Tag: property disputes

  • ಆಸ್ತಿ ಮಾರಿದ ಹಣಕ್ಕಾಗಿ ಮಲಗಿದ್ದ ಮಗನನ್ನೇ ಹತ್ಯೆಗೈದ ಪಾಪಿ ತಂದೆ

    ಆಸ್ತಿ ಮಾರಿದ ಹಣಕ್ಕಾಗಿ ಮಲಗಿದ್ದ ಮಗನನ್ನೇ ಹತ್ಯೆಗೈದ ಪಾಪಿ ತಂದೆ

    ರಾಮನಗರ: ಜಮೀನು ಮಾರಿದ ಹಣದ ವಿಚಾರಕ್ಕೆ ತಂದೆಯೇ ಮಗನನ್ನು ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದ ಘಟನೆ ತಾಲೂಕಿನ ಲಕ್ಕೋಜನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಕೊಲೆಯಾದ ವ್ಯಕ್ತಿಯನ್ನು ಭಾಸ್ಕರ್ (31) ಎಂದು ಗರುತಿಸಲಾಗಿದೆ. ಕೊಲೆಯಾದವನ ತಂದೆ ಕೃಷ್ಣಪ್ಪ (60) ಹತ್ಯೆಗೈದ ಆರೋಪಿಯಾಗಿದ್ದಾನೆ. ಆರೋಪಿ ಹಾಗೂ ಆತನ ಮಗ ಜಮೀನು ಮಾರಿದ ಹಣದ ವಿಚಾರಕ್ಕೆ ಆಗಾಗ ಗಲಾಟೆ ಮಾಡಿಕೊಳ್ಳುತ್ತಿದ್ದರು. ಅದೇ ರೀತಿ ಶುಕ್ರವಾರ ರಾತ್ರಿ ಕೂಡ ಗಲಾಟೆ ಮಾಡಿಕೊಂಡಿದ್ದಾರೆ. ಇದೇ ಕಾರಣಕ್ಕೆ ಮಗ ಮಲಗಿದ್ದಾಗ ಆರೋಪಿ ಮಚ್ಚಿನಿಂದ ತಲೆಯ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

    ಸ್ಥಳಕ್ಕೆ ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

    ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

  • ಆಸ್ತಿ ಪತ್ರಕ್ಕೆ ಸಹಿ ಹಾಕದ್ದಕ್ಕೆ ತಮ್ಮನಿಂದ ಅಕ್ಕನ ಕೊಲೆ

    ಆಸ್ತಿ ಪತ್ರಕ್ಕೆ ಸಹಿ ಹಾಕದ್ದಕ್ಕೆ ತಮ್ಮನಿಂದ ಅಕ್ಕನ ಕೊಲೆ

    ದಾವಣಗೆರೆ: ಆಸ್ತಿ ವಿಚಾರವಾಗಿ ತಮ್ಮನೇ ತನ್ನ ಸ್ವಂತ ಅಕ್ಕನನ್ನು ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಬೊಮ್ಮನಹಳ್ಳಿ ತಾಂಡಾದಲ್ಲಿ ನಡೆದಿದೆ.

    ಶಾಂತಾಬಾಯಿ (50) ಸಹೋದರನಿಂದ ಕೊಲೆಯಾದ ದುರ್ದೈವಿ. ಗಣೇಶ್ ನಾಯಕ್ ಎಂಬಾತನೇ ತನ್ನ ಅಕ್ಕಳಾದ ಶಾಂತಾಬಾಯಿ ಎಂಬವರನ್ನು ಎರಡು ಎಕರೆ ಜಮೀನು ವಿಚಾರವಾಗಿ ಕೊಲೆ ಮಾಡಿದ್ದಾನೆ.

    ಏನಿದು ಪ್ರಕರಣ?: ಗಣೇಶ್ ಮೂರು ದಿನಗಳ ಹಿಂದೆ ಅದೇ ಗ್ರಾಮದಲ್ಲಿರುವ ತನ್ನ ಅಕ್ಕ ಶಾಂತಾಬಾಯಿ ಅವರ ಮನೆಗೆ ಕುಡಿದು ಹೋಗಿದ್ದಾನೆ. ತಾನು ತಂದೆಯಿಂದ ಬಂದ ಎರಡು ಎಕರೆ ಜಮೀನು ಮಾರುತ್ತಿದ್ದು, ಕಾಗದಕ್ಕೆ ಸಹಿ ಹಾಕುವಂತೆ ಪೀಡಿಸಿದ್ದಾನೆ. ಆದರೆ ಶಾಂತಾಬಾಯಿ ನಿನ್ನ ಹೆಂಡತಿ ಬಂದು ಹೇಳಿದರೆ ಮಾತ್ರ ಸಹಿ ಹಾಕುವುದಾಗಿ ತಿಳಿಸಿದ್ದಾರೆ. ಇದರಿಂದ ಕುಪಿತನಾದ ಗಣೇಶ್ ಕಬ್ಬಿಣದ ರಾಡ್‍ನಿಂದ ಅಕ್ಕನ ತಲೆಗೆ ಹೊಡೆದಿದ್ದಾನೆ.

    ತಲೆಗೆ ಗಂಭೀರವಾಗಿ ಗಾಯಗೊಂಡ ಶಾಂತಾಬಾಯಿರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಶಾಂತಾಬಾಯಿ ಮೃತಪಟ್ಟಿದ್ದಾರೆ. ಈ ಸಂಬಂಧ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಗಣೇಶ್ ನಾಯಕ್‍ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.