Tag: Producer vijay kiragandur

  • ತಮಿಳಿನತ್ತ ಹೊಂಬಾಳೆ ಫಿಲ್ಮ್ಸ್:ಕೀರ್ತಿ ಸುರೇಶ್ ನಟನೆಯ `ರಘುತಥಾ’ ಚಿತ್ರ ನಿರ್ಮಾಣಕ್ಕೆ ಸಾಥ್

    ತಮಿಳಿನತ್ತ ಹೊಂಬಾಳೆ ಫಿಲ್ಮ್ಸ್:ಕೀರ್ತಿ ಸುರೇಶ್ ನಟನೆಯ `ರಘುತಥಾ’ ಚಿತ್ರ ನಿರ್ಮಾಣಕ್ಕೆ ಸಾಥ್

    ಪ್ಯಾನ್ ಇಂಡಿಯಾ ಮಟ್ಟದಲ್ಲಿ `ಕೆಜಿಎಫ್ 2′ (Kgf 2) ಮತ್ತು `ಕಾಂತಾರ’ (Kantara)  ಎಂಬ ಎರಡು ಬ್ಲಾಕ್ ಬಸ್ಟರ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಸಂಸ್ಥೆಯು ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದೆ. ಇದುವರೆಗೂ ಕನ್ನಡ, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಚಿತ್ರಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲ್ಮ್ಸ್(Hombale Films) ರೂವಾರಿ ವಿಜಯ್ ಕಿರಗಂದೂರು, ಇದೇ ಮೊದಲ ಬಾರಿಗೆ ತಮಿಳು ಚಿತ್ರವೊಂದನ್ನು (Tamil Films) ನಿರ್ಮಿಸುತ್ತಿದ್ದಾರೆ.

    ಹೊಂಬಾಳೆ ಫಿಲ್ಮ್ಸ್ ನಿರ್ಮಿಸುತ್ತಿರುವ ಮೊದಲ ತಮಿಳು ಚಿತ್ರದ ಹೆಸರು `ರಘುತಥಾ’. ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುವ ಕೀರ್ತಿ ಸುರೇಶ್ ಈ ಚಿತ್ರದಲ್ಲಿ ನಟಿಸುತ್ತಿದ್ದು, ಚಿತ್ರದ ಮೊದಲ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ಈ ಹಿಂದೆ, `ದಿ ಫ್ಯಾಮಿಲಿ ಮ್ಯಾನ್’ ವೆಬ್ ಸೀರೀಸ್ ಜತೆಗೆ ಕೆಲವು ಚಿತ್ರಗಳಿಗೆ ಕಥೆ-ಚಿತ್ರಕಥೆ ರಚಿಸಿದ್ದ ಸುಮನ್ ಕುಮಾರ್ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ʻರಘುತಥಾʼ ಒಂದು ಮಹಿಳಾಪ್ರಧಾನ ಚಿತ್ರವಾಗಿದ್ದು, ಒಬ್ಬ ಯುವತಿಯ ಸುತ್ತ ಸುತ್ತುತ್ತದೆ. ಆಕೆ ತನ್ನ ನೆಲ ಮತ್ತು ಜನರ ಗುರುತನ್ನು ರಕ್ಷಿಸುವ ನಿಟ್ಟಿನಲ್ಲಿ ಏನೆಲ್ಲ ಸಾಹಸಗಳನ್ನು ಮಾಡುತ್ತಾಳೆ ಎಂಬುದನ್ನು ಈ ಕಥೆಯಲ್ಲಿ ಹಾಸ್ಯಮಯವಾಗಿ ಚಿತ್ತಿಸಲಾಗಿದೆ. ಇದನ್ನೂ ಓದಿ: ದೊಡ್ಮನೆ ಯುವರಾಜನಿಗೆ ನಾಯಕಿ ಯಾರು? ಕೊನೆಗೂ ಸಿಕ್ತು ಅಪ್‌ಡೇಟ್

     

    View this post on Instagram

     

    A post shared by Hombale Films (@hombalefilms)

    ಈ ಚಿತ್ರದ ಕುರಿತು ಮಾತನಾಡುವ ಹೊಂಬಾಳೆ ಸಂಸ್ಥೆಯ ರೂವಾರಿ ವಿಜಯ್ ಕಿರಗಂದೂರು, ಇದೊಂದು ಕಾಮಿಡಿ ಡ್ರಾಮಾ ಚಿತ್ರವಾಗಿದ್ದು, ಸಮಾಜದ ವಿರುದ್ದ ಸವಾಲೆಸೆಯುವ ಒಬ್ಬ ಗಟ್ಟಿಗಿತ್ತಿ ಯುವತಿಯ ಸುತ್ತ ಸುತ್ತುತ್ತದೆ. ತನ್ನ ಸಿದ್ಧಾಂತಗಳನ್ನು ಎತ್ತಿಹಿಡಿಯುವುದರ ಜೊತೆಗೆ, ಸಮಾಜದ ವಿರುದ್ಧ ಹೋರಾಡುತ್ತಲೇ, ಆಕೆ ಹೇಗೆ ಎಲ್ಲರಿಗೂ ಸ್ಫೂರ್ತಿಯಾಗುತ್ತಾಳೆ ಎಂಬುದು ಚಿತ್ರದ ಕಥೆ. ಇಂಥದ್ದೊಂದು ಕಥೆ ಮತ್ತು ಪಾತ್ರಕ್ಕೆ ಕೀರ್ತಿ ಸುರೇಶ್ ಅವರು ಅದ್ಭುತವಾದ ಆಯ್ಕೆಯಾಗಿದ್ದು, ಅವರೊಂದಿಗೆ ಕೆಲಸ ಮಾಡಲು ಹೊಂಬಾಳೆ ಸಂಸ್ಥೆ ಹೆಮ್ಮೆ ಪಡುತ್ತದೆ. ಇದೊಂದು ಕಾಮಿಡಿ ಚಿತ್ರವಾಗಿದ್ದು, ಜನ ನಗುತ್ತಲೇ ತಮ್ಮ ಆತ್ಮಾವಲೋಕನ ಮಾಡಿಕೊಳ್ಳುವ ವಿಭಿನ್ನ ಪ್ರಯತ್ನ ಇದಾಗಲಿದೆ ಎಂದು ಹೇಳಿದ್ದಾರೆ.

    ಈ ಚಿತ್ರದಲ್ಲಿ ಕೀರ್ತಿ ಸುರೇಶ್ ಜತೆಗೆ ಎಂ.ಎಸ್. ಭಾಸ್ಕರ್, ದೇವದರ್ಶಿನಿ, ರವೀಂದ್ರ ವಿಜಯ್, ಆನಂದ್ಸಾಮಿ, ರಾಜೇಶ್ ಬಾಲಕೃಷ್ಣನ್ ಮುಂತಾದವರು ಪ್ರಮುಖ ಪಾತ್ರಗಳ ಕಾಣಿಸಿಕೊಳ್ಳುತ್ತಿದ್ದಾರೆ. ಯಾಮಿನಿ ಯಜ್ನಮೂರ್ತಿ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದು, ʻಜೈ ಭೀಮ್ʼ ಖ್ಯಾತಿಯ ಸೀನ್ ರೋಲ್ಡನ್ ಸಂಗೀತ ಸಂಯೋಜಿಸುತ್ತಿದ್ದಾರೆ. `ರಘುತಥಾ’ (Raghuthatha) ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದ್ದು, 2023ರ ಬೇಸಿಗೆ ರಜೆಯ ಸಂದರ್ಭದಲ್ಲಿ ಚಿತ್ರವು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ತೆಲುಗಿನಲ್ಲಿ ಭಾರೀ ಮೊತ್ತಕ್ಕೆ ರಾಕಿ ಭಾಯ್ ಸಿನಿಮಾ ಸೇಲ್

    ತೆಲುಗಿನಲ್ಲಿ ಭಾರೀ ಮೊತ್ತಕ್ಕೆ ರಾಕಿ ಭಾಯ್ ಸಿನಿಮಾ ಸೇಲ್

    ಬೆಂಗಳೂರು: ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ಕೆಜಿಎಫ್-2 ಸಿನಿಮಾದ ವಿತರಣೆ ಹಕ್ಕು ಭಾರೀ ಮೊತ್ತಕ್ಕೆ ತೆಲುಗಿನಲ್ಲಿ ಮಾರಾಟವಾಗಿದೆ. ಈಗಾಗಲೇ ಕೆಜಿಎಫ್-2 ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಈ ಮಧ್ಯೆ ತೆಲುಗಿನ ಖ್ಯಾತ ನಿರ್ಮಾಪಕ ದಿಲ್ ರಾಜು ಬರೋಬ್ಬರಿ 65 ಕೋಟಿ ರೂ.ಗೆ ಕೆಜಿಎಫ್-2 ಸಿನಿಮಾ ಬಿಡುಗಡೆ ರೈಟ್ಸ್‍ನನ್ನು ತಮ್ಮದಾಗಿಸಿಕೊಂಡಿದ್ದಾರೆ.

    ಕೆಜಿಎಫ್-1 ಅಮೆಜಾನ್ ಪ್ರೈಮ್ ಸೇರಿದಂತೆ ಡಿಜಿಟಲ್ ಮಾರುಕಟ್ಟೆಯಲ್ಲಿ ಅತೀ ಹೆಚ್ಚು ಹಣ ಗಳಿಸುವ ಮೂಲಕ ಈ ಹಿಂದೆ ಹೊಸ ದಾಖಲೆ ಸೃಷ್ಟಿಸಿತ್ತು. ಅಲ್ಲದೆ ಕೆಜಿಎಫ್-1 ಬಿಡುಗಡೆಯ ಹಕ್ಕನ್ನು ಈ ಮುನ್ನ ಕೇವಲ 5 ಕೋಟಿಗೆ ಖರೀದಿಸಲಾಗಿತ್ತು. ಆದರೆ ಅದರಿಂದ ಬಂದ ಲಾಭ ಬರೋಬ್ಬರಿ 12 ಕೋಟಿ. ಹಾಗಾಗಿ ಕೆಜಿಎಫ್-1ರ ಯಶಸ್ಸು ಕಂಡ ಹಲವಾರು ತೆಲುಗು ನಿರ್ಮಾಪಕರು ಕೆಜಿಎಫ್-2 ಸಿನಿಮಾದ ಬಿಡುಗಡೆ ಹಕ್ಕನ್ನು ಖರೀದಿಸಲು ನಾ ಮುಂದು, ತಾ ಮುಂದು ಎಂದು ಸಾಲಿನಲ್ಲಿ ನಿಂತಿದ್ದರು.

    ನಿರ್ಮಾಪಕ ವಿಜಯ್ ಕಿರಂಗದೂರು 70 ಕೋಟಿ ಬೇಡಿಕೆ ಇಟ್ಟಿದ್ದನ್ನು ನೋಡಿ ಹಲವು ನಿರ್ಮಾಪಕರು ಅಚ್ಚರಿಗೊಂಡು ಹಿಂದೆ ಸರಿದಿದ್ದರು. ಟಾಲಿವುಡ್‍ನ ಖ್ಯಾತ ನಿರ್ಮಾಪಕ ದಿಲ್ ರಾಜು, ತೆಲಂಗಾಣ ಮತ್ತು ಆಂಧ್ರಪ್ರದೇಶ ಸೇರಿ ಎರಡು ತೆಲುಗು ರಾಜ್ಯಗಳಲ್ಲೂ ಕೆಜಿಎಫ್-2 ಸಿನಿಮಾ ಬಿಡುಗಡೆಯ ಹಕ್ಕನ್ನು 65 ಕೋಟಿ ರೂ.ಗೆ ಮಾತನಾಡಿ ಖರೀದಿಸುವ ಮೂಲಕ ಎಲ್ಲಾ ನಿರ್ಮಾಪಕರು ಗಪ್-ಚುಪ್‍ಗೊಳ್ಳುವಂತೆ ಮಾಡಿದ್ದಾರೆ.

    ಸದ್ಯ ಕೆಜಿಎಫ್-2 ಸಿನಿಮಾ ಬಿಡುಗಡೆಗೂ ಮುನ್ನವೇ ತೆಲುಗಿನಲ್ಲಿ ದೊಡ್ಡ ಬಿಸಿನೆಸ್ ಮಾಡುವ ಮೂಲಕ ಟಾಲಿವುಡ್ ಬಹುದೊಡ್ಡ ನಿರ್ಮಾಪಕ ದಿಲ್ ರಾಜುರವರ ಕೈ ಸೇರಿದೆ. ಅಲ್ಲದೆ ನಿರ್ಮಾಪಕ ದಿಲ್ ರಾಜು, ವಿಜಯ್ ಕಿರಂಗದೂರುರವರಿಗೆ ಮುಂಗಡವಾಗಿಯೂ ಹಣ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಇತ್ತೀಚೆಗಷ್ಟೇ ಹೈದರಾಬಾದ್‍ನಲ್ಲಿ ನಿರ್ಮಾಪಕ ದಿಲ್ ರಾಜು ತಮ್ಮ 50ನೇ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದರು. ಬರ್ತ್‍ಡೇಗೆ ದಕ್ಷಿಣ ಭಾರತದ ಗಣ್ಯಾತಿಗಣ್ಯರು ಆಗಮಿಸಿದ್ದರು ಹಾಗೂ ಸ್ಯಾಂಡಲ್‍ವುಡ್ ನಟ ರಾಕಿಂಗ್ ಸ್ಟಾರ್ ಯಶ್, ವಿಜಯ್ ಕಿರಂಗದೂರು ಅವರನ್ನು ಆಹ್ವಾನಿಸಿದ್ದರು.