Tag: Problem

  • ಸಚಿವರ ಸನ್ಮಾನ ಕಾರ್ಯಕ್ರಮದಲ್ಲಿ ಪವರ್ ಕಟ್- ಅಧಿಕಾರಿಗಳ ವಿರುದ್ಧ ಬಂಡೆಪ್ಪ ಕಾಶಂಪುರ್ ಗರಂ

    ಸಚಿವರ ಸನ್ಮಾನ ಕಾರ್ಯಕ್ರಮದಲ್ಲಿ ಪವರ್ ಕಟ್- ಅಧಿಕಾರಿಗಳ ವಿರುದ್ಧ ಬಂಡೆಪ್ಪ ಕಾಶಂಪುರ್ ಗರಂ

    ಬೀದರ್: ಸನ್ಮಾನ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡುವಾಗ ಎರಡು ಬಾರಿ ಕರೆಂಟ್ ಕಟ್ಟಾಗಿದ್ದಕ್ಕೆ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಸಹಕಾರ ಸಚಿವ ಬಂಡೆಪ್ಪ ಕಾಶಂಪುರ್ ಗರಂ ಆಗಿದ್ದ ಘಟನೆ ಬೀದರ್‍ ರಂಗಮಂದಿರದಲ್ಲಿ ನಡೆದಿದೆ.

    ಇಂದು ಸಚಿವರಿಗೆ ದಲಿತ ಪರ ಸಂಘಟನೆಗಳಿಂದ ಸನ್ಮಾನ ಕಾರ್ಯಕ್ರಮ ಅಯೋಜನೆ ಮಾಡಲಾಗಿತ್ತು. ಈ ವೇಳೆ ಎರಡು ಬಾರಿ ವಿದ್ಯುತ್ ಕೈಕೊಟ್ಟಿತ್ತು. ಇದರಿಂದ ಗರಂ ಆದ ಸಚಿವರು ರೈತರಿಗಾಗಿ ನಿರಂತರ ಜ್ಯೋತಿ ನೀಡಬೇಕು ಹಾಗೂ ಸಮಸ್ಯೆ ಇರುವ ಕಡೆ ದುರಸ್ಥಿ ಕಾರ್ಯ ನಡೆಸ ಬೇಕು ಎಂದು ಜೆಎಸ್ಕಾಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೆ ಅದರು ಸಮಸ್ಯೆ ಬಗೆಹರಿದಿಲ್ಲ ಎಂದು ಗರಂ ಆದರು.

    ರೈತರು ನಿರಂತವಾಗಿ ಈ ಕುರಿತು ತಮಗೇ ದೂರು ನೀಡುತ್ತಾರೆ. ವಿದ್ಯುತ್ ಸರಿಯಾಗಿ ನೀಡದ ಹಿನ್ನೆಲೆ ಕಬ್ಬು ಸೇರಿದಂತೆ ಹಲವು ಬೆಳೆಗಳು ಒಣಗಿ ಹೋಗಿದೆ. ರೈತರು ಅಧಿಕಾರಿಗಳಿಗೆ ಫೋನ್ ಮಾಡಿ ಸುಸ್ತಾಗಿ ಕೊನೆಗೆ ನಮಗೆ ಫೋನ್  ಮಾಡುವ ಸ್ಥಿತಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

  • ಉಮ್ಮಳೆ ಜೋಗ್ ಗ್ರಾಮದ ಯುವಕರು ಮದ್ವೆಯಾಗಬೇಕೆಂದ್ರೆ ಊರು ಬಿಡ್ಲೇ ಬೇಕು!

    ಉಮ್ಮಳೆ ಜೋಗ್ ಗ್ರಾಮದ ಯುವಕರು ಮದ್ವೆಯಾಗಬೇಕೆಂದ್ರೆ ಊರು ಬಿಡ್ಲೇ ಬೇಕು!

    ಕಾರವಾರ: ಇಲ್ಲಿನ ಉಮ್ಮಳೆ ಜೋಗ್ ಗ್ರಾಮದ ಯುವಕರಿಗೆ ಹೆಣ್ಣು ಕೊಡುವುದಿಲ್ಲ. ಮದುವೆಯಾಗಲೇಬೇಕು ಅಂದರೆ ಊರನ್ನ ಬಿಡಲೇ ಬೇಕು. ಇನ್ನು ಈ ಗ್ರಾಮದ ಜನರಿಗೆ ಸ್ವಂತ ಮನೆಯಿದ್ದರು ಬಾಡಿಗೆ ಮನೆಯಲ್ಲಿ ಇರುವ ಸ್ಥಿತಿ ಇಲ್ಲಿಯದ್ದು, ಇದೊಂದು ಶಾಪಗ್ರಸ್ಥ ಗ್ರಾಮವಾಗಿದೆ.

    ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದಿಂದ 20 ಕಿಲೋಮೀಟರ್ ದೂರದ ವೈಲವಾಡ ಗ್ರಾಮಪಂಚಾಯ್ತಿ ವ್ಯಾಪ್ತಿಯ ಉಮ್ಮಳೆ ಜೋಗ್ ಗ್ರಾಮದಲ್ಲಿ ಯುವಕರಿಗೆ ಮದುವೆಯಾಗದಂತೆ ಅಡ್ಡಿಯಾಗಿರುವುದು. ಈ ಗ್ರಾಮದ ಸುತ್ತಲೂ ಕಾಳಿ ನದಿನೀರು ಹರಿಯುತಿದ್ದು, ದ್ವೀಪ ಪ್ರದೇಶವಾಗಿದೆ. ಹೀಗಾಗಿ ಈ ಗ್ರಾಮಕ್ಕೆ ತೆರಳಬೇಕೆಂದರೆ ಸಣ್ಣ ಪಾತಿ ದೋಣಿಯಲ್ಲಿ ಕುಳಿತು ಜೀವ ಕೈಯಲ್ಲಿ ಹಿಡಿದು ಪ್ರಯಾಣಿಸಬೇಕು.

    ಸುಮಾರು 35 ಮನೆಗಳಿರುವ ಈ ದ್ವೀಪದಲ್ಲಿ 50 ಎಕರೆ ವಿಸ್ತೀರ್ಣ ಹೊಂದಿರುವ ಕೃಷಿ ಪ್ರದೇಶವಾಗಿದೆ. ಸುಮಾರು 500 ಜನರು ಈ ಗ್ರಾಮದಲ್ಲಿ ವಾಸವಾಗಿದ್ದು, ವ್ಯವಸಾಯವನ್ನು ನಂಬಿ ಬದುಕುತಿದ್ದಾರೆ. ಇಷ್ಟೆಲ್ಲಾ ಜನರಿದ್ದರೂ ವಿದ್ಯುತ್ ಹೊರತುಪಡಿಸಿ ಸರ್ಕಾರದಿಂದ ಈ ಗ್ರಾಮಕ್ಕೆ ರಸ್ತೆಯಾಗಲಿ ಸೇತುವೆಯನ್ನಾಗಲಿ ನಿರ್ಮಿಸಿಲ್ಲ. ಹೀಗಾಗಿ ಈ ಗ್ರಾಮದ ಯುವಕರಿಗೆ ಹೊರಗಿನವರು ಹೆಣ್ಣು ಕೂಡ ಕೊಡುತ್ತಿಲ್ಲ. ಮೊದಲು ಒಪ್ಪಿದರೂ ಈ ಗ್ರಾಮಮನ್ನು ನೋಡಿ ಮದುವೆ ಮಾತುಕತೆ ಮರಿದುಕೊಂಡ ನಿದರ್ಶನಗಳಿವೆ. ಹೀಗಾಗಿ 30 ವರ್ಷ ದಾಟಿದ 10ಕ್ಕೂ ಹೆಚ್ಚು ಯುವಕರು ಮದುವೆಯಾಗದೇ ಉಳಿದಿದ್ದಾರೆ. ಇನ್ನು ಇಲ್ಲಿನ ಮಕ್ಕಳು ವಿದ್ಯಾಭ್ಯಾಸ ಮಾಡಬೇಕೆಂದರೆ ಪಕ್ಕದ ಗ್ರಾಮದಲ್ಲಿ ಸಂಬಂಧಿಕರ ಮನೆಯಲ್ಲಿ ಇರಿಸಿ ವಿದ್ಯಾಭ್ಯಾಸ ಮಾಡಿಸುವ ಸ್ಥಿತಿ ನಿರ್ಮಾಣವಾಗಿದೆ.

    ಈ ಭಾಗದಲ್ಲಿ ಭತ್ತ, ತೆಂಗು, ಬಾಳೆ ಫಸಲನ್ನು ಬೆಳಸುತ್ತೇವೆ. ಆದರೆ ಅವುಗಳನ್ನು ಮಾರಾಟ ಮಾಡಲು ಚಿಕ್ಕ ದೋಣಿಯಲ್ಲಿ ಕೊಂಡೊಯ್ಯಬೇಕಿದ್ದು ಬಲು ತ್ರಾಸದಾಯಕವಾಗಿದೆ. ಹೀಗಾಗಿ ಹಲವರು ವ್ಯವಸಾಯವನ್ನು ಮಾಡುವುದು ಬಿಟ್ಟು ನಗರದಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾರೆ. ಇನ್ನು ಸ್ವಲ್ಪ ವಿದ್ಯಾಭ್ಯಾಸ ಮಾಡಿದ ಯುವಕರು ನೆರೆಯ ಗೋವಾದಲ್ಲಿ ನೆಲೆ ಕಂಡುಕೊಂಡಿದ್ದಾರೆ. ನದಿ ಭಾಗದಿಂದ ಸುಮಾರು 150 ಮೀಟರ್ ಅಂತರವಿರುವ ಈ ಗ್ರಾಮದಿಂದ ಮೊತ್ತೊಂದೆಡೆ ಸಾಗಬೇಕಿದ್ದರೆ ದೋಣಿಗಾಗಿ ಕೋಗಿಟ್ಟು ಕರೆಯಬೇಕು. ಈ ದ್ವನಿ ಮೊತ್ತೊಂದು ದಡದಲ್ಲಿ ಇರುವವರಿಗೆ ಕೇಳಿದರೆ ಮಾತ್ರ ದೋಣಿ ತೆಗೆದುಕೊಂಡು ಬರುತ್ತಾರೆ. ಮಳೆಗಾಲದಲ್ಲಿ ಪ್ರವಾಹ ಹೆಚ್ಚಾದಾಗ ಈ ಗ್ರಾಮದ ಸಂಚಾರವೇ ಸಂಪೂರ್ಣ ಬಂದ್ ಆಗುತ್ತದೆ. ಹೀಗಾಗಿ ಊರನ್ನು ಬಿಟ್ಟು ಬೇರೆಡೆ ಮನೆ ಮಾಡಿಕೊಂಡು ಮಳೆಗಾಲ ಮುಗಿಯುವವರೆಗೂ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅನೇಕ ವರ್ಷಗಳಿಂದ ತಮ್ಮ ಗ್ರಾಮಕ್ಕೆ ಸೇತುವೆ ಮಾಡಿಕೊಡುವಂತೆ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದರೂ ಇಲ್ಲಿವರೆಗೂ ಈಡೇರಿಲ್ಲ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸುತ್ತಾರೆ.

    ಭೂಮಿಯನ್ನೇ ನಂಬಿ ಇಲ್ಲಿನ ಜನರು ಬದುಕು ಕಟ್ಟಿಕೊಂಡಿದ್ದಾರೆ. ಅನೇಕ ವರ್ಷಗಳಿಂದ ಈ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಸರ್ಕಾರಕ್ಕೆ ಪ್ರತಿಭಟನೆ ನಡೆಸಿ ಮನವಿ ಸಹ ನೀಡಿದ್ದಾರೆ. ಆದರೆ ಈವರೆಗೂ ಸರ್ಕಾರ ಮಾತ್ರ ಜಾಣ ಕುರುಡು ಪ್ರದರ್ಶಿಸುತ್ತಿದೆ. ತಮ್ಮ ಊರಿಗೆ ಒಂದು ಸೇತುವೆಯಾದರೆ ಊರಿನಲ್ಲಿ ಮದುವೆಯಾಗದೇ ಉಳಿದ ಯುವಕರಿಗೆ ಮದುವೆ ಭಾಗ್ಯ ಸಿಗುತ್ತದೆ. ಕೆಲಸಮಾಡಲಾಗದೇ ಬರಡಾಗಿ ಬಿಟ್ಟ ಭೂಮಿ ಹಸನಾಗುತ್ತದೆ ಎಂಬ ಆಶಾ ಭಾವನೆಯಲ್ಲಿ ಈ ಗ್ರಾಮದವರು ಇಟ್ಟುಕೊಂಡಿದ್ದಾರೆ.

  • ಮೈತ್ರಿ ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ಬಿಎಸ್‍ವೈ ಪ್ಲಾನ್!

    ಮೈತ್ರಿ ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ಬಿಎಸ್‍ವೈ ಪ್ಲಾನ್!

    – ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು 6 ತಂಡಗಳೊಂದಿಗೆ ಸಜ್ಜಾದ ಯಡಿಯೂರಪ್ಪ!

    ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪ್ಲಾನ್ ಮಾಡಿದ್ದಾರೆ.

    ಯಡಿಯೂರಪ್ಪ ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಜ್ಜಾಗುತ್ತಿದ್ದಾರೆ. ರಾಜ್ಯದ ರೈತರ ಸಮಗ್ರ ಸಮಸ್ಯೆಗಳನ್ನರಿಯಲು ಯಡಿಯೂರಪ್ಪ 6 ತಂಡಗಳನ್ನು ರಚಿಸಿದ್ದಾರೆ. ಇಂದಿನಿಂದ ಜೂನ್ 30 ವರೆಗೆ ಒಟ್ಟು 15 ದಿನಗಳ ಕಾಲ ರಾಜ್ಯಾದ್ಯಂತ ಆ 6 ತಂಡಗಳು ಪ್ರವಾಸ ಆರಂಭಿಸಲಿವೆ. ರೈತ ಮೋರ್ಚಾದ ಐದು ತಂಡಗಳಿಂದ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಲಿವೆ.

    ಪ್ರವಾಸ ಮಾಡಲಿರುವ ತಂಡಗಳು
    ತಂಡ 1 – ರಾಜ್ಯ ಬಿಜೆಪಿ ರೈತ ಮೋರ್ಚಾ ಅದ್ಯಕ್ಷ ಲಕ್ಷ್ಮಣ್ ಸವದಿ ನೇತೃತ್ವದಲ್ಲಿ ಪ್ರವಾಸ ಮಾಡಲಿದ್ದು, ಈ ತಂಡ ಬೆಳಗಾವಿ ನಗರ, ಬೆಳಗಾವಿ ಗ್ರಾಮಾಂತರ, ಬಾಗಲಕೋಟೆ, ವಿಜಯಪುರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತದೆ.

    ತಂಡ 2 – ಬಳ್ಳಾರಿ, ಬೀದರ್, ಕಲಬುರ್ಗಿ ನಗರ, ಕಲಬುರ್ಗಿ ಗ್ರಾಮಾಂತರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದು, ಶಂಕರಗೌಡ ಪಾಟೀಲ್ ನೇತೃತ್ವದಲ್ಲಿ ಕಾರ್ಯ ನಿರ್ವಹಿಸುತ್ತವೆ.

    ತಂಡ -3 – ಈಶ್ವರ ಚಂದ್ರ ಹೊಸಮನಿ ನೇತೃತ್ವದಲ್ಲಿ ಮೂರನೇ ತಂಡದ ಕಾರ್ಯ ನಿರ್ವಹಣೆ ಮಾಡುತ್ತದೆ. ಈ ತಂಡ ಹಾವೇರಿ, ಗದಗ, ಧಾರವಾಡ, ಧಾರವಾಡ ಗ್ರಾಮೀಣ, ಕೊಪ್ಪಳ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತವೆ.

    ತಂಡ -4 – ನಂಜುಂಡೇಗೌಡ ಅವರ ನೇತೃತ್ವದಲ್ಲಿ ನಾಲ್ಕನೇ ತಂಡದ ಪ್ರವಾಸ ಮಾಡಲಿದ್ದು, ಮೈಸೂರು ನಗರ, ಗ್ರಾಮಾಂತರ, ಹಾಸನ, ಕೊಡಗು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತವೆ.

    ತಂಡ 5 – ಪವಿತ್ರಾ ರಾಮಯ್ಯ ಅವರ ನೇತೃತ್ವದಲ್ಲಿ ಕಾರ್ಯ ನಿರ್ವಹಿಸಲಿದ್ದು, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತವೆ.

    ತಂಡ 6 – ಶಿವಪ್ರಸಾದ್ ನೇತೃತ್ವದಲ್ಲಿ ಕೊನೆಯ 6ನೇ ತಂಡದ ಪ್ರವಾಸ ಮಾಡಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತವೆ.

    ತಂಡಗಳಿಗೆ ಯಡಿಯೂರಪ್ಪ ನೀಡಿದ ಟಾಸ್ಕ್:
    * ಸಾಲ ಮನ್ನಾಕ್ಕೆ ಆಗ್ರಹಿಸಿ ಮೈತ್ರಿ ಸರ್ಕಾರದ ವಿರುದ್ದ ರೈತರನ್ನು ಹುರಿದುಂಬಿಸಬೇಕು.
    * ಮೈತ್ರಿ ಸರ್ಕಾರ ರೈತರ ಸಾಲ ಮನ್ನಾ ಮಾಡಿಲ್ಲ ಎಂದು ಜನರಿಗೆ ಮನವರಿಕೆ ಮಾಡುವುದು.
    * ಆಯಾ ಜಿಲ್ಲೆಗಳಲ್ಲಿನ ರೈತರ ಮೂಲಭೂತ ಸಮಸ್ಯೆಗಳನ್ನು ಪಟ್ಟಿ ಮಾಡುವುದು.
    * ಪ್ರಧಾನಿ ನರೇಂದ್ರ ಮೋದಿ ರೈತರಿಗೆ ನೀಡಿರುವ ಯೋಜನೆಗಳ ಮನವರಿಕೆ ಮಾಡುವುದು.
    * ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಗೆ ಬೆಂಬಲಿಸುವಂತೆ ರೈತರಿಗೆ ಮನವಿ ಮಾಡುವುದು.
    * ಪ್ರತಿ ಜಿಲ್ಲೆಗಳಲ್ಲಿ ರೈತ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಸುವುದು.

    ಆರು ತಂಡಗಳ ಕಾರ್ಯ ನಿರ್ವಹಣೆ:
    * ಬಿ.ಎಸ್.ವೈ ನೀಡಿರುವ ಟಾಸ್ಕ್ ಕಡ್ಡಾಯವಾಗಿ ಪೂರೈಸಲೇಬೇಕು.
    * ಪ್ರವಾಸದ ಸಂಪೂರ್ಣ ವರದಿ ರೈತ ಮೋರ್ಚಾ ಅದ್ಯಕ್ಷ ಲಕ್ಷ್ಮಣ ಸವದಿ ಕೈ ಸೇರಲಿದೆ.
    * ಲಕ್ಷ್ಮಣ ಸವದಿ ಸಂಪೂರ್ಣ ವರದಿಯನ್ನು ರೈತ ಮೋರ್ಚಾ ಉಸ್ತುವಾರಿ ರವಿಕುಮಾರ್ ಗೆ ನೀಡಬೇಕು.
    * ರೈತ ಮೋರ್ಚಾ ಉಸ್ತುವಾರಿ ಹೊತ್ತಿರುವ ರವಿಕುಮಾರ್.
    * ರವಿಕುಮಾರ್ ಸಂಪೂರ್ಣ ವರದಿಯನ್ನು ಯಡಿಯೂರಪ್ಪ ಕೈಗೊಪ್ಪಿಸಲಿದ್ದಾರೆ.

  • ಸಮಾರೋಪ ಮುಕ್ತಾಯ ಬಳಿಕ ಬಿಜೆಪಿ ಕಾರ್ಯಕರ್ತರಿಗೆ ಶುರುವಾಯ್ತು ತೊಂದರೆ

    ಸಮಾರೋಪ ಮುಕ್ತಾಯ ಬಳಿಕ ಬಿಜೆಪಿ ಕಾರ್ಯಕರ್ತರಿಗೆ ಶುರುವಾಯ್ತು ತೊಂದರೆ

    ಬೆಂಗಳೂರು: ಮಹಾ ನಗರದಲ್ಲಿ ಇಂದು ನಡೆದ ಪರಿವರ್ತನಾ ಸಮಾರೋಪಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಕಾರ್ಯಕರ್ತರು ಆಗಮಿಸಿದ್ದರು. ಸಮಾರೋಪ ಸಮಾರಂಭಕ್ಕೆ ಲಕ್ಷಾಂತರ ಕಾರ್ಯಕರ್ತರು ಆಗಮಿಸಿದ್ದರಿಂದ ಕಾರ್ಯಕ್ರಮವೂ ಯಶಸ್ವು ಆಯಿತು. ಸಮಾರೋಪ ಮುಕ್ತಾಯ ಆಗುತ್ತಿದಂತೆ ದೂರದ ಊರುಗಳಿಂದ ಬಂದಿದ್ದ ಕಾರ್ಯಕರ್ತರಿಗೆ ಮರಳಿ ಹೋಗಲು ಬಸ್ ಗಳೇ ಸಿಗದೇ ಪರದಾಡುವಂತಾಯ್ತು.

    ಸಮಾರೋಪ ಮುಗಿದು ಮೂರು ಗಂಟೆಗಳಾದ್ರೂ ಇನ್ನು ಹಲವು ಕಾರ್ಯಕರ್ತರಿಗೆ ತಾವು ಬಂದಿರುವ ಬಸ್ ಗಳೆ ಸಿಗುತ್ತಿಲ್ಲ. ಕೆಲವೊಂದು ಕಡೆ ಬಸ್ ಸಿಕ್ಕರೆ ಡ್ರೈವರ್ ಗಳು ಸಿಗುತ್ತಿಲ್ಲ. ನಾನಾ ಕಡೆಗಳಿಂದ ಬಸ್ ಮಾಡಿಕೊಂಡು ಬಂದಿದ್ದರಿಂದ ಕೆಲವರಿಗೆ ಪಾರ್ಕಿಂಗ್ ಸ್ಥಳ ಸಿಗುತ್ತಿಲ್ಲ.

    ಕೆಲವು ಜಿಲ್ಲೆಗಳಿಂದ ಬಂದಿರುವ ಜನ ನಮ್ಮ ಬಸ್ ಎಲ್ಲಿ ಪಾರ್ಕ್ ಮಾಡಿದ್ದಾರೆ ಎಂದು ಗೊತ್ತಿಲ್ಲ ಅಂತಾ ಗೋಳಾಡುತ್ತಿರುವ ದೃಶ್ಯಗಳು ಕಂಡು ಬಂದವು. ಇತ್ತ ಊಟವು ಸಿಗದೆ, ಬಸ್ ಇಲ್ಲದೇ ಮಹಿಳೆಯರು ಮತ್ತು ವೃದ್ಧರು ರಸ್ತೆಯಲ್ಲಿಯೇ ನಿಂತು ತಮ್ಮ ಊರಿನ ಬಸ್ ಗಾಗಿ ಕಾಯುತ್ತಿದ್ದಾರೆ.