Tag: Problem

  • ಆ ಆರು ತಿಂಗಳು ಕಷ್ಟ ಕಷ್ಟ: ಸಮಂತಾ ದಿನಕ್ಕೊಂದು ಪೋಸ್ಟ್

    ಆ ಆರು ತಿಂಗಳು ಕಷ್ಟ ಕಷ್ಟ: ಸಮಂತಾ ದಿನಕ್ಕೊಂದು ಪೋಸ್ಟ್

    ರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ನಟಿ ಸಮಂತಾ, ದಿನಕ್ಕೊಂದು ಪೋಸ್ಟ್ ಮಾಡಿ ತಮ್ಮ ಅಂತರಾಳದ ದುಗುಡಗಳನ್ನು ಅಭಿಮಾನಿಗಳ ಮುಂಚೆ ಬಿಚ್ಚಿಡುತ್ತಿದ್ದಾರೆ. ಸೋಷಿಯಲ್ ಮೀಡಿಯಾದ ಮೂಲಕ ಸದಾ ಅಭಿಮಾನಿಗಳ ಜೊತೆ ಕನೆಕ್ಟ್ ಆಗುವ ಸಮಂತಾ, ಈ ಬಾರಿ ಆರು ತಿಂಗಳ ಕಷ್ಟದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ದಿನಕ್ಕೂ ಅವು ಯಾತನೆಯ ದಿನಗಳು ಎಂದಿದ್ದಾರೆ.

    ಆರೋಗ್ಯದ ಸಮಸ್ಯೆಯಿಂದಾಗಿ ಸಿನಿಮಾ ರಂಗಕ್ಕೆ ಒಂದು ವರ್ಷಗಳ ಕಾಲ ಗೈರಾಗಿದ್ದ ಸಮಂತಾ, ಟ್ರೀಟ್ ಮೆಂಟ್ ನಂತರ ಮತ್ತೆ ಬಂದಿದ್ದರು. ಒಪ್ಪಿಕೊಂಡಿದ್ದ ಪ್ರಾಜೆಕ್ಟ್ ಗಳನ್ನು ಅವರು ಮುಗಿಸಿಕೊಡಬೇಕಿತ್ತು. ಹಾಗಾಗಿ ಆರು ತಿಂಗಳ ಕಾಲ ನೋವಿನಲ್ಲೇ ಕೆಲಸ ಮಾಡಿದ್ದಾರೆ. ಇನ್ನೂ ಸಾಧ್ಯವಿಲ್ಲ ಅನಿಸಿ, ಒಂದಷ್ಟು ಪ್ರಾಜೆಕ್ಟ್ ಗಳಿಗೆ ತೆಗೆದುಕೊಂಡಿದ್ದ ಅಡ್ವಾನ್ಸ್ ವಾಪಸ್ಸು ಮಾಡಿ ಮತ್ತೆ ಆರೋಗ್ಯದ ಕಡೆ ಗಮನ ಹರಿಸಿದ್ದಾರೆ.

    ಸಮಂತಾ (Samantha), ಒಪ್ಪಿಕೊಂಡಿದ್ದ ಸಿನಿಮಾಗಳನ್ನ ಮುಗಿಸಿಕೊಟ್ಟಿದ್ದಾರೆ. ಈಗ ತಮ್ಮ ಆರೋಗ್ಯದ ಕಡೆ ಗಮನ ವಹಿಸುತ್ತಿದ್ದಾರೆ. ಡಿವೋರ್ಸ್ ನಂತರ ಒಂದಲ್ಲಾ ಒಂದು ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಸಮಂತಾ ಸೂಕ್ತ ಚಿಕಿತ್ಸೆಗಾಗಿ ಅಮೆರಿಕಾಗೆ ಹಾರಿದ್ದಾರೆ. ತಮ್ಮ ಆರೋಗ್ಯ ಸುಧಾರಣೆಗೆ ಹೊಸ ಮಾದರಿಯ ಥೆರಪಿಯೊಂದನ್ನ ಮಾಡಿಸುತ್ತಿದ್ದಾರೆ. ಇದು ಆಮ್ಲಜನಕ ಥೆರಪಿಯಾಗಿದ್ದು, ಇದರ ಫೋಟೋವನ್ನ ನಟಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು.

    ನಾಗಚೈತನ್ಯ (NagaChaitanya) ಜೊತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಮೇಲೆ ಮಯೋಸಿಟಿಸ್ ಕಾಯಿಲೆಯಿಂದ ಸಮಂತಾ ಬಳಲುತ್ತಿದ್ದರು. ಇದಕ್ಕೆ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ಚರ್ಮದ ಸಮಸ್ಯೆ, ಶ್ವಾಸಕೋಶದ ಸಮಸ್ಯೆಯನ್ನ ನಟಿ ಎದುರಿಸುತ್ತಿದ್ದರು. ಹಾಗಾಗಿ ಸಿನಿಮಾಗೆ ಕೊಂಚ ಬ್ರೇಕ್ ನೀಡಿ, ತಮ್ಮ ಹೆಲ್ತ್ ಕಡೆ ನಟಿ ಗಮನ ಕೊಡ್ತಿದ್ದಾರೆ. ಇದನ್ನೂ ಓದಿ:‘ದಸರಾ’ ನಂತರ ಮತ್ತೆ ಜೊತೆಯಾದ ಸತೀಶ್ ನೀನಾಸಂ ಮತ್ತು ಶರ್ಮಿಳಾ

    ಚ್‌ಬಿಓಟಿ ಹೆಸರಿನ ಚಿಕತ್ಸೆಯನ್ನು ಸ್ಯಾಮ್ ಪಡೆದುಕೊಳ್ಳುತ್ತಿದ್ದಾರೆ. ಎಚ್‌ಬಿಓಟಿ ಎಂದರೆ ಹೈಪರ್‌ಬ್ಯಾರಿಕ್ ಆಕ್ಸಿಜನ್ ಥೆರಪಿ ಎಂದರ್ಥ. ಈ ಚಿಕಿತ್ಸಾ ವಿಧಾನದಲ್ಲಿ ವ್ಯಕ್ತಿಗೆ ಪ್ರತ್ಯೇಕವಾಗಿ ಶುದ್ಧ ಆಮ್ಲಜನಕವನ್ನು ಸಾಮಾನ್ಯಕ್ಕಿಂತಲೂ ಹೆಚ್ಚಿನ ವೇಗದಲ್ಲಿ ನೀಡಲಾಗುತ್ತದೆ. ಈ ಥೆರಪಿ ಮಾಡಿಸಲು ವಿಶೇಷವಾದ ಕೋಣೆ ಅಥವಾ ಚೇಂಬರ್‌ಗಳನ್ನು ನಿರ್ಮಿಸಿ ಅದರಲ್ಲಿ ಚಿಕಿತ್ಸೆ ಪಡೆಯುವವರನ್ನು ಕೂರಿಸಿ ಅಥವಾ ಮಲಗಿಸಿ ವೇಗವಾಗಿ ಶುದ್ಧ ಆಮ್ಲಜನಕವನ್ನು ಅವರ ದೇಹಕ್ಕೆ ಹರಿಸಲಾಗುತ್ತದೆ. ಈ ಚಿಕಿತ್ಸೆಯಿಂದ ಶ್ವಾಸಕೋಶಗಳು ಹೆಚ್ಚು ಆಮ್ಲಜನಕವನ್ನು ಹೀರಿಕೊಳ್ಳುತ್ತವೆ ಹಾಗೂ ರಕ್ತದಲ್ಲಿಯೂ ಆಮ್ಲಜನಕದ ಪ್ರಮಾಣ ಹೆಚ್ಚಾಗುತ್ತದೆ. ಚರ್ಮವು ಶುಷ್ಕವಾಗಿ ಬಿಳಿಚಿಕೊಳ್ಳುವುದರಿಂದ ರಕ್ಷಿಸುತ್ತದೆ, ರಕ್ತದಲ್ಲಿ ಆಮ್ಲಜನಕ ಪ್ರಮಾಣ ಹೆಚ್ಚಾಗುವುದರಿಂದ ರೋಗನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಶ್ವಾಸಕೋಶದ ಸೋಂಕುಗಳು ನಿವಾರಣೆಯಾಗುತ್ತದೆ. ಗಾಯಗಳು, ನೋವುಗಳು ಬೇಗನೆ ಮಾಯಲು, ವಾಸಿಯಾಗಲು ಪ್ರಾರಂಭವಾಗುತ್ತವೆ.

     

    ನಟಿ ಸಮಂತಾ, ವಿಜಯ್ ದೇವರಕೊಂಡ (Vijay Devarakonda) ಜೊತೆಗಿನ ‘ಖುಷಿ’ (Kushi)  ಸಿನಿಮಾ ಮುಗಿಸಿ ಕೊಟ್ಟಿದ್ದಾರೆ. ವರುಣ್ ಧವನ್ ಜೊತೆಗಿನ ಸಿಟಾಡೆಲ್ (Citadel) ಕೂಡ ಶೂಟಿಂಗ್ ಮುಗಿದಿದೆ. ಇಂಗ್ಲೀಷ್‌ನ ಒಂದು ಸಿನಿಮಾ, ಬಾಲಿವುಡ್ ಚಿತ್ರವೊಂದನ್ನ ನಟಿ ಓಕೆ ಎಂದಿದ್ದಾರೆ. ಸಮಂತಾ ಆರೋಗ್ಯದಲ್ಲಿ ಚೇತರಿಕೆ ಕಂಡ ಮೇಲೆ ಮತ್ತೆ ಸಿನಿಮಾ ಮಾಡಲಿದ್ದಾರೆ. ಅಲ್ಲಿಯವರೆಗೂ ನಟಿ ಬ್ರೇಕ್‌ ತೆಗೆದುಕೊಳ್ಳಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಆಸ್ಪತ್ರೆ ದಾಖಲು: ಅಭಿಮಾನಿಗಳಿಗೆ ಹೆಚ್ಚಿದೆ ಆತಂಕ

    ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಆಸ್ಪತ್ರೆ ದಾಖಲು: ಅಭಿಮಾನಿಗಳಿಗೆ ಹೆಚ್ಚಿದೆ ಆತಂಕ

    ಕ್ಷಿಣದ ಹೆಸರಾಂತ ನಟಿ, ಕನ್ನಡತಿ ರಶ್ಮಿಕಾ ಮಂದಣ್ಣ (Rashmika Mandanna) ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಸ್ವತಃ ಅವರನ್ನು ಚಿಕಿತ್ಸೆ ಮಾಡುತ್ತಿರುವ ವೈದ್ಯರೇ ವಿಷಯವನ್ನು ಬಹಿರಂಗ ಪಡಿಸಿದ್ದು, ಅಭಿಮಾನಿಗಳು ಆತಂಕ ವ್ಯಕ್ತ ಪಡಿಸಿದ್ದಾರೆ. ತಮ್ಮ ನೆಚ್ಚಿನ ನಟಿಗೆ ಏನಾಗಿದೆ ಎಂದು ಆತಂಕದಲ್ಲಿರುವ ಅಭಿಮಾನಿಗಳಿಗೆ ರಶ್ಮಿಕಾ ಪಡೆಯುತ್ತಿರುವ ಚಿಕಿತ್ಸೆ ಕುರಿತಾಗಿಯೂ ಅವರು ಮಾಹಿತಿ ನೀಡಿದ್ದಾರೆ. ರಶ್ಮಿಕಾ ಆರೋಗ್ಯ ಸ್ಥಿರವಾಗಿರುವ ಕುರಿತೂ ಮಾಹಿತಿ ಸಿಕ್ಕಿದೆ.

    ಸತತವಾಗಿ ಚಿತ್ರೀಕರಣದಲ್ಲಿ ತೊಡಗಿರುವ ಕಾರಣದಿಂದಾಗಿ ರಶ್ಮಿಕಾ ಅವರು ಮೊಣಕಾಲಿನ (Knee) ನೋವಿನ ಸಮಸ್ಯೆಯಿಂದ (Problem) ಬಳಲುತ್ತಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಅವರು ಹೈದರಾಬಾದ್ ನ ಪ್ರತಿಷ್ಠಿತ ಆಸ್ಪತ್ರೆಗೆ (Hospital) ದಾಖಲಾಗಿದ್ದಾರೆ. ಆರ್ಥೋ ಸ್ಪೆಷಲಿಸ್ಟ್ ಗುರುವಾ ರೆಡ್ಡಿ (Guruva Reddy) ಅವರು ರಶ್ಮಿಕಾಗೆ ಚಿಕಿತ್ಸೆ ನೀಡಿದ್ದು, ತಮಾಷೆಯಾಗಿ ‘ಸಾಮಿ ಸಾಮಿ ಅಂತ ಮೊಣಕಾಲಿಗೆ ಭಾರ ಹಾಕಿ ಡಾನ್ಸ್ ಮಾಡಿದ್ದೀರಿ. ಅದಕ್ಕಾಗಿ ಈ ನೋವು ಬಂದಿದೆ’ ಎಂದು ಬರೆದುಕೊಂಡಿದ್ದಾರೆ.

    ಮೊಣಕಾಲಿನ ನೋವು ಅತಿಯಾದ ಕಾರಣದಿಂದಾಗಿ ಚಿಕಿತ್ಸೆ ಪಡೆಯಲು ರಶ್ಮಿಕಾ ಬಂದಿದ್ದರು. ಅವರಿಗೆ ಸೂಕ್ತ ಚಿಕಿತ್ಸೆ ನೀಡಿದ್ದೇವೆ. ಸದ್ಯ ಅವರು ಸುಧಾರಿಸಿಕೊಳ್ಳುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಅವರು ಸರಿ ಹೋಗುತ್ತಾರೆ. ಎಂದಿನಂತೆ ಮತ್ತೆ ಸಿನಿಮಾಗಳ ಶೂಟಿಂಗ್ ನಲ್ಲೂ ಅವರು ಭಾಗಿಯಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಹೆಚ್ಚು ಮೊಣಕಾಲಿಗೆ ಕೆಲಸ ಕೊಟ್ಟಿರುವ ಕಾರಣದಿಂದಾಗಿಯೇ ಈ ನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ.  ಇದನ್ನೂ ಓದಿ : ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿರುವ ಎಕ್ಸ್‌ಕ್ಲೂಸಿವ್ ಸೆಲೆಬ್ರಿಟಿಗಳು

    ಗುಡ್ ಬೈ ಸೇರಿದಂತೆ ಹಲವು ಸಿನಿಮಾಗಳ ಸತತ ಚಿತ್ರೀಕರಣವೇ ಈ ಅನಾರೋಗ್ಯಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು ಕೆಲ ಕಾಲ ಜಿಮ್ ಬಿಡುವಂತೆಯೂ ಮತ್ತು ಮೊಣಕಾಲಿಗೆ ಭಾರ ಆಗುವಂತಹ ಕೆಲಸವನ್ನು ಮಾಡದಂತೆಯೇ ವೈದ್ಯರು ಸೂಚಿಸಿದ್ದಾರಂತೆ. ಹಾಗಾಗಿ ಕೆಲ ದಿನಗಳ ಕಾಲ ಜಿಮ್ ನಿಂದ ರಶ್ಮಿಕಾ ದೂರ ಇರಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನೆರೆ ಪೀಡಿತ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ಆಗದಂತೆ ಕ್ರಮವಹಿಸಿ: ಶ್ರೀಮಂತ ಪಾಟೀಲ್

    ನೆರೆ ಪೀಡಿತ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ಆಗದಂತೆ ಕ್ರಮವಹಿಸಿ: ಶ್ರೀಮಂತ ಪಾಟೀಲ್

    ಚಿಕ್ಕೋಡಿ: ನೆರೆ ಪೀಡಿತ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ವಿದ್ಯುತ್ ಸಮಸ್ಯೆ ಆಗದಂತೆ ಕ್ರಮ ವಹಿಸಲು ಶಾಸಕ ಶ್ರೀಮಂತ ಪಾಟೀಲ್ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಬೆಳಗಾವಿ ಜಿಲ್ಲೆಯ ಕೆಂಪವಾಡದಲ್ಲಿರುವ ಶಾಸಕರ ಕಚೇರಿಯಲ್ಲಿ ವಿದ್ಯುತ್ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಮಾತನಾಡಿದ ಅವರು, ಪ್ರವಾಹದಿಂದ ಬಿದ್ದು ಹೋಗಿರುವ ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಗಳನ್ನ ಆದಷ್ಟು ಬೇಗ ದುರಸ್ಥಿಗೊಳಿಸಿ ಜನರಿಗೆ ವಿದ್ಯುತ್ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಮುಖ್ಯಮಂತ್ರಿ ಆದ್ಮೇಲೆ ಕೋವಿಡ್ ಕಡಿಮೆ ಆಗುತ್ತಿದೆ: ಪ್ರಭು ಚವ್ಹಾಣ್

    ಪ್ರವಾಹದಿಂದ ಸಾಕಷ್ಟು ಪ್ರಮಾಣದಲ್ಲಿ ವಿದ್ಯುತ್ ಕಂಬಗಳು ಧರೆಗೆ ಉರುಳಿದ್ದು, ಅವುಗಳನ್ನ ದುರಸ್ಥಿ ಮಾಡಲು ಕ್ರಮ ಕೈಗೊಳ್ಳಬೇಕು. ಟ್ರಾನ್ಸ್‌ ಫಾರ್ಮರ್ ಗಳ ದುರಸ್ಥಿ ಮಾಡಿ ನದಿ ತೀರದ ಜನರಿಗೆ ಹಾಗೂ ರೈತರಿಗೆ ವಿದ್ಯುತ್ ಪೂರೈಸಬೇಕು ಎಂದು ಸೂಚನೆ ನೀಡಿದರು. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ಸೂಚನೆ ನೀಡಿದರು. ಈ ಸಮಯದಲ್ಲಿ ವಿದ್ಯುತ್ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

  • ಮೀನುಗಾರರ ಸಮಸ್ಯೆ, ವಿಧಾನಸೌಧದಲ್ಲಿ ಧ್ವನಿ ಎತ್ತುತ್ತೇನೆ: ಡಿಕೆಶಿ

    ಮೀನುಗಾರರ ಸಮಸ್ಯೆ, ವಿಧಾನಸೌಧದಲ್ಲಿ ಧ್ವನಿ ಎತ್ತುತ್ತೇನೆ: ಡಿಕೆಶಿ

    ಕಾರವಾರ: ರಾಜ್ಯದ ಕರಾವಳಿ ಭಾಗದ ಜ್ವಲಂತ ಸಮಸ್ಯೆಯಾದ ಮೀನುಗಾರರ ಸಮಸ್ಯೆ ಕುರಿತು ವಿಧಾನಸೌಧದಲ್ಲಿ ಧ್ವನಿ ಎತ್ತಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

    ಇಂದು ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಮೀನುಗಾರ 10 ಜನರಿಗೆ ಉದ್ಯೋಗ ಸೃಷ್ಟಿ ಮಾಡುತ್ತಾನೆ. ಹೀಗಾಗಿ ಕರಾವಳಿ ಜಿಲ್ಲೆಗಳಲ್ಲಿ ಸಂಚರಿಸಿ ಮೀನುಗಾರರ ಸಮಸ್ಯೆ ಆಲಿಸಲಾಗಿದೆ. ಸಮಸ್ಯೆಗಳ ಪಟ್ಟಿಯನ್ನು ಸಿದ್ಧ ಮಾಡಲಾಗಿದ್ದು, ವಿಧಾನ ಸೌಧದಲ್ಲಿ ಈ ಬಗ್ಗೆ ಧ್ವನಿ ಎತ್ತಲಾಗುವುದು ಎಂದರು.

    ಹೊನ್ನಾವರದ ಕಾಸರಕೋಡ್ ನಲ್ಲಿ ಬಂದರು ವಿಸ್ತರಣೆ ಯೋಜನೆ ನಡೆದಿದೆ. ಸರ್ಕಾರ ಏನೇ ಯೋಜನೆ ಜಾರಿಮಾಡಿದರೂ ಜನಪರವಾಗಿ ಕಾಂಗ್ರೆಸ್ ಹೋರಾಡುತ್ತದೆ. ಬಂದರು ಬೇರೆಲ್ಲಾದರೂ ಮಾಡಲಿ, ಆದರೆ ಮೀನುಗಾರರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಿ ಎಂದು ಆಗ್ರಹಿಸಿದರು. ಕಾಂಗ್ರೆಸ್ ನಲ್ಲಿ ಯಾವುದೇ ಬಣವಿಲ್ಲ, ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

  • ಡ್ರಗ್ಸ್ ಪ್ರಕಣರಣದ ಬಗ್ಗೆ ಈಗ ನಾವು ಮಾತನಾಡೋದು ಸರಿಯಲ್ಲ: ಶಿವಣ್ಣ

    ಡ್ರಗ್ಸ್ ಪ್ರಕಣರಣದ ಬಗ್ಗೆ ಈಗ ನಾವು ಮಾತನಾಡೋದು ಸರಿಯಲ್ಲ: ಶಿವಣ್ಣ

    ಬೆಂಗಳೂರು: ಡ್ರಗ್ಸ್ ಪ್ರಕರಣದ ಬಗ್ಗೆ ಈಗ ನಾವು ಮಾತನಾಡುವುದು ಸರಿಯಲ್ಲ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಹೇಳಿದ್ದಾರೆ.

    ಕರ್ನಾಟಕ ಚಲನಚಿತ್ರ ವಾಣಿಕ್ಯ ಮಂಡಳಿ ಮತ್ತು ಕಲಾವಿದರು ಸೇರಿ ಇಂದು ಸಿಎಂ ಅವರನ್ನು ಭೇಟಿ ಮಾಡಿ ಚಿತ್ರರಂಗದ ಸಮಸ್ಯೆ ಬಗ್ಗೆ ಮಾತನಾಡಿದರು. ಈ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಶಿವಣ್ಣ, ಡ್ರಗ್ ವಿಚಾರದಲ್ಲಿ ಈಗಲೇ ಮಾತನಾಡುವುದು ಬಹುಬೇಗ ಎನಿಸುತ್ತದೆ ಎಂದು ಹೇಳಿದರು.

    ಈಗ ಆ ವಿಚಾರ ನಮ್ಮ ಬಳಿ ಇಲ್ಲ. ಸಂಬಂಧಪಟ್ಟ ಇಲಾಖೆ ಅದನ್ನು ವಿಚಾರಣೆ ಮಾಡುತ್ತಿದೆ. ಕೇಂದ್ರ ಮತ್ತು ಸ್ಥಳೀಯ ಇಲಾಖೆಗಳು ವಿಚಾರಣೆ ಮಾಡುತ್ತಿವೆ. ಈ ಸಮಯದಲ್ಲಿ ಅದರ ಬಗ್ಗೆ ಹೇಳಿಕೆ ನೀಡುವುದು ಸರಿಯಲ್ಲ. ಅದು ಒಂದು ವ್ಯವಸ್ಥಿತವಾಗಿ ನಡೆದುಕೊಂಡು ಹೋಗುತ್ತಿದೆ. ಈ ಸಮಯದಲ್ಲಿ ನಾನು ಏನನ್ನೂ ಹೇಳುವುದಿಲ್ಲ. ದೇವರೊಬ್ಬ ಇದ್ದಾನೆ ಅವನು ನೋಡುತ್ತಿರುತ್ತಾನೆ ಅಲ್ಲವೇ ಎಂದು ಶಿವಣ್ಣ ತಿಳಿಸಿದ್ದಾರೆ.

    ಲಾಕ್‍ಡೌನ್‍ನಿಂದ ಸಿನಿಮಾ ಕ್ಷೇತ್ರಕ್ಕೆ ನಷ್ಟ ಅಂತು ವಿಪರೀತ ಆಗಿದೆ. ಆದರೆ ಎಷ್ಟು ನಷ್ಟ ಆಗಿದೆ ಎಂದು ಅಂದಾಜು ಮಾಡಲು ನಾನೇನು ಬ್ಯುಸಿನೆಸ್‍ಮೆನ್ ಅಲ್ಲ. ನಾನೊಬ್ಬ ನಟ ಅಷ್ಟೆ. ಸಿನಿಮಾ ಥಿಯೇಟರ್ ಬಗ್ಗೆ ಚರ್ಚೆ ಮಾಡಿದ್ದೇವೆ. ಸಮಸ್ಯೆಗೆ ಬಗ್ಗೆ ಸಿಎಂ ಸ್ಪಂದಿಸಿದ್ದಾರೆ. ಥೀಯೇಟರ್ ಓಪನ್ ಬಗ್ಗೆ ಕೇಂದ್ರದ ಮಾರ್ಗಸೂಚಿಯಂತೆ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಶಿವಣ್ಣ ಹೇಳಿದ್ದಾರೆ.

    ಸಿನಿಮಾ ಥೀಯೇಟರ್ ಓಪನ್ ಮಾಡುವುದು ದೊಡ್ಡದಲ್ಲ. ಆದರೆ ನಮ್ಮಲ್ಲಿ ಎಷ್ಟು ಜನ ನಿರ್ಮಾಪಕರು ರೆಡಿಯಾಗಿದ್ದಾರೆ ಎಂಬುದು ಮುಖ್ಯ. ಮೊದಲು ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಈಗಾಗಾಲೇ ಸುದೀಪ್, ಯಶ್, ವಿಜಯ್ ಸೇರಿದಂತೆ ಎಲ್ಲರೂ ಸಿನಿಮಾ ಚಿತ್ರೀಕರಣ ಆರಂಭಿಸಿದ್ದಾರೆ. ನಮ್ಮ ಸಮಸ್ಯೆ ಬಗ್ಗೆ ಸಿಎಂ ಬಳಿ ಕೇಳಿಕೊಂಡಿದ್ದೇವೆ. ಆ ಸಮಸ್ಯೆಗೆ ಪರಿಹಾರ ಒದಗಿಸುವ ಬಗ್ಗೆ ಸಿಎಂ ಭರವಸೆ ನೀಡಿದ್ದಾರೆ. ಡಿಸಿಎಂ ಅಶ್ವಥ್ ನಾರಾಯಣ್ ಅವರು ಕೂಡ ನಮ್ಮ ಸಮಸ್ಯೆಯನ್ನು ಆಲಿಸಿದ್ದಾರೆ ಎಂದು ತಿಳಿಸಿದ್ದಾರೆ.

  • ಸಮಸ್ಯೆಗೆ ಪರಿಹಾರ ಕೇಳಲು ಬಂದ ಮೂವರು ಮಹಿಳೆಯರ ಮೇಲೆ ಅತ್ಯಾಚಾರ

    ಸಮಸ್ಯೆಗೆ ಪರಿಹಾರ ಕೇಳಲು ಬಂದ ಮೂವರು ಮಹಿಳೆಯರ ಮೇಲೆ ಅತ್ಯಾಚಾರ

    – ಆಶ್ರಮದಲ್ಲಿ ಪತ್ತೆಯಾದ ಸಿಡಿಯಲ್ಲಿ ಸೆಕ್ಸ್ ವಿಡಿಯೋ

    ಭೋಪಾಲ್: ಮಾಂತ್ರಿಕ ಶಕ್ತಿಗಳ ಮೂಲಕ ತಮ್ಮ ಸಮಸ್ಯೆಗಳನ್ನು ಪರಿಹರಿಸುತ್ತೇನೆ ಎಂದು ವ್ಯಕ್ತಿಯೊಬ್ಬ ಮೂವರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ನರಸಿಂಗ್‍ಪುರ ಜಿಲ್ಲೆಯಲ್ಲಿ ನಡೆದಿದೆ.

    ಆರೋಪಿಯನ್ನು ಧರ್ಮೇಂದ್ರ ದಾಸ್ ಅಲಿಯಾಸ್ ಧರ್ಮೇಂದ್ರ ದುಬೆ (35) ಎಂದು ಗುರುತಿಸಲಾಗಿದೆ. ಈತನನ್ನು ಈಗಾಗಲೇ ಬೇರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಬಂಧಿಸಿದ ನಂತರ ಮೂವರು ಮಹಿಳೆಯರು ಪೊಲೀಸ್ ಠಾಣೆಗೆ ಬಂದು ದುಬೆ ವಿರುದ್ಧ ದೂರು ದಾಖಲಿಸಿದ್ದಾರೆ.

    ಆರೋಪಿ ಮಾಂತ್ರಿಕ ಶಕ್ತಿಗಳ ಮೂಲಕ ನಮ್ಮ ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತೇನೆ ಎಂದು ನಂಬಿಸಿ ನಮ್ಮ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇಬ್ಬರು ಅಪ್ರಾಪ್ತ ಸಹೋದರಿಗೂ ಸಹ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾರೆ. ಇದೀಗ ಪೊಲೀಸರು ಆರೋಪಿ ವಿರುದ್ಧ ಒಟ್ಟು ನಾಲ್ಕು ಎಫ್‍ಐಆರ್ ದಾಖಲಿಸಿದ್ದಾರೆ.

    ಏನಿದು ಪ್ರಕರಣ?
    ಆರೋಪಿ ದುಬೆ ಮದುವೆಯಾಗಿದ್ದು, ಮಗು ಕೂಡ ಇದೆ. ಈತ ತನ್ನ ಮನೆಯ ಆವರಣದಲ್ಲಿ ಒಂದು ಸಣ್ಣ ಆಶ್ರಮವನ್ನು ನಿರ್ಮಿಸಿಕೊಂಡಿದ್ದು, ಸ್ವಯಂ ದೇವಮಾನವ ಎಂದು ಘೋಷಿಸಿಕೊಂಡಿದ್ದನು. ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಇಲ್ಲಿಗೆ ಬರುತ್ತಿದ್ದರು. ಕಳೆದ ವಾರ ಆತ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾನೆ ಎಂಬ ಮಾಹಿತಿ ನಮಗೆ ಸಿಕ್ಕಿತ್ತು. ತಕ್ಷಣ ಪೊಲೀಸರು ಆತನ ಮನೆಯಲ್ಲಿ ದಾಳಿ ನಡೆಸಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಈ ವೇಳೆ ಆರೋಪಿ ದುಬೆ ಆಶ್ರಮದಲ್ಲಿ ಎರಡು ಕಿಲೋಗ್ರಾಂಗಳಷ್ಟು ಗಾಂಜಾ ಪತ್ತೆಯಾಗಿದೆ. ಅಲ್ಲದೇ ಸಿಡಿಗಳು, ಫೋಟೋಗಳು ಪತ್ತೆಯಾಗಿದ್ದು, ಎಲ್ಲವನ್ನು ವಶಪಡಿಸಿಕೊಂಡು ಆತನನ್ನು ಬಂಧಿಸಿದ್ದಾರೆ. ಆರೋಪಿ ದುಬೆ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಜೈಲಿಗೆ ಕಳುಹಿಸಲಾಗಿದೆ. ಆದರೆ ಬಂಧಿಸಿದ ನಂತರ ಮೂವರು ಮಹಿಳೆಯರು ಆತನ ವಿರುದ್ಧ ಅತ್ಯಾಚಾರ ಮತ್ತು ಕಿರುಕುಳದ ದೂರುಗಳನ್ನು ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಮೊಹಂತಿ ಮರವಿ ತಿಳಿಸಿದರು.

    ಕಳೆದ ಐದು ವರ್ಷಗಳಿಂದ ದುಬೆ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾನೆ. ಆಶ್ರಮದಿಂದ ವಶಪಡಿಸಿಕೊಂಡ ಸಿಡಿಗಳಲ್ಲಿ ಮಹಿಳೆಯೊಂದಿಗೆ ಸೆಕ್ಸ್ ಮಾಡಿದ್ದ ವಿಡಿಯೋಗಳು ಪತ್ತೆಯಾಗಿವೆ. ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‍ಮೇಲ್ ಮಾಡಿ ಅನೇಕ ತಿಂಗಳುಗಳಿಂದ ಮಹಿಳೆಯರ ಮೇಲೆ ಅತ್ಯಾಚಾರ ಎಸಗುತ್ತಿದ್ದನು. ಆದರೆ ಮಹಿಳೆಯರು ಭಯದಿಂದ ದೂರು ನೀಡಿರಲಿಲ್ಲ. ಸದ್ಯಕ್ಕೆ ವಿಡಿಯೋ ಮೂಲಕ ಸಂತ್ರಸ್ತೆಯರ ಕುಟುಂಬಗಳನ್ನು ಸಂಪರ್ಕಿಸಿ ದೂರು ನೀಡುವಂತೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಸಂಕಷ್ಟದಲ್ಲಿ ಕನ್ನಡ ಚಿತ್ರರಂಗ – ಶಿವಣ್ಣ ಮನೆಯಲ್ಲಿ ಇಂದು ಸಭೆ

    ಸಂಕಷ್ಟದಲ್ಲಿ ಕನ್ನಡ ಚಿತ್ರರಂಗ – ಶಿವಣ್ಣ ಮನೆಯಲ್ಲಿ ಇಂದು ಸಭೆ

    ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಸ್ಯಾಂಡಲ್‍ವುಡ್‍ನ ಕಾರ್ಮಿಕರ ಬಗ್ಗೆ ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಮನೆಯಲ್ಲಿ ಸಭೆ ನಡೆಯಲಿದೆ.

    ಶಿವಣ್ಣನ ಮನೆಯಲ್ಲೇ ಸಭೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಸ್ಯಾಂಡಲ್‍ವುಡ್‍ನ ಸಮಸ್ಯೆಗಳ ಕುರಿತು ಚರ್ಚಿಸಲಾಗುತ್ತಿದೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಅದರ ಸಂಸ್ಥೆಗಳು ಸಭೆಯಲ್ಲಿ ಭಾಗಿಯಾಗಲಿವೆ. ಇಂದು ಮಧ್ಯಾಹ್ನ ಸುಮಾರು 12:30ಕ್ಕೆ ನಾಗವಾರದ ಶಿವರಾಜ್ ಕುಮಾರ್ ಮನೆಯಲ್ಲಿ ಮಹತ್ವದ ಸಭೆ ನಡೆಯಲಿದೆ.

    ಕೊರೊನಾದಿಂದ ಕಳೆದ ನಾಲ್ಕು ತಿಂಗಳಿಂದ ಚಿತ್ರರಂಗ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಇತ್ತ ಸರ್ಕಾರ ಎಲ್ಲಾ ವರ್ಗಕ್ಕೂ ಪ್ಯಾಕೇಜ್ ಘೋಷಿಸಿದೆ. ಆದರೆ ಚಿತ್ರರಂಗಕ್ಕೆ ಯಾವುದೇ ಪ್ಯಾಕೇಜ್ ಫೋಷಣೆ ಮಾಡಿಲ್ಲ. ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದರ ಬಗ್ಗೆ ಅಸಮಾಧಾನ ಇದೆ. ಹೀಗಾಗಿ ಸಭೆಯಲ್ಲಿ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.

    ಶಿವಣ್ಣನ ಮನೆಯಲ್ಲಿ ಸಭೆ ನಡೆದ ನಂತರ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಸರ್ಕಾರದ ಮುಂದೆ ತಮ್ಮ ಬೇಡಿಕೆಯನ್ನಿಡುವ ಸಾಧ್ಯತೆ ಇದೆ. ಸಭೆಯಲ್ಲಿ ಕಲಾವಿದರು, ತಂತ್ರಜ್ಞರು, ನಿರ್ಮಾಪಕರು, ಚಿತ್ರಮಂದಿರದ ಮಾಲೀಕರು ಮತ್ತು ವಾಣಿಜ್ಯ ಮಂಡಳಿಯ ಅಧ್ಯಕ್ಷರು ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

  • ಕುಡಿಯಲು ನೀರಿಲ್ಲದೇ ಗ್ರಾಮಸ್ಥರು ಪರದಾಟ

    ಕುಡಿಯಲು ನೀರಿಲ್ಲದೇ ಗ್ರಾಮಸ್ಥರು ಪರದಾಟ

    – ಮಳೆಯ ನೀರಿನ ಆಶ್ರಯದಲ್ಲೇ ಬದುಕು

    ಬೆಂಗಳೂರು: ರಾಜ್ಯದಲ್ಲಿ ಒಂದು ಕಡೆ ಕೊರೊನಾ ಅಟ್ಟಹಾಸ, ಮತ್ತೊಂದು ಕಡೆ ನೀರಿಗೆ ಹಾಹಾಕಾರ ಉಂಟಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕಾಸಿನಕಲ್ಲು ಗ್ರಾಮದಲ್ಲಿ ಮೂಲಭೂತ ಸೌಕರ್ಯದ ಕೊರತೆ ಉಂಟಾಗಿದೆ.

    ಗ್ರಾಮಕ್ಕೆ ತೆರಳಲು ರಸ್ತೆ ಇಲ್ಲ, ಕುಡಿಯಲು ನೀರಿಲ್ಲದೆ ಗ್ರಾಮಸ್ಥರು ಪರದಾಟ ನಡೆಸುತ್ತಿದ್ದಾರೆ. ಅಲ್ಲದೇ ಮಳೆಯ ನೀರಿನ ಆಶ್ರಯದಲ್ಲೇ ದಿನದ ಬದುಕು ಸಾಗಿಸುತ್ತಿದ್ದಾರೆ. ಸಣ್ಣ ಕೆರೆಯ ನೀರನ್ನು ನಂಬಿ ಜೀವನ ನಡೆಸುತ್ತಿರುವ ಗ್ರಾಮದ ಜನರು ದಿನನಿತ್ಯದ ಬಳಕೆಗೆ ಕೊಳಕು ನೀರು ಆಧಾರವಾಗಿದೆ ಎಂದು ದೂರಿದ್ದಾರೆ.

    ದುಡ್ಡು ಕೊಟ್ಟು ಕುಡಿಯುವ ನೀರನ್ನು ಕೊಳ್ಳಬೇಕು. 500 ರಿಂದ 700 ರೂ. ಕೊಟ್ಟು ನೀರು ಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಕಲ್ಲು ಬಂಡೆಗಳ ನಡುವೆ ನಡೆದು ನೀರು ತರುವ ಸ್ಥಿತಿ ನಮ್ಮ ಗ್ರಾಮಕ್ಕೆ ಬಂದಿದೆ. ಈಗಲಾದರೂ ನಮ್ಮ ಸಮಸ್ಯೆ ಬಗೆಹರಿಸಿ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಅಲ್ಲದೇ ನೆಲಮಂಗಲ ಶಾಸಕ ಶ್ರೀನಿವಾಸ ಮೂರ್ತಿ ಹಾಗೂ ತಾಲೂಕು ಅಧಿಕಾರಿಗಳು ಸಹ ಗಮನಹರಿಸಬೇಕಿದೆ ಎಂದಿದ್ದಾರೆ.

  • ಲಾಕ್‍ಡೌನ್ ಎಫೆಕ್ಟ್: ಮಗುವಿಗೆ ಚಿಕಿತ್ಸೆ ಕೊಡಿಸಲಾಗದೆ ಪೋಷಕರ ಪರದಾಟ

    ಲಾಕ್‍ಡೌನ್ ಎಫೆಕ್ಟ್: ಮಗುವಿಗೆ ಚಿಕಿತ್ಸೆ ಕೊಡಿಸಲಾಗದೆ ಪೋಷಕರ ಪರದಾಟ

    ಚಾಮರಾಜನಗರ: ಲಾಕ್‍ಡೌನ್ ಪರಿಣಾಮ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗದೆ ಹೆತ್ತವರು ಸಂಕಟ ಪಡುತ್ತಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲದಲ್ಲಿ ನಡೆದಿದೆ.

    ಕೂಲಿಗಾಗಿ ಬಂದ ಧಾರವಾಡ ಮೂಲದ 14 ವಲಸೆ ಕಾರ್ಮಿಕರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಅವರ ಕಷ್ಟ ಹೇಳತೀರದಾಗಿದೆ. ಈ ಪೈಕಿ ಗುರುನಾಥ್ ಮತ್ತು ತುಳಸಮ್ಮನ ಅವರ ಚಿಕ್ಕ ಮಗುವಿನ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ ಹೆತ್ತವರು ಒದ್ದಾಡುತ್ತಿದ್ದಾರೆ.

    ಗುರುನಾಥ್ ದಂಪತಿ ಧಾರವಾಡ ಜಿಲ್ಲೆ ಕುಂಬಾರಕೊಪ್ಪ ಗ್ರಾಮದವರಾಗಿದ್ದು, ಕೊಳ್ಳೇಗಾಲದ ಚೆಸ್ಕಾಂ ಕಟ್ಟಡ ನಿರ್ಮಾಣಕ್ಕೆ ಬಂದಿದ್ದಾರೆ. ಆದರೆ ಅವರ ಮಗುವಿಗೆ ಚಿಕ್ಕ ವಯಸ್ಸಿನಿಂದಲೂ ನರ ದೌರ್ಬಲ್ಯ ಸಮಸ್ಯೆ ಇದೆ. 3 ತಿಂಗಳಿಗೊಮ್ಮೆ ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಗೆ ಹೋಗಿ ಮಗುವನ್ನು ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ ಲಾಕ್‍ಡೌನ್ ಪರಿಣಾಮ ಬೆಳಗಾವಿಗೆ ತೆರಳಲು ಸಾಧ್ಯವಾಗುತ್ತಿಲ್ಲ.

    ಮಗು ನೋವಿನಿಂದ ದಿನವಿಡೀ ಅಳುತ್ತಿದೆ ಎಂದು ತಂದೆ ಗುರುನಾಥ್ ಸುದ್ದಿಗಾರರ ಜೊತೆ ತಮ್ಮ ಅಳಲು ತೋಡಿಕೊಂಡಿದ್ದಾರೆ. ಜಿಲ್ಲಾಡಳಿತ ಮಗುವಿನ ಆರೋಗ್ಯದ ದೃಷ್ಟಿಯಿಂದ ಚಿಕಿತ್ಸೆಗಾಗಿ ಬೆಳಗಾವಿಗೆ ಆಸ್ಪತ್ರೆಗೆ ಕಳುಹಿಸಿಕೊಡಬೇಕು. ಕುಟುಂಬ ತೊರೆದು ವಲಸೆ ಬಂದಿದ್ದೇವೆ. ದಯಮಾಡಿ ಸಹಾಯ ಮಾಡಬೇಕು ಎಂದು ವಲಸೆ ಕಾರ್ಮಿಕರು ಮನವಿ ಮಾಡಿದ್ದಾರೆ.

  • ರಾಜ್ಯದಲ್ಲಿ ಹೆಚ್ಚುತ್ತಿದೆ ಕಿಡ್ನಿ ಸಮಸ್ಯೆ- ರೋಗಕ್ಕೆ ಹೆಚ್ಚು ತುತ್ತಾಗುತ್ತಿದ್ದಾರೆ ಬೆಂಗ್ಳೂರಿಗರು

    ರಾಜ್ಯದಲ್ಲಿ ಹೆಚ್ಚುತ್ತಿದೆ ಕಿಡ್ನಿ ಸಮಸ್ಯೆ- ರೋಗಕ್ಕೆ ಹೆಚ್ಚು ತುತ್ತಾಗುತ್ತಿದ್ದಾರೆ ಬೆಂಗ್ಳೂರಿಗರು

    ಬೆಂಗಳೂರು: ರಾಜ್ಯದಲ್ಲಿ ಕಿಡ್ನಿ ಸಮಸ್ಯೆಯಿಂದ ಬಳಲುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಚಿಕ್ಕ ವಯಸ್ಸಿಗೇನೆ ಕಿಡ್ನಿಗಳನ್ನ ಕಳೆದುಕೊಂಡು ಜನರ ಜೀವನ ನರಕವಾಗುತ್ತಿದೆ. ಅದರಲ್ಲೂ ಕಿಡ್ನಿ ಡ್ಯಾಮೇಜ್ ಮಾಡಿಕೊಳ್ಳೋರ ಸಂಖ್ಯೆ ಬೆಂಗಳೂರಿನಲ್ಲಿ ಹೆಚ್ಚಿದ್ದು, ಪ್ರತಿ ವರ್ಷಕ್ಕೆ 2 ಲಕ್ಷ ಮಂದಿ ಹೊಸ ಕಿಡ್ನಿ ಸಮಸ್ಯೆಯ ರೋಗಿಗಳು ಆಸ್ಪತ್ರೆ ಸೇರುತ್ತಿದ್ದಾರೆ ಎನ್ನಲಾಗಿದೆ.

    ಬದಲಾಗುತ್ತಿರುವ ಜನರ ಜೀವನ ಶೈಲಿಯಿಂದ ಒಂದಲ್ಲ ಒಂದು ಕಾಯಿಲೆಗೆ ತುತ್ತಾಗ್ತಿದ್ದಾರೆ. ಅದರಲ್ಲೂ ಸಿಲಿಕಾನ್ ಸಿಟಿ ಮಂದಿ ನೀರನ್ನು ಕುಡಿಯುವುದು ಕೂಡ ಕಮ್ಮಿ, ಹೀಗಾಗಿ ಇತ್ತೀಚೆಗೆ ಸಾರ್ವಜನಿಕರಲ್ಲಿ ಕಿಡ್ನಿ ಸಮಸ್ಯೆ ಹೆಚ್ಚಾಗ್ತಿದೆ. ಕಿಡ್ನಿಯಲ್ಲಿ ಕಲ್ಲುಗಳು ಬೆಳೆಯುವ ಪ್ರಕರಣಗಳು ಜಾಸ್ತಿಯಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಅದರಲ್ಲೂ ಬೇಸಿಗೆ ಕಾಲ ಬಂದರೆ ಈ ಪ್ರಕರಣಗಳ ಸಂಖ್ಯೆ ಶೇ. 20ರಷ್ಟು ಹೆಚ್ಚಾಗಲಿದೆ ಎಂದು ವೈದ್ಯರು ಹೇಳಿದ್ದಾರೆ. ಅದರಲ್ಲೂ ಕಳೆದ ಹದಿನೈದು ತಿಂಗಳುಗಳಿಂದ ಕಿಡ್ನಿ ಸ್ಟೋನ್ ಇರುವ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದು, ನಗರದ ವಿಕ್ಟೋರಿಯಾ ಆವರಣದಲ್ಲಿರುವ ನೆಪ್ರೋಯುರಾಲಜಿ ಆಸ್ಪತ್ರೆಯಲ್ಲಿ ಬೆಡ್ ಕೂಡ ಸಿಗುತ್ತಿಲ್ಲ. ಇದಕ್ಕೆ ನಮ್ಮ ಜೀವನ ಶೈಲಿಯೇ ಕಾರಣ ಎಂದು ವೈದ್ಯರು ತಿಳಿಸಿದರು.

    ದಿನಕ್ಕೆ 3-4 ಲೀಟರ್ ನೀರು ಕುಡಿಯುವುದು ಒಳ್ಳೆದು:
    ಸಿಕ್ಕಾಪಟ್ಟೆ ಹೆಚ್ಚಾಗ್ತಿದ್ದಾರೆ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಜಂಕ್ ಫುಡ್, ಬಿಯರ್ ಕುಡಿತದಿಂದ ಕಿಡ್ನಿ ಸಮಸ್ಯೆ ಉಲ್ಬಣಗೊಳ್ಳುತ್ತದೆ. ಹೆಚ್ಚು ನೀರು ಕುಡಿಯುವವರ ಸಂಖ್ಯೆ ಕಡಿಮೆ ಆಗಿರುವುದರಿಂದ ಕಿಡ್ನಿಯಲ್ಲಿ ಕಲ್ಲುಗಳು ಆಗುತ್ತಿರುವ ರೋಗಿಗಳ ಸಂಖ್ಯೆ ಶೇ. 20ರಷ್ಟು ಹೆಚ್ಚಳವಾಗಿದೆ. ಬಿಪಿ, ಶುಗರ್ ಇರುವ ಮಂದಿಗೆ ಕಿಡ್ನಿ ವೈಫಲ್ಯವಾಗುತ್ತಿದೆ. ದಿನಕ್ಕೆ ಕನಿಷ್ಟ 3ರಿಂದ 4 ಲೀಟರ್ ನೀರನ್ನ ಕುಡಿಯಲೇ ಬೇಕು. ಅದರಲ್ಲೂ ಬೇಸಿಗೆ ಬಂದರೆ ರೋಗಿಗಳ ಸಂಖ್ಯೆ ಹೆಚ್ಚಾಗಲಿದೆ. ಉಪ್ಪಿನಾಂಶ, ರೆಡ್ ಮೀಟ್‍ನಿಂದಲೂ ಕಿಡ್ನಿ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ ಎಂದು ನೆಪ್ರೋಯುರಾಲಜಿ ಆಸ್ಪತ್ರೆ ನಿರ್ದೇಶಕ ಡಾ. ಕೇಶವ್ ಮೂರ್ತಿ ಹೇಳಿದರು.

    ಕಳೆದ ಹದಿನೈದು ದಿನಗಳಿಂದ ನೆಪ್ರೋಯುರಾಲಜಿಗೆ ಬರುವ ರೋಗಿಗಳು ಹೆಚ್ಚುತ್ತಿದ್ದಾರೆ. ಇತ್ತೀಚೆಗೆ ನಾವು ತಿನ್ನೋ ಪದಾರ್ಥಗಳೇ ನಮ್ಮ ಕಿಡ್ನಿ ಸಮಸ್ಯೆ ಕಾರಣ. ಸರಿಯಾಗಿ ನೀರು ಕುಡಿಯದ ಪರಿಣಾಮ ಕಿಡ್ನಿಯಲ್ಲಿ ಕಲ್ಲು ಬೆಳೆಯುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ದೇಹದ ಅತ್ಯಮೂಲ್ಯ ಅಂಗವಾಗಿರುವ ಕಿಡ್ನಿಗೆ ಇತ್ತೀಚೆಗೆ ಹೆಚ್ಚು ಸಮಸ್ಯೆ ಆಗ್ತಿದೆ.