Tag: Professor

  • ಮನೆಗೆ ಊಟಕ್ಕೆ ಅಂತ ಕರೆಸಿ ಬಿಸಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಪ್ರೊಫೆಸರ್ ಅರೆಸ್ಟ್

    ಮನೆಗೆ ಊಟಕ್ಕೆ ಅಂತ ಕರೆಸಿ ಬಿಸಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಪ್ರೊಫೆಸರ್ ಅರೆಸ್ಟ್

    – ಪರೀಕ್ಷೆಯಲ್ಲಿ ಮಾರ್ಕ್ಸ್ ಕೊಡ್ತೀನಿ, ಅಟೆಂಡೆನ್ಸ್‌ ಕೊಡ್ತೀನಿ ಅಂತ ಮೈಕೈ ಮುಟ್ಟಿ ಕಿರುಕುಳ ನೀಡಿದ್ದ ಕಾಮುಕ

    ಬೆಂಗಳೂರು: ಮನೆಗೆ ಊಟಕ್ಕೆ ಕರೆಸಿ ಬಿಸಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಖಾಸಗಿ ಕಾಲೇಜಿನ ಪ್ರೊಫೆಸರ್‌ನನ್ನು ತಿಲಕ್ ನಗರ ಪೊಲೀಸರು (Tilak Nagar Police) ಬಂಧಿಸಿದ್ದಾರೆ.

    ಪಶ್ಚಿಮ ಬಂಗಾಳ (West Bengal) ಮೂಲದ ಸಂಜೀವ್ ಕುಮಾರ್ ಮಂಡಲ್ ಬಂಧಿತ ಪ್ರೊಫೆಸರ್. ನಗರದ ಪ್ರತಿಷ್ಟಿತ ಕಾಲೇಜಿನಲ್ಲಿ ಹೆಚ್‌ಓಡಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯು ಅದೇ ಕಾಲೇಜಿನಲ್ಲಿ ಬಿಸಿಎ ಎರಡನೇ ವರ್ಷದ ವಿದ್ಯಾರ್ಥಿನಿಯಾಗಿದ್ದಳು. ಆಕೆಯು ಪಶ್ಚಿಮ ಬಂಗಾಳ ಮೂಲದವಳಾಗಿದ್ದಳು. ಇದನ್ನೂ ಓದಿ: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 6 ಮಂದಿ ಸಜೀವ ದಹನ

    ಕಾಲೇಜಿನಲ್ಲಿ ಆಕೆಗೆ ಉಪನ್ಯಾಸಕನಾಗಿದ್ದರಿಂದ ಅ.2 ರಂದು ವಿದ್ಯಾರ್ಥಿನಿಯನ್ನು ಪ್ರೊಫೆಸರ್ ಮನೆಗೆ ಊಟಕ್ಕೆ ಕರೆದಿದ್ದ. ಹೀಗಾಗಿ ವಿದ್ಯಾರ್ಥಿನಿ ಪ್ರೊಫೆಸರ್ ಮನೆಗೆ ಊಟಕ್ಕೆ ಹೋಗಿದ್ದಳು. ಮನೆಯಲ್ಲಿ ಪ್ರೊಫೆಸರ್ ಒಬ್ಬನೇ ಇದ್ದುದ್ದರಿಂದ ವಿದ್ಯಾರ್ಥಿನಿಯು ಗಾಬರಿಗೊಂಡಿದ್ದಳು. ಈ ವೇಳೆ ಆಕೆಗೆ ಕುಡಿಯಲು ನೀರು ಕೊಟ್ಟು, ಆಕೆಯ ಪಕ್ಕದಲ್ಲೇ ಪ್ರೊಫೆಸರ್ ಕುಳಿತುಕೊಂಡಿದ್ದ. ಇದನ್ನೂ ಓದಿ: ದಾವಣಗೆರೆ | ಮನೆಯಲ್ಲಿ ಬಾಯ್ಲರ್ ಸ್ಫೋಟ – 11ರ ಬಾಲಕಿ ಸಾವು, ಮೂವರಿಗೆ ಗಂಭೀರ

    ಬಳಿಕ ನಿನಗೆ ಹಾಜರಾತಿ ಕಡಿಮೆ ಇದೆ, ಹಾಜರಾತಿ ಹಾಕಿ ಕೊಡುತ್ತೇನೆ. ಪರೀಕ್ಷೆಯಲ್ಲಿ ಮಾರ್ಕ್ಸ್ ಕೊಡೋದಾಗಿ ಹೇಳಿ ವಿದ್ಯಾರ್ಥಿನಿ ಮೈ, ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ. ಗಾಬರಿಗೊಂಡ ವಿದ್ಯಾರ್ಥಿನಿ ಅಲ್ಲಿಂದ ಎದ್ದು ಬಂದಿದ್ದಳು ಎನ್ನಲಾಗಿದೆ.

    ಬಳಿಕ ವಿದ್ಯಾರ್ಥಿನಿಯು ಮನೆಯವರ ಸಲಹೆ ಮೇರೆಗೆ ಸಂಜೀವ್ ಕುಮಾರ್ ಮಂಡಲ್ ವಿರುದ್ಧ ತಿಲಕ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪ್ರೊಫೆಸರ್‌ನನ್ನು ಬಂಧಿಸಿದ್ದಾರೆ.

  • ಪಂಜಾಬ್‌ನಲ್ಲಿ ಏರೋಸ್ಪೇಸ್ ಎಂಜಿನಿಯರ್ ಸಾವು ಕೇಸ್ – ಪ್ರೊಫೆಸರ್ ಅರೆಸ್ಟ್

    ಪಂಜಾಬ್‌ನಲ್ಲಿ ಏರೋಸ್ಪೇಸ್ ಎಂಜಿನಿಯರ್ ಸಾವು ಕೇಸ್ – ಪ್ರೊಫೆಸರ್ ಅರೆಸ್ಟ್

    ಮಂಗಳೂರು: ಪಂಜಾಬ್‌ನಲ್ಲಿ ಧರ್ಮಸ್ಥಳ(Dharmasthala) ಮೂಲದ ಏರೋಸ್ಪೇಸ್ ಎಂಜಿನಿಯರ್(Aerospace Engineer) ಆಕಾಂಕ್ಷ ಸಾವು ಪ್ರಕರಣದಲ್ಲಿ ಪ್ರೊಫೆಸರ್(Professor) ಒಬ್ಬನನ್ನು ಜಲಂಧರ್ ಪೊಲೀಸರು ಬಂಧಿಸಿದ್ದಾರೆ.

    ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯ ಪ್ರೊಫೆಸರ್ ಬಿಜಿಲ್ ಮ್ಯಾಥ್ಯೂ(45) ಬಂಧಿತ ಆರೋಪಿ. ಇದನ್ನೂ ಓದಿ: ತನ್ನ ಚೊಚ್ಚಲ ಐಪಿಎಲ್‌ನಲ್ಲೇ ಉದ್ಧಟತನ – ಒಂದು ಪಂದ್ಯಕ್ಕೆ ದಿಗ್ವೇಶ್ ಅಮಾನತು, ಭಾರೀ ದಂಡ

    ಆಕಾಂಕ್ಷ ಸಾವಿಗೆ ಯೂನಿವರ್ಸಿಟಿಯ ಪ್ರಾಧ್ಯಾಪಕ ಬಿಜಿಲ್ ಮ್ಯಾಥ್ಯೂ(Bijil Mathew) ಕಾರಣ ಎಂದು ಜಲಂಧರ್ ಪೊಲೀಸ್ ಠಾಣೆಗೆ ಆಕಾಂಕ್ಷ ಹೆತ್ತವರು ದೂರು ನೀಡಿದ್ದರು. ಆಕಾಂಕ್ಷ ಮೊಬೈಲ್ ಪಡೆದು ತನಿಖೆ ನಡೆಸಿರುವ ಪೊಲೀಸರಿಗೆ ಸಾವಿಗೂ ಮುನ್ನ ಆಕಾಂಕ್ಷ, ಬಿಜಿಲ್ ಮಾಥ್ಯೂಗೆ ತಾನು ಆತ್ಮಹತ್ಯೆ ಮಾಡಿಕೊಳ್ಳೊದಾಗಿ ಮೆಸೇಜ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆ; ಕುಮಟಾ-ಸಿದ್ದಾಪುರ ರಸ್ತೆ ಜಲಾವೃತ

    ಅಲ್ಲದೇ ಆಕಾಂಕ್ಷ ಆತ್ಮಹತ್ಯೆಯ ಬಳಿಕ ಬಿಜಿಲ್ ಮಾಥ್ಯೂ ತಲೆಮರಿಸಿಕೊಂಡಿದ್ದ. ಇದೀಗ ಜಲಂಧರ್ ಪೊಲೀಸರು ಬಿಜಲ್ ಮ್ಯಾಥ್ಯೂನನ್ನು ಬಂಧಿಸಿದ್ದಾರೆ. ಕಾಲೇಜಿನಿಂದ ಕೂಡ ಮ್ಯಾಥ್ಯೂನನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಮಳೆಯಿಂದ ಜನರ ಪರದಾಟ… ರಾಜ್ಯ ಸರ್ಕಾರದ ಮೋಜು – ಬಿವೈವಿ ಸಿಡಿಮಿಡಿ

    ಧರ್ಮಸ್ಥಳದ ಬೊಳಿಯೂರು ನಿವಾಸಿ ಆಕಾಂಕ್ಷ ಎಸ್ ನಾಯರ್ 6 ತಿಂಗಳ ಹಿಂದೆ ದೆಹಲಿಯ ಸ್ಪೈಸ್‌ ಜೆಟ್ ಏರೋಸ್ಪೇಸ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಹೆಚ್ಚಿನ ತರಬೇತಿಗೆ ಜರ್ಮನಿಗೆ ತೆರಳಲು ತಯಾರಿ ನಡೆಡಸಿದ್ದ ಆಕಾಂಕ್ಷ ಕೆಲವು ಶೈಕ್ಷಣಿಕ ದಾಖಲೆಗಳನ್ನು ಶುಕ್ರವಾರ ಪಂಜಾಬ್‌ನ(Panjab) ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಗೆ ತೆರಳಿದ್ದಳು. ಬಳಿಕ ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಳು. ಇದನ್ನೂ ಓದಿ: 1,600 ಕೋಟಿ ಕಾಮಗಾರಿ ನಡೆದಿದ್ದರೆ ಬೆಂಗ್ಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ: ಆರ್. ಅಶೋಕ್

    ಆಕಾಂಕ್ಷಗೆ ತಾನು ಓದುತ್ತಿದ್ದ ಯೂನಿವರ್ಸಿಟಿಯ ಪ್ರೊಫೆಸರ್ ಕೇರಳದ ಕೊಟ್ಟಾಯಂ ನಿವಾಸಿ ಎರಡು ಮಕ್ಕಳ ತಂದೆ ಬಿಜಿಲ್ ಮ್ಯಾಥ್ಯೂ ಜೊತೆ ಪ್ರೇಮಾಂಕುರವಾಗಿತ್ತು. ಅಲ್ಲದೇ ಮ್ಯಾಥ್ಯೂ ಜೊತೆ ಆತನ ಮನೆಗೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿ ಆಕಾಂಕ್ಷ ಜಗಳ ಮಾಡಿದ್ದಳು. ಬಳಿಕ ಕಾಲೇಜಿನಲ್ಲೂ ಜಗಳ ಮಾಡಿ ಕಟ್ಟಡದ ನಾಲ್ಕನೇ ಮಹಡಿಗೆ ಹೋಗಿ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು.

  • ಕ್ಲಾಸ್‌ ರೂಂನಲ್ಲೇ ವಿದ್ಯಾರ್ಥಿ ಜೊತೆ ಪ್ರೊಫೆಸರ್‌ ವಿವಾಹ – ವೀಡಿಯೋ ವೈರಲ್‌

    ಕ್ಲಾಸ್‌ ರೂಂನಲ್ಲೇ ವಿದ್ಯಾರ್ಥಿ ಜೊತೆ ಪ್ರೊಫೆಸರ್‌ ವಿವಾಹ – ವೀಡಿಯೋ ವೈರಲ್‌

    ಕೋಲ್ಕತ್ತಾ: ಪ್ರಾಧ್ಯಾಪಕರೊಬ್ಬರು ಕಾಲೇಜು ವಿದ್ಯಾರ್ಥಿಯನ್ನು ತರಗತಿಯಲ್ಲೇ ವಿವಾಹ ಆಗುತ್ತಿರುವ ವೀಡಿಯೋ ವೈರಲ್‌ ಆಗಿದ್ದು, ತನಿಖೆಗೆ ಆದೇಶ ಹೊರಡಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಈ ಘಟನೆ ನಡೆದಿದೆ.

    ಕೋಲ್ಕತ್ತಾದಿಂದ ಸುಮಾರು 150 ಕಿಮೀ ದೂರದಲ್ಲಿರುವ ನಾಡಿಯಾದಲ್ಲಿರುವ ಹರಿಂಗಟಾ ಟೆಕ್ನಾಲಜಿ ಕಾಲೇಜಿನ ಸೈಕಾಲಜಿ ವಿಭಾಗದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೌಲಾನಾ ಅಬುಲ್ ಕಲಾಂ ಆಜಾದ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿ (MAKAUT) ಅಡಿಯಲ್ಲಿ ಕಾಲೇಜು ಕಾರ್ಯನಿರ್ವಹಿಸುತ್ತದೆ.

    ಪ್ರೊಫೆಸರ್‌ ಪಾಯಲ್ ಬ್ಯಾನರ್ಜಿ ವಧುವಿನ ಉಡುಗೆ ತೊಟ್ಟು ಹೂಮಾಲೆ ಧರಿಸಿರುವುದು ವೀಡಿಯೋದಲ್ಲಿದೆ. ಆದರೆ, ಇದು ನಿಜವಾದ ಮದುವೆಯಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಶೈಕ್ಷಣಿಕ ಉದ್ದೇಶಕ್ಕಾಗಿ ಈ ರೀತಿಯ ಮಾದರಿ ತೋರಿಸಲಾಗಿದೆ ಎಂದು ಹೇಳಿದ್ದಾರೆ.

    ಆಕೆಯನ್ನು ತನಿಖೆಗಾಗಿ ರಜೆಯ ಮೇಲೆ ಕಳುಹಿಸಲಾಗಿದೆ. ಇದಕ್ಕಾಗಿ ಅಧಿಕಾರಿಗಳು ಮೂರು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಸೂಕ್ತ ತನಿಖೆ ಇಲ್ಲದೆ ನಾವು ಯಾವುದೇ ಕಠಿಣ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

    ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋಗಳಲ್ಲಿ, ಹಿಂದೂ ವಿವಾಹ ಪದ್ಧತಿಯಂತೆ ವಿದ್ಯಾರ್ಥಿಯ ಮೇಲೆ ‘ಹಲ್ದಿ’ ಬಳಿದಿರುವುದನ್ನು ತೋರಿಸಲಾಗಿದೆ. ಇನ್ನೊಂದರಲ್ಲಿ, ಇಬ್ಬರು ಹೂಮಾಲೆಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದಾರೆ. ಪವಿತ್ರ ಅಗ್ನಿಯನ್ನು ಸೂಚಿಸುವ ಮೇಣದಬತ್ತಿಯ ಸುತ್ತಲೂ ಏಳು ಹೆಜ್ಜೆ ಹಾಕುತ್ತಿದ್ದಾರೆ.

    ಒಬ್ಬರನ್ನೊಬ್ಬರು ತಮ್ಮ ಸಂಗಾತಿಯಾಗಿ ಸ್ವೀಕರಿಸುವ ಪ್ರಾಧ್ಯಾಪಕ ಮತ್ತು ವಿದ್ಯಾರ್ಥಿಯ ಸಹಿಯೊಂದಿಗೆ ವಿಶ್ವವಿದ್ಯಾಲಯದ ಲೆಟರ್‌ಹೆಡ್ ಕೂಡ ವೈರಲ್ ಆಗಿದೆ. ಪತ್ರ ಮೂರು ಸಾಕ್ಷಿಗಳ ಸಹಿಯನ್ನು ಹೊಂದಿದೆ.

  • ಉತ್ತರಾಖಂಡ್ ಹೋಟೆಲ್‌ನಲ್ಲಿ ಕತ್ತು ಸೀಳಿ ಜಾದವ್‌ಪುರ ವಿವಿ ಪ್ರೊಫೆಸರ್ ಹತ್ಯೆ

    ಉತ್ತರಾಖಂಡ್ ಹೋಟೆಲ್‌ನಲ್ಲಿ ಕತ್ತು ಸೀಳಿ ಜಾದವ್‌ಪುರ ವಿವಿ ಪ್ರೊಫೆಸರ್ ಹತ್ಯೆ

    ಡೆಹ್ರಾಡೂನ್: ಉತ್ತರಾಖಂಡದ (Uttarakhand) ಹೋಟೆಲ್‌ವೊಂದರಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಕೋಲ್ಕತ್ತಾದ (Kolkatta) ಜಾದವ್‌ಪುರ ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಶವ ಪತ್ತೆಯಾಗಿದೆ.

    ಪ್ರಾಧ್ಯಾಪಕರನ್ನು ಮೈನಕ್ ಪಾಲ್ (44) ಎಂದು ಗುರುತಿಸಲಾಗಿದೆ. ಫಿಲಾಸಫಿ ವಿಭಾಗದ ಪ್ರೊಫೆಸರ್ ಮೈನಾಕ್ ಪಾಲ್ ಅವರ ಶವ ನ.8 ರಂದು ವಾಶ್ ರೂಂನಲ್ಲಿ ಪತ್ತೆಯಾಗಿದೆ. ಕುತ್ತಿಗೆ ಮತ್ತು ಕೈಗಳ ಮೇಲೆ ಗಾಯವಾಗಿತ್ತು. ಪ್ರಾಥಮಿಕ ವರದಿ ಪ್ರಕಾರ, ಮೈನಕ್ ಪಾಲ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ ಮೇಲೆ 150 ರಾಕೆಟ್‌ಗಳ ಸುರಿಮಳೆ – ಹಿಜ್ಬುಲ್ಲಾ ಭೀಕರ ದಾಳಿಗೆ ಹಲವೆಡೆ ಹಾನಿ!

    ಶಿಕ್ಷಕ ಮಂಡಳಿಯ ಪ್ರಧಾನ ಕಾರ್ಯದರ್ಶಿ ಪಾರ್ಥ ಪ್ರತಿಮ್ ರಾಯ್ ಮಾತನಾಡಿ, ಮೈನಕ್ ಪಾಲ್ ಅವರ ಸಾವಿನ ಸುದ್ದಿ ಕೇಳಿದಾಗಿನಿಂದ ನಾವು ತೀವ್ರ ಆಘಾತಕ್ಕೆ ಒಳಗಾಗಿದ್ದೇವೆ. ಪಾಲ್ ಅವರು ಪ್ರೀತಿಯ ವ್ಯಕ್ತಿಯಾಗಿದ್ದರು. ವಿದ್ಯಾರ್ಥಿಗಳು ಮತ್ತು ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಶಿಕ್ಷಕರಾಗಿ ಮತ್ತು ಸಂಶೋಧಕರಾಗಿ ಮೈನಕ್ ಪಾಲ್ ಉತ್ತಮ ಸೇವೆ ಸಲ್ಲಿಸಿದ್ದಾರೆ, ಎಂದು ಹೇಳಿದ್ದಾರೆ. ಇದನ್ನೂ ಓದಿ: ಯಾಸೀರ್ ಪಠಾಣ್ ಮೇಲೆ ಯಾವುದೇ ರೌಡಿಶೀಟ್ ಇಲ್ಲ: ಎಸ್ಪಿ ಸ್ಪಷ್ಟನೆ

  • ಮಹಾರಾಣಿ ಕಾಲೇಜು ಆವರಣದಲ್ಲಿ ಅಪಘಾತ – ವಿದ್ಯಾರ್ಥಿಗಳಿಗೆ ಪ್ರೊಫೆಸರ್ ಕಾರು ಡಿಕ್ಕಿ

    ಮಹಾರಾಣಿ ಕಾಲೇಜು ಆವರಣದಲ್ಲಿ ಅಪಘಾತ – ವಿದ್ಯಾರ್ಥಿಗಳಿಗೆ ಪ್ರೊಫೆಸರ್ ಕಾರು ಡಿಕ್ಕಿ

    ಬೆಂಗಳೂರು: ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿಗಳಿಗೆ (Students) ಪ್ರೊಫೆಸರ್ (Professor) ಒಬ್ಬರ ಕಾರು (Car) ಡಿಕ್ಕಿ ಹೊಡೆದಿರುವ ಘಟನೆ ಮಹಾರಾಣಿ ಕ್ಲಸ್ಟರ್ ಯೂನಿವರ್ಸಿಟಿಯಲ್ಲಿ (Maharani College)  ನಡೆದಿದೆ.

    ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ವೇಗವಾಗಿ ಬಂದ ಇಂಗ್ಲಿಷ್ ಪ್ರೊಫೆಸರ್ ನಾಗರಾಜ್ ಅವರ ಕಾರು ಒಬ್ಬರು ಶಿಕ್ಷಕಿ ಸೇರಿದಂತೆ ಕೆಲ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ನಟ ನಾಗಭೂಷಣ್ ಕಾರು ಅಪಘಾತ: ಪೊಲೀಸರ ಕೈ ಸೇರಿದ ಮತ್ತೊಂದು ವರದಿ

    ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿ ಅಶ್ವಿನಿ, ಪ್ರಥಮ ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ನಂದು ಪ್ರಿಯಾ ಹಾಗೂ ಮ್ಯೂಸಿಕ್ ಟೀಚರ್ ಜ್ಯೋತಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಪ್ರಾಣಿ ಕಡಿತಕ್ಕೆ ಒಳಗಾದವರಿಗೆ ಉಚಿತ ಚಿಕಿತ್ಸೆ ನೀಡಿ: ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲೈಂಗಿಕ ಕಿರುಕುಳ ಆರೋಪ- ಚೆನೈ ಕಲಾಕ್ಷೇತ್ರದ ಪ್ರೊಫೆಸರ್ ವಿರುದ್ಧ ದೂರು ದಾಖಲು

    ಲೈಂಗಿಕ ಕಿರುಕುಳ ಆರೋಪ- ಚೆನೈ ಕಲಾಕ್ಷೇತ್ರದ ಪ್ರೊಫೆಸರ್ ವಿರುದ್ಧ ದೂರು ದಾಖಲು

    ಚೆನ್ನೈ: ತಮಿಳುನಾಡಿನ (Tamil Nadu) ಪ್ರತಿಷ್ಠಿತ ಶಾಸ್ತ್ರೀಯ ಕಲೆಗಳ ಸಂಸ್ಥೆಯಾದ ಕಲಾಕ್ಷೇತ್ರದ (Kalakshetra) ಪ್ರೊಫೆಸರ್ (Professor) ಒಬ್ಬರ ಮೇಲೆ ಲೈಂಗಿಕ ಕಿರುಕುಳದ ದೂರು ದಾಖಲಾಗಿದೆ.

    ಸಂಸ್ಥೆಯ ಮಾಜಿ ವಿದ್ಯಾರ್ಥಿನಿಯೊಬ್ಬರು ತಮ್ಮ ಮೇಲೆ ಪ್ರೊಫೆಸರ್ ಒಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ದೂರಿನಡಿ ಚೆನ್ನೈ (Chennai) ಪೊಲೀಸರು ಪ್ರೊಫೆಸರ್ ಹರಿ ಪದ್ಮನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇದಲ್ಲದೆ ಮೂವರ ರೆಪರ್ಟರಿ ಕಲಾವಿದರಿಂದ ನಿಂದನೆ ಹಾಗೂ ಬಾಡಿ ಶೇಮಿಂಗ್ ನಡೆದಿದೆ ಎಂದು ಆರೋಪಿಸಿದ್ದಾರೆ. 200ಕ್ಕೂ ಹೆಚ್ಚೂ ವಿದ್ಯಾರ್ಥಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಸ್ಥೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆಗೈದ ಪತ್ನಿಗೆ ಜೀವಾವಧಿ ಶಿಕ್ಷೆ

    ಕಲಾಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ವಿದ್ಯಾರ್ಥಿಗಳು ಲೈಂಗಿಕ ಕಿರುಕುಳ, ಬಣ್ಣದ ಆಧಾರದ ಮೇಲೆ ತಾರತಮ್ಯ ಹಾಗೂ ನಿಂದನೆಗಳನ್ನು ಎದುರಿಸುತ್ತಿದ್ದಾರೆ. ಈ ಬಗ್ಗೆ ಆಡಳಿತ ಮಂಡಳಿಯ ಗಮನಕ್ಕೆ ತಂದರೂ ಏನು ಪ್ರಯೋಜನವಾಗಿಲ್ಲ. ಸಂಸ್ಥೆಯ ನಿರ್ದೇಶಕಿ ರೇವತಿ ರಾಮಚಂದ್ರನ್ ಅವರನ್ನು ವಜಾಗೊಳಿಸಬೇಕು. ಸಂಸ್ಥೆಯ ಆಂತರಿಕ ದೂರು ಸಮಿತಿಯನ್ನು ಪುನರ್ ರಚಿಸಬೇಕು ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ (G.Kishan Reddy) ಹಾಗೂ ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಪ್ರತಿಭಟನಾಕಾರರು ಪತ್ರ ಬರೆದು ಒತ್ತಾಯಿಸಿದ್ದಾರೆ.

    90 ವಿದ್ಯಾರ್ಥಿಗಳು ಶುಕ್ರವಾರ ಮಹಿಳಾ ಆಯೋಗದ ಮುಖ್ಯಸ್ಥರಿಗೆ ದೂರು ನೀಡಿದ್ದರು. ತಪ್ಪಿತಸ್ಥರು ಯಾರೇ ಆಗಿದ್ದರು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಮ್.ಕೆ ಸ್ಟಾಲಿನ್ (M.K Stalin) ಭರವಸೆ ನೀಡಿದ್ದಾರೆ. ಈ ಹಿಂದೆ ರಾಷ್ಟ್ರೀಯ ಮಹಿಳಾ ಆಯೋಗ (National Commission for Women) ಈ ಆರೋಪಗಳನ್ನು ಸುಳ್ಳು ಮಾಹಿತಿ ಎಂದು ನಿರಾಕರಿಸಿತ್ತು. ಇದನ್ನೂ ಓದಿ: ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನ – ಭಾರತೀಯರು ಸೇರಿ 8 ಮಂದಿ ಸಾವು

  • ತರಗತಿಯಲ್ಲಿ ವಿದ್ಯಾರ್ಥಿಯನ್ನ `ಟೆರರಿಸ್ಟ್’ ಎಂದ ಪ್ರೊಫೆಸರ್ ಅಮಾನತು

    ತರಗತಿಯಲ್ಲಿ ವಿದ್ಯಾರ್ಥಿಯನ್ನ `ಟೆರರಿಸ್ಟ್’ ಎಂದ ಪ್ರೊಫೆಸರ್ ಅಮಾನತು

    ಉಡುಪಿ: ಮಾಹೆ ವಿಶ್ವವಿದ್ಯಾಲಯದ ಎಂಐಟಿ ಕಾಲೇಜಿನಲ್ಲಿ (MIT College) ಪ್ರಾಧ್ಯಾಪಕರೊಬ್ಬರು (Professor)  ತರಗತಿ ಸಮಯದಲ್ಲಿ ಮುಸ್ಲಿಂ ವಿದ್ಯಾರ್ಥಿಗೆ `ಟೆರರಿಸ್ಟ್’ (Terrorist) ಎಂದು ನಿಂದನೆ ಮಾಡಿದ ಘಟನೆ ನಡೆದಿದೆ.

    ಈ ವಾಗ್ವಾದದ ವಿಡಿಯೋ ಜಾಲತಾಣದಲ್ಲಿ (Social Media) ಸದ್ದು ಮಾಡುತ್ತಿದೆ. ಇದೇ ತಿಂಗಳ ನವೆಂಬರ್ 26ರಂದು ಘಟನೆ ನಡೆದಿದ್ದು, ವಿದ್ಯಾರ್ಥಿಗಳೊಂದಿಗೆ (Students) ಮಾತನಾಡುವಾಗ ಮುಸ್ಲಿಮರು ಟೆರರಿಸ್ಟ್ಗಳು ಎಂಬ ಅರ್ಥದಲ್ಲಿ ಪ್ರೊಫೆಸರ್ (Professor) ಹೇಳಿದ್ದು, ವಿವಾದಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಫುಲ್ ಆಕ್ಟೀವ್

    ಪ್ರೊಫೆಸರ್ ಮಾತಿಗೆ ತರಗತಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿ, ಮುಸ್ಲಿಂ ಕಮ್ಯೂನಿಟಿಯನ್ನು (Muslim Community) ಟೆರರಿಸ್ಟ್ ಎಂದು ಕರೆಯಬೇಡಿ, ಅನಗತ್ಯವಾಗಿ ಈ ರೀತಿ ಮಾತನಾಡಬೇಡಿ ಎಂದಿದ್ದಾನೆ.

    ಬಳಿಕ ಪ್ರಾಧ್ಯಾಕರು ವಿದ್ಯಾರ್ಥಿ ತನ್ನ ಮಗನಂತೆ ಎಂದು ಹೇಳಿದ್ದಾರೆ. ಇದನ್ನು ಪ್ರಶ್ನಿಸಿದ ವಿದ್ಯಾರ್ಥಿ `ನೀವು ನಿಮ್ಮ ಮಗನಿಗೆ ಹೀಗೆ ಮಾತನಾಡುತ್ತೀರಾ? ನೀವು ಅವನನ್ನು ಭಯೋತ್ಪಾದಕ ಎಂದು ಕರೆಯುತ್ತೀರಾ? ನೀವು ಎಷ್ಟು ಜನರ ಮುಂದೆ ನನ್ನನ್ನು ಹಾಗೆ ಕರೆಯುತ್ತೀರಿ? ಇದು ತರಗತಿ, ನೀವು ವೃತ್ತಿಪರರಾಗಿ ಕಲಿಸುತ್ತಿದ್ದೀರಿ, ಮುಸ್ಲಿಮನಾಗಿ ದಿನನಿತ್ಯ ಇದನ್ನು ಎದುರಿಸುವುದು ತಮಾಷೆಯಲ್ಲ. ನೀವು ನನ್ನನ್ನು ಹಾಗೆ ಕರೆಯಬೇಡಿ” ಎಂದು ವಿದ್ಯಾರ್ಥಿ ವಾಗ್ವಾದಕ್ಕಿಳಿದಿದ್ದಾನೆ. ವಿದ್ಯಾರ್ಥಿ ಆಕ್ಷೇಪಿಸುತ್ತಿದ್ದಂತೆ ಪ್ರೊಫೆಸರ್ ವಿಷಾದ ವ್ಯಕ್ತಪಡಿಸಿ, ಸ್ಥಳದಲ್ಲೇ ಕ್ಷಮೆ ಕೋರಿದ್ದಾರೆ.

    ನೀವು ಕ್ಷಮೆ ಕೇಳಿದ ತಕ್ಷಣ ಮಾಡಿರುವ ಆರೋಪ ಬದಲಾಗಲ್ಲ ಎಂದು ವಿದ್ಯಾರ್ಥಿ ಆಕ್ಷೇಪಿಸಿದ್ದಾನೆ. ಈ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಉಪನ್ಯಾಸಕನ ವಿರುದ್ಧ ಮಾಹೆ ವಿಶ್ವವಿದ್ಯಾನಿಲಯ ಕ್ರಮ ಕೈಗೊಂಡಿದೆ. ವಿವಿಯ ಉಪನ್ಯಾಸಕನನ್ನು ಅಮಾನತುಗೊಳಿಸಿ ಆಂತರಿಕ ತನಿಖೆಗೆ ನಿರ್ಧರಿಸಿದೆ. ವಿದ್ಯಾರ್ಥಿಗೆ ಕೌನ್ಸಿಲಿಂಗ್ ಮೂಲಕ ಸಾಂತ್ವನ ಹೇಳಿದೆ. ಇದನ್ನೂ ಓದಿ: ಅದಾನಿ ಬಂದರು ವಿರೋಧಿಸಿ ಹಿಂಸಾತ್ಮಕ ಪ್ರತಿಭಟನೆ – 3 ಸಾವಿರಕ್ಕೂ ಅಧಿಕ ಮಂದಿ ವಿರುದ್ಧ ಕೇಸ್

    ಈ ಕುರಿತಾಗಿ ಮಾತನಾಡಿರುವ ವಿವಿ ಸಾರ್ವಜನಿಕ ಸಂಪರ್ಕ ವಿಭಾಗದ ನಿರ್ದೇಶಕ ಎಸ್.ಪಿ. ಕರ್, ಎಲ್ಲಾ ಧರ್ಮಗಳಿಗೆ ಸಮಾನ ಗೌರವ ಕೊಡುತ್ತೇವೆ. ವಸುದೈವ ಕುಟುಂಬ ಎನ್ನುವ ನಾವು ಇಂತಹ ಘಟನೆಯನ್ನು ಖಂಡಿಸುತ್ತೇವೆ. ನಾವು ಸ್ವಯಂಪ್ರೇರಿತ ಕ್ರಮ ತೆಗೆದುಕೊಂಡಿದ್ದೇವೆ. ಘಟನೆ ಬಳಿಕ ವಿದ್ಯಾರ್ಥಿಯೂ ಆತಂಕಕ್ಕೊಳಗಾಗಿದ್ದಾನೆ. ಈ ವೀಡಿಯೋವನ್ನು ತರಗತಿಯ ಒಳಗಿನ ವಿದ್ಯಾರ್ಥಿಗಳೇ ಚಿತ್ರೀಕರಣ ಮಾಡಿರುವ ಸಾಧ್ಯತೆಯಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಉಗ್ರ ಸಂಘಟನೆಗೆ ಬೆಂಬಲ ಆರೋಪ – ಪ್ರೊಫೆಸರ್ ಮನೆ ಮೇಲೆ NIA ದಾಳಿ

    ಉಗ್ರ ಸಂಘಟನೆಗೆ ಬೆಂಬಲ ಆರೋಪ – ಪ್ರೊಫೆಸರ್ ಮನೆ ಮೇಲೆ NIA ದಾಳಿ

    ಶ್ರೀನಗರ: ಭಯೋತ್ಪಾದನಾ ಚಟುವಟಿಕೆಗಳಿಗೆ ನಿಧಿ (Terror Funding) ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ತಂಡ ಮಂಗಳವಾರ ಬೆಳ್ಳಂಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir)ದಾಳಿ ನಡೆಸಿದೆ.

    ಬೆಳಗ್ಗೆಯೇ ಕಾರ್ಯಾಚರಣೆ ಶುರು ಮಾಡಿರುವ ಎನ್‌ಐಎ (NIA) ಪೂಂಚ್, ರಜೌರಿ, ಪುಲ್ವಾಮಾ, ಶೋಪಿಯಾನ್, ಶ್ರೀನಗರ, ಬುದ್ಗಾಮ್ ಮತ್ತು ಬಂಡಿಪೋರಾ ಜಿಲ್ಲೆಗಳಲ್ಲಿ ಪೊಲೀಸರು (Police) ಮತ್ತು ಅರೆಸೈನಿಕ ಸಿಬ್ಬಂದಿಯ ನೆರವಿನೊಂದಿಗೆ ದಾಳಿ ನಡೆಸಿದೆ. ಇದನ್ನೂ ಓದಿ: 856 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಉಜ್ಜಯಿನಿ ದೇಗುಲ ಇಂದು ಲೋಕಾರ್ಪಣೆ

    ಇದೇ ವೇಳೆ ಧಾರ್ಮಿಕ ಮುಖಂಡರಾದ (Religious Leader) ದಾರುಲ್ ಉಲೂಮ್ ರಹೀಮಿಯಾ ಬಂಡಿಪೋರಾ, ಮೌಲಾನಾ ರೆಹಮತ್ ಉಲ್ಲಾ ಖಾಸ್ಮಿ ಹಾಗೂ ಎನ್‌ಐಟಿ ಶ್ರೀನಗರದ ಪ್ರೊಫೆಸರ್ (Professor) ಸಮಮ್ ಅಹ್ಮದ್ ಲೋನ್ ಅವರ ಮನೆಗಳ ಮೇಲೆ ನಡೆಸಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ಇದನ್ನೂ ಓದಿ: ಪುಟಿನ್ ಕನಸಿನ ಸೇತುವೆ ಧ್ವಂಸಗೊಳಿಸಿದ್ದಕ್ಕೆ ಕೆರಳಿದ ರಷ್ಯಾ – ಉಕ್ರೇನ್ ಮೇಲೆ ಮತ್ತಷ್ಟು ತೀವ್ರ ದಾಳಿ

    ಇತ್ತೀಚೆಗೆ ದೇಶದ 15 ರಾಜ್ಯಗಳಲ್ಲಿ 93 ಕಡೆ ದಾಳಿ ನಡೆಸಿ ನೂರಾರು ಪಿಎಫ್‌ಐ ಕಾರ್ಯಕರ್ತರು, ಮುಖ್ಯಸ್ಥರನ್ನು ಬಂಧಿಸಿದ್ದ ಎನ್‌ಐಎ ತಂಡ ಇದೀಗ ಮತ್ತೆ ತನ್ನ ಅಬ್ಬರ ಶುರು ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ಗೇಟ್ ತೆಗೆಯೋದು ತಡವಾಗಿದ್ದಕ್ಕೆ ಸೆಕ್ಯೂರಿಟಿಗೆ ಕಪಾಳಮೋಕ್ಷ ಮಾಡಿದ ಪ್ರಾಧ್ಯಾಪಕಿ

    ಗೇಟ್ ತೆಗೆಯೋದು ತಡವಾಗಿದ್ದಕ್ಕೆ ಸೆಕ್ಯೂರಿಟಿಗೆ ಕಪಾಳಮೋಕ್ಷ ಮಾಡಿದ ಪ್ರಾಧ್ಯಾಪಕಿ

    ಲಕ್ನೋ: ಸೆಕ್ಯೂರಿಟಿ ಗಾರ್ಡ್ (Security) ಒಬ್ಬರು ಅಪಾರ್ಟ್ಮೆಂಟ್ ಗೇಟ್ ಬಾಗಿಲು ತೆಗೆಯೋದು ತಡವಾಗಿದ್ದಕ್ಕೇ ಮಹಿಳಾ ಪ್ರೊಫೆಸರ್( Women Professor) ಸಿಬ್ಬಂದಿಯ ಕಾಲರ್‌ಪಟ್ಟಿ ಹಿಡಿದು ಎಳೆದಾಡಿದ್ದಾಳೆ. ಅಲ್ಲದೇ ಬಾಯಿಗೆ ಬಂದಂತೆ ಬೈದು ನಿಂದಿಸಿದ್ದಾಳೆ.

    ನೊಯ್ಡಾದ ಸೆಕ್ಟರ್ 121 ರಲ್ಲಿರುವ ಕ್ಲಿಯೋ ಕೌಂಟಿಯಲ್ಲಿ ಘಟನೆ ನಡೆದಿದ್ದು, ಕಳೆದ ಒಂದು ತಿಂಗಳಲ್ಲಿ ಇದು ನೊಯ್ಡಾದಲ್ಲಿ ನಡೆದ 2ನೇ ಘಟನೆಯಾಗಿದೆ. ಮಹಿಳಾ ಪ್ರೊಫೆಸರ್ (Professor) ಸುತಾಪ್ ದಾಸ್ ಎಂಬಾಕೆಯೇ ತನ್ನ ಕಾರಿನಿಂದ ಇಳಿದು ಭದ್ರತಾ ಸಿಬ್ಬಂದಿ (security guard) ಸಚಿನ್‌ಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ದೃಶ್ಯಾವಳಿ ಸಿಸಿಟಿಯಲ್ಲಿ (CCTV) ಸೆರೆಯಾಗಿದೆ. ಇದನ್ನೂ ಓದಿ: ʼಬ್ರಹ್ಮಾಸ್ತ್ರʼ ಚಿತ್ರದಲ್ಲಿ ನಾಯಕನ ತಾಯಿ ಪಾತ್ರ ಮಾಡಿರೋ ನಟಿ ರಣಬೀರ್‌ ಮಾಜಿ ಪ್ರೇಯಸಿ?

    ಘಟನೆ ಬಳಿಕ ಮಾತನಾಡಿದ ಭದ್ರತಾ ಸಿಬ್ಬಂದಿ ಸಚಿನ್, ನಾವು ಆರ್‌ಎಫ್‌ಐಡಿ (RFID) ಕೆಲಸ ಮಾಡುತ್ತಿದೆವು. ಈ ವೇಳೆ ಮಹಿಳೆ ಆಕೆಯ ಕಾರಿನ ಸಂಖ್ಯೆಯನ್ನು ತೋರಿಸಲಿಲ್ಲ. ಆದರೂ ನಾವು ಕಾರನ್ನು ಒಳಗೆ ಹೋಗಲು ಅನುಮತಿಸಿದೆವು. ನಂತರ ಆಕೆ ಕಾರನ್ನು ನಿಲ್ಲಿಸಿ ಬಂದು ಬಾಯಿಗೆ ಬಂದಂತೆ ನಿಂದಿಸಲು ಶುರು ಮಾಡಿದ್ಲು. ಜೊತೆಗೆ ಕಪಾಳಮೋಕ್ಷ ಮಾಡಿದಳು. ತಕ್ಷಣ ನಾವು ಪೊಲೀಸರಿಗೆ (Police) ದೂರವಾಣಿ ಕರೆ ಮಾಡಿ ಘಟನೆ ವಿವರಿಸಿದೆವು. ಇದನ್ನೂ ಓದಿ: ಕ್ರಾಂತಿಕಾರಿ ಸಾಧು ಎಂದೇ ಹೆಸರಾಗಿದ್ದ ಸ್ವಾಮಿ ಸ್ವರೂಪಾನಂದ ಸರಸ್ವತಿ ನಿಧನ

    ಭದ್ರತಾ ಸಿಬ್ಬಂದಿ ಗೇಟ್ ತೆರೆಯುವುದು ತಡ ಮಾಡಿದ್ದಕ್ಕೇ ಪ್ರಾಧ್ಯಾಪಕಿ ಕಪಾಳಮೋಕ್ಷ ಮಾಡಿದ್ದಾರೆ. ಮಹಿಳೆ, ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿ ನಿಂದಿಸುತ್ತಿದ್ದರೂ ಯಾರೊಬ್ಬರೂ ಮಧ್ಯ ಪ್ರವೇಶಿಸಲಿಲ್ಲ. ಆದರೆ ಸಹ ಸಿಬ್ಬಂದಿ ತಮ್ಮ ಮೊಬೈಲ್‌ನಲ್ಲಿ ಘಟನೆಯನ್ನು ರೆಕಾರ್ಡ್ ಮಾಡುತ್ತಿದ್ದರು. ಈ ದೃಶ್ಯವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಭದ್ರತಾ ಸಿಬ್ಬಂದಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಲಾಗಿದೆ. ಅದಾದ ಕೆಲವೇ ಕ್ಷಣಗಳಲ್ಲಿ ಆಕೆಗೆ ಜಾಮೀನು ನೀಡಲಾಯಿತು ಎಂದು ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಸೆಕ್ಯೂರಿಟಿ ಕಾಲರ್ ಹಿಡಿದು ಎಳೆದಾಡಿದ ಮಹಿಳೆ – ರಂಪಾಟದ ವೀಡಿಯೋ ವೈರಲ್

    ಕಳೆದ ತಿಂಗಳು ಇದೇ ರೀತಿ ಘಟನೆಯೊಂದು ನಡೆದಿತ್ತು. ಸೆಕ್ಯೂರಿಟಿ ಕಾಲರ್ ಹಿಡಿದು ಎಳೆದಾಡಿ ತನ್ನ ದರ್ಪ ತೋರಿಸಿದ್ದು, ಹಲ್ಲೆಗೂ ಮುಂದಾಗಿರುವ ಘಟನೆ ನೊಯ್ಡಾದ ಜೇಪೆ ಗ್ರೂಪ್ ಸೊಸೈಟಿ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು.

    Live Tv
    [brid partner=56869869 player=32851 video=960834 autoplay=true]

  • ಬಿಕಿನಿ ಧರಿಸಿದ ಫೋಟೋ ಹಾಕಿದ್ದಕ್ಕೆ ಕೆಲಸ ಕಳೆದುಕೊಂಡ ಪ್ರಾಧ್ಯಾಪಕಿ

    ಬಿಕಿನಿ ಧರಿಸಿದ ಫೋಟೋ ಹಾಕಿದ್ದಕ್ಕೆ ಕೆಲಸ ಕಳೆದುಕೊಂಡ ಪ್ರಾಧ್ಯಾಪಕಿ

    ಕೋಲ್ಕತ್ತಾ: ಬಿಕಿನಿ ಧರಿಸಿ ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಪೋಸ್ಟ್ ಮಾಡಿದ್ದರಿಂದ ಪ್ರಾಧ್ಯಾಪಕಿಯು ಕೆಲಸ ಕಳೆದುಕೊಂಡ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.

    ಕೋಲ್ಕತ್ತಾದ ಸೇಂಟ್‍ಕ್ಸೇವಿಯರ್ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋವನ್ನು ಹಾಕಿದ್ದರು. ಇದನ್ನು ನೋಡುತ್ತಿದ್ದ ಆಕೆಯ ವಿದ್ಯಾರ್ಥಿಯನ್ನು ಕಂಡ ತಂದೆಗೆ ಗಾಬರಿಯಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ತಂದೆ ಶಿಕ್ಷಕಿಯನ್ನು ಅಮಾನತು ಮಾಡಬೇಕೆಂದು ವಿವಿಗೆ ಒತ್ತಾಯಿಸಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಿಯ ಆಡಳಿತ ಮಂಡಳಿಯು ಪ್ರಾಧ್ಯಾಪಕಿಯ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಾಧ್ಯಾಪಕಿ ಬಲವಂತವಾಗಿ ರಾಜೀನಾಮೆ ನೀಡಿದರು. ಅಷ್ಟೇ ಅಲ್ಲದೇ ವಿವಿಯ ಆಡಳಿತ ಮಂಡಳಿಯು ತಮ್ಮ ಕಾಲೇಜಿನ ಖ್ಯಾತಿಗೆ ಹಾನಿ ಉಂಟಾಗಿದ್ದರಿಂದ 99 ಕೋಟಿ ರೂ.ವನ್ನು ಪಾವತಿಸುವಂತೆ ಪ್ರಾಧ್ಯಾಪಕಿಗೆ ಕೇಳಿದೆ.

    ಪತ್ರದಲ್ಲಿ ಏನಿದೆ?: ಇತ್ತೀಚಿಗೆ ನನ್ನ ಮಗ ಪ್ರಾಧ್ಯಾಪಕಿಯ ಕೆಲವು ಫೋಟೋಗಳನ್ನು ನೋಡುತ್ತಿರುವುದನ್ನು ಕಂಡು ನಾನು ದಿಗ್ಭ್ರಮೆಗೊಂಡಿದ್ದೇನೆ. ಅಷ್ಟೇ ಅಲ್ಲದೇ ಆ ಫೋಟೋದಲ್ಲಿ ಪ್ರಾಧ್ಯಾಪಕಿಯು ಅಶ್ಲೀಲ ರೀತಿಯಲ್ಲಿ ಪೋಸ್‍ನ್ನು ನೀಡಿದ್ದಾರೆ. ಜೊತೆಗೆ ಈ ಫೋಟೋವನ್ನು ಉದ್ದೇಶಪೂರ್ವಕವಾಗಿ ಸಾರ್ವಜನಿಕವಾಗಿಯೇ ಫೋಟೋವನ್ನು ಹಾಕಿಕೊಂಡಿದ್ದಾಳೆ. ಇದನ್ನೂ ಓದಿ: ಬಿಜೆಪಿ ತನ್ನ ಮಿತ್ರಪಕ್ಷಗಳನ್ನು ಮುಗಿಸಲು ಪ್ರಯತ್ನಿಸುತ್ತಿದೆ, ನಿತೀಶ್‍ರದ್ದು ಒಳ್ಳೆಯ ನಿರ್ಧಾರ: ಶರದ್ ಪವಾರ್

    ಶಿಕ್ಷಕಿಯೊಬ್ಬಳು ಬಿಕಿನಿ ಧರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋವನ್ನು ಅಪ್‍ಲೋಡ್ ಮಾಡುತ್ತಿರುವುದನ್ನು ನೋಡುವುದು ಪೋಷಕರಾಗಿ ನನಗೆ ನಾಚಿಕೆಗೇಡಿನ ಸಂಗತಿಯಾಗಿದೆ. ಏಕೆಂದರೆ ನನ್ನ ಮಗನನ್ನು ಈ ರೀತಿಯ ಅಸಭ್ಯತೆಯಿಂದ ದೂರ ಇಡಲು ಪ್ರಯತ್ನಿಸುತ್ತಿದ್ದೇನೆ. ಆದರೆ ಈ ರೀತಿಯ ಫೋಟೋವನ್ನು ಹಾಕುವುದರಿಂದ ವಿದ್ಯಾರ್ಥಿಗಳ ದಾರಿ ತಪ್ಪಿಸಿದಂತಾಗುತ್ತದೆ ಎಂದು ಪತ್ರದಲ್ಲಿ ವಿದ್ಯಾರ್ಥಿಯ ತಂದೆ ತಿಳಿಸಿದ್ದಾರೆ.

    POLICE JEEP

    ಪ್ರಾಧ್ಯಾಪಕಿ ದೂರು: ಘಟನೆ ಸಂಬಂಧಿಸಿ ಪ್ರಾಧ್ಯಾಪಕಿಯು ಪೊಲೀಸರಿಗೆ ದೂರು ನೀಡಿದ್ದಾರೆ. ನನ್ನ ಇನ್‍ಸ್ಟಾಗ್ರಾಂ ಖಾತೆಯು ಸಾರ್ವಜನಿಕವಾದದ್ದಲ್ಲ, ಬದಲಿಗೆ ಖಾಸಗಿಯಾದ್ದದಾಗಿದೆ. ಅಷ್ಟೇ ಅಲ್ಲದೇ ಬಿಕಿನಿ ಧರಿಸಿರುವ ಫೋಟೋವನ್ನು ವಿಶ್ವವಿದ್ಯಾಲಯಕ್ಕೆ ಸೇರುವ ಮೊದಲೇ ತೆಗೆದುಕೊಂಡಿದ್ದೆ. ವಿದ್ಯಾರ್ಥಿಯ ತಂದೆ ಈ ರೀತಿ ಹೇಳಿರುವುದು ಆಕ್ಷೇಪಾರ್ಹವಾಗಿದೆ. ಇದರಿಂದಾಗಿ ನನ್ನ ಖಾಸಗಿತನಕ್ಕೆ ಧಕ್ಕೆ ಉಂಟಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ‘ಗಾಂಧೀಜಿಯನ್ನು ಕೊಂದಿದ್ದು ನಾವೇ’ ಎಂದ ಹಿಂದೂ ಮಹಾಸಭಾದ ಅಧ್ಯಕ್ಷನ ವಿರುದ್ಧ ಕಾಂಗ್ರೆಸ್ ದೂರು

    Live Tv
    [brid partner=56869869 player=32851 video=960834 autoplay=true]