ಭುನನೇಶ್ವರ: ತನ್ನ ಹೆಸರಿಗೆ ಆಸ್ತಿ ಬರೆದುಕೊಟ್ಟಿಲ್ಲವೆಂದು ಸಿಟ್ಟಿಗೆದ್ದ ಪಾಪಿ ಮಗ ಹೆತ್ತವರನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಒಡಿಶಾದಲ್ಲಿ ನಡೆದಿದೆ.
ಈ ಘಟನೆ ಕೊರಾಪುಟ್ ಜಿಲ್ಲೆಯ ಜಯನಗರ ಪ್ರದೇಶದಲ್ಲಿ ಮಾರ್ಚ್ 9ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧಿಸಿದಂತೆ ಆರೋಪಿ ಮಗನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
ಲತಿಫ್ ರೆಹಮಾನ್ ಕೃತ್ಯ ಎಸಗಿ ಬಂಧಿತನಾಗಿರುವ ಪಾಪಿ ಮಗ. ಮಗನಿಂದಲೇ ಹತನಾದ ದುರ್ದೈವಿ ತಂದೆಯನ್ನು ಎಂ.ಕೆ ರೆಹಮಾನ್ ಹಾಗೂ ತಾಯಿಯನ್ನು ಫಕಿಝಾ ಬಿಬಿ ಎಂದು ಗುರುತಿಸಲಾಗಿದೆ.
ಹೆತ್ತವರು ತಮ್ಮ ಆಸ್ತಿಯನ್ನು ಮಗನಿಗೆ ಬರೆದು ಕೊಡಲು ನಿರಾಕರಿಸುತ್ತಿದ್ದರು. ಹಲವು ಬಾರಿ ಮಗ ತನ್ನ ಹೆಸರಿಗೆ ಬರೆದುಕೊಡುವಂತೆ ಅಪ್ಪನಲ್ಲಿ ಹೇಳಿದ್ದನು. ಆದ್ರೆ ಪ್ರತಿ ಬಾರಿಯೂ ತಂದೆ ಮಗನ ಮಾತನ್ನು ಕ್ಯಾರೇ ಎನ್ನುತ್ತಿರಲಿಲ್ಲ. ಇದರಿಂದ ಸಿಟ್ಟುಗೊಂಡ ಪಾಪಿ ಮಗ ಅಪ್ಪ-ಅಮ್ಮನಿಗೆ ಚೆನ್ನಾಗಿ ಥಳಿಸಿ ಬಳಿಕ ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆದಿದ್ದಾನೆ. ಪರಿಣಾಮ ಇಬ್ಬರೂ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಅಲ್ಲದೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಎಸ್ ಡಿಪಿಒ ಸಾಗರಿಕಾನಾಥ್ ಘಟನೆಯ ಬಗ್ಗೆ ವಿವರಿಸಿದ್ದಾರೆ.
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಟ ನಿಖಿಲ್ ಕುಮಾರಸ್ವಾಮಿ ಸಂಭಾವ್ಯ ಜೆಡಿಎಸ್ ಅಭ್ಯರ್ಥಿಯಾಗಿದ್ದು, ಮಂಡ್ಯದಲ್ಲೇ ಮನೆ ಮಾಡಲು ಯೋಚಿಸಿರುವ ಅವರು, ಜಿಲ್ಲೆಯ ಮರೀಗೌಡ ಬಡಾವನೆಯಲ್ಲಿ ಬಂಗಲೆಯೊಂದನ್ನು ಬಾಡಿಗೆಗೆ ಪಡೆಯಲು ನಿರ್ಧರಿಸಿದ್ದಾರೆ.
ಮಂಡ್ಯ ಕ್ಷೇತ್ರದಿಂದ ನಿಖಿಲ್ ಅವರೇ ಜೆಡಿಎಸ್ನಿಂದ ಚುನಾವಣಾ ಕಣಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ. ಆದರಿಂದ ಜಿಲ್ಲೆಯ ಪ್ರತಿಷ್ಠಿತ ಬಡಾವಣೆಗಳಾದ ಬಂದೀಗೌಡ ಬಡಾವಣೆ, ಚಾಮುಂಡೇಶ್ವರಿ ನಗರ, ಮರೀಗೌಡ ಬಡಾವಣೆ ಹಾಗೂ ಅಶೋಕ ನಗರದಲ್ಲಿ ನಿಖಿಲ್ ಮನೆ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಮರೀಗೌಡ ಬಡಾವಣೆಯಲ್ಲಿ ಪ್ರತಿಷ್ಠಿತ ಬಂಗಲೆಯೊಂದು ಬಾಡಿಗೆಗೆ ಪಡೆಯಲು ನಿಖಿಲ್ ನಿರ್ಧರಿಸಿದ್ದಾರೆ. ಮಂಡ್ಯ ನಗರಸಭೆ ಮಾಜಿ ಉಪಾಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಚಿಕ್ಕಣ್ಣ ಎಂಬುವವರಿಗೆ ಸೇರಿದ ಮನೆಯನ್ನು ಸದ್ಯಕ್ಕೆ ಬಾಡಿಗೆ ಪಡೆಯಲು ನಿಖಿಲ್ ಚಿಂತಿಸಿದ್ದಾರೆ. ಇದನ್ನೂ ಓದಿ:ಅಂಬಿ ಅದೃಷ್ಟದ ಮನೆಗೆ ಶೀಘ್ರವೇ ಸುಮಲತಾ ಶಿಫ್ಟ್!
ನಾಲ್ಕು ಬೆಡ್ ರೂಂ, ವಿಶಾಲವಾದ ದೇವರಮನೆ ಹಾಗೂ ವಾಸ್ತು ಪ್ರಕಾರ ಮನೆ ನಿರ್ಮಾಣವಾಗಿದ್ದು, ನಿಖಿಲ್ ರಾಜಕೀಯ ಚುಟುವಟಿಕೆಗೆ ಅನುಕೂಲವಾಗಲೆಂದು ಮನೆ ಬಾಡಿಗೆ ಪಡೆಯಲು ನಿರ್ಧರಿಸಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಸ್ವಂತ ಮನೆ ಕಟ್ಟಲು ಕೂಡ ನಿಖಿಲ್ ತಯಾರಿ ನಡೆಸುತ್ತಿದ್ದಾರೆ ಎಂಬ ಮಾಹಿತಿ ದೊರಕಿದೆ. ಇದನ್ನೂ ಓದಿ:ಮಂಡ್ಯದಿಂದ ಸ್ಪರ್ಧೆ ಖಚಿತ: ಸುಮಲತಾ ಅಂಬರೀಶ್
ಐದು ಎಕರೆ ಜಮೀನು ಖರೀದಿಸಿ ಅಲ್ಲಿಯೂ ತೋಟ, ಮನೆ ನಿರ್ಮಿಸಲು ಈಗಾಗಲೇ ನಿಖಿಲ್ ಪ್ಲಾನ್ ಮಾಡಿದ್ದಾರೆ. ರಾಜಕೀಯ, ಸಿನಿಮಾ ಜೊತೆಗೆ ಕೃಷಿಯಲ್ಲೂ ತೊಡಗಿಸಿಕೊಳ್ಳಲು ನಿಖಿಲ್ ಚಿಂತನೆ ನಡೆಸಿದ್ದಾರೆ. ಮಂಡ್ಯದಲ್ಲಿ ಸ್ವಂತ ಜಮೀನು, ಮನೆ ಮಾಡದಿದ್ದರೆ ಚುನಾವಣೆ ನಂತರ ನಿಖಿಲ್ ಮಂಡ್ಯಕ್ಕೆ ಬರಲ್ಲ ಎಂಬ ತಪ್ಪು ಸಂದೇಶ ರವಾನೆಯಾಗುತ್ತದೆ. ಇದು ಮತಗಳಿಕೆ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ. ಹೀಗಾಗಿ ಸ್ವಂತ ಕೃಷಿ ಜಮೀನು, ಮನೆ ನಿರ್ಮಿಸಿ ಮಂಡ್ಯ ಜನರನ್ನು ಭಾವನಾತ್ಮಕವಾಗಿ ಸೆಳೆಯಲು ನಿಖಿಲ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.
ನಿಖಿಲ್ಗೆ ಎದುರಾಳಿಯಾಗಿ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡೋದು ಬಹುತೇಕ ಖಚಿತವಾಗಿದ್ದು, ಈಗಾಗಲೇ ಸುಮಲತಾ ಅವರು ಕೂಡ ಮಂಡ್ಯದ ಮಂಜುನಾಥ ನಗರದಲ್ಲಿರುವ ಸೈಟ್ನಲ್ಲಿ ಸ್ವಂತ ಮನೆ ಕಟ್ಟುವುದಾಗಿ ತಿಳಿಸಿದ್ದಾರೆ. ಇದರಿಂದ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ದಿನದಿಂದ ದಿನಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರ ರಂಗೇರುತ್ತಿದೆ.
ಮಂಡ್ಯ: ನನ್ನ ಬಳಿ ಕೋಟೆಯೂ ಇಲ್ಲ ಕೋಟಿಯೂ ಇಲ್ಲ. ಆದರೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ನನ್ನ ಸ್ಪರ್ಧೆ ಖಚಿತ ಎಂದು ಸುಮಲತಾ ಅಂಬರೀಶ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮಂಡ್ಯದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಅಂಬಿ ಅಭಿಮಾನಿಗಳ ಜೊತೆ ಮಾತನಾಡಿದ್ದೇನೆ. ಎಲ್ಲ ಕಡೆ ಒಳ್ಳೆ ರೆಸ್ಪಾನ್ಸ್ ಇದೆ ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯದಂತೆ ಹೇಳಿದ್ದಾರೆ. ಜನರ ಪ್ರೀತಿ ನೋಡಿ ತುಂಬಾ ಖುಷಿಯಾಗಿದೆ. ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಬಯಸಿದ್ದೇನೆ. ಆದರೆ ಟಿಕೆಟ್ ಕೊಡದಿದ್ರೆ ಪಕ್ಷೇತರ ಅಥವಾ ಬಿಜೆಪಿಯಿಂದ ಸ್ಪರ್ಧೆ ಮಾಡಬೇಕಾ ಎಂಬುದನ್ನು ನಿರ್ಧರಿಸಿಲ್ಲ ಅಂದ್ರು.
ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ನಮ್ಮ ಟೀಂ ರೆಡಿಯಿದೆ. ನಾವು ಎಲ್ಲರನ್ನೂ ಸೇರಿಸಿ ಒಂದು ಗ್ರೂಪ್ ಮಾಡಿಕೊಂಡು ಎಲ್ಲರ ಸಲಹೆ ಪಡೆದು ಕೆಲಸ ಮಾಡುತ್ತೇವೆ. ಮಂಡ್ಯದ ಮಂಜುನಾಥ ನಗರದಲ್ಲಿ ನಮ್ಮ ಸ್ವಂತ ಮನೆಯಿದ್ದು, ಅಲ್ಲಿಯೇ ಮನೆ ಕಟ್ಟಲು ನಿರ್ಧರಿಸಿದ್ದೇನೆ ಎಂದು ಸುಮಲತಾ ತಿಳಿಸಿದ್ರು.
ಇದೇ ವೇಳೆ ತಮ್ಮ ವಿರುದ್ಧ ನಿಖಿಲ್ ಸ್ಪರ್ಧಿಸುತ್ತಾರೆ ಎಂಬುದಕ್ಕೆ ಪ್ರತಿಕ್ರಿಯಿಸಿ, ನಿಖಿಲ್ ನನ್ನ ವಿರುದ್ಧ ಸ್ಪರ್ಧೆ ಮಾಡಿದ್ರೆ ಸ್ವಾಗತ. ನಿಖಿಲ್ ನಮಗೆ ಶತ್ರು ಅಲ್ಲ. ಅಭಿಷೇಕ್ಗೆ ನಿಖಿಲ್ ತುಂಬ ಒಳ್ಳೆ ಸ್ನೇಹಿತ. ನನಗೆ ನಿಖಿಲ್ ಬೇರೆಯವನಲ್ಲ ಅಂದ್ರು. ಇದನ್ನೂ ಓದಿ: ಮಂಡ್ಯದಿಂದ ಸ್ಪರ್ಧೆ ಖಚಿತ – ಸುಮಕ್ಕನ ಬಗ್ಗೆ ಮಾತನಾಡಲ್ಲ ಅಂದ್ರು ನಿಖಿಲ್
ಸಾಮಾಜಿಕ ಜಾಲತಾಣದ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿ, ಕೆಲವೊಂದು ಚರ್ಚೆ ಅವೈಡ್ ಮಾಡಲು ಆಗಲ್ಲ. ಅದರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ. ಮಂಡ್ಯ ಜೆಡಿಎಸ್ ಭದ್ರಕೋಟೆ ಆಗಿದ್ರು ನನ್ನ ಬಳಿ ಜನರ ಪ್ರೀತಿ ಇದೆ. ಅದನ್ನು ಇಟ್ಟುಕೊಂಡು ಜನರ ಬಳಿ ಹೋಗುತ್ತೇನೆ. ನನ್ನ ಹಿಂದೆ ಈಗ ಯಾರಿದ್ದಾರೆ. ಅಂಬರೀಶ್ ಇದ್ದಾಗ ಒಂದು ಫೋನಿನಲ್ಲಿ ಎಲ್ಲ ಕೆಲಸ ಆಗುತ್ತಿತ್ತು. ಈಗ ನನ್ನ ಜೊತೆ ಯಾರಿದ್ದಾರೆ ಹೇಳಿ. ಸೋಲು ಗೆಲುವಿನ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ. ಜನರ ಜೊತೆ ಇರುತ್ತೇನೆ. ಅಂಬರೀಶ್ ಅವರು ದೇವೇಗೌಡರನ್ನು ತಂದೆ ಸ್ಥಾನದಲ್ಲಿ ನೋಡುತ್ತಿದ್ದರು. ಅದೇ ಪ್ರೀತಿ ದೇವೇಗೌಡರಿಗೆ ಇತ್ತು ಎಂದು ಸುಮಲತಾ ಹೇಳಿದ ಚುನಾವಣೆ ಯುದ್ಧವಲ್ಲ ಅದೊಂದು ಸ್ಪರ್ಧೆ ಎಂದು ತಿಳಿಸಿದ್ರು.
ಗುರು ಕುಟುಂಬಕ್ಕೆ ಜಮೀನು ಪತ್ರ:
ಪುಲ್ವಾಮಾ ದಾಳಿಯಲ್ಲಿ ವೀರಮರಣವನ್ನಪ್ಪಿದ್ದ ಮಂಡ್ಯದ ಗುಡಿಗೆರೆ ಗ್ರಾಮದ ವೀರ ಯೋಧ ಗುರು ಕುಟುಂಬಕ್ಕೆ ನಟಿ ಸುಮಲತಾ ಅಂಬರೀಷ್ 20 ಗುಂಟೆ ಜಮೀನು ನೀಡೋದಾಗಿ ಘೋಷಿಸಿದ್ದಂತೆ ಇಂದು ಆ ಕುಟುಂಬಕ್ಕೆ ಜಮೀನು ಪತ್ರ ಹಸ್ತಾಂತರಿಸಿದ್ರು. ಮಂಡ್ಯದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಈ ಹಿಂದೆ ನಾನು ಗುರು ಕುಟುಂಬಕ್ಕೆ ಜಮೀನು ನೀಡೋದಾಗಿ ಹೇಳಿದ್ದೆ. ಆ ಪ್ರಕಾರವಾಗಿ ಅಭಿಷೇಕ್ ಅಂಬರೀಶ್ ಹೆಸರಲ್ಲಿದ್ದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮದ ಜಮೀನಿನ ಪೈಕಿ 20 ಗುಂಟೆಯ ಜಾಗವನ್ನು ಗುರು ಪತ್ನಿ ಕಲಾವತಿಗೆ ಹಸ್ತಾಂತರಿಸೋದಾಗಿ ಹೇಳಿ ದಾನ ಪತ್ರವನ್ನು ಆ ಕುಟುಂಬಕ್ಕೆ ನೀಡಿದ್ರು.
ಇನ್ನು ಜಮೀನು ಪಡೆದ ಕಲಾವತಿ, ಕೂಡ ಈ ಜಮೀನನ್ನು ಯಾವುದೇ ಕಾರಣಕ್ಕೂ ಮಾರಲ್ಲ. ಸುಮಲತಾ ಅವರ ನೆನಪಾರ್ಥವಾಗಿ ಸ್ವೀಕರಿಸುವೆ ಎಂದ್ರು.
ಹಾಸನ: ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಹುಟ್ಟೂರಾದ ಜಿಲ್ಲೆಯ ಅರಸೀಕೆರೆ ತಾಲೂಕಿನ ಅಟ್ಟಾವರ ಗ್ರಾಮದಲ್ಲಿ ನೂತನವಾಗಿ ತೋಟ ಮನೆ ಖರೀದಿಸಿದ್ದಾರೆ. ಈ ಮೂಲಕ ಈ ಸ್ಥಳದಲ್ಲಿ ಕೃಷಿ ಮಾಡಿ ರೈತರಿಗೆ ಅರೀವು ಮೂಡಿಸುವ ಹೊಸ ಸಾಹಸಕ್ಕೆ ರಾಕಿ ಬಾಯ್ ಕೈ ಹಾಕಿದ್ದಾರೆ.
ಜಿಲ್ಲೆಯ ವಿದ್ಯಾನಗರದಲ್ಲಿ ಯಶ್ ಮನೆ ಖರೀದಿಸಿದ್ದಾರೆ. ಹುಟ್ಟೂರಿನ ಮೇಲಿರುವ ಅಭಿಮಾನದಿಂದ ಜಿಲ್ಲೆಯಲ್ಲಿ ಯಶ್ ಆಸ್ತಿ ಖರೀದಿಸಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ತೋಟ ಮತ್ತು ಮನೆ ಖರೀದಿಸಿರುವ ಯಶ್ ತಮ್ಮ ತಾಯಿ ಅವರ ಹುಟ್ಟೂರು ಹಾಸನದ ದೊಡ್ಡಕೊಂಡಗೊಳ ಗ್ರಾಮದಲ್ಲಿ ಕೃಷಿ ಮಾಡಿ ರೈತರಿಗೆ ಅರಿವು ಮೂಡಿಸುವ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಮಗನ ಈ ಒಳ್ಳೆಯ ಕಾರ್ಯಕ್ಕೆ ಅವರ ತಂದೆ ತಾಯಿ ಕೂಡ ಸಾಥ್ ಕೊಟ್ಟಿದ್ದಾರೆ. ಈಗಾಗಲೇ ಕೃಷಿ ಕಾರ್ಯದಲ್ಲಿ ಯಶ್ ಪೋಷಕರು ತೊಡಗಿದ್ದಾರೆ. ಜನಪ್ರಿಯತೆ ಉತ್ತುಂಗದಲ್ಲಿ ಇದ್ದರೂ ಹುಟ್ಟೂರಿನ ಮಣ್ಣಿನ ಪ್ರೀತಿಗೆ ರಾಕಿ ಬಾಯ್ ಮನಸೋತಿದ್ದಾರೆ.
ವಿದ್ಯಾನಗರದ 68*70 ವಿಸ್ತೀರ್ಣದ ವಿಶಾಲ ಮನೆಯನ್ನು ಯಶ್ ಖರೀದಿಸಿದ್ದು, ಶನಿವಾರ ಹಾಗೂ ಭಾನುವಾರ ಇಲ್ಲೇ ತಾಯಿಯೊಂದಿಗೆ ಕಾಲ ಕಳೆದಿದ್ದಾರೆ. ಮನೆಗೆ ಯಾವ ಬಣ್ಣ ಮಾಡಿಸಬೇಕು ಹಾಗೂ ಏನೆಲ್ಲ ಮಾಡಬೇಕು ಎಂದು ಚರ್ಚೆ ಮಾಡಿ, ತೋಟದಲ್ಲಿ ಒಂದು ಸುತ್ತು ಹಾಕಿ ಬಳಿಕ ಪತ್ನಿಯ ತವರೂರು ಕಡೆಗೆ ರಾಕಿ ಬಾಯ್ ಹೋಗಿದ್ದಾರೆ.
ತಮ್ಮ ಕೆಲಸದ ಒತ್ತಡದಿಂದ ಹೊರಬಂದು ಬಿಡುವಿನ ವೇಳೆಯನ್ನು ಯಶ್ ತನ್ನೂರಲ್ಲೇ ಸಮಯ ಕಳೆಯಲು ಬಯಸಿದ್ದು, ಹುಟ್ಟೂರಿನ ಮೇಲೆ ಇರುವ ಅಭಿಮಾನವೇ ಯಶ್ ಅವರಿಗೆ ವಿದ್ಯಾನಗರದಲ್ಲೊಂದು ಸ್ವಂತಮನೆ ಖರೀದಿಸುವಂತೆ ಮಾಡಿದೆ. ಅಷ್ಟೇ ಅಲ್ಲ ಕೃಷಿ ಕುಟುಂಬದಿಂದ ಬಂದ ಯಶ್ ಅಟ್ಟಾವರ ಬಳಿ 80 ಎಕರೆ ವಿಶಾಲವಾದ ಮಾವು, ಸಪೋಟ, ಗೋಡಂಬಿ ತೋಟವನ್ನು ಖರೀದಿಸಿದ್ದಾರೆ.
ನಮ್ಮ ಕುಟುಂಬಕ್ಕೆ ಹಾಗೂ ನಮ್ಮ ಮಗ ಯಶ್ಗೆ ಹಾಸನ ಎಂದರೆ ವಿಶೇಷ ಅಭಿಮಾನವಿದೆ. ಕೆಲ ತಿಂಗಳ ಹಿಂದೆಯೇ ಮನೆ, ತೋಟ ಖರೀದಿಸಲು ಮುಂದಾಗಿದ್ದೇವು. ಈಗ ಖರೀದಿ ಪ್ರಕ್ರಿಯೆ ಮುಗಿಸಿದ್ದೇವೆ ಅಷ್ಟೇ ಯಶ್ ತಾಯಿ ಪುಷ್ಪಾ ಅವರು ತಿಳಿಸಿದ್ದಾರೆ.
ಯಶ್ ಹುಟ್ಟಿದ್ದು ಹಾಸನ ಜಿಲ್ಪಾಸ್ಪತ್ರೆಯಲ್ಲಿ. ಬೆಳೆದಿದ್ದು ಮೈಸೂರಿನಲ್ಲಿ. ಇರುವುದು ಬೆಂಗಳೂರಿನಲ್ಲಿ. ಮೈಸೂರಿನಲ್ಲೇ ಮನೆಮಾಡಿ ಎಂಬ ಒತ್ತಾಯ ಕೇಳಿ ಬಂದಿತ್ತು. ಆದರೆ ಹಾಸನದಲ್ಲಿ ಹುಟ್ಟಿದ ಹಿನ್ನೆಲೆಯಲ್ಲಿ ಇಲ್ಲೇ ಜಾಗ ಖರೀದಿಸಬೇಕೆಂದು ಯಶ್ ಕನಸು ಕಂಡಿದ್ದರು. ಆದರಂತೆ ಈಗ ಜಾಗ ಖರೀದಿಸಿದ್ದಾರೆ.
ಬೆಂಗಳೂರು: ಒಂದು ನಿವೇಶನಕ್ಕಾಗಿ ಸೋದರರು ಮಚ್ಚು, ದೊಣ್ಣೆಗಳಿಂದ ಹೊಡೆದಾಡಿಕೊಂಡ ಘಟನೆ ಬೆಂಗಳೂರಿನ ಹೊರವಲಯದ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೆ ನಾರಾಯಣಪುರದಲ್ಲಿ ನಡೆದಿದೆ.
ಕೆ. ನಾರಾಯಣಪುರದ ನಿವಾಸಿಗಳಾದ ರಾಮಪ್ಪ ಮತ್ತು ವೆಂಕಟಪ್ಪ ಎಂಬ ಸೋದರರ ಹೆಸರಲ್ಲಿ ಒಂದು ನಿವೇಶನವಿತ್ತು. ಇಬ್ಬರ ಪಾಲು ಬೇರೆಯಾಗಿರಲಿಲ್ಲ. ವೆಂಕಟಪ್ಪ ಅಕಾಲಿಕ ಮರಣ ಹೊಂದುತ್ತಲೇ ರಾಮಪ್ಪ ಯಾರಿಗೂ ತಿಳಿಯದಂತೆ ನಿವೇಶನವನ್ನು ಉದಯ್ ಎಂಬವರಿಗೆ ಮಾರಿದ್ದಾನೆ. ಸೈಟ್ ಖರೀದಿಸಿದ ಉದಯ್ ನಿವೇಶನದಲ್ಲಿ ಮನೆ ಕಟ್ಟಲು ಮುಂದಾಗುತ್ತಿದ್ದಂತೆ ವಿಷಯ ವೆಂಕಟಪ್ಪನ ಮಕ್ಕಳಿಗೆ ಗೊತ್ತಾಗಿದೆ.
ಉದಯ್ ಮನೆ ಕಟ್ಟುತ್ತಿದ್ದ ಸ್ಥಳಕ್ಕೆ ಬಂದ ವೆಂಕಟಪ್ಪನ ಮಕ್ಕಳು ಜಗಳ ಆರಂಭಿಸಿದ್ದಾರೆ. ಇತ್ತ ರಾಮಪ್ಪ ಸಹ ತನ್ನ ಮಕ್ಕಳೊಂದಿಗೆ ಸ್ಥಳಕ್ಕೆ ಆಗಮಿಸಿದ್ದಾನೆ. ಆರಂಭದಲ್ಲಿ ಮಾತಿನಲ್ಲಿ ಆರಂಭವಾದ ಜಗಳ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಎರಡು ಕುಟುಂಬದ ಸುಮಾರು ಇಪ್ಪತ್ತಕ್ಕೂ ಹೆಚ್ಚು ಜನರು, ಕೈಗೆ ಸಿಕ್ಕ ಕಲ್ಲು, ದೊಣ್ಣೆಗಳಿಂದ ಅದೇ ಸೈಟ್ ಜಾಗದಲ್ಲಿ ಪರಸ್ಪರ ಹೊಡೆದಾಡಿದ್ದಾರೆ. ಈ ಗಲಾಟೆಯಲ್ಲಿ ಐವರಿಗೆ ಗಾಯವಾಗಿದ್ದು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದ್ಯ ಎರಡು ಕಡೆಯವರು ಮಹದೇವಪುರ ಪೋಲಿಸ್ ಠಾಣಾ ಮೆಟ್ಟಿಲು ಏರಿದ್ದು ಪರಸ್ಪರ ಒಬ್ಬರ ವಿರುದ್ಧ ಮತ್ತೊಬ್ಬರು ದೂರು ದಾಖಲಿಸಿದ್ದಾರೆ.
ರಾಮನಗರ: ಆಸ್ತಿ ವಿಚಾರವಾಗಿ ದಾಯಾದಿಗಳ ನಡುವಿನ ಕಲಹದ ಹಿನ್ನೆಲೆಯಲ್ಲಿ ಮನೆಯ ಮುಂದಿನ ನೀರಿನ ಸಂಪ್ ಗೆ ಕ್ರಿಮಿನಾಶಕ, ಆಸಿಡ್ ಮಿಶ್ರಣ ಮಾಡಿರುವ ಘಟನೆ ರಾಮನಗರ ತಾಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಡರಾತ್ರಿ ಗ್ರಾಮದ ರಮೇಶ್, ನಾಗರಾಜ್ ಎಂಬವರ ಮನೆಯ ಮುಂದಿನ ನೀರಿನ ಸಂಪ್ ಗೆ ಕಿಡಿಗೇಡಿಗಳು ಮಾವಿನ ಮರಕ್ಕೆ ಸಿಂಪಡಿಸುವ ಕ್ರಿಮಿನಾಶಕ ಹಾಗೂ ಆಸಿಡ್ ಮಿಶ್ರಣ ಮಾಡಿದ್ದಾರೆ. ತಡರಾತ್ರಿ ಮನೆಯ ನೀರಿನ ಸಂಪ್ ಗೆ ಕ್ರಿಮಿನಾಶಕ ಬೆರೆಸಿದ್ದಾರೆ.
ತಿರುಗಾಡುವ ದಾರಿಯ ವಿಷಯಕ್ಕೆ ಜಗಳವಾಗುತ್ತಿತ್ತು. ಆಗ ಊರಿನ ಪ್ರಮುಖರು ರಾಜಿ ಸಂಧಾನ ಮಾಡಿಸಿದ್ದರು. ಆಗ ಇಬ್ಬರು ಕಾಂಪೌಂಡ್ ನಿರ್ಮಿಸಲು ನಿರ್ಧರಿಸಿದ್ದೇವು. ಶುಕ್ರವಾರ ರಾತ್ರಿ ನನ್ನ ಅಣ್ಣ ನೀರಿನ ಸಂಪ್ಗೆ ಕ್ರಿಮಿನಾಶಕ ಹಾಗೂ ಆಸಿಡ್ ಬೆರೆಸಿದ್ದಾನೆ. ಬೆಳಗ್ಗೆ ಎದ್ದು ನೋಡಿದ್ದಾಗ ನೀರು ಬೇರೆ ಬಣ್ಣಕ್ಕೆ ತಿರುಗಿತ್ತು ಎಂದು ರಮೇಶ್ ಆರೋಪಿಸಿದ್ದಾರೆ.
ಬೆಳ್ಳಗೆ ನೀರು ತೆಗೆದುಕೊಳ್ಳಲು ಹೋದ ವೇಳೆ ನೀರು ಬೇರೆ ಬಣ್ಣಕ್ಕೆ ತಿರುಗಿ ವಾಸನೆ ಬರುತಿತ್ತು. ಅಲ್ಲದೇ ನೀರಿನಲ್ಲಿ ಕ್ರಿಮಿನಾಶಕ ಮಿಶ್ರಣದಿಂದ ನೊರೆ ಬಂದಿತ್ತು. ಇದರಿಂದ ಆತಂಕಗೊಂಡ ಮನೆಯವರು ನೀರು ಬಳಸದೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ಸಂಬಂಧಿಕರೇ ಆಸ್ತಿ ವ್ಯಾಜ್ಯ ಹಿನ್ನೆಲೆಯಲ್ಲಿ ನೀರಿಗೆ ವಿಷ ಬೆರೆಸಿದ್ದಾರೆ ಎಂಬ ಆರೋಪ ಮಾಡುತ್ತಿದ್ದಾರೆ.
ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯ ಬಳಿಕ ಇಂದು ಯಶ್ ಹಾಗೂ ಅವರ ತಾಯಿ ಐಟಿ ಅಧಿಕಾರಿಗಳ ಮುಂದೆ ಹಾಜರಾಗಿದ್ದು, ಈ ವೇಳೆ ಐಟಿ ಅಧಿಕಾರಿಗಳಿಗೆ ತಮ್ಮ ಬಳಿ ಇರುವ ಆಸ್ತಿ ಬಗ್ಗೆ ದಾಖಲೆ ಸಮೇತ ಮಾಹಿತಿ ನೀಡಿದ್ದಾರೆ. ಯಶ್ ಐಟಿ ಅಧಿಕಾರಿಗಳಿಗೆ ನೀಡಿರುವ ಮಾಹಿತಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿದೆ.
ಸಾಮಾನ್ಯ ವ್ಯಕ್ತಿಯಿಂದ ಸ್ಟಾರ್ ನಟರಾಗಿ ಬೆಳೆದ ಯಶ್, ತಮ್ಮ ಪ್ರತಿ ಸಿನಿಮಾದ ಸಂಭಾವನೆ ಸೇರಿದಂತೆ, ಆದಾಯ ಮೂಲಗಳಿಂದ ಗಳಿಸಿದ ಆಸ್ತಿಯ ಸಂರ್ಪೂಣ ಮಾಹಿತಿಯನ್ನು ಐಟಿ ಅಧಿಕಾರಿಗಳಿಗೆ ನೀಡಿದ್ದಾರೆ. ಇಂದು ಐಟಿ ಅಧಿಕಾರಿಗಳ ಮುಂದೆ ನಡೆದ ಸತತ 3 ಗಂಟೆಗಳ ವಿಚಾರಣೆಯಲ್ಲಿ ಮಾಹಿತಿ ನೀಡಿದ್ದು, ಯಾವುದೇ ಸಮಯದಲ್ಲಿ ಕರೆದರೂ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.
ಆಸ್ತಿ ಎಷ್ಟಿದೆ?
ನಟ ಯಶ್ ಬೆಂಗಳೂರಿನ ಗಾಲ್ಫ್ ಕ್ಲಬ್ ಬಳಿ 20 ಕೋಟಿ ರೂ. ಮೌಲ್ಯದ ಪ್ರೆಸ್ಟೀಜ್ ಪೆಂಟೌಸ್ ಹೊಂದಿದ್ದಾರೆ. ಇದನ್ನು ಯಶ್ ಖರೀದಿ ಮಾಡಲು ಪ್ರಮುಖ ಕಾರಣ ನಟ ಅಂಬರೀಶ್ ಅವರ ಮೇಲಿನ ಪ್ರೀತಿ. ಅಂಬರೀಶ್ ಅವರು ಇದೇ ಗಾಲ್ಫ್ ಕ್ಲಬ್ನ ಆಪಾರ್ಟ್ಮೆಂಟ್ನಲ್ಲಿ ವಾಸವಿದ್ದರು. ಅಂಬರೀಶ್ ಅವರೊಂದಿಗೆ ಇರಬೇಕು ಎನ್ನುವ ಕಾರಣದಿಂದ ಯಶ್ ಈ ಪೆಂಟೌಸನ್ನು ಖರೀದಿ ಮಾಡಿದ್ದಾರೆ. ಅಲ್ಲದೇ ಹುಟ್ಟೂರಿನ ಮೇಲೆ ಆಪಾರ ಪ್ರೀತಿಯನ್ನು ಹೊಂದಿರುವ ಯಶ್ ಮೈಸೂರಲ್ಲೂ ಒಂದು ಪೆಂಟೌಸ್ ಖರೀದಿ ಮಾಡಿದ್ದಾರೆ. ಮೈಸೂರಿನ ಬೋಗಾದಿ ಬಳಿ ವಿಲಾಸಿ ಫ್ಲಾಟ್ ಹಾಗೂ ರಿಂಗ್ ರಸ್ತೆಯಲ್ಲಿ 1 ಎಕರೆ ಜಮೀನು ಯಶ್ ಹೆಸರಿನಲ್ಲಿದೆ.
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪ್ರೇರಣೆ ಹಾಗೂ ಅಮ್ಮನ ಆಸೆಯಂತೆ ಯಶ್ ಮೈಸೂರಿನಲ್ಲಿ 78 ಎಕ್ರೆ ಜಮೀನು ಖರೀದಿ ಮಾಡಲು ಮುಂದಾಗಿದ್ದು, ಸದ್ಯಕ್ಕೆ ಈ ಜಮೀನು ಖರೀದಿ ಮಾಡಲು ಟೋಕನ್ ಅಡ್ವಾನ್ಸ್ ಮಾತ್ರ ನೀಡಿದ್ದಾರೆ. ಈ ಆಸ್ತಿ ಇನ್ನು ಕೂಡ ನೋಂದಣಿ ಆಗಬೇಕಿದೆ. ಈ ಆಸ್ತಿ ಖರೀದಿ ಮಾಡಲು ಒಂದು ವಿಶೇಷವಾದ ಪ್ರೇರಣೆಯಿದೆ. ಒಬ್ಬ ಮಾದರಿ ರೈತನಾಗಬೇಕು ಎನ್ನುವ ಕನಸನ್ನು ಯಶ್ ಕಾಣುತ್ತಿದ್ದು, ಈ ಕನಸು ನನಸು ಮಾಡಲು ಈ ಜಾಗವನ್ನು ಖರೀದಿ ಮಾಡಲು ಮುಂದಾಗಿದ್ದಾರೆ. ಕಷ್ಟ ಕಾಲದಲ್ಲಿ ಸಹಾಯವಾಗಲು ಊರಿನ ಹೊರಭಾಗದಲ್ಲಿ ವ್ಯವಸಾಯದ ಭೂಮಿ ಪಡೆಯುವಂತೆ ರಜಿನಿಕಾಂತ್ ಯಶ್ ಅವರಿಗೆ ಸಲಹೆ ನೀಡಿದ್ದರಂತೆ. ಈ ಕಾರಣಕ್ಕಾಗಿ ತನ್ನೂರಿನ ನೆಲದಲ್ಲಿ ವ್ಯವಸಾಯ ಮಾಡಲು ಯಶ್ ಜಾಗ ಖರೀದಿಗೆ ಮುಂಗಡ ಹಣವನ್ನು ಪಾವತಿಸಿದ್ದಾರೆ.
ಮೈಸೂರಿನ ಬಳಿಕ ಹಾಸನದ ಮೇಲೆ ಅತಿ ಹೆಚ್ಚು ಪ್ರೀತಿಯನ್ನು ಹೊಂದಿರುವ ಯಶ್ ಅಲ್ಲಿಯೂ ಒಂದು ಮನೆಯನ್ನು ಹೊಂದಿದ್ದಾರೆ. ಅಲ್ಲದೇ ಕೋಲಾರ ಬಳಿ 10 ನಿವೇಶನಗಳನ್ನು ಹೊಂದಿದ್ದು. ಇದರಲ್ಲಿ ಕೆಲವು ಯಶ್ ಅವರ ತಾಯಿಯ ಹೆಸರಿನಲ್ಲಿದೆ. ಈ ಕಾರಣದಿಂದಲೇ ಐಟಿ ಅಧಿಕಾರಿಗಳು ಯಶ್ ತಾಯಿಯನ್ನು ವಿಚಾರಣೆಗೆ ಕರೆದಿದ್ದರು. ಇನ್ನು ಬೆಂಗಳೂರು ಸುತ್ತಮುತ್ತ ಅಂದರೆ ಬನ್ನೇರುಘಟ್ಟ ಸಮೀಪ 3 ಸೈಟ್, ಜೆ.ಪಿ.ನಗರದಲ್ಲಿ 1 ಸೈಟ್, ಹೊಸಕೆರೆ ಹಳ್ಳಿಯಲ್ಲಿ 1 ಮನೆ ಹಾಗೂ ಕತ್ರಿಗುಪ್ಪೆಯಲ್ಲಿ ತಂಗಿಗಾಗಿ ಒಂದು ಮನೆಯನ್ನು ಯಶ್ ಖರೀದಿ ಮಾಡಿದ್ದಾರೆ.
ಎಷ್ಟು ದಾನ ಮಾಡಿದ್ದಾರೆ?
ಪತ್ನಿ ರಾಧಿಕಾ ಹೆಸರಿಲ್ಲೂ ಕೆಲ ನಿವೇಶನಗಳನ್ನು ಹೊಂದಿದ್ದು, ಬೆಂಗಳೂರು-ಮೈಸೂರು ರಸ್ತೆಯಲ್ಲಿ ಒಂದು ನಿವೇಶನ ಹಾಗೂ ಬಿಡದಿ ಬಳಿ ಒಂದು ನಿವೇಶನ ಇದೆ. ಐಟಿ ಅಧಿಕಾರಿಗಳು ಇಷ್ಟೆಲ್ಲಾ ಆಸ್ತಿಯನ್ನು ಹೊಂದಿರುವ ಯಶ್ ಧಾನಧರ್ಮ ಮಾಡುವುದರಲ್ಲೂ ಎತ್ತಿದ ಕೈ ಆಗಿದ್ದು `ಯಶೋಮಾರ್ಗ’ ಹೆಸರಿನ ಸ್ವಯಂ ಸೇವಾ ಸಂಸ್ಥೆಯ ಮೂಲಕ ಸಾಮಾಜಿಕ ಸೇವೆಯನ್ನು ಮಾಡುತ್ತಿದ್ದಾರೆ. ಇದರಲ್ಲಿ ಕೆರೆ ಹೂಳು ತೆಗೆದಿದ್ದು ಸೇರಿದಂತೆ, ಎಷ್ಟೇ ಮಂದಿಗೆ ದಾನಧರ್ಮ ಮಾಡಿರುವ ಮಾಹಿತಿಯನ್ನು ನೀಡಿದ್ದಾರೆ. ಇದು ಕೂಡ ಐಟಿ ಅಧಿಕಾರಿಗಳಿಗೆ ಪ್ರಮುಖ ಮಾಹಿತಿಯಾಗಿದ್ದು, ಇದುವರೆಗೆ 5 ಕೋಟಿ ರೂ. ಧಾನಧರ್ಮ ಮಾಡಿದ್ದಾರೆ.
ಕಾರು ಎಷ್ಟಿದೆ?
ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಯಶ್ ಬಳಿ 3 ಬೆಂಜ್, 1 ಆಡಿ, 1 ಪಜೇರೋ, 1 ಫಾರ್ಚೂನರ್ ಐಷಾರಾಮಿ ಕಾರುಗಳಿವೆ. ಇವುಗಳ ಖರೀದಿ ಮಾಡಿರುವ ಮಾಹಿತಿ ಸೇರಿದಂತೆ ತೆರಿಗೆ ಪಾವತಿಸಿರುವ ದಾಖಲೆಗಳನ್ನು ಯಶ್ ಐಟಿ ಅಧಿಕಾರಿಗಳ ಮುಂದಿಟ್ಟಿದ್ದಾರೆ. ಐಟಿ ವಿಚಾರಣೆ ವೇಳೆ ತಾವು ದುಡಿದ ಪೈಸಾ, ಪೈಸಾ ರೂಪಾಯಿಗೂ ಮಾಹಿತಿ ಕೊಟ್ಟಿರುವ ಯಶ್ ಅವರು 15 ಬ್ಯಾಂಕುಗಳಲ್ಲಿ 16 ಕೋಟಿ ರೂ. ಸಾಲ ಮಾಡಿದ್ದಾರೆ. ಅಲ್ಲದೇ ಯಾವುದೇ ಸಮಯದಲ್ಲಿ ಕರೆದರೂ ನಾನು ವಿಚಾರಣೆಗೆ ಹಾಜರಾಗುವುದಾಗಿ ಐಟಿ ಅಧಿಕಾರಿಗಳಿಗೆ ಹೇಳಿದ್ದಾರೆ. ಇದನ್ನು ಓದಿ: 40 ಕೋಟಿ ರೂ. ಸಾಲ : ಪ್ರಶ್ನೆಗೆ ಯಶ್ ಖಡಕ್ ಪ್ರತಿಕ್ರಿಯೆ
ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಸ್ಟಾರ್ ಗಳ ಮನೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು ಪುನೀತ್ ರಾಜ್ ಕುಮಾರ್ ಮನೆಯ ತಪಾಸಣೆ ಮುಗಿದಿದೆ.
ಪ್ರತಿ ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ದು, ಸಂಪಾದಿಸಿದ್ದ, ಸಂಪಾದನೆ ಮಾಡುತ್ತಿರುವ ಲೆಕ್ಕವನ್ನೆಲ್ಲಾ ಕ್ರೋಢೀಕರಿಸುತ್ತಿದ್ದಾರೆ. ಸ್ಟಾರ್ ನಟರು ಕೇವಲ ಆಕ್ಟಿಂಗ್ನಲ್ಲಿ ಮಾತ್ರ ತೊಡಗಿಸಿಕೊಂಡಿಲ್ಲ. ಆಕ್ಟರ್ ಕಮ್ ಬಿಸಿನೆಸ್ಮೆನ್ಗಳಾಗಿದ್ದೇ ಇವತ್ತಿನ ಐಟಿ ರೇಡ್ಗೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ತೆರಿಗೆ ಇಲಾಖೆಗೆ ನಾವು ನಾಗರಿಕರಾಗಿ ಸಹಕಾರ ನೀಡಿದ್ದೇವೆ – ಪುನೀತ್ ಮೊದಲ ಪ್ರತಿಕ್ರಿಯೆ
ನಟ ಪುನೀತ್ ಮತ್ತು ಯಶ್ ಮನೆಯಲ್ಲಿ ದೊರೆತ ಆಸ್ತಿಯ ಲೆಕ್ಕಗಳನ್ನು ನೋಡುವುದಾದರೆ, ಬೆಂಗಳೂರಿನಲ್ಲಿ ಪುನೀತ್ ಹೆಸರಲ್ಲಿ 10 ಆಸ್ತಿ ಪತ್ತೆಯಾಗಿದೆ. ಗಾಂಧಿನಗರದ 6ನೇ ಕ್ರಾಸ್, ಹೆಣ್ಣೂರು, ಥಣಿಸಂದ್ರ, ಕೆಂಪಾಪುರ, ಚಿರಂಜೀವಿ ಲೇಔಟ್, ರಾಜಾಜಿನಗರದ 1ನೇ ಬ್ಲಾಕ್ನಲ್ಲಿ ಆಸ್ತಿ ಹೊಂದಿದ್ದು, ಕೆಂಪಾಪುರ, ಚಿರಂಜೀವಿ ಲೇಔಟ್ನಲ್ಲಿ 3, ಕೋರಮಂಗಲದಲ್ಲಿ ಕಮರ್ಷಿಯಲ್ ಪ್ರಾಪರ್ಟಿ ಮಾಡಿದ್ದಾರೆ. ಇನ್ನೂ ಪಿಆರ್ ಕೆ ಪ್ರೊಡಕ್ಷನ್, ಪಿಆರ್ ಕೆ ಆಡಿಯೋ ವ್ಯವಹಾರ ಬಗ್ಗೆ ಮಾಹಿತಿ ಸಂಗ್ರಹವಾಗಿದೆ. ಇಡೀ ವ್ಯವಹಾರದ ಬಗ್ಗೆ ಮಾಹಿತಿ ನೀಡಲು ನಟ ಪುನೀತ್ ಐಟಿ ಅಧಿಕಾರಿಗಳ ಬಳಿ ಕಾಲಾವಕಾಶ ಕೋರಿದ್ದಾರೆ. ಇದನ್ನೂ ಓದಿ: 20ಕೆಜಿ ಬೆಳ್ಳಿ, 450ಗ್ರಾಂ ಚಿನ್ನ, 1 ವಜ್ರದ ಸರ, 2 ಪ್ಲಾಟಿನಂ ಸರ- ಯಶ್ ಮನೆಯಲ್ಲಿ ಪತ್ತೆ..?
ಇತ್ತ ಯಶ್ ಮನೆಯಲ್ಲಿ 20 ಕೆಜಿಗೂ ಅಧಿಕ ಬೆಳ್ಳಿ, ಸುಮಾರು 450 ಗ್ರಾಂ ಚಿನ್ನ, 1 ವಜ್ರದ ಸರ, 2 ಪ್ಲಾಟಿನಮ್ ಸರ ಪತ್ತೆಯಾಗಿವೆ. ಅಷ್ಟೇ ಅಲ್ಲದೇ 2 ಬ್ಯಾಂಕ್ಗಳಲ್ಲಿ 40 ಕೋಟಿ ಸಾಲ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭಿಸಿದೆ. 8 ಬ್ಯಾಂಕ್ ಖಾತೆ ಹೊಂದಿರುವ ಯಶ್, ತಾಯಿ ಜೊತೆ 4 ಜಂಟಿ ಖಾತೆಯನ್ನು ಹೊಂದಿದ್ದಾರೆ. ಮಂಡ್ಯದಲ್ಲಿ 8 ಎಕರೆ ಜಮೀನು ಖರೀದಿ ಮಾಡಿದ್ದಾರೆ. ಅಧಿಕಾರಿಗಳ ಪ್ರತಿ ಪ್ರಶ್ನೆಗೂ ಸಹನೆಯಿಂದ ಯಶ್ ತಾಯಿ ಉತ್ತರಿಸಿದ್ದಾರೆ ಐಟಿ ಮೂಲಗಳಿಂದ ತಿಳಿದು ಬಂದಿದೆ.
ಸದ್ಯಕ್ಕೆ ಇಬ್ಬರ ನಟರ ಆಸ್ತಿ ಮಾಹಿತಿ ಲಭ್ಯವಾಗಿದ್ದು, ಇನ್ನಿಬ್ಬರ ಮಾಹಿತಿಯನ್ನು ಐಟಿ ಅಧಿಕಾರಿಗಳು ಕಲೆಹಾಕಲಾಗುತ್ತಿದೆ. ನಟ ಪುನೀತ್ ರಾಜ್ಕುಮಾರ್ ಮನೆಯ ಮೇಲಿನ ಐಟಿ ರೇಡ್ ಮುಗಿದಿದ್ದು, ನಟ ಯಶ್, ಸುದೀಪ್ ಮತ್ತು ಶಿವರಾಜ್ಕುಮಾರ್ ಮನೆಯಲ್ಲಿ ಮೂರನೇ ದಿನವೂ ಐಟಿ ದಾಳಿ ಮುಂದುವರಿದಿದೆ.
ಬಾಗಲಕೋಟೆ: ಆಸ್ತಿ ವಿಚಾರಕ್ಕೆ ಮಗನೊಬ್ಬ ತನ್ನ ತಂದೆಯನ್ನೇ ಕೊಡಲಿಯಿಂದ ಬರ್ಬರವಾಗಿ ಕೊಲೆಗೈದ ಅಮಾನವೀಯ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಹೊರವಲಯದಲ್ಲಿ ನಡೆದಿದೆ.
ಮಲ್ಲಿಕಾರ್ಜುನ(65) ತನ್ನ ಮಗನಿಂದಲೇ ಕೊಲೆಗೀಡಾದ ವ್ಯಕ್ತಿ. ಶರಣಪ್ಪ ಕೊಲೆಗೈದ ಮಗ. ಬಾದಾಮಿಯ ಹೊರವಲಯದಲ್ಲಿರುವ ತೋಟದ ಮನೆಯಲ್ಲಿ ಗುರುವಾರ ಬೆಳಗ್ಗೆ ಶರಣಪ್ಪ ತಂದೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಆಸ್ತಿ ವಿಚಾರವಾಗಿ ಆಗಾಗ ತಂದೆ ಮತ್ತು ಮಗನ ಮಧ್ಯೆ ಜಗಳ ನಡೆಯುತ್ತಲೇ ಇತ್ತು. ಇಂದು ಬೆಳಗ್ಗೆ ಜಗಳವಾದಾಗ ತಂದೆ ಮಗನಿಗೆ ಆಸ್ತಿ ನೀಡಲ್ಲ ಎಂದು ಹೇಳಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ವಾಗ್ವಾದ ಜೋರಾಗಿದೆ. ಕೊನೆಗೆ ಜಗಳ ತಾರಕ್ಕಕ್ಕೇರಿ ಕೋಪಗೊಂಡ ಶರಣಪ್ಪ ತಂದೆಯನ್ನೇ ಕೊಲೆ ಮಾಡಲು ನಿರ್ಧರಿಸಿದ್ದಾನೆ. ಬಳಿಕ ಏಕಾಏಕಿ ಸಿಲಿಂಡರ್ ಹಾಗೂ ಕೊಡಲಿಯಿಂದ ತಂದೆಯ ತಲೆಗೆ ಹೊಡೆದು ಅಮಾನವೀಯವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಮೇಲೆ ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನಗರ: ಜೂನಿಯರ್ ವಾರ್ಡನ್ ಆಗಿ 250 ಕೋಟಿ ರೂ. ಮೀರಿದ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದ ಜೂನಿಯರ್ ವಾರ್ಡನ್ ಈಗ ಅಮಾನತು ಗೊಂಡಿದ್ದಾನೆ.
ಕನಕಪುರ ತಾಲೂಕಿನ ಹುಣಸನಹಳ್ಳಿ ಸರ್ಕಾರಿ ಹಾಸ್ಟೆಲ್ ವಾರ್ಡನ್ ಬಿ.ನಟರಾಜ್ನನ್ನು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಆಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ನಟರಾಜ್ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದ ಸುದ್ದಿ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾಗಿತ್ತು. ಈ ಸುದ್ದಿ ಬಳಿಕ ಎಚ್ಚೆತ್ತ ಇಲಾಖೆ ಈಗ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಕೆಲಸ ಜ್ಯೂ. ವಾರ್ಡನ್ ಆದ್ರೆ 250 ಕೋಟಿ ರೂ. ಆಸ್ತಿ!
1995 ರಲ್ಲಿ ನಟರಾಜ್ ಚನ್ನಪಟ್ಟಣ ತಾಲೂಕಿನ ವಿದ್ಯಾರ್ಥಿ ನಿಲಯದಲ್ಲಿ ದಿನಗೂಲಿ ನೌಕರನಾಗಿ ಕೆಲಸಕ್ಕೆ ಸೇರಿಕೊಂಡಿದ್ದಾಗ ಈತನಿಗೆ ಮಾಸಿಕ ವೇತನ 700 ರೂ. ಇತ್ತು. ಪಿತ್ರಾರ್ಜಿತವಾಗಿ ಕನಕಪುರ ತಾಲೂಕಿನ ಏರಂಗೆರೆ ಗ್ರಾಮದಲ್ಲಿ ಸರ್ವೇ ನಂಬರ್ 80 ರಲ್ಲಿ 4 ಎಕರೆ ಜಮೀನಿತ್ತು. ಇದೀಗ 250 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಸಂಪಾದಿಸಿದ್ದಾನೆ.
ಈ ಬಗ್ಗೆ ಕನಕಪುರ ಸಿವಿಲ್ ನ್ಯಾಯಾಲಯ ರಾಮನಗರ ಎಸಿಬಿಗೆ ತನಿಖೆ ನಡೆಸುವಂತೆ ಸೂಚಿಸಿದೆ. ರಾಮನಗರ ಎಸಿಬಿ ಯಿಂದ ನಟರಾಜ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಇದೀಗ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ವಿಕಾಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಎಸಿಬಿಯಿಂದ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ಬಿ.ನಟರಾಜ್ ಆಸ್ತಿಯ ವಿವರ:
* ಕನಕಪುರ ತಾಲೂಕಿನ ಹಾರೋಹಳ್ಳಿ ಇಂಡಸ್ಟ್ರಿಯಲ್ ಏರಿಯಾದ ಎಡಮಡು ಗ್ರಾಮದ ವಿವಿದ ಸರ್ವೇ ನಂಬರ್ನಲ್ಲಿ 18 ಎಕರೆ
* ಕನಕಪುರ ತಾಲೂಕಿನ ಏರಂಗೆರೆಯ ವಿವಿಧ ಸರ್ವೆ ನಂಬರ್ಗಳಲ್ಲಿ 28 ಎಕರೆ
* ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ ಹನೂರು ಬಳಿಯ ಮಣಹಳ್ಳಿ 15.5 ಎಕರೆ
* ಹಾರೋಹಳ್ಳಿ ಇಂಡಸ್ಟ್ರಿಯಲ್ ಏರಿಯಾದ ಏಡುಮಡುನಲ್ಲಿ ಇಟ್ಟಿಗೆ ಫ್ಯಾಕ್ಟರಿ, ಜ್ಯೂಸ್ ಫ್ಯಾಕ್ಟರಿ
* ಜೆ.ಪಿ ನಗರ 17ನೇ ಅಡ್ಡರಸ್ತೆಯಲ್ಲಿನ ಬಿಲ್ಡಿಂಗ್
* ಬೆಂಗಳೂರಿನ ಜೆಪಿ ನಗರದ 6ನೇ ಹಂತದಲ್ಲಿ ಮೂರು ಹಂತಸ್ಥಿನ ಮನೆ
* ಕನಕಪುರ ನಗರದ ಬೃಂದಾವನ ನಗರದಲ್ಲಿ ಮಹಡಿ ಮನೆ
* ಸ್ಕಾರ್ಪಿಯೋ, ಟಾಟಾ ಸುಮೋ ಕಾರು, ಎರಡು ಬೈಕ್