ಕಿಡ್ನಾಪ್ ಮಾಡಿ ಕಾರಿನಲ್ಲಿ 22 ಬಾರಿ ಚಾಕುವಿನಿಂದ ಕೊಲೆ ಮಾಡಿ ಬೆಂಕಿ ಹಾಕಿ ಸುಟ್ಟಿದ್ದಾರೆ. ಈ ಸಂಬಂಧ ಬನ್ನೇರುಘಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಚನ್ನಿಗರಾಯಪ್ಪ ಪತ್ನಿ ಯಶೋಧ, ಮಗ ನಿಖಿಲ್, ಮಂಜುನಾಥ್ ಹಾಗೂ ವಿಶ್ವಾಸ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ- ನೀರು ಅಂತ ಎಣ್ಣೆ ಕಾಯಿಸಿ ಪತ್ನಿ ಮೇಲೆ ಎರಚಿದ್ದವ ಅರೆಸ್ಟ್
ರಾಜಸ್ಥಾನ: ಮಾನವರು ಆಸ್ತಿ ಮಾಡುವುದನ್ನು ನಾವು ಕೇಳಿದ್ದೇವೆ, ಆದರೆ ಪ್ರಾಣಿ ಪಕ್ಷಿಗಳ ಹೆಸರಿನಲ್ಲೂ ಆಸ್ತಿ ಮಾಡಿರುವುದನ್ನು ಕೇಳಿದ್ದೀರ. ರಾಜಸ್ಥಾನದ ನಾಗ್ಪುರ ಜಿಲ್ಲೆಯ ಜಸನಗರ್ ಊರಿನಲ್ಲಿರುವ ಪಾರಿವಾಳಗಳ ಹೆಸರಿನಲ್ಲಿ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಇದೆ.
40 ವರ್ಷಗಳ ಹಿಂದೆ ಗುರು ಮುರುಧರ್ ಕೇಸರಿ ಎನ್ನುವ ಗುರುವಿನಿಂದ ಪ್ರೇರಣೆ ಪಡೆದ ಮಾಜಿ ಸರಪಂಚ್ ರಾಮದಿನ್ ಚೋಟಿಯಾ ಕಬುವಾನ್ ಎನ್ನುವ ಟ್ರಸ್ಟ್ ಪಾರಿವಾಳಗಳ ರಕ್ಷಣೆಗಾಗಿ ಸ್ಥಾಪಿಸಿದರು. ಈ ಮೂಲಕ ಪಾರಿವಾಗಳಿಗೆ ಪ್ರತಿದಿನ ನೀರು ಮತ್ತು ಆಹಾರ ಧಾನ್ಯಗಳ ಪೂರೈಕೆ ಮಾಡಲಾಗಿತ್ತದೆ. ಟ್ರಸ್ಟ್ ಮೂಲಕ 27 ಅಂಗಡಿಗಳನ್ನು ನಿರ್ಮಿಸಿ ಅದರಿಂದ ಬಂದ ಆದಾಯದ ಮೂಲಕ ಪಾರಿವಾಳಗಳಿಗೆ 3 ಚೀಲ ಆಹಾರ ಧಾನ್ಯಗಳನ್ನು ನೀಡಲಾಗುತ್ತದೆ. ಇದನ್ನೂ ಓದಿ: ಹಿಮದಿಂದ ಆವೃತವಾದ ಫೋಟೋ ಶೇರ್ ಮಾಡಿ ‘ಭೂಮಿಯ ಮೇಲಿನ ಸ್ವರ್ಗ’ ಎಂದ ರೈಲ್ವೇ ಸಚಿವ
ಪಾರಿವಾಳಗಳ ಬಳಿ ಇದೆ ಲಕ್ಷಾಂತರ ರೂಪಾಯಿ: 3 ಚೀಲ ಭತ್ತವನ್ನು 4 ಸಾವಿರ ರೂ ಖರ್ಚಿನಲ್ಲಿ ಪಾರಿವಾಳಗಳಿಗೆ ನೀಡಲಾಗುತ್ತದೆ ಇನ್ನು 470 ಹಸುಗಳಿರುವ ಗೋಶಾಲೆಗೂ ಆಹಾರ ಪೂರೈಸಲಾಗುತ್ತದೆ. ಟ್ರಸ್ಟ್ಗೆ ಅಂಗಡಿಗಳ ಬಾಡಿಗೆಯಿಂದ ತಿಂಗಳಿಗೆ 80 ಸಾವಿರ ರೂ. ಆದಾಯ ಬರುತ್ತದೆ. ಅಲ್ಲದೆ 126 ಬಿಘಾ ಭೂಮಿ ಸ್ಥಿರಾಸ್ತಿಯಾಗಿದೆ. ಎಲ್ಲ ಖರ್ಚಿನ ಬಳಿಕ ಪಾರಿವಾಳಗಳ ರಕ್ಷಣೆಗೆ ಉಳಿಸಿರುವ ಹಣ ಈಗ ಒಟ್ಟು 30 ಲಕ್ಷ ರೂ ಆಗಿದೆ ಎಂದು ಟ್ರಸ್ಟ್ ಮಾಹಿತಿ ನೀಡಿದೆ. ಇದನ್ನೂ ಓದಿ: ಬಿಹಾರ ಸಿಎಂ ನಿತೀಶ್ ಕುಮಾರ್ಗೆ ಕೊರೊನಾ ಪಾಸಿಟಿವ್
ಉದ್ದೇಶವೇನು?: ಊರಿನ ಜನ ಪಾರಿವಾಳಗಳ ರಕ್ಷಣೆಗೆ ಬಹಿರಂಗವಾಗಿಯೇ ದಾನ ಮಾಡುತ್ತಿದ್ದಾರೆ. ಅದೆಲ್ಲ ಹಣವನ್ನು ಪಾರಿವಾಳಗಳಿಗೆ ನೀರಿನ ಕೊರತೆಯಾಗದಂತೆ ಮಾಡಲು ನಿರ್ಮಿಸಿದ ಅಂಗಡಿಗಳಿಗೆ ವಿನಿಯೋಗಿಸಲಾಗಿದೆ. ಇಂದು ಈ ಅಂಗಡಿಗಳಿಂದ ತಿಂಗಳಿಗೆ 9 ಲಕ್ಷ ರೂ ಆದಾಯ ಬರುತ್ತದೆ. ಈ ಹಣದಿಂದ ಪಾರಿವಾಳಗಳ ರಕ್ಷಣೆ ಮಾಡಲಾಗುತ್ತಿದೆ.
ಹಾವೇರಿ: ಆಸ್ತಿ ತಮ್ಮ ಹೆಸರಿಗೆ ಮಾಡಿಕೊಂಡು ಹೆತ್ತ ತಾಯಿಯನ್ನೇ ಮನೆಯಿಂದ ಹೊರಹಾಕಿದ್ದ ಮಕ್ಕಳ ವಿರುದ್ಧ ಹೋರಾಟ ಮಾಡಿ ಮರಳಿ ಆಸ್ತಿ ಪಡೆದುಕೊಂಡಿದ್ದಾರೆ. ಈ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ವೀರಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ 76 ವರ್ಷದ ವೃದ್ಧ ತಾಯಿ ಪ್ರೇಮವ್ವ ಹವಳಣ್ಣನವರ ಹೋರಾಟಕ್ಕೆ ಜಯಸಿಕ್ಕಿದೆ. ಇಬ್ಬರು ಗಂಡು, ಇಬ್ಬರು ಹೆಣ್ಣು ಮಕ್ಕಳನ್ನ ಹೊಂದಿದ್ದಾರೆ. ಪತಿ ಶ್ರೀಕಾಂತ ನಿಧನರಾದ ನಂತರ ಪತಿ ಹೆಸರಿನಲ್ಲಿದ್ದ 3 ಎಕರೆ 32 ಗುಂಟೆ ಜಮೀನನ್ನ ಇಬ್ಬರು ಗಂಡು ಮಕ್ಕಳಾದ ಧನಿಕುಮಾರ ಮತ್ತು ಸಂತೋಷ ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ಅಲ್ಲದೆ ಗ್ರಾಮದಲ್ಲಿದ್ದ ಎರಡೂ ಮನೆಗಳನ್ನ ತಮ್ಮ ಹೆಸರಿಗೆ ಮಾಡಿಕೊಂಡು ಹೆತ್ತ ತಾಯಿಗೆ ಕಿರುಕುಳ ನೀಡಿ ತಾಯಿಯನ್ನ ಮನೆಯಿಂದ ಹೊರಹಾಕಿದ್ದರು. ಇದನ್ನೂ ಓದಿ: ತಲೆಗೆ ನೀರಿನ ಬದಲು ಎಂಜಲು ಉಗಿದ ಕೇಶವಿನ್ಯಾಸಕಾರ!
ಒಂದೂವರೆ ವರ್ಷದಿಂದ ಹಾವೇರಿಯ ಈಡಾರಿ ಸಂಸ್ಥೆಯ ಮಹಿಳಾ ಸಾಂತ್ವನ ಕೇಂದ್ರದಲ್ಲಿ ವಾಸವಾಗಿದ್ದರು. ಸಾಂತ್ವನ ಕೇಂದ್ರದ ನೆರವಿನಿಂದ ಸವಣೂರು ಉಪವಿಭಾಗಾಧಿಕಾರಿಗೆ ಆಸ್ತಿ ಬಿಡಿಸಿಕೊಡುವಂತೆ ಪ್ರೇಮವ್ವ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಉಪವಿಭಾಗಧಿಕಾರಿ ಮಕ್ಕಳಿಂದ ತಾಯಿಯ ಹೆಸರಿಗೆ ಜಮೀನು ಮತ್ತು ಮನೆಯನ್ನ ಬಿಡಿಸಿಕೊಟ್ಟಿದ್ದಾರೆ.
ತಹಶೀಲ್ದಾರ್ ಎರ್ರಿಸ್ವಾಮಿ.ಪಿ.ಎಸ್ ರಿಂದ ಮಹಿಳಾ ಸಾಂತ್ವನ ಕೇಂದ್ರದ ಮುಖ್ಯಸ್ಥೆ ಸಮ್ಮುಖದಲ್ಲಿ ಪ್ರೇಮವ್ವಳಿಗೆ ಮನೆ ಹಾಗೂ ಜಮೀನಿನ ದಾಖಲೆಗಳನ್ನ ನೀಡಲಾಯಿತು. ಮಕ್ಕಳ ಕಿರುಕುಳ ನೆನೆದು ತಾಯಿ ಕಣ್ಣೀರು ಹಾಕಿ, ಆಸ್ತಿಮರಳಿಸಿದ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದರು.
ರಾಂಚಿ: ಆಸ್ತಿ ವಿವಾದಕ್ಕೆ 70 ವರ್ಷದ ತಂದೆಯ ಕತ್ತು ಸೀಳಿ ಮಗನೇ ಹತ್ಯೆಗೈದಿರುವ ಘಟನೆ ಜಾರ್ಖಂಡ್ನ ಗೊಡ್ಡಾದಲ್ಲಿ ನಡೆದಿದೆ.
ಆರೋಪಿ ತನ್ನ ಕಿರಿಯ ಸಹೋದರನಿಗೆ ಆಸ್ತಿಯಲ್ಲಿ ಹೆಚ್ಚಿನ ಪಾಲು ನೀಡಲಾಗಿದೆ ಎಂದು ಭಾವಿಸಿದ್ದಾನೆ. ನಂತರ ತನ್ನ ಬೇಡಿಕೆಯನ್ನು ತಂದೆ ಪೂರೈಸದೇ ಇದ್ದಿದ್ದಕ್ಕೆ ಕೋಪಗೊಂಡು ತನ್ನ ತಂದೆಯ ಕತ್ತನ್ನು ಸೀಳಿ ಕೊಂದಿದ್ದಾನೆ. ಇದನ್ನೂ ಓದಿ: ಕೊರೊನಾ ಸ್ಫೋಟ ಒಟ್ಟು 2,479 ಪ್ರಕರಣ – ಬೆಂಗ್ಳೂರಲ್ಲಿ 2,053 ಕೇಸ್
ಘಟನೆ ಸಂಬಂಧಿಸಿದಂತೆ ತನಿಖೆ ವೇಳೆ ಮೃತರ ಹಿರಿಯ ಮಗನ ಮೇಲೆ ಅನುಮಾನಗೊಂಡು ವಿಚಾರಣೆ ನಡೆಸಿದಾಗ ಸತ್ಯ ಬಹಿರಂಗವಾಗಿದೆ ಮತ್ತು ಸಾಕ್ಷಿಗಳ ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪಾಟ್ನಾ: ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ 75.36 ಲಕ್ಷ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿ ಹೊಂದಿದ್ದಾರೆ. ಆದರೆ ಅವರ ಪುತ್ರ ನಿಶಾಂತ್, ತಂದೆಗಿಂತಲೂ ಐದು ಪಟ್ಟು ಹೆಚ್ಚು ಶ್ರೀಮಂತರಾಗಿದ್ದಾರೆ.
ಬಿಹಾರ್ ಸರ್ಕಾರದ ವೆಬ್ಸೈಟ್ನಲ್ಲಿ ಡಿ.31ರಂದು ಮುಖ್ಯಮಂತ್ರಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳ ಆಸ್ತಿ ವಿವರಗಳನ್ನು ಅಪ್ಲೋಡ್ ಮಾಡಲಾಗಿದೆ. ನಿತಿಶ್ ಕುಮಾರ್ ಅವರು 29,385 ರೂ. ನಗದು ಹೊಂದಿದ್ದಾರೆ. 42,763 ರೂ. ಅನ್ನು ಬ್ಯಾಂಕ್ನಲ್ಲಿ ಠೇವಣಿ ಇಟ್ಟಿದ್ದಾರೆ. ಅವರ ಪುತ್ರ 16,549 ರೂ. ನಗದು ಹೊಂದಿದ್ದು, 1.28 ಕೋಟಿ ರೂ. ಅನ್ನು ಬ್ಯಾಂಕ್ನಲ್ಲಿ ಎಫ್ಡಿ ಮಾಡಿಸಿದ್ದಾರೆ. ಜೊತೆಗೆ ಹಲವು ಬ್ಯಾಂಕ್ಗಳಲ್ಲಿ ಹಣವನ್ನು ಠೇವಣಿ ಕೂಡ ಇಟ್ಟಿದ್ದಾರೆ. ಇದನ್ನೂ ಓದಿ: ಕೊರೊನಾ ತಡೆಗಟ್ಟುವಲ್ಲಿ ಕೇಜ್ರಿವಾಲ್ ಸರ್ಕಾರ ವಿಫಲ: ಚರಣ್ಜಿತ್ ಸಿಂಗ್
ಸಿಎಂ ನಿತೀಶ್ ಕುಮಾರ್ ಅವರು, 16.51 ಲಕ್ಷ ರೂ. ಚರ ಹಾಗೂ 58.85 ಲಕ್ಷ ರೂ. ಸ್ಥಿರ ಆಸ್ತಿ ಹೊಂದಿದ್ದಾರೆ. ಅವರ ಪುತ್ರ ನಿಶಾಂತ್ 1.63 ಕೋಟಿ ರೂ. ಚರ ಹಾಗೂ 1.98 ಕೋಟಿ ರೂ. ಸ್ಥಿರ ಆಸ್ತಿ ಹೊಂದಿದ್ದಾರೆ.
ಬಿಹಾರ್ ಸಿಎಂ ನವದೆಹಲಿಯ ದ್ವಾರಕಾದಲ್ಲಿ ಸಹಕಾರಿ ಹೌಸಿಂಗ್ ಸೊಸೈಟಿಯಲ್ಲಿ ಒಂದು ಫ್ಲಾಟ್ ಹೊಂದಿದ್ದಾರೆ. ಅವರ ಪುತ್ರ ಕಲ್ಯಾಣ ಬಿಘಾ, ಹಕಿಕತ್ಪುರ, ಪಾಟ್ನಾದ ಕಂಕರ್ಬಾಗ್ನಲ್ಲಿ ಕೃಷಿ ಭೂಮಿ ನಿವಾಸಗಳನ್ನು ಹೊಂದಿದ್ದಾರೆ. ಇದನ್ನೂ ಓದಿ: Whatsapp – ಒಂದೇ ತಿಂಗಳಲ್ಲಿ ಭಾರತೀಯರ 17 ಲಕ್ಷ ಖಾತೆಗಳು ಬ್ಯಾನ್
ನಿಶಾಂತ್ ತಮ್ಮ ಪೂರ್ವಜರ ಗ್ರಾಮ ಕಲ್ಯಾಣ ಬಿಘಾದಲ್ಲಿ ಕೃಷಿ ಭೂಮಿ ಹೊಂದಿದ್ದಾರೆ. ಇವರಿಗೆ ಗ್ರಾಮದಲ್ಲಿ ಕೃಷಿಯೇತರ ಭೂಮಿಯೂ ಇದೆ. 1.45 ಲಕ್ಷ ಮೌಲ್ಯದ 13 ಹಸುಗಳು ಮತ್ತು 9 ಕರುಗಳನ್ನು ಹೊಂದಿದ್ದಾರೆ.
ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ವರ್ಷದ ಕೊನೆಯ ತಿಂಗಳು ಸಂಪುಟದ ಎಲ್ಲಾ ಸಚಿವರು ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಬೇಕು ಎಂಬ ನಿಯಮವನ್ನು ಕಡ್ಡಾಯಗೊಳಿಸಿತ್ತು.
ಬೆಂಗಳೂರು: ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಆಸ್ತಿ ಮಾರಾಟಕ್ಕೆ ಹೈ ಕೋರ್ಟ್ ತಡೆಯಾಜ್ಞೆ ನೀಡಿದೆ. ಮುತ್ತಪ್ಪ ರೈ ಪುತ್ರರಾದ ರಾಖಿ ರೈ, ರಿಕ್ಕಿ ರೈ ಸೇರಿ 20ಮಂದಿಯನ್ನ ಪ್ರತಿವಾದಿಯನ್ನಾಗಿಸಿ ತಡೆಯಾಜ್ಞೆ ನೀಡಿದೆ.
ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧ ಆಸ್ತಿಯಲ್ಲಿ ಮೂರನೇ ಒಂದು ಪಾಲು ಕೋರಿ ಕೇಸು ದಾಖಲಿಸಿದ್ದರು. ಈ ಕೇಸ್ಗೆ ಸಂಬಂಧಿಸಿದಂತೆ ಸಿವಿಲ್ ಕೋರ್ಟ್ ನಲ್ಲಿ ತಡೆಯಾಜ್ಞೆ ತೆರವಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಅನುರಾಧ ಹೈಕೋರ್ಟ್ ಮೆಟ್ಟಿಲೇರಿದ್ದರು.
ಅನುರಾಧ ಅರ್ಜಿ ಪರಿಗಣಿಸಿದ ಕೋರ್ಟ್ ಯಾವುದೇ ಆಸ್ತಿ ಮಾರಾಟ ಮಾಡದಂತೆ ತಡೆಯಾಜ್ಞೆ ನೀಡಿ ಮಧ್ಯಂತರ ತೀರ್ಪು ಪ್ರಕಟಿಸಿದೆ.
ಏನಿದು ಪ್ರಕರಣ?
ಮುತ್ತಪ್ಪ ರೈ ಅವರು ಸಾಯುವ ಮುನ್ನವೇ ತನ್ನ ಆಸ್ತಿಯ ಬಗ್ಗೆ ವಿಲ್ ಬರೆದು ಇಟ್ಟಿದ್ದರು. ಇದರಲ್ಲಿ ಅವರ ಆಸ್ತಿ ಯಾರಿಗೇ ಸೇರಬೇಕು ಮತ್ತು ಎಷ್ಟು ಸೇರಬೇಕು ಎಂದು ತಿಳಿಸಿದ್ದರು. ಮುತ್ತಪ್ಪ ರೈ ಸಾವಿನ ಬಳಿಕ ಅವರ ಎರಡನೇ ಪತ್ನಿ ಅನುರಾಧ ಪಾಲು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಈಗಾಗಲೇ ಅನುರಾಧ ಅವರಿಗೂ ಆಸ್ತಿಯಲ್ಲಿ ಪಾಲು ನೀಡಲಾಗಿದೆ ಎಂದು ರೈ ವಿಲ್ನಲ್ಲಿ ತಿಳಿಸಿದ್ದರು. ಎರಡನೇ ಪತ್ನಿ ಅನುರಾಧಾಗೆ ಚಿನ್ನಾಭರಣ, ಕಾರು, ಕೋಟ್ಯಂತರ ರೂಪಾಯಿ ಹಣದ ಜೊತೆ ಹೆಚ್ ಡಿ ಕೋಟೆ ಆಸ್ತಿ, ಜೊತೆಗೆ ಸಹಕಾರ ನಗರದಲ್ಲಿ ಎರಡು ಅಂತಸ್ತಿನ ಕಟ್ಟಡವನ್ನು ನಿರ್ಮಿಸಿ ಕೊಡಲಾಗಿದೆ. ಅನುರಾಧಾ ಜೊತೆಗಿದ್ದ ಸಂದರ್ಭದಲ್ಲಿ ಅವರಿಗೆ ಸೇರಬೇಕಾದ ಆಸ್ತಿಯನ್ನು ನೀಡಲಾಗಿದೆ ಎಂದು ವಿಲ್ನಲ್ಲಿ ಉಲ್ಲೇಖವಾಗಿದೆ. ಇದನ್ನೂ ಓದಿ: ಅಮೆಜಾನ್ಗೆ 202 ಕೋಟಿ ರೂ. ದಂಡ ಹಾಕಿದ ಸ್ಪರ್ಧಾತ್ಮಕ ಆಯೋಗ
ಆಸ್ತಿ ಎಷ್ಟಿದೆ?
ವಿಲ್ ಪ್ರಕಾರ ಸುಮಾರು 2 ಸಾವಿರ ಕೋಟಿಗೂ ಅಧಿಕ ಆಸ್ತಿ ರೈ ಹೆಸರಿನಲ್ಲಿದೆ. ದೇವನಹಳ್ಳಿ, ಯಲಹಂಕ, ಬಿಡದಿಯಲ್ಲಿ 150ಕ್ಕೂ ಅಧಿಕ ಎಕರೆ ಜಾಗ, ಮೈಸೂರು, ಮಂಗಳೂರು, ಬಂಟ್ವಾಳ, ಪುತ್ತೂರಿನಲ್ಲಿ ನೂರಾರು ಎಕರೆ ಜಮೀನು ಮುತ್ತಪ್ಪ ರೈ ಹೆಸರಿನಲ್ಲಿದೆ. ಸಕಲೇಶಪುರದಲ್ಲಿ 200 ಎಕರೆ ಜಮೀನಿದೆ.
ಹಂಚಿಕೆ ಹೇಗೆ?
ಒಟ್ಟು 600ಕ್ಕೂ ಅಧಿಕ ಎಕರೆ ಜಮೀನನ್ನು ತನ್ನಿಬ್ಬರು ಮಕ್ಕಳಾದ ರಿಕ್ಕಿ ಹಾಗೂ ರಾಖಿ ರೈಗೆ ಗಿಫ್ಟ್ ಡೀಡ್ ಮಾಡಿದ್ದಾರೆ. ಆಸ್ತಿಗಳ ಪೈಕಿ ಮೈಸೂರು, ಪುತ್ತೂರು, ಬಂಟ್ವಾಳ, ಮಂಗಳೂರು ಜಾಗವನ್ನು ರಾಖಿ ರೈಗೆ ನೀಡಿದ್ದರೆ, ಸಕಲೇಶಪುರ, ಬಿಡದಿ, ಯಲಹಂಕ ಹಾಗೂ ದೇವನಹಳ್ಳಿ ಜಾಗವನ್ನು ಚಿಕ್ಕ ಮಗ ರಿಕ್ಕಿ ರೈಗೆ ಹಂಚಿಕೆ ಮಾಡಿದ್ದಾರೆ. ಆಪ್ತರು, ಸಂಬಂಧಿಕರಿಗೆ ಶೇ.20 ರಷ್ಟು ಆಸ್ತಿ ನೀಡಬೇಕೆಂದು ಸೂಚಿಸಿದ್ದಾರೆ. ಬಿಡದಿ ಹಾಗೂ ಸದಾಶಿವನಗರದ ಎರಡೂ ಮನೆಗಳ ಜವಾಬ್ದಾರಿಯನ್ನು ಚಿಕ್ಕ ಮಗ ರಿಕ್ಕಿ ರೈಗೆ ನೀಡಿದ್ದು ಟ್ರೇಡಿಂಗ್ ವ್ಯವಹಾರ ಕಂಪನಿಯನ್ನು ದೊಡ್ಡ ಮಗ ರಾಖಿ ನೋಡಿಕೊಳ್ಳುವಂತೆ ಸೂಚಿಸಿದ್ದರು. ಇದನ್ನೂ ಓದಿ: ಇನ್ಸ್ಟಾಗ್ರಾಮ್ನಲ್ಲಿ ಶೀಘ್ರವೇ 1 ನಿಮಿಷದ ಸ್ಟೋರಿ ಹಾಕಬಹುದು!
ಕೆಲಸಗಾರರಿಗೆ ಸೈಟ್:
ನಂಬಿಕೆಯಿಂದ 15 ವರ್ಷಗಳ ಕಾಲ ತನ್ನ ಬಳಿ ಕೆಲಸ ಮಾಡಿದ 25 ಕೆಲಸಗಾರರಿಗೆ ಒಂದೊಂದು ಸೈಟ್ ಹಾಗೂ ಕೈಲಾದಷ್ಟು ಹಣ ನೀಡುವಂತೆ ಕಿರಿಯ ಮಗ ರಿಕ್ಕಿ ರೈಗೆ ಸೂಚಿಸಿದ್ದರು. ತಂದೆಯ ಸೂಚನೆಯಂತೆ ರಿಕ್ಕಿ ಈಗಾಗಲೇ ತಲಾ ಒಬ್ಬೊಬ್ಬರಿಗೆ 3 ಲಕ್ಷ ರೂಪಾಯಿಗಳನ್ನು ಹಂಚಿಕೆ ಮಾಡಿದ್ದರು.
ಸಂಘಟನೆ ಹೊಣೆ ಯಾರಿಗೆ?
ಜಯ ಕರ್ನಾಟಕ ಸಂಘಟನೆ ಯಾವುದೇ ಕಾರಣಕ್ಕೂ ಒಡೆಯಬಾರದು ಎಂದು ಹೇಳಿರುವ ಮುತ್ತಪ್ಪ ರೈ ಈ ಸಂಘಟನೆಯ ಜವಾಬ್ದಾರಿಯನ್ನು ಚಿಕ್ಕಮಗ ರಿಕ್ಕಿ ರೈಗೆ ನೀಡಿದ್ದಾರೆ. ಜಗದೀಶ್ ಸಂಘಟನೆಯ ಅಧ್ಯಕ್ಷತೆಯನ್ನು ನೋಡಿಕೊಳ್ಳಬೇಕು. ಮುಂದೆ ಈ ಸಂಘಟನೆಯನ್ನು ಬೆಳೆಸುವಂತೆ ಕಾರ್ಯಕರ್ತರಲ್ಲಿ ರೈ ಮನವಿ ಮಾಡಿರುವ ವಿಚಾರ ವಿಲ್ ನಲ್ಲಿ ಉಲ್ಲೇಖವಾಗಿದೆ.
ಭುವನೇಶ್ವರ: ಮಹಿಳೆಯೊಬ್ಬರಯ ಬರೋಬ್ಬರಿ 25 ವರ್ಷ ಸೇವೆ ಮಾಡಿದ ಆಟೋ ಡ್ರೈವರ್ ಸೇವೆ ಮತ್ತು ಪ್ರಾಮಾಣಿಕತೆಯನ್ನು ಮೆಚ್ಚಿ ಬರೋಬ್ಬರಿ 1ಕೋಟಿ ರೂಪಾಯಿ ಮೌಲ್ಯದ ಮೂರು ಅಂತಸ್ತಿನ ಕಟ್ಟಡ ಹಾಗೂ ಚಿನ್ನಾಭರಣವನ್ನು ದಾನ ಮಾಡಿದ್ದಾರೆ.
ಒಡಿಶಾದ ಕಟಕ್ನಲ್ಲಿ ಈ ಘಟನೆ ನಡೆದಿದ್ದು, 63 ವರ್ಷದ ಮಿನಾತಿ ಪಟ್ನಾಯಿಕ್ ಕಳೆದ 25 ವರ್ಷಗಳಿಂದ 50 ವರ್ಷದ ಬುದ್ಧಾ ಸಮಾಲ್ ಅನ್ನೋ ರಿಕ್ಷಾ ಚಾಲಕನಿಗೆ 1ಕೋಟಿ ಮೌಲ್ಯದ ಮೂರು ಅಂತಸ್ತಿನ ಕಟ್ಟಡ ಹಾಗೂ ಚಿನ್ನಾಭರಣ ನೀಡಿದ್ದಾರೆ. ಕಳೆದ 25 ವರ್ಷಗಳಿಂದ ಬುದ್ಧಾ ಸಮಾಲ್, ಮಿನಾತಿ ಅವರನ್ನ ತಮ್ಮ ರಿಕ್ಷಾದಲ್ಲಿ ಕರೆದುಕೊಂಡು ಹೋಗುತ್ತಿದ್ದರಂತೆ. ಮಿನಾತಿ ಎಲ್ಲಿಗೆ ಹೋಗಬೇಕೆಂದರೂ ಬುದ್ಧಾ ಅವರು ಒಂದು ಮಿನಾತಿಯವರನ್ನು ತಮ್ಮ ರೀಕ್ಷಾದಲ್ಲಿ ಕರೆದುಕೊಂಡು ಹೋಗುತ್ತಿದ್ದರಂತೆ. ಸತತ ಇಷ್ಟ ವರ್ಷಗಳ ಕಾಲ ಅವರಸೇವೆ ಪಡೆದುಕೊಂಡಿದ್ದ ಮಿನಾತಿ, ಯಾರೂ ಊಹಿಸಲಾಗದಂಥ ಸಹಾಯವನ್ನು ಈಗ ಮಾಡಿದ್ದಾರೆ.
ನನ್ನ ಪತಿ ಕಳೆದ ವರ್ಷ ತಮ್ಮ 68ನೇ ವಯಸ್ಸಿನಲ್ಲಿ ಕ್ಯಾನ್ಸರ್ಗೆ ಬಲಿಯಾಗಿದ್ದರು. ಆಗ ನನ್ನ ಮಗಳು ಜನವರಿಯಲ್ಲಿ ಹಾರ್ಟ್ ಅಟ್ಯಾಕ್ನಿಂದ ಸಾವನ್ನಪ್ಪಿದಳು. ಹಾರ್ಟ್ ಪೇಷಂಟ್, ಹೈ ಬಿಪಿ ಕೂಡಾ ನನಗೆ ಇದೆ. ಹೀಗಿದ್ದೂ ಬುದ್ಧಾ ನನ್ನ ತಾಯಿ ಅಂತ ಕರೆಯುತ್ತಾರೆ. ಅವರ ಮಕ್ಕಳು ಅಜ್ಜಿ ಎನ್ನುತ್ತಾರೆ. ಬುದ್ಧಾ ಅವರ ಕುಟುಂಬ ನನ್ನ ಸೇವೆಯನ್ನು ತುಂಬಾ ಮುತುವರ್ಜಿಯಿಂದ ಮಾಡುತ್ತಾರೆ. ಅವರ ಕುಟಂಬ ನನ್ನ ಒತ್ತಾಯದ ಮೆರೆಗೆ ನನ್ನ ಸೇವೆ ಮಾಡಲು ನಮ್ಮ ಮನೆಯಲ್ಲಿಯೇ ಕೆಲ ತಿಂಗಳಿಂದ ಇದ್ದಾರೆ ಎಂದು ಮಿನಾತಿ ಹೇಳಿದ್ದಾರೆ. ಇದನ್ನೂ ಓದಿ: ಅಪ್ಪು ಮರಕೋತಿ ಆಟವಾಡುತ್ತಿದ್ದನ್ನು ಸದಾ ನೆನಪಿಸಿಕೊಳ್ಳುವ ಬಾಲ್ಯದ ಗೆಳೆಯ
ಪೋಸ್ಟ್ ಗ್ರಾಜ್ಯುಯೇಟ್ ಆಗಿರುವ ಮಿನಾತಿ ಅವರಿಗೆ ಮೂವರು ಸಹೋದರಿಯರು ಹಾಗೂ ಒಬ್ಬ ಸಹೋದರ ಇದ್ದಾರೆ. ಪ್ರಾರಂಭದಲ್ಲಿ ಅವರು ಕೊಂಚ ಬೇಸರ ವ್ಯಕ್ತಪಡಿಸಿದ್ದರೂ, ಮಿನಾತಿ ಅವರ ನಿರ್ಧಾರ ಗಟ್ಟಿಯಾಗಿದ್ದರಿಂದ ಈ ನಿರ್ಧಾರಕ್ಕೆ ಯಾವುದೇ ವಿರೋಧ ವ್ಯಕ್ತಪಡಿಸಲಿಲ್ಲವಂತೆ. ಇದನ್ನೂ ಓದಿ: 6 ದಿನಗಳ ಕಾಲ ನಡೆಯಲಿದೆ ಕತ್ರಿನಾ, ವಿಕ್ಕಿ ಮದುವೆ – ಯಾರಿಗೆಲ್ಲ ಇದೆ ಆಮಂತ್ರಣ?
ಬುದ್ಧಾ ಅವರೂ ಈ ರೀತಿ ಆಸ್ತಿ ದಾನ ಬೇಡ ಎಂದು ವಿರೋಧ ವ್ಯಕ್ತಪಡಿಸುತ್ತಿದ್ದರಂತೆ. ಆದರೆ ಅಮ್ಮ(ಮಿನಾತಿ) ಅವರ ನಿರ್ಧಾರ ಗಟ್ಟಿಯಾಗಿತ್ತು. ಅವರ ಒತ್ತಾಯಕ್ಕೆ ಮಣಿದು ಕೆನೆಗೂ ಈ ಆಸ್ತಿ ಮತ್ತು ಆಭರಣ ಸ್ವೀಕರಿಸಿದೆ ಎಂದು ಬಿದ್ಧಾ ಸಮಾಲ್ ಹೇಳಿದ್ದಾರೆ. ಇದನ್ನೂ ಓದಿ: ಅಪ್ಪು ಮರಕೋತಿ ಆಟವಾಡುತ್ತಿದ್ದನ್ನು ಸದಾ ನೆನಪಿಸಿಕೊಳ್ಳುವ ಬಾಲ್ಯದ ಗೆಳೆಯ
ಬೆಂಗಳೂರು: ಭೂಕಬಳಿಕೆದಾರರ ವಿರುದ್ಧದ ಕಾರ್ಯಾಚರಣೆಯನ್ನು ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇಂದು ಜೆಪಿ ನಗರದ ಆಲಹಳ್ಳಿಯಲ್ಲಿ ಸುಮಾರು 100 ಕೋಟಿ ರೂಪಾಯಿ ಮೌಲ್ಯದ ತನ್ನ ಆಸ್ತಿಯನ್ನು ಮರುವಶಕ್ಕೆ ಪಡೆದುಕೊಂಡಿದೆ.
ಜೆಪಿ ನಗರ ಬಡಾವಣೆಯ ಆಲಹಳ್ಳಿಯಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಸರ್ವೆ ಸಂಖ್ಯೆ 5/7, 6/1, 6/4, 6/5, 7/2, 3, 4 ಮತ್ತು 8 ರ 4 ಎಕರೆ 20 ಗುಂಟೆ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ 40 ಶೆಡ್ ಗಳನ್ನು ಬಿಡಿಎ ದಕ್ಷಿಣ ವಲಯದ ಕಾರ್ಯಪಾಲಕ ಅಭಿಯಂತರ ಎಚ್.ಎಸ್.ಚುಂಚೇಗೌಡ ನೇತೃತ್ವದಲ್ಲಿ ತೆರವುಗೊಳಿಸಲಾಯಿತು. ಇದನ್ನೂ ಓದಿ: ನೂರು ದಿನಗಳ ಆಡಳಿತಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ: ಬಸವರಾಜ ಬೊಮ್ಮಾಯಿ
ಜೆಪಿ ನಗರ ಬಡಾವಣೆಯ 9 ನೇ ಹಂತದ ನಿರ್ಮಾಣಕ್ಕೆಂದು 1988 ರಲ್ಲಿ ಈ ಜಾಗವನ್ನು ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಪ್ರಾಥಮಿಕ ಅಧಿಸೂಚನೆಯನ್ನು ಬಿಡಿಎ ಹೊರಡಿಸಿತ್ತು. ಇದಾದ ಬಳಿಕ 1997 ರಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಿ ಜಾಗವನ್ನು ಸ್ವಾಧೀನಕ್ಕೆ ತೆಗೆದುಕೊಂಡಿತ್ತು. ಆದರೆ, ಪಟ್ಟಭದ್ರ ಹಿತಾಸಕ್ತಿಗಳು ಮತ್ತು ಕೆಲವರು ತಾತ್ಕಾಲಿಕವಾಗಿ 40 ಶೆಡ್ಗಳನ್ನು ನಿರ್ಮಾಣ ಮಾಡಿ ಜಾಗ ತಮ್ಮದೆಂದು ಪ್ರತಿಪಾದಿಸಿದ್ದರು. ಇದರ ವಿರುದ್ಧ ಬಿಡಿಎ ನ್ಯಾಯಾಲಯದ ಮೆಟ್ಟಿಲೇರಿದ ಪರಿಣಾಮ ನ್ಯಾಯಾಲಯ ಬಿಡಿಎ ಪರವಾಗಿ ತೀರ್ಪು ನೀಡಿ, ಸದರಿ ಜಾಗವನ್ನು ವಶಪಡಿಸಿಕೊಳ್ಳುವಂತೆ ಇತ್ತೀಚೆಗೆ ಆದೇಶ ನೀಡಿತ್ತು. ಇದನ್ನೂ ಓದಿ: ಇದು ಹುಚ್ಚುತನವೋ ಅಥವಾ ದೇಶದ್ರೋಹವೋ – ಕಂಗನಾ ವಿರುದ್ಧ ವರುಣ್ ಗಾಂಧಿ ಕಿಡಿ
ನ್ಯಾಯಾಲಯದ ಆದೇಶದ ಮೇರೆಗೆ ಕಾರ್ಯಪಾಲಕ ಅಭಿಯಂತರ ಚುಂಚೇಗೌಡ, ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್, ಡಿವೈಎಸ್ ಪಿ ರವಿಕುಮಾರ್ ಸೇರಿದಂತೆ 75 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ಶೆಡ್ ಗಳನ್ನು 5 ಕ್ಕೂ ಅಧಿಕ ಜೆಸಿಬಿಗಳನ್ನು ಬಳಸಿ ತೆರವುಗೊಳಿಸಲಾಯಿತು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಮತ್ತೆ ಭಾರೀ ಸ್ಫೋಟದ ಸದ್ದು- ಭೂಕಂಪ ಭಯಕ್ಕೆ ಊರು ಬಿಡ್ತಿರೋ ಜನ!
ಅತಿಕ್ರಮಣ ತೆರವು ನಿರಂತರ ಪ್ರಕ್ರಿಯೆ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು, ಬಿಡಿಎಗೆ ಸೇರಿದ ಹಲವಾರು ಆಸ್ತಿಗಳನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಇಂತಹ ಆಸ್ತಿಗಳನ್ನು ಮರು ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಕಳೆದ ಒಂದು ತಿಂಗಳಿಂದ ಆರಂಭಿಸಲಾಗಿದೆ. ಈ ಪ್ರಕ್ರಿಯೆ ಮುಂದುವರಿಯಲಿದೆ. ಹಲವಾರು ಬಡಾವಣೆಗಳಲ್ಲಿ ಬಿಡಿಎಗೆ ಸೇರಿದ ಸಾವಿರಾರು ಕೋಟಿ ರೂಪಾಯಿಗಳ ಮೌಲ್ಯದ ಆಸ್ತಿಗಳನ್ನು ಒತ್ತುವರಿ ಅಥವಾ ಭೂಕಬಳಿಕೆದಾರರು ಕಬಳಿಕೆ ಮಾಡಿದ್ದಾರೆ. ಅವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಆಸ್ತಿಯನ್ನು ಮರು ಸ್ವಾಧೀನಕ್ಕೆ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ನಿವೇಶನಗಳ ಹರಾಜು
ಬಿಡಿಎಗೆ ಸೇರಿದ ಸ್ವತ್ತುಗಳನ್ನು ವಶಪಡಿಸಿಕೊಂಡು ನಿವೇಶನಗಳನ್ನಾಗಿ ಅಭಿವೃದ್ಧಿಪಡಿಸಿ ಅವುಗಳನ್ನು ಸಾರ್ವಜನಿಕರಿಗೆ ಹರಾಜಿನ ಮೂಲಕ ಹಂಚಿಕೆ ಮಾಡಬೇಕೆಂದು ಇತ್ತೀಚೆಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಈ ನಿರ್ದೇಶನದಂತೆ ಬಿಡಿಎ ಆಸ್ತಿಗಳನ್ನು ವಶಪಡಿಸಿಕೊಂಡು ಹಂತಹಂತವಾಗಿ ನಿವೇಶನಗಳನ್ನಾಗಿ ಅಭಿವೃದ್ಧಿಪಡಿಸಿ ಹರಾಜು ಪ್ರಕ್ರಿಯೆಯನ್ನು ನಡೆಸಲಾಗುತ್ತದೆ ಎಂದು ಹೇಳಿದರು.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ, ಎ1 ಗುತ್ತಿಗೆದಾರ ಯುಬಿ ಶೆಟ್ಟಿ ನಿವಾಸದಲ್ಲಿ 70 ಕೋಟಿಗೂ ಹೆಚ್ಚು ಅಘೋಷಿತ ಆದಾಯ ಪತ್ತೆಯಾಗಿದೆ.
ಉಪಚುನಾವಣೆಯ ಹೊತ್ತಲ್ಲಿ ಅಕ್ಟೋಬರ್ 28ರಂದು ಧಾರವಾಡ ಮತ್ತು ಉಡುಪಿಯ ನಿವಾಸಗಳ ಮೇಲೆ ಐಟಿ ದಾಳಿ ಮಾಡಿತ್ತು. ಪ್ರಾಜೆಕ್ಟ್ ನಿರ್ಮಾಣದ ವೇಳೆ ನಕಲಿ ಬಿಲ್ ತೋರಿಸಿ ಕಬ್ಬಿಣ ಸೇರಿ ಹಲವು ಸಾಮಗ್ರಿ ಖರೀದಿ ಮಾಡಿದ್ದಾರೆ. 40ಕ್ಕೂ ಹೆಚ್ಚು ಬೋಗಸ್ ಉಪ ಗುತ್ತಿಗೆ ಕ್ಲೈಮ್ ಮಾಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಡಿಕೆ ಶಿವಕುಮಾರ್ ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ
ಇತ್ತ ಅಕ್ಟೋಬರ್ 27ರಂದು ಹಸು, ಕುರಿ, ಕೋಳಿ ಸೇರಿ ಇತರೆ ಪ್ರಾಣಿಗಳ ಆಹಾರ ಉತ್ಪಾದನಾ ಘಟಕಗಳ ಮೇಲೂ ಐಟಿ ದಾಳಿ ನಡೆಸಿತ್ತು. ತಮಿಳುನಾಡು, ಕರ್ನಾಟಕ, ಕೇರಳದಲ್ಲಿ ಏಕಕಾಲಕ್ಕೆ 40 ಕಡೆ ರೇಡ್ ಮಾಡಲಾಗಿತ್ತು. ದಾಳಿ ವೇಳೆ 3.3 ಕೋಟಿ ರೂಪಾಯಿ ನಗದು, 300 ಕೋಟಿಗೂ ಅಧಿಕ ಅಕ್ರಮ ಆಸ್ತಿ ಪತ್ತೆಯಾಗಿದೆ.
ಬೆಂಗಳೂರು: ಸೈಟ್ ಮಾರಾಟ ಮಾಡಿಕೊಡುವುದಾಗಿ ನಂಬಿಸಿ ನಿವೃತ್ತ ಎಸಿಪಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪೆನಿ ಒಂದರ ವಿರುದ್ಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿವೃತ್ತ ಎಸಿಪಿ ಲವಕುಮಾರ್ ಎಂಬುವರು ಜಿಗಣಿಯ ನವ್ಯ ಲೇಔಟ್ನಲ್ಲಿ 90 ಲಕ್ಷ ಮೌಲ್ಯದ ಮೂರು ನಿವೇಶನ ಹೊಂದಿದ್ದರು. ಕೆಲದಿನಗಳ ಹಿಂದೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ನಿರ್ಮಾಣ್ ಶೆಲ್ಟರ್ಸ್ ಕಂಪೆನಿ ಸಂಪರ್ಕಿಸಿ ತಮ್ಮ ಬಳಿಯಿರುವ ನಿವೇಶನಗಳನ್ನು ಮಾರಾಟ ಮಾಡಿಕೊಡಿಕೊಡುವುದಾಗಿ ಹೇಳಿದ್ದು, ಇದರಂತೆ ಪವರ್ ಅಫ್ ಅರ್ಟಾನಿ ಮೂಲಕ ಮೂಲ ದಾಖಲಾತಿ ನೀಡಿದ್ದರು. ಇದನ್ನೂ ಓದಿ: ಮೆಣಸಿಕಾಯಿ ಹೊಲದಲ್ಲಿ ಗಾಂಜಾ ಬೆಳೆದಿದ್ದ ಮೂವರಿಗೆ ಜೈಲು
ಇದೀಗ ಕಂಪೆನಿಯೂ ಮೂರು ಸೈಟ್ ಮಾರಾಟ ಮಾಡಿ 85 ಲಕ್ಷ ರೂಪಾಯಿ ಮಾರಾಟ ಮಾಡಿ 30 ಲಕ್ಷ ಹಣ ನೀಡಿ ಉಳಿದ ಹಣ ಸ್ವಂತ ಬಳಕೆ ಉಪಯೋಗಿಸಿಕೊಂಡು ಹಣ ನೀಡದೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ನಿವೃತ್ತ ಎಸಿಪಿ ಉಲ್ಲೇಖಿಸಿದ್ದಾರೆ. ಲವಕುಮಾರ್ ನೀಡಿದ ದೂರಿನ ಮೇರೆಗೆ ನಿರ್ಮಾಣ್ ಶೆಲ್ಟರ್ ಕಂಪೆನಿ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮೀನಾರಾಯಣ್, ಕಂಪೆನಿ ಸಿಬ್ಬಂದಿ ಶಶಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರಿಗೆ ಆರೋಪಿ ಲಕ್ಷ್ಮೀ ನಾರಾಯಣ್ ಇದೇ ರೀತಿ ಸಾಕಷ್ಟು ಜನರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ವಾರಕ್ಕೊಮ್ಮೆ ಕುಡಿತಿದ್ದೋರು ಇನ್ಮೇಲೆ ದಿನಾ ಕುಡಿಯಲು ಆರಂಭಿಸ್ತಾರೆ – ಮಹಿಳೆಯರ ಪ್ರತಿಭಟನೆ