Tag: priyanka thimmesh

  • ನಿಮ್ಮPASSION ಹುಡುಕಲು ವಯಸ್ಸು ಮುಖ್ಯವಲ್ಲ: ಪ್ರಿಯಾಂಕಾ ತಿಮ್ಮೇಶ್

    ನಿಮ್ಮPASSION ಹುಡುಕಲು ವಯಸ್ಸು ಮುಖ್ಯವಲ್ಲ: ಪ್ರಿಯಾಂಕಾ ತಿಮ್ಮೇಶ್

    ಬೆಂಗಳೂರು: ನಟಿ ಪ್ರಿಯಾಂಕಾ ತಿಮ್ಮೇಶ್ ಬಿಗ್‍ಬಾಸ್ ಕಾರ್ಯಕ್ರಮ ಮುಗಿಸುತ್ತಿದ್ದಂತೆ ಸಾಕಷ್ಟು ಸಿನಿಮಾಗಳಲ್ಲಿ ಬ್ಯೂಸಿಯಾಗಿದ್ದಾರೆ. ಆದರೆ ಈ ಮಧ್ಯೆ ಕ್ಯಾಮೆರಾಕ್ಕೆ ಪೋಸ್ ಕೊಡುವ ಮೂಲಕವಾಗಿ ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

    ಹೌದು ಪ್ರಿಯಾಂಕಾ ಬೇಬಿ ಪಿಂಕ್ ಬಟ್ಟೆಯನ್ನು ತೊಟ್ಟು, ಕಿವಿಗೆ ಹೂವಿ ಓಲೆಯನ್ನು ತೊಟ್ಟು ಸಖತ್ ಆಗಿ ಕಾಣಿಸಿಕೊಂಡಿದ್ದಾರೆ. ಬೋಲ್ಡ್ ಆಗಿ ಪೋಸ್ ಕೊಟ್ಟಿರುವ ಫೋಟೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದು, ನಿಮ್ಮ PASSION ಹುಡುಕಲು ವಯಸ್ಸು ಮುಖ್ಯವಲ್ಲ ಬರೆದುಕೊಂಡಿದ್ದಾರೆ. ಪ್ರಿಯಾಂಕಾ ಅವರ ಫೋಟೋಗೆ ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.ಇದನ್ನೂ ಓದಿ: ಮದುವೆ ಬಳಿಕ ಸತ್ಯ ಹೇಳಿದ ಯಾಮಿ ಗೌತಮ್

    ಪ್ರಿಯಾಂಕಾ ಅವರ ಫೋಟೋಗಳಿಗೆ ನೆಟ್ಟಿಗರು ಸುಂದರ, ಕ್ಯೂಟ್, ಹಾಟ್, ನೀವು ಎಂದರೆ ನಮಗೆ ತುಂಬಾ ಇಷ್ಟ ಎಂದು ಕಾಮೆಂಟ್ ಮಾಡುತ್ತಾ ಮೆಟ್ಟುಗೆಯನ್ನು ಸೂಚಿಸುತ್ತಿದ್ದಾರೆ. ಬಿಗ್‍ಬಾಸ್‍ನಿಂದ ಪ್ರಿಯಾಂಕಾ ತಿಮ್ಮೇಶ್‍ಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅವರ ಅಭಿಮಾನಿ ಬಳಗ ಈಗ ಮೊದಲಿಗಿಂತಲೂ ಹಿರಿದಾಗಿದೆ. ಹೀಗಿರುವಾಗಲೇ ಪ್ರಿಯಾಂಕಾ ತಿಮ್ಮೇಶ್ ಹೊಸ ಫೋಟೋಶೂಟ್‍ನಲ್ಲಿ ಮಿಂಚುತ್ತಿದ್ದಾರೆ. ಇದನ್ನೂ ಓದಿ:   ಸಮಂತಾ, ನಾಗ ಚೈತನ್ಯ DIVORCEಗೆ ಅಸಲಿ ಕಾರಣ ಬಯಲು

    ವೈಲ್ಡ್ ಕಾರ್ಡ್ ಮೂಲಕ ಕನ್ನಡ ಬಿಗ್ ಬಾಸ್ ಸೀಸನ್ 8 ಪ್ರವೇಶ ಪಡೆದ ಪ್ರಿಯಾಂಕಾ ತಿಮ್ಮೇಶ್ ಸಾಕಷ್ಟು ಮಿಂಚಿದರು. ತಮ್ಮ ನೇರನುಡಿಗಳಿಂದ ಅವರು ಹೆಸರು ಮಾಡಿದರು. ಬಿಗ್‍ಬಾಸ್ ಪ್ರಿಯಾಂಕಾ ತಿಮ್ಮೇಶ್‍ಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಪ್ರಿಯಾಂಕಾ ಒಂದು ಸಿನಿಮಾಕ್ಕಾಗಿ ತೂಕವನ್ನು ಹೆಚ್ಚು ಮಾಡಿಕೊಂಡಿದ್ದಾರೆ. ಪಾತ್ರಕ್ಕೆ ಹೊಂದುವ ಹಾಗೆ ತೆರೆ ಮೇಲೆ ಕಾಣುವ ಉದ್ದೇಶದಿಂದ ನನ್ನ ದೇಹದ ತೂಕ ಹೆಚ್ಚಾಗಿದೆ ಎಂದು ಮಾಧ್ಯಮವೊಂದರ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

  • ಚಕ್ರವರ್ತಿಗೆ ಶಾಕ್ ಕೊಟ್ಟ ಪ್ರಿಯಾಂಕಾ

    ಚಕ್ರವರ್ತಿಗೆ ಶಾಕ್ ಕೊಟ್ಟ ಪ್ರಿಯಾಂಕಾ

    ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿರುವ ಪ್ರಿಯಾಂಕಾ ತಿಮ್ಮೇಶ್ ಬರಹಗಾರ ಚಕ್ರವರ್ತಿ ಚಂದ್ರಚೂಡ್ ಅವರಿಗೆ ಕೊನೆಯಲ್ಲಿ ಶಾಕ್ ಕೊಟ್ಟಿದ್ದಾರೆ.

    ಪ್ರಿಯಾಂಕಾ ತಿಮ್ಮೇಶ್ ಮತ್ತು ಚಕ್ರವರ್ತಿ ಚಂದ್ರಚೂಡ್ ಅವರು ಮಧ್ಯ ಭಾಗದಲ್ಲಿ ಬಿಗ್ ಬಾಸ್ ಮನೆಯನ್ನು ಪ್ರವೇಶಿಸಿದ್ದರು. ಹೀಗಾಗಿ ಇವರಿಬ್ಬರ ಮಧ್ಯೆ ಆರಂಭದಲ್ಲಿ ಉತ್ತಮವಾಗಿ ಮಾತುಕತೆ ನಡೆಯುತ್ತಿತ್ತು.

    ನಂತರದ ದಿನಗಳಲ್ಲಿ ಇಬ್ಬರ ನಡುವೆ ಭಿನ್ನಾಭಿಪ್ರಾಯಗಳು ಬಂದಿತ್ತು. ಈ ಮಧ್ಯೆ ಬಿಗ್ ಬಾಸ್ ಸ್ಥಗಿತಗೊಂಡು ಆರಂಭಗೊಂಡ ವಾರದಲ್ಲೂ ಇಬ್ಬರ ನಡುವೆ ಮಾತುಕತೆ ನಡೆಯಿತಿತ್ತು. ಆದರೆ ನಂತರದ ದಿನಗಳಲ್ಲಿ ಚಕ್ರವರ್ತಿ ಅವರಿಂದ ಪ್ರಿಯಾಂಕಾ ತಿಮ್ಮೇಶ್ ಅಂತರ ಕಾಯ್ದುಕೊಂಡು ದಿವ್ಯಾ ಸುರೇಶ್, ಶಮಂತ್, ಶುಭ ಪೂಂಜಾ ಅವರ ಜೊತೆ ಹೆಚ್ಚು ಬೆರೆಯುತ್ತಿದ್ದರು.

    ಎರಡನೇ ಇನ್ನಿಂಗ್ಸ್‍ನ ಮೂರನೇ ವಾರದಲ್ಲಿ ಚಕ್ರವರ್ತಿ ಮತ್ತು ಪ್ರಿಯಾಂಕ ತಿಮ್ಮೇಶ್ ಮಧ್ಯೆ ಜಾಸ್ತಿ ಮಾತುಕತೆ ನಡೆದಿರಲಿಲ್ಲ. ಆದರೆ ಚಕ್ರವರ್ತಿಯವರು ನೇರವಾಗಿ ನನ್ನ ಹೆಸರು ತೆಗೆಯದೇ ಟಾಂಗ್ ನೀಡುತ್ತಿದ್ದಾರೆ ಎಂದು ಪ್ರಿಯಾಂಕಾ ಇತರೇ ಸ್ಪರ್ಧಿಗಳ ಜೊತೆ ಹೇಳುತ್ತಿದ್ದರು. ಇದನ್ನೂ ಓದಿ : ವೈಷ್ಣವಿ ಬಗ್ಗೆ ಸುದೀಪ್‍ಗಿದ್ದ ಅಭಿಪ್ರಾಯ ಚೇಂಜ್

    ಮೊದಲೇ ಚಕ್ರವರ್ತಿ ಅವರು ಪ್ರಿಯಾಂಕಾ ಬಗ್ಗೆ ಅಸಮಾಧಾನಗೊಂಡಿದ್ದರು. ಇದರ ಜೊತೆ ಕಳಪೆಗೆ ನೀಡಿದ ಕಾರಣ ಸರಿಯಿಲ್ಲ ಎಂದು ಹೇಳಿ ಪ್ರಿಯಾಂಕಾ ವಿರುದ್ಧ ಜೈಲಿನಲ್ಲೂ ಪ್ರತಿಭಟನೆ ಮಾಡಿದ್ದರು.

    ಅರವಿಂದ್ ಟೀಂ ಸೋತ ಹಿನ್ನೆಲೆಯಲ್ಲಿ ನಾಯಕ ಅರವಿಂದ್ ಬಿಟ್ಟು ವೈಷ್ಣವಿ, ಪ್ರಶಾಂತ್, ಶುಭಾ ಪುಂಜಾ, ಪ್ರಿಯಾಂಕಾ ತಿಮ್ಮೇಶ್ ನಾಮಿನೆಟ್ ಆಗಿದ್ದರು. ಹೀಗಾಗಿ ಕಡಿಮೆ ವೋಟ್ ಬಿದ್ದ ಹಿನ್ನೆಲೆಯಲ್ಲಿ ಪ್ರಿಯಾಂಕಾ ಮನೆಯಿಂದ ಔಟ್ ಆಗಿದ್ದಾರೆ.

    ಈ ಮೊದಲು ನಿಧಿ ಔಟಾದಾಗ ಅರವಿಂದ್ ಅವರನ್ನು ನಾಮಿನೆಟ್ ಮಾಡಿದ್ದರು. ನಂತ್ರ ರಘು ಶಮಂತ್ ಅವರನ್ನು ಸೇವ್ ಮಾಡಿದ್ದರು. ಈ ಬಾರಿ ಪ್ರಿಯಾಂಕಾ ಅವರು ನೇರವಾಗಿ ಚಂದ್ರಚೂಡ್ ಅವರನ್ನು ನಾಮಿನೇಟ್ ಮಾಡಿದ್ದಾರೆ. ಈ ಮೂಲಕ ಕೊನೆಗೆ ಮನೆಯಿಂದ ತೆರಳುವಾಗ ಪ್ರಿಯಾಂಕಾ ಶಾಕ್ ನೀಡಿದ್ದಾರೆ.

  • ಬಾಯಿ ಮುಚ್ಚಿದರೆ ಸರಿ- ಚಕ್ರವರ್ತಿಗೆ ಪ್ರಿಯಾಂಕಾ ಅವಾಜ್

    ಬಾಯಿ ಮುಚ್ಚಿದರೆ ಸರಿ- ಚಕ್ರವರ್ತಿಗೆ ಪ್ರಿಯಾಂಕಾ ಅವಾಜ್

    ಬಿಗ್‍ಬಾಸ್ ಮನೆಲಿ ಸೈಲೆಂಟ್ ಆಗಿದ್ದ ಪ್ರಿಯಾಂಕ ತಿಮ್ಮೇಶ್ ಇದೀಗ ಜೋರು ಧ್ವನಿಯಲ್ಲಿ ಚಕ್ರವರ್ತಿ ಅವರಿಗೆ ಅವಾಜ್ ಹಾಕಿದ್ದಾರೆ. ಬಿಗ್‍ಬಾಸ್ ಮನೆಯಲ್ಲಿ ಜಗಳದ ಬೆಂಕಿ ಹೊತ್ತಿ ಉರಿಯುತ್ತಿದೆ.

    ಅವರು ನೇರವಾಗಿಲ್ಲ. ನಾಟಕೀಯ, ಸ್ಕೋಪ್ ತಗೆದುಕೂಳ್ಳುತ್ತಿದ್ದೀಯಾ? ಎಂದು ನನಗೆ ಹೇಗೆ ಹೇಳುತ್ತಿರುತ್ತಿರಾ ಎಂದು ಪ್ರಿಯಾಂಕಾ ಸುದೀಪ್ ಮುಂದೆ ಹೇಳಿಕೊಂಡಿದ್ದರು. ಕಟ್ಟೆಪಂಚಾಯ್ತಿಯಲ್ಲಿ ಈ ವಿಷಯನ್ನು ಇತ್ಯರ್ಥಮಾಡಿ ಸುದೀಪ್ ರಾಜಿ ಮಾಡಿದ್ದರು. ಈ ಹಿಂದೆ ಚಕ್ರವರ್ತಿ ಮತ್ತು, ಪ್ರಿಯಾಂಕಾ ನಡುವೆ ಹಲವು ಸಣ್ಣ ಸಣ್ಣ ವಿಚಾರಗಳಿಗೆ ಜಗಳವಾಗಿತ್ತು. ಆದರೆ ಇದೇ ವಿಷಯಗಳನ್ನು ಮತ್ತೇ ಕೆದಕಿಕೊಂಡು ಇಬ್ಬರು ಕಿತ್ತಾಟ ನಡೆಸಿದ್ದಾರೆ. ಕಾಲು ಕೆದರಿಕೊಂಡು ಜಗಳ ಮಾಡುವ ಚಕ್ರವರ್ತಿ ವಿರುದ್ಧವಾಗಿ ಪ್ರಿಯಾಂಕ ತಿರುಗಿ ಬಿದ್ದಿದ್ದಾರೆ.

    ಸಾಧ್ಯವಾದಷ್ಟು ಸೈಲೆಂಟ್ ಆಗಿಯೇ ಇದ್ದ ಪ್ರಿಯಾಂಕಾ ಯಾರು ಏನೇ ಹೇಳಿದರೂ ಅದನ್ನು ತಾಳ್ಮೆಯಿಂದ ನಿಭಾಯಿಸಿಕೊಂಡು ಸಾಗುತ್ತಿದ್ದರು. ಚಕ್ರವರ್ತಿ ಅವರ ಮಾತಿನಿಂದ ಆಗಾಗ ಪ್ರಿಯಾಂಕಾ ಅವರನ್ನು ಕೆಣಕುತ್ತಿದ್ದರು. ಇದೇ ಮೊದಲ ಬಾರಿಗೆ ಪ್ರಿಯಾಂಕಾ ತಿಮ್ಮೇಶ್ ಅವರು ದೊಡ್ಮನೆಯೊಳಗೆ ಉಗ್ರಾವತಾರ ತೋರಿದ್ದಾರೆ. ತಮ್ಮ ಬಗ್ಗೆ ಇಲ್ಲಸಲ್ಲದ ಮಾತನಾಡಿದ ಚಕ್ರವರ್ತಿ ಚಂದ್ರಚೂಡ್‍ಗೆ ಖಡಕ್ ಆಗಿ ವಾನಿರ್ಂಗ್ ನೀಡಿದ್ದಾರೆ.

    ಪ್ರಿಯಾಂಕಾ ಕಣ್ಣೀರು ಹಾಕುತ್ತಾ ನಾನು ಮತ್ತು ಶಮಂತ್ ಏನೇ ಮಾಡಿದರೂ ಅದನ್ನು ಕೇಳೋಕೆ ಇವರು ಯಾರು? ಎಂದು ಅಳುತ್ತಲೇ ತಮ್ಮ ನೋವನ್ನು ಪ್ರಶಂತ್, ಶಮಂತ್ ಬಳಿ ಹೇಳಿಕೊಳ್ಳುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಚಕ್ರವರ್ತಿ ಮತ್ತೆ ಪ್ರತ್ಯುತ್ತರ ನೀಡಲು ಬಂದಾಗ ಅವರ ಪ್ರಿಯಾಂಕಾ ತಾಳ್ಮೆಯ ಕಟ್ಟೆ ಒಡೆದಿದೆ. ಜೋರಾಗಿ ಕಿರುಚಾಡಿ ಪ್ರಿಯಾಂಕಾ ಚಕ್ರವರ್ತಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಕಣ್ಣಲ್ಲಿ ನೀರು ಹಾಕಿಕೊಂಡು ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಅದೆಲ್ಲ ನಿಜವಾಗುವುದಿಲ್ಲ ಎಂದು ಚಕ್ರವರ್ತಿ ಏರು ಧ್ವನಿಯಲ್ಲಿ ಮಾತನಾಡಿದರು. ಅದಕ್ಕೆ ತಿರುಗೇಟು ನೀಡಿದ ಪ್ರಿಯಾಂಕಾ, ನಾನು ಕಣ್ಣೀರು ಹಾಕಿಕೊಂಡು ನಾಟಕ ಮಾಡುತ್ತಿಲ್ಲ. ಬಾಯಿ ಮುಚ್ಚಿದರೆ ಸರಿ ಎಂದು ಕಿರುಚಾಡಿ ಹಾಗೇ ಸಿಟ್ಟಿನಿಂದ ಚಕ್ರವರ್ತಿ ಅವರ ಬಳಿ ಹೋಗಿದ್ದಾರೆ. ಆಗ ಮನೆ ಮಂದಿ ತಡೆದು ನಿಲ್ಲಿಸುವ ಪ್ರಯತ್ನವನ್ನು ಮಾಡಿದ್ದಾರೆ.

  • ಚಕ್ರವರ್ತಿ ನನಗೆ ಒಂದು ಪಂಜರ ಕಟ್ಟಿಕೊಟ್ಟಿದ್ದಾರೆ ಎಂದಿದ್ಯಾಕೆ ಪ್ರಿಯಾಂಕಾ?

    ಚಕ್ರವರ್ತಿ ನನಗೆ ಒಂದು ಪಂಜರ ಕಟ್ಟಿಕೊಟ್ಟಿದ್ದಾರೆ ಎಂದಿದ್ಯಾಕೆ ಪ್ರಿಯಾಂಕಾ?

    ದೊಡ್ಮನೆಯ ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಸ್ಪರ್ಧಿಗಳ ಆಟದ ಬಗ್ಗೆ ಮಾತನಾಡುವುದಕ್ಕಿಂತ ಹೆಚ್ಚಾಗಿ ಅವರ ಮನಸ್ತಾಪಗಳ ಬಗ್ಗೆ ಮಾತನಾಡುವಂತಾಗಿದೆ. ನನ್ನನ್ನು ಬಿಗ್‍ಮನೆಯ ಹೊರಗೆ ನಾನು ಹೀಗೆ ಎಂದು ಒಂದು ಪಂಜರವನ್ನು ಚಕ್ರವರ್ತಿ ಚಂದ್ರಚೂಡ್ ಅವರು ಕಟ್ಟಿಕೊಟ್ಟಿದ್ದಾರೆ ಎಂದು ಪ್ರಿಯಾಂಕಾ ತಿಮ್ಮೆಶ್ ಸುದೀಪ್ ಮುಂದೆ ದೂರಿಕೊಂಡಿದ್ದಾರೆ.


    ವಾರದ ಕಥೆ ಕಿಚ್ಚನ ಜೊತೆ ಪಂಚಾಯಿತಿಯಲ್ಲಿ ಕಿಚ್ಚ, ಪ್ರಿಯಾಂಕಾ ಮತ್ತು ಚಕ್ರವರ್ತಿಯವರೆ ನಿಮ್ಮಿಬ್ಬರ ಸಮಸ್ಯೆ ಏನು ಎಂದಿದ್ದಾರೆ. ಇದಕ್ಕೆ ಉತ್ತರಿಸಿದ ಚಕ್ರವರ್ತಿ, ಪ್ರಿಯಾಂಕಾ ಅವರು ಲಾಸ್ಟ್ ಇನ್ನಿಂಗ್ಸ್ ನಲ್ಲಿ ನನ್ನೊಂದಿಗೆ ತುಂಬಾ ಜಗಳವಾಡಿದ್ದಾರೆ. ಈ ಇನ್ನಿಂಗ್ಸ್ ನಲ್ಲಿ ಆ ತರಹ ಏನು ಆಗಿಲ್ಲ. ಆದರೆ ನಾನು ಅವರ ಬಗ್ಗೆ ಹೇಳಿದ ಮಾತುಗಳನ್ನು ಅವರು ಮನಸ್ಸಿನಲ್ಲಿಟ್ಟುಕೊಂಡು ನೊಂದಿದ್ದಾರೆ ಅನಿಸುತ್ತೀದೆ ಎಂದರು.

    ನಾನು ಮತ್ತು ಶಮಂತ್ ಈ ಹಿಂದೆ ಊಟಮಾಡಿಸಬೇಕೆಂಬ ಒಂದು ಚಾಲೆಂಜ್ ಹಾಕಿಕೊಂಡಾಗ ಮತ್ತು ನಾನು ದಿವ್ಯಾ ಸುರೇಶ್ ಜೊತೆಗಿದ್ದಾಗ ಚಕ್ರವರ್ತಿಯವರು ನನ್ನೊಂದಿಗೆ ನಡೆದುಕೊಂಡ ವರ್ತನೆ ನನಗೆ ಇಷ್ಟ ಆಗಿಲ್ಲ. ಅವರ ಮಾತುಗಳು ನನಗೆ ತುಂಬಾ ಚುಚ್ಚಿದಂತೆ ಆಗುತ್ತದೆ. ಹಾಗಾಗಿ ನಾನು ನನ್ನ ಪಾಡಿಗೆ ಇದ್ದೇನೆ ಎಂದು ಪ್ರಿಯಾಂಕಾ ಬೇಸರತೊಡಿಕೊಂಡರು. ಇದನ್ನೂ ಓದಿ: ಅರವಿಂದ್‍ಗೆ ಕಥೆ ಹೇಳಿದ ಸುದೀಪ್

    ಇದನ್ನು ಕೇಳಿಸಿಕೊಂಡ ಚಕ್ರವರ್ತಿ ಇಲ್ಲ ನಾನು ಪ್ರಿಯಾಂಕಾ ಅವರಿಗೆ ಹೇಳಿದ ಸಾಂತ್ವನದ ಮಾತು ಅವರಿಗೆ ಇಷ್ಟ ಆಗಿಲ್ಲ. ನನಗೆ ಅವರ ನಾಟಕದ ಮಾತು ಹಿಡಿಸಿಲ್ಲ. ಅವರ ಸ್ವಭಾವದಿಂದಾಗಿ ಅವರು ನನಗೆ ಕಾಣಿಸದಂತೆ ಆಗಿದ್ದಾರೆ ಎಂದರು.

    ಸರ್ ನನ್ನ ಸ್ವಭಾವ ಮತ್ತು ಇತರ ವಿಷಗಳನ್ನು ತೆಗೆದುಕೊಂಡು ನನ್ನನ್ನು ಹೊರ ಪ್ರಪಂಚದಲ್ಲಿ ಅವರು ಬೇರೆ ರೀತಿ ಅರ್ಥ ಮಾಡಿಸಿದ್ದಾರೆ ಇದು ನನಗೆ ಇಷ್ಟ ಇಲ್ಲ. ಅವರು ಹೊರ ಪ್ರಪಂಚಕ್ಕೆ ನಾನು ಹೀಗೆ ಎಂದು ಪಂಜರವೊಂದನ್ನು ಹಾಕಿದ್ದಾರೆ ಎಂದು ಪ್ರಿಯಾಂಕಾ ಅಭಿಪ್ರಾಯಪಟ್ಟಿದ್ದಾರೆ.

  • ಪಿಂಕಿ ನಿನ್ನ ಸೀರಿಯಲ್ ಸ್ಕೂಲ್‍ನಲ್ಲಿದ್ದಾಗಲೇ ನೋಡ್ತಿದ್ದೆ : ದಿವ್ಯಾ

    ಪಿಂಕಿ ನಿನ್ನ ಸೀರಿಯಲ್ ಸ್ಕೂಲ್‍ನಲ್ಲಿದ್ದಾಗಲೇ ನೋಡ್ತಿದ್ದೆ : ದಿವ್ಯಾ

    ಬಿಗ್‍ಬಾಸ್ ಮನೆಯಲ್ಲಿ ಪ್ರಿಯಾಂಕ ತಿಮ್ಮೇಶ್ ಮತ್ತು ದಿವ್ಯಾ ಸುರೇಶ್ ಸೆಕೆಂಡ್ ಇನ್ನಿಂಗ್ಸ್‌ನಲ್ಲಿ ತುಂಬಾ ಅನ್ಯೋನ್ಯವಾಗಿ ಇದ್ದಂತೆ ಕಾಣುತ್ತಿದೆ. ಆದರೆ ದಿವ್ಯಾ ಸುರೇಶ್ ಕೊಟ್ಟ ಚಮಕ್‍ಗೆ ಪ್ರಿಯಾಂಕ ಸರಿಯಾಗಿ ಉತ್ತರ ಕೊಟ್ಟಿದ್ದಾರೆ.

    ನೀನು ನಟನೇ ಮಾಡುತ್ತಿದ್ದ ಧಾರಾವಾಹಿಯನ್ನು ನಾನು ಸ್ಕೂಲ್‍ನಲ್ಲಿ ಇದ್ದಾಗ ನಾನು ನೋಡುತ್ತಿದ್ದೆ. ನನಗೆ ಈಗ 23 ವರ್ಷ ನಾನು ಚಿಕ್ಕವಳು ಎನ್ನುವ ಅರ್ಥದಲ್ಲಿ ದಿವ್ಯಾ ಸುರೇಶ್ ಮಾತನಾಡಿದ್ದಾರೆ. ಆಗ ಪ್ರಿಯಾಂಕ ನನ್ನ ಸೀರಿಯಲ್ ಬರುವಾಗ ನೀನು ಸ್ಕೂಲ್‍ನಲ್ಲಿ ಇದ್ಯಾ..? ನಿನ್ನ ವಯಸ್ಸು ಎಷ್ಟು? ಈಗಲೂ ನೀನು, ನಾನು ದೊಡ್ಡವಳು ಎಂದು ಹೇಳುತ್ತೀಯಾ? ಎಂದು ಹೇಳುತ್ತಾ ಇಬ್ಬರು ಕಿತ್ತಾಡಿಕೊಂಡಿದ್ದಾರೆ.

    ನೀನು ನನ್ನ ಅಕ್ಕ ಎಂದು ಕರಿಯಬೇಕು. ನನ್ನ ಸೀರಿಲ್ ನೋಡ್ಕೋಂಡು ಬೆಳೆದವಳು ನೀನು. ನನ್ನ ಸೀರಿಯಲ್ ನೋಡಿ ನೀನು ನಟನೆ ಕಲಿತುಕೊಂಡಿದ್ದು, ಎಂದು ಹೇಳುತ್ತಾ ದಿಂಬುಗಳಲ್ಲಿ ಹೊಡೆದುಕೊಂಡಿದ್ದಾರೆ. ನಾನು ನೀನಗೆ ಹೊಡೆಯಬೇಕು ನೀನು ನನಗೆ ಹೊಡೆಯುತ್ತಿಯಾ? ನಾನು ಇಲ್ಲಿ ಡೊಡ್ಡವಳು ಎಂದು ಪ್ರಿಯಾಂಕ ಹೇಳಿದ್ದಾರೆ. ಹೀಗೆ ಇಬ್ಬರು ತಮಾಷೆಯಾಗಿ ಜಗಳ ಮಾಡಿಕೊಂಡಿದ್ದಾರೆ.

    ಸ್ಟ್ರಾಟರ್ಜಿ ಪಾಠ ಮಾಡಿದ ದಿವ್ಯಾ ಸುರೇಶ್
    ಸ್ಟ್ರಾಟರ್ಜಿ ಎಂಬುದನ್ನು ನಾನು ಇಲ್ಲಿಯೇ ಹೇಳಿದ್ದು, ಏನು ಹಾಗಂದ್ರೆ ಎಂದು ಪ್ರಿಯಾಂಕ ದಿವ್ಯಾ ಬಳಿ ಕೇಳಿದ್ದಾರೆ. ಆಗ ದಿವ್ಯಾ ಹಾಗಂದ್ರೆ ತಂತ್ರಗಾರಿಕೆ ಎಂದರ್ಥವಾಗಿದೆ. ಸ್ಟ್ರಾಟರ್ಜಿಯಿಂದ ಗೆದ್ದರು ಕೂಡಾ ನಾವು ಹೊರಗೆ ಹೋಗುವುದು ಕೂಡ ರಾಂಗ್‍ವೇ ಆಗಿದೆ. ನಿಯತ್ತಾಗಿ ಆಟ ಆಡಬೇಕು ಎಂದು ಪ್ರಿಯಾಂಕ ಹೇಳಿದ್ದಾರೆ. ಹೀಗೆ ಗೇಮ್ ಪ್ಲ್ಯಾನಿಂಗ್ ಕುರಿತಾಗಿ ಇಬ್ಬರು ಮಾತನಾಡಿಕೊಂಡಿದ್ದಾರೆ.

    ದಿವ್ಯಾ ಸುರೇಶ್ ಮೊದಲ ಇನ್ನಿಂಗ್ಸ್‍ನಲ್ಲಿ ಹೆಚ್ಚಾಗಿ ಮಂಜು ಜೊತೆಗೆ ಮಾತನಾಡುತ್ತಾ ಸಮಯವನ್ನು ಕಳೆಯುತ್ತಿದ್ದರು. ಆದರೆ ಈ ಬಾರಿ ಆಟ ಕೊಂಚ ಬದಲಾಗಿದೆ. ಮಂಜು ತಮ್ಮ ಆಟವನ್ನು ಶುರು ಮಾಡಿದ್ದಾರೆ. ಇಬ್ಬರು ಮನೆಯವರು ಜೊತೆಗೆ ಬೆರೆಯುತ್ತಿದ್ದಾರೆ. ದಿವ್ಯಾ ಹೆಚ್ಚಾಗಿ ಪ್ರಿಯಾಂಕ ಜೊತೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇಬ್ಬರ ಸ್ನೇಹ ಹೀಗೆ ಮುಂದುವರೆಯುತ್ತಾ ಅಥವಾ ಬಿಗ್‍ಬಾಸ್ ಆಟ ಬೇರೆ ಮಾಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.

  • ಪ್ರಶಾಂತ್ ಸಂಬರಗಿಯವರು ನನ್ನಿಂದ ಏನು ಕಿತ್ಕೊಳ್ಳೊಕೆ ಆಗಲ್ಲ: ಶಮಂತ್

    ಪ್ರಶಾಂತ್ ಸಂಬರಗಿಯವರು ನನ್ನಿಂದ ಏನು ಕಿತ್ಕೊಳ್ಳೊಕೆ ಆಗಲ್ಲ: ಶಮಂತ್

    ಬೆಂಗಳೂರು: ಬಿಗ್‍ಬಾಸ್ ಮನೆಗೆ ರೀ ಎಂಟ್ರಿ ಕೊಟ್ಟು ಸ್ಪರ್ಧಿಗಳು ಆಟ ಶುರು ಮಾಡಿದ್ದಾರೆ. ಸದ್ಯ ಪ್ರಶಾಂತ್ ಸಂಬರಗಿ, ಪ್ರಿಯಾಂಕಾ ತಿಮ್ಮೇಶ್, ಚಕ್ರವರ್ತಿ ಒಟ್ಟಿಗೆ ಕುಳಿತು ಚರ್ಚೆ ನಡೆಸುತ್ತಿದ್ದಾಗ, ಶಮಂತ್ ಪ್ರಶಾಂತ್ ಸಂಬರಗಿಗೆ ಚಿಕ್ಕಪ್ಪ ಎಂದು ಕರೆಯುತ್ತಾರೆ. ಇದಕ್ಕೆ ಪ್ರಶಾಂತ್ ಇನ್ನೊಮ್ಮೆ ನೀನು ನನ್ನನ್ನು ಚಿಕ್ಕಪ್ಪ ಎಂದರೆ ಎಂದು ವಾರ್ನ್ ಮಾಡುತ್ತಾರೆ. ಆಗ ಶಮಂತ್ ಚಿಕ್ಕಪ್ಪ, ಚಿಕ್ಕಪ್ಪ ಎಂದು ಮತ್ತೆ ರೇಗಿಸುತ್ತಾರೆ.

    ಈ ವೇಳೆ ಪ್ರಿಯಾಂಕಾ ತಿಮ್ಮೇಶ್, ಪ್ರಶಾಂತ್ ಅವರಿಗೇನಾದರೂ ಮಗಳಿದ್ದಿದ್ದರೆ ಇಷ್ಟೊತ್ತಿಗೆ ಎಂಗೇಜ್‍ಮೆಂಟ್ ಆಗಿರುತ್ತಿತ್ತು ಎಂದು ಶಮಂತ್ ಹೇಳುತ್ತಿದ್ದರು ಎಂದಿದ್ದಾರೆ. ಇದರ ಅರ್ಥ ಇಷ್ಟು ಒಳ್ಳೆಯ ಮಾವ ಸಿಕ್ಕಿದ್ದಾರೆ ಮಗಳನ್ನು ಬಿಡಬಾರದು ಎಂದು ಪ್ರಿಯಾಂಕಾ ತಿಮ್ಮೇಶ್ ವಿವರಿಸುತ್ತಾರುವಾಗ, ಶಮಂತ್ ಮಾವ ಕೆಟ್ಟವರು. ಆದರೆ ನನಗೆ ಒಳ್ಳೆಯವರಷ್ಟೇ ಮಾವ ಬ್ರಿಲಿಯಂಟ್ ಎಂದು ಹೇಳುತ್ತಾರೆ.

    ನಂತರ ಚಕ್ರವರ್ತಿ ಚಂದ್ರಚೂಡ್‍ರವರು ನಿನಗೆ ಪ್ರಶಾಂತ್ ಏನು ಅನಿಸುತ್ತಾರೆ, ನಿನಗೆ ಅವರ ಮೇಲೆ ಏನು ಫೀಲಿಂಗ್ ಇದೆ ಎಂದು ಪ್ರಶ್ನಿಸಿದಾಗ, ಶಮಂತ್ ಪ್ರಶಾಂತ್‍ರವರು ನನಗೆ ಒಂದು ರೀತಿ ಅಂಕಲ್ ಮಾದರಿ, ಚಿಕ್ಕಪ್ಪ ನನ್ನ ಹತ್ತಿರ ಏನು ಕಿತ್ತಿಕೊಳ್ಳುವುದಕ್ಕೆ ಆಗುವುದಿಲ್ಲ. ಬರೆದು ಕೊಂಡುತ್ತೇನೆ ಪ್ರಶಾಂತ್ ಸಂಬರ್ಗಿಯವರು ಶಮಂತ್ ಅವರಿಂದ ಏನು ಕಿತ್ತುಕೊಳ್ಳಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ:ತುಂಬಾ ಜನ ನನ್ನ ಮೇಲೆ ದೃಷ್ಟಿ ಹಾಕಿದ್ದಾರೆ ಅಂದ ಶಮಂತ್

  • ‘ನುಸುಳಿದ ಚೆಂಡು’ – ಗೆದ್ದವರು ಯಾರು? ಬಿಸಿ ಬಿಸಿ ಚರ್ಚೆ

    ‘ನುಸುಳಿದ ಚೆಂಡು’ – ಗೆದ್ದವರು ಯಾರು? ಬಿಸಿ ಬಿಸಿ ಚರ್ಚೆ

    ಬಿಗ್ ಬಾಸ್ ಮನೆಯಲ್ಲಿ 60ನೇ ದಿನ ನಡೆದ ‘ನುಸುಳಿದ ಚೆಂಡು’ ಟಾಸ್ಕ್ ವಿಚಾರದಲ್ಲಿ ಅರವಿಂದ್ ಗೆದ್ದ ಬಗ್ಗೆ ಈಗ ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತದೆ.

    ಮೂವರು ಸ್ಪರ್ಧಿಗಳ ಕೈ ಮತ್ತು ಕಾಲನ್ನು ಕಟ್ಟಲಾಗುತ್ತದೆ. ಸ್ಪರ್ಧಿಗಳು ತಲೆಯಿಂದ ಚೆಂಡನ್ನು ಗೆರೆ ದಾಟಿಸಬೇಕು. ಚೆಂಡಿನ ಜೊತೆಗೆ ಮೊದಲು ಗೆರೆ ಮುಟ್ಟಿದ ಸದಸ್ಯ ಮೊದಲ ಬೋಗಿಗೆ ಹೋಗುತ್ತಾರೆ ಎನ್ನುವುದು ಈ ಆಟದ ನಿಯಮವಾಗಿತ್ತು.

    ಚಕ್ರವರ್ತಿ ಚಂದ್ರಚೂಡ್ ಈ ನಿಯಮವನ್ನು ಹೇಳಿದ ಕೂಡಲೇ ಪ್ರಿಯಾಂಕ ಅವರು, ಒಂದು ವೇಳೆ ಬಾಲ್ ಹಳದಿ ಗೆರೆಯನ್ನು ದಾಟಿದರೆ ಔಟ್ ಆಗುತ್ತಾ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಮಂಜು, ಔಟ್ ಆಗಲ್ಲ, ಆದರೆ ಚೆಂಡನ್ನು ತಲೆಯ ಸಹಾಯದಿಂದ ಮುಂದಕ್ಕೆ ತಳ್ಳಬೇಕು ಎಂದು ಉತ್ತರ ನೀಡುತ್ತಾರೆ.

     

    ಅರವಿಂದ್, ಪ್ರಶಾಂತ್ ಸಂಬರಗಿ ಮೂವರು ಸಿದ್ಧವಾಗಿ ಆಟ ಆಡಲು ಪ್ರಾರಂಭಿಸುತ್ತಾರೆ. ಆರಂಭದಲ್ಲಿ ಅರವಿಂದ್ ಬಾಲ್ ಹಳದಿ ಗೆರೆ ದಾಟಿ ಪ್ರಶಾಂತ್ ಸಂಬರಗಿ ಟ್ರ್ಯಾಕ್‍ಗೆ ಬರುತ್ತದೆ. ಈ ವೇಳೆ ಮುನ್ನುಗ್ಗುವ ಬರದಲ್ಲಿ ಪ್ರಶಾಂತ್ ಸಂಬರಗಿ ತಲೆ ಅರವಿಂದ್ ಚೆಂಡಿಗೆ ತಾಗಿದ ಕಾರಣ ಅರವಿಂದ್ ಚೆಂಡು ಪ್ರಿಯಾಂಕ ಟ್ರ್ಯಾಕ್‍ಗೆ ಹೋಗುತ್ತದೆ. ಈ ಚೆಂಡನ್ನು ಪಡೆಯುವ ನಿಟ್ಟಿನಲ್ಲಿ ಮುನ್ನುಗ್ಗುತ್ತಿದ್ದಾಗ ಪ್ರಿಯಾಂಕ ಅವರ ಟ್ರ್ಯಾಕ್‍ನಲ್ಲಿದ್ದ ಚೆಂಡಿಗೆ ಅರವಿಂದ್ ಕಾಲು ಆಕಸ್ಮಾತ್ ಆಗಿ ಸಿಕ್ಕಿದ ಪರಿಣಾಮ ಪಿಂಕ್ ಚೆಂಡು ಟ್ರ್ಯಾಕ್‍ನಿಂದ ದೂರ ಹೋಗುತ್ತದೆ. ನಂತರ ಅರವಿಂದ್ ಪ್ರಿಯಾಂಕ ಟ್ರ್ಯಾಕ್‍ನಲ್ಲಿ ಮುಂದಕ್ಕೆ ಹೋಗಿ ಬಾಲನ್ನು ಕೆಂಪು ಗೆರೆ ದಾಟಿಸುತ್ತಾರೆ.

    ಆರಂಭದಲ್ಲಿ ಪ್ರಶಾಂತ್ ಸಂಬರಗಿ ಜಯಗಳಿಸಿದ್ದಾರೆ ಎಂದು ಮಂಜು ಹೇಳಿದ್ದರೂ ನಂತರ ಅರವಿಂದ್, ನನ್ನ ಚೆಂಡು ರೆಡ್‍ಲೈನ್ ಕ್ರಾಸ್ ಆಗಿದೆ. ಜೊತೆಗೆ ಆಚೆ ಕಡೆಯಿಂದ ನಾನು ಲೈನ್ ಕ್ರಾಸ್ ಮಾಡಿದ್ದೇನೆ. ಒಮ್ಮೆ ಯೋಚನೆ ಮಾಡಿ ಎಂದು ಹೇಳುತ್ತಾರೆ. ಕೊನೆಗೆ ಹಲವು ಚರ್ಚೆಗಳು ನಡೆದು ಮಂಜು, ವೈಷ್ಣವಿ, ಚಂದ್ರಚೂಡ್ ಅವರು ಅರವಿಂದ್ ಗೆದ್ದಿದ್ದಾರೆ. ಪ್ರಶಾಂತ್ ಸಂಬರಗಿ ಎರಡನೇ ಸ್ಥಾನ, ಪ್ರಿಯಾಂಕಗೆ ಮೂರನೇ ಸ್ಥಾನ ಘೋಷಿಸುತ್ತಾರೆ.

    ಈಗ ಅರವಿಂದ್ ಗೆದ್ದ ಬಗ್ಗೆ ಭಾರೀ ಚರ್ಚೆ ನಡೆಯುತ್ತದೆ. ಕೆಲವರು ಪ್ರಿಯಾಂಕ ಗೆದ್ದಿದ್ದಾರೆ ಎಂದು ಹೇಳಿದ್ದರೆ ಇನ್ನೂ ಕೆಲವರು ಅರವಿಂದ್ ಗೆದ್ದಿದ್ದಾರೆ ಎಂದು ವಾದಿಸುತ್ತಾರೆ.

    ಕ್ರೀಡಾ ನಿಯಮದ ಪ್ರಕಾರ ಅರವಿಂದ್ ಮಾಡಿದ್ದು ತಪ್ಪು ಇರಬಹುದು. ಆದರೆ ಬಿಗ್ ಬಾಸ್ ನಿಯಮದ ಪ್ರಕಾರ ಇದು ತಪ್ಪಲ್ಲ. ಯಾಕೆಂದರೆ ಸ್ಪರ್ಧೆ ಆರಂಭಕ್ಕೂ ಮೊದಲೇ ಪ್ರಿಯಾಂಕ, ಚೆಂಡು ಒಂದು ವೇಳೆ ಹಳದಿ ಗೆರೆ ದಾಟಿದರೆ ಆಗ ಏನು ಎಂದು ಪ್ರಶ್ನೆ ಕೇಳಿದ್ರು. ಆಗಲೇ ಔಟ್ ಎಂದು ಹೇಳಿದ್ದರೆ ವಿವಾದವೇ ಇರುತ್ತಿರಲಿಲ್ಲ. ಆರಂಭದಲ್ಲಿ ಈ ನಿಯಮವನ್ನು ಮೂವರು ಒಪ್ಪಿದ ಕಾರಣ ನಂತರ ಟಾಸ್ಕ್ ನಡೆದಿದೆ. ಟಾಸ್ಕ್ ನಡೆದ ಬಳಿಕ ಸರಿಯಲ್ಲ ಎಂದು ಹೇಳುವುದು ತಪ್ಪು ಎಂದು ಹೇಳುತ್ತಿದ್ದಾರೆ.

    ಇನ್ನು ಕೆಲವರು ಈ ಟಾಸ್ಕ್ ನಲ್ಲಿ  ಪ್ರಶಾಂತ್ ಸಂಬರಗಿ ಜಯಗಳಿಸಿದ್ದಾರೆ. ಆದರೆ ಪ್ರಶಾಂತ್ ಅವರನ್ನು ಇಷ್ಟಪಡದ ಕಾರಣ ಮಂಜು ಅವರು ಅರವಿಂದ್ ಅವರನ್ನು ಸಪೋರ್ಟ್ ಮಾಡಿದ್ದಾರೆ. ಇದು ಮಂಜು ಮಾಡಿದ ಕುತಂತ್ರ ಎಂದು ದೂರುತ್ತಿದ್ದಾರೆ. ಇದಕ್ಕೆ ಅರವಿಂದ್ ಅಭಿಮಾನಿಗಳು, ಆರಂಭದಲ್ಲಿ ಅರವಿಂದ್ ಚೆಂಡು ಸಂಬರಗಿ ಟ್ರ್ಯಾಕ್‍ಗೆ ಬಂದಾಗ ಸಂಬರಗಿ ತಲೆಗೆ ಸಿಕ್ಕಿ ಅದು ಪ್ರಿಯಾಂಕ ಟ್ರ್ಯಾಕ್‍ಗೆ ಹೋಗಿದೆ. ಇದು ಉದ್ದೇಶಪೂರ್ವಕವಾಗಿ ಮಾಡಿದ್ದೋ ಅಥವಾ ಅಕಸ್ಮಾತ್ ಆಗಿದ್ದೋ ಎಂದು ಪ್ರಶ್ನಿಸುತ್ತಿದ್ದಾರೆ.

    ಪ್ರಶಾಂತ್ ಸಂಬರಗಿ ಅವರು ಕಳೆದ ವಾರದ ಕ್ಯಾಪ್ಟನ್ಸಿ ಟಾಸ್ಕ್‍ನಲ್ಲಿ ರಾಘುಗೆ ಎಲ್ಲ ಹೂಗಳನ್ನು ನೀಡಿದ್ದರು. ಇದು ಟಾಸ್ನ್ ನಲ್ಲಿ ಇತ್ತಾ? ರಾಜೀವ್ ವಿನ್ ಆಗಬಾರದು ಎಂಬ ಒಂದೇ ಕಾರಣಕ್ಕೆ ಈ ತಂತ್ರ ಮಾಡಿದ್ದರು. ಇಲ್ಲಿ ಅರವಿಂದ್ ಉದ್ದೇಶಪೂರ್ವಕವಾಗಿ ಮಾಡಿದ್ದರೆ ಇದು ತಪ್ಪು ಎಂದು ಹೇಳಬಹುದಿತ್ತು. ಆದರೆ ಇಲ್ಲಿ ಆಕಸ್ಮತ್ ಆಗಿರುವ ಕಾರಣ ಬಾಲ್ ಟ್ರ್ಯಾಕ್‍ನಿಂದ ಹೊರಗಡೆ ಹೋಗಿದ್ದು ನಿಜ. ಹೊರಗಡೆ ಹೋದರೂ ಕುಗ್ಗದೇ ಪ್ರಯತ್ನ ಬಿಡದೇ ಬಾಲನ್ನು ಕೆಂಪು ಗೆರೆಯನ್ನು ದಾಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಪ್ರಿಯಾಂಕ ಯಾವುದೇ ಪ್ರಯತ್ನ ಮಾಡಲಿಲ್ಲ ಎಂದು ವಾದಿಸುತ್ತಿದ್ದಾರೆ.

    ಇನ್ನು ಕೆಲವರು ಮೊದಲೇ ನಿಯಮಗಳನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕಿತ್ತು. ನಿಯಮ ಸ್ಪಷ್ಟವಾಗಿ ತಿಳಿಯದ ಆಟ ಆಡಿದ್ದರಿಂದ ಈ ಗೊಂದಲವಾಗಿದೆ. ಅಂತಿಮವಾಗಿ ನಾಯಕರು ಏನು ಹೇಳುತ್ತಾರೋ ಅದೇ ಫೈನಲ್. ಅದನ್ನು ಎಲ್ಲರೂ ಒಪ್ಪಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ಚರ್ಚೆ ಈಗ ಜೋರಾಗಿ ನಡೆಯುತ್ತಿದ್ದು, ನಿಮ್ಮ ಪ್ರಕಾರ ಈ ಟಾಸ್ಕ್ ನಲ್ಲಿ ವಿನ್ ಯಾರು ಎಂಬುದನ್ನು ಕಮೆಂಟ್ ಮಾಡಿ ತಿಳಿಸಿ.

  • ಪ್ರಿಯಾಂಕಾ ಕಣ್ಣೀರು ಹಾಕಲು ಕಾರಣವೇನು ಗೊತ್ತಾ?

    ಪ್ರಿಯಾಂಕಾ ಕಣ್ಣೀರು ಹಾಕಲು ಕಾರಣವೇನು ಗೊತ್ತಾ?

    ಬಿಗ್ ಬಾಸ್ ನೀಡಿದ ಟಾಸ್ಕ್‌ವೊಂದರಲ್ಲಿ ನನಗೆ ಅನ್ಯಾಯವಾಗಿದೆ ಅಂತ ಪ್ರಿಯಾಂಕಾ ತಕರಾರು ಶುರು ಮಾಡಿದ್ದರು. ಅದು ಯಾವ ಮಟ್ಟಕ್ಕೆ ಹೋಗಿತ್ತೆಂದರೆ, ರಾತ್ರಿ ಲೇಟ್ ಆದರೂ ಯಾರೂ ಊಟ ಕೂಡ ಮಾಡಲಿಕ್ಕೆ ಆಗಿರಲಿಲ್ಲ. ಮನೆ ಮಂದಿ ಬಂದು ಕೇಳಿಕೊಂಡರು ಪ್ರಿಯಾಂಕ ಒಪ್ಪಿಕೊಳ್ಳಲು ಸಿದ್ಧವಾಗಿರಲಿಲ್ಲ.

    ಬಿಗ್ ಬಾಸ್ ಒಂದು ಟಾಸ್ಕ್ ನೀಡಿದರು. ಆ ಪ್ರಕಾರ, ಕೈ-ಕಾಲು ಬಳಸದೇ ತೇವಳಿಕೊಂಡು ಬರೀ ತಲೆಯಿಂದ ಬಾಲ್ ಅನ್ನು ಒಂದು ತುದಿಯಿಂದ ಮತ್ತೊಂದು ತುದಿಗೆ ತಲುಪಿಸಬೇಕಿತ್ತು. ಇದರಲ್ಲಿ ಪ್ರಶಾಂತ್ ಸಂಬರಗಿ, ಅರವಿಂದ್, ಪ್ರಿಯಾಂಕಾ ಭಾಗವಹಿಸಿದರು. ಆಗ ಅರವಿಂದ್ ಆಕಸ್ಮಿಕವಾಗಿ ಪ್ರಿಯಾಂಕಾ ಅವರ ಕೋರ್ಟ್‍ನಲ್ಲಿದ್ದ ಬಾಲ್ ಅನ್ನು ತಳ್ಳಿದರು. ಇದರಿಂದ ಕೋಪಗೊಂಡ ಪ್ರಿಯಾಂಕಾ ಆಟವನ್ನು ಮುಂದವರಿಸಲಿಲ್ಲ. ಆದರೆ, ಅರವಿಂದ್ ಮತ್ತು ಪ್ರಶಾಂತ್ ಮುಗಿಸಿದರು. ಅಂತಿಮವಾಗಿ ತೀರ್ಪುಗಾರರಾಗಿದ್ದ ಮಂಜು ಪಾವಗಡ, ಚಕ್ರವರ್ತಿ ಚಂದ್ರಚೂಡ್, ವೈಷ್ಣವಿ ಗೌಡ ಅವರು ಅರವಿಂದ್‍ಗೆ ಮೊದಲ ಸ್ಥಾನ ಹಾಗೂ ಪ್ರಿಯಾಂಕಾಗೆ ಮೂರನೇ ಸ್ಥಾನ ನೀಡಿದರು. ಇದು ಪ್ರಿಯಾಂಕಾಗೆ ಬೇಸರ ತರಿಸಿತು. ನಾನು ಮೂರನೇ ಸ್ಥಾನವನ್ನು ಒಪ್ಪಿಕೊಳ್ಳಲ್ಲ ಎಂದು ತಕರಾರು ತೆಗೆದಿದ್ದರು.

     ನಾನು ತಳ್ಳುತ್ತಿದ್ದ ಬಾಲ್ ಅನ್ನು ಅರವಿಂದ್ ಬೇರೆಡೆಗೆ ತಳ್ಳಿದ್ದರಿಂದ ನನಗೆ ಮೋಸವಾಗಿದೆ. ಈ ತೀರ್ಪನ್ನು ಒಪ್ಪಲ್ಲ ಎಂದು ಪ್ರಿಯಾಂಕಾ ಗರಂ ಆದರು. ಮಂಜು ಜೊತೆಗೆ ಜೋರು ವಾಗ್ವಾದ ಮಾಡಿದರು. ನ್ಯಾಯ ಸಿಗುವವರೆಗೂ ನಾನು ಮೂರನೇ ಸ್ಥಾನ ಒಪ್ಪಿಕೊಳ್ಳಲ್ಲ ಎಂದು ಹಠ ಹಿಡಿದರು. ಕೊನೆಗೆ ಮನೆ ಮಂದಿಯೆಲ್ಲ ಹಸಿವು ಎಂದು ನರಳಾಡಬೇಕಾದ ಪರಿಸ್ಥಿತಿ ಬಂತು. ಗೇಮ್ ಮುಗಿಯುವವರೆಗೂ ಊಟ ಮಾಡುವಂತೆ ಇರಲಿಲ್ಲ. ಕೊನೆಗೂ ಪ್ರೀಯಾಂಕ ಒಪ್ಪಿಕೊಂಡು ಹೋಗಿ ಮೂರನೇ ಸ್ಥಾನದಲ್ಲಿ ಕುಳಿತುಕೊಂಡರು.

     ಆಟ ಆಡುವಾಗ ನನ್ನ ತಪ್ಪಿರಲಿಲ್ಲ ಆದರೂ ನನಗೆ ಮೂರನೇ ಸ್ಥಾನ ನೀಡಲಾಗುತ್ತಿದೆ ಎಂದು ಪ್ರಿಯಾಂಕಾ ಬೇಸರ ಮಾಡಿಕೊಂಡರು. ಕೊನೆಗೆ ಮೂರನೇ ಸ್ಥಾನವನ್ನು ಒಪ್ಪಿಕೊಂಡ 3ನೇ ಬೋಗಿಯಲ್ಲಿದ್ದ ರಘು ಗೌಡ ಅವರನ್ನು ಎರಡನೇ ಬೋಗಿಗೆ ಕಳುಹಿಸಿ, ಅವರು 3ನೇ ಬೋಗಿಯಲ್ಲಿ ಕೂತರು. ಅಂತಿಮವಾಗಿ ಈ ಆಟ ಇಲ್ಲಿಗೆ ಮುಗಿಯಿತು. ಕೊನೇ ಬೋಗಿಯಲ್ಲಿರುವ ಪ್ರಿಯಾಂಕಾ ಮತ್ತು ದಿವ್ಯಾ ಸುರೇಶ್ ನೇರವಾಗಿ ನಾಮಿನೇಟ್ ಆಗಿದ್ದಾರೆ ಎಂದು ಬಿಗ್ ಬಾಸ್ ಘೋಷಿಸಿದರು. ನಂತರ ಪ್ರಿಯಾಂಕಾ ಕಣ್ಣೀರಿಟ್ಟಿದ್ದಾರೆ ಮಂಜು ಮತ್ತು ದಿವ್ಯಾ ಉರುಡುಗ ಸಾಕಷ್ಟು ಸಮಾಧಾನ ಮಾಡಲು ಪ್ರಯತ್ನಿಸಿದರು.

    ಬಿಗ್‍ಬಾಸ್ನ ಒಂದು ಗೇಮ್ ಮನೆಯಲ್ಲಿ ಬೇಸರವನ್ನುಂಟು ಮಾಡಿದೆ. ಸ್ಪರ್ಧಿಗಳು ಪ್ರಿಯಾಂಕ ಅವರ ಕುರಿತಾಗಿ ಬೇಸರಗೊಂಡರು. ಮನೆಯಲ್ಲಿ ಬಿಗ್‍ಬಾಸ್ ಹೊಸ ಆಟಗಳು ಏನೆಲ್ಲಾ ತಿರುವುದಕೊಡಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

  • ಕ್ಯಾಪ್ಟನ್ ಆದ್ರೆ ಎರಡು ಕೊಂಬು ಇರಲ್ಲ : ಪ್ರಿಯಾಂಕಾ

    ಕ್ಯಾಪ್ಟನ್ ಆದ್ರೆ ಎರಡು ಕೊಂಬು ಇರಲ್ಲ : ಪ್ರಿಯಾಂಕಾ

    ಬಿಗ್‍ಬಾಸ್ ಮನೆಯಲ್ಲಿ ಕಳಪೆ ಮತ್ತು ಅತ್ಯುತ್ತಮ ಸ್ಪರ್ಧಿ ಯಾರೆಂಬ ಆಯ್ಕೆ ಪ್ರತಿವಾರದಂತೆ ಈ ವಾರವೂ ನಡೆದಿದೆ. ಈ ಮಧ್ಯೆ ಕ್ಯಾಪ್ಟನ್ ರಘು ಗೌಡ ಮೇಲೆ ಪ್ರಿಯಾಂಕಾ ತಿಮ್ಮೇಶ್ ತೀವ್ರವಾಗಿ ಅಸಮಾಧಾನಗೊಂಡಿದ್ದಾರೆ. ಜೊತೆಗೆ ಕ್ಯಾಪ್ಟನ್ ಆದ್ರೆ ಎರಡು ಕೊಂಬು ಇರಲ್ಲ ಅಂತಲೂ ಅವರು ಹೇಳಿದ್ದಾರೆ. ಇಷ್ಟದಿನ ಸುಮ್ಮನೆ ಇದ್ದಪ್ರಿಯಾಂಕಾ ಇದೀಗ ತಮ್ಮ ಆಟವನ್ನು ಪ್ರಾರಂಭಿಸಿದ್ದಾರೆ.

    ಈ ವೇಳೆ ಕ್ಯಾಪ್ಟನ್ ರಘು, ಪ್ರಿಯಾಂಕಾಗೆ ಕಳಪೆ ವೋಟ್ ನೀಡಿದರು. ಅದಕ್ಕೆ ಪ್ರಿಯಾಂಕಾ ಮನೆಯಲ್ಲಿ ತಪ್ಪುಗಳೇನು ಮಾಡಿಲ್ಲ. ಆದರೆ, ಜಾಸ್ತಿ ಬೆರೆಯುತ್ತಿಲ್ಲ ಎಂದು ನನಗೆ ಅನ್ನಿಸುತ್ತಿದೆ. ವೈಲ್ಡ್ ಕಾರ್ಡ್ ಎಂಟ್ರಿ ಅಂದಮೇಲೆ ಸಿಕ್ಕಾಪಟ್ಟೆ ನಿರೀಕ್ಷೆಗಳಿರುತ್ತದೆ. ಅವರನ್ನು ಗೇಮ್ ಚೇಂಜರ್ ಅಂತಲೇ ನಾವು ಭಾವಿಸುತ್ತೇವೆ. ಅವರು ಕೊಟ್ಟಿರುವ ಕೆಲಸ ಎಲ್ಲ ಚೆನ್ನಾಗಿ ಮಾಡ್ತಾ ಇದ್ದಾರೆ. ಆದರೆ, ಇರುವಿಕೆ, ಇಲ್ಲದಿರುವಿಕೆ ಬಗ್ಗೆ ನನಗೇನೂ ಅನ್ನಿಸುತ್ತಿಲ್ಲ ಎಂದು ರಘು ಪ್ರಿಯಾಂಕ ಅವರಿಗೆ ಹೇಳಿದ್ದರು.

    ನಾನಿಲ್ಲಿ ಎಲ್ಲರ ಜೊತೆಯಲ್ಲಿ ಬೆರೆಯುತ್ತಿದ್ದೇನೆ. ಅಡುಗೆ ಅಂತ ಬಂದಾಗ ಮುಂದೆ ಇರುತ್ತೇನೆ. ಆಟದಲ್ಲಿ ಒಂದು ಕೈ ಮುಂದೆ ಇರುತ್ತೇನೆ. ವೈಲ್ಡ್ ಕಾರ್ಡ್ ಮೂಲಕ ಬಂದಿದ್ದಕ್ಕೆ ನಾನು ವೈಲ್ಡ್ ಆಗಿರೋಕೆ ಸಾಧ್ಯ ಇಲ್ಲ. ಮುಂದೆ ಅದಕ್ಕೂ ನನ್ನನ್ನೂ ಕಳಪೆ ಅಂತೀರಾ? ಅದಕ್ಕೆ ನಿಮ್ಮ ಮಾತನ್ನು ನಾನು ಒಪ್ಪಲ್ಲ. ನಾನಿಲ್ಲಿ ಬಂದು ಎರಡು ವಾರ ಆದ್ರೂ, ಐದು ವಾರದ ಥರ ಆಡ್ತಾ ಇದ್ದೇನೆ ಎಂದು ಪ್ರಿಯಾಂಕ ರಘು ಹೇಳಿಕೆಗೆ  ತಿರುಗೇಟು ನೀಡಿದ್ದಾರೆ.

     ರಘು ದೊಡ್ಡ ಕಳಪೆ!

    ರಘು ದೊಡ್ಡ ಕಳಪೆ. ತನ್ನ ಸ್ವಂತ ಬುದ್ಧಿಯಿಂದ, ಶ್ರಮ ಹಾಕಿ ಅವನು ಕ್ಯಾಪ್ಟನ್ ಆಗಿಲ್ಲ. ಒಬ್ಬರ ಬಗ್ಗೆ ಮಾತನಾಡೋಕು ಮುಂಚೆ ಯೋಚನೆ ಮಾಡಬೇಕು. ನಾನು ಎರಡು ವಾರದಿಂದ ಅರವಿಂದ್, ಪ್ರಶಾಂತ್ ಅವರ ವರ್ತನೆಯನ್ನು ನೋಡಿದ್ದೇನೆ. ಕ್ಯಾಪ್ಟನ್ ಆದಕೂಡಲೇ ಎರಡು ಕೊಂಬು ಬರಲ್ಲ. ಮುಂದೆ ಇಲ್ಲಿ ಯಾವ ಥರ ಇರಬೇಕು ಅನ್ನೋದು ಗೊತ್ತಾಗಿದೆ ಎಂದು ದಿವ್ಯಾ ಸುರೇಶ್ ಜೊತೆ ಚರ್ಚೆ ಮಾಡಿದ ಪ್ರಿಯಾಂಕಾ ಹೇಳಿದ್ದಾರೆ.

     ಹುಚ್ಚುನ ತರಾ ಮಾತಾಡ್ತಾಇದ್ದಾನೆ. ಏನು ಇಲ್ಲದೆ ಕ್ಯಾಪ್ಟನ್ ಆಗಿದ್ದಾನೆ. ತನ್ನ ಕಳಪೆ ಮಾಡಿರುವ ಕುರಿತಾಗಿ ಪ್ರಿಯಾಂಕ ಚಕ್ರವರ್ತಿ ಅವರ ಬಳಿ ಹೇಳಿದ್ದಾರೆ. ಪ್ರಿಯಾಂಕ ತನ್ನ ಕಳಪೆ ಮಾಡಿರುವ ಕುರಿತಾಗಿ ಕೋಪಗೊಂಡಿದ್ದಾರೆ.

  • ಬಿಗ್ ಬಾಸ್ ಮನೆಯಲ್ಲಿ ನಡೆಯಿತು ಜಡೆ ಜಗಳ

    ಬಿಗ್ ಬಾಸ್ ಮನೆಯಲ್ಲಿ ನಡೆಯಿತು ಜಡೆ ಜಗಳ

    ಬಿಗ್ ಬಾಸ್ ಮನೆಯಲ್ಲಿ ಜಡೆ ಜಗಳ ಆರಂಭವಾದಂತೆ ಕಾಣುತ್ತಿದೆ. ನಿಧಿ ಸುಬ್ಬಯ್ಯ ಹಾಗೂ ವೈಲ್ಡ್ ಕಾರ್ಡ್ ಎಂಟ್ರಿ ನೀಡಿರುವ ಪ್ರಿಯಾಂಕಾ ತಿಮ್ಮೇಶ್ ಅವರ ನಡುವೆ ಮನಸ್ತಾಪವಾಗಿದೆ. ಇಬ್ಬರು ಟಾಸ್ಕ್ ವಿಚಾರವಾಗಿ ಮಾತಿಗೆ ಮಾತು ಬೆಳೆಸಿದ್ದಾರೆ.

    ಹಾಸ್ಟೆಲ್ ಟಾಸ್ಕ್ ವೇಳೆ ಪ್ರೇಮಪತ್ರವನ್ನು ಕೊಡಲು ಒಪ್ಪದಿದ್ದಕ್ಕೆ ನಿಧಿ ಸುಬ್ಬಯ್ಯ ಅವರು ಪ್ರಿಯಾಂಕಾಗೆ ಸ್ಟುಪ್ಪಿಡ್ ಅಂತ ಬೈಯ್ದಿದ್ದರು. ಪ್ರಿಯಾಂಕಾ ಹಾಗೂ ನಿಧಿ ನಡುವೆ ಸಣ್ಣ ಮನಸ್ತಾಪ ಆಗಲೇ ಶುರುವಾಗಿತ್ತು. ಈಗ ಟಾಸ್ಕ್ ವೇಳೆ ಹೆಚ್ಚಾಗಿದೆ. ಯಾಕೆ ಮನಸ್ತಾಪ ಆಗುತ್ತಿದೆ ಅಂತ ನಿಧಿ ಸುಬ್ಬಯ್ಯ ಹಾಗೂ ಪ್ರಿಯಾಂಕಾ ತಿಮ್ಮೇಶ್ ಬೇರೆ ಬೇರೆ ಸ್ಪರ್ಧಿಗಳ ಜೊತೆ ಮಾತನಾಡಿದ್ದಾರೆ.

    ಗೇಮ್ ವಿಷಯ ಬಂದಾಗ ದಿವ್ಯಾ ಮತ್ತಿರರು ನಾನು ನಾನು ಅಂತ ಕೈ ಎತ್ತುತ್ತಾರೆ, ನಾನು ಗೇಮ್ ಆಡುತ್ತೇನೆ ಎಂದು ಹೇಳಿದರೆ, ಬೇರೆನೆ ಹೇಳುತ್ತಾರೆ. ನಾವು ಹಾಗಾದ್ರೆ ಸ್ಟ್ರಾಂಗ್ ಇಲ್ವಾ? ಅದಕ್ಕೆ ನಾನು ಪ್ರಶ್ನೆ ಮಾಡಿದೆ. ಆಮೇಲೆ ಆಸಕ್ತಿಯೇ ಇಲ್ಲದಂತೆ ತೋರಿಸ್ತಾರೆ, ಆಗ ನಾನು ಏನು ಮಾಡಲಿ ಎಂದು ಪ್ರಿಯಾಂಕಾ ತಿಮ್ಮೇಶ್ ಅವರು ಚಕ್ರವರ್ತಿ ಚಂದ್ರಚೂಡ್ ಜೊತೆ ಹೇಳಿಕೊಂಡಿದ್ದಾರೆ.

    ಬೇಕು ಬೇಕು ಅಂತ ನನ್ನ ಜೊತೆ ಜಗಳ ಮಾಡೋದಾ? ವೈಲ್ಡ್ ಕಾರ್ಡ್‍ದೇ ಒಂದು ಉದ್ದೇಶ ಇರತ್ತೆ ಎಂದು ನಿಧಿ ಸುಬ್ಬಯ್ಯ ಅವರು ದಿವ್ಯಾ ಉರುಡುಗ ಜೊತೆ ಚರ್ಚೆ ಮಾಡಿದ್ದಾರೆ. ಒಟ್ಟಿನಲ್ಲಿ ಈಗಾಗಲೇ ನಿಧಿ ಬಿಗ್ ಬಾಸ್ ಮನೆಯಲ್ಲಿ ಅನೇಕರ ಜೊತೆ ಮನಸ್ತಾಪ ಮಾಡಿಕೊಂಡು, ಜಗಳ ಆಡಿದ್ದರು. ಅವರ ನೇರನುಡಿಯನ್ನು ಕಿಚ್ಚ ಸುದೀಪ್ ಅವರು ವಾರದ ಕಥೆ ಕಿಚ್ಚನ ಜೊತೆ ಕಾರ್ಯಕ್ರಮದಲ್ಲಿ ಮೆಚ್ಚಿದ್ದರು. ಇದೀಗ ಮತ್ತೆ ಜಗಳದ ಮೂಲಕವಾಗಿಯೇ ಸುದ್ದಿಯಾಗಿದ್ದಾರೆ.

    ಗೇಮ್ ಆಡುವಾಗ ಪ್ರಿಯಾಂಕ ನಾನು ಆಡುತ್ತೇನೆ ಎಂದಾಗ ನಿಧಿ ಸ್ಟ್ರಾಂಗ್ ಇರುವವರು ಬೇಕು ಎಂದು ಹೇಳಿದ್ದರು. ಈ ವಿಚಾರವಾಗಿ ಪ್ರಿಯಾಂಕ ನೊಂದುಕೊಂಡಿದ್ದರು. ನಾನು ಸ್ಟ್ರಾಂಗ್ ಇಲ್ಲ ಅಂತಾ ಹೇಗೆ ಹೇಳುತ್ತೀರಾ? ನನ್ನ ಆಟದ ಬಗ್ಗೆ ನಿಮಗೆ ಗೊತ್ತಿಲ್ಲ ಅದಕ್ಕೆ ನಾನು ಆಡ್ತೀನಿ ಅಂತಾ ಹೇಳಿದೆ ಅಷ್ಟೇ ಅದನ್ನು ಬಿಟ್ಟು ನಾನು ಹೇಳುತ್ತಿಲ್ಲ ಎಂದು ಪ್ರಿಯಾಂಕ ಹೇಳಿದ್ದಾರೆ. ನಿಧಿ ಅವರು ಅವರದ್ದೇ ಶೈಲಿಯಲ್ಲಿ ಕೆಲವು ಕಾರಣಗಳನ್ನು ಕೊಟ್ಟು ಅರ್ಥ ಮಾಡಿಸುವ ಪ್ರಯತ್ನವನ್ನು ಮಾಡಿದ್ದಾರೆ. ಅದರೆ ಪ್ರಿಯಾಂಕ ಮಾತ್ರ ನಾನು ಜಗಳ ಆಡಲು ಆಗಲ್ಲ. ಹಾಗಾಗಿ ನಾನು ನನಗೆ ಅನ್ನಿಸಿದ್ದನ್ನು ಹೇಳುತ್ತೇನೆ ಎಂದು ಹೇಳಿದ್ದಾರೆ. ಇಬ್ಬರ ನಡುವಿನ ಮನಸ್ತಾಪ ಮಾತ್ರ ಸರಿ ಆದಂತಿಲ್ಲ. ಮುಂದಿನ ದಿನಗಳಲ್ಲಿ ಇವರ ಜಗಳ ಯಾವ ತಿರುವು ಪಡೆಯಲಿದೆ? ಅಥವಾ ಇವರಿಬ್ಬರು ರಾಜಿ ಮಾಡಿಕೊಳ್ಳಲಿದ್ದಾರಾ ಎಂದು ಕಾದು ನೋಡಬೇಕಾಗಿದೆ.