Tag: prlhad joshi

  • ಕೊರೊನಾ ನಿಯಂತ್ರಣಕ್ಕೆ ಸಕಲ ಸಿದ್ಧತೆಯಲಿದ್ದು, ಮತ್ತೆ ಲಾಕ್‍ಡೌನ್ ಇಲ್ಲ: ಜೋಶಿ

    ಕೊರೊನಾ ನಿಯಂತ್ರಣಕ್ಕೆ ಸಕಲ ಸಿದ್ಧತೆಯಲಿದ್ದು, ಮತ್ತೆ ಲಾಕ್‍ಡೌನ್ ಇಲ್ಲ: ಜೋಶಿ

    – ಡಿಕೆಶಿ ವಿರುದ್ಧ ವಾಗ್ದಾಳಿ

    ಹುಬ್ಬಳ್ಳಿ: ಈಗಾಗಲೇ ಕೊರೊನಾ ನಿಯಂತ್ರಣಕ್ಕೆ ನಾವು ಸಕಲ ಸಿದ್ಧತೆಯಲ್ಲಿದ್ದೇವೆ. ಹೀಗಾಗಿ ನಮ್ಮ ದೇಶದಲ್ಲಿ ಮತ್ತೆ ಲಾಕ್‍ಡೌನ್ ಮಾಡುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಯೂರೋಪ್ ರಾಷ್ಟದಲ್ಲಿ ಮತ್ತೆ ಲಾಕ್‍ಡೌನ್ ಮಾಡುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಭಾರತ ದೇಶದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯಾವುದೇ ಪ್ರಸ್ತಾವ ಇಲ್ಲ. ನಾವು ಈಗಾಗಲೇ ಕೊರೊನಾ ನಿಯಂತ್ರಣಕ್ಕೆ ಸಕಲ ಸಿದ್ಧತೆಯಲ್ಲಿದ್ದೇವೆ. ಹೀಗಾಗಿ ನಮ್ಮ ದೇಶದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

    ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿ, ಭ್ರಷ್ಟಾಚಾರದ ಬಗ್ಗೆ ಡಿಕೆಶಿ ಅವರು ಮಾತನಾಡುವುದು ಹಾಸ್ಯಾಸ್ಪದ. ಭ್ರಷ್ಟಾಚಾರದಲ್ಲಿ ಭಾಗಿಯಾಗಿ ಅವರು ಬೇಲ್ ಮೇಲೆ ಹೊರಗಡೆ ಇದ್ದಾರೆ. ಮೊದಲು ಅದನ್ನ ಡಿಕೆಶಿ ಅರಿತುಕೊಳ್ಳಲಿ. ಇದು ಕಾಂಗ್ರೆಸ್ಸಿಗರ ದೊಡ್ಡ ಸಮಸ್ಯೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅಭಿನಂದನ್‍ರನ್ನು ಬಿಡುಗಡೆ ಮಾಡದಿದ್ರೆ ಪಾಕ್ ಬ್ರಿಗೇಡ್‍ಗಳು ಧ್ವಂಸ ಆಗ್ತಿತ್ತು – ಧನೋವಾ

    ಪುಲ್ವಾಮಾ ದಾಳಿ ಕುರಿತು ಪಾಕಿಸ್ತಾನ ಪಾರ್ಲಿಮೆಂಟ್ ನಲ್ಲಿ ಸಚಿವರೊಬ್ಬರ ಹೇಳಿಕೆ ವಿಚಾರ ಸಂಬಂಧ ಮಾತನಾಡಿ, ಈ ಕುರಿತು ಅಲ್ಲಿನ ಮಂತ್ರಿಗಳೇ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಪುಲ್ವಾಮಾ ದಾಳಿ ಕುರಿತು ಇಲ್ಲಿನ ಕಾಂಗ್ರೆಸ್ ಪಕ್ಷದವರು ಸಾಕ್ಷಿ ಕೇಳಿದ್ದರು. ಈ ಬಗ್ಗೆ ಪಾಕಿಸ್ತಾನದವರೇ ಅವರಿಗೆ ಉತ್ತರ ಕೊಟ್ಟಿದ್ದಾರೆ. ಪಾಕಿಸ್ತಾನ ಭಯೋತ್ಪಾದನಾ ಚಟುವಟಿಕೆ ಮಾಡುತ್ತಿದೆ ಅಂತ ಜಾಗತಿಕ ವೇದಿಕೆಯಲ್ಲಿ ನಾವು ಹೇಳುತ್ತಿದ್ದೆವು. ಈಗ ಅವರೇ ಬಹಿರಂಗವಾಗಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡೋದಾಗಿ ಒಪ್ಪಿಕೊಂಡಿದ್ದಾರೆ. ಭಾರತ ದೇಶ ಸಾಕಷ್ಟು ಸದೃಢ ಎಂಬುದು ಪಾಕಿಸ್ತಾನಕ್ಕೆ ತಿಳಿದಿದೆ ಎಂದರು. ಇದನ್ನೂ ಓದಿ: ಸೇನಾ ಮುಖ್ಯಸ್ಥರ ಕಾಲು ನಡುಗುತ್ತಿತ್ತು- ಅಭಿನಂದನ್ ಬಿಡುಗಡೆಯ ಕಾರಣ ಬಿಚ್ಚಿಟ್ಟ ಪಾಕ್ ಸಂಸದ

  • ಬಜೆಟ್‍ನಲ್ಲಿ ಮಹದಾಯಿಗೆ ಹಣ ಬಿಡುಗಡೆ: ಬಿಎಸ್‍ವೈ ಭರವಸೆ

    ಬಜೆಟ್‍ನಲ್ಲಿ ಮಹದಾಯಿಗೆ ಹಣ ಬಿಡುಗಡೆ: ಬಿಎಸ್‍ವೈ ಭರವಸೆ

    ಬೆಂಗಳೂರು: ಕೇಂದ್ರ ಸರ್ಕಾರದಿಂದ ಮಹದಾಯಿ ಯೋಜನೆ ಸಂಬಂಧ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಕೂಡ ಫುಲ್ ಆಕ್ಟೀವ್ ಆಗಿದೆ. ಯೋಜನೆಗೆ ಅಗತ್ಯವಾದ ಪ್ರಕ್ರಿಯೆಗಳನ್ನು ಪ್ರಾರಂಭ ಮಾಡಲು ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಅಲ್ಲದೆ ಯೋಜನೆಗಾಗಿ ಈ ಬಜೆಟ್ ನಲ್ಲಿ ಹಣ ಬಿಡುಗಡೆ ಮಾಡೋದಾಗಿ ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

    ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಯಡಿಯೂರಪ್ಪ, ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸಮಸ್ಯೆಗೆ ಪರಿಹಾರ ಸಿಕ್ಕಿದೆ. ಪ್ರಧಾನಿ ಮೋದಿ, ಅಮಿತ್ ಶಾ ಯೋಜನೆಗೆ ಅನುಮತಿ ಕೊಟ್ಟಿದ್ದಾರೆ. ಬಹಳ ವರ್ಷಗಳ ಬೇಡಿಕೆ ಈಡೇರಿಕೆ ಆಗಿದೆ. ಈ ಅಧಿಸೂಚನೆಯಿಂದ ಆ ಭಾಗದ ಜನರಿಗೆ ಕುಡಿಯುವ ನೀರು ಮತ್ತು ನೀರಾವರಿಗೆ ಅನುಕೂಲ ಆಗುತ್ತೆ ಅಂತ ತಿಳಿಸಿದರು. ಅಧಿಸೂಚನೆ ಹೊರಡಿಸಿರೋದರಿಂದ 13.5. ಟಿಎಂಸಿ ನೀರು ನಮಗೆ ಸಿಗುತ್ತೆ. ಈ ನೀರಿನಿಂದ ಆ ಭಾಗದ ಜನರಿಗೆ ಹೆಚ್ಚು ಅನುಕೂಲ ಆಗುತ್ತೆ ಅಂತ ತಿಳಿಸಿದರು.

    ಮಹದಾಯಿಗಾಗಿ ಅನೇಕ ವರ್ಷಗಳು ಹೋರಾಟದ ಆಯ್ತು. ಹೋರಾಟದ ಫಲವಾಗಿ ಈ ಅಧಿಸೂಚನೆ ಆಗಿದೆ. ಮೋದಿ ಮತ್ತು ಅಮಿತ್ ಶಾ ಹೆಚ್ಚಿನ ಆಸಕ್ತಿಯಿಂದ ನೀರಾವರಿ ಸಚಿವರ ಮೇಲೆ ಒತ್ತಡ ತಂದು ಅಧಿಸೂಚನೆ ಹೊರಡಿಸಿದ್ದಾರೆ. ಈ ಬಜೆಟ್ ನಲ್ಲಿ ಹೆಚ್ಚು ಹಣ ನೀಡುತ್ತೇನೆ. ಆದಷ್ಟು ಬೇಗ ಕೆಲಸ ಪ್ರಾರಂಭ ಮಾಡ್ತೀನಿ ಅಂತ ಆ ಭಾಗದ ಜನರಿಗೆ ನಾನು ಭರವಸೆ ಕೊಡ್ತೀನಿ ಅಂತ ತಿಳಿಸಿದರು.

    ಕೇಂದ್ರಕ್ಕೆ ಜೋಷಿ ಅಭಿನಂದನೆ:
    ಮಹದಾಯಿ ವಿಚಾರವಾಗಿ ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪರನ್ನ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಮಾತನಾಡಿದ ಜೋಷಿ, ಗುರುವಾರ ರಾತ್ರಿ ಕೇಂದ್ರ ಸರ್ಕಾರ ಮಹದಾಯಿ ಅಧಿಸೂಚನೆ ಹೊರಡಿಸಿದೆ. ಸುಪ್ರೀಂಕೋರ್ಟ್ ತೀರ್ಪು ಬಂದ ಒಂದೇ ವಾರದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆ ಹೊರಡಿಸಲು ನಾವು ಕೆಲಸ ಮಾಡಿದ್ವಿ ಅಂತ ತಿಳಿಸಿದ್ರು. ಕರ್ನಾಟಕ ಸರ್ಕಾರ ಕೂಡ ಸುಪ್ರೀಂಕೋರ್ಟಿನಲ್ಲಿ ಉತ್ತಮವಾಗಿ ವಾದ ಮಾಡಿತ್ತು. ಕರ್ನಾಟಕ ಸರ್ಕಾರ ಮತ್ತು ಪ್ರಧಾನಿ ಮೋದಿ, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್‍ಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಅಂತ ತಿಳಿಸಿದರು.