಷದ ನಾಯಕರಿಗೆ ಮರು ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದ್ದು. ಶಾಲೆಯ ಪರೀಕ್ಷಾ ವ್ಯವಸ್ಥೆಯ ಅಗತ್ಯತೆ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನು ಕೆಲವೇ ಮಹಿಳಾ ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.

    ಕಳೆದ ಕೆಲ ಹಿಂದೆಯಷ್ಟೇ ಉತ್ತರ ಪ್ರದೇಶ ಕಾಂಗ್ರೆಸ್ ತನ್ನ ಮಾಧ್ಯಮ ವಿಭಾಗ ಮತ್ತು ಅದಕ್ಕೆ ಸಂಬಂಧಿಸಿದ ಮೂರು ವಿಭಾಗವನ್ನು ವಿಸರ್ಜಿಸಿತ್ತು. 2014 ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ 80 ಲೋಕಾಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 22.3% ಮತ ಪಡೆದು ಕೇವಲ 2 ಸ್ಥಾನಗಳನ್ನು ಗೆದ್ದಿದ್ದರೆ. ಬಿಜೆಪಿ 42.6% ಮತ ಪಡೆದು 71 ಸ್ಥಾನ ಪಡೆದಿತ್ತು. ಉಳಿದಂತೆ ಸಮಾಜವಾದಿ ಪಕ್ಷ 2 ಸ್ಥಾನ ಪಡೆದರೆ, ಮತ್ತೊಂದು ಸ್ಥಾನವನ್ನು ಇತರೇ ಅಭ್ಯರ್ಥಿ ಗೆಲುವು ಪಡೆದಿದ್ದರು.