Tag: property

  • ಧರ್ಮರಾಯ ದೇವಾಲಯ ಆಸ್ತಿ ರಕ್ಷಣೆಗೆ ಸರ್ಕಾರ ಬದ್ಧ: ಸೋಮಣ್ಣ

    ಧರ್ಮರಾಯ ದೇವಾಲಯ ಆಸ್ತಿ ರಕ್ಷಣೆಗೆ ಸರ್ಕಾರ ಬದ್ಧ: ಸೋಮಣ್ಣ

    ಬೆಂಗಳೂರು: ಧರ್ಮರಾಯ ದೇವಾಲಯದ ಜಮೀನು ಒತ್ತುವರಿ ಮಾಡಿಕೊಂಡವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಅಂತ ಸಚಿವ ಸೋಮಣ್ಣ ಭರವಸೆ ನೀಡಿದ್ದಾರೆ. ಬಿಜೆಪಿ ರವಿಕುಮಾರ್ ಹಾಗೂ ಕಾಂಗ್ರೆಸ್‌ನ ಪಿ.ಆರ್. ರಮೇಶ್ ಪ್ರಶ್ನೋತ್ತರ ಅವಧಿಯಲ್ಲಿ ಪ್ರಶ್ನೆ ಕೇಳಿದರು. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಪರವಾಗಿ ಸಚಿವ ಸೋಮಣ್ಣ ಉತ್ತರ ನೀಡಿ,ದೇವಾಲಯ ಆಸ್ತಿ ಉಳಿಸೋದು ನಮ್ಮ ಸರ್ಕಾರದ ಬದ್ಧತೆ ಅಂತ ತಿಳಿಸಿದರು.

    ಬಿಜೆಪಿ ರವಿಕುಮಾರ್ ಮಾತನಾಡಿ, ಬೆಂಗಳೂರಿನ ಹಲಸೂರು ನೀಲಸಂದ್ರದ ಧರ್ಮರಾಯ ದೇವಾಲಯದ 15 ಎಕರೆ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ. ಜಾಗ ಒತ್ತುವರಿ ಮಾಡಿಕೊಂಡು ಮನೆಗಳ ನಿರ್ಮಾಣ ಮಾಡಿದ್ದಾರೆ. ಈ ಜಾಗ ಶಾಲೆ, ಕಾಲೇಜು ನಿರ್ಮಾಣಕ್ಕೆ ದಾನ ನೀಡಿದ್ದಾರೆ. ಕೂಡಲೇ ಒತ್ತವರಿ ಜಾಗ ತೆರವು ಮಾಡಬೇಕು. ಎಷ್ಟೇ ದೊಡ್ಡವರು ಇದ್ದರು ಕ್ರಮ ತಗೋಬೇಕು ಒತ್ತಾಯ ಮಾಡಿದರು. ಇದನ್ನೂ ಓದಿ: ಬಪ್ಪನಾಡಿನಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ – ಸಾಮರಸ್ಯ ಎತ್ತಿಹಿಡಿದ ಕ್ಷೇತ್ರದ ಆಡಳಿತ ಮಂಡಳಿ

    ಕಾಂಗ್ರೆಸ್‌ನ ಪಿ.ಆರ್. ರಮೇಶ್ ಮಾತನಾಡಿ, 800 ಎಕರೆ ಜಾಗ ಧರ್ಮರಾಯ ದೇವಾಲಯಕ್ಕೆ ಇತ್ತು. ಈಗ ಒಂದಿಂಚು ಜಾಗ ದೇವಾಲಯಕ್ಕೆ ಇಲ್ಲದ ಸ್ಥಿತಿ ನಿರ್ಮಾಣ ಆಗಿದೆ. ವ್ಯವಸ್ಥಿತವಾಗಿ ಈ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ. ಎಸಿ ಅವ್ರು ಸಚಿವರು ನಮ್ಮ ಜೇಬಿನಲ್ಲಿ ಇದ್ದಾರೆ ಅಂತಾರೆ.35 ಲಕ್ಷ ಸೆಕ್ಯುರಿಟಿ ಈ ಮನೆಗಳಿಗೆ ಇಟ್ಟಿದ್ದೇವೆ ಅಂತ ಇಲ್ಲಿನ ಮನೆಯವರು ಹೇಳ್ತಾರೆ. 216 ಜನ ಇಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಒತ್ತುವರಿ ತೆರವು ಮಾಡಬೇಕು ಅಂತ ಒತ್ತಾಯ ಮಾಡಿದರು.

    ಸಚಿವೆ ಶಶಿಕಲಾ ಜೊಲ್ಲೆ ಪರವಾಗಿ ಸಚಿವ ಸೋಮಣ್ಣ ಉತ್ತರ ನೀಡಿದರು. ಧರ್ಮರಾಯ ದೇವಾಲಯದ ಜಾಗ ಒತ್ತುವರಿ ಮಾಡಿದವರು ಯಾರು ಉದ್ದಾರ ಆಗಿಲ್ಲ. ಬಿಬಿಎಂಪಿ ಅದಕ್ಕೆ ಕುಂಟುತ್ತಾ ಸಾಗಿದೆ ಅಂತ ಉದಾಹರಣೆ ಕೊಟ್ಟರು.

    ಹಲಸೂರುನಲ್ಲಿ ಧರ್ಮರಾಯ ದೇವಾಲಯ 15 ಎಕರೆ 12 ಗುಂಟೆ ಜಾಗ ಇದೆ. ಇದ್ರಲ್ಲಿ 6 ಎಕರೆ ಜಾಗ ಒತ್ತುವರಿ ಆಗಿದೆ. 8 ಎಕರೆ ಖಾಲಿ ಜಾಗ ಹಾಗೇ ಇದೆ. 229 ಜನ ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿ ಆಗಿರೋ ಜಾಗ ತೆರವು ಮಾಡೋ ಕೆಲಸ ಸರ್ಕಾರ ಮಾಡುತ್ತೆ. ಯಾರೇ ದೊಡ್ಡವರು ಆದರು ಕ್ರಮ ಗ್ಯಾರಂಟಿ ಅಂತ ತಿಳಿಸಿದರು.

    ಸದ್ಯ ಇಲ್ಲಿನ ಜಮೀನು ಕಾಯೋಕೆ 24 ಗಂಟೆ ಸೆಕ್ಯುರಿಟಿ ಹಾಕಲಾಗಿದೆ. ಒಬ್ಬ ಗನ್ ಮ್ಯಾನ್ ಕೂಡಾ ಸ್ಥಳದಲ್ಲಿ ಹಾಕಲಾಗಿದೆ. ದೇವಾಲಯ ಜಮೀನು ಉಳಿಯಬೇಕು. ಇದಕ್ಕೆ ನಮ್ಮ ಸರ್ಕಾರ ಕ್ರಮ ತೆಗೆದುಕೊಳ್ಳುತ್ತೆ ಅಂತ ತಿಳಿಸಿದರು. ಮಿನಿಸ್ಟರ್ ಜೇಬಲ್ಲಿ ಇದ್ದಾರೆ ಅಂತ ಹೇಳಿದ ಎಸಿ ಮೇಲೆ FIR ಹಾಕಿಸ್ತೇನೆ. ಈಗ ಇವೆಲ್ಲ ಮಾತು ನಡೆಯಲ್ಲ ಅಂತ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

  • ಚಂದ್ರನಲ್ಲಿನ ಜಾಗವನ್ನು ಪ್ರೇಯಸಿಗೆ ಉಡುಗೊರೆ ನೀಡಿದ ಗುಜರಾತ್ ಉದ್ಯಮಿ!

    ಚಂದ್ರನಲ್ಲಿನ ಜಾಗವನ್ನು ಪ್ರೇಯಸಿಗೆ ಉಡುಗೊರೆ ನೀಡಿದ ಗುಜರಾತ್ ಉದ್ಯಮಿ!

    ಗಾಂಧಿನಗರ: ಒಬ್ಬರನ್ನೊಬ್ಬರು ಪ್ರೀತಿಸುವ ಜೋಡಿಗಳು ತಮ್ಮ ಪ್ರೀತಿಯನ್ನು ಸಾಬೀತು ಪಡಿಸಲು ಏನೆಲ್ಲಾ ಕಸರತ್ತು ಮಾಡಲ್ಲ? ಇದೀಗ ಗುಜರಾತ್ ಮೂಲದ ಉದ್ಯಮಿಯೊಬ್ಬ ತನ್ನ ಗೆಳತಿಗೆ ಬೇಕೆಂದಾಗ ಕೈಗೂ ಎಟುಕದ ಉಡುಗೊರೆ ನೀಡಿ ಭಾರೀ ಸುದ್ದಿಯಾಗಿದ್ದಾರೆ.

    ಗುಜರಾತ್‌ನ ವಡೋದರಾ ಮೂಲದ ಉದ್ಯಮಿ ಮಯೂರ್ ಪಟೇಲ್ ತನ್ನನ್ನು ಮದುವೆಯಾಗಲಿರುವ ಹುಡುಗಿಗೆ ಚಂದ್ರನಲ್ಲಿನ 1 ಎಕರೆ ಜಾಗವನ್ನು ಉಡುಗೊರೆ ನೀಡಿ ಹುಬ್ಬೇರಿಸುವಂತೆ ಮಾಡಿದ್ದಾನೆ.

    ಹಿಂದಿನಿಂದಲೂ ಪ್ರೇಮಿಗಳು ರಾತ್ರಿ ಹೊತ್ತು ಆಕಾಶದಲ್ಲಿ ಕಾಣಿಸಿಕೊಳ್ಳುವ ಚಂದ್ರ-ನಕ್ಷತ್ರಗಳನ್ನು ಮುಟ್ಟುವ, ಅದನ್ನು ಹಿಡಿದು ತರುವಂತಹ ಮಕ್ಕಳಂತೆ ಕನಸು ಕಾಣುತ್ತಾರೆ. ಆದರೆ ಈ ಉದ್ಯಮಿ ತನ್ನ ಗೆಳತಿಗೆ ಚಂದ್ರನಲ್ಲಿನ ಜಾಗವನ್ನೇ ಬರೆದುಕೊಟ್ಟು ಜನರಿಗೆ ಅಚ್ಚರಿ ಮೂಡಿಸಿದ್ದಾನೆ. ಇದನ್ನೂ ಓದಿ: ಕಾಶ್ಮೀರ್ ಫೈಲ್ಸ್ ಡೌನ್ಲೋಡಿಂಗ್ ಲಿಂಕ್ ಕ್ಲಿಕ್ ಮಾಡಿದ್ರೆ ಬ್ಯಾಂಕ್ ಖಾತೆಗೆ ಕನ್ನ

    ಭೂಮಿಯನ್ನು ಹೊರತುಪಡಿಸಿ ಬಾಹ್ಯ ಗ್ರಹಗಳಲ್ಲಿ ಒಡೆತನವನ್ನು ಸಾಧಿಸುವುದು ನಿಷೇಧಿಸಲಾಗಿದೆ. ದಿ ಔಟರ್ ಸ್ಪೇಸ್ ಟ್ರೀಟಿ ಆಫ್ 1967 ಎಂಬ ಅಂತಾರಾಷ್ಟ್ರೀಯ ಒಪ್ಪಂದ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಯಾವುದೇ ಆಕಾಶಕಾಯದಲ್ಲಿ ಹಕ್ಕು ಪಡೆಯುವುದನ್ನು ನಿಷೇಧಿಸಿದೆ. ಗುಜರಾತ್‌ನ ಉದ್ಯಮಿ ತನ್ನ ಗೆಳತಿಗೆ ಬರೆದುಕೊಟ್ಟಿರುವ ಚಂದ್ರನ ಮೇಲಿನ ಆಸ್ತಿಯನ್ನು ಕೇವಲ ಡಿಜಿಟಲ್ ರೂಪದ ಆಸ್ತಿ ಎಂದು ಮಾತ್ರವೇ ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಇದನ್ನೂ ಓದಿ: 2023ರಲ್ಲಿ ಬರಲಿದೆ ಭಾರತದ ಮೊದಲ RRTS ರೈಲು

    ಉದ್ಯಮಿ ಮಯೂರ್ ಪಟೇಲ್ ತನ್ನ ಗೆಳತಿ ಹೇಮಾಲಿಯೊಂದಿಗೆ ಫೆಬ್ರವರಿ 27ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 2 ವರ್ಷ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದ ಜೋಡಿಗಳು ನಿಶ್ಚಿತಾರ್ಥ ಮಾಡಿಕೊಂಡಿದ್ದು, ಶೀಘ್ರವೇ ಹಸೆಮಣೆಏರಲಿದ್ದಾರೆ.

  • ಆಸ್ತಿ ವಿಚಾರಕ್ಕೆ ತಂದೆಯ ಕತ್ತು ಹಿಸುಕಿ ಕೊಂದು ಬೆಂಕಿ ಹಚ್ಚಿದ ಪಾಪಿ ಮಗ

    ಆಸ್ತಿ ವಿಚಾರಕ್ಕೆ ತಂದೆಯ ಕತ್ತು ಹಿಸುಕಿ ಕೊಂದು ಬೆಂಕಿ ಹಚ್ಚಿದ ಪಾಪಿ ಮಗ

    ಲಕ್ನೋ: ಆಸ್ತಿ ವಿಚಾರಕ್ಕೆ ವೃದ್ಧ ತಂದೆಯ ಕತ್ತು ಹಿಸುಕಿ ಮಗನೇ ಹತ್ಯೆಗೈದು, ಶವವನ್ನು ಕಂಬಳಿಯಲ್ಲಿ ಸುತ್ತಿ ನಂತರ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಮಥುರಾದ ನರ್ಹೌಲಿಯಲ್ಲಿ ನಡೆದಿದೆ.

    ಮೃತ ದುರ್ದೈವಿಯನ್ನು ಅಮೃತ್ ಲಾಲ್ (55) ಮಾಸ್ಟರ್ ಮೇಸ್ತ್ರಿ ಎಂದು ಗುರುತಿಸಲಾಗಿದೆ. ಸುಮಾರು 10-12 ದಿನಗಳ ಹಿಂದೆ ಅಮೃತ್ ಲಾಲ್ ಅವರ ಪತ್ನಿ ಆಶಾದೇವಿ ಅವರು ತಂದೆ-ಮಗ ಇಬ್ಬರನ್ನು ಮನೆಯಲ್ಲಿ ಬಿಟ್ಟು ತಂದೆಯ ಮನೆಗೆ ಹೋಗಿದ್ದರು. ತಂದೆಯೊಂದಿಗೆ ಏಕಾಂಗಿಯಾಗಿದ್ದ ವಿನೀತ್ ಅಮೃತ್ ಲಾಲ್‍ಗೆ ಮನೆ ಮಾರಾಟ ಮಾಡುವಂತೆ ಒತ್ತಡ ಹೇರಲು ಆರಂಭಿಸಿದ್ದಾರೆ. ಇದಕ್ಕೆ ಅಮೃತ್ ಲಾಲ್ ಅವರು ನಿರಾಕರಿಸಿ ವಿನೀತ್‍ಗೆ ನಿಂದಿಸಿದ್ದಾರೆ. ಇದರಿಂದ ಕೋಪಗೊಂಡ ವಿನೀತ್ ತಂದೆಯ ಕತ್ತನ್ನು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಕಂಬಳಿಯಲ್ಲಿ ಸುತ್ತಿ ಸುಟ್ಟು ಹಾಕಿದ್ದಾನೆ. ಇದನ್ನೂ ಓದಿ: ಉಕ್ರೇನ್‍ನಿಂದ ಮರಳಿದ ವಿದ್ಯಾರ್ಥಿಗಳಿಗೆ ಸೀಟ್ ನೀಡಿ ಶುಲ್ಕವನ್ನು ಸರ್ಕಾರವೇ ಭರಿಸಲಿ: ದಿಗ್ವಿಜಯ್ ಸಿಂಗ್

    ಈ ಘಟನೆ ಕುರಿತಂತೆ ತನಿಖೆ ವೇಳೆ ಆಶಾದೇವಿ ಅವರು, ವಾಸಿಸುತ್ತಿದ್ದ ಮನೆಯನ್ನು ಮಾರಾಟ ಮಾಡಲು ವಿನೀತ್ ಬಯಸಿದ್ದ. ವಿನೀತ್ ಈಗಾಗಲೇ ತಮ್ಮ 100 ಚದರ ಮೀಟರ್‍ನಷ್ಟು ನಿವೇಶನವನ್ನು ಮಾರಾಟ ಮಾಡಿದ್ದಾನೆ. ಇದು ಕುಟುಂಬದಲ್ಲಿ ವಿವಾದಕ್ಕೆ ಕಾರಣವಾಗಿತ್ತು ಮತ್ತು ವಿನೀತ್ ಆಗಾಗ್ಗೆ ಮನೆಯನ್ನು ಮಾರಾಟ ಮಾಡಿ ತನಗೆ ಪಾಲು ನೀಡುವಂತೆ ಒತ್ತಾಯಿಸುತ್ತಿದ್ದ. ಅಲ್ಲದೇ ನಾಲ್ಕು ವರ್ಷಗಳ ಹಿಂದೆ ಕಿರಿಯ ಮಗ ನೆಹನಾ ಆತ್ಮಹತ್ಯೆ ಮಾಡಿಕೊಂಡಿದ್ದು ಸಹ ಕುಟುಂಬದಲ್ಲಿ ಕಲಹ ಉಂಟಾಗಲು ಕಾರಣವಾಗಿತ್ತು ಎಂದು ಪೊಲೀರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಗಟ್ಸ್ ಇಲ್ಲ ಅನ್ನೋರು ಮೊದಲು ಉಕ್ರೇನ್ ಗಡಿವರೆಗೆ ತಲುಪಿ ಧಮ್ ತೋರಿಸಬೇಕಿತ್ತು: ಸುಜಯ್

  • ಮೂರನೇ ಪತ್ನಿಯಿಂದ ಪತಿಯ ಕೊಲೆ – ಹೆಂಡತಿ ಸೇರಿ ಮೂವರು ಅರೆಸ್ಟ್

    ಮೂರನೇ ಪತ್ನಿಯಿಂದ ಪತಿಯ ಕೊಲೆ – ಹೆಂಡತಿ ಸೇರಿ ಮೂವರು ಅರೆಸ್ಟ್

    ಬೆಳಗಾವಿ: ಇಬ್ಬರು ಪತ್ನಿಯರನ್ನು ಬಿಟ್ಟು ಮೂರನೇಯವಳನ್ನು ಮದುವೆ ಆಗಿದ್ದ ವ್ಯಕ್ತಿ ಆಕೆಯಿಂದಲೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

    ತಾಲೂಕಿನ ಬಸೂರ್ತೆ ಗ್ರಾಮದ ನಿವಾಸಿ ಗಜಾನನ ನಾಯಕ್ ಕೊಲೆಯಾದ ವ್ಯಕ್ತಿ. ಹತ್ಯೆ ಪ್ರಕರಣ ಸಂಬಂಧ ಮೃತನ ಪತ್ನಿ ವಿದ್ಯಾ ಪಾಟೀಲ್, ಆಕೆಯ ಪುತ್ರ ಹೃತಿಕ್ ಹಾಗೂ ಸ್ನೇಹಿತ ಪರಶುರಾಮ ಗೋಂದಳಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಪ್ರಕರಣದ ಹಿನ್ನೆಲೆ: ಫೆ.26ರ ಮಧ್ಯರಾತ್ರಿ ಮೂವರು ಆರೋಪಿಗಳು ಗಜಾನನ ನಾಯ್ಕನನ್ನು ಕತ್ತು ಕೊಯ್ದು ಕೊಲೆಗೈದಿದ್ದಾರೆ. ಗಜಾನನ ಅವರು ಈ ಹಿಂದೆ ಎರಡು ಮದುವೆಯಾಗಿದ್ದರು. ಆದರೆ ಇಬ್ಬರೂ ಪತ್ನಿಯರೂ ಆತನನನ್ನು ಬಿಟ್ಟು ಹೋಗಿದ್ದರು. ಬಳಿಕ ಎರಡನೇ ಪತ್ನಿಯ ಮಗನೊಂದಿಗೆ ಗಜಾನನ ಬೆಳಗುಂದಿಯಲ್ಲಿ ಬೇಕರಿ ನಡೆಸಿ ಜೀವನ ಸಾಗಿಸುತ್ತಿದ್ದರು. ಈ ವೇಳೆ ವಿಧವೆ ವಿದ್ಯಾ ಪಾಟೀಲ್ ಜೊತೆಗೆ ರಿಜಿಸ್ಟರ್ ಮ್ಯಾರೇಜ್ ಕೂಡ ಆಗಿದ್ದರು. ಬಳಿಕ ಈಕೆ ತನ್ನ ಇಬ್ಬರು ಮಕ್ಕಳ ಜೊತೆ ಗಜಾನನ ಜೊತೆಗೆ ವಾಸವಿದ್ದಳು. ಅಲ್ಲದೇ ಗಜಾನನ ಸಾಲ ಮಾಡಿ ಪತ್ನಿಗೆ ಮನೆ ಕಟ್ಟಿಸಿ ಕೊಟ್ಟಿದ್ದರಂತೆ. ಕಳೆದ ಮೂರು ವರ್ಷಗಳ ಹಿಂದೆ ವ್ಯವಹಾರದಲ್ಲಿ ನಷ್ಟವಾಗಿ ಬೇಕರಿ ಬಂದ್ ಮಾಡಿದ್ದರು.

    ಆರ್ಥಿಕ ನಷ್ಟ ಹಿನ್ನೆಲೆ ಮನೆ ಮಾರಾಟ ಮಾಡಲು ಗಜಾನನ ವಿದ್ಯಾ ಪಾಟೀಲ್‍ಗೆ ಒತ್ತಾಯಿಸುತ್ತಿದ್ದರಂತೆ. ಇಲ್ಲವಾದರೆ ತನ್ನ ಜೊತೆ ಮದುವೆಯಾದ ಬಗ್ಗೆ ಎಲ್ಲರಿಗೂ ತಿಳಿಸುವುದಾಗಿ ಬೆದರಿಕೆ ಹಾಕುತ್ತಿದ್ದರಂತೆ. ಹೀಗಾಗಿ ಗಜಾನನ ನಾಯಕ್ ಹತ್ಯೆಗೆ ವಿದ್ಯಾ ಪಾಟೀಲ್ ಸಂಚು ರೂಪಿಸಿದ್ದಳು ಎನ್ನಲಾಗುತ್ತಿದೆ.  ಇದನ್ನೂ ಓದಿ: ಶೌರ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಸೇನಾಧಿಕಾರಿಗೆ ಭರ್ಜರಿ ಸ್ವಾಗತ

    ಫೆ.26ರ ರಾತ್ರಿ ಮನೆಗೆ ಬರುತ್ತೇನೆ. ನಿನ್ನ ಮಗನನ್ನು ಊರಿಗೆ ಕಳುಹಿಸು ಎಂದು ವಿದ್ಯಾ ಗಜಾನನ ಅವರಿಗೆ ಕರೆ ಮಾಡಿ ತಿಳಿಸಿದ್ದಾಳೆ. ಅದರಂತೆ ಗಜಾನನ ಅವರು ಮಗನನ್ನು ಬಸೂರ್ತೆ ಗ್ರಾಮಕ್ಕೆ ಬಿಟ್ಟು ಬಂದಿದ್ದರು. ಅಂದು (ಫೆ.26) ರಾತ್ರಿ ಗಜಾನನ ನಾಯಕ್ ಮನೆಗೆ ಬಂದಿದ್ದ ವಿದ್ಯಾ ಪಾಟೀಲ್ ಪತಿಗೆ ಕಂಠಪೂರ್ತಿ ಮದ್ಯಪಾನ ಮಾಡಿಸಿದ್ದಾಳೆ.  ಇದನ್ನೂ ಓದಿ: ರಷ್ಯಾ ಯುದ್ಧ ಇಡೀ ಯೂರೋಪ್‌ ಭದ್ರತೆಗೆ ಪೆಟ್ಟು ನೀಡಿದೆ: ಬ್ರಿಟಿಷ್‌ ಪ್ರಧಾನಿ ಕಳವಳ

    ಬಳಿಕ ಪುತ್ರ ಹೃತಿಕ್ ತನ್ನ ಸ್ನೇಹಿತ ಪರಶುರಾಮ ಗೋಂದಳಿ ಜೊತೆಗೆ ಗಜಾನನ ಮನೆಗೆ ಮಧ್ಯರಾತ್ರಿ ಬಂದಿದ್ದಾನೆ. ಈ ವೇಳೆ ಹರಿತವಾದ ಆಯುಧದಿಂದ ಕತ್ತು ಸೀಳಿ ಗಜಾನನ ನಾಯ್ಕ್ ಹತ್ಯೆ ಮಾಡಿ, ಆತನ ಡೈರಿ, ಮೊಬೈಲ್ ಫೋನ್ ಜತೆ ಮೂವರು ಪರಾರಿಯಾಗಿದ್ದರು. ಮಾರನೇ ದಿನ ಗಜಾನನ ಮಗ ಅವಧೂತ್ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿತ್ತು. ವಿದ್ಯಾ ಪಾಟೀಲ್ ಮೇಲೆ ಅವಧೂತ್ ಸಂಶಯ ವ್ಯಕ್ತಪಡಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

  • ಆಸ್ತಿಗಾಗಿ ತಾಯಿಯ ಮೇಲೆ ಹಲ್ಲೆ ಮಾಡಿದ ಮಗ

    ಆಸ್ತಿಗಾಗಿ ತಾಯಿಯ ಮೇಲೆ ಹಲ್ಲೆ ಮಾಡಿದ ಮಗ

    ಅಮರಾವತಿ: ವ್ಯಕ್ತಿಯೊಬ್ಬ ತನ್ನ ತಾಯಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಈ ಘಟನೆ ಸದ್ಯ ಭಾರೀ ವೈರಲ್ ಆಗುತ್ತಿದೆ.

    ನಾಗಮಣಿ ಹಲ್ಲೆಗೊಳಗಾದ ಮಹಿಳೆ ಹಾಗೂ ಶೇಷು ಆರೋಪಿ. ಆಂಧ್ರಪ್ರದೇಶದ ಗುಂಟುರು ಜಿಲ್ಲೆಯ ತಾಡಪಲ್ಲಿಯ ಬ್ರಹ್ಮಾನಂದಪುರಂನಲ್ಲಿ ಈ ಘಟನೆ ನಡೆದಿದೆ. ವರ್ಷಗಳ ಹಿಂದೆ ಅಂದಿನ ಆಂಧ್ರ ಸರ್ಕಾರ ನಾಗಮಣಿ ಅವರ ಪತಿ ವೆಂಕಟೇಶ್ವರರಾವ್ ಅವರಿಗೆ ಭೂಮಿ ಮಂಜೂರು ಮಾಡಿತ್ತು. ಕಷ್ಟಪಟ್ಟು ಅವರು ಮನೆ ಕಟ್ಟಿದ್ದರು. ಆದರೆ ನಾಗಮಣಿ ಅವರ ಪತಿ ಮೂರು ವರ್ಷಗಳ ಹಿಂದೆ ನಿಧನರಾದರು. ಈ ದಂಪತಿಗೆ ಮಗ ಹಾಗೂ ಮಗಳು ಇದ್ದಾರೆ.

    ತಂದೆಯ ನಿಧನದ ನಂತರ ಬೇರೆ ಊರಿನಲ್ಲಿ ಕೆಲಸ ಮಾಡುತ್ತಿದ್ದ ಶೇಷು ಪತ್ನಿಯೊಂದಿಗೆ ತನ್ನ ಗ್ರಾಮಕ್ಕೆ ಬಂದು ವಾಸಿಸತೊಡಗಿನು. ಈ ಖುಷಿ ನಾಗಮಣಿಗೆ ಹೆಚ್ಚು ದಿನಗಳ ಕಾಲ ಉಳಿಯಲಿಲ್ಲ. ಅವಳಿಗೆ ಶೇಷು ದಿನನಿತ್ಯ ಆಸ್ತಿಗಾಗಿ ಕಿರುಕುಳ ನೀಡುತ್ತಿದ್ದ. ಜೊತೆ ತಾಯಿಯ ಮೇಲೆ ಅಮಾನುಷವಾಗಿ ವರ್ತಿಸುತ್ತಿದ್ದ.  ಇದನ್ನೂ ಓದಿ: ಭದ್ರಾವತಿಯಲ್ಲಿ ಕಮಲ ಅರಳಿಸೋಕೆ ಎಲ್ಲರೂ ದುಡಿಯೋಣ : ನಾರಾಯಣಗೌಡ

    POLICE JEEP

    ಇದನ್ನು ಗಮನಿಸಿದ ಸ್ಥಳೀಯರು ಈ ಹಿಂದೆ ಶೇಷುಗೆ ಛೀಮಾರಿ ಹಾಕಿದರೂ ವರ್ತನೆ ಬದಲಿಸಿಕೊಳ್ಳಲಿಲ್ಲ. ಇರಿಂದಾಗಿ ಸ್ಥಳೀಯರು ಪೊಲೀಸರಿಗೆ ಆತನ ವಿರುದ್ಧ ತಾಯಿಗೆ ಹಲ್ಲೆ ಮಾಡುತ್ತಿರುವ ಮಾಹಿತಿ ನೀಡಿದ್ದಾರೆ. ಇದರ ಆಧಾರದ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಶೇಷುವನ್ನು ವಶಕ್ಕೆ ಪಡೆದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ಸ್ಟಾರ್ ಕಪಲ್

  • 30 ಗುಂಟೆ ಜಮೀನು ಮಾರಾಟ – 2 ಗುಂಪುಗಳ ನಡುವೆ ಮಾರಾಮಾರಿ

    30 ಗುಂಟೆ ಜಮೀನು ಮಾರಾಟ – 2 ಗುಂಪುಗಳ ನಡುವೆ ಮಾರಾಮಾರಿ

    ರಾಯಚೂರು: 30 ಗುಂಟೆ ಜಮೀನು ಮಾರಾಟದ ವಿಚಾರವಾಗಿ 2 ಗುಂಪುಗಳು ಮನಬಂದಂತೆ ಹೊಡೆದಾಡಿಕೊಂಡ ಘಟನೆ ಜಿಲ್ಲೆಯ ಸಿಂಧನೂರು ತಾಲೂಕು ವಿರುಪಾಪೂರ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಶರಣಪ್ಪ ಮತ್ತು ನಿರುಪಾದಿ ಕುಟುಂಬದ ನಡುವೆ ಈ ಘರ್ಷಣೆ ನಡೆದಿದೆ. ಶರಣಪ್ಪ ಎಂಬಾತ ನಿರುಪಾದಿಗೆ 30 ಗುಂಟೆ ಜಮೀನು ಮಾರಾಟದ ಬಗ್ಗೆ ಒಪ್ಪಂದ ಆಗಿತ್ತು. ಈ ಹಿನ್ನೆಲೆ ನಿರುಪಾದಿ ಒಪ್ಪಂದದಂತೆ ಮುಂಗಡವಾಗಿ ಶರಣಪ್ಪಗೆ 3 ಲಕ್ಷ ರೂ. ನೀಡಿದ್ದಾನೆ. ಹಣ ಪಡೆದ ಶರಣಪ್ಪಗೆ ಜಮೀನು ಮಾರಾಟ ಮಾಡದಂತೆ ಮನೆಯಲ್ಲಿ ತಕರಾರು ಮಾಡಿದ್ದರು. ಇದನ್ನೂ ಓದಿ: ಪತ್ನಿ ಬಿಟ್ಟು ಪ್ರೇಯಸಿಯನ್ನು ಮದುವೆಯಾಗಲು ಹೊರಟಿದ್ದ ಭೂಪ – ಕುಟುಂಬಸ್ಥರಿಂದಲೇ ಬಿತ್ತು ಗೂಸಾ

    BRIBE

    ಶರಣಪ್ಪ ಮನೆಯಲ್ಲಿ ತಕರಾರು ಮಾಡಿದ್ದರಿಂದ ನಿರುಪಾದಿಗೆ ಹಣ ವಾಪಸ್ ನೀಡಿದ್ದಾರೆ. ಈ ವೇಳೆ ಹಣ ವಾಪಸ್ ಪಡೆದ ನಿರುಪಾದಿ ಏಕಾಏಕಿ ಗುಂಪು ಕಟ್ಟಿಕೊಂಡು ಬಂದು ಜಗಳ ತೆಗೆದಿದ್ದಾನೆ. ಜಗಳವು ತಾರಕಕ್ಕೇರಿದ್ದು 2 ಗುಂಪುಗಳು ರಾಡು, ಕಟ್ಟಿಗೆಯಿಂದ ಮನಬಂದಂತೆ ಹೊಡೆದಾಡಿಕೊಂಡಿದ್ದಾರೆ. ಹೊಡೆದಾಟದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ಜಿಂಕೆ ಮಾಂಸ ಮಾರಲು ಯತ್ನಿಸಿದ ಆರೋಪಿಗಳು ಅರೆಸ್ಟ್

    ಶರಣಪ್ಪ ಕಡೆಯವರ ಮೇಲೆ ನಿರುಪಾದಿ ಕಡೆಯವರು ಹಲ್ಲೆ ಮಾಡಿರುವ ಆರೋಪ ವ್ಯಕ್ತವಾಗಿದೆ. ಗಾಯಾಳುಗಳಾದ ಗೋವಿಂದಪ್ಪ, ಶಿವರಾಜ್, ಅಂಬರೀಶ್ ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

  • ಆಸ್ತಿ ವಿಚಾರಕ್ಕೆ ನಡು ಬೀದಿಯಲ್ಲಿ ಸಂಬಂಧಿಕರ ಮಾರಾಮಾರಿ

    ಆಸ್ತಿ ವಿಚಾರಕ್ಕೆ ನಡು ಬೀದಿಯಲ್ಲಿ ಸಂಬಂಧಿಕರ ಮಾರಾಮಾರಿ

    ನವದೆಹಲಿ: ಆಸ್ತಿ ವಿಚಾರಕ್ಕೆ ಸಂಬಂಧಿಕರು ನಡು ಬೀದಿಯಲ್ಲಿ ಮಾರಾಮಾರಿ ನಡೆಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಪೊಲೀಸರು ಆರೋಪಿಗಳನ್ನು ಗುರುತಿಸಿ, ಅವರಲ್ಲಿ ಒಬ್ಬನನ್ನು ಬಂಧಿಸಿದ್ದಾರೆ.

    ನಡು ಬೀದಿಯಲ್ಲಿ ಹಗಲು ಹೊತ್ತಿನಲ್ಲಿಯೇ ದೆಹಲಿಯ ಉಸ್ಮಾನ್‍ಪುರ ಪ್ರದೇಶದಲ್ಲಿ ಜಗಳ ಆಡುತ್ತಿದ್ದವರನ್ನು ಪೊಲೀಸರು ಬಿಡಿಸಿ ಇದೀಗ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಪಬ್ಲಿಕ್‌ ಟಿವಿ ಜ್ಞಾನದೀವಿಗೆ 2ನೇ ಆವೃತ್ತಿಗೆ ಬೊಮ್ಮಾಯಿ, ಸಿದ್ದರಾಮಯ್ಯ ಚಾಲನೆ

    ವೀಡಿಯೋದಲ್ಲಿ ನೆಲದ ಮೇಲೆ ಇರುವ ವ್ಯಕ್ತಿಯನ್ನು ತುಂಡಾಗಿರುವ ಮರದ ಕೋಲಿನಿಂದ ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ವೇಳೆ ವಯಸ್ಸಾದ ಮಹಿಳೆಯೊಬ್ಬಳು ವ್ಯಕ್ತಿಯನ್ನು ಹೊಡೆಯದಂತೆ ಮನವಿ ಮಾಡುತ್ತಿರುವುದನ್ನು ವೀಡಿಯೋದಲ್ಲಿ ನೋಡಬಹುದಾಗಿದೆ.

    ವ್ಯಕ್ತಿ ಗಾಯಗೊಂಡಿದ್ದರೂ, ಎರಡು ಕಡೆಯ ಸಂಬಂಧಿಕರು ಪರಸ್ಪರ ಕಿತ್ತಾಡಿಕೊಳ್ಳುತ್ತಿದ್ದರೆ, ಜನ ಬಾಲ್ಕನಿಯಿಂದ ನೋಡುತ್ತಿರುತ್ತಾರೆ. ಈ ಜಗಳ ಶ್ಯಾಮವೀರ್ ಮತ್ತು ಜಗತ್ ಅವರ ಮಕ್ಕಳ ನಡುವೆ ನಡೆದಿದೆ ಎಂದು ಪೊಲೀಸರಿಗೆ ತನಿಖೆ ವೇಳೆ ತಿಳಿಸಿದ್ದಾರೆ. ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ ಮೆರೆದ ವಧು-ಕಣ್ಣು, ಹೃದಯ, ಕಿಡ್ನಿ ದಾನ

    ಆಸ್ತಿ ವಿವಾದಕ್ಕೆ ಎರಡು ಮನೆಯವರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಈ ಹಿಂದೆ ಇಬ್ಬರು ಪರಸ್ಪರ ಆಸ್ತಿಗಾಗಿ ಪ್ರಕರಣ ದಾಖಲಿಸಿದ್ದಾರೆ. ಆದರೆ ಇಂದು ಜಗತ್ ಮತ್ತು ಇತರರು ಶ್ಯಾಮವೀರ್ ಮತ್ತು ಆತನ ಸಂಬಂಧಿಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಹೇಳಿಕೆ ಹೇಳಿದ್ದಾರೆ.

  • ಆಸ್ತಿಗಾಗಿ ಬದುಕಿದ್ದ ಅಜ್ಜಿಯನ್ನು ದಾಖಲೆಗಳಲ್ಲಿ ಸಾಯಿಸಿದ ಸಂಬಂಧಿಕರು – ಡೆತ್ ಸರ್ಟಿಫಿಕೇಟ್ ಕೊಟ್ಟ ಅಧಿಕಾರಿ!

    ಆಸ್ತಿಗಾಗಿ ಬದುಕಿದ್ದ ಅಜ್ಜಿಯನ್ನು ದಾಖಲೆಗಳಲ್ಲಿ ಸಾಯಿಸಿದ ಸಂಬಂಧಿಕರು – ಡೆತ್ ಸರ್ಟಿಫಿಕೇಟ್ ಕೊಟ್ಟ ಅಧಿಕಾರಿ!

    ಚಿಕ್ಕಮಗಳೂರು: ಒಂದು ಎಕರೆ ಹದಿನಾರು ಗುಂಟೆ ಜಮೀನಿಗಾಗಿ ಬದುಕಿರುವ ಅಜ್ಜಿಯನ್ನು ಸಂಬಂಧಿಕರೇ ದಾಖಲೆಗಳಲ್ಲಿ ಸಾಯಿಸಿದ್ದು, ಇದಕ್ಕೆ ಅಧಿಕಾರಿಗಳು ಕೈಜೋಡಿಸಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಕೊಪ್ಪ ಗ್ರಾಮದಲ್ಲಿ ನಡೆದಿದೆ.

    76 ವರ್ಷದ ಸಾರಮ್ಮ ದೈಹಿಕವಾಗಿ ಜೀವಂತವಾಗಿದ್ದರೂ ಸಂಬಂಧಿಕರು ಹಾಗೂ ಅಧಿಕಾರಿಗಳ ಎಡವಟ್ಟಿನಿಂದ ದಾಖಲೆಗಳಲ್ಲಿ ಸತ್ತ ನತದೃಷ್ಟ ಅಜ್ಜಿ. ಸಾರಮ್ಮರಿಗೆ ಬಾಳೆಕೊಪ್ಪ ಗ್ರಾಮದ ಸರ್ವೇ ನಂಬರ್ 26ರಲ್ಲಿ ಒಂದು ಎಕರೆ 16 ಗುಂಟೆ ಜಮೀನಿದೆ. ಅದರಲ್ಲಿ ರಬ್ಬರ್ ಹಾಗೂ ಬಾಳೆಗಿಡಗಳನ್ನು ಬೆಳೆದಿದ್ದರು. ಕೊರೊನಾ ಪಾಸಿಟಿವ್ ಬಂದಿದ್ದರಿಂದ ಜಮೀನನ್ನು ಸಂಬಂಧಿಕರಿಗೆ ಉಳುಮೆ ಮಾಡಲು ಹೇಳಿ ಮಗಳ ಮನೆಗೆ ಹೋಗಿದ್ದರು. ಅಜ್ಜಿ ಅತ್ತ ಹೋಗುತ್ತಿದ್ದಂತೆ ಸಂಬಂಧಿಕರು ನಕಲಿ ದಾಖಲೆ ಸೃಷ್ಟಿಸಿ ಅಜ್ಜಿಯ ಜಮೀನನ್ನು ಕಬಳಿಸಲು ಯತ್ನಿಸಿದ್ದಾರೆ. ಇದನ್ನೂ ಓದಿ: ಉಡುಪಿ, ಮಂಗಳೂರನ್ನು ತಾಲಿಬಾನ್ ಮಾಡಲು ಬಿಡಲ್ಲ – ಮೋದಿ ವರ್ಚಸ್ಸಿಗೆ ಕಳಂಕ ತರಲು ಕಾಂಗ್ರೆಸ್ ಯತ್ನ

    ಅಧಿಕಾರಿಗಳು ಕೂಡ ಮರಣ ಪ್ರಮಾಣ ಪತ್ರ ನೀಡಿದ್ದಾರೆ. ವಂಶವೃಕ್ಷ ಕೂಡ ಕೊಟ್ಟಿದ್ದಾರೆ. ಮಗಳ ಮನೆಯಿಂದ ಬಂದ ಸಾರಮ್ಮ ನ್ಯಾಯಬೆಲೆ ಅಂಗಡಿಗೆ ಪಡಿತರ ತರಲು ಹೋದಾಗ ನೀವು ಸತ್ತಿದ್ದೀರಾ, ನಿಮ್ಮ ರೇಷನ್ ಕಾರ್ಡ್ ಸ್ಥಗಿತಗೊಂಡಿದೆ ಎಂದು ಹೇಳಿದ್ದಾರೆ. ಸಾರಮ್ಮ ತಾಲೂಕು ಕಚೇರಿಗೆ ಬಂದು ವಿಚಾರಿಸಿದಾಗ ಪ್ರಕರಣ ಬಯಲಿಗೆ ಬಂದಿದೆ. ವೃದ್ಧೆ ಸಂಬಂಧಿ ಬಾಬು ಹಾಗೂ ಶ್ರೀಜಾ ನಕಲಿ ದಾಖಲೆ ಸೃಷ್ಟಿಸಿ ಪೌತಿ ಖಾತೆಗೂ ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದಾರೆ. ನಕಲಿ ದಾಖಲೆ ಸೃಷ್ಟಿಸುವಾಗ ಪ್ರಕರಣ ಗ್ರಾಮ ಲೆಕ್ಕಾಧಿಕಾರಿ ಬಳಿಯೂ ಹೋಗಿತ್ತು. ಗ್ರಾಮ ಲೆಕ್ಕಾಧಿಕಾರಿ, ಅಜ್ಜಿ ಬದುಕಿರುವಾಗಲೇ ಯಾಕೆ ಈ ರೀತಿ ದಾಖಲೆ ತಂದಿದ್ದೀರಾ? ಎಂದು ಎಚ್ಚರಿಕೆ ನೀಡಿ, ಸಹಿ ಮಾಡದೆ ಕಳುಹಿಸಿದ್ದರು. ಸಾರಮ್ಮ ನಾನು ಕೂಲಿ ಕೆಲಸ ಮಾಡಿಕೊಂಡು ಬದುಕುತ್ತಿದ್ದೇನೆ. ದಯಮಾಡಿ ಅಧಿಕಾರಿಗಳು ನನಗೆ ನ್ಯಾಯ ಕೊಡಿಸಬೇಕು, ತಪ್ಪಿಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಹಿಜಬ್ ಪರ ಸಿದ್ದರಾಮಯ್ಯ ಬಣದ ಬ್ಯಾಟಿಂಗ್ – ಹೆಣ್ಮಕ್ಕಳ ವಿದ್ಯಾಭ್ಯಾಸ ತಡೆಗೆ ಹುನ್ನಾರದ ಆರೋಪ

    ಎನ್.ಆರ್.ಪುರ ತಹಶೀಲ್ದಾರ್ ಗೀತಾ, ಈ ಕೇಸ್ ನನ್ನ ಗಮನಕ್ಕೆ ಬಂದಿದೆ. ನೊಂದ ವೃದ್ಧೆಗೆ ನ್ಯಾಯ ಕೊಡಿಸುವ ಭರವಸೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.

  • ಅಳಿಯನ ಆಸ್ತಿ ಮೇಲೆ ಅತ್ತೆಯ ಕಣ್ಣು – ಮನನೊಂದು ಅಳಿಯ ಆತ್ಮಹತ್ಯೆ

    ಅಳಿಯನ ಆಸ್ತಿ ಮೇಲೆ ಅತ್ತೆಯ ಕಣ್ಣು – ಮನನೊಂದು ಅಳಿಯ ಆತ್ಮಹತ್ಯೆ

    ಬೆಂಗಳೂರು/ನೆಲಮಂಗಲ: ಅಳಿಯನ ಆಸ್ತಿಯನ್ನು ಕಬಳಿಸುವ ದುರುದ್ದೇಶದಿಂದ ಸಂಚು ಹಾಕಿದ ಅತ್ತೆ ಪ್ರತಿನಿತ್ಯ ತನ್ನ ಮಗಳ ಪತಿಯನ್ನು ಮನೆಯಲ್ಲಿ ಕೂಡಿ ಹಾಕಿ ಟಾರ್ಚರ್ ಕೊಟ್ಟ ಹಿನ್ನೆಲೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಪೊಲೀಸ್ ಠಾಣಾ ವ್ಯಾಪ್ತಿಯ ತೋಟನಹಳ್ಳಿಯಲ್ಲಿ ನಡೆದಿದೆ.

    Nela mangala

    ಮೃತ ದುರ್ದೈವಿಯನ್ನು ಆನಂದ್ ಕುಮಾರ್ ಎಂದು ಗುರುತಿಸಲಾಗಿದ್ದು, ಇನ್ನೂ ಅತ್ತೆಯ ಜೊತೆಗೆ ತನ್ನ ಪತ್ನಿ ನೀಲಮ್ಮ ಕೂಡ ಕೈ ಜೋಡಿಸಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಅತ್ತೆ ಗಂಗಮ್ಮ, ಬಾಮೈದ ಗಂಗರಾಜು ಹೆಸರು ಪ್ರಸ್ತಾಪಿಸಿ ಮನನೊಂದು ಆನಂದ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಹಿಜಬ್ ನೆಪವೊಡ್ಡಿ ಮುಸ್ಲಿಂ ಹೆಣ್ಮಕ್ಕಳ ಶಿಕ್ಷಣಕ್ಕೆ ತಡೆ ಒಡ್ಡಲಾಗ್ತಿದೆ: ಮುಫ್ತಿ

    Nela mangala

    ಆತ್ಮಹತ್ಯೆಗೂ ಮೊದಲು ತನ್ನ ಮೊಬೈಲ್‍ನ ವೀಡಿಯೋದಲ್ಲಿ ತನಗೆ ನೀಡಿದ್ದ ಹಿಂಸೆ ಬಗ್ಗೆ ಮಾತನಾಡಿರುವ ಮೃತ ವ್ಯಕ್ತಿ ಜೊತೆಗೆ ತನ್ನ ಆಸ್ತಿಯನ್ನು ತಮ್ಮನ ಮಕ್ಕಳಿಗೆ ನೀಡಬೇಕು ಎಂದು ಡೆತ್ ನೋಟ್‍ನಲ್ಲಿ ಉಲ್ಲೇಖ ಮಾಡಿದ್ದಾರೆ ಮತ್ತು ಯಾವುದೇ ಕಾರಣಕ್ಕೂ ಆಸ್ತಿ ಹೆಂಡತಿ ಹಾಗೂ ಅತ್ತೆಗೆ ಸಿಗದಂತೆ ಕಾನೂನು ರೀತಿಯಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ. ಈ ಸಂಬಂಧ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

  • 38 ಕೋಟಿ ಮೌಲ್ಯದ ಆಸ್ತಿಯನ್ನು ಶಿಲ್ಪಾ ಶೆಟ್ಟಿಗೆ ವರ್ಗಾಯಿಸಿದ ರಾಜ್ ಕುಂದ್ರಾ

    38 ಕೋಟಿ ಮೌಲ್ಯದ ಆಸ್ತಿಯನ್ನು ಶಿಲ್ಪಾ ಶೆಟ್ಟಿಗೆ ವರ್ಗಾಯಿಸಿದ ರಾಜ್ ಕುಂದ್ರಾ

    ಮುಂಬೈ: ಉದ್ಯಮಿ ರಾಜ್ ಕುಂದ್ರಾ 38.5 ಕೋಟಿ ಮೌಲ್ಯದ 5 ಫ್ಲಾಟ್‌ಗಳನ್ನು ತಮ್ಮ ಪತ್ನಿ ಶಿಲ್ಪಾ ಶೆಟ್ಟಿ ಹೆಸರಿಗೆ ವರ್ಗಾಯಿಸಿದ್ದಾರೆ.

    ಕಳೆದ ವರ್ಷ ಉದ್ಯಮಿ ರಾಜ್ ಕುಂದ್ರಾ ಅಶ್ಲೀಲ ಚಿತ್ರ ನಿರ್ಮಾಣ ಮಾಡಿದ ಆರೋಪದ ಮೇಲೆ ಬಂಧಿಯಾಗಿದ್ದರು. ಈ ಸಂದರ್ಭದಲ್ಲಿ ನಟಿ ಶಿಲ್ಪಾ ಶೆಟ್ಟಿ ತನ್ನ ಕಷ್ಟ ಕಾಲದಲ್ಲಿ ಗೌಪ್ಯತೆಯನ್ನು ಗೌರವಿಸುವಂತೆ ಜನರಲ್ಲಿ ಕೇಳಿಕೊಂಡಿದ್ದರು. ಇದೀಗ 6 ತಿಂಗಳುಗಳ ಬಳಿಕ ರಾಜ್ ಕುಂದ್ರಾ ತಮ್ಮ 38.5 ಕೋಟಿ ಮೌಲ್ಯದ ಆಸ್ತಿಯನ್ನು ಪತ್ನಿ ಹೆಸರಿಗೆ ವರ್ಗಾಯಿಸಿದ್ದಾರೆ. ಇದನ್ನೂ ಓದಿ: ನಾನು ರಾಖಿಯನ್ನು ಈ ಕಾರಣಕ್ಕೆ ಇಷ್ಟಪಡುತ್ತೇನೆ- ಹಾಡಿ ಹೊಗಳಿದ ರಾಜ್ ಕುಂದ್ರಾ

    Squarefeatindia.com (ಸ್ಕ್ವಾರ್‌ಫೀಟ್ ಡಾಟ್ ಕಾಂ)ನ ನೋಂದಣಿ ದಾಖಲೆಗಳ ಪ್ರಕಾರ ಉದ್ಯಮಿ ರಾಜ್ ಕುಂದ್ರಾ ತಮ್ಮ ಪತ್ನಿಯ ಹೆಸರಿಗೆ 38.5 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಬರೆದಿರುವುದಾಗಿ ಉಲ್ಲೇಖವಾಗಿದೆ. ಜುಹುನಲ್ಲಿರುವ ಓಷನ್ ವ್ಯೂ ಹೆಸರಿನ ಕಟ್ಟಡದಲ್ಲಿನ ಒಟ್ಟು 5 ಫ್ಲಾಟ್‌ಗಳನ್ನು ಪತ್ನಿಯ ಹೆಸರಿಗೆ ವರ್ಗಾಯಿಸಿದ್ದಾರೆ ಎಂದು Squarefeatindia.com ನ ಸಂಸ್ಥಾಪಕ ವರುಣ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ:  ‘ನಿಮ್ಮ ಶಾಯರಿ ಏಕೆ ಕೆಟ್ಟದಾಗಿದೆ’ – ಟ್ರೋಲಿಗರ ಪ್ರಶ್ನೆಗೆ ಸಾರಾ ಖಡಕ್ ಉತ್ತರ

    ಸದ್ಯ ಹಲವು ಸಿನಿಮಾ ಹಾಗೂ ರಿಯಾಲಿಟಿ ಶೋ ಗಳಲ್ಲಿ ಬ್ಯೂಸಿಯಾಗಿರುವ ಶಿಲ್ಪಾ ಹೊಸದಾಗಿ 38.5 ಕೋಟಿ ಮೌಲ್ಯದ ಆಸ್ತಿಗೆ ಒಡತಿಯಾಗಿದ್ದಾರೆ.