Tag: property

  • ಪ್ರಸಾದದಲ್ಲಿ ವಿಷ ಕೇಸ್: ಅಂದು ಕೂಲಿ ಕಾರ್ಮಿಕ -ಇಂದು ಐಷಾರಾಮಿ ಮನೆಯ ಒಡೆಯ!

    ಪ್ರಸಾದದಲ್ಲಿ ವಿಷ ಕೇಸ್: ಅಂದು ಕೂಲಿ ಕಾರ್ಮಿಕ -ಇಂದು ಐಷಾರಾಮಿ ಮನೆಯ ಒಡೆಯ!

    ಚಾಮರಾಜನಗರ: ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ದೇವಾಲಯ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದ ದೇವಾಸ್ಥಾನದ ಟ್ರಸ್ಟಿನ ಸದಸ್ಯನಾಗಿರುವ ಚಿನ್ನಪ್ಪಿಯ ಆಸ್ತಿ ಮೇಲೆ ಪೊಲೀಸರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

    ದೇವಸ್ಥಾನದ ಟ್ರಸ್ಟಿ ಚಿನ್ನಪ್ಪಿ ಮೇಲೆ ಅನುಮಾನುಗೊಂಡು ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ. ಆದರೆ ಈ ವೇಳೆ ಚಿನ್ನಪ್ಪಿ ಐದು ವರ್ಷದ ಹಿಂದೆ ಸಾಮಾನ್ಯ ಕೂಲಿ ಕೆಲಸ ಮಾಡುತ್ತಿದ್ದನು. ಜೀವನಕ್ಕಾಗಿ ಕೂಲಿ ಕೆಲಸ ಮಾಡಲೇಬೇಕಿದ್ದ ಪರಿಸ್ಥಿತಿ ಇತ್ತು. ಆದರೆ ಈಗ ಚಿನ್ನಪ್ಪಿ ಕೂಲಿ ಕಾರ್ಮಿಕನಾಗಿದ್ದವನು ಐಷಾರಾಮಿ ಮನೆ ಮತ್ತು ಕಾಂಪ್ಲೆಕ್ಸ್ ಗಳ ಒಡೆಯನಾಗಿದ್ದಾನೆ. ಆದ್ದರಿಂದ ಕೂಲಿ ಕೆಲಸ ಮಾಡುತ್ತಿದ್ದವನು ಇಷ್ಟು ಆಸ್ತಿ ಹೇಗೆ ಸಂಪಾದನೆ ಮಾಡಿದ್ದಾನೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

    ಸಾಮಾನ್ಯ ಕೂಲಿ ಕಾರ್ಮಿಕನಾಗಿದ್ದ ಚಿನ್ನಪ್ಪಿ ಕೊಡ್ಡ ಮನೆ ಮತ್ತು ಕಾಂಪ್ಲೆಕ್ಸ್ ಕಟ್ಟಿಸಿದ್ದಾನೆ. ಅಷ್ಟೇ ಅಲ್ಲದೇ ಮನೆಯನ್ನು 3 ವರ್ಷಗಳ ಹಿಂದೆ ಕಟ್ಟಿಸಿದ್ದಾನೆ. ದೇವಾಲಯದ ಆಡಳಿತ ಮಂಡಳಿಯಲ್ಲಿ ಚಿನ್ನಪ್ಪಿ ಸಾಕಷ್ಟು ಹಗರಣ ಎಸಗಿದ್ದಾನೆ. ಆದ್ದರಿಂದ ಇಂತಹ ಮನೆ ಕಟ್ಟಿಸಿದ್ದಾನೆ. ಜಮೀನು ಖರೀದಿಸಿದ್ದಾನೆ ಎಂದು ಅಲ್ಲಿನ ಜನರು ಆರೋಪಿಸುತ್ತಿದ್ದಾರೆ.

    ಚಿನ್ನಪ್ಪಿ ಕಿಚ್‍ಗುತ್ ಮಾರಮ್ಮ ದೇವಾಲಯದ ಟ್ರಸ್ಟ್ ನ ಸದಸ್ಯನಾಗಿದ್ದನು. ಪ್ರಸಾದದ ದುರಂತ ಸಂಭವಿಸಿದ ಬಳಿಕ ಚಿನ್ನಪ್ಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಾರಮ್ಮ ದೇವಾಲಯ ವಿಷ ಪ್ರಸಾದ ದುರಂತಕ್ಕೆ ದೇವಸ್ಥಾನದ ಆದಾಯವೇ ಕಾರಣವಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚಿನ್ನಪ್ಪಿ ಆಸ್ತಿ ಬಗ್ಗೆಯೂ ಪೊಲೀಸರಿಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

    ಶುಕ್ರವಾರ ಇಬ್ಬರು, ಭಾನವಾರ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದರು. ಆದರೆ ವಿಷಪ್ರಸಾದ ಪ್ರಕರಣದಲ್ಲಿ ಒಟ್ಟು 7 ಮದಿಯ ಮೇಲೆ ಎಫ್‍ಐಆರ್ ಹಾಕಲಾಗಿದೆ. ಕೊಳ್ಳೇಗಾಲ ಡಿಎಸ್‍ಪಿ ಪುಟ್ಟಮಾದಯ್ಯ ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡಿದೆ. ಕೊಳ್ಳೇಗಾಲ ನ್ಯಾಯಾಲಯಕ್ಕೆ ಆರೋಪಿಗಳು ಸೇರಿದಂತೆ ಚಿನ್ನಪ್ಪಿಯನ್ನು ಇಂದು ಹಾಜರು ಪಡಿಸುವ ಸಾಧ್ಯತೆ ಇದೆ.

    https://www.youtube.com/watch?v=VlWU8VbgtSc

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಬಿಎಂಪಿ ಆಸ್ತಿ ತೆರಿಗೆ ಉಳಿಸಿಕೊಂಡ ಜಮೀರ್ ಅಹಮದ್

    ಬಿಬಿಎಂಪಿ ಆಸ್ತಿ ತೆರಿಗೆ ಉಳಿಸಿಕೊಂಡ ಜಮೀರ್ ಅಹಮದ್

    ಬೆಂಗಳೂರು: ಬಿಬಿಎಂಪಿ ಆರ್ಥಿಕವಾಗಿ ಸಬಲವಾಗಬೇಕಾದರೆ ಎಲ್ಲರೂ ಆಸ್ತಿ ತೆರಿಗೆ ಕಟ್ಟಬೇಕು. ಆದರೆ ವಿಪರ್ಯಾಸವೆಂದರೆ ಗಣ್ಯಾತಿಗಣ್ಯರು ತೆರಿಗೆ ಕಟ್ಟದ ಸುದ್ದಿ ಈಗಾಗಲೇ ಸದ್ದು ಮಾಡಿದೆ. ಈಗ ಮತ್ತೊಮ್ಮೆ ಸಚಿವ ಸಂಪುಟದ ಮಂತ್ರಿಯೊಬ್ಬರು ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾಹಿತಿ ಲಭ್ಯವಾಗಿದೆ.

    ಕುಮಾರಸ್ವಾಮಿ ಸರ್ಕಾರದ ಆಹಾರ ಮತ್ತ ನಾಗರಿಕ ಸರಬರಾಜು, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಮಂತ್ರಿ ಜಮೀರ್ ಅಹಮದ್ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಕಂದಾಯ ಅಧಿಕಾರಿಗಳಲ್ಲಿ ವಿಚಾರಿಸಿದಾಗ ದಾಖಲೆಗಳ ಪ್ರಕಾರ ತೆರಿಗೆ ಬಾಕಿ ಉಳಿಸಿಕೊಂಡಿರುವುದು ಖಚಿತವಾಗಿದೆ.

    ಎಷ್ಟು ಬಾಕಿ?
    ಜಮೀರ್ ಅಹಮದ್ ಓಲ್ಡ್ ತುಮಕೂರು ರಸ್ತೆಯ ರಾಜ್ ಮಹಲ್ ವಿಲಾಸ್ ಆಸ್ತಿ ತೆರಿಗೆಯನ್ನ 2011-12 ಹಣಕಾಸು ವರ್ಷದಲ್ಲಿ ಪಾವತಿಸಿದ ಬಳಿಕ ಇಲ್ಲಿಯವರೆಗೂ ತೆರಿಗೆ ಕಟ್ಟಿಲ್ಲ ಎಂಬ ಮಾಹಿತಿ ಇದೆ. ಇಷ್ಟೇ ಅಲ್ಲದೇ ಜಕ್ಕಸಂದ್ರ ವಿಲೇಜ್ ಆಸ್ತಿಯ ಪಾಲುದಾರಿಕೆ ಹೊಂದಿರುವ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದ್ದಾರೆ. 2016-17 ರ ಸಾಲಿನಿಂದ ತೆರಿಗೆ ಕಟ್ಡಿಲ್ಲ ಎಂಬ ಮಾಹಿತಿ ಪಾಲಿಕೆ ಬಳಿ ಇದೆ.

    ಕೋಟಿ ಕೋಟಿ ಆಸ್ತಿ ತೆರಿಗೆ ಬಾಕಿ ಇದೆ ಎಂದು ಪಾಲಿಕೆ ಲೆಕ್ಕ ತೋರಿಸುತ್ತಿದೆ. ಆದರೆ ನಿಜಕ್ಕೂ ಈ ವಿವಿಐಪಿಗಳು ಆಸ್ತಿ ತೆರಿಗೆ ಕಟ್ಟಲು ಮರೆತ್ರಾ? ಅಥವಾ ದೊಡ್ಡವರ ಬಾಕಿ ತೋರಿಸಿ ಪಾಲಿಕೆ ಕಾಲದೂಡುತ್ತಿದ್ದೇಯಾ ಎಂಬ ಪ್ರಶ್ನೆ ಮೂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೊಮ್ಮಕ್ಕಳ ಪಾಲಿಗೆ ವಿಲನ್ ಆದ ಅಜ್ಜ!

    ಮೊಮ್ಮಕ್ಕಳ ಪಾಲಿಗೆ ವಿಲನ್ ಆದ ಅಜ್ಜ!

    ಯಾದಗಿರಿ: ತಂದೆಗೆ ಬರುವ ಆಸ್ತಿ ಪಾಲು ಕೇಳಿದ ಮೊಮ್ಮಕ್ಕಳ ಪಾಲಿಗೆ ಅಜ್ಜ ವಿಲನ್ ಆಗಿದ್ದಾನೆ. ಖಳನಾಯಕನಂತೆ ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಮೊಮ್ಮಕ್ಕಳಿಗೆ ಥಳಿಸಿದ್ದಾನೆ.

    ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೊಮ್ಮಕ್ಕಳಾದ ಗೋವಿಂದ ಹಾಗೂ ವಿಜಯಲಕ್ಷ್ಮಿ, ಸೊಸೆಯಾದ ಹುಲಿಗೆಮ್ಮ ಆಸ್ತಿ ಹಾಗೂ ರಾಶಿ ಮಾಡಿರುವ ತಮ್ಮ ಪಾಲಿನ ಭತ್ತ ಕೇಳಿದ್ದಾರೆ. ಆದ್ರೆ ಅಜ್ಜ ಯಂಕಣ್ಣ ದೊಣ್ಣೆ ಹಿಡಿದುಕೊಂಡು ಹೊಡೆದಿದ್ದಾರೆ.

    ತಾತ ಹಾಗೂ 8 ಜನ ಸೇರಿ ಹಲ್ಲೆ ನಡೆಸಿದ್ದಾರೆ. ಭಾನುವಾರ ಬೆಳಗ್ಗೆ ಈ ಘಟನೆ ಜರುಗಿದೆ. ಘಟನೆಯಲ್ಲಿ ಮೊಮ್ಮಕಳು ಹಾಗೂ ಸೊಸೆಗೆ ಗಾಯವಾಗಿದ್ದು ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದುವೆಯಾದ ನಿನ್ನ ಮಗ ಅನೈತಿಕ ಸಂಬಂಧ ಹೊಂದಿದ್ದಾನೆ. ನೀನಾದರೂ ಆಸ್ತಿಯಲ್ಲಿ ಪಾಲು ನೀಡೆಂದು ಮೊಮ್ಮಕ್ಕಳು ಅಜ್ಜನ ದುಂಬಾಲು ಬಿದ್ದಿದ್ದಾರೆ.

    ಅಜ್ಜನ ವಿರುದ್ಧ ಈಗ ಮೊಮ್ಮಗ ಗೋವಿಂದ ದೂರು ನೀಡಿದ್ದಾನೆ. ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೆಲಸ ಜ್ಯೂ. ವಾರ್ಡನ್ ಆದ್ರೆ 250 ಕೋಟಿ ರೂ. ಆಸ್ತಿ!

    ಕೆಲಸ ಜ್ಯೂ. ವಾರ್ಡನ್ ಆದ್ರೆ 250 ಕೋಟಿ ರೂ. ಆಸ್ತಿ!

    ರಾಮನಗರ: 250 ಕೋಟಿಗೂ ಅಧಿಕ ಆಸ್ತಿಯನ್ನ ಅಕ್ರಮವಾಗಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ರಾಮನಗರ ಎಸಿಬಿ ಪೊಲೀಸರು ನ್ಯಾಯಾಲಯದ ಆದೇಶದ ಮೇರೆಗೆ ಜೂನಿಯರ್ ವಾರ್ಡನ್ ಮೇಲೆ ಎಫ್‍ಐಆರ್ ದಾಖಲಿಸಿದ್ದಾರೆ.

    ಕನಕಪುರ ತಾಲೂಕು ಹುಣಸನಹಳ್ಳಿಯ ಹಾಸ್ಟೆಲ್ ನ ಜೂನಿಯರ್ ವಾರ್ಡನ್ ಬಿ.ನಟರಾಜ್ ವಿರುದ್ಧ ಎಸಿಬಿ ಎಫ್‍ಐಆರ್ ದಾಖಲಿಸಿಕೊಂಡಿದೆ. ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಜೂನಿಯರ್ ವಾರ್ಡನ್ ಆಗಿರುವ ನಟರಾಜ್ ಅಕ್ರಮವಾಗಿ 250 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಸಂಪಾದನೆ ಮಾಡಿರುವುದಾಗಿ ಆರ್ ಟಿಐ ಕಾರ್ಯಕರ್ತ ರವಿಕುಮಾರ್ ಆರೋಪಿಸಿ ದಾಖಲೆಗಳ ಸಹಿತವಾಗಿ ಕನಕಪುರದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪಿಸಿಆರ್ ಸಲ್ಲಿಸಿದ್ದರು.

    ದೂರಿನ ಅನ್ವಯ ಪಿಸಿ ಕಾಯ್ದೆ 1988ರ ಅನ್ವಯ ಪ್ರಕರಣ ದಾಖಲಾಗಿದ್ದು, ತನಿಖೆಗೆ ನ್ಯಾಯಾಲಯದ ಆದೇಶ ಮಾಡಿದ್ದು ಎಸಿಬಿ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಕನಕಪುರ, ಬೆಂಗಳೂರು, ಹಾರೋಹಳ್ಳಿ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದು, ಸಮಾಜ ಕಲ್ಯಾಣ ಇಲಾಖೆಯಲ್ಲಿ ಅಕ್ರಮ ಎಸಗಿ ಸಂಪಾದಿಸಿದ್ದು ತನಿಖೆ ನಡೆಸುವಂತೆ ಆರ್ ಟಿ ಐ ಕಾರ್ಯಕರ್ತ ರವಿಕುಮಾರ್ ದೂರು ನೀಡಿದ್ದರು.

    ಯಾರು ಈ ನಟರಾಜ್?
    ನಟರಾಜ್ ಕನಕಪುರದ ನಿವಾಸಿಯಾಗಿದ್ದು, ಗುತ್ತಿಗೆ ಆಧಾರದ ಮೇರೆಗೆ ವಾರ್ಡನ್ ಆಗಿ ಸೇರಿಕೊಂಡಿದ್ದನು. ಮೊದಲಿಗೆ ಈತನಿಗೆ 7,200 ರೂ. ಸಂಬಳ ಬರುತ್ತಿತ್ತು. ಈಗ ಸದ್ಯಕ್ಕೆ 24 ಸಾವಿರ ಸಂಬಳ ಬರುತ್ತಿದೆ. ಆದರೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಲವಾರು ಟೆಂಡರ್‍ಗಳನ್ನು ಅಕ್ರಮವಾಗಿ ಪಡೆದು ಕಾಮಗಾರಿ ಕೆಲಸವನ್ನು ಮಾಡುತ್ತಿದ್ದಾನೆ. ಜೊತೆಗೆ ಅಕ್ರಮವಾಗಿ ಆಸ್ತಿಯನ್ನು ಸಂಪಾದನೆ ಮಾಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.

    ಸಾಕ್ಷಿ ಸಮೇತ ವಾರ್ಡನ್ ಬಿ.ನಟರಾಜ್ ಅಕ್ರಮ ಆಸ್ತಿ ಬಗ್ಗೆ ಮಾಹಿತಿ ನೀಡಿದ್ದಾರೆ. ಎಫ್‍ಐಆರ್ ದಾಖಲಾಗಿ 3-4 ದಿನಗಳಾಗಿದ್ದರೂ ಇದುವರೆಗೂ ಸೂಕ್ತ ಕ್ರಮವನ್ನು ಜರುಗಿಸಿಲ್ಲ. ಹೀಗಾಗಿ ಅವರಿಗೆ ರಾಜಕೀಯ ನಾಯಕರು ಬೆಂಬಲವಿದೆ ಎಂಬುವುದು ತಿಳಿಯುತ್ತದೆ. ನಟರಾಜ್ ಗೆ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಸುರೇಶ್ ಬೆಂಬಲವಿದೆ. ಅವರ ಬೆಂಬಲ ಇಲ್ಲದೇ ಇಷ್ಟೊಂದು ಅಕ್ರಮ ಆಸ್ತಿ ಸಂಪಾದನೆ ಮಾಡಲು ಸಾಧ್ಯವಿಲ್ಲ. ಈಗಲೂ ರಾಜಕೀಯ ಶಕ್ತಿಯಿಂದ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿಲ್ಲ ಎಂದು ಆರ್ ಟಿಐ ಕಾರ್ಯಕರ್ತ ರವಿಕುಮಾರ್ ಆರೋಪಿಸಿದ್ದಾರೆ.

    https://www.youtube.com/watch?v=3YO0lbkgxeY

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ 100 ರೂ. ದಂಡ

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ 100 ರೂ. ದಂಡ

    ಬೆಂಗಳೂರು: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ 100 ರೂ. ದಂಡವನ್ನು ಬಿಬಿಎಂಪಿ ವಿಧಿಸಿದೆ.

    ಟ್ರಾಫಿಕ್ ಸಿಗ್ನಲ್ ನಲ್ಲಿ ಹೆಲ್ಮೆಟ್, ಸೀಟ್ ಬೆಲ್ಟ್ ಇಲ್ಲದೇ ಕಾರು ಓಡಿಸಿದರೂ 500 ರಿಂದ 1,000 ಫೈನ್ ಹಾಕುತ್ತಾರೆ. ಆದರೆ ಬಿಬಿಎಂಪಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡರೆ ದಂಡ ಮಾತ್ರ 100 ರೂ. ಆಗಿರುತ್ತದೆ. ನಟ ದರ್ಶನ್ ಗೆ 2017- 18 ರ ಸಾಲಿನಲ್ಲಿ 12,024 ಆಸ್ತಿ ತೆರಿಗೆ ಕಟ್ಟಬೇಕಾಗಿತ್ತು. ಇನ್ ಟೈಂ ತೆರಿಗೆ ಕಟ್ಟದೇ ಇದ್ದಿದ್ದಕ್ಕೆ 100 ರೂ. ದಂಡ ಮತ್ತು 2164 ರೂ. ಬಡ್ಡಿ ಹಾಕಿದೆ.

    ನಟ ದರ್ಶನ್ 2017-18, 2018-19 ನೇ ಸಾಲಿನ 12,024 ರೂ. ಆಸ್ತಿ ತೆರಿಗೆಯನ್ನು ನಿಗದಿತ ಅವಧಿಯಲ್ಲಿ ಕಟ್ಟಬೇಕಿತ್ತು. ಆದರೆ ದರ್ಶನ್ ತಡವಾಗಿ ಕರ ಪಾವತಿಸಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಬಡ್ಡಿ ಮತ್ತು ದಂಡ ವಿಧಿಸಿತ್ತು. ದರ್ಶನ್ ಆಸ್ತಿ ತೆರಿಗೆಯನ್ನು 100 ರೂ. ದಂಡ ಪಾವತಿಸಿದ್ದಾರೆ. ಆದರೆ ಬಿಬಿಎಂಪಿ ದಂಡದ ಮೊತ್ತ ಹಾಸ್ಯಾಸ್ಪದವಾಗಿದೆ. 100 ರೂ. ದಂಡ ಹಾಕಿದರೆ ಆಸ್ತಿ ತೆರಿಗೆಯನ್ನು ಯಾರು ನಿಗದಿತ ಸಮಯದಲ್ಲಿ ಪಾವತಿ ಮಾಡುತ್ತಾರೆ ಅನ್ನೋ ಪ್ರಶ್ನೆ ಈಗ ಎದುರಾಗಿದೆ.

    ದರ್ಶನ್ ಜೊತೆಗೆ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಮಾಲೀಕತ್ವದ ಬಾಪೂಜಿ ಎಜುಕೇಷನ್ ಟ್ರಸ್ಟ್ 60 ಲಕ್ಷ ರೂ. ಆಸ್ತಿ ತೆರಿಗೆಯನ್ನು ಕಟ್ಟದೆ ಬಾಕಿ ಉಳಿಸಿಕೊಂಡಿದೆ. ಇವರ ಆಸ್ತಿ ಕೂಡ ಕೂಡಾ ಆರ್.ಆರ್ ನಗರದಲ್ಲಿ ಇದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • 4 ತಿಂಗ್ಳ ಹಿಂದೆಯಷ್ಟೇ ಮಗನಿಗೆ ಆಸ್ತಿ ವರ್ಗಾಯಿಸಿದ್ದರು ರೆಬೆಲ್ ಸ್ಟಾರ್..!

    4 ತಿಂಗ್ಳ ಹಿಂದೆಯಷ್ಟೇ ಮಗನಿಗೆ ಆಸ್ತಿ ವರ್ಗಾಯಿಸಿದ್ದರು ರೆಬೆಲ್ ಸ್ಟಾರ್..!

    ಮಂಡ್ಯ: ಮಗನ ಹೆಸರಿಗೆ ಆಸ್ತಿಯನ್ನು ವರ್ಗಾಯಿಸಿದ್ದು ಈ ಮೂಲಕ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ತಾನು ಹೆಚ್ಚು ದಿನ ಬದುಕಲ್ಲ ಅನ್ನೋ ಸುಳಿವು ಮೊದಲೇ ಸಿಕ್ಕಿತ್ತಾ ಅನ್ನೋ ಪ್ರಶ್ನೆಯೊಂದು ಇದೀಗ ಕಾಡುತ್ತಿದೆ.

    ಅಂಬಿ ನಾಲ್ಕು ತಿಂಗಳ ಹಿಂದೆಯಷ್ಟೇ ತಮ್ಮ ಆಸ್ತಿಯನ್ನು ಮಗನ ಹೆಸರಿಗೆ ಬದಲಾಯಿಸಿದ್ದರು. ಹುಟ್ಟೂರು ಮಂಡ್ಯ ಜಿಲ್ಲೆಯ ದೊಡ್ಡರಸಿನಕೆರೆ ಗ್ರಾಮದಲ್ಲಿ 7 ಎಕರೆಯಷ್ಟು ಪಿತ್ರಾರ್ಜಿತ ಆಸ್ತಿ ಇತ್ತು. ಮದ್ದೂರು ಪಟ್ಟಣದಲ್ಲಿರುವ ಸಬ್‍ರಿಜಿಸ್ಟ್ರಾರ್ ಕಚೇರಿಯಲ್ಲಿ ಪುತ್ರ ಅಭಿಷೇಕ್ ಜೊತೆಗೆ ಬಂದಿದ್ದ ಅಂಬಿರೀಶ್ ಅವರು ಈ ಆಸ್ತಿಯನ್ನು ಮಗನ ಹೆಸರಿಗೆ ಬದಲಾಯಿಸಿದ್ದರು.

    ಜುಲೈ 26ರಂದು ಅಂಬಿ ಮದ್ದೂರಿನ ಸಬ್ ರಿಜಿಸ್ಟಾರ್ ಆಫೀಸಿಗೆ ಬಂದಿದ್ದರು. ಈ ಸಂದರ್ಭದಲ್ಲಿ ಅವರು ಮಾಧ್ಯಮದವರನ್ನು ಒಳಗಡೆ ಬಿಡಬೇಡಿ ಅಂತ ಹೇಳಿ, ತಮ್ಮ ಮಗನ ಜೊತೆ ಕಚೇರಿಯಲ್ಲಿ ತನ್ನ ಆಸ್ತಿಯನ್ನು ಮಗನ ಹೆಸರಿಗೆ ಬರೆದುಕೊಟ್ಟಿದ್ದರು. ಕಚೇರಿಯಿಂದ ಹೊರಗಡೆ ಬಂದ ಬಳಿಕ ಅಂಬರೀಶ್ ಅವರು ಮಾಧ್ಯಮಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿರಲಿಲ್ಲ. ಆದ್ರೆ ವಿಡಿಯೋ ಮಾಡಲು ಅವಕಾಶ ಮಾಡಿಕೊಟ್ಟಿದ್ದರು. ಇವೆಲ್ಲವನ್ನೂ ಗಮನಿಸಿದ್ರೆ ಅಂಬರೀಶ್ ಅವರಿಗೆ ತನ್ನ ಆರೋಗ್ಯ ಕ್ಷೀಣಿಸುತ್ತಿದೆ ಅಂತ ಅರಿವಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಮಗನ ಹೆಸರಿಗೆ ಆಸ್ತಿ ವರ್ಗಾವಣೆ ಮಾಡಿದ್ರಾ ಅಂತ ಮಂಡ್ಯದಲ್ಲಿ ಅವರ ಅಭಿಮಾನಿಗಳು ಚರ್ಚೆ ಮಾಡುವ ಮೂಲಕ ಭಾವುಕರಾಗುತ್ತಿದ್ದಾರೆ.

    ನವೆಂಬರ್ 24ರ ಶನಿವಾರದಂದು ಮಂಡ್ಯದಲ್ಲಿ ಭೀಕರ ಬಸ್ ಅಪಘಾತ ನಡೆದಿತ್ತು. ಈ ಕುರಿತಾಗಿ ಅಂಬರೀಶ್ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದರು. ಈ ಸಂದರ್ಭದಲ್ಲಿ ಅವರು ತನಗೆ ಹುಷಾರಿಲ್ಲದಿರುವುದಾಗಿ ತಿಳಿಸಿದ್ದರು. ಆದ್ರೆ ರಾತ್ರಿ ಹೃದಯಘಾತವಾಗಿತ್ತು. ಕೂಡಲೇ ಅವರನ್ನು ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ನಂತ ಅವರ ಪಾರ್ಥಿವ ಶರೀರವನ್ನು ನಗರದ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು.

    ಭಾನುವಾರ ಸಂಜೆ ಅವರ ಪಾರ್ಥಿವ ಶರೀರವನ್ನು ಸೇನಾ ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ಕೊಂಡೊಯ್ದು, ಅಲ್ಲಿನ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಸೋಮವಾರ ಮತ್ತೆ ಬೆಂಗಳೂರಿಗೆ ಪಾರ್ಥಿವ ಶರೀರವನ್ನು ತಂದು ಮೆರವಣಿಗೆಯ ಮೂಲಕ ಕಂಠೀರವ ಸ್ಟುಡಿಯೋಗೆ ಕೊಂಡೊಯ್ದು ಅಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿಎಂ ಚಂದ್ರಬಾಬು ನಾಯ್ಡು ಆಸ್ತಿಗಿಂತ 3 ವರ್ಷದ ಮೊಮ್ಮಗನ ಆಸ್ತಿಯೇ 6 ಪಟ್ಟು ಹೆಚ್ಚು!

    ಸಿಎಂ ಚಂದ್ರಬಾಬು ನಾಯ್ಡು ಆಸ್ತಿಗಿಂತ 3 ವರ್ಷದ ಮೊಮ್ಮಗನ ಆಸ್ತಿಯೇ 6 ಪಟ್ಟು ಹೆಚ್ಚು!

    ಹೈದರಾಬಾದ್: ಆಂಧ್ರಪ್ರದೇಶ ಸಿಎಂ, ತೆಲುಗುದೇಶಂ (ಟಿಡಿಪಿ) ಪಕ್ಷದ ಮುಖ್ಯಸ್ಥರಾಗಿರುವ ಚಂದ್ರಬಾಬು ನಾಯ್ಡು ಸತತವಾಗಿ 8ನೇ ವರ್ಷ ತಮ್ಮ ಆಸ್ತಿ ವಿವರಗಳನ್ನು ಘೋಷಣೆ ಮಾಡಿದ್ದು, ಅವರಿಗಿಂತ ಮೊಮ್ಮಗ 6 ಪಟ್ಟು ಹೆಚ್ಚು ಆಸ್ತಿಯನ್ನು ಹೊಂದಿದ್ದಾನೆ.

    ಚಂದ್ರಬಾಬು ನಾಯ್ಡು ತನ್ನ ಬಳಿ 2.99 ಕೋಟಿ ರೂ. ಆಸ್ತಿ ಇದೆ ಎಂದು ಘೋಷಣೆ ಮಾಡಿಕೊಂಡಿದ್ದಾರೆ. ಆದರೆ ಅವರ 3 ವರ್ಷದ ಮೊಮ್ಮದ ನಾರಾ ದೇವಾಂಶ್ 18.71 ಕೋಟಿ ಆಸ್ತಿಯನ್ನು ಹೊಂದಿದ್ದಾನೆ.

    ಕಳೆದ ವರ್ಷಕ್ಕಿಂತ ಈ ಬಾರಿ ನಾಯ್ಡು ಅವರ ಆಸ್ತಿ 46 ಲಕ್ಷ ರೂ. ಹೆಚ್ಚಾಗಿದೆ. ಆದರೆ ಕಳೆದ ಬಾರಿ ಹೂಡಿಕೆ ಮಾಡಿದ್ದ 5.64 ಕೋಟಿ ರೂ. ಮೊತ್ತ 5.31 ಕೋಟಿ ರೂ.ಗೆ ಇಳಿಕೆ ಆಗಿದೆ.

    ನಾಯ್ಡು ಅವರ ಮೊಮ್ಮಗ 16.17 ಕೋಟಿ ರೂ. ಮೌಲ್ಯದ ಮನೆಯನ್ನು ಹೈದರಾಬಾದ್‍ನ ಜುಬ್ಲಿ ಹಿಲ್ಸ್ ನಲ್ಲಿ ಹೊಂದಿದ್ದು, 2.49 ಕೋಟಿ ರೂ. ಠೇವಣಿ ಇಟ್ಟಿದ್ದಾರೆ. ಹೆರಿಟೇಜ್ ಫುಡ್ಸ್ ಸಂಸ್ಥೆಯ ಮುಖ್ಯಸ್ಥರಾಗಿರುವ ನಾಯ್ಡು ಅವರ ಪತ್ನಿ ಭುವನೇಶ್ವರಿ ಅವರು ಕುಟುಂಬದಲ್ಲಿ ಹೆಚ್ಚು ಆಸ್ತಿಯನ್ನು ಹೊಂದಿದ್ದಾರೆ. ಕಳೆದ ಬಾರಿ 25.41 ಕೋಟಿ ರೂ. ಇದ್ದ ಅವರ ಆಸ್ತಿ ಈಗ 31.01 ಕೋಟಿ ರೂ.ಗೆ ಏರಿಕೆಯಾಗಿದೆ.

    ಅಂದಹಾಗೇ ದೇವಾಂಶ್, ಚಂದ್ರಬಾಬು ನಾಯ್ಡು ಮಾತ್ರವಲ್ಲದೇ ತಂದೆ ನಾರಾ ಲೋಕೇಶ್ ಅವರಗಿಂತಲೂ ಹೆಚ್ಚಿನ ಆಸ್ತಿಯನ್ನು ಹೊಂದಿದ್ದಾನೆ. ಲೋಕೇಶ್ ಟಿಡಿಪಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದು, ಈ ಬಾರಿ ಅವರ ಆಸ್ತಿಯಲ್ಲಿ 15.21 ಕೋಟಿ ರೂ. ಹೆಚ್ಚಳವಾಗಿದೆ. 2017 ರಲ್ಲಿ ಲೋಕೇಶ್ 21.40 ಕೋಟಿ ರೂ. ಆಸ್ತಿ ಹೊಂದಿದ್ದರು. ಉಳಿದಂತೆ ಲೋಕೇಶ್ ಅವರ ಪತ್ನಿ ಬ್ರಹ್ಮಣಿ ಅವರ ಆಸ್ತಿ ಕಳೆದ ಬಾರಿಗಿಂತ ಕಡಿಮೆ ಆಗಿದ್ದು, 15.01 ಕೋಟಿ ರೂ. ಆಸ್ತಿ ಹೊಂದಿದ್ದ ಅವರು ಈ ಬಾರಿ 7.72 ಕೋಟಿ ರೂ. ಆಸ್ತಿ ಹೊಂದಿರುವುದಾಗಿ ಘೋಷಣೆ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಕೋಟಿಗಟ್ಟಲೆ ಆಸ್ತಿಗಾಗಿ ಮೈದುನ ಸಂಗ ಸೇರಿ ಗಂಡನ ಹತ್ಯೆಗೆ ಸ್ಕೆಚ್

    ಕೋಟಿಗಟ್ಟಲೆ ಆಸ್ತಿಗಾಗಿ ಮೈದುನ ಸಂಗ ಸೇರಿ ಗಂಡನ ಹತ್ಯೆಗೆ ಸ್ಕೆಚ್

    ಬೆಂಗಳೂರು: ಪತಿಯ ಕೋಟಿ ಕೋಟಿ ಆಸ್ತಿ ಪಡೆಯಲು ಮಹಿಳೆಯೊಬ್ಬರು ಮೈದುನನ ಜೊತೆ ಸೇರಿದ ಗಂಡನ ಹತ್ಯೆಗೆ ಪ್ಲಾನ್ ಮಾಡಿ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಗರದ ಹೊರ ವಲಯದ ನೆಲಮಂಗಲ ತಾಲೂಕಿನ ಕುಲವನಹಳ್ಳಿ ಬಳಿ ನಡೆದಿದೆ.

    ಮೂಲತಃ ತುಮಕೂರು ಜಿಲ್ಲೆಯ ಬೆಳ್ಳಾವಿ ಮೂಲದ ರಂಗಸ್ವಾಮಿ ಹಲ್ಲೆಗೊಳಾಗದ ಪತಿ. ತನ್ನ ಪತ್ನಿ ನೇತ್ರಾವತಿ ಹಾಗೂ ಸಂಬಂಧಿಗಳೇ ನನ್ನನ್ನು ಕೊಲೆ ಮಾಡಲು ಹಲ್ಲೆ ನಡೆಸಿದ್ದಾರೆ ಎಂದು ರಂಗಸ್ವಾಮಿ ಆರೋಪ ಮಾಡಿದ್ದಾರೆ. ಅಲ್ಲದೇ ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪತ್ನಿ ನೇತ್ರಾವತಿ, ಸಹೋದರ ಲೋಕೇಶ್ ಹಾಗೂ ಮಾವ ರಾಜಣ್ಣರ ವಿರುದ್ಧ ದೂರು ದಾಖಲಿಸಿದ್ದಾರೆ.

    ಹೆಂಡತಿ ನೇತ್ರಾವತಿ ಹಾಗೂ ಸಹೋದರ ಲೋಕೇಶ್ ನಡುವೆ ಅಕ್ರಮ ಅಕ್ರಮ ಸಂಬಂಧ ಇದ್ದು, ಇಬ್ಬರು ಆಸ್ತಿಗಾಗಿ ನನ್ನನ್ನು ಕೊಲೆ ಮಾಡಲು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ಹಿಂದೆ ಮನೆಯಲ್ಲೂ ಕೂಡಿ 7 ಮಂದಿ ಚಿತ್ರಹಿಂಸೆ ನೀಡಿದ್ದರು. ನನ್ನ ಸಂಬಂಧಿಗಳಿಂದಲೇ ಪ್ರಾಣ ಭಯ ಇರುವುದರಿಂದ ಗ್ರಾಮ ಬಿಟ್ಟು ರಕ್ಷಣೆಗಾಗಿ ನಗರಕ್ಕೆ ಆಗಮಿಸಿದ್ದೇನೆ. ಕಳೆದ ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಮನಗರದಲ್ಲಿ ಕೋಟ್ಯಧಿಪತಿಗಳ ಸ್ಪರ್ಧೆ: ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಆಸ್ತಿ ಎಷ್ಟಿದೆ?

    ರಾಮನಗರದಲ್ಲಿ ಕೋಟ್ಯಧಿಪತಿಗಳ ಸ್ಪರ್ಧೆ: ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಆಸ್ತಿ ಎಷ್ಟಿದೆ?

    ರಾಮನಗರ: ಜಿಲ್ಲೆಯ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಎಲ್.ಚಂದ್ರಶೇಖರ್ ಕೂಡ ಕೋಟ್ಯಧಿಪತಿಯಾಗಿದ್ದಾರೆ. ಚಂದ್ರಶೇಖರ್ ಇಂದು ಬೃಹತ್ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ.

    ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಸ್ಥಿರಾಸ್ತಿ ಹಾಗೂ ಚರಾಸ್ತಿಗಳ ವಿವರವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದಾರೆ. ಒಟ್ಟು 10.20 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವ ಚಂದ್ರಶೇಖರ್ 65 ಲಕ್ಷ ರೂ. ಸಾಲ ಮಾಡಿದ್ದಾರೆ. ಬಿಡದಿ ಕೆನರಾ ಬ್ಯಾಂಕಿಗೆ ಬಡ್ಡಿ ಸಹಿತ 65 ಲಕ್ಷ ರೂ. ಮರುಪಾವತಿ ಮಾಡಬೇಕಾಗಿದೆ.

    ಆಸ್ತಿ ಎಷ್ಟಿದೆ?
    ಚಂದ್ರಶೇಖರ್ ರ ಸ್ಥಿರಾಸ್ತಿ ಮೌಲ್ಯ 6.80 ಕೋಟಿ ರೂ. ಇದ್ದು, ಇದರಲ್ಲಿ ಬಿಡದಿ ಹೋಬಳಿ ಅಬ್ಬನಕುಪ್ಪೆ ಗ್ರಾಮದ ಸರ್ವೇ ನಂಬರ್ 137 ರಲ್ಲಿ 5.09 ಎಕರೆ, ಹೆಗ್ಗಡಗೆರೆಯ ಸರ್ವೇ ನಂಬರ್ 256 ರಲ್ಲಿ 1 ಎಕರೆ, 258 ರಲ್ಲಿ 3.35 ಎಕರೆ, ಸರ್ವೇ ನಂಬರ್ 91 ರಲ್ಲಿ 2 ಎಕರೆ, ಕಲ್ಲಗೋಪಹಳ್ಳಿ ಸರ್ವೇ ನಂಬರ್ 1 ರಲ್ಲಿ 1 ಎಕರೆ ಸೇರಿದಂತೆ ಒಟ್ಟು 13.34 ಎಕರೆ ಜಮೀನು ಹೊಂದಿದ್ದಾರೆ. ಚರಾಸ್ತಿ ಮೌಲ್ಯ 13.60 ಲಕ್ಷ ರೂ. ಇದ್ದು, ಇದರಲ್ಲಿ, 10 ಲಕ್ಷ ರೂ. ಮೌಲ್ಯದ ಸ್ಕೋಡಾ ಕಾರು, ನಗದು 2 ಲಕ್ಷ ರೂಪಾಯಿ ಇದೆ. ಇದನ್ನೂ ಓದಿ: ಕೋಟ್ಯಂತರ ರೂ. ಆಸ್ತಿಯ ಒಡತಿ ಅನಿತಾ ಕುಮಾರಸ್ವಾಮಿ: 2013ರಲ್ಲಿ ಎಷ್ಟಿತ್ತು? ಈಗ ಎಷ್ಟಿದೆ?

    ಪತ್ನಿ ಸುಮಿತ್ರಾದೇವಿ ಹೆಸರಲ್ಲಿ ಬೆಂಗಳೂರಿನಲ ಕಾಮಾಕ್ಷಿ ಪಾಳ್ಯದ ವೃಷಭಾವತಿ ನಗರದಲ್ಲಿ 48×45 ಅಡಿ ನಿವೇಶನ, ಕಾಮಾಕ್ಷಿಪಾಳ್ಯದಲ್ಲಿ 70×28.6 ನಿವೇಶನ ಮತ್ತು ಇಂಡಸ್ಟ್ರಿಯಲ್ ಶೆಡ್ ಸೇರಿದಂತೆ ಒಟ್ಟು 3 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇದೆ. ಇದಲ್ಲದೇ 23.70 ಲಕ್ಷ ರೂ. ಚರಾಸ್ಥಿ ಹೊಂದಿದ್ದು, ಇದರಲ್ಲಿ 20 ಲಕ್ಷ ರೂ. ಮೌಲ್ಯದ 700 ಗ್ರಾಂ ಚಿನ್ನಾಭರಣ, 70 ಸಾವಿರ ಮೌಲ್ಯದ 2 ಕೆಜಿ ಬೆಳ್ಳಿ ವಸ್ತುಗಳು ಹಾಗೂ ಬ್ಯಾಂಕ್ ಖಾತೆಯಲ್ಲಿ 3 ಲಕ್ಷ ರೂ. ಹಣ ಇದೆ. ಪುತ್ರ ಮನೀಷ್ ಹೆಸರಲ್ಲಿ 3 ಲಕ್ಷ ರೂ ಮೌಲ್ಯದ ಒಂದು ಕೆಟಿಎಂ ಬೈಕ್ ಇದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೋಟ್ಯಂತರ ರೂ. ಆಸ್ತಿಯ ಒಡತಿ ಅನಿತಾ ಕುಮಾರಸ್ವಾಮಿ: 2013ರಲ್ಲಿ ಎಷ್ಟಿತ್ತು? ಈಗ ಎಷ್ಟಿದೆ?

    ಕೋಟ್ಯಂತರ ರೂ. ಆಸ್ತಿಯ ಒಡತಿ ಅನಿತಾ ಕುಮಾರಸ್ವಾಮಿ: 2013ರಲ್ಲಿ ಎಷ್ಟಿತ್ತು? ಈಗ ಎಷ್ಟಿದೆ?

    ರಾಮನಗರ: ಜಿಲ್ಲೆಯ ಉಪಚುನಾವಣೆಗೆ ಜೆಡಿಎಸ್ ನಿಂದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿಯವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಆಸ್ತಿ ಮೌಲ್ಯದ ಪ್ರಕಾರ ಕೋಟಿ ಆಸ್ತಿಗೆ ಒಡತಿಯಾಗಿದ್ದಾರೆ.

    ಕಾರ್ಯಕರ್ತರ ಜೊತೆ ಮೆರವಣಿಗೆಯೊಂದಿಗೆ ಆಗಮಿಸಿದ ಅವರು ಪತಿ ಸಿಎಂ ಕುಮಾರಸ್ವಾಮಿಯವರೊಂದಿಗೆ ನಾಮಪತ್ರ ಸಲ್ಲಿಸಿದರು. ಒಟ್ಟು 64,22,61,822 ರೂಪಾಯಿ ಚರಾಸ್ತಿಯನ್ನು ಹೊಂದಿದ್ದು, ಇದರಲ್ಲಿ 8,14,86,685 ರೂಪಾಯಿ ಸಾಲವನ್ನು ಹೊಂದಿದ್ದಾರೆ. ಅಲ್ಲದೇ ಅನಿತಾ ಕುಮಾರಸ್ವಾಮಿಯವರ ವಾರ್ಷಿಕ ಆದಾಯ 76,35,650 ರೂ. ಆಗಿದೆ.

    ಏನೆಲ್ಲಾ ಇದೆ ಅನಿತಾ ಕುಮಾರಸ್ವಾಮಿಯವರ ಬಳಿ?
    ಸದ್ಯ ಕೈಯಲ್ಲಿ 42,36,638 ರೂಪಾಯಿ ಹಣ ಇದ್ದು, ಬ್ಯಾಂಕುಗಳಲ್ಲಿ 1,90,88,775 ರೂಪಾಯಿ ಇಟ್ಟಿದ್ದಾರೆ. ಇದಲ್ಲದೇ ವಿವಿಧ ಕಂಪೆನಿಗಳು ಹಾಗೂ ಷೇರು ಮಾರುಕಟ್ಟೆ ಮೇಲೆ 68,79,58,000 ರೂ. ಹೂಡಿಕೆ ಮಾಡಿದ್ದಾರೆ. ಇದರ ಜೊತೆ 93,30,000 ರೂ. ಚಿನ್ನಾಭರಣವನ್ನು ಹೊಂದಿದ್ದು, ಇದರಲ್ಲಿ 2.6 ಕೆಜಿ ಚಿನ್ನಾಭರಣ, 17 ಕೆಜಿ ಬೆಳ್ಳಿ ಹಾಗೂ 40 ಗ್ರಾಂ ಕ್ಯಾರೇಟ್ ಡೈಮಂಡ್ ಇದೆ.

    ಇದಲ್ಲದೆ ಬೆಂಗಳೂರಿನ ಜಯನಗರದ 4ನೇ ಬ್ಲಾಕ್‍ನಲ್ಲಿ 14 ಕೋಟಿ ರೂ. ಹಾಗೂ ದೊಡ್ಡನಕುಂಟೆ ಬಳಿ 16 ಕೋಟಿ ರೂ. ಮೌಲ್ಯದ ವಾಣಿಜ್ಯ ಕಟ್ಟಡಗಳನ್ನು ಹೊಂದಿದ್ದಾರೆ. 28,29,557 ರೂ ಮೌಲ್ಯದ ಹಾರ್ಲೇ ಡೆವಿಡ್ಸನ್ ಬೈಕ್ ಹಾಗೂ ಪ್ರಚಾರದ ಬಸ್ ಒಂದನ್ನು ಹೊಂದಿದ್ದಾರೆ. 2013 ರಲ್ಲಿ ಚನ್ನಪಟ್ಟಣ ವಿಧಾನಸಭೆಗೆ ಸ್ಪರ್ಧಿಸಿದಾಗ ಅನಿತಾ ಕುಮಾರಸ್ವಾಮಿ ಆಸ್ತಿ 137,96,87,114 ರೂ. ಆಸ್ತಿ ಹೊಂದಿದ್ದರು. ಇದನ್ನೂ ಓದಿ: ರಾಮನಗರದಲ್ಲಿ ಕೋಟ್ಯಧಿಪತಿಗಳ ಸ್ಪರ್ಧೆ: ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಆಸ್ತಿ ಎಷ್ಟಿದೆ?

    2013ರ ಆಸ್ತಿ ವಿವರ:

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv