Tag: profile photo

  • ಟ್ವಿಟ್ಟರ್ ಪ್ರೊಫೈಲ್ ಫೋಟೋ ಚೇಂಜ್ ಮಾಡಿದ ಸ್ಟಾಲಿನ್

    ಟ್ವಿಟ್ಟರ್ ಪ್ರೊಫೈಲ್ ಫೋಟೋ ಚೇಂಜ್ ಮಾಡಿದ ಸ್ಟಾಲಿನ್

    ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ತಮ್ಮ ಟ್ವಿಟ್ಟರ್ ಪ್ರೊಫೈಲ್ ಫೋಟೋವನ್ನು ಬದಲಾಯಿಸಿದ್ದಾರೆ.

    ಹೌದು, ಎಂ.ಕೆ ಸ್ಟಾಲಿನ್ ಅವರು, ಭಾರತದ ತ್ರಿವರ್ಣ ಧ್ವಜದೊಂದಿಗೆ ಎಂ.ಕರುಣಾನಿಧಿ ಅವರು ನಿಂತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಮೂಲಕ ಧ್ವಜಾರೋಹಣ ಹಕ್ಕನ್ನು ಸಿಎಂಗಳು ಹೊಂದಿರುತ್ತಾರೆ ಎಂಬುವುದನ್ನು ತೋರಿಸಿ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತ್ರಿವರ್ಣ ಧ್ವಜದ ಫೋಟೋವನ್ನು ಹಂಚಿಕೊಂಡ ಕೆಲವೇ ದಿನಗಳಲ್ಲಿ ಆಡಳಿತಾರೂಢ ಡಿಎಂಕೆ ಅಧ್ಯಕ್ಷರಾಗಿರುವ ಸ್ಟಾಲಿನ್ ಅವರು, ಎಲ್ಲರೂ ಸೇರಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಗುರುತಿಸಿ, ಎಲ್ಲರೂ ಒಟ್ಟಾಗಿ ಆಚರಿಸೋಣ ಎಂದು ಜನರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಯವರು ಕಂಡರೆ ನುಗ್ಗಿ ಹೊಡೆಯುತ್ತೇವೆ: ಕುಲಕರ್ಣಿ

    1974ರ ಆಗಸ್ಟ್ 15ರಂದು ರಾಷ್ಟ್ರ ಧ್ವಜಾರೋಹಣ ಮಾಡುವ ಮೂಲಕ ರಾಜ್ಯದ ಮುಖ್ಯಮಂತ್ರಿಗಳ ಹಕ್ಕನ್ನು ಮುತಮಿಳ್ ಅರಿಗ್ನರ್ (ತಮಿಳು ವಿದ್ವಾಂಸ) ಕಲೈಂಜರ್ ಅವರು ಖಚಿತಪಡಿಸಿದರು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಮತ್ತೆ ಟಾಪ್‌ಲೆಸ್ ಅವತಾರದಲ್ಲಿ ಬಂದ ಉರ್ಫಿ ಜಾವೇದ್: ನೆಟ್ಟಿಗರಿಂದ ನಟಿಗೆ ಕ್ಲಾಸ್

    ಫೋಟೋದಲ್ಲಿ ದಿವಂಗತ ಕರುಣಾನಿಧಿ ಅವರನ್ನು ಅಧಿಕಾರಿಗಳು ಸುತ್ತುವರೆದಿದ್ದು, ಮೆಟ್ಟಿಲುಗಳನ್ನು ಇಳಿಯುತ್ತಿರುವುದನ್ನು ಕಾಣಬಹುದಾಗಿದೆ. ಬಹುಶಃ ರಾಜ್ಯ ಸೆಕ್ರೆಟರಿಯೇಟ್ ಇರುವಲ್ಲಿ ಫೋರ್ಟ್ ಸೇಂಟ್ ಜಾರ್ಜ್ ಇದೆ. ಭಾರತದ ರಾಷ್ಟ್ರಧ್ವಜವು ಹಿಂಭಾಗದಲ್ಲಿ ಎತ್ತರದ ಮಾಸ್ಟ್ ಮೇಲೆ ಹಾರುತ್ತಿರುವುದನ್ನು ನೋಡಬಹುದಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕೆಂಪಿದ್ದ ಟ್ವಿಟ್ಟರ್ ಖಾತೆಯ ಪ್ರೊಫೈಲ್ ಚಿತ್ರವನ್ನು ಕಡುನೀಲಿ ಬಣ್ಣಕ್ಕೆ ಬದಲಾಯಿಸಿಕೊಂಡ ಆರ್‌ಸಿಬಿ

    ಕೆಂಪಿದ್ದ ಟ್ವಿಟ್ಟರ್ ಖಾತೆಯ ಪ್ರೊಫೈಲ್ ಚಿತ್ರವನ್ನು ಕಡುನೀಲಿ ಬಣ್ಣಕ್ಕೆ ಬದಲಾಯಿಸಿಕೊಂಡ ಆರ್‌ಸಿಬಿ

    ಮುಂಬೈ: ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಹಂತಕ್ಕೇರುವ ಅವಕಾಶವನ್ನು ಜೀವಂತವಾಗಿರಿಸಿಕೊಂಡಿದೆ. ಆದರೆ ತಂಡದ ಭವಿಷ್ಯ ಇಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯದಲ್ಲಿ ನಿರ್ಧಾರವಾಗಲಿದೆ.

    ಆರ್‌ಸಿಬಿ ಈಗಾಗಲೇ ತನ್ನ ಚರಣದ 14 ಪಂದ್ಯಗಳನ್ನು ಆಡಿ 8 ಜಯ, 6 ಸೋಲುಗಳನ್ನು ಅನುಭವಿಸಿದ್ದು ಪಾಯಿಂಟ್ಸ್ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಆದರೆ ತಂಡದ ರನ್-ರೇಟ್ ತೀರಾ ಕಡಿಮೆ ಇದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ರನ್-ರೇಟ್ ಉತ್ತಮವಾಗಿದೆ. ಒಂದು ವೇಳೆ ಇಂದು ನಡೆಯುವ ಡೆಲ್ಲಿ ಮತ್ತು ಮುಂಬೈ ಪಂದ್ಯದಲ್ಲಿ ರೋಹಿತ್ ಬಳಗವು ಸೋತರೆ ಡೆಲ್ಲಿ ತಂಡವು ರನ್ ರೆಟ್ ಆಧಾರದ ಮೇಲೆ ಪ್ಲೇ ಆಫ್‌ಗೇರಲಿದೆ. ಇದನ್ನೂ ಓದಿ: ಡೆಲ್ಲಿ ವಿರುದ್ಧದ ಪಂದ್ಯದ ಮೂಲಕ ಅರ್ಜುನ್ ತೆಂಡೂಲ್ಕರ್ ಐಪಿಎಲ್‍ಗೆ ಪದಾರ್ಪಣೆ?

    ಈಗಾಗಲೇ ತಮ್ಮ ತಂಡದ ಭವಿಷ್ಯ ಮುಂಬೈ ಕೈಯಲ್ಲಿರುವ ಹಿನ್ನೆಲೆ ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಮುಂಬೈ ಇಂಡಿಯನ್ಸ್ ತಂಡವನ್ನು ಹುರಿದುಂಬಿಸುತ್ತಿದ್ದಾರೆ. ಅಲ್ಲದೆ ಆರ್‌ಸಿಬಿಯು ಮುಂಬೈ ತಂಡವನ್ನು ಮತ್ತಷ್ಟು ಬೆಂಬಲಿಸಲು ತಮ್ಮ ಸಾಮಾಜಿಕ ಜಾಲತಾಣದ ಪ್ರೊಫೈಲ್ ಚಿತ್ರವನ್ನು ಮುಂಬೈ ತಂಡದ ಜೆರ್ಸಿಯ ಬಣ್ಣವನ್ನು ಹೋಲುವ ರೀತಿಯ ಬಣ್ಣಕ್ಕೆ ಬದಲಾಯಿಸಿಕೊಂಡಿದೆ. ಇದನ್ನೂ ಓದಿ: ಚೆನ್ನೈಗೆ ಸಿಂಹಸ್ವಪ್ನವಾದ ಅಶ್ವಿನ್ – ಸೋಲಿನೊಂದಿಗೆ ಐಪಿಎಲ್ ಅಭಿಯಾನ ಮುಗಿಸಿದ ಹಾಲಿ ಚಾಂಪಿಯನ್

    ಈ ಕುರಿತು ವೀಡಿಯೋವೊಂದರಲ್ಲಿ ಮಾತನಾಡಿದ ಆರ್‌ಸಿಬಿಯ ಮಾಜಿ ನಾಯಕ ವಿರಾಟ್ ಕೊಹ್ಲಿ, ನಾವು ಮೇ 21 ರಂದು ನಡೆಯುವ ಮುಂಬೈ ಮತ್ತು ಡೆಲ್ಲಿ ಪಂದ್ಯದಲ್ಲಿ ರೋಹಿತ್ ಬಳಗವನ್ನು ಬೆಂಬಲಿಸುತ್ತೇವೆ. ಕೇವಲ ಇಬ್ಬರಲ್ಲ, ಇನ್ನೂ 25 ಬೆಂಬಲಿಗರು ಸೇರಿ ಚಿಯರ್ ಅಪ್ ಮಾಡುತ್ತೇವೆ ಎಂದರು.

    IPL 2022 RCB VS SRH 5

    ಮುಂಬೈ ಮತ್ತು ಡೆಲ್ಲಿ ನಡುವಿನ ಪಂದ್ಯ ಮುಂಬೈಗೆ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದಾದರೆ, ಡೆಲ್ಲಿಗೆ ಪ್ಲೇ ಆಫ್‌ಗೆ ಏರಲು ಕಡೆಯ ಅವಕಾಶವಾಗಿದೆ. ಈ ಪಂದ್ಯದಲ್ಲಿ ಮುಂಬೈ ಗೆದ್ದರೆ, ಆರ್‌ಸಿಬಿ ಪ್ಲೇ ಆಫ್‌ಗೆ ಎಂಟ್ರಿ ಕೊಡಲಿದೆ. ಡೆಲ್ಲಿ ಗೆದ್ದರೆ, ಆರ್‌ಸಿಬಿ ಅದೃಷ್ಟದಾಟದಲ್ಲಿ ಸೋತು ಮನೆ ದಾರಿ ಹಿಡಿಯಬೇಕಾಗಿದೆ. ಹಾಗಾಗಿ ಇಂದಿನ ಪಂದ್ಯ ಮಹತ್ವ ಪಡೆದುಕೊಂಡಿದೆ.

  • ನೋಟಿಫಿಕೇಶನ್‌ನಲ್ಲಿ ಪ್ರೊಫೈಲ್ ಫೋಟೋ – ಐಒಎಸ್‌ಗೂ ಬರಲಿದೆ ವಾಟ್ಸಪ್‌ನ ಹೊಸ ಫೀಚರ್

    ನೋಟಿಫಿಕೇಶನ್‌ನಲ್ಲಿ ಪ್ರೊಫೈಲ್ ಫೋಟೋ – ಐಒಎಸ್‌ಗೂ ಬರಲಿದೆ ವಾಟ್ಸಪ್‌ನ ಹೊಸ ಫೀಚರ್

    ವಾಷಿಂಗ್ಟನ್: ಇಲ್ಲಿಯವರೆಗೆ ನಿಮ್ಮ ಐಒಎಸ್ ಫೋನ್‌ನಲ್ಲಿ ವಾಟ್ಸಪ್ ಸಂದೇಶಗಳು ಬಂದಾಗ ನೋಟಿಫಿಕೇಶನ್‌ನಲ್ಲಿ ಕೇವಲ ಹೆಸರು ಮಾತ್ರ ಗೋಚರಿಸುತ್ತಿತ್ತು. ಇನ್ನು ಮುಂದೆ ವಾಟ್ಸಪ್ ಸಂದೇಶದ ನೋಟಿಫಿಕೇಶನ್‌ನಲ್ಲಿ ಸಂದೇಶ ಕಳುಹಿಸಿದವರ ಪ್ರೊಫೈಲ್ ಫೋಟೋ ಕೂಡಾ ಕಾಣಿಸಲಿದೆ.

    ಹೌದು, ಈ ಫೀಚರ್ ಆ್ಯಂಡ್ರಾಯ್ಡ್ ಫೋನ್‌ಗಳಲ್ಲಿ ವರ್ಷಗಳಿಂದಲೂ ಬಳಕೆಯಲ್ಲಿದೆ. ಆದರೆ ಐಒಎಸ್ ಬಳಕೆದಾರರಿಗೆ ಈ ಫೀಚರ್‌ನ ಭಾಗ್ಯ ಇಲ್ಲಿಯವರೆಗೂ ಸಿಕ್ಕಿಲ್ಲ. ಕೊನೆಗೂ ವಾಟ್ಸಪ್ ಈ ಫೀಚರ್ ಅನ್ನು ಐಒಎಸ್‌ಗಳಿಗೂ ತರಲಿರುವ ಸುಳಿವು ನೀಡಿದೆ. ಇದನ್ನೂ ಓದಿ: ಬಿಎಸ್‌ಎನ್‌ಎಲ್ ಹೊಸ ಬಳಕೆದಾರರಿಗೆ 5ಜಿಬಿ ಉಚಿತ ಡೇಟಾ

    whatsapp

    ಸದ್ಯ ಈ ಫೀಚರ್ ವಾಟ್ಸಪ್‌ನ 2.22.1.1ಗೆ ಅಪ್ಡೇಟ್ ಮಾಡಿರುವ ಐಒಎಸ್ ಬೀಟಾ ಬಳಕೆದಾರರಿಗೆ ಮಾತ್ರವೇ ಪರೀಕ್ಷಿಸಲು ಸಾಧ್ಯವಾಗುತ್ತಿದೆ. ಇದು ವಾಟ್ಸಪ್‌ನ ಈ ವರ್ಷದ ಮೊದಲ ಬೀಟಾ ಟೆಸ್ಟಿಂಗ್ ಕೂಡಾ ಹೌದು.

    ಈ ಫೀಚರ್‌ನಿಂದ ಬಳಕೆದಾರರು ನೋಟಿಫಿಕೇಶನ್‌ನಲ್ಲಿ ಸಂದೇಶ ಕಳುಹಿಸಿದವರ ಹೆಸರನ್ನು ಓದುವ ಅಗತ್ಯ ಬೀಳುವುದಿಲ್ಲ. ಬದಲಾಗಿ ಪ್ರೊಫೈಲ್ ಫೋಟೋ ನೋಡುತ್ತಿದ್ದಂತೆ ಸಂದೇಶ ಕಳುಹಿಸಿದವರನ್ನು ಗುರುತು ಹಿಡಿಯಬಹುದು. ಇದನ್ನೂ ಓದಿ: ಬಟನ್ ಒತ್ತಿದ್ರೆ ಕಾರಿನ ಬಣ್ಣವೇ ಬದಲಾಗುತ್ತೆ

    ವಾಟ್ಸಪ್‌ನ ಬಹುನಿರೀಕ್ಷಿತ ಇನ್ನೊಂದು ಹೊಸ ಫೀಚರ್ ಬಿಸಿನೆಸ್ ನಿಯರ್‌ಬೈ. ಈ ಫೀಚರ್‌ನಿಂದ ಬಳಕೆದಾದರು ಹತ್ತಿರದ ರೆಸ್ಟೋರೆಂಟ್, ಕಿರಾಣಿ ಅಂಗಡಿಗಳು, ಬಟ್ಟೆ ಅಂಗಡಿಗಳು ಹೀಗೆ ಹಲವು ವ್ಯಾಪಾರಗಳನ್ನು ಹುಡುಕಲು ಸಹಾಯ ಮಾಡಲಿದೆ.

  • ಟ್ವಿಟ್ಟರ್ ಪ್ರೊಫೈಲ್ ಫೋಟೋ ಬದಲಿಸಿ ವಿಶೇಷ ಸಂದೇಶ ರವಾನಿಸಿದ ಮೋದಿ

    ಟ್ವಿಟ್ಟರ್ ಪ್ರೊಫೈಲ್ ಫೋಟೋ ಬದಲಿಸಿ ವಿಶೇಷ ಸಂದೇಶ ರವಾನಿಸಿದ ಮೋದಿ

    ನವದೆಹಲಿ: ದೇಶಾದ್ಯಂತ ಮಂಗಳವಾರದಿಂದ ಲಾಕ್‍ಡೌನ್ 2.0 ಮೇ 3ರ ವರೆಗೂ ವಿಸ್ತರಣೆಯಾಗಿದೆ. ಇಂದು ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕೊರೋನಾ ನಿಯಂತ್ರಣಕ್ಕೆ ಮತ್ತಷ್ಟು ಸಮಯ ಲಾಕ್‍ಡೌನ್ ವಿಸ್ತರಣೆ ಮಾಡಲಾಗುತ್ತಿದೆ ಎಂದು ಹೇಳಿದ್ದರು. ಅಲ್ಲದೇ ಇಂತಹ ಸಂದಿಗ್ಧ ಸಂದರ್ಭದಲ್ಲಿ ತ್ಯಾಗವನ್ನು ಮಾಡುತ್ತಿರುವ ದೇಶದ ಜನರಿಗೆ ಮೋದಿ ಧನ್ಯವಾದ ತಿಳಿಸಿದ್ದರು. ದೇಶದ ಜನತೆ ಕುರಿತು ಮಾತನಾಡುವ ವೇಳೆ ಮುಖಕ್ಕೆ ಮಾಸ್ಕ್ ಕೂಡ ಮೋದಿ ಧರಿಸಿದ್ದರು. ಪ್ರಧಾನಿ ಧರಿಸಿದ್ದ ಮಣಿಪೂರ್ ತಯಾರಿಸಿದ ಮಫ್ಲರ್ ಎಲ್ಲರನ್ನು ಆಕರ್ಷಿಸಿತ್ತು.

    ಲಾಕ್‍ಡೌನ್ ವಿಸ್ತರಣೆ ಪ್ರಕಟನೆಯ ಬಳಿಕ ಮೋದಿ ಅವರು ತಮ್ಮ ಟ್ವಿಟ್ಟರ್ ಖಾತೆಯ ಪ್ರೊಫೈನಲ್ ಫೋಟೋವನ್ನು ಬದಲಿಸಿದ್ದು, ಮಣಿಪೂರ್ ಮಾಸ್ಕ್ ಧರಿಸಿದ್ದ ಫೋಟೋವನ್ನು ಅಪ್‍ಡೇಟ್ ಮಾಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ದೇಶದ ಎಲ್ಲಾ ಪ್ರಜೆಗಳು ಮಾಸ್ಕ್ ಧರಿಸುವುದು ಕಡ್ಡಾಯ ಮಾಡಿ ಕೇಂದ್ರ ಸೂಚನೆ ನೀಡಿದೆ. ಪರಿಣಾಮ ಮೋದಿ ತಮ್ಮ ಪ್ರೊಫೈಲ್‍ಗೆ ಮಾಸ್ಕ್ ಧರಿಸಿರುವ ಫೋಟೋವನ್ನು ಅಪ್‍ಲೋಡ್ ಮಾಡಿದ್ದಾರೆ.

    ದೇಶದ ಜನತೆಯನ್ನು ಕುರಿತು ಕೊರೋನಾ ಕುರಿತು ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ 4ನೇ ಬಾರಿಗೆ ಮೋದಿ ಅವರು ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಅಲ್ಲದೇ ಪ್ರಜೆಗಳನ್ನು ಉದ್ದೇಶಿಸಿ ಮಾತನಾಡುವ ವೇಳೆ 2ನೇ ವಾರಿ ಮಾಸ್ಕ್ ಧರಿಸಿ ಕಾಣಿಸಿಕೊಂಡಿದ್ದಾರೆ. ಇತ್ತ ಲಾಕ್‍ಡೌನ್ ವಿಸ್ತರಣೆ ಕುರಿತು ಪ್ರಧಾನಿ ಮೋದಿ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದರು. ಈ ವೇಳೆಯೂ ಪ್ರಧಾನಿ ಮೋದಿ ಅವರು ಕಟನ್ ಬಟ್ಟೆಯಿಂದ ತಯಾರಿಸಿದ್ದ ಹೋಮ್ ಮೇಡ್ ಮಾಸ್ಕ್ ಧರಿಸಿದ್ದರು.

    ಇತ್ತ ಭಾರತದಲ್ಲಿ ಕೊರೋನಾ ವೈರಸ್ ವೇಗವಾಗಿ ಹರಡುತ್ತಿದ್ದು, ಈಗಾಗಲೇ ಪಾಸಿಟಿವ್ ಪ್ರಕರಣಗಳ ಸಂಖ್ಯೆ 10 ಸಾವಿರವನ್ನು ದಾಟಿದೆ. ಅಲ್ಲದೇ ಸುಮಾರು 350 ಮಂದಿ ಕೋವಿಡ್-19ನಿಂದ ಸಾವನ್ನಪ್ಪಿದ್ದಾರೆ.

  • ಐಎಎಸ್ ಅಧಿಕಾರಿ, ಪತ್ನಿಯಿಂದ ಯುವಕನಿಗೆ ಹಿಗ್ಗಾಮುಗ್ಗ ಥಳಿತ..!

    ಐಎಎಸ್ ಅಧಿಕಾರಿ, ಪತ್ನಿಯಿಂದ ಯುವಕನಿಗೆ ಹಿಗ್ಗಾಮುಗ್ಗ ಥಳಿತ..!

    ಕೋಲ್ಕತ್ತಾ: ಯುವಕನೊಬ್ಬನಿಗೆ ಐಎಎಸ್ ಅಧಿಕಾರಿಯೊಬ್ಬರು ಇತರ ಪೊಲೀಸರ ಎದುರೇ ಮನಬಂದಂತೆ ಥಳಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಇದೀಗ ಅಧಿಕಾರಿಯನ್ನು ರಜೆಯ ಮೇಲೆ ಕಳುಹಿಸಲಾಗಿದೆ.

    ನಿಖಿಲ್ ನಿರ್ಮಲ್, ಪಶ್ಚಿಮ ಬಂಗಾಳದ ಐಎಎಸ್ ಅಧಿಕಾರಿಯಾಗಿದ್ದಾರೆ. ಸದ್ಯ ಇವರನ್ನು ಜನವರಿ 16ರ ವರೆಗೆ ಸರ್ಕಾರಿ ರಜೆಯ ಮೇಲೆ ಕಳುಹಿಸಲಾಗಿದೆ. ಹೀಗಾಗಿ ನಿಖಿಲ್ ಜಾಗಕ್ಕೆ ಚಿರಂಜಿಬ್ ಘೋಷ್ ಎಂಬವರನ್ನು ನೇಮಿಸಲಾಗಿದೆ. ಥಳಿತಕ್ಕೊಳಗಾದ ಯುವಕನನ್ನು ವಿನೋದ್ ಸರ್ಕಾರ್ ಎಂದು ಗುರುತಿಸಲಾಗಿದೆ.

    ವೈರಲ್ ಆದ ವಿಡಿಯೋದಲ್ಲೇನಿದೆ..?
    ನಿರ್ಮಲ್ ಹಾಗೂ ಅವರ ಪತ್ನಿ ಸ್ಥಳೀಯ ಯುವಕನೊಬ್ಬನಿಗೆ ಫಲಕಟ ಪೊಲೀಸ್ ಠಾಣೆಯ ಒಳಗಡೆ ಚೆನ್ನಾಗಿ ಥಳಿಸಿದ್ದಾರೆ. ಇದೇ ವೇಳೆ ಇನ್ಸ್ ಪೆಕ್ಟರ್ ಸೌಮ್ಯಜಿತ್ ರೇ ಕೂಡ ಅಲ್ಲೇ ಇದ್ದರು.

    ಥಳಿಸಿದ್ದು ಯಾಕೆ..?
    ಯುವಕನೊಬ್ಬ ನಿರ್ಮಲ್ ಪತ್ನಿಯ ಫೇಸ್ ಬುಕ್ ಪ್ರೊಫೈಲ್ ಫೋಟೋಗೆ ಅಶ್ಲೀಲ ಕಮೆಂಟ್ ಮಾಡಿದ್ದಾನೆ. ಕೂಡಲೇ ಆ ಯುವಕನ್ನು ಗುರುತಿಸಿ ಠಾಣೆಗೆ ಬರುವಂತೆ ಸೂಚಿಸಲಾಯಿತು. ಹೀಗೆ ಬಂದ ಯುವಕನಿಗೆ, ಹಿರಿಯ ಇನ್ಸ್ ಪೆಕ್ಟರ್ ಎದುರೇ ಐಎಎಸ್ ಅಧಿಕಾರಿ ಹಾಗೂ ಪತ್ನಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

    ಅಚ್ಚರಿಯ ವಿಚಾರವೆಂದರೆ, ನನ್ನ ಜಿಲ್ಲೆಯಲ್ಲಿ ನನ್ನ ವಿರುದ್ಧ ಯಾವುದೇ ಕೆಲಸವನ್ನು ಮಾಡಲು ನಾನು ಬಿಡಲ್ಲ. ನಿನ್ನ ಮನೆಗೆ ಬಂದು ನಿನ್ನನ್ನು ಕೊಲ್ಲುತ್ತೇನೆ ಎಂದು ಯುವಕನಿಗೆ ಬೆದರಿಕೆ ಹಾಕುತ್ತಲೇ ಪತಿ, ಪತ್ನಿ ಇಬ್ಬರೂ ಮನಬಂದಂತೆ ಥಳಿಸಿದ್ದಾರೆ. ಇದೇ ವೇಳೆ ಪತ್ನಿ ಕೂಡ, ನಿನ್ನ ಇಂತಹ ನೀಚ ಕಮೆಂಟ್ ಮಾಡುವ ಹಿಂದೆ ಯಾರಿದ್ದಾರೆ ಹೇಳು ಎಂದು ಪ್ರಶ್ನಿಸಿ ಗದರಿಸಿದ್ದಾರೆ.

    ಪತಿ ಹಾಗೂ ಪತ್ನಿಯ ಥಳಿತದಿಂದ ಬೇಸತ್ತ ಯುವಕ ಹೊಡೆಯದಂತೆ ಪರಿಪರಿಯಾಗಿ ಬೇಡಿಕೊಂಡಿದ್ದಾನೆ. ಮಾತ್ರವಲ್ಲದೇ ಅಧಿಕಾರಿಯ ಕಾಲಿಗೆ ಬಿದ್ದು, ತಪ್ಪಾಯ್ತು ಅಂತ ಕ್ಷಮೆ ಕೇಳಿದ್ದಾನೆ. ಆದ್ರೂ ಬಿಡದೇ ಅಧಿಕಾರಿ ಥಳಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

    ಪ್ರಕರಣ ಸಂಬಂಧ ಅಧಿಕಾರಿಯಾಗಲಿ ಆಥವಾ ಅವರ ಪತ್ನಿಯಾಗಲಿ ಯಾವುದೇ ದೂರುಗಳನ್ನು ದಾಖಲಿಸಿಲ್ಲ. ದೂರು ದಾಖಲಿಸದೆಯೇ ಯುವಕನನ್ನು ಠಾಣೆಗೆ ಕರೆಸಿ ಥಳಿಸಲಾಗಿದೆ ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮದ್ವೆ ವಾರ್ಷಿಕೋತ್ಸವದಂದು ಸುಮಲತಾ ಅಂಬರೀಶ್ ಭಾವನಾತ್ಮಕ ಪೋಸ್ಟ್

    ಮದ್ವೆ ವಾರ್ಷಿಕೋತ್ಸವದಂದು ಸುಮಲತಾ ಅಂಬರೀಶ್ ಭಾವನಾತ್ಮಕ ಪೋಸ್ಟ್

    ಬೆಂಗಳೂರು: ಇಂದು ದಿವಂಗತ ಹಿರಿಯ ನಟ ಅಂಬರೀಶ್ ಮತ್ತು ಸುಮಲತಾ ಅವರ 27ನೇ ಮದುವೆ ವಾರ್ಷಿಕೋತ್ಸವವಾಗಿದ್ದು, ಸುಮಲತಾ ಅವರು ತಮ್ಮ ಫೇಸ್ ಬುಕ್ ನಲ್ಲಿ ಅಂಬಿ ಪ್ರೀತಿಯ ಬಗ್ಗೆ ಭಾವನಾತ್ಮಕವಾಗಿ ಪೋಸ್ಟ್ ಮಾಡಿದ್ದಾರೆ.

    ”ಇಂದು ಮೊದಲ ಬಾರಿಗೆ ನೀವು ನನ್ನೊಂದಿಗಿಲ್ಲ. 27 ವರ್ಷಗಳ ಕಾಲ ನಿಮ್ಮಂತ ಸಿಂಹ ಹೃದಯದ ಜೊತೆ ನನ್ನ ಜೀವನವನ್ನು ಹಂಚಿಕೊಂಡಿದ್ದಕ್ಕೆ ನಾನು ನಿಜಕ್ಕೂ ಹೆಮ್ಮೆ ಪಡುತ್ತೇನೆ. ನೀವೇ ನನಗೆ ಸ್ಪೂರ್ತಿ, ಕೋಟಿಗಳಲ್ಲಿ ನೀವು ಒಬ್ಬರು” ಎಂದು ಬರೆದುಕೊಂಡಿದ್ದು ನಿಜಕ್ಕೂ ಕಣ್ಣೀರು ತರಿಸುವಂತಿದೆ.

    ಪೋಸ್ಟ್ ನಲ್ಲೇನಿದೆ?:
    ನನ್ನ ಪ್ರೀತಿಯ ಎ..
    ಡಿಸೆಂಬರ್ 8. 27 ವರ್ಷಗಳ ನಮ್ಮ ವೈವಾಹಿಕ ಜೀವನ ಪಯಣದಲ್ಲಿ ಮೊದಲ ಬಾರಿಗೆ ನೀವು ನನ್ನೊಂದಿಗಿಲ್ಲ. ನಮ್ಮ ದಿನದಲ್ಲಿ. ನನ್ನ ಜಗತ್ತಿಗೆ ಮಾತ್ರ ನೀನು ಪ್ರಮುಖನಾಗಿರಲಿಲ್ಲ. ನೀವೇ ನನ್ನ ಜಗತ್ತಾಗಿದ್ರಿ. ನನ್ನ ಕೈ ಹಿಡಿದು ನಡೆಸಿದ್ದೀರಾ. ನಿಮ್ಮ ಹೃದಯದಲ್ಲಿ ಅದ್ಭುತ ಪ್ರೀತಿ ಇತ್ತು. ಅದು ನನ್ನೊಬ್ಬಳಿಗೆ ಮಾತ್ರವಲ್ಲ. ಲಕ್ಷಗಟ್ಟಲೆ ಜನರಿಗೆ ಆ ಪ್ರೀತಿ ಸಿಕ್ಕಿತ್ತು. ಅದೇ ಪ್ರೀತಿ ನನ್ನಲ್ಲೇ ತುಂಬಿಕೊಂಡಿತ್ತು. ಆ ಪ್ರೀತಿಯೇ ನನ್ನ ಬದುಕನ್ನು ಕೈ ಹಿಡಿದು ನಡೆಸಿದೆ. 27 ವರ್ಷಾನಾ? ನನ್ನ ಬದುಕು ಅಂತಾ ಆರಂಭವಾಗಿದ್ದೇ, ನೀನು ನನ್ನನ್ನು ಪ್ರೀತಿಸಿದ ಮೇಲೆ. ನಿಮ್ಮ ನಗು ನನ್ನನ್ನು ಅದೇ ಸಂತೋಷದಲ್ಲಿ ಮುಂದುವರಿಸಿದೆ. ಜಗತ್ತಿನ ಯಾವುದೇ ವಸ್ತು, ಯಾರೇ ಆಗಲಿ, ನಿನಗೆ ನನ್ನ ಮೇಲೆ ಇದ್ದ ಪ್ರೀತಿಯನ್ನು ಮುಚ್ಚಿಡಲು ಸಾಧ್ಯವಿಲ್ಲ. ಆ ನಿನ್ನ ಪ್ರೀತಿ ನನ್ನನ್ನು, ನನ್ನ ಬದುಕನ್ನು ಸುರಕ್ಷಿತವಾಗಿರುವಂತೆ ಮಾಡಿದೆ.

    ಎಲ್ಲದರಿಂದ ನನ್ನನ್ನು ಕಾಪಾಡಿದೆ. ಯಾವ ರೀತಿ ಅಂದ್ರೆ. ತುಂಬಾ ಚಳಿ ಇದ್ದಾಗ. ಬೆಚ್ಚಗಿನ ಬ್ಲಾಂಕೆಟ್ ಹೊಂದುಕೊಂಡ ರೀತಿ. ಮಳೆಯಲ್ಲಿ ಬಿಸಿಲಲ್ಲಿ ಕಾಪಾಡುವ ದೊಡ್ಡ ಕೊಡೆಯಂತೆ ನನ್ನನ್ನು ಕಾಪಾಡಿದ್ದೀಯಾ. ಈ ಕ್ಷಣ ನೀನು ಎಲ್ಲಾದ್ರೂ ಇರು.. ಆದ್ರೆ ನನಗೆ ಗೊತ್ತು.. ನೀನು ನನ್ನನ್ನೇ ಹುಡುಕ್ತಿರ್ತೀಯಾ.. ಈಗಲೂ ನಿನಗೆ ನಮ್ಮ ಮಗನ ಬಗ್ಗೆ ಆತಂಕ ಇದೆ.. ಈಗಲೂ, ಇನ್ನು ಮುಂದೆಯೂ ನೀನು ನಮ್ಮನ್ನು ರಕ್ಷಿಸುತ್ತೀಯಾ.. ನನ್ನ ಸುತ್ತಲಿರುವ ಹಲವಾರು ಕಣ್ಣುಗಳಲ್ಲಿ ಈಗಲೂ ಕೂಡ ಆ ನಿನ್ನ ಪ್ರೀತಿಯ ಪ್ರತಿಬಿಂಬವನ್ನು ಕಾಣುತ್ತೇನೆ.. ಅದು ನನ್ನ ಮತ್ತು ಅಭಿಯನ್ನು ಆ ಕಣ್ಣುಗಳು ಹರಸುತ್ತಿರುತ್ತವೆ..

    ಇನ್ಮುಂದೆ ಒಡೆದ ನನ್ನ ಹೃದಯ ಕಟ್ಟಿಕೊಳ್ಳಲು, ಸಂತೈಸಲು ಜೊತೆಗೆ ಮುಂದಿನ ದಾರಿಯಲ್ಲಿ ನಡೆಯಲು ನಿನ್ನ ಶಕ್ತಿ ಬೇಕು.. ನಿನ್ನಿಂದ ಆ ಶಕ್ತಿ ಬೇಕು.. ನೀನು ಕಟ್ಟಿದ ಆ ಸುಂದರ ಬದುಕು.. ನಿನ್ನ ಆದರ್ಶಗಳನ್ನು ಹಾಗೆ ಕೊನೆವರೆಗೂ ಉಳಿಸಿಕೊಳ್ಳಲು ನಿನ್ನ ಆಶೀರ್ವಾದ ಬೇಕು.. ನಾನು ಬದುಕಿರಲು ನಿನ್ನ ಪ್ರೀತಿ ನನಗೆ ಬೇಕೇ ಬೇಕು.. ನಾನು ಇನ್ಮುಂದೆ ಮುಂದೆ ಸಾಗಲು ಹೆಮ್ಮೆಯಿಂದ ಬದುಕಲು ನಿನ್ನ ಸ್ಪೂರ್ತಿಯಿಂದ ಮುನ್ನಡೆಯುತ್ತೇನೆ.. ನಿನ್ನ ಜೊತೆ ಹಂಚಿಕೊಂಡಿರುವ ಆ 27 ವರ್ಷಗಳಲ್ಲಿ ಸಿಂಹದ ಹೃದಯ.. ಅತ್ಯಧ್ಬುತ ಮಾನವೀಯ ಗುಣಗಳನ್ನು ಹೊಂದಿದ್ದ ಕೋಟಿಗೊಬ್ಬ ನೀನು..

    ಎಂದೆಂದಿಗೂ ನನ್ನಜೊತೆಗಿರು..
    ನಮ್ಮ ಬದುಕಲ್ಲಿ ನೀನು ಎಂದೆಂದಿಗೂ ಹೊಳೆಯುತ್ತಿರು..
    ಮದುವೆ ವಾರ್ಷಿಕೋತ್ಸವದ ಶುಭಾಶಯಗಳು..

    ಈ ಪತ್ರ ಓದಿದ್ರೆ ಎಂತವರಿಗೂ ಕಣ್ಣೀರು ಬರುತ್ತೆ. ರೆಬೆಲ್-ಸುಮಕ್ಕನ ಸುಮಧುರ ಪ್ರೀತಿಗೆ ಸೆಲ್ಯೂಟ್ ಹೊಡಿಬೇಕು ಅನ್ಸುತ್ತೆ.

    ಪ್ರೊಫೈಲ್ ಚೇಂಚ್:
    ಅಂಬರೀಶ್ ನಿಧನದ ನಂತರ ಅವರ ಅಂತಿಮ ವಿಧಿವಿಧಾನ ನಡೆಯುವ ವೇಳೆ ಇರಿಸಿದ್ದ ಫೋಟೋವನ್ನು ಸುಮಲತಾ ತಮ್ಮ ಫೇಸ್ ಬುಕ್ ಪ್ರೊಫೈಲ್ ಫೋಟೋವಾಗಿ ಬದಲಾಯಿಸಿದ್ದರು. ಅಲ್ಲದೇ ಕವರ್ ಫೋಟೋ ಆಗಿ ಮಲೇಷಿಯಾದಲ್ಲಿ ನಡೆದ 25ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂದರ್ಭದಲ್ಲಿ ತೆಗೆಸಿದ್ದ ಫೋಟೋವನ್ನು ಹಾಕಿದ್ದರು. ಇದೀಗ ಮತ್ತೆ ಅವರು ತಮ್ಮ ಪ್ರೊಫೈಲ್ ಫೋಟೋ ಚೇಂಜ್ ಮಾಡಿದ್ದು, ಮಲೇಷಿಯಾದಲ್ಲಿ ತೆಗೆದ ಫೋಟೋವನ್ನೇ ಎಡಿಟ್ ಮಾಡಿ ಅಪ್ ಡೇಟ್ ಮಾಡಿದ್ದಾರೆ.

    ಫೋಟೋ ಜೊತೆ ತಾವು ಅಂಬರೀಶ್ ಜೊತೆ ಅಭಿನಯಿಸಿದ್ದ ಸಿನಿಮಾ ಹಾಡುಗಳನ್ನು ಪೋಸ್ಟ್ ಮಾಡಿ ಶೇರ್ ಮಾಡಿದ್ದಾರೆ. ‘ಹಾಂಗ್‍ಕಾಂಗ್‍ನಲ್ಲಿ ಏಜೆಂಟ್ ಅಮರ್’ ಸಿನಿಮಾ ‘ಹೆಲೋ ನನ್ನ ಪ್ರೇಯಸಿ’ ಎಂಬ ಹಾಡನ್ನು ಪೋಸ್ಟ್ ಮಾಡಿ ನನ್ನ ಫೇವರೆಟ್ ಎಂದು ಬರೆದುಕೊಂಡಿದ್ದಾರೆ. ಅದೇ ರೀತಿ ಅಂಬರೀಶ್ ಜೊತೆ ಅಭಿನಯಿಸಿದ್ದ ‘ತಾಯಿಗೊಬ್ಬ ಕರ್ಣ’ ಸಿನಿಮಾದ ‘ಅಂದ ಚಂದ ತಂದ ಕಲ್ಪನಾ’ ಹಾಡನ್ನು ಪೋಸ್ಟ್ ಮಾಡಿ’ ಇದು ನಮ್ಮ ಫೇವ್‍ರೆಟ್ ಸಾಂಗ್ ಎಂದು ಬರೆದುಕೊಂಡಿದ್ದಾರೆ. ಅದೇ ರೀತಿ ಬೇರೆ ಬೇರೆ ಸಿನಿಮಾದ ಹಾಡುಗಳನ್ನು ಪೋಸ್ಟ್ ಮಾಡಿಕೊಂಡಿದ್ದಾರೆ.

    1984 ರಲ್ಲಿ ಬಂದ ಕನ್ನಡ `ಆಹುತಿ’ ಸಿನಿಮಾದಲ್ಲಿ ಅಂಬರೀಶ್ ಹಾಗೂ ಸುಮಲತಾ ಅವರು ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಂಡಿದ್ದರು. ಬಳಿಕ ಸುಮಾರು ಆರೇಳು ಸಿನಿಮಾಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದ ಈ ಜೋಡಿಯ ಸ್ನೇಹ ಪ್ರೀತಿಗೆ ತಿರುಗಿ 1991 ರ ಡಿಸೆಂಬರ್ 8 ರಂದು ಮದುವೆಯಾಗಿದ್ದರು. 27 ವರ್ಷ ಸಂತಸದ ಸಂಸಾರ ನಡೆಸಿದ್ದ ಈ ಜೋಡಿ ತಮ್ಮ 25ನೇ ವಿವಾಹ ವಾರ್ಷಿಕೋತ್ಸವವನ್ನು ಮಲೇಷಿಯಾದಲ್ಲಿ ಆಚರಣೆ ಮಾಡಿ ಸಂಭ್ರಮಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv