Tag: Property tax

  • ತೆರಿಗೆ ಸಂಗ್ರಹಕ್ಕೆ ವರ್ಕೌಟ್ ಆದ ಪಾಲಿಕೆ ಪ್ಲಾನ್- 2 ಕೋಟಿಗೂ ಅಧಿಕ ಆಸ್ತಿ ತೆರಿಗೆ ಸಂಗ್ರಹ

    ತೆರಿಗೆ ಸಂಗ್ರಹಕ್ಕೆ ವರ್ಕೌಟ್ ಆದ ಪಾಲಿಕೆ ಪ್ಲಾನ್- 2 ಕೋಟಿಗೂ ಅಧಿಕ ಆಸ್ತಿ ತೆರಿಗೆ ಸಂಗ್ರಹ

    ಹುಬ್ಬಳ್ಳಿ: ಮಹಾಮಾರಿ ಕೊರೊನಾ ವೈರಸ್ ಬಂದ ನಂತರ ವಿಶ್ವದ ಆರ್ಥಿಕ ಪರಿಸ್ಥಿತಿಯೇ ಪಾತಾಳಕ್ಕೋಗಿದೆ. ಭಾರತದಲ್ಲೂ ಆರ್ಥಿಕ ಪರಿಸ್ಥಿತಿ ಕೂಡ ಚೆನ್ನಾಗಿಲ್ಲ. ಇತ್ತ ರಾಜ್ಯ ಸರ್ಕಾರದ ಬೊಕ್ಕಸ ಬರಿದಾಗುತ್ತಾ ಬರುತ್ತಿದೆ. ಆದರೆ ಲಾಕ್‍ಡೌನ್ ನಡುವೆಯೂ ಅವಳಿ ನಗರದ ಮಹಾನಗರ ಪಾಲಿಕೆಯ ಖಜಾನೆಗೆ ಕೋಟಿ ಕೋಟಿ ಹಣ ಹರಿದು ಬಂದಿದೆ.

    ಮೊದಲೇ ಆರ್ಥಿಕ ಸಂಕಷ್ಟದಲ್ಲಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಕೊರೊನಾ ಲಾಕ್‍ಡೌನ್ ಬರಸಿಡಿಲು ಬಡಿದಂತಾಗಿತ್ತು. ಹೀಗಾಗಿ ಆರ್ಥಿಕ ಪುನಶ್ಚೇತನಕ್ಕೆ ಮಹಾನಗರ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ ಮಾಡಿದ ಐಡಿಯಾ ವರ್ಕೌಟ್ ಆಗಿದೆ.

    ಜನ ಕಚೇರಿಗೆ ಬಾರದೇ ಆನ್‍‍ಲೈನ್‍‍ನಲ್ಲಿ ತೆರಿಗೆ ಪಾವತಿಸುವಂತೆ ಪಾಲಿಕೆಯ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದರು. ಪಾಲಿಕೆ ಅಧಿಕಾರಿಗಳ ಮನವಿಗೆ ಸ್ಪಂದಿಸಿದ ಜನತೆ ಆಸ್ತಿ ತೆರಿಗೆಯನ್ನ ಆನ್‍ಲೈನ್ ಮೂಲಕ ಪಾವತಿಸಿದ್ದಾರೆ. ಪರಿಣಾಮ ಮಹಾನಗರ ಪಾಲಿಕೆ ಲಾಕ್‍ಡೌನ್ ಸಂದರ್ಭದಲ್ಲೂ ಬರೋಬ್ಬರಿ 2 ಕೋಟಿಗೂ ಹೆಚ್ಚು ಆಸ್ತಿ ತೆರಿಗೆ ಸಂಗ್ರಹಿಸಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ ತಿಳಿಸಿದ್ದಾರೆ.

    ಪಾಲಿಕೆ ಅಧಿಕಾರಿಗಳು ಸಾಮಾಜಿಕ ಜಾಲತಾಣ ಬಳಸಿಕೊಂಡು ಆಸ್ತಿ ತೆರಿಗೆ ಕಟ್ಟುವಂತೆ ಜನಜಾಗೃತಿ ಮೂಡಿಸಿದರು. ಮೇ ತಿಂಗಳೊಳಗೆ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ರಿಯಾಯಿತಿಯನ್ನು ಘೋಷಿಸಲಾಗಿದೆ. ಅಷ್ಟೇ ಅಲ್ಲದೇ ಆಸ್ತಿ ತೆರಿಗೆ ದರ ಹೆಚ್ಚಿಸದೇ ಹಳೆ ದರದಲ್ಲೇ ತೆರಿಗೆ ಕಟ್ಟಿಸಿಕೊಂಡಿದ್ದಾರೆ. ಪರಿಣಾಮ ಪಾಲಿಕೆಯ ಬೊಕ್ಕಸಕ್ಕೆ ಹಣ ಹರಿದುಬಂದಿದೆ ಎಂದು ಸ್ಥಳೀಯ ನಿವಾಸಿ ನಾಗರಾಜ್ ಹೇಳಿದರು.

    ಲಾಕ್‍ಡೌನ್ ನಡುವೆ ಆಸ್ತಿ ತೆರಿಗೆ ಸಂಗ್ರಹ ಮಾಡುವುದು ಸವಾಲಿನ ಕೆಲಸವಾಗಿದೆ. ಆದರೆ ಈ ಸವಾಲನ್ನ ಸಾಮಾಜಿಕ ಜಾಲತಾಣಗಳ ಸದ್ಬಳಕೆಯಿಂದ ಕೋಟ್ಯಂತರ ರೂಪಾಯಿ ಆಸ್ತಿ ತೆರಿಗೆ ಸಂಗ್ರಹಿಸುವಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಅಲ್ಲದೇ ಪಾಲಿಕೆ ಅಧಿಕಾರಿಗಳು ತೆರಿಗೆ ಸಂಗ್ರಹಣೆ ಮಾಡುವಲ್ಲಿ ಯಶ್ವಸಿಯಾಗಿರುವುದು ನಿಜಕ್ಕೂ ಪ್ರಶಂಸನೀಯವಾಗಿದೆ.

  • ಬೆಂಗ್ಳೂರಿಗರಿಗೆ ಶೀಘ್ರದಲ್ಲೇ ಡಬಲ್ ಬೆಲೆಯೇರಿಕೆ ಬರೆ

    ಬೆಂಗ್ಳೂರಿಗರಿಗೆ ಶೀಘ್ರದಲ್ಲೇ ಡಬಲ್ ಬೆಲೆಯೇರಿಕೆ ಬರೆ

    ಬೆಂಗಳೂರು: ರಾಜ್ಯ ಹಾಗೂ ಸಿಲಿಕಾನ್ ಸಿಟಿ ಬೆಂಗಳೂರಿನ ಜನರಿಗೆ ಬೆಲೆ ಏರಿಕೆ ಬಿಸಿ ಶೀಘ್ರವೇ ತಟ್ಟಲಿದೆ. ಬಸ್ ಟಿಕೆಟ್ ದರ ಏರಿಕೆ ಹಾಗೂ ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಏರಿಕೆಯ ಚಿಂತನೆ ಜೋರಾಗಿಯೇ ನಡೆಯುತ್ತಿದೆ.

    ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಬೆಲೆಯೇರಿಕೆಯ ಬಿಸಿ ತಡೆದುಕೊಳ್ಳುವ ಮುನ್ನವೇ ಪಾಲಿಕೆಯು ಬೆಂಗಳೂರು ವ್ಯಾಪ್ತಿಯ ಆಸ್ತಿಗಳ ತೆರಿಗೆ ಹೆಚ್ಚಳ ಮಾಡಲು ಚಿಂತನೆ ನಡೆಸಿದೆ. ಕಳೆದ 3 ವರ್ಷಗಳಿಂದ ಪಾಲಿಕೆಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆ ಆಗಿರಲಿಲ್ಲ. ಕೆಎಂಸಿ ನಿಯಮದ ಪ್ರಕಾರ ಶೇ.20 ರಿಂದ 25 ರಷ್ಟು ಆಸ್ತಿ ತೆರಿಗೆ ಹೆಚ್ಚಳದ ಅಗತ್ಯವಿದೆ ಎಂದು ಅಧಿಕಾರಿಗಳು ಪಾಲಿಕೆ ಕೌನ್ಸಿಲ್ ಮುಂದೆ ಪ್ರಸ್ತಾವನೆ ಇಟ್ಟಿದ್ದಾರೆ.

    ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮೇಯರ್ ಗಂಗಾಬಿಕೆ ಅವರು, ಪಕ್ಷಾತೀತವಾಗಿ ಒಪ್ಪಿದರೆ ಮಾತ್ರ ಆಸ್ತಿ ತೆರಿಗೆ ಪರಿಷ್ಕರಣೆ ಬಗ್ಗೆ ಆಲೋಚನೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

    ಸಾರಿಗೆ ಇಲಾಖೆ ನಷ್ಟದಲ್ಲಿ ಎಂಬ ಕಾರಣಕ್ಕೆ ಶೇ.18ರಷ್ಟು ಟಿಕೆಟ್ ದರ ಏರಿಕೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ತಲುಪಿದೆ. ಈ ಸತ್ಯವನ್ನು ಖುದ್ದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ಬಿಚ್ಚಿಟ್ಟಿದ್ದಾರೆ.

    ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಸಚಿವರು, ಮೂಲಭೂತ ಸೌಕರ್ಯ ಹಾಗೂ ತೈಲ ರಿಯಾಯಿತಿ ಕೊಟ್ಟರೆ ಸಂಸ್ಥೆ ನಡೆಸಬಹುದು. ಇಲ್ಲದಿದ್ದರೆ ಕನಿಷ್ಠ ಸರ್ಕಾರ ಅನುದಾನವನ್ನಾದರೂ ನೀಡಲೇ ಬೇಕು. ಇದು ಯಾವುದು ಆಗದಿದ್ದರೆ ಇದೇ ತಿಂಗಳು 12ರಂದು ನಡೆಯುವ ಸಭೆಯಲ್ಲಿ ಬಸ್ ಪ್ರಯಾಣ ದರ ಶೇ.18 ರಷ್ಟು ಏರಿಕೆ ಮಾಡಲಾಗುವುದು ಎಂದು ತಿಳಿಸಿದ್ದರು.